ಒಟ್ಟು 8186 ಕಡೆಗಳಲ್ಲಿ , 130 ದಾಸರು , 4775 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಜಯ ಗುರು ತವಪಾದರಜವ ಕರುಣಿಸಿ ಎನಗೆ ಭುಜಗಶಯನನ ಧ್ಯಾನ ಭಜನೆ ನೀಡುವುದು ಪ. ತವ ಶಿಷ್ಯವಂಶ ಸಂಜಾತಳೆನ್ನುತಲಿ ಬಹು ತವಕದಲಿ ಕರುಣಾರ್ದ ದೃಷ್ಟಿಯಿಂದ ತವ ಸೇವೆ ಎನಗಿತ್ತು ತವ ಕೀರ್ತನೆಯ ನುಡಿಸಿ ಮೂರ್ತಿ ತೋರೆನ್ನ ಭವತಾಪ ಹರಿಸಯ್ಯ 1 ನಿನ್ನ ಮಹಿಮೆಯ ಗುಟ್ಟು ವರ್ಣಿಪರು ಯಾರಿನ್ನು ನಿನ್ನ ಚರ್ಯೆಯ ಚರಿತೆ ಬರೆದವರ್ಯಾರೊ ನಿನ್ನ ನಿಜ ಸಂಕಲ್ಪ ಇನ್ನು ಅರಿಯುವರುಂಟೆ ಬನ್ನ ಭವ ಉಂಟೆ 2 ಆ ದೇವಮುನಿ ಆಜ್ಞೆ ಮೋದದಲಿ ಸ್ವೀಕರಿಸಿ ಪಾದನ್ಯೂನತೆ ಕವನ ಪೂರ್ಣಗೊಳಿಸಿ ವೇದಶಾಸ್ತ್ರಗಳರ್ಥ ಸುಲಭದಲಿ ತಿಳಿಸುತಲಿ ಹಾದಿ ತೋರಿದೆ ಶಿಷ್ಯರಾದ ಸುಜನರಿಗೆ 3 ಸತ್ಕರ್ಮ ಫಲಗಳನು ನಿತ್ಯದೊಳಗರ್ಪಿಸಲು ಉತ್ತಮನು ಆರೆಂಬ ಚಿತ್ತದಳಲ ಮುಕ್ತಿಯೋಗ್ಯರಿಗೆ ಬಹು ಯುಕ್ತಿಯಿಂದಲಿ ತೋರಿ ಉತ್ತಮನು ಹರಿಯೆಂದು ಶಕ್ತಿಯಿಂ ಸ್ಥಾಪಿಸಿದ 4 ವೈಕುಂಠಪುರದೊಳಗೆ ಶ್ರೀ ಕರನ ವಕ್ಷಕ್ಕೆ ಸೋಕಿಸಿದೆ ಚರಣವನು ಜೋಕೆಯಿಂದ ಈ ಕಾರ್ಯಕಾರಣವ ನಾ ಕೇಳಿ ನುಡಿವಂಥ ವಾಕು ಲಾಲಿಸುತ ವಿವೇಕ ಮತಿ ಕರುಣಿಪುದು 5 ಆ ಕಮಲನಾಭನಾ ಹೃದಯ ಕರುಣಾಮೃತವು ಸೋಕಿ ತುಂಬಿಹುದು ತವ ಚರಣ ಕಮಲದಲಿ ನಾ ಕೇಳ ಬಂದೆನಾ ಕರುಣಾಮೃತದ ಕಣವ ಯಾಕೆ ಮರೆಮುಚ್ಚಿನ್ನು ನೀ ಕೊಡೈ ತವಕದಲಿ 6 ಪಾದ ರೂಢಿಗೊಡೆಯಗೆ ಲಕುಮಿ ಓಡಿದಳು ಕರವೀರಪುರಕೆ ಸ್ವಾಮಿ ಬೇಡಾಗೆ ವೈಕುಂಠ ನೋಡಿ ಆನಂದಾದ್ರಿ ಮಾಡಿದನು ಮಂದಿರವ ಕೂಡಿ ಪದ್ಮಿನಿಯ 7 ನೋಡಿ ವೈಕುಂಠದೊಳು ನಾಡಿಗೊಡೆಯನ ಚರ್ಯ ರೂಢಿಯೊಳು ಜನಿಸಿ ಭೂಸುರವಂಶದಿ ದುರಿತ ಈಡಾಡಿ ಹರಿದಾಸ್ಯವನು ಬೇಡಿ ಬಯಸುತ ಪೊಂದಿ ನಾಡಿನೊಳು ಮೆರೆದೆ 8 ಪ್ರತಿವರ್ಷ ಬಿಡದೆ ತಿರುಪತಿ ಯಾತ್ರೆ ಭಕ್ತಿಯಲಿ ಪತಿತಪಾವನನ ಓಲೈಸಿ ಮೆರೆದೆ ಕ್ಷಿತಿಯಕ್ಷೇತ್ರ ಅಪ್ರತಿಮಹಿಮ ಸಂಚರಿಸಿ ಕ್ಷಿತಿಗೆ ತೋರಿದೆ ನಿನ್ನ ಮಹಿಮೆ ಜಾಲಗಳ 9 ಅಂಕಿತವದಲ್ಲದೆ ದಾಸತ್ವ ಸಿದ್ಧಿಸದು ಕಿಂಕರಗೆ ಅಂಕಿತವೆ ಕುರುಹು ಎಂದು ಅಂಕಿತವ ಪಡೆದು ಚಕ್ರಾಂಕಿತನ ಗುಣ ಮಹಿಮೆ ಶಂಕಿಸದೆ ಪೇಳ್ದೆ ತವ ಕಿಂಕರೋದ್ಧಾರಕನೆ 10 ನಿನ್ನ ಮಹಿಮಾದಿಗಳ ವರ್ಣಿಸಲು ಎನ್ನಳವೆ ಚನ್ನ ಗುರು ವಿಜಯವಿಠ್ಠಲನ ಪದಕಮಲ ಚನ್ನಾಗಿ ಕಂಡು ಹೃನ್ಮಂದಿರದಿ ಸತತದಲಿ ತನ್ಮಂತ್ರ ಕಿರಣವೆಮ್ಮಲ್ಲಿ ಬೀರಿದ ಕರುಣಿ 11 ವಿಕ್ರಮ ಕಾರ್ತೀಕ ಶುದ್ಧ ದಶವಿೂ ದಿವ್ಯ ಶುಕ್ರ ನಾಮರು ವಾರ ಶುಭದಿನದಿ ಇಂದು ಅಕ್ಕರದಿ ಕರಸಿಲ್ಲಿ ಉಕ್ಕಿಸಿದೆ ತವ ಸ್ತೋತ್ರ ಮಕ್ಕಳಂದದಿ ಪೊರೆವ ಅಕ್ಕರೆಯು ಉಂಟೊ 12 ಮಧ್ವರಾಯರ ಕುಲದಿ ಉದ್ಭವಿಸಿದಂಥ ಈ ಶುದ್ಧ ವೈಷ್ಣವ ಕುಲದಿ ಜನಿಸಿ ಬಂದೆ ಶುದ್ಧ ದಾಸತ್ವದ ಮುದ್ರಾಂಕಿತದ ರತ್ನ ಪಾದ ಕಂಡೆ 13 ಪಾಪಿ ಜನರುದ್ಧರಿಪ ಪಾವನಗಾತ್ರನೆ ಆ ಪಯೋಜಾಸನರ ತರತಮ್ಯವ ಸ್ಥಾಪಿಸಿದ ಮಹಿಮನೆ ಸದ್ಗುಣಾಂಬುಧಿ ನಿಲಯ ಗೋಪಾಲಕೃಷ್ಣವಿಠ್ಠಲನ ಪದಭೃಂಗ 14
--------------
ಅಂಬಾಬಾಯಿ
ವಿಜಯಗುರು ನಿನ್ನಡಿಯ ಭಜಿಸುವೆನೋ ಸತತದಲಿ ವಿಜಯ ಕೊಡು ದಾಸತ್ವದಿ ಪ. ಪಾದ ಭಜನೆಯ ಮಾಳ್ಪಂಥ ಮತಿ ರುಜು ಮಾರ್ಗ ತೋರಿ ಸಲಹೋ ದಯದಿ ಅ.ಪ. ವಿಧಿ ವಶದಿ ಘನ ಕಷ್ಟ ಒದಗುತಿರೆ ಚರಿಸಿ ಯಾತ್ರೆ ಪದುಮನಾಭನ ದಯದಿ ಕಾಶಿಕ್ಷೇತ್ರದಲಿರುವ ಅದೆ ಕಾಲದಲಿ ಸ್ವಪ್ನದಿ ವಿಧಿಸುತಾಂಶರು ಪುರಂದರದಾಸರಿತ್ತಂಥ ಅದುಭುತದ ಉಪದೇಶದಿ ಉದಿತವಾಗಲು ಜ್ಞಾನ ಒದೆದು ದುಷ್ಕರ್ಮಗಳ ಪದುಮೇಶ ದಾಸನಾದಿ ಮುದದಿ 1 ಪರಮ ವೈರಾಗ್ಯದಲಿ ಚರಿಸಿ ತೀರ್ಥಕ್ಷೇತ್ರ ತರುಣಿ ಶಿಷ್ಯರ ಸಹಿತದಿ ಪರಿಪರಿಯ ಮಹಿಮೆಗಳವರ ಭಕ್ತಿಗೆ ತೋರಿ ಕರುಣಾಳುವೆನಿಸಿ ಮೆರೆದಿ ಪುರಂದರ ಗುರು ಆಜ್ಞೆ ತೆರದಂತೆ ಪದಲಕ್ಷ ವಿರಚಿಸಿದೆ ಪದ ಸುಳಾದಿ ನರವರರಿಗನ್ನದಾನಗಳನು ಮದುವೆ ಮುಂಜಿ ತೆರವಿಲ್ಲದೆಲೆ ಚರಿಸಿದಿ ದಯದಿ 2 ನಿನ್ನ ಕರುಣವು ದಾಸಕುಲದವರ ಮೇಲೆ ಬಹು ಉನ್ನತವಾಗಿಹುದು ಘನ್ನ ಗುರು ವಿಜಯವಿಠ್ಠಲದಾಸರೆಂತೆಂದು ನಿನ್ನ ಸ್ಮರಿಸಲು ಕಾವುದು ಎನ್ನ ಗುರು ತಂದೆ ಮುದ್ದುಮೋಹನರ ದಯದಿ ನಿನ್ನ ಸ್ಮರಿಸಲು ಬಾಹುದು ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನ ದಯದಿ ಉನ್ನತ ಜಯವೀವುದು 3
--------------
ಅಂಬಾಬಾಯಿ
ವಿಜಯದಾಸರ ಸ್ತೋತ್ರ ನಂಬಿದೆ ನಾ ನಿನ್ನ ಚರಣಕಮಲವನ್ನು ವಿಜಯರಾಯ ಪ ಬೆಂಬಿಡದೆಲೆ ವಿಷಯ ಹಂಬಲ ಬಿಡಿಸಯ್ಯ ವಿಜಯರಾಯ ಅ.ಪ ತಾಯಿ ಎಳೆಯ ಶಿಶುವನು ಬಿಟ್ಟಿರುವುದುಂಟೆ ವಿಜಯರಾಯಬಾಯ ಬಿಡುವೆ ನಾ ಭವದಲ್ಲಿ ಸಿಗಬಿದ್ದು ವಿಜಯರಾಯನೋಯಲಾರೆನೂ ಎನ್ನ ಕಾಯೊ ಕರುಣದಿಂದ ವಿಜಯರಾಯಕಾಯ ಮನವು ನಿನ್ನ ಚರಣಕ್ಕೊಪ್ಪಿಸಿದೆನೊ ವಿಜಯರಾಯ 1 ಕರ್ಮ ಕತ್ತಲೆಯೊಳು ಸುತ್ತಿ ವಿಜಯರಾಯ ತತ್ತಳಗೊಳುತಿಪ್ಪೆ ಎತ್ತಿರೊ ಎನ್ನ ವಿಜಯರಾಯಪೆತ್ತ ತಂದೆಗೆ ಮಗ ಭಾರವಾಗುವುದುಂಟೆ ವಿಜಯರಾಯವಿತ್ತ ಭಾಗ್ಯವನೊಲ್ಲೆ ಎಂದೆಂದಿಗೂ ನಾನು ವಿಜಯರಾಯ 2 ತುಂಬಿದ ಭಂಡಾರ ಸಂಪತ್ತು ಎನಗೆಂದು ವಿಜಯರಾಯಹಂಬಲಿಸುತ ಬಲು ಸಂಭ್ರಮದಿರುತಿಪ್ಪೆ ವಿಜಯರಾಯಸಂಬಳಕಾರ ಶಿಷ್ಯ ನಿನಗಲ್ಲ ಕೇಳಯ್ಯ ವಿಜಯರಾಯಬಿಂಬ ಶ್ರೀ ವೆಂಕಟ ವಿಠ್ಠಲನ ತೋರೊ ನೀ ವಿಜಯರಾಯ 3
--------------
ವೆಂಕಟೇಶವಿಟ್ಠಲ
ವಿಜಯರಾಯರ ದಿನದಿ ವಿಜಯ ಪಯಣವ ಮಾಳ್ಪೆ ನಿಜದಾಸಕೂಟ ಪಥದಿ ಪ. ವಿಜಯಸಖಪ್ರಿಯ ತಂದೆ ಮುದ್ದುಮೋಹನ ಗುರು ವಿಜಯವಿತ್ತುದ್ಧರಿಸಲಿ ದಯದಿ ಅ.ಪ. ಧರೆಯಲ್ಲಿ ಪುಟ್ಟಿ ಮುವ್ವತ್ತಾರು ವತ್ಸರವು ಸರಿದುದೀ ಬಹುಧಾನ್ಯಕೆ ವರಗುರು ಉಪದೇಶ ಅಂಕಿತವು ಲಭಿಸಿ ಎಂ ಟೊರುಷವಾಗಲಿಂದಿಗೆ ಪರಮಕೃಪೆಯಿಂದ ದಾಸತ್ವ ಸಿದ್ಧಿಸಲೆಂಬ ಕಾಲ ಒದಗೆ ನರಹರಿಯೆ ನಿನ್ನ ಚರಣವೆ ಎನಗೆ ಗತಿ ಎಂದು ನೆರೆ ನಂಬಿ ಪೊರಟೆನೀಗ ಬೇಗ 1 ಸರುವ ವಸ್ತುಗಳಲ್ಲಿ ಇರುವ ಅಭಿಮಾನ ಶ್ರೀ ಹರಿ ನಿನ್ನ ಪದದಲಿರಿಸು ವರ ಗುರು ಚರಣದಲಿ ಸದ್ಭಕ್ತಿ ಸರ್ವದಾ ಸ್ಥಿರವಾಗಿ ನೆಲೆಯಗೊಳಿಸು ಹೊರಗೊಳಗೆ ಹಿಂದುಮುಂದರಘಳಿಗೆ ಬಿಡದೆ ನೀ ನಿರುತದಲಿ ಸಂರಕ್ಷಿಸು ಹರಿದಾಸ ಮಾರ್ಗದಲಿ ಹರುಷದಲಿ ನಲಿವಂತೆ ವರಮತಿಯ ದಯಪಾಲಿಸು ಹರಿಯೆ 2 ಗುರುಕರುಣ ಕವಚ ತೊಟ್ಟಿರುವ ಎನಗಿನ್ನಾವ ಪರಿಯ ಭಯವಿಲ್ಲವೆಂದು ಸ್ಥಿರವಾಗಿ ನಂಬಿ ಪೊರಮಡುವೆನೀ ಶುಭದಿನದಿ ಗುರುವಾರ ಗುರು ಕೃಪೆಯಲಿ ಪರಿಪರಿಯ ದುಷ್ಕರ್ಮ ಪರಿಹರಿಸಿ ಕಾಯುವೊ ಗುರುಚರಣ ಧ್ಯಾನಬಲದಿ ಮರುತಾಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ಕರುಣದಲಿ ಒಲಿದು ಪೊರೆಯೊ ಹರಿಯೆ 3
--------------
ಅಂಬಾಬಾಯಿ
ವಿಜಯರಾಯರ ಪಾದವ ನೀ ಮಾನವ ಪ ವೃಜಿನವೆಲ್ಲವ ಕಳೆದು ಕರುಣದಿ | ಅಜನನಯ್ಯನ ತೋರುವ ಅ.ಪ. ಜಗಕೆ ಹರಿ ಪರನೆಂದು ತಾ ಭುಜ ಯುಗಗಳೆತ್ತಿ ಸಾರಿದಾ || ಭೃಗು ಮುನಿ ಇವರೆಂದು ಭಾವಿಸಿ ಮಿಗೆ ಸುಭಕ್ತಿಲಿ ಸರ್ವದಾ 1 ವರಹಜಾ ತಟದಲ್ಲಿ ಚೀಕಲ | ಪರವಿಗ್ರಾಮದಿ ಜನಿಸಿದ || ಪರಿಪರಿಯಲನುಭವಿಸಿ ಬಡತನ ಭವ ವೈರಾಗ್ಯ ಧರಿಸಿದ 2 ಭಕುತಿ ಪೂರ್ವಕವಾಗಿ ಬಿಡದಲೆ | ಸಕಲಕ್ಷೇತ್ರವ ಚಲಿಸಿದಾ || ಮುಕುತಿ ಸುಖದಾತಾರನಾದ | ಲಕುಮಿ ರಮಣನ ತುತಿಸಿದಾ 3 ತಾ ಸುಸ್ವಪ್ನದೊಳೊಂದು ದಿನ ಶ್ರೀ ವ್ಯಾಸ ಕಾಶಿಗೆ ತೆರಳಿದಾ || ವಾಸುದೇವನ ಕಂಡು ನಮಿಸಿ ಲೇಸು ವರ ಸ್ವೀಕರಿಸಿದಾ 4 ಪುರಂದರಾರ್ಯರ ಕವನಗಳು ಮೂರೆರಡು ಲಕ್ಷಕೆ ತ್ರಯಪದ ಕೊರತೆ ತಾ ಪೂರೈಸಿದ 5 ಬಾಲೆಯೋರ್ವಳು ಬಂದು ಪ್ರಾರ್ಥಿಸೆ ಕೇಳುತಾಕೆಯ ಪತಿಯನು ಕಾಲ ಪಾಶವ ಬಿಡಿಸಿ ಕರುಣದಿ ಪಾಲಿಸಿದ ಸುಮಹಾತ್ಮರ 6 ಶ್ರೀಮನೋಹರ ಶಾಮಸುಂದರ ನಾಮ ಮಹಿಮೆಯ ವಿಧ ವಿಧ ಭೂಮಿ ಸುಮನಸ ಸ್ತೋಮಕನುದಿನ ಪ್ರೇಮದಿಂದಲಿ ಬೀರಿದ 7
--------------
ಶಾಮಸುಂದರ ವಿಠಲ
ವಿಜಯವಿಠ್ಠಲ ನಾಮ ಭಜಿಸಿದಾ ಮಾನವಗೆ ಸತತ ಸಂಪದವಕ್ಕು ಪ ಕಾಯ ಶುಚಿಯಾಗುವದು ಕಠಿನತನ ಪೋಗುವದು ಆಯು ಹೆಚ್ಚುವುದು ನಿಯೋಗಿ ಯಾಹಾ ನಾಯಿ ಮೊದಲಾದ ಪ್ರಾರಬ್ಧ ಜನುಮಗಳಿರಲು ಬಾಯಿಲಿಂದಾಕ್ಷಣ ತೀರಿ ಪೋಪವು ಕೇಳಿ 1 ದ್ವೇಷಿಗಳು ಎಲ್ಲ ಬಾಂಧವರಾಗಿ ಇಪ್ಪರು ದ್ವೇಷ ಪುಟ್ಟದು ತನಗೇತರ ಮೇಲೆ ದೇಶ ಮಧ್ಯದಲಿ ತಾನೆ ಎಲ್ಲಿ ಇದ್ದರೂ ಕೋಶಾಧಿಪತಿಯಾಗಿ ಸಂಚರಿಸುತಿಪ್ಪರು2 ಹೀನ ವಿಷಯಂಗಳಿಗೆ ಅವನ ಮನವೆರಗಿದರೆ ಕಾಣಿಸುವನು ತಾನೆ ಮುಂದೊಲಿದು ಏನು ಹೇಳಲಿ ಹರಿಯ ಅನುಕಂಪನಾತನಕೆ ಕಾಲ ಕಡೆಗಾಣನು 3 ದೇವಾದಿ ಮುನಿತತಿಯ ಮೊದಲಾದವರು ನೆನೆದು ಆವಾವ ಸೌಖ್ಯದಲಿ ಇಪ್ಪರದಕೋ ಭಾವದಲಿ ತಿಳಿದು ಭಕುತಿಯ ಮಾಡಿರೋ ಜನರು ಕಾವುತಲಿಪ್ಪ ಸರ್ವಾಶ್ರಯನಾಗಿ ಹರಿ4 ಕಂಡವಗೆ ದೊರಕದು ಈ ನಾಮ ಜಪಿಸಿದರು ಕಂಡವಗೆ ಬಲು ಸುಲಭ ಭಯವೆಯಿಲ್ಲಾ ಮಂಡಲವ ಚರಿಸಿ ನಾನಾ ವ್ರತ ಮಾಡದಿರಿ ಕೊಂಡಾಡು ವಿಜಯವಿಠ್ಠಲನ ಆಸರ ಸೇರಿ5
--------------
ವಿಜಯದಾಸ
ವಿಜಯವಿಠ್ಠಲ ಶ್ರೀ ವಿಜಯವಿಠ್ಠಲ ಪ ವನಚರ ನಗಧರ ಅವನಿಯ ಉದ್ಧಾರ ಕಾನನ ವೇಗದಿ ಭು- ವನ ದಾನದ ನೆವನನು ಮಾಡಿ ಗಂಗೆಯ ಹ - ವಣದಿ ಪಡದೋ ಶ್ರೀ ವಿಜಯವಿಠ್ಠಲಾ 1 ಛಲದಿಂದ ಕುಲ ಕೋಲಾಹಲ ಮಾಡಿಸಿ ನೀ ತರಿದೆ ಬಾಲೆಯರ ಬಾಲರ ಬಿಡದೆ ಸುಲಭದಿ ಕರ್ಣಗೆ ಒಲಿದು ಪೇಳಿದೆ ಆ ಸುಲಲಿತಾ ಭಾರ್ಗವ ವಿಜಯವಿಠ್ಠಲ2 ಶತಮಖರಿಪು ಲೋಕಪಿತನೊರವಿನಿಂದಲಿ ಖತಿ ಸಕಲರಿಗೆ ನೀವು ತರಿದಿರಲು ಪತಿತಪಾವನ ರಾಮ ಅತಿ ವೇಗ ದನುಜನ ಹತವ ಮಾಡಿದೆಯೊ ಶ್ರೀ ವಿಜಯವಿಠ್ಠಲ3 ಬಕಮುಖ ದನುಜರ ಹಕ್ಕಲಗೊಳಿಸಿ ಬಲು ಯುಕುತಿಯಿಂದಲಿ ಭಕುತರ ಪೊರದೆ ವಿಕಸಿತ ಕಮಲನಯನ ಕಂಜನಾಭನೆ ಸಕಲ ಸುರರ ಪಾಲ ವಿಜಯವಿಠ್ಠಲಾ 4 ರಕ್ಕಸ ಮರ್ದನ ದಿಕ್ಕು ಮೋಹಿಪ ಕೃಷ್ಣ ರುಕ್ಮಿಣಿ ಪತಿಯಾದಾ ಚಕ್ರಪಾಣಿ ಉಕ್ಕಿದ ಮಗಧನ ಸೊಕ್ಕು ಮುರಿದು ಕಪಿ ರೆಕ್ಕ ಆಳ್ವನಿಗೆ ಒಲಿದೆ ವಿಜಯವಿಠ್ಠಲಾ 5 ಘನವಾದ ವಿಶ್ವರೂಪವ ತೋರಿದೆ ದಿನಮಣಿ ಕೋಟಿ ಅಧಿಕ ಕಾಂತಿ ನರಹರಿ ವನಜ ಸಂಭವನಯ್ಯ ವಿಜಯವಿಠ್ಠಲಾ 6 ವನಿತೆಯರ ವ್ರತ ಭಂಗವ ಮಾಡಿ ದಾನವರ ಮೋಹಿಸಿದೆಯೊ ಪವನನೊಡಿಯಾ ಉನುಮತ ಜನ ಕುಲ ಸನುಮತ ಶಾಸ್ತ್ರವ ವ- ದನದಲಿ ಮೆದ್ದಿಯೊ ವಿಜಯವಿಠ್ಠಲಾ 7 ರಜೋತಮ ಗುಣವನು ಭುಂಜಿಸುತ ವ್ರಜ ಭೂಮಿ ನಿಜವಾಗಿ ವ್ಯಾಪಿಸಿರೆ ಸುಜನಪಾಲ ನೀನು ವದಗಿ ವಾಜಿಯನೇರಿ ಭಜನಗೈಸಿದ ವೇಗ ವಿಜಯವಿಠ್ಠಲಾ 8 ಗೋಕುಲದಲಿ ಅನೇಕ ಲೀಲೆಯ ತೋರಿ ಬೇಕಾದ ವರ ಪುಂಡರೀಕಗಿತ್ತೆ ಸಾಕಾರ ಗುಣ ಪೂರ್ಣ ವೇಣುಗೋಪಾಲ ವಿ ವೇಕವ ಕೊಟ್ಟ ಕಾಯನ್ನ ವಿಜಯವಿಠ್ಠಲಾ9
--------------
ವಿಜಯದಾಸ
ವಿಠಲ ನಮೋ ವಿಠಲ ಮುಟ್ಟಿಭಜಿಪ ದೀನನಿಷ್ಟಾರ್ಥ ಪಾಲಿಸು ಪ ಹೇಸಿಪ್ರಪಂಚದಿ ನಿಂದು ಮಹ ಕ್ಲೇಶಪಂಚಕದಲಿ ಬೆಂದು ಕೆಟ್ಟ ವಾಸನತ್ರಯದಿಂದ ನೊಂದು ಬಲು ಘಾಸಿಯಾದೆ ದಯಾಸಿಂಧು ಆಹ ದೋಷದೂರನೆ ಎನ್ನ ದೋಷನಾಶನ ಗೈದು ಪೋಷಿಸು ಅನುಮೇಶ ದಾಸನೊಳ್ದಯವಾಗಿ 1 ಮರವೆಯೆಂಬುವ ಕವಚ ತೊಟ್ಟು ಬಲು ದುರುಳತನಕೆ ಮನಗೊಟ್ಟು ಮಹ ದರಿವಿನ ಅರಮನೆ ಸುಟ್ಟು ಆಹ ಪರಮದುರಿತದಿ ಬಿದ್ದು ಮರುಳನಾಗಿ ನಿಮ್ಮ ಚರಣಸರೋಜಕ್ಕೆ ಮರೆಹೊಕ್ಕೆ ಕರುಣಿಸು 2 ಹೊಂದಿ ಭಜಿಪೆ ನಿನ್ನ ಬೇಡಿ ಎನ್ನ ಮಂದಮತಿಯ ಕಡೆಮಾಡಿ ನಿಜಾ ನಂದ ಸುಜ್ಞಾನಪದ ನೀಡಿ ಭವ ಬಂಧ ಸಂಕೋಲೆ ಗಡ ಕಡಿ ಆಹ ಸಿಂಧುನಿಲಯ ಬೇಗ ದಂದುಗ ಪರಿಹರಿಸಿ ಕಂದನ್ನ ಉದ್ಧರಿಸು ತಂದೆ ಶ್ರೀರಾಮಯ್ಯ 3
--------------
ರಾಮದಾಸರು
ವಿಠಲಯ್ಯ - ವಿಠಲಯ್ಯ ಪ ಧಿಟನಿಹೆ ನೀ | ಷ್ಕುಟಲ ಗುರು ಗೋವಿಂದಅ.ಪ. ನಗ ಮಂದರ ನೆಗಹುತವಿಗಡಾಸುರ ಹಯಮೊಗನನ ಕಡಿದೆ 1 ನರಮೃಗ | ವಟು ವೇಷದಿ ನಿನ್‍ಎಟಪದದಂಗುಟ ಸುರ | ತಟನಿಗೆ ಕಾರಣ 2 ನೃಪಕುಲ ಛೇದನ | ವಿಪಿನದಿ ಶಬರಿಯಸುಫಲವ ಮೆ | ದ್ದ ಪವರ್ಗಗಿತ್ತೆ 3 ಕ್ರೂರರ ತರಿದು | ವರ ಸತಿಯರ ವ್ರತನೆರೆ ಅಳಿಸುತ ತಾ | ತುರಗವನೇರ್ದಾ 4 ಭಾವದಿ ಮೈಮರೆ | ದಾವನು ತವಪದಸೇವಿಸೆ ಸಲಹುವಿ | ಗುರು ಗೋವಿಂದ 5
--------------
ಗುರುಗೋವಿಂದವಿಠಲರು
ವಿಠಲಾ ನಿನ್ನ ನಂಬಿದೆ ಎನ್ನ ಕಾಯೋ | ಪುಟ್ಟುವದು ಬಿಡಿಸೊ ಎನ್ನವರೊಳಗಿರಿಸೊ ಪ ಬಲುಕಾಲ ಮಲ-ಮೂತ್ರ ಡೊಳ್ಳಿನೊಳು ಬಿದ್ದು | ಹಲುಬಿದೆ ಒಂದಿಷ್ಟು ನೆಲೆಗಾಣದೆ ನಾನು || ಹಲವು ಮಾತೇನು ಎನಗೆ ಬಿಡದು | ಸಲಹಬೇಕಯ್ಯಾ ಸಮುದ್ರ ಶಯ್ಯಾ 1 ಕರ ಪಿಡಿದು ಎತ್ತುವ ಬಿರುದು ಪರಾಕ್ರಮ | ಮರಳಿ ಮಿಗಿಲೊಂದು ದೇವರಿಗೆ ಉಂಟೆ || ಮರೆವು ಮಾಡದೆ ಮಹಾದುರಿತವ ಪರಿ_ | ಹರಿಸು ಸ್ಮರಣೆಯನ್ನು ಇತ್ತು ಕೀರ್ತನೆ ಪೇಳಿಸೋ2 ಬಿನ್ನಹ ಲಾಲಿಸು ಚೆನ್ನ ಲಕುಮಿಪತಿ | ನಿತ್ಯ ಪ್ರಾಣನಾಥಾ ಅಭಯ ಹಸ್ತಾ || ಸಿರಿ ವಿಜಯವಿಠ್ಠಲರೇಯಾ | ಸನ್ನಿಧಿಯಲ್ಲಿ ಎನ್ನ ಸಂತೋಷಪಡಿಸೊ 3
--------------
ವಿಜಯದಾಸ
ವಿಠ್ಠಲ ಪಾಂಡುರಂಗ ಬಂದೆನೊ ನಿನ್ನ ಬಳಿಗೆ ನಾನು ಪ ಹರಿಪೂಜೆ ಮರದಿಹುದು ಧರೆಯೊಳು ನರಪೂಜೆ ಪಿರಿದಿಹುದು ಹರಿಜನ ಪರಿಯರೆದು ವಿಷಯಕೆ ಹರಿವುದು ಮನಸರಿದು ದುರಿತ ಜಲಧಿಯೊಳು ನರಜಲಚರಂಗಳು ಮರೆದು ನಿನ್ನ ಸದಾ ಸುರಿವವು ಭವಸುಖ1 ಒಡಲಿಗೆ ಇಡುತಿಹರು ಷಡುರಸದನ್ನ ಮಡದಿಸುತರು ನುಡಿದುದೆ ಕೊಡುತಿಹರು ಪೊಡವಿಯೊಳ್ಳಡುಸುಖ ಬಡುತಿಹರು ವಡನೆ ಹರಿಗಿಡದೆ ಜಡಮತಿಯೆನಿಪರು 2 ಸೊಕ್ಕು ಸೋಂಕಿತೆನಗೆ ಕಕ್ಕಸಬಡುತಿಹೆನಡಿಗಡಿಗೆ ಮಕ್ಕಳ ಮೋಹದೊಳಿಗೆ ಶಿಕ್ಕಿ ನಾ ಬಳಲುವೆ ಕಡೆವರೆಗೆ ಧಿಕ್ಕಾರವೀ ಜನ್ಮ ನರಸಿಂಹ ವಿಠಲ ಸೊಕ್ಕದೇ ಭವದೊಳು ನೆಕ್ಕದೆ ನಿನ್ನ ನಾಮ 3
--------------
ನರಸಿಂಹವಿಠಲರು
ವಿಠ್ಠಲನ ಪದವನಜ ತುಂಬೆ ಸೃಷ್ಟಿಯೊಳಗೆ ಎನ್ನ ಬಿಡದೆ ಪೊರೆ ಎಂಬೆ ಪ ಜ್ಞಾನ ಭಕುತಿ ವೈರಾಗ್ಯದಲಿ ಜಾಣ ದಾನ ಮಾಡುವರೊಳಗೆ ಪೂತುರೆ ನೀನೆ ನಿಪುಣ ಮಾನಸದಲಿ ಹರಿಯ ಧ್ಯಾನ ಮಾಡುವ ಆನಂದಮತಿ ವಿಮಲ ಸರ್ವವಿಧಾನ 1 ಮಾತುಮಾತಿಗೆ ನೆನೆಸಿದವರ ಭವದ ಮಾಯಾ ಸೇತುವಿಯ ಕಡಿದು ಸಂತತವಾಗಿ ಸಹಾಯಾ ಪ್ರೀತಿಯಲಿ ಬಂದು ಶ್ರೀ ಹರಿಯ ಪದ ಸೇವಿಯಾ ತಾ ತೋರಿ ತಿಳಿಸುವಾ ಪ್ರಿಯನೆನಿಸುವಾ ಪುರಂದರ ರಾಯಾ 2 ವಜ್ರ ಪಂಜರಾ ಕೂವಾದಿ ಮತಹರ ನಂಬಿದವರಾಧಾರ ಪಾವಮಾನಿಯ ಮತದಲಿಪ್ಪ ಮನೋಹರ ಶ್ರೀ ವಿಜಯನಗರ ಮಂದಿರದೊಳಗುಳ್ಳ ಶ್ರೀ ವಿಜಯವಿಠಲನ್ನ ಪೂಜಿಸುವ ಧೀರ 3
--------------
ವಿಜಯದಾಸ
ವಿತ್ತ ವನಿತಾದಿ ವಿಷಯವೆಂಬಕನಸಿನ ಸಿರಿಯ ನೆಚ್ಚಿ ತೊನೆದುಕೊಂಬರಲ್ಲದೆ 1ಪೊಲೆಯ ಬೊಂಬೆಯೊಳು ತುಂಬಿದ ಕೀವುಮಲಮೂತ್ರಸಂದೋಹ ತೊಗಲು ರೋಮಎಲು ಮಜ್ಜೆ ಮಾಂಸದವ್ಯೂಹ ಎಷ್ಟು ತೊಳೆದರೂಹೊಲಸು ನಾರುವ ಚೋಹ ಮತ್ತಿದಕೊಂದುಕುಲಗೋತ್ರ ನಾಮರೂಪು ಚಲುವ ಚೆನ್ನಿಗನಿವ ಸಲೆ ಜಾಣನೆಂದು ಮೂಢರುಗಳಹಿಕೊಂಬರಲ್ಲದೆ 2ಮಡದಿಯಾದರಿಲ್ಲ ಮಕ್ಕಳು ಮಕ್ಕಳಾದರೆಒಡಮೆಲ್ಲವದು ಬರಲು ಸತಿಸುತರುಮಡಿದು ಹೋಗುವ ದುಃಖಂಗಳು ಗಳಿಸಿದರ್ಥಕೆಡುವಾ ಸಂಕ್ಲೇಶಂಗಳು ತನಗೆ ಮುಂಚಿಅಡಸಿ ಬರುವದೊ ಮೃತಿ ಜಡರು ಈ ಬದುಕನೆಚ್ಚಿಸಡಗರ ಬಡುತ ಹಿಗ್ಗಿ ಕೊಡಹಿಕೊಂಬರಲ್ಲದೆ 3ಬಾಲಕನಾಗ್ಯೊಂದು ಕ್ಷಣವು ಪ್ರಾಯದಿ ಕಾಮಲೋಲುಪನಾಗ್ಯೊಂದು ಕ್ಷಣವು ಧನಾಢ್ಯನೆಂಬಮೂಳ ಹೆಮ್ಮೆ ಒಂದು ಕ್ಷಣವು ದಾರಿದ್ರ್ಯ ಮುಪ್ಪುಜೋಲುವ ತನುವೊಂದು ಕ್ಷಣವು ನಾನಾವೇಷದಾಳಿದ ನಟನಂತಾಡಿ ಕಾಲನ ಬಾುಗೈದುವಬಾಳುವೆಗೆ ಖೂಳಜನರು ವೋಲಾಡಿಕೊಂಬರಲ್ಲದೆ 4ನೆರೆ ಭೋಗಕೆ ರೋಗಭಯ ಸುತ ಸಂಬಂಧಿನೆರವಿಗೆ ವಿಯೋಗ ಭಯ ದ್ರವ್ಯಕ್ಕೆ ಭೂಪರ ಭಯವು ಚೋರ ಭಯ ಕಾಯಕೆ ಭಯಂಕರನಾದ ಕೃತಾಂತ ಭಯ ತಾಪತ್ರಯವೀಪರಿಯನೇಕ ಚಿಂತೆಯಲ್ಲಿ ಕೊರಗುತುರಿವ ಮನೆಯೊಳಗಿರುವೆ ಸುಖದಲೆಂಬರು ಮೂಕೊರೆಯಮೊಂಡರಲ್ಲದೆ * 5
--------------
ಗೋಪಾಲಾರ್ಯರು
ವಿಧ---------- ಪ ಹದಿನಾರು ಸಾವಿರ ಹೆಂಡರು ಸಾಲು ---- -------------------------- ಶರಣಾರ್ಥಿಗಳ------ನಿನ್ನ ಬಿರುದ ಪರಮ ಕೃಪಾರಸ ತೋರದೇನೋ ಸಿರಿನಿನ್ನ ಕುಚದ ---- ಎರವು ಇಲ್ಲಿದೆ---------ಮತಿಯಲಿ ತಿರುಗುತ-----ದಿ ಪರಮ ಪುರುಷನು ಸುಖಿಭವನಗಳ’ 1 ಅಷ್ಟಧರ್ಮಗಳ ಬಿಟ್ಟೆನೊ ಅಸುರರ ಬಾಧೆಗೆ ಅಂಜಿದೆನೊ ಕ್ರೋಧಗೊಂಡೆ ಏನೋ ಮೊಸರು ಬೆಣ್ಣೆಯಷ್ಟಿಲ್ಲ -----ಬರುವನ ಕೂಡಿಕೊಂಡೆಲ್ಲರು------ಹಿಡಿದು ಕಟ್ಟಿ ಹಾಕಿದರೇನೊ 2 ಮಹಿಮನಾದ----ತ್ತಿಗಳೆಲ್ಲ ತರವಲ್ಲೆ ಪಂಥಗಳಾಡುತ ಕಾಂತೆರಕೂಡಿ ಶ್ರೀಕಾಂತ `ಹೊನ್ನಯ್ಯ ವಿಠ್ಠಲಂತರಂಗದಲಿ ನಿಂತೂ ಬಾರದ 3
--------------
ಹೆನ್ನೆರಂಗದಾಸರು
ವಿಧಿಗೆ ದಯವಿಲ್ಲವಕ್ಕ ಎಮ್ಮ ಮ್ಯಾಲೆ ಯದುಪತಿಯನಗಲಿಸಿದ ಒಮ್ಮಿಂದಲೊಮ್ಮೆ ಅ.ಪ. ಎವೆಯ ಮರೆಯ ಮಾತನಾಡಿ ಪೋದ ಯಾಕೋ ವಿಧಿಯೇಸುಳಿಗುರುಳು ಕಡೆಗಣ್ಣ ನೋಟದಿಂದಲಿಕವಕವಿಸಿ ನಗುವ ಮುದ್ದು ಮುಖವನುತವಕದಿಂದ ಮರಳಿ ಮರಳಿ ನೋಡದ್ಹೋದೆವೆ 1 ಹಕ್ಕಿಯ ಮ್ಯಾಲುಳ್ಳ ದಯ ನಮ್ಮ ಮ್ಯಾಲೆಇಕ್ಕದೇಕೆ ಹೋದ್ಯೋ ವಿಧಿಯೇರೆಕ್ಕೆ ಎರಡುಳ್ಳರೆ ಮಧುರೆಗೆ ಪೋಗಿಫಕ್ಕನೆ ಶ್ರೀ ಹರಿಯೊಡನೆ ಕೂಡುತಿದ್ದೆವಲ್ಲ 2 ತಂಗೀ ನಮ್ಮೆದೆಯು ಕಲ್ಲಾಗಿ ಇದ್ದೇವೆಹಿಂಗುವರೆ ಸಖಿಯರು ಒಮ್ಮಿಂದಲೊಮ್ಮೆರಂಗವಿಠಲನ್ನ ಅಂಗ ಸಂಗವ ಬಿಟ್ಟು ಇಂಥಭಂಗ ಜೀವ ಸುಡ ಸುಡ ಸುಡಲ್ಯಾತಕೋ 3
--------------
ಶ್ರೀಪಾದರಾಜರು