ಒಟ್ಟು 11460 ಕಡೆಗಳಲ್ಲಿ , 130 ದಾಸರು , 4806 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷಿಸೆನ್ನನು ಶಾರದಾಂಬೆ ನೀನುಪಕ್ಷಿವಾಹನ ಸುತ ಮನಃಪ್ರತಿಬಿಂಬೆ ಪಆದಿಮಧ್ಯಾಂತರ'ತಳೆ ಅನಾದಿ ವಸ್ತು'ನಲ್ಲಿ ಭೇದರ'ತಳೆವಾದಿಜನರಿಗಗೋಚರಳೆ ನಿನ್ನ ಪಾದವೆ ಗತಿಯೆಂದರಾದರಿಸುವಳೆ 1ಚಿದ್ರೂಪೆಯಾಗಿಪ್ಪೆ ನಿಜದಿ ಹರಿ ಮುದ್ರಿತೆಯಾಗಿ ನಾದದಿ ತೋರ್ಪೆ ಮುದದಿ ಇದ್ದು ನೀ ಚಕ್ರಸಪ್ತಕದಿ ನಾಲ್ಕ ಹೊದ್ದಿ ನಾಮವನದ ಪ್ರPಟಿಪೆ ಕ್ರಮದಿ 2ಪರವೆಂದು ನಾಭಿಯಲಿರುವೆ ಮತ್ತೆ ಮೆರೆವೆ ಹೃದಯದಲ್ಲಿ ಪಶ್ಯಂತಿ ಭಾವೆಕೊರಳಲ್ಲಿ ಬಿಡದಿರುತಿರುವೆ ಮಧ್ಯಮೆವರ ನಾಮ ವೈಖರಿುಂದ ತೋರಿಸುವೆ 3ಗೀತೆ ಭಾಗವತರೂಪಿನಲಿ ನೀನು ಮಾತೆಯಂದದಲರ್ಥಗಳನು ಪ್ರೀತಿಯಲಿ ಮಾತು ಬೋಧಿಸಿ ಪರಮನಲಿ ನಿತ್ಯ ಪ್ರೀತಿಯನುಂಟು ಮಾಡಿದೆ ಮನಸಿನಲಿ 4ಮಂದಬುದ್ಧಿಯ ನೆರೆ ಬಿಡಿಸು 'ಂದೆ ಬಂಧಿಸಿ ಬಂದಕರ್ಮವ ಕಡೆಗೊಳಿಸುತಂದೆ ಕೃಷ್ಣನ ಮುಂದೆ ನಿಲಿಸು ುನ್ನೂ ಸಂದೇಹವೇಕೆ ನೀನೇ ಬಂದು ನೆಲಸು 5ತೋರಿಸು ಮತಿಗೆ ಜ್ಞಾನವನು ಇದು ಜಾರದಂದದಲರ್ಥಗಳನು ಪ್ರೀತಿಯನುಸೇರಿ ಚಿತ್ತದಲಿನ್ನು ನೀನು ಮಂದ ಬಾರದ ಹಾಗೆ ಮಾಡೆನ್ನ ಮುಕ್ತನನು 6ಕರುಣಾಪೂರಿತದ್ಟೃುಂದ ನಿನ್ನ ಚರಣದಲಿಂಬಿಟ್ಟು ಕೊಳಲದರಿಂದನೆರೆ ಧನ್ಯನಹೆನು ನಿನ್ನಿಂದ ಕೂಡೆ ತಿರುಪತಿ ವೆಂಕಟನೊಲವದರಿಂದ 7ಓಂ ಕಮಲಾನಾಥಾಯ ನಮಃ || 2 ||ಗುರುಸ್ತುತಿಗಳು:
--------------
ತಿಮ್ಮಪ್ಪದಾಸರು
ರಕ್ಷಿಸೊ ಶ್ರೀಶ ಶ್ರೀನಿವಾಸ ಪ ರಕ್ಷಿಸೆನ್ನ ಪದ್ಮಾಕ್ಷ ತ್ರಿಜಗದ ಧ್ಯಕ್ಷ ಖಳ ಜನಶಿಕ್ಷ ಪಾಂಡವ ಪಕ್ಷ ಕರುಣ ಕಟಾಕ್ಷದಲಿ ನೀ ವಾಹನ ಅ.ಪ. ಕೊಂಚ ಮತಿಯಲಿ ಕುಜನರ ಸೇರಿ ಸಂಚರಿಸುತಲಿ ದೀನನಾದೆ ಪಂಚಶರಸ್ಮರ ವಂಚಿಸುತ ಬಿಡೆ ಚಂಚಲಾಕ್ಷೇರ ಸಂಚು ನೋಟದ ಮಿಂಚಿಗೆನ್ನ ಮನ ಚಂಚಲಾಗುತೆ ವಂಚಿಸೆ ಯಮನಂಚಿಗೆ ಸಿಲುಕಿದೆ 1 ಕಿಟ್ಟಗಟ್ಟಿದ ಕಬ್ಬಿಣದಂತೆ ಕೆಟ್ಟ ಕಿಲ್ಬಿಷದ ರೂಪದಿ ಬಿದ್ದು ದಿಟ್ಟ ನಿನ್ನಯ ಗುಟ್ಟು ತಿಳಿಯದೆ ಪೊಟ್ಟೆ ಗೋಸುಗ ಕೆಟ್ಟ ಕುಜನರ ಘಟ್ಟನಾ ಕಾಲ್ಗಟ್ಟೆ ಬಹುಶ್ರಮ ಪಟ್ಟು ಭವದಿ ಕಂಗೆಟ್ಟೆ ಪ್ರತಿದಿನ 2 ಶ್ರೀ ಕಮಲೇಶ ಹೃತ್ಪದ್ಮದಿನೇಶ ಪ್ರಕಾಶ ಬೇಗನೆ ಬಂದು ಯಾಕೇ ತಡೆವೆನ್ನ ವಾಕ್ಕುಲಾಲಿಸಿ ಕರವ ಪಿಡಿ ದಾ ಕುಚೇಲನ ಸಾಕಿದಾಪರಿ ಕರ ಜಗನ್ನಾಥ ವಿಠಲ 3
--------------
ಜಗನ್ನಾಥದಾಸರು
ರಕ್ಷಿಸೋ ಗೌರೀವರ | ತ್ರಿಪುರದಶಿಕ್ಷಕ ದ್ರೋಣ ಕುವರ ಪ ಅಕ್ಷಿ ರಕ್ತ ರೇಖ ಮಾನಿ | ಯಕ್ಷೇಶ ಪ್ರಿಯ ಮಿತ್ರದಕ್ಷಾಧ್ವರಘ್ನ ರುದ್ರ | ತ್ರ್ಯಕ್ಷನೆ ಲೋಕಾಧ್ಯಕ್ಷಅ.ಪ. ವಿಭೂತಿ ಭಸ್ಮಾರ್ಚಿತ ||ಸು ಭಗಣೀಧೀಶ ಶಿರ | ನಭಕೀಶ ನಿನ್ನ ಸುತೆವಿಭವಾ ಪೊಗಳಲಳವೆ | ಕುಭವ ಪರೀಹರ 1 ಹಿಂಡು ನಖ ಮೃ | ಕಂಡ ಪರಿಪಾಲಕೊಂಡೆನ್ನ ಭಿನ್ನಪವ | ದಂಡಿಸೊ ದುಷ್ಟ ಮನ 2 ಗೋವುಗಳ್ಪರಿ ಪಾಲಕ5ಗೋಪೇರ | ದಾವಾಗ್ನಿಯಿಂ ರಕ್ಷ5ಭಾವ ಜನಯ್ಯ ಗುರು | ಗೋವಿಂದ ವಿಠಲನಭಾವದೊಳಗೆ ಕಾಂಬ ಭಾವವನೀವುದು 3
--------------
ಗುರುಗೋವಿಂದವಿಠಲರು
ರಕ್ಷಿಸೋ ಜಗನ್ನಾಥದಾಸ ರಕ್ಷಿಸೋ ರಕ್ಷಿಸು ಗುರು ಜಗನ್ನಾಥದಾಸ ಪಕ್ಷಿವಾಹನನ ನಿಜದಾಸ ಮು ಮುಕ್ಷು ಮಾರ್ಗವ ತೋರ್ದಧೀಶ ನೀನೆ ಪ್ರ ತ್ಯಕ್ಷ ಪ್ರಹ್ಲಾದನನುಜ- ||ಅಹಾ|| ಈ ಕ್ಷಿತಿಯೊಳು ಸುರಶ್ರೇಷ್ಠನೆನಿಸಿ ವಿ ಶಿಷ್ಟರ ಮನೋಭೀಷ್ಟವನಿತ್ತ ಹರಿದಾಸ 1 ವೇದವಂದ್ಯನ ನಿಜತತ್ತ್ವ ನಿಜ ನಿತ್ಯ (ಸತ್ಯ) ಪೂರ್ಣ ಬೋಧರ ಗ್ರಂಥ ತತ್ತ್ವ ನೀತಿ ತ ಪ್ಪದೆ ಪೇಳ್ದೆ ಮಹತ್ವ ||ಅಹಾ|| ಮೋದಪಡಿಸಿ ಮೋದತೀರ್ಥರ ಮತ ದು ಗ್ಧಾಬ್ಧಿಸುಧೆಯನಿತ್ತ ಬಾದರಾಯಣನ ದಾಸ 2 ಪ್ರಕೃತಿಬಂಧಕರಾದ ಜನರು ನಿನ್ನ ಪ್ರಾಕೃತಗ್ರಂಥನೊಡಿ ಮೋದಿಪರು ಸತತಾ ಪ್ರಾಕೃತನ ತಾ ವಂದಿಪರು ಜನ್ಮ ಸುಕೃತಕ್ಕೆ ತಾವು ಸಾಧಿಪರು ||ಅಹಾ|| ಸಂಸ್ಕøತ ಭಾಷೆಯ ಪ್ರಕರಣಗಳನೆಲ್ಲ ಪ ರಿಷ್ಕøತ ಪಡಿಸಿ ನೀ ಪ್ರಾಕೃತದೊಳು ತೋರ್ದೆ3 ವಿಪ್ರವರೇಣ್ಯನೆ ನೀನು ಜಗದಿ ಅಪ್ರಮೇಯನ ಪ್ರಮೇಯವನ್ನೂ ಅದಕ್ಕೆ ಸಪ್ರಮಾಣಗಳೆಲ್ಲವನ್ನೂ ತೋರಿ ದಿ ಕ್ ಪ್ರದರ್ಶನ ಮಾಡಿ ಇನ್ನೂ ||ಅಹಾ|| ಸ್ವಪ್ರಯೋಜನ ರಹಿತ ಅಪ್ರಮೇಯನ ಮಹಿಮೆ ಕ್ಷಿಪ್ರ ಭೋಧೆಯಾಗಲ್ ತ್ವತ್ಪ್ರಸಾದವನಿತ್ತೆ4 ನಿನ್ನುಪಕಾರದ ಪರಿಯಾ ನಾನು ಜನ್ಮಜನ್ಮಾಂತರಕೆ ಮರೆಯೆ ನೀನೆ ಘನ್ನ ಶ್ರೀಹರಿದಾಸಾಗ್ರಣಿಯೇ ಇನ್ನು ನಿನ್ನ ಹರಿಕಥಾಮೃತಸಾರಕ್ಕೆಣೆಯೇ ||ಅಹಾ|| ಇನ್ನಿಲ್ಲ ನಿನ್ನಂಥ ಘನ್ನ ಕವಿಗಳ ಕಾಣೆ ಪನ್ನಂಗಶಯನ ಶ್ರೀ ವೆಂಕಟೇಶನ ದಾಸಾ 5
--------------
ಉರಗಾದ್ರಿವಾಸವಿಠಲದಾಸರು
ರಕ್ಷಿಸೋ ಪವಮಾನ ಸದ್ಗುರುವರಾ ಪ ಜೀವರ ಬಂಧಗಳಿಂದ ಎಲ್ಲ ಪಾವನ ಮಾಳ್ಪದರಿಂದ ದೇವ ಪಾವನಮೂರ್ತಿಯು ನಿನ್ನ ಮುಖದಿ ಜಗ ತ್ಪಾವನ ಮಾಳ್ಪುದರಿಂದ ಪವನನೆಂಬೋರೆ ನಿನ್ನ ಅ.ಪ ಜ್ಞಾನೈಶ್ವರ್ಯ ವೈರಾಗ್ಯ ನಿನಗೆ ನಿನ್ನ ಸ್ವರೂಪ ಸ್ವಭಾವಕೆ ಯೋಗ್ಯ ನಿಜ ಘನ್ನ ಮಹಿಮ ನಿನ್ನ ಭಾಗ್ಯ | ಆಹಾ ತನು ಚತುಷ್ಟಯದೊಳಗನವರತ ವ್ಯಾಪ್ತನೋ ಇನ್ನೂ ಮುನ್ನೂ ಜಗತ್ಕಾರ್ಯ ನಿನ್ನದೋ ದೇವಾ1 ಬೃಹತಿನಾಮಕ ಕರುಣಾಳು ನಿನ್ನ ದೇಹದಿ ಭಗವದ್ರೂಪಗಳೂ ನಿತ್ಯನೋಡುತ ಅನೇಕಂಗಳು | ಆಹಾ ಬೃಹತಿ ಛಂದಸ್ಸು ಅನ್ನವು ಶ್ರೀಹರಿಗೆ ಛಂದಸ್ಸಿನಿಂದಾಚ್ಛಾದಿತ ತ್ವದ್ಗಾತ್ರನೊ2 ಪ್ರಾಣಾಪಾನ ವ್ಯಾನೋದಾನ ಸಮಾನಾದಿ ಪಂಚಪ್ರಾಣ ಜೀವ ಶ್ರೇಣಿಗಳೊಳಗೆ ನೀ ಪ್ರವೀಣ ಜಗತ್ರಾಣ ನೀನಹುದೋ ಸದ್ಗುಣ |ಆಹಾ ಪ್ರಾಣಾಪಾನದಿಂದ ದೇಹದ ಸ್ಥಿತಿ ಕಾರ್ಯಕ್ಷಣ ತಪ್ಪಲು ಕುಣಪನೆಂದಪರೋ ಈ ದೇಹಕೆ3 ಇಪ್ಪತ್ತೊಂದು ಸಾವಿರದಾರುನೂರು ಶ್ವಾಸ ತಪ್ಪದೆ ಜೀವರು ಮಾಡಿ ಅಹರ್ನಿಶಿ ದೇಹವ ಧರಿಪರೋ ನಿನ್ನ ಒಪ್ಪಿಗೆಯಂತೆ ಸಾಧಿಪರೋ | ಹಾ ಅಹೋರಾತ್ರಿ ಶ್ವಾಸನಿಯಾಮಕ ಜೀವರ್ಗೆ ಅಯುಮಾನವ ನೀವ ಮಾತರಿಶ್ವದೇವಾ 4 ನಿನ್ನಂತರದಿ ಇಟ್ಟು ಅವಸ್ಥಾಭೋಗ್ಯವನಿತ್ತು ತ್ವರದಿ | ಆಹಾ ಪಾವನ ಮೂರ್ತಿಗೆ ಅರ್ಪಿಸುತ್ತ ಶ್ರೀಪತಿ ಕರವ ಮುಗಿದು ನಿಂದಿಹೆ 5 ಪರಿಶುದ್ದ ಸತ್ವಾತ್ಮಕವಾಗಿ ಇನ್ನು ನಿರುತ ಪೂರ್ಣಪ್ರಜ್ಞನಾಗೀ ಜೀವ ಸ ರ್ವರೊಳು ಶುಚಿತಮನಾಗಿ ಇರ್ಪ ಮಾರುತ ನಿನ್ನೊಳು ಅನುವಾಗಿ |ಆಹಾ ಹರಿಯು ನಿನ್ನ ಶುಚಿ ತನುವಿನೊಳಿದ್ದು ಶುಚಿಹೃತ್ ಎಂದು ತಾ ನಿಂದು ನಲಿವನಯ್ಯ6 ಅಂಡಾವರಣದ ಗುಣತ್ರಯ ಕಂಡಿಹೆ ವ್ಯಾಪ್ತಸದ್ಗುಣ ಉ ದ್ದಂಡ ಮಹದ್ರೂಪನೆ ಮಹಘನ್ನ ಇನ್ನು ಮೃಡನಾಪೇಕ್ಷ ಶತಗುಣ | ಆಹಾ ತನುರೂಪದೊಳೆಲ್ಲ ಅಣುರೂಪವಾಗಿಹೆ ತೃಣಮೊದಲು ಸರ್ವಜೀವರೊಳು ವ್ಯಾಪ್ತನೊ7 ಅಂದು ತ್ರಿಕೋಟಿರೂಪದಲಿ ನಿಂತು ನಿಂದ ತ್ರಿವಿಕ್ರಮಾವತಾರದಲೀ ಸೇವೇ ಆ ನಂದದಿ ಸಲಿಸುತ್ತಲಲ್ಲಿ ಇನ್ನು ನಿಂದು ಅಂ ಡದ ಬಹಿರ್ಭಾಗದಲಿ |ಆಹಾ ಅಂಡ ಖರ್ಪರ ಉದ್ದಂಡ ಮೂರುತಿಯೊ 8 ವಾಯುಕೂರ್ಮನಾಗಿ ನಿಂದೇ ಜಗದಾದ್ಯಭಾರವು ಎಲ್ಲ ನಿನ್ನಿಂದೇ ಎಂದು ಕಾಯಜಪಿತ ತರುವ ಮುಂದೇ ನಿನ್ನ ಗಾಯತ್ರೀಪತಿಯ ಪಟ್ಟಕೆಂದೇ | ಆಹಾ ಶ್ರೀಯರಸಾ ಶ್ರೀ ವೇಂಕಟೇಶಾತ್ಮಕ ಉರಗಾದ್ರಿವಾಸವಿಠಲನ ನಿಜದಾಸ 9
--------------
ಉರಗಾದ್ರಿವಾಸವಿಠಲದಾಸರು
ರಕ್ಷಿಸೋ ವರದಯ್ಯನ ಕಣ್ಣಿಗೆ ಸುಕ್ಷೇಮದಿ ದೃಷ್ಟಿಯಪ್ಪಂತೆ ದಕ್ಷಿಣ ಕಾಶಿಯೆಂದೆನಿಪ ಕುಡುಮಪುರಾ ಧ್ಯಕ್ಷನಾದ ಶ್ರೀ ಮಂಜುನಾಥ ದೇವಾ ಪ ನಿನ್ನಡಿಸೇವೆಯ ಮಾಳ್ಪರಿಗೀಪರಿ ಬನ್ನ ಬಡಿಸುವುದುಚಿತವೇ ತನ್ನ ಮಕ್ಕಳು ತಪ್ಪಿ ನಡೆದರೆ ತಾಯ್ತಂದೆ ಮುನ್ನ ಮರುತು ಸಲಹುವ ಪರಿಯಲಿ ಮುಂದೆ 1 ಬುದ್ಧಿಯಾಗಿರಲೆಂದು ಮಾಡಿದರೇನು ಉದ್ಧರಿಸುವದನು ಮಾನವೆ ಗಿದ್ದ ಮಹಾತ್ಮರೊಂದಾಗಿ ಮೋಹದಿ ಬೇಗ 2 ಮೋಡದ ರವಿ ಮೂಡುವಂದದಿ ದಯ ಮಾಡುವ ಭಾರವು ನಿನ್ನದು ರೂಢಿಯೊಳಧಿಕ ಶ್ರೀವರ ಮಂಜುನಾಥೇಶ ಗಾಢದಿಂದಲಿ ವರದಯ್ಯ ಹೆಗಡೆಗೆ 3
--------------
ಭಟಕಳ ಅಪ್ಪಯ್ಯ
ರಕ್ಷಿಸೋ ಶ್ರೀ ವೇದವ್ಯಾಸ | ಬದರಿನಿವಾಸ | ಆಶ್ರಿತ ಜನತೋಷ ಪ ಭೃತ್ಯ ಮತ್ಸ್ಯ | ವ್ಯಕ್ತನಾದನು ಹರಿ ಅವ್ಯಕ್ತ | ಕರೆಸಿದ ಸತ್ಯ | ವತಿಯಸುತ ಗೋಪ್ತ 1 ಕಾಲ ತಾಪ | ಬಟ್ಟರು ಜನ ಪ್ರಲಾಪ |ಶ್ರೀಪತಿ ತಾಳ್ದನು ರೂಪ | ವ್ಯಾಸ ರೂಪ | ದೋಷ ನಿರ್ಲೇಪ |ದ್ವೀಪದೊಳುದಿಸಿತೀರೂಪ | ಯಮುನಾ ಸಮೀಪ | ಪರಾಶರ ಜನೆನಿಪ 2 ಸೂತ್ರ ದಾತ | ಎನ್ನೊಳು ಪ್ರೀತ | ನಾಗು ಭಕ್ತಿ ಪ್ರದಾತ 3 ಜನಿತ | ಸಕಲ ಭಸ್ಮೀಭೂತ 4 ಭೋಗಾದಿಂ ಪ್ರಾರಬ್ಧ ಪೋಗಾಡಿದಂಥ | ಕಾರ್ಯಾಖ್ಯ ಬ್ರಹ್ಮಪ್ರಾಪ್ತ |ಯೋಗೀಜನ ಪ್ರಳಯೇಪಿ ಅಜನ ಪ್ರಾಪ್ತ | ಇತ್ಯಾದ್ಯವಸ್ಥಾದಿಯೊಳ್ಗತ |ಮಾರ್ಗಗಳು ಶೇಷ ಗರುಡಾದಿಯೋಳ್ಗತ | ಈ ಪರೀಯಿಂ ಸಮಸ್ತ |ಯೋಗೀ ಜನಂಗಳಿಗೆ ಆ ಅಜಸಮೇತ | ವಿರಜಾ ಸ್ನಾನ ಪ್ರಾಪ್ತ ||ಸ್ನಾನದಿಂದಲಿ ಲಿಂಗನಾಶ | ಮಾಡುವೆ ಶ್ರೀಶ | ಆದರವರು ನಿರ್ದೋಷ |ಅನಂತರ್ಹರಿ ಉದರ ಪ್ರವೇಶ | ಕೆಲವರು ಶ್ರೀಶ | ಆನಂದವೇ ವಪುಷ |ಜ್ಞಾನಿ ಇನ್ನಿತರರು ತದ್ದೇಶ | ದಲ್ಲಿವಾಸ | ಆನಂದಾನನುಭವ ಶ್ರೀಶ |ನಾನಾ ಪರಿಯೋಗ್ಯರ ಶ್ರೀಶ | ಪ್ರಳಯದಲ್ಲೀಶ | ಧರಿಸುವಸರ್ವೇಶ 5 ಪರಿ ಕಾರಣಂಗಳಿಂದ ನಿನ್ನ | ಇಚ್ಚಾಖ್ಯ ಆವರಣವಪಸಾರಿಸೀ |ತುಷ್ಟೀಯಿಂದಲಿ ಸ್ವಸ್ತಯೋಗ್ಯಸುಖವ | ಅಭಿವ್ಯಕ್ತಿಂಗಳಂ ಗೈಯ್ಯುವಾ |ಲಕ್ಷ್ಣ ಮುಕ್ತಿದ ಮಾಯೆ ಪತಿಯು ಆದ | ಶ್ರೀವಾಸುದೇವನ ದರ್ಶನ ||ವಾಸುದೇವನ ಕಂಡನಂತರ | ಮತಿವಂತರ | ಪೊಗಿಸುವಾಗಾರ |ಶ್ರೀಸಿತ ದ್ವೀಪಾದಿ ಆಗಾರ | ವರ ಮಂದಿರ | ವೈಕುಂಠಾಗಾರ | ಲೇಸಾಗಿ ಸ್ವಯೋಗ್ಯ ಸುಖಸಾರ | ಅತಿಪರತರ | ಅನುಭವಿಪ ವಿಸ್ತಾರ | ಆಶಾಮಾತ್ರದಿ ಸರ್ವ ಸುಖಸಾರ | ಸೃಷ್ಟ್ಯಾದಿ ಇತರ | ಇತ್ತು ತೋಷಿಪೆ ಅವರ 6 ಚಾರು ಕೌಪೀನ ಮದನ ದರ ಪೋಲ್ವಧದನ | ತುಳಸಿಯ ವನ | ಮಾಲೆಗಳ್ಹಸನ |ನಂದನಂದನ ನಿನ್ನ ಕರುಣ | ಗುಣಾಭರಣ | ತೊಡಿಸಯ್ಯ ಪ್ರಧನ 6 ಪ್ರೀಯಾ ಪ್ರೀಯ ಸರ್ವ ವಿಷಯಕೆಲ್ಲ | ನೀನೇ ಮೂಲನೆಂದು ತಿಳಿಸೋ |ಕಾಯಾ ವಾಚಕ ಮಾನಸೀಕ ಸರ್ವಾ | ಕರ್ಮಾದಿಗಳೆಲ್ಲವಾ ||ಜೀಯಾ ನಿನ್ನಯ ಚರಣಕಿತ್ತು ನಮಿಪ | ಬಿಂಬಕ್ರಿಯಾಜ್ಞಾನವಾ ||ರಾಯಾ ನೀನೆನಗಿತ್ತು ಪಾಲಿಸಯ್ಯ ಮುದದೀ | ನಿನ್ನನ್ನು ನಾ ಬೇಡುವೆ ||ತುತಿಪ ಜನರ ಸುರಧೇನು | ಕಾಮಿತವನೆ | ಕರುಣಿಪ ಕಲ್ಪದ್ರುಮನೆ |ಮತಿಗೆಟ್ಟ ಮನುಜನು ನಾನೆ | ನಿನ್ನ ಪಾದವನೆ | ನಂಬಿ ಬಂದಿಹೆ ನಾನೇ |ಹಿತದಿಂದ ನೀನೆನ್ನ ಕರವನೆ | ಪಿಡಿ ಎಂಬೆನೆ | ನಾ ಬೇಡುವೆ ನಿದನೆ |ಅತುಳ ಮಹಿಮ ಜಗದೀಶನೆ | ಮಧ್ವೇಶನೆ | ಗುರು ಗೋವಿಂದ ವಿಠಲನೆ 8
--------------
ಗುರುಗೋವಿಂದವಿಠಲರು
ರಕ್ಷಿಸೋ ಶ್ರೀಶ ಶ್ರೀ ಶ್ರೀನಿವಾಸ ಅಕ್ಷಯ ಗುಣಪೂರ್ಣ ಪಕ್ಷಿವಾಹನ ದೇವ ಅಕ್ಷರೇಶಾತ್ಮಕ ಮೋಕ್ಷ ದಾತನೆ ಹರಿ ಪ ರಕ್ಷಿಸೀಕ್ಷಣ ಲಕ್ಷ್ಮೀರಮಣ ಈಕ್ಷಿಸೀಗಲೆ ರಕ್ಷಿಸೆಮ್ಮನು ಕುಕ್ಷಿಯೊಳು ಜಗ ರಕ್ಷಿಸುವ ಹರಿ ಸೂಕ್ಷ್ಮ ಸ್ಥೂಲದೊಳಿರುವ ದೇವ ಅ.ಪ ಇಂದಿರೆರಮಣ ಗಜೇಂದ್ರವರದ ಹರಿ ಮಂದಹಾಸದಿ ಭಕ್ತವೃಂದವ ಪಾಲಿಪ ನಂದಕಂದನೆ ಬಂದು ರಕ್ಷಿಸು ಇಂದಿರಾ ಭೂದೇವಿ ರಮಣನೆ ಸುಂದರಾಂಗನೆ ಸುಮನ ಸರ ಹೃ- ನ್ಮಂದಿರದಿ ಶೋಭಿಸುವ ದೇವ 1 ನಂದನಕಂದ ಮುಕುಂದ ಹರೇ ಕೃಷ್ಣ ಕಂದರ್ಪ ಜನಕನೆ ಕರುಣಾನಿಧೆ ಹರಿ ಮದನ ಜನಕÀ ಸುಂದರಾಂಗ ಶ್ರೀಸುಮನಸರ ಪ್ರಿಯ ಬಂಧಮೋಚಕ ಭವವಿದೂರನೆ ಸಿಂಧುಶಯನ ಸರ್ವೇಶ ಶ್ರೀಹರಿ 2 ಕನಕ ಗರ್ಭನ ಪಿತ ಕರುಣಿಸೊ ನಿನ್ನಧ್ಯಾನ ಕನಸುಮನಸಲಿ ನಿನ್ನ ಸ್ಮರಣೆ ಎನಗಿತ್ತು ಕನಲಿಕೆಯ ಕಳೆದೆಮ್ಮ ಕ್ಷಣ ಬೆಂ- ಬಿಡದೆ ಕಾಪಾಡೆನ್ನುತ ಪ್ರಾರ್ಥಿಪೆ ಕಮಲನಾಭವಿಠ್ಠಲನೆ ಕರುಣದಿಕಮಲ ಮುಖಿಯೊಡಗೂಡಿ ಹರುಷದಿ 3
--------------
ನಿಡಗುರುಕಿ ಜೀವೂಬಾಯಿ
ರಕ್ಷೆಸೆನ್ನ ಈ ಕ್ಷಣದಲುಪೇಕ್ಷೆ ಮಾಡದೆ ಪಕ್ಷಿವಾಹನ ಪರಮಪುರುಷ ಲಕ್ಷ್ಮಿನಾಯಕ ಪ ಅಂದಂದಿಂದ ಕೈಯಹಿಡಿದು ಚಂದದಿಂದ ಎನ್ನಬಿಡದೆ ಇಂದು ನಿನ್ನ ದ್ವಂದ್ವ ಚರಣಕ್ಹೊಂದಿದ ದಾಸನು ಎಂದು 1 ಕಷ್ಟಿ ಇವನು ಎಂದು ಕರುಣ ದೃಷ್ಟಿಯನೆ ತೋರುಬೇಗ ಸೃಷ್ಟಿಗೊಡೆಯ ನಾದ ಶ್ರೀ ಕೃಷ್ಣಮೂರುತಿ ನೀನೆ ಗತಿ 2 ಇಂದು ಮಾಡಿದಂಥದೆಂಥಾ ದೋಷವೊ ಹರಿಯೆ ಇಂದು ಎನ್ನ ಬಾಧಿಸುವುದು ಏನು ಕಾರಣವೊ ಕೃಷ್ಣಾ 3 ಸಜ್ಜನರ ರಕ್ಷಕ ದೇವ ಸರ್ವಜನರ ಪೋಷಕ ನೀನೆ ದುರ್ಜನರ ಖಂಡಿಸಿದ ಮೂಜ್ಜಗ ಪಾಲಕ ನೀನೇ ಎಂದೂ 4 ಪುಂಡರೀಕವರದ ಭೂಮಂಡಲಾಧಿಪತಿಯೆನಿಸಿ ಮಹಿಮವುಳ್ಳದೇವ 5 ಭಾವಜನಯ್ಯ ಭವ ಸ್ತೋತ್ರ ಪ್ರೀಯಾ ಪೊರೆಯದಲಿರುವದು ದೇವಾ 6 ಗಂಗೆ ಜನಕ ಮಂಗಳಾಂಗ ಕರುಣಾಸಾಗರ ಘನಗಂಭೀರಾ ರಂಗ `ಹೆನ್ನವಿಠಲ' ಕೃಪಾಂಗ ದೇವೋತ್ತುಂಗ ಹರಿಯೆ7
--------------
ಹೆನ್ನೆರಂಗದಾಸರು
ರಂಗ ನಿನ್ನ ನಂಬಿದೆ ಮಾಂಗಿರಿ ಶೃಂಗಾರಪೂರ್ಣ ಶುಭಾಂಗ ಶ್ರೀಕಾವೇರಿ ಪ ಮಂಗಳ ಮದನಾಂಗ ಗಿರಿಧರ ರಥಾಂಗ ಕೃಪಾಂಗ ಅ.ಪ ಬಾಲದಿವಾಕರ ತೇಜೋಲ್ಲಾಸ ಶೀಲ ಸುಗುಣಾ ಸಂಭೂಷಿತ ವೇಷ 1 ನೀಲ ನೀರದ ತಾರ ಸರೋರುಹ ಲೋಲ ಬಂಧುರ ನಯನಯುಗ 2 ಮೂಲಾಧಾರ ವೈಕುಂಠಪುರೀಶ ಹಾಲಾಹಲಧರ ಮಾಂಗಿರಿ ಪರೇಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಂಗ ನಿನ್ನ ಸಂಗ ಸೌಖ್ಯಕಾಗಿ ಕುರಂಗ ಲೋಚನೆಯು ತಾನುಭಂಗ ಬಡುವಳಂತರಂಗದಲ್ಲಿ ನಿನ್ನ ಅಂಗ ತಂದು ತೋರೈ ಪ ಕುಸುಮ ಗಂಧಿಯು ತಾನುಹಸುಮಗಳಲ್ಲವೆ ಪೊಸತಾಪ ಕಾಯಲಿಲ್ಲವೆ 1 ಕನ್ನೈದಿಲೆ ಸೌವಿಸು ಕಣ್ಣುಗಳಿಂದ ನಿನ್ನರ್ಚಿಸುವೆ ತವಕದಿ |ತನ್ನಾದ ಬೊಂಬೆ ತಾ ಎನ್ನ ನಿಮ್ಮ ಬಳಿಯಲಿಮನ್ನಿಸಿ ಕಳುಹಿದಳೈ 2 ಮುನಿದಗಲಿರುವದು ಮುನಿಜನ ವಂದ್ಯಗೆ ಮುನಿಗಳೊಪ್ಪರೀ ಮಾತನು ಕನಸಿನೊಳವಳ ಕೂಡ ಅನುಭವಿಸುವಾತಂಗೆಜನದ ನಾಚಿಕೆ ಯಾತಕೈ 3 ಅಂಚಗಮನಿ ತಾ ಮಿಂಚು ಮಂಚವ ಕಂಡುಸಂಚಿತವನು ನೆನೆವಳ ವಂಚನೆಯ ಬಿಟ್ಟುಮುಚ್ಚಾವಳ ಕೂಡೈ ನೀ ಕೆಂಚಿಯರಸರೊಲ್ಹದು 4 ಮಂದರ ಧರನೀಗ ಬಂದು ಸಂಮಿಸುವದು ರುಕ್ಮಕಂದನ ಸೊಲ್ಲಿಗೆ 5
--------------
ರುಕ್ಮಾಂಗದರು
ರಂಗ ರಂಗನಾಥ ಬೇಗ ಬಾರೋ ಪ ತುಂಗಮಹಿಮ ಬಂದು ಭವಭಂಗ ಮಾಡೋ ಅ.ಪ ಇಂದು ಬಂದೆ ಕುಂದುಎಲ್ಲಹಿಂದುದೂಡೋ ಮುಂದುಮಾಡಿ ಛಂದಭಕ್ತಿ ಕಂದನೆಂದು ಕೈಯ ಪಿಡಿಯೋ 1 ಬಂಧುವಲ್ಲೆ ನೀನೇ ಜಗಕೆ ನಂದಶಯಸ ಬಂಧಮೋಚಕಾ ಕಾವೆ ಪೇಳುಗೋವಿಂದಾ 2 ಬಿಂಬನೀನು ಹೌದು ಪ್ರತಿಬಿಂಬ ನಾನು ನನ್ನ ವ್ಯಾಪಾರ ಅಂಬೋದೇಕೋ ದೋಷಿಯೆಂತೆನ್ನಾ 3 ಹಂಬಲವ ಬಿಟ್ಟುಸಕಲ ನಂಬಿದೆನೋ ಸ್ವಾಮಿಯೆಂತೆಂದು ತುಂಬಿಶುಧ್ದ ಜ್ಞಾನ ಭಕುತಿ ಅಂಬುಜಾಕ್ಷಯಿಂಬು ನೀಡೈಯ್ಯಾ4 ಭುಕ್ತಿ ನೀನೇ ಪ್ರಾಣ ನೀನೆಸರ್ವಸ್ವ ಏನು ಇನ್ನು ಮಾಡಲಾಪೆ ನೀನೆವಲಿದು ಕಾಯಬೇಕೈಯ್ಯ5 ವಾಸುದೇವ ಪೂರ್ಣ ಸುದ್ಗುಣಾ ತೋಷಕಾಯ ಶ್ರೀಶನಿನ್ನ ದಾಸನೆಂದು ಒಪ್ಪಿಕೊಳ್ಳಯ್ಯ 6 ಏಕಾನೇಕರೂಪ ಸಕಲ ಲೋಕ ಸೃಜಿಸಿ ಅಳಿವೆ ಅನೀಕಾ ಬೇಕು ಎನಿಪೆ ಭಕ್ತರಲ್ಲಿ ಸಾಕಬೇಕು ಶ್ರೀಗೆ ನಾಯಕ 7 ಮೋದ ಪೂರ್ಣ ಬಾದರಾಯಣಾ ಆದಿಮಧ್ಯ ಅಂತ್ಯದೂರ ಸಾಧುಪ್ರಾಪ್ಯನೇಮ ವರ್ಜಿತಾ 8 ಶರಣು ಶರಣು ಮಧ್ವಸದನ ಶರಣು ಶರಣು ಬೃಹತಿಪ್ರತಿಪಾದ್ಯ ಶರಣು ಶರಣು “ಕೃಷ್ಣವಿಠಲ” ಶರಣು ರಂಗ ಕರುಣಾ ಸಾಗರ9
--------------
ಕೃಷ್ಣವಿಠಲದಾಸರು
ರಂಗಧಾಮ ಭುಜಂಗ ಶಯನ ಮಂಗಳಾತ್ಮಕನೆ ಶ್ರೀಶನೆ ಪ ಗಂಗಾಜನಕ ಉತ್ತುಂಗ ಮಹಿಮನೆ ಸಂಗರಹಿತನೆ ಭಂಗಹರಿಪನೆ ಅ.ಪ ಶ್ರೀಶ ನಿನ್ನನು ಪ್ರಾರ್ಥಿಪರಘ ಶೋಧಿಸೆನುತ ಶ್ರೀ ಸಮೇತರಾಗಿ ಭಕ್ತರ ಪೋಷಿಸೆನ್ನುತ ವಾಸುದೇವ ಅನಂತಮಹಿಮ ಶ್ರೀಶನೆನ್ನುತ ದಾಸರೆಲ್ಲರು ಘೋಷಿಸುವರು ಶೇಷಶಯನ ರಕ್ಷಿಸೆನುತ 1 ಸಾಧುಜನ ಹೃದಯವಾಸನೆನ್ನುತ ಪೇಳ್ವರೊ ಸಾಧನ ಜೀವರಿಗೆ ಪರಮಪ್ರಿಯನೆಂಬರೊ ಮೋದತೀರ್ಥ ಸುಧಾರಸ ಸೇವಿಸಿರೆಂಬರೋ ಆದಿ ಪುರುಷ ಅನಾದಿ ಅನಂತ ಮಹಿಮನೆಂಬರೊ2 ಅಕ್ಷಯಗುಣ ಪೂರ್ಣಸರ್ವರ ರಕ್ಷಿಸೆನ್ನುತಲಿ ಲಕ್ಷ್ಮಿಪತಿಯೆ ಪ್ರಾರ್ಥಿಸುವೆನು ಈಕ್ಷಿಸೆನುತಲಿ ಪಕ್ಷಿವಾಹನವೇರಿ ಮೆರೆವ ಅದೋಕ್ಷಜನೆನುತಲಿ ನಿತ್ಯ ನಿತ್ಯದಲಿ 3 ಶೋಭಿಪ ನಿನ್ನ ರೂಪ ಹೃದಯದಲಿ ಕಾಣಲು ಶೋಭಕೃತು ಸಂವತ್ಸರದಲಿ ನಿನ್ನ ಪಾಡಲು ಶೋಭನಂಗಳನ್ನೆ ಕೊಡುವ ಸ್ವಾಮಿ ಎನ್ನಲು 4 ಕಡಲಶಯನ ಮೃಡನ ಸಖನೆ ಬಿಡದೆ ರಕ್ಷಿಸು ತಡೆಯದೆ ನಿನ್ನ ಚರಣ ಸ್ಮರಣೆ ಬಿಡದೆ ಕರುಣಿಸು ಬಿಡದಲೇ ಬಹಮನದ ತಾಪವೆಲ್ಲ ನೀಗಿಸುಕಡಲೊಡೆಯನೆ ಕಮಲನಾಭ ವಿಠ್ಠಲ ಪಾಲಿಸು 5
--------------
ನಿಡಗುರುಕಿ ಜೀವೂಬಾಯಿ
ರಂಗನಂಘ್ರಿಯಂಗುಷ್ಠೆ ಸಂಗೆ ಭವಭಂಗೆ ಪ ಉಪೇಂದ್ರ ಭಗವಂತ ಪಟುರೂಪ ಧರಿಸಿ ಚಂದ್ರಮಂಡಲ ಮೀರಿ ಬೆಳದಜಾಂಡವನೊಡಿಯೆ ಸಾಂದ್ರಗುಣದಿಂದ ಉದ್ಭವಿಸಿದೆ ಜನನಿ 1 ಕಮಲವನು ತೊಳಿಯಲಾವೇಗದಿಂದ ವಿಮಲಗತಿಯಲಿ ಬಂದು ಮಂದಾಕಿನಿ ಎನಿಸಿ ಸುಮನ ಸಾವನಿಯಲ್ಲಿ ಪರಿದೆ ಸ್ವರ್ಣನದಿಯೇ2 ಧ್ರುವಲೋಕಕಿಳಿದು ಅಮರಾಲಯವ ಸಾರಿದೆ ತವಕದಿಂದಲಿ ಧುಮುಕಿ ಚತುರಭಾಗವಾದೆ ಭವ ಪರಿಹರಿಸಿ ಭಾಗೀರಥಿ ಎನಿಸಿದೆ 3 ಭವದೊರೆ ಭಗೀರಥಗೆ ಒಲಿದು ಬರುತ ಜವನ ಮನಿಯ ಕೊಡ ಮಣಿಕರ್ಣಿಕೆ ನೆರದೆ4 ಅಳಕನಂದನೆ ನಿನ್ನ ಸ್ಮರಣೆ ಮಾಡಿದ ಜನಕೆ ಕುಲಕೋಟಿ ಉದ್ಧಾರ ನಿಃಸಂದೇಹಾ ಮಜ್ಜನ ಪೊಳೆವ ವೈಕುಂಠಪುರ ಅವನ ಹೃದಯದಲಿ5 ಕುಲಪ್ರವಹವಾಗಿದ್ದ ಜೀವರ ಪುಣ್ಯವನು ಹೇಳಿ ಕೇಳುವವನಾರು ಮೂಲೋಕದಿ ಸೀಲಗುಣ ಸಂಪನ್ನೆ ವರುಣನರ್ಧಾಂಗಿನಿ ಕಾಲ ಕಾಲಕೆ ನಿನ್ನ ಧ್ಯಾನದಿಂದಲ್ಲಿರಿಸು 6 ದೇಶದೇಶದಲಿಂದ ಬಂದ ಸುಜನರ ಪಾಪ ಮಾಧವ ಚಲುವ ಶ್ರೀನಿವಾಸ ಯದುಪತಿ ವಿಜಯವಿಠ್ಠಲನ ಸುತೆ ಖ್ಯಾತೇ 7
--------------
ವಿಜಯದಾಸ
ರಂಗನಾಥ ಪಾಲಿಸೆನ್ನ ಮಂಗಳಾಂಗ ಶ್ರೀಶ ಬೇಗ ಪ ನಿನ್ನ ಭಜನೆಯನ್ನು ಗೈವೆ ಪನ್ನಗಾರಿವಾಹ ಹರೆ ಸ್ವರ್ಣವಸನ ಭೂಷಿತಾಂಗ ಸನ್ನುತಾಂಗ ಧೀರಶೂರ 1 ದುಷ್ಟರನ್ನು ಶಿಕ್ಷಿಸುತ್ತ ಸೃಷ್ಟಿಗೊಡೆಯನೆನಿಸಿ ನೀನು ಇಷ್ಟ ವರಗಳನ್ನು ಕೊಟ್ಟು ಶ್ರೇಷ್ಟನೆನಿಸು ನಂಬಿದೆನು 2 ಕಾಮಿತಾರ್ಥ ಫಲಗಳೀವ ಕಾಮ ಜನಕ ದೇವನೆ ಧೇನುನಗರದಲ್ಲಿ ನೆಲಸಿ ನೇಮದಿಂದ ಪೂಜೆಗೊಂಬೆ 3
--------------
ಬೇಟೆರಾಯ ದೀಕ್ಷಿತರು