ಒಟ್ಟು 7252 ಕಡೆಗಳಲ್ಲಿ , 131 ದಾಸರು , 4420 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಗುರುಮಹಾರಾಯಾ ದಮ್ಮಯ್ಯ ನಿನ್ನ ಪಾದಕೆ ಬಿದ್ದೆನು ತೋರಿಸೋ ಶ್ರೀ ಗುರುನಾಥಾ ಪ ತೋರುವ ತೋರಿಕೆಗಳೆಲ್ಲವ ಹಿಂಗಿಸೋ ಷಡ್ವೈರಿಗಳಾಗಿಹ ಚೋರರ ಬಾಧೆಯ ಬಲವನು ಭಂಗಿಸೋ ತತ್ವಾಮೃತ ಸಾರ ನಿತ್ಯಸುಖದೊಳನ್ನ ನಿಲ್ಲಿಸೋ 1 ಅಮೃತಾನ್ನವ ಮುಂದಿಡೋ ಜೋಡಾಗದ ಊಟವನ್ನುಣ್ಣಿಸೋ ನವನೂತನವಾಗಿಹ ಆಡದಿರುವ ಆಟವಾಡಿಸೋ ನಿನ್ನರ್ಚನೆ ಪೂಜೆಯ ಮಾಡುವಾನಂದವುದಯ ಮಾಡಿಸೋ 2 ಚರಣತೀರ್ಥ ಪ್ರಸಾದವನು ಕೃಪೆಮಾಡೋ ಸಜ್ಜನರಾ ಸ್ಮರಣೆಯ ಕರ್ಣಾಭರಣವ ನೀಡೋ ನಾನಾಮೃತದ ಚರಣ ರಜಪ್ರಕಾಶದೊಳಿಡೋ ವಿಮಲಾನಂದ ವಿಧಿ ನೋಡೋ 3
--------------
ಭಟಕಳ ಅಪ್ಪಯ್ಯ
ಶ್ರೀ ಗುರುವರದೇಂದ್ರರ ಸ್ತೋತ್ರಗಳು ಅಂದಣೇರಿದ ವರದೇಂದ್ರ ಮುನಿಪರ ನಿಂದು ಪಾಡುವರಫವೃಂದ ತರಿವರ ಪ ಅಂದದಿ ಭೂಸುರ ಸಂದಣಿ ಮಧ್ಯದಿ ಚಂದದಿ ಬಹು ಕರ್ಮಂದಿಗಳರಸ ಅ.ಪ ಶ್ರೀ ಮಧ್ವಮತಾಂಬುಧಿ ಸೋಮ ನಿಷ್ಕಾಮ ತಾಮಸಮತಕÀಂಜಸ್ತೋಮ ನಿಧೂಮ ಆ ಮಹಾಭಕ್ತ ಕುಮುದ ಪ್ರೇಮ ಸತ್ಕಾಮ ಕಾಮಿತ ಕಲ್ಪದ್ರುಮಗುರುಸಾರ್ವಭೌಮ ರಾಮ ಪದಾಂಬುಜ ಪ್ರೇಮದಿ ಭಜಿಸುವ ಭೂಮಿಸುರರ ಹೃತ್ತಾಮಸಹಾರಾ 1 ಉದಿತಾಕರ್À ಸಂಕಾಶ ವಿಧಿಕುಲಾಧೀಶ ಮುದದಿ ಭಜಿಸುವ ಭಕ್ತಹೃದಯನಿವಾಸ ಸದಮಲಭಕ್ತಙÁ್ಞನ ಉದಜವಿಕಾಸ ವಿಧಿಕುಲದ್ವೇಷಿ ಕುಮುದ ತತಿನಾಶ ವಿಧವಿಧದಲಿ ಹರಿಪದ ಭಜಿಸುವ ಮತಿ ವದಗಿ ಪಾಲಿಸು ಹೃದಜನಸದಯಾ 2 ಕರುಣಾನಿಧಿಯೆ ನಿನ್ನ ಚರಣ ಸೇವಕರ ಜರಮರಣಾದಿ ದೋಷತ್ವರಿತ ಪರಿಹಾರ ಶರಧಿ ವಿಹಾರ ನಿರುತದಿ ಹರಿಯನಾಮ ಸ್ಮರಿಸುವಧೀರ ವರದೇಶ ವಿಠಲನ ಕರುಣದಿ ಧರೆಯೊಳು ಮೆರೆಯುವ ಯತಿಕುಲವರಿಯ ಸುಚರಿಯಾ 3
--------------
ವರದೇಶವಿಠಲ
ಶ್ರೀ ಗುರುವರರಾಯ ಪ. ಏನೆಂಬೆ ನಾ ನಿಮ್ಮ ಕರುಣಕ್ಕೆ ಎಣೆಗಾಣೆ ಶ್ರೀ ಗುರುವರರಾಯ ಅ.ಪ. ಭೂಸುರ ಜನ್ಮದಲಿ ದಾಸತ್ವದಿಂದ ಮೆರೆವೊ | ಶ್ರೀ ಗುರುವರರಾಯ ಫಣಿ ಶ್ರೀ ಗುರುವರರಾಯ 1 ಶ್ರೀ ತಂದೆ ಮುದ್ದುಮೋಹನವಿಠಲದಾಸ | ಶ್ರೀ ಗುರುವರರಾಯ ಪ್ರೀತಿಯಿಂದ ಹರಿಯ ಅಂಕಿತ ಕೊಡುವಂಥ | ಶ್ರೀ ಗುರುವರರಾಯ 2 ಶ್ರೀ ಗುರುವರರಾಯ ವಿಘ್ನಗಳನೆ ತರಿದು ಪ್ರಾಜ್ಞಾ ಮೂರುತಿಯ ತೋರೈ | ಶ್ರೀ ಗುರುವರರಾಯ 3 ಮಂದಜ್ಞರಿಗೆ ಜ್ಞಾನ ತಂದಿತ್ತು ರಕ್ಷಿಪ | ಶ್ರೀ ಗುರುವರರಾಯ ಬಂದೆನು ನಿಮ್ಮ ಪಾದದ್ವಂದ್ವವೇ ಗತಿಯೆಂದು | ಶ್ರೀ ಗುರುವರರಾಯ 4 ಭವ | ಶ್ರೀ ಗುರುವರರಾಯ ತರಳನ ಕಾಯ್ದ ನರಹರಿಯ ಭಜಿಸುವಂಥ | ಶ್ರೀ ಗುರುವರರಾಯ 5 ಅಪರಾಧವೆಣಿಸದೆ ಸುಪಥಮಾರ್ಗವ ತೋರೈ | ಶ್ರೀ ಗುರುವರರಾಯ ಗುಪಿತ ಮಹಿಮ ನಿನ್ನ ಜಗದೊಳರಿವರ್ಯಾರು | ಶ್ರೀ ಗುರುವರರಾಯ 6 ಅಗಣಿತ ಮಹಿಮೆಯ | ಶ್ರೀ ಗುರುವರರಾಯ ಸುರನರರಿಂದಲಿ ವಂದನೆಗೊಂಬುವ | ಶ್ರೀ ಗುರುವರರಾಯ 7 ಅಂತರಂಗದಿ ಆನಂದವನಿತ್ತ ಮಹಿಮ | ಶ್ರೀ ಗುರುವರರಾಯ ಶಾಂತಮೂರುತಿ ನಿಮ್ಮ ಶರಣೆಂದು ಭಜಿಸುವೆ | ಶ್ರೀ ಗುರುವರರಾಯ 8 ನೀತ ಗುರುವೆ ನಿಮ್ಮ ನಂಬಿದೆ ಸಲಹಯ್ಯ | ಶ್ರೀ ಗುರುವರರಾಯ ಖ್ಯಾತ ಶ್ರೀ ಗೋಪಾಲಕೃಷ್ಣವಿಠಲ ಪ್ರಿಯ | ಶ್ರೀ ಗುರುವರರಾಯ 9
--------------
ಅಂಬಾಬಾಯಿ
ಶ್ರೀ ಗುರುವರ್ಯರಿಗೆ ಜಯಮಂಗಳ ನಿತ್ಯ ಭೋಗಿಶಯನಪ್ರಿಯಗೆ ಶುಭಮಂಗಳ ಪ. ಆನಂದರತ್ನರು ಜ್ಞಾನಪ್ರಕಾಶ ಎಂದು ನಾನಾ ವಿಧದಿ ಬಿರುದು ಪೊತ್ತವಗೆ ಶ್ರೀನಿವಾಸನನು ಧ್ಯಾನವ ಮಾಳ್ಪಂಥ ಜ್ಞಾನಪೂರ್ಣರಾದ ಗುರುಗಳಿಗೆ 1 ಪರಮಪ್ರಿಯರು ಪರಿಮಳರೆಂದೆನಿಸುತ ಪರಿ ನಾಮವ ಧರಿಸಿಹಗೆ ನರಸಿಂಹನನು ಹೃತ್ಸರಸಿಜದಲಿ ಕಂಡು ಹರುಷವ ಪಡುವಂಥ ಗುರುಗಳಿಗೆ 2 ತಂದೆ ಮುದ್ದುಮೋಹನವಿಠ್ಠಲನೆಂಬಂಕಿತ ಚಂದದಿಂದ ಗುರುಗಳಿಂ ಪಡೆದವಗೆ ಬಂದ ಭಕ್ತರಿಗೆಲ್ಲ ಅಂಕಿತಕೊಟ್ಟು ಭವ ಬಂಧನವ ಬಿಡಿಸುವ ಗುರುಗಳಿಗೆ 3 ಚಂದ್ರನ ತೆರದಿ ಪರಮಾರ್ಥ ಚಂದ್ರೋದಯವ ನಿರ್ಮಿಸುವರಿಗೆ ಚಂದದಿಂದ ಪರತತ್ವ ಪೇಳುವ ಸುಂದರ ಮೂರುತಿ ಗುರುಗಳಿಗೆ 4 ಅಪಾರ ಕರುಣಾಜಲಧಿ ಎಂದೆನಿಪರಿಗೆ ಶ್ರೀಪತಿ ಪಾದವ ತೋರ್ವಂಗೆ ಗೋಪಾಲಕೃಷ್ಣವಿಠ್ಠಲನ ಧ್ಯಾನವನಿತ್ತುಕಾಪಾಡುವಂಥ ಶ್ರೀ ಗುರುಗಳಿಗೆ 5
--------------
ಅಂಬಾಬಾಯಿ
ಶ್ರೀ ಗುರುವೇ ನೀ ತೋರಿಸೋ ದಯದಿಂದ ಲೆನಗೆ | ಬೇಗದಿ ಬಂದೆನ್ನ ದೇವನೀಗ ಪ ತೈಲ ಯಂತ್ರ ದೊಳಿಪ ಪಶುವಿನಂದದಿ ಜೀಯಾ | ಹಲವು ಜನ್ಮವ ತಾಳಿದೆನಯ್ಯಾ 1 ನಿನ್ನ ಸ್ಮರಣೆ ಮರೆದು ನಾನಾ ಉಪಾಸನೆ ವಿಡಿದು | ಬನ್ನ ಬಟ್ಟೆನೋ ಯಚ್ಚರ ಜರಿದು2 ಭವ ಬಂಧನ ಹರಿವಾ | ಸೂರೆಗೊಳಲಿಲ್ಲಾ ಭಕ್ತಿ ಸುಖವಾ3 ಸರ್ವಾಪರಾಧವಾ ಕ್ಷಮಿಸಿ ಯನ್ನುದ್ಧಾರವಾ | ಉರ್ವಿಲಿ ಮಾಡು ಪಿಡಿದು ಕರವಾ 4 ಇಹಪರ ಸಹಕಾರ ಕರುಣಾಬ್ದಿ ಪಾರಾವಾರಾ | ಮಹಿಪತಿ ಸುತ ಪ್ರಭು ಉದಾರಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ಗುರುವೇ ಮಹಾಮಹಿಮಾ ಪೂರ್ಣಾತ್ಮಸುಖಧಾಮಾ ಬಾಗಿ ನಮಿಪೆ ಪ್ರಶಾಂತಕಾಮಾ ಬೇಗ ನೀ ಬೋಧಿಸೈ ಅನುಭಾವಪೂರ್ಣ ಜ್ಞಾನದಾ ದಾರಿಯಾ ತೋರು ನೀ ದಯೆದೋರು ಜ್ಞಾನ ನಿಧಿಯೇ ವಂದಿಪೆ ಬೋಧಿಸೈ ಸಂಸಾರ ಘೋರವಾರಿಧಿ ದಾಂಟಿಪಾ ಧೀರ ನೀ ನಿಜರೂಪನಿಷ್ಠ ವಿಭುವೇ ವಂದಿಪೆ ಬೋಧಿಸೈ ಗುರುಸಾರ್ವಭೌಮ ನಿನ್ನ ಈ ಪಾದವಾ ನಂಬಿದೆ
--------------
ಶಂಕರಭಟ್ಟ ಅಗ್ನಿಹೋತ್ರಿ
ಶ್ರೀ ಗೋಪಾಲದಾಸರು ಕಾಪಾಡು ಕಾಪಾಡು | ಗೋಪಾಲರಾಯಾ ಪ ತಾಪತ್ರಯಗಳ ಕಳೆದು | ಶ್ರೀ ಪತಿಯ ತೋರಿಅ.ಪ. ಕಾಮಮದ ಮಾತ್ಸರ್ಯ ಸೀಮೆ ಮೀರುತ ಚರ್ಯಕಾಮಿಸುತ ಮನ್ಮನದ ಸೀಮೆಯೊಳು ನೆಲೆಸೀ |ನೇಮ ನಿಷ್ಠೆಗಳಳಿದು ಭೂಮಗುಣಿ ಸುಸ್ತವನಕಾಮನಕೆ ಪ್ರತಿ ಬಂಧ ಸ್ತೋಮದಂತಿಹುದೊ 1 ಕರ್ಮ ಕೆಸರ ಕಳೆಯುತಲೀ 2 ಭಕ್ತಿಸಾಕಾರಿ ಹರಿ | ಭಕ್ತಿ ಗುರು ಭಕ್ತಿಗಳವ್ಯಕ್ತಗೈವುದು ಮನದಿ ತ್ಯಕ್ತದೋಷಾದಿ |ಗುಪ್ತ ಮಹಿಮಾ ಗುರು ಗೋವಿಂದ ವಿಠ್ಠಲನವ್ಯಕ್ತ ಕಾಣುವ ಹದನ ಬಿತ್ತರಿಸೊ ಕರುಣಾ 3
--------------
ಗುರುಗೋವಿಂದವಿಠಲರು
ಶ್ರೀ ಗೋಪಾಲದಾಸರು ನಿನ್ನ ದಯದಿಂದಲೇ ಎನ್ನ ಜೀವನವು ಘನ್ನ ಗೋಪಾಲ ವಿಠ್ಠಲ ದಾಸರಾಯ ಪ ತುಂಗೆ ಕೃಷ್ಣೆ ಮಧ್ಯರಂಗ ಕ್ಷೇತ್ರದಿ ಮುದದಿ ತುಂಗ ವಿಜಯಾರ್ಯರ ಪದಂಗಳಿಗೆ ಎರಗಿ ಗಂಗೆಪಿತ ಮಾತಂಗ ವರದನಾಮನ ಅಂತ ರಂಗದಿ ನೋಡಿ ಗುಣಗಳನು ಪಾಡಿದೆಯೊ 1 ಅನುಜರಿಗು ಅಚಲ ಮಾತೆಗು ಶರಣು ಸುಜನರಿಗು ಮೌನಿ ಪಂಡಿತರಿಗೂ ಎನ್ನಂಥ ಪಾಮರಗು ಜ್ಞಾನ ಸುತತ್ವ ಸನ್ಮಾರ್ಗ ಬೋಧಿಸಿ ಜಗ ನ್ನಾಥನ ಮನಸಿನ ಅನುಭವಕೆ ತಂದೆ 2 ಬೇಸರದಿ ನಾ ಸೀತಾಪತಿಪಲ್ಲಿಯಲಿ ಮಲಗೆ ಏಸು ಕರುಣವೊ ದಾಸರಾಜ ನೀ ಬಂದು ವ್ಯಾಸಮುನಿಮಠ ಗುರುಪೂಜೆಗೆ ಕರೆದೊಯ್ದು ದಶಪ್ರಮತಿ ಭಾಷ್ಯಪಠನಾರ್ಚನೆಯ ತೋರಿಸಿದೆ 3 ಗೋ ಎನಲು ಗರುಡವಾಹನ ಪೀಡೆ ಪರಿಹರಿಪ ಪಾ ಎನಲು ಪರಮಪೂರುಷ ಪಾಲಿಸುವ ಲ ಎನಲು ಲಕ್ಷ್ಮೀಶ ನಿಖಿಳೇಷ್ಟಗಳನೀವ ಅನವರತ ಗೋಪಾಲದಾಸರಿಗೆ ಶರಣು 4 ಆನಂದಮುನಿಹೃಸ್ಥ ವನಜಸಂಭವಪಿತ ಪ್ರ ಸನ್ನ ಶ್ರೀನಿವಾಸ ಜಗನ್ನಾಥ ನಿನ್ನ ಪಾದ ಸಂಸ್ಮರಿಸುವ ಸುಜನರನು ಅನವರತ ಪಾಲಿಸುವ ಸಂದೇಹವಿಲ್ಲ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಗೌರೀವರೇಂದ್ರನೇ ನಮೋ ನಮೋ ನಮೋ ಯೋಗಮಯನೆ ಭೋಗದಯನೆ ನಾಗಾಭರಣನೆ ಭೋಗೀ ಭೂಷಣ ವ್ಯಾಘ್ರವಸನನೆ ಪ ವಾಸುದೇವ ಪ್ರಿಯನೇ ಸದಾ ಶಿವಾ ಶಿವಾ ಶಶಾಂಕಧರನೇ ಕ್ಲೇಷಹಾರನೇ ದೋಷನಾಶನೇ ಭಾಸುರ ಪ್ರಕಾಶಾ ತೋಷದಾತನೇ 1 ಪಂಚ ಪ್ರಾಣಧಾರನೇ ಪರಾತ್ಪರಾವರಾ ಸಂಚಿತ ಅಘದೋಷಹರಣ ಸರ್ವಸುಖಕರಾ ಪಂಚವದನಾ ಪಂಚಶರಹರಾ 2 ಜ್ಞಾನಮಯ ಸುಚೇತನಾ ಕೃತಾಘನಾವನಾ ಸ್ವಾನುಭವ ಸ್ವಶಾಂತಿದಾತ ಧ್ಯಾನಿಪಾಜನಾ ದೀನೋದ್ಧಾರಕಾ ವಿಜ್ಞಾನಮಯನೇ 3
--------------
ಶಾಂತಿಬಾಯಿ
ಶ್ರೀ ಗ್ರಂಥಮಾಲಿಕ ಮಧ್ವಸ್ತೋತ್ರ ಜಯ ಮಧ್ವ ಮುನಿರಾಯ ನಿನ್ನ ಚಾರು ತೋಯಜಾಂಘ್ರಿಯಲಿ ನಾ ಶರಣು ಅಹ ಮಾಯೇಶನಿಗೆ ಪ್ರಿಯ ಮುಖ್ಯಪ್ರಾಣನೇ ಎನ್ನ ಕರ್ಮ ದೋಷ ಮನ್ನಿಸಿ ಕಾಯೋ ಪ ಭಾವಿ ವಿರಂಚಿ ಮಹೋಜ ಜಯಾ - ದೇವಿ ಸಂಕರ್ಷಣ ತನೂಜ ಸೂತ್ರ ಸಂವಿದ್ ಬಲಾದಿ ಸುಭ್ರಾಜ ಶ್ರಧ್ಧಾ - ದೇವಿ ಹೃದಬ್ಜವಿರಾಜ ಅಹ ಇನಶಶಿ ಋಷಿಕುಲ ತಿಲಕ ಶ್ರೀವರನಂಘ್ರಿ ವನರುಹ ನಿಷ್ಠ ಹನುಮಭೀಮ ಮಧ್ವ 1 ಜಯತು ಶ್ರೀಹರಿ ರಾಮಚಂದ್ರ ಭಕ್ತ ಜಯದ ಮೋದದ ಅರ್ತಿಹಂತ ಕೃಷ್ಣ ಜಯತು ಕಾರುಣ್ಯ ಸಮುದ್ರ ಭಕ್ತ ಜಯದ ಕ್ಷೇಮದ ಜ್ಞಾನ ಸುಖದ ಅಹ ರಾಮವಚನ ಕಾರ್ಯರತ ಹನುಮಗೆ ನಮೋ ನಮೋ ಕುರುಕುಲ ಹರ ಭೀಮ ಕೃಷ್ಣೇಷ್ಟಗೆ 2 ಜಯತು ಶ್ರೀಹರಿ ವೇದವ್ಯಾಸ ಭಕ್ತ ಜಯದ ಹೃತ್ತಿಮಿರ ನಿರಾಸ ಮಾಳ್ಪ ಸೂರ್ಯ ಸ್ವಕಾಂತಿ ಪ್ರಕಾಶ ಮಧ್ವ - ರಾಯಗೆ ನಿಜಗುರು ಶ್ರೀಶ ಅಹ ವೈದಿಕಶಾಸ್ತ್ರದಿಂದಲೇ ವೇದ್ಯ ಶ್ರೀಶನ ಹಿತದಿ ನಮಗೆ ತೋರ್ಪಾನಂದ ಮುನಿಗೆ ನಮೋ 3 ಅಸುರರು ಪುಟ್ಟಿ ಭೂಮಿಯಲಿ ಸಾಧು ಭೂಸುರರೆಂದು ತೋರುತಲಿ ವೇದ ಶಾಸ್ತ್ರಕ್ಕೆ ಅಪಾರ್ಥ ಪೇಳಿ ಮೋಹ ವಶವಾಗೆ ಸುಜನರಲ್ಲಿ ಅಹ ಶ್ರೀಶನಾಜೆÉ್ಞ ಯತಾಳಿ ಮಧ್ವಾಭಿದಾನದಿ ಮೋಸ ದುರ್ಮತ ಧ್ವಾಂತ ಭಾಸ್ಕರನುದಿಸಿದಿ 4 ಮಧ್ಯಗೇಹರ ಮನೆಯಲ್ಲಿ ಮುಖ್ಯ ವಾಯುವೇ ಶಿಶುರೂಪ ತಾಳಿ ಬಲ ಸಂನ್ಯಾಸ ಸುಪ್ರಮೋದದಲಿ ಅಹ ಮಧ್ಯಗೇಹರ ಪುರುಷೋತ್ತಮತೀರ್ಥರ ಭಾಗ್ಯಕ್ಕೆ ಎಣೆವುಂಟೇ ಮೂರ್ಲೋಕದೊಳಗೆ 5 ಪುರುಷೋತ್ತಮಾಚ್ಚ್ಯುತಪ್ರೇಕ್ಷ ತೀರ್ಥ ಗುರುಗಳ ಸೇವಿಸಿ ಮೋಕ್ಷ ಮೋದ ಉರುಗುಣಸಿಂಧು ನಿರ್ದೋಷನಾದ ಶಿರಿವರನು ಕಮಲಾಕ್ಷ ಅಹ ಭಾರಿ ಪ್ರಸಾದವ ದಯದಿ ಬೀರಲ್ಲೇವೆ ದೊರೆಯುವದೆಂದು ಬೋಧಿಸಿದೆಯೋ ಮಧ್ವ 6 ಶ್ರೀಶ ವೇದವ್ಯಾಸನಲ್ಲಿ ಗೀತಾ ಭಾಷ್ಯ ಸಮರ್ಪಿಸಿ ಅಲ್ಯಿಲ್ಲಿ ಉಪ - ದೇಶಕೊಂಡು ಮತ್ತಿಲ್ಲಿ ಬಂದು ವ್ಯಾಸನಭಿಪ್ರಾಯದಲ್ಲಿ ಅಹ ಸರಿಯಾದ ತತ್ವಬೋಧಕ ಗ್ರಂಥಗಳ ಮಾಡಿ ಬೀರಿದ ಅಧಿಕಾರಿಗಳಿಗೆ ನೀ ದಯದಿ ಮೂಲಗ್ರಂಥಗಳು ಮೂವತ್ತು ಏಳು 7 ಳಾಳುಕ ಪ್ರಿಯತಮವಾದ್ದು ಭಕ್ತಿ ಪರ - ಕೈವಲ್ಯ ತೋರುವುದು ಅಹ ಪುನರಪಿ ಬದರಿಗೆ ಪೋಗಿ ಶ್ರೀಶನ ಕಂಡು ಧನ್ಯ ಮನದಿ ಬಂದು ಶಾಸ್ತ್ರ ಬೋಧಿಸಿದಿ 8 ಸೂತ್ರ ಭಾಷ್ಯಗೀತಾ ತಾತ್ಪರ್ಯ ಸೂತ್ರಾಣುಭಾಷ್ಯ ವಿಷ್ಣು ತತ್ವನಿರ್ಣಯಾ ಋಗ್ಭಾಷ್ಯ ತತ್ವೋ - ಭಾಗವತ ತಾತ್ಪರ್ಯ ಅಹ ನಿರ್ಣಯ ಶ್ರೀಮಹಾಭಾರತ ತಾತ್ಪರ್ಯ ಕರ್ಮ ನಿರ್ಣಯ 9 ಸನ್ನ್ಯಾಯ ವಿವರಣ ತಂತ್ರಸಾರ ಅನುವ್ಯಾಖ್ಯಾನವು ಸದಾಚಾರ ಸ್ಮøತಿ ಅನುತ್ತಮ ದ್ವಾದಶಸ್ತೋತ್ರ ಯತಿ ಪ್ರಣವ ಕಲ್ಪದಿ ಪ್ರಣವಸಾರ ಅಹ ಉಪನಿಷದ್ಭ್ಬಾಷ್ಯವು ಹತ್ತು ಉತ್ಕøಷ್ಟವು ಷಟ್ಟ್ರಶ್ನಕಾಠಕ ಬೃºದಾರಣ್ಯಾಖ್ಯ 10 ಮನನ ಮಾಡಲು ಐತರೇಯ ಪುನಃ ಶ್ರವಣ ಮಾಡಲು ತೈತಿರೀಯ ಸಂ - ಚಿಂತಿಸಲು ಈಶಾವಾಸ್ಯ ಬಹು ಘನವಿದ್ಯಾಯುತವು ಛಾಂದೋಗ್ಯ ಅಹ ಅರ್ಥವಣಮಾಂಡೂಕ್ಯ ತಲವ ಕಾರೋಕ್ತವು ಸತತ ಸಂಸ್ಮರಣೀಯ ಜ್ಞಾನದಾಯಕವು11 ಕೃಷ್ಣಾಮೃತ ಮಹಾರ್ಣದಿ ಬಾಲ ಕೃಷ್ಣ ಜಯಂತಿ ನಿರ್ಣಯದಿ ಭಕ್ತಿ ಜ್ಞಾನ ಸಾಧನವ ಬೋಧಿಸಿ ನರ - ಸಿಂಹನ ನಖಸ್ತುತಿ ಮುದದಿ ಅಹ ಪಠಿಸೆ ಭದ್ರದ ಕಥಾಲಕ್ಷಣದಲಿ ವಾದ ಮಾಡುವ ಬಗೆ ತೋರ್ದಿಯೈನೃಹರಿಯ ನಮಿಸಿ 12 ಅವಿದ್ಯಾ ಆವೃತವು ಬ್ರಹ್ಮ ಅದ್ಯಸ್ಥ ಜಗತೆಂಬ ಮತವ ತರಿದು ಮಾಯಾವಾದ ಖಂಡನವ ಮಾಡಿ ನ್ಯಾಯ ಪ್ರಮಾಣ ಲಕ್ಷಣವ ಅಹ ನುಡಿದು ಪ್ರಪಂಚ ಮಿಥ್ಯಾತ್ವಾನುಮಾನ ಖಂ - ಡನವ ಉಪಾಧಿಖಂಡನ ಸಹಗೈದಿ 13 ಪಂಚಭೇದ ಸತ್ಯ ಹರಿಯೇ ಸರ್ವೋತ್ತಮ ಸುಹೃದ ಶಿರಿ ವರನೇ ಸ್ವತಂತ್ರ ಪ್ರಮೋದ ಸ್ವಾಮಿ ಸೃಷ್ಟಾ ಪಾತಾ ಅತ್ತಾತ್ರಾಹ ಅಹ ತತ್ವ ವಿವೇಕವು ತತ್ವ ಸಂಖ್ಯಾನವು ನಿತ್ಯ ಸುಪಠನೀಯ ಹರಿ ಸರ್ವೋತ್ಕøಷ್ಟ 14 ನೀನಿಂತು ನುಡಿಸಿದೀ ನುಡಿಯು ನಿನ್ನ ಸನ್ನಿಧಾನದಿ ಸಮರ್ಪಣೆಯು ನಾನು ಏನೂ ಓದದ ಮಂದಮತಿಯು ನೀನು ಪೂರ್ಣಪ್ರಜ್ಞನು ಜೀವೋತ್ತಮನು ಅಹ ಎನ್ನ ಕೊರತೆಗಳ ನೀಗಿಸಿ ಹೃಸ್ಥಶ್ರೀ 'ಪ್ರಸನ್ನ ಶ್ರೀನಿವಾಸ' ನ್ನೊ ಲಿಸೋ ಎನಗೆ ಜೀಯ 15
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಜಗನ್ನಾಥದಾಸ ನಮಿಪೆ ಗುರುರಾಜ ಸಾತ್ವಿಕವಪುಷ ಪ ಈ ಜಗದೊಳು ನಿಮಗೆಣೆಗಾಣೆ ಸತತ ನಿ - ವ್ರ್ಯಾಜದಿ ಹರಿಯ ಗುಣೋಪಾಸನೆ ಮಾಳ್ಪ ಅ.ಪ. ಹರಿದಾಸ ಕುಲವರ್ಯರೆನಿಸಿ ಕಲ್ಪತರುವಂದದಿ ಚರ್ಯ ಚರಿಸುತ ಧರೆಯೊಳು ಮೆರೆವ ಮಹಾತ್ಮರ ಚರಣೇಂದ್ರೀವರಯುಗ್ಮ ದರುಶನ ಮಾಳ್ಪರ ದುರಿತರಾಶಿಗಳಿರಗೊಡದೆ ನೆರೆ ಪರಮಮುಕ್ತಿಯ ದಾರಿ ತೋರುತ ಸಿರಿಸಹಿತ ಹರಿ ತೋರುವಂದದಿ ಕರುಣ ಮಾಳ್ಪ ಸುಗಣಮಹೋದಧಿ 1 ರವಿಯು ಸಂಚರಿಸುವಂತೆ ಭೂವಲಯದಿ ಕವಿಶ್ರೇಷ್ಠ ಚರಿಸಿದೆಯೋ ಅವಿರುದ್ಧ ತ್ರಯಿಜ್ಞಾನ ಪ್ರವಹಂಗದಲಿ ಭುವನೈಕ ವೇದವದ್ಯನ ಶ್ರವಣಭಕುತಿಯಿಂದ ದಿವಸ ದಿವಸದಿ ಪ್ರೀತಿ ಬಡಿಸುತ ಧ್ರುವವರನಂಘ್ರಿಗಳಿಗರ್ಪಿಸಿ ಭುವನ ಪಾವನ ಮಾಡಲೋಸುಗ ಅವನಿ ತಳದಿ ವಿಹರಿಸುತಿಹ ಗುರು 2 ಅಹೋ ರಾತ್ರಿ ಕ್ಷಣ ಬಿಡದೆ ಸನ್ಮನ ಹೃ - ದ್ಗುಹಾಧೀಶನನು ಬಿಡದೆ ಅನುದಿನ ಸ್ಮರಿಸುತ ಸಹನದಿ ಶಮದಮಯತು ನಿಯಮಗಳನ್ನು ವಹಿಸಿ ಶ್ರೀದವಿಠಲನಂಘ್ರಿಯ ಮಹಿಮೆ ತೋರುತ ಪೂಜಿಸುತ ಬಲು ಮಹಿತಪೂರ್ಣಾನಂದತೀರ್ಥರ ವಿಹಿತ ಶಾಸ್ತ್ರಗಳರಿತು ಬೋಧಿಪ 3
--------------
ಶ್ರೀದವಿಠಲರು
ಶ್ರೀ ಜಗನ್ನಾಥದಾಸರ ಸ್ತೋತ್ರ ರಾಯರ ನೋಡಿರೈ ದಾಸರಾಯರ ಪಾಡಿರೈ |ಮಾಯ ರಮಣಪ್ರಿಯಾ |ಇವರ ಮನದೊಳಗೆ ಸುಳಿದಾ | ಶ್ರೀರಂಗವಲಿದ ಪ ಮೋದ |ಕಾಣಿಸುವದು ಜಗದೊಳಗೆ, ಇವರಿಗೆ ಕೀರುತಿಯ |ಪುಣ್ಯ ಮೂರುತಿಯು |ಧೇನಿಸಿ ಎರಡನೆ ಜನ್ಮದಿ, ಈತನೆ ಶಲ್ಯಾ |ತತ್ವವ ಬಲ್ಲಾ 1 ಮೂರನೆ ಜನ್ಮದಿ ಕೊಂಡಪ್ಪ, ರಾಜನದೂತ | ಸುಪ್ರಖ್ಯಾತಾ |ಸಾರ ಜನರ ಪ್ರಿಯ ಶ್ರಿ ಪುರಂದರದಾಸಾರ್ಯ |ಸುತ ಆಶ್ಚರ್ಯ |ತೋರುವ ಐದನೆ ಜನ್ಮದಿ ಶ್ರೀಹರಿದೂತ |ಗುರು, ಜಗನ್ನಾಥ 2 ನರಹರಿಯ ತುತಿಪ ವಂದಂಶದಿ ಸಾಂಶರೆಂದುಖಂಬದಿ ನಿಂದು |ಮೆರೆವರು ಊಧ್ರ್ವಪುಂಢವು ತುಲಸಿಯಮಾಲಾ |ಅಕ್ಷ ಸುಶೀಲಾ |ಪರಿಪರಿ ಸೇವಿಪ ಜನರಿಗಭೀಷ್ಟವ ಗೆರೆವಾ |ದುರಿತವ ತರಿವಾ 3 ದೇಶದೇಶವ ಜನರುಗಳೆಲ್ಲರು ಬಂದು |ನೋಡಲು ನಿಂದು |ಸೋಸಿಲಿ ದರುಶನಕೊಳಲವರಿಗೆ ಆನಂದ |ವಾಹುದು ಛಂದ |ಮೀಸಲಹುದು ಮನ, ಕೈಸೇರುವ ಶ್ರೀಪತಿಯೂ |ಹರ ಅಘತತಿಯು 4 ಎಷ್ಟು ಪೇಳಲಿ ಇವರ ಮಹಿಮೆ ತುತಿಸಲ್ಕೆ |ವಶವಲ್ಲ ಮನಕೆ |ನಿಷ್ಠಿಯಿಂದಿವರನು ತುತಿಸಲು ಶ್ರೀವರತುಷ್ಟಾ |ಪಾಪವು ನಷ್ಟಾ |ಸೃಷ್ಟಿಯೊಳಗೆ ಶ್ರೀಶ ಪ್ರಾಣೇಶವಿಠಲನ ದಾಸ |ದಾಸೋತ್ತಂಸ 5
--------------
ಶ್ರೀಶಪ್ರಾಣೇಶವಿಠಲರು
ಶ್ರೀ ಜಗನ್ನಾಥದಾಸರು ನಮೋ ದಾಸವರ್ಯ ಪೂತಾತ್ಮ ಪದ ನಮೋ ದೇವತಾತ್ಮ || ಪ ರಮಾ ರಮಣಪದ ಅಮಲ ಭಜನೆ ಕೊಡುನಮೋ ನಮೋ ಭವ್ಯಾತ್ಮ ಅ.ಪ. ನಾರಸಿಂಹ ಸತ್ಪೋರನೆಡರ ಪರಿಹಾರ ಪದದಿ ದೀಕ್ಷಪಾರುಮಾಳ್ಪಕೂಪಾರ ಭವವ ಸತ್ಸರಾಮೃತ ಕೃತದಕ್ಷ |ಭಾರ ನಿನ್ನದಾಪಾರ ಕೃಪೆಯ ನೀತೋರ್ವುದೆಂಬ ಮಹರಕ್ಷಬಾರಿ ಬಾರಿ ನಿರ್ಧಾರ ಮನದಿ ಹಾರೈಸುತಿಹೆನೂ ಹರಿಪಕ್ಷ 1 ಮಾನವೀಶ ಪ್ರಾಣೇಶ ದಾಸನುತ ಆನತೇಷ್ಟ ತೋಷಗಾನಲೋಲ ಮೌನೀಶ ಪದಾಂಬುಜ ಆನಮಿಪರ ಆಶೇಷ |ಹೀನವೆನಿಪ ಕುಯೋನಿ ನಿವಾರಕ ಧ್ಯಾನಗಮ್ಯ ಸುವಿಶೇಷಪ್ರಾಣನಾಥ ಮಹಿಮೋನ್ನತಿ ಗಾನದಿ ಕಳೆದೆ ದೋಷ 2 ಪಾದ ಮೂರ್ತಿ ಪಾದ ತೋರೊ ದೇವ 3
--------------
ಗುರುಗೋವಿಂದವಿಠಲರು
ಶ್ರೀ ಜಂಬುಖಂಡಿ ವಾದಿರಾಜಾಚಾರ್ಯರ ಸ್ತೋತ್ರ ಕಂಡು ಬಹಳ ಧನ್ಯನಾದೆನೋ |ಸಿರಿಮಂಗಳಾತ್ಮರ ಪ ಪಾದ ||ಪುಂಡರೀಕ ವೀಕ್ಷಣ ಮಾತ್ರ ಘ |ತುಂಡುಗೈಸಿ ಪೊರೆವರನ್ನ ಅ.ಪ. ಸುಕೃತ ಜಂಬುಖಂಡಿ ಶ್ರೀನಿ |ವಾಸಾರ್ಯಾಬ್ಧಿ ಸಂಭವ ||ಕೋವಿದಾಗ್ರಣಿಯ ಆದ |ಶ್ರೀ ವಾದಿರಾಜಾಚಾರ್ಯರನ್ನ 1 ಭೂತದಯಾ ಶೀಲ ದಮನಮೋ |ಪೇತರಾಗಿ ಪೃಥ್ವಿಯೊಳು ಶ್ರೀ |ನಾಥನೊಲುಮೆಯನ್ನು ಪಡೆದು |ಖ್ಯಾತ ಭುವನ ಪಾವನ ಮಾಳ್ಪರಾ 2 ಶ್ರೀಶ ಪ್ರಾಣೇಶ ವಿಠಲ ಹೃದಯಾ |ಕಾಶದಲ್ಲಿ ಸಿರಿಯು ಸಹಿತ ||ವಾಸವಾಗಿ ತೋರಿ ಪೊಳೆವ |ಭಾಸುರ ಕೀರ್ತಿಲಿ ಮೆರೆವರನ್ನೆ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀ ಜಯತೀರ್ಥ ಸ್ತೋತ್ರ ಯತಿಕುಲಮುಕುಟ ಶ್ರೀ ಜಯತೀರ್ಥ ಸದ್ಗುಣಗಣ ಭರಿತ ಅತಿಸದ್ಭಕುತಿಲಿ ನುತಿಪಜನರ ಸಂ - ತತ ಪಾಲಿಸುತಲಿ ಪೃಥಿವಿಲಿ ಮೆರೆವ ಪ ಶ್ರೀ ಮಧ್ವಮತ ವಾರಿಧಿನಿಜಸೋಮ ಅಗಣಿತಸನ್ಮಹಿಮ ಆಮಹಾಭಕ್ತಾರ್ತಿಹ ನಿಷ್ಕಾಮ ಈ ಮಹಿಸುರರನು ಪ್ರೇಮದಿ ಪಾಲಿಪ ಕಾಮಿತ ಫಲದ 1 ಮಧ್ವಮುನಿಗಳಗ್ರಂಥಕೆ ವ್ಯಾಖ್ಯಾನ ರಚಿಸಿದ ಸುಙÁ್ಞನ ವಿದ್ಯಾರಣ್ಯನ ಸದ್ವಾದÀದಿ ನಿಧನ ಗೈಸಿದಗುಣಪೂರ್ಣ ಅದ್ವೈತಾಟವಿ ದಗ್ಧಕೃತಾನಲ ಸದ್ವೈಷ್ಣವ ಹೃತ್ಪದ್ಮಸುನಿಲಯ 2 ಲಲಿತಾ ಮಂಗಳವೇಡಿಪÀ ರಘುನಾಥ ವನಿತಾಸಂಜಾತ ಮಳಖೇಡ ಕಾಗಿನಿ ತೀರನಿವಾಸ ಮಾಡಿಹ ಮೌನೀಶನಲವರದೇಶ ವಿಠಲನ ವಲಿಮೆಯಲಿ ಇಳಿಯೊಳು ಬೋಧಿಪ ಅಲವ ಬೋಧಾಪ್ತ 3
--------------
ವರದೇಶವಿಠಲ