ಒಟ್ಟು 1028 ಕಡೆಗಳಲ್ಲಿ , 93 ದಾಸರು , 777 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿ ಬಂದಿಹೆನಯ್ಯಾ ಪ ನಿನ್ನನಾ ಸ್ತುತಿಸಿ ಕೊಂಡಾಡುವೆ 1 ಕುಂದಿದ ಮನದಲಿ ನಿನ್ನನಾ ನೆನೆಯುದೆ ಮುಂದೇನುಗತಿ ಎನಗೆಂದು ತಿಳಿಯದೆ ಇನ್ನಾದರೆನ್ನ ಮನನಿನ್ನಲ್ಲಿ ನಿಲಿಸು 2 ಭೂಮಂಡಲವೆಲ್ಲಾ ತಿರುಗಿದೆ ಪ್ರಭುವೇ ನಿಮ್ಮ ಶರಣು ಬಂದಿಹೆ ನಯ್ಯ ಹೇಗುರುವೇ3 ಇಂದೆನ್ನ ಮೊರೆಕೇಳಿ ಕೇಳಿಸದಂತಿರುವೆಯಾ ಪ್ರಭುವೆ 4 ಪರದೇಶಿಯೆನುತೆನ್ನ ಕೈಬಿಡಬೇಡವೋ ಬಿಡದೆ ನಿನ್ನಡಿಗಳ ಪಿಡಿದಿಹೆನಯ್ಯಾ 5 ದೃಷ್ಟಿಯಿಂಲಿ ನೋಡಿ ರಕ್ಷಿಸು ನಮ್ಮನು | ಘಟ್ಯಾಗಿ ನಿಮ್ಮಪಾದ ಮುಟ್ಟಿ ನಾ ಭಜಿಸುವೆ6 ಸರ್ವಾಪರಾಧವ ಕ್ಷಮಿಸಿ ನೀ ಕಾಯೋ ಕಾಲಮೀರದೆಮ್ಮನು ಪಾಲಿಸಬೇಕಯ್ಯ 7
--------------
ರಾಧಾಬಾಯಿ
ನಂಬಿದೆ ನಿನಪಾದ ಅಂಬುಜಾಕ್ಷನ ಪ್ರಿಯಬೆಂಬಿಡದಲೆ ಯೆನ್ನ | ಕಾಯೋ |ಬೆಂಬಿಡದಲೆ ಯನ್ನ ಕಾಯೆಂದು ನಿನ್ನನುಹಂಬಲಿಸೂವೆ ಮೋಹನ್ನರಾಯಾ ಪ ದೋಷರಾಶಿಯನೀಗಿ | ದಾಸನ್ನ ಮಾಡಿದಋಷ್ಯಂಶರಾಗಿಹ ನಿಮ್ಮಾ |ಋಷ್ಯಂಶರು ವಿಜಯ ದಾಸರ ಪ್ರೇಮಕ್ಕೆಆಶ್ರಯನಾಗಿಪ್ಪ ಮೋಹನ್ನ 1 ಹೆಮ್ಮೆಯ ಪಡುವೆ ನಾ ನಿಮ್ಮವರವನೆಂದುದುರ್ಮಮತೆಯ ನೀಗೋ ಎನ್ನಾ |ದುರ್ಮಮತೆಯು ನೀಗಿ | ಭರ್ಮಗರ್ಭನ ಪಿತನಪೇರ್ಮೆ ದೊರಕಿಸೊ ಎನಗೆ ಮುನ್ನಾ 2 ಅಂಬುಜಾಂಬನಂಘ್ರಿ | ಅಂಬುಜ ತೋರೆಂದುಹಂಬಲಿಸಿ ಬೇಡುವೆ ನಿನಗೆ |ಹಂಬಲಿಸಿ ಬೇಡುವೆ | ಶಂಬರಾರಿಯ ತೇಜನಂಬಿ ಬಂದಿಹೆ ನಿನ್ನ ಅಡಿಗೇ 3 ವಿಷಯಧುಯ್ಯಲಿನಿಂದ | ಕ್ಲೇಶವಧಿಕವಯ್ಯ ವಿಷದಂತೆ ಕಾಣಿಸೊ ಜೀಯ |ವಿಷದಂತೆ ಕಾಣಿಸಿ | ಶೇಷವಿಲ್ಲಾಧಾಂಗೆ |ದೋಷವಳಿಸಿ ಕಾಯೊ ಜೀಯಾ 4 ನಿನ್ನ ವಂಶಜನಾಗಿ | ನಿನ್ನವರವನಾಗಿಉನ್ನಂತ ಮಹಿಮ ಶ್ರೀಹರಿಯಾ |ಉನ್ನಂತ ಮಹಿಮನು | ಅನ್ನಂತನ ಪಾದಕಾಣದಿದ್ದವನಿರೆ ವ್ಯರ್ಥ 5 ಪಂಚಾಶದ್ವತ್ಸರ | ಹಂಚಿಪೋಗುವ ಮುನ್ನಪಂಚರೂಪಾತ್ಮಕ ಹರಿಯಾ |ಪಂಚರೂಪಾತ್ಮ ವಿ | ರಿಂಚಿಪಿತನ ಪಾದಹಂಚಿಕಿಂದಲಿ ತೋರೊ ಮೋಹನ್ನ 6 ಉರುಗಾದ್ರಿವಾಸ ವಿಠಲಾತ್ಮಕನು ಶಿರಿಗುರುಗೋವಿಂದ ವಿಠ್ಠಲನ |ಗುರಗೋವಿಂದ ವಿಠಲನ ಚರಣಾರವಿಂದವತೋರಿ ಪೊರೆ ನಮ್ಮ ಹಿರಿಯಾ 7
--------------
ಗುರುಗೋವಿಂದವಿಠಲರು
ನಂಬಿದೆನೊ ನಿನ್ನ ಪಾದಾರವಿಂದಾ ಇಂಬು ಈವದು ಎನಗೆ ವೈಕುಂಠಪುರದೊಳಗೆ ಪ ಮಲಭಾಂಡದಲ್ಲಿ ಪೊಕ್ಕು ನೆಲೆಗಾಣದಲೆ ಸಿಕ್ಕು ಸಲೆ ಸೊರಗಿ ತಿರುಗಿದೆನೊ ಬಳಲಿ ಮರುಗಿ ಉಳಿವದಕುಪಾಯವನು ಒಂದರೆ ಕಾಣೆನೊ ಎಲೊ ಬಲುದೈವ ನೀನೆ ದಯಾಳು ಎಂದೂ 1 ಕೈವಲ್ಯ ಕೊಡುವಲ್ಲಿ ಮಂಡಲದೊಳು ಎಣಿಯಾರು ನಿನಗೆ ಭಂಡಕಾಯವ ತೆತ್ತು ಬರಲಾರೆ ನಿನ್ನ ತೊತ್ತು ನಿತ್ಯ ಎಳೆನೋಟದಲಿ ನೋಡು 2 ಯದುಕುಲಲಲಾಮ ಸುರಸಾರ್ವಭೌಮ ಮಹಿಮ ಮದನಪಿತ ಕಾಳಿಂಗಭಂಗ ರಂಗಾ ಮಧುಸೂದನ ವಿಜಯವಿಠ್ಠಲ ಲಕುಮಿನಲ್ಲಾ ಹೃದಯದೊಳು ಪೊಳೆವ ಬಲು ವಿಚಿತ್ರ ಚಲುವಾ 3
--------------
ವಿಜಯದಾಸ
ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು
ನಮಗೊಬ್ಹಾನೆ ತಾ ಜೀವಜೀವದ ಗೆಳೆಯ ಧ್ರುವ ಸುತ್ತಿ ಸೂಸ್ಯಾಡುತ್ಹಾನೆ ನೆತ್ತಿಯೊಳಗೆ ತುಂಬ್ಯಾನೆ ತುತ್ತುಮಾಡಿ ಉಣಿಸುತ್ಹಾನೆ ಹತ್ತಿಲೆ ತಾ ಹಾನೆ 1 ಹೊಟ್ಟೆಲೆನ್ನ ಹಿಡಿದಾನೆ ಘಟ್ಯಾಗಿ ರಕ್ಷಿಸುತಾನೆ ದೃಷ್ಟಿಸಿ ನೋಡುತ್ಹಾನೆ ಗುಟ್ಟಿನೊಳ್ಹಾನೆ 2 ತಾನೆ ಸೋತು ಬರುತ್ಹಾನೆ ಎನಗುಳ್ಳ ಸದ್ಗುರು ನಾಥ್ಹಾನೆ ಕನಗರಸಿದಾಗೊಮ್ಹಾನೆ ಮನದೊಳು ನಿಂದ್ಹಾನೆ 3 ಮಾಯದ ಸುಖ ಮರಿಸ್ಯಾನೆ ತಾಯಿ ತಂದೆ ತಾನಗ್ಹ್ಯಾನೆ ಸಾಹ್ಯ ಬಲು ಮಾಡುತ್ಹಾನೆ ಭವಭಯ ಬಿಡಿಸ್ಹ್ಯಾನೆ 4 ಮನ್ನಿಸಿ ದಯ ಬೀರುತ್ಹಾನೆ ಧನ್ಯ ಪ್ರಾಣಗೈಸುತ್ಹಾನೆ ಚಿಣ್ಣ ಮಹಿಪತಿಯ ಗುರು ತಾನೆ ಕಣ್ಣಿನೊಳ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮಿಪೆ ನದಿ ದೇವತೆಗಳೇ | ನಿಮಗೆ ಪ. ನಮಿಪೆ ನದಿ ದೇವತೆಗಳೇ ನಿಮ್ಮ ಚರಣಕ್ಕೆ ಕಮನೀಯ ಗಾತ್ರೆಯರೆ ಕಂಜದಳ ನೇತ್ರೆಯರೆ ಸುಮನರ ವಂದಿತರೆ ಸುಗುಣ ಸಂಪನ್ನೆಯರೆ ಅಘ ಹರೆಯರೇ ಕಮಲನಾಭನ ಅಂಗೋಪಾಂಗ ಸಂಜಾತೆಯರೇ ಅಮರ ಭೂ ಪಾತಾಳ ಲೋಕ ಸಂಚರೆಯರೆ ನಮಿಸಿ ಸ್ನಾನವಗೈವ ನರರ ಪಾವನಗೊಳಿಪ ಅಮಿತ ಪಾವಿತ್ರತರರೇ 1 ಗಂಗೆ ಗೋದಾವರಿ ಯಮುನೆ ಸರಸ್ವತಿ ಸಿಂಧು ಮಂಗಳಾಂಗೆ ಕೃಷ್ಣ ಭೀಮರಥಿ ಪಲ್ಗುಣಿ ಸಂಗಮ ತ್ರೀವೇಣಿ ಸರಯು ಗಂಡಿಕಿ ಸೀತ ತುಂಗಭದ್ರಾ ನಾಮರೇ ಅಂಗ ಮಾಲಾಪಾರಿ ಕಾವೇರಿ ಕಪಿಲೆ ನರ ರಂಗ ಪಾವನ ಗೈವ ಪುಷ್ಕರಗಳಭಿಮಾನಿ ಅಂಗನೆಯರೆÀಲ್ಲರಿಗೆ ಅಭಿವಂದಿಸುವೆ ಅಘವ ಹಿಂಗಿಸುವುದೆಂದು ಮುದದೀ 2 ಬಂದು ಸ್ವಪ್ನದಿ ಮಾಘ ಶುದ್ಧ ನವಮೀ ಭರಣಿ ಸಂಯೋಗದ ಪರ್ವವೆಂದು ಭದ್ರೆಲಿ ಸ್ವಾನ ವಿಂದು ಗೈದೆವು ಎಂದು ಮುಂದೆ ಕುಳ್ಳಿರೆ ನಾನಾ ನಂದದಿಂ ಕಂಡು ನಿಮ್ಮಾ ಸುಂದರಿಯರೇ ನಿಮ್ಮ ಸಂದರ್ಶನದಿ ಫಲವು ಬಂದುದೆನಗೆಂದು ನಾನಂದ ವಚನಕೆ ನಲಿದು ಒಂದು ಅರಿಯದ ಎನಗೆ ತಂದು ಕೊಟ್ಟಿರಿ ಸ್ನಾನ ದಿಂದ ಬಹು ಪುಣ್ಯ ಫಲವಾ 3 ಹರದಿಯರೆ ಕಂಡೆ ನಿಮ್ಮರವಿಂದ ಮುಖ ಶುಭ್ರ ಸರಿತು ದೇವತೇಗಳೇ ಗುರು ಕೃಪೆಯ ಬಲದಿಂದ ಸಿರಿ ನದಿಗಳೇ ಜಗದಿ ಭರದಿಂದ ಪರಿದು ಸಾಗರವ ಕೂಡುವ ತ್ವರದಿ ಪರಿಪರಿಯ ಜಲ ಜಂತು ಸಂಸಾರಿ ಸಂಗೆಯರೆ ನರರು ಬಣ್ಣಿಸಲಳವೆ ಕರುಣಿ ನಿಮ್ಮಯ ಮಹಿಮೆ ಸಿರಿಕಾಂತ ಪ್ರಿಯಸುತೆಯರೇ 4 ಶ್ರೇಷ್ಟನದಿ ಅಭಿಮಾನಿ ಸತಿಯರೇ ಎನ್ನ ಅಘ ಸುಟ್ಟು ನಿರ್ಮಲ ಭಾವ ಕೊಟ್ಟು ಹೃತ್ಪದದಲಿ ವಿಷ್ಣು ಮೂರ್ತಿಯ ಕಾಂಬ ಶ್ರೇಷ್ಟ ಜ್ಞಾನದ ಮಾರ್ಗ ಕೊಟ್ಟು ಸದ್ಭಕ್ತಿ ಭರದೀ ಚಿಟ್ಟನೇ ಚೀರಿ ದಾಸ್ಯದ ಭಾವದಲಿ ಕುಣಿದು ಶ್ರೇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲನ ಪದ ಮುಟ್ಟುವೊ ವಿಜ್ಞಾನ ಪ್ರವಹ ರೂಪದಿ ವಲಿದುದಿಟ್ಟಿಯರ ಸಂತೈಸಿರಿ 5
--------------
ಅಂಬಾಬಾಯಿ
ನಮಿಪೇ ನಮಿಪೇ ನಮಿಪೇ ಶ್ರೀ ಗುರುದೇವಾ ಜ್ಞಾನಬೋಧಾ ನೀಡಿ ಮನದಾ ದೀನತನ ಬಿಡಿಸಿ ನೀನೆ ಆ ಪರಮಾತ್ಮನೆನುವಾ ಸ್ವಾನುಭವ ಹಿಡಿಸಿ ಹೀನವಿಷಯಾಸಕ್ತಿಯಾ ನೀಗಿಸಿ ಎನಗಾಗಿ ಜಗದಸುಖದ ಮರುಳು ಬಿಡಿಸಿ ಸೊಗಸ ತೋರಿಸಿದಿ ಅಘವನಳಿದು ಸೊಗಸಿನೊಳಗೆ ಖಗೆಯ ನಿಲಸಿದಿ ನೀ ಬಗೆಯ ರೋಗವೆಲ್ಲವ ನೀಗಿಸಿ ಎನಗಾಗಿ
--------------
ಶಂಕರಭಟ್ಟ ಅಗ್ನಿಹೋತ್ರಿ
ನಮಿಸುವೆನು ವ್ಯಾಸಾರ್ಯ | ಸುಮನಸರಿಗತಿ ಪ್ರೀಯ ವಿಮಲಕೀರ್ತಿ ಸುಶಯ್ಯ ಯತಿವರಾರ್ಯ ಪ ಅಮಮ ನಿಮ್ಮಯ ಕೀರ್ತಿ ಪೊಗಳಲಳವೇ ಎನಗೆಸುಮನಸ ಮುನಿಯನುಗ್ರಹೀತಾ - ಖ್ಯಾತಾ ಅ.ಪ. ಕನಕ ಕಶ್ಯಿಪು ಸುತನೆ | ಧನಕನಕ ತೃಣಗಣನೆಅಣು ಘನನ ಶ್ರೀ ಚರಣ | ವನಜ ಭ್ರಮರಾ |ಮನುಜಮೃಗ ವೇಷ | ಶ್ರೀ ನರಹರಿಯ ಮೂರ್ತಿಯನುಘನವಾದ ಸ್ತಂಭದೊಳು | ಕರೆದು ತೋರಿಸಿದೇ 1 ಮತ್ತೆ ನೀ ತ್ರೇತೆಯಲಿ | ಹತ್ತು ತಲೆ ರಾವಣನಭ್ರಾತೃವಾಗವತರಿಸಿ | ಕೀರ್ತಿಯಲಿ ಮೆರೆದೇ |ಭೃತ್ಯ ಭಾವದಿ ನಮಿಸಿ | ಸತ್ಯಾತ್ಮ ಶ್ರೀಹರಿಯವಿಸ್ತರದ ಕೀರ್ತಿಯಲಿ | ಲಂಕ ಪತ್ತನವಾಳ್ದ 2 ನರಪ ಪ್ರತೀಪನಾ | ಪರಸೂನು ವೆಂದೆನಿಸಿ ಕುರುಪತಿಯ ಋಣಸೇವೆ | ಸರಿಯಾಗಿ ಸಲಿಸೀ |ಮರುತಾತ್ಮ ಭೀಮನಿಂ | ವರವನೇ ಪಡೆಯುತ್ತವರ ಕಲೀಯಲಿಯತಿ | ವರನೆನಿಸಿ ಮೆರೆದೇ 3 ಬ್ರಹ್ಮಣ್ಯಯತಿ ಕರಜ | ಬ್ರಹ್ಮ ಬ್ರಾಹ್ಮಣ ಪ್ರೀಯಬ್ರಹ್ಮಣ್ಯ ಪ್ರೀಯ ಸು | ಬ್ರಹ್ಮಣ್ಯನಾವೇಶನೇ |ಬ್ರಹ್ಮಾಸ್ಮಿ ಎಂದೆನಿಪ | ಬ್ರಹ್ಮದ್ವೇಷಿಯ ನಿಕರಬ್ರಹ್ಮಾಂಡದಲಿ ತರಿದೇ | ಬ್ರಾಹ್ಮಣರ ಪೊರೆದೇ 4 ಭಾಗವತ ಪ್ರೀಯ 5
--------------
ಗುರುಗೋವಿಂದವಿಠಲರು
ನಮೋ ನಮೋ ನರಹರಿಪ್ರಿಯಾನರಸಿಂಹಾರ್ಯ ಪಗಲಗಲಿ ಶ್ರೀ ನರಸಿಂಹಾರ್ಯ ಕರುಣದಿಪೊರೆಸದ್ಗುರುವರ್ಯಾ ಶರಣು ಬಂದೆನು ತಂದೆಮಾಡೊ ದಯಾ ತಂದೆ ಮಾಡೊ ದಯಾಪುನರ್ಜನ್ಮ'ತ್ತ ಮಹಾರಾಯಾ 1ನಿಮ್ಮ ಚರಿತ್ರವೆನಗೆ ಸ್ಪೂರ್ತಿನಿಮ್ಮ ಸ್ಮರಣೆ ಜ್ಞಾನದ ಜ್ಯೋತಿನಿಮ್ಮ ಅನುಗ್ರಹವೆ ಕೀರ್ತಿನಿಮ್ಮ ಪಾದವೇ ಎನಗೆ ಗತಿ 2ನಿ'್ಮುಂದಲೇ ಗಾಲವ ಕ್ಷೇತ್ರನಿಮ್ಮ ಮನೆಯು ಸದಾ ಅನ್ನಛತ್ರನಿಮ್ಮ ಆಶ್ರಯವೇ ಜ್ಞಾನ ಸತ್ರನಿಮ್ಮ ಸಂಚಾರವೇ ಮಹಾಯಾತ್ರಾ 3ಅಷ್ಟೋತ್ರ ಶತಕುಂಭ ಸ್ನಾನಾ ನಿತ್ಯ ಅಷ್ಟೋತ್ರರ ಶತ ಕುಂಭಸ್ನಾನಾಕೃಷ್ಣಾ ಭಾಗೀರಥಿ ನನ್ನಿಧಾನಾ ಸೀತಾರಾಮ ಪ್ರತಿಮಾರ್ಚನಾನಿತ್ಯ ರಾತ್ರಿ ಸುಭೋಜನಾ 4ಮುದ್ಗಲಾರ್ಯ ಬಾಬಾರ್ಯನಮೋ ಸದ್ಗುರು ನರಸಿಂಹಾರ್ಯ ನಮೋಸದ್ಭಕ್ತಪ್ರಿಯ ಭೂಪತಿ'ಠ್ಠಲ ಗಲಗಲಿ ನರಹರಿತೊರ'ಯ ನರಹರಿ ಶೂರ್ಪಾಲಿಯ ನರಹರಿ ನಮೋ ನಮೋ 5
--------------
ಭೂಪತಿ ವಿಠಲರು
ನಮ್ಮ ಗಿರಿಯ ತಿಮ್ಮ ಪರಬೊಮ್ಮನಮ್ಮ ಒಮ್ಮೆ ಕಾಯೋದ(ತ?)ಮ್ಮ ಪ. ಭಂಗ ಗುಣ ತ-ರಂಗ ಜಗದೊಳಗೆ ನೀನೆ ಸರ್ವೋತ್ತುಂಗ 1 ನೋಡೋ ಎನ್ನಲ್ಲಿ ಕೃಪೆಮಾಡೋ ಕೈಯನೀಡೋ ಎನ್ನ ಪೊರೆವನೆಂಬ ಮಾತನಾಡೊ 2 ಏಳು ಎನ್ನ ಮಾತ ಕೇಳು ಕಡು ಕೃ-ಪಾಳು ನಿನ್ನ ಹದನ ಎನಗೊಲಿದು ಪೇಳು 3 ಎಂದ ಮಾತಿಗೆ ಮುಂದೆ ನಿಂದ ನೀ ಕರುಣಿ ಗೋ-ವಿಂದ ಎಂಬುದಿನ್ನು ನಿನಗೆ ಚೆಂದ 4 ಪ್ರಿಯ ಎನ್ನ ಕಾಯೊ ಜೀಯ ಮುಕ್ತ್ಯು-ಪಾಯ ಹಯವದನ ಶೇಷಗಿರಿರಾಯ5
--------------
ವಾದಿರಾಜ
ನಮ್ಮಪ್ಪನ ಕಂಡೆ ಅಪಾರ ಮಹಿಮೆಯುಳ್ಳನ ಧ್ರುವ ಅಪ್ಪನ ಕಂಡೆನಗೆ ತಾ ಅಪಾರ ಸಂತೋಷವಾಯಿತು ಅಪ್ಪಿಕೊಂಬ್ಹಾಗೆ ಎನಗೆ ಅರ್ಪಿಸಿ ಪ್ರಾಣವ 1 ತುಂಬಿ ತುಳುಕಿತಾನಂದ ಗುಂಭಗುರುತ ಕಂಡಿನ್ನು ಕುಂಭಿನಿಯೊಳಗೆ ಪೂರ್ಣ ಅಂಬುಜಾಕ್ಷನ 2 ಗುಪ್ತಲಿದ್ದ ಧನ ತಾ ಪ್ರಾಪ್ತ ವ್ಯಾನಂತವಾಯಿತು ತಪ್ಪದೆ ಮಹಿಪತಿಗೆ ತೃಪ್ತಿ ಹೊಂದಿತು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾ ಧನ್ಯ ನಾ ಧನ್ಯ ನಾ ಧನ್ಯನಿಂದು ಪ ಹೇ ದಯಾನಿಧೇ ನಿನ್ನ ಪಾದಾನುಗ್ರಹದಿಂದ ಅ.ಪ. ಏತರವ ನಾನೆಂದುದಾಸೀನ ಮಾಡದೆಲೆ ಲೇಸು ಮಮತೆಯ ಕೋರಿ ಈ ಸ್ಥಳಕೆ ಬಂದಿ ಆಸುರೀ ಭಾವವನು ನಾಶಗೊಳಿಸಿ ಎನ್ನ ನೀ ಸಲಹಿದೆಯೋ ಜಗದೀಶ ನಿರುಪಮ ಕರುಣಿ 1 ಸತ್ವಗುಣ ಪ್ರಚುರರಲಿ ನೀ ತೋರುವುದಕ್ಕಿಂತ ಅತ್ಯಧಿಕ ವಾತ್ಸಲ್ಯವೆನ್ನೊಳಗೆ ತೋರ್ಪೆ ಕರ್ತೃ ನೀನೆಂಬ ತತ್ವ ಮನಸಿಗೆ ತಂದೆ ಭಕ್ತವಾತ್ಸಲ್ಯಕ್ಕಿದು ಕುರುಹಲ್ಲವೇ ದೇವ 2 ಸುರಲೋಕಕ್ಕಿಂತಧಿಕ ಪದವಿ ಎನಗಿತ್ತೆ ನಿರುತಲೆನ್ನಯ ಬೆನ್ನು ಕಾಯುತಲಿರುವೆ ಕರುಣಿಗೆಣೆಗಾಣೆ ಕರಿಗಿರೀಶನೇ ನಿನ್ನ ಸ್ಮರಣೆಯನನವರತ ಇರುವಂತೆ ಕೃಪೆಮಾಡೋ 3
--------------
ವರಾವಾಣಿರಾಮರಾಯದಾಸರು
ನಾ ಪೊಗಳೆಲು ನಿನ್ನಾಗಾನಾ ಪರಿಪೂರ್ಣಾ ಸತ್ಯಜ್ಞಾನಾ ಗುರುಮೂರ್ತಿ ಎನಗೆ ದಾನಾ ನೀಡಿದೆ ನೀ ದಿವ್ಯಜ್ಞಾನಾ ಅವಿಚಾರದಿಂದ ತೊಳಲಿ ಭವಭಾಧೆಯಿಂದ ಬಳಲಿ ಕಿವಿಗೊಡದೆ ನಿನ್ನನುಡಿಗೆ ಭುವನದಲಿ ದುಃಖಿಯಾದೆ ಶಿವ ನೀನೆ ಎಂದು ಪೇಳಿ ಸವನಿಸಿದೆ ಮೋಕ್ಷಪದವಾ ಏನೆಂದು ಪಾಡಲಯ್ಯಾ ನಾನೆಂಬ ಭಾವವಡÀಗಿ ನೀ ನಾನೆ ಎಂಬ ತಿಳಿವು ಘನವಾಗಿನೆಲಿಸಿತೀಗ ಏನೊಂದು ತೋರದಯ್ಯಾ ನಾನಾತ್ವವೆಂಬ ಭಾವ ಈ ಸೋಹವೆಂಬ ಪದವ ಲೇಸಾಗಿ ಬೋಧಿಸಿದ ನೀ ಆಶಾನಿವಾಸೆ ನೀಗಿ ನಾ ಶಾಂತನಾದೆ ಮನದಿ ನೀ ಸಚ್ಚಿದಾತ್ಮಗುರುವೇ ಶಂಕರನೆ ಕಲ್ಪತರುವೆ
--------------
ಶಂಕರಭಟ್ಟ ಅಗ್ನಿಹೋತ್ರಿ
ನಾನಾ ಚಿಂತನೆ ಎನಗಿಲ್ಲ ಹರಿ ನಿನ್ನ ಚಿಂತನೆ ಎನಗನುಗಾಲ ಪ ಮಾನಾಪಮಾನದ ಭಯವಿಲ್ಲೆನಗೆ ತವ ಧ್ಯಾನವೊಂದೆ ನೀಡು ಬಹು ಮಿಗಿಲ ಅ.ಪ ಉಪವಾಸಬಿದ್ದರೆ ಆಡ್ಡಿಯಿಲ್ಲ ಎನ ಗಪರೂಪ ಊಟಾದರ್ಹಿಗ್ಗಿಲ್ಲ ಕಪಟದಿ ಬೈದರೆ ಅಹಿತಿಲ್ಲ ಜನ ನಿಪುಣನೆಂದರೆ ಎನಗ್ಹಿತವಿಲ್ಲ ಸುಪಥದಿ ನಡೆಸೆನ್ನ ಸಫಲನೆನಿಸಿ ನಿಮ್ಮ ಗುಪಿತ ಮಂತ್ರ ಮಾಡನುಕೂಲ 1 ಪರಮ ಬಡತನವಿರೆ ಪರವಿಲ್ಲ ಬಲು ಸಿರಿ ಸಂಪದವಿರೆ ಹರುಷಿಲ್ಲ ಸಿರಿವರ ನಿಮ್ಮಯ ಚರಣ ಸ್ಮರಣೆವೊಂದೆ ಸ್ಥಿರಮಾಡು ಮರೀದಂತೆ ಗೋಪಾಲ 2 ಕಾಮಿನಿಯರ ಪ್ರೇಮ ನಿಜವಿಲ್ಲ ಮತ್ತು ಹೇಮ ಮುತ್ತು ರತ್ನ ಇರೋದಲ್ಲ ಭೂಮಿಸೀಮೆಯ ಸುಖವಿಲ್ಲ ಇದು ನೇಮವಲ್ಲೊಂದಿನ ಬಟ್ಟಬೈಲ ಕ್ಷೇಮಮಂದಿರ ಭಕ್ರಪ್ರೇಮದಿ ಕೊಡು ಶ್ರೀರಾಮ ನಿಮ್ಮಡಿ ಭಕ್ತಿ ನುತಪಾಲ 3
--------------
ರಾಮದಾಸರು
ನಾನು ನಿನ್ನ ಸೇವಕ ಏನಾದರೂ ಬರಲಿ ನಿನ್ನ ಬಿಡುವನೆ ರಂಗಾ ಪ ಅಪತ್ತೆ ಬರಲಿ ಅತಿಶಯದ ಕ್ಲೇಶವೇ ಬರಲಿ ಕೋಪ ಕಾಮಾದಿಗಳು ವೆಗ್ಗಳಿಸಲಿ ಪಾಪದ ರಾಶಿಗಳು ಬಂದು ಬೆನ್ನಟ್ಟಲಿ ಶ್ರೀಪತಿ ನಿನ ಪಾದವನು ಬಿಡಬಲ್ಲನೆ 1 ಬಟ್ಟೆ ಅತಿ ಕಠಿಣವಾಗಲಿ ಯಮನಾಳು ಬಲು ಭಯಂಕರರಾಗಲಿ ಯಮನು ದಂಡಿಸಿ ತೀವ್ರ ನಿರಯದೊಳಗೆ ಇಡಲಿ ಕಮಲನಾಭನೆ ನಿನ್ನ ಪಾದವನು ಬಿಡಬಲ್ಲನೆ2 ಲೋಕದೊಳಗಿದ್ದ ಜನರಿಗೆ ಬಪ್ಪ ದೋಷಗಳು ಏಕವಾಗಿ ಎನಗೆ ಬರಲಿ ಇಂದೆ ನಾ ಕಳವಳಿಸಿದರು ನಿನ್ನಂಘ್ರಿಯಗಳಾಣೆ ಶ್ರೀಕಾಂತ ವಿಜಯವಿಠ್ಠಲರಂಗ ಕೇಳೊ3
--------------
ವಿಜಯದಾಸ