ಒಟ್ಟು 7928 ಕಡೆಗಳಲ್ಲಿ , 135 ದಾಸರು , 4955 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾತವನು ಪರಿಹರಿಸೊ ವಾತನೊಡಿಯಾ ಪ ಪರಿ ಬಾಧೆಬಡುವುದುಚಿತವೇ ರಂಗಾ ಅ.ಪ. ನಿನ್ನ ದಾಸನೊ ದೇವಾ ಸಾಕು ಸಾಕು ಈ ಬವಣೆ ಬಿಡಿಸಿನ್ನು 1 ಅನ್ಯನನು ಇವನಲ್ಲ ನಿನ್ನವನು ಕೇಳೋಶಿರಿನಲ್ಲಾ ಲಾಲಿಸೊ ಎನ್ನ ಸೊಲ್ಲಾ 2 ವಾತಪದ ಯೋಗ್ಯನ ದೂತನಂತೆಂದು ಬಿನ್ನೈಪೆ ತಾತ ತಂದೆವರದಗೋಪಾಲವಿಠಲಾ 3
--------------
ತಂದೆವರದಗೋಪಾಲವಿಠಲರು
ವಾದಿರಾಜರ ಪದವ ಸ್ಮರಿಸುವೆ ಅ- ಗಾಧ ಮಹಿಮರ ಸದಯ ಹೃದಯರ ಪ ಸಾಧು ಜನರಿಗೆ ಬೋಧಿಸಿರ್ಪರ ಗೆದ್ದು ಮುತ್ತಿನ ಪೀಠವೇರ್ದರ 1 ಮೋದದಿಂದ ಚರಿಸಿ ತೀರ್ಥ ಪ್ರ- ಬಂಧ ಗ್ರಂಥವ ರಚಿಸಿ ಮಾನ್ಯರಾ ಗಿರ್ದ ಗುರುಗಳನೆಂತು ಬಣ್ಣಿಪೆ 2 ರಾಜಸಭೆಯೊಳು ರಾಜಭೀಷ್ಮಕ ತನುಜೆಯರಸನ ಸ್ತುತಿಪ ಕಾವ್ಯವ ಈ ಜಗತ್ತಿನೊಳ್ ಶ್ರೇಷ್ಠ ಕಾವ್ಯವೆಂ ದಿದನೆ ಗಜದೊಳು ಮೆರೆಸಿದರಸನು 3 ಒಂದುನೂರ ಇಪ್ಪತ್ತು ವರ್ಷದೊಳ್ ಸಿಂಧುಶಯನನ ಸೇವಿಸುತ್ತಲಿ ಇಂದ್ರದತ್ತ ವಿಮಾನದಿಂದಲಿ ಸತ್ಯಲೋಕವನೈದಿದ ಗುರುವರ 4 ರಾಜೇಶ ಹಯಮುಖಾನಂತ ಗುಣಗಳ ಪೊಗಳುತಿರ್ಪರ ರಾಗಶೂನ್ಯರ ಋಜು ಗಣೇಶರ ಜ್ಞಾನಪೂರ್ಣರ 5
--------------
ವಿಶ್ವೇಂದ್ರತೀರ್ಥ
ವಾದಿರಾಜರ ಸ್ತೋತ್ರ ಇದಿರ್ಯಾರೋ ಗುರುವೆ ಸಮರ್ಯಾರೋ ಶ್ರೀ ಹಯವದನ ಪದ ಪ್ರಿಯ ವಾದಿರಾಜ ಪ ಸಿರಿನಿಲಯನ ಗುಣಗಳ ಸ್ಮರಿಸುತಗುರು ಮಧ್ವ ಮುನಿಪನ ಮಹಿಮೆಯ ಪೊಗಳುತನೆರೆದಿದ್ದ ಮಾಯ್ಮದ ಕರಿಗಳ ಶಿರವನುಭರದಿ ಛೇದಿಪ ಬಲಿ ವಿಬುಧ ಕೇಸರಿಯೆ 1 ಸಾರ ಸಜ್ಜನರಿಗೆ ತಿಳಿಯದೇಪರಿಪರಿ ಕುಸಮಯ ತಮ ಕವಿಯಲು ನೀಸರಸ ಭಾರತಿ ಮೊದಲಾದ ಗ್ರಂಥಗಳನುವಿರಚಿಸಿ ತಮ ಹರಿಸಿದ ದಿನಕರನೇ 2 ಸೋದೆಯ ಪುರದಲ್ಲಿರುವ ಹಯವದನನಮೋದದಿ ಭಜಿಸುತ ಈ ಧರೆಯೊಳ್ ಪೂರ್ಣಬೋಧ ತೀರ್ಥರ ಪಾದಸೇವಕರಿಗೆಆದರ ಮಾಳ್ಪ ಯತಿಕುಲ ಶಿರೋಮಣಿಯೇ 3 ಮುದ್ದು ಲಕ್ಷ್ಮೀಶ ವೆಂಕಟ ವಿಠ್ಠಲನಹೊದ್ದಿದ ಭಕ್ತರ ಸಂತಾಪ ಕಳೆಯುತ ಮಧ್ವಮುನಿಯ ಮತ ದುಗ್ಧವಾರಿಧಿಯೊಳುಉದ್ಭವಿಸಿದ ಪೂರ್ಣ ಶುದ್ಧ ಚಂದ್ರಮನೇ 4
--------------
ವೆಂಕಟೇಶವಿಟ್ಠಲ
ವಾದಿರಾಜರು ವಾದಿರಾಜ ಗುರುರಾಜರ ಕೊಂಡಾಡಿ ಜನಿಪ ಸುಖವನು ಬೇಡ ಪ ಸೋದೆ ಸ್ಥಳದಲಿ ನಿಂತು ಮೆರೆವನಯ್ಯಹಯವದನನ ಪ್ರಿಯ ಅ.ಪ. ಮೋದತೀರ್ಥ ಮತವಾರಿಧಿ ಪೂರ್ಣಚಂದ್ರ ಸದ್ಗುಣ ಸಾಂದ್ರಾಮೇದಿನಿಯೊಳಗಿಹ ತೀರ್ಥ ಕ್ಷೇತ್ರವ ಚರಿಸಿ ಸಂತರನುದ್ಧರಿಸಿಸಾದರದಲಿ ಹರಿಮಹಿಮೆಯ ಕೊಂಡಾಡಿ ಪ್ರಬಂಧವನು ಮಾಡಿವಾದಿಗಳೆಂಬುವ ಗಜಕುಲ ಹರ್ಯಕ್ಷನಾಗಿಹ ಹರಿದೀಕ್ಷಾ 1 ಎರಡೀರರುವತ್ತು ವಿದ್ಯಾಪೂರ್ಣನೆನಿಸೀ ದೂಷಕರನು ಜಯಿಸಿಬಿರುದುಗಳನಪಹರಿಸಿದ ಯತಿವರ್ಯ ಹರಕಾರ್ಯ ಧುರ್ಯವರಭೈಷ್ಮಿಶನ ವಿಜಯದ ಕಾವ್ಯವನು ಬಹುಪರಿ ಮಹಿಮೆಯನುವಿರಚಿಸಿ ಕವಿಕುಲ ಮಾನ್ಯನೆನಿಸಿಕೊಂಡ ಹರಿದಾಸ ಪ್ರಚಂಡಾ 2 ಅನುದಿನ ಸೇವಕರುಭೂತಳದ ಜನರು ಬೇಡಿದ ಇಷ್ಟಾರ್ಥ ಕೊಡುವಂಥ ಸಮರ್ಥಧಾರುಣಿಪತಿ ಗೋಪತಿವಿಠಲ ನಿನ್ನೊಶನಾಗಿಹನಲ್ಲ 3
--------------
ಗೋಪತಿವಿಠಲರು
ವಾಮ ಭಾಗದಿ ಲಕ್ಷ್ಮೀದೇವಿಯುಭೂಮಿ ದೇವಿಯು ದಕ್ಷಭಾಗದಿಶ್ರೀ ಮನೋಹರನಿಹನು ಮಧ್ಯದಿಪ್ರೇಮದಲಿ ನಮಿಸು 1 ನಮಿಸು ಕೃದ್ದೋಲ್ಕ ವಾಸುದೇವರಸ್ಮರಿಸು ಕೇಶವದ್ವಿತಿ ಮತ್ಪರಸ್ಮರಿಸು ಕೂರ್ಮಾನಂತ ಶಕ್ರರಸುರಿಪ ದಿಶಿಯಲ್ಲೀ 2 ಸ್ಮರಿಸು ಸಹಸ್ರೋಲ್ಕ ಮಾಯರಶಿರಿವರಾವನಿ ಧರನ ವಾರುಣಿಸ್ಮರಹರಾಂಚಿತನು ವಹ್ನಿಯಶರನ ಕೋನದಲಿ 3 ನಮಿಸು ಮಹೋಲ್ಕ ಸಂಕರ್ಷಣನನಮಿಸು ಗೋವಿಂದ ವಿಷ್ಣು ನರಹರಿನಮಿಸು ವಾಮನ ಬ್ರಹ್ಮ ಯಮರನುಕ್ರಮದಿ ದಕ್ಷಿಣದಿ 4 ಸ್ಮರಿಸು ಸಹಸ್ರೋಲ್ಕ ಜಯರನುಸ್ಮರಿಸು ಮಧುಹನ ಪರಷುರಾಮನಸರಸಿಜಾಸನ ಸತಿಯು ನಿಋತಿಯತಿಋತಿ ಕೋಣದಲಿ 5 ವೀರ ಉಲ್ಕ ಪ್ರದ್ಯುಮ್ನ ತ್ರಿವಿಕ್ರಮಸಾರ ರಘುವರ ವೃಷ್ಣಿನಾಥಸ-ಮೀರ ವರುಣರ ಪೂಜಿಸೂವುದುವಾರಿ ದಿಶೆಯಲ್ಲೀ 6 ನುತಿಸು ಸಹಸ್ರೋಲ್ಕ ಕೃತಿಯರನತಿಸು ಶ್ರೀಧರ ಬುದ್ಧಿ ಭಾರತಿಸತತ ಗಮನರ ವಾಯು ಕೋಣದೊಳತಿ ಸುಭಕ್ತಿಯಲಿ 7 ದ್ಯುಲ್ಕ ಅನಿರುದ್ದೇಂದ್ರಿಶೇಯರನಳಿನನಾಭನ ಕಲ್ಕಿ ನಂತರಸಲಿಲ ಮೂರುತಿ ರೋಹಿಣೇಶರಒಲಿಸು ಉತ್ತರದೀ 8 ಸ್ಮರಿಸು ಸಹಸ್ರೋಲ್ಕ ಶಾಂತರಸ್ಮರಿಸು ದಾಮೋದರನ ವಿಶ್ವನಗಿರಿಜೆಯನು ಪಾರ್ವತೀ ಪತಿಯಹರನ ಕೋಣದಲಿ 9 ವಾರಣಾಸನ ಮೊದಲು ನಿಜಪರಿವಾರ ಸಹಿತದಿ ಸರ್ವದಿವಿಜರುಮಾರನಯ್ಯನ ಸುತ್ತಲೂ ಪರಿ-ಚಾರರಾಗಿಹರು 10 ಈಸು ಪೀಠಾವರಣ ತ್ರಿದಿವನಿವಾಸಿಗಳ ಮಧ್ಯದಲಿ ಸಂತತವಾಸುದೇವನ ಪೂಜಕೇಶನಿ-ವಾಸ ಪೊಂದುವರು 11 ಗಿರಿಯೊಳಿರುತಿಹ ವೆಂಕಟೇಶನಸರಸ ಪೀಠಾವರಣ ಪೂಜೆಯಕರಡಿ ಮಗಳಿಗೆ ಜೈಗಿಷವ್ಯನುಅರುಹಿದನು ಮುದದಿ 12 ಗರುಡನಿಗೆ ಶ್ರೀಕೃಷ್ಣ ಪೇಳಿದಹರಿಯ ಪೀಠಾವರಣ ಪೂಜೆಯಸರ್ವ ಜನರಿಗೆ ತಿಳಿಯಲೋಸುಗವಿರಚಿಸಿದೆ ನಾನೂ 13 ಇಂದಿರೇಶನು ಎನ್ನವಾಣಿಲಿನಿಂದು ಮಾಡಿದನೀ ಸುಗ್ರಂಥವಲೆಂದು ಆತನ ಪಾದಕಮಲದ್ವಂದ್ವಕೊಪ್ಪಿಸುವೆ 14
--------------
ಇಂದಿರೇಶರು
ವಾಮನಾವತಾರ ವಾಮನನನು ನೆನೆ ಹೇ ಮನವೇ ವಟು ವಾಮನನನು ನೆನೆ ಹೇ ಮನವೇ ಕಾಮಪೂರಣ ಲಕ್ಷ್ಮೀಧಾಮನ ಮರೆಯದೆ ಪ. ಶ್ಯಾಮಸುಂದರ ಸುರ ಪ್ರೇಮದಿ ಕಶ್ಯಪ ಧಾಮವಾ ಬೆಳಗುತ ಬಂದ ಭೂಮಿಯನಳದ ಸುತ್ರಾಮಗಿತ್ತ ನಿ ಸ್ಸೀಮ ಸಾಹಸ ಗೋವಿಂದ ನೀ ಸಲಹೆಂದು 1 ಬಲಿಯ ದೃಢಕೆ ಮೆಚ್ಚಿ ಸಲಹುತ ಮುಂದಿನ ವಲಭಿದಾಗುವೀ ನೀನೆಂದ ಕಲುಷಾಪಹಪದಕಮಲವ ಶಿರದೊಳು ನಿಲಿಸಿ ಬಾಗಿಲೊಳು ನಿಂದವ ನೀನೆಂದು 2 ಶ್ರೀ ಭೂಮಿಯುತ ಮುಕ್ತಾಭರಣಾಶ್ರಿತ ಸೌಭಾಗ್ಯಕರ ಲೀಲಾ ಆಭೀರರ ಕನ್ನೆಯರೊಲಿಸಿದ ಪದ್ಮ- ನಾಭ ವೆಂಕಟಪತಿ ಪರಮ ಪುರುಷನೆಂದು 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು
ವಾಯು ಕುಮಾರ ಸುಜನೋದ್ಧಾರ ಮಾ ರಮಣ ಪ್ರಿಯ ಭಕುತವರ ಪ ಪಾರಾವಾರದಂತಿಹ ಈ ಘೋರ ಸಂಸಾರದ ಪಾರವಗಾಣಲುಪಾಯವ ತೋರೊಅ.ಪ ಇನಕುಲ ತಿಲಕನ ಅನವರತದಿ ದರು ಶನದಲಿ ಹಿಗ್ಗುವ ಅನುಭವವು ಸನಕ ಸನಂದನ ಮುನಿಜನಗಳಿಗುಂಟೆ ವಿನಯದಿ ಬೇಡುವೆ ಅನುಗ್ರಹವ 1 ಈ ಮಹಿಯೊಳು ಬಲ ಭೀಮನೆಂಬ ದಿವ್ಯ ನಾಮದಿ ಪರಿಪರಿ ಸೇವಿಸುತ ಸತ್ಯ ಭಾಮಾಕಾಂತನ ಪ್ರೇಮ ಪಾತ್ರನೆಂದು ಕಾಮಿಸುವೆನು ನಿನ್ನ ವರ ದಯುವ 2 ವರ ಯತಿ ವೇಷದಿ ಹರಿಮತವನು ಬಲು ಹರಡುತ ಧರೆಯೊಳು ಸುಜನರಿಗೆ ನರ ಹರಿ ಲೋಕಕೆ ಮಾರ್ಗವರುಹಿದ ಗುರುಗಣ ಗುರು ಮಧ್ವರಾಯ ಪ್ರಸನ್ನನಾಗೊ 3
--------------
ವಿದ್ಯಾಪ್ರಸನ್ನತೀರ್ಥರು
ವಾಯು ದೇವರು - ಹನುಮಂತ ಭವ ಪ ದಂಜಿಕೆ ಬಿಡಿಸು ಬೇಗ ಸಂಜೀವರಾಯನೆ ಅ.ಪ. ನೋಯುವೆ ನಾ ಸಂಸಾರದೊಳ್ ಕೈಯಪಿಡಿದೆತ್ತುವರಾರೈ 1 ಗುರುವರೇಣ್ಯ ತವ ಪಾದಪಂ ನೆರಲಿನೊಳಗಿಟ್ಟುಯನ್ನನು 2 ಕ್ಷೇಮದಾತನೇ ಶ್ರೀ ಗುರು ಭೂಮಿಜಾಶೋಕನಾಶನ 3
--------------
ಗುರುರಾಮವಿಠಲ
ವಾಯುದೇವರ ಸ್ತೋತ್ರ ಕೇಳಿರೀತನ ಗಾಥ ಚರಿತೆಯ ಚಲ್ವ ಜಾಲಿಕಾಪುರದಿದ್ದ ಧೊರೆಯಾ ಪ ಕಾಳಾಹಿ ವೇಣಿಯಳು ದ್ರುಪದಜೆಶಾಲೆ ಸೆಳಿಯುತ ಖೂಳ ಸಭೆಯೊಳುಗೋಳಿಸಿದ ದುರ್ಯೋಧನನ ಕುಲಹಾಳು ಮಾಡಿದ ಬಹಳ ಬಗೆಯಲಿಅ.ಪ ಕಟಕೆಲ್ಲ ಕುರುಕ್ಷೇತ್ರದಲ್ಲೀ ಬಹುಳ-ದ್ಧಟಿತವಾಗಿ ನೆರದಿತಲ್ಲೀಕುಟಿಲ ದುಶ್ಶಾಸಿದ್ದನಲ್ಲೀ ಭೀಮಾ-ರ್ಭಟಿಸುತಲವನ ಕಾಣುತಲಿಕಟಕಟನೆ ಪಲ್ಗಡಿದು ಅಸುರನ ಪಟಪಟನೆ ಕರುಳನ್ನು ಹರಿಯುತಪುಟಿ ಪುಟಿದ ಹಾರುತಲಿ ರಣದೊಳು ಛಟ ಛಟಾ ಛಟಿಲೆಂದು ಸೀಳಿದ 1 ಗಡಬಡಿಸುತ ಭೀಮನಾಗೇ ಎದ್ದು ನಡೆದನು ತುಡುಗರ ಬಳಿಗೇ ತಡ ಮಾಡದಲೆ ಬಹು ಬ್ಯಾಗೆ ದೊಡ್ಡಗಿಡ ಕಿತ್ತಿ ಪಿಡಿದ ಕೈಯೊಳಗೇಘುಡು ಘುಡಿಸಿ ರೋಷದಲಿ ಅಸುರರಬಡಿ ಬಡಿದು ಮಕುಟವನೆ ಕಿತ್ತುತ ಕಡಿ ಕಡಿದು ರಥಗಳನೆ ತರಿವುತಧಡ ಧಡಾ ಧಡಲೆಂದು ಕೆಡಹಿ 2 ಪೂಶರ ಜನಕ ತಾನೊಲಿದು ಉಪ-ದೇಶ ಕೊಟ್ಟನು ಭೀಮಗೊಂದುದ್ವೇಷಿ ದುರ್ಯೋಧನನ ಹಿಡಿದು ತೊಡೆ ನಾಶ ಮಾಡಲೊ ಎಂದು ನುಡಿದುರೋಷದಲಿ ಬೊಬ್ಬಿರಿದು ಅವನಾ-ಕಾಶಕೊಗೆಯುತ ಭಾಪುರೇ ಗದೆಬೀಸಿ ಬಡಿಯುತ ಕಡಿದೆ ತೊಡೆಗಳಕೇಶವ ವಿಠಲೇಶನಾಜ್ಞದಿ 3
--------------
ಕೇಶವವಿಠ್ಠಲರು
ವಾಯುದೇವರು ಅಂಜುವೆನು ನಿನಗಂಜನೆಯ ತನಯಪ್ರಭಂಜನನ ಸುತ ಅಂಜುವೆನು ಪ ಚಾರು ಮುದ್ರೆಯನುತೋರಿ ಲಂಕೆಯ ಸೂರೆ ಮಾಡಿದೆ ಘೋರರಾಕ್ಷಸರ್ಘಾತಗೊಳಿಸಿದಿ 1 ಭೂರಿ ಸೇವಿಸಿದೆನಾರಿ ಕಾಡಿದ ಕ್ರೂರರಡಹನು ಹಾರ ಮಾಡಿದಿ ಶೂರ ಭೀಮನೆ 2 ನಂದ ತೀರ್ಥನೆ ಬಂದು ದುರ್ಜನದುಂದು ನಿಲ್ಲಿಸುತಾಇಂದಿರೇಶ ವಿದೇಂದ್ರದೈವತ ವಂದ್ಯನೆಂದು ನಿಬಂಧ ಮಾಡಿದಿ 3
--------------
ಇಂದಿರೇಶರು
ವಾಯುದೇವರು ಎಲ್ಲಿರುವೆ ತಂದೆ ಬಾರೊ ಮಾರುತಿ ಪ ಎಲ್ಲೆಲ್ಲಿನೋಡಿದರು ಅಲ್ಲಿ ನಿನ್ನ ಕೀರುತಿ ಅಲ್ಲಿನಿನ್ನಕೂಡಿರುವ ನಿತ್ಯಾಶ್ರೀಪತಿಅ.ಪ ವಾರಿಧಿಯ ಹಾರಿ ನೀ ಸೇರಿ ತ್ವರದಿ ಲಂಕೆಯ ಕ್ರೂರರನ್ನು ಕೊಂದು ಕುರುಹ ತಂದ ಮಹರಾಯ 1 ದುರುಳ ಕುರುಪನನ್ನು ಕೊಂದು ತರಳೆಯಮಾನ ಹರುಷದಿಂದ ಪೊರೆದು ನೀ ಮೆರೆದ್ಯೊ ಸುಮ್ಮಾನ 2 ಹಿತದಿ ಸತತ ಭಜಿಸಿ ಶೇಷ ವಿಠ್ಠಲನ ಮೋದಿಸಿದಿ 3
--------------
ಬಾಗೇಪಲ್ಲಿ ಶೇಷದಾಸರು
ವಾಯುದೇವರು ನಿನ್ನ ನಂಬಿ ಬಂದೆ ಪಂಚಮುಖಿ ಪ್ರಾಣ ಅನ್ಯ ಹಂಬಲ ಬಿಡಿಸಿ ಬಿಂಬ ಮೂರುತಿ ತೋರೋ ಪ ಹಿಂದೆ ತ್ರೇತಾಯುಗದಿ ರಾಮನಾಜ್ಞೆಯ ಹೊಂದಿ ಸಿಂಧು ದಾಟಿ ಸೀತೆಗೆರಗಿ ನಿಂದು ಸುಂದರ ರಾಮ ಮುದ್ರಿಕೆಯಿತ್ತು ಲೀಲೆಯಲಿ ಕೊಂದ ರಕ್ಕಸ ಪುರವನನಲಗೆ ಇತ್ತೆ 1 ಬಂಡಿ ಅನ್ನವನುಂಡು ಭಂಡ ಬಕನಾ ಕೊಂದು ಹಿಂಡು ನೃಪರಾ ಜರಿದು ಕೊಂಡು ದ್ರೌಪದಿಯಾ ಮಂದಮತಿಗಳನಳಿದು ತಂದಿ ಸೌಂಗಂಧಿಕವ ಪುಂಡ ಕೀಚಕರಳಿದ ಪಾಂಡವಪ್ರಿಯದೂತ 2 ಮೋದತೀರ್ಥರೆನಿಸಿ ವಾದಿಗಳ ನಿಗ್ರಹಿಸಿ ಬೋಧಿಸಿ ಸುಜನರಿಗೆ ಮಾಧವನ ಗುಣವ ಸಾಧು ವಂದಿತ ಬಾದರಾಯಣರು ಇರುತಿರುವ ಬದರಿಯಲ್ಲಿರುವಿ ಶ್ರೀ ನರಹರಿಯ ತೋರೋ 3
--------------
ಪ್ರದ್ಯುಮ್ನತೀರ್ಥರು
ವಾಯುದೇವರು ಬಾರಯ್ಯ ಬಾರೋ ಮಾರುತಿ ಪ ಅಕ್ಷಯಕುವರನ | ಕುಕ್ಷಿಯನೋಡಲು | ಪಕ್ಷಿವಾಹನರಾಮ | ಈಕ್ಷಣ ಕರೆವ ಬಾ 1 ದುರುಳ ದುಶ್ಶಾಸನನ | ಉದರವ ಭಂಗಿಸೆ | ತರಳೆದ್ರೌಪತಿ ದೇವಿ | ಕರೆದಳೊ ಬೇಗ 2 ಮಧ್ವಮುನಿಯೆ ನಿನ್ನ | ಶುದ್ಧತತ್ವದಿ ನಮ್ಮ | ಉದ್ಧರಿಸಲು | ಅನಿರುದ್ಧನು ಕರೆವ ಬಾ 3 ಜಗದಿ ಭ್ರಾಂತೇಶನೆ | ಮೃಗಯಾಪುರದೊಳು | ಮಿಗಿಲು ರಥವನೇರಿ | ಸೊಗಸಿಲಿ ಬೇಗ ಬಾ 4 ಶ್ರೀಶಕೇಶವದೂತ | ಭೂಸುರವಿನುತ | ದಾಸರ ಸಲಹಲಿನ್ | ಈ ಸಮಯದಿ ಬೇಗ5
--------------
ಶ್ರೀಶ ಕೇಶವದಾಸರು
ವಾಯುದೇವರು - ಹನುಮಂತ ಎಂಥ ವೈರಾಗ್ಯ ಹನುಮಂತ ಎಂಥ ಸೌಭಾಗ್ಯ ಗುಣವಂತ ಪ ಸಂತತ ರಾಘವನಂಘ್ರಿ ಕಮಲದಲಿ ಅಂತರಂಗ ಭಕುತಿಯ ಬೇಡಿದೆಯೊ ಅ.ಪ ಆವರಿಹರು ನಿನ್ಹೊರತು ರಾಘವರ ಭಾವವರಿತು ಪ್ರತಿ ಕ್ಷಣಗಳಲಿ ಸೇವೆ ಸಲಿಸಿ ದಯ ಪಡೆಯಲು ಭೋಗವ ದಾವದನುಭವಿಸೆ ದುರ್ಲಭವು ಜೀವೋತ್ತಮನದ ಬಯಸದೆ ಏಕೋ ಭಾವದಿ ಪದಸೇವೆಯ ಕೇಳಿದ ವೀರ 1 ಜ್ಞಾನಪರಾಕ್ರಮ ಧ್ಯೆರ್ಯವೀರ್ಯಕಧಿ ಷ್ಠಾನ ಪವನಸುತ ಜಗತ್ರಾಣ ನೀನಲ್ಲದೆ ಖಗಮೃಗ ಸುರನರರುಗ ಳೇನು ಚಲಿಸಬಲ್ಲರೊ ಹನುಮ ಪ್ರಾಣಭಾವಿ ಚತುರಾನನ ಭುವಿಯೊಳ ಗೇನು ರುಚಿಯೊ ಕಲ್ಯಾಣಚರಿತ ನಿನಗೆ 2 ಕಪಿ ರೂಪದಿ ದಶಕಂಧರನ ಮಹಾ ಅಪರಾಧಕ್ಕೆ ಶಿಕ್ಷೆಯನಿತ್ತೆ ನೃಪರೂಪದಿ ದುರ್ಯೋಧನನಸುವನು ಅಪಹರಿಸಿದೆಯೋ ಬಲ ಭೀಮ ವಿಪುಲ ಪ್ರಮತಿ ವರವೈಷ್ಣವ ತತ್ವಗ ಳುಪದೇಶಿಸಿದ ಪ್ರಸನ್ನ ಯತಿವರೇಣ್ಯ3
--------------
ವಿದ್ಯಾಪ್ರಸನ್ನತೀರ್ಥರು