ಒಟ್ಟು 613 ಕಡೆಗಳಲ್ಲಿ , 87 ದಾಸರು , 528 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮರಾಮೆನ್ನಿರೋ ಮುಖ್ಯ ತಾ ಕಾರಣ ನೇಮದಿಂದಾಯಿತು ಅಹಲ್ಯೋದ್ದರಣ ರೋಮರೋಮಕೆ ತಾ ಪ್ರೇಮ ಬಾಹಗುಣ ನಾಮಸ್ಮರಿಸಿ ದಶರಥಾತ್ಮಜನ 1 ಒಮ್ಮೆ ಸ್ಮರಿಸಿರೊ ರಾಮರಾಮೆಂದು ತಾ ಸುಮ್ಮನೆ ಬಾಹುದು ಸಾರದ ಅಮೃತ ಸಂಜೀವ ತಾ ಝಮ್ಮನೆ ಹಾದಿಮಾಡಿತು ಸಮುದ್ರ ತಾ 2 ರಾಮರಾಮೆನ್ನಲು ಸಾಮರಾಜ್ಯಹುದು ನೇಮದಿಂದೆನ್ನಿರೊ ಶ್ರಮ ನೀಗೋಗುದು ನಾಮ ಕೊಂಡಾಡಲು ರಾಮನಂತಾಹುದು ಸುಮ್ಮನೆಯಾದರೆ ತಾಮಸ ಬಾಹುದು 3 ರಾಮರಾಮೆಂದರೆ ಬ್ರಹ್ಮರಾಕ್ಷಸ ತಾ ಸುಮ್ಮನೆ ಒಡಿಹೋಗುದು ತಾತ್ಕಾಲತಾ ನಾಮ ಸೇವಿಸಲು ಸುಮ್ಮಲ್ಹೊಳೆದು ತಾ ಝಮ್ಮನೆ ಬಾಹುದು ಭಾಗ್ಯ ಕೈಕೊಟ್ಟು ತಾ 4 ರಾಮನಾಮವೆ ತಾ ಪಾಪಕೆ ತಾ ನಾಮ ತೇಲಿಸಿತು ನೀರೊಳು ಪರ್ವತ ನೇಮದಿಂದಾದರ ಭಕ್ತರರಹುತಾ ಸೀಮಿ ಕೈಕೊಟ್ಟಿತು ಭಕ್ತಗೆ ಶಾಶ್ವತ 5 ನಾಮವೆ ಕಪಿಕುಲವ ತಾರಿಸಿತು ಸೋಮಶೇಖರಗೆ ತಾನೆ ಪ್ರಿಯಾಯಿತು ಗ್ರಾಮನಂದಿಯಲಿ ನೇಮಪೂರಿಸಿತು ರೋಮರೋಮೆಲ್ಲ ಭರತಗ ಸುಖವಾಯಿತು 6 ಸ್ವಾಮಿ ಶ್ರೀರಾಮನಾಮ ಸುಅಮೃತ ಕಾಮಪೂರಿಸುವ ಕಾಮಧೇನುವೆ ತಾ ನೇಮದಿಂದಾಗುವ ಮಹಿಪತಿಗಿಂತ ರಾಮರಾಜ್ಯವೆ ಎನ್ನೊಳಗಾಗೆದ ತಾ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ರಾಮಾನುಜ ಮತೋದ್ಧಾರಕತಾಮಸಗುಣಪಾಶಗಿರಿವಜ್ರದಂಡ ಪ ವ್ಯಾಸರ ತೋಳೆಂದು ನಂದಿಯ ಧ್ವಜದಲ್ಲಿಹೇಸದೆ ಕಟ್ಟಿ ಪೂಜಿಪರು ನೋಡವ್ಯಾಸರದೊಂದು ತೋಳಿಗೆ ಶಿವಶರಣನಸಾಸಿರ ತೋಳ್ಗಳ ತರಿದ ನಮ್ಮಯ್ಯ 1 ಹರಿ ಎಂಬ ಶಬ್ದವ ಕೇಳಿ ಪಿಟ್ಟಕ್ಕನುಹರನ ಹೊಟ್ಟೆಯಲ್ಲಿ ಪುಟ್ಟುವೆನೆಂಬಳುಹರಹರ ಎಂಬ ಶೈವರ ಏಳ್ನೂರುಶಿರಗಳನರಿದನು ನಮ್ಮ ತಾತಯ್ಯ2 ಪಾದ ಮೇಲು ತಿಳಿದು ನೋಡಣ್ಣ 3 ಲಿಂಗವೆ ಘನವೆಂದು ಹೆಚ್ಚಿ ಕುಣಿದಾಡುವಸಂಗನ ಶರಣರೆಲ್ಲರು ಕೇಳಿರಿಲಿಂಗಪ್ರಸಾದವು ಮುಟ್ಟದಂತಾಯಿತು ನಮ್ಮರಂಗನ ಪ್ರಸಾದವು ಲೋಕಪಾವನವು 4 ಧರೆಯೊಳು ವಿರಕ್ತರು ವೀರ ಪವಾಡವಇರಿದು ಎಬ್ಬಿಸುವೆವೆಂದಾಡುವರುಹರಿಯ ನಾಮಾವಳಿಯ ಅನುಮಾನವಿಲ್ಲದೆಯೆಧರಿಸಿದಲ್ಲದೆ ದೊರೆಯದು ಗತಿಯಣ್ಣ 5 ಹರಬಂದು ಓಂಕಾರ ಗುರುವೆ ಎನ್ನುತ ಕೃಷ್ಣನರಮನೆಯ ಮುಂದೆ ಭಿಕ್ಷವ ಬೇಡಲುಹರಿಯುಂಡ ಮೇಲೆ ಪ್ರಸಾದವ ನೀಡಲುಹರ ಉಂಡು ಬ್ರಹ್ಮ ಹತ್ಯೆ ಕಳಕೊಂಡ 6 ಶಿವ ಮಹಾದೇವನು, ಧರೆಗೆ ಹರಿಯೆ ದೈವಭುವನಕ್ಕೆ ಹರಿಹರರೇಕಸ್ಥರುಭವರೋಗ ಹರ ಕಾಗಿನೆಲೆಯಾದಿಕೇಶವನವಿವರ ತಿಳಿದು ಭಜಿಸಿರೊ ಭಕ್ತ ಜನರು7
--------------
ಕನಕದಾಸ
ರುದ್ರದೇವರು ಇಂದು ಶೇಖರ ಶಿವ ನಂದಿವಾಹನ ಶೂಲಿ ಸ್ಕಂಧಗಣಪರ ತಾತ ದಂದಶೂಕಕಲಾಪ ಪುರಂದರ ಮುಖಸುರ ವೃಂದವಿನುತ ಪಾದಾದಿಂದ ಶೋಭಿತ ದೇವ ಕಂದು ಕಂಧರ ತ್ರಿಪುರ ಸಂದೋಹಹರ ಹರ ವಂದಿಸಿ ಬೇಡುವೆ ಫಲ ಸಂದೇಹಮಾಡದಲಿತ್ತು ನಂದ ನೀಡುವಿ ನೀನೆಂದು ನಿನ್ನಯ ಬಳಿಗೆ ಇಂದು ಪೂರ್ತಿಸೋ ಗುರೋ ಗಂಧವಾಹನ ತನಯಾ ಇಂದಿರಪತಿ ಗುರುಜಗನ್ನಾಥವಿಠಲಾ ನಂದಾ ಬಡುವನಿದಕೆ ಸಂದೇಹ ಇನಿತಿಲ್ಲಾ
--------------
ಗುರುಜಗನ್ನಾಥದಾಸರು
ರುದ್ರದೇವರು ಶಿವನೆ ನಾ ನಿನ್ನ ಸೇವಕನಯ್ಯ ದುಮ್ಮಾನ ಬಿಡಿಸಯ್ಯ ಸುಜನ ಸಹಾಯ ಸಿರಿಧರನರಮಯ್ಯ ಪ ಭಾಗವತ ಶಾಸ್ತ್ರವನು ಅವನೀಶಗೆ ಪೇಳ್ದವ ನೀನಲ್ಲವೆ ಅ.ಪ. ತೈಜಸ ತಾಮಸವೆಂಬ ತ್ರೈತತ್ತ್ವಗಳೆಂಬ ಸಾಂಬ ಸುರಪಾದ್ಯರ ಬಿಂಬ ವೈಕಲ್ಯಾಸ್ಪದವನು ಕಳೆದೊಮ್ಮೆಲೆ ವೈಕುಂಠಕೆ ಕರೆದೊಯ್ಯೊ ಕರಿಗೊರಳಾ 1 ಮೃತ್ಯುಂಜಯ ಮುಪ್ಪುರಹರ ಮಹದೇವ ದೇವರ್ಕಳ ಕಾವ ಸ್ತುತ್ಯಾದ್ರಿಜಾಪತಿ ಜತತೀವನದಾವ ದುರಿತಾಂಬುಧಿ ನಾವ ಕೃತ್ತಿವಾಸ ಉನ್ನತ್ಯವರಾಧಗ - ಳೆತ್ತಿಣಿಸದೆ ಕೃತಕೃತ್ಯನ ಮಾಡೈ 2 ಗಂಗಾಧರ ಷಣ್ಮುಖ ಗಣಪರ ತಾತ ತ್ರೈಲೋಕ್ಯಖ್ಯಾತ ಲಿಂಗಾಹ್ವಯ ತಾರಕಹರ ನಿರ್ಭೀತ ಭುವನಾಧಿನಾಥ ತುಂಗ ಮಹಿಮ ನಿಸ್ಸಂಗ ಹರಿಯದ್ವತೀ ಯಂಗ ಡಮರು ಶೂಲಂಗಳ ಧರಿಸಿಹ 3 ಪಂಚಾನನ ಪನ್ನಗಭೂಷಣ ಭೀಮ ಭುವನಾಭಿರಾಮ ಸಂಚಿಂತನ ಮಾಡುವ ಸಂತತ ನೇಮ ಶ್ರೀರಾಮನಾಮ ಪಂಚಶರಾರಿ ವಿರಿಂಚಿಕುವರ ನಿ - ಷ್ಕಿಂಚನರೊಡೆಯನ ಮಂಚಪದಾರ್ಹನೆ4 ಸ್ಪಟಿಕಾಭ ಕಪಾಲಿ ಕಾಮಿತಫಲದ ಫಲ್ಗುಣಸಖ ಶ್ರೀದ - ವಿಠಲಾಶ್ರಯವಿತ್ತಪಮಿತ್ರ ದ್ವಿರದ ಚರ್ಮಾಂಬರನಾದ ಕುಟಿಲರಹಿತ ಧೂರ್ಜಟಿ ವೈಷ¨sಕಧ್ವಜ ನಿಟಿಲನಯನ ಸಂಕಟವÀ ನಿವಾರಿಸೊ 5
--------------
ಶ್ರೀದವಿಠಲರು
ರೋಗ ಪರಿಹಾರ ಸ್ತುತಿ ವರಾಹ ನರಹರಿ ನಿನ್ನಾ ಚರಣಕೆರಗುವೆ ಎನ್ನ ಬಿನ್ನಪಕೇಳಿ ಪೊರೆ ಇವಳನ್ನಾ ಪ ಉದರ ಶೂಲಿ ಎನಲು ವೈದ್ಯಪಂಡಿತರು ಶಸ್ತ್ರ ಪ್ರಯೋಗಿಸಲಿಹರು ಅವಶ್ಯ ಇಲ್ಲದಲೆ 1 ಶಸ್ತ್ರದ ವೈಷಮ್ಯ ಬಾಧೆಗಳ ಕಳೆದು ನಿತ್ರಾಣ ನರ ಉದರ ಮಾಂದ್ಯಗಳ ತಿದ್ದಿ ಕಾಪಾಡು 2 ವಿಧಿತಾತ ಶ್ರೀ ಪ್ರಸನ್ನ ಶ್ರೀನಿವಾಸ ಘೃಣಿಯೇ ನಿನ್ನ ದಯದಿಂದಲೇ ಜೀವರು ನಮ್ಮೆಲ್ಲರ ಯೋಗ ಕ್ಷೇಮಗಳು 3
--------------
ಪ್ರಸನ್ನ ಶ್ರೀನಿವಾಸದಾಸರು
ಲಕ್ಷ್ಮೀನಾಥ ವಿಠಲ | ರಕ್ಷಿಸೊ ಇವನಾ ಪ ಇಕ್ಷುಚಾಪನ ಪಿತನೆ | ಅಕ್ಷರನೆ ದೇವಾ ಅ.ಪ. ನಿತ್ಯ ತೃಪ್ತಾತ್ಮಾಅರ್ಥಿಯಲಿ ಲಕ್ಷ್ಮಿಯನು | ಭಕ್ತಿಯಿಂ ಸೇವಿಸುತಪ್ರಾರ್ಥಿಸುವ ತವಪ್ರೀತಿ | ಲಕ್ಷ್ಮಿವಲ್ಲಭನೇ 1 ಅಪ್ರಮೇಯನ ಪತ್ನಿ | ಲಕ್ಷ್ಮಿಯನೆ ತುತಿಸುತ್ತಸುಪ್ರಸಾದವ ಕೊಂಡು | ಗೃಹಕಾಗಿ ತೆರಳೀಅಪ್ರತಿಮ ಸಂತಸದಿ | ಹರಿಯ ಕೊಂಡಾಡುತ್ತಅಪ್ಪವೆಂಕಟನನ್ನು | ಹಾಡಿ ಹೊಗಳಿದನಾ 2 ವೇದಾಂತ ವೇದ್ಯ ಹರಿ | ವೇದ್ಯವಾಗಲಿ ಇವಗೆಮೋದ ತೀರ್ಥರ ಮತದ | ಸಾದು ತತ್ವಗಳುಹಾದಿಯಾಗಲಿ ಮುಕುತಿ | ಸಾಧನ ಸುಮಾರ್ಗಕ್ಕೆಬಾದರಾಯಣ ದೇವ | ಮಾಧವನೆ ಹರಿಯೆ 3 ಕರ್ಮಮರ್ಮವ ತಿಳಿಸಿ | ದುಷ್ಕರ್ಮ ಪರಿಹರಿಸಿನಿರ್ಮಮನ ಮಾಡಯ್ಯ | ಬ್ರಹ್ಮಾದಿ ವಂದ್ಯಪ್ರಮ್ಮೆಯಂಗಳ ಬೋದ | ಸಲ್ಲಲಿತವಾಗಿರಲಿಅಮ್ಮಹಾ ಪರದೈವ | ಹರಿಯೆಂದು ತಿಳಿಸೊ4 ಅದೈತ ತ್ರಯದರಿವು | ಬುದ್ದಿಗೇ ನಿಲುಕಿಸುತಸಿದ್ಧಾಂತ ಪಥವೆಂಬ | ಹೆದ್ದಾರಿ ನಡಸೋಕೃದ್ಧಬಳಮರ್ದನನೆ | ಮುದ್ದು ನರಹರಿದೇವಅದ್ವಿತೀಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಾಲಿ ಲಾಲಿ ನಮ್ಮ ಹರಿಯೆ ಲಾಲಿ ಪ ಶ್ರೀಲತಾಂಗಿಯೊಡನೆ ಮೆರೆವದೊರೆಯೆ ಲಾಲಿ ಅ.ಪ ನಂದಲಾಲಿ ಗೋವಿಂದ ಲಾಲಿ ಕಂದನಾಗಿ ಲೋಕ ತಂದೆ ಲಾಲಿ 1 ಬಾಲಲಾಲಿ ತುಲಸಿಮಾಲ ಲಾಲಿ ಕಾಲಕಾಲವಂದ್ಯ ಗೋಪೀಲೀಲ ಲಾಲಿ 2 ವಾಸುದೇವ ಲಾಲಿ ದೇವಕೀತನಯ ಸದ್ಭಾವಲಾಲಿ 3 ರಂಗಲಾಲಿ ಮಂಗಳಾಂಗಲಾಲಿ ಗಂಗಾತಾತ ಲೋಕೋತ್ತುಂಗ ಲಾಲಿ4 ರಾಮಲಾಲೀ ಭಕ್ತಪ್ರೇಮ ಲಾಲಿ ಶ್ಯಾಮಸುಂದರಾಂಗ ನಮ್ಮ ಸ್ವಾಮಿ ಲಾಲಿ 5 ಸತ್ಯ ಲಾಲಿ ಮೌನಿಸ್ತುತ್ಯ ಲಾಲಿ ನಿತ್ಯ ನಿಗಮವೇದ್ಯ ಅನ್ಯುಕ್ತಲಾಲಿ6 ರಾಜಲಾಲಿ ರತ್ನತೇಜ ಲಾಲಿ ರಾಜರಾಜಪೂಜ್ಯ ಜಾಜಿಶ್ರೀಶ ಲಾಲಿ 7
--------------
ಶಾಮಶರ್ಮರು
ವಂಚನೆಲ್ಲಿಹುದಯ್ಯ ವೈಕುಂಠಪತಿ ಗೊಂಚನೆಲ್ಲಿಹದಯ್ಯ ಪ ವಂಚನೆಲ್ಲಿಹ್ಯದು ವಿರಂಚಿತಾತನಿಗೆ ಕಿಂಚಿತ್ತು ಧ್ಯಾನಕ್ಕಾಗೊಂಚನಿಲ್ಲದೆ ಬಂದ ಅ.ಪ ಚರಣದಾಸರೆಂದು ಪಾಂಡವರ ತುರಗಕಾಯ್ದ ನಿಂದು ನರಗೆ ಬೆಂಬಲನಾಗಿ ತಿರುಗಿದ ಧುರದಲಿ ಜರ ಮರೆಯಾಗದೆ ಪರಮಕರುಣಾಕರ 1 ಜಾಗುಮಾಡುತಲಿವ ಭಕ್ತರ ಯೋಗಕ್ಷೇಮ ತಿಳಿವ ನೀಗದಂಥ ಮಹಾಭೋಗಭಾಗ್ಯವಿತ್ತು ಬಾಗಿಲ ಕಾಯ್ದನು ಸಾಗರನಿಲಯ 2 ಜಾರನೆನಿಸಿಕೊಂಡ ಒಲಿದು ಚೋರನೆನಿಸಿಕೊಂಡ ತೋರಿದವರ ಮನಸಾರ ವರವಿತ್ತು ಭೂ ಭಾರವಿಳುಹಿದ ನಮ್ಮ ಧೀರ ಶ್ರೀಗುರುರಾಮ 3
--------------
ರಾಮದಾಸರು
ವನಭೋಜನ ಊರ್ವಶಿ: ಇದೀಗ ಮನವು ಇಂದಿರಾಕ್ಷಿ ಇದೀಗ ಮನವುಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವುಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ4 ಊರ್ವಶಿ : ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ5
--------------
ತುಪಾಕಿ ವೆಂಕಟರಮಣಾಚಾರ್ಯ
ವನಭೋಜನ ಊರ್ವಶಿ:ಇದೀಗ ಮನವು ಇಂದಿರಾಕ್ಷಿ ಇದೀಗ ಮನವು ಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ 1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ 2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ 3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು 5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವು ಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ 1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ 2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ 3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ 4 ಊರ್ವಶಿ :ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತ ಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ 2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ 3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ 4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ 5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ 6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ 7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆ ಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ 2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ 3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ 4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ 5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ 1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ 2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು 3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂ ಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ 1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ 2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ 2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ 3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು 4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ 5 ಭೋಗವಿನ್ನಂತೆಯಿಲ್ಲಿ ರೋಗ ದುರಿತವೆಲ್ಲ ನೀಗಿತು ಎನುತನು- ರಾಗದಿ ಸವಿದುಂಡು ತೇಗಿದರೆಲ್ಲರು 6 ಪುಣ್ಯ-ಫಲದಿಂದ ದೊರಕಿತಲ್ಲೇ ನಲವಿಂದಾನತರು ಕೈ ತೊಳೆದ ನೀರಿನೊಳಿದ್ದ ಜಲಜಂತು ಸಹವು ನಿರ್ಮಲಿನವಾದವು ಕಾಣೆ 7 ಪಾವನವಾದರು ಹಿಂಡು ಉದ್ದಂಡ ಮೃಗಗಳೆಲ್ಲ &ಟಿb
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವರದರಾಜ ವಿಠಲ | ಪೊರೆಯ ಬೇಕಿವನಾತರಳತವದಾಸ್ಯಕ್ಕೆ | ಮೊರೆಯನಿಡುತಿಹನಾ ಪ ಜನಿತ ಜನಿತ ಸಂಸ್ಕಾರಗಳನೀನಾಗಿ ಕಳೆಯುತಲಿ ಮಾನನಿಧಿ ಸಲಹೋ 1 ತೈಜಸನೆ ಓಲೆಯಲಿ | ಯೋಜಿಸಿದ ಅಂಕಿತವಾಮಾಜದಲೆ ಇತ್ತಿಹೆನೊ | ವಾಜವರ ವದನಾಮಜಗಜ್ಜನ್ಮಾದಿ | ಬ್ರಾಜಿಷ್ಣುಕರಿವರದಓಜಸವನಿತ್ತಿವಗೆ | ನೀ ಜಯನ ಬೀರೋ 2 ಲೌಕಿಕದಿ ಅಭಿಮಾನ | ತೋಕನಿಗೆ ನೀ ಬಿಡಿಸಿಏಕಮೇವನೆ ನಿನ್ನ | ಏಕಮಾನಸದೀ |ಪ್ರಾಕೃತಸುಗೀತೆಯಲಿ | ಝೇಂಕರಿಪ ಸುಕೃಪವಮಾಕಳತ್ರನೆ ಈಯೋ | ಲೋಕೈಕ ಮೂರ್ತೇ 3 ಪತಿ | ಭೂಮಗುಣಪೂರ್ಣಸೋಮಧರ ಮಧ್ಯ ಸತ್ | ಶ್ರೀ ಮಧ್ವ ಮತದೀಕ್ಷೆಕಾಮನಕೆ ತವದಾಸ್ಯ | ಸ್ವಾಮಿ ಕರುಣಿವುದೋ 4 ಪಾವಮಾನಿಗೆ ಪ್ರೀತ | ಭಾವಜಾರಿಯ ತಾತದಾವಗ್ನಿ ಬಹು ಪೀತ | ಗೋವಗಳರತ್ರಾತಗೋವತ್ಸದನಿಗೆ ಹಸು | ಧಾವಿಸೀ ಪೊರೆವಂತೆತಾವಕನ ಪೊರೆಯೊ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾತವನು ಪರಿಹರಿಸೊ ವಾತನೊಡಿಯಾ ಪ ಪರಿ ಬಾಧೆಬಡುವುದುಚಿತವೇ ರಂಗಾ ಅ.ಪ. ನಿನ್ನ ದಾಸನೊ ದೇವಾ ಸಾಕು ಸಾಕು ಈ ಬವಣೆ ಬಿಡಿಸಿನ್ನು 1 ಅನ್ಯನನು ಇವನಲ್ಲ ನಿನ್ನವನು ಕೇಳೋಶಿರಿನಲ್ಲಾ ಲಾಲಿಸೊ ಎನ್ನ ಸೊಲ್ಲಾ 2 ವಾತಪದ ಯೋಗ್ಯನ ದೂತನಂತೆಂದು ಬಿನ್ನೈಪೆ ತಾತ ತಂದೆವರದಗೋಪಾಲವಿಠಲಾ 3
--------------
ತಂದೆವರದಗೋಪಾಲವಿಠಲರು
ವಾದಿರಾಜ ಪ್ರತಿವಾದಿ ಗಜೇಂದ್ರ ಧ ರಾಧರಾಟ ವಿಬೋಧದಿ ಚಂದ್ರ ಪ ಸಮಯವಿದೆಂದು ಉತ್ಕøಮಣವ ತೊರೆದೆ 1 ಬಂದು ಕರೆಯಲು ಪುರಂದರನಾಳ್ಗಳ ಹಿಂದಟ್ಟಿದೆ ಕರ್ಮಂದಿಗಳರಸ 2 ಆರ್ಥಿಗಳಿಗೆ ಪರಮಾರ್ಥ ಕೊಡುವ ಸ ತ್ತೀರ್ಥ ಪ್ರಬಂಧವ ಕೀರ್ತನೆ ಗೈದೆ 3 ಅದ್ವೈತ ಸಮಿಧಿ ಮಧ್ವ ಸುಸಿದ್ಧಾಂ ತಿಧ್ಮಜಿಂಹದಿ ಪ್ರಧ್ವಂಶಿಸಿದೆ 4 ಪಾವನೀಯ ಸುಮತಾವಲಂಬಿಗಳ ತಾವಕರೆಂದೀವುದು ವರವ 5 ಎಲರುಣಿ ಭಯಕಂಜಿಲಿ ನಿಮ್ಮಾಸನ ಕೆಳಗಿರೆ ಕಂಡದನುಳುಹಿದೆ ಕರುಣಿ 6 ಹಯಮುಖ ಪಾದದ್ವಯ ಭಕ್ತಾಗ್ರನೀ ದಯದಿ ವಿಪ್ರನಿಗೆ ನಯನಗಳಿತ್ತೆ 7 ಭಾಗೀರಥಿಯಂತ್ಯೋಗಿ ವರಗುರು ವಾಗೀಶರ ಕರಾಬ್ಜ ಸಂಭವನೆ 8 ನಮಿಪೆ ತ್ವತ್ಪದಕಮಲಗಳಿಗೆಮ ಧ್ವಮತ ಸರೋರುಹ ದ್ಯುಮಣಿಯೆ ನಿರುತ 9 ಗರಮಿಶ್ರಿತ ನರಹರಿ ನೈವೇದ್ಯವ ನರಿತು ಪೇಳೆ ಉಂಡರಗಿಸಿಕೊಂಡೆ 10 ಪೂತಾತ್ಮ ಜಗನ್ನಾಥವಿಠಲನ ಖ್ಯಾತಿಯ ತುತಿಸುವನಾಥ ಜನಾಪ್ತ 11
--------------
ಜಗನ್ನಾಥದಾಸರು
ವಾಸುದೇವ ಹರಿ ವಿಠಲಾ | ಪೋಷಿಸುವುದಿವನಾ ಪ ನೀಸಲಹದಿರೆ ಅನ್ಯ | ಆಶ್ರಯಗಳುಂಟೇ ಅ.ಪ. ದಾಸವೃತ್ತಿಯಲಿದ್ದು | ಮೀಸಲಳಿಯದೆ ಇರುವದಾಸದೀಕ್ಷಾಂಕಿತವು | ಲೇಸು ದೊರೆಯದಲೇ |ಘಾಸಿ ಪಡುತಲಿ ಮನದಿ | ಆಶ್ರಯಿಸಿ ಎನ್ನ ಸುಪ್ತೀಶ ಸೂಚ್ಯಪರಿ ಉಪ | ದೇಶವಿತ್ತಿಹೆನೋ 1 ಒಂದೊಮ್ಮೆ ಇವನಮ್ಮ | ಬಂಧುವೆಂದೆಣಿಸಿಹನೊಇಂದಿರಾಪತಿ ಹರಿಯೆ | ಕಂದರ್ಪಜನಕಾತಂದೆತಾಯಿಯು ನೀನೆ | ಕುಂದುನೆಣಿಸದೆ ಇವನಾಛಂದದಲಿ ಸಲಹೊ ಹರಿ | ನಂದ ಮುನಿವಂದ್ಯಾ 2 ತಾರತಮ್ಯಜ್ಞಾನ ಮೂರೆರಡು ಭೇದಗಳವಾರವಾರಕೆ ತಿಳಿಸಿ | ಕಾಪಾಡೊ ಹರಿಯೇ |ಮಾರಪಿತಮುರಮೈರಿ | ವೈರಾಗ್ಯ ಭಾಗ್ಯಕ್ಕೆದಾರಿತೋರುತ ಪೊರೆಯೊ | ವಾರಿಜಾಂಬಕನೇ 3 ಉತ್ತಮಾನುಷ್ಠಾನ | ಇತ್ತು ಈತಗೆ ನೀನುಚಿತ್ತದೊಳು ವ್ಯಾಪ್ತ ಸ | ರ್ವತ್ರ ಸ್ಮøತಿಯಿತ್ತು |ಎತ್ತು ಭವವನಧಿಯಿಂ | ಕೃತ್ತಿವಾಸನ ತಾತಮತ್ತನ್ಯ ಬೇಡೆ ನಿನ | ಚಿತ್ತದೊಲ್ಲಭನೇ 4 ದೇವ ದೈತ್ಯರು ದೇಹ | ಆವಾಶಿವಿಹರೆಂಬಭಾವಗಳ ತಿಳಿಸುತ್ತ | ತೀವ್ರುಪಾಸನವಾ |ದೇವ ಇವಗಿತ್ತು ಸಂ | ಭಾವಿಪುದು ಶ್ರೀಹರಿಯೆಗೋವಿಂದಾಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಿದ್ಯಾವಿದ್ಯಕಮೀರಿದಾಗುಣತ್ರಯಾ ದಾವನು ಹೊಂದಾದಿಯಾ ನಿಚಯಾಸರ್ವಕ್ಕುದಾವಾಶ್ರಯಾ ಶುದ್ಧಾತ್ಮಾ ಸುಖದಾಲಯಾ ಸತುಚಿದಾನಂದೈಕರಸನಿಶ್ಚಯಾ ಸಿದ್ಧಾಂತ ಪ್ರತಿಪಾದ್ಯದಾವನುದಯಾ ಶ್ರೀ ದೇವ ದತ್ತಾತ್ರಯಾ 1 ಜಗದೋಳಾವನಸದುಗುಣಾ ನಿರಗುಣಾ ಸ್ವಾರೂಪದಾ ಲಕ್ಷಣಾ ಬಗೆ ಬಗೆಯಲಿ ಮಾಡಲು ವಿವರಣಾ ನೇತಿನೇತಿ ಶೃತಿ ವಚನಾ ಮುನಿಜನಾ ನಿಶ್ಚೈಸದಿಹ ರಾವನಾ ಪ್ರಗಟೀಸಿಹನು ನೋಡಿದೇ ನಿಜಘನಾ ಶ್ರೀದತ್ತ ನಿರಂಜನಾ 2 ನಿಶ್ಚಯಿಸದಿಹದಾವನಲಿ ತಾಂಪೌರಾಣಿತಿಹಾಸ ಭೇದಿಸುತಲೀ ನೆಲೆ ಗಾಣದೇ ನಿಲ್ಲಲೀ ಅಪದಿಂದ ಮೀಮಾಂಸತರ್ಕವರಲೀ ಬೆಂಡಾದವು ನೋಡಲೀ ಅಪರ ಘನ ಬಂದಿದೇಧರಿಯಲೀ ಬೆಂಡಾದವು ನೋಡಲೀ 3 ಪಾತಾಳಾದಿಯ ಲೋಕವೇಳುಸರಳು ದಾವನ ಪದ ಕಟಗಳು ಖ್ಯಾತಿಂದೇಭುವನೇಳು ಊಧ್ರ್ವಕಿರಲು ನಾಭಿಂದ ಸಿರವಾಗಲು ಸೀತಾಂಶು ರವಿದಾವನಂಬಕಗಳು ಅಶಾವೆ ಶ್ರೀತಂಗಳು ದತ್ತೆನಿಸಲು4 ಅಮರಂಗಣಾ ದಾವನುದರ ವಿಶ್ವಕಾಗಿ ಭುವನಾ ಶ್ರೀಮದ್ರಮಾರಮಣಾ ನಖದಾಧೀನಾ ಶ್ರೀದತ್ತ ಮನ ಮೋಹನಾ 5 ಸರ್ವೆಶ ಸರ್ವೋತ್ತಮಾ ಸರ್ವಾಧಾರನುದಾವ ದೇವಗರಿಮಾ ಪೂಜ್ಯನು ಸಕಲಾಗಮಾ ಸರ್ವಾತೀತನು ದಾವನಂಘ್ರಿ ಕಮಲಾ ಸೇವಿಸುವಳು ಶ್ರೀರಮಾ ಶ್ರೀದತ್ತ ಗುರುವೇನಮಃ 6 ಅನಸೂಯಾ ಕರರತ್ನನಾಗಿಜನಿಸೀ ಇಷ್ಟಾರ್ಥವನು ಪೂರಿಸೀ ಯೋಗಾಂಗವನು ಪ್ರಕಟಿಸಿ ಸ್ಮರಿಸೀದವರಲ್ಲಿ ಬಹುಕರುಣಿಸೀ ಶ್ರೀ ದತ್ತಪದ ಧ್ಯಾಯಿಸೀ 7 ಮೆರೆವಾ ಮುಪ್ಪುರದಿಂದೇರುವಾ ಸಾರೀ ಸಾವಿರದಳ ಪದ್ಮದಿರುವಾ ಸ್ವಾನಂದ ಭೋಗಿಸುವಾ ಮುದ್ರಾಂಕುರವ ಬೀರುವಾ ಶ್ರೀದತ್ತ ಗುರು ಎನಿಸುವಾ8 ಕಾತ್ರ್ಯವೀರ್ಯವರವಾಯದುರಾಯನುದ್ಧರಿ ಸಿದಾ ಗುರುಮಹೀಪತಿ ನುಡಿಸಿದಾ ಸ್ವಾನಂದ ಸುಖ ಬೀರಿದಾ ಸದಾ ಪಡೆವನು ಗತಿಸಂಪದಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು