ಒಟ್ಟು 6126 ಕಡೆಗಳಲ್ಲಿ , 131 ದಾಸರು , 3704 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೇಳಯ್ಯಾ ಶ್ರೀ ಗುರುವೇ ಬಾಳುವೆನದರಂದವಿ ಸುರ ತರುವೇ ಪ ಹೀನ ಯೋನಿಯ ಮುಖದಲಿ ಬಂದು ನಾನಾ ತಾಪತ್ರಯದಿ ಬಹುನೊಂದು ನೀನೆ ಗತಿಯನುತ ಬಂದೆ ನಿಂದು ನಾನು ಭವದಿಂದ ತರಿಸುವ ಉಪಾಯವ ವಂದು 1 ಕೇಳಯ್ಯಾ ನೀ ಕಂದಾ ಹೇಳುವ ನುಡಿ ಗ್ರಹಿಸಲಾನಂದಾ ಆದಿಯಲಿ ದುರ್ಜನ ಸಂಗವಳಿದು ಸಾಧುಜನಸಂಗವನೇ ಬೆರೆದು ಬೋಧೆಯಂದಲಿ ಮನನವ ಬಲಿದು ಸಾಧಕನ ಉದ್ಯೋಗಿಸ ಸಿದ್ಧಿಯಹುದು2 ಸ್ವಾಮಿ ಸಜ್ಜನ ಸಂಗವನೇ ಬಯಸಿ ಪ್ರೇಮದಿರಬೇಕು ಇದೇ ನಿತ್ಯವೆನಿಸಿ ತಾಮತ್ತರ ಘಳಿಗಿಯೊಳು ವಲಿಸಿ ಭ್ರಮಿಸುತಿಹಿದು ಅದು ಏನೆಂದು ವಿಸ್ತರಿಸಿಹೇ3 ಕೇಳಯ್ಯಾ ಲೋಕವೆಲ್ಲಾ ಛಲನೆ ಮಾಡುವುದು ವಿಕಲ್ಲುಳ್ಳದು ನೋಡುಮನವದು ನಾಕು ತೆರದೊಳಿಸಿ ಕೊಳ್ಳಲದು ಬೇಕಾದುದನು ವಸ್ತು ಇದಿರಿಡುತಲಿಹುದು4 ನಳಿನ ಜಪರಾಸುರಗಳಿಗೆ ಛಲಿಸಲಿಕೆ ಮನ ಅಂಗನಿಗೆ ಬಲಿ ವಿಡಿದು ಮೋಹಿಸಿದ ರಾಗ ಇಳಿಯೊಳಗ ವಶಯಂತಹುದು ಮನುಜಗ5 ಕೇಳಯ್ಯಾ ಶುಕನಾರದ ಭೀಷ್ಮರ ನೋಡಾ ವಿಕಳಿಗೊಳ್ಳದೆ ಮನಕೂಡಾ ಸಕಲಗೆದ್ದರು ಅತಿಗಾಢಾ ಯುಕುತಿಲೆ ಮನೊಲಿಕೊವೈರಾಗ್ಯದಿಂದ ಧೃಡಾ6 ಹೇಳೈಯ್ಯಾ ಜ್ಞಾನಸಾಧನವೆಂಬುದನರಿಯೇ ಎನಗೆಂತಹದಿಂತಿದು ಧೋರಿಯೇ ನೀನೇ ತಾರಿಸುದಯದೆನ್ನ ಸಿರಿಯೇ ನಾನು ಎಂದೆಂದು ತವಪಾದಸ್ಮರಣಿ ಮರಿಯೆ7 ಎಂದು ಬಾಗುವ ಕಂದನನು ನೋಡಿ ಕರ ನೀಡಿ ಛಂದದಲಿ ತರಿಪಂತೆ ಮಾಡಿ ಬಂದು ಧನ್ಯ ಗೈಸಿದ ಗುರು ಮಹಿಪತಿ ಕೈಯ್ಯಗೂಡಿ8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೇಳುವೆನು ಕೇಳಿ ಕರ್ಣಾಮೃತವ ಆಲೋಚನೆ ಸಲ್ಲ ತಿಳಿದ ಜ್ಞಾನರಿಗೆ ಪ ಲಕ್ಷಣ ಛಂದಸ್ಸು ಅಡಿಪ್ರಾಸ ಆದಿ ಅಂತಿ ಲಕ್ಷಕ್ಕೊಂದಾದರು ಮೊದಲೇ ಇಲ್ಲಾ ಅಕ್ಷಿ ಇಲ್ಲದವನು ಕೋಲು ಸಂಪಾದಿಸುವ ಅಕ್ಷಿ ಉಂಟಾದವಗೆ ಅದರಿಂದ ಫಲವೇನು 1 ಜ್ಞಾನ ಕರ್ಮರ ಲಂಬನ ಮಾಡಿ ತಿಳಿದಂಥ ಮಾನವನು ನಾನಲ್ಲ ಎಂದೆಂದಿಗೂ ಜ್ಞಾನಿಗಳ ಮನೆಯ ತೊಂಡರ ಪಾದರಕ್ಷೆಯಾ ಪಾಣಿಯಲ್ಲಿ ಪಿಡಿದವನ ನಖಧೂಳಿ ದಯದಿಂದ 2 ರಾಗತಾಳ ಭೇದ ಜತೆ ಜಾಣತನದಿಂದ ವಾಗರ ನಿಮಿತ್ಯ ಪೇಳಲಿಲ್ಲಾ ಹ್ಯಾಗಾದರೇನು ನಾರಾಯಣಚ್ಯುತನೆಂದು ಕೂಗಿ ಕಾಲವ ಕಳದೆ ಜನುಮ ಸಾಧನಕೆ 3 ಬೆಲ್ಲ ಕರದಲಿ ಪಿಡಿದು ಆವನಾದರೇನು ಎಲ್ಲಿ ತಂದರೆ ಅದು ಸೀ ಎಲ್ಲವೇ ಬಲ್ಲನವ ನರಿಯನಿವನೆಂದು ಆಡದಿರಿ ಪುಲ್ಲನಾಭನ ಸ್ಮರಣೆ ಒಂದು ಮುಕ್ತಾರ್ಥ 4 ಹರಿದೈವವೆಂದು ತಾ ಉತ್ತರೋತ್ತರ ತಿಳಿದು ಗುರುಮಧ್ವಮತದಲ್ಲಿ ಲೋಲಾಡಲು ಸಿರಿಯ ಅರಸ ವಿಜಯವಿಠ್ಠಲ ಬಂದು ವೊಲಿವನು ಗುರು ಪುರಂದರನ ದಯೆ ಎನ್ನ ಮೇಲಿರಲಾಗಿ5
--------------
ವಿಜಯದಾಸ
ಹೊತ್ತಾಗಿ ಹೊರಟಿಹೆನು ವೈಕುಂಠಕೆ ಮುಟ್ಟಬೇಕು ನಾನು ಪ ಹೊತ್ತಾಗಿ ಹೊರಟಿಹೆ ಹೊತ್ತುಗಳೆದು ವ್ಯರ್ಥ ವತ್ತರದಿಂ ಪೋಗಿ ಹೊತ್ತೆ ಮುಟ್ಟಬೇಕು ಅ.ಪ ಊರುದೂರಾದಿನ್ನು ಕೇಳದೆ ಅರುಮಾತನಾನು ಊರಜನರ ಮಾತು ಮೀರಿ ಆತುರದಿಂದ ಪಾರವಾರಿಲ್ಲದ ವಾರಿಧಿಯನೀಸಿ 1 ದಾರಿ ಅರಿಯೆ ನಾನು ಬಲ್ಲವರು ತೋರಿರೆ ಮಾರ್ಗವನು ಸಾರಮೋಕ್ಷಕ್ಕಾಧಾರನ ಪಟ್ಟಣ ಸಾರಸೌಖ್ಯ ತಲೆಸೇರಿ ಸಕಲ ಮೀರಿ 2 ಆ ಮಹ ಸುಕೃತಗೂಡಿ ನಾಮಾಮೃತಮಂ ನೇಮದಿ ಸವಿಯುತ ಸ್ವಾಮಿ ಶ್ರೀರಾಮನ ಪ್ರೇಮಯಾನವೇರಿ 3
--------------
ರಾಮದಾಸರು
ಹೊತ್ತು ವ್ಯರ್ಥಾ ಹೋಗುತಿದಕೋ ಮುತ್ತಿನಂಥಾ ಪ ಹೋಗುತಿದೆ ಮುತ್ತಿನಂಥಾ ದಿನದೊಳು | ಚಿತ್ತ ಸ್ವಸ್ಥ ಮಾಡಿ ಪುರುಷೋತ್ತಮನ್ನ ನೆನೆಯಿರೋ ಅ.ಪ ಉತ್ತುಮರ ಸಂಗಡದಲ್ಲಿ | ನಿತ್ಯ ಶ್ರವಣಮನನ ಮಾಡಿ | ಅತ್ತಲಿತ್ತಲಾಗದೆ | ಸು | ವೃತ್ತಿಯೊಳು ಬೆರಿಯಿರೋ 1 ಪಗಡಿ ಪಂಚಿಯಾಡಿ ಪರರಾ | ಬಗಲಿ ಕಳೆದು ಕಳೆವದೇನು | ಯುಗುತಿ ಹೀನ ರಾಗದೆ | ಪಥ ಪಡಿಯಿರೋ 2 ಮಂದ ಮತಿಯ ಕೊಂಡ್ಯಾಡಿ | ಮಂದ ಮತ್ತೆ ದೊರೆಯದಿದ್ದ | ಇಂದು ನಾಳೆಗೆನ್ನದೇ ಮು | ಕುಂದ ನಾಮವ ನೆನೆಯಿರೋ 3 ಇಂದು ನರದೇಹದಿಂದ | ಬಂದು ಬರಡ ಮಾಡಬ್ಯಾಡಿ | ತಂದೆ ಮಹಿಪತಿ ದಯ | ದಿಂದ ಮುಕ್ತಿಯ ಪಡೆಯಿರೋ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೊಂದಬೇಕು ನಿಜನೋಡಿ ತಂದೆ ಗುರುನಾಥ ಬೋಧ ಧ್ರುವ ಪರಧನ ಪರಸತಿಯರ ಬಿಟ್ಟರೆ ಸಾಕು ಹೇಸಿ ತೋರುವುದು ತನ್ನೊಳು ಪ್ರತ್ಯಕ್ಷ ವಾರಣಾಸಿ ಸುರಿಮಳೆಗರೆವುದು ಹೆಜ್ಜೆಜ್ಜಿಗೆ ಪುಣ್ಯದ ರಾಶಿ ಅರಿತು ಏಕರಸವಾಗಿ ಸದ್ಗುರು ಸ್ಮರಿಸಿ 1 ಜನ್ಮಕೆ ಬಂದ ಮ್ಯಾಲೆ ಪುಣ್ಯಪಥ ಸಾಧಿಸಿ ಸನ್ಮತ ಸುಖಸಾರದೊಳು ಮನಭೇದಿಸಿ ಉನ್ಮನವಾಗಿ ಜೀವನ ಸದ್ಗತಿಗೈದಿಸಿ ಜನ್ಮಕೆ ಬೀಳುವ ಭವಬಂಧನ ಛೇದಿಸಿ 2 ಸಾಯಾಸದಿಂದ ಸಾಧಿಸಬೇಕು ಸಾಧುಸಂಗ ಗುಹ್ಯಗುರುತ ನೋಡಲಿಬೇಕು ಅಂತರಂಗ ಬಾಹ್ಯಾಂತ್ರದೋರುತಿದೆ ಸದ್ಗುರು ಪ್ರಾಣಲಿಂಗ ಭವ ಭಂಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೊಂದಿ ಸುಖಿಸಿ ಹೊಂದಿ ಸುಖಿಸಿ ಒಂದು ಮನದ ಭಾವದಿಂದಾ ನಂದನೀವ ಜನಕ ನಮ್ಮಗುರುರಾಯನಾ ಪ ದಿಟ್ಟತನದಿ ಸಾಗರಧಿಂ ಮುಟ್ಟಿ ಮುದ್ರೆಯ ಕೊಟ್ಟ ಬಳಿಕ ವನವ ಛೇದಿಸಿ ದುಷ್ಟ ರಾವಣ ತನುಜನಬೆ ನ್ನಟ್ಟಿ ಕುಟ್ಟಿ ಲಂಕೆಯನು ಸುಟ್ಟ ಬಿಟ್ಟ ಬಂದು ಪೊಡ ಮಟ್ಟ ಹನುಮಾ 1 ಆಪ ನೋಡದೆ ಭೂಪರಾಸಭೆ | ಲೋಪಗಡಿ ಮಂಡಿಸಿ ಗೆಲವು | ಲೋಪವಾಗೆ ದ್ರೌಪದಿಯನು ಛಲನೆ ಮಾಡಿದ || ಪಾಪಿಕೌರವ ಧೀಪ ನೆಜ್ಞ ಸ | ಮೀಪಪಶುವಿನೋ ಪಾದಿಯಲಿ ಕೊಪದಿಂದಲಿ ಘಾತಿಸಿದ ಭೂಪಭೀಮನಾ2 ಮತ್ರ್ಯ ದೊಳಗ ಬೆರ್ತು ವಿಷಯ ಅರ್ತುಚರಣ ನಿರ್ತದ್ಹುಗಲು ತೀರ್ಥಚರಣನು ಸಾರ್ಥಕವನು ಮಾಳ್ಪಾನಂದ ಮೂರ್ತಿ ಮರುತನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೊಂದಿಲ್ಲದೆ ನೀ ಕುಂತೀ ಪ ಪರಮನು ಕೇಳಿದರೇನಂತೀ ಕೆಟ್ಟ ನರಕದೊಳಗೆ ಯಮಬಾದಂತೀ ಅ.ಪ ಅಜನನು ಬೆರೆಯಲು ಬೇಕಂತೀ ಆದು ಭಜನೆಗೆ ಬಾರದು ಯಾಕಂತೀ ನಿಜವೊಂದಿಲ್ಲದೆ ನೀಕುಂತೀ ಆದ ಭಜಿಸಿ ನೋಡದೆ ಸುಮ್ಮನ್ಯಾಕ್ಕುಂತೀ 1 ಸಾಧನೆ ಮಾಡುವೆ ಹೀಗಂತೀ ನಿಜ ಬೋಧೆಯಿಲ್ಲದೆ ಯಾಕೀ ಭ್ರಾಂತೀ ಭೇದಿಸುವನು ಸೂರ್ಯನಕಾಂತಿ ನಿಜ [ದಿಂದ]ತುಲಸಿರಾಮನೆ ಗುರು ವೇದಾಂತಿ 2
--------------
ಚನ್ನಪಟ್ಟಣದ ಅಹೋಬಲದಾಸರು
ಹೊನ್ನ ತಾ ಗುಬ್ಬಿ ಹೊನ್ನ ತಾ ಚೆನ್ನ ಗೋಪಾಲ ಚೆಲುವ ಕೃಷ್ಣನ ಕೈಗೆ ಪ. ಆಗಮವನು ತಂದು ಅಜಗಿತ್ತ ಕೈಗೆ ಸಾಗರವನೊತ್ತಿಕ್ಕಿ ಸುಧೆಯಿತ್ತ ಕೈಗೆ ನಾಗಶಯನ ನರಸಿಂಹನ ಕೈಗೆ 1 ಬಲಿಯ ದಾನವ ಬೇಡಿ ಬಂದಂಥ ಕೈಗೆ ಛಲದಿಂದ ಕ್ಷತ್ರಿಯರ ಕೊಂದಂಥ ಕೈಗೆ ಕಲಿ ವಿಭೀಷಣಗಭಯವಿತ್ತಂಥ ಕೈಗೆ ಬಲುಗಿರಿಯ ಬೆರಳಲ್ಲಿ ಆತಂಥ ಕೈಗೆ 2 ಪತಿವ್ರತೆಯರ ವ್ರತವಳಿದಂಥ ಕೈಗೆ ಹಿತವಾಜಿಯನೇರಿ ದುರುಳಮರ್ದನ ಕೈಗೆ ಸತಿ ಶಿರೋಮಣಿ ಲಕ್ಷ್ಮೀಕಾಂತನ ಕೈಗೆ ಚತುರ ಹೆಳವನಕಟ್ಟೆÉ ರಂಗನ ಕೈಗೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಹೊಸಗಣ್ಣು ಎನಗೆ ಹಚ್ಚಲಿಬೇಕು ಜಗದಂಬಾವಸುದೇವ ಸುತನ ಕಾಂಬುವೆನು ಪ ಭವ ವಿಷಯ ವಾರುಧಿಯೊಳಗೆಶಶಿಮುಖಿಯೆ ಕರುಣದಿ ಕಾಯೆ ಅ.ಪ. ಚಾರು ಚರಣಗಳ ಮೊರೆ ಹೊಕ್ಕೆಕರುಣದಿ ಕಣ್ಣೆತ್ತಿ ನೋಡೆ 1 ಮಂದಹಾಸವೇ ಭವಸಿಂಧುವಿನೊಳಗಿಟ್ಟುಚಂದವೇ ಎನ್ನ ನೋಡುವುದುಕಂದನಂದದಿ ಬಾಲ್ಯದಿಂದ ಸೇರಿದೆ ನಿನ್ನಮಂದರಧರನ ತೋರಮ್ಮ 2 ಅಂದಚಂದಗಳೊಲ್ಲೆ ಬಂಧು ಬಳಗ ಒಲ್ಲೆಬಂಧನಕೆಲ್ಲ ಇವು ಕಾರಣವುಇಂದಿರೇಶನ ಪಾದದ್ವಂದ್ವವ ತೋರಿ ಹೃನ್ಮಂದಿರದೊಳು ಬಂದು ಬೇಗ 3
--------------
ಇಂದಿರೇಶರು
ಹೋಗಿ ಗುಡಿಯೊಳಗುಂಡು ಬೇಗ ಬಾರೋಭೋಗಿ ವರ ಕಾಲಿಂಗ ನಾಗ ಮರ್ದನನೇ ಪ ಸರಸಿಜಾಸನ ಬ್ರಹ್ಮ ಸರಸತಿಯ ಒಡಗೂಡಿಸಿರಿ ರಮಣ ವೈಕುಂಠ ಗಿರಿವಾಸನೆಸುರ ನದಿಯ ಜಲದಿಂದ ಎರಡು ತುಳಸಿ ಗಂಧಪರಮ ಕುಸುಮಗಳಿಂದ ಪರಿಚರಿಸುತಲಿಹರು 1 ತರಣಿ ಸಹ ಬಂದಿಹನುಸುರರ ತರುಣಿಯರೆಲ್ಲ ನೆರಹಿಕೊಂಡಿಹರು2 ಸುಂದರಾಂಗಿಯು ಬಕುಲೆ ಮಿಂದು ಪಾಕವ ಮಾಡಿತಂದಿಹಳು ಕ್ಷಿರಾಬ್ಧಿ ನಂದನೆಯುಇಂದಿರೇಶಗೆ ಕಾಮಿತೊಂದೊಂದೆ ಬಡಿಸುವಳುನಂದ ಸುಕುಮಾರ ಗೋವಿಂದ ಗಜವರದಾ 3
--------------
ಇಂದಿರೇಶರು
ಹೋಗಿ ಬರತೇವ ಸಾಗರನ ಮಗಳೆ ಹೋಗಿ ಬರತೇವ ಪ. ರುಕ್ಮಿಣಿದೇವಿ ನಿನ್ನ ದುರ್ಗೆರೂಪವ ಕಂಡು ಅಬ್ಬರಿಸುತಾರೆ ಜನರೆಲ್ಲ ಅಬ್ಬರಿಸುತಾರೆ ಜನರೆಲ್ಲ ಮುಯ್ಯಕ್ಕೆನಿರ್ಭಯದಿಂದ ಬರಬೇಕು ಸಖಿಯೆ 1 ಹಿಂಡು ಹಿಂಡು ಕರೆಸಿ ಕುಣಿಸುತ ಖ್ಯಾತಿಲೆ ಮುಯ್ಯ ತಿರುಗಿಸೆ ಸಖಿಯೆ2 ಹಿಂಡು ಕರೆಸವ್ವ ಸಖಿಯೆ 3 ರಂಭೆ ಸತ್ಯಭಾವೆ ಸಂಭ್ರಮದಿ ಬರುವಾಗ ಒಂಭತ್ತು ವಾದ್ಯ ನಿನಗೆಲ್ಲೆಒಂಭತ್ತು ವಾದ್ಯ ನಿನಗೆಲ್ಲೆ ಮುಯ್ಯಕ್ಕೆಡೊಂಬರ ಡೊಳ್ಳು ಹೊಯಿಸವ್ವ ಸಖಿಯೆ 4 ಹಿಂಡು ಬರಲೆವ್ವ ಸಖಿಯೆ 5 ಆವ್ವ ರುಕ್ಮಿಣಿ ನಿನಗೆ ದಿವ್ಯವಾಹನ ವೆಲ್ಲಿಸಿಂಹ ಶಾರ್ದೂಲ ಕರೆಸವ್ವಸಿಂಹ ಶಾರ್ದೂಲ ಕರೆಸಿ ಏರಿಕೊಂಡುಬಾವಾನ ಹಾಂಗೆ ಬಾರವ್ವ ಸಖಿಯೆ 6 ಕೋಗಿ¯ ಸ್ವರದಂತೆ ರಾಗದಿ ರಾಮೇಶನ ಪಾಡಿ ಕೊಂಡಾಡಿ ಅರಿತಿಲ್ಲಪಾಡಿ ಕೊಂಡಾಡಿ ಅರಿತಿಲ್ಲ ಒಡಗೂಡಿ ಕಾಗೆ ಕೂಗಾಡಿ ಬರಲೆವ್ವ ಸಖಿಯೆ7
--------------
ಗಲಗಲಿಅವ್ವನವರು
ಹೋಗುತಾದೋ ಹೊತ್ತು ಹೋಗುತಾದೋ ಸಾಗಿ ಮುಂಚೆ ಮತ್ತೆ ತಿರುಗಿ ಬಾರದಂತೆ ಪ ಹಿಂದಿನ ಸುಕೃತದಿಂದ ಒದಗಿದಂಥ ಸುಂದರಮಾದ್ಹೊತ್ತು ಎಂದೆಂದು ಸಿಗದಂತೆ 1 ಅರ್ತುಕೊಂಡವರಿಗೆ ಸಾರ್ಥಕಗೊಳಿಸುತ್ತ ಮರ್ತಕರಿಗೆ ಮತ್ತೆ ಗುರ್ತು ತೋರದಂತೆ 2 ಎಷ್ಟೆಷ್ಟೋ ಯೋನಿಯೊಳ್ಹುಟ್ಟ್ಹುಟ್ಟಿ ಬಲಗೋ ಳಿಟ್ಟು ಪಡೆದ ಹೊತ್ತು ನಷ್ಟವಾಗುತ ವ್ಯರ್ಥ 3 ಅಘನಾಶಗೊಳಿಸಿ ಬಹು ಮಿಗಿಲಾದ ಪದವೀನ ಸಿಗದಂಥ ವಸ್ತಿದು ಅಗಲಿ ತಾ ಸುಮ್ಮನೆ 4 ನೇಮವಲ್ಲೆಲೋ ಮತ್ತೆ ಆ ಮಹ ಸಮಯವು ಪಡಿ 5
--------------
ರಾಮದಾಸರು
ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ ಸಾಗರಶಯನ ಕೃಷ್ಣಾ ಪ ಭಾಗವತರ ಸಂಗ ಬೇಗದಿಂದಲಿ ಇತ್ತು ಹೋಗಲಾಡಿಸು ಭವವ ಶ್ರೀ ಕೃಷ್ಣ ಅ.ಪ ಬಾಲೇರ ಸಲುವಾಗಿ ಕೀಳು ಜನರಲ್ಲಿ ಶೀಲ ಜರಿದು ಯಾಚಿಸಿ ಕಾಳಿ ಮರ್ಧನ ನಿನ್ನ ಒಲುಮೆಯ ಪಡೆಯದೆ ಕಾಲ ಬಲಿಗೆ ಸಿಕ್ಕೆನೊ ಶ್ರೀ ಕೃಷ್ಣ 1 ಅಂಗಜನಾಟಕೆ ಹಗಲಿರುಳೆನ್ನದೆ ಪರ ಅಂಗನೆರ ಕೂಡಿ ಮಂಗಳಮಹಿಮ ತುರಂಗ ವದನ ದೇವ ಭಂಗಕ್ಕೆ ಗುರಿಯಾದೆನೊ ಶ್ರೀ ಕೃಷ್ಣ 2 ದುರುಳರ ಸಂಗವನೆಲ್ಲ ಜರಿದು ಶ್ರೀ ನರಹರೆ ಕಾರುಣ್ಯದಲಿ ಭಕ್ತನ ಅರಿಷಟ್ಕರನೆ ಕೊಂದು ಕರಿವರದನೆ ಘೋರ ನರಕಕ್ಕೆ ಭಯ ತಪ್ಪಿಸೋ ಶ್ರೀಕೃಷ್ಣ 3
--------------
ಪ್ರದ್ಯುಮ್ನತೀರ್ಥರು
ಹ್ಯಾಂಗೆ ಉದ್ದರಿಸುವಿ ಎನ್ನ ಕೃಷ್ಣ ಕರುಣ ಸಂಪನ್ನ ಪ ಹೋಗಿ ಹೊಗಿ ವಿಷಯ ಕೂಪದಲ್ಬೀಳ್ವವನಾಅ.ಪ. ದಾಸನು ಎಂದೆನಿಸಿ ಮೆರೆವೆ ಮನದೀ ಲೇಶಾ ಭಕುತಿಯನಾನೊಂದರಿಯೇ ವೇಷಹಾಕಿದೆ ಧನಕೆ ಬರಿದೇ ಆಶೆ ಇಟ್ಟು ಭವದಿ ವಂಚಕನೆನಿಸಿದವನಾ1 ಮಂದಿ ಜನರ ಮುಂದೆ ವೈರಾಗ್ಯನಟನೆ ಮಂದಿರದೊಳು ಬಹು ಕಾಮದ ಭಜನೆ ಬಂಧು ಬಳಗ ಕೂಡೆ ಬಹಳ ಭಕ್ತಿ ಇಂದಿರೇಶನ ಧ್ಯಾನ ದೋಳ್ವಿರಕ್ತಿ2 ಗುರುಹಿರಿಯರ ಜರಿವೊದೆ ಜಪವು ದುರುಳರ ಸಂಗ ದೋಳ್ಮೆರೆವೋದೆ ವ್ರತವು ಪರಿಸರನ ಶಾಸ್ತ್ರದೋಳ್ಮೌನ ನರನಾರಿ ಸ್ತವ ದೋಳ್ಧ್ಯಾನ 3 ವೇದ ಓದಿದೆ ನಾನು ಆದರೇನು ಮೋದತೀರ್ಥರ ಮರ್ಮ ಸಿಗಲಿಲ್ಲವು ಇನ್ನು ವಾದಕ್ಕನುಕೂಲ ವಾಯ್ತದು ಅಷ್ಟೆ ಖೇದ ತೊಲಗದೆ ಮನದಿ ಬಹುಕಷ್ಟಪಟ್ಟೇ 4 ಭುಕ್ತಿ ಪಡೆಯೆ ಕಾಲಕಳೆದೆನಲ್ಲಾ ಯುಕ್ತಿಯಿಂದಲಿ ನೀನು ಒಲಿವೋನು ಅಲ್ಲಾ ಭಕ್ತ ಜನರ ಸಂಗ ನಾ ಪಿಡಿಯಲಿಲ್ಲ ಮುಕ್ತಿಗಾಗುವ ಭಾಗ್ಯ ಎನ್ನಲಿಲ್ಲವಲ್ಲಾ 5 ಸ್ವೋತ್ತುಮರ ನೋಡೆ ಮಾತ್ಯರ್ಯ ಎನಗೇ ವಾತ್ಯಲ್ಯ ತೋರೆನು ಸ್ಧಾವರ ಜನಕೇ ಕುತ್ಸಿತ ಪಾವಡ ಬೀರುವೆ ಜಗಕೆ ತಾತ್ಸಾರ ತೋರುವೆ ಭಕ್ತರ ಗುಣದೀ6 ಈಷಣ ತ್ರಯಗಳ ಬಿಡಲಿಲ್ಲ ಲೇಶಾ ಭಾಷಣದಿ ತೋರ್ಪೆಜ್ಞಾನ ಪ್ರಕಾಶ ಈಶ ನೀನೊಬ್ಬನೆ ಸರಿಯೆಂಬೆ ಹರಿಯೆ ದಾಸನಾಗಿ ಬಾಳ್ವೆ ಬಹು ನೀಚ ಜನಕೆ 7 ನಾನು ನಾನೆಂಬುದು ತುಂಬಿದೆ ಮನದಿ ನೀನು ನಿನ್ನಾಧೀನ ವೆಂತ್ಹೇಳಿ ದೃಢದಿ ಜ್ಞಾನವಿದ್ದರು ಇಲ್ಲ ಎನಚರ್ಯೆ ನೋಡೆ ಮಾನಿನಿಯರ ಬೊಂಬೆ ಗುಣಗಣನೆ ಮಾಡೆ 8 ಮೂರೊಂದು ಹರಿತ್ಯಾಗ ತೊರೆಯಲಿಲ್ಲ ವೈರಿ ಆರರ ಬೇರು ನಾಕೀಳಲಿಲ್ಲ ವೀರ ವೈಷ್ಣವನಾಗಿ ಬಾಳಲಿಲ್ಲಾವಲ್ಲ ಗಾರು ಮನ್ನಿಸದಿರೆ ಗತಿಯೊಬ್ಬರಿಲ್ಲಾ 9 ವ್ರತನೇಮ ಉಪವಾಸ ಸಾಧನೆಯಿಲ್ಲ ರತಿಯಿಂದ ಸಲಹೆಂದು ನಾಕೂಗಲಿಲ್ಲ ಮತಿ ಮತದಿ ಪುಟ್ಟಿದರು ಫಲವಾಗಲಿಲ್ಲ ಗತಿ ನೀನೆ ಕೈ ಪಿಡಿಯೊ ಕೇಳುತ ಸೊಲ್ಲ 10 ಡಂಭಕ ತನದಿಂದ ಬಹುಕಾಲ ಕಳೆದೇ ತುಂಬಿ ಭಕ್ತಿಯ ಬೇಗ ನೀ ಕಾಯೋಮುಂದೆ ಜಂಭಾರಿ ಜಯತೀರ್ಥ ವಾಯ್ವಾಂತರ್ಗತನಾದ ಕಂಬುಕಂಧರಧಾರಿ “ಶ್ರೀ ಕೃಷ್ಣವಿಠಲ” 11
--------------
ಕೃಷ್ಣವಿಠಲದಾಸರು
ಹ್ಯಾಗೆ ದರುಶನ ಪಾಲಿಸುವೆ ವಿಠ್ಠಲನೆ ಹ್ಯಾಗೆನ್ನ ಪೊರೆವೆ ವಿಠ್ಠಲನೆ ಪ. ನಾಗಶಯನನೆ ನಿನ್ನ ನೋಡಬೇಕೆಂದು ಮನ ಈಗ ತವಕಿಸುತಿಹುದು ಹ್ಯಾಗೆ ಮಾಡಲಿ ವಿಠಲ ಅ.ಪ. ಅರಿಯದಾ ದೇಶದಲಿ ಆಲ್ಪರಿದು ಅನ್ಯರಿಗೆ ಬರಿದಾಯ್ತು ಬಯಕೆ ವಿಠ್ಠಲನÉ ಪರಿ ಹರಿಯೆ ನೀನಲ್ಲದಲೆ ಪೊರೆಯುವರ ಕಾಣೆ ವಿಠ್ಠಲನÉ 1 ಕೈಯಲ್ಲಿ ಕಾಸಿಲ್ಲ ಮೈಯಲ್ಲಿ ಬಲವಿಲ್ಲ ಹ್ಯಾಗೆ ಬರಲಿನ್ನು ವಿಠ್ಠಲನೆ ನ್ಯಾಯದಿಂದಲಿ ಹಿಂದಿನಾ ಭಕ್ತರಂದದಲಿ ಕಾಯಬಾರದೆ ಎನ್ನ ಪೇಳೂ ವಿಠ್ಠಲನೆ 2 ಭಕ್ತ ಸುರಧೇನೆಂಬೊ ಬಿರುದು ಕೇಳೀ ಬಂದೆ ಚಿತ್ತಕ್ಕೆ ಬರದೆ ವಿಠ್ಠಲನೆ ಭಕ್ತರಾ ಕೂಟದಲಿ ಸೇರಲಿಲ್ಲವೆ ನಾನು ಭಕ್ತವತ್ಸಲನಲ್ಲವೇನೊ ವಿಠ್ಠಲನೆ 3 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆ ಇಂದಿರೇಶನೆ ಕಾಯೊ ಸತತ ವಿಠ್ಠಲನೇ ಹಿಂದಿನವರನು ಪೊರೆದ ಕೀರ್ತಿ ಉಳಿಯಲು ಈಗ ಕುಂದನೆಣಿಸದೆ ಕಾಯಬೇಕೊ ವಿಠ್ಠಲನೇ 4 ಕರುಣಿ ಎನ್ನಯ್ಯ ಕಂಗೆಡಿಸದಲೆ ಕಾಪಾಡೊ ಚರಣವೇ ಗತಿ ಎಂದು ಬಂದೆ ವಿಠ್ಠಲನೆ ಗುರು ಅಂತರ್ಯಾಮಿ ಎನ್ನಭಿಮಾನ ನಿನದೈಯ್ಯ ಸಿರಿಯರಸ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ