ಒಟ್ಟು 15952 ಕಡೆಗಳಲ್ಲಿ , 137 ದಾಸರು , 7176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದೆನ್ನ ಮನಮಂದಿರದಲಿ ನಿಲ್ಲೊ | ಹೇ ಶ್ರೀನಿವಾಸ ಬಂದೆನ್ನ ಮನಮಂದಿರದಲಿ ನಿಲ್ಲೊ ಪ. ಇಂದಿರೇಶ ವೈಕುಂಠದಿಂದ ನೀ ಬಂದು ಈಗ ಎನ್ನ ಹೃದಯ ಕಮಲದಿ ಅ.ಪ. ಜಗದಂತರಾತ್ಮ ನಿರ್ಮಲಾತ್ಮ | ನಿರ್ಗತ ದುರಿತಾತ್ಮ ನಿಗಮಾದಿಗಳೊಂದ್ಯ ನೀ ನಿತ್ಯಾತ್ಮ | ಜೀವಂತರಾತ್ಮ ಸುಗುಣವಂತ ನಿನ್ನ ಬಗೆ ಬಗೆ ಮಹಿಮೆಯ ಪೊಗಳಬಲ್ಲೆನೆ ನಾ ಖಗವಾಹನನೆ 1 ಅರಿಯೇನೋ ಅನ್ಯರ ಹರಿ ಸರ್ವೇಶ | ಹೃತ್ಕಮಲದಿ ವಾಸ ಪರಿಹಾರಗೈಸೊ ಈ ಭವಕ್ಲೇಶ | ನಂಬಿದೆ ಸರ್ವೇಶ ಅರಘಳಿಗೆ ನಿನ್ನಗಲಿರಲಾರೆನೊ ಸಿರಿಸಹಿತದಿ ನಿನ್ನರಮನೆಯಿಂದಲಿ 2 ಇಂದು | ನೀ ರಕ್ಷಕನೆಂದು ಕರಕರೆಗೊಳಿಪುದು ಧರ್ಮವೆ ನಿಂದು | ನೀ ಕಾಯಲಿಬೇಕಿಂದು ಸರಿಯಲ್ಲವು ಈ ತೆರದಲಿ ತೊರೆವುದು ಶರಣ ರಕ್ಷಕನೆಂಬೊ ಬಿರುದು ಪೊತ್ತಿಲ್ಲವೆ 3 ಎಂತೆಂತು ಸಹಿಸಲಿ ಈ ಭವಕ್ಲೇಶ | ಜೀವಾಂತರವಾಸ ಕಂತುಪಿತ ಎಣಿಪರೆÀ ಎನ್ನಯ ದೋಷ | ಸರಿಯಲ್ಲ ಸುರೇಶ ಇಂತು ನಿನಗೆ ಒಪ್ಪಿಸಿದರೊ ಗುರುಗಳು ಚಿಂತಿತಾರ್ಥ ನಿನಗೆನ್ನ ತರ ತಿಳಿಯದೆ 4 ಬೆಟ್ಟದ ಒಡೆಯ ಬೇಗನೆ ಬಾರೊ | ಹೃತ್ಕಮಲದಿ ತೋರೊ ಶ್ರೇಷ್ಠ ಶ್ರೀ ಗುರುಗಳ ಕರುಣವ ಬೀರೊ | ಸಲಹುವರಿನ್ಯಾರೊ ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಪದಂಗಳ ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಬಂದೆಯಾ ಕೃಷ್ಣಯ್ಯಾ ಬಂದೆಯಾ ಪ ಸುಂದರ ನರರೂಪದಿಂದಲೀ ಧರೆಯೊಳು ಅ.ಪ. ಲೋಕೈಕ ದೇವನೆಂದು ಜ್ಞಾನಿಗಳೇಕಾಗಿ ಸಾರ್ವರಿಂದುಆಕಾರ ರಹಿತನ ಲೋಕ ಸಾಮಾನ್ಯರುಸ್ವೀಕರಿಸರು ಎಂದು ಸಾಕಾರನಾಗಿ 1 ಪೂರಾ ವಿಶ್ವದಲ್ಲೆಲ್ಲ ತುಂಬಾ ನಿಂತಿಹ ನಿನ್ನ _ನಾರು ನಂಬರು ಎಂತೆಂಬಕಾರಣ ಜಗಕೆ ತೋರರೆಲ್ಲಾ ಗುಣಸಾರ ಸಂಗ್ರಹಿಸಿ ನೀ ಧೀರ ಮಾನವನಾಗಿ2 ಜಗದೊಳಂದದ್ಭುತ ಶಕ್ತಿ ಇರುವುದೆಂ _ದುಗಮಿಕೆ ಜನದೊಳಾಸಕ್ತಿಜಗದೊಳು ಗದುಗಿನ ವೀರನಾರಾಯಣಬಗೆ ಬಗೆ ಮಹಿಮೆಯ ಸುಗುಣ ಮಾನವನಾಗಿ 3
--------------
ವೀರನಾರಾಯಣ
ಬಂದೆಯಾ ಬಂಧುವೆ ಭಾಗ್ಯದ ನಿಧಿಯೆ ಮಂದರದರ ನಿನ್ನ ಮಂದಿರಕ್ಕೆ ಪ ತಂದೆಯ ಮಮ ಹೃನ್ಮಂದಿರಕಾಗಲೇ ಬಂದೆಯೊ ಕರುಣಾಸಿಂಧುವೆ ಸ್ವಾಮಿ ಅ.ಪ ಆಗಮನುತ ನಿನ್ನಾಗಮನದಿ ಇನ್ನು ನೀಗಿತು ಚಿಂತೆಯು ನೀರಜನಯನ ಯಾಗ ಸಾಫಲ್ಯಕೆ ಸೂಚನೆಯಿದು ಮಹಾ ಭಾಗವತ ಪ್ರಿಯ 1 ಮುಂದಿನ ಕಾರ್ಯವ ನೀನೆ ವಹಿಪುದು ಎಂದೆಂದಿಗೂ ನೀನೆ ಗತಿಯು ನಂದನಂದನ ಗೋವಿಂದ ಮುಕುಂದನೆ ನಿಂದಿರಿಸಯ್ಯಾ ನಿನ್ನಾಜ್ಞೆಯಲೆಮ್ಮನು 2 ನಾಗಶಯನ ನಳಿನಾಯತ ಲೋಚನ ಯೋಗಿನಿಲಯ ಕಮಲಾಲಯವಾಸ ಯಾಗರಕ್ಷಕನೆ ಯಾಗ ಫಲಪ್ರದ ಬಾಗುವೆ ಚರಣಕೆ ಕರಿಗಿರೀಶನೆ 3
--------------
ವರಾವಾಣಿರಾಮರಾಯದಾಸರು
ಬಂದೊದಗಿತು ಪುಣ್ಯಫಲವು ಮುಚುಕುಂದವರದ ವಾಸುದೇವಾರ್ಯರೊಲವು ಪಸಂಚಿತಾಗಾಮಿಪ್ರಾರಬ್ಧವೆಂಬ ಕಂಚುಕಿಯಾದ ಕರ್ಮದ ಬಹುಬದ್ದದಂಚುಗಾಣುವುದಾವ ಸಿದ್ಧ ಇದು ಕಿಂಚಿದಾದುದು ಗುರುಚರಣರೇಣಿಂದ 1ಏನು ಸುಕೃತವ ಮಾಡಿದೆನೊ ನಿನಗಾನತ ನಾನಾದ ಬಗೆಯು ತಾನೇನೊನೀನೆ ಕರುಣವಿತ್ತುದೇನೊ ನಾನು ಜ್ಞಾನವೆಂತೆಂಬ ಸ್ವರೂಪವನರಿಯೆನೊ 2ಪರಿಹರಿಸಿತು ಜನ್ಮ ಮರಣ ದುಃಖ ದುರವಣೆ ದಹಿಸಿತು ಲಕ್ಷ್ಮಿಯರಮಣತಿರುಪತಿ ವೆಂಕಟರಮಣ ನೀನೆ ಗುರು ವಾಸುದೇವರೂಪಿನಲಿತ್ತೆ ಕರುಣ3ಓಂ ನರನಾರಾಯಣಾತ್ಮಕಾಯ ನಮಃಕಂ||ಭೃಗುವಾರದರ್ಚನೆಯನಿದನಿಗಮಾಗಮವೇದ್ಯ ಗ್ರಹಿಸಿ ಸಿರಿ ಧರಣಿಯು ಸಹಭಗವಂತ ನಿನ್ನ ಭಕ್ತರೊಳಗಲದೆ ನಾನಿಹುದ ಮಾಡು ವೆಂಕಟರಮಣಾ
--------------
ತಿಮ್ಮಪ್ಪದಾಸರು
ಬಂದ್ಯಾ ಬಾ ಮಂದಗಾಮಿನಿ ಚಂದಿರವದನೆ ಸುಂದರವದನೆ ಬಂದ್ಯಾ ಪ ಬಂದ ಭಕ್ತವೃಂದಭೀಷ್ಟ ನೀಡ್ವೆನೆಂದು ಚಂದ ಕರಗಳಿಂದ ಶೋಭಿಸುತಾ ಬಂದ್ಯಾ 1 ಪದುಮನಿಲಯ ಪದುಮಾನನೆ ಪದುಮಾಯತಾಕ್ಷಿ ಪದುಮನಾಭನ ರಾಣಿ 2 ನರಸಿಂಹವಿಠ್ಠಲನರಸಿ ಪ್ರಸನ್ನಮುಖಿ ಇರಿಸು ಶರಣರಲ್ಲಿ ಕರುಣಾಕಟಾಕ್ಷ 3
--------------
ನರಸಿಂಹವಿಠಲರು
ಬಂಧನ ಬಿಡಿಸು ಶ್ರೀಶಾ ಇಂದಿರೇಶಾ ಪ. ಇಂದು ಈ ಭವದಲ್ಲಿ ನೊಂದು ನೊಂದೆನೊ ದೇವಾ ಗೋವಿಂದಾ ಪಾಲಿಸಬೇಕಯ್ಯಾ ಗೋಗಳರಾಯ ಅ.ಪ. ಇಂದಿರೇಶನೆ ನಿನ್ನ ಒಂದಿನಾದಿ ನಾನು ದೈನ್ಯದಿ ಭಜಿಸದೆ ಸುಂದರ ಮೂರುತಿ ನೀನು ಯನ್ನ ಹೃದಯ ಮಂದಿರದಲ್ಲಿ ಸಂದರುಶನ ಕೊಡೊ ಇಲ್ಲಿ 1 ಸದೋಷಿಯು ನಾನು ದೋಷರಹಿತ ನೀನು ಶೇಷಶಯನ ನಿಮ್ಮ ನಾಮವೇ ಭೂಷಣ ಸ್ವರಮಣನೀ ನಿನ್ನ ಸ್ಮರಣೆಯಾ ಮಾಡದೆ ಹಾಳು ಮಾತುಗಳಿಂದ ಹೊತ್ತುಗಳದೆ ಮುಕುಂದಾ 2 ಮತ್ಗ್ಯಾದ್ಯನಂತವತಾರ ನೀನು ತುಚ್ಛದೈತ್ಯಸ ಸಂಹಾರ ಇಚ್ಛಾದಿಂದಲಿ ನೀನು ಸುರರಿಗಾಧಾರ ಕಾಳಿಯಮರ್ದನ ಕೃಷ್ಣಧೀರ ಗಂಭೀರಾಸುತಸುಕುಮಾರಾ 3
--------------
ಕಳಸದ ಸುಂದರಮ್ಮ
ಬಂಧುಗಳದಾರಿಗಾರಿದ್ದರೇನು - ಇಷ್ಟಬಂಧು ತ್ರೈಜಗಕೆ ಶ್ರೀಹರಿಯಲ್ಲದೆ - ಮಿಕ್ಕಬಂದುಗಳದಾರಿಗಾರಿದ್ದರೇನು ಪ ಬ್ರಹ್ಮೇತಿ ಬಂದು ಕಾಡಲಾಗಿ ರುದ್ರಾದಿಗಳೇನ ಮಾಡುತಿರ್ದರಾ ಶೈಲದೊಳಗೆ 1 ಪತಿ ಏನ ಮಾಡುತಿರ್ದನುಮಿಂಡಿ ಪೆಣ್ಣನು ಸಭೆಯಲ್ಲಿ ಸೀರೆ ಸುಲಿಯಲುಗಂಡರೈವರು ನೋಡಿ ಏನ ಮಾಡುತಿರ್ದರಯ್ಯ 2 ಮೃಗಚಕ್ರವರ್ತಿ ಬಹುವರನಾಗಿ ಪೋಗುತ್ತಿರೆಮಿಗೆ ಸತಿಸುತರೇನ ಮಾಡುತಿರ್ದರುಮೃಗಮಾನವಾಕಾರ ಕಾಗಿನೆಲೆಯಾದಿಕೇಶವನಲ್ಲದೆಮಿಗು ಬಂಧುಗಳದಾರಿಗಾರಿದ್ದರೇನು 3
--------------
ಕನಕದಾಸ
ಬನ್ನ ಮಂದ ಸಿಂಧು ವಕ್ತ್ರ ಭಾಗವತ ಸಿರಿ ಪಾದ ಕರ ಕಮಲ ಭಾರತೀಶ ಭವ ಕಾಲ ವಜ್ರ ವಿಧಿ ಸಖನೋ ಗುರುರಾಜ ವಾದಿಗಳ ಕುಲವದ್ದು ದಶರಥ ಹೇಯನೆನಿಸಿದ ಬೌದ್ಧದೇವನ ಗುರುರಾಜ ಶ್ರದ್ಧೆಯಿಂದಲಿ ಸಿದ್ಧಪಡಿಸುವದೆಂದು ಗುರುರಾಜ ಜನರ ಬುದ್ಧಿ ಭೇದವ ಮಾಡಿ ದಿವದಿ ಕದ್ದು ದೇವನಭಾವದಿಂದಲಿ ಪೂಜಿಸಲು ನೀ ಗುರುರಾಜಅದು ಬಲು ಸುದ್ದಿಯ ತಿಳಿಯಲು ಸದ್ದು ಇಲ್ಲದೆ ಬೌದ್ಧ ಜನರು ಬಂದು ನೋಡೆ ಗುರುರಾಜ ತಿದ್ದಿ ವಿಗ್ರಹ ತೋರಿ ಸರ್ವ ಸುರರನು ಸಲಹಿ ಅಸುರರ ವದ್ದ ಪಲ್ಗಳ ಮುರಿದು ಮೆರೆದೇ ಗುರುರಾಜ ನೀ ಪದ್ಮಜಾತನ ಪದವಿ ಪೊಂದುವಿ ಎಂದು ನಿನ್ನಯಪದ್ಮಪಾದಕೆ ಬಿದ್ದೆನಾ ಗುರುರಾಜ ನೀ ಗುರು ಮಧ್ವವಲ್ಲಭನಿಂದ ರಮಣವ ಕೊಂಡು ಭಜಿಸುವೆ ಗುರುರಾಜ ಸಿದ್ಧ ಶೇಖರ ಸೋಮ ವಂದ್ಯನೊ ನೀ ಗುರುರಾಜ ಹರುಷದಿಂದಲಿ ನಿನ್ನ ದರುಶನವಾದ ದಿನದಾರಭ್ಯ ಗುರುರಾಜ ಮನದಲಿ ಮಿಂಚಿನಂತೆ ಪೊಳೆವೊ ಸುಂದರ ಸುಂದರಾಂಗಿಯ ಸಹಿತ ವಂದಿಪೆನೊ ಗುರುರಾಜ
--------------
ಗುರುತಂದೆವರದಗೋಪಾಲವಿಠಲರು
ಬನ್ನಿರಿ ಬನ್ನಿರಿ ಪುರಜನರೆಲ್ಲರು ಕೃಷ್ಣನ ದರುಶನಕೆ ಪೋಗುವ ಪ ಕೃಷ್ಣನು ಜನಿಸಿದ ಈ ದಿನ ಇಷ್ಟವ ಪ್ರಾರ್ಥಿಸಲು ಪೋಗುವಅ.ಪ ದುಂದುಭಿ ನಾದವು ಕೇಳುತಿದೆ ಬಲು ಮಂದಿಯ ತಂಡವು ಹೋಗುತಿದೆ ಕಂದನ ರೂಪದಿ ಬಂದಿಹ ಆನಕ ದುಂದುಭಿ ಕುವರನ ಸಂಭ್ರಮ ನೋಡಲು 1 ಪೇಳಿರಿ ನಿಮ್ಮಯ ಕೊರತೆಗಳೆÀಲ್ಲವ ಕೇಳಿರಿ ವರಗಳ ಧೈರ್ಯದಲಿ ಬಾಲನು ಸುಲಭದಿ ಒಲಿಯುವ ಒಳ್ಳೆಯ ಕಾಲವಿದೆಲ್ಲರಿಗೆ ಬೇಗನೆ 2 ಜನುಮ ಜನುಮಗಳ ಪುಣ್ಯದ ರಾಶಿಯು ಜನುಮಾಷ್ಟಮಿ ದಿನದಿ ಲೋಕಕೆ ಜನುಮಾದ್ಯಷ್ಟಕದಾತನ ದರುಶನ ಮನಕೆ ಪ್ರಸನ್ನತೆ ಕೊಡುವುದು ಪೋಗುವ 3
--------------
ವಿದ್ಯಾಪ್ರಸನ್ನತೀರ್ಥರು
ಬನ್ನಿರೈಯ್ಯ ಬನ್ನಿರೈಯ್ಯ ಬನ್ನಿರೈಯ್ಯ ಬನ್ನಿರಿ ಪ ಚಿನ್ನ ಕೃಷ್ಣನ ಚೆನ್ನಾಗಿ ನೆನೆದು ಪ್ರಸನ್ನ ಮಾಡಿರಿ ಅ.ಪ. ಸತಿಯು ಸುತರು ಗತಿಯು ಎಂದು ಕೆಡಲು ಬೇಡಿರಿ ಮಿತಿಯು ಇಲ್ಲ ಮೇರೆಯು ಇಲ್ಲ ಫಲವು ಇಲ್ಲ ಕೇಳಿರಿ ಮತಿಯ ಹರಿಯ ಅಡಿಯಲ್ಲಿಟ್ಟು ಪ್ರೀತಿಮಾಡಿರಿ ಗತಿಯನೀಡಿ ತ್ವರಿತದಿಂದ ಪೊರೆವ ನಿಮ್ಮ ನೊಡಿರಿ 1 ಇಂದು ಕಾಲ ಕಳೆಯ ಬೇಡಿರಿ ಶುಭ ಇಂದೆ ನೆನೆಯಿರಿ ಬಂದು ಯಮನ ಭಟರು ಕರೆದರೆ ಏನು ಮಾಡೋರಿ ಮುಂದೆ ಇಂಥ ಜನ್ಮಬಹುದೆ ಬಂಧ ನೂಕಿರಿ2 ಆಶಪಾಶ ಮೋಸ ಬಲುಕ್ಲೇಶ ತಿಳಿಯಿರಿ ಹೇಸಿಕೆ ಸಂಸಾರವನು ಘಾಸಿಕೆ ನೋಡಿರಿ ವಾಸವೇಶ ಜಯಮುನೀಂದ್ರ ವಾಯುಸ್ಥ ಕೃಷ್ಣ ವಿಠಲನ ದಾಸನಾಗಿ ಗೆಜ್ಜೆಕಟ್ಟಿ ನಿರಾಶೆಯಿಂದ ಭಜಿಸಿರಿ 3
--------------
ಕೃಷ್ಣವಿಠಲದಾಸರು
ಬಪ್ಪ ಶುಭಾಶುಭ ತಪ್ಪದಾದರೆ ನಿನ್ನಿಂ-ದಪ್ಪುದೇನಪ್ಪ ಹರಿ ಪ ಬಂದಾಪತ್ತ ನೀಗುತ್ತಾ | ನಂದ ಪ್ರಾಪ್ತಿಸಲು ಗೋ-ವಿಂದ ನಿನ್ನ ಸೇರ್ವುದು 1 ಮುದ್ದಿನ ವರಲಿಪಿ ತಿದ್ದಿ ಕಾಯ್ದುದರಿಂದ ಹೊದ್ದಿ ನಾನಿದ್ದೆ ನಿನ್ನ 2 ಕೈಯ ಮುಗಿವೆ ಜಗ | ದಯ್ಯ ದಮ್ಮಯ್ಯ ಪಾಲಿಸೈಯ ನೀ ಸೈಯೆನಿಸಿ 3 ಪ್ರಾರಬ್ಧ ಫಲ ಮೀರ | ಬಾರದೆಂಬರಿವಿಂ-ದೂರ ನೀ ತಪ್ಪಿಸುವೆ 4 ವಾಸುದೇವ ರಮೇಶ | ದೋಷ ಕ್ಷಮಿಸಿ ತವ ದಾಸನ ರಕ್ಷಿಸಯ್ಯ 5
--------------
ಅನ್ಯದಾಸರು
ಬಯಗುತನಕ ಆಟ ಕೂಟ ಊಟದ ಕೆಲಸ ಉಂಡ ಮೇಲೆ ಶಯನ ಪ ಬಯಲಾಯಿತು ಈ ಒಗತನವೆಲ್ಲ ರಕ್ಷಿಸಯ್ಯ ರಘುಕುಲ ತಿಲಕ ಅ ಪುರಾಣವಿಲ್ಲ ಪುಣ್ಯಕತೆಯಿಲ್ಲ ಪಾರಾಯಣದಿ ಮನಸಿಲ್ಲತರೋಣ ಬರೋಣ ತಿನ್ನೋಣ ಮಲಗೋಣ ಮತ್ತೇಳೋಣ 1 ಕಣ್ಣಿಗೆ ಜೋಂಪು ಹತ್ತುವತನಕ ಅನ್ಯವಿಷಯ ಮಾತುಕತೆಯಾಟಹೆಣ್ಣು ಹೊನ್ನು ಮಣ್ಣು ಮಮಕಾರದಿ ಒಳಹೊರಗಿಣುಕಾಟ2 ಹೀಗಾಗಿ ನಿನ್ನಲ್ಲಿಗೆ ಬಂದೆ ಇನ್ನಾದರೂ ಸಲಹೊ ಸಿರಿಕಾಗಿನೆಲೆಯಾದಿಕೇಶವ ಶಿರಬಾಗಿ ಬೇಡಿಕೊಂಬೆ 3
--------------
ಕನಕದಾಸ
ಬಯಲ ಜಾತ್ರೆಗೆ ನಡೆಹೋಗುವ ಬಾರದಲೆ ಅಲ್ಲಿರುವ ಪ ಶಾಂತಿ ಎಂದೆಂಬ ಕಂಟಲೆಗಳು ಶಮೆ ಹುರಿಗೆಜ್ಜೆ ಎತ್ತುಗಳುದಾಂತಿ ಎಂದೆಂಬ ಕಾವಡಿಗಳು ದಮೆ ಎಂಬ ಹೂಜೆಗಳು1 ಮಂಗಳವೆಂಬ ಬಾಲಕರು ಮುಕ್ತಿ ಎಂಬ ಮುತ್ತೈದೆಯರುಸಂಗ ಹರರಹ ವಿಟಗಾರರು ಸೈರಣೆ ಎಂಬ ಹಿರಿಯರು 2 ಸಂತೋಷವೆಂಬ ಅಂಗಡಿಗುಂಪು ಸಹಜದ ಹೂಕಂಪುಶಾಂತರೆನಿಪ ದೊರೆಗಳ ಗುಂಪು ಸುಖ ಛತ್ರಿಯ ತಂಪು 3 ಓಂಕಾರನಾದದ ನಗಾರಿ ವೀಣಾನಾದದ ತುತ್ತೂರಿಸಂಕಲ್ಪ ಸುಳ್ಳೆಂಬ ತಂಬೂರಿ ಸಾಮವೆನಿಸುವ ಭೇರಿ 4 ಅಮೃತ ಬಿಂದುವಿನ ಮೊಗೆಯುದಾರಿದಾರಿಗೆ ಸೋಹಂಸ್ಮರಣೆ ದೃಢ ಮನವದು ಚಡಿಯು 5 ಆನಂದ ವನಗಳ ಸಾರುತ ಆಯಾಸ ಕಳೆಯುತ್ತಸ್ವಾನಂದ ಗೋಪುರ ಕಾಣುತ ಸುಮ್ಮಾನವ ಪಡೆಯುತ6 ಮೃಢನಾಳ ದ್ವಾರವ ಪೋಗುತ ಮುಂದೆ ಚಂದ್ರನ ಕಾಣುತಅಡರಿದ್ವಿದಳ ಸದರೇರುತ ಅತ್ತತ್ತ ಸಾರುತ 7 ಕಮಲ ಪೀಠವನೇರುವರ ಮಹೇಶನೆನ್ನು ಅವರ8 ತುರೀಯವೆಂದೆಂಬ ಬಯಲಗೂಡಿ ತಾವು ಹೋಗುವ ನಾಡಿಹರ್ಷದ ಧೂಳ ದರ್ಶನ ಮಾಡಿ ಹಾಯಿಗುಡಾರ ಹೂಡಿ9 ಶಿಂಶುಮಾರವೇ ದೇವರ ಪೀಠ ಸಿದ್ಧವೆಂಬ ಕವಾಟಸಂಶಯವಿಲ್ಲದ ಎಡೆಯಾಟ ತತ್ಪುರುಷರ ಕೂಟ10 ಸೂರ್ಯ ಕೋಟಿಗೆ ಘನವುಒತ್ತೊತ್ತು ಪೂರ್ಣಾಭಿಷೇಕ ಓಂ ಎಂದೆಂಬ ಸ್ವರವು 11 ಸುವಾಸನೆ ಎಂದೆಂಬ ಧೂಪವು ಸುಂದರ ಪುಷ್ಪಗಂಧತಾವು ಮಾಡುವ ಭಾವದಲಿಂದ ತೃಪ್ತಿ ನೈವೇದ್ಯ ಚಂದ12 ಎರಡಿಲ್ಲದೇಕಾರ್ತಿ ಬೆಳಗುತ ಎಲ್ಲೆಡೆ ತಾ ಹೊಳೆಯುತಹೊರ ವೊಳಗೆಂಬುದ ಮರೆಯುತ ಹೇಮದ ತಗಡಾಗಿ ಇರುತ13 ಬೆಳಕ ಕಂಡಾರತಿ ಎತ್ತುತ ಬೆಳಗನು ಬೆಳಗುತ್ತತಿಳಿದು ಪ್ರದಕ್ಷಿಣೆ ಮಾಡುತ ತೋರುವುದು ಬ್ರಹ್ಮವದೆನ್ನುತ 14 ಭಯದ ವಿಸರ್ಜನೆ ಮಾಡುತ ಬಯಲಾಗಿಯೆ ತೋರುತಬಯಲ ಚಿದಾನಂದನಿಗೆರಗುತ್ತ ಬ್ರಹ್ಮನಾಗಿ ತಾನಿರುತ 15
--------------
ಚಿದಾನಂದ ಅವಧೂತರು
ಬಯಸದಿರೈಹಿಕ ಸುಖಗಳನುದಿನ ನಿ ಪ ರ್ಭಯದಿ ಭಜಿಸು ಹರಿಯ ವಯನಗಮ್ಯ ವಾಂಛಿತ ಫಲಗಳ ಸ ದ್ದಯದಿ ಕೊಡುವುದರಿಯ ಅ.ಪ. ಮೃಗ ಪಶು ವಾರಿ ಖೇಚರ ಶ ರೀರಗಳಲಿ ಬಂದೆ ಮಾರಿ ಮಸಣಿ ಬಿಕಾರಿ ಭವಾನಿಗ ಳಾರಾಧಿಸಿ ನೊಂದೆ ನಾರಾಯಣ ಪದಾರವಿಂದ ಯುಗ ಳಾರಾಧನೆ ಒಂದೇ ಶರಧಿ ತೋರುವುದೋ ಮುಂದೆ 1 ಅನಿರುದ್ಧನು ನಿಜ ಮನಕೆ ಸಹಿತ ತಾ ಧನ ಧಾನ್ಯದೊಳಿಪ್ಪ ಸುಖಗಳ ತೋರ್ಪಾ ಗುಣವಂತರೊಳು ಜಯಪತಿ ಸಂಕರ್ಷಣ ಕರ್ಮವ ಮಾಳ್ಪಾ ಧರ್ಮ ಕರ್ಮಗಳ ಕೊನೆಗೀತನು ಒಪ್ಪ 2 ವಾಸುದೇವ ವಿಜಯಪ್ರದನಾಗೀ ನರ ರಾ ಶರೀರಗಳೊಳು ಕ್ಲೇಶ ಸುಪುಣ್ಯಗಳ ತಾ ಸಮನಿಸುವನು ಸಂದೇಹಿಸದಿರು ಆಶಾಪಾಶಗಳನು ತಾ ಸಡಲಿಸುವನು ಶೀಘ್ರದಿಂದ3 ನಾರಾಯಣ ಕರುಣಾಸಮುದ್ರ ಕೇಳು ತನ್ನಾರಾಧಕರಿಗೆ ದೂರಗೈದು ದುರಿತಾ ಕೈವಲ್ಯ ಪ್ರದಾಯಕ ತೋರುವ ಸರ್ವಜಿತ ಹಾರೈಸದಿರು ಅಲ್ಪಾಹಿಕ ಸುಖಗಳ ನರಕದ್ವಾರಗಳವು ನಿರುತ ಸೂರಿಗಳನು ಸಂಸೇವಿಸು ಮುಕ್ತಿಗೆ ದ್ವಾರವಹುದು ಸತತಾ4 ಪಂಚರೂಪಿ ಪರಮಾತ್ಮನು ತಾ ಷ ಟ್ಟಂಚ ರೂಪದಿ ಪೊರೆವಾ ಪಾತಕ ತರಿವ ಸಂಚಿತಾಗಾಮಿಗಳಪರಾಧವ ಮುಂಚಿನವಂಗೀವಾ ಮಿಂಚಿನಂದದಿ ಪೊಳೆವಾ 5
--------------
ಜಗನ್ನಾಥದಾಸರು
ಬಯಸಿ ಕರೆದರೆ ಬರುವರೇನಯ್ಯಾ ನರಹರಿಯ ದಾಸರು ಬಯಸಿ ಕರೆದರೆ ಬರುವರೇನಯ್ಯಾ ಪ ಬಯಸಿಕರೆದರೆ ಬರುವರೇನೋ ಜಯಶ್ರೀ ಮುರಹರಿಯ ನಾಮ ಓದಿ ಕಳೆದುಕೊಂಡ ಶೂರರು ಅ.ಪ ಮಹ ವಿಷಯಲಂಪಟ ಬಿನುಗು ತ್ರಿಗುಣೆಂಬ್ಹೇಸಿಕೆಯ ಬಳಿದು ಸುಸ್ಸಂಗಶ್ರವಣ ಮನನದಿಂ ನಿಜಮೂಲ ಮರ್ಮರಿದು ಆಸನವ ಬಲಿದು ಲೇಖ್ಯದಮೇಲೆ ಘನ ಅನಂದದಿರುವರು 1 ಆರು ದ್ವಯಗಜ ಇಕ್ಕಡಿಯ ಗೈದು ಬಿಡದ್ಹಾರಿಬರುವ ಆರು ಹುಲಿಗಳ ತಾರ ಸೀಳೊಗೆದು ಬಲುಘೋರಬಡಿಪ ಆರುನಾಲ್ಕು ಶುನಕಗಳು ತುಳಿದು ಸತ್ಪಥವ ಪಿಡಿದು ಸಾರಾಸಾರ ಸುವಿಚಾರಪರರಾಗಿ ಮಾರನಯ್ಯನ - ಪಾರಮಹಿಮೆಯ ಅಮೃತ ಪೀರುವವರು 2 ತಾಸಿನ ಜಗಮಾಯವೆಂದರಿದು ಇದು ಸತ್ಯವಲ್ಲೆಂದು ಬೇಸರಿಲ್ಲದೆನುಭವದಿ ದಿನಗಳೆದು ಸುಚಿಂತದನುದಿನ ದಾಸದಾಸರ ಸಾಕ್ಷಿಗಳ ತಿಳಿದು ನಿಜಧ್ಯಾಸದ್ಹುಡಿಕ್ಹಿಡಿದು ನಾಶನಭವದ್ವಾಸನೆಯ ನೀಗಿ ಸಾಸಿರನಾಮದೊಡೆಯ ನಮ್ಮ ಶ್ರೀಶ ಶ್ರೀರಾಮಚರಣಕಮಲದಾಸರಾಗಿ ಸಂತೋಷದಿರುವರು 3
--------------
ರಾಮದಾಸರು