ಒಟ್ಟು 7318 ಕಡೆಗಳಲ್ಲಿ , 132 ದಾಸರು , 4469 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಕ್ತಿಗೊಲಿವೆಯೋ ರಂಗ ಯುಕ್ತಿಗೊಲಿವೆಯೋ ಪ ಶಕ್ತಿ ಯುಕ್ತಿಗೇ ಒಲಿವನಲ್ಲ ಭಕ್ತಿಯೆಂಬುದಿಲ್ಲದಿರಲು ಅ.ಪ ಸಕಲ ಭುವನಗಳೊಳು ಹುಡುಕಿ ವಿಕಲನಾದನಂದು ಕಶಿಪು ಭಕುತಿಯಲಿ ಪ್ರಹ್ಲಾದ ಕರೆಯೆ ಮರುಘಳಿಗೆಯೆ ಕಂಭದಿ ಬಂದೆ1 ಸೆರೆಯೊಳರಿಯು ಜನಿಸಲಂದು ಬರಿಯಮಾಯೆಯ ಸೆರೆಯೊಳಿರಿಸಿ ಭರದಿ ಗೋಕುಲಕೈದಿದೆಯಲ್ಲವೆ2 ಕರೆದ ಕೌರವರಿಗೊಲಿಯಲಿಲ್ಲ ಕರೆಯದಾವಿದುರಗೊಲಿದೆ ಅರಿಯಲರಿದು ಮಹಿಮೆಗಳ ಮಾಂಗಿರಿರಂಗ ಕರುಣಾಸಾಗರ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶರಣ ರಕ್ಷಕನಹುದೋ ಶ್ರೀ ಹರಿಯೆ ಶರಣರಕ್ಷಕನೆ ಧ್ರುವ ನಕ್ರ ಗಜೇಂದ್ರಗೆ ವಕ್ರಾಗಿ ತ್ರಿ ವಿಕ್ರಮನೆಂದಂದು ಮೊರೆ ಇಡಲು ಚಕ್ರದಿಂದಲಿ ನೀ ವಕ್ರನೆ ಹರಿಸಿ ಅಕ್ರದಲೊದಗಿ ಕಾಯ್ದವ ನೀನಹುದೊ 1 ತರಳ ಪ್ರಹ್ಲಾದನು ಮೊರೆ ಇಡುವದು ಕೇಳಿ ಭರದಿಂದ ಸ್ಥಂಭದಲುದ್ಭವಿಸಿ ದುರುಳದೈತ್ಯನ ಕರುಳೊನಮಾಲೆಯನ್ನು ಮಾಡಿ ಕರುಣಿಸಿ ಭಕ್ತ ಗೊಲಿದವ ನೀನಹುದೊ 2 ಸೆರಗಪಿಡಿದು ಸೀರೆ ಸೆಳೆವ ಸಮಯದಲಿ ಹರಿಯೆಂದು ದ್ರೌಪದಿ ಮೊರೆ ಇಡಲು ತ್ವರದಿಂದೊದಗಿ ಬಂದು ಪೂರಿಸಿ ವಸ್ತ್ರವ ಧರೆಯೊಳು ಲಜ್ಜೆಗಾಯ್ದವ ನೀನಹುದೊ 3 ಮಂಡಿಸಿರಲು ಕೌರವ ಅರಗಿನ ಮನೆ ಪಾಂಡವರದರೊಳು ಸಿಲ್ಕಿರಲು ಕಂಡು ನೀ ಅದರೊಳು ವಿವರವ ತೋರಿ ಪೊರವಂಡಿಸಿದ ಪ್ರಚಂಡ ನೀನಹುದೊ 4 ಎಸೇಸು ಭಕುತರ ಅವರಸಕ್ಕೊದಗುತ ಲೇಸಾಗಿ ಕಾಯ್ದವ ನೀನಹುದೊ ದಾಸ ಮಹಿಪತಿ ಮನದವಸರಕ್ಕೊದಗುತ ಭಾಸುತಲಿಹ್ಯ ಭಾಸ್ಕರ ಕೋಟಿ ತೇಜ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶರಣಜನಮಂದಾರ ಮುರದಾನವವಿದಾರ ಕರವಿಡಿದು ಕಾಪಿಡೈ ಕಮಲನಾಭ ಧರೆಯೊಳಾರಿರ್ಪರೈ ಪರಮಸತ್ಯಾತ್ಮರೀ ಪರಿಯ ನೋಡಲು ನಿನಗೆ ಸರಿಯನರಿಯೆ ಮೂರಡಿಯ ನೆವದಿ ನೀನಾರಯ್ದು ಭೂಮಿಯಂ ಧಾರಾವಿಧಿಯಿನಿತ್ತ ದೈತ್ಯವರನ ಶಿರಮೆಟ್ಟಿ ಪಾತಾಳ ಕುಹರದೊಳ್ ಸೆರೆವಿಡಿದು ಪರಮ ಜಾಗರದಿಂದ ಕಾಪುಗುಡುವೈ ಕರಿರಾಜವರದ ಲಕ್ಷ್ಮೀವಿನೋದ ಕರುಣಾಳು ನೀನೆಂದು ತಿಳಿದೆ ಮನದೆ ಭರದಿಂದ ಮೈದೋರು ಮುದುವ ಬೀರು ವರಶೇಷ ಗಿರಿನಿಲಯ ಸುಗುಣವಲಯ
--------------
ನಂಜನಗೂಡು ತಿರುಮಲಾಂಬಾ
ಶರಣಜನೋದಧಿಚಂದ್ರಾ ಸಿರಿ ಯರಸ ದೇವ ದೇವ ಕರುಣಿ ಮುಕುಂದಾ ಪ ಹಾರದ ನಿಗದಿಯ ಬಿಟ್ಟು ಸೋತವನಾಗಿ ವ್ಯಾಸ ಭೀಷ್ಮನ ಗೆಲಿಸಿದೆ ಮುಕುಂದಾ 1 ಹಗಲೇ ಇರಳ ಮಾಡಿ ಸೈಂಧವನಸುವನು ತೆಗಿಸಿ ನರನ ವಾಸಿ ಕೊಂಡ್ಯೋ ಮುಕುಂದಾ 2 ಶರಧಿಯಂಜಿಸಿಕೊಂಡು ಪಕ್ಷಿಯ ಶಿಶುವಾಗಿ ಗರುಡನ ವಾಸಿಯ ಕೊಂಡ್ಯೊ ಮುಕುಂದಾ 3 ದಶಜನುಮವತಾಳಿ ಮುನಿಯ ಬೆದರಿಸ್ಯಂಬ ರಿಕ್ಷಣ ಫಲನಡಿಸಿದೆ ಮುಕುಂದಾ 4 ಗುರು ಮಹಿಪತಿ ಸ್ವಾಮಿ ಭಕ್ತ ವತ್ಸಲನೆಂಬ ಬಿರುದುವಾಳಿದರೆಂದು ಸಲಹೋ ಮುಕುಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣನ್ನ ಮಾತು ಲಾಲಿಸೊ ಪ ಭವ ಕರವ ಪಿಡಿದು ಪೊರೆ ಎಂದು ನಿನ್ನ ನಾ ಕರೆವೆ ಬಾಯ್ದೆರೆವೆ ಆಲ್ವರಿವೆ ನತಜನ ಸುರತರುವೆ ಅ.ಪ ಮಧ್ವಮುನಿ ಸುಮತೋದ್ಧಾರಕ ಯತಿಕುಲ ತಿಲಕ ಪಾವಕ | ವಿದ್ವತ್ ಜನತತಿ ಪಾದ ಪದ್ಮಕೆ ನಮಿಸುವೆ ಶುದ್ಧ ಸುಜ್ಞಾನವ ನೀಡೊ ಅಘದೂಡೋ ಕೃಪೆ ಮಾಡೋ | ಸುತನೆಂದು ನೋಡೋ 1 ವಿರಚಿಸಿ ಗ್ರಂಧತ್ರಯವ | ಬೋಧಿಸಿ ಭೇದ ಪೊರೆದಿ ದ್ವಿಜ ಪರಿವಾರವ | ನೆರೆನಂಬಿದ ಭೂಪಗೆ ಧಾವಿಸುತ ಭರದಿ ಬರುವ ಕುಹಯೋಗ ಕಂಟಕವ ದಯದಿ ನೀತರಿದಿ | ಸುಖಗರೆದಿ ಧಾರುಣಿಯೊಳು ಮೆರಿದಿ 2 ವಂದಿಪೆ ಸುಸುಗತಿದಾಯಕ ಶ್ರೀವರ ಶಾಮ ಸುಂದರ ಕೃಷ್ಣೋಪಾಸಕ ತಂದೆ ಎಂದು ನಿನ್ನ ಪೊಂದಿ ಪ್ರಾರ್ಥಿಸುವೆ ಬಂದು ಜವದಿ ಪುರಂದರದಾಸರ ಪ್ರಿಯಾ 3
--------------
ಶಾಮಸುಂದರ ವಿಠಲ
ಶರಣರ ಕಾಯಕವೇ ಮಾಡಿ | ಗುರುಧರ್ಮ ಕಾಯಕವನೆ ಮಾಡಿ ಪ ಕಂದೋಪಮನ್ಯಾನಂದವ ಪಡೆದಾ 1 ಐದು ವರುಷದ ಮಗವಿಡಿದ ದೃಢಾ 2 ಇಳೆಯೊಳು ಕರಿರಾಜ ನೆಲೆಗೊಂದು ವಿಡಿದಾ 3 ಐವರಂಗನೆ ಭಾವದಿ ನುಡಿದಾ 4 ಭಾರವಪ್ಪಿಸಿ ಕೊಟ್ಟಾ ಕೀರಿಟಿ ಜಡಿದಾ 5 ಅಂದಿಗಿಂದಿಗೆ ಸಾಧುವೃಂದವು ನಡದಾ 6 ಮಹಿಪತಿಜ ಹೇಳಿದ ವಿಹಿತಾವಿಡಿದಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣಾಗತರಕ್ಷಕ ಬೇಗದಿ ಬಂದು ಮನಮಂದಿರದಿ ನಿಲ್ಲೋ ಪ ಈ ಕರೆಕರೆ ಸಂಸಾರಶರಧಿಯೊಳು ನಿಂದೆ ಹರಿಯೆ ನಿಲ್ಲೊಂದರಘಳಿಗೆಯಾದರೂ ಮನದಿಅ.ಪ ತೋಯಜಾಂಬಕ ನಿನ್ನ ನಾನೆಂದಿಗೆ ಕಾಯದೊಳು ಕಾಂಬೆನೊ ಮಾಯಾರಮಣನೆ ನೀ ಮಾಯವ ಹರಿಸಯ್ಯ ಆಯಾಸಗೊಳಿಸದೆ ಕಾಯುವುದೀಗಲೆ 1 ನಾನಾಯೋನಿಗಳಲ್ಲಿ ನಾ ಬರಲಂಜೆನೋ ಶ್ವಾನಸೂಕರ ಜನ್ಮದಿ ನೀನಿಟ್ಟರಾದರು ಶ್ರೀನಿಧಿಯೆ ನಿನ್ನಯ ಸ್ಮ- ರಣೆ ಒಂದಿದ್ದರೆ ನಾ ಧನ್ಯ ಧನ್ಯನೋ2 ಲೋಕಾಲೋಕೋದ್ಧಾರನೆ ನಿನ್ನಾಜ್ಞೆಯಿಂ ನಾಕೇಶ ಮೊದಲಾದ ಪಿ- ನಾಕಿ ಪ್ರಮುಖರು ಅನೇಕ ಕಾರ್ಯವೆಸಗಿ ಶೋಕಪಡಿಸುವರಯ್ಯ 3 ದುರ್ಗಾಶ್ರೀರಮಣ ಎನ್ನ ಸಂಸೃತಿಯೆಲ್ಲ ದುರ್ಗಮವಾಗಿಹುದೊ ಸ್ವರ್ಗ ಅಪ- ವರ್ಗಪ್ರದನೆ ಎನ್ನಯ ಭವ- ದುರ್ಗಕಡಿದು ಸನ್ಮಾರ್ಗ ಕರುಣಿಸೊ 4 ಸ್ವಾಮಿತೀರ್ಥದಿವಾಸ ಶ್ರೀಜಗದೀಶ ಸ್ವಾಮಿ ಶ್ರೀ ವೆಂಕಟೇಶ ಪಾಮರನಾದೆನ್ನ ತಾಮಸ ಹರಿಸಿ ಹೃತ್ಕಮಲದಲಿ ನಿಲ್ಲೊ ಕಮಲಾಪತಿಯೆ ದೇವ 5
--------------
ಉರಗಾದ್ರಿವಾಸವಿಠಲದಾಸರು
ಶರಣಾಗತಿಯೊಂದೆ ಸಾಧನ ಮಾಧವ ಪ ಶರಣಾಗತಿಯಿಂದ ಹರಿಯ ಪ್ರಸಾದವು ಹರಿಯ ಪ್ರಸಾದವು ಪುರುಷಾರ್ಥಕೆ ಸಾಧನ ಅ.ಪ ಹರಿಯಲಿ ಚಿತ್ತವು ಹರಿಯಲಿ ಭಕುತಿಯು ಹರಿಯುದ್ದೇಶದಿ ಯಜನಾದಿಗಳು ಹರಿಯ ಚರಣದಲಿ ನಮ ನವು ಇದನೇ ಶರಣಾಗಿಯೆಂದರುಹಿದ ನುಡಿ ಕೇಳಿÀದೆ 1 ಸರ್ವೋತ್ತಮ ನೀನೊಬ್ಬನೆ ಎನ್ನುವ ದಿವ್ಯಜ್ಞಾನವ ಪೊಂದುತ ಮನದಲಿ ಸರ್ವಾಧಿಕ ನಿಶ್ಚಲ ಪ್ರೇಮ ಸಹಿತ ಸರ್ವಕರ್ಮ ನಿನ್ನೊಳಗರ್ಪಣೆ ಮಾಡುವೆ 2 ತ್ರಿವಿಧ ಪೂಜೆಗಳಲಿ ರತಿಯು ಹರಿಯ ಪ್ರಸನ್ನತೆಯಲಿ ನಂಬುಕೆಯು ಹರಿದಾಸನು ನಾನೆಂಬುವ ನಂಬಿಕೆ ಶರಣಾಗತಿಯಿದು ಮೋಕ್ಷಫಲಕೆ ಸಾಧನ 3
--------------
ವಿದ್ಯಾಪ್ರಸನ್ನತೀರ್ಥರು
ಶರಣಾಗ್ರಣಿ ರಾಮ ಚರಣಾಂಬುಜ ಬಿಡೆ ನಳಿನ ಷಟ್ ಚರಣ ಬಿಡ ಬಲ್ಲದೆ ಪ ಹನುಮನ ಭಜನೆಂಬ ಘನವಾರಿ ಪೂರಿತ ಮನ ಸರೋವರ ಅಯನವಾಗಿಪ್ಪಾ ಜನಕಸುತೆ ಹಂಸಿ ಮನಸಾಪ ಹಾರಿ ದಿನಕರನ್ವಯದಿಂದ ವಿನುತವಾಗಿಪ್ಪ 1 ಅಮರರೋತ್ತಮರೆಂಬ ಭ್ರಮರರಾ ರವಗಳ ಸಮಯೋಚಿತ ಸಾಮಭಿ ಸೇವಿತ ವಿಮಲಾತಮದಿಂದ ಸಾಂದ್ರ ಶಮಲಾತಿ ದೂರ ಪಾದ 2 ಶಿಲೆಯ ಬಾಲೆಯ ಮಾಡಿ ಮಲವಳಿದು ಮುನಿ ಕುಲವಗೆಡಿಸಿ ಸತ್ಕುಲನೆನಿಸಿದೆ ಜಲಧಿಯೊಳಗೆ ಸೇತು ನಿಲಿಸಿ ಸಜ್ಜನರಿಗೆ ನೆಲೆ ವಾಸುದೇವವಿಠಲದೇವ ಪಾದಪದುಮ3
--------------
ವ್ಯಾಸತತ್ವಜ್ಞದಾಸರು
ಶರಣಾರ್ಥಿ ಶಿವಶರಣಾರ್ಥಿ | ಹರಿಹರ ಎಂದು ಶಿವಪದ ಕಂಡವಗೆ ಪ ಗುರುವಿಗೆರಗೆ ನಿಜ ಗುರುತಕೆ ಬಂದಿನ್ನು | ಧರೆಯೊಳು ಪುಣ್ಯ ಜಂಗಮನೆ ವಾಸಿ | ಅರಹುಮರಹು ಮೀರಿ ಸಹಜಾವಸ್ಥಿಗೆ | ಬೆರದಿಹ ಶರಣಗೆ 1 ಎದೆಸೆಜ್ಜೆಯೊಳಗಿಹ ಘನಲಿಂಗ ಪೂಜಿಸಿ | ಮುದದಿಂದ ಭಕ್ತಿಯ ಪಾವುಡದೀ | ಸದ್ಭಾವ ಸೂತ್ರದಿ ಆವಗುಧರಿಸಿಹ | ವಿದಿತ ಲಿಂಗಾಂಗಿಗೆ 2 ಆಶೆಯಸುಟ್ಟು ವಿಭೂತಿಯ ಹಚ್ಚಿದ | ಧ್ಯಾಸದಂಡ ಕೈಲಿ ಪಿಡಿದು | ಲೇಸಾದ ಸುಗುಣ ರುದ್ರಾಕ್ಷಿಯ ತೊಟ್ಟು | ಭಾಸಿಪ ಸಂತಗೆ 3 ಶಾಂತಿಯ ತೊಡರವ ಕಟ್ಟಿ ವಿವೇಕದ | ಮುಂತಾದ ಕಾಷಾಯ ಪೊದ್ದಿಹನಾ | ಸಂತತ ಗುರುಧರ್ಮ ಭಿಕ್ಷೆಯನುಂಡು | ವಿಶ್ರಾಂತಿಯ ಮಠ ಹಿಡಿದ ವಿರಕ್ತಗೆ 4 ಶರಣನೆನುತಾ ಅನ್ಯರ ಶರಣರ ಮಾಡೀ | ಶರಣ ತಾನೆಂಬ ವೃತ್ತಿಯನುಳಿದು | ದ್ಧರಿಸಿದ ಮೂರ್ತಿಗೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಕೃಷ್ಣವೇಣಿ ಶರಣು ಪುಣ್ಯಾಭರಣಿ ಶರಣು ಇಹಪರದಾಯಿನೀ ಪ ಸರ್ವವ್ಯಾಪಕನಿರಂಜನನೆನಿಪ ಶ್ರೀವಿಷ್ಣು ಉರ್ವಿಯೊಳು ದ್ರವರೂಪದೀ ಹರ್ವಿತಿಹಸಂದೇಹವಿಲ್ಲದಕೆ ಭಕುತಿಯಲಿ ಅರ್ವವನೆ ಗತಿಯ ಪಡದಾ ಮುದದಿ 1 ಅಚ್ಯುತನು ಕೃಷ್ಣನದಿ ಹರಿವುತಿಹನೆಂದು ಮೆಚ್ಚಿವೇಣಿಯ ನಾಮದಿ ನಿಚ್ಚ ಸತ್ಸಂಗವೆಂದರಿತು ಕೂಡಿದ ಶಿವನು ಸಚ್ಚರಿತನಾಮಮಹಿಮಾನೇಮಾ 2 ನಿನ್ನ ಪೂರೆಲುದಿತ ಪವನದಿ ದುರಿತವೋಡಿದವು ಇನ್ನು ಮಿಂದವನ ಗತಿಯಾ ಬಣ್ಣಿಸುವ ನಾವನೆಲೆ ಜನನೀತಾರಿಸುಯನ್ನ ಮನ್ನಿಸು ಗುರುವಿನಾಸುತನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಗುರು ಬ್ರಹ್ಮಣ್ಯ | ಶರಣು ಶಿರಿ ಸುರಮಾನ್ಯಪರಿಹರಿಸು ಭವತಾಪ | ಬಿನ್ನವಿಪೆ ಮುನಿಪ ಪ ಪುರುಷೋತ್ಮ ಕರಜಾತ | ಕಣ್ವತಟದಲಿ ಖ್ಯಾತನರಹರಿಯ ಪದಕಮಲ | ಭಜಕಶೀಲಶರಣ ಜನ ಸುರಕಲ್ಪ | ತರುವೆ ಎನ್ನಯ ಪಾಪಪರಿಹರಿಸೊ ಮುನಿಮೌಳಿ | ನಾನು ಪದಧೂಳಿ 1 ಯೋನಿ ಅನೇಕದಲಿ | ಬಂದಿರುವೆ ನಾಬಳಲಿಮಾನ ನಿಧಿ ನೀಯನ್ನ | ಕಾಯೊ ದಯ ಪೂರ್ಣ |ಜ್ಞಾನಾರ್ಕನೆನಿಸಿರುವ | ಮೌನಿ ತವ ಸದ್ಭಾವಪೂರ್ಣ ಹರಿ ಸುಜ್ಞಾನ | ಪಾಲಿಸೈ ನಿಪುಣ 2 ವಿಕಳ ಮತಿಯನು ಹರಿಸು | ಅಕಳಂಕನೆಂದೆನಿಸುಸುಖತೀರ್ಥ ಮತ ಸುಧೆಯ | ಉಣುವ ಪರಿಯ |ಸುಖದಿಂದ ಕರುಣಿಸುತ | ಸುಖ ಹರಿಯ ನೋಳ್ಪಂಥಪ್ರಕರಣದಲಿರಿಸೆನ್ನ | ಮೌನಿ ಕುಲರನ್ನ 3 ಸುಕೃತ ಒಂದಿರಲಿ | ನಿನ್ನ ದಯವಿರಲಿ 4 ವಿಠ್ಠಲ ಸುಪೂಜಕನೆ | ಕಷ್ಟಗಳ ಕಳೆಯುವನೆಶಿಷ್ಟ ಸಜ್ಜನ ಪಾಲ | ಹರಿಪದ ವಿಲೋಲ ಕೃಷ್ಣ ಗುರು ಗೋವಿಂದ | ವಿಠ್ಠಲನ ಪದದ್ವಂದ್ವಸುಷ್ಠು ಹೃದ್ಗುಹದಲ್ಲಿ | ಕಾಣಿಪುದು ಅಲ್ಲಿ 5
--------------
ಗುರುಗೋವಿಂದವಿಠಲರು
ಶರಣು ದೇವರ ದೇವ ಶರಣು ಸುರವರ ಮಾನ್ಯ ಶರಣು ಶತಕೋಟಿ ಲಾವಣ್ಯ | ಲಾವಣ್ಯ ಮೂರುತಿಯೆ ಶರಣೆಂಬೆ ಸ್ವಾಮಿ ಕರುಣೀಸೊ 1 ಆದಿನಾರಾಯಣನು ಭೂದೇವಿ ಮೊರೆ ಕೇಳಿ ಯಾದವರ ಕುಲದಲ್ಲಿ ಜನಿಸೀದ | ಜನಿಸೀದ ಕೃಷ್ಣ ಪಾದಕ್ಕೆ ಶರಣೆಂಬೆ ದಯವಾಗೊ 2 ನಿನ್ನ ವಿಸ್ಮøತಿ ದೋಷ ಜನ್ಮ ಜನ್ಮಕ್ಕೆ ಕೊಡದಿರು ಎನ್ನ ಕುಲ ಬಂಧು ಎಂದೆಂದು |ಎಂದೆಂದು ನಿನಗಾನು ಬಿನ್ನೈಪೆ ಬಿಡದೆ ಸಲಹಯ್ಯ 3 ವಸುದೇವನಂದನನ ಹಸುಗೂಸು ಎನಬೇಡಿ ಶಿಶುವಾಗಿ ಕೊಂದ ಶಕಟನ್ನ | ಶಕಟನ್ನ ವತ್ಸಾಸುರನ ಅಸುವಳಿದು ಪೊರೆದ ಜಗವನ್ನ 4 ವಾತರೂಪಿಲಿ ಬಂದ ಆ ತೃಣಾವರ್ತನ್ನ ಮಡುಹಿ ಮೊಲೆಯುಣಿಸಿದಾ ಪೂತನಿಯ ಕೊಂದ ಪುರುಷೇಶ 5 ನಿನ್ನ ಸ್ಮøತಿಗಿಂತಧಿಕ ಪುಣ್ಯ ಕರ್ಮಗಳಿಲ್ಲ ನಿನ್ನ ವಿಸ್ಮøತಿಗಿಂತ | ಅಧಿಕವಾದ ಮಹಪಾಪಗಳು ಇನ್ನಿಲ್ಲ ಲೋಕತ್ರಯದೊಳು 6 ಅಂಬುಜಾಂಬಕಿಗೊಲಿದ ಜಂಭಾರಿಪುರದಿಂದ ಕೆಂಬಣ್ಣದ ಮರ ತೆಗೆದಂಥ | ತೆಗೆದಂಥ ಕೃಷ್ಣನ ಕ ರಾಂಬುಜವೆ ನಮ್ಮ ಸಲಹಲಿ 7 ದೇವಕೀಸುತನಾಗಿ ಗೋವುಗಳ ಕಾದದೆ ನಲಿವೋನೆ ಮೂರ್ಲೋಕ ಓವ ದೇವೇಂದ್ರ ತುತಿಪೋನೆ 8 ಜಗದುದರ ನೀನಾಗಿ ಜಗದೊಳಗೆ ನೀನಿಪ್ಪೆ ಜಗದಿ ಜೀವರನ ಸೃಜಿಸುವಿ | ಸೃಜಿಸಿ ಜೀವರೊಳಿದ್ದು ಜಗದನ್ಯನೆಂದು ಕರೆಸುವಿ 9 ಕರಣನೀಯಾಮಕನೆ ಕರುಣಾಳು ನೀನೆಂದು ಮೊರೆಹೊಕ್ಕೆ ನಾನಾ ಪರಿಯಲ್ಲಿ | ಪರಿಯಲ್ಲಿ ಮಧ್ವೇಶ ಮರುಳು ಮಾಡುವರೆ ನೀಯೆನ್ನ 10 ಕುವಲಯಾಪೀಡನನು ಲವಮಾತ್ರದಿ ಕೊಂದು ಶಿವನ ಚಾಪವನು ಮುರಿದಿಟ್ಟಿ | ಮುರಿದಿಟ್ಟಿ ಮುಷ್ಟಿಕನ ಬವರದಲಿ ಕೆಡಹಿ ಬಲಿಗೈದೆ 11 ಗಂಧವಿತ್ತಬಲೆಯೊಳ ಕುಂದನೆಣಿಸದೆ ಪರಮ ಸುಂದರಿಯ ಮಾಡಿ ವಶವಾದಿ | ವಶವಾದಿ ನಮ್ಮ ಗೋ ವಿಂದ ನೀನೆಂಥ ಕರುಣಾಳು 12 ವಂಚಿಸಿದ ಹರಿಯೆಂದು ಪರಚಿಂತೆಯಲಿ ಕಂಸ ಮಂಚದ ಮ್ಯಾಲೆ ಕುಳಿತಿದ್ದ | ಕುಳಿತಿದ್ದ ಮದಕರಿಗೆ ಪಂಚಾಸ್ಯನಂತೆ ಎರಗೀದೆ 13 ದುರ್ಧರ್ಷ ಕಂಸನ್ನ ಮಧ್ಯರಂಗದಿ ಕೆಡಹಿ ಜನನೋಡೆ ದುರ್ಮತಿಯ ಮರ್ದಿಸಿದ ಕೃಷ್ಣ ಸಲಹೆಮ್ಮ 14
--------------
ಜಗನ್ನಾಥದಾಸರು
ಶರಣು ವಾಯು ತನುಜ ಶರಣು ಭಾಸ್ಕರÀ ತೇಜ | ಶರಣು ರಾಜಾಧಿರಾಜ | ಶರಣು ಗೋಸಹಜ | ಶರಣಾರ ಸುರಭೋಜ ಪ ಸೂತ್ರನಾಮಕ ದೇವ | ಸ್ತೋತ್ರ ಮಾಳ್ಪರ ಕಾವ | ಚಿತ್ರ ಮಹಿಮರ ಕಾವ ವಿ | ಚಿತ್ರ ಶರೀರ ಸ | ಹೇಮ | ಪಾತ್ರಿಯೊಳಗೆ ಸವಿದು ಶ್ರೀಪತಿಯ ಶತ | ಪತ್ರ ಪಾದವ ಕಾ | ಲತ್ರಯ ನೆನೆಸುವನೆ 1 ಇದೆ ಭಾಗ್ಯ ನಾನಾವದೂ ಒಲ್ಲೆ | ಆ ನಾಮದ ಸೊಲ್ಲೆ ಮೇಣು ಪಾಲಿಪುದು ಮುಖ್ಯ | ಪ್ರಾಣಪಾವನ ಲೀಲ | ದಾನವರ ಕುಲಕಾಲ | ಏನೇನು ಮಾಳ್ಪಾಧಿಷ್ಠಾನದಲಿ | ನೀನೇ ನಾನೆಲ್ಲಿ ಎಣೆಗಾಣೆ2 ವಂದಿಸುವೆ ಜಗದ್ಗುರುವೆ | ಎಂದು ನಿನ್ನನು ಕರೆವೆ | ಮುಂದೆ ಈ ಜನ್ಮವು | ಹಿಂದೆ ಮಾಡಿ ನೇಮವು | ಪೊಂದಿಸು ಮೇಲುಗತಿ | ತಂದೆ ತಾಯಿ ಮಿಕ್ಕ | ನಿತ್ಯ | ವೆಂದೆ ಬಂದೆ ಸತ್ಯ ಕುಂದದೆ ಉದ್ಧರಿಸು 3 ದಾತ | ರೋಮ ರೋಮ ಕೋಟಿ ಕಾಮ ಸಂಹಾರನೇ | ಭೂಮಂಡಲಧರನೆ ಭೀಮಶೈನ | ಭೀಮ ರಿಪು ಗಂಟಲಗಾಣ | ತಾಮಸ ಜ್ಞಾನವಳಿ | ಸುಳಿ | ಶ್ರೀ ಮದಾನಂದತೀರ್ಥ4 ಶ್ರೀ ಸಪುತ ಕುಜನರ | ಭಾಷ್ಯ ಮುರಿದ ಧೀರ | ಭಾಸುರ ಕೀರ್ತಿ ಹಾರಾ | ದೋಷರಾಶಿ ದೂರ | ಹ್ರಾಸವಿಲ್ಲದ ಮಹಿಮ | ಶ್ರೀಶ ವಿಜಯವಿಠ್ಠಲನ್ನ | ದಾಸರೊಳಧಿಕ ನಿನ್ನ ಲೇಶವಾದರು ಬಿಡೆ | ನಾ ಸರ್ವಥಾ ಕರೆ | ತೋಷದಲಿಡುವುದೆನ್ನ 5
--------------
ವಿಜಯದಾಸ
ಶರಣು ಶಂಕರ ಭೂಷಣಾದ್ರಿಗೆ ಶರಣು ಅಭಯಾಚಲನಿಗೆ ಪ ಶರಣು ಖಗಮೃಗ ತರುಲತಾಂಕಗೆ ಶರಣು ವಿಂಶತಿ ನಾಮಗೆ ಅ.ಪ. ವರಹ ನೀಲಾಂಜನ ಕನಕಋಷಿ ಗರುಡ ಘನ ನಾರಾಯಾಣಾ ಉರಗ ತೀರ್ಥಾನಂದ ಶ್ರೀ ಪು ಷ್ಕರ ವೃಷಭ ವೈಕುಂಠಗೆ 1 ಜ್ಞಾನ ಪರ್ವತ ಮೇರು ಶೃಂಗಗೆ ಶ್ರೀನಿವಾಸ ಸುಕ್ರೀಡಗೆ ಪಂ ಚಾನನಾಹ್ವಯ ವೆಂಕಟಾದ್ರಿಗೆ ಕ್ಷೋಣಿಯೊಳು ಸುರಮಾನ್ಯಗೆ 2 ರತುನ ಕಾಂಚನ ಶ್ರೀನಿವಾಸನ ಪ್ರತಿಮೆಯಂದದಿ ಪೊಳೆವಗೆ ಕೃತಿರಮಣ ಜಗನ್ನಥವಿಠಲಗೆ ಅತುಳ ಮಂಗಳನೆನಿಪಗೆ 3
--------------
ಜಗನ್ನಾಥದಾಸರು