ಒಟ್ಟು 483 ಕಡೆಗಳಲ್ಲಿ , 77 ದಾಸರು , 433 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರಸ್ವತಿ ಸ್ತುತಿ ವಾಣಿ ಪಲ್ಲವ ಪಾಣಿ ನಾಗ- ವೇಣಿ ಹಂಸಗಾಮಿನೀ ಪ ವೇಣಿ ಹಂಸಗಾಮಿನೀ ಸು- ವೀಣಾ ಪುಸ್ತಕ ಧಾರಿಣಿ ಅ.ಪ ಶಾರದೆ ಶ್ರುತಿ ಸಾರನಿಧೇ ವಾರಿಜಾಕ್ಷಿ ಭಾರತೀ ಮಮ- ಕಾರ ಮೋಹಗಳಜಿತೀ 1 ನಾಕಾಧೀಶ ಪೂಜಿತೇ ವಿ- ವೇಕ ಜ್ಞಾನ ಸಂಧೃತೇ 2 ದಾಸರಿಷ್ಟವೀವ ಪಾವಂ ತೋಷವೀಯೇ ಸನ್ಮತಿ ವಾಣಿ3
--------------
ಬೆಳ್ಳೆ ದಾಸಪ್ಪಯ್ಯ
ಸರಸ್ವತಿ-ಭಾರತಿ ನಿತ್ಯ ಕಾವುದೆಮ್ಮನು ಪ ನಿತ್ಯ ಪಾವಿತರನ್ನ ಮಾಡುವಿ ನೋವ ಕೊಡದಲೆ ಕಾಯೇ ಅ.ಪ ಪದ್ಮನಾಭನ ನಾಭಿ ಪದ್ಮಜನ ಸಹ ಹೃ ತ್ಪದ್ಮದೊಳಗೆ ನೆಲಸಿ ಛದ್ಮವ ಕಳೆಯೆ ನಿರುತ 1 ಮಾರಮಣನ ದಿವ್ಯ ಚರಣ ಸರೋಜವ ತೋರಿ ಕರುಣವ ಮಾಡೆ ವಾರಿಜಾಸನನ ರಾಣಿ2 ಲಕುಮೀ ನಾರಾಯಣನ ಸುಕುಮಾರ ಚತುರ್ಮುಖ ನ್ವಾಕಿಗಾಗಿ ಬ್ರಾಹ್ಮೀ ಎನಿಸಿ ಸಾಕುವಿ ಲೋಕವ ಕಾಯೆ 3 ವಾಸುದೇವ ಕಾಲ ಪುರುಷರ್ಗೆ ಗಾಯಿತ್ರಿ ಸಾವಿತ್ರಿಯಾಗಿ ತೋಯಜಾಸನ ವಿಹಾರಿ 4 ಸನ್ನುತ ಜಯಾ ಸಂಕರುಷಣನ್ನ ಪಾದ ಕಿಂಕರನ್ನ ಮಾಡಿ ಎನ್ನ ಸಂಕಟ ಪರಿಹಾರ ಮಾಡೆ 5 ಕೃತಿಪತಿ ಪ್ರದ್ಯುಮ್ನನ ಸುತೆ ನುತಿಪೆನು ಸದಾ ಖ್ಯಾತಿಯನ್ನಿತ್ತನ್ಯಥಾ ಖ್ಯಾತಿಯ ಕಳೆಯೆ ಮಾತೆ 6 ಶಾಂತಿಪತಿ ಅನಿರುದ್ಧನಾಂತುದಿಸಿ ವಿರಂಚಿ ದುರಿತ ತರಿದು ಶಾಂತ ಮನಸನು ಕೊಡೆ7 ವಾಣಿ ವೀಣಾಪಾಣಿಯೇ ಕಾಣಿಸನುದಿನವೆನಗೆ ಮೃಡ ಇಂದ್ರಮುಖ ಗಣರಾರಾಧಿತಳೇ ತಾಯೆ 8 ಹೀನಗುಣವೆಣಿಸದೆ ಜ್ಞಾನ ಭಕ್ತಿ ವೈರಾಗ್ಯವ ಸಾನುರಾಗದಲಿ ಇತ್ತು ಶ್ರೀ ನರಹರಿಯ ತೋರೆ 9
--------------
ಪ್ರದ್ಯುಮ್ನತೀರ್ಥರು
ಸರಸ್ವತಿದೇವಿ ಫಣಿ ವೇಣಿ ನಮಿಪೆ ನಿನ್ನ ಮನಶುಕವಾಣಿ ಸುಮನಸರೊಡೆಯನ ಗಮನದೊಳಿಡುತೆ ಪವನ ಮತದಲಿಡು ತಾಯೆ ಕಾಯೆ ಪ. ವಾಣಿ ಬ್ರಹ್ಮನ ರಾಣಿಯೆನೀ ಗಾಣಿಸು ಮನದಿ ಸುವಾಣಿಯನು ಮಾಣದೆ ಜಪಸರ ಕಲ್ಯಾಣಿಯು ನೀನು ಸತಿ ಜಾಣೆ ಭಾರತಿಯೆ 1 ವಾರಿಜಭವ ಸತಿಮತಿ ತೋರುತ ಮನದಿ ನೀರೆ ಎನ್ನ ಮನ ಸೂರೆಗೊಳುತಲಿ ಸಾರುತ ಹರಿನಾಮಾಮೃತವನು ಕೊಡು ಮಾರಮಣ ಸ್ತುತಿ ಮಾಡಿಸುತ 2 ಅಸುರ ಮರ್ದನ ಹರಿ ನಿನವಶದಲ್ಲಿಹನೆ ಸುಸ್ವರದ ಮಧುರದಿ ಪಾಡುತಲಿರುವೆ ವಶವಲ್ಲದಲಾನಂದದಿಂದ ಶ್ರೀ ಶ್ರೀನಿವಾಸನ ಕುಸುಮಶರನಪಿತನ್ವಶದಲಿ ನಿಲಿಸೆ 3
--------------
ಸರಸ್ವತಿ ಬಾಯಿ
ಸಲಹಯ್ಯಾ ಲಕ್ಷೀರಮಣ ಸರುವದ ನಮ್ಮನು ನೀ ಪ ಊರೊಳಗಿರಲಿ ಊರು ಬಿಟ್ಟಿರಲಿ ದಾರಿಯ ಬಿಟ್ಟು ನಾ ಸಂಚರಿಸುತಿರಲಿ ಮಾರಮಣ ಮುರಾರಿ ನಿನ್ನಯ ಪಾದ ವಾರಿಜನ ನಂಬಿ ಸೇರಿದ ಭಕುತರ 1 ಸಿರಿಯೆನಗಿರಲಿ ಎಡರೆನಗಿರಲಿ ಮರುಳುತನವೆನಗೇ ಆವರಿಸಿರಲಿ ನರಹರಿ ನಿನ್ನಯ ಚರಣದ ಮಹಿಮೆಯ ಪರಿಪರಿಯಿಂದ ಪೊಗಳುವ ಮತಿಯಿತ್ತು 2 ದೊರೆತನ ಬರಲಿ ತಿರುಕನು ಆಗಲಿ ಬಂದೆ ಡಂಭದೊಳು ತಿರುಗುತಲಿರಲಿ ಕರಿವರದ ಶ್ರೀ ರಂಗೇಶವಿಠಲ ನಿನಮರೆಯದೆ ಹರುಷದಿ ನೆನೆವಂತೆ ಮಾಡಿ3
--------------
ರಂಗೇಶವಿಠಲದಾಸರು
ಸವಿದುಣ್ಣ ಬಾರಯ್ಯ ಸಾರಾಭೋಕ್ತಾ ಪವನಾಂತರ್ಗತ ಕಪಿಲಾತ್ಮ ನರಸಿಂಗಾ ಪ ಉಪ್ಪು ಉಪ್ಪಿನಕಾಯಿ ಪತ್ರ ಶಾಖ ಸೂಪ ಒಪ್ಪುವ ಸಂಡಿಗೆ ವ್ಯಂಜನಗಳು ಇಪ್ಪವು ನಿರುಋತಿ ಪ್ರಾಣ ಮಿತ್ರ ಶೇಷ ಸರ್ಪವೈರಿ ದಕ್ಷ ಲೋಕೇಶನಲ್ಲಿಗೆ 1 ಅನ್ನ ಮಂಡಿಗೆ ತೈಲ ಪಕ್ವಂಗಳು ಪರ ಮಾನ್ನ ಭಕ್ಷ ತುಪ್ಪ ಹುಳಿ ಪದಾರ್ಥ ಬೊಮ್ಮ ಜಯಂತರೈ ಸೂರ್ಯ ಕನ್ಯ ಲಕುಮಿದೇವಿ ಪರ್ವತ ಸುತಿ ಇರೆ2 ಕ್ಷೀರ ನವನೀತಧಿಕಾರಣಾಮ್ಲ ಚಾರು ಉದ್ದಿನ ಭಕ್ಷ ಕಟು ದ್ರವ್ಯ ಪಾ ವಾರಿಜಾಸನ ರಾಣಿ ವಾಯು ಸೋಮ ವೈರಿ ಧರ್ಮ ಸ್ವಾಯಂಭುವಂಗಳು ಅಲ್ಲಿ ಹಾಕಿರೆ 3 ಇಂಗು ಯಾಲಕ್ಕಿ ಸಾಸಿವೆಯಿಂದ ವೊಪ್ಪುತಾ ಬಂಗಾರ ಪಾತ್ರಿಯೊಳಗೆ ತಂದಿಡೆ ಸ್ವಾದೋದಕ ಇಡೆ ಅಂಗಜಾ ದುರ್ಗಿಯ ಚಂದ್ರಮಸುತನಿರೆ 4 ವೀಳ್ಯವ ಕೈಕೊಳೊ ಗಂಗಾಜನಕ ಹರಿ ಅಲ್ಲಲ್ಲಿಗೆ ನಿನ್ನ ರೂಪವುಂಟು ಬಲ್ಲಿದಾ ವಿಜಯವಿಠ್ಠಲರೇಯ ಎನಗಿದೆ ಸಲ್ಲೊದೆ ಸರಿ ಲೇಶವಾಪೇಕ್ಷದವನಲ್ಲ5
--------------
ವಿಜಯದಾಸ
ಸಾಕು ಸಾಕು ಇನ್ನು ಕಷ್ಟ ಅನೇಕಾ ಬೇಕು ಬೇಕು ನಿನ್ನ ಕರುಣ ಪ ಹಿಂದಿನಿಂದ ಎನ್ನ ಹೊಂದಿಬಂದ ದೋಷದಿಂದ ನಾನು ಬಹು ಬಳಲುತಲಿ ----------------------- ಎಂದು ಎಂದು ನಿಮ್ಮಂದ ದ್ವಯಪಾದ ಹೊಂದುವೆ ನಾನೆಂದೆನುತಲಿ----- ಬೆಂದುನೊಂದು ಈ ಚಂದದಿ ಈ ಪರಿಯಿಂದ ನಿನ್ನನಾ ಹೊಗಳುತಲಿ--- ಬೆಂದು ನೊಂದೆ ನಿನ್ನ ಮಂದಿರ ಸೇವಕನೆಂದು ಬಹಳ ಗೋವಿಂದ ಕೃಪಾಳು 1 ಘೋರ ರಾಕ್ಷಸ----ರಿದ ಅವರ ಸಂಹಾರವ ಮಾಡಿದ ಬಲವಂತ ------------------ ವೀರಶೂರ ಗಂಭೀರ ಕೃಪಾಕರ ವಾರಿಜೋದ್ಭವನ ಪಡೆದಂಥಾ ಸಾರಿಸಾರಿ ನಿಮ್ಮ ಸ್ಮರಿಸುವವರಿಗೆ ಸರ್ವ ಸಂಭ್ರಮವು ಮಾಡುವಂಥಾ ಕೀರುತಿ-----ರನು ಯನುತಲಿ ------ನಿಮ್ಮ ಸರ್ವೋತ್ತಮನಂಥಾ 2 ಗಾಧೆ ಬೋಧೆ ಗೊಳಗಾದೆ ಈ ಪರಿ ವೇದಾಂತ---ದೊಂದರಿಯೆ ಸಾಧು ಸಾಧಕರ ಬೋಧೆಗಳೆಂಬುವ ಸದಾ ಕರ್ಣದಿ ಕೇಳರಿಯೆ----ದರೆ ಮಾಧವ ಮಧುಸೂದನ ಧೊರಿಯೆ ವೇದ ಆದಿ ಅಗಾಧ ಗೋಚರನೆ ಪತಿ 'ಹೆನ್ನ ವಿಠ್ಠಲ’ ಹರಿಯೆ 3
--------------
ಹೆನ್ನೆರಂಗದಾಸರು
ಸಾಧನಕ್ಕೆ ಬಗೆಗಾಣೆನೆನ್ನಬಹುದೆ ಸಾದರದಿ ಗುರುಕರುಣ ತಾ ಪಡೆದ ಬಳಿಕ ಪ ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ ಉಂಡು ಉಟ್ಟದ್ದೆಲ್ಲ ವಿಷ್ಣು ಪೂಜೆ ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ ಹಿಂಡು ಮಾತುಗಳೆಲ್ಲ ಹರಿಯ ನಾಮ 1 ವಾಗತ್ಯಪಡುವದೆ ವಿಧಿನಿಷೇಧಾರಚರಣೆ ರೋಗಾನುಭವವೆಲ್ಲ ಉಗ್ರತಪವು ಆಗದವರಾಡಿಕೊಂಬುವುದೆ ಆರ್ಶೀವಾದ ಬೀಗುರುಪಚಾರವೇ ಭೂತದಯವು 2 ಮೈಮರೆತು ಮಲಗುವುದೆ ಧರಣಿ ನಮಸ್ಕಾರ ಕೈಮೀರಿ ಹೋದದ್ದೆ ಕೃಷ್ಣಾರ್ಪಣ ಮೈ ಮನೋವೃತ್ತಿಗಳೆ ವಿಷಯದಲಿ ವೈರಾಗ್ಯ ಹೋಯ್ಯಾಲಿತನವೆಲ್ಲ ಹರಿಯ ವಿಹಾರ 3 ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ ನಡೆದಾಡುವೋದೆಲ್ಲ ತೀರ್ಥಯಾತ್ರೆ ಬಡತನವು ಬರಲದೇ ಭಗವದ್ಭಜನೆಯೋಗ ಸಡಗರದಲ್ಲಿಪ್ಪುದೆ ಶ್ರೀಶನಾಜ್ಞಾ 4 ಬುದ್ಧಿಸಾಲದೆ ಸುಮ್ಮನಿರುವುದೇ ಸಮ್ಮತವು ಯದೃಚ್ಛಾಲಾಭವೇ ಸುಖವುಯೆನಲು ಮಧ್ವಾಂತರ್ಗತ ಶ್ರೀ ವಿಜಯವಿಠ್ಠಲರೇಯ ಹೃದ್ಗತಾರ್ಥವ ತಿಳಿದು ಒಪ್ಪಿಸಿಕೊಳನೆ 5
--------------
ವಿಜಯದಾಸ
ಸಾಧು ಸಜ್ಜನ ಸಂತರ ಸಲಹುವ ಪತಿ ಹರಿ ಯಶೋದ ನಂದನಾ ಪ ಕನಕಾಂಬರಧರ ಕಮಲಸಂಭವ ಪಿತ ಇನಕುಲ ಭೂಷಣ ವೀರಾಧಿವೀರ ಘನಮಕುಟಧರ ಶಿರ ಕಾರುಣ್ಯಸಾಗರ ಅನಿಮಿತ್ತ ಬಂಧು ಜಗದಾದಿ ಪ್ರಿಯ ದಿನಕರ ಕೋಟಿ ತೇಜ ದೇವಾದಿದೇವ ದೀನರಕ್ಷಕ ರಾಮ ಜಾನಕಿ ಪ್ರೇಮಾ ಅನಿಮಿಷ ರೊಡೆಯ ಶ್ರೀ ಆದಿನಾರಾಯಣ ಕನಿಕರಿಸಿ ಎನ್ನಮೇಲೆ ಕೃಪೆ ಮಾಡೋ ಗೋವಿಂದಾ1 ವಾಸುಕಿಶಯನ ಶ್ರೀವಸುದೇವ ತನಯಾ ಸಾಸಿರನಾಮದ ಸರ್ವೇಶಾ ಈಶಾ ವಾಸುದೇವಾಕೃಷ್ಣಾ ವಾರಿಜೋದರ ಶ್ರೀನಿವಾಸ ವೇದೋದ್ಧಾರ ವೈದೇಹಿ ರಮಣ ಭೂಸುರ ವಂದಿತ ಪೂಜಿತ ಸರ್ವತ್ರ ಶ್ರೀಶವೇಣನಾದ ಶೀತ ಜನಪೋಷಾ ಭಾಸುತ ಕೀರ್ತಿ ವಿಶಾಲ ಭಕ್ತವತ್ಸಲ ದಾಸನು ನಾ ನಿನ್ನ ದಯಮಾಡಿ ರಕ್ಷಿಸೆನ್ನ 2 ಸುಂದರ ವದನ ಸುರೇಂದ್ರ ಅರ್ಚಿತ ಪರಮಾನಂದ ಮುಕುಂದ ಮಹಾದೇವನೆ ಹೊಂದಿ ನಿಮ್ಮಯ ಚರಣದ್ವಂದ್ವ ಪೂಜಿಪ ರಂದದಿ ಪುರವಂತ ಬಿರುದುಳ್ಳ ದೇವಾ ಸಿಂಧು ಶಯನನಾದ 'ಶ್ರೀಹೆನ್ನವಿಠ್ಠಲಾ’ ಕರೆದೆನ್ನ ------------------------- ------ ಎನ್ನನ್ನು ಕರುಣಿಸು ಕಾಯೋ
--------------
ಹೆನ್ನೆರಂಗದಾಸರು
ಸಾರಸಾಕ್ಷಿ ಬಾ ಬಾ ಬೇಗ ಸಾರಿ ನೀಂ ಪ. ಭೇರಿತಮ್ಮಟಾದಿ ಭಾರಿವಾದ್ಯಂಗಳು ಭೋರ್ಗರೆಯುತ್ತಿರಲು ನಾರಿ ನಿನ್ನ ಕಾಣಲು ಅ.ಪ. ಭಾವಜಾದಿ ಜನನೀ ಭಾರ್ಗವೀ ಕಲ್ಯಾಣಿ ದೇವದೇವನ ರಾಣೀ ಶ್ರೀಮತೀ ಪದ್ಮಿನೀ 1 ಕ್ಷೀರವಾರಿಧಿಜಾತೆ ಮಾರವೈರಿವಿನುತೆ ವಾರಿಜಾಸನ ಮಾತೆ ಸಾರಿ ಬಾ ಸುಪ್ರಿತೇ 2 ಶೇಷಶೈಲನಿಲಯೆ ವಾಸವಾದಿಗೇಯೆ ವಾಸುದೇವಜಾಯೇ ವಸುಮತೀ ತನಯೇ3
--------------
ನಂಜನಗೂಡು ತಿರುಮಲಾಂಬಾ
ಸಾರಸಾಕ್ಷಿ ಬಾ ಬಾ ಬೇಗ ಸಾರಿ ನೀಂಪ. ಸಾರಸಾಕ್ಷಿ ಬೇಗ ಚಾರುಪೀಠಕೀಗ ಅ.ಪ. ಭೇರಿ ತಮ್ಮಟಾದಿ ಭಾರಿವಾದ್ಯಂಗಳೂ ಭೊರ್ಗರೆಯುತಿರಲು ನೀರೆ ನೀ ಭರದೊಳು 1 ಭಾರ್ಗವಿ ಕಲ್ಯಾಣಿ ದೇವದೇವನರಾಣಿ ಶ್ರೀಮತೀ ಪದ್ಮಿನಿ2 ಕ್ಷೀರವಾರಿಧಿಜಾತೆ ಮಾರವೈರಿವಿನುತೆ ವಾರಿಜಾಸನ ಮಾತೆ ಸಾರಿ ಬಾ ಪ್ರಖ್ಯಾತೆ 3 ಶೇಷಶೈಲನಿಲಯೆ ವಾಸವಾದಿಗೇಯೆ ವಾಸುದೇವಜಾಯೆ ವಸುಮತೀ ತನಯೆ 4
--------------
ನಂಜನಗೂಡು ತಿರುಮಲಾಂಬಾ
ಸಿಂದೂರಗಮನೆ ಸಾರೆ ಮಲಗಿರುವನ್ಯಾರೆ ಪ ಸಂದರೀ ಮಂದಿರದೊಳಿವನ್ಯಾರೆ ಸೌಂದರ್ಯದ ಮ್ಯಾರೆ ಛಂದದಲಿ ನೀ ಸಾರೆ ಇಂದು ನಭದಲಿ ಚರಿಸುತಲಿ ಮನ ನೊಂದು ಬೇಸರದಿಂದ ಇಲ್ಲಿಗೆ ಬಂದು ಮಲಗಿಹನೇನೆ ಸುಖದಿ 1 ಶೀಲೆ ನೋಡಿವನ ಮುಖಕಮಲ ಸಂಗರದೊಳತಿ ಚಟುಲ ಸುವಿಶಾಲ ಭುಜಯುಗಲ ಶ್ರೀ ಲಕುಮಿವರ ಪಾಲ ನಯನ ಮರಾಳ ಧ್ವಜರೊಳ ಗಾವನೊ ಇವ ಪೇಳುವದು ಕೀಲಾಲಜಾಂಬಕಿ2 ನಾರಿ ಮಾತನಾಡಿಸೇ ಇವನ ಮನ ಮೋಹದವರನ ಕಮನೀಯ ಗುಣಯುತನ ವಾರಿಜಾಸನ ಮುಖ್ಯ ಸುರಪರಿವಾರ ಸೇವಿಯ ಕೊಳುವ ಕಾರ್ಪರನಾರಸಿಂಹನೆ ಪವಡಿಸಿಹನೆ 3
--------------
ಕಾರ್ಪರ ನರಹರಿದಾಸರು
ಸಿರಿ ಮನುಜಕೇಸರಿ ಧರಣಿ ಸುಮನಸಗೇಯ | ಮೊರೆಹೊಕ್ಕೆ ನಿನ್ನನು ತರಣಿ ಸನ್ನಿಭಗಾತ್ರ | ಕೀರಾಬ್ಧಿಶಯ್ಯ ಪ ಸರಸಿಜಾನನ ನಜಕ ತವಪದ ಮರೆದ ಪಾಮರನಾಗಿ ನಾ ಭವ ಶರಧಿಯೊಳು ಬಿದ್ದು ಪರಿದು ಪೋಗುವೆ ಎರಗರಿಪುಧ್ವಜನಾಗಿ ನೀ ಬಂದು ಸೂನು | ಸರ್ವೇಶ ರಾಘವ ಭಜಕಜನ ಸುರಧೇನು | ಸ್ವರತ ಸುಖಮಯ ಸುಜನ ವಾರಿಜ ಭಾನು ಖಳವನ ಕೃಶಾನು ತ್ರಿಜಗ ಪೋಷಕ ಪರಮ ಸುಲಭ ನೀ ನಿಜದಯದಿ ಹರಿಮದವ ಖಂಡ್ರಿಸಿ ವೃಜದ ತುರುಗಳ ಕಾಯ್ದ ಸಜನುತ ದ್ವಿಜಪ ಸುತೆ ಪತಿಧ್ವಜನ ಸುತನೆ 1 ಪತಿತ ಪಾವನ ರಂಗ | ಸಂತತದಿ ನಿನ್ನನು ಸ್ತುತಿಪ ಸುಜನರ ಸಂಗ | ನೀನಿತ್ತು ಪಾಲಿಸು ದಿಜ ತತಿ ಮಾತಂಕ ಮರಿಗಳಿಗೆ ಸಿಂಗ ಸಿತ ತುರಂಗನ ರಥದಿ ಶೋಭಿಪ ಅತುಳ ಮಹಿಮನ ಜನನಿ ಅನುಜನಿಗೆ ಹಿತದಿ ಭ್ರಾತದಿ ಭೀತಿ ಬಿಡಿಸಿದ ಶೃತಿಗೆ ನಿಲುಲದ ಚ್ಯುತ ವಿದೂರನೆ 2 ಸಾಮಗಾನ ವಿಲೋಲ ಸುರರಾಜ ಪೂಜಿತ ಕಾಲ | ಕರಿದನುಜ ಹರನುತ ಸ್ವಾಮಿ ಶ್ರೀವನಮಾಲಧರ ಸುಗುಣಶೀಲ ಕಾಮಪಿತ ಹಿಮಧಾಮ ವದನ ಸು ಧಾಮಸಖ ಸುರಸ್ತೋಮ ವಂದಿತ ಯಾಮಿನೀ ಚರವೈರಿ ವಾಮನ ಶ್ರೀಮನೋಹರ ಶಾಮಸುಂದರ 3
--------------
ಶಾಮಸುಂದರ ವಿಠಲ
ಸಿರಿದೇವಿ ವರಬೇಗ ಕರುಣಿಸೊ ದಯದಿಂದ ಶರಣಾಗತ ಪರಿಪಾಲನೆಂಬಿ ಘನ ಬಿರುದಿಹದೊರೆ ನರಹರಿಕರುಣಾಕರ ಪ. ಕರಿರಾಜ ಮೊರೆಯಿಡುವ ಸ್ವರವ ಕೇಳುತಲಂದು ಸಿರಿಯೊಳಗುಸುರದೆ ಗರುಡನ ಪೆಗಲೇರಿ ಸರಸಿ ತಡಿಗೆ ಬಂದು ಕರಿಯನುದ್ಧರಿಸಿದಿ 1 ಘೋರ ಕಿಂಕರರಿದಿರು ಸಾರೆಜಾಮಿಳ ಭಯದಿ ನಾರಾಯಣನೆಂದು ಬೇಡಿದ ಮಾತ್ರದಿ ವಾರಿಜಭವಪಿತ ಪಾರಗಾಣಿಸಿದಿ 2 ತರಳ ಪ್ರಹ್ಲಾದನನು ಹಿರಣ್ಯಕನು ಬಾಧಿಸಲು ಹರಿ ನೀನೆ ಗತಿಯೆನುತಿರೆ ಕಂಭದಿ ಇರವ ತೋರಿ ಬಹು ಪರಿಯಲಿ ಸಲಹಿದಿ 3 ದುರುಳ ಸೀರೆಯ ಸೆಳೆಯೆ ಹರಿಕೃಷ್ಣ ಸಲಹೆನೆ ಸೀರೆಯ ಮಳೆ ಗರದಂದದಲಿತ್ತು ಪರಿಪಾಲಿಸಿದೆ 4 ಎನ್ನ ದುಷ್ಕøತದಿಂದ ನಿನ್ನ ನಾಮದ ಮಹಿಮೆ ಭಿನ್ನವಾಗುವದೆ ನಿನ್ನ ಪದಾಂಬುಜ ವನ್ನು ನಂಬಿದ ಮೇಲಿನ್ನುದಾಸೀನವೆ 5 ಪಾಕಶಾಸನನಘವ ನೀಕರಿಸಿ ಸಲಹಿದನೆ ಭೀಕರವಾಗದೆ ಸಾಕು ಸಾನುಭವ ಕೃಪಣ ದಯಾಕರ ಮೂರುತಿ 6 ಒಳಗೆ ನೀ ತಳಿಸುತಲಿ ಗಳಿಸಿ ಪಾಪಗಳೆನಗೆ ತಳಮಳಗೊಳಿಸುತ ಬಳಲಿಪದುಚಿತವೆ ಉಳುಹಿನ್ನಾದರು ನಳಿನನಾಭ ಹರಿ 7 ಬಡವ ಮಾನವನೊಬ್ಬ ಪಡೆಯ ತನ್ನವರನ್ನು ಕೆಡಲು ಬಿಡನು ಜಗದೊಡೆಯ ನೀ ಎನಗಿರೆ ತಡವ ಮಾಡಿ ಕಂಡ ಕಡೆಯಲಿ ಬಿಡುವುದೆ 8 ನಿನ್ನ ಕಥಾಮೃತಸಾರವನ್ನೆ ಶಿರದಿ ಧರಿಸಿ ಇನ್ನು ಬಳಲಿದರೆ ನಿನ್ನ ಘನತೆಗಿದು ಚೆನ್ನಾಗುವುದೆ ಪ್ರಸನ್ನ ಮುಖಾಂಬುಜ 9 ಮಾನಾಮಾನವ ತೊರೆದು ನಾನಾ ದೇಶದಿ ತಿರಿದು ಶ್ರೀನಿವಾಸ ನಿನ್ನಾನನ ದರುಶನ- ವನು ಮಾಡಿದ ಮೇಲೇನಿದು ತಾತ್ಸಾರ 10 ಆಶಾಪಾಶವ ಬಿಡಿಸಿ ಮನದಾಸೆಗಳ ಪೂರೈಸಿ ದಾಸದಾಸನೆಂಬೀ ಸೌಖ್ಯವನಿತ್ತು ಪೋಷಿಸು ಶೇಷಗಿರೀಶನೆ ತವಕದಿ 11
--------------
ತುಪಾಕಿ ವೆಂಕಟರಮಣಾಚಾರ್ಯ
ಸೀತೆ ಸದ್ಗುಣ ಗಣಗಳ ವ್ರಾತೇ ಪರಿಪಾಲಿಸು ಮಾತೇ ಪ ವಾತ ಜನನಿ ನಿರ್ಧೂತ ಕಲ್ಮಷೇ ಅ.ಪ. ನೀರೋಳು ಓಲ್ಯಾಡುತ ಹರಿ ಬರಲೂ | ವೇದಾಭಿಧೆ ಇರಲೂವಾರಿಜಾಕ್ಷನು ಭಾರವನ್ಹೊರಲೂ | ವೇದವತಿ ನೀನಿರಲುಭೂರಿ ವರಹ ರೂಪವ ಕೊಳ್ಳಲು | ಧಾತ್ರಿ ರೂಪಿ ಇರಲುಸಾರಸಾಕ್ಷಿ ನೀ ಲಕುಮಿ ರೂಪದಲಿ | ನಾರಸಿಂಹನನ ಆರಾಧಿಸಿದೇ 1 ಬಲಿಯನ್ನು ವಂಚಿಸಿ ಹರಿ ಬಂದೂ | ಸುಖಾಭಿಧೆಯಂದೂತಲೆಯ ಗಡಿಕಾನು ಅವನೆಂದು | ಹರಿಣಿಯಾದೆ ಅಂದೂತಲೆ ಹತ್ತರವನ ಅಳಿಯಲು ಬಂದು | ಜನಕಾತ್ಮಜೆ ಅಂದೂಕಳುವಿನಿಂದಪಾಲ್ ಬೆಣ್ಣೆಯಮೆಲ್ಲುವ |ಗೊಲ್ಲನ ವಲಿಸಿದಿ ಚೆಲ್ವ ರುಕ್ಮಣೀ 2 ತ್ರಿಪುರರ ವ್ರತವನಳಿದವಗೇ | ವಲ್ಲಭೆ ದೇವತಿಯಾಗೇಸುಫಲಾ ರಾವುತನಾದವನಿಗೇ | ರಾಣಿ ಪ್ರಭಾ ಆಗೇವಿಪುಳ ರೂಪಗಳ ತೋರ್ದವಗೇ | ವಿಪುಳ ರೂಪಿಯಾಗೇಚಪಲಾಕ್ಷಿಯೆ ಗುರು ಗೋವಿಂದ ವಿಠಲನ | ಸಫಲಗೈಸು ಮಮ ಹೃತ್ಕಮಲದಲಿ 3
--------------
ಗುರುಗೋವಿಂದವಿಠಲರು
ಸುಕೃತ ವಮ್ಮರಂಗನ ಕಾಂತೆಯರದಮ್ಮಅನಂತ ದೇಶಗಳು ಇವನಂತ ತಿಳಿಯವುಈ ಕಾಂತೆಯರುಒಲಿದರೆಂತು ಪೇಳಮ್ಮ ಪ. ಪಟ್ಟಾವಳಿ ಕೊಟ್ಟರು ರಂಗಗೆ ಇಟ್ಟರು ದಿವ್ಯ ಮುಕುಟವಇಟ್ಟರು ದಿವ್ಯ ಮುಕುಟ ಮುತ್ತಿನಹಾರ ಗಟ್ಟಿ ಕಂಕಣದ ಕೆಲದೆಯರು1 ಕೇಶರ ಬೆರೆಸಿದ ಮೀಸಲ ಶ್ರೀಗಂಧವಶ್ರೀಶನ ಸತಿಯರು ಹಿಡಕೊಂಡುಶ್ರೀಶನ ಸತಿಯರು ಹಿಡಕೊಂಡುರಂಗಗೆ ಲೇಪಿಸೆವೆಂಬೊ ಭರದಿಂದ2 ಸಾರ ತುಳಸಿಯು ಬೆರೆದ ಪಾರಿಜಾತದ ಮಾಲೆವಾರಿಜ ಮುಖಿಯರು ಹಿಡಕೊಂಡವಾರಿಜ ಮುಖಿಯರು ಹಿಡಕೊಂಡುರಂಗಗೆ ಏರಿಸೆವೆಂಬೊ ಭರದಿಂದ3 ಪಚ್ಚಮಾಣಿಕ ಬಿಗಿದ ಹೆಚ್ಚಿನ ಸರಗಳುಮಚ್ಛನೇತ್ರಿಯರು ಹಿಡಕೊಂಡುಮಚ್ಛನೇತ್ರಿಯರು ಹಿಡಕೊಂಡುರಂಗಗೆ ಏರಿಸೆವೆಂಬೊ ಭರದಿಂದ4 ಕೊರಳಲಿ ಸರಮಾಲೆ ಅರಳಿದ ಮುಖ ಕಮಲಎರಳೆ ನೋಟದಲಿ ಚಲುವನಎರಳೆ ನೋಟದಲಿ ಚಲುವ ಚನ್ನಿಗರಾಯನ ತರುವಳಿನೋಡಿ ಹರುಷಾಗಿ 5 ಹಸ್ತದಿ ಹಣಿಮ್ಯಾಲೆ ಕಸ್ತೂರಿ ಬಟ್ಟಿಟ್ಟುಉತ್ತಮ ತಿಲಕ ರಚಿಸುತಉತ್ತಮ ತಿಲಕ ರಚಿಸುತರಂಗನ ಹತ್ತಿರ ನಿಂತ ಕೆಲವರು6 ಇನ್ನೋರ್ವಳು ಬಂದು ಕನ್ನಡಿ ತೋರುತಕರ್ಣ ಕುಂಡಲವ ಸರಿಸುತಕರ್ಣ ಕುಂಡಲವ ಸರಿಸುತ ರಾಮೇಶನ ಚನ್ನಾಗಿ ನೋಡಿ ಸುಖಿಸುತ 7
--------------
ಗಲಗಲಿಅವ್ವನವರು