ಒಟ್ಟು 8641 ಕಡೆಗಳಲ್ಲಿ , 130 ದಾಸರು , 5054 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಘವೇಂದ್ರ ಗುರು ನಮೋ ನಮೋ ಯೋಗಿಜನೇಡಿತ ನಮೋ ನಮೋ ಪ ವಾದಿಜಯಪ್ರದ ನಮೋ ಸಾಧುಜವಾವ ನಮೋ ನಮೋಶ್ರೀಧರ ಬೋಧಕ ನಮೋ ಅಗಾಧತವ ಮಹಿಮ ನಮೋ 1 ಎಷ್ಟು ದಿನವಾಯಿತು ನಮೋ ಶ್ರೀ ಕೃಷ್ಣನ ಕಾಣದೆ ನಮೋಭೆಟ್ಟಿಯ ಮಾಡಿಸು ನಮೋ ವಿಷ್ಣು ದಾಸರೇಣ್ಯನೆ ನಮೋ 2 ತುಷ್ಟ ಮುಖಾಯ ನಮೋ ಶಿಷ್ಯರು ಸೇವಿಸೆ ನಮೋದೃಷ್ಟಿಲಿ ಕಳೆಯುವಿ ನಮೋ ಸರ್ವೇಷ್ಯವರಪ್ರದ ನಮೋ 3 ಚೂತರಸದಿ ಹರಿ ನಮೋ ಪೋತನು ಬೀಳಲು ನಮೋಆ ತನು ತ್ಯಜಿಸಿದ ನಮೋ ಜೀವಾತು ನೀನಾದೆ ನಮೋ 4 ವರಜಯತೀರ್ಥರ ನಮೋ ಸುರಸ ಸುಗ್ರಂಥಕೆ ನಮೋಪರಿಮಳ ಟೀಕೆಯ ನಮೋ ವಿರಚಿಸಿ ರಾಜಿಪೆ ನಮೋ 5 ರತುನಮಾಲಿಯ ನಮೋ ಹುತವಹಗಿತ್ತೆಯೋ ನಮೋಅತಿಶಯ ಪ್ರಾರ್ಥಿಸೆ ನಮೋ ಪ್ರಥಮ ತೆಗೆದುಕೊಟ್ಟೆ ನಮೋ 6 ನಾರದ ಶಿಷ್ಯನೆ ನಮೋ ನಾರಸಿಂಹಾರ್ಚಕ ನಮೋಸೇರಿ ಭಜಿಸಿ ನಿಮ್ಮ ನಮೋ ಎನ್ನ ಚಾರುದೃಷ್ಟಿಲಿನೋಡು ನಮೋ 7 ನಾಕವತಾರನೆ ನಮೋ ಲೋಕನಾಥಾಶ್ರಯ ನಮೋಕಾಕು ದರ್ಮತ ಹರ ನಮೋ ಶ್ರೀಕರ ಸೇವಕ ನಮೋ 8 ವೃಂದಾವನದಲಿ ನಮೋ ನಮೋ ಭಕ್ತ ವೃಂದರಲಿಂದು ನೀ ನಮೋಬಂದು ಮಾತಾಡುವಿ ನಮೋ ಇಂದಿರೇಶನ ಪ್ರಿಯನಮೋ ನಮೋ 9
--------------
ಇಂದಿರೇಶರು
ರಾಘವೇಂದ್ರ ಗುರುರಾಯ ರಮಣೀಯ ಕಾಯ ಭೃಂಗ ಭವ ಭಂಗ ಪ ನೋಡಿದೆ ನಿಮ್ಮ ಮಹಿಮೆಯ ಹಾಡಿ ಪಾಡುವೆನೊ ನಿತ್ಯ ಆಡಿ ಕೊಂಡಾಡಲು ಬಲು ಗೂಢವಾಗಿದೆ ನಾಡಿನೊಳಗೆ ವೊಮ್ಮೆ ಸ್ಮರಣೆ ಮಾಡಿದವ ಧನ್ಯ ಎನ್ನು ಮೂಢ ಬುದ್ಧಿಯನು ಬಿಡಿಸು ಕೂಡಿಸು ಸಜ್ಜನರೊಳಗೆ 1 ನಾಮಾಭಿವಿಡಿದು ಉಮಾಪತಿ ಪರಿಯಂತ ಈ ಮನ ಎರಗಲಿ ಯಾಮ ಯಾಮಕೆ ಕಾಮಿಪೆ ಇದನೆ ಗುರುವೆ ವಾಮದಕ್ಷಣ ಮಾರ್ಗ ನೇಮ ತಪ್ಪುದಂತೆ ತಿಳಿಸಿ ಭ್ರಾಮ ಬುದ್ಧಿಯ ಓಡಿಸುವುದು 2 ಚಿಂತಾಮಣಿ ಕಂಡ ಮೇಲೆ ಭ್ರಾಂತಿಗೊಳಿಪÀ ವಿಷಯ ಚಿಂತಿಸಿ ಬೇಡುವುದು ಲೋಕಾಂತದ ಸುಖವು ಇಂತು ಬಾಗಿ ನಿಂತು ಕೇಳುವಂತೆ ಮಾಡದಿರು ಕರುಣಿ ಸಂತತ ನಿನ್ನ ಪಾದಕ್ರಾಂತನಾಗಿ ತುತಿಸುವೆ 3 ಸಾರಿಸಾರಿಗೆ ಈ ಚಿತ್ರ ತಾರತಮ್ಯವ ವಿಚಾರಗೈದು ನಲಿದಾಡಿ ಮೇರೆ ಇಲ್ಲದೆ ಕೋಶ ಇಂದಿರೇಶನ್ನ ಹೃ ದ್ವಾರಿಜದೊಳು ನಿಲಿಸಿ ಆರಾಧನೆ ಮಾಡುವ ವೈಕಾರಿಕ ಭಾಗ್ಯವೆ ಬರಲಿ 4 ನಮೋ ನಮೋ ಯತಿರಾಜ ಮಮತೆ ರಹಿತ ಅನುಪಮ ಚರಿತಾ ಪರಬೊಮ್ಮ ವಿಜಯವಿಠಲ ನಾ ತುಮ್ಮದೊಳಚಿನಪ ಜ್ಞಾನೋತ್ತುಮ ತುಂಗಭದ್ರವಾಸ 5
--------------
ವಿಜಯದಾಸ
ರಾಘವೇಂದ್ರಂ ಭಜೇಹಂ ||ಶ್ರೀ|| ಪ ಆಗಮಚಯ ವಿಜ್ಞಾನ ಸುಗೇಹಂ ಶ್ರೀಗದಾಬ್ಜ ಚಕ್ರಾಂಕಿತ ದೇಹಂ ಅ.ಪ ರಾಗ ಮೋಹನಾದಿ ರಹಿತಂ ಸುಚರಿತಂ ಭೋಗಿರಾಟ್ ಶಯನ ಗುಣಮತಿ ಮಹಿತಂ ಭಾಗವತೋತ್ತಮ ಮತಿ ಸುಮತಿಯುತಂ ಯೋಗಿ ಜನಹಿತಂ ಶ್ರೀ ಗುರು ನಿರುತಂ 1 ಅತಿಪಾವನ ಕಾಷಾಯ ಸುವಸನಂ ನತಜನೇಷ್ಟ ವಿಶ್ರಾಣನ ನಿಪುಣಂ ಧೃತ ದಂಡ ಕಮಂಡಲ ಶುಭಪಾಣಿಂ ಕೃತ ಹರಿಸುತಿ ಸಂಗೀತ ಸುವಾಣೀಂ 2 ನಿಜತಪಸಾ ಸಮುಜಾರ್ಜಿತ ತೇಜಂ ಸುಜನಾವನ ಗುಣಹಿತ ಸುರಭೂಜಂ ಹರಣ ಕೃಷ್ಣ ವಿಜಯವಿಠ್ಠಲರೇಯಂ ಅಜಿನಾಸನ ಸುಸ್ಥಿರ ಯತಿರಾಜಂ3
--------------
ವಿಜಯದಾಸ
ರಾಘವೇಂದ್ರ ರಾಯರೆಂಬೋ ಮಹಾಯೋಗಿವರರ ನೋಡೈ ಪ ಭಾಗವತರು ಶಿರಬಾಗಿ ಕರೆಯಲತಿವೇಗದಿ ರಥದೊಳು ಸಾಗಿಬರುವ ಶ್ರೀ ಅ.ಪ. ಮಿನಗುವ ಘನವಾಹನಗಳ ರಥ ಶೃಂಗರವೋ ಕರದೊಳುಕನಕಛಡಿ ಕೊಡಿಗಳನುಪಮ ಭಾರವೊಅನಿಳ ನಿಗಮದಿ ನಿಪುಣ ಸುಜನರ ಪರವಾರವೋ ಪರಸ್ಪರಪಣದ ವೇದ ಘೋಷಣ ಸುಸ್ವರ ಗಂಭೀರವೋಘನ ಗುಣ ಗಣಮಣಿ ಮುನಿರಾಯನ ಮನದಣಿಯ ಪಾಡಿ ಕುಣಿಕುಣಿದಾಡಿ ಶಿರವಮಣಿಸುವರೋ ಗುಣವೆಣಿಸುವರೋ ದ-ಕ್ಷಿಣದಿಂ ತೆರಳಿ ವರುಣನ ಬೀದಿಯೊಳು 1 ಧರಣಿ ಸುರವರನಿಕರ ಕುಮುದೋದಯ ಚಂದ್ರನ ಮದ (ನ) ದು-ರ್ಧರ ದ್ವಿರದನ ತೆರಸಿ ಮೆರೆದ ಅಪ್ರತಿಮ ಮುನೀಂದ್ರನಸರಸ ಸುಧಾ ಪರಿಮಳ ಬೆರೆದ ಸುಗುಣಸಾಂದ್ರನ ಧರೆಯೊಳುಸಿರಿ ವಿಜಯೀಂದ್ರರ ಕುವರನೆನಿಪ ಸುಧೀಂದ್ರನಸರಸಿಜ ಸಂಭವ ಶರಣ್ಯ ಸುಂ-ದರ ನಿಜಾಂಘ್ರಿ ಭಜಕರ ಭಾಗ್ಯೋದಯಸುರರ ಸುರಭಿಗೆ ಸಮರೆಂದು ಸಾರಿ ಡಂಗುರ ಹೊಯಿಸುತ್ತ ಉತ್ತರ ಬೀದಿಯೊಳು 2 ವೆಗ್ಗಳ ವಾದ್ಯಗಳ ಸುವಾದ್ಯವೋ ಆರುತಿಯಬೆಳಗುವರು ಹಗಲ ದೀಪಗಳಗಾಧವೋಇಳೆಯೊಳು ಜನುಮ ಸಫಲವೆಂಬುವರ ವಿನೋದವೋ ಹಾಸ್ಯದಲಲಿನೆಯರಡಿ ಘಿಲಘಿಲಕೆಂಬುವ ನಟನ ಭೇದವೋಭಳಿರೆ ಭಳಿರೆ ಭಜಿಸುವರ ಭಕುತಿಬಲಿಗೊಲಿದ ಇಂದಿರೇಶನ ಕರದರಗಿಳಿಯೊ ನಳಿಯೊ ನಳಿನಾಂಘ್ರಿಯುಗದಿನಲಿಯುತ ಸುರರಾಜನ ಬೀದಿಯೊಳು 3
--------------
ಇಂದಿರೇಶರು
ರಾಘವೇಂದ್ರ ಸ್ವಾಮಿಗಳು ಅಂತರಂಗದಿ ಹರುಷವಾಂತೆವೈ ಗುರುವೆ ಪ ಸಂತಸದಿ ಸೇವೆಗಳ ಸ್ವೀಕರಿಸು ಪ್ರಭುವೆ ಅ.ಪ ಮಂಗಳಾಂಗಿಯರೆಲ್ಲ ಮಿಂದು ಮಡಿಗಳನ್ನುಟ್ಟು | ಮಂಗಳಾತ್ಮಕ ನಿನಗೆ ಮಜ್ಜನವ ಗೈಸೆ || ಅಂಗಳದಿ ದಧಿಕ್ಷೀರ ಘೃತಕುಂಭಗಳಧರಿಸಿ | ಸಿಂಗರದಿ ನಿಂದಿಹರೊ ಗುರುರಾಘವೇಂದ್ರ 1 ಧಾರುಣೀಸುರರೆಲ್ಲ ಧೀರಯತಿವರ ನಿನಗೆ | ಚಾರುವಿಭವದಿ ಕವಚ ಧಾರಣೆಯ ಗೈಸೆ || ಸೇರಿ ನುತಿಸುತೆ ನಿನ್ನ ಸಾರಗುಣ ಸಂಪನ್ನ | ಸಾರಿಹರೊ ನಿನ್ನಡಿಗೆ ಗುರುರಾಘವೇಂದ್ರ 2 ನಿಂದು ಭೂಸುರರೆಲ್ಲಾ ಜಯಜಯ ಜಯವೆನಲು| ಮಂದಹಾಸದಲವರ ಸೇವೆಯನು ಕೊಂಡೆ || ಇಂದು ಬೃಂದಾವನದಿ ನಿಂದು ದರ್ಶನವಿತ್ತೆ | ಕುಂದದಿಷ್ಟವ ಸಲಿಸೊ ಗುರುರಾಘವೇಂದ್ರ 3 ಉಡುರಾಶಿಗಳ ಮಧ್ಯೆ ಉಡುಪ ಮೆರೆಯುವ ತೆರದಿ | ಉಡುಗಣಿಕ್ಷೇತ್ರದೊಳು ನಿಂದು ಮೆರೆದೆ || ಕಡುಮಮತೆಯಲಿ ನಿನ್ನ ಸಡಗರದಿ ಸೇವಿಪರ | ಎಡರುಗಳ ಪರಿಹರಿಸೊ ಗುರುರಾಘವೇಂದ್ರ4 ನರಹರಿಯ ಮೆಚ್ಚಿಸಿದೆ ಪ್ರಹ್ಲಾದನೆನಿಸುತಲೆ | ಸಿರಿಕೃಷ್ಣನೊಲಿಸಿದಿಯೊ ವ್ಯಾಸಮುನಿ || ಸಿರಿರಾಮಚಂದ್ರಪ್ರಿಯ ಗುರುರಾಘವೇಂದ್ರನೆ | ಕರುಣದಲಿ ತೋರೀಗ ಶ್ರೀಶಕೇಶವನ5
--------------
ಶ್ರೀಶ ಕೇಶವದಾಸರು
ರಾಘವೇಂದ್ರನೆಂದು ನುಡಿದವರಿಗೆ | ಅನುರಾಗದಿಸಲಹುವರಾ ಯೋಗಿ ಶ್ರೀ ರಾಘವೇಂದ್ರರಾಯಾ ಪ ರಾಮಧ್ಯಾನವನು ಮಾಡುತಲನುದಿನ | ಜಯಿಸಿದಿ ರಾಕ್ಷಸರಾ ರಾಯರಾವ್ಯಾಧಿಗಳಳಿದು ಸೇವಾ ಕೊಡುತಿಹರಾ ರಮಾವಲ್ಲಭನಾಶ್ರಯ ಮಾಡಿ | ರಾಜ್ಯವಾಳಿದರೆ ರಾಘವೇಂದ್ರ 1 ಘಾತುಕ ದನುಜನ ಕಾಲವಿದೆಂದು ಎಣಿಸದೆ ಕಲಿಯುಗ ಘನ ಪರಾಕ್ರಮದಿಂದ ಮೆರೆಯುವಿ | ಸುಯತೀಂದ್ರ ನೀ ಘನ ಜಾಡ್ಯಗಳ ಕಳೆದು ಜನರಿಗೆ ಸುರಿಸಿದಿ ಸುಖಮೇಘ ಘಾ ಬುರಿಯಿಂದಲಿ ಬಂದ ಆತುರರಿಗೆ ಕಳದಿರೊ ನೀ ಅಘವಾ 2 ವೇದಶಾಸ್ತ್ರ ಪಾರಾಯಣ ಮಾಡುತ | ವೃಂದಾವನ ದೊಳಿರುವೇ ವ್ಯಥೆಯಿಂದಲಿ ಬಂದಾ ತುರರಿಗೆ | ಅತಿಸುಖವನು ಸುರಿವೇ ವೇದವ್ಯಾಸರು ಮೊದಲಾದರೊಳು | ಆಧಾರದೊಲಿರುವೇ ವೇಷತಾಳಿ ನೀ ಯತಿಯಾಗಿ ಈ ಜಗದೊಳುನೀ ಮೆರೆವೆ 3 ಬಿಡುವೆನುರಾಘವೇಂದ್ರಾ ಮತ್ಸ್ಯ ದ್ರಾಕ್ಷಾಫಲದಂತೆ ಮಧುರವು ತೋರಿಸಲಹೊಗುಣಸಾಂದ್ರಾ ದ್ರವ್ಯ ಪತಿಸಿರಿ ನರಸಿಂಹ ವಿಠಲನ ತೋರೋದಯದಿಂದ ನೀರಾಘವೇಂದ್ರಾ 4
--------------
ಓರಬಾಯಿ ಲಕ್ಷ್ಮೀದೇವಮ್ಮ
ರಾಘವೇಂದ್ರರು ಸುಂದರ ಗುರು ರಾಘವೇಂದ್ರರೆಂತೆಂಬುವೋ ಕರ್ಮಂದಿಗಳರಸನೆ ವಂದಿಸುವೆ ಪ ಸನ್ನುತ ಮಹಿಮರೆಂದು ನಾ ಬೇಡುವೆ ಅ.ಪ. ಪರಮ ಕರುಣೀ ನಿಜ ಚರಣ ಸೇವಕರನ್ನು ಉದ್ಧರಿಸುತಲನುದಿನ ಪೊರೆವನೆಂದೂಕರವ ಪಿಡಿದು ತ್ವರ ಪರಿಪರಿಯಲಿ ನಿನ್ನಾತಪೊರೆಯುವೆ ಕೈ ಪಿಡಿಯೆಂದು ಕರೆಯುವೆಧರೆಯೊಳಗೆ ನಿಮ್ಮಯ ಸರಿ ಧ್ವರೆಗಳ ಕಾಣೆ ಮ-ದ್ಗುರುವೆ ಯನ್ನಂಥ ಪಾಮರ ನರನ ಕಾಯೋದು ನಿಮಗಾಶ್ಚರ್ಯವೇವರಯೋಗಿವರ್ಯನೆ ನಿರುತ ಬೃಂದಾವನದಿ ರಾಜಿಪೊಮೆರೆವ ಮಂಗಳ ಚರಣ ತವಪದಸ್ಮರಿಪೆ ಸಂತತ ನೀಡು ತ್ವರಿತದಿಹರುಷದಲಿ ನಿರ್ಜರರ ತರುವೆ 1 ಪಾದ ಚಾರು ಭೂರಿ ಕಿಟೀತಜಧೀರ ನಿನ್ನನು ಸಾರಿದವರನು ಪಾರುಗಾಣಿಪನೆಂದು ಡಂಗುರಸಾರುತಲಿದೆಯದು ವೀರಸಲಿಸೊ 2 ಏಸೇಸು ಜನ್ಮದಿ ಕ್ಲೇಶವನನುಭವಿಸಿಘಾಸಿ ಮಾಡೆನೊ ಮನದಾಶೆಯಿಂದಾಹೇಸಿ ವಿಷಯಂಗಳು ಲೇಸುತಿಳಿದು ಮರೆಮೋಸಾದಿ ದುಷ್ಟರ ಸಹವಾಸದಿ ಸೇರಿದೆಮಂದಹಾಸಾದಿ ಸಂತೈಸು ರವಿ ಸಂಕಾಶಜನಹೃದೋಷ ಸಾಗರದಿಕಾಷಾಯವಸನ ಭೂಷಿತಾಂಗ ವ್ಯಾಸಮುನಿ ಭರದೀಗಜರಾಮಪುರದೀಶ ಮುಖರಿಗೆ ತೋಷ ನೀ ಗರದಿಈ ಸಮಯ ಸ್ತುತಿಸುವೆನುಶ್ರೀ ಸಮೀರ ಮತಾಬ್ಧಿ ಚಂದಿರಈಶಗೆದುರ ರತೀಶ ಸನ್ನುತಶ್ರೀಶ ಗುರು ಇಂದಿರೇಶನಂಘ್ರಿಗೆದಾಸ್ಯ ಭಾವ ರಹಸ್ಯ ತೋರಿದೆ 3
--------------
ಗುರುಇಂದಿರೇಶರು
ರಾಜಕುಲ ವನರಾಶಿ ರಾಜರಾಜೇಶ್ವರಾ | ರಾಜೀವ ನಯನ ಯದುರಾಜ ಎಲೊ ಭಾಪುರೆ ಪ ಗರಳ ಪೇರ್ಮೊಲೆಯಿತ್ತ ಅಸುರಿಯಳ ಸಂಹರಿಸಿ | ಮರಳಿ ಅವಳಿಗೆ ಉತ್ತಮ ಗತಿಯನಿತ್ತೆ | ದುರಳ ಶಕಟಾಸುರನ ಚರಣ ದುಂಗುಟದಲ್ಲಿ | ತರಳಾಟದಿಂದ ಮರ್ದಿಸಿದೆ ಎಲೆ ಭಾಪುರೆ 1 ವ್ರಜ | ಪುರವ ಪಾಲಿಸಿದೆ ಕಾಳಿಂಗನೈದು | ಸಿರದಲ್ಲಿ ತುಳಿದು ರಮಣ ದ್ವೀಪಕೆ ಕಳುಹಿ | ಪರಿಪರಿಯ ಖಳರ ಮರ್ದಿಸಿದೆ ಎಲೊ ಭಾಪುರೆ 2 ಕರೆಯ ಬಂದಾ ಕ್ರೂರ ಭಕ್ತನಿಗೆ ಯಮುನೆಯಲಿ | ಕರುಣದಿಂದಲಿ ನಿಜರೂಪ ತೋರಿ | ಮುರಿದು ಧರಿಗೆ ವರಿಸಿದೆ ಕಂಸನ ಎಲೆ ಭಾಪುರೆ 3 ವನಧಿಯೊಳು ಪುರ ಬಿಗಿದು ಕಾಲಯವನನ ಸದೆದು | ಅನಿಲ ಸುತನಿಂದ ಮಾಗಧನ ಕೊಲ್ಲಿಸಿ | ವನಿತೆಯರ ಸೆರೆ ಬಿಡಿಸಿ ಸೂತತನವನೆ ವೊಹಿಸಿ | ಫಲ್ಗುಣಗೆ ವಿಶ್ವರೂಪವ ತೋರಿದೆ ಎಲೊ ಭಾಪುರೆ 4 ಗುರು ಭೀಷ್ಮ ಶಲ್ಯ ಶಕುನಿ ಸುಬಲ ಭಗದತ್ತ | ತರಣಿಸುತ ದುಶ್ಶಾಸ ಕೌರವೇಶಾ | ಎರಡು ಬಲ ವ್ಯಾಜ್ಯದಲಿ ಭೂಭಾರನಿಳುಹಿ ಸಾ | ವಿರ ತೋಳ ಖಳನ ಭಂಗಿಸಿದೆ ಎಲೊ ಭಾಪುರೆ5 ದ್ವಾರಕಾಪುರದಲ್ಲಿ ನಾರದಗೆ ಸೋಜಿಗವ | ತೋರಿದೆ ಒಬ್ಬೊಬ್ಬ ನಾರಿಯಲಿ | ನಾರಿಯರ ಕೂಡ ಬಲು ಕ್ರೀಡೆಗಳನಾಡಿ ಅ | ವರ ಸಂತಾನವನು ಪಡದೆ ಎಲೊ ಭಾಪುರೆ 6 ವರ ಚಂದ್ರಹಾಸ ಮಿಗಿಲಾದ ಭೂಪಾಲಕರ | ಕರೆಸಿ ಪಾಂಡುವರ ಯಾಗವನೆ ಮುಗಿಸಿ | ಹರುಷದಲಿ ಯದುಕುಲವಾಸ ಮಾಡಿದೆ | ಪರಮ ಪುರುಷ ವಿಜಯವಿಠ್ಠಲನೆ ಎಲೆ ಭಾಪುರೆ 7
--------------
ವಿಜಯದಾಸ
ರಾಜರ ನೋಡಿದಿರಾ _ ಗುರು _ ರಾಜರ ನೊಡಿದಿರಾ ಪ ರಾಜರ ನೊಡಿ _ ಭಕುತಿಯ ಮಾಡಿ ಗೋಜನ ಕರುಣಕೆ _ ಭಾಜನ ರಾದೀರಾ ಅ.ಪ. ತುಂಗ ಮಹಿಮರು _ ನರ - ಸಿಂಗ ಭಕ್ತರು ಭಂಗರಹಿತರು _ ಸುರ _ ಸಂಘ ಮಾನಿತರು 1 ಯೋಗಿ ವರ್ಯರು _ ಬಹು _ ತ್ಯಾಗಶೀಲರು ಭವ _ ರೋಗ ವೈದ್ಯರು 2 ತಂತ್ರ ಮಲ್ಲರು _ ಬಹು _ ಗ್ರಂಥಕರ್ತೃಗಳು ಮಂತ್ರ ಸಿದ್ಧರು _ ಮ _ ಹಂತ ಮಠದವರು 3 ಶಾಂತ ಮೂರ್ತಿಗಳು _ ವೇ _ ದಾಂತ ಬಲ್ಲವರು ದಾಂತ ಶೇಖರರು _ ಏ _ ಕಾಂತ ಭಕ್ತರು 4 ರಾಘವೇಂದ್ರರು _ ಇವರೆ _ ವ್ಯಾಸರಾಜರು ಭಾಗ್ಯವಂತರು _ ಪ್ರ _ ಹ್ಲಾದರಾಜರು 5 ದೂಡು ಸಂಶಯಾ ನೀ _ ಮಾಡು ಭಕುತಿಯಾ ಬೇಡು ಬಯಕೆಯಾ ಪೋ _ ಗಾಡು ದುಃಖವಾ 6 ಸೃಷ್ಠಿ ನಾಯಕಾ _ ಶ್ರೀ _ ಕೃಷ್ಣವಿಠಲನ ಶ್ರೇಷ್ಠ ಭಕ್ತರೂ _ ಸಂ-ತುಷ್ಠಿ ನೀಡುವರು 7
--------------
ಕೃಷ್ಣವಿಠಲದಾಸರು
ರಾಜವದನೆ ನೀ ಗುರು- ರಾಜರಿರುವ ಸಂಭ್ರಮ ನೋಡೆ ಪ ರಾಜಿಸುವ ಮುಖನ ಪೂಜಿಸುವ ಯತಿವರನೆ ಅ.ಪ ದೂಷಿತ ದುರ್ಜನರ ತಾಸು ಬಾಳದಂತೆ ವಿ- ಶೇಷದಿಂದ ಭಜಿಸುವರ ಪೋಷಿಸುವ ಯತಿವರನೆ 1 ಪಾದ ನಂಬಿದವರಿಗೆ ಮೋದವೀವ ದೇವನೆ ಬೀದಿಬಿಡುವ ನಂಬಿದವರ ವಾದಿರಾಜ ದೊರೆವರನೆ 2 ಅಜಪದಕೆ ಅರ್ಹನೆಂದು ಗಜವರದನ ದಾಸನೆಂದು ಭಜನೆ ಮಾಡುವ ನಿಜವ ಪೇಳುವ ವಿಜಯವಿಠಲನ ಸೇವಕರಿವರೇ 3
--------------
ವಿಜಯದಾಸ
ರಾಜಿಯಿದ್ದೋರೆಲ್ಲ ಕೇಳ್‍ಬಹುದಣ್ಣ ಪೂಜೆ ಮಾಡೋ ಇದ ಹೇಳತೀನಣ್ಣ ಪ ಸಾಜದ ಹಾದಿಲಿ ಬಾಳ್ಯವ್ರಣ್ಣ ಅ.ಪ ಹಾಸಿಗೇಲಿ ತಿಂಡಿ ತಿನಬಾರ್ದಣ್ಣ ಮೋಸದ ಯೋಚನೆ ಯಿರಬಾರ್ದಣ್ಣ ಕಾಸಿಗೆ ಸುಳ್ಳ ಯೋಳ್ಬಾರದಣ್ಣ 1 ನಾಮ ಇಬೂತಿಯ ಅಣೆಗಚ್ರಣ್ಣ ರಾಮಾ ನಿನ್ಪಾದ್ವೇಗತಿಯೆನ್ನಣ್ಣ 2 ಮಣ್ಣಿನ ಭೂಮಿಯ ನಂಬದಿರಣ್ಣ ಸಣ್ಣ ಕೃಷ್ಣನೇ ಗತಿಯೆನ್ನಣ್ಣ 3 ನೋಡುವ ಕಣ್ಗಳ ಮನದಲಿಡಣ್ಣ ನೋಡದರಲಿ ಹೊಳೆ ಹೊಳೆವಾಬಣ್ಣ 4 ಅದರ ಮೇಲೆಳ್ಡು ಕಾಲ್ಗಳ ನೋಡಣ್ಣ ಮದನ ಗೋಪಣ್ಣನು ಕಾಣುವನಣ್ಣ 5 ಮಡಿಯ ಪೀತಾಂಬ್ರದವುಡಗೆಯ ನೋಡಣ್ಣ ಹಿಡಿದೆತ್ತಿದ ಕೈಕೊಳಲನು ನೋಡು 6 ಮುಡಿಯ ಕಿರೀಟದ ಹೊಳಪನು ನೋಡು ನಡುಹಣೆಯ ನಿಡು ತಿಲಕವ ನೋಡು ಕಡೆನೋಟದ ಕಣ್ಮಿಂಚನು ನೋಡು 7 ಅಂಬರದಂತೆ ಸರೀರವ ನೋಡು ನಂಬಿಕೆಯಲಿ ಸರಣಾರ್ತಿಯ ಮಾಡು 8 ಬೋಗಾನಂದವ ಪಡಿತೀಯಣ್ಣ ಕೂಗಿಗೆ ಬರುವನು ಮಾಂಗಿರಿಯಣ್ಣ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ರಾಜೀಸುವದು ನಾಭಿಯಾ ಸುರಗಂಗೆಯಂ ಶೇಧೀಭಿಯಾ ಪ ನೇತ್ರನ್ನದಯ ಪೂರ್ಣದಾ ಕಮಲಂ ಹಾರಿಸಿ ನೀಡುವ ಬುದ್ದಿ ವಿಮಲಂ ನೇ ಶ್ರೀ ವೆಂಕಟೇಶಂ ಸದಾ1 ಪೊಗಳಲಿಲ್ಲ ಮತಿ ಸಲ್ಲದೇ ಆಶ್ರಯಸಿ ನೆಲೆಗೊಳ್ಳದೇ ಭವಕಾದೆ ಪರಿಹಾರ ದಾ ಪರಿಯಂ ಕಾಣದೆ ಬೇಡಿ ಕೊಂಬೆ ಧೋರಿಯಂ ಶ್ರೀ ವೆಂಕಟೇಶಂ ಸದಾ 2 ಪಟನಾದೆ ನೆರೆ ಭಾಗ್ಯದೀ ನಡಲಂ ದೀಗಳಿ ಪಶ್ಚಾತ್ತಾಪ ಒಡಲಂ ಮನವಿಲ್ಲ ವೈರಾಗ್ಯ ದೀ ಮುಸುಕಿಷ್ಟು ದನಿವಾರ ದಾ ಕಡಲಂ ಮನಿಯೆ ಕಾಯೋ ಸಾಖರದಿಡಲಂ ಶ್ರೀ ವೆಂಕಟೇಶಂ ಸದಾ3 ಬಿದಿರೀಸಿ ವಢ ಮಾಡಿದೇ ಕೊನಿಯಿಂದ ಕಲಕ್ಯಾಡಿದೆ ಮುದವಿತ್ತೆ ಭಕ್ತಂಗದಾ ಮರಳಂ ಕಾವದು ಭಕ್ತಿಗಿಲ್ಲ ಹುರಳಂ ಶ್ರೀ ವೆಂಕಟೇಶಂ ಸದಾ 4 ಕಾಂತಿಚರಣಾಂಬುಜಭಾವ ಭಕ್ತಿಂದಲಿ ಶರಣಂ ಪೊಕ್ಕವರಿಂಗೆ ಜನ್ಮಮರಣಂ ಹರಿಸೂವದಯದಿಂದಲಿ ಸ್ಮರಣಂ ಮಾಡಲು ಪಾಪಹರಣಂ ಸಲೆ ಸಾಧ್ಯಸುರ ಸಂಪದಾ ಕರುಣ ಬೀರುತ ಕಾಯೋಯನ್ನಹರಣಂ ಶ್ರೀವೆಂಕಟೇಶಂ ಸದಾ 5 ಮಾನವ ತನುಂಪಡದೀಗ ಸದ್ಗತಿಯಾ ಗಡ ಹೊಂದಿ ವಿಷಯೇಚ್ಛೆಯಾ ಅಪರಾಧವನು ಗಣಿ ಸದಾ ಪಿತನಂ ತನ್ನಯ ಕಾಯೋ ಜ್ಞಾನ ಚ್ಯುತ ನಂ ಶ್ರೀ ವೆಂಕಟೇಶಂ ಸದಾ 6 ಮೆಚ್ಚಿ ಸುಮನ ನರಿಯೆನು ಯಂತ್ರಿಪ್ಪ ದಾಂನರಿಯೆನು ಗಜವಂ ತಾರಿಸಿದಂತೆಯನ್ನ ವೃಜಿನಂ ದಾಟೀ ಸುವಾ ಬಿರದಾ ಕುಜನಂ ಸೇರಿದಂತೆ ಯನ್ನಂ ಕಾಯೋದ್ವಿಜನಂ ಶ್ರೀ ವೆಂಕಟೇಶಂ ಸದಾ 7 ಸದನಂ ಸುದ್ಗುಣ ಗಾಣದಬ್ಜವದನಂ ಸ್ಪರ್ಧಿಸುತಿದನುಜರಾ ಕದನಂ ಕರ್ಕಶವಾಗಿ ಸೌಖ್ಯ ಪ್ರದನಂ ಭಾವಿಸುತಿಹ ಮನುಜರಾ ಸುಕುಮಾರ ಘನ ಶಾಮದಾ ಇದನಂ ಬಣ್ಣಿಪರಾರು ವೇದವಿದಿನಂ ಶ್ರೀ ವೆಂಕಟೇಶಂ ಸದಾ8 ಶಿಖಿ ಕೇತನಾ ಕಾಯ ಭಂಡಿಯವಾಧನು ಪ್ರಾರ್ಥನಾ ಪರಬ್ರಹ್ಮ ತುರುಗಾಯ್ವನೆಂದು ಪೊಗಳ್ವಾರಿಂತರಿವರೈ ಚರಿತದಾ ಗುರು ಮಹಿಪತಿ ಕಂದಸಲಹೋ ಸ್ಮರಿಸಲು ಅಷ್ಟಕವಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಜೋಪಚಾರರಾಜೋಪಚಾರರಾಜೀವನೇತ್ರ ನೀನವಧರಿಸು ಬೇಗ ಪಸಾವಿರದ ದಳವುಳ್ಳ ಕಮಲವೊಂದಕೆ ಶಕ್ತಿಸಾವಿರದ ಮೌಕ್ತಿಕದ ಸರಗಳೊಪ್ಪಿಹವುಕಾವಿಹುದು ಸಕಲ ದೇವಾತ್ಮಕದ ಶಾರದೆಯುನಾ ವಹಿಸಿ ತುರಿಯ ಕಲಶದ ಛತ್ರವೆಂದೆಂಬ 1ಆವಗವು ಸತ್ವಾದಿ ಗುಣಗಳಿಂದೊಪ್ಪಿರುವಆವರಣ ವಿಕ್ಷೇಪ ಶಕ್ತಿಯೆಂಬೆರಡುದೇವ ನಿನ್ನುಭಯ ಪಾಶ್ರ್ವದಲೊಲವುತಿಹ ಸರ್ವಭಾವದಿಂದುಭಯ ಚಾಮರವೆರಡರಿಂದ 2ಗಂಧರ್ವ ನಗರದಿಂದೈತಂದ ನಾರಿಯರುಛಂದದಿಂ ನರ್ತಿಸುತಲಿಹರೈವರಿವರುಒಂದಾಗಿ ಬಳಿಕಿವರ ಹೊಂದಿ ಮತ್ತೈವರಿರೆಹಿಂದೆ ನಾಲ್ವರುವೆರಸಿ ನಲಿವ ನರ್ತನವೆಂಬ 3ಪರವೆಂದು ನಾಭಿಯಲಿ ಪಶ್ಯಂತಿ ಹೃದಯದಲಿಸ್ವರವಿಹುದು ಕಂಠದಲಿ ಮಧ್ಯಮಾಖ್ಯೆಯಲಿಸ್ಫುರಿಸಿ ಮುಖಕಮಲದಲಿ ವೇದಶಾಸ್ತ್ರಗಳಾಗಿಮೆರೆವ ವೈಖರಿಯೆಂಬ ಗೀತವಿದ ಕೇಳು 4ತಾಳ ಮರ್ದಳೆ ಘಂಟೆ ಭೇರಿ ಶಂಖಗಳಿಂದಮೇಲಾದ ವೀಣೆ ವೇಣುಗಳ ರವದಿಂದಲಾಲಿಸುವ ಛಿಣಿ ಛಿಣೀ ಛಿಣಿಗಳೆಂಬವರಿಂದನೀಲ ಮೇಘಧ್ವಾನ ದಶನಾದದಿಂದ 5ಪರಿಪರಿಯ ಗತಿಯುಳ್ಳ ಚಿತ್ತವೆಂಬಶ್ವವನುವರ ಸತ್ವ ಗುಣವೆಂಬ ಹಲ್ಲಣವ ಬಿಗಿದುನಿರತ ಪರಮಾತ್ಮನೀಕ್ಷಣದ ಕಡಿವಾಣವನುಪಿರಿದಾಗಿಯಳವಡಿಸಿ ಮುಂದೆ ನಿಂದಿಹುದಾಗಿ 6ಒಲವುತಿಹ ಸುಖ ದುಃಖವೆರಡು ಘಂಟೆಗಳಿಂದನೆಲನ ಸೋಕುವ ಕಾಮ ಸುಂಡಿಲದರಿಂದಫಲ ಚತುಷ್ಟಯ ಪಾದ ಮೇಲು ಮಂಟಪದಿಂದಬಲುಮೆಯಹ ಮೂಲ ಕಾರಣವೆಂಬ ಗಜವು 7ಹಿಂದೆಮುಂದರುವರೊಂದಾಗಿ ವಹಿಸಿರಲದಕೆಹೊಂದಿಸಿದ ಚೌಕಿ ಮನವೆಂಬುದದರಲ್ಲಿಮಂದ ಮೃದು ಬಹು ವಿಷಯ ಸುಖದ ಹಾಸಿಕೆ ಹಾಸಿದಂದಳವಿದನುಭವದ ಕೊಂಬಿನಿಂದೊಪ್ಪಿರುವ 8ಆರು ನೆಲೆಯುಳ್ಳ ರಥವದಕೆ ಶಕ್ತಿಗಳೆಂಬಮೂರು ಕಲಶಗಳಲ್ಲಿ ನಾಲ್ಕು ಸತ್ತಿಗೆಯುಮೂರವಸ್ಥೆಗಳದರ ತುರಿಯವೆಂಬುದೆ ನಾಲ್ಕುಮೂರುಲೋಕವನಾಳ್ವ ಮಹಿಮ ನೀ ಪ್ರತಿಗ್ರಹಿಸು 9ನುಡಿವುದೆಲ್ಲವು ವೇದ ನಡೆವುದೆಲ್ಲವು ಶಾಸ್ತ್ರಬಿಡದೆ ನಿನ್ನಾಜ್ಞೆಯೊಳಗಿರೆ ಪುರಾಣದೃಢವಾಗಿ ನಿನ್ನ ಭಜನೆಯ ಮಾಳ್ಪ ದಿವಸವದುಕಡುಪುಣ್ಯವಾದ ಪಂಚಾಂಗವೆನಿಸುವದು 10ಉದಯದಲಿ ನಿನ್ನ ಸ್ಮರಣೆಯ ಮಾಡೆ ಪುಣ್ಯತಿಥಿಒದಗಿಸುವ ಸತ್ಕರ್ಮ ವಾರವೆನಿಸುವದುಅದರಲ್ಲಿಯನುಭವವೆ ನಕ್ಷತ್ರ ನಿನ್ನಲ್ಲಿಹುದುಗೆ ಜೀವನು ಯೋಗ ಹುದುಗುವದೆ ಕರಣ 11ಸಕಲ ವೇದಂಗಳಲಿ ಪ್ರತಿಪಾದಿಸಿದ ಫಲವುವಿಕಳವಿಲ್ಲದೆ ನಿನ್ನ ನಿಮಿಷ ಧ್ಯಾನಿಸಲುಸಕಲ ತೀರ್ಥಸ್ನಾನ ದಾನ ಜಪ ತಪ ಯಜ್ಞಸಕಲವೂ ಬಹುದೆಂಬ ಸರ್ವೋಪಚಾರ 12ಸುರ ಸಿದ್ಧ ಮುನಿವೃಂದ ನಿರತ ಸೇವಿತ ಚರಣಶರಣಾಗತೋದ್ದರಣ ಶರಧಿಜಾರಮಣತಿರುಪತಿಯ ಸ್ಥಿರವಾಸ ನಿರುಪಮ ಮಹಾಕರುಣಮರೆಯೊಕ್ಕೆ ಸಲಹೆನ್ನ ಪ್ರಾಣ ವೆಂಕಟರಮಣ 13ಓಂ ಜುನೇ ನಮಃ
--------------
ತಿಮ್ಮಪ್ಪದಾಸರು
ರಾಧಾರಮಣ ವಿಠಲ ನೀನಿವಳಸಾದರದಿ ಕಾಪಾಡೊ ಹರಿಯೇ ಪ ವೇದವೇದ್ಯನೆ ಪೂರ್ಣ ಬೋಧಸನ್ನುತ ನಿನ್ನಪಾದ ಭಜಕಳ ಬಿಡದೆ ಕಾಪಾಡೊ ಹರಿಯೇಅ.ಪ. ದಾಸದೀಕ್ಷೆಯಲಿ ಅಭಿಲಾಷೆ ಪೊಂದಿಹಳಿವಳುಶ್ರೀತ ತವ ಪಾದಾಬ್ಜ ದಾಸ್ಯವನೆ ಇತ್ತೂನೀಸಲಹೊ ಸುಜ್ಞಾನ ಭಕುತಿ ಭಾಗ್ಯವನಿತ್ತುಶೇಷಾದಿ ದಿವಿಜೇಡ್ಯ ವಾಸುದೇವಾಖ್ಯಾ 1 ನಿತ್ಯ ಮಂಗಳ ಮೂರ್ತೇಸತ್ಯಭಾಮಾ ಪತಿಯೆ ಪ್ರತ್ಯಹರ ನಿನ್ನ ಸ್ಮøತಿಇತ್ತು ಪಾಲಿಸು ಎಂದು ಪ್ರಾರ್ಥಿಸುವೆ ನಿನ್ನಾ 2 ಆಪನ್ನ ಪರಿಪಾಲಕಾಪಾಡ ಬೇಕಿವಳ ಗೋಪಾಲ ಬಾಲಾ 3 ಪತಿಯೆ ಪರದೈವವೆಂಬುನ್ನತದ ಮತಿಯಿತ್ತುಹಿತದಿಂದ ಮಧ್ವಮತ ತತ್ವಾಮೃತವನುಣಿಸೀಕೃತ ಕಾರ್ಯಳೆಂದೆನಿಸಿ ಹೃತ್ಸರೋಜದಿ ಚರಣಶತ ಪತ್ರ ತೋರಯ್ಯ ಶ್ರುತಿವಿನುತ ಹರಿಯೆ 4 ಘೋರ ದುರಿತಾಬ್ಧಿಯನು ಪಾರಗೈಸುವ ನಿನ್ನಕಾರುಣ್ಯಕೆಣೆಯುಂಟೆ ನೀರಜಾಕ್ಷಾಚಾರುಗುಣವಂತೆ ಬಾಲೆಯನು ಉದ್ಧರಿಸುಮಾರಾರಿ ಸಖ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು