ಒಟ್ಟು 648 ಕಡೆಗಳಲ್ಲಿ , 80 ದಾಸರು , 484 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರುದ್ರದೇವರು ಪಾಲಿಸೊ ಪಾರ್ವತಿ ರಮಣಾ ನಿನ್ನಪಾಲಿಗೆ ಬಂದೆನೊ ಪಾಲಿಸೆನ್ನದೆ ಪ ವೇದವೇದಾಂತ ಪುರಾಣಗಳೆಲ್ಲನೀದಯಾಳುವೆಂದು ಪೊಗಳುತಿರೆಹಾದಿಬೀದಿ ದೇವತೆಗಳಿಗೆರಗಿ ನಾಖೇದಬಟ್ಟು ನಿನ್ನ ಮೊರೆ ಹೊಕ್ಕೆ ಮಹದೇವ 1 ತುಂಗಾ ಕುಮದ್ವತಿ ಸಂಗಮೇಶ್ವರ ನಿನ್ನಕಂಗಳಿಂದಲಿ ನೋಡೂ ಕರುಣದಿಂದಕಂಗೆಟ್ಟು ಕಳವಳಿಸುತಿರೆ ನೀ ನೋಡಿಭಂಗಪಡಿಸಿದರೇನು ಭಾಗ್ಯವು ಬರುವದು 2 ಆಪತ್ತು ಕಳೆದು ಸಂಪತ್ತು ನೀಡಿ ನಿನ್ನರೂಪವ ತೋರಿಸೋ ತ್ವರಿತದಲಿಗೋಪತಿಕೃಷ್ಣವಿಠಲನೆಲ್ಲ ಲೋಕವವ್ಯಾಪಿಸಿರಲು ಸಂದೇಹ ವ್ಯಾತಕಯ್ಯಾ 3
--------------
ಗೋಪತಿವಿಠಲರು
ಲಕ್ಷ್ಮೀದೇವಿ ಅಂಬೋರುಹೇಕ್ಷಣೆ ಅಂಬಾಲತೇ ಜಗ ದಂಬಾ ಪೊರೆಯೆ ಸತತ ಗಂಭೀರ ಗಜಗಮನೆ ಪ ನಂಬಿದೆ ನಿನ್ನ ಪದಾಂಬುಜಯುಗಳವ ಕಂಬು ಕಂಧರಿ ಕನಕಾಂಬರ ಧಾರಿಣಿ ಬೆಂಬಲವೀಯೆ ವಿಳಂಬವ ಮಾಡದೆ ಅ.ಪ `ಯಂಕಾಮಯೇ'ತ್ಯಾದಿ ಶೃತಿಗಳೆಲ್ಲಾ ಪಂಕಜಭವಮುಖ ಸುಮನಸರು ಕಿಂಕರರೆನ್ನುತ ಪೊಗಳುತಿರೆ ಶಂಕೆಯುಂಟೆ ನಿನ್ನ ಮಹಿಮೆಗಳಲ್ಲಿ ಶ ಶಾಂಕ ಸೋದರಿ ಆತಂಕವ ಬಿಡಿಸೆ 1 ನೀರಜಾತಗಣ ಕೃತ ನಿಲಯೇ ಮಾರಜನಕ ಹರಿ ಪ್ರಿಯ ಜಾಯೆ ಕೋರುವೆ ನಿನ್ನಯ ಪರಮದಯೆ ಸಾರಸಾಕ್ಷಿ ಸರಿಯಾರು ನಿನಗೆ ಕರು ಣಾರಸಮಯೆ ಸುವಿಶಾರದೆ ಜನನಿ 2 ಕನ್ಯೆ ನಿಖಿಲ ಸುರನರರೊಳಗೆ ಮಾನ್ಯೆ ನಿನ್ನ ಪೋಲುವರನ್ಯರುಂಟೆ ನಿನ್ನ ದಾಸನಾದ ಎನ್ನ ಮನೋರಥ ವನ್ನು ತಿಳಿಸೆ ಪ್ರಸನ್ನ ಶ್ರೀ ಹರಿಯಲಿ 3
--------------
ವಿದ್ಯಾಪ್ರಸನ್ನತೀರ್ಥರು
ಲೋಭಿಯು ಬೇಡಲು ಲಾಭವೇನಿರುವುದು ನಾಭಿಯು ಒಣಗುವುದು ಪ ಲೋಭಿಗೆ ಧನದಿಂದ ಶೋಭೆಯುಂಟೆ ಮನ ಕ್ಷೋಭೆಯಲ್ಲದೆ ಸತತ | ತನ್ನಯ ಮನಕ್ಷೋಭೆಯಲ್ಲದೆ ಸತತ ಅ.ಪ ನೂರು ಛಿದ್ರಗಳಲ್ಲಿ ತೋರುತಿದ್ದರು ದೇಹ ಕೋರನು ನವವಸನ | ಏನೆಂದು ಕೋರನು ನವವಸನ ಮೂರು ಕಾಸಿಗೆರಡು ಮಾರುತಿದ್ದರು ಅದ ದೂರದಿ ತ್ಯಜಿಸುವನು | ನೂತÀನವಸ್ತ್ರ ದೂರದಿ ತ್ಯಜಿಸುವನು 1 ಬಂಧು ಜನರು ತನ್ನ ಮಂದಿರಕ್ಕಿಳಿಯಲು ನೊಂದುಕೊಳ್ಳುವ ಮನದಿ | ತತ್ತಳಿಸುತ ನೊಂದುಕೊಳ್ಳುವ ಮನದಿ ತೊಂದರೆಗಳ ಪೊಂದಿಹೆನೆನ್ನುತ ಮುಂದಕೆ ಸಾಗಿಸುವ | ಬಂದವರನು ಮುಂದಕೆ ಸಾಗಿಸುವ 2 ಮುಗ್ಗಿದ ಧವಸವು ಅಗ್ಗÀದಿ ಮಾರಲು ಹಿಗ್ಗುತ ಕೊಳ್ಳುವನು | ಸೊಗಸಿನಲಿ ಹಿಗ್ಗುವನು ಒಗ್ಗಿಹುದೆನ್ನುತ ನುಗ್ಗಿಸಿ ಉದರದಿ ಸಗ್ಗದೆ ನಡೆಯುವನು | ಪರನುಡಿಗೆ ಸಗ್ಗದೆ ನಡೆಯುವನು 3 ಹಣದಲಿ ಲೋಭಕೆ ಕೊನೆ ಮೊದಲಿಲ್ಲದೆ ಒಣಗಿಸುವನು ತನುವ | ಕಾರ್ಪಣ್ಯದಿ ಒಣಗಿಸುವನು ತನುವ ಗೆಣೆಯನಿವನು ನಾಲ್ಕಾಣೆಯ ಕಂಡರೆ ಕುಣಿಯುವನು ಮನದಲ್ಲಿ | ಎಣೆಯಿಲ್ಲದೆ ಕುಣಿಯುವ ಮನದಲ್ಲಿ4 ಕಿಕ್ಕಿರಿದರು ಧನ ಕಕ್ಕುಲತೆಯೊಳ್ ತನ್ನ ಮಕ್ಕಳ ಸಲಹುವನು | ರಕ್ಕಸನಿವ ಮಕ್ಕಳ ಸಲಹುವನು ಮಿಕ್ಕ ಧನವ ಬಲು ಅಕ್ಕರೆಯಿಂದ ಎವೆ ಯಿಕ್ಕದೆ ನೋಡುವನು | ನೇತ್ರದಿ ಎವೆಯುಕ್ಕದೆ ನೋಡುವನು 5 ನುಡಿದರೆ ಸವಿಮಾತ ಒಡವೆ ವಸನಗಳಿ ಗ್ಹಿಡಿವಳೆಂದರಿಯುತಲಿ | ಸಡಗರದಿ ಹಿಡಿವಳೆಂದರಿಯುತಲಿ ಕರವ ಪಿಡಿವ ತನ್ನ ಮಡದಿಯ ಕಂಡರೆ ಸಿಡಿಮಿಡಿಗÀುಟ್ಟುವನು | ನಿರ್ಘೃಣನಿವ ಸಿಡಿಸಿಡಿ ಗುಟ್ಟುವನು 6 ರಾಯರೆ ನಿಮ್ಮ ಸಹಾಯ ಹೊರತು ಕಾಣೆನೆನಲು ಕಾಯುವ ಧಣಿ ನಾರಾಯಣನೆನುತಲಿ ನುಡಿಯುವನು 7 ಈ ಧನವೆ ದೊಡ್ಡ ಸಾಧನವೆನ್ನುವ ಮೇಧಾವಿಯು ಇವನು | ಓದಲರಿಯದ ಮೇಧಾವಿಯು ಇವನು ಪಾದ ಕಮಲದಲಿ ಆದರವರಿಯನಿವ | ಎಂದೆಂದಿಗು ಆದರವರಿಯನಿವ 8 ಘನತೆಯು ಬೇಡವು ಜನತೆಯು ಬೇಡವು ಧನವಿದ್ದರೆ ಸಾಕು | ಈ ನರನಿಗೆ ಧನವಿದ್ದರೆ ಸಾಕು ಮನುಜ ಮುಟ್ಟದ ಗುಬ್ಬಿಯನನುಕರಿಸುತ ಜೀ ವನವನು ಕಳೆಯುವನು | ಕ್ಲೇಶದಿ ಜೀವನವನು ಕಳೆಯುವನು9 ಗಳಿಸಿದವನ ಧನ ಬಳಸಿದವನಿಗೆಂಬ ಮುಳುಗಿ ಮುಳುಗುತಿರುವ | ಕ್ಲೇಶಗಳಲಿ ಮುಳುಗು ಮುಳುಗುತ್ತಿರುವ 10 ಭುಜಗಶಯನ ಹರಿ ಸುಜನರು ತನ್ನನು ಅಜನೆಂದು ಕರೆಯುತಿರೆ | ಸೃಷ್ಟೀಶನ ಅಜನೆಂದು ಕರೆಯುತಿರೆ ತ್ಯಜಿಸದೆ ಹೆಸರನು ಅಜಗಳ ಸ್ತನದಂತೆ ಸೃಜಿಸಿದನೀ ಜನರ | ಪ್ರಸನ್ನ ಹರಿ ಸೃಜಿಸಿದನೀ ಜನರ 11
--------------
ವಿದ್ಯಾಪ್ರಸನ್ನತೀರ್ಥರು
ವನಿತೆಯರ ಆರತಿಕಂ||ಸಿರಿಧರಣಿಯರೊಡೆವೆರಸಿಯೆತಿರುಪತಿಯಧಿನಾಥನೊಲಿದು ಶಯ್ಯಾಸನದೊಳ್ುರುತಿರೆ ಸತಿಯರು ಹರುಷದಿಪರಿಪರಿಯಾರತಿಯನೆತ್ತಿ ನಡೆದರು ಮುದದಿಂಆವ ಜನ್ಮದ ಪುಣ್ಯ ಫಲಿಸಿತು ನಮಗೆದೇವಾಧಿದೇವ ಬಂದನು ನಮ್ಮ ಮನೆಗೆ ಪನೆನೆಯಲು ಮನದೊಳು ನೆಲೆಗೊಂಡನಮ್ಮ ಸನಿಯಕೆ ಕರೆದರೆ ುದಿರಾದನಮ್ಮಮನದ ಮಧ್ಯಕೆ ಮತ್ತೆ ಬರುವ ಕಾಣಮ್ಮವನಿತೆಯರಾರತಿಯ ತಂದೆತ್ತಿರಮ್ಮಾ 1 ಪಾದವ ತೊಳೆದು ಪನ್ನೀರಿಂದ ನಾನುಆದರದಿಂ ಹಸ್ತಕಿತ್ತು ಹಸ್ತವನುಪಾದಾವಧಾನವ ಪೇಳಲೈದಿದನುಮೋದದಿಂದಾರತಿಯಾ ತಂದೆತ್ತಿರಮ್ಮಾ 2 ತಿರುಪತಿುಂದ ಭಕ್ತರ ಪಾಲಿಸಲೆಂದುವರದ ವೆಂಕಟರಾಯ ತಾ ಬಂದನಿಂದುಗುರುವಾಸುದೇವಾರ್ಯನಾದನೀ ಬಂಧುತರುಣಿಯರಾರತಿಯ ತಂದೆತ್ತಿರಮ್ಮಾ 3ಓಂ ಯುಧ್ಠಿರಪ್ರತಿಷ್ಠಾತ್ರೇ ನಮಃ
--------------
ತಿಮ್ಮಪ್ಪದಾಸರು
ವರ್ಣಿಸಲರಿಯೆ ನಿನ್ನ | ವರ್ಣಿಸಲರಿಯೆ ಗು | ಣಾರ್ಣವ ಹರಿಯೆ ಸೂ | ವರ್ಣ ಗಿರೀಶ ಸು | ಗಮನ ರಂಗಾ ಪ ಕುಂಡಲ ಮಿನುಗುವ ಹಸ್ತ ಕಂಕಣ ಬೆರಳುಂಗರ | ಕೌಸ್ತುಭ ಕಂಬು ಸೂದರು | ಶನ ಭುಜಕೀರ್ತಿ ಭೂ | ಷಣವಾದ ಶಿರ ಉರುವ ಒಪ್ಪಲು ಕಿಂ | ಕಿಣಿ ಕನಕಾಂಬರವ ಪೂಸಿದ ಗಂಧ | ಪುನುಗು ಜವ್ವಾದಿಯಿಂದೆಸೆವ ಸುರತರುವೆ 1 ಕಾಂಚಿದಾಮ ಥಳಿ | ಥಳಿಸುವ ಪದಕ ನ್ಯಾ | ತುಂಬಲು ಸೂಸುತಿರೆ ದಂತಾ | ಮಾತಾರಗಿಳಿಯಂತೆ ಶೋಭಿಸಿ | ಕಪೋಲ ಸುತ್ತಲು ಬೆಳಗುವ ಕಂಗಳ ನಾಸಕಾಂತಿ | ಸಿರಿ ತಿರುವೆಂಗಳಾ2 ಕಟಿ ಕರ ಎರಡೇಳು ಲೋಕ ಜಠರದೊಳಡಗಿರೆ | ಕರಿ ಪಲ್ಲಿನಂತೆ ಸುಂದರ ಜಂಘೆ ಗುಲ್ಫ ವಿ | ಪಾದ ನಖ ಪರಿ ಪರಿ ರೇಖೆಗಳ ಕಾಲಿಂದಿಗೆ | ನಿತ್ಯ ಮಂಗಳಾ 3 ನಿರಯ ತ್ತಮ ಜನ ಮನೋರಥ | ಗಮ ಸಿದ್ಧಾಂತನೆ ವಿ | ಕ್ರಮದಾನವ ಹರ | ಕೋಟಿ ಪ್ರಕಾಶಾ | ವೆಂಕಟೇಶಾ | ಅಪ್ರಾಕೃತ | ಪ್ರಮೆಯಭರಿತನಾದ | ಕುರುವಂಶ ವಿನಾಶಾ 4 ಭೂಗೋಳದೊಳಗಿದರಾಗಮ ತಿಳಿ | ದುರಗ ಗಿರಿ ಯಾತ್ರಿಗೆ | ಭೋಗದಾಶೆಯ ಬಿಟ್ಟು | ವೇಗದಿಂದಲಿ ನಿಜ | ಭವ ಸಾಗಿ ಬರಲು ಚನ್ನಾಗಿ ಜ್ಞಾನವ ನೀವುತ್ತ ಸಾಕುವಂಥ | ಶ್ರೀ ಗುರು ವಿಜಯವಿಠ್ಠಲ ಭಕ್ತರ ದಾತಾ5
--------------
ವಿಜಯದಾಸ
ವಾಸವ ಪ್ರಿಯಾ ಪ ವ್ರಜ ನಾನಾ ಬಗೆಯಲಿ || ಭಜನೆ ಮಾಡುತ ಬಲು | ನಿಜಮನದಲಿ ನೋಡೇ 1 ಛತ್ರ ಚಾಮರ ಜನರು | ಸ್ತೋತ್ರ ಸಂಗೀತನಾದ ಧಾತ್ರಿ ತುಂಬಿರಲು ಸ | ರ್ವತ್ರ ವ್ಯಾಪಕ ದೇವಾ 2 ಗಂಧರ್ವಗಣನಲು | ವಿಂದ ಪಡಲು ಭೇರಿ || ದುಂದುಭಿವಾದ್ಯ ಆ | ನಂದ ನುಡಿವುತಿರೆ 3 ಇಕ್ಕಿದ ವರಕಲ್ಪ | ದಿಕ್ಕು ಬೆಳಗುತಿರೆ | ಬೊಕ್ಕ ದೈವವೆ ಶುದ್ಧ | ಭಕ್ತರ ಒಡಗೂಡಿ 4 ಇಷ್ಟ ಮೂರುತಿ ಮನೋ | ಭೀಷ್ಟ ಪಾಲಿಪ ವಿಜಯ || ವಿಠ್ಠಲ ವೆಂಕಟೇಶ | ಬೆಟ್ಟದೊಡೆಯೆಂದು 5
--------------
ವಿಜಯದಾಸ
ವಿಜಯಗುರು ನಿನ್ನಡಿಯ ಭಜಿಸುವೆನೋ ಸತತದಲಿ ವಿಜಯ ಕೊಡು ದಾಸತ್ವದಿ ಪ. ಪಾದ ಭಜನೆಯ ಮಾಳ್ಪಂಥ ಮತಿ ರುಜು ಮಾರ್ಗ ತೋರಿ ಸಲಹೋ ದಯದಿ ಅ.ಪ. ವಿಧಿ ವಶದಿ ಘನ ಕಷ್ಟ ಒದಗುತಿರೆ ಚರಿಸಿ ಯಾತ್ರೆ ಪದುಮನಾಭನ ದಯದಿ ಕಾಶಿಕ್ಷೇತ್ರದಲಿರುವ ಅದೆ ಕಾಲದಲಿ ಸ್ವಪ್ನದಿ ವಿಧಿಸುತಾಂಶರು ಪುರಂದರದಾಸರಿತ್ತಂಥ ಅದುಭುತದ ಉಪದೇಶದಿ ಉದಿತವಾಗಲು ಜ್ಞಾನ ಒದೆದು ದುಷ್ಕರ್ಮಗಳ ಪದುಮೇಶ ದಾಸನಾದಿ ಮುದದಿ 1 ಪರಮ ವೈರಾಗ್ಯದಲಿ ಚರಿಸಿ ತೀರ್ಥಕ್ಷೇತ್ರ ತರುಣಿ ಶಿಷ್ಯರ ಸಹಿತದಿ ಪರಿಪರಿಯ ಮಹಿಮೆಗಳವರ ಭಕ್ತಿಗೆ ತೋರಿ ಕರುಣಾಳುವೆನಿಸಿ ಮೆರೆದಿ ಪುರಂದರ ಗುರು ಆಜ್ಞೆ ತೆರದಂತೆ ಪದಲಕ್ಷ ವಿರಚಿಸಿದೆ ಪದ ಸುಳಾದಿ ನರವರರಿಗನ್ನದಾನಗಳನು ಮದುವೆ ಮುಂಜಿ ತೆರವಿಲ್ಲದೆಲೆ ಚರಿಸಿದಿ ದಯದಿ 2 ನಿನ್ನ ಕರುಣವು ದಾಸಕುಲದವರ ಮೇಲೆ ಬಹು ಉನ್ನತವಾಗಿಹುದು ಘನ್ನ ಗುರು ವಿಜಯವಿಠ್ಠಲದಾಸರೆಂತೆಂದು ನಿನ್ನ ಸ್ಮರಿಸಲು ಕಾವುದು ಎನ್ನ ಗುರು ತಂದೆ ಮುದ್ದುಮೋಹನರ ದಯದಿ ನಿನ್ನ ಸ್ಮರಿಸಲು ಬಾಹುದು ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನ ದಯದಿ ಉನ್ನತ ಜಯವೀವುದು 3
--------------
ಅಂಬಾಬಾಯಿ
ವಿಶೇಷ ಸಂದರ್ಭದ ಹಾಡುಗಳು 250 * ಅಡಗಿದೇತಕೊ ರಜತ ಕವಚದೊಳಗೆ ಅಡಿ ಭಕ್ತರಾಡುವೋ ಬಿಡಿ ನುಡಿಗೆ ಪ. ಗೇಣು ಪ್ರಮಾಣದಾ ಪ್ರಾಣರಾಯನೆ ಛಿದ್ರ ಕಾಣುತಿರೆ ಶಿಲೆರೂಪದಲ್ಲಿ ನಲಿದು ಆನಂದದಿಂ ನುಡಿದ ಆನತರ ವಚನಕ್ಕೆ ನೀ ನಾಚಿ ಜಗಕಿನ್ನು ಕಾಣಬಾರದು ಎಂದು 1 ದುರುಳ ಸೀತೆಯ ಕದ್ದು ತೆರಳುತಿರೆ ನಿಮ್ಮ ಕಂ ಡರವಿಂದನಯನೆ ಆಭರಣ ಕಟ್ಟೊಗೆಯೇ ಸಿರಿಚರಣ ಸ್ಪರ್ಶವೆನಗಿರಲೆಂದು ಪೈಜಣವ ಮುರಿಸಿ ಕವಚವ ಮಾಡಿ ಮೆರೆವ ವೈಖರಿಯೇ 2 ರಜತಗಿರಿ ವಾಸ ರಣದಲ್ಲಿ ಬ್ರಹ್ಮಾಸ್ತ್ರವನು ಭುಜಬಲದಿ ಬಿಡಲು ಲೆಕ್ಕಿಸದೆ ಮೂದಲಿಸೀ ನಿಜವಾಸ ಸ್ಥಳವಿಲ್ಲದಲೆಯಲೆಂದೆನ್ನುತಲಿ ರಜತಗಿರಿ ಕವಚ ಮಾಡಿರುವ ವೈಭವವೋ 3 ಕುನ್ನಿ ಮತಗಳ ಮುರಿದು ಘನ್ನ ಶಾಸ್ತ್ರವನೊರೆದು ಚನ್ನಕೃಷ್ಣನ ರಜತ ಪೀಠದಲಿ ನಿಲಿಸೀ ಎನ್ನೊಡೆಯನಾಸನವು ಎನಗೆ ಭೂಷಣವೆಂದು ಚನ್ನಾಗಿ ಮೈಗೆ ಸುತ್ತಿರುವ ವಿಸ್ಮøತಿಯೋ 4 ನಿನ್ನಲ್ಲಿ ವಡಕಿರಲು ಪೂಜಿಸುವ ಜ್ಞಾನಿಗಳಿ ಗಿನ್ನೊಂದು ನುಡಿ ಅಜ್ಞರಿಂ ಬೇಡವೆಂದೂ ಚನ್ನಾಗಿ ಹಿಂದೆ ಮುಂದೆಡಬಲದಿ ಮೇಲ್ ಕೆಳಗೆ ಇನ್ನು ತೋರದ ತೆರದಿ ಮರೆಮಾಡಿಕೊಂಡೂ5 ವಡೆಯ ಈರೇಳು ಲೋಕದಿ ವ್ಯಾಪ್ತನಾಗಿ ನೀ ನುಡಿದು ಶ್ರೀಮಂತ್ರ ಜೀವರ ಕಾಯೊ ಎನಲೂ ವಡೆಯಗುತ್ತರ ಪೇಳಲಾರದಲೆ ಬ್ಯಾಸತ್ತು ಪರಿ ಏನೋ 6 ಕಂಡವರು ಬಿಡುವರೇ ಆಡದಲೆ ನಿನ ಚರಿತೆ ಚಂಡ ವಿಕ್ರಮನಹುದೊ ಮುನಿಯದಲೆ ಸಲಹೋ ಕರ ಪೂಜ್ಯ 7
--------------
ಅಂಬಾಬಾಯಿ
ವೃಂದಾವನ ಪ್ರವೇಶಿಸಿದಂದವ ಚಂದದಿ ಪೇಳುವೆ ಪಾಲಿಪುದು ಪ ಇಂದಿರೆಯರಸನ ಪ್ರೇರಣೆಯಿಂದ ಯತಿ ವೃಂದ ತಿಲಕ ರಾಘವೇಂದ್ರರಾನಂದದಿ ಅ.ಪ ಒಂದು ದಿನವು ಶ್ರೀ ರಾಯರು ಶಿಷ್ಯರ ವೃಂದಕೆ ಪಾಠವ ಹೇಳುತಿರೆ ಅಂದು ವಿಮಾನದಿ ಕೃಷ್ಣದ್ವೈಪಾಯನ ಪ ರಂಧಾಮಕೈದಲು ನೋಡಿ ಕೈ ಮುಗಿದು 1 ಎಷ್ಟು ದಿನವು ನಾವಿಲ್ಲಿರಬೇಕೆಂದು ಶಿಷ್ಟ ಗುರುವರರು ಕೇಳಿದೊಡೆ ಕೃಷ್ಣದ್ವೈಪಾಯನರೆರಡು ಬೆಳಗುಳ ಗಟ್ಟಿಯಾಗಿ ಬೀಸಿ ತೋರಿಸಿ ಪೊರಟರು 2 ನೆರೆದ ಶಿಷ್ಯರದರರ್ಥವೇನೆನುತ ಗುರುಗಳನ್ನು ತಾವ್ ಕೇಳಿದೊಡೆ ಎರೆಡು ವರ್ಷ ತಿಂಗಳು ದಿನವೆರಡೆರಡು ಇರುವುದು ಧರೆಯೊಳಗೆಂದರು ರಾಯರು 3 ಆದವಾನಿಗೆ ಗುರು ಸಂಚಾರ ಪೋಗಿರೆ ಆ ದಿವಾನ ವೆಂಕಣ್ಣ ಬಲು ಆದರಿಸಿದ ಬಳಿ ತಾ ನವಾಬನಿಂದ ಮೋದದಿ ಕೊಡಿಸಿದ ಮಂಚಾಲೆಯನು 4 ಹಿಂದೆ ಪ್ರಹ್ಲಾದರು ಯಾಗವ ರಚಿಸಿದ ಸುಂದರ ಕ್ಷೇತ್ರವಿದೆಂಬುದನು ತಂದು ಮನಕೆ ಗುರುರಾಯರೀ ಕ್ಷೇತ್ರವ ನಂದು ಪಡೆದು ತಾವಿಲ್ಲಿಯೇ ನಿಂತರು 5 ಉತ್ತಮ ನೀಲವರ್ಣದ ಶಿಲೆಯಪಳಿರಿಸಿ ಕೆತ್ತಿಸಿ ವೃಂದಾವನತರಿಸಿ ಕ್ಷೇತ್ರರಕ್ಷಣೆಯಗಷ್ಟ ದಿಕ್ಕುಗಳಲಿ ದೇವ ಮೂರ್ತಿಗಳನು ಸ್ಥಾಪಿಸಿ ನಿಲಿಸಿದರು 6 ವೃಂದಾವನದಲಿ ಸ್ಥಾಪಿಸಲೇಳ್ನೂರು ಚಂದದ ಸಾಲಿಗಾಮಗಳ ತಂದಿಟ್ಟರೆ ಸಿದ್ಧತೆಗಳು ಸಕಲವು ಕುಂದಿಲ್ಲದಂದೆ ನಡೆದಿರಲಾಗಲೆ 7 ಮುಂದಕೆ ತಮ್ಮ ಸಂಸ್ಥಾನವ ವಹಿಸಿ ಯೋ ಗೀಂದ್ರರೆಂಬ ಪ್ರಿಯ ಶಿಷ್ಯರಿಗೆ ಸಂದಿಪ ವಿರಹದಿ ನೊಂದಿದ ಶಿಷ್ಯರ ವೃಂದವ ಬಲು ಸಂತೈಸಿದರಾಗಲೇ8 ನಲವತ್ತೇಳು ಸಂವತ್ಸರ ನಾಲ್ಕು ತಿಂ ಗಳು ಇಪ್ಪತ್ತೊಂಭತ್ತು ದಿನಕಾಲ ನಲವಿನಿಂದ ವೇದಾಂತ ಸಾಮ್ರಾಜ್ಯವ ಸಲಹಿ ಸುಕೀರ್ತಿಯ ಗಳಿಸಿದ ಬಳಿಕ 9 ಸಾವಿರದೈನೂರು ತೊಂಭತ್ಮೂರನೆ ಕ್ರತು ಸಂವತ್ಸರದ ಶ್ರಾವಣ ಕೃಷ್ಣ ದ್ವಿತೀಯದ ಗುರುವಾರ ವಾಸರ ಮುಹೂರ್ತದಿ ಗುರುವರ 10 ಹಸ್ತದಿ ಜಪಮಾಲೆ ಪಿಡಿದು ಯೋಗೀಂದ್ರರ ಹಸ್ತಲಾಘವವ ಸ್ವೀಕರಿಸಿ ಸ್ವಸ್ತಿವಾಚನಗಳ್ ವಿಪ್ರರು ಪೇಳುತಿರೆ ಅರ್ಥಿಯಲಿ ವೃಂದಾವನವ ಪ್ರವೇಶಿಸಿ 11 ಪದ್ಮಾಸನದಲಿ ಮಂಡಿಸಿ ಎದುರಲಿ ಮುದ್ದುಪ್ರಾಣೇಶನ ನೋಡುತಲಿ ಪದ್ಮನಾಭನ ಧ್ಯಾನದೊಳಿರೆ ಜಪಸರ ಬಿದ್ದು ಬಿಡಲು ಮುಚ್ಚಳಿಕೆಯನಿಡಲು 12 ನೆರೆದಿಹ ವಿಪ್ರರು ಜಯ ಜಯವೆನ್ನುತ ಪರಿಪರಿ ರಾಯರ ಪೊಗಳಿದರು ಕರಿಗಿರೀಶನ ಕರುಣ ಪಡೆದ ನಮ್ಮ ಗುರುಸಾರ್ವಭೌಮನ ಸರಿಯಾರಿಹರು 13
--------------
ವರಾವಾಣಿರಾಮರಾಯದಾಸರು
ವೃಷಭಾರೂಡಗೆ ರವಿಶಶಿ ನಯನಗೆ ವೃಷಭಪಾವನತ್ರಿಯಂಬಕಗೆ || ವೃಷಭಸ್ವರೂಪದಿ ಮೆರೆವ ಆಕಾರದೇವಗೆ | ವೃಷಭ ಕನ್ನಿಕೆಯರಾರುತಿ ಎತ್ತಿರೆ ವೃಷಭಾಶಿವಗೆ ಸಂಗಮಗ ಜಗದೀಶ ಮಹೇಶ-ಗಾರುತಿಯನೆತ್ತಿರೆ ವೃಷಭ ಶಿವಗೆ ಸಂಗಮಗೆ 1 ಭಾನು ಕೋಟಿ ದಿವ್ಯ ತೇಜ ಪ್ರಕಾಶಗೆ ಆನಂದಮಯಗೆ ಚಿನ್ಮಯಗೆ | ಮಾನಸದಿಂದಲಿಮೆರೆವೆನ್ನ ದೇವಗೆ ಮಾನ ಕನ್ನಿಕೆಯರಾರುತಿ ಎತ್ತಿರೆ |ವೃಷಭ ಶಿವಗೆ ಸಂಗಮಗೆ 2 ಭಾಗೀರಥಿ ಪ್ರಿಯಗೆ ಭಾಲನೇತ್ರಗೆ ಶ್ರೀ ಗೌರಿಯ ಮನೋಹರಗೆ | ನಾಗಭೂಷಣನಾರಾಯಣ ಪ್ರಿಯಗೆ ನಾಗ ಕನ್ನಿಕೆಯರಾರುತಿ ಎತ್ತಿರೆ 3 ದೇವರ ದೇವಗೆ ದೇವ ಜಗದೀಶಗೆ | ದೇವಸನ್ಮೋಹನಸ್ವಾಮಿಗೆ | ದೇವ ಸಿಂಧಾಪುರದ ಶ್ರೀ ವಿಶ್ವನಾಥಗೆದೇವ ಕನ್ನಿಕೆಯರಾರುತಿ ಎತ್ತಿರೆ 4
--------------
ಭೀಮಾಶಂಕರ
ವೆಂಕಟೇಶ ವಿಠ್ಠಲನೆ ಉದ್ಧರಿಸೊ ಇವಳಾಪಂಕಜಾಸನ ವಂದ್ಯ ಪಂಕೇರು ಹಾಕ್ಷ ಪ ಪತಿ ವಿಯೋಗದ ದುಃಖ | ಅತಿಯಾಗಿ ತವಪಾದಗತಿಗಾಗಿ ಗಿರಿಯೇರಿ | ತುತಿಸುತಿರೆ ನಿನ್ನಾಗತಿಗೋತ್ರ ತೈಜಸನೆ ಪತಿರೂಪ ನಿನ್ನನುಪತಿಕರಿಸ ನಿನ್ನ ಮೃತ ಹಸ್ತ ನೆತ್ತಿಲಿ ಇಟ್ಟೇ 1 ಇಂದಿವಳ ಪ್ರಾರ್ಥನೆಯ ಛಂದದಲಿ ಮನ್ನಿಸುತಅಂದು ನೀನಾಗಿತ್ತ | ನಂದದಂಕಿತವಾಇಂದು ಊರ್ಜಿತ ಪಡಿಸಿ | ವಂದಿಸಿಹೆ ತವಪಾದವೃಂದಾರ ಕೇಂದ್ರ ಗುರು ನಂದ ಮುನಿ ವಂದ್ಯಾ 2 ಪಕ್ಷಿವಾಹನ ದೇವ | ದಕ್ಷಾರಿ ಪ್ರಿಯ ಸಖನೆದೀಕ್ಷಿತಳ ದಾಸಪಥ | ಲಕ್ಷಿಸುತಲಿದನಾಈಕ್ಷಿಪುದು ಕರುಣಾಕ | ಟಾಕ್ಷದಲೆಂದನುತಅಕ್ಷಾರಿ ವಂದ್ಯ ಹರಿ ಪಾರ್ಥಿಸುವೆ ನಿನ್ನಾ 3 ದೇಶ ದೇಶದ ಜನರ | ಆಶೆಗಳ ಪೂರೈಪ ಕೇಶವನೆ ಶ್ರೀ ವೆಂಕಟೇಶಾಖ್ಯ ಹರಿಯೇ |ದಾಸಿಯಳ ಹೃದಯಾ | ಕಾಶದೊಳು ತೋರೆಂದುಲೇಸು ಭಿನ್ನಪ ಸಲಿಸೊ | ಮೇಶ ಮಧ್ವೇಶಾ4 ಊರ್ವಿಯೊಳು ನಿನ್ಹೊರತು ಕಾವರನು ನಾಕಾಣೇಸರ್ವೋತ್ತಮೋತ್ತಮನೆ | ಶರ್ವ ವಂದ್ಯಾದರ್ವಿ ಜೀವಿಯ ಕಾವ | ಹವಣೆ ನಿನ್ನದಲ್ಲೇನೊ ಗುರ್ವಂತರಾತ್ಮ ಗುರು | ಗೋವಿಂದಾ ವಿಠಲಾ 5
--------------
ಗುರುಗೋವಿಂದವಿಠಲರು
ಶಕುನವೆ ಬಲು ಶಕುನವೆ ಸಖ ಕೃಷ್ಣನ ಮುದ್ದು ಮುಖವ ಕಾಂಬುವೆ ನೀಗ ಪ. ಹಾಲು ಮೊಸರಿನ ಕುಂಭ ಮೇಲಾದ ಘ್ರತÀ ಬೆಣ್ಣಿಸಾಲುಸಾಲಾಗಿ ಎದುರಾಗಿ ಇಂದೀವರಾಕ್ಷಿಸಾಲುಸಾಲಾಗಿ ಎದುರಾಗಿ ರಂಗನ ಕಾಲಿಗೆಶಿರವ ನೀಡುವಂತೆ ಇಂದೀವರಾಕ್ಷಿ 1 ಕೋಟಿ ಜನರು ಕೂಡಿ ತ್ವಾಟ ಪಟ್ಟಿಗಳದಾಟಿ ನೀಟಾದ ಹಂಸ ಗಿಳಿವಿಂಡುನೀಟಾದ ಹಂಸ ಗಿಳಿ ವಿಂಡು ನಡೆದವುಹಾಟಕಾಂಬರನ ದಯವಿದು ಇಂದೀವರಾಕ್ಷಿ 2 ಜತ್ತಾಗಿ ದ್ವಾರಕೆಯ ಹತ್ತಿರ ಬರುತಿರೆಮುತ್ತಿನ ಹೇರು ಇದುರಾಗಿ ಇಂದೀವರಾಕ್ಷಿಮುತ್ತಿನ ಹೇರು ಇದುರಾಗಿ ರಂಗಯ್ಯಹಸ್ತಲಾಘವ ಕೊಡುತಾನೆ ಇಂದೀವರಾಕ್ಷಿ3 ಸಾವಿರ ಅಂಗಡಿ ಸಾಲಾದ ಬಾಜಾರ ನೇರಳೆ ಹಣ್ಣು ಇದುರಾಗಿ ಇಂದೀವರಾಕ್ಷಿನೇರಳೆ ಹಣ್ಣು ಇದುರಾಗಿ ರಂಗಯ್ಯಮೇಲು ಕರುಣದಲಿ ಕರೆಸುವನು ಇಂದೀವರಾಕ್ಷಿ 4 ಹಸ್ತಿನಾಪುರದವರು ಸಪ್ತಪ್ರಾಕಾರ ದಾಟಿಮತ್ತೆ ಶ್ರೀಗಂಧ ಇದುರಾಗಿ ಇಂದೀವರಾಕ್ಷಿಮತ್ತೆ ಶ್ರೀಗಂಧ ಎದುರಾಗಿ ಬಲರಾಮಅರ್ಥಿಲೆ ಬಂದು ಕರೆವÀನು ಇಂದೀವರಾಕ್ಷಿ5 ವ್ಯಾಲಾಶಯನನ ಮನೆಯ ಏಳು ಬಾಗಿಲದಾಟಿಬಾಳೆಯ ಹಣ್ಣು ಇದುರಾಗ ಇಂದೀವರಾಕ್ಷಿಬಾಳೆಯ ಹಣ್ಣು ಇದುರಾಗ ರಂಗಯ್ಯಕೇಳೋನು ಕ್ಷೇಮ ಕುಶಲವ ಇಂದೀವರಾಕ್ಷಿ6 ನಾಗಶಯನನ ಮನೆಯ ಬಾಗಿಲು ಹೊಗಲಿಕ್ಕೆನಾಗಸಂಪಿಗೆಯ ಮುಡಿದವರು ಇಂದೀವರಾಕ್ಷಿನಾಗಸಂಪಿಗೆಯ ಮುಡಿದವರು ಬಂದರು ಈಗರಾಮೇಶನ ದರುಶನಕೆ ಇಂದೀವರಾಕ್ಷಿ 7
--------------
ಗಲಗಲಿಅವ್ವನವರು
ಶಾಮ ಸುಂದರ ಪ್ರೇಮವÀ ತೋರೆಲೊ ಪ ತಾಮಸವಿಲ್ಲದೆ ಕಾಮಿತಗಳ ನೀಡೊ ಅ.ಪ ಹಿಂದೆ ಅಜಮಿಳ ಒಂದನರಿಯದೆ ಕಂದನನ್ನು ನಾರಾ ಎಂದು ಕರೆಯಲು ಬಂಧುವೆಂದರಿತು ಮಂದಹಾಸದಿಂದ ಬಂದು ರಕ್ಷಿಸಿದೆ ಎಂದು ಕೇಳಿರುವೆ 1 ಕ್ರೂರ ಶಾಸನ ನಾರಿ ದ್ರೌಪದಿಯ ಸೀರೆ ಸೆಳೆದು ಮಾನ ಸೂರೆಗೊಳುತಿರೆ ಸಾರಿ ಕೂಗಲು ಭೂರಿದಯವನು ತೋರಿರುವೆ ಎಂದು ಕೋರಿರುವೆ ನಿನ್ನ 2 ಮುನ್ನ ಮಾಡಿದ ಎನ್ನ ಪಾಪಗಳಿಗೆ ಖಿನ್ನನಾಗಿರುವೆ ಎನ್ನ ಮನದಲಿ ಮನ್ನಿಸುತ್ತ ಸುಪ್ರಸನ್ನನಾಗಿ ಸದಾ ಎನ್ನ ಹೃದಯ ಶುದ್ಧಿಯನ್ನೆ ಮಾಡಿ ಪೊರೆಯೊ 3
--------------
ವಿದ್ಯಾಪ್ರಸನ್ನತೀರ್ಥರು
ಶುಭ ಯೋಗಿ ಪುಂಗಗೆ | ಮಂಗಳಂ ಪಾಪೌಘ ಭಂಗಗೆ | ಮಂಗಳಂ ಯಾಳಗಿಯ ದೊರೆ ರಾಮಲಿಂಗನಿಗೆ ಪ ಮೋದದಲಿ ದತ್ತಾವಧೂತನು ಪೇಳಿದನು ಶ್ರೀಕಪಿಲ ಮುನಿವರ |ಗಾಧಿಯಂ ಮಣಿಚೂಲ ಶೈಲದ ಗುಹದಿ ತಪಮಾಡಿ ||ಮೇದಿನಿಯ ಜನರಿಂಗೆ ಸಹಜದಿ ವೇದ ವೇದಾರ್ಥವನು ಬೋಧಿಸಿ |ಭೇದ ಬುದ್ಧಿಯ ಬಿಡಿಸಿ ಕೃಪೆಯನು ಮಾಡಿ ಪೊರೆ ಎಂದು 1 ಕಪಿಲಮುನಿ ಲಿಂಗಾಂಬಿಕೆಗೆ ತಾ ಸ್ವಪ್ನದಲಿ ಪೇಳಿದನು ನಿಶ್ಚಯ |ಅಪರಿಮಿತ ವರ ಕೊಡುವ ಬೆಟ್ಟದ ರಾಮಲಿಂಗೇಶ ||ತಪವು ಮಾಡಲು ಕೊಡುವ ನೀ ತಪವು ಮಾಡೆಂದು ಪೇಳಿದ |ಗುಪಿತ ಮೂಲವ ತೋರಿ ಬೋಧಿಸಿ ಸುಖವ ಪಡೆ ಎಂದ 2 ಮೊದಲು ಲಿಂಗಾಂಬಿಕೆಯು ಮನದಲಿ ನೆನೆದು ಬೆಟ್ಟದ ರಾಮಲಿಂಗನ | ಪದುಳದಿಂ ಸೇವಾ ಪ್ರದಕ್ಷಿಣೆ ಭಕ್ತಿಭಾವದಲಿ |ಮುದದಿ ಪ್ರಾರ್ಥಿಸೆಗೈದು ಎನ್ನಗೆ ಸುತನ ಕೊಡಬೇಕೆಂದು ಪ್ರಾರ್ಥಿಸೆ | ಸದಮಲಾತ್ಮರಾಮಲಿಂಗನು ಜನಿಸುತಿಹನೆಂದ 3 ಸತಿ ಲಿಂಗಾಂಬೆ ಗರ್ಭದೊಳುಪಾವನಾತ್ಮಕ ಜನಿಸಿ ಬೆಳೆದುದ್ದಾಮ ಆನಂದಾಭ್ಧಿಯೊಳು ಸ- |ದ್ಭಾವದಿಂ ಮಣಿಚೂಲ ಶೈಲದಿ ತಪವನೆಸಗಿದಗೆ 4 ಕೆಲವು ದಿನ ಮಣಿಚೂಲ ಶೈಲದ ಗುಹೆಯೊಳಗೆ ತಪಗೈಯುತಿರೆ ಶ್ರೀಮಲಹರಿಯು ಪ್ರತ್ಯಕ್ಷರೂಪದಿ ಮಂತ್ರ ಬೋಧಿಸಿದ ||ಚೆಲುವ ರಾಮಪ್ಪಯ್ಯ ಮನದಲಿ ಹರುಷವಂ ಕೈಕೊಂಡು ಸಿದ್ಧಿಯಫಲವ ಪಡೆದನು ಮಂತ್ರ ಮಹಯೋಗಾದಿ ಸಿದ್ಧಿಗಳ 5 ಗೌತಮಾನ್ವಯದಲ್ಲಿ ಜನಿಸಿ ಸುಕೀರ್ತಿ-ಪಡೆದಪ್ಪಯ್ಯ ಗುರುವರ |ಮಾತು ಮಾತಿಗೆ ರಾಮಲಿಂಗನ ನೆನೆ ನೆನೆದು ಮನದಿ ||ಸಾತಿಶಯ ಮಣಿಚೂಲ ಶೈಲವ ಸೇರಿ ಕಂಡಿಹ ರಾಮಲಿಂಗನ |ಮಾತು ತಿಳುಹಿಸಿ ಗ್ರಹಕೆ ಕರಕೊಂಡು ಬಂದಿಹಗೆ 6 ಪರಮ ತಾರಕ ಮಂತ್ರ ಕರ್ಣದೊಳೊರೆದ ಗುರು ಅಪ್ಪಯ್ಯ ಮೂರ್ತಿಯ | ಚರಣವನು ಧ್ಯಾನಿಸುತೆ ಮಹಾ ವಾಕ್ಯಾರ್ಥ ಶೋಧಿಸಿದ | ಪರಿಪರಿಯ ವೇದಾರ್ಥವನು ಬಹು ಹರುಷದಿಂ ಶಿಷ್ಯರಿಗೆ ಬೋಧಿಸಿ | ನಿರುತ ಬ್ರಹ್ಮಾಕಾರ ವೃತ್ತಿಯೊಳಿರುವ ಶರಣಂಗೆ 7 ಪಂಚಲಿಂಗವು ಪಂಚ ತೀರ್ಥಗಳುಳ್ಳ ಯಾಳಗಿ ಕ್ಷೇತ್ರದಲಿ ಪ್ರ- |ಪಂಚವನು ಪರಮಾರ್ಥ ಬುದ್ಧಿಯಲಿಂದ ನೆರೆಗೈದು ||ವಂಚನಿಲ್ಲದ ರಾಮಲಿಂಗ ವಿರಂಚಿ ಭಾವದೊಳಿರ್ದು ಜನರಿಗೆಹಂಚಿಕೆಯ ಪೇಳಿದನು ಇಲ್ಲಿಗೆ ಗಂಗೆ ಬರುತಿಹಳು 8 ಇಂದು ವೇದ ರಸೈಕ ಶಕದ ವಿಕಾರಿವತ್ಸರ ದಕ್ಷಿಣಾಯನ |ಛಂದದಾಶ್ವೀನ ಶುದ್ದ ಸಪ್ತಮಿ ಸೌಮ್ಯ ವಾಸರದಿ ||ಸುಂದರದ ಜ್ಯೇಷ್ಠರ್ಕ ವೃಶ್ಚಿಕ ರಾಶಿ ಶುಭದಿನ ತೃತಿಯ ಪ್ರಹರದಿಹೊಂದಿದನು ಸುಸಮಾಧಿ ಸುಖವನು ರಾಮಗುರುವರನು 9 ಸುರರು ಅಂಬರಕೇರಿ ಪುಷ್ಪದ ಮಳೆಯ ಸುರಿದರು ಹರುಷದಿಂದಲಿಪರಮ ವಿಸ್ಮಯವಾಗೆ ಸುರದುಂದುಭಿಯ ಧ್ವನಿಕೇಳಿ || ಹರುಷ ದಿಂದಲಿ ಶಿರವ ನಲಿಯುತ ದೇವ ಗಣಿಕೆಯರು ನೃತ್ಯ ಮಾಡುತ ತರ ತರದಿ ಜಯ ಘೋಷ ಮಾಡುತ ಜನ ಸಹಿತವಾಗಿ 10|| ಜಯ ಜಯತು ಜಯ ನಿರ್ವಿಕಾರಗೆ ಜಯ ಜಯತು ಜಯ ನಿರ್ವಿಶೇಷಗೆ | ಜಯ ಜಯತು ನಿಃಸೀಮ ಪರಮಾನಂದ ರೂಪನಿಗೆ || ಜಯ ಜಯತು ಭಕ್ತಾಭಿಮಾನಿಗೆ ಜಯ ಜಯತು ಮಹ ಸಿದ್ಧ ವರದಗೆ | ಜಯ ಜಯತು ಸಿಂಧಾಪುರದ ಸಖರಾಮ ಗುರುವರಗೆ 11
--------------
ಗುರುರಾಮಲಿಂಗ
ಶೇಷಾಚಲ ಮಂದಿರ-ಇಂದಿರೇಶ ಪ. ಪಾದ ಸ್ಮರಣೆಯಿತ್ತು ಅ.ಪ ಕರಣಕ್ರಿಯಕರ್ಮಂಗಳೆಲ್ಲವು ಜಡವು ಕರ್ಮ ನಿನ್ನ ನಿಯಮನವಿಹುದು ನಿರುತ ಪರವಶನಾಗಿ ನಾ ಮಾಳ್ಪೆನೆಂಬ ಈ ದುರಭಿಮಾನದಿ ನಾ ಭವಕೊಳಗಾದೆನೊ 1 ವಿಷಯಂಗಳೆಲ್ಲ ಜ್ಞಾನಗೋಳಕದಿ ಬಂದು ಎನ್ನ ವಿಷಮಗೊಳಿಸಿತು ಮನ ಅಭಿಮಾನದಿಂದಲಿ ಹೃಷೀಕಪನೆ ಎನ್ನ ಮನವಿಷಮತೆಯ ಹರಿಸಿ ಪೋಷಿಸೊ ನಿರುತ ಕೃಪಾಕರ ಮೂರುತೇ 2 ದೋಷದೂರನೆ ನಿನ್ನ ವಿಸ್ಮರಣೆಯಿಂದಲಿ ವಾಸುಕೀಶಯನ ನೀ ಭೂತಾವಾಸ ನೀನಾಗಿರೆ ಮೋಸಹೋದೆನ್ನನು ಪೋಷಿಸಬೇಕಯ್ಯ 3 ಕುಟಿಲ ಮನದಲಿ ನಿನ್ನ ಭಕುತನೆಂದೆನಿಸಿದೆ ವಟಪತ್ರಶಾಯಿ ನೀ ಹಟ ಸಾಧನಕ್ಕೆ ಒಲಿಯೆ ದಿಟಭಕುತಿಯ ಕೊಟ್ಟು ಕಡೆ ಹಾಯಿಸಯ್ಯ 4 ತನುಛಾಯೆ ಕ್ರಿಯೆಯು ತನ್ನ ತನುವನಾಶ್ರೈಸಿದಂತೆ ನಾ ನಿನ್ನ ಪ್ರತಿಬಿಂಬನಾಗಿರಲು ಸದಾ ಎನ್ನ ಕ್ರಿಯೆಗಳೆಲ್ಲಾ ನಿನ್ನ ಆಣತಿಯಂತಿರೆ ಘನಮಹಿಮನೆ ನಿನ್ನಾಕ್ರಿಯವನರಿಯದೆ ಹೋದೆ5 ಪನ್ನಗಾಚಲನಿಲಯ ಆಪನ್ನರಕ್ಷಕ ನೀನಿರೆ ಬನ್ನಬಡಲ್ಯಾಕಯ್ಯ ಅನ್ಯರನಾಶ್ರಯಿಸಿ ಮನೋವಾಕ್ಕಾಯ ಕರ್ಮವನರ್ಪಿಸಲು ಸನ್ಮತಿಯನೆ ಇತ್ತು ಸತತ ಸಲಹಯ್ಯ 6 ಸರ್ವಸತ್ತಾಪ್ರದನೆ ಸರ್ವಪ್ರವೃತ್ತಿಪ್ರದನೆ ಸರ್ವರಂತರ್ಯಾಮಿ ಮಮಕುಲಸ್ವಾಮಿ ಉರಗಾದ್ರಿವಾಸವಿಠಲ ನಿನ್ನಯ ದಿವ್ಯ ಚರಣಸ್ಮರಣೆಯನಿತ್ತು ಕಾಯೊ ಕಮಲಾಕಾಂತ7
--------------
ಉರಗಾದ್ರಿವಾಸವಿಠಲದಾಸರು