ಒಟ್ಟು 990 ಕಡೆಗಳಲ್ಲಿ , 92 ದಾಸರು , 822 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿದೆ ವಿಠಲನ ನೋಡಿದೆ ಪ ನೋಡಿದೆನು ಕಂಗಳಲಿ ತನುವೀ ಡಾಡಿದೆನು ಚರಣಾಬ್ಜದಲಿ ಕೊಂ ಡಾಡಿದೆನು ವದನದಲಿ ವರಗಳ ಬೇಡಿದೆನು ಮನದಣಿಯ ವಿಠಲನ ಅ.ಪ. ಇಂದಿರಾವಲ್ಲಭನ ತಾವರೆ ಗಂದನಂಜಿಸಿ ತಪತÀಪಾವೆಂ ತೆಂದು ಪೇಳ್ದನ ಯುವತಿ ವೇಷದಿ ಕಂದು ಗೊರಳನ ಸ್ತುತಿಸಿದನ ಪು ರಂದರಾನುಜನಾಗಿ ದಿವಿಯೊಳು ಕುಂದದರ್ಚನೆಗೊಂಬ ಸನಕ ಸ ನಂದನಾದಿ ಮುನೀಂದ್ರ ಹೃದಯ ಸು ಮಂದಿರನ ಮಮ ಕುಲದ ಸ್ವಾಮಿಯ 1 ಭಾರ ತಾಳದೆ ಭೂತರುಣಿ ಗೋರೂಪಳಾಗಿ ಸ ನಾತನನ ತುತಿಸಲ್ಕೆ ಶೇಷ ಫ ಣಾತ ಪತ್ರನು ನಂದಗೋಪ ನಿ ಕೇತನದಲವತರಿಸಿ ವೃಷ ಬಕ ಪೂತನಾದ್ಯರ ಸದೆದು ಬಹುವಿಧ ಚೇತನರಿಗೆ ಗತಿನೀಡಲೋಸುಗ ಜಾತಿಕರ್ಮಗಳೊಹಿಸಿ ಮೆರೆದನ 2 ತನ್ನತಾಯ್ತಂದೆಗಳ ಹೃದಯವೆ ಪನ್ನಗಾರಿಧ್ವಜಗೆ ಸದನವೆಂ ದುನ್ನತ ಭಕುತಿ ಭರದಿ ಅರ್ಚಿಪ ಧನ್ಯಪುರುಷನ ಕಂಡು ನಾರದ ಬಿನ್ನಯಿಸಿ ತುತಿಸಲ್ಕೆ ಕೇಳಿ ಪ್ರ ಪನ್ನ ವತ್ಸಲ ಬಿರಿದು ಮೆರೆಯಲು ಜೊನ್ನೊಡಲು ಭಾಗದಿ ನೆಲೆಸಿದ ಜ ಗನ್ನಾಥ ವಿಠ್ಠಲನ ಮೂರ್ತಿಯ 3
--------------
ಜಗನ್ನಾಥದಾಸರು
ನೋಡಿದೆನು ಕೃಷ್ಣನ್ನ | ದಣಿಯ ನೋಡಿದೆನು ಕೃಷ್ಣನ್ನ | ಮನದಣಿಯ ಪ. ಪಾಡಿದೆನು ವದನದಲಿ ಗುಣಗಳ ಮಾಡುತಲಿ ಸಾಷ್ಟಾಂಗ ಕಡು ಕೃಪೆ ಬೇಡಿದೆನು ಹರಿಯ ಅ.ಪ. ಅರುಣ ಉದಯದ ಮುನ್ನ ಯತಿಗಳೂ ಶರಣವತ್ಸಲನನ್ನು ಪೂಜಿಸಿ ಕರದಿ ಕಡಗೋಲನ್ನು ಪಿಡಿದಿಹ ಬಾಲರೂಪನಿಗೆ ತರತರದ ನೇವೇದ್ಯವರ್ಪಿಸಿ ತುರುಕರುಗಳಾರತಿ ಗೈಯ್ಯುತ ಪರಮಪುರುಷಗೆ ವಂದಿಸಲು ಈ ಚರಿತ ಮತ್ಸ್ಯನ್ನಾ 1 ಮಧ್ವರಾಯರ ಹೃದಯವಾಸಗೆ ಮುದ್ದು ಯತಿ ಪಂಚಾಮೃತಂಗಳ ಶುದ್ಧ ಗಂಗೋದಕದ ಸ್ನಾನವಗೈಸಿ ಸಡಗರದಿ ಮಧ್ಯೆ ಮಧ್ಯೆ ನೈವೇದ್ಯವರ್ಪಿಸಿ ಮುದ್ದು ತರಳರಿಗ್ಹೆಜ್ಜೆ ಪಂಕ್ತಿಯು ಅಗಣಿತ ಕೂರ್ಮರೂಪನ್ನಾ2 ಉದಯಕಾಲದಿ ಸರ್ವ ಜನಗಳು ಮುದದಿ ಮಧ್ವ ಸರೋವರದೊಳು ವಿಧಿಯಪೂರ್ವಕ ಸ್ನಾನ ಜಪ ತಪವಗೈದು ಮಾಧವನಾ ಉದಯದಾಲಂಕಾರ ದರ್ಶನ ಪದುಮನಾಭಗೆ ನಮನಗೈವರು ವಿಧಿಕುಲಕೆ ಉದ್ಧಾರಕರ್ತನು ವರಹನೆಂದಿವನಾ 3 ಪಾಲಿಸಲು ಬಾಲನ ಶ್ರೀ ಗೋ ಪಾಲಕೃಷ್ಣನು ಕಂಭದಲಿ ಲೀಲೆಯಿಂದಲಿ ಉದಿಸಿ ಖೂಳನ ಸೀಳೀ ತೊಡೆಯಲ್ಲಿ ಬಾಲೆಯನು ಕುಳ್ಳಿರಿಸಿಕೊಂಡಘ ಜಾಲಗಳ ಸುಡುವಂಥ ದೇವನು ಬಾಲರೂಪವ ಧರಿಸಿ ನಿಂತಿಹ ಲೋಲ ನರಹರಿಯ 4 ಅದಿತಿ ದ್ವಾದಶವರ್ಷ ತಪಸಿಗೆ ವಿಧಿ ಜನಕ ತಾ ಕುವರನಾದನು ಅದರ ತೆರದಲಿ ವ್ರತವ ಗೈದ ವೇದವತಿಗಿನ್ನು ಚದುರ ತನಯನ ವರವನಿತ್ತನು ಯದುಕುಲಾಗ್ರಣಿ ಅವರ ಭಕ್ತಿಗೆ ಒದಗಿ ಬಂದ ಮೂರ್ತಿವಾಮನನೆಂಬ ವಟುವರನ5 ದುಷ್ಟ ಕ್ಷತ್ರಿಯರನ್ನೆ ಕೊಲ್ಲುತ ಅಷ್ಟು ಭೂಮಿಯ ದಾನಗೈಯುತ ದಿಟ್ಟ ತಾನೆಲ್ಲಿರಲಿ ಎಂಬುವ ಯೋಚನೆಯ ತಳೆದು ಅಟ್ಟಿ ಅಬ್ಧಿಯ ಪುರವ ನಿರ್ಮಿಸಿ ಪುಟ್ಟ ರೂಪವ ತಾಳಿ ಬರುತಲಿ ಮೆಟ್ಟಿ ನಿಂತಿಹ ರಜತ ಪೀಠದಿ ಶ್ರೇಷ್ಠ ಭಾರ್ಗವನ 6 ಪಿತನ ಆಜ್ಞೆಯ ಪೊತ್ತು ಶಿರದಲಿ ಸತಿ ಅನುಜ ಸಹಿತದಿ ಜತನದಲಿ ವನವಾಸ ಮುಗಿಸುತ ದಶಶಿರನ ಕೊಂದ ಅತಿ ಸಹಾಯವ ಗೈದ ಶರಧಿಗೆ ಪ್ರತಿಯುಪಕಾರವನು ಕಾಣದೆ ಜತನದಲಿ ತಾ ನಿಲ್ಲೆ ನೆಲಸಿದ ಜಾನಕೀಪತಿಯ7 ಗೋಪಿಯರ ಉಪಟಳಕೆ ಸಹಿಸದೆ ಗೋಪನಂದನರೊಡನೆ ಕಾದುತ ತಾಪಪಡಿಸುವ ಕಂಸರನುಚರರಿಂದ ಕಳದೋಡಿ ಗೋಪಿ ಮೊಲೆ ಕೊಡುತರ್ದದಲಿ ಬಿಡೆ ಈ ಪರಿಯ ತಾಪಗಳ ಸಹಿಸದೆ ತಾಪಸರ ಪೂಜೆಗಳ ಬಯಸುತ ಬಂದ ಗೋಪತಿಯ 8 ವೇದ ಬಾಹಿರರಾದ ದುರುಳರು ವೇದ ಮಾರ್ಗವ ಪಿಡಿಯೆ ಸುರತತಿ ನೀ ದಯದಿ ಸಲಹೆಂದು ಪ್ರಾರ್ಥಿಸೆ ಜಿನ ವಿಮೋಹಕನೂ ವೇದರ್ಥವ ಗುಪ್ತದಲಿ ತಾ ಬೋಧಿಸುತ ಮೋಹಕವ ಕಲ್ಪಸಿ ಬುದ್ಧ ಪ್ರಮೋದನೆಂಬುವನಾ 9 ಚತುರ ಪಾದವು ಕಳದು ಧರ್ಮವು ಅತಿಮಲಿನವಾಗುತಲಿ ಕಲಿಜನ ಚತುರ ಜಾತಿಯ ಕಲೆತು ಕಂಗೆಡೆ ಭಕ್ತವರ್ಗಗಳು ಗತಿಯು ನೀನೆ ಪೊರೆಯೊ ಎಂದೆನೆ ಸತಿಯ ಹೆಗಲೇರುತಲಿ ಖಡ್ಗದಿ ಹತವಗೈಯ್ಯುತ ಖಳರ ಸುಜನರ ಪೊರೆದ ಕಲ್ಕಿಯನು10 ನೋಡಿದೆನು ವರ ಮಚ್ಛ ಕೂರ್ಮನ ನೋಡಿದೆನು ಧರಣೀಶ ನೃಹರಿಯ ನೋಡಿದೆನು ವಾಮನನ ಭಾರ್ಗವ ರಾಮಚಂದ್ರನನೂ ನೋಡಿದೆನು ಕಡಗೋಲ ಕೃಷ್ಣನ ಬುದ್ಧ ಕಲ್ಕಿಯ ನೋಡಿದೆನು ಗುರು ವರದ ಗೋಪಾಲಕೃಷ್ಣವಿಠ್ಠಲನ 11
--------------
ಅಂಬಾಬಾಯಿ
ನೋಡು ನೋಡು ಗರುಡಗಮನನೆ ಮಾಡು ದಯವನು ವೇಗದಿ ಪ ಪಾಡುವೆ ಆನಂದದಲಿ ನಿನ್ನನು ಕೊಂಡಾಡುವೆನು ನಿನ್ನ ಮೂರ್ತಿಯಾ ಅಪ ಮಂಗಳಾಂಗನೆ ಮನ್ಮಥನ ಪಿತ ಸಂಗೀತ ಸುರಲೋಲನೆ ಕಂಗಳಬ್ಬರ ತೀರುವಂತೆ ಚರಣಂಗಳನೆ ತೋರೋ ವಿನಯದಿ1 ಪರಮ ಪುರುಷನೆ ಪುಣ್ಯ ಶ್ಲೋಕನೆ ದುರುಳ ದೈತ್ಯರ ದಲ್ಲಣ ಮರಿಯಲೀಸದೆ ನಿನ್ನ ಚರಣ ಸ್ಮರಣೆ ಒದಗಿಸೊ ವದನಕೆ 2 ವಂದನೆಯು ಗೋವಿಂದ ಗೋಪಾಲಾ ಮಂದರಧರ ಮಾಧವಾ ಇಂದು ವಿಜಯವಿಠ್ಠಲ ನಿನ್ನ ಸಂದರ್ಶನವ ಕೋರುತಾ 3
--------------
ವಿಜಯದಾಸ
ನೋಡು ನೋಡು ನಾರೀಮಣಿಯೆ ಪ ನೋಡು ನೋಡು ನಿನ್ನಾ ಕಣ್ಮನ ದಣಿಯಾ ಅ.ಪ. ಮುದ್ದು ಸೂಸುವ ಸಲೆ ಮುಗುಳ್ನಗೆ ಮೊಗವಾ ತಿದ್ದಿದ ಕಸ್ತೂರಿ ತಿಲಕದ ಫಣಿಯಾ 1 ಸಾರ ಗಂಭೀರ ಶೃಂಗಾರ ವಿಹಾರಾ ಚಾರು ಸೌಂದರ್ಯವೈಯ್ಯಾರ ಸುಗುಣಿಯಾ 2 ಶ್ರೀದವಿಠ್ಠಲ ಸಾಕ್ಷಾತ್ತ್ರಿಜಗನ್ಮಯಾ ಇಂದ್ರಶರಾ ಜಗನ್ಮೋಹನ ಖಣಿಯಾ 3
--------------
ಶ್ರೀದವಿಠಲರು
ನೋಡೆ ಗೋಪ್ಯಮ್ಮ ಕೃಷ್ಣಂಚಾಳಿಯ ನೀ ಮಾಡಿಬಿಟ್ಟಿಯೆ ಇಂಥ ಗೂಳಿಯ ಇಂಥ ಧಾಳಿಯ ಪ ಹಾಲು ಮೊಸರ ಕೆನೆ ಬೇಡುವ ಕಡ- ಗೋಲಿಂದ್ಹೊಡೆದು ನಮ್ಮನ್ನೋಡುವ ಬಂದು ಕಾಡುವ1 ತುಪ್ಪದ ಕೊಡ ಧಪ್ಪನೊಡೆದಾನೆ ಕಂ- ದರ್ಪನಪ್ಪನು ಈತೇನ್ಹುಡುಗನೆ ಇಂಥ ತುಡುಗನೆ 2 ಕರೆದು ಕೈಯಲಿ ಬೆಣ್ಣೆಯ ಮುದ್ದೆ ನೀ ಕೊಟ್ಟೆ ್ಹೀಳೆ ಭೀಮೇಶ ಕೃಷ್ಣಗೆ ಬುದ್ಧಿ 3
--------------
ಹರಪನಹಳ್ಳಿಭೀಮವ್ವ
ನೋಡೆಲೆ ಸುಮತಿ ಪೆಣ್ಮಣಿಗೊಲಿದ ಗಾಡಿಗಾರ ಚೋರ ರೂಢಿಗೆ ರಂಗ ಪ. ಈಡುಂಟೇ ಶತ ಜೋಡಿಶೆ ಶಿಶುಗಳ ಬೇಡ ಪಂಥ ನಿನ್ನ ಬೇಡಿಕೊಂಬೆನೆ ಕುಮತಿಅ.ಪ. ಅಪ್ರಾಮೇಯನ ಗುಡಿಯೊಳಗಿದನೆ ಸುಪ್ರಕಾಶ ಎನ್ನಪ್ಪಾ ಮುಂಗುರುಳುಗಳೊ ಳೊಪ್ಪುತಲಿಹನೆ ಬೆಡಗಿಂದೊಡನೆ ಅಪ್ಪನ ಬ್ರಹ್ಮಗಂಟುಡಿದಾರ ಉಡುಗೆಜ್ಜೆ ಬೊಮ್ಮ ನಪ್ಪ ಅಂಬೆಗಾಲಿಕ್ಕಿ ನೆಲಸಿಹನೆ ಕಂ ದರ್ಪ ಕೋಟಿ ತೇಜದಿ ಮೆರೆವನ 1 ಅರವಿಂದದಳ ವೆಂಕಟನಿರುವಲ್ಲೆ ತಿರುಮಲ ನಾರಾಯಣ ಚರಿತಾಪ್ರಮೇಯ ಚೆÉನ್ನಪಟ್ಟಣ ತೀರ ಮುಳೂರಲ್ಲೆ ಸರಸ ಸಂಚರಿಸುವ ವರ ಚೈತ್ರದ ರಥ ಅರಿವಿಲ್ಲವೆ ಕಣ್ತೆರೆದು ನೋಳ್ಪರಿಗೆ ದುರಿತ ದೂರ ಕಣಿ ವರಪ್ರದ ದೇವ ಅರಿದವರಿಗೆ ಕಣ್ ತೆರೆವನು ದೇವ ನೋಡೆ 2 ಅಪ್ಪ ಕೃಷ್ಣಗೆ ಬೆಣ್ಣೆ ಹಣ್ಣನುಗೊಡಲು ಇಪ್ಪನೆ ತನಯರನು ಸುತ್ತೇಳು ಲೋಕದಿ ನೋಡಲು ಇಲ್ಲೆಲ್ಲೆಲ್ಲೂ ಶಿಶು ಇಹನಲ್ಲೇ ಅಪ್ಪ ಶ್ರೀ ಶ್ರೀನಿವಾಸ ಒಪ್ಪನೋ ತಪ್ಪನೆಲ್ಲವಪ್ಪಿಪ್ಪನೊ ಕರುಣವ ಸರ್ಪಶಯನ ತಿಮ್ಮಪ್ಪನ ಕರುಣ ಒಪ್ಪ ತೆರದಿ ಸ್ತುತಿ ಮಾಡುವ ಬಾರೆ 3
--------------
ಸರಸ್ವತಿ ಬಾಯಿ
ಪಂಚೀಕರಣಮಾಡಿ ತಾ ಸಂಚರಿಸುವ ಪ ಪಂಚೀಕರಣತಿಳಿಯದೆ ಪ್ರಪಂಚದೊಳು ಮುಳುಗಿ ನಾ ವಂಚಿತನಾದೆ ವಿರಿಂಚಿಭಕ್ತಿಗೆ ಅ.ಪ ಸಚ್ಚಿದಾನಂದ ರೂಪ ವ್ಯಾಪ್ತರೂಪಿ ನಾರಾಯಣ ಅಪ- ಅಚ್ಯುತ ತನ್ನಿಚ್ಛೆಯಿಂದ ವೈಕೃತಾಕಾಶಕ್ಕೆ ಅಂಭ್ರಣಿದೇವಿಯರನೆ ಮುಖ್ಯ ಮಾಡಿದಾ 1 ಗುಣರಾಶಿಯೊಳು ಸತ್ವಕ್ಕೆ ಶ್ರೀದೇವಿಯರು ಮುಖ್ಯ ರಜಕೆ ಭೂದೇವಿ ತಮಕೆ ದುರ್ಗಾದೇವೇರು ಸತ್ಯಜ್ಞಾನಾನಂದದಯೆ ಮೌನಪಂಚೇಂದ್ರಿಯ ಜಯ ಅಕ್ರೌರ್ಯಗುರು ಸೇವೆಯೇ ಸತ್ವಕಾರ್ಯವು2 ತಮಕ್ರೋಧ ಅಹಂಕಾರ ಮದೋನ್ಮಾದ ಚಪಲೋದ್ಯೋಗ ಡಂಭ ಸ್ವಚ್ಛಂದರಜದ ಕಾರ್ಯವು ತಮದ ಕಾರ್ಯ ಅಜ್ಞಾನ ಮೋಹ ನಿದ್ರಾಲಸ್ಯ ಬುದ್ಧಿಶೂನ್ಯ ತಾಪವಾದಿ ಹಿಂಸಾಕಾರ್ಯವು 3 ಸತ್ವಪ್ರಾಚುರ್ಯದಿ ಮದ ಗುಣತ್ರಯವೈಷಮ್ಯಹೊಂದಿ ಶ್ರೇಷ್ಠಕಾರ್ಯಕೆ ಮಹತ್ತತ್ವವಾಯಿತು ಸಾತ್ವತಾಂಪತಿಯ ಇಚ್ಛೆಯಿಂದ ಮಹತ್ತತ್ವದಿ ಅಹಂಕಾರ ತತ್ವವೆಂಬುದೇರ್ಪಟ್ಟಿತು 4 ತೈಜಸ ತಾಮಸ ಅಹಂಕಾರ ವೆನುತಲಿ ಮೂರಹಂ- ಕಾರದಿ ಮೂರು ರುದ್ರರೂಪಗಳು ಬ್ರಹ್ಮವಾಯು ಶೇಷರಿಂದುದಯಿಸಿದರು5 ವೈಕಾರಿಕ ಅಹಂಕಾರದಿ ದೇವತಾ ದೇಹ ಮನಸು ತೈಜಸದಿಂದ ದಶೇಂದ್ರಿಯ ಹುಟ್ಟಿತು ತಾಮಸಾಹಂಕಾರದಿಂದುತ್ಪನ್ನವಾದುವು6 ಸರ್ವ ಮಿಳಿತಮಾಡಿ ಬ್ರಹ್ಮಾಂಡವನೆ ಸೇರಿ ಹರಿಯು ಪದ್ಮನಾಭರೂಪದಿಂದ ಶಯನಗೈದನು ಸರ್ವಲೋಕೋದ್ಧಾರ ಹರಿಯು ನಾಭಿಯೊಳು ಪದ್ಮ ತೋರಿ ಪದುಮದಲ್ಲಿ ಪದ್ಮಸಂಭವನಾಸೃಜಿಸಿದ 7 ಸರ್ವರಂತರ್ಯಾಮಿ ಸಕಲಜೀವರನ್ನು ಸೃಷ್ಟಿಗೈಸಿ ಜೀವಯೋಗ್ಯತಾ ಕಾರ್ಯ ನಡೆಸುತಿರುವನು ಸರ್ವಜೀವಕಾರ್ಯವು ಪಂಚವಿಂಶತಿತತ್ವ ಈ- ಶರಿಂದಲೆ ಕಾರ್ಯನಡೆಯತಿರುವುದು8 ಶಬ್ದತನ್ಮಾತ್ರದಿಂದ ಆಕಾಶ ಹುಟ್ಟಿತು ವಾಯುಹುಟ್ಟಿತು ಸ್ಪರ್ಶತನ್ಮಾತ್ರದಿ ರೂಪತನ್ಮಾತ್ರದಿ ಅಗ್ನಿಭೂತ ಹುಟ್ಟಿತು ಆಗ ರಸತನ್ಮಾತ್ರದಿ ಅಷ್ಟು ಹುಟ್ಟಿತು 9 ಈ ಪರಿವಿರಾಟದಿಂದುಯಿಸಿದವು ಆಕಾಶ ಕೊಂದೆ ಶಬ್ದಗುಣವು ಮಾತ್ರ ಇರುವುದು ಅಹುದು ವಾಯವಿಗೆ ಶಬ್ದ ಸ್ಪರ್ಶವೆರಡುಗುಣಗಳು10 ತೋರುತಿರ್ಪುದಗ್ನಿ ಶಬ್ದಸ್ಪರ್ಶರೂಪ ಗುಣಗಳು ಗುಣ ಶಬ್ದ ಸ್ಪರ್ಶ ರೂಪ ರಸ ಗಂಧವೈದು ಪರಿ ಭೂತಪಂಚಕಗಳ ಅರಿವುದು 11 ಪಂಚಭೂತಗಳು ತಮ್ಮ ಸ್ವಾಂಶಗಳ ಭಾಗಗೈಸಿ ಪ್ರ- ಪಂಚ ಕಾರ್ಯಕಿತ್ತ ಪರಿಯದೆಂತೆನೆ ಆಕಾಶ ದರ್ಧಭಾಗ ಭೂತ ಪ್ರೇತ ಪಿಶಾಚಿಗಳಿಗೂ ಉಳಿ ಪಾದ ಪಾದವೆನ್ನೆ ಜೀವಕೋಟಿಗೂ12 ವಾಯು ತನ್ನರ್ಧಭಾಗ ಪಕ್ಷಿ ಪನ್ನಗಾದಿಳಿಗೂ ಪಾದ ಭಾಗ ಜೀವಕೋಟಿಗೂ ಅಗ್ನಿತನ್ನರ್ಧಭಾಗ ದೇವ ಋಷಿಗಳಿಗೂ ಮಿಕ್ಕಧರ್Àದೊಳ್ ಪಾದಭಾಗ ಜೀವಕೋಟಿಗೂ13 ಅಪ್ಪುತನ್ನರ್ಧಂಶ ಜಲಚರಪ್ರಾಣಿಗಳಿಗು ಮಿಕ್ಕರ್ಧದೊಳು ಪಾದಭಾಗ ಜೀವಕೋಟಿಗೂ ಪೃಥ್ವಿ ತನ್ನರ್ಧಂಶ ಜಡಜೀವಕೋಟಿಗೂ ಮಿಕ್ಕ ರ್ಧದೊಳ್ ಪಾದಭಾಗ ಜೀವಕೋಟಿಗೂ14 ಪೃಥ್ವಿ ಅಪ್ಪು ತೇಜೋ ವಾಯು ಆಕಾಶಗಳು ಸೂಕ್ಷ್ಮರೂಪದಿಂದೆರಡೆರಡಾದವು ಆಕಾಶತನ್ನರ್ಧಾಂಶದಲ್ಲಿ ವಾಯ್ವಗ್ನಿ ಅಪ್ಪು ಪೃಥ್ವಿಗಳಿ ಗೆ ಕೊಟ್ಟು ಸ್ವಾಂಶ ಅಂತಃಕರಣವೆನಿಸಿತು 15 ವಾಯು ಸ್ವಾಂಶದಿಂದುದಾನವೆಂದೆನಿಸಿ ಮಿಕ್ಕ ಪೃಥ್ವೈ ಪ್ತೇಜಾಕಾಶಗಳಿಗೆ ತನ್ನ ಚಲನ ಕೊಟ್ಟಿತು ಅಗ್ನಿ ತನ್ನಸ್ವಾಂಶದಿಂದ ಚಕ್ಷುಸೇಂದ್ರಿಯ ವೆನಿಸಿ ವಾಯ್ವಾಕಾಶಅಪ್ಪು ಪೃಥ್ವಿಗುಷ್ಣ ಕೊಟ್ಟಿತು 16 ಅಪ್ಪು ತನ್ನ ಸ್ವಾಂಶದಿಂ ರಸವೆಂದೆನಿಸಿ ಮಿಕ್ಕ ವಾಯ್ವಾಕಾಶಾಗ್ನಿ ಪೃಥ್ವಿಗೆ ದ್ರವವ ಕೊಟ್ಟಿತು ಪೃಥ್ವಿತನ್ನ ಸ್ವಾಂಶದಿಂ ಗಂಧವೆಂದೆನಿಸಿ ಮಿಕ್ಕ ಅಪ್ತೇಜವಾಯ್ವಾಕಾಶಕೆ ಕಠಿಣ ಕೊಟ್ಟಿತು 17 ಭೂತಪಂಚಕಗಳಿಗೆ ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ ರೂಪವು ಅಧಿಷ್ಠಾನರಾಗಿ ಅವರಂತರ್ಯಾಮಿಯಾಗಿ ಅನಿರುದ್ಧಾದಿ ಐದು ಭಗವನ್ಮೂರ್ತಿ ಇರುವುದು 18 ನಾಮರೂಪ ವರ್ಣಗುಣ ಸ್ವಭಾವ ತೇಜ ಸುಮುಖ ದೇವರಶಕ್ತಿ ಅಕ್ಷರ ಕ್ರಿಯಾ ಎಂಬೀ ಹತ್ತು ಗುಣಗಳು ಭೂತ ಒಂದಕ್ಕೆ ತಿಳಿದು ಉಪಾಸನ ಮಾಳ್ಪಾದೂ ಬುಧರು ಎಲ್ಲರು 19 ನಾಮವೇ ಆಕಾಶ ರೂಪ ಒಟ್ಟು ಭಾವ ಬಯಲು ವರ್ಣ ಕಪ್ಪು ಗುಣಶಬ್ದ ಕ್ರಿಯ ಅನುಗ್ರಹ ಮುಖವೇ ಈಶಾನ ದೇವತೆ ಪರಶಿವಶಕ್ತಿ ಪರಾಶಕ್ತಿ ಅಕ್ಷರವೇ ನಾದವು20 ನಾಮ ವಾಯುರೂಪ ಷಟ್ಕೋಣ ವರ್ಣನೀಲ ಮುಖ ತತ್ಪುರುಷ ದೇವತೆ ಸದಾಶಿವ ಶಕ್ತಿ ಅಕ್ಷರ ಬಿಂದುವೆನಿಪುದು 21 ನಾಮ ಅಗ್ನಿರೂಪ ಮುಕ್ಕೋಣವರ್ಣ ರಕ್ತವರ್ಣ ಮುಖ ಅಘೋರ ದೇವತೆ ರುದ್ರಶಕ್ತಿ ಪಾರ್ವತಿ ಅಕ್ಷರ ಮಕಾರ 22 ನಾಮ ಅಪ್ಪುರೂಪ ಅಧರ್Éೀಂದು ಶ್ವೇತವರ್ಣ ಸ್ವಭಾವದ್ರವ ಗುಣ ಮಾಧುರ್ಯ ವಿಷ್ಣುಶಕ್ತಿ ಅಕ್ಷರಉಕಾರ ಎಂದು ಪೇಳ್ವರು 23 ನಾಮವೇ ಪೃಥ್ವಿರೂಪ ಚತುಷ್ಕೋಣ ವರ್ಣ ಹೇಮ ಸ್ವಭಾವವೇಕಠಿಣ ಕ್ರಿಯ ಸೃಷ್ಟಿ ಗುಣವೆ ಗಂಧವು ಮುಖಸದ್ಯೋಜಾತ ದೇವತೆ ಬ್ರಹ್ಮಶಕ್ತಿ ಸರಸ್ವತಿ ಅಕ್ಷರ ಅಕಾರವು 24 ಉಕ್ತರೀತಿ ಹತ್ತು ಗುಣಗಳೊಳ್ ಭೂತ ಒಂದ- ಕ್ಕೆತಿಳಿದು ಈ ಜ್ಞಾನೇಂದ್ರಿಯಗಳೆಂತಾದವು ಎಂದರಿವುದು ಆಕಾಶಸಮಾನಾಂಶ ಅಗ್ನಿಯು ಮುಖ್ಯಾಂಶದಿರೆ ಶ್ರೋತ್ರೇಂದ್ರಿಯ ಹುಟ್ಟಿ ತೋರುತಿರುವುದು25 ವಾಯುಸಮಾನಾಂಶ ಬಂದು ಅಗ್ನಿ ಮುಖ್ಯಾಂಶದಿರೆ ತ್ವಗೇಂದ್ರಿಯವು ತಾನೆ ತೋರುತಿರುವುದು ಜಿಹ್ವೇಂದ್ರಿಯವು ತೋರುತಿರುವುದು26 ಘ್ರಾಣೇಂದ್ರಿಯವು ತಾನೆ ತೋರುತಿರುವುದು ಅಗ್ನಿ ಸ್ವಾಂಶದಿಂದ ಚಕ್ಷುಷೇಂದ್ರಿಯವೆಂದು ಹಿಂದೆಯೇ ಈ ವಿವರ ಪೇಳಿರುವುದು27 ಪೃಥ್ವಿಸಮಾನಾಂಶದೊಡನೆ ಆಕಾಶ ಸಮಾಂಶಸೇರೆ ವಾಗೇಂದ್ರಿಯವೆ ತಾನೆ ತೋರುತಿರುವುದು ಪೃಥ್ವಿ ಮುಖ್ಯಾಂಶದೊಡನೆ ವಾಯು ಸಮಾಂಶಸೇರೆ ಘ್ರಾಣೇಂದ್ರಿಯವು ತಾನೆ ತೋರುವುದು 28 ಪೃಥ್ವಿಮುಖ್ಯಾಂಶದೊಡನೆ ಅಗ್ನಿ ಸಮಾಂಶಸೇರೆ ಪಾದೇಂದ್ರಿಯವು ತಾನೆತೋರುತಿರ್ಪದು ಪೃಥ್ವಿ ಮುಖ್ಯಾಂಶರೊಡನೆ ಅಪ್ಪು ಸಮಾವಾಂಶ ಸೇರೆ ಪಾಯೇಂದ್ರಿಯವೆಂದು ತೋರುತಿರ್ಪುದು29 ಪೃಥ್ವಿಸ್ವಾಂಶವೇ ಗುಹ್ಯೇಂದ್ರಿಯವೆಂದು ಪೂ ರ್ವೋಕ್ತ ರೀತಿಗಣನೆ ತರುವುದು ಈ ರೀತಿ ಕರ್ಮೇಂದ್ರಿಯಗಳೆಲ್ಲ ಪೃಥ್ವಿ ತತ್ವದಿಂದಲೇ- ರ್ಪಟ್ಟು ಬೆಳಗುತಿರುವುದು30 ಆಕಾಶ ಸಮಾನಾಂಶ ಅಪ್ಪು ಮುಖ್ಯಾಂಶದಿರೆ ಶಬ್ದ ವಾಯು ಸ್ವಯಾಂಶದಿ ಅಪ್ಪು ಮುಖ್ಯಾಂಶದಿ ಸ್ಪರ್ಶತೋರ್ಪುದು ಅಗ್ನಿ ಸಮಾನಾಂಶ ಅಪ್ಪು ಮು ಅಪ್ಪು ಮುಖ್ಯಾಂಶದಿಂದಲೆ31 ಅಪ್ಪುಸ್ವಯಾಂಶವೇ ರಸವು ಎಂದೆನಿಸಿತು ತನ್ಮಾತ್ರಪಂಚಕಕ್ಕೆ ಮೂಲ ಅಪ್ಪುತತ್ವವು ಪ್ರಾಣಾದಿಪಂಚಗಳ ಮುಂದೆ ವಿವರಿಸಿಹುದು ವಾಯುತತ್ವವೇ ಅದಕೆ ಮುಖ್ಯಕಾರಣ32 ವಾಯು ಮುಖ್ಯಾಂಶದೊಳು ಆಕಾಶ ಸಮಾನಾಂಶ ಸೇರೆ ಸಮಾನ ವಾಯುವೆಂತೆಂದೇರ್ಪಟ್ಟಿತು ವ್ಯಾನ ವಾಯು ಎಂತೆಂದೇರ್ಪಟ್ಟಿತು 33 ವಾಯು ಮುಖ್ಯಾಂಶದೊಳು ಅಪ್ಪು ಸಮಾನಾಂಶ ಸೇರೆ ಅಪಾನವಾಯುವೆಂತೆಂದೇರ್ಪಟ್ಟಿತು ವಾಯು ಮುಖ್ಯಾಂಶದೊಡನೆ ಪೃಥ್ವಿಸಮಾನಾಂಶ ಸೇರಲು ಪ್ರಾಣ ವಾಯು ಉತ್ಪನ್ನವಾಯಿತು34 ವಾಯುವಿನ ಸ್ವಯಾಂಶವೇ ಉದಾನವಾಯುವೆನಿಸಿತು ಮುಂದೆ ವಿವರಿಸುವುದು ಜ್ಞಾನ ಪಂಚಕ ಈ ಜ್ಞಾನ ಪಂಚಕಕ್ಕೆ ಆಕಾಶ ತತ್ವವೇ ಮುಖ್ಯಕಾರಣವೆಂದು ಬುಧರು ಪೇಳ್ವರು35 ಆಕಾಶ ಮುಖ್ಯಾಂಶದಿ ವಾಯು ಸಮಾನಾಂಶ ಸೇರಿ ದಾಗಲೆ ಮನಸು ಎಂಬುವುದು ಹುಟ್ಟಿತು ಆಕಾಶ ಮುಖ್ಯಾಂಶದಿ ಅಗ್ನಿ ಸಮಾನಾಂಶ ಸೇರಿ ದಾಗಲೆ ಬುದ್ಧಿ ಎಂಬುದು ಗೋಚರವಾಯಿತು 36 ಸೇರೆ ಚಿತ್ತವೆಂಬುದು ವ್ಯಕ್ತವಾಯಿತು ಆಕಾಶ ಮುಖ್ಯಾಂಶದೊಳು ಪೃಥ್ವಿಸಮಾನಾಂಶ ಸೇರಿ ಅಹಂಕಾರವೆಂಬುದೇರ್ಪಟ್ಟಿತು 37 ಆಕಾಶ ಸ್ವಾಂಶವೇ ಕತೃತ್ವವೆಂದೆನಿಸಿತು ಈಪರಿಯ ತಿಳಿವುದು ಜ್ಞಾನಪಂಚಕ ಜ್ಞಾನೇಂದ್ರಿಯ ಕರ್ಮೇಂದ್ರಿಯ ಪಂಚತನ್ಮಾ ತ್ರಗಳಿಗೆ ಆಧ್ಯಾತ್ಮಿಕಾದಿಭೌತಿಕದೇವತೆಗಳ ತಿಳಿವುದು 38
--------------
ಉರಗಾದ್ರಿವಾಸವಿಠಲದಾಸರು
ಪಡಿ ಪಡಿ ಜೀವನ್ಮುಕ್ತಿ ಪ ಗುರುವರನು ತಾ ಪರಶಿವನೆಂದು | ಅರಿದು ಪೂಜಿಸು ಮನದೊಳಗಿಂದು 1 ವ್ರತನೇಮಗಳೊಳು ಫಲವಿಲ್ಲಾ | ಸದ್ಗತಿ ನಿನಗದರೊಳಗಾಗುವದಿಲ್ಲ 2 ಭವತಾರಕನ ಭಜಕರ ನೋಡು | ಕಂಡರೆ ಕರೆದರ್ಚನೆಯನು ಮಾಡು 3
--------------
ಭಾವತರಕರು
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪತಿ ಎನಿಪ | ರುದ್ರದೇವನೆ ನಮೋಕಾದ್ರವೇಯನ ಪದ | ಭದ್ರವೋ ನಿನಗೆ ಪ ನಿಟಿಲಾಕ್ಷ | ಶ್ಮಶಾನದಲಿ ದೀಕ್ಷಅಕ್ಷಾರಿ ಪದದೀಕ್ಷ | ಪಕ್ಷಿವಹ ಕೃಪೆ ಈಕ್ಷಾ 1 ವೃಷನಾಭ ವಶದರ್ಪ | ವೃಷ ಋಷಭ ವೃಷಾಂಕವೃಷಶೃಂಗ ವೃಷದ್ವಜನೆ | ವೃಷಭೇಕ್ಷಣಾ |ವೃಷ ಭೂತ ವೃಷ ಶರನೆ | ವೃಷಪತಿ ವೃಷಾ ವರ್ತವೃಷಾಯುಧ ವೃಷೇಶ್ವರನೆ | ವೃಷಭೋದರಪಾಹಿ2 ದೂರ್ವಾಸ ಭೂವನೇಶ | ಸುರಪೇಶ ಉಗ್ರೇಶಗೌರೀಶ ಪ್ರಮಥೇಶ | ಅವ್ಯಕ್ತ ಕೇಶಾ |ಚೀರ ವಾಸ ಸುವಾಸ ಸ್ವರ್ಣಕೇಶ ಭೂತೇಶಈರಪತಿ ಗುರು ಗೋವಿಂದ | ವಿಠಲ ಭಜಕೇಶ 3
--------------
ಗುರುಗೋವಿಂದವಿಠಲರು
ಪತಿ ವಿಠಲ | ಉದ್ದರಿಸೊ ಇವಳ ಪ ಮೋದದಾಯಕನಾಗಿ | ಶ್ರೀದ ಶ್ರೀಹರಿಯೇ ಅ.ಪ. ದಾಸರಾಯರ ಕರುಣ | ವಾಶ್ರಯಿಸಿ ದಿನದಿನದಿಲೇಸು ಕೊಂಡಾಡುತಲಿ | ಮೇಶ ದಾಸರನೂಭಾಸುರ ಸುಗಾನ ಉ | ಲ್ಲಾಸದಲಿ ಮೈಮರೆದುಕೇಶವನ ಗುಣವನಧಿ | ಈಸುವಂತೆಸಗೋ 1 ವ್ಯಾಜ ಕರುಣೀಮಾಜದಲೆ ವೆಂಕಟನ | ನೈಜ ರೂಪವ ಕಂಡವ್ಯಾಜದಲ್ಲಿಂಕಿತಳು | ವಾಜಿ ಮುಖ ಹರಿಯೇ 2 ವಲ್ಲಭೆಯು ಶ್ರೀ ತುಳಸಿ | ಚೆಲ್ವಶಿಲೆ ಸುತ್ತುತಲಿನಲ್ಲ ಹರಿಪರಿ ಪೂರ್ಣ | ಎಲ್ಲೆಡೆಯಲೆಂಬಾಸೊಲ್ಲನಿವಳಿಗೆ ತೋರಿ | ಸಲ್ಲಿಸಿಹ ಹರಿಸೇವೆಬಲ್ಲವರ ಬಲ್ಲರೋ | ಘುಲ್ಲಕರಿಗಲ್ಲಾ 3 ಹರಿಗುರೂ ಸದ್ಭಕ್ತಿ | ಗುರು ಹಿರಿಯರ ಸೇವೆ ಕರುಣಿಸುತ ಕನ್ಯೆಯನು | ಪೊರೆಯುವುದು ಸತತಗಿರಿಜೆ ದರ್ಶನ ಫಲಕೆ | ಸರುವ ಮಂಗಳವಿತ್ತುನಿರುತ ಸಲಹೆಂದಿವಳ | ಪ್ರಾರ್ಥಿಸುವೆ ಹರಿಯೇ 4 ಮಧ್ವರಾಯರ ಮತದಿ | ಶುದ್ಧ ಬುಧಿಯನಿತ್ತುಮಧ್ವೇಶ ಹರಿಪಾದ | ಹೃದ್ಗುಹದಿಕಾಂಬಅಧ್ಯಾನಲ್ಲಿವಳ | ಬದ್ಧಳನೆ ಮಾಡಿ ಪೊರೆಮಧ್ವಾಂರಾತ್ಮ ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಪತಿ ವಿಠಲ | ಶ್ರೀನಿವಾಸ ಪ ದೀನ ಜನ ಮಂದಾರ | ನೀನಿವನ ಸಲಹೋ ಅ.ಪ. ಮೋದ ಉಣಿಸಿವಗೇ 1 ಪ್ರಾಚೀನ ಕರ್ಮಾಂಧ | ಕೂಪದಲಿ ಬಿದ್ದಿಹೆನೊಖೇಚರೊತ್ತಮ ಪ್ರಾಣ | ಮತದಿ ಬಂದಿಹನೋವಾಚಿಸುತ ಇವನಲ್ಲಿ | ನಿಚೋಚ್ಚ ತರತಮನಮೋಚಿಸೋ ದುಷ್ಕರ್ಮ | ಕೀಚಕಾರಿ ಪ್ರಿಯಾ 2 ದಾಸ ದೀಕ್ಷೆಯಲಿ ಮನ | ದಾಶಿ ಬಲು ಇಟ್ಟಿಹೆನೊಶ್ರೀಶ ತ್ಯೆಜಸನೀನೆ | ಲೇಸು ಸತ್ಪಂಥಾ |ಸೂಸಿ ತೋರಿಹೆ ಹರಿಯೇ | ಹೇ ಸದಾಶಿವ ವಂದ್ಯಕ್ಲೇಶ ನಾಶನ ಕಾಯೊ | ವಾಸವಾನುಜನೇ 3 ತೈಜಸನೆ ನೀ ತೋರ್ದ | ತೇಜರೂಪೋಪಾಸಾಮಾಜದಲೆ ಪೇಳಿರುವೆ | ವಾಜಿವದನಾ |ಸೋಜಿಗದ ತರಳನಿಗೆ | ಓಜಸ್ಯ ಪಾಲಿಸುತರಾಜಿಸೋ ಇವನಲ್ಲಿ | ಮೂಜಗತ್ಪತಿಯೇ 4 ಸರ್ವಾಂತರಾತ್ಮ ತವ | ದಿವ್ಯ ಸಂಸ್ಕøತಿಯನ್ನಸರ್ವತ್ರ ಸರ್ವದಾ | ಓವಿ ಪಾಲಿಪುದೋ |ದುರ್ವಿ ಭಾವ್ಯನೆ ಗುರೂ | ಗೋವಿಂದ ವಿಠಲಯ್ಯದರ್ವಿ ಜೀವಿಯ ಕಾಯೊ | ಬಿನ್ನವಿಪೆ ಹರಿಯೇ 5
--------------
ಗುರುಗೋವಿಂದವಿಠಲರು
ಪಂಥವ್ಯಾಕೋ ಪ್ರತಿಜ್ಞೆ ಯಾಕೋ ಪ ಸಂತಸದಿ ನಿನ್ನಂತರಂಗದಿ ಕಂತುಪಿತ ನೀನೆನಲು ಸಾಕೊ ಅ.ಪ ಕೋಪವ್ಯಾಕೊ ತಾಪವ್ಯಾಕೋ ತಾಪತ್ರಯಗಳ ಲೋಪ ಸಿರಿವರ ಕಾಪಾಡೆನಲದೊಂದೆ ಸಾಕೊ 1 ಕುಂದು ಯಾಕೋ ನಿಂದೆ ಯಾಕೋ ಸಿಂಧುಶಯನಗೋವಿಂದಗರ್ಪಿ ತೆಂದು ನೋಡ್ಹೆಚ್ದಿಂದ್ಯಾಕೆ ಬೇಕೊ 2 ಕ್ಷೇತ್ರ ಯಾಕೋ ಯಾತ್ರವ್ಯಾಕೋ ಖಾತ್ರಿಯಿಂದ ಜಗತ್ರಯಕೆ ಸು ಸೂತ್ರಾಧಾರಿಯೆಂದ ಮಾತ್ರ ಸಾಕೊ 3 ಸ್ನಾನವ್ಯಾಕೋ ಸಂಧ್ಯಾನವ್ಯಾಕೋ ಜ್ಞಾನವಿಡಿದು ಭಕ್ತಪ್ರಾಣನಾಥನ ಧ್ಯಾನಗೈಯಲದೊಂದೆ ಸಾಕೊ 4 ಜಪವು ಯಾಕೋ ತಪವು ಯಾಕೋ ಕಪಟನೀಗಪರಿಮಿತ ಹರಿಯ ಗುಪಿತದಿಂದರ್ಚಿಸಲು ಸಾಕೊ 5 ಮಂತ್ರವ್ಯಾಕೋ ತಂತ್ರವ್ಯಾಕೋ ಮಂತ್ರಮೂರ್ತಿ ಸರ್ವಾಂತರ್ಯಾಮಿಯ ಅಂತರಂಗ ತಿಳಿಯೆ ಸಾಕೊ 6 ನೇಮವ್ಯಾಕೋ ನಿತ್ಯವ್ಯಾಕೋ ಸ್ವಾಮಿಯೆನುತ ಪ್ರೇಮಿಯ ಶ್ರೀ ರಾಮನ ನಂಬಿಕೊಳ್ಳಲು ಸಾಕೊ 7
--------------
ರಾಮದಾಸರು
ಪದುಮಾವತಿ ಕಾಂತ ಪ ಬ್ರಹ್ಮಾದ್ಯರ ತಾತ ಅ.ಪ. ನಿನ್ನ ದರ್ಶನವು ಸಂಸಾರ ಸಮೇತ | ಬೇಡನೆ ಜನವ್ರಾತ ಮನ್ನಿಸಲಿಲ್ಲವೊ ನಾನವರ ಮಾತ | ಪಾವನ ಶುಭಚರಿತ ನಾ ಮಾಡಿದೆ ಶಪಥ ಸದ್ಗುಣ ಗಣಭರಿತ 1 ದ್ವಿಜರಾಜ ವರೂಥ ಇದು ಏನಧಿಕವೊ ನಿನ್ನಸಮದಾತ | ರಿಲ್ಲವೊ ಶುಭಗಾಥ ಭವ ಶರಧಿಗೆ ಪೋತ ನಾಗಯ್ಯಾತ್ವರಿತ 2 ವತ್ಸರ ಪ್ರತಿಪದ ಬುಧಸಹಿತ ಊಧ್ರ್ವಪುಂಡ್ರವಿಡುತ ಏರಿದೆ ಪರುವತ ಸಿರಿ ನಿನ ಕಂಡೆವೊ ತಾತ 3 ಸುಕೃತ | ಈ ದಿನ ಒದಗುತ ಫಲವಾದುದಕೆ ನಾವೆಲ್ಲ ಬಹುಪ್ರೀತ | ರಾದೆವು ಶ್ರೀಕಾಂತ ಉತ್ಸವ ನೋಡುತ ಒಲಿದು ನಿನ್ನ ತೀರ್ಥಪ್ರಸಾದವ ಕೊಳುತ | ನಾವಿದ್ದೆವೊ ಸತತ 4 ತುಂಗ ವಿಕ್ರಮನೆ ರಣದೊಳು ನಿರ್ಭೀತ | ಬಲರಿಪು ಸಹಜಾತ ಗಾಂಡೀವಿಯ ಸೂತ ಗಂಗಾಜನಕನೆ ತ್ರಿಗುಣಾತೀತ | ಭುವನದಿ ವಿಖ್ಯಾತ ರಂಗೇಶವಿಠಲನೆ ನಾ ನಿನ್ನ ದೂತ | ಯದುಕುಲ ಸಂಭೂತ 5
--------------
ರಂಗೇಶವಿಠಲದಾಸರು
ಪಂಪಾಪುರಾಧಿಪ ಶ್ರೀ ವಿರೂಪಾಕ್ಷ ನೀ ಪಾಲಿಪುದೆಮ್ಮನು ಪ ಶ್ವೇತ ಭಾಪುರೆ ಸುರಕುಲ ದೀಪ ಸದಾಶಿವ ಪಾದ ಸಮೀಪದ ಸೇವಕ ಅ.ಪ. ಹರಿಪಾದೋದಕ ಶಿರದಲಿ ಧರಿಸಿದ ಹರಿಕಥಾಮೃತ ಮಳೆಗರೆವೆ ನೀ ಕರುಣಿ ಸಂಕರುಷಣನ ಚರಣಾಬ್ಜ ಧೂಳಿ ಶ- ರೀರ ಲೇಪನದಿಂದ ವರ ತೇಜಯುತನೆ ಮುರಹರಗೆರಗದ ನರನಿಗೆ ನರಕವು ಸ್ಥಿರವೆಂದು ಸುರವರ ಭೇರಿ ಭೋರಿಡುತಿರೆ ನಿರುತ ಅವನ ಪದ ಮೆರೆಯದೆ ಮನಗೊಂಡೆ ಶರಣು ಅಮರನುತ ಗುರು ಶಿರೋಮಣಿಯೆ1 ದೇಶಕ್ಕೆ ದಕ್ಷಿಣ ಕಾಳಿಯೆನಿಸುವ ವಿ- ಶೇಷ ಸ್ಥಳದೊಳು ವಾಸವಾಗಿ ಅ- ದೋಷನಾಶನ ಸಂತೋಷದಿ ಗಿರಿಜೆಗೆ ಶ್ರೀಶನ ಮಂತ್ರೋಪದೇಶವ ಮಾಡಿದೆ ದಾಶರಥಿಯ ನಿಜದಾಸರೆನಿಸುವರ ಪೋಷಿಪೆ ಶಿವ ಪರಮೇಶ ಕೃಪಾಳೊ 2 ಕಂದುಗೊರಳ ಜೀಯ ಸಿಂಧೂರ ಮೊಗನಯ್ಯ ಕಂದರ್ಪಹರ ಭಕ್ತಬಾಂಧವ ಕಾಯೊ ಇಂದಿರೆರಮಣ ಗೋವಿಂದನ ಪಾದಾರ- ವಿಂದ ಭೃಂಗನೆ ಭವದಿಂದ ಕಡೆಗೆ ಮಾಡೊ ನಂದಿವಾಹನ ಎನ್ನ ಹಿಂದಣ ಕಲುಷಿತ ವೃಂದಗಳೋಡಿಸುವ ಇಂದುಧರ ಅರ- ಸಿರಿ ವಿಜಯವಿಠ್ಠಲನಕುಂದದೆ ಭಜಿಪ ಆನಂದವ ಕರುಣಿಸು 3
--------------
ವಿಜಯದಾಸ