ಒಟ್ಟು 581 ಕಡೆಗಳಲ್ಲಿ , 86 ದಾಸರು , 506 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಚಿಸುವೆನು ನಿನ್ನನಿದಕೆ ಕರುಣಸಾಗರ ಗಮನ ಜಗತ್ಪಾಲ ಪ್ರಭುವರ ಪ ದೈನ್ಯರಾಹಿತ್ಯ ರಹಿತ ಜಾಡ್ಯರಹಿತವು ಪಾದ ಕಮಲರತಿ ಸದಾವಕಾಲವು 1 ಪ್ರಭುವೆ ನಿನ್ನ ಭೃತ್ಯನಾನಾದಿಕಾಲದಿ ಅಭಯವಿತ್ತು ಪಾಲಿಸೆನ್ನ ಹೇ ದಯಾನಿಧೆ 2 ತುಷ್ಟನಾದರೇನುರುಷ್ಟನಾರೇನೊಲೊ ಇಷ್ಟದೈವ ನಿನ್ನ ಹೊರತು ಗತಿಯ ಇಲ್ಲೆಲೊ 3 ತುಷ್ಟನಾದ ಬಳಿಕ ನೀನೆ ಹೇ ಕೃಪಾಕರ ಬಿಟ್ಟುನಿನ್ನ ಭಜೀಸಲ್ಯಾಕೆ ಯಿತರಕಾಯ್ವರ 4 ನೀನೆ ರೋಷವನ್ನು ತಾಳೆ ಸುಜನಬಂಧುವೆ ದೀನನನ್ನು ಕಾಯ್ವರಾರು ನೀನೆಯಲ್ಲವೆ 5 ದೋಷ ಕ್ಷಮಿಸುವಲ್ಲಿ ನಿನ್ನ ಪೋಲ್ವ ಅರಸರು ದೇಶಸರ್ವಗಳಲಿ ಪುಡುಕಲಲ್ಲೆ ದೊರಕರು 6 ಎನ್ನಸರಿ ಕೃತಘ್ನ ವಂಚನೀಯ ಮಾಳ್ಪನ ವನ್ನಜಾಭವಾಂಡದೋಳಾವಲ್ಲಿ ಕಾಣೆನಾ 7 ದೀನ ದಾಸ ನಿನಗೆ ನಾನು ಹೇ ಜಗತ್ಪತೆ ಮಾಣದೆಲ್ಲಿರಲ್ಲಿ ತೋರಿ ಪ್ರೇಮ ಸಾಮ್ಯತೆ 8 ಎನ್ನ ವಿಷಯ ಭಯವು ನಿನಗೆ ಲಕ್ಷವಾವುದು ಮನ್ನಿಸೆನ್ನ ಪೊರೆವ ಸರ್ವಭಾರ ನಿನ್ನದು 9 ಈಶಪೂರ್ಣಕಾಯ ನಿನಗಸಾಧ್ಯವಾವುದು ಆಶೆಯನ್ನದಾವಘನವು ನಿನಗೆ ತೋರ್ಪುದು 10 ದಾಸನಾಶೆಪೂರ್ತಿಸಲ್ಕಾಲಸ್ಯವುಚಿತವೋ? ಅಶಿಶಿಸುವನು ದಾಶಗೈವುದೇನು ನೀತವೋ? 11 ಲೋಕನಾಥ ಕರುಣ ಪೂರ್ಣನೇ ಪರಾತ್ಪರ ಯಾಕೆ ಯೊನ್ನೊಳಿನಿತು ನೀನು ನಿರ್ದಯಾಪರ 12 ಗರವತಾಯಿತನನುಜಗೀಯೆ ಅವುದೋಗತಿ ತರುಳನಲ್ಲಿ ಕರುಣಿಸುವದು ಕೃಷ್ಣ ಮೂರುತಿ 13 ದಾತ ಜ್ಞಾತನು ನಿನ್ನ ವಿನಹಾಭಿಷ್ಟಫಲದ ಕರ್ತೃ ಆವನು 14 ಲಕ್ಷ್ಮಿಪತಿಯ ಪೋಲ್ಪೋದಾರ ಸುಗುಣ ಶೀಲನ ಈಕ್ಷಿಸಲ್ಕೆ ಜಗದೊಳಾರನೆಲ್ಲಿ ಕಾಣೆನಾ 15 ನಿನ್ನ ಔದಾರ್ಯ ಸರ್ವರಲ್ಲಿ ಸಾಮ್ಯವು ಎನ್ನೊಳಿನಿತ್ತು ನಿನ್ನದ್ಯಾಕೆ ಕಾರ್ಪಣ್ಯವು 16 ಆರ್ತಬಂಧುವೆಂದು ನಿನಗೆ ಶರಣುಬಂದೆನು ಸಾರ್ಥಕವನು ಮಾಡುವಿಯೊ ಜರಿದೆ ಬಿರುದನು 17 ದೀನ ಬಂಧು ಕರುಣಸಿಂಧು ಸುಹೃದ್ಬಾಂಧವ ಹೀನ ಭವಾರ್ಣವದಿ ಮಗ್ನನಿರುವೆ ಭೂಧವ 18 ತಾರಿಸೈ ಭವಾಬ್ದಿಯಿಂದ ಇಂದಿರಾವರ ಸೂರಿಜನರ ಸಂಗವೆನ್ನಗೀಯೋಗಿರಿಧರ19 ಶ್ರೀನೃಸಿಂಹ ಸತತ ನೀನು ಸದಯ ಮೂರುತಿ ದೀನ ನನ್ನೊಳ್ಯಾಕೆ ನಿರ್ದಯವ ತೋರುತಿ 20 ಸಾಧುಗಳು ನಿರ್ಗುಣಿಗಳಲ್ಲಿ ದಯವÀ ಮಾಳ್ಪರು ಸಾದರದಲಿ ಸರ್ವರಲ್ಲಿ ಸದಯರಿಪ್ಪರು 21 ಧನ್ಯಜನಕೆ ನಿನ್ನನೀವುದೇನು ಅಚ್ಚರ ದ್ಯೆನ್ಯ ಬಡುವನನ್ನು ಪಾಲಿಸುವದು ಪರತರ 22 ಚಂದ್ರಚಾಂಡಾಲಗೃಹದ ಮೇಲೆಯಾದರು ಸುರತರು 23 ಈತೆರ ಶ್ರೀ ಪತಿಯೆ ಎನಗೆ ಪ್ರೀತನಾಗೆಲೋ ನೀತವಾಗಿ ಕರುಣದಿಂದ ಕರವಪಿಡಿಯಲೊ 24 ಪುನಃ ಪುನಃ ನಿನ್ನನಿದನೆ ಬೇಡಿಕೊಂಬೆನಾ ಮನದೊಳು ಪ್ರಸನ್ನನಾಗು ಜನಕಜಾರಮಣ25 ಪಂಚರಾತ್ರಾಗಮೋಕ್ತ ಈಸ್ತುತಿಯನು ವಿನುತ ಶ್ರೀ ರಾಮಚಂದ್ರನು 26 ಮುದದಿ ಮನಸಿನೊಳಗೆ ತಾನೆವದಗಿ ಪೇಳಿದ ಅದನೆ ಶ್ರೀವರದೇಶ ವಿಠಲ ನುಡಿಸಿ ಬರೆಸಿದ 27
--------------
ವರದೇಶವಿಠಲ
ಯಾತಕೆ ಮರೆತೆನ್ನ ಯತಿಕುಲ ತಿಲಕನೆ ಪ್ರೀತಿಯ ಬಯಸುತ ಬಂದೆ ಪ ವಾತಸುತಗತಿಪ್ರಿಯ ದೂತನೆ ನಾಥನೀನೆಂತೆಂದು ನಂಬಿದೆ ಖ್ಯಾತಗುರು ಶ್ರೀ ರಾಘವೇಂದ್ರನೆ ಅ.ಪ. ದೇಶದೇಶದಿ ಬರುವ ದಾಸಜನರÀಘ ನಾಶಗೈಸಿ ಪೊರೆವೊ ದಾಶರಥಿ ಕಿಂಕರಾ ಶೇಷಶಯನನ ದೋಷ ಜ್ಞಾನ ವಿಶೇಷದಿಂದಲಿ ನ್ಯಾಸಮಾಡಿದೆ ಭೂಸುರೋತ್ತಮ 1 ಛಲದಿ ಭಕ್ತಿಯ ಮಾಡಿ ಒಲಿಸಿ ಹರಿಯ ಪಾದ ಲಲಿತಕೀರ್ತಿಲಿ ಮೆರೆದೆ ಭಳಿರೆ ಭಳಿರೆ ಗುರುವೇ ಗೊಲ್ಲಕೃಷ್ಣನ ಚೆಲ್ವ ನಾಟ್ಯದಿ ನಿಲ್ಲಿಸಿದ ನಿನಗೆಲ್ಲಿ ಸರಿಯೈ ನಲ್ಲ ಯತಿವರ ಕಾಲಿಗೆರಗುವೆ ಶೀಲಭಕುತಿಯ ಪಾಲಿಸೀಗಲೆ 2 ವ್ಯಾಸಮುನಿಯು ಎನಿಸಿ ಶ್ವಾಸಮತವ ಮೆರೆಸಿ ದೋಷ ಹರಿಸಿ ಧೊರೆಗೆ ದಾಸ ದೀಕ್ಷೆಯ ತೋರ್ದೆ ಈಶದಾಸರ ಭೇದ ವಾದವ ಆಶುಕವಿತದಿ ವಿಶದಪಡಿಸಿದೆ ಶ್ರೀಶಶಯನನಾವೇಶ ಸಂಯುತ ಭೇಶಕಾಂತಿ ವಿಶಾಲಕರುಣಿಯೆ 3 ದಾತ ಈತನೆಂಬ ಖ್ಯಾತಿ ಬಿರುದು ನಿನಗೆ ಪ್ರೀತಿಯಿಲ್ಲವೇ ಗುರುವೇ ಜೋತು ಬಂದೆ ಅಡಿಗೇ ಬೋಧೆಯ ನೀತಿ ಪೇಳಿದೆ ಏತಕೀತಡ ಮಾತಲಾಲಿಸು ದೂತನಿನ್ನವ ಪೂತಕಾಯನೆ4 ಪರಮ ಭಕ್ತರ ವೃಂದ ನಿರುತ ನಮಿಪ ಚೆಂದ ಅರಿಯೆ ವರ್ಣನೆ ಎಂದ ಸುರಿಸು ಭಕ್ತಿಯ ಗಂಧ ಸೂರಿ ಬೀರಿಕರುಣವ ಭಾರತೀಶನ ಸಾರಶಾಸ್ತ್ರದಿ ತೋರು ತತ್ವಾರ್ಥ 5 ಲೋಕ ಹರಕೆ ನೀಡಿ ಸಾಕಿ ಸಲಹೆ ಹೆಜ್ಜೆ ನೂಕಿ ದುರಿತರಾಶಿ ಸಾಕುಹರಿಯ ತೋರಿ ಶ್ರೀಕರಾರ್ಚಿತ ಪಾದಪಲ್ಲವ ಪಾಕನಾಶನ ಏಕ ವೀರನ ನಾಕ ಋಷಿಗತಿಪ್ರಿಯ ಶಿಷ್ಯನೆ 6 ಪಾಹಿ ಜ್ಞಾನದ ಖಣಿಯೆ ಪಾಹಿ ಭಕ್ತರ ನಿಧಿಯೆ ಪಾಹಿ ಮತಿಮತಸ್ಥಂಭ ಪಾಹಿ ಶ್ರೀ ಹರಿಯ ದೂತ ಪಾಹಿಸುಗುಣೋದಾರ ಮಹಿಮನೆ ಪಾಹಿನತಜನ ಭಾರವಹಿಪನೆ ಪಾಹಿಜಯಮುನಿ ವಾಯುವಂತರ ಗೇಹ ಸಿರಿಕೃಷ್ಣವಿಠಲ ಭಜಕ 7
--------------
ಕೃಷ್ಣವಿಠಲದಾಸರು
ಯಾತರವ ನಾನೈಯ ಇಂದಿರೇಶ ಪ ಹೋತನ ಕೊರಳೊಳಗೆ ಮೊಲೆಯಿರ್ಪ ತೆರದಲಿ ಅ.ಪ ಗ್ರಾಸಕ್ಕಲ್ಲದೆ ನಾನು ದೇಶ ದೇಶಕೆ ಪೋಗಿ ವಾಸಪಗೆ ಸಮರೆಂದು ದೋಶಿಗಳ ಪೊಗಳೀ ಕಾಸುಗಳಿಸಲು ದಾಸ ವೇಷ ಹಾಕಿದ ಶೂರ ಏಸು ಜನ್ಮವು ಕಳಿಯೆ ನಾಶವಾಗದೊ ಆಶೆ 1 ನೇಮ ನಿಷ್ಠೆಗಳಾಟ ಪರರಿಗೋಸುಗ ಹೂಡಿ ಕೋಮಲಾಂಗಿಯರ ಮನ ಮೆಚ್ಚಿಸುತ ಜಗದೊಳಗೆ ಹೇಮದಾಶೆಗೆ ಸೂಳೆ ಪ್ರೇಮವನ್ನು ತೋರ್ಪಂತೆ ನಾಮಸವಿಯುಣ್ಣದೆಲೆ ಗಾಯನವ ಮಾಡುವೆನು 2 ವ್ಯಾಸಕೂಟದಿ ಬೇರೆ ದಾಸಕೂಟವು ಎಂಬ ದೋಷವಾದವ ಮಾಡಿ ವ್ಯಾಸದಾಸರ ದ್ರೋಹ ಗ್ರಾಸವಾದೆನು ನಾನು ಶಾಸ್ತ್ರವಾಹುದೆ ಬೇರೆ ಭಾಷೆ ಬೇರೆಯು ಆಗೆ ಶ್ರೀಶ ಹರಿಸೋ ಇದನು 3 ಮಾನವರ ಬಹುಮಾನ ಸಾನುರಾಗದಿ ಬಯಸಿ ನಾನು ಮೋದಿಸುವೆ ಹೀನ ಮತಗಳ ಹುಳುಕು ಪ್ರಾಣಪತಿಮತ ಮೇಲ್ಮೆಗಾನಮಾಡೆನು ದೃಢದಿ ಸ್ವಾನುಸಂಧಾನ ವಹೀನ ಜ್ಞಾನಿಯೊ ನಾನು4 ಖ್ಯಾತಿ ಜೀವನಕಾಗಿ ಶಾಸ್ತ್ರವೋದಿದ ಮೂಢ ನೀತಿ ಪೇಳುವೆ ಜನಕೆ ನೀತಿತೆರನಾನಡಿಯೆ ನಿತ್ಯ ನೇಮವುಯನಗೆ ಈತರದ ಹರಿದಾಸ ಮಾತರಿಶ್ವಗೆ ದೂರ 5 ದಾನ ಧರ್ಮಗಳಿಲ್ಲ ಮೌನ ಜಪ ತಪವಿಲ್ಲ ಹೀನಗುಣ ಬಿಡಲಿಲ್ಲ ನಾನುಯೆಂಬುವೆನಲ್ಲ ಸೊಲ್ಲು ಏನು ಬಿಡೆದಿಹೆನಲ್ಲ ನಿನ್ನ ನಂಬಿಹೆನಲ್ಲ ನೀನು ಬಿಡೆ ಮದ್ದಿಲ್ಲ6 ಇಂತುಟಾದರು ಮೆರೆವೆ ಹಂತ ನಿನ್ನಯ ಕೃಪೆಯೊ ಯೆಂತು ಪೇಳಲಿ ಜೀಯ ಸಂತ ಜಯಮುನಿ ವಾಯುವಂತರದಿ ನಲಿವಂಥ “ಶ್ರೀ ಕೃಷ್ಣವಿಠಲ”ನೆ ನಿನ್ನಂಥ ದೊರೆಯಿಲ್ಲ ಸರ್ವೋತ್ತಮನೆ ಶರಣೈಯ7
--------------
ಕೃಷ್ಣವಿಠಲದಾಸರು
ಯಾತ್ರಕ್ಕೆ ಬಂದಿರ್ದೆನೋ ಭುವನ ಯಾತ್ರ ಮಾಡುವೆನು ಪ ಧಾತ್ರಿ ಈರೇಳಕ್ಕೆ ಸೂತ್ರಧಾರನ ಕೃಪಾ ಪಾತ್ರನಾಗಿ ಪವಿತ್ರನಾಗುವೆನು ಅ.ಪ ದೇಶ ತಿರುಗುವೆನು ದೇಹ್ಯದ ವಾಸನೆ ತೊಡೆಯುವೆನು ಆಶಾಪಾಶ ನೀಗಿ ದೋಷರಹಿತನಾಗಿ ದಾಸಜನಕೆ ಬಾಗಿ ಸಂತೋಷ ಪಡೆಯುವೆನು 1 ಪೃಥ್ವಿ ತಿರುಗುವೆನು ಹುಡುಕಿ ಸತ್ಯರ ಕಾಂಬುವೆನು ನಿತ್ಯನಿರ್ಮಲ ಹರಿಭಕ್ತಿ ಕವಚ ತೊಟ್ಟು ಮತ್ತೆ ಸಾವ್ಹುಟ್ಟುವ ಕುತ್ತ ಗೆಲಿಯುವೆನು 2 ಕ್ಲೇಶವ ತರಿಯುವೆನು ಮಾಯ ಮೋಸವ ಗೆಲಿಯುವೆನು ದಾಸಜನರ ಪ್ರಾಣೇಶ ಶ್ರೀರಾಮನ ದಾಸನಾಗಿ ಮುಕ್ತಿ ಆಸನೇರುವೆನು 3
--------------
ರಾಮದಾಸರು
ಯುಕ್ತಿಯಿಂದ ಭಕ್ತಿ ಮಾಡಲಿಕ್ಕೆ ಶಕ್ತನಲ್ಲ ನಾ ಮುಕ್ತಿಯೋಗ್ಯ ಮಾಡೊ ಭಾವಭೋಕ್ತ ಕೃಪಾನಿಧೆ ಧ್ರುವ ಧ್ಯಾನ ಮೌನ ಸ್ನಾನ ಸಂಧ್ಯಾಖೂನ ಗುರುತು ಅರಿಯೆ ನಾ ನ್ಯೂನ ಪೂರ್ಣ ನೋಡದೆನ್ನ ರಕ್ಷಿಸೋ ದಯಾನಿಧೆ 1 ಹೀನ ದೀನ ಜ್ಞಾನಶೂನ್ಯ ದಾನ ಧರ್ಮ ಅರಿಯೆ ನಾ ನೀನೆ ಕಾಯಬೇಕು ಎನ್ನ ಕರುಣಾ ಕೃಪಾನಿಧೆ 2 ದುರುಳ ದುರ್ವಾಸನೆಯ ದುರಾಚಾರಿ ದುರಾತ್ಮ ನಾ ತರಣೋಪಾಯ ದೋರಿಸೆನ್ನ ಹೊರಿಯೊ ದಯಾನಿಧೆ 3 ಅರುಹು ಕುರುಹು ನರಿಯ ದೀಹ್ಯ ಮರುಳಮಂಕ ತರಳನಾ ಕರವ ಪಿಡಿಯ ಧರೆಯೊಳಿನ್ನು ತಾರಿಸೊ ದಯಾನಿಧೆ 4 ಆಶಾಪಾಶದೊಳು ವಾಸವಾದ ದೋಷ ರಾಶಿ ನಾ ಭಾಸಿ ಪಾಲಿಸು ಪುಣ್ಯ ಪ್ರಕಾಶಿಸೊ ದಯಾನಿಧೆ 5 ಏಸು ಜನ್ಮ ಮೋಸಹೋಗಿ ಘಾಸಿಯಾದ ಜೀವ ನಾ ದಾಸರೊಡನೆ ಕೂಡಿಸೊ ಭಾಸ್ಕರ ದಯಾನಿಧೆ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯೋಗಿವರ್ಯ ಶಿರಬಾಗಿ ನಮಿಸುವೆನು ಶ್ರೀ ರಾಘವೇಂದ್ರನೆ ಪ ಹೇಳಿದ ವಚನವ ಕೇಳಿ ಮನದಲಿ ಬಹಳ ಸುಖಿಸುತಲಿಕಾಲಕಾಲಕೆ ಶ್ರೀ ಲಲಾಮನ ಲೀಲೆ ಪಾಡುತ ವ್ಯಾಳೆ ನೋಡುವಿ 1 ಸತ್ಯವಾಣಿಯು ಮಿಥ್ಯವಾಗದು ಮತ್ತೆ ಲೋಕದೊಳುಚಿತ್ತದೊಳು ಅನಿತ್ಯ ಚಿಂತಿಸಿ ವೃತ್ತಿ ಕೃಷ್ಣನೊಳು ಇತ್ತು ಪಾಡುವಿ 2 ಎಲ್ಲ ಬಿಟ್ಟವ ಸುಳ್ಳನಾಡೊದು ಎಲ್ಲಿ ಕಾಣಿಸದುಫುಲ್ಲನಾಭನ ಭಕ್ತನಲ್ಲಿ ಹೇಳಿದ ಸುಳ್ಳು ಕಾದುಕೋ 3 ಆಶೆ ತೋರಿಸಿ ನಿರಾಶೆ ಮಾಡುವುದು ದಾಸ ಜನರೊಳಗೆಈಶ ನಿಜ ಬಹು ತೋಷವೆಂಬುದು ಭಾಷಿಸದೆಯತಿವೇಷ ದಿವಿಜನೆ 4 ಶಕ್ತಿವಚನವ ಕೃತ್ಯಮಾಡಲು ಶಕ್ತನಾರದನು ಒತ್ತಿ ಪೇಳಿದಹತ್ತರಾತನ ಭೃತ್ಯರಾಶಯ ಪೂರ್ತಿಮಾಡಿಸು 5 ನೀನೇ ಬಾಂಧವ ನೀನೇ ದೈವತ ನೀನೇ ಗುರುಪಿತನುನಾನು ನಂಬಿದೆ ಮೌನಿ ತೋರಿಸು ವೇಣು ಬಾಲಕನ ಜವ 6 ಇಂದು ಎನ್ನೊಳುನಿಂದು ಪ್ರಾರ್ಥಿಸು 7
--------------
ಇಂದಿರೇಶರು
ರಕ್ಷಿಸೋ ಶ್ರೀ ವೇದವ್ಯಾಸ | ಬದರಿನಿವಾಸ | ಆಶ್ರಿತ ಜನತೋಷ ಪ ಭೃತ್ಯ ಮತ್ಸ್ಯ | ವ್ಯಕ್ತನಾದನು ಹರಿ ಅವ್ಯಕ್ತ | ಕರೆಸಿದ ಸತ್ಯ | ವತಿಯಸುತ ಗೋಪ್ತ 1 ಕಾಲ ತಾಪ | ಬಟ್ಟರು ಜನ ಪ್ರಲಾಪ |ಶ್ರೀಪತಿ ತಾಳ್ದನು ರೂಪ | ವ್ಯಾಸ ರೂಪ | ದೋಷ ನಿರ್ಲೇಪ |ದ್ವೀಪದೊಳುದಿಸಿತೀರೂಪ | ಯಮುನಾ ಸಮೀಪ | ಪರಾಶರ ಜನೆನಿಪ 2 ಸೂತ್ರ ದಾತ | ಎನ್ನೊಳು ಪ್ರೀತ | ನಾಗು ಭಕ್ತಿ ಪ್ರದಾತ 3 ಜನಿತ | ಸಕಲ ಭಸ್ಮೀಭೂತ 4 ಭೋಗಾದಿಂ ಪ್ರಾರಬ್ಧ ಪೋಗಾಡಿದಂಥ | ಕಾರ್ಯಾಖ್ಯ ಬ್ರಹ್ಮಪ್ರಾಪ್ತ |ಯೋಗೀಜನ ಪ್ರಳಯೇಪಿ ಅಜನ ಪ್ರಾಪ್ತ | ಇತ್ಯಾದ್ಯವಸ್ಥಾದಿಯೊಳ್ಗತ |ಮಾರ್ಗಗಳು ಶೇಷ ಗರುಡಾದಿಯೋಳ್ಗತ | ಈ ಪರೀಯಿಂ ಸಮಸ್ತ |ಯೋಗೀ ಜನಂಗಳಿಗೆ ಆ ಅಜಸಮೇತ | ವಿರಜಾ ಸ್ನಾನ ಪ್ರಾಪ್ತ ||ಸ್ನಾನದಿಂದಲಿ ಲಿಂಗನಾಶ | ಮಾಡುವೆ ಶ್ರೀಶ | ಆದರವರು ನಿರ್ದೋಷ |ಅನಂತರ್ಹರಿ ಉದರ ಪ್ರವೇಶ | ಕೆಲವರು ಶ್ರೀಶ | ಆನಂದವೇ ವಪುಷ |ಜ್ಞಾನಿ ಇನ್ನಿತರರು ತದ್ದೇಶ | ದಲ್ಲಿವಾಸ | ಆನಂದಾನನುಭವ ಶ್ರೀಶ |ನಾನಾ ಪರಿಯೋಗ್ಯರ ಶ್ರೀಶ | ಪ್ರಳಯದಲ್ಲೀಶ | ಧರಿಸುವಸರ್ವೇಶ 5 ಪರಿ ಕಾರಣಂಗಳಿಂದ ನಿನ್ನ | ಇಚ್ಚಾಖ್ಯ ಆವರಣವಪಸಾರಿಸೀ |ತುಷ್ಟೀಯಿಂದಲಿ ಸ್ವಸ್ತಯೋಗ್ಯಸುಖವ | ಅಭಿವ್ಯಕ್ತಿಂಗಳಂ ಗೈಯ್ಯುವಾ |ಲಕ್ಷ್ಣ ಮುಕ್ತಿದ ಮಾಯೆ ಪತಿಯು ಆದ | ಶ್ರೀವಾಸುದೇವನ ದರ್ಶನ ||ವಾಸುದೇವನ ಕಂಡನಂತರ | ಮತಿವಂತರ | ಪೊಗಿಸುವಾಗಾರ |ಶ್ರೀಸಿತ ದ್ವೀಪಾದಿ ಆಗಾರ | ವರ ಮಂದಿರ | ವೈಕುಂಠಾಗಾರ | ಲೇಸಾಗಿ ಸ್ವಯೋಗ್ಯ ಸುಖಸಾರ | ಅತಿಪರತರ | ಅನುಭವಿಪ ವಿಸ್ತಾರ | ಆಶಾಮಾತ್ರದಿ ಸರ್ವ ಸುಖಸಾರ | ಸೃಷ್ಟ್ಯಾದಿ ಇತರ | ಇತ್ತು ತೋಷಿಪೆ ಅವರ 6 ಚಾರು ಕೌಪೀನ ಮದನ ದರ ಪೋಲ್ವಧದನ | ತುಳಸಿಯ ವನ | ಮಾಲೆಗಳ್ಹಸನ |ನಂದನಂದನ ನಿನ್ನ ಕರುಣ | ಗುಣಾಭರಣ | ತೊಡಿಸಯ್ಯ ಪ್ರಧನ 6 ಪ್ರೀಯಾ ಪ್ರೀಯ ಸರ್ವ ವಿಷಯಕೆಲ್ಲ | ನೀನೇ ಮೂಲನೆಂದು ತಿಳಿಸೋ |ಕಾಯಾ ವಾಚಕ ಮಾನಸೀಕ ಸರ್ವಾ | ಕರ್ಮಾದಿಗಳೆಲ್ಲವಾ ||ಜೀಯಾ ನಿನ್ನಯ ಚರಣಕಿತ್ತು ನಮಿಪ | ಬಿಂಬಕ್ರಿಯಾಜ್ಞಾನವಾ ||ರಾಯಾ ನೀನೆನಗಿತ್ತು ಪಾಲಿಸಯ್ಯ ಮುದದೀ | ನಿನ್ನನ್ನು ನಾ ಬೇಡುವೆ ||ತುತಿಪ ಜನರ ಸುರಧೇನು | ಕಾಮಿತವನೆ | ಕರುಣಿಪ ಕಲ್ಪದ್ರುಮನೆ |ಮತಿಗೆಟ್ಟ ಮನುಜನು ನಾನೆ | ನಿನ್ನ ಪಾದವನೆ | ನಂಬಿ ಬಂದಿಹೆ ನಾನೇ |ಹಿತದಿಂದ ನೀನೆನ್ನ ಕರವನೆ | ಪಿಡಿ ಎಂಬೆನೆ | ನಾ ಬೇಡುವೆ ನಿದನೆ |ಅತುಳ ಮಹಿಮ ಜಗದೀಶನೆ | ಮಧ್ವೇಶನೆ | ಗುರು ಗೋವಿಂದ ವಿಠಲನೆ 8
--------------
ಗುರುಗೋವಿಂದವಿಠಲರು
ರಂಗಾ ನಿನ್ನ ಕೊಂಡಾಡುವ ಮಂಗಳಾತ್ಮರ ಸಂಗಸುಖವಿತ್ತು ಕಾಯೋ ಕರುಣಾ ಸಾಗರ ಪ ಅರಿಯರೋ ನೀನಲ್ಲದೆ ಮತ್ತನ್ಯದೈವರ ಮರೆಯರೋ ನೀ ಮಾಡಿದ ಅನಿಮಿತ್ತೋಪಕಾರ ತೊರೆಯರೋ ನಿನ್ನಂಘ್ರಿ ಸೇವಾ ಪ್ರತಿವಾಸರಾ ಒರೆಯರೋ ಪರತತ್ವವಲ್ಲದೆ ಇತರ ವಿಚಾರಾ 1 ಮೂಕ ಬಧಿರರಂತಿಪ್ಪರೋ ನೋಳ್ಪಜನಕೆ ಕಾಕುಯುಕುತಿಗಳನ್ನು ತಾರರೋ ಮನಕೆ ಸ್ವೀಕರಿಸರನರ್ಪಿತ ಒಂದು ಕಾಲಕ್ಕೆ ಆ ಕೈವಲ್ಯಭೋಗ ಸುಖ ಅವರಿಗೆ ಬೇಕೆ 2 ಕಂಡಕಂಡಲ್ಲಿ ವಿಶ್ವರೂಪ ಕಾಂಬೋರೋ ಉಂಡು ಉಣಿಸಿದ್ದೆಲ್ಲ ನಿನ್ನ ಯಜ್ಞವೆಂಬರೋ ಬಂಡುಣಿಯಂದದಿ ನಾಮಾಮೃತವ ಸವಿವರೋ ಹೆಂಡಿರು ಮಕ್ಕಳು ನಿನ್ನ ತೊಂಡರೆಂಬೋರೋ 3 ಬಿಡರು ತಮ್ಮ ಸ್ವಧರ್ಮಗಳೇನು ಬಂದರೂ ಬಡರು ದೈನ್ಯ ಒಬ್ಬರಿಗೂ ಲೋಕ ವಂದ್ಯರೊ ಪಿಡಿಯರೋ ನಿನ್ನ ದ್ವೇಷಿಗಳಿಂದೇನು ಬಂದರು ಕೊಡುವರೋ ಬೇಡಿದಿಷ್ಟಾರ್ಥ ನಿತ್ಯಾನಂದರೂ 4 ಜಯಾಜಯ ಲಾಭಾಲಾಭ ಮಾನಾಪಮಾನಾ ಭಯಾಭಯ ಸುಖದುಃಖ ಲೋಷ್ಟ ಕಾಂಚನಾ ಪ್ರಿಯಾಪ್ರಿಯ ನಿಂದಾಸ್ತುತಿಗಳನುದಿನಾ ಶ್ರೀಯರಸ ಚಿಂತಿಸುವರೋ ನಿನ್ನ ಅಧೀನ 5 ಈಶಿತವ್ಯರೆಂಬರೋ ಏಕಾಂತ ಭಕ್ತರೋ ದೇಶಕಾಲೋಚಿತ ಧರ್ಮ ಕರ್ಮಾಸಕ್ತರು ಆಶಾ ಕ್ರೋಧ ಲೋಭ ಮೋಹ ಪಾಶ ಮುಕ್ತರು ಈ ಸುಜನರೇವೆ ಶಾಪಾನುಗ್ರಹ ಶಕ್ತರು 6 ನಗುವರೋ ರೋದಿಸುವರೊ ನಾಟ್ಯವಾಡೋರೊ ಬಗೆಯರೋ ಬಡತನ ಭಾಗ್ಯ ಭಾಗವತರು ತೆಗೆಯರೋ ನಿನ್ನಲ್ಲಿ ಮನ ಒಮ್ಮೆಗಾದರೂ ಜಗನ್ನಾಥವಿಠಲ ನಿನ್ನವರೇನು ಧನ್ಯರೋ 7
--------------
ಜಗನ್ನಾಥದಾಸರು
ರಚ್ಚೆ ಕಟ್ಟೆ ಪುರಾಣ ರಾದ್ಧಾಂತವು -ಇದು ಪ ಹುಚ್ಚುತನದಲಿ ನೀ | ಚೋಚ್ಚ ನುಡಿಗಳನಾಡುವುದು ಅ.ಪ ನವನವ ಆಸ್ತಿಗಳೆಲ್ಲ | ಇವನ ಮನೆಗೆ ಸೇರಿ ಬಂತು 1 ಸೊಟ್ಟಮೂತಿ ನಾಗಪ್ಪನ ಸೋದರಿಯರು ಏನು ಹೇಳಲಿ 2 ಇವನಿಗೆ ಬಂತು ಮತ್ತೆ ನಾವು ಬಡವರು ನಮಗೆಲ್ಲಿಂದ ಬಹುದು? 3 ದುರ್ಯೋಧನ ಯೋಗ್ಯ ಕುಂತೀತರಳರದೇ ಅನ್ಯಾಯ ಕೃಷ್ಣನು ನೆರೆ ಮೋಸಗಾರನು ಭಾರತ ಕಥೆಯೆಂಬುವುದು4 ಮೋಸಗಾರರೀವೂರೆಲ್ಲ ಆಶೆ ಪಾತಕರು 5 ತಂಗಿ ಆಸ್ತಿ ಸೇರಿತಿವಗೆ ಭಂಗಿ ಕೋರ ವೆಂಕಟರಾಯ ಮಂಗಿ ಸಂಗದಿಂದಲೀ ಕಮಂಗನಾನನು 6 ಮಧ್ವರಾಯನ ಮಗನ ಕಥೆ ಏನು ಹೇಳೋಣ 7 ಕಾಸಿದ್ದವರೇನು ಮಾಡಿದರೂ ಮಾಡಬಹುದು 8 ದಾರಿಹೋಕರೆಲ್ಲ ಕೂಡಿ ಭಾರಿ ಭಾರಿ ಮಾತುಗಳಾಡಿ ಸೂರೆಗೊಂಬುವರು ಪಾಪ ಶರಧಿಯನ್ನು 9 ಶರಣರ ದೂರಿಪಾತಕಕ್ಕೆ ಭಾಗಿಗಳಹರು 10
--------------
ಗುರುರಾಮವಿಠಲ
ರಾಜೀಸುವದು ನಾಭಿಯಾ ಸುರಗಂಗೆಯಂ ಶೇಧೀಭಿಯಾ ಪ ನೇತ್ರನ್ನದಯ ಪೂರ್ಣದಾ ಕಮಲಂ ಹಾರಿಸಿ ನೀಡುವ ಬುದ್ದಿ ವಿಮಲಂ ನೇ ಶ್ರೀ ವೆಂಕಟೇಶಂ ಸದಾ1 ಪೊಗಳಲಿಲ್ಲ ಮತಿ ಸಲ್ಲದೇ ಆಶ್ರಯಸಿ ನೆಲೆಗೊಳ್ಳದೇ ಭವಕಾದೆ ಪರಿಹಾರ ದಾ ಪರಿಯಂ ಕಾಣದೆ ಬೇಡಿ ಕೊಂಬೆ ಧೋರಿಯಂ ಶ್ರೀ ವೆಂಕಟೇಶಂ ಸದಾ 2 ಪಟನಾದೆ ನೆರೆ ಭಾಗ್ಯದೀ ನಡಲಂ ದೀಗಳಿ ಪಶ್ಚಾತ್ತಾಪ ಒಡಲಂ ಮನವಿಲ್ಲ ವೈರಾಗ್ಯ ದೀ ಮುಸುಕಿಷ್ಟು ದನಿವಾರ ದಾ ಕಡಲಂ ಮನಿಯೆ ಕಾಯೋ ಸಾಖರದಿಡಲಂ ಶ್ರೀ ವೆಂಕಟೇಶಂ ಸದಾ3 ಬಿದಿರೀಸಿ ವಢ ಮಾಡಿದೇ ಕೊನಿಯಿಂದ ಕಲಕ್ಯಾಡಿದೆ ಮುದವಿತ್ತೆ ಭಕ್ತಂಗದಾ ಮರಳಂ ಕಾವದು ಭಕ್ತಿಗಿಲ್ಲ ಹುರಳಂ ಶ್ರೀ ವೆಂಕಟೇಶಂ ಸದಾ 4 ಕಾಂತಿಚರಣಾಂಬುಜಭಾವ ಭಕ್ತಿಂದಲಿ ಶರಣಂ ಪೊಕ್ಕವರಿಂಗೆ ಜನ್ಮಮರಣಂ ಹರಿಸೂವದಯದಿಂದಲಿ ಸ್ಮರಣಂ ಮಾಡಲು ಪಾಪಹರಣಂ ಸಲೆ ಸಾಧ್ಯಸುರ ಸಂಪದಾ ಕರುಣ ಬೀರುತ ಕಾಯೋಯನ್ನಹರಣಂ ಶ್ರೀವೆಂಕಟೇಶಂ ಸದಾ 5 ಮಾನವ ತನುಂಪಡದೀಗ ಸದ್ಗತಿಯಾ ಗಡ ಹೊಂದಿ ವಿಷಯೇಚ್ಛೆಯಾ ಅಪರಾಧವನು ಗಣಿ ಸದಾ ಪಿತನಂ ತನ್ನಯ ಕಾಯೋ ಜ್ಞಾನ ಚ್ಯುತ ನಂ ಶ್ರೀ ವೆಂಕಟೇಶಂ ಸದಾ 6 ಮೆಚ್ಚಿ ಸುಮನ ನರಿಯೆನು ಯಂತ್ರಿಪ್ಪ ದಾಂನರಿಯೆನು ಗಜವಂ ತಾರಿಸಿದಂತೆಯನ್ನ ವೃಜಿನಂ ದಾಟೀ ಸುವಾ ಬಿರದಾ ಕುಜನಂ ಸೇರಿದಂತೆ ಯನ್ನಂ ಕಾಯೋದ್ವಿಜನಂ ಶ್ರೀ ವೆಂಕಟೇಶಂ ಸದಾ 7 ಸದನಂ ಸುದ್ಗುಣ ಗಾಣದಬ್ಜವದನಂ ಸ್ಪರ್ಧಿಸುತಿದನುಜರಾ ಕದನಂ ಕರ್ಕಶವಾಗಿ ಸೌಖ್ಯ ಪ್ರದನಂ ಭಾವಿಸುತಿಹ ಮನುಜರಾ ಸುಕುಮಾರ ಘನ ಶಾಮದಾ ಇದನಂ ಬಣ್ಣಿಪರಾರು ವೇದವಿದಿನಂ ಶ್ರೀ ವೆಂಕಟೇಶಂ ಸದಾ8 ಶಿಖಿ ಕೇತನಾ ಕಾಯ ಭಂಡಿಯವಾಧನು ಪ್ರಾರ್ಥನಾ ಪರಬ್ರಹ್ಮ ತುರುಗಾಯ್ವನೆಂದು ಪೊಗಳ್ವಾರಿಂತರಿವರೈ ಚರಿತದಾ ಗುರು ಮಹಿಪತಿ ಕಂದಸಲಹೋ ಸ್ಮರಿಸಲು ಅಷ್ಟಕವಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮ - ರಕ್ಕಸ ಸಂಕಲ ಭೀಮಮುನಿದರೆ ಲೋಕ ವಿರಾಮ | ಸಾಮಸನ್ನುತ ನಿಸ್ಸೀಮ ಪ ಕಾಮಿತಾರ್ಥ ಸುಮಹೋದಧೆ - ನಿಪ್ಕಾಮನ ಮಾಡೆಲೊ ವಾಮನ ಮೂರ್ತಿಅ.ಪ. ಧಾಮ ವೈರಿ ಸುತ್ರಾಮ ||ಕಾಮನಯ್ಯ ಕಮ | ನೀಯ ಮೂರುತಿಯೆಕಾಮಿಪೆ ನಿನ್ನನು | ಭೂಮ ಗುಣಾರ್ಣವ 1 ಪಾತಕ ಕಳೆಯೋ 2 ಬಾಲಾ - ಕೆಡಿಸಿದೆ ಗೋಪೆರ ಶೀಲಾ | ಜನನಿಗೆ ತೋರಿದೆ ಲೀಲಾವದನದಿ ಲೋಕ ವಿಶಾಲಾ | ಮಾವ ಕಂಸಗೆ ನೀ ಕಾಲಾ ||ಪಾಲು ಮೊಸರು ಬೆಣ್ಣೆ | ಲೀಲೆಯಿಂದಲಿ ಮೆದ್ದುಜಾಲತನದಿ ನಿಮ್ಮ | ಬಾಲರೆಂದ್ಹೇಳಿದೆ 3 ಶ್ರೀತಾಕೇಶಿ ನಿಷೂದನ ವೃಷ್ಟೀಶ | ಸೋಜಿಗವೇನಿದು ಸರ್ವೇಶಸಂತತ ಭಜಿಪರ ಅಘನಾಶ | ದಾಸ ಜನರ ಹೃತ್ತೋಷ ||ವಾಸವ ಮುಖ ದೇ | ವೇಶ ನಿನ್ನಯ ಪಾದಆಶ್ರಯ ದೊಳಗಿಟ್ಟು | ಪೋಷಿಸು ಎನ್ನ 4 ಕರ್ತಾ - ರಕ್ಷಿಸೆನ್ನ ತ್ರಿಜಗದ್ಭರ್ತ | ನೀ ಲೋಕೈಕ ಸಮರ್ಥಗುರು ಕರುಣದಿ ನಾನು ಕೃತಾರ್ಥ | ಒರೆವೆನೊ ನಾನೊಂದು ವಾರ್ತಾಆರ್ತೇಷ್ಟದ ಗುರು | ಗೋವಿಂದ ವಿಠಲಮೂರ್ತಿ ನೆಲಸೊ ಮಮ | ಹೃತ್ಕಮಲದಲಿ5
--------------
ಗುರುಗೋವಿಂದವಿಠಲರು
ರಾಮದೂತ ರಮ್ಯಚರಿತ ಸ್ವಾಮಿಹನುಮನೆ ಪ ಕಾಮಿತಫಲದಾತ ನಮ್ಮ ಕಾವನು ನೀನೆ ಅ.ಪ ಆಶಸಮುದ್ರವನ್ನು ದಾಟಿ ಮೋಸಗಾರರಂ ನಾಶಗೊಳಿಸಿ ದಾಶರಥಿಯ ತೋಷ ಪಡದೆ ನೀಂ 1 ತರುಣಿ ದ್ರೌಪದಿ ದೇವಿಯ ತಾತ್ಪರಿಯ ನಡೆಸಿದೆ 2 ಕಲಿಯುಗದಲಿ ಹುಲುದನುಜರಗೆಲಿದೆ ಗುರುವರ ಜಲಜನೇತ್ರ ಗುರುರಾಮವಿಠ್ಠಲನ ಕಿಂಕರ 3
--------------
ಗುರುರಾಮವಿಠಲ
ರಾಮಾ ನಿನ್ನ್ಹ್ಹೊರತನ್ಯರ ಕಾಣೆ ಪೊರೆ ನೀನೆನ್ನಾಣೇ ಶ್ರೀರಾಮಾ ಪ ಕಾಮಾಂತಕ ತನ್ನ ಭಾಮೆಗೊರೆದ ಶ್ರೀ ರಾಮತಾರಕಮಂತ್ರವೆ ಗತಿ ಲೋಕಕೆ ರಾಮಾಅ.ಪ ಮತಿವಂತ ದಶರಥ ಕೌಸಲ್ಯೆಯರ ಸುತನಾಗ್ಯವತರಿಸಿ ಅತಿ ಬಾಲ್ಯದಿ ಮುನಿಯೊಡನಡವಿಗೆ ನಡೆದು ಕಡು ದುರುಳೆಯಸದೆದು ಮತಿಹೀನ ರಕ್ಕಸರುಪಟಳವಳಿದು ಮುನಿಪತಿ ಮಖ ಬೆಳೆದು ಪತಿಸುತಸಖಹಿತ ಜನಪತಿ ಜೀವಿತ ಪಥದಾದರ್ಶವ ಜಗತಿಗೆ ತೋರಿದೆ1 ಮುನಿಗೌತಮಸತಿ ತಾ ಶಿಲೆಯಂತಿರಲು ಪದರಜದಿಂದುದ್ಧರಿಸಿ ಜಾಹ್ನವಿ ಚರಿತೆಯ ಕೇಳುತ ನಲಿದು ಅನುಜಾತನ ಬೆರೆದು ಜನನಾಥನ ಜನಕನ ಮಿಥಿಲೆಗೆ ನಡೆದು ಹರಧನುವನುಪಡೆದು ಅನುಪಮವೆನಿಪದ ನಡುವೊಳೆ ಖಂಡಿಸಿ ಜನಕಸುತೆಯ ಕರಕಮಲವ ಪಿಡಿದೆ 2 ಪರಶುಹಸ್ತರು ಮಾರ್ಗದಿ ಎದುರಾಗಿ ಅಂಜಿಸೆ ಬೆರಗಾಗಿ ಕರದಲ್ಲಾಟಿಕೆಯೊಲು ಧನುವದಗ್ರಹಿಸಿ ಕ್ಷಣದಲ್ಲುಪಹರಿಸಿ ಜನಕೆ ಹಿರಿಯರಿಗೆ ದಶರಥನಿಗೆ ಸುರನರರೆಲ್ಲರು ಪರಮಾನಂದದೊ ಳಿರುತಿರೆ ವಸಿದೆ ಸುದತಿಯೊಡನೆ ರಘುರಾಮ3 ಹಿಂದೆ ನಾ ಬಹುಜನ್ಮಗಳಲಿ ಬಂದು ನೊಂದೆನು ಈ ಭವದಿ ನಿನ್ನಲಿ ಬಂದು ನಿಂದೆ ಗತಿಯೆಂದು ಸಂದೇಹವಿಲ್ಲ ನೀನೇ ಗುಣಸಿಂಧು ಜಗಕಾಪದ್ಬಂಧು ತಂದೆ ನೀನಿಂದೆನ್ನ ಬಂಧನ ಬಿಡಿಸದೆ ಕೊಂದೆಯಾದರೆ ಕುಂದದು ನಿನಗಪಯಶ 4 ಆನಂದಮಯ ನೀನಾನಂದದಲ್ಲಿದ್ದೆ ಆಶ್ಚರ್ಯವದೇಳು ಆನಂದವನಂದು ಕುಂದದಲಿತ್ತೆ ಜಗಕತಿಶಯವೇಳು ಸಾನಂದದೊಳಿದ್ದರು ತವಸನ್ನಿಧಿಬಲದಿ ಅತಿಶಯಮತ್ತೇಳು ನ್ಹೊಂದಿಸಿ ಪೊರೆ ರಘುರಾಮವಿಠಲ 5
--------------
ರಘುರಾಮವಿಠಲದಾಸರು
ಲಕ್ಷ್ಮೀ ನಾರಾಯಣ ವಿಠಲ | ಪೊರೆಯ ಬೇಕಿವಳಾ ಪ ವಾಹನ ದೇವ | ಲಕ್ಷುಮಿಯ ರಮಣಾ ಅ.ಪ. ಸೃಷ್ಟಿ ಸ್ಥಿತಿ ಸಂಹಾರ | ಅಷ್ಟಕ್ಕು ಕಾರಣನೆಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೇ |ಶಿಷ್ಟ ಸದಾಚಾರ | ನಿಷ್ಠೆಯಲಿ ಗೈಯ್ಯುವಳುಶಿಷ್ಟೇಷ್ಟ ಹರಿಯೆ ಸದ | ಭೀಷ್ಟಗಳಗರೆಯೋ 1 ವಿೂಸಲೆಂದೆನಿಸಿರುವ | ದಾಸತ್ವದಾಕಾಂಕ್ಷೆಸಾಸಿರಕ್ಕೋರ್ವರಿಗೆ | ಲೇಸು ಪುಟ್ಟವುದೋಈ ಸಮಯದಲ್ಲೀಕೆ | ಆಶಿಸುತ್ತಿಹಳಯ್ಯಕೇಶವನೆ ಒಲಿದಿವಳ | ದಾಸ್ಯ ಸ್ವೀಕರಿಸೋ 2 ಶುದ್ಧ ತರತಮ ಜ್ಞಾನ | ಮಧ್ವೇಶನಲಿ ಭಕುತಿಇದ್ವದಕೆ ತೃಪ್ತಿಯಿಂ | ಬದ್ಧ ವೈರಾಗ್ಯಾಸಿದ್ಧಿಸುತ ಸಾಧನದಿ | ಬದ್ಧ ಕಂಕಣಳೆನಿಸೊಅದ್ವಿತೀಯನೆ ಹರಿಯೆ | ಮಧ್ವಾಂತರಾತ್ಮಾ 3 ಮುಪ್ಪುರದ ವೈರಿನುತ | ಸರ್ಪಶಯನನೆ ದೇವಾಸ್ವಪ್ನ ಸೂಚನೆಯಂತೆ | ಗೋಪ್ಯದಂಕಿತವಾಸುಪ್ತೀಶ ಇತ್ತಿಹೆನೊ | ಒಪ್ಪಿ ಕೈಪಿಡಿ ಇವಳಗುಪ್ತ ಮಹಿಮನೆ ದೇವ | ಆಪ್ರಕಟ ಹರಿಯೇ 4 ಶರ್ವಾದಿ ದಿವಿಜೇಡ್ಯ ಶಾರ್ವರೀಕರ ಪಾಲದುರ್ವಾದಿ ತಿಮಿರಕ್ಕೆ ಮಾರ್ತಾಂಡ ರೂಪೀದರ್ವಿ ಜೀವಿಯ ಕಾವ | ನಿರ್ವಹಣೆ ನಿನ್ನದೋಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಸ್ತುತಿ ಶ್ರೀವೇದನಾಯಕೀ ಆಶ್ರಿತಜನ ಪಾಲಕೀ ಶ್ರೀವೇದನಾಯಕೀ ಜಯ ಜಯಾ ಪ ನೀನೇ ಪನ್ನಗವೇಣೀ ನೀನೇ ಮಧುರವಾಣೀ 1 ನೀನೇ ಕಮಲವಾಸೇ ನೀನೇ ಸಜ್ಜನಪೋಷೇ ನೀನೇ ಭವಭಯನಾಶೇ ನೀನೇ ಹರಿಸಂತೋಷೆ 2 ನೀನೇ ಲೋಕಮಾತೆ ನೀನೇ ಜಗತ್ಪ್ರಖ್ಯಾತೇ ನೀನೇ ಕಾಮಿತದಾತೇ ನೀನೇ ರಂಗಗೆ ಸೋತೆ 3
--------------
ಯದುಗಿರಿಯಮ್ಮ