ಒಟ್ಟು 1877 ಕಡೆಗಳಲ್ಲಿ , 112 ದಾಸರು , 1510 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಂತೆಯರುತುಂಬಿದ ನಗರಿಯಲಿ ಎಂಥ ಸೊಗಸಮ್ಮ ಬಾಹೋದೆಂಥ ಸೊಗಸಮ್ಮ ಪ. ಗಂಧ ಕಸ್ತೂರಿ ಧರಿಸಿರಾಯರು ಪರಿಮಳ ತುಂಬಿದ ನಗರಿಯಲಿ ಎನುತ 1 ರಾಶಿ ಮಲ್ಲಿಗೆ ಸಂಪಿಗೆ ಮುಡಿದು ಸೂಸಿದ ನಗರಿಯಲಿ ಎನುತ 2 ಮಿತಿ ಇಲ್ಲದೆ ಹಗಲು ಬತ್ತಿ ಶತ ಕೋಟಿ ದೀವಟಿಗಿ ದೀಪ ಪ್ರತಿಯಿಲ್ಲ ತಾಯಿ 3 ಹಾದಿ ಬೀದಿ ದ್ವಾರ ಜಗಲಿ ಸಾದಿನಥಳಿ ಕೊಟ್ಟಾವಮ್ಮ ಮಾಧವ ಬರಲಿಕ್ಕೆ ಎನುತ 4 ವಿಸ್ತರಿಸಿದ ರಂಗವಲ್ಲಿ ಜತ್ತಾಗಿ ತೋರುವವು ಎನುತ 5 ಕೇರಿ ಕೇರಿ ನಾರಿಯರೆಲ್ಲ ಸೀರೆ ಕುಪ್ಪಸ ವಸ್ತಗಳಿಟ್ಟು ವೀರರ ನೋಡಲು ಎನುತ 6 ಎತ್ತೆತ್ತ ನೋಡಿದರೂ ಜನರು ಮುತ್ತುರತ್ನದ ವಸ್ತಗಳಿಟ್ಟು ಹತ್ತಿಗೋಪುರ ಅಟ್ಟಾಲಗಳ ಧಿಟ್ಟೆಯರು ನಿಂತಾರೆ ಎನುತ 7 ಝಲ್ಲೆ ಮುತ್ತಿನ ವಸ್ತಗಳಿಟ್ಟು ಅಲ್ಲೆಲ್ಲೆ ಉಪ್ಪರಿಗೆ ಏರಿ ಚಲ್ವರ ನೋಡಲು ಎನುತ 8 ಮಲ್ಲಿಗೆ ಸಂಪಿಗೆ ಫಲಗಳ ಹಿಡಿದು ಅಲ್ಲೇ ನಿಂತಾರೆ ಎನುತ 9 ಭೆಟ್ಟಿಯ ಸೌಭಾಗ್ಯ ನೋಡಿ ಎಷ್ಟು ಹರುಷ ಬಟ್ಟೇವೆಂದು ಧಿಟ್ಟೆಯರು ನಿಂತಾರೆ ಬೀದಿಲಿ10 ಶ್ರೀ ಲೋಲ ರಾಮೇಶನ ಭಕ್ತರು ವಾಲಗೈಸೋರಮ್ಮ ಎನುತ 11
--------------
ಗಲಗಲಿಅವ್ವನವರು
ಕಾಮಜನಕ ಭೃಗು ರಾಮ ದಯಾಂಬುಧಿ ಕಾಮಿತ ಫಲದಾಯಿ ಪ. ಮಂಗಳಾಯನ ಮಾತರಿಶ್ವನುತಾ ದಯವಾಗು ದ್ವಿಯುಗ ಶೃಂಗ ಹವ್ಯವಹಾಂತರಂಗಗತ ದು:ಕ್ಷತ್ರಹಂತಾ ತುಂಗ ಪರಶುಧರಾಂಸಬಾಹು ನಿಭಾಂಗ ಶಾರ್ಙಶರಾಸನಾರ್ಜುನ ದುರಿತ ತರಂಗ ಸಂಗರಮಾಂಗಸಂಗತ 1 ನೀನೆ ಗ್ರಹಪತಿಯೆಂಬುದನು ತಿಳಿದು ದುರ್ಮೋಹವಳಿದು ತಾನು ಯನ್ನುವಹಂಕೃತಿಯು ಕಳಿದು ನಿನ್ನಲ್ಲಿ ನಲಿದು ಸ್ನಾನ ಹೋಮ ಸುರಾರ್ಚನಾದಿಗ ಳೇನು ಮಾಡಿದರೆಲ್ಲ ನಿನ್ನ ಸಮಾನಕರಿಪ ಮಹಾನುಭಾವನೆ 2 ಒಪ್ಪಿಸಿದೆ ಸರ್ವಸ್ವವನು ನಿನಗೆ ಗತಿ ನೀನೆ ಎನಗೆ ಕಪ್ಪಕಾಣಿಕೆ ಎಲ್ಲವೂ ನಿನಗೆ ಇದು ಸತ್ಯ ಕೊನೆಗೆ ಅಪ್ಪಳಿಸು ರಿಪುಪುಂಜವನು ಬರುತಿಪ್ಪದುರಿತವ ಭಂಗಿಸುತ ನ- ಕಂದರ್ಪಭಂಜನ ಸರ್ಪಗಿರಿವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಮಪಿತ ಪದಸರಸಿರುಹ ಭೃಂಗ ಭಂಗ ಪ ದಾಕ್ಷಾಯಿಣೀಪತೇ ಬಾಗಿ ವಿಜ್ಞಾಪಿಸುವೆ ದಾಕ್ಷಿಣ್ಯ ಲವಲೇಶವಿಲ್ಲವೊ ನನಗೆ ಸಾಕ್ಷಿಯೇಸು ಕೊಡಲಿದಕೆ ಬ್ರಹ್ಮನ ಶಿರ ತರಿದೆ ಸಾಕ್ಷಾತು ಪಿತನೆಂಬುದ ನೀ ಲಕ್ಷ್ಯವಿಡದೆ 1 ಸ್ಮರ ನಿನ್ನ ಕಿರಿತಂದೆ ಅಕ್ಷಿತೆರದೀಕ್ಷಿಸವನ ಬಿಡದೆ ದಹಿಸಿನಿಂದೆ ದಕ್ಷ ನಿನಗೇನಾಗಬೇಕು ತಿಳಿದು ನೋಡೊ ತಕ್ಷಣದಲವನನೆತ್ತಿ ಹರಿಗಡಿದೆ ನೀನು 2 ಪಾಪಯೇಸು ಮಾಡಿದರೆಯು ಭಯವೇನು ನಿನಗೆ ಶ್ರೀಪತಿ ರಂಗೇಶವಿಠಲಗೆ ಸರ್ವವರ್ಪಿಸಿ ತಾಪತ್ರಯ ದೂರ ವಿರಾಗಿಯಾಗಿ ಮನಸ್ಸು ನಿ- ಪರಿ ಮನಸ ಕೊಡು ಗುರುವೆ 3
--------------
ರಂಗೇಶವಿಠಲದಾಸರು
ಕಾಯೋ ಪ್ರಾಣೇಶ ಕೀಶಕುಲೇಶ ವಾಯುಸುತನೆಂದು ಮೆರೆವ ಜೀವೇಶ ಪ ಅಂಜನಾದೇವಿಯೊಳ್ ಜನಿಸಿಕೊಂಡಿರುವಿ ಅಂಜದೆ ಲಂಕೆಗೆ ಬೆಂಕಿ ಹಚ್ಚಿರುವಿ ಸಂಜೀವನವ ತಂದು ಕಪಿಗಳನುಳಿಸಿದಿ ಕಂಜಾಕ್ಷಿ ಸೀತೆಗುಂಗುರವ ತಂದಿತ್ತೆ 1 ಕುಂತಿದೇವಿಯ ಗರ್ಭದೊಳಗುದ್ಭವಿಸಿದಿ ಪಾರ್ಥರೊಳ್ನೀನಗ್ರಗಣ್ಯನೆಂದೆನಿಸಿ ಪಂಥದಿ ಮಗದಾಧಿಪತಿಯ ಸಂಹರಿಸಿ ಕಾಂತೆಯ ತಲೆಯ ಕೂದಲನೆ ಕಟ್ಟಿಸಿದಿ2 ಪಾಜಕ ಕ್ಷೇತ್ರದೊಳ್ ನೀನವತರಿಸಿ ರಾಜತಾಸನದಿ ಶ್ರೀಕೃಷ್ಣನನಿರಿಸಿ ರಾಜೇಶ ಹಯಮುಖ ಕಿಂಕರನೆನಿಸೀ ಮೂಜಗದಲಿ ಶ್ರೇಷ್ಠಗುರು ನೀನೆಂದೆನಿಸಿ 3
--------------
ವಿಶ್ವೇಂದ್ರತೀರ್ಥ
ಕಾಲ ಪ ಹಲವು ವಿಧದಲಿ ಚಂಚಲ ಪಡುತಲಿ ತತ್ವ ತಿಳಿಯದೆ ಅ.ಪ ಕೇಳೊ ಜ್ಞಾನಿಯಾಗದೆ 1 ಹೇಯ ಸುಖವು ಕೋರಿ ನ್ಯಾಯ ಬಿಟ್ಟು ನಡಿಯೆ ದಾಯ ತಪ್ಪುವುದು 2 ಗುರುರಾಮವಿಠ್ಠಲನ ಗುರುತರಿಯದೆ ಬರಿದೆ ಕರೆಕರೆಯಲೀ ಕಾಲ3
--------------
ಗುರುರಾಮವಿಠಲ
ಕಾಲಬೆರಳು ಬಾಯೊಳೇತಕೊ ರಂಗಯ್ಯ ನಿನ್ನ ಪ ಸಾಲದಾಯ್ತೆ ಭಕ್ತರಿತ್ತ ಕಾಲೋಚಿತ ಶಾಲ್ಯನ್ನವುಹಾಲೋಗರ ಭಕ್ಷ್ಯಗಳು ಅ.ಪ. ಆಲದೆಲೆಯ ಮೇಲೆ ಮಲಗಿರೆ ಚೆಲುವ ನಿನ್ನಕಾಲುಚಾಚಲನುವೆ ಇಲ್ಲವೆಬಾಲನಿನ್ನ ನಾಭಿಕಮಲ ಕಾಲಿವಾಲಿದಲ್ಲಿ ಗಂಗೆಜಲವ ಬಿಡುತಲಿರುವೆಯೇನು 1 ಹಸಿವೆ ಬಹಳವಾಗಿರುವದೆ ನಿನ್ನಮ್ಮ ಆಯಶೋದೆ ನಿನಗೆ ಮೊಲೆಯನುಣಿಸಳೆನಿಶಾಚರಿ ಪೂತನಿಯ ಮೊಲೆಯವಿಷವನುಂಡ ಕಾರಣದಲಿ ನೀರಡಿಸುತಲಿರುವೆಯೇನು 2 ಪದದಿಂದಲಿ ಬರುವ ಗಂಗೆಯ ಉದಕದಿಂದಉದರದೊಳಿಹ ಜೀವರಾಶಿಯಮುದದಿಂದುದ್ಧರಿಸಲೆಂದುಪದುಮಾಕ್ಷನೆ ಜುರುಜುರು ನೀ ಚೀಪಲಿರುವೆಯೇನು ಹೇಳು 3 ಹಸುಳ ನಿನ್ನ ಪದದೊಳಿಡುತಿಹ ಭಕ್ತರ ಭಕ್ತಿರಸವ ಸವಿದು ನೋಡುತಿರುವೆಯಾಪೆಸರನೆತ್ತ ಗದುಗಿನ ಶ್ರೀ ವೀರನಾರಾಯಣನೆದಯವ ತೋರಿ ಹೇಳು ಬೇಡುತಿಹೆನು 4
--------------
ವೀರನಾರಾಯಣ
ಕಾಲವೆಂತು ಕಳೆಯಲೆನ್ನಯ್ಯ ಪ ಕಾಲಕಳೆಯಲೆಂತು ನಾನು ತಾಳಿಮೂಗುತಿ ಕಾಣದೊನಿತೆಯ ಹಾಳುಮುಖವ ನೋಡೆವೆಂದು ಶೀಲಮುತ್ತೈದೇರ್ಹಳಿಯುತಿಹ್ಯರು ಅ.ಪ ಏಳುಸುತ್ತಿನಕೋಟಿ ಪಟ್ಟಣದಿ ಖೂಳರುಪಟಳ ಹೇಳಲಳವಲ್ಲ ಸೇರಿ ವಿಧ ವಿಧದಿ ದಾಳಿನಿಕ್ಕಿ ಹಾಳು ಮಾಡ್ವರು ಮನಕೆ ಬಂದತೆರದಿ ಗೋಳು ಕೇಳುವರಿಲ್ಲವೋರ್ವರು ತಾಳೆನೀಬಾಧೆ ಶೀಲದೆನ್ನ ಬಹು ಜೋಕಿಯಿಂ ಮೇಲ್ಮಾಲಿನೋಳಿಟ್ಟು ಆಳುವಂಥ ಮೂಲಪುರಷನಿಲ್ಲದಿನ್ನು 1 ಆರು ಕೇಳುವರಿಲ್ಲ ಇವಳಿಗೆಯೆನುತ ಕೀಳ ಮೂರು ಮಂದಿ ಊರ ಬೀದಿಯೊಳಗೆ ದಾರಿ ತರುಬಿ ಸಾರಿ ತರಿವರು ಮಾರಕೇಳಿಗೆ ಸೈರಿಸಲಿ ಹ್ಯಾಗೆ ಚೋರನೋರ್ವನು ಮೀರಿ ಬಾಧಿಪ ಆರು ಮಂದಿ ಬಿಡದೆ ಎನ್ನನು ಘೋರಿಸುವರು ನಾನ ವಿಧದಿ ಪಾರುಗಾಣೆನು ವ್ರತದಿ ಇನ್ನು 2 ಪತಿಯು ಇಲ್ಲದ ಜನ್ಮವ್ಯಾತಕ್ಕೆ ಕ್ಷಿತಿಯಮೇಲೆ ಸತಿಗೆ ಪರಮ ಗತಿಯ ಕೊಡಲಿಕ್ಕೆ ಪತಿಯೆ ಬಾಧ್ಯ ಇತರರು ಕಾರಣಲ್ಲ ಕಾಯಕ್ಕೆ ಜತನ ಗೈಲಿಕ್ಕೆ ಪ್ರಥಮ ಮುತ್ತಿನ ಮೂಗುತಿಯನು ಹಿತದಿ ಕರುಣಿಸಿ ಪತಿಯಾಗೆನಗೆ ಗತಿಯ ನೀಡಿ ಹಿತದಿಂ ಸಲಹು ಪತಿತ ಪಾವನೆನ್ನ ಪ್ರಾಣ ಶ್ರೀರಾಮ 3
--------------
ರಾಮದಾಸರು
ಕಾವ ಜನಕ ನೀನಿರುತಿರಲೆನಗಿ ನ್ನಾವ ಬಂಧುವು ಬೇಕೊ ಮಾಂಗಿರಿಯ ರಂಗ ಪ ದೇವ ನೀನಲ್ಲದೆ ಲಕ್ಷಜೀವಿಗಳಿದ್ದು ಈವ ಸೌಖ್ಯವು ಬೇಡ ಮಾಂಗಿರಿಯ ರಂಗ ಅ.ಪ ನಾರಿಯ ಮಾನಾಪಹಾರವ ಗೈದಾಗ ವೀರರೈವರು ತಮ್ಮ ಮೋರೆಯ ತೋರ್ದರೆ ನೂರುಮಂದಿ ವೇದಪಾರಂಗತರಿದ್ದು ಕ್ರೂರ ಕಾರ್ಯಂಗಳ ನಿಲಿಸಿದರೆ ರಂಗ 1 ಮೂವತ್ತುಮೂರುಕೋಟಿ ನಿರ್ಜರರಿದ್ದು ರಾವಣನೊಬ್ಬನ ಜೈಸಿದರೆ ಪಾವಕ ಹಸ್ತವನಿತ್ತ ಗಿರೀಶನ ದೇವಗಣೇಶ್ವರರುಳಿಸಿದರೇ 2 ಅರಕ್ಷಿತವಾದುದ ಸುರಕ್ಷಿತ ಗೈವೆ ಸುರಕ್ಷಿತವಾದುದಕ್ಷಯ ಗೈವೆ ನಿರಕ್ಷರಕುಕ್ಷಿಗೆ ಮೋಕ್ಷವ ನೀನೀವೆ ದುರಿತಕ್ಷಯ ಗೈದು ಪಾಲಿಸುವೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾವ ದೇವರು ನೀನೆ ಎನ್ನ ಕೈ ಪಿಡಿಯೋ ದೇವ ಹರಿ ತವಪಾದ ಮರೆಹೊಕ್ಕೆ ಕಾಯೊ ಪ ತರಳ ಪ್ರಹ್ಲಾದನಂ ಸಂಕಟದಿ ರಕ್ಷಿಸಿದಿ ಮರೆ ಬಿದ್ದ ಅಸುರನಿಗೆ ಸ್ಥಿರಪಟ್ಟ ಕೊಟ್ಟಿ ಕಂಟಕ ಭರದಿ ನೆರವಾಗಿ ತರಿದಯ್ಯ ತರುಣಿಯ ಮೊರೆ ಕೇಳಿ ಅಕ್ಷಯವನಿತ್ತಿ 1 ಶಿಲೆಯರೂಪದಿ ಬಿದ್ದ ಸತಿಯನುದ್ಧರಿಸಿದಿ ಕುಲಗೆಟ್ಟ ಅಜಮಿಳನ ಅಂತ್ಯದಲಿ ಕಾಯ್ದಿ ಒಲಿದು ನಭೋರಾಜನಂ ಶಾಪದಿಂದುಳಿಸಿದಿ ಅಳಿಯದ ಪದವಿ ನೀಡಿ ಧ್ರುವರಾಜನ್ಪೊರೆದಿ 2 ಭಕ್ತವತ್ಸಲನೆಂಬ ಬಿರುದಗಳ ಪೊತ್ತಿರುವಿ ಭಕ್ತನಿಗೆ ಬರುವ ನಿಖಿಲಾಪತ್ತುಗಳನು ಕತ್ತರಿಸಿ ಹಿತವಾದಭಕ್ತಿಯನು ಕರುಣಿಸಿ ನಿತ್ಯನಿರ್ಮಲಸುಖವ ನೀಡು ಶ್ರೀರಾಮ 3
--------------
ರಾಮದಾಸರು
ಕೀಚಕಾಂತಕ ಭೀಮಸೇನರಾಯ ಯಾಚಿಸುವೆ ನಿನಗಾನು ಎಲ್ಲರನು ಸಲಹೆಂದು ಪ ಕುಂತಿ ಜಠರೋದ್ಭವನೆ ಕುವಲಯದೊಳಗಿಪ್ಪಮ ಹಂತರಿಗೆ ಬಪ್ಪ ಜನ್ಮಾದಿರೋಗ ಚಿಂತೆಗಳ ಕಳೆದ ನಿಶ್ಚಿಂತರನು ಮಾಡು ಸ ರ್ವಾಂತರಾತ್ಮಕ ಸುಖದ ಸರ್ವೇಶ ಶಕ್ರಾದಿ ನುತ 1 ದ್ರೌಪದೀರಮಣ ಜ್ಞಾತಾಜ್ಞಾತ ಕರ್ಮಜ ಮ ಹಾಪರಾಧಗಲೆಸದನು ದಿನದಲಿ ನೀ ಪೊರೆಯಬೇಕುಪೇಕ್ಷಿಸದೆ ನಿನ್ನವರ ವಿ ವಿಶ್ವ ಚೇಷ್ಟಕನೆ 2 ಕೌರವಾಂತಕನೆ ಕಾಶ್ಯಪಿಸುತರ ಸಂತೈಪ ಭಾರ ನಿನ್ನದು ಭವದಿ ಭಕ್ತಬಂಧೋ ಪ್ರೇರಕ ಪ್ರೇರ್ಯ ರೂಪಗಳಿಂದ ಸರ್ವರ ಶ ರೀರದೊಳಗಾಡುವೆ ದೇವತೆಗಳೊಡನೆ 3 ಪವಮಾನತನಯ ಪಾಪಿಷ್ಠರೊಳಗಿದ್ದು ನಿ ನ್ನವರನೀಪರಿ ದಣಿಸಿ ನೋಡುತಿಹುದು ಭುವನತ್ರಯೇಶ ಭೂಷಣವೇನೋ ನಿನಗೆ ಸ ತ್ಕವಿ ಕುಲೋತ್ತಂಸ ಕಾವರ ಕಾಣೆ ನಿನ್ನುಳಿದು 4 ಧನಧಾನ್ಯ ಪಶುಪತ್ನಿ ಜ್ಞಾನಭಕುತಿ ತನಗೆ ತಾನೊದಗಿ ಬಪ್ಪುದು ಸುನಿಶ್ಚಯ ಸನಾ ತನ ಜಗನ್ನಾಥ ವಿಠ್ಠಲನೊಲುಮೆ ಪಾತ್ರ 5
--------------
ಜಗನ್ನಾಥದಾಸರು
ಕುತ್ಸ್ಸಿತರೊಲ್ಲದ ಮತ್ಸರವಿಲ್ಲದ ಸತ್ಸಭೆ ಕೇಳಲೀ ಕೃತಿಯ ಪ. ಈ ಯುಗದವರಿಗೆ ಕಲಹ ಮಂಡಿಸಿದಗೆ ಆ ಯುಗದವರುಕ್ತಿ ಬೇಕು ನ್ಯಾಯದವರ ಕೇಳು ಪೂರ್ವಶಾಸನ ಸಾಕ್ಷಿ ಹೇಯವೆಂದಾರು ಪೇಳುವರು1 ನಿಮ್ಮವರಾಗಮ ನಮ್ಮವರಿಗೆ ಸಲ್ಲ ನಮ್ಮೋಕ್ತಿ ನಿಮಗೆ ಮೆಚ್ಚಲ್ಲ ಇಮ್ಮನದವರಿಗೆ ಇನ್ನೊಬ್ಬ ಹಿರಿಯರ ಸಮ್ಮತಿ ಬೇಕು ನಿರ್ಣಯಕೆ2 ಯುಕ್ತಿ ಮಾತ್ರವ ನಂಬಿ ನಡೆವುದುಚಿತವಲ್ಲ ಯುಕ್ತಿ ಸರ್ವತ್ರ ಬಂದಿಹುದು ಕುತ್ಸಿತ ದೇಹಬಂಧವ ಬಿಡಿಸುವ ನರ- ರುತ್ತಮರೆಂದರೇನೆಂಬೆ 3 ಹಿಂಸೆ ಸಲ್ಲದು ಗಡ ಕರದ ಚಿಮುಟಿಯಿಂದ ಏಸು ಕೂದಲ ಕೀಳುತಿರಲು ಏಸೋ ಜೀವಗೆ ನೋವು ಅದು ಹಿಂಸೆ ದೋಷದ ಒಂದಂಶಕ್ಕೆ ಸರಿ ಬಂದಿಹುದೆ 4 ಕೇಶ ಆಚ್ಛಾದನ ಸಂಕಟದಿಂದೆಂದ ಕ್ಲೇಶ ಸೂಸುವ ನಯನಾಂಬುಧಾರೆ ಆ ಸಮಯದಿ ಪರಮಸುಖವೆಂಬ ಮಾತು ಸತ್ಯವ್ರತಕೆ ಎಂತೊಪ್ಪಿಹುದೊ 5 ವೇದಶಾಸ್ತ್ರವ ಬಲ್ಲ ಹಾರವನಲ್ಲ ಹು- ಟ್ಟಿದ ದಿವಸ ಮೊದಲಾಗಿ ಪಾತಕಿ ತಮ್ಮೊ - ಳಾದನೆಂಬುದು ಬಲು ಚೋದ್ಯ6 ಪಾಪ ಸಲ್ಲದು ಗಡ ಪರನಿಂದೆಯಿಂದಾದ ಪಾಪವೆ ತಾವು ಶುದ್ಧರೆಂಬ ಪರಿ ಆತ್ಮಸ್ತುತಿಯಿಂದೊಂದಾ ಪಾಪ ಲೇಪಿಸದಿಹುದೆ ತಮ್ಮವರ 7 ಸ್ಥಾವರಜೀವರ ಸಾವಿರ ಕೋಟಿಯ ಆವಾಗ ಕೊಂದು ತತ್ತನುವ ಜೀವಿಪೆನೆಂದು ಬೇಯಿಸಿ ತಿಂಬ ಪಾಪವ ಆವ ನಿಮಗೆ ಅಹುದೆಂದ 8 ಇಂದ್ರಿಯಹತ್ತಿಲ್ಲದವರ ಕೊಲ್ಲುವುದಕ್ಕೂ ಹಾ- ಗೆಂದ ಗುರುವ ನಾನೇನೆಂಬೆ ಅಂದಚೆಂದಗಳ ಮೂಕರ ಪಕ್ಷ್ಷಿಯಂಡದ ನಿಂದ್ಯ ಹಿಂಸೆಯ ಸಲಿಸುವರೆ 9 ಸಂಗೀತಶ್ರವಣದಿ ಧೂಪಾಘ್ರಾಣದಿ ಮೂಲ ಹಿಂಗೂಡಿದುದಕ ಸ್ವಾದನಾದಿ ಅಂಗನೆ ಈಕ್ಷಣ ಸ್ಪರ್ಶನದಿಂ ಸ್ಥಾವ- ರಂಗಳು ಜಂಗಮದಂತೆ 10 ತಮ್ಮ ಕರ್ಮದಿ ತಾವೆ ಸಾವರೆಂಬ ಮತದಿ ಕಮ್ಮಿಯಾದ ವ್ರಣಕ್ಕೆ ಮದ್ದನಿಕ್ಕಲು ನಿರ್ಮಾಯನದೊಳಗೇಸೊ ಹಿಂಸೆ 11 ಅಕ್ಕಿಯ ಕುಟ್ಟಲು ಬಕ್ಕು ಜೀವರ ಹಿಂಸೆ ಮಕ್ಕಳುಂಬುದು ಮಾಂಸ ಪ್ರಿಯಳ ಚೆಂದುಟಿ ಮಾಂಸ ಇಕ್ಕು ಬಾಯೊಳು ದಂತದೆಲುವೆ 12 ಕರದ ತುಂಬವಿದೇನು ಕೊರಳ ಹಾರವಿದೇನು ಚರಣದ ನಖಪಂಕ್ತಿಯಿದೇನು ಖರ ಭೂತಪಂಚಕ ಅನ್ನ ಮಾಂಸಗಳೊಳು ಬರಿದೆ ನಿಂದಿಸಲೇಕೆ ಪರರ 13 ಉಪ್ಪಿನೊಳಗೆ ತೋರ್ಪ ಚಿಪ್ಪ ನೋಡದೆ ಪರ- ರಲ್ಪ ದೋಷಗಳರಸುವರೆ ಒಪ್ಪುವುದೆಂತೊ ಶತ್ರುಗಳ ನಿಂದನೆ ಕೊಲು- ತಿಪ್ಪ ನೃಪಗೆ ಜಿನಮಾರ್ಗ 14 ಬಸ್ತಿಯ ಕಟ್ಟಲು ಭೂಸ್ಥ ಜೀವರ ಹಿಂಸೆ ಸುತ್ತ ಯಾತ್ರೆಯ ಮಾಡಲೇಸೊ ತತ್ತಜ್ಜೀವರ ಹಿಂಸೆ ತೈಲಸ್ನಾನದಿ ಹಿಂಸೆ ವಸ್ತ್ರ ಒಗೆಯಲೇಸೋ ಹಿಂಸೆ 15 ಸಲ್ಲದ ಹಿಂಸೆಯ ಸಲಿಸಿದರೆಂಬರ ಬಲ್ಲವಿಕೆಯ ನಾನೇನೆಂಬೆ ಬಲ್ಲಿದ ಹಿಂಸೆಗೆ ಒಳಗಾದರು ಎಲ್ಲ ತಾ- ಕೈವಲ್ಯ ಸಾಧಕರು 16 **** ತೊಳೆಯದ ಬಲುಹಿರಿಯರ ನಾತಕ್ಕೆ ಸೋತು ಬೆಂಬಿಡದೆ ಆತುರದಿಂ ಬಪ್ಪನೊಣಗಳ ಗೀತವ- ನೋತು ಕೇಳುವ ಶಿಷ್ಯ ಧನ್ಯ 17 ಮೂತ್ರ ದ್ವಾರದ ಮಲ ಶ್ರೋತ್ರನೇತ್ರದ ಮಲ ಗಾತ್ರ ನಾಸಿಕದ ಮಲ ಯಾತ್ರೆಯ ಮಾಡುವರಕ್ಷಿಗೆ ಕೌತುಕ ಪಾತ್ರವಾಯಿತು ಬಲು ಚಿತ್ರ 18 ******************* 19 ಏಕ ಭಾಗದೊಳು ಸ್ತ್ರೀ ವಾಸ ಏಕಾಂತದಿಪ್ಪುದು ಲೋಕಸಲ್ಲದೆಂಬರ ಈ ಕಾಮನೆಂತು ಬಿಟ್ಟಿಹನು 20 ಬಸ್ತಿಯ ಪ್ರತಿಮೆಯಲಿಪ್ಪ ದೇವನದಾರು ಮುಕ್ತರಿಗೀಭೋಗ ಸಲ್ಲ ಮುಕ್ತರÀಲ್ಲದ ಜೀವ ದೇವರೆಂತಹರೆಂದು ವ್ಯರ್ಥವಾಯಿತು ನಿನ್ನುತ್ಸಾಹ 21 ನೋಡುವ ನಯನಕ್ಕೆ ಮಾಡುವ ಪೂಜೆಗೆ ಕೂಡಿದ ಬಹುವಿತ್ತ ವ್ಯಯಕ್ಕೆ ಈಡಾಯಿತಂಶ ಕೇವಲ ಬೊಂಬೆ ಶಿವಶಿವ ಆಡುವ ಶಿಶುಗಳ್ಪೇಳಿದರೆ 22 ಹೆಂಡಿರೆ ಸಂಸಾರವಾದರೆ ಹಸಿತೃಷೆ ಉಂಡು ಮಲಗುವುದು ಮುಕ್ತರಿಗೆ ಮಂಡೆಯ ಬೋಳಿಸಿ ದೇಹದಂಡನೆ ಮಾಡಿ ಕೈ- ಕೊಂಡ ಮಾತ್ರದಿ ಮುಕ್ತರಹರೆ 23 ಮತ್ರ್ಯ ದೇಹವಿರಲು ಮುಕ್ತರೊಬ್ಬರು ಅಲ್ಲ ಸತ್ತಮೇಲೇನಾದರೆಂತೊ ಅತ್ತು ಕಾಡುವ ಶಿಷ್ಯರೆಂತರು ಕಾಂಬರು ಸರ್ವ- ಕರ್ತೃ ಶ್ರೀಹರಿ ತಾನೆ ಬಲ್ಲ 24 ದುಃಖವೆ ಸಂಸಾರ ದುಃಖವಿಲ್ಲದ ಸುಖ ಮುಕ್ತಿಯೆಂಬುದು ಬುಧರ್ಗೆ ಮಾತ್ರ ಮಿಕ್ಕದೆ ದುಃಖವಿತ್ತರೆ ಭವವೆನಿಪುದು ದುಃಖವೆ ದೂರ ಮುಕ್ತರಿಗೆ 25 ಪುನರ್ಭವವೆÉನ್ನೆ ಶ್ರುತಿ ಅಮೃತವುಂಡರೆ ಮೋಕ್ಷ ಜನನ ಮರಣವಿಲ್ಲದಖಿಳ ಜನರ ದುಃಖವನವತರಿಸಿ ಕಳೆವ ನಾರಾ- ಯಣನೆ ನಿರ್ದೋಷ ನಿತ್ಯಸುಖಿ 26 ಪಾತಕ ವ್ರತವ ಕೈಗೊಂಡ ಸ್ತ್ರೀ- ಜಾತಿಯ ಮುಟ್ಟಲ್ಲೆಂಬುವನು ಖ್ಯಾತ ಶ್ರೀಹರಿಗೆ ಪಾತಕಮುಟ್ಟದೆಂಬರ ಮಾತನದೇಕೆ ಮನ್ನಿಸನು 27 ಕೆಸರ ತೊಳೆದ ನೀರು ಕೆಸರ ಬಾಧಿಪುದೆ ತಾ- ವೈರಿ ಸೂರ್ಯನೊಳು ತಮವೆ ವಿಷಹರ ಗರುಡಗೆ ವಿಷ ಲೇಪಿಸುವುದೆ ಕ- ಲುಷ ಮುಟ್ಟುವುದೆ ಪಾಪಾಂತಕನ 28 ಸುಡುವಗ್ನಿ ಕಡಿವಸ್ತ್ರ ಕಡುಕೋಪಿ ಸರ್ಪನ ತಡೆಯಬಲ್ಲರೆ ತುಡುಕುವರೆ ಬಿಡು ಮನಭ್ರಾಂತಿಯ ಹಯವದನನೆ ಜಗ- ದೊಡೆಯ ಸರ್ವತ್ರ ನಿರ್ದೊಷ 29
--------------
ವಾದಿರಾಜ
ಕುಲವ್ಯಾವುದಯ್ಯ ಕಪಿಕುಲನೆ ನಿನಗೆ ಒಲಿದಿಹನು ಹರಿ ನಿನಗೆ ಎಂದು ಜನ ನುತಿಸುವರು ಪ. ಮರ ಹಾರುವಂಥ ಮರ್ಕಟಕುಲದಲವತರಿಸಿ ಶರಧಿ ಲಂಘಿಸುತ ದ್ವೀಪಾಂತರವಾಸಿ ದುರುಳರನು ಸಂಹರಿಸಿ ದೊರೆ ಸುತರ ಸೇವಿಸಿ ಕರದಿ ಎಂಜಲು ಕೊಂಡು ಮರವನೇರಿದನೆ 1 ಪ್ರಥಮ ಕುಲವನೆ ಬಿಟ್ಟು ದ್ವಿತೀಯ ಕುಲದೊಳಗುದಿಸಿ ಹಿತವೆ ರಕ್ಕಸಿ ಸಂಗ ಪಥದಿ ನಿನಗೆ ದಿತಿಜನಾಹುತಿ ಅನ್ನ ಗತಿಯಿಲ್ಲದಲೆ ತಿಂದು ಚತುರ ಕುಲಜನ ನೀ ನುತಿಸಿ ಹಿಗ್ಗಿದನೆ 2 ತುಳುವಂಶಜನೆ ನೀ ಲಲನೆ ಸಂಗವ ತೊರೆದು ಅಲೆದೆ ಯತಿಯಾಗಿ ಈ ಇಳೆ ಎಲ್ಲವ ಕುಲನ್ಯೂನ ಗೋಪಾಲಕೃಷ್ಣವಿಠ್ಠಲನ ಪದವ ಒಲಿಸಲೋಡಿದೆ ಆರು ಬರದಂಥ ಗಿರಿಗೆ 3
--------------
ಅಂಬಾಬಾಯಿ
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೂಗಿದರು ಧ್ವನಿ ಕೇಳದೆ ಶಿರ | ಬಾಗಿದರು ದಯ ಬಾರದೆ ಪ ಭೋಗಿಶಯನ ಭುವನಾಧಿಪತೇ ನಿನ್ನ | ಆಗಮನವೆಂದಿಗೆ ಆಗುವುದು ಪ್ರಭೊಅ.ಪ ಖರೆ ಎ| ನ್ನತ್ತ ನೋಡುವುದು ದೊರೆ || ಪರಾಕು ಮಹಾಪ್ರಭು | ಎತ್ತಣ ರಥವನು ಎತ್ತಿ ಬಾ ನೀಡು ದೊರೆ1 ಸಿರಿ | ಮಂದಿರ ಭಕ್ತ ಕುಟುಂಬಧರ || ಸುಂದರ ಮೂರುತಿ ಒಂದಿನ ಸ್ವಪ್ನದಿ | ಬಂದು ಪದದ್ವಯ ಚಂದದಿ ತೋರಿಸೊ2 ಕರುಣಾ ಶರಧಿಯು ನೀನಲ್ಲವೇ ಕೃಷ್ಣ | ಶರಣಾಗತರಿಗೆ ದೊರೆಯಲ್ಲವೆ || ಮೊರೆಹೊಕ್ಕವರಿಗೆ ಮರೆಯಾಗುವರೆ | ಸರಿಯೆ ಜಗದೊಳು ವಿಜಯವಿಠ್ಠಲರೇಯಾ 3
--------------
ವಿಜಯದಾಸ
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ