ಒಟ್ಟು 6899 ಕಡೆಗಳಲ್ಲಿ , 128 ದಾಸರು , 4614 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಕೃಷ್ಣಬಾಲಲೀಲೆಗಳು ನಕ್ಕು ನಲಿವ ಬಾಲ ಇವನಾರೆ ಪ ಕೈಯಿಕ್ಕಿ ಬರುವನಿವ ನೋಡುವ ಬಾರೆ ಅ.ಪ ಸುತ್ತಲು ಕುಣಿಯುವ ಬಾಲೆಯರಾಟ ಮಣಿ ಸರಗಳ ನಲಿದಾಟ ಅತ್ತಿತ್ತ ಮಿಂಚಿನ ಕಡೆಗಣ್ಣೋಟ 1 ಮಿಸುನಿಯ ಬಣ್ಣದ ಹೊಸವಸನ ರಸಿಕನನೀಕ್ಷಿಸು ಎನ್ನುತಿದೇ ಮನ 2 ಘಲ್ಲೆಂಬ ಕಿರುಗೆಜ್ಜೆ ಧರಿಸಿಹನು ನಲ್ಲೆಯ ಗಾನಕೆ ಸರಿಕುಣಿಯುವನು ಮೆಲ್ಲುಲಿವನು ಮತ್ತೆ ಕೊಳಲೂದುವನು 3 ಬಾಯಲಿ ಜಗಂಗಳ ತೋರಿಸಿದನಂತೆ ಮಾಯದ ನಾರಿಯ ಮಡುಹಿದನಂತೆ ಜೀಯನೀತನೆ ಗೋವಳನಂತೆ 4 ಮದನ ಸುಂದರನು ಲೋಕ ಮೋಹಕನು ಮುದವ ಬೀರುವನು ಮನವ ಸೆಳೆವನು ಪದುಳದಿಕಾವ ಮಾಂಗಿರಿ ಪತಿಯವನು5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಗದಾಧರ ಪಾಹಿಮಾಂ ಹರೆ ಭೋಗಿಶಯನ ಶೌರೇ ಪ ಯಾಗ ಯೋಗ ಗಮ್ಯ ನೃಹರೆ ತ್ಯಾಗಶೀಲ ಭೋ ಮುರಾರೆ ಅ.ಪ ಮೃತಮಾನವ ಸುಗತಿ ದಾತಾ ಪತಿತಾನತ ದಿವ್ಯ ನೀತ ಹರಣ ಖ್ಯಾತಾ ತಾಪ ಸನ್ನುತ ಚರಿತಾ 1 ಶೃತಿ ಪುರಾಣ ಭರಿತ ವಿದಿತ ರಥಾಂಗ ಮಣಿರಂಜಿತ ವಿನುತ ನಮಿತ ಖ್ಯಾತಮಾಂಗಿರಿ ವರೂಥ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಗೋಪಾಲ ಕೃಷ್ಣಾತ್ಮಕ ಶ್ರೀರಾಮ ಭಜನೆ ರಾಮ ರಾಮ ಜಯರಾಮ ಪರಾತ್ಪರ | ನೌಮಿ ಪದಾಂಬುಜ ಶ್ರೀರಾಮಸೋಮ ಕುಲೋದ್ಭವ ಭೂಮ ಗುಣಾರ್ಣವ | ಕಾಮ ಪಿತನೆ ಶ್ರೀಕೃಷ್ಣ 1 ಖೂಳರ ಬಾಧೆಗೆ ಸುಜನರು ಮೊರೆಯಿಡೆ | ಪಾಲುಂಬುಧಿ ಶಯ ಶ್ರೀರಾಮಪಾಲಿಪೆನೆಂದ್ವರ ಪಾಲಿಸಿದನು | ಪಾಲಾಂಬುಧಿಶಯ ಶ್ರೀಕೃಷ್ಣ 2 ದಶಮುಖ ದೈತ್ಯನು ಲೋಕವ ಬಾಧಿಸೆ | ದಶರಥಗುದಿಸಿದ ಶ್ರೀರಾಮವಸುಧೆಯ ಭಾರವ ನೀಗುವೆನೆಂ | ದ್ವಸುದೇವ ಸುತನಾದ ಶ್ರೀಕೃಷ್ಣ 3 ಅನುಜರು ಲಕ್ಷ್ಮಣ ಭರತ ಶತೃಘ್ನರ | ಅನುಮೋದಿಸುತಲಿ ಶ್ರೀರಾಮಅನುಜನು ತಾ ಬಲರಾಮನಿಗಾಗುತ | ಅನುಜೆಯಳೊಂದಿಗೆ ಶ್ರೀಕೃಷ್ಣ4 ಶಿಶುತನ ಲೀಲೆಯ ದಶರಥಗೇ | ಕೌಸಲ್ಯಗೆ ತೋರಿದ ಶ್ರೀರಾಮಶಿಶುತನ ಲೀಲೆ ಯಶೋದೆಗೆ ನಂದೆಗೆ | ಸಂತೋಷವು ಶ್ರೀಕೃಷ್ಣ 5 ಯಾಗವ ರಕ್ಷಿಸೆ ಕರೆದೊಯ್ದನು | ಆ ಗಾಧಿಜ ನಿನ್ನನು ಶ್ರೀರಾಮಬಾಗುತ ಬಂದ ಕ್ರೂರನು ಧನು | ರ್ಯಾಗಕೆ ಒಯ್ದ ನಿನ್ನ ಶ್ರೀಕೃಷ್ಣ 6 ಮಾರ್ಗದಿ ಮಂತ್ರಗಳುಸುರಿದ ಮುನಿ | ನೈರರ್ಗಳದೀ ಶ್ರೀರಾಮಗರ್ಗಾಚಾರ್ಯನು ಭೋದಿಸೆ ಮಂತ್ರವ | ನಿರ್ಗಮಿಸಿದೆಯೋ ಶ್ರೀಕೃಷ್ಣ 7 ಪ್ರಥಮದಲಾಹುತಿ ಇತ್ತೆಯೊ ಕ್ರತುವಿಗೆ | ದಿತಿಜೆಯ ತಾಟಕಿ ಶ್ರೀರಾಮದಿತಿಜೆಯು ಪೂಥಣಿ ಅಸುವನು ಹೀರಿದೆ ಪ್ರಥಮದಿ | ಕವಳಕೆ ಶ್ರೀಕೃಷ್ಣ 8 ಅಸುರ ಸುಬಾಹುವನಳಿಯುತಲಬ್ದಗೆ | ಎಸೆದೆ ಮಾರೀಚನ ಶ್ರೀರಾಮ |ಉಸಿರನು ಹೀರಿದೆ ತೃಣವರ್ತನ ನೀ | ಅಸುರ ಶಕಟನ ಅಳಿದೆಯೊ ಶ್ರೀಕೃಷ್ಣ 9 ಚಾರು ಸುಂದರನೇ ಶ್ರೀರಾಮತೋರಿದೆ ವದನದಿ ವಿಶ್ವವ ಮಾತೆಗೆ | ಚಾರ್ವಾಂಗನೆ ಶ್ರೀಕೃಷ್ಣ 10 ವರಪದ ಶಿಲೆ ಸೋಕಲಹಲ್ಯಾ | ಶಾಪ ವಿಮೋಚನೆ ಶ್ರೀ ರಾಮವರಳೆಳೆಯುವಾಗ ಮಣಿಗ್ರೀವರ | ಶಾಪ ವಿಮೋಚನೆ ಶ್ರೀಕೃಷ್ಣ 11 ವ್ಯಾಕುಲರಾಗಿದ್ದಾ ಋಷಿಕುಲ ನಿ | ರಾಕುಲರಾದರು ಶ್ರೀರಾಮಗೋಕುಲವೂ ತವ ಲೀಲೆಗಳಿಂ ನಿ | ರಾಕುಲ ವಾಯಿತು ಶ್ರೀಕೃಷ್ಣ 12 ವೃಂದಾರಕ ವೃಂದವ ಸಲಹಿದನೂ | ಸುಂದರ ಮೂರುತಿ ಶ್ರೀರಾಮವೃಂದಾವನ ವೃಂದವ ಸಲಹೆ ದು | ರ್ವೃಂದವನಳಿದನು ಶ್ರೀಕೃಷ್ಣ 13 ಭಾಮಿನಿ ಸೀತೆಯ ಸ್ವಯಂವರ ನೇಮದಿ | ಪ್ರಾಣಿ ಗ್ರಹಣ ಶ್ರೀರಾಮಭೈಷ್ಮೀ ರುಕ್ಮಿಣಿ ಸ್ವಯಂವರ ನೇಮದಿ | ಪಾಣಿ ಗ್ರಹಣ ಶ್ರೀಕೃಷ್ಣ 14 ಭಾರ್ಗವನೂ ತಾ ನೊಂದೆಂಬುದ ನೈ | ರರ್ಗಳ ತೋರ್ದನು ಶ್ರೀರಾಮ |ವಾಕು ಸಲಿಸೆ ಬಹು ಪತ್ನಿಯರಾಳಿದ |ಏಕ ಮೇವ ತಾ ಶ್ರೀಕೃಷ್ಣ 15 ಏಕಮೇವ ತಾನೇಕ ಪತ್ನಿತ್ವವ | ಲೋಕಕೆ ತೋರಿದ ಶ್ರೀರಾಮ |ವಾಕು ಸಲಿಸೆ ಬಹು ಪತ್ನಿಯರಾಳಿದ | ಏಕಮೇವ ತಾ ಶ್ರೀಕೃಷ್ಣ 16 ರಾಜ್ಯವ ಬಿಟ್ಟನ ರಾಜ್ಯವ ಸಾರ್ದ ನಿ | ರ್ಲಜ್ಜರ ಸದೆಯಲು ಶ್ರೀರಾಮರಾಜ್ಯವ ಕಟ್ಟಿ ಸ್ವರಾಜ್ಯವ ಮಧುರೆಲಿ ನಿ | ರ್ಲಜ್ಜರ ಹನ ಶ್ರೀಕೃಷ್ಣ 17 ಭಂಜನ ಶ್ರೀಕೃಷ್ಣ 18 ದಂಡಕ ವನದಲಿ ಪುಂಡರ ದಂಡಿಸೆ | ದಂಡವ ಪಿಡಿದನು ಶ್ರೀರಾಮ |ಮಂಡೆಯ ಪಿಡಿದು ಕಂಸನ ಶಿರ | ಚೆಂಡಾಡಿದನು ಶ್ರೀಕೃಷ್ಣ 19 ಶಬರಿಯ ಭಕ್ತಿಗೆ ಎಂಜಲ ಮೆ | ದ್ದಬುಜಾಂಡೋದರ ಶ್ರೀರಾಮ |ಕುಬುಜೆಯ ಭಕ್ತಿಗೆ ವಕ್ರವ ತಿದ್ದಿದ | ಅಬುಜಾಂಡೋದರ ಶ್ರೀಕೃಷ್ಣ 20 ಕಾಯ ಛೇದ ಉ | ಪಾಯದ ಗೈದೆಯೊ ಶ್ರೀಕೃಷ್ಣ 21 ವಾಹನ ಗೈಯುತ | ಮೋಕ್ಷವನಿತ್ತನು ಶ್ರೀಕೃಷ್ಣ 22 ಸೀತೆಯ ಕಳಕೊಂಡ್ವೆಥೆಯನೆ ನಟಸಿದ | ಪೃಥ್ವೀಪತಿಯು ಶ್ರೀರಾಮಕೌತುಕ ತೋರಿದ ನಾರದಗೇ ಬಹು | ಪತ್ನಿಯರಲ್ಲಿ ಶ್ರೀಕೃಷ್ಣ 23 ಮಾಯಾ | ವೈಭವ ಪೊಗಳಿರಿ ಶ್ರೀಕೃಷ್ಣ 24 ಜೋಡಿಸಿ ಬಹು ಸೈನ್ಯವ ಹೂಡಿದ | ರಾವಣ ಸಂಗರ ಶ್ರೀರಾಮಜೋಡಿಸಿ ಬಹು ಸೈನ್ಯವ ಜರೆ ಜನು | ಹೂಡಿದ ಯುದ್ಧವ ಶ್ರೀಕೃಷ್ಣ 25 ಮುರ ನಬಕರು ಮಡಿದರು | ದೇವ ನೀ ಬಾಣವ ಬಿಡೆ ಶ್ರೀಕೃಷ್ಣ 26 ಸೀತೆಯನಗ್ನಿ ನಿವೇಶವ ಗೈಸುತ | ಪೂತಳು ಎನಿಸಿದ ಶ್ರೀರಾಮ |ಕೌತುಕಳು ವೇದ್ವತಿಯಳ ನೀ | ನಾಂತೆಯೊ ಶ್ರೀ ವೆಂಕಟ ಕೃಷ ್ಣ 27 ಪ್ರಥಮಾಂಗನು ಮಾರುತನಿಂ | ಪೃಥ್ವೀ ಭಾರವನಿಳುಹಿದೆ ರಾಮ |ಪ್ರಥಮಾಂಗನು ಭೀಮನಿಂ | ಪೃಥ್ವೀ ಭಾರವನಿಳುಹಿದೆ ಕೃಷ್ಣ 28 ಭರತನಿಂ ವಾರ್ತೆಯ ಕಳುಹಿ | ಭರತನ ಉಳುಹಿದೆ ಶ್ರೀರಾಮ |ಅರದಿ ರವಿ ಮರೆ ಮೌಡುತ ನೀ | ನರನನು ಉಳುಹಿದೆ ಶ್ರೀಕೃಷ್ಣ 29 ಸೀತೆಯ ಸಹ ಪುರಿ ಕೋಸಲೆಗೆ ನೀ | ಮಾತುಳಹಲು ಬಂದೆ ಶ್ರೀರಾಮ |ನೀತರು ನರಕನಿಂದಾ ತರುಣಿಯರ | ಪ್ರೀತಿಲಿ ತಂದೆಯೊ ಶ್ರೀಕೃಷ್ಣ 30 ಪಟ್ಟವಗಟ್ಟಲಯೋಧ್ಯಾಪುರಿಲಿ | ಶಿಷ್ಟರ ಸರ್ವರ ಮಾಡಿದೆ ರಾಮಪಟ್ಟ ಭದ್ರ ಪ್ರಭು ದ್ವ್ಯಷ್ಟಸಾಸಿರ ಪ | ತ್ನ್ಯಷ್ಟರನಾಳಿದೆ ಶ್ರೀಕೃಷ್ಣ 31 ಕುಶಲವರ್ಹ ಸುಳೆಗಳಾ ಮಗೆ | ಅಸಮ ಸಾಹಸಿಗಳ್ ಶ್ರೀರಾಮ |ಶಿಶುಗಳ್ಕøಷ್ಣಗೆ ಗಣನೆಗಸಾಧ್ಯವು | ಅಸಮ ಸಾಹಸಿಗಳ್ ಶ್ರೀಕೃಷ್ಣ 32 ರಾಜ್ಯ ಸುಭೀಕ್ಷವು ಪತಿವ್ರತೆರೆಲ್ಲರು | ವ್ಯಾಜ್ಯ ರಹಿತ ಸ್ವರಾಜ್ಯದಿ ಶ್ರೀರಾಮಪರ್ಜನ್ಯವರ್ಷಿಸಿ ರಾಜ್ಯ ಸುಭಿಕ್ಷವು | ಆರ್ಜವರು ಪ್ರಜೆ ರಾಜ್ಯದಿ ಕೃಷ್ಣ 33 ಪಾಲನ ಪಾಲನ ಶ್ರೀಕೃಷ್ಣ 34 ಭಕ್ತಲಿ ರಾಮನ ಚರಿತೆಯ ಕೇಳಿ | ಮುಕ್ತಿದನು ಕೃಷ್ಣಾತ್ಮಕ ರಾಮಭಕ್ತಿಯಿಂದಾಲಿಸೆ ಭಾಗವತಾ ಕಥೆ | ಮುಕ್ತಿದನು ಗುರು ಗೋವಿಂದ ವಿಠಲ 35
--------------
ಗುರುಗೋವಿಂದವಿಠಲರು
ಶ್ರೀಜಗನ್ನಾಥದಾಸರಾಯರಸ್ತೋತ್ರ ದಾಸಾರ್ಯರ ಚರಣ ಕಮಲಕಾನಮಿಪೆ ಶಿರಬಾಗಿ ಬಿನ್ನೈಪೆ ಏಸು ಜನ್ಮದ ದುಷ್ಕøತ ಪರಿಹರಿಪೆ ಕರುಣವನು ಪಡೆದು ಭೂಸುರಜನ್ಮವ ಸಾರ್ಥಕಗೊಳಿಪೆ ಕೃತಕೃತ್ಯನೆಂದೆನಿಪೆ ದೋಷರಾಶಿಗಳ ನಾಶಗೈಸಿ ವಿ ಶೇಷ ಮಹಿಮದಿಂಭೂಷಿತ ಜಗನ್ನಾಥ ಪ ಗಾಂಗೇಯ ವಸನಸಂಜಾತ ಪ್ರಲ್ಹಾದನಭ್ರಾತ ಮತಿಮಾನಸಹ್ಲಾದ ಸುನಾಮಕನೀತ ನರಹರಿಸಂಪ್ರೀತ ದ್ವಿತಿಯ ಶಲ್ಯಾಖ್ಯನೃಪತಿ ವಿಖ್ಯಾತ ಪುರಂದರ ಸುತನೆನಿಸಿದ ದಸ ದ್ಯತಿ ವಾದೇಶ್ವರನ್ಹಿತದಲಿ ವಲಿಸಿದ 1 ನರಸಂಬಂಧಿತ ಪ್ರಾಂತದ ಕ್ಷೇತ್ರದಲಿ ಬÁ್ಯಗವಟದ ಕರಣಿಕ ಜನಿಸಿದ ಬಾಲಾರ್ಕನು ವರದೇಂದ್ರ ಗುರುವರ್ಯರ ಕರುಣದಲಿ ಶಾಸ್ತ್ರಾಖ್ಯಾಗಸದಿ ವರವಸಂತ ಋತತÀರುಣಿ ಕಿರಣದೊಲ್ ಪರಮತಗಳ ಧಿ:ಕರಿಸಿ ಮೆರೆಯುತಿಹ 2 ಮೂರು ಭಾಷಾತ್ಮಕ ವಿದ್ಯಾಧ್ಯಾತ್ಮ ಸಂಪಾದಿಸಲೋಸುಗ ಮಾರಾರಿನಾಮಕದಾಮಹಾತ್ಮರಡಿಯುಗಳನು ಸೇವಿಸಿ ಮೂರು ರೂಪಾತ್ಮಕನ ವಿಙÁ್ಞನಾತ್ಮ ಅಂಶಗಳನು ತೋರಿಪ ಮೂರು ಮೂರು ಮೂರು ಮೂರು ಮೂರು ವಂದುಸಾರವ ಗೃಹಿಸಿದ ಸೂರಿವರಾಗ್ರÀಣಿ 3 ವರದೇಶ ಶಾಸ್ತ್ರಾತ್ಮಕಪಯದಿಂದ ಸಂಪೂರಿತವಾದ ಮರುತಮತ ತತ್ವತರಂಗಗಳಿಂದ ಸಂಶೋಭಿಸುತಿಹ ಶ್ರೀ ಭೂಸುರರನು ಪಾಲಿಪ ಹರಿಯಭಕುತಿಸುರಮಣಿ ತರುವನೀವಪಯ ಶರಧಿಯನಿಪ ಹರಿ 4 ಸೂರ್ಯ ಸದ್ಭುಕುತರೆನಿಸುವ ಶರಣಜನ ಹೃತ್ಸಂತಾಪಹಭಾರ್ಯ ಕಾಮಕ್ರೋಧಾದಿ ಅರಿಷಡ್ವರ್ಗವ ಭರ್ಜಿಪಹರಿ ಶೌರ್ಯ ಸತ್ಕವಿಕುಲವರ್ಯ ವರದೇಶ ವಿಠಲನ ಚರಣಸೇವಕರ ಸುರತರುವಿನ ತೆರಪೊರೆಯುಂತ ಮೆರೆಯುವ 5
--------------
ವರದೇಶವಿಠಲ
ಶ್ರೀದ ವಿಠಲ ಸರ್ವಾಂತರಾತ್ಮಾ ನೀ ದಯದಿ ಒಲಿದು ನಿತ್ಯದಲಿ ಕಾಪಾಡುವುದು ಪ ಚಿಕ್ಕ ತನದಲಿ ತಂದೆತಾಯಿಗಳು ಒಲಿದು ಪೆಸ ರಿಕ್ಕಿ ಕರೆದರು ನಿನ್ನ ದಾಸನೆಂದೂ ಮಕ್ಕಳನು ತಾಯ್ಸಲಹುವ ತೆರದಿ ಸಂತೈಸು 1 ಶುಕನಯ್ಯ ನಿನ್ನ ಪದಭಕುತಿ ತ್ವತ್ಕಥಾಶಾಸ್ತ್ರ ಯುಕುತಿವಂತರ ಸಂಗಸುಖವನಿತ್ತು ವಕಿತನಯ ನಿನ್ನವರ ಮುಖದಿಂದ ಪ್ರತಿದಿನದಿ 2 ಮಾತರಿಶ್ವಪ್ರಿಯ ಸುರೇತರಾಂತಕನೆ ಪುರು ಹೂತನಂದನಸಖ ನಿರಾತಂಕದಿ ನೀ ತೋರು ಮನದಿ ಸಂಪ್ರೀತಿಯಿಂದಲಿ ಒಲಿದು ಹೋತಾಹ್ವಗುರು ಜಗನ್ನಾಥ ವಿಠಲ ಬಂಧು 3
--------------
ಜಗನ್ನಾಥದಾಸರು
ಶ್ರೀಧರಾಕರ ಕಂಜ ಸೇವಿತ ಪಾದ ಪದ್ಮಜ ಪದದ ಪುರು ಕರು- ಣೋದಧಿಯೆ ಲಾಲಿಪುದು ಪಾಮರನೆಂಬ ಬಿನ್ನಪವ ಸೋದರ ಸ್ಥಿತ ಸಕಲ ಬ್ರಹ್ಮಾಂ- ಪತಿ ನೀನರಿವಿಯಾದರು ಮಾಧವನೆ ಮನದಿರವ ಪೇಳ್ವೆನು ಮನುಜಭಾವದಲಿ 1 ಸುಕೃತ ಫಲವೋ ದೋಷದೂರನೆ ನಿನ್ನ ಪದವನು ಮೀಸಲಳಿಯದೆ ಸೇವೆ ಮಾಳ್ವದು ಲೇಸುಲೇಸೆಂದು ದಾಸಕೂಟದಿ ಸೇರಿ ಮನೆಯಲಿ ವಾಸವಾಗಿರಲಿದರ ಮಧ್ಯಮ ರಾಶೆ ಬಲೆಯಲಿ ಸಿಲುಕಿದೆನು ಕರುಣಾ ಸಮುದ್ರಹರಿ 2 ತನ್ನಿಕೃಷ್ಟ ಮನೋವಿಕಾರಗ- ಳಿನ್ನು ಬಿಡದಲೆ ಪೀಡಿಸುವ ಪರಿ ಯನ್ನು ಪರಮ ಕೃಪಾಳು ನೀನೆಂದೊರವೆನಖಿಳೇಶ ಮಾನ್ನವರ ಮಧ್ಯದಲಿ ಮಾನದಿ ಎನ್ನ ಕಾಪಾಡುವದು ಭಾರವೆ ತನ್ನ ಫಲಗಳ ತಾನೆ ಕೆಡಹುವದುಚಿತವೇ ತೆಗೆ 3 ಯುಕ್ತಿಯಲಿ ನಿನ್ನಂಥ ದೇವರ ರೆತ್ತಿ ವೈದಮೃತವನು ಸುಲಭದೊಳಿತ್ತೆ ದಿವಿಜರಿಗೆ ಔತ್ತರೇಯನ ಕಾಯ್ದ ದ್ರೌಣಿಯ ನೆತ್ತಿಯೊಳಗಿನ ರತ್ನ ಭೀಮನಿ ಗಿತ್ತ ಪರಿಯನು ಪಠಿಸಿ ತಿಳಿದೆನು ಪಾವನಾತ್ಮಕನೆ 4 ಬ್ರಹ್ಮತೇಜೋ ವೃದ್ಧಿ ಬಲಿಯೊಳು ಬ್ಯಾಡ ಸಂಗರ ನಮಗೆನುತ ನಿ- ಮ್ಮಮ್ಮನೊಳ್ ನುಡಿದಂದು ಕಶ್ಯಪನಿಂದಲವತರಿಸಿ ಬ್ರಹ್ಮಚಾರಿಯ ರೂಪದಿಂದೀ ಕ್ಷಮ್ಮೆಯನು ಸೆಳೆದಿಂದ್ರಗಿತ್ತಮ- ಹಾನ್ಮಹಿಮ ನಿನಗಾವದಘಟಿತ ನೀರಜಾರಮಣ5 ನಾರದರ ನುಡಿ ನಿಜವೆನುತ ಮೂ- ರಾರು ಭಕ್ತಿಯ ತಾಳ್ದ ಮನುವಿನೊ- ಳಾರುಭಟಿಸುತ ಕಾಶ್ಯಪನು ಮದವೇರಿ ನಿಂದಿರಲು ಯಾರು ತಿಳಿಯದ ತೆರದಿ ಕಂಭದಿ ಮೃಗ ರೂಪವನು ಹೆ- ಮ್ಮಾರಿ ದೈತ್ಯನ ತರಿದು ತ್ವತ್ಪದವಿತ್ತೆ ದಾಸನಿಗೆ 6 ಏನು ಶ್ರಮವಿಲ್ಲದಲೆ ಪಿಡಿದು ದ- ಶಾನನನ ತೊಟ್ಟಿಲಿಗೆ ಕಟ್ಟಿ ಪ್ರ- ವೀಣತೆಯ ತೋರಿಸಿದ ವಾಲಿಯ ಪಕ್ಷವನು ತ್ಯಜಿಸಿ ದೀನ ಬಾಂಧವನೆಂಬ ಬಿರುದನು ದಿಟವೆ ನಿಶಿತದ್ರಾಜ್ಯ ಪದವಿಯ ಭಾನುಜನಿಗೊಲಿದಿತ್ತ ಭಕ್ತಜನಾರ್ತಿ ಭಂಜನನೆ 7 ಶಬ್ದಗೋಚರವಾದ ಕಥೆಗಳು ಬದ್ಧವೆಂಬುದು ಪೂರ್ವದನುಭವ ಸಿದ್ಧವಾಗಿಹುದೆನಗೆ ಸಜ್ಜನಲಬ್ಧಪದ ಪದ್ಮ ಬುದ್ಧಿಹೀನತೆಯಿಂದ ನುಡಿದರು ಮಧ್ವವಲ್ಲಭ ನಿನ್ನ ದಾಸನ- ನುದ್ಧರಿಸು ನೀನಲ್ಲದೆನಗಿನ್ನಾರು ಗತಿ ಹರಿಯೆ8 ಒಡೆಯರೆಂಬರನೆಲ್ಯುಕಾಣದೆ ಉಡುವದುಂಬುದಕೇನು ದೊರೆಯದೆ ಗಿಡವ ನಿಲುಕದ ಬಳ್ಳಿಯಂದದಿ ಬಡುವ ಕಷ್ಟವನು ತಡೆಯಲಾರದೆ ತಳಮಳಿಸುತಿರೆ ಪಿಡಿದು ಕರವನು ಕಾಯ್ದೆಯೆನ್ನನು ನುಡಿವದೇನಖಿಳಾಂಡ ನಾಯಕ ನಿನ್ನ ಮಹಿಮೆಯನು 9 ಮಾರಿಯಂದದಿ ಮಧ್ಯದೊಳಗೊ- ಬ್ಯಾರುವೇನೆಂಬಧಮ ಹೂಣನು ತೀರಿಸುವೆನೆಂದೆನ್ನೊಳಿಲ್ಲದ ದೂರ ಸಂಗ್ರಹಿಸಿ ಗಾರಗೊಳಿಸುವದರಿತು ಕಕ್ಷವ ಹಾರಿಸುತ ಸುರವಂದ್ಯ ಮೂರ್ತಿಯ ತೋರಿ ತಂದಿಲ್ಲಿರಿಸಿ ಪೊರೆದವನ್ಯಾರು ಪೇಳ್ದೊರೆಯೆ 10 ಶ್ರೀಶ ನಿನ್ನ ಪದಾಬ್ಜ ಪೊಗಳುವ ದಾಸ ಕೂಟದಿ ಸೇರಿ ಸೇವೆಯ ಬ್ಯಾಸರದೆ ನಡೆಸುತಿರೆ ಮತ್ತೊಬ್ಬಾಸುರನ ತೆರದಿ ದ್ವೇಷದಿಂದಿರೆ ದೂರ ಓಡಿಸಿ ದುರಿತ ಭಯಗಳ ಪರಿಹರಿಸಿದ ಮ- ದೀಶ ನೀನೆಂದನವರತ ನಂಬಿರುವೆ ಶ್ರೀಪತಿಯ 11 ಇಷ್ಟು ಪರಿಯಿಂದೆನ್ನ ರಕ್ಷಿಸು- ತಿಷ್ಟ ಫಲಗಳನೀವ ವೆಂಕಟ ಬೆಟ್ಟದೊಡೆಯನೆ ಬೇಡಿಕೊಂಬುವೆ ಒಂದು ಕೃತ್ಯವನು ಮಾನವ ನುಡಿಯಕಾಡನು ಸುಟ್ಟು ಸೂರೆಯಗೈದು ನಾ ಮನ ಸಿಟ್ಟ ತೆರದಲಿ ತೋರು ಚಿತ್ತವ ಸೃಷ್ಟಿಕರ ಶ್ರೀಶ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನರಹರಿ ಕರುಣಾಜಲಧೆ ತವಚರಣವ ನಂಬಿದೆ ಪ ದೀನಜನರು ಪ್ರತಿದಿನ ಮೊರೆಯಿಡುತಿರೆ ನಿಕರ ಕುಲಿಶಾಯುಧ ಧುರಧೀರಾ ಶೂರಾ ಹಿರಣ್ಯ ಕಶಿಪು ಪುರಂದರ ಸನ್ಮುನೀಂದ್ರ ನುತಿ ಪಾತ್ರಸುಚರಿತ 1 ಉಗ್ರರೂಪ ಸಕಲಗ್ರಹಭಯ ಪರಿಹಾರೀ ಶೌರೀ ಮುರ ವೈರಿ ಜಲಜನಾಭ ನಿನ್ನಯ ಚಿಂತನೆ ಕೊಡು 2 ಕ್ಷುದ್ರರೋಗಗಳುಪದ್ರಪಡಿಸುತಿಹದೈಯ್ಯ | ಜೀಯಾ ಕ್ಷೇಮವಿತ್ತು ನಿನ್ನವರ ದಾಸನೆನಿಸೈಯ್ಯಾ ರುದ್ರಾಂತರ್ಗತ ಗುರುರಾಮ ವಿಠಲ ಭದ್ರಮೂರುತಿ ಘಟಿಕಾಚಲನಿಲಯ 3
--------------
ಗುರುರಾಮವಿಠಲ
ಶ್ರೀನಾಥ ವಿಠಲ ಹರಿ | ನೀನೆ ಪೊರೆ ಇವನಾ ಪ ಮಾನನಿಧಿ ಮಧ್ವಾಖ್ಯ | ವಂದಿತ ಸಂಚರಣಾ ಅ.ಪ. ಯೋನಿ ಆನೇಕದಲಿ | ಜನುಮಗಳ ತಾಪೊತ್ತುಮೌನಿ ಜನ ಸಂಯೋಗ | ಸತ್ಸಂಗಗಳ ಪಡೆದೂಧ್ಯಾನ ಸಾಧನಕಾಗಿ | ಮೌನಿರಾಯರ ಸೇವೆಸಾನುರಾಗದಿ ಗೈಯ್ಯೆ | ಶ್ರೀನಾಥ ಒಲಿದೇ 1 ದಾಸ ಸತ್ಪಂಥಾನು | ವಾಸಿಪೆನು ಎಂದೆನುತವಿೂೀಸಲದ ಸನ್ಮನದಿ | ಪ್ರಾರ್ಥಿಸುತ್ತಿಹಗೇಲೇಸು ತೈಜಸನಾಜ್ಞೆ | ಪೋಷಿಸುತ ವಿಠಲನ ಸಸೂಸಿ ಸೇವಿಸಿ ಇತ್ತೆ | ಅಂಕಿತವನಿವಗೇ 2 ಮಾರಾರಿ ಸದ್ವಿನುತ | ತಾರತಮ್ಯವ ತಿಳಿಸಿಮಾರೆರಡು ಭೇಧಗಳ | ಅರಹುತಲಿ ಇವಗೇಪಾರಗಾಣಿಸು ಭವವ | ನೀರೋಜೋದ್ಭವನಯ್ಯಕಾರುಣಿಕ ಶ್ರೀಹರಿಯೆ | ಕಾರುಣ್ಯ ಮೂರ್ತೇ 3 ಸಖನಾಗಿ ಇವನಲ್ಲಿ | ಸುಖ ಕವನ ಪೇಳಿಸುತ ಪ್ರಕಟ ಗೈ ತವರೂಪ | ನಿಕಟ ಹೃದ್ಗುಹದೀವಿಖನಸಾಂಡದ ಓಡೆಯ | ಸಕಲ ಪ್ರೇರಕ ನಿನ್ನಅಕುಟಿಲದೆ ಮನದಿಂದ | ಪ್ರಾರ್ಥಿಸುವೆ ಹರಿಯೇ 4 ಸಿರಿ ಭೂಮಿ ರಮಣನೇಅರಹಲೇನಿಹುದಿನ್ನು | ಸರ್ವಜ್ಞ ಮಾರ್ತೇಕರುಣ ದೃಷ್ಟಿಲಿ ನೋಡಿ | ಪರಿಹರಿಸೊ ದುಷ್ಕರ್ಮಹರಿಯೆ ಗುರು ಗೋವಿಂದ | ವಿಠಲ ಮಾರುತಿಯೆ 5
--------------
ಗುರುಗೋವಿಂದವಿಠಲರು
ಶ್ರೀನಾಥ ಶ್ರೀನಾಥ ಶ್ರೀನಾಥ ಮೋಹಿನೀ ರೂಪ ತಾ ತಾಳಿದಾನೆ ಸುಕಲಾಪ ತಾನೋಡಿಸುವುದು ಹೃತ್ತಾಪ ವನಂಬೆನೆ ಹರಿಯ ಪ್ರತಾಪ ಪ ಬಂಗಾರದ ಲತೆಯಂತೆ ಬಳುಕುವಳು ಬಾಜು ಬಂದಿಗೆ ಗೊಂಡೆಗಳ ಕಟ್ಟಿಹಳು ಮುಂಗಾಲಿಲೆ ನಿರಿಗಿಗಳ ಚಿಮ್ಮುವಳು ಮೋಹನ ಮಾಲೆಗಳ ಕಟ್ಟಿಹಳು ಕುಂಭ ಕುಚದ ಭಾರಕ್ಕೆ ತಡಿಯಳೂ ತುದಿಬೆರಳಲಿ ಗಲ್ಲವನೊತ್ತಿಹಳು ಕೇಸರಿ ಗಂಧ ಹಚ್ಚಿಹಳು ಹೊಂಗ್ಯಾದಿಗೆ ಪೋಲುವ ಮೈಬಣ್ಣ ಹೊಮ್ಮಸದಲಿ ಹೋಲುವ ಈ ಹೆಣ್ಣು ಹಿಂಗಡೆಯಲಿ ವರ ಹೆರಳು ಭಂಗಾರ ಹಿಮ್ಮಡಿ ಬಡಿಯೋದು ಸರ್ಪಾಕಾರ ಭಂಗಿಸುವಳು ಬಹು ದೈತ್ಯರ ಹೃದಯ ಬಹು ವಿಲಾಸದಿ ತೋರ್ಪಳು ಸಖಿಯ ಅಂಗಜದರು ಗಂಧಕೆ ಅಳಿವೃಂದ ಆಡುತಲಿಗೆ ಝೇಂಕಾರಗಳಿಂದಾ ಸಂಗಡನೆರದ ಸುರಾಸುರರಿಂದ ಸತಿ ಚಲುವಿಂದಾ ಮಂಗಳಮುಖಿ ನಮ್ಮಂಗಳ ಮೋಹಿಸಿ ಭಂಗನ ಪಡಿಸುವಳೈ ತ್ರಿಜಗವ ಜಗಂಗಳ ಪಾಲಿಸುವಳು | ಮನ ಸಂಗಡ ಅಪಹರಿಸುವಳು | ಜಡ ಜಂಗಮಲಿಗೆ ಬಹು ಪ್ರೀತ್ಯಾಸ್ಪದಳು ಸಾರಂಗಿ | ಸಾರಂಗಿ | ಸಾರಂಗೀ ಸಾಂಬಮದ ಭಂಗಿ | ಬಹಳ ಸುಖಸಂಗಿ ಸುಂದರಿ ಲಲಿತಾಂಗಿ | ಮೋಹನಾಪಾಂಗೀ ಬಡು ಹೆಂಗಲ್ಲ ಈಕೆ ಬಹುಭಂಗ ಬಡುವಿರಿ ಜ್ವಾಕೆ || ಶ್ರೀನಾಥ || 1 ಕನ್ನಡಿಯಂದದಿ ಪೋಲುವ ಕಪೋಲ ಕರ್ಪೂರ ರಂಜಿತ ವರ ತಾಂಬೂಲ ಕಣ್ಣಿಗ್ಹಚ್ಚಿಹಳು ಕನಕದ ಕೋಲಾ ಕಾಮಿನಿಯಂದಡಿ ತೋರ್ಪಳು ಜಾಲಾ ಬಿನ್ನುಡಿ ಹಾಕಿದ ಚಂದ್ರದ ಕುಪ್ಪುಸ ಚಪಲಾಕ್ಷಿಯ ನೋಟದ ಬಲು ರಭಸಾ ಕರ್ಣಾಯತ ನೇತ್ರಗಳ ವುಲ್ಲಸಾ ವುನ್ನಂಕಾ ನಾಶಿಕದ ಬುಲಾಕು ವಜ್ರಮಯದ ವರಮಖರೆದ ಬೆಳಕು ಕರ್ಣದಿ ರತ್ನಖಚಿತ ತಟಾಂಕಾ ಕುಸುರು ಹಚ್ಚಿದ ಬಾಹುಲಿಗಳ ಬಿಂಕ ಸಣ್ಣ ನಡುವಿನೊಯ್ಯಾರದ ನಲ್ಲೆ ಸರಸಿಜನಾಭನ ಸೃಷ್ಟಿ ಇದಲ್ಲೆ ಬಣ್ಣಿಸಲಳವಲ್ಲವು ಸೌಂದರ್ಯ ಬಿಡಿಸುವುದು ಕೇಳ ಮುನಿಗಳ ಧೈರ್ಯ ಬೆಣ್ಣೆಯಂತೆ ಮೃದುವಾದ ಶರೀರ ಭಾಗ್ಯಹೀನರಿಗೆ ಇದು ಬಲುದೂರಾ ಕನ್ನೆ ಶಿರೋಮಣಿ | ಕಾಮನ ಅರಗಿಣಿ ಕೌಸ್ತುಭಮಣಿಗಳ ಹಾರೇ ಸುವರ್ಣವರ್ಣ ಸುಕುಮಾರೇ ಮೋಹನ್ನರಸನೆ ಗಂಭೀರೇ ಮೋಹನ್ನೆ ಮಧುರ ಮಧುರಾಧರ ಮಂಜುಳ ವಕುಜಲರೆ ಬಹೋಚ್ಚಧರೆ ಛÅಪ್ಪನ್ನ ಛಪ್ಪನ್ನ ದೇಶಗಳು ಚಲುವರಿದ್ದರೂ ಚಪಲಾಕ್ಷಿಗೆ ಸಮರಾರೇ ಗತ ಪುಣ್ಯದಿಂದ ಕೈಸೇರುವಳಲ್ಲದೇ ಕಾಮಾಂಧsÀರಿಗತಿ ದೂರೇ ಈ ಹೆಣ್ಣು | ಈ ಹೆಣ್ಣು | ಈ ಹೆಣ್ಣು ಸುರಾಸುರರನ್ನೆ ಮೋಹಿಸಳು ಚನ್ನ ಮನಕೆ ತರಳಿನ್ನ ಬಿಡು ವಿಷದ್ಹಣ್ಣು ಅಪೇಕ್ಷಿಸೆ ಮಣ್ಣು ಕೂಡಿಸುವಳು ತನ್ನ ಜನರಿಗಮೃತಾನ್ನ ಕೊಡುವಳು ಮಾನ್ಯಳು ಪರಮಸೋನ್ಯಳು | ಸುಗುಣ ಅರಣ್ಯ ವಿನಾಶೇ ಬ್ರಹ್ಮಾಂಡಜಾದ್ಯಂಗೀತೇ || ಶ್ರೀನಾಥ || 2 ಹುಡುಗಿ ನೋಡು ಹೊಸ ಪರಿಯಾಗಿಹಳು ಹದ ಮೀರಿದ ಯವ್ವನದಿ ಮೆರೆವಳು ಅರಳು ತುಂಬಿಹಳು ಮಂದಸ್ಮಿತದಲಿ ಮೋಹಿಸುತಿಹಳು ಬೆಡಗಿನಿಂ ನುಡಿಯ ಸವಿಯ ತೋರುವಳೂ || ಬಹು ವಿಧದಾಭರಣಗಳನ್ನಿಟ್ಟಹಳು ನಡಿಗಿಗಳಿಂದ ನಾಚುತ ಹಂಸ ನವಮಣಿ ಚಂದ್ರರ ಕೆಡಿಸಿತು | ನಂಬೆ ಜಡಿತ ಮುತ್ತಿನ ತಾಯಿತ ಕಠಾಣೀ ಜಗವನು ಮೋಹಿಸುವಳು ಸುಶ್ರೋಣೀ ಬಿಂಕದ ನುಡಿ ಸೊಬಗಿನ ಚಂದಾ ಅಡಗಿದವೆ ಪಿತಭೃಂಗಗಳಿಂದಾ ಹಿಡಗಿ ಮರಗಿ ಮಧ್ಯಶಮನ ಮರಗೀ ಕೇಸರಿ ಬಹು ಸೊರಗೀ ಉಡುಪತಿ ಕೋಟಿ ಪ್ರಭ ಧಿಕ್ಕಾರಾ ಉಲ್ಲಾಸದಿ ಮನ ಮುಖ ಚಂದಿರಾ ನಡಿಗಗಳಿಂದೆನೆ ರಾಜಿಸುತಿ ಹೋದೆ ನವರತ್ನದಯದೆ ಮಯದ ಫಣಿಕಟ್ಟು ಮೇಲ್ಪೊಡವಿವೊಳಗೆ ಪಡಿಗುಣಕ ಕಡಿಯಿಲ್ಲಾ ಸುಳ್ಳುನುಡಿಯಿಲ್ಲಾ ಯೆನ್ನೊಡೆಯಾ ಶ್ರೀ ವಿಜಯ ವಿಠ್ಠಲನಲ್ಲದೆ ಎಲ್ಲಿಂದ ಬಂದಳೋ ಕೆಳದೀ || ಶ್ರೀನಾಥ || 3
--------------
ವಿಜಯದಾಸ
ಶ್ರೀನಾಥ ಸಲಹೊ ಸತತ ನಿನ್ನ ಪದ ಧ್ಯಾನಾನಂದವಿತ್ತು ಪ ತಂದೆ ನಿನ್ನನುಗ್ರಹದಿ | ಜಗದೊಳಗೆ ಬಂದೆ ಭೂಸುರ ಜನ್ಮದಿ ಪೊಂದಿ ತ್ವತ್ವದ ಭಜಿಸದೆ ಭವದೊಳಗೆ ಬೆಂದು ಬೆಂಡಾದೆನು ನಾ1 ಪಗೆಯಾರುಖಳರು ಎನ್ನ | ಪಾಶದಲಿ ಬಿಗಿದು ಬಂಧಿನಿ ಎಳೆಯುತ || ಬಗೆ ಬಗೆಯ ಮಂಗನಂತೆ ಕುಣಿಸ್ಯಾಡಿ ಹಗರಣವ ಮಾಡುತಿಹರೋ 2 ಪರಸ್ವತಿಯರ ರೂಪನೋಡಿ | ಮರಳಾಗಿ ಬೆರೆತವಳ ಕ್ರೀಡಿಸುತಲಿ ಪರಗತಿಯ ಚಿಂತೆ ಬಿಟ್ಟು | ಪರಮಾತ್ಮ ನರಕಕ್ಕೆ ಗುರಿಯಾದೆನೋ 3 ಧನದಾಪೇಕ್ಷೆಯಿಂದ | ಧನಿಕರ ಮನೆಗ್ಹೋಗಿ ಲಜ್ಜೆ ತ್ಯಜಿಸಿ ಘನದಾತರೆಂದವರನು | ಬಲು ತುತಿಸಿ ದಿನಗಳೆದೆ ಶುನಕನಂತೆ 4 ಹರಿನಿನ್ನವಾಸರದಿ | ಉಪವಾಸ ಇರುಳು ಜಾಗರವ ಜರಿದು ಬರಿದೆ ಕಾಲವ ಕಳೆದೆನೋ ರವಿಸುತಗೆ | ಅರುಹಲು ಬಾಯಿಲ್ಲವೋ 5 ಪವಮಾನ ಕೃತಸುಶಾಸ್ತ್ರ | ಪ್ರವಚನವ ಕಿವಿಗೊಟ್ಟು ಕೇಳಲಿಲ್ಲ ಅವನಿ ದ್ವಿಜರ ಪಾದವ ಸೇವಿಸದೆ ಭಾರ ನಾನಾದೆನೊ 6 ಬಾಯೆಂದು ಕೂಗಿ ಕರೆವೆ | ಸರ್ವೇಶ ಓಯೆಂದು ಬೇಗ ಬಾರೋ || ಮಾಯಾ ಮೋಹವನೆ ಬಿಡಿಸೋ | ನಿನ್ನಂಘ್ರಿ ತೋಯಜಧ್ಯಾನವನಿತ್ತು 7 ಶಿಲೆಯಾದ ಸಲಹಿದ ತೆರದಿಲಿ ತುಳಿದು ಸಲಹಿದ ತೆರದಲಿ ಇಳಿಸುರನ ಮಹತ್ಪಾಪ ಕಳೆದವಗೆ ಸಲೆಮುಕ್ತಿ ಸಲಿಸಿದಂತೆ 8 ಇಂದಿನಾರಭ್ಯವಾಗಿ | ಎನ್ನಿಂದ ನಿಂದ್ಯಕರ್ಮವ ನಡೆಸದೆ ಮಂದರೋದ್ಮರನೆ ನಿನ್ನ |ಸದ್ಭಕ್ತ ವೃಂದದೊಳು ಕೂಡಿಸಯ್ಯ 9 ಅಪರಾಧ ಕ್ಷಮಿಸುವಲ್ಲಿ | ನಿನ್ನಂಥ ಕೃಪಣವತ್ಸಲ ಕಾಣೆ ಕೃಪೆಯಿಂದ ಕರಪಿಡಿಯೊ ಕರಿವರದ ಕೌಸ್ತುಭ ಕೃಷ್ಣ 10 ನಿನ್ನ ನಾಮದ ಭೂಸುರ ಕುಲಹೀನ ಕನ್ಯೆಯಳ ಸಂಗ ಮಾಡಿ ನಿನ್ನ ಪರ್ವತ ಮೆಟ್ಟಿಲು ಅವಗೊಲಿದು ನಿನ್ನಾಪ್ತನೆನಿಸಿದಂತೆ 11 ನಿನ್ನೊಲುಮೆ ಪಾತ್ರರಾದ ಗುರು ಜಗನ್ನಾಥಾಖ್ಯ ದಾಸಾರ್ಯರ ಸನ್ನಿಧಾನದಲಿ ಇಪ್ಪ | ಇವನೆಂದು ಮನ್ನಿಸೊ ಮಹಮಹಿನೆ 12 ದುರಿತ ರಾಶಿ | ಪೇಳಲ್ಕೆ ಭೂಮಿಧರಗಳವಲ್ಲವೋ ಪ್ರೇಮದಿಂದಲಿ ಪಾಲಿಸೋಮಮಸ್ವಾಮಿ ಶಾಮಸುಂದರ ದಯಾಳು 13
--------------
ಶಾಮಸುಂದರ ವಿಠಲ
ಶ್ರೀನಿಕೇತನ ಲಕ್ಷ್ಮೀ ಕಾಂತನ ಪದಪದ್ಮ ಧ್ಯಾನ ಮಾಡುತ ಎನ್ನ ಸ್ಥಿತಿಯ ದೀನಭಾವನೆಯಿಂದಲೊರೆವೆನು ಗುರುಪವ ಮಾನ ಪಾಲಿಸಲಿ ಸನ್ಮತಿಯ ಪ. ತಾನು ತನ್ನದೆಂಬ ಹೀನ ಭಾವನೆಯಿಂದ ನಾನಾ ಯೋನಿಗಳಲ್ಲಿ ಚರಿಸಿ ಮಾನವ ಜನ್ಮವನೆತ್ತಲು ಮುಂದಾದ- ದೇನೆಂಬೆ ಗರ್ಭದೊಳುದಿಸಿ 1 ಮಾತಾಪಿತರುಗಳು ಮೋಹದಿ ರಮಿಸಲು ಕೇತ ತತಿಗೆ ಸರಿಯಾಗಿ ಆತು ಬಂದಿಹೆನು ಗರ್ಭದಿ ಮೆಲು ನರ ವ್ರಾತ ಬಂಧಕೆ ಗುರಿಯಾಗಿ 2 ಸೇರಿದ ಕ್ರಿಮಿ ಪರಿವಾರ ಕಚ್ಚುತಲಿರೆ ಚೀರಲಾದರು ಶಕ್ತಿಯಿರದೆ ಭಾರ ವಸ್ತುವು ಕಣ್ಣಸಾರವು ತಡೆಯದೆ ಗಾರುಗೊಂಡೆನು ಗರ್ಭದೊಳಗೆ 3 ಮೂರರಾ ಮೇಲೆ ಮತ್ತಾರುಮಾಸಗಳಿಂತು ಭಾರಿ ಭವಣೆಗೊಂಡು ಕಡೆಗೆ ಭೋರನೆ ಭೂಮಿಗೆ ದೂರಿ ಬಂದೆನು ಮಲ ಧಾರೆಯಾ ಕೂಡಿ ಮೈಯೊಳಗೆ 4 ಹೇಸಿಗೆ ಮಲಮೂತ್ರ ರಾಶಿಯ ಒಳಗೆ ದು- ರ್ವಾಸನೆ ಬರುವ ಗೆರಸಿಯ ಹಾಸಿಗೆ ಒಳಗೆ ಹಾಕಿರುತಿರೆ ದೇಹದ ಲೇಶ ಸ್ವಾತಂತ್ರ್ಯವೇನಿರದೆ 5 ಮೂಸಿ ಮುತ್ತುವ ನುಸಿಮುತ್ಕುಣ ಬಾಧೆಗೆ ಘಾಸಿಗೊಳುತ ಬಾಯ ತೆರದೆ ದೋಷ ಶಂಕಿಸಿ ಮೈಯೊಳಿಕ್ಕಿದ ಬರೆಗಳ ಬಾಸಲೆಯುನು ತಾಳ್ದೆ ಬರಿದೆ 6 ನಾಲ್ಕು ಕಾಲುಗಳಿಂದ ನಾಯಿಗೆ ಪರಿಯಾಗಿ ಸೋಕಿದೆ ಸರ್ವತ್ರ ತಿರುಗಿ ಸಾಕುವ ಜನರೆಡಬಲಗಾಲ ತುದಿಯಿಂದ ದೂಕಿದರಲ್ಲಿಯೆ ಸುಳಿದೆ 7 ವಾಕುಗಳೆಂಬ ಕೂರಂಬನು ಸಹಿಸಿ ಪ- ರಾಕೆಂದು ಪರರ ಸೇವಿಸಿದೆ ಮಾಕಳತ್ರನೆ ನಿನ್ನ ಕೃಪೆಯಾದ ಬಳಿಕ ಮೋ- ಹಾಕಾರ ಮಡುವಿನೊಳಿಳಿದೆ 8 ಈಗಲಾದರು ದೇಹ ಭೋಗವೆ ಬಯಸುತ ನೀಗಿದೆ ವ್ರತ ನೇಮಾದಿಗಳ ಸಾಗದ ಫಲ ತನಗಾಗಬೇಕೆಂಬ ಮ- ನೋಗತಿಯಿಂದ ಕರ್ಮಗಳ 9 ಮೂಗಭಾವನೆಯನ್ನು ನೀಗದೆನಿಸಿ ಮುಂ- ದಾಗಿಯಾಡುವೆ ಮಥನಗಳ ಕಾಗೆಯು ಕುಂಭದ ಜಲ ಕುಕ್ಕುವಂತೆ ಬೆಂ- ಡಾಗಿ ಕೊಂಡೆನು ಝಗಳಗಳ 10 ಕಂತುಜನಕ ಕಂಜನಾಭ ವೆಂಕಟರಾಜ ಚಿಂತಾಮಣಿ ಸುರತರುವೆ ಎಂತಾದರು ನಿನ್ನ ದಾಸ್ಯ ಸೇರಿದ ಮೇಲೆ ಇಂತುಪೇಕ್ಷಿಸುವುದು ಥರವೆ 11 ಭ್ರಾಂತಿ ಎಂಬುದ ಬಿಡಿಸಿನ್ನಾದರು ಲಕ್ಷ್ಮೀ ಕಾಂತ ಕಾರುಣ್ಯ ವಾರುಧಿಯೆ ಚಿಂತಿತದಾಯಿ ಎನ್ನಂತರಂಗದಿ ಬೇಗ ನಿತ್ಯ ವಿಧಿಯೆ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿಕೇತನ ಸರ್ವಪತಿಯು ಸಕಲ ಸಜ್ಜನಾನಂದ ಕರುಣಾ ಮೂರುತಿಯ ಕಂಠೇಧೃತ ಸತಿಯ ಮಣಿ ಮಯ ಪೀಠದಿ ಧ್ಯಾನಿಸಿ ಪರಮಾನುರಾಗದಿ ಪಾಡುತ ಮಾನಿಸಿ ಕರೆವೆ ಮುದದಿಂದ ಶೋಭಾನೆ 1 ಸಕಲ ಲೋಕಾಧಿನಾಥ ದೇವಾ ವಿಧಿ ನಾವ ವಿಕಸಿತ ಮುಖ ಕಂಜಭಾವ ಭಕ್ತರ ಸಂಜೀವ ಕುಂಡಲ ಶುಭ ಮುರುವಿಲಾಸಿತ ಕಪೋಲ ಸುಶೋಭಿತ ಕರುಣದಿ ಭಕುತಿಯನಿತ್ತು ದಯವಾಗು 2 ಕಂಧರಲಂಬಿ ವನಮಾಲಾ ಮಧ್ಯಸ್ಥ ಕೌಸ್ತುಭೇಂದಿರಾಸಕ್ತ ವಕ್ಷೋಲೀಲ ಕರುಣಾಲವಾಲ ಬಂದಹರಾರಿದ ರೆಂದಿವರ ಶುಭಾನಂದ ಕಾದಿದರ ಸುಂದರ ಶುಭಕರ ನಿಂದೀ ಮಂಟಪಕೆ ದಯವಾಗು 3 ವಿಧಿಯಾಸನಾದ ಕಂಜನೆ ಗದಾ ಗಂಭೀರ ವೃತ್ತ ನಾಭ ವಾಸಃ ಶೋಭ ಕರ ಭೋರ್ವಬ್ದಾಭ ಶುಭ ಪದಯುಗ ಕಂಜವ ಹೃದಯದಿ ತೋರುತ ಸದಯದೊಳಗರಿಗಳ ಸದೆವುತ ಹಸೆಗೆ ದಯವಾಗು 4 ಮೂರ್ತಿ ಸುರವರ ನುತಕೀರ್ತಿ ಶ್ರೀನಿಧಿ ಪರಿಹರಿಸಾರ್ತಿ ಪರಿಪೂರಿಸುತರ್ಥಿ ದೀನ ಬಂಧು ಸ್ವಜನಾನುಕಂಪ ಕರ್ಣಾನುಜಸಾರಥಿ ಶೇಷ ಗಿರೀಶ ಸುಮ್ಮಾನವ್ಯಾಕಿನ್ನು ಹಸೆಗೇಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ ತವಚರಣ ಸರೊರುಹ-ಮಾನತೋಸ್ಮಿ ಸತತಂ ಫಲದಂ ಶುಭಚರಿತಂ ಪ ಸನ್ನುತ ವಾಸುಕಿ ಶ್ರೀಶವಾಸ ಹಿರಣ್ಮಯವಾಸ ಸಮಸ್ತ ವಾಸತರುಣಿಶತ ಬಾಸಸುಮನೋಲ್ಲಾಸ ವಿಜಿತ ರೊಷ ವಾಸರೇಶ ಶತ ಭಾಸುರ ಭೂಷಣ ಭೂಷಿತಾಂಗವಿಶೇಷಕರುಣಮೃದುಭಾಷಣ ಭವಜಲಶೋಷಣ ಪೂಷಣ 1 ಸುರಮಂಡಲಸೇವಿತ ಚಂಡನಿಶಾಚರ ಮಂಡಲ ಖಂಡನ ಪಂಡಿತರಣ ಶೌಂಡ ಪುಂಡರೀಕ ನಯನಾಂಡಜವಾಹನ ಪುಂಡರೀಕಗಿರಿ ಮಂಡನ ಹಿಮಕರಮಂಡಲ ಸನ್ನಿಭಕುಂಡಲಾಭರಣ 2 ನೀಲ ಸುಮಂದರಧಾರಣ ಚತುರುತಲಾಗ್ರವಿ ಮೃಗೇಂದ್ರಾ ವಾರಿಜನಿಲಯಾವರ ಕರುಣಾಕರ ಮಾರಜನಕ ಸುರವಾರವಂದ್ಯಪದ ಸಾರಸುಗುಣ ಪರಿ ಜಲದಿ ಗಂಭೀರ ವ್ಯಾಘ್ರಗಿರಿವರದ ವಿಠಲಹರಿ 3
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸ ತವಚರಣಸರೋರುಹಮಾನತೋಸ್ಮಿ ಸತತಂ ಸಾನುರಾಗ ಮನಸಾ ವಚಸಾ ಶಿರ ಸಾನುಕೂಲಫಲದಂ ಶುಭಚರಿತಂ ಪ ಶ್ರೀಶವಾಸ ಹಿರಣ್ಮಯ ವಾಸ ಸಮಸ್ತಾವಾಸ ತರಣಿಶತ ಭಾಸ ಸುಮನೋಲ್ಲಾಸ ವಿಜಿತರೋಷ ಭೂಷಿತಾಂಗ ವಿಶೇಷ ಕರುಣ ಮೃದು ಭಾಷಣ ಸಜ್ಜನ ಪೋಷಣ ನಿರ್ಜಿತ ದೂಷಣ ಭವಜಲ ಶೋಷಣ ಪೂಷಣ 1 ಪುಂಡರೀಕಾಸನ ಖಂಡಪರಶು ಅ ಖಂಡಲ ಮುಖ ಸುರಮಂಡಲ ಸೇವಿತ ಪಂಡಿತ ರಣಶೌಂಡ ಪುಂಡರೀಕನಯ- ನಾಂಡಜವಾಹನ ಖಂಡಿತಕೇಶ ಕೋ ದಂಡ ಕೃತಾರ್ಚನ ಪುಂಡರೀಕಗಿರಿ ಮಂಡನ ಹಿಮಕರ ಮಂಡಲ ಸನ್ನಿಭಕುಂಡಲಾಭರಣ 2 ವಾರಿದನೀಲಶರೀರ ಧರಾರ ಧೀರ ಸುಮಂದರಧಾರಣ ಚತುರ ಕರಾಗ್ರವಿ ದಾರಿತ ಶೂರ ಹಿರಣ್ಯಕವೀರ ನರಮೃಗೇಂದ್ರಾ ಮಾರಜನಕ ಸುರವಾರ ವಂದ್ಯಪದ ಪರಿ ವ್ಯಾಘ್ರಗಿರಿ ವರದವಿಠಲ ಹರಿ 3
--------------
ವೆಂಕಟವರದಾರ್ಯರು
ಶ್ರೀನಿವಾಸ ನಿನ್ನ ನಂಬಿದ ದಾಸನ ಎನ್ನನು ಕಾಯೋ ಶ್ರೀವಾಸುಕಿಶಯನ ಪ ರೂಪರಹಿತ ಬಹುರೂಪ ಧರಿಸಿಹ ಶ್ರೀಪತಿ ಎನ್ನನು ನೀಪರಿಪಾಲಿಸು 1 ಕಾಲರೂಪ ಬಹುಲೀಲೆಯ ತೋರುವ ಮೂಲಪುರುಷ ಸುರಪಾಲಕ ಶ್ರೀಹರಿ 2 ಶಕ್ತಿಗಳನು ಅವ್ಯಕ್ತದೊಳಿರಿಸಿ ಸ ಮಸ್ತ ವಸ್ತುವ ಸುವ್ಯಕ್ತ ಪಡಿಸಿದ 3 ಕಲ್ಪಕೋಟಿ ನಿನಗಲ್ಪಕಾಲ ಪರಿ ಕಲ್ಪಿತ ಸುರನರ ಕಲ್ಪಭೋಜ ಹರಿ 4 ಖಂಡಪರಶು ಅಖಂಡಲಾದಿ ಸುರ ಪುಂಡರೀಕ ಪದ 5 ಮಂದರಧರ ಗೋವಿಂದ ಮುಕುಂದ ಸ ನಂದನಾದಿ ಮುನಿಬೃಂದ ಸುವಂದಿತ 6 ಸಾರಸುಗುಣ ಪರಿವಾರ ಸಜ್ಜನಾಧಾರ ಧೀರವರದವಿಠಲ ಹರಿ 7
--------------
ವೆಂಕಟವರದಾರ್ಯರು