ಒಟ್ಟು 2222 ಕಡೆಗಳಲ್ಲಿ , 115 ದಾಸರು , 1763 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರವ ಪಿಡಿ ಗುರುರಾಯ | ಶಿರಬಾಗಿ ಬೇಡುವೆ ಪೊರೆಯೊ ಸತ್ಕವಿಗೇಯ | ನೆರೆನಂಬಿದೆನು ನೀ ಮರೆಯದಿರು ಶುಭಕಾಯ | ಹೇ ಸೂರಿವರ್ಯ ಪ ಉರಗಕೇತನ ಮೊರೆಯ ಲಾಲಿಸಿ ತರಣಿಜನಿಗೆರಡೊಂದು ಯುಗದಲಿ ಧುರದಿ ಸಾರಥಿಯಾಗಿ ಸ್ಯಂದನ ಭರದಿ ನಡೆಸಿದ ಪರಮ ಪುರುಷನೆ ಅ.ಪ ಶರಣು ಜನ ಸುರಧೇನು | ಹೇ ತಾತ ನೀ ಮೂರೆರಡು ಜನುಮಗಳನ್ನು | ಕಳೆದು ಮ ತ್ತುರುವ ಅವತಾರವನು ಭಕ್ತಿಪೂರ್ವಕ ಪಿರಿಯರಾಜ್ಞದಿ ನೀನು ಪೂರೈಸಲಿನ್ನು ಧರಣಿಯೊಳಗವತರಿಸಿ ನರರಿಗೆ ಅರಿಯದಂದದಿ ಹರಿಯ ದಿಸೆಯೋಳ್ ಹರಿಯ ಸ್ಮರಿಸುತ ಚರಿಪ ಧೊರೆ ತವ ಚರಣ ದರುಶನಗರೆದು ಕರುಣದಿ 1 ಕ್ಲೇಶ ತಡಮಾಡದಲೆ ನೀ ಭವ ಪಾಶ | ದೃಢಮನವ ಕೊಡು ನಿ ನ್ನಡಿಗಳಲಿ ನಿರ್ದೋಷ | ನುಡಿಯಲಾಲಿಸಿ ಬಿಡದೆ ಮಾಡುಪದೇಶ ಪೊಡವೀಶದಾಸ ಒಡೆಯನೇ ನೀನಡಗಿ ಎನ್ನನು ಕಡೆಗೆ ನೋಡಲು ಪಡೆದ ಜನನಿಯು ಪಿಡಿದು ಬಾಲನ ಮಡುವಿನೋಳ್ ತಾ ಬಿಡುವ ತೆರ ತವ ನಡತೆ ಎನಿಪುದು 2 ಮಂದನಾನಿಜವಯ್ಯ | ಸಂದೇಹವಿಲ್ಲದೆ ಕುಂದು ಎಣಿಸದೆ ಜೀಯ ಬಂದೆನ್ನ ಮನದಲಿ ನಿಂದು ನೀಸಲಹಯ್ಯ ವಂದಿಪೆನು ಶ್ರೀ ಪು ರಂದರಾರ್ಯರ ಪ್ರೀಯ ಆನಂದ ನಿಲಯ 3
--------------
ಶಾಮಸುಂದರ ವಿಠಲ
ಕರಿಗೊರಳಾ ಪಾಲಿಸೋ ಪ ಕರಿವರದನ ದಯ | ನಿರುತ ನಿನ್ನೊಳಗಿದೆಸುರಜೇಷ್ಠಾನುಜ | ಶರಣನ ಕರಪಿಡಿಅ.ಪ. ಪಶುಪತಿ ಎನಿಸಿಹೆ 1 ಆರು ನಿನಗೆ ಸರಿ | ವೈರಾಗ್ಯಾಧಿಪಕೋರುವೆನೋ ತವ | ಕರುಣಾ ರಸವನುಭೂರಿ ದಯದಿ ಮಮ | ಕಾರವ ಹರಿಪುದುಬೇರೊಂದನೊಲ್ಲೆ | ಕಾರುಣ್ಯಾಂಬುಧಿ 2 ದೇವ ದೇವ ಹರಿ | ದಾವಾಗ್ನಿಯ ಭಯತೀವರ ಹರಿಸುತ | ಗೋವ್ಗಳನುಳುಹಿದ |ಭಾವಜ ಪಿತ ಗುರು | ಗೋವಿಂದ ವಿಠಲನಪಾವನ ಪದ ದ್ವಯ | ಭಾವದಿ ತೋರಿಸಿ 3
--------------
ಗುರುಗೋವಿಂದವಿಠಲರು
ಕರುಣದಿ ಕಾಯಬೇಕಿನ್ನು ಪ್ರಾಣೇಶ ಅರಿಯೆನೊ ಅನ್ಯರ ಜಗದ್ವಾಸ ಪ. ಪರಿಪರಿ ಬವಣೆಯ ಪರಿಹಾರಗೈಸುತ ತ್ವರಿತದಿ ಸಲಹೊ ಭಾರತಿಗೀಶ ಅ.ಪ. ಅನ್ನವಸನಗಳಿಗೆ ಅಲ್ಪರ ತೆರದೊಳು ಬನ್ನಬಡುತಲಿರಲು ನಿನ್ನ ಪಾದವ ನಂಬಿ ನೀ ಗತಿ ಎನುತಿರೆ ಮನ್ನಿಸಿದ ಮಹಿಮ ನಿಸ್ಸೀಮ 1 ಮನದಿ ಬಹುನೊಂದು ನಿನ್ನ ಘನತೇನೆಂದು ಅನುದಿನ ಕಾಯೊ ಎಂದು ಎನುತಿರೆ ಸ್ವಪ್ನದಿ ಹನುಮ ನಿನ್ನಭಯ ಹಸ್ತ ವನೆ ಶಿರದಿ ಇಟ್ಟೆ ಶ್ರೇಷ್ಠನೆ 2 ಉಭಯ ಹಸ್ತವು ಎನ್ನ ಶಿರದ ಮ್ಯಾಲಿಡುತಲಿ ಅಭಯ ಕೊಡುತಲಿರಲು ನಿರ್ಭಯದಿಂದ ನಾ ನಿನ್ನ ಭಜಿಪೆನಯ್ಯ ಶುಭಗುಣನಿಲಯ ಜೀಯಾ 3 ಹನುಮ ಭೀಮಾನಂದ ಮುನಿಯಾಗಿ ಜಗದಲಿ ಹನನಗೈಯುತ ದನುಜರ ವನಜಾಕ್ಷ ಹರಿಯನು ಘನವಾಗಿ ಸೇವಿಸಿ ಅನುದಿನದಲಿ ಕಾಯ್ವೆ ಸುಜನರ4 ಶ್ವಾಸಜಪವ ಮಾಡಿ ರಾಶಿ ಜೀವರ ಕಾಯ್ವೆ ಶ್ವಾಸ ನಿಯಾಮಕನೆ ಶ್ರೀಶ ಶ್ರೀ ಗೋಪಾಲಕೃಷ್ಣವಿಠ್ಠಲನಿಗೆ ಕೂಸು ಎಂದೆನಿಸಿರುವೆ ನೀ ಕಾವೆ 5
--------------
ಅಂಬಾಬಾಯಿ
ಕರುಣದಿ ಭವಾರ್ಣವದಿಂದಾ ದಾಟಿಸುವುದು ಜೀಯಾ ಪ ಯೋನಿ ಮುಖದಿ | ಘಾಶಿಯಾದೆನೋ ವಿಷಯಾಭಿಲಾಷದಿ | ಸೋಸಿದೆನೋ ದು:ಖ ತಾಪವ ಮಾರದೀ | ಮಾಯಾ ಮೋಹದಿ 1 ಧ್ಯಾನ ಮೌನವೆಂಬ ಸಾಧನವನು | ಈ ನಿಯಮ ಯಮ ಯೋಗವನು | ಙÁ್ಞನ ಭಕುತಿ ವೈರಾಗ್ಯವನು | ಏನು ಇಂತರಿಯದ ಮಹಾಪತಿತÀನು 2 ಮುನ್ನ ಮಾಡಿದೆಲ್ಲ ಪರಾಧ ಕ್ಷಮಿಸಿ | ಇನ್ನು ಅಭಯಕರ ಸಿರಸಲಿರಿಸಿ | ಎನ್ನ ಹೃದಯಾಲಂದಃ ಕಾರಹರಿಸಿ | ಸನ್ನುತ ಮಹಿಪತಿ ಎನ್ನ ಭಕ್ತನೆನಿಸಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣದಿಂದ ಪೊರೆವುದೆನ್ನಪರಮಪುರುಷ ಸೂರ್ಯದೇವ ಪಗಾಲಿಯೊಂದೆ ಇರುವ ರಥವುಕಾಲುಕುಂಟನಾದ ಸಾರಥಿಏಳುಕುದುರೆ ಇರಲು ನಡೆವಕಾಲಚಕ್ರ ನಿಯಂತಾರ 1ಲೋಕಕೆಲ್ಲ ಕಣ್ಣೆನಿಸುತಭೀಕರಾಂಧಕಾರವನುನೂಕಿ ಜಗಕೆಬೆಳಕನೀವಸಾಕಾರ ಪರಬ್ರಹ್ಮ 2ಸರ್ವಸ್ಟೃಕರ್ತನಾಗಿಸರ್ವಸ್ಥಿತಿಗೆ ಕಾರಣನಾಗಿಉರ್ಪಿಯೊಳಗೆ ಬೆಳಗುತಿರುವಸರ್ವದೇವ ಚಿತ್ಸ್ವರೂಪ 3
--------------
ಹೊಸಕೆರೆ ಚಿದಂಬರಯ್ಯನವರು
ಕರುಣದೊಳೆನ್ನನು ನೀ ಪ ಪಡೆದ|ಜಗದೀಶ್ವರಿಯೆ ಅ ಪ ಧರಣಿಯ ಭಾರವನು|| ಶ್ರೀ| ಸರ್ವೇಶ್ವರಿಯೆ 1 ನಂಬಿಹೆ ಶಂಕರಿಯೆ || ಇಂಬುಗೊಡುತ ನೀ| ಬೆಂಬಿಡದೆನ್ನನು 2 ಪಂಕಜಮುಖಿ ಶ್ರೀ| ಶಂಕರಿ ಶುಭಕರಿ| ಕಿಂಕರಪಾಲಿನಿಯೆ || ಬಿಂಕದ ದಾನವ| ಸಂಕುಲವಳಿಸಿದ| ಶಂಖಚಕ್ರಾಂಕಿತೆ | ಶ್ರೀ ದುರ್ಗಾಂಬಿಕೆ 3
--------------
ವೆಂಕಟ್‍ರಾವ್
ಕರುಣವ ಬೀರು ಚೆನ್ನ ಕಾಯಬೇಕೋ ಎನ್ನಮರೆತಿರೆ ಕಾವರ ಕಾಣೆಪ. ಸೊಪನ ಜಾಗರದಲ್ಲಿ ನಿನ್ನ ಧ್ಯಾನವೆ ಬಂದುತೃಪ್ತನಾಗಿ ನಾನು ಜೀವಿಸುವೆಕಪಟದ ನುಡಿಯಲ್ಲ ನೀನೆ ಬಲ್ಲೆವಿಪತ್ತುಗಳನೆ ಬಿಡಿಸಯ್ಯ 1 ಕಡಲಮಗಳ ಗಂಡ ಕಾಮಧೇನು ನೀ ಕಂಡ್ಯಾಬಡವ ನಿನ್ನಡಿಗೆ ಪೊಡಮಡುವೆಒಡಲ ಬಳಿಯ ನೆಳಲಂತೆ ಬಿಡದೆ ನಿನ್ನದೃಢವಾಗಿ ನಾನು ಕೂಡುವೆನು 2 ತಂಡ ತಂಡದ ವ್ಯಾಧಿಯ ಉಂಡು ಉಂಡು ಬಳಲಿದೆಕಂಡ ಕಂಡವರ ಬೇಡಿ ನೊಂದೆಹಿಂಡುಹಿಂಡುಗಟ್ಟಿ ಬಂದ ಚಂಡ ದಂಡಧರನವರುತುಂಡು ತುಂಡು ಮಾಡಿ ಕಾಡುವರು 3 ಘೋರತರ ವ್ಯಾಧಿಗಳ ತೋರಿ ತೋರಿ ನರಕದಿಮುರಹರನುಣಿಸದೆ ಬಿಡನುಮೀರಿ ಮೀರಿ ಬಹ ಮೃತ್ಯು ಆರನಂಜಿಸುವುದುಭಾರಿ ಭಾರಿ ಗಳಿಸಿದ ಪಾಪ 4 ಹರಿ ನಿನ್ನ ಚರಣದ ಸ್ಮರಣೆ ಒಂದಿರೆ ಸಾಕುಮರಣಗಿರಣಕಂಜೆನಯ್ಯಶರಣಜನರು ನಿನ್ನ ಪ್ರಾಣಕ್ಕೆ ಸರಿಯೆಂಬೆಸಿರಿರಮಣನೆ ಸಲಹೆನ್ನ 5 ಶರಧಿಯೊಳಾಡುವ ಮಂದರಧರ ವರಾಹನೆಹಿರಣ್ಯಾಕ್ಷವೈರಿ ವಾಮನನೆಪರಶುರಾಮನೆ ರಘುರಾಮ ಕೃಷ್ಣ ಬೌದ್ಧನೆಧುರದಿ ಕಲ್ಕಿಯಾಗಿ ಮೆರೆದೆ 6 ಕರಕರ ಮತತತ್ವವ ಒರದೊರೆದು ಪೇಳುವೆಥÀರಥರದ ಹಿರಿಯರನೆಲ್ಲಮಿರಿ ಮಿರಿ ಮಿಂಚುತಿಹ ಮುರಹರನ ಭಜಿಸದೆಹರಿಹರಿಯೆಂದು ಪೇಳೆನೊಮ್ಮೆ 7 ಮನೆಮನೆವಾರ್ತೆಗೆ ಧನಂಗಳ ಗಳಿಸಿದೆಚಿನಿಚಿನಿಯಂಬರಕೆ ಮರುಳಾಹೆಮನೆಮನೆ ಮಹಿಮೆಯ ಕಾಣೆ ಕಾಣೆ ಕೆರೆಗಳನೆನೆನೆನೆದಾಡುತ್ತ ನಾ ಭಜಿಸಿ 8 ತನು ಜೀರ್ಣವಾಯಿತು ಕರಣ ಎನ್ನಿಚ್ಛೆಯೊಳಿಲ್ಲಮನವೆನ್ನ ಮಾತು ಕೇಳದಯ್ಯಇನಿತು ಸಂಕಟದವ ಇನ್ನು ನಾನೆಂತರ್ಚಿಪೆವನಜನಾಭನೆ ಹಯವದನ9
--------------
ವಾದಿರಾಜ
ಕರುಣವ ಮಾಡಿ ಶರಣು ಹೋ | ಶರಣು ಹೋಗುವೆ ನಿಮ್ಮ ಚರಣ ಕಮಲಕೆ | ಎರವು ಮಾಡಿದೆ ನಿರುತಾ ಪ ನಗರ ದಹನಾ | ತಾರಕ್ಷ ವಾಹನಾ | ತರುಣ ಚರ್ಮಾಂಬರ ಪೀತಾಂಬರಧರ ಶ್ರೀ ಸತಿರಮಣಾ | ಶೌರಿ ಕೌಸ್ತುಭಮಾಲಾ | ಮಾರಜನಕ ಕು | ಮಾರನಪಿತ ಗಂಗಾಧರ ಧರ ಧರ1 ಶೂಲ ಡಮರುಗ ಹಸ್ತ | ಮೂಲೋಕ ಮೀರಿದವಸ್ತಾ | ಕಾಲ ನಿಯಾಮಕ | ನಿತ್ಯ | ಪಾಲಸಾಗರಶಾಯಿ ನಂದಿಗಮನ ಕಾ | ಪಾಲಿ ಅಭಯ ಪಾಣಿ 2 ವಿಷಧರ ಭೂಷಣ ಕಸ್ತೂರಿ ತಿಲಕ ರಂ | ಪಶುಪತಿ ಪಿನಾಕಿ ಅಸುರಾರಾತಿ ವಿವೇಕಿ | ಅಸಮ ಸುದರುಶನ ರುಂಡಮಾಲಾಧೀಶ ಪಾಲ ಗೋಪಾಲ 3 ಭೂತ ಪ್ರಮಥರೊಡೆಯಾ | ಭೂತೇಶಾದಿಗಳೊಡೆಯಾ | ನೀಲ | ಗಾತುರ ಸದ್ಯೋಜಾತಾ ಜಾತರಹಿತಾ | ಶೂನ್ಯ ಪ್ರತಾಪಾ | ಶ ತಾಮಸ ಖ್ಯಾತಿ ಮಂಗಳಕೀರ್ತಿ 4 ತಂತ್ರ ಮಂತ್ರಕ್ಕೆ ಸಿಲುಕಾ | ಅಂತರಂಗ ನಿಯಾಮಕಾ | ಎಂತೆಂತು ತಿಳಿದರೆ | ಅಂಥಂಥ ಗತಿಯನ್ನು | ಸಂತತ ಕೊಡುವನೆ ಚಿಂತಿಪೆ ವರಹನ್ನ | ದಂತಜ ತೀರದಲ್ಲಿ | ಕಾಂತಾರ ನಿವಾಸಾ 5
--------------
ವಿಜಯದಾಸ
ಕರುಣಸಾಗರನಹುದೊ ಶರಣ ಜನರ ಪ್ರಿಯ ಧ್ರುವ ಕರಿರಾಜ ಮೊರೆ ಇಡಲು ಭರದಿಂದೊದಗಿ ಬಂದ್ಯೊ ದುರಿತ ಬಂದಡರಿದಾವಸರದೊಳು ನೀ ಪರಿಹರಿಸಿದ್ಯೊ ಶ್ರಮ ಪರಮ ದಯಾಳು 1 ದುರಿತ ನಿರ್ಮಿಸಿದವನ ಬೆರಳಲಿ ಸೀಳಿದ್ಯೊ ಪೂರ್ಣ ಹರಿಯಂದಾ ಮಾತಿಗೆ ಕರುಣದಿಂದೊದಗಿ ನೀ ಪರಪರಗಾಯಿದ್ಯೊ ತರಳ ಪ್ರಹ್ಲಾದನ 2 ಧರ್ಮಪತ್ನಿಯ ಸೆರಗೆ ಭರದಿಂದೆಳೆಯುವ ಸಮಯ ಸ್ಮರಣಿ ಒದಗಿ ಬಂದೊ ಪರಿಪರಿ ವಸ್ತುವ ಪೂರಿಸಿದ್ಯೊ ಶ್ರೀ ಹರಿ ಕೃಷ್ಣ ಕೃಪಾಳು 3 ಅರಗಿನ ಮನೆಯೊಳು ಮರೆ ಮೋಸ ಮಾಡಿರಲು ಶರಣಾಗತವತ್ಸಲ ಪಾಂಡವಪ್ರಿಯ 4 ಹಲವು ಪರಿಯಲೆನ್ನ ಸಲಹುವ ಸದ್ಗುರುಪೂರ್ಣ ಬಾಲಕ ಮಹಿಪತಿಯ ಪಾಲಕ ನೀನಹುದೊ ಮೂಲೋಕದೊಡೆಯ ಶ್ರೀ ಹರಿ ದಯಾಳ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಾಸಾಗರ ದೀನೋದ್ಧಾರಣ ಎನ್ನನು ಕಾಯ್ವ ಪರಿಯ ಚಿಂತಿಸಿ ರಕ್ಷಿಸೊ ಪರಮ ಪಾವನ ನಾಮಸ್ಮರಣೆಯಲ್ಲದೆ ಕರ್ಮ ಚರಣರಹಿತ ಪಾಪಕರನಾಬ್ಧಿಪತಿತನ ಪ. ವರ್ಣಾಶ್ರಮಾಚಾರ ಕರ್ಮಕೃತ್ಯವ ನೀಗಿ ನಿರ್ಮಲಚಿತ್ತದಿ ನಿನ್ನ ಪೂಜಿಸದೆ ವರ್ಮವಿಡಿದು ವರ ದ್ರೋಹ ಚಿಂತೆಗಳಿಂದ ಧರ್ಮಮಾರ್ಗವ ದೂರದಲಿ ತ್ಯಜಿಸಿ ನಿರ್ಮಲಾಂತ:ಕರಣ ನಿಜಕುಲ ಧರ್ಮರತ ಸಜ್ಜನರ ದೂಷಿಸಿ ದುರ್ಮದಾಂಧರ ಸೇರಿ ಕೂಪದ ಕೂರ್ಮನಂದದಿ ಬರಿದೆ ಗರ್ವಿಪೆ 1 ನೇತ್ರ ದರ್ಶನಕೆ ಸಂಸ್ಮರಕೆ ಜಿಹ್ವೆಯ ಗಾತ್ರ ಸೇವೆಗೆ ನೈರ್ಮಲ್ಯಕೆ ಶಿರವ ಶ್ರೋತ್ರವ ಮಾಹಾತ್ಮ ಶ್ರವಣಕೆ ಪಾದಗಳ ಕ್ಷೇತ್ರಯಾತ್ರೆಗೆ ಕರಗಳ ಪೂಜಾವಿಧಿಗೆ ಇತ್ತ ದೊರೆಯನು ಮರೆತು ಇಂದ್ರಿಯ ವೃತ್ತಿಗಳ ಸ್ವೈರಿಣಿಯ ದರುಶನ ಭುಕ್ತಿ ಚುಂಬನ ಧ್ಯಾನ ದುಷ್ಟ ಕಥಾ ಶ್ರವಣಸಲ್ಲಾಪಕಿತ್ತೆನು 2 ಪತಿತ ಪಾವನ ನೀನು ಪತಿತಾಗ್ರೇಸರ ನಾನು ಅತಿಶಯಿತನು ನೀನು ಅತಿನೀಚನು ನಾನು ಗತಿಹೀನ ಜನಕ ಸದ್ಗತಿಯೆಂಬ ಬಿರುದುಳ್ಳ ಮಿತಚಿತ್ರ ಚರಿತಾತ್ಯದ್ಘುತರೂಪ ಗುಣಪೂರ್ಣ ಪಶುಪತಿ ಸುರೇಶ ಪ್ರ- ಭೃತಿ ದಿವಿಜಗಣ ಸುತ ಪದಾಂಬುಜ ಕ್ಷಿತಿಜಲಾಗ್ನಿ ಮರುನ್ನಭೋಹಂ ಕೃತಿ ಮಹ ಸುಖತತಿನಿಯಮಕ 3 ಕರಿರಾಜ ಧ್ರುವಾಕ್ರೂರನರ ವಿಭೀಷಣ ನಾರದರು ಮೊದಲಾಗಿ ನಿನ್ನನುದಿನವು ಸ್ಮರಿಸಿ ಪೂಜಿಸಿ ಮನವೊಲಿಸಿದವರನ್ನು ಪರಿಪಾಲಿಸಿದನೆಂಬೊ ಗರುವದಿಂದ ನಿರುಪಮಾನಂದೈಕ ಸದ್ಗುಣ ಭರಿತರೆಂಬುದ ಹೆಮ್ಮೆಯಿಂದಲಿ ಮರೆತರೆನ್ನನು ಪರಮಕರುಣಾ ಶರಧಿಯೆಂದ್ಹೆಸರಿರುವುದೇತಕೆ 4 ನಾ ನಿನ್ನ ಮರೆತರು ನೀ ಎನ್ನ ಮರೆದರೆ ಹಾನಿಯಾಗದೆ ನಿನ್ನ ಭಕ್ತ ವತ್ಸಲಕೆ ದಾನವಾಂತಕ ಅಕಿಂಚನಾರೆ ಎಂಬ ಪ್ರಮಾಣ ಉನ್ನತ ವಚನವಾಗದೆ ಮಾನನಿಧಿ ಪವಮಾನ ತತ್ವಮತ ಮಾನಿಜನ ಸಂಸ್ತುತ ಪದಾಂಬುಜ ಶ್ರೀನಿವಾಸ ಕೃಪಾನಿಧೆ ಕಮಲಾ ನಿಲಯ ವೆಂಕಟನಿಜಾಲಯ 5 ವೇದವನು ತಂದು ಭೂಧರನ ಬೆನ್ನಲಿ ನೆಗಹಿ ಈ ಧರೆಯ ಸಲಹೆ ಪ್ರಹ್ಲಾದನನು ಕಾಯ್ದೆ ಮೇದಿನಿಯನಳೆದಿ ಕಾರ್ತದಶಾಸ್ಯ ಕಂ ಸಾದಿಗಳ ತರಿದ ಬೌದ್ಧಾದಿ ಕಲ್ಕಿ ಧಾರಣನೆ ಪತಿತ ಪಾವನನೆಂಬ ಪರಮ ಬಿರುದನು ವಹಿಸಿ ಜತನ ಮಾಡುವಿ ಭಕ್ತತತಿಗಳನು ಬಿಡದೆ ಪತಿತ ಶೇಖರನನ್ಯಗತಿಯಾಗಿರುವ ಎನಗೆ ಗತಿಯ ಪಾಲಿಸು ರಮಾಪತಿಯೆನ್ನುಪೇಕ್ಷಿಸದೆ 6 ನಾರದಕ್ರೂರ ನರ ಹೈರಣ್ಯಕಾದಿಗಳು ಪಾದ ನೀರರುಹಗಳನು ಘೋರತರ ಸಂಸಾರಪಾರವಾರವ ದಾಟಿ ಧೀರರೆನಿಸಿದರೆಲ್ಲಪಾರಸನ್ಮಹಿಮ ತರಣಿ ಉದಿಸಿದ ಮೇಲೆ ತಿಮಿರದೊಂದಿರವ್ಯಾಕೆ ಗರಳ ಭಯವ್ಯಾಕೆ ಸಿರಿಸಹಿತ ಶೇಷಾದ್ರಿ ವರ ನಿನ್ನಪಾದ ಸಂ- ದರುಶನವು ದೊರೆತಮ್ಯಾಲರಿಬಾಧೆಯಾಕೆ ಎನಗೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಾಳುವೈ ನಿಂನ ಭಜನೆಯೊಂದೇ ಸಾಕು ಭರದಲಿ ಪಾಪಿಯ ಶುದ್ಧ ಮಾಡಲಿಲೇ ಪ ಅಜಮಿಳ ಜನ್ಮದಿ ಘೋರ ಪಾಪವ ಗೈದು ಭಜನೆ ಮಾಡಲು ತನುನೀಗು ಕಾಲದಲೀ ಭಜಕರ ಲೋಲನೆ ಹೀನನಿಗೊಲಿದು ನೀ ಕುಜನನ ಪರೆದು ಮೋಕ್ಷವನಿತ್ತೆ ಹರಿಯೇ1 ದುರುಳ ವಾಲ್ಮೀಕನು ಹೀನ ಕೃತ್ಯವಗೈದು ಸುರಮುನಿಯಾಜÉ್ಞಯಿಂ ನಾಮವಭಜಿಸೇ ದುರಳನ ಸರಸದ ಭಕ್ತಿಗೆ ವಲಿಯುತ ಪರಮ ಙÁ್ಞನವನು ನೀ ನಿತ್ತೆ ಶ್ರೀಹರಿಯೆ 2 ತರಳ ದಾಸರುಕೂಡಿ ಹರಿ ನಿಂನ ಸ್ತುತಿಸಲು ನಿರುತ ಭಕ್ತರಿಗೆ ನೀನೊಲಿದೆ ಶ್ರೀಕಾಂತಾ ಪರಮ ಆದರದಿಂದ ಹರಿಯಂನ ಮನವನ್ನು ಪರಿ ಶುದ್ಧಮಾಡಿ ದೀನನ ಸೇರೋ ಹರಿಯೇ 3 ರಂಗನ ಮಹಿಮೆಯ ನುಡಿಯಲಾರೆನು ನಾನು ಅಂಗಜ ಪಿತನಾದ ದಶರೂಪಧರನ ನಿತ್ಯ ದೂರ್ವಾಪುರದಿನಿತ್ತುಮಂಗಳ ಪದವೀವ ಚೆನ್ನಕೇಶವನೆ 4
--------------
ಕರ್ಕಿ ಕೇಶವದಾಸ
ಕರುಣಿಸಬಾರದೇನು ಶರಣೆಂಬೆ ನಾನು ಕರುಣಿಸ ಬಾರದೆ ಮೊರೆಯ ಹೊಕ್ಕವನ ಶರಣಾಗತ ಪಂಜರನೆಂಬೊ ಬಿರುದಿರೆ ಪ ಸ್ತಂಭದಿ ನೀ ಬಂದು ದೈತ್ಯನ ಬೇಗ ಶೀಳಿಕೋಪದಿಂದ ಇರಲು ಆಗ ಬ್ರಹ್ಮೇಂದ್ರ ರುದ್ರ ವೃಂದ ಬೆದರಿ ಪೋಗೆ ಪ್ರಹ್ಲಾದನಾಗ ಇಂದಿರಾವರ ಗೋವಿಂದ ಕೃಪೆಯ ಮಾಡೆಂದು ಸ್ತುತಿಸೆ ಆನಂದದಿ ಕಾಯ್ದತಿ ಸುಂದರಮೂರ್ತಿ ಮುಕುಂದ ಧರಣಿಧರ ಸಿಂಧುಶಯನ ಅರವಿಂದನಯನ ಹರಿ 1 ದಶರಥ ಸುತನೆನಸಿ ಮುನಿಯಧ್ವರ ಕುಶಲದಿನ್ನುದ್ಧರಿಸಿ ಪಶುಪತಿ ಧನು ಭಂಜಿಸಿ ಸೀತೆಯ ಕೋರಿ ದಶರಥನಾಜ್ಞೆ ವಹಿಸಿ ಕಾನನದಿ ಚರಿಸಿ ಕುಶನಿಧಿಯನು ಬಂಧಿಸಿ ರಾವಣನ ದಶ ಶಿರಗಳ ಭರದಿಂದಲಿ ಖಂಡಿಸಿ ಅವನನುಜಗ ನಿಶದೊಳ್ ಶಿರಿಲಾಲಿಸಿ ಪೊರೆದ ಶ್ರೀಶಶಿಧರನÀು ಹರಿ 2 ನಕ್ರ ಭಂಗಬಡಿಸೆ ಗಜಗಳರಸ ರಂಗ ಮುರಾರಿ ದೇವೋತ್ತುಂಗ ಶ್ರೀ ಶ್ಯಾಮಲಾಂಗ ಭಕ್ತಾಭಿಮಾನಿ ಮಂಗಳಾರಸತ್ಸಂಗ ಜಗದಂತರಂಗ ವಿಹಂಗ ಸಿರಿ ನರಸಿಂಹ ಬಂದು ಶಾಪಂಗಳ ತರಿದೆ ಭುಜಂಗತಲ್ಪ ಕಾನಂಗಪಿತ 'ಹೆನ್ನೆರಂಗ' ಶರಣು ರಣರಂಗ ಭೀಮ ಹರಿ 3
--------------
ಹೆನ್ನೆರಂಗದಾಸರು
ಕರುಣಿಸೋ ಶಾಸ್ತ್ರಾರ್ಥ ಮದ್ಗುರು ಶ್ರೀ ವಿಷ್ಣುತೀರ್ಥಾ ಪ ಭವರೋಗ ಭೇಷಜನೆ ಬಹುಬಾಧೆ ಬಡುವೆನೊ ಭಾರತೀಶನ ಮುಖ್ಯ ಪ್ರೀತಿಪಾತ್ರಾ 1 ಶ್ರೀನಾಥ ನಿನ್ನಂಥ ದಾತರನು ನಾಕಾಣೆ ಅವನಿಯೊಳಗೆಲ್ಲ ಅರಸಿ ನೋಡಲು 2 ಪರಮ ಭಾಗವತರಿಗೆ ಮುಖ್ಯ ಹಿತಕರ್ತ ನೀನೆ ಧ್ವರಿಯೇ ಧರಿಯ ರಮಣ ತಂದೆವರದಗೋಪಾಲವಿಠಲನ ಮರಿಯೇ 3
--------------
ತಂದೆವರದಗೋಪಾಲವಿಠಲರು
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರೆ ಕರೆ ಭವದೊಳು ಮುಳುಗಿರುವೆ ದುರಿತದೂರನೆ ದು:ಖ ತರ ತರ ವ್ಯಥೆಯಲಿ ಪ ಅಗಣಿತ ಮಹಿಮನೆ ಸುಗುಣಗಳನುದಿನ ಬಗೆ ಬಗೆ ಸ್ಮರಿಸುವ ಬಗೆ ಮರೆದು ಹಗಲಿರುಳೆನ್ನದೆ ನಿಗಮವೇದ್ಯನ ನಾಮ ಬಗೆ ಬಗೆ ಪೊಗಳಿ ಕೊಂಡಾಡಿ ಸ್ತುತಿಸದಲೆ 1 ಜನುಮ ಜನುಮದಲಿ ಜನಿಸಿ ಬರುವ ದು:ಖ ಕೊನೆಗಾಣದಾಗಿದೆ ಕರುಣಾನಿಧೆ ಅನಿಮಿಷರೊಡೆಯ ಶ್ರೀ ಘನ ಮಹಿಮನ ನಾಮ ಮನದಣಿ ಪೊಗಳಿ ಕೊಂಡಾಡಿ ಸ್ತುತಿಸದಲೆ2 ನಾನು ನನ್ನದು ಎಂಬ ಹೀನವೃತ್ತಿಗಳಿಂದ ಹಾನಿಯಾಯಿತು ಆಯು ಶ್ರೀನಿಧಿಯೆ ಜ್ಞಾನಿಗಳೊಡನಾಡಿ ಮೌನದಿಂದಿರದಲೆ ಶ್ವಾನಸೂಕರನಂತೆ ತಿರುಗಿ ಬಾಯ್ಬಿಡುತಲಿ 3 ರಂಗನ ಮೂರ್ತಿಯ ಕಂಗಳಿಂದಲಿ ನೋಡಿ ಭಂಗಗಳಳಿಯುವ ಹರಿದಾಸರ ಸಂಗದೊಳಿರಿಸು ಉತ್ತುಂಗ ಮಹಿಮಪಾಂಡು- ಭವ ಭಂಗ ಬಿಡಿಸೆನ್ನದೆ4 ಪಾದ ಪೊಂದಿ ಭವದಘ ವೃಂದವ ಕಳೆಯುವನೆಂದೆನ್ನುತ ಬಂಧಕ ಮೋಚಕನೆಂದರಿಯದೆ ಭವ ಬಂಧನದೊಳು ಸಿಕ್ಕಿ ಬಳಲಿ ಬಾಯ್ಬಿಡುತಲಿ5 ಪರಿ ಮೋಹ ಮಾತುಳಾಂತಕ ಕೃಷ್ಣ ಮಾತು ಮಾತಿಗೆ ಹರಿ ಹರಿ ಎನ್ನದೆ ಸೋತು ಬಂದೆನೊ ದೇವ ಮಾತರಿಶ್ವನಪ್ರಿಯ ಕೋತಿ ಬುದ್ಧಿಯ ಬಿಡಿಸೆಂದು ತುತಿಸದಲೆ 6 ಕಮಲ ಪತ್ರಾಕ್ಷ ಶ್ರೀ ಕಮಲಜಾತೆಯ ಪ್ರಿಯ ಕಮಲನಾಭ ವಿಠ್ಠಲ ವಿಠ್ಠಲ ಹರೇ ಸುಮನಸರೊಡೆಯ ಶ್ರೀ ಭ್ರಮರಕುಂತಳೆ ಪ್ರಿಯಶ್ರಮ ಪರಿಹರಿಸೆಂದು ನಮಿಸಿ ಸ್ತುತಿಸುವೆನು 7
--------------
ನಿಡಗುರುಕಿ ಜೀವೂಬಾಯಿ