ಒಟ್ಟು 19311 ಕಡೆಗಳಲ್ಲಿ , 135 ದಾಸರು , 7892 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀರಿನಿಂದಲೆ ಸರ್ವಫಲ ಬಾಹೋದು ನೀರಜಾಕ್ಷನ ಸೇವೆ ಮಾಳ್ಪ ಸುಜನರಿಗೆ ಪ ನೀರಿಲ್ಲದಲೆ ಯಾವ ಸಾಧನವು ನಡೆಯದು ನೀರಿಲ್ಲದಲÉ ಯಾಗ ತಪಸ್ಸು ನಿಲ್ಲುವದು ನೀರಿಲ್ಲದಲೆ ಸ್ನಾನ ಆಚಾರಹೀನವು ನೀರಿಲ್ಲದಲೆ ದೇವತಾರ್ಚನೆಯು ಇಲ್ಲವು 1 ನೀರೆಂದರೆ ಬರಿಯ ಜಡವಾದ ನೀರಲ್ಲ ನೀರಜಾಕ್ಷನು ಜಲದಿ ವಾಸವಾಗಿಹನು ವಾರಿಜಾಸನ ಮುಖ್ಯ ಸುರರೆಲ್ಲ ಹರುಷದಲಿ ನೀರಮಧ್ಯದೊಳಿರುವ ಹರಿಯಧ್ಯಾನಿಪರೆಲ್ಲ2 ಉದಯಕಾಲದಿ ಮುಖವ ತೊಳೆಯೆ ಜಲವಿರಬೇಕು ಮಧುಸೂದನನ ಮನೆಯ ಸಾರಿಸಲು ಜಲಬೇಕು ಹೃದಯ ಶುದ್ಧದಿ ಸ್ನಾನ ಮಾಡೆ ಜಲವಿರಬೇಕು ಮುದದಿ ಮಡಿಯುಡುವುದಕೆ ಉದಕವಿರಬೇಕು3 ಮೃತ್ತಿಕಾಶೌಚಕ್ಕೆ ಅಗತ್ಯಜಲವಿರಬೇಕು ನಿತ್ಯ ಗೋಸೇವೆಗೆ ಉದಕಬೇಕು ಮತ್ತೆ ಶ್ರೀ ತುಳಸಿಗೆರೆಯಲು ಉದಕವಿರಬೇಕು ಮತ್ತೆ ಹರಿಪೂಜೆಗಗ್ರೋದಕವು ಬೇಕು4 ಸಚ್ಚಿದಾನಂದನ ಅಭಿಷೇಕಕ್ಕೆ ಜಲಬೇಕು ಮತ್ತೆ ಪಾಕವು ಮಾಡೆ ಜಲವುಬೇಕು ನಿತ್ಯ ತೃಪ್ತನ ನೈವೇದ್ಯಕ್ಕೆ ಜಲವು ಬೇಕು ಅರ್ತಿಯಿಂದ ಅತಿಥಿ ಪೂಜೆಗೆ ಉದಕಬೇಕು 5 ಪಾದ ತೊಳಿಬೇಕು ಮತ್ತೆ ಅವರಿಗೆ ಸ್ನಾನಕಣಿ ಮಾಡಬೇಕು ಸುತ್ತ ಬೆಳೆÀಗಳಿಗೆಲ್ಲ ಮತ್ತೆ ನೀರಿರಬೇಕು ಸತ್ಯ ಮೂರುತಿ ಪಾದದಂಗುಷ್ಟದಲಿ ಜನಿಸಿದ6 ನಿತ್ಯ ಎರೆಯೆ ನೀರಿರಬೇಕು ಕುಸುಮ ಪುಷ್ಪದ ಗಿಡಕೆ ನೀರುಬೇಕು ವಸುದೇವಸುತನ ತೆಪ್ಪೋತ್ಸವಕೆ ಜಲಬೇಕು ಎಸೆವ ಕದಲಾರತಿಗೆ ಉದಕಬೇಕು 7 ನೀರಿನೊಳು ಹಾವಿನ ಮೇಲೆ ಮಲಗಿದ ಹರಿಯ ನಾಭಿನಾಳದ ತುದಿಯಲಿರುವ ಕಮಲದಲಿ ನೀರಜಾಸನನ ಪಡೆದಿರುವ ಮಹಿಮೆಯ ಕೇಳಿ ನೀರಿನಲಿ ಹರಿಯ ಅವತಾರ ರೂಪಗಳುಂಟು8 ನೀರಿನೊಳು ವಾರುಣಿಯಪತಿಯ ಶಯ್ಯದೊಳಿಹನು ನೀರಿನೊಳು ಮುಳುಗಿ ವೇದವ ತಂದನು ನೀರಿನೊಳು ಮುಳುಗಿ ಭಾರವ ಪೊತ್ತು ನಿಂತನು ನೀರಜಾಕ್ಷನು ನಾರಬೇರ ಮೆದ್ದಿಹನು 9 ನೀರಜೋದ್ಭವಪಿತನು ಕ್ರೂರರೂಪವ ತಾಳ್ದ ನೀರೆ ಅದಿತಿಯ ಪುತ್ರನಾಗಿ ನಿಂತ ನೀರಜಾಕ್ಷನು ಪರಶುವಿಡಿದು ಸಂಚರಿಸಿದನು ನೀರೆಗೋಸುಗ ಸಾಗರಕÉ ಸೇತುವೆಯ ಕಟ್ಟಿದನು10 ನೀರಿನೊಳು ಗಜದ ಶಾಪವ ಕಳೆದು ಪೊರೆದನು ನೀರೆ ದ್ರೌಪದಿಯ ಅಭಿಮಾನವನು ಕಾಯ್ದ ನೀರ ಮಧ್ಯದಿ ದ್ವಾರಕಾಪುರವ ರಚಿಸಿದನು ನೀರಜಾಕ್ಷಿಯರ ಕೂಡಿ ನೀರೊಳಗೆ ಆಡಿದನು 11 ಕಮಲ ಜಲದಲ್ಲಿಹುದು ಕಮಲನಾಭ ವಿಠ್ಠಲ ಜಲದೊಳೋಲ್ಯಾಡುವ ಶ್ರಮವ ಪರಿಹರಿಪ ಚಂದ್ರನು ಜಲದಿ ಪುಟ್ಟಿಹನು ಕಾಮಧೇನು ಐರಾವತವು ಪುಟ್ಟಿದ ಜಲವಯ್ಯ 12
--------------
ನಿಡಗುರುಕಿ ಜೀವೂಬಾಯಿ
ನೀರಿನೊಳು ಮುಳುಗುತಿರೆ ತೋರದಲಿ ಪೋಗುವರೆ ಕರ ಪಿಡಿವರೈ ತೋರು ಶೌರೇ ವಾರಿಜಾನಾಭ ಭಯ ತೋರುವರೆ ಕರುಣಾಳು ಬಾರದಿರುವಂಥ ಅಪರಾಧವೇನೆಲೊ ಹರೀ ಪ. ಪರಿ ಮನಸಿನೊಳಗೊಂದು ಪರಿ ವನಜನಯನನೆ ಭಯವ ತೋರಿ ತೋರೀ ಪರಿ ಏನೋ ಬಿನಗುದೈವರ ಗಂಡ ಪರಿಹರಿಸು ಗಂಡಾ1 ಕರಿಯ ನೀರೊಳು ಕಾಯ್ದೆ ಪೊರೆದೆ ನೀರೊಳು ಮನುವ ಧರಣಿ ಪ್ರಹ್ಲಾದರನು ಜಲದಿ ಸಲಹೀ ಬಿರುದು ಪೊತ್ತವ ಎನ್ನ ಪರಿಯನರಿಯೆಯೆ ದೇವ ಪೊರೆವರಿನ್ನಾರು ಹೇ ಕರುಣಾಳು ಶರಣೂ 2 ಮುಳುಗಿಹೆನು ಸಂಸಾರ ಗಣಿಸಲಾಗದ ಕರ್ಮ ಕರವ ಪಿಡಿದೂ ಧಣಿಸು ನಿನ ದಾಸತ್ವ ಧರೆಯೆ ಮೇಲ್ ಡಂಗುರದೀ ಘಣಿಶಾಯಿ ಗೋಪಾಲಕೃಷ್ಣವಿಠಲ ಕೈಪಿಡಿದು 3
--------------
ಅಂಬಾಬಾಯಿ
ನೀರೆ ತೋರೆಲೆ ಜಗಪಾಲ ಮುಕುಂದನಾ| ಶೂಲಧರನ ಮಿತ್ರನಾ ಪ ಪಾಂಡವರಕ್ಷಕನಾ|ಪುಂಡಲೀಕಾಕ್ಷನಾ| ಚಂಡಕೋಟಿ ಪ್ರಕಾಶನಾ|| ಕುಂಡಲ ವಿಭೂಷಿತ ಗಂಡಸತ್ಕಪೋಲನಾ| ಪುಂಡಲೀಕಗತಿವರದನ ನಂದಕಿಶೋರನ1 ಪರಮ ವರಪುರಾಣ ಪುರುಷೋತ್ತಮನಾ| ಕಂಸಾಸುರ ಮರ್ದನ ಗೋಪಾಲನಾ|| ಉರಗಾರಿ ಗಮನನಾ ನಿರುಪಮ ಚರಿತನಾ| ವಾಸುದೇವ ಮುಕುಂದನಾ2 ಸನಕ ಸನಂದನಮುನಿ ಮಾನಸ ಹಂಸನಾ| ಅನುಪಮ್ಯನಂತ ಮಹಿಮಾ|| ವನರುಹ ಯೋನಿವಂದ್ಯನ ಮಧು ಸೂಧನ| ಘನಗುರು ಮಹಿಪತಿ ಸುತಪ್ರಭು ಶ್ರೀ ಕೃಷ್ಣನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರೆ ದ್ವಾರಕೆಯ ಸೊಬಗು ಬ್ರಹ್ಮರಾಯ ಬಟ್ಟಾನು ಬೆರಗು ನೀರೆಪ. ಚದುರೆ ಬಾಜಾರದಿ ಕುದುರೆ ಸಾಲುಗಳೆಷ್ಟುಎದುರಿಗೆ ಬಾಹೋ ರಥಗಳೆಷ್ಟುಎದುರಿಗೆ ಬಾಹೋ ರಥಗಳೆಷ್ಟು ಅಂಬಾರಿಸದರಿನ ಆನೆ ಸೊಬಗೆಷ್ಟು1 ಹಿಂಡು ಗೆಳತಿಯರೆಲ್ಲ ತಂಡ ತಂಡ ನೆರೆದುದುಂಡು ಮಲ್ಲಿಗೆಯ ತುರುಬಿನದುಂಡು ಮಲ್ಲಿಗೆ ತುರುಬಿನ ಕುವರಿಯರು ಚಂಡನಾಡುವÀರು ಕಡೆಯಿಲ್ಲ 2 ನೀಲಮಾಣಿಕ ಬಿಗಿದ ಮೇಲಾದ ಮನೆಗಳುಮ್ಯಾಲೆ ಕನ್ನಡಿಯ ನಿಲ್ಲಿಸ್ಯಾವಮ್ಯಾಲೆ ಕನ್ನಡಿಯ ನಿಲ್ಲಿಸಿದ ಮನೆಯೊಳುಸಾಲು ದೀವಟಿಗೆ ಸೊಬಗೆಷ್ಟು 3 ಬಟ್ಟ ಮುತ್ತಿನ ತೋರಣ ಕಟ್ಟಿದ ಮನೆಯೊಳುಅಟ್ಟಳ ಮ್ಯಾಲೆ ಧ್ವಜಗಳುಅಟ್ಟಳ ಮ್ಯಾಲೆ ಧ್ವಜಗಳು ಗಗನಕ್ಕೆಮುಟ್ಟಿವೆಂಬಂತೆ ನಿಲ್ಲಿಸ್ಯಾವೆ4 ದೊರೆಗಳ ಮನೆಯಿಂದ ಬರೆದ ಚಿತ್ರದÀ ಬೊಂಬೆಗಳುಕರೆದಾವ ಕೈ ಬೀಸುತೆಕೈ ಬೀಸಿ ನಮ್ಮ ಎದುರಿಗೆಬರತಾವೆಂಬಂತೆ ನಿಲ್ಲಿಸ್ಯಾವ 5 ಏಳಂತಸ್ತಿನ ಮಾಳಿಗೆ ಮ್ಯಾಲಿನ ಗೊಂಬೆಗಳು ಬಾಳೆ ಎಲೆಯಂತೆ ಬಳಕುತ ಬಾಳೆ ಎಲೆಯಂತೆ ಬಳಕುತಕಿವಿಮಾತು ಹೇಳ್ಯಾವೆಂಬಂತೆ ನಿಲ್ಲಿಸ್ಯಾವೆ6 ಮದನ ಜನಕನು ಸುಳಿಯೋನೆಒಮ್ಮೊಮ್ಮೆ ಮುದದಿ ಭಕ್ತರನ ಸಲುಹಲಿ 7
--------------
ಗಲಗಲಿಅವ್ವನವರು
ನೀರೆ ನೋಡಿವನಾರೆ ಘೋರರೂಪವು ಮೀರೆ ಸಾರೆ ಬಂದಹನರರೆ ನಿಲ್ಲಲಾರೆ ಮುಪ್ಪಾದಮುಳ್ಳವನೆ ಕಪ್ಪುಬಣ್ಣದ ವರನೆ ಅಪ್ಪನೇಕಿವಗೆನ್ನನೊಪ್ಪಿಸಿದನೆ ದಾನವನು ತಾಂ ಬೇಡಿ ದಾನಿನಿಯಂ ತುಳಿದಾಡಿ ನ್ಯೂನತೆಯ ಪೊಂದಿಸಿದ ಜ್ಞಾನಿಯಿವನೆ ಗಾತ್ರದೋಳಿವನಂತೆ ಗಾತ್ರಮುಳ್ಳವರಿಲ್ಲ ಸರ್ವತ್ರ ಬಳಸಿ ನಿಂತಿರ್ಪನಿವನೆ ತೃಣದಿ ಶುಕ್ರನ ಕಣ್ಣನಿರಿದ ವರನೆ ಅಣುರೇಣು ತೃಣಾಕಾಷ್ಠ ಪೂರ್ಣನಿವನೆ ಪ್ರಣವ ಪ್ರತಿಪಾದ್ಯನೆನಿಸುವವನೆ ಫಣಿತಲ್ಪಿ ಶೇಷಾದ್ರಿವಾಸ ತಾನೆ
--------------
ನಂಜನಗೂಡು ತಿರುಮಲಾಂಬಾ
ನೀರೆಯರು ಸಾರುತ್ತ ಮುದದಿ ನೀರಜದಾರತಿ ಬೆಳಗಿದರು ಪ ಸೇರಿ ಸೀತಾ ನಾರೀಮಣಿಯಿಂ ರಾರಾಜಿಪ ಶ್ರೀರಾಮಗೆ ಅ.ಪ. ಕಂದರ್ಪಸತಿ ಸುಂದರಾಂಗಿಗೆ ಇಂದುವಂಶ ನಂದಿನಿ ಸೀತೆಗೆ 1 ಕರಾಂಬಕಿ ಲೋಕ ವಂದ್ಯೆಗೆ ಮಾತೃ ಮಾತೆಗೆ ಸೀತೆಗೆ 2 ಚಿತ್ತ ಮಿತ್ರೆ ಮೀನನೇತ್ರೆಗೆ ಧೇನುನಗರ ನಾಥೆಗೆ ಸೀತೆಗೆ 3
--------------
ಬೇಟೆರಾಯ ದೀಕ್ಷಿತರು
ನೀರೇ ತೋರೇ ಪಯೋನಿಧಿ ವಾಸನಾ| ನೀರ ಜಾಸನಾನಂತ ಸರ್ವೇಶನಾ ಪ ಹಸ್ತ ವರದನ ಹರಿಮಧುಸೂದನ| ಹಸ್ತಿ ವಾಹಜನ ಸೂತಾದನಾ 1 ಕರಿಯೇರಿದಾತನ ಶರಕುರುವಾತನ| ಕರಿಹರ ಸಖ ಸನಾತನಾ 2 ಅನಂತ ಮಹಿಮ ಕೇಶವ ಮುಕುಂದನ| ಅನಂತ ಶಯನ ಗೋವಿಂದನಾ 3 ಮಕರ ಧ್ವಜ ಪಿತನ ಪರಮಾನಂದನ| ಮಕರ ಧ್ವಜ ಪಿತ ವಂದ್ಯನಾ4 ತಂದೆ ಮಹಿಪತಿ ನಂದನ ಜೀವನ| ಹೊಂದಿದವರ ಕಾವಾ ದೇವನಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರೇ ದÉೂೀರೆ ದೋರೆ ರಂಗನಾ| ಕರೆ ತಾರೇ ಮುನಿಜನ ಸಂಗನಾ ಪ ಶರಣ ರಕ್ಷಕ ನೆಂಬೋ ಬಿರುದವ ಸಾರಲು | ಮೊರೆಯಾ ಹೊಕ್ಕೆನು ಕೇಳಿ ಬಂದುನಾ1 ಜ್ಞಾನ ಭಕುತಿಗಳ ಏನೇನರಿಯದ | ಮಾನಿನಿ ನೋಡುವರೇ ಅವಗುಣಾ 2 ಗುರುಮಹಿಪತಿ ಸುತ ಪ್ರಭು ಕರುಣಾಕರ | ನೆನದನು ಮೊರೆಕೇಳಿ ಇಂದಿನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರೇ ನೀಕರೆ ತಾರೇ ಪ್ರಾಣದೊಲ್ಲಭನಾ|ಜಾಣ ಸುಜ್ಷಾನೇ ಪ ಹೃದಯ ಮಂದಿರದೊಳು ಅರುಹುದೀಪವಹಚ್ಚಿ| ಹಾಡಿ ನೋಡಲಿಹೆ ಮೈದೋರನ್ಯಾಕ|ಮೈದೋರ ನ್ಯಾಕ 1 ಧ್ಯಾಸಮಂಚದಿ ಭಕುತಿ ಹಾಸಿಕೆಯು ಸು| ವಾಸನೆಪುಣ್ಯಕ ವಲಿದು ಬಾರನೇ|ವಲಿದು ಬಾರನೇ 2 ಸಕಲ ನುಕೂಲಿರಲು ಕ್ರೀಡೆಗೆ ಇನಿಯನು ಪುಕಟ ದೊಲಿಯಭಾಗ್ಯ ಮಂದಳು ಕಾಣೇ|ಮಂದಳು ಕಾಣೇ 3 ಅರಿದವಳು ಎಂದು ಅರಿತು ಕೈಯ್ಯವಿಡಿದು| ಮರಳೆನ್ನ ಅಂತ ನೊಡುವರೇನೇ ನೋಡುವರೇನೇ 4 ಧರೆಯೊಳು ಭೋಗಪದಾರ್ಥಿವು ಸರ್ಪದ| ಸರಸದ ಓಲಾಯಿತು ಅಗಲಿರಲಾರೇ|ಅಗಲಿರಲಾರೇ 5 ಬಂದರೊಂದಿನ ನಿಶೆದಲಿ ಕಳೆಗೂಡದೇ| ಒಂದು ಜಾವ ವ್ಯರ್ಥಿಹೋಯಿತಲ್ಲಮ್ಮಾ|ಹೋಯಿತಲ್ಲಮ್ಮಾ 6 ಗುರುವರ ಮಹಿಪತಿ ನಂದನ ಪ್ರಭುವಿನ| ಚರಣವಗಾಣದೇ ಜೀವಿಸಲಾರೆ|ಜೀವಿಸಲಾರೆ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರೇರುಹಾನಯನ | ವಾರನಿಧಿ ನಡುಶಯನತೋರೆನಗೆ ತವ ಚರಣ | ಸುಗುಣ ಗಣ ಪೂರ್ಣ ಪ ಅಮಿತ ಕ್ಲೇಶ ಗೊಳಿಸದಂತೆನೀ ಸಲಹೋ ಎನ್ನ | ಶೇಷಾದ್ರಿ ವಾಸಾ ಪರೇಶಾ1 ಭವ | ಸಂಗದೊಳಗಿರಿಸೀಭಂಗ ಪಡಿಸುವಿ ದೊರೆಯೆ | ಶೃಂಗಾರ ನಿಧಿಯೇ |ಸಂಗ ವಿಷಯದಿ ಹರಿಸಿ ನಿ | ಸ್ಸಂಗನೆಂದೆನಿಸಿಲಿಂಗಾಂಗ ಕಳೆಯೊ ಹರಿ | ರಂಗ ಭವಹಾರಿ2 ಸಾಮಸನ್ನುತ ಚರಣ | ಭೂಮಗುಣಿ ಸುಸ್ತವನಪ್ರೇಮದಲಿ ಗೈವ ಮನ | ನೇಮವೀಯೆಲೊ ವಾಮನ |ಈ ಮಹಾ ಕಲಿಯುಗದಿ | ನಾಮ ನಿಸನ್ನದೆ ಗತಿಯೆಶ್ರೀಮಹೀ ಸೇವಿತನೆ | ರಾಮ ಗುಣಧಾಮ 3 ಭವ | ರೋಗ ವೈದ್ಯನೆ ಎನ್ನರೋಗ ಹರಿಸುವುದರಿದೆ | ಇದು ನಿನ್ನ ಬಿರುದೇ4 ನಿರವದ್ಯ ಆದ್ಯಾಅರುಹಲೇನಿಹುದಿನ್ನು | ಸರ್ವಜ್ಞ ನೀನಿನ್ನು ಒರೆವೆನೆಂಬಪರಾಧ | ಮರೆದು ಪಾಲಿಸು ಶ್ರೀಶ 5
--------------
ಗುರುಗೋವಿಂದವಿಠಲರು
ನೀರೊಳು ಮುಳುಗಿದಡೇನು ಫಲ ಪ (ಸಾರವ)ನೋದಿದಡೇನು ಫಲ ಅ.ಪ ಧರ್ಮದಾನದಿಂದೇನು ಫಲ 1 ಹರಿ ಹರಿಯೆಂದರದೇನು ಫಲ 2 ಸ್ತುತಿ ಪೂಜೆಗಳಿಂದೇನು ಫಲ 3 ವ್ರತಗಳ ಮಾಡಲದೇನು ಫಲ 4 ತನುವನು ಪೊರೆದರದೇನು ಫಲ || ಶ್ರೀನಿವಾಸನ ಪಾದವ ಸ್ಮರಿಸದೆ ದಿನವನು ಕಳೆದರದೇನು ಫಲ 5
--------------
ಸದಾನಂದರು
ನೀಲ ಕನಕಚೇಲ ಲೀಲಯಾ ಪ ಪುಲಿಶೈಲರಚಿತಲೀಲಾ ರಮಾಲೋಲ ಪಾಲಯಾ ಅ.ಪ ಶರದಿಂದುವದನ ಕುಂದರದನ ನಂದನಂದನಾ ಅರವಿಂದನಯನ ಸಿಂಧುಶಯನ ವಂದಿ ಚಂದನಾ 1 ಯದುರಾಜ ಕಲ್ಪಭೂಜದೇವರಾಜಪೂಜಿತ ಕರಿರಾಜರಾಜರಾಜ ಸಮವಿರಾಜ ರಾಜಿತ 2 ಘನದುರಿತ ಪಟುಲಹರಣ ಚಟುಲಚರಣಪಾಟಲಾ ಕರಿವರದ ವಿಮಲಚರಿತ ವಿಪುಲವರದವಿಠಲ 3
--------------
ವೆಂಕಟವರದಾರ್ಯರು
ನೀಲ ಸುಂದರ ಲೀಲವಿಗ್ರಹನೆ ಪ ಭಂಜನ ಬಾರೈ ಉರುಟಣೆಗೆ ಅ.ಪ. ಸಾರಸ ರೇಖರಂಜಿತ ಪಾದಪಂಕಜಕೆ ನವ್ಯಮಾದ ಸುಗಂಧ ಚೂರ್ಣವ ನಿಂದು ಲೇಪಿಸುವೆ 1 ಫಾಲ ಫಾಲ ದೇಶದಿ ನಾಂ ಇಂದು ತಿಲಕವ ತಿದ್ದಿ ನಿಲವೆನು ಪ್ರಾಣ ನಾಯಕನೆ 2 ಸಾಧು ರಕ್ಷಣ ದಕ್ಷ ರಾಕ್ಷಸ ಶಿಕ್ಷ ಭುಜಯುಗಕೆ ಶ್ರೀಧರಿತ್ರೀಫಾಲ ಲೋಲನೆ ಗಂಧವ ಲೇಪಿಸುವೆ 3 ಕಂಬುಕಂಠ ಶ್ರೀಕಂಠ ಮಿತ್ರನೆ ನಿನ್ನಯ ಕಂಠಕೆ ನಾಂ ಅಂಬುಜೋಪಮ ಹಸ್ತದಿ ಗಂಧವ ನಿಂದು ಲೇಪಿಸುವೆ 4 ಚಕೋರ ಚಂದ್ರನೆ ಮಾಲೆಯನರ್ಪಿಸುವೆ ಧೇನುನಗರ ಶ್ರೀರಾಮಚಂದ್ರನೆ ವೀಟಿಯ ಸ್ವೀಕರಿಸೈ 5
--------------
ಬೇಟೆರಾಯ ದೀಕ್ಷಿತರು
ನೀಲ ಗಗನ ನಿಭ ನಿರ್ಮಲಗಾತ್ರನೆ ಪ ಬಾಲಶಶಾಂಕನ ಪೋಲ್ವ ಸ್ವಾಮಿ ಬಾಲಶಶಾಂಕನ ಪೋಲ್ವ ನೀಲಕುಂತಳ ಪರಿಶೋಭಿತ ಫಾಲಕೆ ಕುಂಕುಮವ ಹಚ್ಚುವೆನು 1 ನಳಿನ ನಯನ ಕೋಮಲ ಕಮಲಾನನ ಚಲುವ ಕರಂಗಳ ತೋರೋ ಸ್ವಾಮಿ ನಳಿನವ ಪೋಲುವ ಚಲುವ ಕರಕೆ ನಾ ನರಿಸಿನ ಹಚ್ಚುವೆನೀಗ ಸ್ವಾಮಿ 2 ಅಂಬುಜನಾಭನೆ ಅಂಬುಧಿ ಗಂಭೀರ ಶಂಬರಾರಿ ಶತತೇಜ ಸ್ವಾಮಿ ಕಂಬುಕಂಧರ ತೋರು ಸಂಭ್ರಮದಲಿ ನಾ ಗಂಧವ ಹಚ್ಚುವೆನೀಗ ಸ್ವಾಮಿ 3 ಸುಮಶರ ಜನಕನೆ ಸುವಶರ ವೈರಿಯ ಕಾರ್ಮುಕ ಭಂಜಕ ಸ್ವಾಮಿ ಸಮ ವಿರಹಿತ ನಿನ್ನ ಕೊರಳಿಗ್ಹಾಕುವೆನೀಗ ಕುಸುಮ ಮಾಲೆಯ ನಾನು ಸ್ವಾಮಿ 4 ವಾರಿಧಿ ಚಂದ್ರಮನೆ ಧೀರ ವೀರ ದಿತಿಜಾರಿದೇವ ಶ್ರೀರಘುವೀರ ಶ್ರೀ ಕರಿಗಿರೀಶನೇ ನಿಮ ಗಾರತಿ ಎತ್ತುವೆ ಸ್ವಾಮಿ 5
--------------
ವರಾವಾಣಿರಾಮರಾಯದಾಸರು
ನೀಲ ಚೇಲ ಲೀಲಯಾ ಪುಲಿಶೈಲರಚಿತಲೀಲರಮಾಲೋಲ ಪಾಲಯಾ ಪ ಶರದಿಂದುವದನ-ಕುಂದರದನ ನಂದ ನಂದನಾ ಅರವಿಂದ ನಯನ ಸಿಂಧುಶಯನ ವಂದಿ ಚಂದನಾ1 ಯದುರಾಜಕಲ್ಪಭೂಜದೇವ ರಾಜಪೂಜಿತ ಕರಿರಾಜರಾಜ ರಾಜ ಸಮ ವಿರಾಜ ರಾಜಿತ 2 ಘನದುರಿತ ಪಟುಲಹರಣ ಚಟುಲಚರಣ ಪಾಟಲಾ ಕರಿವರದ ವಿಮಲ ಚರಿತ ವಿಪುಲ ವರದ ವಿಠಲ 3
--------------
ಸರಗೂರು ವೆಂಕಟವರದಾರ್ಯರು