ಒಟ್ಟು 9847 ಕಡೆಗಳಲ್ಲಿ , 135 ದಾಸರು , 5174 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಮವ ಮೃಗರಿಪು ಗಿರಿರಮಣ-ಮಹಿತ ಗುಣಾಭರಣಪ ಕಾಮ ಕಲುಷಭವ ಭೀಮಜಲಧಿಗತ ತಾಮಸಾತ್ಮಕಂ ದುರಿತಚರಿತ ಮಹಿ ಮಾಮ ಅ.ಪ. ನಿಟಿಲನಯನ ಮಕುಟ ಲಸಿತ ವದನ ನೀರಾ-ಪೂರಾ ನೀಲ ಜಲದ ಮದಹೇಳನ ಸುಭಗಶರೀರ ಕುಂದ ಕುಟ್ಮಲ ಸಮಾನ ಶುಭರದನ 1 ವದನ ವಿಜಿತ ಶರದಮೃತಕಿರಣ ಸುಕುಮಾರಾಕಾರಾ ವತ್ಸಲ ಸಿತ ಶುಭಲಕ್ಷಣ ಲಕ್ಷ್ಮೀಧಾರಾ ಸದಯ ಹೃದಯ ಪರಿತೋಷಿತ ನತಜನ ಸಾಮಗಾನರತ ಶುಭ ಚರಿತ||ಮಾಮವ|| 2 ಕಮಲ ಸಂತತಾರ್ತಾದರ ಚಕ್ರ ವಿಬುಧಗೇಯ ಪ್ರಕಟ ಮಹಿಮ ಮಾಂಡವ್ಯ ಮನೋರಥ ಪಾರಿಜಾತ ದುರಿತಾರಿ ವರದನುತ ||ಮಾಮವ|| 3
--------------
ಸರಗೂರು ವೆಂಕಟವರದಾರ್ಯರು
ಮಾಮವತು ಶ್ರೀ ರಮಾಪತೇ | ರಘುಪತೇ ಸೀತಾಪತೇ ಪ ಭೀಮಪರಾಕ್ರಮ ದನುಜಾರಾತೇ | ಕಾಮಿತಾರ್ಥದಾಯಕ ನಮೋಸ್ತುತೇ ಅ.ಪ ಜನಕ ನೃಪಾತ್ಮಜಾಯುತ ಸುರ ಭೂಜಾ | ಇನಶಶಿತೇಜ ನಯನಸರೋಜ | ವಿನಮಿತ ಶುಂಭ ವಿನತಸುತಾಧ್ವಜ | ಮುನಿಪ ಸಮಾಜ ರೂಪ ಮನೋಜ ||1 ವಾನರಪತಿ ಸಂಸೇವಿತ ಚರಣಾ | ದಾನವವೈರಿ ವಿಭೀಷಣ ಕರುಣಾ | ದೀನಜನಾಶ್ರಯ ಪಾವನಚರಣಾ ಶ್ರೀನುತ ಮಾಂಗಿರಿ ವೆಂಕಟರಮಣಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಮವದೇವ ಮಹಾನುಭಾವ ಶ್ರೀಮನೋಹರ ನಿ ರಾಮಯ ಚಿನ್ಮಯರಾಮ ರಮ್ಯಗುಣಧಾಮ ತಾವಕಂ ಪ ಪಂಕಜನೇತ್ರ ಪರಮಪವಿತ್ರ ಶಂಖಚಕ್ರಧರ ಕಿಂಕರಾರ್ತಿಹರ ಪಂಕಜಾಲಯಾಲಂಕೃತಗಾತ್ರ 1 ನೀಲಾಂಬುದಾಭ ನೀರಜನಾಭ ಬಾಲಭಕ್ತ ಪರಿ ಪಾಲ ಹೇಮಮಯಚೇಲ ನವ್ಯ ವನಮಾಲ ಸುಶೋಭsÀ 2 ಕರುಣಾಲವಾಲ ಖಳಕುಲಕಾಲ ಹರಿಣಹರಣ ಧರ ವರಶಿಖರಾಲಯ ವರದವಿಠಲ ಸುಖಕರಕಮಲಾಲಯ 3
--------------
ವೆಂಕಟವರದಾರ್ಯರು
ಮಾಮವದೇವ-ಮಹಾನುಭಾವ-ಶ್ರೀಮನೋಹರ ನಿರಾಮಯ ಚಿನ್ಮಯ ರಾಮರಮ್ಯ- ಗುಣಧಾಮ ತಾವಕಂಪ ಪಂಕಜನೇತ್ರ ಪರಮ ಪವಿತ್ರ ಶಂಖಚಕ್ರಧರ ಗಾತ್ರ 1 ನಿಲಾಂಬುದಾಭ ನೀರಜನಾಭ ಬಾಲ ಭಕ್ತಪರಿಪಾಲ ಹೇಮಮಯ | ಚೇಲನವ್ಯವನ ಮಾಲ ಸುಶೋಭ 2 ಸುಖಕರ ಕಮಲಾಲಯ 3
--------------
ಸರಗೂರು ವೆಂಕಟವರದಾರ್ಯರು
ಮಾಯಕಾರಳೆ ಕಾಯೊ ಕರುಣದಿ ಬಾಯಿ ಬಿಡುವೆನೆ ರುದ್ರಾಣಿ ಪ ನೋಯಲಾರದೆ ದೇವಿ ಮರೆಹೊಕ್ಕೆ ನೋವು ಕಳೆಯಮ್ಮ ಭವಾನಿ ಅ.ಪ ಭಕ್ತಜನರಿಗೆ ಆಪ್ತಮಾತೃ ನೀ ನಿತ್ಯೆ ನಿರ್ಮಲರೂಪಿಣೀ ಭೃತ್ಯನೊಳು ದಯವಿತ್ತು ಪೊರೆ ಆದಿ ಶಕ್ತಿ ದೈತ್ಯಸಂಹಾರಿಣಿ 1 ಶುಂಭ ನಿಶುಂಭರೆಂಬ ಖಳರ ಜಂಬ ಮುರಿದೌ ಚಂಡಿಕೆ ಅಂಬೆನಿನ್ನನು ನಂಬಿ ಭಜಿಪೆ ಇಂಬುಗೊಟ್ಟು ಸಲಹಂಬಿಕೆ 2 ಸುರರ ಮೊರೆಕೇಳಿ ದುರುಳÀರ್ಹಾವಳಿ ದೂರಮಾಡಿ ಶೌರಿಯೆ ನೀ(ರಟ)ಸಿದವರಿಗೆ ವರವ ಕರುಣಿಸಿ ಕರುಣ ದೋರಿದೌದರಿಯೆ 3 ಅನ್ನಪೂರ್ಣೆಯೆ ನಿನ್ನ ಪಾದ ವನ್ನು ಭಜಿಸುವೆ ಕಲ್ಯಾಣಿ ಭಿನ್ನವಿಲ್ಲದೆ ನಿನ್ನ ಸುತಗೆ ಸುಖ ವನ್ನು ಕೊಡೆ ನಾರಾಯಣೆ 4 ರಾಮದಾಸರ ಪ್ರೇಮ ಜನನಿಯೆ ನೇಮದಿಂ ನಿನ್ನ ಪಾಡುವೆ ಹೈಮಾವತಿ ಎನ್ನ ಕಾಮಿತಾರ್ಥವ ಪ್ರೇಮದಿಂ ನೀಡು ಕರುಣಿಯೆ 5
--------------
ರಾಮದಾಸರು
ಮಾಯದೂರನೆ ಎನ್ನ ಮಾಯ ಬಿಡಿಸಯ್ಯ ಮಾಯದಲಿ ಸಿಲ್ಕಿ ಬಲು ಬಳಲುವೆನಭವ ಪ ಮಾಯದಿಂ ಜನಿಸಿ ನಾ ಮಾಯದಿಂ ಬೆಳೆದಿರುವೆ ಮಾಯವನೆ ಉಟ್ಟು ನಾ ಮಾಯ ತೊಟ್ಟಿರುವೆ ಮಾಯವನೆ ಹಾಸಿ ನಾ ಮಾಯವನೆ ಹೊದ್ದಿರುವೆ ಮಾಯದಲಿ ಬಿದ್ದು ಬಲು ಒದ್ದಾಡುತಿರುವೆ 1 ಮಾಯಕ್ಕೆ ಸತಿಯೆಂದು ಮಾಯಕ್ಕೆ ಸುತರೆಂದು ಮಾಯಕ್ಕೆ ಬಂಧೆಂದು ಮಾಯದ್ಹಿಗ್ಗಿದೆನೋ ಮಾಯಸಂಸಾರದ ಮಾಯನರಿಯದೆ ನಾನು ಮಾಯ ಮೋಹಿತನಾಗಿ ಬಾಯ್ಬಿಡುವೆ ಸತತ 2 ಮಾಯವನು ಕಲ್ಪಿಸಿ ಮಾಯವನೆ ಕುಣಿಸಾಡಿ ಮಾಯದಾಟಾಡುವಿಯೊ ಮಾಯವನು ತುಂಬಿ ಮಾಯಮಹಿಮನೆ ನಿನ್ನ ಮಾಯ ಬಲ್ಲವರಾರು ಮಾಯದಿಂದುಳಿಸೆನ್ನ ಕಾಯೊ ಶ್ರೀರಾಮ 3
--------------
ರಾಮದಾಸರು
ಮಾಯಮತವೊಳಿತಲ್ಲ ನಿನಗೆನಾಯಿ ಜನ್ಮವು ಬಾರದೆ ಬಿಡದಲ್ಲ ಪ ಜಗಕೆ ಕಾರಣ ದೇವ ತಾನಿರಲುಬೊಗಳಿಕೊಂಬೆ ಭೇದವಿಲ್ಲೆಂದುತೆಗೆವನು ಯಮ ಬೆನ್ನ ಚರ್ಮ ಇದುನಗೆಯಲ್ಲ ಕೇಳೋ ತಿಳಿಯೊ ದುಷ್ಕರ್ಮ 1 ಭೇದವಿಲ್ಲೆಂದು ತಿಳಿದು ನೀಮಾದಿಗರ ಮನೆಯಲ್ಲಿ ಉಣಲೊಲ್ಲೆ ಯಾಕೊಸಾಧಿಸಿ ನೋಡಲು ನಿನಗೆ ಇಷ್ಟುಬದುಕುಂಟಾದರು ಉಸುರಲಿನ್ಯಾಕೋ 2 ಅಕ್ಕತಂಗಿಯರಿರಲು ನೀನುರೊಕ್ಕವಿಕ್ಕಿ ಮದುವೆ ಆಗುದ್ಯಾಕೊಚಿಕ್ಕ ತಂಗಿತಾಯಿ ಮೊದಲು ನಿನ್ನಲೆಕ್ಕದಲ್ಲಿ ನೋಡಲು ಒಂದಲ್ಲವೇನೋ3 ಸಂಕರ ಮತಕೆ ನೀ ಹೊಂದಿ ಪಂಕದೊಳು ಬೀಳಬೇಕಲ್ಲೊಸಂಕಟಗೊಳಗಾದಿಯಲ್ಲ ನಿನ್ನಬಿಂಕವ ಮುರಿವರು ಯಮನವರಲ್ಲೊ4 ಇನ್ನಾದರು ಭೇದಮತವನುಚೆನ್ನಾಗಿ ತಿಳಿಯೋ ರಂಗವಿಠಲನುತನ್ನ ದಾಸ್ಯವನು ಕೊಟ್ಟುಉನ್ನತ ಪದವೀವನು ನಿನಗೆ 5
--------------
ಶ್ರೀಪಾದರಾಜರು
ಮಾಯವಾಯಿತು ರತುನ | ಮರೆ ಮೋಸಮಾಡಿ ಪ. ಮಾಯವಾಯಿತು ಎನ್ನ ಮೋಹದ ಮಮ ಗುರುವೆಂತೆಂಬ ರತುನ ನೋಯಲೇಕಿದಕಿನ್ನು ನೃಹರಿ ಉ- ಪಾಯದಿಂದಪಹರಿಸಿವೈದನು ಅ.ಪ. ಕರಗತವಾಗಿ ಇತ್ತು | ಪ್ರಕಾಶವು ಧರಣಿಯಲ್ಲಿ ವ್ಯಾಪಿಸಿತ್ತು ಪರಿಪರಿ ಸಜ್ಜನಕೆ ತತ್ವದ ವರ ಸುಧೆಯನುಣಿಸುತ್ತಲಿತ್ತು ಕರಕರದು ಅಂಕಿತವ ಕೊಡುತಲಿ ಪರಮ ಸಾಧನಗೈಸುತಿತ್ತು 1 ಸುಂದರವಾಗಿ ಇತ್ತು | ದುರ್ಜನರಿಗದ ರಂದ ತೋರದಲೆ ಇತ್ತು ಒಂದೊಂದೂ ಗುಣ ವರ್ಣಿಸಲು ಈ ಮಂದ ಮತಿಗಳವಲ್ಲವಿನ್ನು ತಂದೆ ಮುದ್ದುಮೋಹನಾರೆಂ- ತೆಂದು ಜಗದಲಿ ಮೆರೆಯುತಿತ್ತು 2 ಮಾಸಿ ಪೋದಂಥ ಹರಿ | ದಾಸಕೂಟ ತಾ ಸ್ಥಾಪಿಸುತ ಈ ಪರಿ ವಾಸುದೇವನ ಗುಣಮಣಿಗಳ ರಾಶಿಭೂತದಿ ಅರುಹಿ ಶಿಷ್ಯರ ಸಾಸಿರಾನೂರ್ಮೇಲೆ ಹೆಚ್ಚಿಸಿ ತಾ ಸೂರೆಗೊಂಡಾನಂದವನು3 ಗತಶಾಲಿ ಸಾಹಸ್ರವು | ಮೇಲೆಂಟು ಶತವು ಮತ್ತರವತ್ತೆರಸುವು ವತ್ಸವಿಕ್ರಮ ಪ್ರಥಮ ಮಾಸವು ಪ್ರಥಮ ಪಕ್ಷದ ರಾಮನವಮಿ ಹಿತದಿ ಮಂಗಳವಾರ ಸೂರ್ಯನ ಗತಿಯು ನೆತ್ತಿಯೊಳೋರೆ 4 ಎಷ್ಟು ಪೊಗಳಲಳವು | ಆನಂದ ರತ್ನದ ಗುಟ್ಟರಿಯದು ಜಗವು ಶ್ರೇಷ್ಠ ಗೋಪಾಲಕೃಷ್ಣವಿಠಲನು ಕೊಟ್ಟು ಕಳುಹಿಸಿ ಧರೆಯೊಳ್ಮೆರಸಿ ಥಟ್ಟನೇ ತಾ ಕರೆಸಿಕೊಂಡು ಶ್ರೇಷ್ಠ ಶಯ್ಯೆಯ ಮಾಡಿಕೊಂಡನು 5
--------------
ಅಂಬಾಬಾಯಿ
ಮಾಯಾ ಕಾರ್ಯವಾಕೆಯೆ ಮಿಥ್ಯವೂಈ ರೀತಿುಂದಲಾತ್ಮನಿಛ್ಛೆಯಲಿದುಸೇರಿದಂತಿಹುದಾಗಿ ಭ್ರಾಂತಿಯು ಜಾರುವನ್ನೆಗ ಪೊಳೆಯಲು1ಮುನ್ನ ನೀ ಬಂದೆನೆಂಬಲ್ಲಿ ಪರವiನುಭಿನ್ನವಿಲ್ಲದೆ ಪೂರ್ಣವಾಗಿರಲಿನ್ನು ನಿನಗೆಡೆಯಾವದೂಅನ್ಯ ವಿಲ್ಲದನನ್ಯನೀಶನೆ ನಾನುನಿನ್ನ ಕಾರ್ಯದ ನೇತ್ರಮಾತ್ರಕ್ಕುನ್ನತ ಕೃತಿಯಾಗಿರೇ 2ಮರುಭೂಮಿಯೊಳು ಮುಸುಕೆ ಮಿತ್ರನ ಕಾಂತಿಕೆರೆಯ ನೀರಿನ ಹಾಗೆ ಕಾಣುತಲಿರಲು ನೋಡಿದರುದಕವೆಬರಿಯ ಚೌಳೆಂತಾ ಪರಿಯು ನಿನ್ನಯ ತೋರ್ಕೆನಿರತ ಉಂಟೆಂಬಂತೆ ನಿನ್ನಯ ಮರುಳಿನಿಂ ಮುಂದಿರುತಿರೆ 3ಹೊಳೆಯಲಿಲ್ಲವು ಹುಸಿಯಾಗಿ ನೀ ಮುನ್ನಬಳಿಕ ನಿನ್ನೊಳು ಬದ್ದನೆಂಬೀ ಬಗೆಯು ತನಗೆಂತಪ್ಪುದೂತಿಳಿದು ನೋಡಲು ತಾನೊಬ್ಬನಾತ್ಮನುಕಳೆದು ಕೂಡುವ ಮಾತು ಮಾತ್ರವೆಯಳವಿಗೊಂಡಿರವಿಷ್ಟಕೆ 4ಅರಿವಿನಾ ಘಟ್ಟಿಯಾಗಿಹೆ ನಾ ನಿತ್ಯವರಿವು ಮರವೆಗಳೆಂದು ತೋರ್ದರು ಕರಣಧರ್ಮಗಳಲ್ಲದೆಬೆರದು ಬೇರಾಹ ಬಗೆಯಂದಿಗಿಲ್ಲವುತಿರುಪತಿಯ ಶ್ರೀ ವೆಂಕಟೇಶನೆ ತರುಬಿಕೊಂಡಿರೆ ವಿಶ್ವವಾ 5ಕಂ||ನುಡಿಯಲು ಜೀವನು ಕೋಪದಿಕಿಡಿಗೆದರುವ ಕಂಗಳಿಂದಭಿಮಾನನ ಬಲದಿಂತಡೆಯದೆ ತನು ಜೀವನನಾರ್ಭಟಿಸುತ ವಾದಿಸಿದುದ ಪುಸಿತನ ಬಂತೆಂಬುದರಿಂ
--------------
ತಿಮ್ಮಪ್ಪದಾಸರು
ಮಾಯಾ ಜಯಕೃತಿಗೆ ಮಂಗಳಂ ಶಾಂತಿ ಸ್ವರೂಪಳಿಗೆ ಮಂಗಳಂ ಭಕ್ತರ ಕಂಗಳಿಂದಲಿ ನೋಡಿ ರಂಗನ ಪಾದವ ತೋರ್ವಳಿಗೆ ಪ. ಮಂಗಳಂ ಜಯ ಮಂಗಳಂ ಅ.ಪ. ಅಲ್ಲಿ ವೈಕುಂಠದೊಳಗೆ ಇರಲು ಬಲ್ಲಿದ ಭೃಗು ಋಷಿ ತಾ ಬರಲು ವಲ್ಲಭನ ವಕ್ಷಸ್ಥಳ ಒದೆಯಲು ಹರಿ ಸೊಲ್ಲು ಕೇಳದೆ ಓಡಿ ಬಂದಳಿಗೆ 1 ಕೊಲ್ಲಾಪುರದಲಿ ನಿಂದಳಿಗೆ ಎಲ್ಲರಭೀಷ್ಟವ ಸಲಿಪಳಿಗೆ ಖುಲ್ಲರ ಮರ್ಧಿಪ ಹರಿಯ ವಕ್ಷಸ್ಥಳ ದಲ್ಲಿ ಸದಾ ನೆಲಸಿರ್ಪಳಿಗೆ 2 ಶ್ರೀ ಜಯದೇವಿಗೆ ಶ್ರೀ ಲಕ್ಷ್ಮಿಗೆ ಶ್ರೀ ರುಕ್ಮಿಣೀ ಸತ್ಯಭಾಮಳಿಗೆ ಶ್ರೀ ಪದ್ಮಾವತಿ ನಾಮಕ ನಾನಾರೂಪ ಗುಣಾನ್ವಿತೆಗೆ 3 ಮುಕ್ತಾಮುಕ್ತರಿಗೊಡೆಯಳಿಗೆ ಮುಕ್ತಿಯ ಭಕ್ತರಿಗೀವಳಿಗೆ ಮುಕ್ತಳೆನಿಸಿ ಮುಕ್ತಾಶ್ರಯನಿಗೆ ಆ- ಸಕ್ತಿಯಿಂದ ಸೇವೆ ಮಾಳ್ಪಳಿಗೆ 4 ಗೋಪಾಲಕೃಷ್ಣವಿಠ್ಠಲನ ಆಪಾದ ಮೌಳಿಯ ಗುಣಗಳನು ತಾ ಪರಿಪರಿಯಿಂದ ವರ್ಣಿಸುತ್ತಿದ್ದರು ಅಪಾರವಾಗಿಯೆ ಕಾಂಬಳಿಗೆ 5
--------------
ಅಂಬಾಬಾಯಿ
ಮಾಯಾ ಜೀವಾ ಪ ಕಳವಳಿಸುತ ನಿನ ಕುಲಹಂಕಾರವ ನಳಿದಿರೆ ಯಾಗುವುದಲ್ಲದೆಯಹುದೇ ಅ.ಪ ಮಾನಾ ಅವಮಾನ ಶವಸಮಾನಾ ಈ ನರಕುರಿಗಳು ನಿನಗೇನು ಹೊರಿಕಾರ ಪರಬೊಮ್ಮ ಜ್ಞಾನದೊಳಗೆ ತಾನಿಲ್ಲದೆ ಘನವಾ 1 ನೋಡಿ ಹೋದೆಲ್ಲೋ ಮರೆತಂತಾಡಿ ಓ ಮಾಯ ಜೀವಾ ಮೂಢ ಬುದ್ಧಿಗಳೇ ನೀ ಸಮನಾಡೀ ಆಡಬಾರದಂತಾಟಗಳಾಡುವೆ ಈಡಾಗಿಹುದಿದು ಮುಂದಿನ ಜನ್ಮಕೆ2 ಮಾಯಾ ಜೀವ ನೂಕೋ ಎಂಟಾರರೊಳಗೆ ನೀ ಜೋಕೆ ಠಾಕೂರನು ಶ್ರೀ ತುಲಸಿರಾಮನು ಏಕಾನಂದನಕಂದನೊಳಿಹಪರ 3
--------------
ಚನ್ನಪಟ್ಟಣದ ಅಹೋಬಲದಾಸರು
ಮಾಯಾ ನೋಡಮ್ಮ ಶ್ರೀಯರಸ ನೀಲಮೇಘ ಛಾಯ ಕೃಷ್ಣರಾಯ ತನ್ನ ಪ. ಕಾಶೀಶ ಮೃತ್ಯುಂಜಯಾಯಿ ವಿಷವಲ ಭಂಜನಾದಿಗಳೀತನಿಗಂಜಿ ಕೊಂಬುವರು ಮಂಜುಳಾತ್ಮ ನಿಜಕರಕಂಜದಿಂದ ಪಾದವೆತ್ತಿ ನಿರಂಜನ ತಾ ಲೀಲೆಯಿಂದ 1 ಪುಟಿತಹಾಟಕ ಮಣಿಘಟಿತ ಕಂಕಣಾಂಗದ ಕಟಿಸೂತ್ರಗಳನಿಟ್ಟು ನಟನಂದದೀ ವಟಪತ್ರಶಾಯಿವೋಷ್ಠಪುಟದಿ ಪಾದವನಿಕ್ಕಿ ಕಟಬಾಯೊಳಮೃತವಾ ಸ್ಫುಟವಾಗಿ ಸುರಿಸುತ 2 ಲಿಂಗದೇಹಭಂಗತಾಗಿನಂಗವನ್ನು ದೂರಗೈಸಿ ತುಂಗಮತಿವಂತ ಋಷ್ಯ ಶೃಂಗಾದಿಗಳು ನಿತ್ಯ ಮಂಗಳ ದೇವಿಯರ ಗಂಗೆಯ ಪಡೆದು ಶಿವಂಗ ಶುದ್ಧಿಗೈಸಿ 3 ಗೋಪಿ ಗೃಹ ಕರ್ಮರತಳಾಗಿರಲು ಒಮ್ಮನದಿಂದ ಅಮ್ಮರ ಗಣಾರಾಧಿತ ಕ್ಷಮೆಯನಳದ ಪಾದ ಸುಮ್ಮಗೆ ಕರದೊಳೆತ್ತಿ ಖಮ್ಮಗಿಹದೆಂದು ತನ್ನ 4 ಕರಪಲ್ಲವಾಧೃತ ಲೋಕವಂದ್ಯರೂಪ ಫಣಿ- ಶೇಖರಾದ್ರಿವಾಸ ಭಕ್ತನಾಕ ಭೂರುಹ ನೀಕರಿಸಿ ದುರಿತವ ಸೋಕದಂತೆ ನಮ್ಮನೀಗ ಸಾಕುವ ಪರಮ ಕರುಣಾಕರ ಶ್ರೀ ಕೃಷ್ಣ ತನ್ನ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಯಾಮಯ ಜಗವೆಲ್ಲ ಇದ- ರಾಯತ ತಿಳಿದವರಿಲ್ಲಪ. ಕಾಯದಿಂ ಜೀವನಿಕಾಯವ ಬಂಧಿಸೆ ನೋಯಿಸುವಳು ಸುಳ್ಳಲ್ಲಅ.ಪ. ತಿಳಿದು ತಿಳಿಯದಂತೆ ಮಾಡಿ ಹೊರ- ಒಳಗಿರುವಳು ನಲಿದಾಡಿ ಹಲವು ಹಂಬಲವ ಮನದೊಳು ಪುಟ್ಟಿಸೆ ನೆಲೆಗೆಡಿಸುವಳೊಡಗೂಡಿ 1 ಯೋಷಿದ್ರೂಪವೆ ಮುಖ್ಯ ಅ- ಲ್ಪಾಸೆಗೆ ಗೈವಳು ಸಖ್ಯ ದೋಷದಿ ಪುಣ್ಯದ ವಾಸನೆ ತೋರ್ಪಳು ಜೈಸಲಾರಿಂದಶಕ್ಯ2 ಕರ್ತ ಲಕ್ಷ್ಮೀನಾರಾಯಣನ ಭೃತ್ಯರ ಕಂಡರೆ ದೂರ ಚಿತ್ಪ್ರಕೃತಿಯಿಂದ ಪ್ರೇರಿತಳಾಗಿ ಪ- ರಾರ್ಥಕೆ ಕೊಡಳು ವಿಚಾರ3
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಯಾವ್ಯಾತಕೋ ಮಾಧವನೆ ಮಾಯಾವ್ಯಾತಕೋ ಪ ಮಾಯವ್ಯಾತಕೆ ಎನ್ನ | ಪ್ರೀಯ ಸಖನೆ ಲೋಕನಾಯಕ ನೀನಿರೆ ಕಾಯೆ ಕಂಡವರಾ ಅ.ಪ. ಆರು ವರ್ಗಗಳೆಂಬ ಕ್ರೂರರಿಗೊಪ್ಪಿಸಿದೂರಾ ನೋಡುವದು ಉದಾರ ಉಚಿತವೆ 1 ಇಂದಿರೆಯರಸ ಗೋವಿಂದ ನಿನ್ನಯ ಪಾದದ್ವಂದ್ವ ನಂಬಿದವನ ಕುಂದೆಣಿಸುವರೇ 2 ಸುಪರ್ಣ ವಾಹನ ಮೋಹನ್ನ ವಿಠ್ಠಲನೇ 3
--------------
ಮೋಹನದಾಸರು
ಮಾರ ಎನ್ನ ಸಂ ಹಾರ ಮಾಡಲು ದಂಡು ತಂದನೆ ಪ ಮುಂದಾಗಿ ಬಂದೊದಗಿದವು 1 ಅಂತರಂಗದಿ ಮನೋಭ್ರಾಂತಿ ಬಿಡಿಸುವವ ಸಂತನೀಗಲೆ ಬಂದಿರುವನೆ2 ಭೃಂಗಗಳೇ ರಣರಂಗದಿ ಕೂಗುವ ಸಂಗತಿಗೆ ಬೆದರಿದೆನೆ 3 ಶುಕವೇರಿ ಧನುವಿನೋಳ್ ವಿಕಸಿತ ಸಮಬಾಣ ಮುಖದೊಳು ಗುರಿಯನ್ನೆ ನೋಡುವ 4 ಆವಾಗಲೂ ವಾಸುದೇವವಿಠಲನ ಪಾದವೆ ಗತಿಯೆಂದಿರುವೆನೆ 5
--------------
ವ್ಯಾಸತತ್ವಜ್ಞದಾಸರು