ಒಟ್ಟು 1764 ಕಡೆಗಳಲ್ಲಿ , 104 ದಾಸರು , 1291 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುನಾಮ ಸ್ಮರಿಸಿರೊ ಶ್ರೀಗುರುನಾಮ ಸುರುಮುನಿಜರ ಪ್ರಿಯವಾದ ನಾಮ ದ್ರುವ ಬ್ರಹ್ಮ ವಿಷ್ಣುರುದ್ರರಿಗಿದೆ ನಿಜನಾಮ ಪ್ರೇಮದಿಂದ ಸ್ಮರಿಸುವರು ಇದೆ ನಾಮ ಸಮಸ್ತ ಲೋಕಕ್ಕೆ ಸಾರವಾದ ನಾಮ ನೇಮದಿಂದ ತಾರಿಸುವ ದಿವ್ಯನಾಮ 1 ಸಕಲಾಗಮ ಪೂಜಿತರಿದೆ ನಾಮ ಏಕೋಮಯವಾಗಿ ದೋರುವದಿದೆನಾಮ ಶುಕವಾಮ ದೇವರಿಗಿದೆ ನಿಜ ನಾಮ ಸುಖ ಸರ್ವರಿಗೆ ದೋರುವ ಗುರುನಾಮ 2 ಕರ್ಮಬಂಧನ ಛೇದಿಸುವದಿದೆ ನಾಮ ಕರ್ಮದೋರಿ ಕೊಡುವದೀ ಗುರುನಾಮ ಬ್ರಹ್ಮಾನಂದ ಸುಖದೊರುವಾನಂದ ನಾಮ ಧರ್ಮ ಜಾಗಿಸಿಕೊಡುವದೀ ಗುರುನಾಮ 3 ಅಜಮಿಳಗೆ ತಾರಿಸಿದಿದೇ ನಾಮ ಗಜಭಯ ಪರಿಹರಿಸಿದಿದೆ ನಾಮ ಸುಜನರಿಗೆ ಸುಪ್ರಸನ್ನವಾದ ನಾಮ ಮೂಜಗಕೆ ತಾಮುಖ್ಯವಾದ ಗುರುನಾಮ 4 ಅಹಲ್ಯ ಉದ್ಧರಣ ಮಾಡಿದುದಿದೆ ನಾಮ ಪ್ರಲ್ಹಾದÀನ ಪ್ರಾಣಗಾಯಿದಿದೆ ನಾಮ ಫಲುಗುಣ ತಾ ಪಕ್ಷವಾದದುದಿದೆ ನಾಮ ಒಲಿದು ಧ್ರುವಗಥಳವಿತ್ತ ಗುರುನಾಮ 5 ಅಗಣಿತ ಗುಣ ಪರಿಪೂರ್ಣವಾದ ನಾಮ ಸುಗಮ ಸುಪಥಸಾಧನ ಇದೆ ನಾಮ ಯೋಜನ ಸೇವಿಸುವ ನಿಜನಾಮ ನಿರ್ಗುಣಾನಂದವಾಗಿಹ್ಯ ಗುರುನಾಮ6 ಸೂರ್ಯಚಂದ್ರ ಸಮಸ್ತವಂದ್ಯ ಇದೆ ನಾಮ ಕಾರ್ಯಕಾರಣವಾಗಿಹ್ಯ ವಿದೆ ನಾಮ ತೂರ್ಯಾವಸ್ಥೆ ಯೊಳಗೆ ಸೂರಿಗೊಂಬು ನಾಮ ತರಳಮಹಿಪತಿ ತಾರಕ ಗುರುನಾಮ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುನಿಕರÀ ಸಂಸೇವ್ಯ ಸತಿಪತಿಯ ಬಿಂಬ ಪ ಪರಮ ಪಾವನ ನಾಮ ಪಾಹಿ ಪಾಹೀ ಎನ್ನ ಅ.ಪ ಪತಿತಪಾವನ ಪರಮಗತಿ ನೀನು ಸರ್ವಸ್ವ ಸತತ ತತ್ವದ ಪಾಲಿಸು ಎನ್ನ ಶಿರದಿ ಹಿತದಿಂದ ನೆಲಸಿರಲಿ ಹರಿದಾಸ್ಯ ಕೊಟ್ಟೆನಗೆ ರತಿ ಬಿಡಿಸು ವಿಷಯದಲಿ ಮನ ನಿನ್ನ ಬಿಡದಿರಲಿ 1 ನಿನ್ನ ಕ್ರಿಯ ಗುಣರೂಪ ನಿನ್ನ ತಿಳಿಯದೆ ನಡೆದೆ ಘನ್ನಭಾವವ ನೀಡು ಪೂರ್ಣದಯದಿ ಅನ್ಯವೆಂದಿಗು ಒಲ್ಲೆ ಅನ್ನನೀಯನಗಾಗು ಪೂರ್ಣಪ್ರಜ್ಞರ ದೈವ ಪನ್ನಗಾದ್ರಿನಿಲಯ 2 ಲಕ್ಷ್ಮೀನಿಲಯ ಜಯೇಶವಿಠಲನೆ ವಿಧಿವಂದ್ಯ ಲಕ್ಷ್ಯನಿನ್ನಲಿ ನೆಲಸು ಸತತ ಬಿಡದೆ ಪೃಷ್ಯೇಶ ತವ ಕರುಣ ಬಂದು ಎನ್ನೊಳು ಬೀಳೆ ಭವ ಹಿಂಗಿ ಮೋಕ್ಷಸುಖ ಕರಗತವೊ 3
--------------
ಜಯೇಶವಿಠಲ
ಗುರುಭಕುತಿಯಲಿ ಮನವಸ್ಥಿರವ ಗೊಳ್ಳಲಿಬೇಕು ಅರತು ಸದ್ಭಾವದಲಿ ದೃಢಗೊಳ್ಳಬೇಕು ಧ್ರುವ ನಿಶ್ಚಯವಿಡಬೇಕು ದುಶ್ಚಲವ ಬಿಡಬೇಕು ನಿಶ್ಚಿಂತದಲಿ ನಿಜಸುಖ ಪಡೆಯಬೇಕು 1 ನಂಬಿನಡಿಯಬೇಕು ಡಂಭಕವ ಬಿಡಬೇಕು ಹಂಬಲಿಸಿ ಅಂಬುಜಾಕ್ಷನ ನೋಡಬೇಕು 2 ವಿಶ್ವಾಸವಿಡಬೇಕು ವಿಷಗುಣವ ಬಿಡಬೇಕು ವಿಶ್ವವ್ಯಾಪಕನ ವಿಶ್ವದಿ ನೋಡಬೇಕು 3 ರತಿ ಪ್ರೇಮ ಬಿಡಬೇಕು ಅತಿ ಹರುಷ ಪಡಬೇಕು ಸ್ತುತಿಸ್ತವನವನು ಪಾಡಿಗತಿ ಪಡೆಯಬೇಕು 4 ಆರು ಜರಿಯಬೇಕು ಮೂರು ಹರಿಯಬೇಕು ಅರಿತು ಗುರುಪಾದ ಮಹಿಪತಿಬೆರೆಯಬೇಕು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುರಾಜಾ ಗುರು ಸಾರ್ವಭೌಮ ಪ ಗುರುರಾಜಾ ಗುರಸಾರ್ವಭೌಮ ನಿನ್ನಯ ಪಾದ ಸರಸಿಜಯುಗಕಭಿ ನಮಿಸುವೇ ಅ.ಪ ಕರುಣ ಸಾಗರನೆಂದು ಚರಣವ ನಂಬಿದೆ ಶರಣನ ಪಾಲಿಸು ಕರುಣಿಯೇ 1 ಅನ್ಯರ ಭಜಿಸದೆ ನಿನ್ನನ್ನೆ ಭಜಿಸುವೆ ಎನ್ನ ಮರೆವೊದಿದು ನ್ಯಾಯವೇ 2 ಪರಮ ಪುರುಷನೆ ನಿನ್ನನು ಚರನೆನಿಸಿ ಧರೆಯೋಳು ನರರÀನ್ನ ಬೇಡೊದು ಘನತೆಯೆ 3 ಸುರನು ಮನೆಯಲ್ಲಿ ಸ್ಥಿರವಾಗಿ ಇರಲಿನು ತಿರಕ ತಕ್ರಕೆ ಬಾಯಿ ತೆರೆವೋರೇ 4 ಬೇಡಿದ ಮನೋರಥ ನೀಡುವ - ನೀನಿರೆ ಬೇಡೆನೆ ನರರನ್ನ ನೀಡೆಂದೂ 5 ಸಂತತ ಎನ ಕಾರ್ಯ ವಂತರಿಲ್ಲದೆ ನೀ - ನಿಂತು ಮಾಡುವದು ಪುಶಿಯಲ್ಲ 6 ಕಾಲಕ್ಕೆ ಸುಖದುಃಖ - ಮೇಲಾಗಿ ಬರುತಿರೆ ಪೇಳಿ ಎನ್ನನು ನೀ ಪಾಲಿಸುವಿ 7 ನಿನ್ನ ಸೇವಿಪರಿಗೆ ಇನ್ನುಂಟೆ ಭಯ ಶೋಕ ಉನ್ನತ ಸುಖದೊಳಗಿರುವರೋ 8 ಭವ ಬನ್ನ ಬಡುವದಿದು ಎನ್ನಪರಾಧವದೇನಯ್ಯಾ 9 ಕುಚ್ಛಿತ ಜನರನ್ನ - ತುಚ್ಛ ಮಾಡದÀಲವರ ಇಚ್ಛೆಕಾರ್ಯವ ಮಾಡಿ ಸಲಿಸುವಿ 10 ಜನನಿ ಪುತ್ರಗೆ ವಿಷsÀ - ವಿನಯದಿ ನೀಡಲು ಜನಕ ತನಯನ ತಾ ಮಾರಲು 11 ವಸುಧೀಶ ವೃತ್ತಿಯ - ಕಸಕೊಂಡ ವಾರ್ತೆಯ ವ್ಯಸನದಿ ಆರಿಗೆ ಉಸರೋದೋ12 ಇದರಂತೆ ನೀ ಮಾಡು - ವದು ಏನು ನ್ಯಾಯವೊ ಪದುಮನಾಭನ ಪ್ರಿಯ ಗುರುರಾಯ 13 ಮೂಕ ಬಧಿರ ಕುರುಡಾ - ನೇಕ ಜನಕೆ ಕಾರ್ಯವಿ - ವೇಕ ಮಾಡಿ ನೀ ಸಲಹಿದಿ 14 ಬಂದು ಬೇಡಿದ - ಮಹ - ವಂಧ್ಯಜನರಿಗೆ ಸು - ಕಂದರ ನೀನಿತ್ತು ಸಲಹುವೀ 15 ಭೂತಾದಿ ಬಾಧವ - ನೀತರಿದು ಸುಖಗಳ ವ್ರಾತವ ಸಲಿಸೀ ಪಾಲಿಸುವಿ 16 ಹಿಂದಿನ ಮಹಿಮ - ದಿಂದೇನು ಎನಗಯ್ಯ ಇಂದು ಮಹಾ ಮಹಿಮೆ - ತೋರಿಸೋ 17 ಯಾತಕೆ ಈ ತೆರ ಮಾಡಿದೀ 18 ಎಲ್ಲೆಲ್ಲಿ ನಾ ಪೋದ - ರಲ್ಲಲ್ಲೆ ನೀ ಬಂದು ಎಲ್ಲ ಕಾರ್ಯಗಳನ್ನು ಮಾಡಿದೀ 19 ಇತರರಿಗಸಾಧ್ಯ ಅತಿಶಯ ಚರ್ಯವ ಯತನಿಲ್ಲದಲೆ ನೀ ಮಾಡಿದಿ 20 ಪೇಳಲೆನ್ನೋಶವಲ್ಲ ಭಾಳ - ನಿನ್ನಯ ಚರ್ಯ ಕೀಳುಮಾನವ ನಾ ಬಲ್ಲೇನೆ 21 ಜ್ಞಾನಿಗಳರಸನೆ ಮೌನಿ ಶಿರೋಮಣಿ ಧ್ಯಾನವ ಸಂತತ ನೀಡಯ್ಯಾ 22 ಸಂತತ ಎನ ಮನೊ - ಅಂತರದಲಿ ನೀ ನಿಂತು ಪಾಲಿಸೊ ಎನ್ನ ಮಹರಾಯಾ 23 ಎಂತೆಂಥ ಭಯ - ಬರೆ - ನಿಂತು ತಳೆದ್ಯೊ ದಯ - ವಂತ ನಿನಗೆಣೆಗಾಣೆನಯ್ಯಾ 24 ನಿನ್ನಲ್ಲಿ ಹರಿ ದಯ - ಉನ್ನತ ಇರಲಿನ್ನು ಎನ್ನಲ್ಲಿ ನಿನ ದಯ ಇರಲಯ್ಯ 25 ದಾತಗುರು ಜಗನ್ನಾಥ ವಿಠಲ ನಿನ್ನ ಮಾತು ಲಾಲಿಸಿದಂತೆ ಪೊರೆ ಎನ್ನಾ 26
--------------
ಗುರುಜಗನ್ನಾಥದಾಸರು
ಗುರುವಿಗೆರಗೀ ತರಣೋಪಾಯವನರಿಯಲಿಲ್ಲಾ ಮನವೇ | ಮರುಳನೋ ತರಳನೋ ಬಲು ದುರುಳನು ನಾನರಿಯೇ ಪ ಶ್ರೀನಾಥನಂಘ್ರಿ ಕಮಲಾ ಧ್ಯಾನವಿಲ್ಲ ಮನವೇ | ಮಾನವನಫ ದಾನವನೋ ನೀದನವೇನೋ ನಾನರಿಯೇ 1 ರತಿಯ ಬಿಟ್ಟು ವಿಷಯದಲ್ಲಿ ಗತಿಯಾ ಜರದೀ ಮನವೇ | ಹಿತವೇನೋ ಮಿತವೇನೋ ಉನ್ಮತವೇನೋ ನಾನರಿಯೇ 2 ಪೊಡವಿಯೊಳು ನರದೇಹವ ವಿಡಿದು ಬಂದೆ ಮನವೇ | ನಡಿದೇನೋ ನುಡಿದೇನೋ ಸುಖಪಡಿದೇನೋ ನಾನರಿಯೆ 3 ಭಕ್ತಿ ಜ್ಞಾನಾ ಬಲಿವಾ ಸುವಿರಕ್ತಿ ಇಲ್ಲಾ ಮನವೇ | ಸಕ್ತನೋ ಯುಕ್ತನೋ ಆಯುಕ್ತನೋ ನಾನರಿಯೆ 4 ಗುರು ಮಹಿಪತಿ ಪ್ರಭು ಶರಣರ ಕಾಯ್ದಾ ಮನವೇ | ನರವರನೋ ಸುರವರನೋ ಕಲ್ಪತರು ವರನೋ ನಾನರಿಯೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವೆ ಸಂಸಾರವಿದು ಸ್ಥಿರವೇ ಬರಿದೆ ನಾ ಮೆರೆವೆ ಧರವೇ ವಿಷಯಂಗಳಲಿ ವಿಶ್ವಾಸಾ ವಿರಕ್ತಿಗೆ ಮೋಸಾ ಎಲ್ಲ ಉಪಾಧಿಯೊಳು ಸುಖವಿಲ್ಲ ಅನುಭವಿ ತಾಂ ಬಲ್ಲ ಈ ನುಡಿ ಪುಸಿಯಲ್ಲ ಗುರುವೆ ಆಗ ಈಗೆಂಬ ಶರೀರದ ಭೋಗ ತೀರಿಸಿಕೊಂಡು ಹೋಗಬೇಕೆಂಬ ಚಿಂತೆ ಎನಗೆ ಮುಕ್ತಿಯಮನೆಗೆ ಗುರುವೆ 1 ಆಶಾಪಾಶದಲಿ ಶರೀರದ ಘಾಸಿಯಾಗದಂತೆ ಪ್ರ ನಿನ್ನಂತೆ ಮಾಡೊ ಗುರುವೆ 2 ಹಣವೆ ಮುಂದಿಲ್ಲ ಕೊಟ್ಟ ಋಣವೇ ತೀರಿಸಲಿಕ್ಕೆ ನಾ ಬೆಳಗೆ ಗುರುವೆ 3 ನಿನಗೆ ಎಣೆಯಾದ ವಸ್ತÀು ಎನಗೆ ಸಿಕ್ಕುವುದುಂಟೇ ಬಾರಯ್ಯ ಬಲು ಕೃಪೆಯಿಂದ ಗುರು ವಿಮಲಾನಂದಾ ಗುರುವೆ 4
--------------
ಭಟಕಳ ಅಪ್ಪಯ್ಯ
ಗುರುವೆನ್ನ ತಾಯಿ ಸದ್ಗುರುವೆನ್ನ ತಂದೆ ಗುರುಕೃಪೆ ಪಡೆದು ನಾ ಹೆಸರಿಗೆ ಬಂದೆ ಪ ಗುರುವೆನ್ನ ಪ್ರಾಣಲಿಂಗಾ ಗುರುವೆನ್ನ ಇಷ್ಟಲಿಂಗಾ ಗುರುಪ್ರಕಾಶವು ಬೆಳಗುತಿರೆ ಸರ್ವಾಂಗಾ ಗುರುಸ್ಮರಣೆ ಸುಖರಂಗಾ ಗುರುಕರುಣಾ ಕೃಪಾಂಗಾ ಗುರುವಿಂದಧಿಕ ಕಾಣೆ ಶಿವನಾಣೆ ಗುರುವೆನ್ನ 1 ಗುರುವೆ ಈ ಪೃಥವಿಯು ಗುರುವೆ ಆಕಾಶವು ಗುರುವೆ ಸ್ಥಾವರ ಜಂಗಮವೆಲ್ಲವು ಗುರುರೂಪವೆಂದು ಶ್ರೀ ಗುರು ಕರುಣದಂದರಿತು ಗುರು ಸರ್ವರಿಗೆ ಸರಿಯಲ್ಲಾ ಶಿವಬಲ್ಲ 2 ಗುರುವೆ ದೇವಾಂಗಾ ಶ್ರೀ ಗುರುವೆ ಬಸವಲಿಂಗಾ ಗುರು ಬ್ರಹ್ಮವಿಷ್ಣುರುದ್ರ ಸ್ವರೂಪ ಗುರು ಧರಣಿಪಾಲಾ ಗುರು ವಿಮಲಾನಂದ ಲೋಲಾ ಗುರು ಸಿದ್ಧೇಶ್ವರಸ್ವಾಮಿ ಭಕ್ತ ಪ್ರೇಮಿ 3
--------------
ಭಟಕಳ ಅಪ್ಪಯ್ಯ
ಗುರುವೇ ಸುರತರುವೇ ಹರಿಭಕ್ತಾಗ್ರೇಸರ ವಿಜಯರಾಯ ಪ ಪುರಂದರದಾಸರ ಕರುಣಕೆ ಪಾತ್ರನೆ ಮರುತ ಮತಾಬ್ಧಿಗೆ ಚಂದ್ರ ವಿಜಯರಾಯ ಅ.ಪ ವಿಷ್ಣು ಬ್ರಹ್ಮ ಶಿವರನುಪರೀಕ್ಷಿಸುತು ತ್ಕøಷ್ಟ ಹರಿಯೆನುತ ಶಿಷ್ಟರಿಗರುಹಿದ 1 ಜನುಮ ಜನುಮದಿಂದನುಸರಿಸುತಿಹ ಘನದುರಿತವ ದರುಶನ ಮಾತ್ರ ಕಳೆವ2 ಗುರುರಾಮ ವಿಠಲನ ಚರಣವ ತೋರಿಸು 3
--------------
ಗುರುರಾಮವಿಠಲ
ಗುರುಸ್ತುತಿ ಗುರುಗಳ ಕರುಣವಿದು ಇರುಳು ಹಗಲು ಹರಿಸ್ಮರಣೆಯೊಳಿರುವದು ಪ ಕಲಿಯುಗ ಒದಗಿತಲ್ಲ | ವಿಷಯದಿ ಚಲಿಸಿತು ಮನವೆಲ್ಲ ಇಳೆಯೊಳು ಹಿರಿಯರಿಲ್ಲ ನೆರೆಜನ ಖಳರು ಸಜ್ಜನರಲ್ಲ 1 ವೇದ ಓದುಗಳಿಲ್ಲ ಸುಮ್ಮನೆ ಕಾದಿ ಕಳೆವರು ಕಂಡ್ಹಾಗೆ ಮೋದತೀರ್ಥರ ಮತ ಇದರೊಳು ಓದಿ ಪೇಳುವರಿಲ್ಲ 2 ಮೋಸ ಪೋಗದ ಹಾಗೆ ಹರಿಪದ ದಾಸ್ಯವ ಬಿಡದಾಗೆ ವಾಸುದೇವವಿಠಲನ್ನೆ ಕರುಣದಿ ವಾಸರ ಕಳೆಯುವನೋ | ನಮ್ಮ 3
--------------
ವ್ಯಾಸತತ್ವಜ್ಞದಾಸರು
ಗುರುಸ್ತುತಿ ದಾಸರ ಭಜಿಸುತ ಕ್ಲೇಶವ ಕಳೆಯಿರೊ ವಾಸುದೇವನ ಭಕ್ತರಾದ ಶ್ರೀಪುರಂದರ ಪ ಮೀಸಲ ಮನದಲಿ ಕೇಶವನಡಿಗಳ ಆಸೆಲಿ ಪೂಜಿಪ ದಾಸರೊಳಗೆ ಶ್ರೇಷ್ಠ ಅ.ಪ ಪುರಂದರ ಗಡದೊಳು ಹಿರಿಯನೆಂದೆನಿಸಿದ ವರದಪ್ಪನಿಗೆ ವರಕÀುವರ ನೆಂದೆನಿಸಿದೀ ಧರೆಯೊಳು ತನಗ್ಯಾರು ಸರಿಯಿಲ್ಲದಂತೆ ಮೆರೆಯೆ ಸಿರಿಯರಸನು ಶೀಘ್ರದಲಿ ತಾನರಿಯುತ 1 ಬಂದನು ಮಗನಿಗೆ ಮುಂಜಿಯೆಂದೆನುತಲಿ ಚಂದದಿಂದಲಿ ಬೇಡಲು ಧಣಿಯ ಬಂದೆಯಾತಕೆ ನಮ್ಮ ಚಂದದ ಬೀದಿಲಿ ಹಿಂದಕೆ ತೆರಳೆನೆ ಬಂದನು ಬಾರಿ ಬಾರಿ 2 ಹರಿಯೆಂದು ತಿಳಿಯದೆ ಜರಿಯುತ ನುಡಿಯಲು ಮರಳಿ ಮರಳಿ ಯಾಚಿಸೆ ಬಿಡದೆ ತೆರಳನು ಈ ವೃದ್ಧ ತೆರಳಿಪೆನೆನುತಲಿ ಸರಸರ ತೆಗೆಯುತ ಸುರಿದನು ನಾಣ್ಯವ 3 ನೋಡುತ ಶ್ರೀಹರಿ ಗಾಡದಿ ಕೈನೀಡೆ ನೀಡಿದ ಸವೆದ ರೊಕ್ಕವ ನೋಡೀ ಗಾಡನೆ ಬಂದು ನಾಯಕನ ಸತಿಯಳನು ಬೇಡಿದ ಪುಣ್ಯವು ಬಾಹೋದೆನುತಲಿ 4 ಏನು ನೀಡಲಿ ಎನಗೇನಿಹುದೆನ್ನಲು ಮಾನಿನಿ ಮೂಗುತಿ ನೀಡೆಂದೆನಲು ಮಾನಿನಿ ಮಾಡಲು ಜ್ಞಾನಿಗಳರಸನು ಗಾಡ ಹಿಂತಿರುಗುತ 5 ಗಾಡನೆ ಮೂಗುತಿ ನೀಡುತ ದ್ರವ್ಯವ ಬೇಡಲು ಬೇಗದಿ ನೀಡುತ ನುಡಿದನು ನೋಡುತ ವಡವೆಯ ನೀಡಿದ ಭರಣಿಲಿ ಸತಿ ಮುಖವಾ 6 ಮೂಗುತಿ ಎಲ್ಲೆನೆ ಬೇಗದಿ ನಡುಗುತ ನಾಗವೇಣಿಯು ಪ್ರಾರ್ಥಿಸಿ ಹರಿಯ ಆಗ ಕುಡಿವೆ ವಿಷವೆನ್ನುತ ಕರದಲಿ ನಾಗವಿಷದ ಬಟ್ಲಲಿ ಇರಲು 7 ತೋರಿದಳಾಗಲೆ ತನ್ನಯ ರಮಣಗೆ ತೋರದಿರಲು ಮುಂದಿನ ಕಾರ್ಯ ಭಾರಿ ಆಲೋಚನೆಯ ಮಾಡುತ ಮನದಲಿ ಸಾರಿದ ತನ್ನ ವ್ಯಾಪಾರದ ಸ್ಥಳಕೆ 8 ತೆರೆದು ನೋಡಲು ಆ ವಡವೆಯ ಕಾಣದೆ ಮಿಗೆ ಚಿಂತೆಯು ತಾಳುತ ಮನದಿ ನಗಧರನ ಬಹು ಬಗೆಯಲಿ ಪೊಗಳುತೆ ತೆಗೆದ ಅಸ್ಥಿರ ರಾಜ್ಯದಿ ಮನವ 9 ಕಳವಳ ಪಡುತಲಿ ಆ ಲಲನೆಯ ಸಹಿತದಿ ತನುಮನ ಧನ ಹರಿಗರ್ಪಿಸುತಾ ಕ್ಷಣ ಬಿಡದಲೆ ಹರಿ ಚರಣವ ಸ್ಮರಿಸುತ ಕಮಲನಾಭ ವಿಠ್ಠಲನೆನ್ನುವ ಹರಿ 10
--------------
ನಿಡಗುರುಕಿ ಜೀವೂಬಾಯಿ
ಗುರುಸ್ತುತಿ ಪ್ರೇಮದಿಂದೊಂದಿಸುವೆ ಗುರುವೃಂದಕೇ ಕಾಮಧೇನುವಿನಂತೆ ಕೊಡಲೆಮಗಭೀಷ್ಟವನು ಪ ಸತಿಯ ಬೇಡುವನಲ್ಲ ಸುತರ ಬೇಡುವನಲ್ಲ ಅತಿಶಯದ ಭಾಗ್ಯವನು ಕೇಳ್ವನಲ್ಲ ರತಿಪತಿ ಆಟವನು ಖಂಡಿಸಿ ಬೇಗದಲಿ ಮತಿ ತಪ್ಪಲೆನಗೆ ದುರ್ವಿಷಯದೊಳಗೆಂದು 1 ಶಕ್ತಿ ಬೇಡುವನಲ್ಲ ಯುಕ್ತಿ ಬೇಡುವನಲ್ಲ ಭುಕ್ತಿ ಎನಗಿಲ್ಲೆಂದು ಕೇಳ್ವನಲ್ಲ ಮುಕ್ತಿದಾಯಕ ನಮ್ಮ ವಿಟ್ಠಲನ ಚರಣದಲಿ ಭಕ್ತಿ ದೃಢವಾಗೆನಗಿತ್ತು ರಕ್ಷಿಸಲೆಂದು 2 ಮಾನ ಬೇಡುವನಲ್ಲ ದಾನ ಬೇಡುವನಲ್ಲ ಹೀನತನ ಬ್ಯಾಡೆಂದು ಕೇಳ್ವನಲ್ಲ ಮಾನನಿಧೀಶ ನಮ್ಮ ಶ್ರೀ ನರಹರಿಯ ಚರಣವನು ಕಾಣಿಸುವ ಜ್ಞಾನವನು ದಾನಮಾಡಲಿ ಎಂದು3
--------------
ಪ್ರದ್ಯುಮ್ನತೀರ್ಥರು
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ಗೋದಾವರಿ ಎನಗೆ ಶ್ರೀಧರನ ತೋರೆ ಪ. ನೀ ದಯದಿ ಸಲಹೆನ್ನ ಮಾಧವಗೆ ಪ್ರಿಯೆ ಅ.ಪ. ಸ್ವಚ್ಛವರ್ಣಳೆ ಬಹು ಹೆಚ್ಚಾಗಿ ಪರಿಯುವಳೆ ಮುಚ್ಚಿರುವ ಮಲಗಳನು ದೂರಮಾಡೆ ಅಚ್ಯುತನ ಪದವೀವ ಹೆಚ್ಚಿನಾ ಜ್ಞಾನವನು ಸ್ವಚ್ಛತನದಲಿ ಕೊಟ್ಟು ಮೆಚ್ಚಿ ಎನ್ನನು ಸಲಹೆ 1 ಧರೆಯ ಜನರು ನಿನ್ನೊಳ್ ಬರುತ ಮಲಗಳ ತೊಳೆಯೆ ಅರಿತು ಅದನು ಮನದಿ ಪರಿಹರಿಸಿಕೊಳಲು ಪರಮ ಭಾಗವತರ ವರ ಮಂದಿರಕೆ ಪೋಗಿ ವರಹ ವೆಂಕಟಗಿರಿಯೊಳ್ ಸ್ಥಿರವಾಗಿ ನಿಂತೆ 2 ಬರುತ ದಾರಿಯೊಳೆನಗೆ ಸ್ವಪ್ನದಲಿ ತೋರಿದೆ ವರ ದಿವ್ಯರೂಪವನು ನಾರಿಮಣಿಯೆ ಸರಿಗೆ ಕಂಕಣ ಮುತ್ತಿನಾ ಬುಗುಡಿಯನೆ ಧರಿಸಿ ವರ ಮುತ್ತೈದೆಯರಿಬ್ಬರಂದದಲಿ ತೋರಿದೆ 3 ಮುಕ್ಕೋಟಿ ಗಂಧರ್ವ ದೇವರ್ಕಳೂ ಬರುತಿರಲು ಅಕ್ಕರದಿ ತಂಗಿಯನೆ ಒಡಗೂಡುತ ಲಕ್ಕುಮಿ ಸ್ವಾಮಿ ಶ್ರೀ ಪುಷ್ಕರಣಿ ಸಾರಿರಲು ಉಕ್ಕುವೋ ಉಲ್ಲಾಸದಿಂದ ತೆರಳಿದೆಯೆ 4 ಜಿಷ್ಣು ಸಖನ ದಿವ್ಯ ಪಟ್ಟಣವ ಸೇರಲು ಕೃಷ್ಣವೇಣಿಯ ಒಡಗೂಡಿ ವಿಷ್ಣುಪಾದೋದ್ಭವೆಗೆ ಸರಿಯೆನಿಸಿ ಗೋಪಾಲ ಕೃಷ್ಣವಿಠ್ಠಲನ ಬಹುನಿಷ್ಠೆಯಿಂ ಧ್ಯಾನಿಸುವೆ 5
--------------
ಅಂಬಾಬಾಯಿ
ಗೋವಿಂದ ವಿಠಲ ನಿನ್ನ ವಂದಿಸುವೆ ಸ್ವಾಮಿನೀ ಒಲಿದು ರಕ್ಷಿಸುವುದು ಜೀವಿ ಇವ ಬಹುಕಾಲಸಾವ ಸಾವ ನಿನ್ನ ಸೇವೆಯೊಳಗೆ ಇಟ್ಟು ಕಾವುದು ನಿರುತ ಪ. ಆವ ಈ ಯುಗದಲ್ಲಿ ನಿನ್ನ ವಿಷಯರಾಗಿಈವ ಸುಜನರು ಸ್ವಲ್ಪರು ತಾ ವ್ಯಾಪಿಸಿ ಇಹರುಅಸುರರೆ ಬಹುಳಾಗಿ ಆವದವಸ್ಥೆಗಳಲಿನೀ ವರವನು ಕಲಿಗೆ ಇತ್ತ ಕಾರಣ ಉಪಜೀವರ ವ್ಯಾಪಾರಈ ವಿಧದಲಿ ತಳೆದು ನಿನ್ನ ಹುಡುಕುತಲಿನ್ನುಜೀವಿ ಸಾತ್ವಿಕನು ಮೊರೆಯಿಡಲು ಬಿನ್ನಯಿಸಿದೆನೊ 1 ಏನು ಸಾಧನವನು ಖೂಳವನು ಕಂಡಿನ್ನುನೀನು ವಂದಿಸಿವೆಂದರೆ ಜ್ಞಾನಭಕುತಿ ಉಳ್ಳಜ್ಞಾನಿಗಳಲಿವಗೆ ನಾನು ಕಂಡೆನು ಭಕುತಿಯಕ್ಷೋಣಿಯಲಿ ಭಕುತಿ ನಿನ್ನಲಿ ಪುಟ್ಟಲಿಬಹುದುಜ್ಞಾನಿಗಳ ದುರ್ಲಭ ನೀನು ಒಲಿವುವ ಅವಗೆನಾನವರಲಿ ಭಕುತೀವೆ ನಾನಾಸಾಧನ ಫಲವಿದೆ ನೋಡಾ 2 ಪ್ರಾರ್ಥಿಸುವೆ ನಾ ನಿನ್ನ ಪ್ರೇರಣೆಯ ಅನುಸಾರಕೀರ್ತಿ ನಿನ್ನದು ಜಗದೊಳು ಪಾತ್ರ ಇವನೆಂದುನಿನ್ನ ಚಿತ್ತದಲಿ ಇತ್ತೆ ಸಾರ್ಥಕನ ಮಾಡು ಚೆಂ ಸ್ವಾ ?ಕೀರ್ತನೆಯ ಮಾಡಿಸು ನಿನ್ನ ಪರವಾಗಿ ನಿಜಸ್ಫೂರ್ತಿಸಖರಂಗ ಗೋಪಾಲವಿಠಲ ಶ್ರುತಿಶಾಸ್ತ್ರಾರ್ಥವನುಸಾರ ಪ್ರಾಪ್ತಿ ನೀನಾಗಿವಗೆ3
--------------
ಗೋಪಾಲದಾಸರು
ಗೋವಿಂದ ಸಲಹೆನ್ನನು - ಸದಾನಂದಗೋವಿಂದ ಸಲಹೆನ್ನನು ಪ ಗೋವಿಂದ ಸಲಹೆನ್ನ ಕುಮುದಲೋಚನ ನಿನ್ನಸೇವಕರಡಿಯ ಸೇವಕನಯ್ಯ ಗೋವಿಂದ ಅ ಅಚ್ಯುತ ಸರ್ವೋ-ತ್ತಮನೆ ಚಿನ್ಮಯ ಗೋವಿಂದ - ನಿಶ್ಚಲಭಕ್ತಿಕ್ರಮವ ಬೋಧಿಸೊ ಗೋವಿಂದ - ಪಾಪವನೆಲ್ಲಶಮನಗೊಳಿಪ ಗೋವಿಂದ - ಲಕ್ಷ್ಮೀರಮಣನಮೋ ದಶಾವತಾರಿ ಗೋವಿಂದ 1 ಮನವೆನ್ನ ಮಾತು ಕೇಳದು ಕಾಣೊ ಗೋವಿಂದಮನವ ಗೆಲ್ಲುವ ಬಲ ಎನಗಿಲ್ಲ ಗೋವಿಂದಕನಸಿನಂತಿಹ ದೇಹ ಸ್ಥಿರವಲ್ಲ ಗೋವಿಂದಬಿನುಗು ಬುದ್ಧಿಗಳ ಬಿಡಿಸಯ್ಯ ಗೋವಿಂದನೆನಹು ನಿನ್ನೊಳಗಿಟ್ಟು ನಡೆಸಯ್ಯ ಗೋವಿಂದನೆನೆವ ದಾಸರ ಮನದೊಳಗಿರ್ಪ ಗೋವಿಂದವನಜಲೋಚನ ನಾ ನಿನ್ನವನಯ್ಯ ಗೋವಿಂದಘನ ಮಹಿಮನೆ ನಿನ್ನ ಮೊರೆಹೊಕ್ಕೆ ಗೋವಿಂದಮುನಿಗಳ ಮನದೊಳು ಮಿನುಗುವ ಗೋವಿಂದನಿನಗಲ್ಲದಪಕೀರ್ತಿ ಎನಗೇನೊ ಗೋವಿಂದಜನನ ರಹಿತ ಗೋವಿಂದ - ನಿನ್ನಡಿಗಳನೆನವು ಕೊಡೊ ಗೋವಿಂದ - ದುರ್ವಿಷಯ ವಾ-ಸನೆಯ ಬಿಡಿಸೊ ಗೋವಿಂದ - ಕುತ್ಸಿತ ಕೆಟ್ಟತನವ ಬಿಡಿಸೊ ಗೋವಿಂದ - ಸದ್ಗುಣವೆಂಬಧನವ ತುಂಬಿಸೊ ಗೋವಿಂದ - ಇದಕ್ಕೆ ಬಡ-ತನವೆ ನಿನಗೆ ಗೋವಿಂದ - ಸದಾ ನಿನ್ನಘನ ಸ್ಮರಣೆ ಕೊಡು ಗೋವಿಂದ - ಸನಕಸನಂದನಾರ್ಚಿತ ಗೋವಿಂದ 2 ಕಿನ್ನರ ಸನ್ನುತ ಗೋವಿಂದ - ಅಪರಿಮಿತಕರುಣಾಸಾಗರ ಗೋವಿಂದ - ಅರಿಯದಂಥಪರಮ ಜ್ಯೋತಿಯೆ ಗೋವಿಂದ - ಗಂಗೆಯ ಪೆತ್ತಚರಣ ನಿರ್ಮಲ ಗೋವಿಂದ - ತೆತ್ತೀಸ ಕೋಟಿಸುರರ ಪೊರೆವ ಗೋವಿಂದ - ಶ್ರೀವೈಕುಂಠಪುರದೊಳಗಿಹ ಗೋವಿಂದ - ಅಚ್ಯುತಾನಂತತಿರುಪತಿ ನೆಲೆಯಾದಿ ಕೇಶವ ಗೋವಿಂದ 3
--------------
ಕನಕದಾಸ