ಒಟ್ಟು 3697 ಕಡೆಗಳಲ್ಲಿ , 112 ದಾಸರು , 1938 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ದಾಸ ನಾನು ಹರಿಯೆ ನೀನು ಮೆಚ್ಚುವೆಯೇನೊ ಪ ಏನು ಮಾಡಿದರೇನು ನಿನ್ನಯ ಖೂನವರಿದೆನೇನೊ ಹರಿಯೆ ಅ.ಪ ಲೋಕ ವಾರ್ತಿ ಎಲ್ಲ ಜರಿದು ಏಕ ಚಿತ್ತವಿಲ್ಲ ಕಾಕು ಪೋಕರ ನೀಕರಿ ನಿನ್ನ ಸ್ವೀಕರಿಸಲಿಲ್ಲ ಬರಿದೆ 1 ನಿನ್ನ ಮಹಿಮೆಯನ್ನು ಕೇಳಿ ನಿನ್ನ ರೂಪವಿನ್ನು ಮನದಣಿಯೆ ನೋ ಡೆನ್ನ ಮರೆಯದೆನ್ನ ದಾಸ್ಯವಿನ್ನು ಬರಿದೆ 2 ಭಾವ ತಿಳಿಯಲಿಲ್ಲ ಗುರುಗಳ ಸೇವೆ ಮಾಡಲಿಲ್ಲ ಧಾವತಿಗೊಂಡೆ ಕೇವಲ ವಾಸುದೇವವಿಠಲ ಬರಿದೆ 3
--------------
ವ್ಯಾಸತತ್ವಜ್ಞದಾಸರು
ಏನು ಪವಮಾನಿ | ಏನು ಪವಮಾನಿ | ಈ ನಿಧಿಯಲಿ ಬಂದು ನಿಂದ ಕಾರಣ | ಮಾಣದೆ ಪೇಳು ನಿ | ದಾನದಿಂದಲಿ | ಮಾನಸದಲಿ | ದಾನವಾರಿಯ | ಧ್ಯಾನ ಮಾಡುವ ಜಾಣ ಜಗದ ಪ್ರಾಣ ಸುಂದರಾ | ನಾನಾ ಮಹಿಮಾ ಗುರುವೆ ಪ ಕೇಸರಿನಂದನ ಪಾಶವಿನಾಶ ನಿರ್ದೋಷ | ಭಾರತೀಶ ಈಶಾ | ಶೇಷಾದ್ಯರಿಗುಪದೇಶದ ಕರ್ತಾ | ಲೇಸು ಸದ್ಗುಣಗಣ ಕೋಶ ಸರಸಿಜಾಸನ ಪದವಿಗೆ ಸೇರುವಾತಾ || ದೇಶದೊಳು ಬಲುಭೂಷಣ ಪಾಕಶಾಸನ ಶರದ ಶರೀರ | ದಾಶರಥಿ ಪಾದಾಸರವಿಡಿ | ದೇಸು ಬಗೆಯಲಿ | ಮೋಸ ಪೋಗದಾಯಾಸಬಡದಲೆ | ಮೀಸಲ ಮನ ಸೂಸು ವನರಾಸಿ ಲಂಘಿಸಿ 1 ಪರಿಸರ ಪೋಗಲಾಸಮಯದಲ್ಲಿ | ಭಾಸುರ ಲಂಕೆ | ಯ ಶೋಧಿಸಿದನಾ ಗೋ | ಸಾಸಿರವಿತ್ತು ಕೂಸಿನಂದದಲಿ || ಭಾಷಿಯನಾಡಿ ಪದ್ಮಾಸನಿಗೆ ಸಂ | ಸವರಿ ಫಲ ಸವಿದು ಖಳನ ನಗುತ | ನಾಶಗೊಳಿಸಿದ ಸಮರ್ಥನೆ 2 ಹಿಂದೆ ಪ್ರಳಯದಲ್ಲಿಂದಿರೇಶನು ಸುರ್ವೃಂದ ಉದರದೊಳು | ಪೊಂದಿಟ್ಟುಕೊಂಡು ಆಗ | ಅಂದು ನೀನೊಬ್ಬನೇ ಮಂದನಾಗದೆ ನಯದಿಂದಲಿ ಎಚ್ಚತ್ತು | ಪೊಂದಿಕೊಂಡು ಇದ್ದೆ | ಇಂದು ಕದನದೊಳು ಇಂದ್ರಜಿತನು ಕರದಿಂದ ಸೆಳೆದÀ ಶರ | ದಿಂದಲಿ ಸಿಗಿಬಿದ್ದು | ಬಂಧಿಸಿಕೊಂಡಂಜಿನಿಂದಂತೆ ಮೈದೆಂದಿಗಿಲ್ಲದಂತೆ ನಂದವ ತೋರಿದೆ ಇಂದು ಮೌಳಿಯ ಪೊಂದಿದದಶ | ಕಂಧರನ ಮೊಗ ಮುಂದೆ ಭಂಗಿಸಿ | ಬಂದು ಗುದ್ದಿಲಿನೊದ್ದನು ಅವನಿರೆ | ಮಂದಹಾಸದಲಿಂದ ನಗುತ 3 ಪುರವನುರುಹಿ ಅಸುರರ ಸದೆದು ತೀ | ವರದಿಂದ ಶರಧಿಯ ಮರುಳೆ ಹಾರಿ ಬಂ | ದುರವಣಿಯಿಂದ ಶ್ರೀ | ಹರಿ ಚರಣಕ್ಕೆರಗಿ ಪೊಡಮಟ್ಟು | ಕರವನೆ ಮುಗಿದು | ಚೂಡಾಮಣಿ ಇಡೆ ಮುಂದೆ ವಿವರಿಸಿದೆ | ರಿಪುಗಳಾ | ಗರದ ವಿಸ್ತಾರ | ಸುರರು ಭಾಪುರೆ ಎಂದಂಬರದಲಿವಾದ್ಯ | ಬೆರೆದಲ್ಲಿ ಮೊರೆಯಾಗಿ ಅರಮರೆಯಿಲ್ಲದೆ | ತರಿಸಿ ಮಾರ್ಗವಸರದಲಿ ವಿಸ್ತರಿಸಿ | ಧುರದೊಳಗರಿಗಳಿಂದಲಿ ಮರಣವಾದವರನ ಎಬ್ಬಿಸಿ 4 ಪಾತಾಳದೊಳು ಹತ್ತು ತಲೆಯವನಿರಲು ಕಾತುರದಿಂದ ಹೋ ಮಾತುರಕಾರ್ಚಿಸೆ | ಮಾತು ಮುಂಚದ ಮುನ್ನ ಭೀತಿ ಇಲ್ಲದೆ ಪೋಗಿ | ಪಾತಕನವಧಾನ | ದಾತಗೆ ದಿವ್ಯವರೂಥವೆಂದೆನಿಸಿ ವಿ| ಧೂತ ರಾವಣನ ವಿ | ಪಾತನ ಗೈಸಿದೆ | ಪ್ರೀತಿ ಬಡಿಸಿ ನಿಜಾರಾತಿ ವಿಭೀಷಣಗೆ ತಪ್ಪದೆ ಲಂಕಾ | ನಾಥನ ಮಾಡಿ ನೀ | ರಘುನಾಥನ ಯಡೆ ನೀ ತೆಗೆದುಂಡೆ | ಶ್ರೀ ತರುಣೇಶ ವಿಜಯವಿಠ್ಠಲನ ದೂತಾ ಹನುಮಾ 5
--------------
ವಿಜಯದಾಸ
ಏನು ಭ್ರಮೆ ಮನುಜರಿಗೆ ಎಷ್ಟು ಮಮತೆ ಪ್ರಕೃತಿಯಲಿಮೀನು ಗಾಳವÀ ನುಂಗಿ ಮೋಸಹೋದ ತೆರನಂತೆ ಧ್ರುವ ಸತಿ ನನ್ನ ಸುತರೆಂದೆನಿಸಿಹೊನ್ನುಗಳ ಗಳಿಸಿ ಹೆಚ್ಚಾಗಿ ಹೋರ್ಯಾಡಿಸಣ್ಣವರ ಮದುವೆ ಸಂಭ್ರಮದಿ ಮಾಡುವೆನೆಂದುಅನ್ನ ಮೊದಲು ಕಾಣದೆ ಅಂತರ ಪಿಶಾಚಿಯಂತೆ 1 ಬಲುವೋದಿಕೆಯಲ್ಲಿ ಬಲ್ಲವರೆನಿಸಬೇಕೆನುತಹಲವು ಬುದ್ಧಿಯಲ್ಲಿ ಹಿರ್ರನೆ ಹಿಗ್ಗುತಮಲಿನ ಮನಸಿನಜ್ಞಾನದಲಿ ತಾನರಿಯದೆ 2 ಮಿಗಿಲು ಆಸೆಗೆ ಬಿದ್ದು ಬಗೆ ಬಗೆ ಹೂಣಿಕೆಯಲಿಹೊಗದಲ್ಲಿ ಹೊಗುವರು ಹೂ ಬಿಟ್ಟು ತಿಳಿಯರುಖಗವಾಹನ ಮುದ್ದು ರಂಗವಿಠಲನ ನಾಮ ಸ್ಮರಿಸಲುವಿಗಡ ಸಂಸಾರ ಹಗರಣ ನೀರಗುಳ್ಳೆಯಂತೆ3
--------------
ಶ್ರೀಪಾದರಾಜರು
ಏನು ಮಾಡಲಿ ವಿಠಲ ಏನು ತಿಳಿಯದು ವಿಠಲ ಏನಿತ್ತು ಮೆಚ್ಚಿಸಲಿ ವಿಠಲಾ ಪ. ಜ್ಞಾನ ಮೊದಲೇ ಇಲ್ಲ ಧ್ಯಾನ ಮಾಡುವುದರಿಯೆ ನೀನಾಗೆ ವಲಿದೆನ್ನ ಸಲಹಯ್ಯ ವಿಠಲಯ್ಯ ಅ.ಪ. ತಂದೆತಾಯಿಯು ನೀನೆ ಬಂಧು ಬಳಗವು ನೀನೆ ತಂದವನುಭವದಲ್ಲಿ ಎನ್ನ ನೀನೆ ಮುಂದೆ ಪೊರೆವವ ನೀನೆ ಹಿಂದೆ ಪೊರೆದವ ನೀನೆ ಇಂದು ಪೊರೆಯುವನು ನೀನೇ ಒಂದರಿಯೆ ತವ ಪದದ್ವಂದ್ವವೆ ಗತಿ ಎಂದು ಇಂದು ಚರಣದಿ ಬಿದ್ದೆ ಪೊರೆಯಯ್ಯ ವಿಠಲಯ್ಯ 1 ಹಿಂದಿನಾ ಭಕ್ತರನು ಪೊರೆದ ಕೀರುತಿ ನೋಡೆ ಒಂದು ನಿಜವೆಂದರಿಯೆ ವಿಠಲಾ ಇಂದೆನ್ನ ಕರಪಿಡಿದ ಮುಂದಕ್ಕೆ ಕರೆದು ನೀ ಒಂದು ಮಾತನಾಡೆ ವಿಠಲಾ ಅಂದಿನಾ ಭಕ್ತವತ್ಸಲನೆಂಬ ಕೀರ್ತಿ ನಿಜ ವೆಂದು ತಿಳಿಯುತಲಿ ಆನಂದಿಸುವೆ ವಿಠಲಯ್ಯ 2 ಸಿರಿವಂತರಿಗೆ ವಲಿವ ಬಿರುದೊಂದು ಘನವೆ ಕೇಳ್ ಪರಿ ವಿಠಲಾ ಪರಿಪರಿಯಲಿ ನಿನ್ನ ಚರಣ ಪಿಡಿದಾಲ್ಪರಿಯೆ ಥರವೆ ಗರುವಿಕೆ ಪೇಳು ವಿಠಲಾ ತೆರದು ನೋಡದೆ ನೇತ್ರ ಕರದಭಯ ಪೇಳದಲೆ ಪರಿ ಕರುಣೆಗೆ ಸರಿಯೆ ಪೇಳ್ ವಿಠಲಯ್ಯ3 ಹಿಂದೆ ಕೆಲವರ ಕಾಯ್ದುದೊಂದೆ ಕೀರ್ತಿಯು ಜಗದಿ ಮಂದಿ ಹೊಗಳುವರದನೆ ಮತ್ತೆ ಮತ್ತೆ ಇಂದು ಮುಂದೆ ಅಂಥ ಬಂದ ಭಕ್ತರು ಇಲ್ಲೆ ಇಂದಿಲ್ಲವೇ ನಿನಗೆ ಆ ಶಕ್ತೀ ಇಂದಿನವರಲಿ ಅಂಥ ಭಕುತಿ ಇಲ್ಲವೆ ಪೇಳು ಇಂದಿರೇಶನೆ ಎನಗೆ ವಲಿಯದಿಹೆ ವಿಠಲಯ್ಯ 4 ಅಂತರಂಗದಿ ನಿಂತು ಶಾಂತತ್ವ ಕೊಡುವುದಕೆ ಚಿಂತೆ ಏತಕೆ ಪೇಳು ವಿಠಲಾ ಸಂತತದಿ ನಿನಧ್ಯಾನ ಚಿಂತನೆಯ ಕೊಡು ಎನಗೆ ಚಿಂತಿತಾರ್ಥಪ್ರದನೆ ವಿಠಲಾ ಕಂತುಪಿತ ಗೋಪಾಲಕೃಷ್ಣವಿಠ್ಠಲ ಗುರುಗ ಕರ ಪಿಡಿದು 5
--------------
ಅಂಬಾಬಾಯಿ
ಏನು ಮಾಡಲಿಯನ್ನ ಮನಸಿನಟ್ಟುಳಿ ಘನ | ನೀನೆ ನಿಲಿಸೋ ಹರಿಯೇ ದೊರೆಯೆ ಪ ಪರಮ ಪಾವನ ನಿನ್ನ ಚರಿತವ ಕೇಳದು | ಬರಡ ಮಾತಿಗೆ ಪ್ರೇಮಾ ನೇಮಾ 1 ಸಿರಿವರ ಮೂರ್ತಿಯನು ನೋಡಲೊಲ್ಲದು | ಸತಿಯರ ರೂಪಕೆಳಸುವದು ಹರಿದು 2 ಸಂತರ ಚರಣಕೆರಗಿ ಬಿಗಿದಪ್ಪದು | ಭ್ರಾಂತ ಜನರೊಳಗೆ ಸಂಗಾ 3 ಹರಿಯಂದೊದರಲು ನಾಲಿಗೆ ಬಾರದು | ಪರನಿಂದೆ ಜಪಿಸುವದು ಸರಿದು 4 ಸಿರಿ ಚರಣಾರ್ಪಿತ ತುಲಸಿಯ ಸೇರದು | ಪರಿಮಳದಲಿ ಬೋಗಿಲಿ ಸಾಗಿ 5 ಗುರು ಮಹಿಪತಿ ಪ್ರಭು ನಿನ್ನೆಚ್ಚರಿದಿ ಮನ | ವಿರಿಸಿಯನ್ನನುಳಹೋ ಸಲಹೋ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಮಾಡಿದರೇನು ಹೀನಮಾನವನು ಧಿನದಯಾಸಿಂಧು ಹರಿ ನೀನೊಲಿಯದಿರಲು ಪ ಸ್ನಾನ ಮಾಡಿದರೇನು ನಾನಾತೀರ್ಥವ ತಿರುಗಿ ಮೌನ ಮಾಡಿದರೇನು ನಯನಗಳು ಮುಚ್ಚಿ ದಾನ ಮಾಡಿದರೇನು ಧ್ಯಾನ ಮಾಡಿದರೇನು ಧ್ಯಾನದಾಯಕ ನಿನ್ನ ದಯವಾಗದಿರಲು 1 ಜಪವ ಮಾಡಿದರೇನು ಅಪರೂಪ ಮಡಿಯುಟ್ಟು ತಪವ ಮಾಡಿದರೇನು ವಿಪಿನವನು ಸೇರಿ ಗುಪಿತಶಾಸ್ತ್ರವ ಕಲಿತು ನಿಪುಣನೆನಿಸಿದರೇನು ಸುಫಲದಾಯಕ ನಿನ್ನ ಕೃಪೆಯಾಗದಿರಲು 2 ತತ್ವವನು ವಿಂಗಡಿಸಿ ಅರ್ಥಮಾಡಿದರೇನು ಪೃಥ್ವಿಬಿಡದ್ಯಾವತ್ತು ಸುತ್ತುಗಟ್ಟಿದರೇನು ಕುತ್ತಿಗೆಯ ಕೊಯ್ದಿಟ್ಟು ಮತ್ತೆ ಕಲೆಸಿದರೇನು ಚಿತ್ತಜಪಿತ ನಿನ್ನ ಚಿತ್ತಕ್ಕೆ ಬರದಿರಲು 3 ಯೋಗವನು ಕಲಿತು ಬಲುಯೋಗ ಮಾಡಿದರೇನು ಭಾಗವತವೋದಿ ಬಲು ಯಾಗ ಮಾಡಿದರೇನು ಭೋಗವನ್ನು ತ್ಯಜಿಸಿ ಬಲು ಜಾಗರಣ ಮಾಡಲೇನು ನಾಗಶಯನನೆ ನಿನ್ನ ನಿಗ ಬೀಳದಿರಲು 4 ಒಪ್ಪಿಡಿ ಅವಲಕ್ಕಿಗೊಪ್ಪಿ ಸಂಪದ ಕೊಟ್ಟು ತಪ್ಪುಗಾರನ ಕ್ಷಮಿಸಿ ಅಪ್ಪಿ ಪದವಿತ್ತಿ ಒಪ್ಪುಗಾರನೆ ನೀನು ಒಪ್ಪಿದ ಬಳಿಕಾವ ತಿಪ್ಪುಳದ ಗೋಜಿಲ್ಲೆನ್ನಪ್ಪ ಶ್ರೀರಾಮ 5
--------------
ರಾಮದಾಸರು
ಏನು ಸವಿಯೋ ಮಾತಿನ್ನೇನು ಸವಿಯೋ | ಶ್ರೀನಾಥನೆಚ್ಚರ ಪಡೆವಾ ಮಾನುಭಾವರ ಸ್ಥಿತಿ ಸಂಗತಿಯಾ ಪ ನುಡಿಸವಿಯೋ ವೇದಾಂತದಾ | ನಡಿಸವಿಯೋ ಸಿದ್ಧಾಂತದಾ | ದೃಢ ಸವಿಯೋ ನೈರಾಶ್ಯದಾ | ಕುಡ ಸವಿಯೋ ಉಪದೇಶವಾ 1 ನೋಟ ಸವಿಯೋ ಸಮಭಾವದಾ | ಧಾಟಿ ಸವಿಯೋ ಭಕ್ತಿ ಸುಖದಾ | ಮಾಟ ಸವಿಯೋ ಹರಿ ಪ್ರೇಮದಾ | ಊಟ ಸವಿಯೋ ನಾಮಾಮೃತದಾ 2 ತ್ಯಾಗ ಸವಿಯೋ ವಿವೇಕದಾ | ಭೋಗ ಸವಿಯೋ ನಿರ್ವಿಷಯದಾ | ಶ್ರೀ ಗುರು ಮಹಿಪತಿ ಸ್ವಾಮಿ | ಯೋಗ ಭೋಗವೆರಡಲ್ಲಿರುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಹೇಳಲಿ ನಾ ಧೇನುಪಾಲಕನಆನನವ ತೋರಿ ಧ್ಯಾನ ಹಚ್ಚೆಹನು ಪ ಸುತ್ತ ತಿರುಗುವಾಗ ಹತ್ತಿರಕೆ ಬಂದುಚಿತ್ತ ಸುಖಿಸಿ ಪೋದ ಮುತ್ತಿನಂಥ ಬಾಲ 1 ಸಣ್ಣ ಕಂದನೆಂದು ಚಿನ್ನಾಭರಣನಿಟ್ಟುಬೆನ್ನಿನ್ಹಿಂದೇ ಬಂದು ತನ್ನ ತೋರಿದನು 2 ನಂದಬಾಲಕನ ಎಂದು ಕಾಂಬೆನೆಂದುನಂದು ಮನಸ್ಸು ಹರಿವುದು ಇಂದಿರೇಶ ಕೃಷ್ಣ3
--------------
ಇಂದಿರೇಶರು
ಏನು ಹೇಳಲಿ ನಿನಗ ಮನವೇ ನಾ ಇನ್ನೇನು ಹೇಳಲಿ ನಿನಗೆ ಶ್ರೀನಾಥನಂಘ್ರಿಯ ನೀನೋಲೈಸದಿಹುದೇನೋ ಪ ಮನುಷ್ಯದೇಹ ಧರಿಸಿ ಸದ್ಗತಿಯ | ಜ್ಞಾನದಾರಿ ತ್ಯಜಿಸಿ ನೀ ಭಕುತಿ ಸುಖ | ಖೂನವಿಲ್ಲದೆ ಚರಿಸಿ | ಏನೂ ಇಲ್ಲದೆ ವಿದ್ಯಾ ಮಾಟಕ ಭ್ರಮಿಸಿಹುದೇನಾ 1 ವಿಷಯ ಸುಖ ಹರಿದು ಸಂಸಾರದಿ | ನಿಶಿದಿನದಲಿ ಸವೆದು ತಾಪತ್ರಯ | ಘಸಣಿಯೊಳಗ ಕುದಿದು | ಪಶುವಿನ ಪರಿಯಲಿ ಯಚ್ಚರ ಮರೆದಿಹುದೇನಾ 2 ಇನ್ನಾರೆ ಹಿತವರಿಯೋ ಸದ್ಗುರುವಿನ | ಮನ್ನಿಸಿ ಗತಿ ಪಡಿಯೋ ಹರಿಯ ನಾಮವಾ | ಚನ್ನಾಗಿ ನಂಬಿ ನಡಿಯೋ | ಸನ್ನುತ ಮಹಿಪತಿ ಬೋಧಾಮೃತ ಸವಿಯದೇನಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನು ಹೇಳಲಿ ನಿನಗಿನ್ನೂ ಗುರು ಧ್ಯಾನದ ಸುಖವನ್ನು ಪ ಚಿತ್ತದ ತಾಪವು ನೀಗಿ ಮಾಯಾವೃತ್ತಿಯ ಗುಣಗಳು ಪೋಗಿ | ಎತ್ತೆತ್ತ ನೋಡಲು ಅತ್ತತ್ತ ಪರಿಪೂರ್ಣ ಸಚ್ಚಿದಾನಂದ ಘನ ನಿಜವಾಗಿಹ 1 ದ್ವೈತಾದ್ವೈತಗಳೆಲ್ಲ ಪೋಗಿ ಶುದ್ಧ ಚೈತನ್ಯವೇ ತಾನಾಗಿ | ಮಾತು ಕಳೆದು ಮೌನವೆಂಬ ಏಕಾಂತದಿ | ಕೂತು ಲಕ್ಷಿಸುವ ಲಕ್ಷಣನೆ ತಾನಾಗಿಹ2 ಮನದ ಕಲ್ಪನೆಯನ್ನು ಮರೆದು ಹಮ್ಮು ತನುವಿನಮಮತೆಯ ಜರಿದು | ಅನುದಿನದಲಿ ಗುರು ರಾಮ ಪದಾಂಬುಜ ತಾನೆಂದು ಕಾಂಬುವ ಘನ ನಿಜವಾಗಿಹ 3
--------------
ಭೀಮಾಶಂಕರ
ಏನು ಹೇಳಿದರೇನು ಪಾಮರ ಜ್ಞಾನಿಯಾಗಬಲ್ಲನೇ | ನಡೆವ ಮನುಜಗೆ ಪ ಎತ್ತಿಗುತ್ತಮ ಲಿಂಗ ಮುದ್ರೆಯನ್ನೊತ್ತಿದ್ದರೆ ಬಸವನೆಂಬರು | ಕತ್ತೆಯನು ಹಿಡಿ ತಂದು ವತ್ತಲು ಕತ್ತೆಯಲ್ಲದೆ ಬಸವನಪ್ಪುದೆ 1 ಚಿನ್ನ ಬಿಳುಪಿರೆ ಪುಟವನಿಕ್ಕಲು ಬಣ್ಣ ಹೆಚ್ಚುತ ಬಾಹುದು | ಬಿಟ್ಟುದೋರುದೆ 2 ಸ್ವಾತಿ ಜಲಬಿಂದುದುರೆ ಸಿಂಪಿನೊಳಿಂತು ಮೌಕ್ತಿಕವಾಹುದು | ಅಂತ ಘಲ್ಲಿಯೊಳಹದೆ ಜಗದೋಳು ತಾತ ಮಹಿಪತಿ ಕಂದ ಸಾರಿದ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಹೇಳಿದರೇನು ಹೀನ ಮನಕ | ತಾನು ಎಚ್ಚರ ಹಿಡಿಯ ದನಕಾ ಪ ಬೂದಿಯೊಳಗ ಹೋಮ ಮಾಡಿದಂತೆ | ಬೋಧಾನುಗೃಹ ಕಳವದು ಮರೆತಕೆ 1 ಹರಿ ಕೀರ್ತನೆ ಇರಲಿಲ್ಲಾ | ಬರಡು ಮಾತಿಗೆ ಸುಖ ಪಡುದಲ್ಲಾ 2 ಒಮ್ಮೆಯಾದರೂ ಹರಿ ಹರಿಯಂದು | ಝಮ್ಮೆನೆವೆ ಪಶ್ಚಾತಾಪ ಬಾರದೆಂದು 3 ಗಾಳಿಯಂತೆ ಓಡಾಡುವದು ನೋಡಿ | ಕಾಲೂರಿ ನಿಲ್ಲದು ಮತಿಗೇಡಿ 4 ತಂದೆ ಮಹಿಪತಿ ದಯವಾಗದನಕ | ಒಂದು ಹಿಡಿಯದು ಸ್ವಹಿತ ವಿವೇಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನುಧನ್ಯನೊ ಇವನು ಎಂಥ ಪುಣ್ಯನೊ ದೀನದಯಾಳು ಜಾನಕೀಶನ ಧ್ಯಾನ ಮಾಳ್ಪ ಮಾನವನು ಪ ಜ್ಞಾನದಿಂದ ತಿಳಿದು ಜಗ ಶೂನ್ಯವೆಂದು ಊಹಿಸಿ ಮನದಿ ದಾನವಾಂತಕನಾದ ಹರಿಯ ಧ್ಯಾನವೊಂದೇ ಕಾರಣೆಂದು ಜ್ಞಾನಬೆಳಗಿನೊಳಗೆ ನೋಡಿ ಆನಂದಿಸುತಲ್ಹಿಗ್ಗುವವ 1 ಆಶಪಾಶಗಳನು ನೀಗಿ ಈ ಮೋಸಮಯ ಸಂಸಾರದೊಳು ವಾಸನಾರಹಿತನಾಗಿ ಸದಾ ದಾಸಸಂಗಸುಖಪಡೆದು ಈಶ ಭಜನೆಯೊಳ್ಮನವಿಟ್ಟು ಈಸಿಭವಾಂಬುಧಿ ಪಾರಾಗುವವ 2 ನಂಬಿಗಿಲ್ಲದ ದೇಹವಿದನು ನಂಬಿನೆಚ್ಚಿ ಸಂಭ್ರಮಿಸದೆ ಕಂಬುಕಂಧರ ಶಂಭುವಿನುತ ಅಂಬುಜಾಕ್ಷ ಶ್ರೀರಾಮನ ನಂಬಿ ಗಂಭೀರಸುಖದೊಳಿರುವವ 3
--------------
ರಾಮದಾಸರು
ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ ನೋಟ ಅನುಭವಕಾಯಿತು ನೀಟ ಧ್ರುವ ರಂಜಕ ಬಲುಕೊಂಡಿತು ನೋಡಿ ಅಂಜಿಕಿ ಭವಭಯ ಈಡ್ಯಾಡಿ ಪ್ರಾಂಜಲ ಸದ್ಗುರು ದಯಮಾಡಿ ಅಂಜನ ಹಚ್ಚಿದ ದುವುಡಿ 1 ಕಾಣದ ಕಂಡೆವು ಕಣ್ಣಿಲಿ ಖೂನಕ ಬಾರದು ಘನಲೀಲೆ ಜಾಣರು ಬಲ್ಲರು ಮನದಲಿ ನೆನದರು ತಾಂ ವರಿಕಿಲೆ 2 ಆಶ್ವರ್ಯವು ತಾನಾಗ್ಯದೆ ನಿಶ್ಚಯದೋರುತಲ್ಯದೆ ಪಶ್ಚಿಮಕೆ ಭಾಸುತದೆ ಸ್ವಚ್ಛವು ನೋಡಿದರದೆ 3 ರಚ್ಚಿಗೆ ತಾಂ ಬಾಹುದೆಲ್ಲ ಮುಚ್ಚಿಟ್ಟಡೆÉ ಬಾಳು ಸವಿಬೆಲ್ಲ ಅಚ್ಚಳಿಯದ ಭಕ್ತನೆ ಬಲ್ಲ ನೆಚ್ಚಿದ ಮಹಿಪತಿ ಸೊಲ್ಲ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದು ಕೊಂಡಾಡಿ ಸುತ್ತಿಸೆಲೊ ನಿನ್ನಾ ಪ ದಾನವಾಂತಕ ಕೃಷ್ಣ ಆನಂದ ಗುಣ ಪೂರ್ಣ ಅ.ಪ. ಮತ್ಸರೂಪಿಯೆ ನಿನ್ನ ಉತ್ಸಹದಿ ಕರೆಯಲಾಕುತ್ಸಿತನ ಸೊಲ್ಲ ನೀನೆತ್ತ ಕೇಳುವಿಯೋ |ಮತ್ಸ್ಯಕೇತನ ಜನಕ | ಮತ್ಸರವ ಕಳೆಯಯ್ಯಸಚ್ಚಿದಾನಂದಾತ್ಮ | ಚಿತ್ಸುಖಪದನೇ 1 ಕೂರ್ಮರೂಪಿಯೆಂದು | ಪೇರ್ಮೆಯಲಿ ಕರೆಯಲಾಭರ್ಮ ಗರ್ಭನ ಪಿತನೆ | ಗಿರಿಯ ಧರಿಸಿರುವೇ |ನಿರ್ಮಲಾತ್ಮಕನೆ ಯೆನಗೆ | ನಿರ್ಮಮತೆ ನೀಡಯ್ಯಾ ಊರ್ಮಿಳಾಪತಿ ಭ್ರಾತೃ | ಪರಮ ಮಂಗಳನೇ 2 ವರಹ ರೂಪಿಯೆ ನಿನ್ನ | ಕರೆಯುವುದು ಹೇಗಯ್ಯಾ ಕೋರೆ ದಾಡಿಯ ಮೇಲೆ | ಧರೆಯೆ ಧರಿಸಿರುವೇ | ವಾರೆ ನೋಟದಿ ಯೆನ್ನ | ಪರಿಕಿಸೀ ಪೊರೆಯಯ್ಯಾಧೀರ ಭೂವರಹ ವರ | ಧರಣಿ ಪರಿಪಾಲಾ 3 ನಾರಸಿಂಹನೆ ನಾನು | ಕರೆಯಲಾಪನೆ ನಿನ್ನಘೋರರೂಪವ ನೋಡಿ | ದೂರ ಸಾರುವರೋವಾರಿಜಾಕ್ಷಿಯು ಬಂದು | ಘೋರ ಪ್ರಹ್ಲಾದನ್ನಚಾರು ತವ ಚರಣದಲಿ | ಇರಿಸಬೇಕಾಯ್ತು 4 ದಧಿ | ವಾಮನನೆ ಬಾರೆಂದುಸಾಮಸನ್ಮುತ ನಿನ್ನ | ನಾಮಗಳ ನೆನೆಯೆಲಾ |ಭೂಮಿ ಬೇಡುವ ನೆವದಿ | ಬಲಿಯ ಭೂಮಿಗೆ ತುಳಿದೆಸೀಮೆ ಮೀರಿದ ಮಹಿಮ | ಮರ್ಮವಿನ್ನೆಷ್ಟೋ | 5 ಪರಶುರಾಮನೆ ನಿನ್ನ | ಕರೆಯಲಾರೆನು ನಾನುದುರುಳ ಕ್ಷತ್ರಿಯರ | ಶಿರಗಳನೆ ತರಿದೂ |ಭಾರಿ ಪರಶುವಿನಿಂದ | ವರಮಾತೆ ಶಿರ ತರಿದಿಸರಿ ಕಾಣೋ ಇದು ನಿನಗೆ | ಪರಮ ಪಾವನ್ನಾ 6 ರಾಮ ರೂಪಿಯೆ ನಿನ್ನ | ಆ ಮಹಾ ಮಹಿಮೆಗಳಸೀಮೆಗಾಣಳು ಲಕುಮಿ | ಪಾಮರನಿಗಳವೇ |ಆ ಮರಾ ಈ ಮರಾನೆಂದ ಆ | ಪಾಮರನ ಪೊರೆದುಆ ಮಹಾತ್ಮನ ಗೈದ | ಪರಿಯೆನ್ನ ಮಾಡೋ 7 ಕೃಷ್ಣ ಕೃಷ್ಣಾ ಎಂದು ಕರೆಯುವೆನೆ ನಾ ನಿನ್ನಕಷ್ಟದೊಳು ಸಿಲುಕಿರುವೆ | ಗಿರಿಯನ್ನೆ ಪೊತ್ತು |ವೃಷ್ಟಿಕುಲ ಸಂಪನ್ನ | ಕೃಷ್ಣ ಮೂರುತಿ ನೀನುಇಷ್ಟ ಭಕುತರ ಮನೋ | ಭೀಷ್ಟ ಸಲಿಸುವಿಯಾ 8 ಬುದ್ಧ ದೇವನೆ ಎನಗೆ ಸ | ದ್ಭುದ್ಧಿ ಕೊಡು ಎಂದುಬುದ್ಧಿ ಪೂರ್ವಕವಾಗಿ ನಿನ್ನ ಕರೆಯಲಾ |ಬುದ್ಧಿಯಿಂದಲಿ ನೀ | ಭೋಧಿಸಿದೆ ದುಶ್ಯಾಸ್ತ್ರಬೌದ್ಧ ನಿನ್ನನು ಪೊದ್ದು | ಬುಧರ ಪಾಡೇನೊ 9 ಕಲ್ಕಿ ಕಲ್ಕೀ ಎಂದೇ ಕರೆಯಲಾಪೆನೆ ದೇವಾಶುಲ್ಕ ಮೇಲಾಗಿಹುದು ಕಲಿಯುಗದೊಳು |ಉಲ್ಕ ಮುಖ ಮೊದಲಾದ | ಕಲ್ಕಿರಾಜರು ನಿನ್ನಕಲ್ಕ್ಯಾತ್ಮ ಸತ್ಯ ತವ | ವ್ರತವ ಮಾಳ್ಪರು ಬಿಡದೆ 10 ಸರ್ವರೂಪಾತ್ಮಕನೆ | ಸರ್ವ ವ್ಯಾಪಕ ಸ್ವಾಮಿಸರ್ವಜಿತು ಸರ್ವಾತ್ಮ ಸರ್ವೇಶನೇ |ಶರ್ವಾರಿ ವಂದ್ಯ ಗುರು | ಗೋವಿಂದ ವಿಠಲನೇಗುರು ಹೃದಂಬರದಲ್ಲಿ | ತೋರಿ ಪೊರೆಯನ್ನ 11
--------------
ಗುರುಗೋವಿಂದವಿಠಲರು