ಒಟ್ಟು 8509 ಕಡೆಗಳಲ್ಲಿ , 134 ದಾಸರು , 5107 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷುಮಿ ನಾರಾಯಣ ಪ ಮೋಕ್ಷದಾಯಕ ಗುರು | ಸಚ್ಚಿದಾನಂದಾ ನಮೊ 1 ಕವಿಜನ ಪೂಜಿತ | ಶಿವಸಖನ ಜಪಿತ 2 ಲೇಸು ಸುಬೋಧಾಯನೆ | ದಾಸರ ದಾಸ ನಮೋ 3 ನಿತ್ಯ ಪರ | ವಸ್ತು ಸದಾನಂದ 4
--------------
ಸದಾನಂದರು
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮಿ ನರಹರಿ ವಿಠಲ | ರಕ್ಷಿಸೋ ಇವಳ ಪ ತ್ರ್ಯಕ್ಷ ಬಿಂಬನೆ ಸ್ವಾಮಿ | ಪಕ್ಷಿವಹ ಕರುಣಾಕಟಾಕ್ಷ ದಿಂದೇಕ್ಷಿಸುತ | ಕಾಪಾಡೊ ಹರಿಯೇ ಅ.ಪ. ಅಕ್ಷಿ ಮೂರುಳ್ಳ ನಿಟಿ | ಲಾಕ್ಷನೈ ರೂಪದಲಿಅಕ್ಷಿ ಗೋಚರನಾಗಿ | ಸ್ವಚ್ಛ ತೈಜನನೇದೀಕ್ಷೆ ದಾಸತ್ವದಲಿ | ಲಕ್ಷ್ಯವಿಟ್ಟಿಹಳ ಉ-ಪೇಕ್ಷಿಸದೆ ದಯತೋರ್ದೆ | ಲಕ್ಷ್ಮಿ ನರಸಿಂಹಾ 1 ಮನ್ಯು ಸೂಕ್ತದಿಂ ಬ | ಹ್ಪನ್ನ ಭೊಕ್ತøವಿನಿಂದಚೆನ್ನಾಗಿ ಸೇವಿತನೆ | ಅನ್ನಂತ ಮಹಿಮಾಬಿನ್ನವಿಪೆ ನಿನಗೆ ಕಾ | ರುಣ್ಯ ಮೂರುತಿ ಹರಿಯೆಕನ್ಯೆಗಭಯದನೆ ಆ | ಪನ್ನ ಪರಿಪಾಲಾ 2 ಲೌಕಿಕದಿ ಬಹುಪರಿಯ | ಸೌಖ್ಯಗಳ ನೀನಿತ್ತುಪ್ರಾಕ್ಕು ಕರ್ಮವ ಕಳೆದು | ಕಾಪಾಡೊ ಹರಿಯೇ |ಚೊಕ್ಕ ಭಕ್ತಿ ಜ್ಞಾನ | ಅಕ್ಕರದಿ ತವಪದದಿಉಕ್ಕುವ ಪರಿಮಾಡು | ರಕ್ಕಸಾಂತಕನೇ 3 ನೀಚೋಚ್ಚ ತರತಮವು | ಪಂಚ ಬೇದವನರುಹಿಸಂಚಿತವ ದಹಿಸೂವ | ಹಂಚಿಕೆಯನಿತ್ತೂಅಂಚೆವಹಪಿತನೆ ಹೃ | ತ್ಪಂಕಜದಿ ನಿನಕಾಂಬಸಂಚಿಂತನೆಯ ನೀಯೊ | ಪಂಚ ಪ್ರಾಣಾತ್ಮಾ 4 ಪಾವಮಾನಿಯ ಪ್ರೀಯ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಭಾವದಲಿ ತೋರೋ |ನೀವೊಲಿಯುತಿವಳಿನ್ನ | ಕಾವುದೆನೆ ಬಿನ್ನೈಪೆಗೋವಿದಾಂಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ದೇವಿ ಕಾದಿರುವಳು ರುಕ್ಮಿಣಿ ಕೃಷ್ಣ ಬರುವನೆಂದು ಪ. ಕರವ ಪಿಡಿವನೆಂದು ಅ.ಪ. ವಿಪ್ರನ್ನ ಕಳುಹಿರುವೆನು ಕ್ಷಿಪ್ರದೊಳು ಗುಡಿಯೊಳಿಹೆನು ಅಪ್ರಮೇಯ ನಿನ್ನಡಿಗಳನ್ನು ಸುಪ್ರಕಾಶ ನಂಬಿರುವೆನೆಂದು 1 ಶಿಶುಪಾಲನೊಲ್ಲೆನೆಂದು ವಸುಧೀಶ ನೀನೆ ಗತಿಯೆಂದು ಹಸುಳೇಯ ಸಲಹು ಎಂದು ಬೆಸಸಿಹೆನು ಪತ್ರವೆಂದು 2 ರಥವೇರಿ ಬರುತಲಿಹನೊ ಪಥದೊಳು ಕಾದಿರುವನೊ ರತಿಪತೀ ಪಿತನ ಪದವ ಅತಿಶಯದಲಿ ಕಾಣುವ ತವಕದಿ 3 ಶಂಕಾತುರಂಗಳಿಂದ ಶಂಕರೀಯಪೂಜೆಗೈದು ಕಿಂಕಿಣಿಯ ನಾದದಿಂದ ಶಂಕರಾದಿವಂದ್ಯ ಬರುವ ಪಥದಿ ಬಂದು 4 ಬಂದಾನೋ ಬಾರನೋ ಎನುತಾ ಇಂದಿರೆಯ ಅರಸನ್ಹೊರತು ಪೊಂದಲಾರೆನನ್ಯರನೆನುತ ಸುಂದರೀಮಣಿ ಕೃಷ್ಣನಾಗಮ ನೋಡುತ 5 ದ್ವಾರಕಿಯಾ ನಾಥ ಬಂದು ಪಾರುಗಾಣಿಸುವನೆಂದು ಚಾರುಕರದೊಳೆತ್ತಿ ಎನ್ನ ದ್ವಾರಕೆಗೊಯ್ವ ಶ್ರೀ ಶ್ರೀನಿವಾಸನೆಂದು 6
--------------
ಸರಸ್ವತಿ ಬಾಯಿ
ಲಕ್ಷ್ಮೀ ನಾರಾಯಣ ವಿಠಲ | ಪೊರೆಯ ಬೇಕಿವಳಾ ಪ ವಾಹನ ದೇವ | ಲಕ್ಷುಮಿಯ ರಮಣಾ ಅ.ಪ. ಸೃಷ್ಟಿ ಸ್ಥಿತಿ ಸಂಹಾರ | ಅಷ್ಟಕ್ಕು ಕಾರಣನೆಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೇ |ಶಿಷ್ಟ ಸದಾಚಾರ | ನಿಷ್ಠೆಯಲಿ ಗೈಯ್ಯುವಳುಶಿಷ್ಟೇಷ್ಟ ಹರಿಯೆ ಸದ | ಭೀಷ್ಟಗಳಗರೆಯೋ 1 ವಿೂಸಲೆಂದೆನಿಸಿರುವ | ದಾಸತ್ವದಾಕಾಂಕ್ಷೆಸಾಸಿರಕ್ಕೋರ್ವರಿಗೆ | ಲೇಸು ಪುಟ್ಟವುದೋಈ ಸಮಯದಲ್ಲೀಕೆ | ಆಶಿಸುತ್ತಿಹಳಯ್ಯಕೇಶವನೆ ಒಲಿದಿವಳ | ದಾಸ್ಯ ಸ್ವೀಕರಿಸೋ 2 ಶುದ್ಧ ತರತಮ ಜ್ಞಾನ | ಮಧ್ವೇಶನಲಿ ಭಕುತಿಇದ್ವದಕೆ ತೃಪ್ತಿಯಿಂ | ಬದ್ಧ ವೈರಾಗ್ಯಾಸಿದ್ಧಿಸುತ ಸಾಧನದಿ | ಬದ್ಧ ಕಂಕಣಳೆನಿಸೊಅದ್ವಿತೀಯನೆ ಹರಿಯೆ | ಮಧ್ವಾಂತರಾತ್ಮಾ 3 ಮುಪ್ಪುರದ ವೈರಿನುತ | ಸರ್ಪಶಯನನೆ ದೇವಾಸ್ವಪ್ನ ಸೂಚನೆಯಂತೆ | ಗೋಪ್ಯದಂಕಿತವಾಸುಪ್ತೀಶ ಇತ್ತಿಹೆನೊ | ಒಪ್ಪಿ ಕೈಪಿಡಿ ಇವಳಗುಪ್ತ ಮಹಿಮನೆ ದೇವ | ಆಪ್ರಕಟ ಹರಿಯೇ 4 ಶರ್ವಾದಿ ದಿವಿಜೇಡ್ಯ ಶಾರ್ವರೀಕರ ಪಾಲದುರ್ವಾದಿ ತಿಮಿರಕ್ಕೆ ಮಾರ್ತಾಂಡ ರೂಪೀದರ್ವಿ ಜೀವಿಯ ಕಾವ | ನಿರ್ವಹಣೆ ನಿನ್ನದೋಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಮನೋಜ್ಞ ವಿಠಲ | ಕಾಪಾಡೊ ಇವಳಾ ಪ ಪಕ್ಷೀಂದ್ರವಹ ಹರಿಯೆ | ಇಕ್ಷುಶರ ಪಿತನೇ ಅ.ಪ. ಸುಕೃತ | ದಿಂದ ಫಲ ತೊರೆತಿಹುದುಮಂದಾಕೀನಿ ಜನಕ | ಇಂದಿವಳ ಪೊರೆಯೆ 1 ಹರಿಯೆ ಪರತರನೆಂಬ | ಸುರರ ಮನೊ ಭಾವದಲಿಹರಿ ಗುರು ಹಿರಿಯರಲಿ | ವರಭಕ್ತಿಯುತಳೂತರತಮದ ಸುಜ್ಞಾನ | ವರಭೇದ ಪಂಚಕದಅರಿವಿತ್ತು ಪೊರೆ ಇವಳ | ಮರುತಾಂತರಾತ್ಮ 2 ಕಂಸಾರಿ ಪೂಜೆ ಎಬಂಶವನು ತಿಳಿಸುತ್ತ | ಕಾಪಾಡೊ ಹರಿಯೇಸಂಶಯವುರಹಿತ ತ | ತ್ವಾಂಶ ದರಿವಿತ್ತು ವಿಪಾಂಸಗನು ಹರಿಯಪದ | ಪಾಂಸುವನೆ ತೊಡಿಸೋ 3 ಅಕ್ಷಯ ಫಲದಾತಈಕ್ಷಿಸೋ ಇವಳ ಕರು | ಣೇಕ್ಷಣದಿ ಹರಿಯೇ 4 ಗೋವತ್ಸ ದನಿಕೇಳಿ | ಧಾವಿಸುವ ಪರಿಯಂತೆಶ್ರೀವರನೆ ನೀನಾಗಿ | ಓವಿ ಪೊರೆ ಎಂಬಾಆವ ಈ ಬಿನ್ನಪವ | ನೀವೊಲಿದು ಸಲಿಸುವುದುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ವೆಂಕಟೇಶ ವಿಠಲ | ರಕ್ಷಿಸೋ ಇವಳಾ ಪ ವಿಶ್ವ ವ್ಯಾಪಕನೇ ಅ.ಪ. ಪುಟ್ಟಿ ಸತ್ಕುಲದಲ್ಲಿ | ತೊಟ್ಟು ಸತ್ಸಿದ್ಧಾಂತ ಇಷ್ಟ ಪಡುತಿಹಳಯ್ಯ | ಕಷ್ಟದಾಸತ್ವಾಇಷ್ಟ ಮೂರುತಿ ನೀನು | ತೈಜಸೀ ರೂಪದಲಿಸ್ಪಷ್ಟ ತೋರಿದ ಹರಿಯೆ | ಇತ್ತೆ ಉಪದೇಶಾ 1 ಮರುತ ಮತದಲಿ ದೀಕ್ಷೆ | ಹಿರಿಯರನು ಸರಣೆಯಲಿನಿರುತ ಆಸಕ್ತಿಯನು | ಕರುಣಿಸುತ ಭವದಾಶರಧಿಯನೆ ದಾಟಿಸುವ | ಮಾರ್ಗವನೆ ತೋರೊ ಹರಿಕರುಣಾಂಬುನಿಧಿಯೆಂದು | ಮೊರೆ ನಿನಗೆ ಇಡುವೇ 2 ಕಷ್ಟ ನಿಷ್ಠೂರಗಳ | ಸುಷ್ಠುಸಮತೆಲಿ ಉಂಬಶ್ರೇಷ್ಠ ಮತಿಯನೆ ಇತ್ತು | ರಕ್ಷಿಸೋ ಇವಳಾ |ಅಷ್ಟ ಸೌಭಾಗ್ಯಗಳ | ಕೊಟ್ಟು ಕಾಯಲಿ ಬೇಕೊಕೃಷ್ಣ ಮೂರುತಿ ಹರಿಯೆ | ಭಕ್ತ ವತ್ಸಲ್ಲಾ 3 ಪರಮಾರ್ಥ ಸಾಧನಕೆ | ಗುರು ಕರುಣಬೇಕೆಂಬವರಮತಿಯ ಕರುಣಿಸುತ | ಪೊರೆಯ ಬೇಕಿವಳಾಗರುಡ ಗಮನನೆ ದೇವ | ಸರ್ವಾಂತರಾತ್ಮಕನೆಕರುಣದಿಂ ಕೈ ಪಿಡಿದು | ಉದ್ಧರಿಸೋ ಇವಳಾ 4 ಪಾವಮಾನಿಯ ಪ್ರೀಯ | ಭಾವದಲಿ ಮೈದೋರಿಜೀವಿಯನು ಉದ್ಧರಿಸೋ | ದೇವ ದೇವೇಶಾಗೋವತ್ಸದನಿ ಕೇಳಿ | ಆಪು ಪೊರೆವಂತೆ ತೋರಿಗೋವಿದಾಂಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಸ್ತುತಿಗಳು ಆರೋಗಿಸು ತಾಯೇ ಮೋದದಿ ಕ್ಷೀರಾಂಬುಧಿ ತನಯೆ ಪ. ಸಾರಸನಯನೆ ಮದವಾರಣಗಮನೆ ಸಾರಿ ಚೀಡುವೆ ಸರಾಗದೊಳೀಕ್ಷಿಸು ಅ.ಪ. ಉಪ್ಪು ಉಪ್ಪಿನಕಾಯಿಕೋಸುಂಬರಿ ಹಪ್ಪಳ ಸಂಡಿಗೆಯ ತಪ್ಪದೆ ತಂದೊಪ್ಪಿಸುತಿಹೆ ಎನ್ನಪ್ಪನೊಡನೊಪ್ಪದಿ ವ ುಂಡಿಸಿ 1 ಚಕ್ಕುಲಿ ಕರಜಿಕಾಯಿ ಅತಿರಸ ಸಕ್ಕರೆ ಹೋಳಿಗೆಯಂ ನಲಿಯುತ 2 ದಧಿ ನವನೀತ ಘೃತ ಮಧುಸಾರವೆನಿಪ ಪರಮಾನ್ನ ಕ್ಷೀರಶರಧಿಸುತೆ ನೀ ನೀರಸ ಸಹಿತಾಪಾರ ಕೃಪಾಪಾಯದೊಳೀಕ್ಷಿಸಿ3 ಸವಿನೋಡುತೆ ನಲಿದು4 ನಿಗಮಾಗಮ ವಿನುತೇ ನಮಿಸುವೆ ನಗಧರ ಸುಪ್ರೀತೆ ಗುಣಗಳ ಬಗೆಗೊಳಿಸುತ್ತಲಿ 5
--------------
ನಂಜನಗೂಡು ತಿರುಮಲಾಂಬಾ
ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀದೇವಿ ಸ್ತೋತ್ರ ಎಂದು ಬರುವಳೋ ಗೋ-ವಿಂದನೊಲ್ಲಭೆ ಲಕ್ಷ್ಮೀ ರಂಗನ ಸನ್ನಿಧಿಗೆ ಪ ಮಂಗಳಾಂಗಿ ಸರ್ವಾಂಗ ಬಳಲಿ ಮುಖಕಂದಿ ಕಳೆಗುಂದಿದಂತೆ | ಬಲು ವ್ಯಥೆಯಂತೆ ಅ.ಪ ಶೇಷನ ಶಿಖಿ ಮ್ಯಾಲೆವಾಸುದೇವರು ಲಕ್ಷ್ಮೀ ಸಮೇತರಾಗಿರುತಿರಲುಆ ಸಮಯದಿ ಭೃಗುಮುನಿ ಬಂದು ಕೋ-ಪಿಸೆ ಸೋಕಿಸಿದನು ಪಾದವಾ | ವಕ್ಷ ಸ್ಥಳವಾ 1 ಥಟ್ಟನೆ ಇಳಿದಾಳುಸಿಟ್ಟಿನಿಂದಲಿ ಬಹು ಧಿಕ್ಕಾರ ಮಾಡಿದಳುಲಕ್ಷ್ಮೀರಮಣನೆಂಬೊ ಬಿರುದು ನಿಮಗೆ ಈಹೊತ್ತಿಗೆ ಅಲ್ಲೆಂದಾಳು | ತೆರಳಿದಳು 2 ನಿಲ್ಲದೆ ಪೊರಟಾಳುಫುಲ್ಲಾಕ್ಷಿ ಮನದೊಳು ತಲ್ಲಣಿಸುತಿರಲುವಲ್ಲಭನರಿಯದ ಸ್ಥಳವಿಲ್ಲದಿರೆ ತಾಯಿ ಕೊಲ್ಲಾಪುರಕೆ ಬಂದಾಳು | ನೆಲೆಗೊಂಡಾಳು 3 ಜಾತೆ ಬಾಮಾರನ ಮಾತೆ ಬಾ ವಾರಿಜದಳನೇತ್ರೆ ಬಾಮೂರ್ಲೋಕದೊಳಗೆ ನೀ ಪ್ರಖ್ಯಾತೆ ಬಾರೆಂದು ಶ್ರೀಮ-ನ್ನಾರಾಯಣನೆ ಕರೆಯಲು | ನಸುನಗೆಯೊಳು 4 ಜಯ ಲಕ್ಷ್ಮೀರಮಣಗೆಜಯ ಶ್ರೀನಿವಾಸಗೆ ಜಯ ಮೋಕ್ಷದಾಯಕಗೆಜಯತು ಕೊಲ್ಹಾಪುರದೊಳ್ ನೆಲಸಿದವಳಿಗೆಶ್ರೀದೇವಿಯಳಿಗೆ5 ವೆಂಕಟ ವಿಠಲವೈಕುಂಠಪತಿ ಲಕ್ಷ್ಮೀ ಶಾಂತ ಏಕಾಂತದೊಳುಶಂಖಚಕ್ರಧರ ಸರ್ವಮಂಗಳಕಾರಸಂಚಿತಾಗಮದೂರನು ಮಲಗಿರುವನು6
--------------
ವೆಂಕಟೇಶವಿಟ್ಠಲ
ಲಕ್ಷ್ಮೀದೇವಿ ಸ್ತೋತ್ರ ದಯಮಾಡೆ ದಯಮಾಡೆ ||ಹಯಮುಖನಿಗೆ ಅತಿ ಪ್ರಿಯ ಕಮಲಾಲಯೆ ಪ ಭವ ಜಲಧಿಯೊಳಗೆ ತ್ಪರ |ಸಲಹು ನಿನ್ನ ಕರಜಲಜದಿ ಪಿಡಿದು 1 ನಳಿನ ಭವಾದ್ಯರ ಸಲಹುವಿ ಈಪ್ಸಿತ |ಫಲವಿತ್ತು ಕರುಣದಲಿ ಮಹಲಕುಮಿ 2 ಕ್ಷೋಣಿ ಭಣಗು ನಾನೋರ್ವನು ನಿನ್ನಯ |ಧ್ಯಾನವೆ ಪಾಲಿಸು ಮಾಣದೆ ಜವದಿಂ3 ಶರಣು ಪೊಕ್ಕವರ ಜರಿದರೆ ನನ್ನಯ |ಬಿರುದಿಗೆ ಬಾಹದೆ ಕೊರತೆಯು ಜಾನಕಿ 4 ಮಾನಿನಿ ಎನ್ನನು ಹೀನತೆ ಎಣಿಸದೆ 5
--------------
ಗುರುಪ್ರಾಣೇಶವಿಠಲರು
ಲಕ್ಷ್ಮೀನಾಥ ವಿಠಲ | ರಕ್ಷಿಸೊ ಇವನಾ ಪ ಇಕ್ಷುಚಾಪನ ಪಿತನೆ | ಅಕ್ಷರನೆ ದೇವಾ ಅ.ಪ. ನಿತ್ಯ ತೃಪ್ತಾತ್ಮಾಅರ್ಥಿಯಲಿ ಲಕ್ಷ್ಮಿಯನು | ಭಕ್ತಿಯಿಂ ಸೇವಿಸುತಪ್ರಾರ್ಥಿಸುವ ತವಪ್ರೀತಿ | ಲಕ್ಷ್ಮಿವಲ್ಲಭನೇ 1 ಅಪ್ರಮೇಯನ ಪತ್ನಿ | ಲಕ್ಷ್ಮಿಯನೆ ತುತಿಸುತ್ತಸುಪ್ರಸಾದವ ಕೊಂಡು | ಗೃಹಕಾಗಿ ತೆರಳೀಅಪ್ರತಿಮ ಸಂತಸದಿ | ಹರಿಯ ಕೊಂಡಾಡುತ್ತಅಪ್ಪವೆಂಕಟನನ್ನು | ಹಾಡಿ ಹೊಗಳಿದನಾ 2 ವೇದಾಂತ ವೇದ್ಯ ಹರಿ | ವೇದ್ಯವಾಗಲಿ ಇವಗೆಮೋದ ತೀರ್ಥರ ಮತದ | ಸಾದು ತತ್ವಗಳುಹಾದಿಯಾಗಲಿ ಮುಕುತಿ | ಸಾಧನ ಸುಮಾರ್ಗಕ್ಕೆಬಾದರಾಯಣ ದೇವ | ಮಾಧವನೆ ಹರಿಯೆ 3 ಕರ್ಮಮರ್ಮವ ತಿಳಿಸಿ | ದುಷ್ಕರ್ಮ ಪರಿಹರಿಸಿನಿರ್ಮಮನ ಮಾಡಯ್ಯ | ಬ್ರಹ್ಮಾದಿ ವಂದ್ಯಪ್ರಮ್ಮೆಯಂಗಳ ಬೋದ | ಸಲ್ಲಲಿತವಾಗಿರಲಿಅಮ್ಮಹಾ ಪರದೈವ | ಹರಿಯೆಂದು ತಿಳಿಸೊ4 ಅದೈತ ತ್ರಯದರಿವು | ಬುದ್ದಿಗೇ ನಿಲುಕಿಸುತಸಿದ್ಧಾಂತ ಪಥವೆಂಬ | ಹೆದ್ದಾರಿ ನಡಸೋಕೃದ್ಧಬಳಮರ್ದನನೆ | ಮುದ್ದು ನರಹರಿದೇವಅದ್ವಿತೀಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀರಮಣ ಮರೆಯ ಹೊಕ್ಕೆ ರಕ್ಷಿಸೈ ಪಾಂಡುಪಕ್ಷನೆ ಪ ಪಕ್ಷಿವಾಹನ ದುಷ್ಟಶಿಕ್ಷ ಮೋಕ್ಷದಾಯಕ ಶಿಷ್ಟರಕ್ಷ ಅ.ಪ ತರಳ ಧ್ರುವನ ಪೊರೆದೆಯೆಲೊ ಕರಿಮೊರೆಯ ಕಾಯ್ದಯ್ಯ ಕರುಣದಿ ಕುರುಪ ಸಭೆಯಲಿ ದ್ರೌಪದಿ ಮೊರೆಯನಿಡಲಾಕೆಮಾನವ ಕಾಯ್ದಿ 1 ನರಗೆ ಸಹಯನಾಗಿ ಸಾರ ಧರೆಯ ಗೆಲಿಸಿದಿ ನಿರುತದಿ ಕರವ ಪಿಡಿದಿ ಪರಮ ಪ್ರೇಮದಿ ಒರೆದೆಲೊ 2 ಇಂದು ಎನಗೆ ಸಂಧಿಸಿದ ಮಹ ಬಂಧನವ ನಿವಾರಿಸೈ ಪಾದ ನಂಬಿದೆ ಕಂದನನು ಪೊರೆ ಶ್ರೀರಾಮ3
--------------
ರಾಮದಾಸರು
ಲಕ್ಷ್ಮೀರಮಣನೆ ರಕ್ಷಿಸೆನ್ನನು ಅಧೋಕ್ಷಜ ಹರಿ ಪ ಮಂದ ಬಿಡಿಸಿ ಸಲಹೋ ದೇವ ಇಂದು ಮುಂದು ಎನಗೆ ನೀ ಗತಿ ಎಂದು ನಂಬಿದೆ ಮಂದರಧರ ಗೋವಿಂದ ಮುಕುಂದ1 ಗರುಡಗಮನ ವಾಸುದೇವ ನಿರುತ ನಿನ್ನ ಭಜಿಪ ಭಕ್ತರ ಸ್ಮರಣೆ ಪಾಲಿಸೊ ಪರಮಪುರುಷ ಹರಿ ಶರಧಿಶಯನ2 ದೇಶದೇಶ ತಿರುಗಿ ಬಹಳ ಬೇಸರದಲೆ ಬಳಲಿದವರ ಕ್ಲೇಶಗಳನೆ ಕಳೆದು ಪರಮೋಲ್ಲಾಸ ನೀಡಿದ ಸಾಸಿರನಾಮದ ಒಡೆಯನೆ ವೆಂಕಟ 3 ಕ್ಷೀರವಾರಿಧಿ ಶಯನದೇವ ಮಾರಪಿತ ಮಹಾನುಭಾವ ಶರಧಿ ಪಾರುಗಾಣಿಸೋ ಪರಿಸರ ನೊಡೆಯನÉ ಉರಗಶಯನ 4 ಶಂಖು ಚಕ್ರಧಾರಿ ಶ್ರೀಹರಿ ಪಂಕಜಾಕ್ಷರೊಳು ವಿಹಾರಿ ಶೌರಿ ಶಂಕರಾನುತ ಪಂಕಜಲೋಚನ ವೆಂಕಟರಮಣ 5 ಕಪಟ ಸೂತ್ರಧಾರಿ ಚಪಲ ಬುದ್ಧಿಯ ಬಿಡಿಸೊ ಶೌರೀ ಅಪರಿಮಿತ ಮಹಿಮೆಗಳ ತೋರಿ ನಟಿಸಿ ಮೆರೆವ ಸಟೆಯಲ್ಲವೊ ನಾರದ ಮುನಿ ಸೇವಿತ 6 ಕಮಲಾಪತೆ ಪ್ರಿಯ ಜೀಯ ಕಮಲಸಂಭವ ಜನಕದೇವ ಕಮಲನಾಭ ವಿಠ್ಠಲ ಕಾಯೋ ಶ್ರಮವ ಹರಿಸೊಸುಮನಸರೊಡೆಯನೆ ಸುರಮುನಿ ಸೇವಿತ 7
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀಶ ನರಹರಿ ವಿಠ್ಠಲನೆ ಸಲಹೊ ಪ ಪಕ್ಷೀಂದ್ರ ವಾಹನನೆ ಈಕ್ಷಿಸುತ ಕರುಣದಿಂರಕ್ಷಿಸಲಿ ಬೇಕಿವಳ ಲಕ್ಷ್ಮಣಾಗ್ರಜನೇ ಅ.ಪ. ದೀನಜನ ಮಂದಾರ ಜ್ಞಾನದಾಯಕನೆ ಸುರ-ಧೇನು ಭಕ್ತರಿಗೆ ಕಾಮಿತವ ಕೊಡುವಲ್ಲಿ |ನೀನಿವಳಿಗೇ ಮೋಕ್ಷಜ್ಞಾನವನೇ ಪಾಲಿಸುತಸಾನುರಾಗದಿ ಸಲಹೊ ಪ್ರಾಣಾಂತರಾತ್ಮ 1 ಸೃಷ್ಟಿ ಸ್ಥಿತಿ ಸಂಹಾರ ಕರ್ತನೀನೆಂದೆನಿಪೆವೃಷ್ಟಿಕುಲ ಸಂಪನ್ನ ಜಿಷ್ಣು ಸಖ ಹರಿಯೇ |ಕಷ್ಟನಿಷ್ಠೂರಗಳ ಸಹಿಸುವಡೆ ಧೈರ್ಯವನುಕೊಟ್ಟು ಕೈ ಪಿಡಿಯುವುದು ಕೃಷ್ಣ ಮೂರುತಿಯೇ2 ಪತಿಯೆ ಪರದೈವ ವೆಂಬುನ್ನತದ ಮತಿಯಿತ್ತುಹಿತದಿಂದ ಹರಿಗುರು ಸೇವೆಯಲಿ ರತಿಯಸತತ ನಿನ್ನಯ ನಾಮ ಸ್ಮøತಿಯನ್ನೇ ವದಗಿಸುತಕೃತಿಪತಿಯೆ ನೀನಿವಳ ಉದ್ಧರಿಸು ಹರಿಯೇ 3 ತಾರತಮ್ಯ ಜ್ಞಾನ ವೈರಾಗ್ಯ ಭಕುತಿ ಕೊಡುಮೂರೆರಡು ಭೇಧಗಳ ಅರಿವಿತ್ತು ಹರಿಯೇಮಾರಪಿತ ಇವಳ ಹೃದ್ವಾರಿಜದಿ ತವ ರೂಪತೋರುತಲಿ ಸನ್ಮುದವ ಬೀರುವುದು ಹರಿಯೇ 4 ಸರ್ವಾಂತರಾತ್ಮನೆ ಗುರುಡವಾಹನ ದೇವಸರ್ವಜ್ಞ ಸರ್ವೇಶ ಮಮ ಕುಲ ಸ್ವಾಮೀ |ನಿರ್ವಿಘ್ನದಿಂದೆನ್ನ ಪ್ರಾರ್ಥನೆಯ ಪೂರೈಸೊಸರ್ವಸುಂದರ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು