ಒಟ್ಟು 11460 ಕಡೆಗಳಲ್ಲಿ , 130 ದಾಸರು , 4806 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕಪಾಲನೆ ನಾಕವಂದ್ಯನೆ ಸಾಕುಬಿಡು ಚಲವಾ ಯಾಕೆ ಕೋಪ ದೀನ ನಾನೆಲೈ ಶ್ರೀಕರ ಸುಗುಣಾ ಪ ಕಾವರಿಲ್ಲವೋ ದೇವ ದೇವನೆ ಭಾವಜಾತಪಿತನೆ ಜೀವಕೋಟಿಯ ಜೀವರಾಶಿಯ ಪಾವನಾಂಗನೆ ಅ.ಪ ಪರರ ನಾನುಪರಿಚರಿಸಲಿಲ್ಲವೋ ದುರುಳಭಾವದಿ ಪರರ ಹಿಂಸೆಗೈದು ಎನ್ನ ಉದರ ಪೊರೆದೆನೋ 1 ವೇದಗಳ ನಾನೋದಿ ಅರಿಯೇ ಸಾಧು ಸಂಗಮ ಭೇದಗೈದೆ ಗರ್ವದಿಂದೆ ವೇದವೇದ್ಯನೆ 2 ಗಂಗಜನಕ ತುಂಗ ವಿಕ್ರಮ | ಮಂಗಳಾಂಗನೇ ಮಾಂಗಿರೀಶ ನಿನ್ನ ನಾಮಭೃಂಗವ ತೋರೈ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಲೋಕೈಕ ಬಂಧು ಹೇ ದಯಾಸಿಂಧು ಜೋಕೆಮಾಡಭವ ನೀನೆನ್ನೊಳು ನಿಂದು ಪ ಹೇಯಪ್ರಪಂಚದ ಮಾಯಾಮೋಹದಿ ಎನ್ನ ಕಾವದೇವರು ನೀನೆ ಕೈಯ ಪಿಡಿದು ಸಲಹೊ 1 ದಿವನಿಶಿ ಬಿಡದೊಂದೇಸಮನೆ ಬೆನ್ನ್ಹತ್ತಿ ಮಾಯ ಕವಿದು ವಿಧವಿಧದೆನ್ನ ಸುವಿಚಾರ ಮರೆಸಿ ಭವಭವದೊಳಗೆಳಸಿ ಭವಿಯೆಂದೆನಿಸಿ ಕೆಟ್ಟ ಜವನಿಗೀಡೆನಿಸುವ ಭವಮಾಲೆ ಗೆಲಿಸು 2 ಘನದು:ಖಮಯವಾದ ಜನನಮರಣಬಾಧೆ ರಿಣಭಾದೆ ತನುಭಾದೆಯನು ಪರಿಹರಿಸಿ ತನುತ್ರಯದಲಿ ನಿನ್ನ ನೆನೆವೆನಗೆ ಪಾಲಿಸು ಕನಿಕರದಿಂ ಕಾಯೊ ಜನಕ ಶ್ರೀರಾಮ ಪ್ರಭು 3
--------------
ರಾಮದಾಸರು
ಲೋಲನೇಳುವದಕಿನ್ನ ಮುನ್ನ ಪ ತಾಳಮೇಳದವರೆಲ್ಲಿ ಬಂದು ದ್ವಾರ ದೊಳು ಸೇರಿ ಪಾಡುತಿಹರೊ ನಿಂದು 1 ಸುರರು ಸಭೆ ಯಲಿ ಬಂದಾಗಲೆ ಓಲೈಸುತಲಿಹರು 2 ತಡಮಾಡಬೇಡಯ್ಯ ನೀನು ನಿನ್ನ ಒಡೆಯನೆದ್ದು ನಿನ್ನನು ಕೂಗ್ಯಾನೊ 3 ಕಪಿಯಾಗಿ ನೀ ಪುಟ್ಟಬೇಕಂತೆ ತಾನು ವಿಪಿನವಾಸಕಾಗಿ ತೆರಳುವನಂತೆ 4 ಶರಧಿಯ ನೀ ದಾಟಬೇಕಂತೆ ಅಲ್ಲಿ ಸಿರಿಗೆ ಮುದ್ರೆಯ ನೀನೀಯಬೇಕಂತೆ 5 ದುರುಳನ ಪುರವ ನೀನುರುಹಬೇಕಂತೆ ಅವನ ಪರಿವಾರವೆಲ್ಲವ ನೀ ತರಿಯಬೇಕಂತೆ 6 ಕುಂತೀಲಿ ನೀ ಪುಟ್ಟಬೇಕಂತೆ ತಾನು ಕಂತುವಿಗೆ ಪಿತನಾಗುವನಂತೆ 7 ಮಗಧ ಮುಖ್ಯರ ನೀ ಸೀಳಬೇಕಂತೆ ದೇವ ಜಗಕೆ ಮಂಗಳವ ನೀ ಮಾಡಬೇಕಂತೆ 8 ದುರುಳ ದುಶ್ಶಾಸನನ ಇರಿಯಬೇಕಂತೆ ಅವನ ಕರುಳ ನಿನ್ನರಸಿಗೆ ಮುಡಿಸಬೇಕಂತೆ 9 ಮುದ್ದು ಭಾರತಿಯ ನೀ ಬಿಡಬೇಕಂತೆ ನೀನು ಹೊದ್ದು ಕಾವಿಬಟ್ಟೆ ಯತಿಯಾಗಬೇಕಂತೆ 10 ಅದ್ವೈತ ಮತವನು ನೀ ಖಂಡ್ರಿಸಬೇಕಂತೆ ಗುರು ಮಧ್ವಮುನಿಯೆಂದು ನೀ ಮೆರೆಯಬೇಕಂತೆ 11 ಬದರಿಕಾಶ್ರಮಕೆ ಪೋಗಬೇಕಂತೆ ಅಲ್ಲಿ ಬಾದರಾಯಣನಾಗಿ ತಾನಿರ್ಪನಂತೆ 12 ಹಿಂಗದೆ ಶ್ರೀಶನ ನೀ ನುತಿಸಬೇಕಂತೆ ಸಿರಿ ರಂಗೇಶವಿಠಲ ನಿನಗೊಲಿದಿಹನಂತೆ 13
--------------
ರಂಗೇಶವಿಠಲದಾಸರು
ವಂದಿಪೆ ಗುರುವೆ ನೀ ಕಲ್ಪತರುವೇ ಬಂಧನ ಕಳೆಯುವ ಭೋಧಾತ್ಮ ಗುರುವೆ ಅಗಣಿತ ಮಹಿಮಾ ಜಗದಾಧಾರ ಬಗೆಗೆ ನಿಲುಕದಿಹ ಘನನಿರ್ವಿಕಲ್ಪ ಮಾನವ ರೂಪದಿ ಸ್ವಾನುಭವವ ತೋರ್ದ ಮುಕುತಿದಾಯಕನೇ ಪರಮಾತ್ಮ ನೀನೆಂದು ಪರಶೃತಿ ಪೇಳೆ ಸರಿಯಾಗಿ ಬೋಧಿಸಿ ಕರುಣೆದೋರುವನೇ ಜಗವೆಲ್ಲ ಪುಸಿಯೆಂದು ಜಗಕೆಲ್ಲ ಪೇಳುವ ಭಗವಂತ ದಯದೋರಿ ಪೊರೆವುದು ದೇವಾ ಚಿನುಮಯರೂಪನೆ ಸ್ವಾನಂದರೂಪಾ ಮನವು ನಿನ್ನೊಳಗಿರಲಿ ಶಂಕರರೂಪಾ
--------------
ಶಂಕರಭಟ್ಟ ಅಗ್ನಿಹೋತ್ರಿ
ವಂದಿಪೆ ಚರಣಾರವಿಂದಕೆ ಸದ್ಗುರು ವಾದಿರಾಜ ಮಂದ ಮತಿಯ ಬಿಡಿಸಿಂದಿರೇಶನ ತೋರೋ ಪ ದುರುಳ ಬುದ್ಧಿಲಿಂದ ಮರೆದು ಬಿಟ್ಟೆ ನಿನ್ನ ವಾದಿರಾಜ ಧರಣಿಮಂಡಲದೊಳು ಪಾಪಿಷ ನಾನಾದೆ ವಾದಿರಾಜ ಪರಮ ಪುರುಷ ಭಾವಿ ಮರುತ ನೀನೆÉಂದು ವಾದಿರಾಜ ಹಿರಿಯರ ಮುಖದಿಂದ ನಿಶ್ಚೈಸಿದೆ ವಾದಿರಾಜ 1 ಶಿರದೊಳು ಹೂರಣದ್ಹರಿವಾಣ ಧರಿಸುತ ವಾದಿರಾಜ ವರ ಭಕ್ತಿಯಿಂದಲಿ ತುರುಗಾಸ್ಯಗುಣಿಸಿದ ವಾದಿರಾಜ ಗುರು ಜಗನ್ನಾಥ ದಾಸರ ಸ್ವಪ್ನದೊಳು ಬಂದು ವಾದಿರಾಜ ಹÀರಿಕಥಾಮೃತಸಾರವಿರಚಿ ಸೆಂದರು ವಾದಿರಾಜ 2 ಶ್ರೀಮಧ್ವಾರ್ಯಮತ ಸಾಮ್ರಾಜ್ಯ ಧ್ವಜಪೆತ್ತಿ ವಾದಿರಾಜ ಶಾಮಸುಂದರ ಕೃಷ್ಣ ನಾಮದ ಮಹಿಮೆಯ ವಾದಿರಾಜ ಪಾಮರಂಗೆ ಪೇಳಿ ಪ್ರೇಮದಿ ಸಲುಹಿದ ವಾದಿರಾಜ 3
--------------
ಶಾಮಸುಂದರ ವಿಠಲ
ವಂದಿಪೆ ನಾ ಭಗವಾನ್ ಪೂರ್ಣಘನಾ ನೀ ಮುಕುತಿನಿದಾನಾ ಜ್ಞಾನಘನಾ ಆನಂದಘನಾ ನಿತ್ಯಾನಂದನು ನೀ ಚೈತನ್ಯ ಮೂಲಪದ ಮಾಯಾರಹಿತ ಸದಾ ಆ ನಿರ್ವಿಕಲ್ಪಾತ್ಮಾ ಸತ್ಯನು ನೀ ಹೇ ಸರ್ವಾಂತರ್ಯಾಮೀ ಪ್ರೇಮಘನಾ ಆನಂದ ಕಣ್ಣು ಮನಗಳಿಗೆ ನಿಲುಕದಲೇ ನೀ ಸಾಕ್ಷಿಸ್ವರೂಪಾ ಇವುಗಳಿಗೇ ಕಲ್ಪಿತವ್ಯೆ ಮಾಯಾಮೋಹಿತವೈ ಈ ಜಗವೆಲ್ಲಾ ನಿನ್ನೊಳ್ ಸತ್ಯಘನಾ ಆನಂದ ಎಂತು ಬಣ್ಣಿಸಲೈ ನಿನ್ನನು ನಾ ಈ ವಾಣಿಯಿಂ ದೂರಾ ನಿಜಸಾರಾ ಯೋಗಿವರಾ ಗುರು ಶ್ರೀ ಶಂಕರಾ ಹೇ ಸರ್ವಾತ್ಮಪೂರ್ಣಾನಂದಘನಾ ಆನಂದ
--------------
ಶಂಕರಭಟ್ಟ ಅಗ್ನಿಹೋತ್ರಿ
ವಂದಿಪೆ ಮುದದಿಂದಲಿ ನಾನು ವಂದಿಪೆ ಮುದ್ದು ಗಣಪಗೆ ವಂದಿಪೆ ಪ ನಂನಂದನನಾಮ ಮನದೊಳು ಆ- ನಂದದಿ ಭಜಿಸುವ ಚಂದ್ರಶೇಖರಸುತಗೆ ಅ.ಪ. ಆಕಾಶಕಭಿಮಾನಿ ಶ್ರೀಕಂಠವರಪುತ್ರ ರಾಕೇಂದುವದನ ಶ್ರೀಕಾಂತ ನಿಜಭಕ್ತ ಏಕಾಂತದಲಿ ಹರಿ ಆಕಾರತೋರಿಸಿ ನೂಕುತಭವಪಾಶ ಸಾಕು ಸಾಕು ಎಂದು 1 ವರವರದಾಯಕ ಸುರಗಣಪೂಜಿತ ವರಕರಿಮುಖವೇಷ ವರಸರ್ಪಕಟಿಸೂತ್ರ ಸಿರಿಕಾಂತಸೇವೆಗೆ ಬರುವ ವಿಘ್ನಂಗಳೆಲ್ಲ ಭರದಿಂದ ತರಿಯುತ ಕರುಣದಿ ಸಲಹೆಂದು 2 ವೇದವ್ಯಾಸರಶಿಷ್ಯ ಮೋದಕಗಳ ಪ್ರಿಯ ಮದನನಸೋದರ ಮುದವಿದ್ಯೆದಾಯಕ ಮಧ್ವಾಗಮದಲಿ ಅದ್ದುತ ಎಮ್ಮನು ಶುದ್ಧರನು ಮಾಡೋ ಸಿದ್ಧಿ ವಿನಾಯಕನೆಂದು 3 ಏಕದಂತನೆ ವರ ಆಖುವಾಹನ ಭಕ್ತರ ಶೋಕ ಹರಿಸೊ ಬೇಗ ಲೋಕ ವಂದಿತನೆ ರಕ್ತಾಂಬರ ತನು ರಕ್ತಗಂಧಪ್ರಿಯ ವಿ - ರಕ್ತಿನೀಡುತ ಹರಿಭಕ್ತನೆಂದೆನಿಸು ಎಂದು 4 ಪಾಶಾಂಕುಶ ಶಶಿದರ್ಪಭಂಜನ ಶ್ರೀಶನಾಭಿವಾಸ ವಿಶಾಲಕರ್ಣಯುತ ನಾಶಗೈಸುತವಿಷಯ ವಾಸನೆಗಳೆಲ್ಲ ವಿಶ್ವೋಪಾಸಕ ಪ್ರಭು ಶ್ವಾಸಾವೇಶಯುತನೆಂದು 5 ಚಾರುದೇಷ್ಣನೆ ನಿನ್ನ ಚರಣಕ್ಕೆ ಶರಣೆಂಬೆ ಸರಿನೀನು ಧನಪಗೆ ಗುರುಶೇಷಶತರಿಗೆ ತರಿದು ತಾಪತ್ರಯ ವರಜ್ಞಾನ ವೈರಾಗ್ಯ ಹರಿಭಕ್ತಿ ಹರಿ ಧ್ಯಾನ ನಿರುತ ಕೊಡು ಎಂದು 6 ಜಯತೀರ್ಥ ಹೃದಯದಿ ವಾಯುವಿನೊಳಿಪ್ಪ ಸಿರಿ ತಾಂಡವ ಕೃಷ್ಣವಿಠಲ ರಾಯನ ಧ್ಯಾನ ಕಾಯಾ ವಾಚಾ ಮನಸಾ ದಯಮಾಡಿ ಸಲಹೈಯ್ಯ ಜೀಯಾ ಗಣಪನೆಂದು7
--------------
ಕೃಷ್ಣವಿಠಲದಾಸರು
ವಂದಿಪೆ ಹರಿಹರನೇ | ನಿನಗೆ ನಾ ವೃಂದಾರಕನುತನೇ ಪ. ಬಂದು ಈ ಕ್ಷೇತ್ರದಿ ನಿಂದು ಸದ್ಭಕ್ತರ ಮೂರ್ತಿ ಅ.ಪ. ಚತುರ ಹಸ್ತದಿಂದಾ | ಶೋಭಿಸೆ ಅತಿ ಕೌತುಕದಿಂದಾ ಪಾದ ಕಮಲಜನ ತತಿಗೆ ತೋರದಂತೆ ಕ್ಷಿತಿಯಲಡಗಿದೇ 1 ಸೋಮಶೇಖರವಂದ್ಯಾ | ಆರ್ಧದ ಲಾಮಹ ಹರನಿಂದಾ ಪ್ರೇಮದಿ ಕೂಡಿಕೊಂಡೀ ಮಹಿ ಜನರಿಗೆ ನೀಮೋಹಕ ತೋರುವ ಜಗದ್ವಂದ್ಯಾ 2 ಪಾಪಿಗುಹನವರವಾ| ಕೆಡಿಸಲು ರೂಪಧರಿಸಿ ತಾಮಸರಿಗಂಧಮತಮ ಕೂಪದಿ ಕೆಡಹುವೆ ಶ್ರೀ ಮೋಹಿತ 3 ಅರ್ಧಹರನ ರೂಪಾ| ಕೃತಿಯಲಿ ಶುದ್ಧ ವಿಷ್ಣು ರೂಪಾ ಮುದ್ದು ಸುರಿವ ಭವ್ಯಾಂಗ ಸ್ವರೂಪ ಉದ್ಧರಿಸೆನ್ನನು ಶುದ್ಧ ಬುದ್ಧಿಮತಿಯನಿತ್ತು 4 ಶಂಖಚಕ್ರ ಅಭಯಾ| ತ್ರಿಶೂಲವ ಬಿಂಕದಿ ಧರಿಸಿದೆಯಾ ಪಂಕಹೋದ್ಭವೆ ಪಾರ್ವತಿಯ ಉಭ ಯಾಂಕದಲ್ಲಿ ಪೊಂದಿಹೆ ಶುಭಕಾಯಾ 5 ಅರ್ಧಶಿರದಿ ಮಕುಟಾ| ಆರ್ಧದಿ ಶುದ್ಧಗಂಗೆ ತ್ರಿಜಟಾ ಅರ್ಧಚಂದ್ರ ಶೋಭಿಸುತಿದೆ ಜಗತ್ತಿಗೆ ಅದ್ಭುತ ಅಚ್ಚರಿ ರೂಪಧಾರಕ 6 ಪಣೆಯ ತಿಲಕ ಢಾಳಾ | ಕಂಠಾಭ ರಣಗಳು ಪೂಮಾಲಾ ಮಿನುಗುವವಲ್ಲಿ ಪೀತಾಂಬರನುಟ್ಟಿಹ ಗುಣಗಣ ಪೂರ್ಣನೆ ಹನುಮನಯ್ಯ ಹರಿ7 ಮಾಯಾ | ಕವಿಸದೆ ಇನ್ನು ಕಾಯೊ ಜೀಯಾ ಘನ್ನ ಭಕ್ತಿ ಸುಜ್ಞಾನ ವೈರಾಗ್ಯವ ಮನ್ನಿಸಿ ಕರುಣಿಸಿ ನಿನ್ನ ಪದವಿ ಕೊಡು 8 ಹರನೊಳು ಹರ ಶಬ್ದಾ | ವಾಚ್ಯನೆ ಸಿರಿವರ ನಿರವದ್ಯಾ ಸರ್ವ ಶಬ್ದ ಸುರವಾಚ್ಯ ಈ ಪರಿಯೊಳು ಹರಿಹರ ಕ್ಷೇತ್ರದಿ ವರಗೃಹ ಮಾಡಿದಿ 9 ತುಂಗಭದ್ರ ತೀರಾ | ವಾಸನೆ ರಂಗ ಪಾಪ ದೂರಾ ಮಂಗಳ ಗೋಪಾಲಕೃಷ್ಣವಿಠಲ ಭವಹಿಂಗಿಸಿ ಪೊರೆ ದುಸ್ಸಂಗ ಬಿಡಿಸಿ ಹರಿ 10
--------------
ಅಂಬಾಬಾಯಿ
ವಂದಿಪೆವು ತವಪಾದಪಂಕಜಕೆ ಶ್ರೀ ರಾಘವೇಂದ್ರ | ಇಂದು ಬಿನ್ನೈಸುವೆವು ನಿನ್ನಡಿಗೆ ಪ ಇಂದು ದಿನವಂಭತ್ತು ವದ್ಯದಿ | ವೆಂದು ತೋರುವ ಸುದಿನವೆಮಗೆಅ.ಪ ಕಾಲವನು ಬಣ್ಣಿಸಲು ಭಯವಹುದು | ಏನೆಂದು ಪೇಳಲಿ | ನಾಲಿಗೆಯು ಒಣಗುತ್ತಲಿಹುದು | ಮೇಲೆನಿಪ ಶಾಲ್ಯಾನ್ನವೀದಿನ | ಸಾಲದಾಯಿತು ಹಸಿವುತಾಳದೆ | ಕಾಲಪುರಕೈದುವೆವು ಗುರುವೇ 1 ಹಿಂದೆ ತಂಜಾಊರಿನಲಿ ಕ್ಷಾಮ | ವಂಜಿಸಲು ನಿನಬಳಿ | ಬಂದ ರಾಜನ ಮೊರೆಯ ಕೇಳುತಲಿ | “ಶ್ರೀ” ಬೀಜಮಂತ್ರವ ರಚಿಸಿ ಭಕುತರ | ದನ್ನ ವುಣಿಸಿದೆ ಜನಕೆ ಗುರುವೇ 2 ಧರ್ಮಮಾರ್ಗವೆ ಕಾಣದಂತಾಯ್ತು | ಎಲ್ಲೆಲ್ಲಿ ನೋಡಲ | ಧರ್ಮಕೃತಿಗಳೆ ಕಂಡುಬರುತಿಹವು | ಇಂದು ನಿರ್ಮಲಾತ್ಮಕ ನಿನ್ನ ಬಳಿಯಲಿ ಧರ್ಮಭಿಕ್ಷವ ಬೇಡುತಿಹರೈ3 ಅಖಿಲ ಸಜ್ಜನ ನಿಚಯ ಸಹಿತಾಗಿ ನೀನಿಲ್ಲೆ ನೆಲೆಸು | ಭಕುತರಿಷ್ಟಾರ್ಥವನು ನೀಡುತಲಿ | ಲಕುಮಿಯರಸನ ದಯದಿ ಶರಣರ | ಮುಕುತರಾಗುವ ತೆರದಿ ಹರಸೈ4 ದೇಶದೊಳು ಮಳೆಬೆಳೆಯು ಹುಲುಸಾಗಿ ಸೂಸಿಸಲಿನ್ನು | ದೇಶದೊಳು ಸುಖಶಾಂತಿ ಸ್ಥಾಪಿಸಲಿ | ಶ್ರೀಶಕೇಶವನಲ್ಲಿ ಭಕುತಿಯ | ಲೇಸೆನಿಪ ಧರ್ಮಾರ್ಥ ಮಾರ್ಗದಿ | ದಾಶೆಯಲಿ ಬಿನ್ನಹ ಗುರುವೇ 5
--------------
ಶ್ರೀಶ ಕೇಶವದಾಸರು
ವಂದಿಸುವೆ ಗುರು ರಾಘವೇಂದ್ರಾರ್ಯರಾವೃಂದಾವನದಿ 'ೀಣೆ ನುಡಿಸುತಲಿ ಕುಳಿತವರಾ ಪನಂದಗೋಪನಕಂದ ಗೋ'ಂದ ಗೋಪಾಲಇಂದಿರಾರಮಣ ಮುಚಕುಂದವರದಾ'ಂದರ್ಪಜನಕ ಇಂದೆನಗೆ ನಿನ್ನ ಪಾದಾರ-ವೆಂದವನು ತೋರಯ್ಯ ಎಂದು ಪಾಡುತಲಿಹರ 1ನರಹರಿ ಶ್ರೀಕೃಷ್ಣ ರಾಮ ವೇದವ್ಯಾಸಮೂರೊಂದು ಮೂರ್ತಿಗಳುಪಾಸನೆಯನುಚಾರು ವೃಂದಾವನದಿ ಕುಳಿತು ಸಂತತ ಮಾಳ್ವಧೀರ ಶ್ರೀ ವೇಣುಗೋಪಾಲನನು ಕುಣಿಸುವವರ 2'ೀಣೆಯನು ನುಡಿಸುತಲಿ ಗಾಯನವ ಮಾಡುತ್ತಆನಂದ ಬಾಷ್ಪಗಳ ಉದುರಿಸುತಲಿಆನಂದಕಂದ ಭೂಪತಿ-'ಠಲನ್ನ ಸದಾಕಣ್ಮುಂದೆ ನಿಂದಿರಿಸಿಕೊಂಡ ಗುರುಗಳ ಕಂಡು 3
--------------
ಭೂಪತಿ ವಿಠಲರು
ವಂದಿಸುವೆ ಭಾರ್ಗವೀಶ ಸುಂದರಾಂಗ ಲೋಕಾಧೀಶ ಪ ವಂದ್ಯಮಾನ ಪಾದಕಮಲ ಇಂದಿರಾ ಮನೋವಿಹಾರ ಅ ಪ. ಅಷ್ಟಮೂರ್ತಿ ಕಷ್ಟಹರಣ ಕೃಷ್ಣಮೂರ್ತಿ ಶ್ರೀ ಕೇಶವ ದುಷ್ಟದನುಜ ಕುಲವಿನಾಶ ಸೃಷ್ಟಿಪಾಲದೇವಾಧೀಶ 1 ನಿನ್ನ ಪಾದವನ್ನು ಭಜಿಪೆ ಚೆನ್ನಕೇಶವ ಪಾಲಿಸೆನ್ನ ಇನ್ನೂ ಭವದಿ ಶೋಕಗೊಂಬೆ ನಿನ್ನ ಹೊರತಿನ್ಯಾರ ಕಾಣೆ 2 ಪುಟ್ಟ ಧ್ರುವಗೆ ಪಟ್ಟಗಟ್ಟಿ ದಿಟ್ಟತನದಿ ಪೊರೆದ ನೀನು ಕಷ್ಟದಿಂದಜಾಮಿಳನು ಕೂಗೆ ಇಷ್ಟವರವ ನಿತ್ತೆ ದೇವ 3 ಕಾನನದಿ ಸ್ನಾನಗೈದು ಜಪವ ಮಾಡಲಾರೆ ನಾನು ಧೇನುನಗರ ಪತಿಯೆ ನಿನ್ನ ಧ್ಯಾನದಿಂದ ಜ್ಞಾನವೆಂದು 4
--------------
ಬೇಟೆರಾಯ ದೀಕ್ಷಿತರು
ವಂದಿಸುವೆನನವರತ ಇಂದಿರೇಶಾ ಪ ನೊಂದು ಬಳಲಿದೆನಯ್ಯ ಸಲಹೋ ಶ್ರೀಶಾ ಅ.ಪ ಇಂದು ನರಜನುಮದೊಳು ನೊಂದೆನಯ್ಯ ಮುಂದಿನಾ ಜನುಮಗಳ ಸಂದಣಿಗಳೊಳು ನಿನ್ನ ಸುಂದರ ಪಾದಾಂಬುಜವನೆಂದೆಂದು ತೋರೆಂದು1 ನರಜನ್ಮ ಹಿರಿದೆಂದು ಅರಿತವರು ಪೇಳುವರು ನರನಾಗಿ ನಾ ಜನಿಸಿ ಗರುವದಿಂದಾ ಸಿರಿಯಾಸೆಯಿಂದ ಮದ ಪರವೈರ ಲೋಭಗಳ ದುರಿತಗಳನಾರ್ಜಿಸಿದೆ ಪೊರೆಯೊ ದೇವ 2 ಕಡುಪಾಪ ಕೂಪದೊಳಗಡಗಿರ್ಪೆನೈ ಹರಿಯೆ ಅಡಿಗಳಿಗೆ ಎಡೆಯಿಲ್ಲ ನುಡಿವರಿಲ್ಲಾ ಪಿಡಿವುದಕೆ ತೃಣವಿಲ್ಲ ದಡಕೆ ದಾರಿಯು ಇಲ್ಲ ತಡವೇಕೆ ಎನ್ನ ಕೈಪಿಡಿಯೊ ಗೋಪಾಲ 3 ಖಗರಾಜ ಪೊತ್ತಿಹನು ಸುಗತಿದಾಯಕನೆಂದು ಹೊಗುಳುವವು ಶೃತಿ ಶಾಸ್ತ್ರ ನಗಧರನೆ ನಿನ್ನತಾ ನಗಪುತ್ರಿ ನುತಿಸಿಹಳು ನಗಬೇಡವೈ ಪಾದಯುಗಗಳನು ತೋರೆಂದು4 ನಿನ್ನ ನಾಮದ ಭಜನೆ ಎನ್ನ ರಸನೆಯೊಳಿರಲಿ ಮುನ್ನಿಗಿಂತೆಂಟುಮಡಿ ಜನುಮ ಬರಲಿ ಮುನ್ನ ನಾವಾರ್ಜಿಸಿದ ಘನಪಾಪನಶಿಸಲಿ ಚೆನ್ನ ಮಾಂಗಿರಿವಾಸ ನನ್ನ ಹೃದಯದೊಳಿರಲಿ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಂದಿಸುವೆನು ನಿನ್ನ ಅರವಿಂದಲೋಚನ- ದಿಂದ ನೋಡೊ ನೀ ಎನ್ನ ವಂದಿಸುವೆ ಅರವಿಂದಲೋಚನ- ದಿಂದ ನೋಡೊ ದಯಾಸಿಂಧು ಎನಿಸುವೆ ನಂದನಂದನನಾದ ಶ್ರೀ ಮುಕುಂದ ನೀ ಮುಚು- ಕುಂದ ವರದ ವಂದಿಸುವೆನು ನಿನ್ನ ಪ ಅಂಬರೀಷನು ಏನೋ ಮುಚುಕುಂದ ಮುನಿವರ- ನೆಂದು ರಕ್ಷಿಸುವೇನೊ ದ್ವಿಜ ತಂದವಲಕ್ಕಿ ತಿಂದ ಭಿಡೆಯಗಳೇನೊ ನೀನೆ ಸುರಧೇನು ಕಂದ ಧ್ರುವಪ್ರಹ್ಲಾದ ಕರೆಯಲು ಬಂದು ಭರದಿಂದವರ ಸಲಹಿದೆ ಮಂದಮತಿ ನಾ ಮ- ತ್ತೊಂದನರಿಯದೆ ವಂದಿಸುವೆ ನಿನ್ನ 1 ಗಜನು ಅಜಮಿಳನೇನೊ ಪಾದಾಂಬುಜ ಸ್ತುತಿಸ- ಲಜಸುತನು ನಾರದನೇನೊ ನಿಜ ಭಕುತಿಯಿಂದಿರಲ್ವಿದುರ ಉದ್ಧವನೇನೊ ನದಿಯಲ್ಲಿ ನಿನ್ನ ನಿಜಸ್ವರೂಪವ ತೋರಲಿಕ್ಕೆ ನಿನ್ನ ಬಾಂಧವಕ್ರೂರನೇ ನಾ ಕೇಳು ಘನ್ನ ಮಹಿಮ ಪ್ರಸನ್ನನಾಗಲಿಕ್ವಂದಿಸುವೆನು ನಿನ್ನ 2 ಸತ್ವರೊಳು ನಾನಲ್ಲ ಅಹಲ್ಯೆ ದ್ರೌಪದಿ ಭಕ್ತಿ ಮೊದಲೆನಗಿಲ್ಲ ಪಾಂಡವರ ದುರಿತಾಪತ್ತು ಕಳೆದ್ಯೊ ನೀಯೆಲ್ಲ ಕೇಳೆನ್ನ ಸೊಲ್ಲ ಭಕ್ತಾಧೀನನೆ ಭಯನಿವಾರಣ ಇಷ್ಟು ಭವಭಯ ಬಿಡಿಸಿ ಭೀಮೇಶಕೃಷ್ಣ ನಿನ್ನದಯ- ವಿಟ್ಟುಕರುಣಿಸೊ ವಂದಿಸುವೆನು ನಿನ್ನ 3
--------------
ಹರಪನಹಳ್ಳಿಭೀಮವ್ವ
ವಂದೇ ಶಂಕರ ಗುರುದೇವಾ ವಂದೇ ಶಂಕರ ಗುರುದೇವಾ ಪಾವನ ಚರಣಾ ತೋರೈ ಕರುಣಾ ಜ್ಞಾನಾಂಬುಧಿ ಪೂರ್ಣಾ ವಂದೇ ನಿರಂಜನ ಸತ್ಯ ಸ್ವರೂಪಾ ಪ್ರತ್ಯಗಾತ್ಮನೇ ಆನಂದರೂಪಾ ನೀಡೈ ಘನಜ್ಞಾನಾ ಬೋಧಾ ಬೇಡುವೆ ನಿನ್ನೊಳ್ ಗುರುವೇ ವಂದೇ ಆತ್ಮಸ್ವರೂಪವ ಬೋಧಿಸಿ ಎನ್ನ ಮುಕ್ತ ಮಾಡುನೀ ಶ್ರೀ ಗುರುದೇವಾ ನಾರಾಯಣಪದದಾ ಜ್ಞಾನಾ ಸಾರಿದ ಶಂಕರ ಗುರುವೇ ವಂದೇ
--------------
ಶಂಕರಭಟ್ಟ ಅಗ್ನಿಹೋತ್ರಿ
ವಧು ವರರ ಯದ್ಧರಿಸೊ ಉದಧಿಶಯನ ಒದಗಿಸುತಲಾಯುರಾರೋಗ್ಯ ಸುಜ್ಞಾನ ಪ ಯತಿಪೂಜೆ ಕ್ಷಿತಿದೇವ ತತಿಸೇವೆ ತಿಥಿತ್ರಯದ ವೃತನೇಮ ಮೊದಲಾದ ಸತ್ಕಕರ್ಮವ ಮತಿಯಿಂದ ಗೈಯುತಲಿ ಪತಿತಪಾವನ ನಿನ್ನ ಕಥೆಗಳನು ಕೇಳ್ವದಕೆÉ ರತಿಯಿತ್ತು ಪ್ರತಿದಿನದಿ 1 ಹಿರಿಯರಲಿ ವಿಶ್ವಾಸ ಗುರುಮುಖದಿ ಉಪದೇಶ ಮರುತ ಸಚ್ಛ್ಯಾಸ್ತ್ರದಔಯಾಸವ ಸ್ಥಿರವಾದ ಮನವಿತ್ತು ಮರಿಯದಲೆ ಮಾರಮಣ 2 ಸಾಮಗಾನವಿಲೋಲ ಶಾಮಸುಂದರವಿಠಲ ಸ್ವಾಮಿಮನ್ನಿಸಿ ಎನ್ನ ಎನ್ನ ವಿಜ್ಞಾಪನೆ ಯಾಮಯಾಮಕೆ ನಾಮಸುಧೆಯನು ಸವಿಪ ಈ ಮಹಾಸುಖ ಗರೆದು ಪ್ರೇಮದಿಲಿ ಕೈಪಿಡಿದು 3
--------------
ಶಾಮಸುಂದರ ವಿಠಲ