ಒಟ್ಟು 5714 ಕಡೆಗಳಲ್ಲಿ , 131 ದಾಸರು , 3405 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ನಾನ ಮಾಡಿರಯ್ಯ ಜಾÕನತೀರ್ಥದಲಿನಾನು ನೀನೆಂಬಹಂಕಾರವ ಬಿಟ್ಟು ಪ.ತನ್ನೊಳು ತಾನೆ ತಿಳಿದರೊಂದು ಸ್ನಾನಅನ್ಯಾಯಗಾರಿ ಕಳೆದರೊಂದು ಸ್ನಾನಅನ್ಯಾಯವಾಡದಿದ್ದರೊಂದು ಸ್ನಾನಚೆನ್ನಾಗಿ ಹರಿಯ ನೆನೆದರೊಂದು ಸ್ನಾನ 1ಪರಸತಿಯ ಬಯಸದಿದ್ದರೆ ಒಂದು ಸ್ನಾನಪರನಿಂದೆ ಮಾಡದಿದ್ದರೆ ಒಂದು ಸ್ನಾನಪರದ್ರವ್ಯ ಅಪಹರಿಸದಿರೆ ಒಂದು ಸ್ನಾನಪರತತ್ವತಿಳಿದುಕೊಂಡರೆ ಒಂದು ಸ್ನಾನ2ತಂದೆತಾಯಿಗಳ ಸೇವೆ ಒಂದು ಸ್ನಾನಮುಂದಿನಮಾರ್ಗ ತಿಳಿದರೊಂದು ಸ್ನಾನಬಂಧನವನು ಬಿಡಿಸಿದರೊಂದು ಸ್ನಾನಸಂಧಿಸಿ ತಿಳಿದುಕೊಂಡರೆ ಸೇತು ಸ್ನಾನ 3ಅತ್ತೆ ಮಾವನ ಸೇವೆಯೊಂದು ಸ್ನಾನಭರ್ತನ ಮಾತು ಕೇಳುವುದೊಂದು ಸ್ನಾನಕ್ಷೇತ್ರಪಾತ್ರರ ಸಹವಾಸ ಒಂದು ಸ್ನಾನಪಾರ್ಥಸಾರಥಿ ನಿಮ್ಮ ಧ್ಯಾನವೆ ಧ್ಯಾನ 4ವೇದ ಶಾಸ್ತ್ರಗಳನೋದಿದರೊಂದು ಸ್ನಾನಭೇದಾಭೇದ ತಿಳಿದರೊಂದು ಸ್ನಾನಸಾಧು ಸಜ್ಜನರ ಸಂಗ ಒಂದು ಸ್ನಾನಪುರಂದರವಿಠಲನ ಧ್ಯಾನವೆ ಸ್ನಾನ 5
--------------
ಪುರಂದರದಾಸರು
ಸ್ಮರಿಸುವೆ ನಾ ನಿಮ್ಮ ಚರಣಕಮಲಗುರುವಿಜಯರಾಯಜನ್ಮಾರಭ್ಯವು ನಿಮ್ಮ ಗುಣಕರ್ಮಗಳೆಲ್ಲ ವಿಜಯರಾಯದಿವಿಜರ ವೇಷದಿಂದವನಿಯೊಳುದಿಸಿದ್ಯೊ ವಿಜಯರಾಯಭಾಗವತಧರ್ಮವಹಿಸಿ ತ್ರಿರಾವರ್ತಿ ವಿಜಯರಾಯಕಂಚಿಕಾಳ್ಹಸ್ತಿ ಶ್ರೀರಂಗ ಸೇತುಯಾತ್ರೆ ವಿಜಯರಾಯಮರಿಯಾದೆಯಿಲ್ಲದೆ ವರಗಿರಿಯಾತ್ರೆಯ ವಿಜಯರಾಯಮಹಿಯಲ್ಲಿ ತಿರುಗಿ ಸರ್ವಕ್ಷೇತ್ರದಿ ವಿಜಯರಾಯಗುರೂಪದೇಶಕನಾಗಿ ವ್ಯಾಸಕಾಶಿಯಲ್ಲಿದ್ಯೊ ವಿಜಯರಾಯಸ್ವಚ್ಛವಾಗಿ ಗಂಗಾತೀರ ವಾಸಮಾಡಿ ವಿಜಯರಾಯತುಂಗಾತೀರದಿ ಕುಳಿತು ಗಂಗೆ ಪೆಚ್ಚಿಸಿದಿ ವಿಜಯರಾಯಮಧ್ವಮತದಸಾರಕವನದಿ ರಚಿಸಿದ್ಯೊ ವಿಜಯರಾಯಶುದ್ಧ ತತ್ವಸಾರ ಸುಳಾದಿ ಪದಮಾಡಿ ವಿಜಯರಾಯಸದಾಚಾರಸಂಪತ್ತು ಮಧುಕರವೃತ್ತಿಯು ವಿಜಯರಾಯಭಕ್ತರ ಅಪಮ್ಯತ್ಯುಬಿಡಿಸಿ ಆಯುನಿತ್ತೆ ವಿಜಯರಾಯನಿತ್ಯಾನ್ನ ಪುತ್ರೋತ್ಸವಗಳು ಭೃತ್ಯರಿಗೆ ವಿಜಯರಾಯಭಕ್ತಜನರಿಗೆ ತತ್ವೋಪದೇಶವ ಮಾಡಿ ವಿಜಯರಾಯಎಲ್ಲರಲಿ ಸಿರಿನಲ್ಲನ ಅಂಶವ ವಿಜಯರಾಯಬಲ್ಲಿದನೀನೊಂದುರೂಪದಿ ಎನ್ನಲ್ಲಿ ವಿಜಯರಾಯನಿಮ್ಮ ಪುಣ್ಯದ ಶೇಷವಿನ್ನು ಉಂಬೆವೊ ನಾವು ವಿಜಯರಾಯಎನ್ನಿಂದ ಆಗೋ ಸಾಧನವೆಲ್ಲ ನಿನ್ನದೊ ವಿಜಯರಾಯಈಗ ಈ ಯುಗದಿ ಸಾಧನವೆಂಬುದು ಕಾಣೆ ವಿಜಯರಾಯಗುರುನಿನ್ನ ಕರುಣಕವಚತೊಟ್ಟ ಭಕುತರ್ಗೆ ವಿಜಯರಾಯ
--------------
ಗೋಪಾಲದಾಸರು
ಸ್ವಾಮಿ ನೀ ಮಾಡಿದುಪಕಾರಾ ಕಿಂತು ಪಾಮರನಪ್ರತಿಉಪಕಾರಾ | ಭೀಮಾಶಂಕರ ಗುರುವಾಗುವ ಪ್ರಕಾರಾ |ಈ ಮನಕೆ ಎಂದಿಗೆ ತೋರದಾಕಾರಾ ||ಸ್ವಾಮಿ||ಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲಕ್ಷ ಎಂಬತ್ತು ಮೂರೊಂದನು |ಯೋನಿಕುಕ್ಷಿಯೊಳಗೆಹೊಕ್ಕು ಬಂದೆನೊ | ಭಕ್ಷ್ಯಾಭಕ್ಷ್ಯವ ಮೆದ್ದೆನು |ಅನುಪೇಕ್ಷಿಯೊಳಗೆ ಮುಳುಗಿದ್ದೆನೋ | ಭಿಕ್ಷುಕರೊಡೆಯನಿರೀಕ್ಷಿಸಿ ಕೃಪಾ ಕಟಾಕ್ಷದಿ ಸದ್ಗುರು ರಕ್ಷಿಸಿದಂಥಾ1ನೀರೊಳು ಜೀವಿಸುತಿದೆ ಮೀನಾ |ನೀರು ಕಾರಣವರಿಯದು | ಆ ಮೀನಾ |ಪಾರವಿಲ್ಲದಂಥದೀ ಮೀನಾ |ಪರವಸ್ತುಖೂನನರಿಯದು ಮನ ಮೀನಾ |ನಾರೇರ ನೋಟಕ್ಕೆ ಸೇರಿ ತಾ ಹೋದೀತು |ಸಾರವಸ್ತುವ ತಂದು ತೋರಿಸಿದಂಥ2ತನುವು ತನ್ನೊಳಗೆ ತಾ ತೋರದು |ತನು ಮನದ ವೃತ್ತಿಗೆ ತಾ ಬಾರದು |ಜನನ ಮೃತ್ಯಂಗಳು ದೋರದು |ಎನಗೆ ಸಾಧು ಸಜ್ಜನ ಸಂಗ ದೊರಕದು |ಘನಗುರುಶಂಕರ ಚಿನುಮಯರೂಪ- |ದನುಭವಕೆ ತಂದು ಎನಗೆ ನೀ ಕೊಟ್ಟಂಥ3
--------------
ಜಕ್ಕಪ್ಪಯ್ಯನವರು
ಸ್ವಾಮಿತ್ವದವರಿಗೆ ಅಯುಕ್ತವೇ ಯುಕ್ತ |ಶ್ರೀಮನೋರಮನೆ ಪೇಳುವೆ ಕೇಳು ಶಕ್ತ ಪಮಾವನಿಗೇ ಮಾವನಾದೆಯಲೊ ಜನ್ಮಾರಭ್ಯ |ನೀವೊಡಲ ಹೊರದೆ ಚೋರತನ ಮಾಡಿ ||ಕೋವಿದಂಗತಿ ಮೆಚ್ಚು ಜಾರತನ ಮಾಡಿದುದು |ಆ ವನಿತೆ ಮೆದ್ದ ಫಲ ಮೆದ್ದಿ ನಿರ್ದೋಷಿ 1ನರಸೇವೆಯ ಮಾಡಿ ಪೆಸರಾದಿ ಮಾತೆಯ ಕೊಂದೆ |ಧರೆಯೊಳಗೆ ಮಾತುಲನ ಕೊಲ್ಲಬಹುದೇ ||ತಿರುಕಿ ಬೇಡಿಸುವಳರಸರನ ನಿನ್ನಯ ರಾಣಿ |ಪರಿಮಿತಿಯಿಲ್ಲದ ದುರಾಚಾರಿ ನಿನ್ನಯ ಮಗನು 2ಮೈದುನನು ಗುರುದ್ರೋಹಿ ಮೊಮ್ಮಗನು ಬಹು ಚಾಡಿ |ಮೇದಿನಿಯೊಳಗೆ ಹೇಳುತಲೆ ತಿರುಗುವ ||ಶ್ರೀದ ಪ್ರಾಣೇಶ ವಿಠ್ಠಲನೇ ನೀನೇ ದೊರೆ |ಯಾದ ಕಾರಣ ದಕ್ಕಿತಿದು ಇಲ್ಲದರೆ ಸಲ್ಲ 3
--------------
ಪ್ರಾಣೇಶದಾಸರು
ಹಣ್ಣು ತಾ ಬೆಣ್ಣೆ ತಾರೆ - ಗೋಪಮ್ಮ-|ಹಣ್ಣು ತಾ ಬೆಣ್ಣೆ ತಾರೆ ಪಅಡವಿಯೊಳಗೆ ಅಸುರನ ಕೊಂದ ಕೈಗೆ |ಮಡುವಿನೊಳಗೆ ಮಕರನ ಸೀಳ್ದ ಕೈಗೆ ||ಪೊಡಿವಿಯೊಳಗೆ ಚೆಂಡನಾಡಿದ ಕೈಗೆ |ಸಡಗರದಲಿ ಭೂಮಿ ಬೇಡಿದ ಕೈಗೆ 1ಶಂಖ ಚಕ್ರಗಳ ಪಿಡಿದಂಥ ಕೈಗೆ |ಶಂಕೆಯಿಲ್ಲದೆ ಮಾವನ ಕೊಂದ ಕೈಗೆ ||ಬಿಂಕದಿಂದಲಿ ಕೊಳಲೂದುವ ಕೈಗೆ |ಪಂಕಜಮುಖಿಯರ ಕುಣಿಸುವ ಕೈಗೆ 2ದಿಟ್ಟತನದಲಿಬೆಟ್ಟವೆತ್ತಿದ ಕೈಗೆ|ಸೃಷ್ಟಿಯ ದಾನವ ಬೇಡಿದ ಕೈಗೆ ||ದುಷ್ಟಭೂಪರನೆಲ್ಲ ಮಡುಹಿದ ಕೈಗೆ |ಕೆಟ್ಟ ದಾನವರನು ಸದೆಬಡಿದ ಕೈಗೆ 3ಕಾಳಿಯ ಮಡುವನು ಕಲಕಿದ ಕೈಗೆ |ಸೋಳಸಾಸಿರ ಗೋಪಿಯರಾಳಿದ ಕೈಗೆ ||ಮೇಳದ ಭಕ್ತರುದ್ಧರಿಸುವ ಕೈಗೆ |ಏಳು ಗೂಳಿಯ ಗೆದ್ದ ಯದುಪನ ಕೈಗೆ 4ಬಿಲ್ಲು - ಬಾಣಗಳನು ಪಿಡಿದಂಥ ಕೈಗೆ |ಮಲ್ಲಸಾಧನೆಯನು ಮಾಡಿದ ಕೈಗೆ ||ಎಲ್ಲ ದೇವರದೇವ ರಂಗನ ಕೈಗೆ |ಬಲ್ಲಿದಪುರಂದರವಿಠಲನ ಕೈಗೆ5
--------------
ಪುರಂದರದಾಸರು
ಹನುಮ ನಮ್ಮ ತಾಯಿತಂದೆ-ಭೀಮನಮ್ಮ ಬಂಧು ಬಳಗ |ಆನಂದ ತೀರ್ಥರೆಮಗೆ ಗತಿಗೋತ್ರವಯ್ಯ ಪತಾಯಿ ತಂದೆ ಹಸುಳೆಗಾಗಿ ಸಾಯ ಮಾಡಿ ಸಾಕುವಂತೆಆಯಾಸವಿಲ್ಲದೆ ಸಂಜೀವನ ತಂದೆ ||ಗಾಯಗೊಂಡ ಕಪಿಗಳನ್ನು ಸಾಯದಂತೆ ಪೊರೆದೆ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಲ್ಲಿ 1ಬಂಧು ಬಳಗದಂತೆ ಆಪ್ಪದ್ಬಂಧುವಾಗಿ ಪಾರ್ಥನಿಗೆಬಂದ ದುರಿತಂಗಳ ಪರಿಹರಿಸಿ ||ಅಂಧಕಜಾತಕ ಕೊಂದು ನಂದನಂದನಿಗರ್ಪಿಸಿದ ಗೋ-ವಿಂದನಂಘ್ರಗಳೆ ಸಾಕ್ಷಿ ದ್ವಾಪರಯುಗದೆ 2ಗತಿಗೋತ್ರರಂತೆ ಸಾಧುಮತಿಗಳಿಂಗೆ ಗತಿಯನಿತ್ತುಮತಿಗೆಟ್ಟ ಇಪ್ಪತ್ತೊಂದು ಮತವ ಖಂಡಿಸಿ |ಮತಗೆಟ್ಟ ವೈಷ್ಣವರಿಗೆ ಗತಿಯ ತೋರಿದೆ ಪರಮಾತ್ಮಗತಿಪುರಂದರವಿಠಲ ಸಾಕ್ಷಿ ಕಲಿಯುಗದಲ್ಲಿ3
--------------
ಪುರಂದರದಾಸರು
ಹನುಮ-ಭೀಮ-ಮಧ್ವ60ಕರುಣಿಸೈಹರಿಚರಣಸೇವೆ ನಿರುತಪಪರಿಪರಿಯ ಕ್ಲೇಶಗಳ ಪರಿಹರಿಸುತ ಪೊರೆವದುರಿತದೂರ ಹರಿಯಚರಣಸೇವಕನೆಅ.ಪಕಂಜಾಕ್ಷನ ದಯದಿ ಅಂಜದೆ ನೀರಧಿಯಹಿಂಜರಿಯದೆ ದಾಂಟಿ ಸಂಜೆ ಕಳೆಯೆ ಲಂಕೆರಂಜಿಸುವದು ಕಂಡು ಕಂಜಾಕ್ಷಿಗುಂಗುರ ಪ್ರ-ಭಂಜನನೀಡಿದೆಯೊ ಅಂಜನೆಯತನಯ1ದುರಳ ದೈತ್ಯನಾದ ಜರೆಯ ಸುತನ ಸೀಳಿಹರಿಗರ್ಪಿಸಿ ಸರ್ವವನು ಧರಣಿ ಭಾರನಿಳುಹಿಹರಿಯ ಮನವನರಿತು ಪರಿಪರಿಲಿ ಸೇವಿಸುತಪರಮಭಕ್ತನಾದೆ ಪರಿಸರನೆ ಸಲಹೊ2ಮುದ್ದು ಕೃಷ್ಣನ ಸೇವೆ ಶುದ್ಧಮನದಿ ಮಾಡಿಸದ್ವೈಷ್ಣವರ ಕುಲದ ಪದ್ಧತಿಯನರುಹಿಪದ್ಮನಾಭಕಮಲನಾಭ ವಿಠ್ಠಲನೊಲಿಸಿಸದ್ಗ್ರಂಥಗಳ ರಚಿಸಿ ಉದ್ಧರಿಸಿದೆ ಜಗವ 3
--------------
ನಿಡಗುರುಕಿ ಜೀವೂಬಾಯಿ
ಹನುಮಂತ ದೇವ ನಮೋ ಪವನಧಿಯನು ದಾಟಿ ರಾವಣನ ದಂಡಿಸಿದೆ ಅ.ಪಅಂಜನೆಯ ಆತ್ಮದಿಂದುದಿಸಿ ನೀ ಮೆರೆದೆಯೋಕಂಜಸಖಮಂಡಲಕೆ ಕೈ ದುಡುಕಿದೆ ||ಭುಂಜಿಸೀರೇಳು ಜಗಂಗಳನು ಉಳುಹಿದೆ ಪ್ರ-ಭಂಜನಾತ್ಮಜ ಗುರುವೆ ಸರಿಗಾಣೆ ನಿನಗೆ 1ಹೇಮಕುಂಡಲಹೇಮಯಜೊÕೀಪವೀತಖಿಳಹೇಮಕಟಿಸೂತ್ರಕೌಪೀನಧಾರೀ ||ರೋಮ ಕೋಟಿ ಲಿಂಗ ಸರ್ವಶ್ಯಾಮಲ ವರ್ಣರಾಮಭೃತ್ಯನೆ ನಿನಗೆ ಸರಿಗಾಣೆ ಗುರುವೆ 2ರಾಮ-ಲಕ್ಷನರ ಕಂಡಾಳಾಗಿ ನೀ ಮೆರೆದೆ |ಭೂಮಿಜೆಗೆ ಮುದ್ರೆಯುಂಗುರವನಿತ್ತೆ ||ಆ ಮಹಾ ಲಂಕಾ ನಗರವೆಲ್ಲವನು ಸುಟ್ಟುಧೂಮ ಧಾಮವ ಮಾಡಿ ಆಳಿದೆಯೊ ಮಹಾತ್ಮ 3ಆಕ್ಷಯ ಕುಮಾರಕನ ನಿಟ್ಟೊರಸಿ ಬಿಸುಟು ನೀರಾಕ್ಷಸಾಧಿಪ ರಾವಣನು ರಣದಲಿ ||ವಕ್ಷಸ್ಥಳದಲ್ಲಿ ಶಿಕ್ಷಿಸಲು ಮೂರ್ಛೆಯ ಬಗೆಯರಕ್ಷಿಸಿದೆ, ರಕ್ಷಿಸಿದೆ ರಾಯ ಬಲವಂತ 4ಶ್ರೀಮದಾಚಾರ್ಯ ಕುಲದವನೆಂದೆನಿಸಿದೆಯೈಶ್ರೀ ಮಹಾಲಕುಮಿ ನಾರಾಯಣಾಖ್ಯ ||ಶ್ರೀ ಮನೋಹರಪುರಂದರವಿಠಲ ರಾಯನಸೌಮ್ಯಮನದಾಳು ಹನುಮಂತ ಬಲವಂತ 5
--------------
ಪುರಂದರದಾಸರು
ಹನುಮಂತ ನೀ ಬಲು ಜಯವಂತನಯ್ಯ |ಅನುಮಾನವಿಲ್ಲ ಆನಂದತೀರ್ಥರಾಯ ಪರಾಮಸೇವಕನಾಗಿ ರಾವಣನ ಪುರವ ನಿರ್ಧೂಮವ ಮಾಡಿದೆ ನಿಮಿಷದೊಳಗೆ ||ಭೂಮಿಯ ಪುತ್ರಿಗೆ ಮುದ್ರೆಯುಂಗುರವಿತ್ತು |ಕ್ಷೇಮ ಕುಶಲವ ಶ್ರೀರಾಮ ಪಾದಕರ್ಪಿಸಿದೆ 1ಕೃಷ್ಣಾವತಾರದಿ ಭೀಮನಾಗಿ ಬಂದುದುಷ್ಟ ದೈತ್ಯರನೆಲ್ಲ ಸಂಹರಿಸಿದೆ |ದೃಷ್ಟಿಹೀನ ಧೃತರಾಷ್ಟ್ರನ ವಂಶವನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಪಾದಕರ್ಪಿಸಿದೆ 2ಪತಿತ ಸಂಕರ ಹುಟ್ಟಿ ಮತವೆಲ್ಲ ಕೆಡಿಸಲುಮತಿ ಹೀನರಾದ ಸಜ್ಜನರಿಗೆಲ್ಲ ||ಅತಿ ಬೇಗದಲಿ ಮಧ್ವಯತಿರೂಪಧರಿಸಿ ಸದ್ಗತಿಪಾಲಿಸಿದೆಪುರಂದರವಿಠಲನ ದಾಸ3
--------------
ಪುರಂದರದಾಸರು
ಹಮ್ಮುನಾಡಲಿಬೇಡಹಮ್ಮು ಈಡೇರದು<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹಮ್ಮಿನಿಂದಲಿ ನೀವು ಕೆಡಬೇಡಿರಯ್ಯ ಪ.ಮುನ್ನೊಮ್ಮೆ ರಾವಣನು ಜನಕನಾ ಸಭೆಯಲ್ಲಿತನ್ನಳವನರಿಯದಲೆ ಧನುವೆತ್ತಲುಉನ್ನತದ ಆ ಧನು ಎದೆಯ ಮೇಲೆ ಬೀಳಲುಬನ್ನಬಟ್ಟುದ ನೀವು ಕೇಳಿಬಲ್ಲಿರಯ್ಯ1ಕುರುಪತಿಯ ಸಭೆಯಲ್ಲಿ ಕೃಷ್ಣ ತಾ ಬರಲಾಗಿಕರೆದು ಮನ್ನಣೆಯನ್ನು ಮಾಡಿದಿರಲುಧರೆಗೆ ಶ್ರೀ ಕೃಷ್ಣನಂಗುಟವನಂದೊತ್ತಲುಅರಸುಆಸನ ಬಿಟ್ಟು ಉರುಳಾಡಿದ2ಅತಿ ವೇಗದಲಿ ಕೃಷ್ಣ ಸತ್ಯಭಾಮೆಯ ಕರೆದುಸೀತೆ ನೀನಾಗೆಂದು ನೇಮಿಸಿದನುಮತಿವಂತೆ ಬಗೆಬಗೆಯ ಶೃಂಗಾರವಾದರೂಸೀತಾ ಸ್ವರೂಪ ತಾನಾಗಲಿಲ್ಲ 3ಹನುಮನನು ಕರೆಯೆಂದು ಖಗಪತಿಯನಟ್ಟಲುಮನದಲಿ ಕಡುಕೋಪದಿಂದ ನೊಂದುವಾನರನೆ ಬಾಯೆಂದು ಗರುಡ ತಾ ಕರೆಯಲುಹನುಮ ಗರುಡನ ತಿರುಹಿ ಬೀಸಾಡಿದ 4ಇಂತಿಂತು ದೊಡ್ಡವರು ಈ ಪಾಡು ಪಟ್ಟಿರಲುಪಂಥಗಾರಿಕೆ ತರವೆ ನರಮನುಜಗೆ ?ಚಿಂತಾಯತನು ಚೆಲ್ವ ಪುರಂದರವಿಠಲನಸಂತತವು ನೆನೆ ನೆನೆದು ಸುಖಿಯಾಗೊ ಮನುಜ 5
--------------
ಪುರಂದರದಾಸರು
ಹರಿ ಕೊಟ್ಟಕಾಲಕ್ಕೆ ಉಣಲಿಲ್ಲ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹರಿಕೊಡದ ಕಾಲಕ್ಕೆ ಬಾಯಿಬಿಡುವೆಯೊ ಪ್ರಾಣಿಪ.ಉಡಲಿಲ್ಲ ಉಣಲಿಲ್ಲ ಕೊಡಲಿಲ್ಲ ಧರ್ಮವ |ಅಡಗಿಸಿ ಇಟ್ಟಿಹೆ ಮಣ್ಣೊಳಗೆ ||ಬಡತನ ಬಂದು ಕಂಬಳಿ ಹೊದೆವಾಗ |ತುಡುಗು ನಿನ್ನ ಜನ್ಮ ಸುಡು ಕಾಣೊಖೋಡಿ1ಹುಗ್ಗಿಯು ತುಪ್ಪವು ಮನೆಯೊಳಗಿರಲಿಕ್ಕೆ |ಗುಗ್ಗರಿಯನು ಮಾಡಿ ತಿನ್ನುವಿಯೊ ||ವೆಗ್ಗಳವಾದ ಯಮಧೂತರು ಎಳೆವಾಗ |ಬುಗ್ಗೆಯ ಹೊಯ್ಕೊಂಡು ಹೋದೆಯೊ ಖೋಡಿ 2ನಂಟರು - ಬಂಧುಗಳೂರೊಳಗಿರಲಿಕ್ಕೆ |ಕುಂಟು ಸುದ್ದಿಗಳನು ಆಡುವೆ ನೀ ||ಕಂಟಕರಾದ ಯಮದೂತರು ಎಳೆವಾಗ |ನಂಟ ಪುರಂದರವಿಠಲನ ದ್ರೋಹಿ 3
--------------
ಪುರಂದರದಾಸರು
ಹರಿಕಥಾಮೃತ ಸವಿಯ ಹರಿದಾಸರಲ್ಲದೆದುರುಳಮಾನವರದರಪರಿಬಲ್ಲಿರೇನಯ್ಯಪ.ಸ್ತನ ಪಾನದ ರುಚಿಯ ಚಿಣ್ಣರು ಬಲ್ಲರಲ್ಲದೆಮೊಣ್ಣ ಬೊಂಬೆಗಳದರ ಬಗೆ ಬಲ್ಲುವೆ ||ಅನ್ನಪಾನದ ರುಚಿಯ ಕೊನೆ ನಾಲಿಗೆಯಲ್ಲದೆಅಣಿಮಾಡಿಕೊಡುವ ಆಕರಬಲ್ಲುದೇನಯ್ಯ1ನವನೀರದಾರ್ಭಟಕೆ ನವಿಲುಗಳು ನಲಿವಂತೆಕಾವು ಕಾವೆಂಬ ಕಾಕವು ಬಲ್ಲುದೆ ? ||ದಿವಸಕರನುದಯಿಸಲು ಅರಳುವಬ್ಜಗಳಂತೆದಿವಸಾಂಧ ಪಕ್ಷಿಗಳು ಬಗೆಬಲ್ಲುವೇನಯ್ಯ 2ಮೊಲ್ಲೆ - ಮಲ್ಲಿಗೆ ಮುಡಿಯಬಲ್ಲ ಮಾನವರಂತೆಭಲ್ಲೂಕಗಳು ಅದರ ಬಗೆ ಬಲ್ಲುವೆ ?ಫುಲ್ಲಾಕ್ಷ ಶ್ರೀ ಪುರಂದರವಿಠಲರಾಯನನುಬಲ್ಲ ಮಾನವರಲ್ಲದೆಲ್ಲರೂ ಬಲ್ಲರೆ ? 3
--------------
ಪುರಂದರದಾಸರು
ಹರಿದಾಸರ ಸಂಗ ದೊರೆಯಿತು ಎನಗೀಗ ಇನ್ನೇನಿನ್ನೇನುವರಗುರು ಉಪದೇಶ ನೆರವಾಯ್ತು ಎನಗೀಗ ಇನ್ನೇನಿನ್ನೇನು ಪಮಾಯದ ಸಂಸಾರ ಮಮಕಾರ ತಗ್ಗಿತು ಇನ್ನೇನಿನ್ನೇನುತೋಯಜಾಕ್ಷನ ನಾಮ ಜಿಹ್ವೆಯೊಳ್ನೆಲಸಿತು ಇನ್ನೇನಿನ್ನೇನು 1ಹಲವು ದೈವಗಳೆಂಬ ಹಂಬಲ ಬಿಟ್ಟಿತು ಇನ್ನೇನಿನ್ನೇನುಜಲಜನಾಭನ ಧ್ಯಾನ ಹೃದಯದೊಳ್ನೆಲಸಿತು ಇನ್ನೇನಿನ್ನೇನು 2ತಂದೆ ತಾಯೆ ಮುಚುಕುಂದವರದನಾದ ಇನ್ನೇನಿನ್ನೇನುಸಂದೇಹವಿಲ್ಲ ಮುಕುಂದ ದಯಮಾಡಿದ ಇನ್ನೇನಿನ್ನೇನು 3ಏನೆಂದು ಹೇಳಲಿ ಆನಂದಸಂಭ್ರಮಇನ್ನೇನಿನ್ನೇನುಆನಂದಗೋಪನ ಕಂದನ ಮಹಿಮೆಯ ಇನ್ನೇನಿನ್ನೇನು 4ಎನ್ನವಂಶಗಳೆಲ್ಲ ಪಾವನವಾದುವು ಇನ್ನೇನಿನ್ನೇನುಚಿನ್ಮಯ ಪುರಂದರವಿಠಲಯ್ಯ ದೊರಕಿದ ಇನ್ನೇನಿನ್ನೇನು 5
--------------
ಪುರಂದರದಾಸರು
ಹರಿದಿನದಲಿ ಉಂಡ ನರರಿಗೆ -ಘೋರ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನರಕ ತಪ್ಪದು ಎಂದುಶ್ರುತಿಸಾರುತಲಿದೆಪ.ಗೋವ ಕೊಂದ ಪಾಪ, ಸಾವಿರ ವಿಪ್ರರ |ಜೀವಹತ್ಯದ ಮಾಡಿದ ಪಾಪವು ||ಭಾವಜನಯ್ಯನ ದಿನದಲುಂಡವರಿಗೆ |ಕೀವಿನೊಳಗೆ ಹಾಕಿ ಕುದಿಸುವ ಯಮನು 1ಒಂದೊಂದು ಅಗಳಿಗೆ ಕೋಟಿ ಕೋಟಿ ಕ್ರಿಮಿಗಳು |ಅಂದಿನ ಅನ್ನವು ನಾಯ ಮಾಂಸ ||ಮಂದರಧರನ ದಿನದಲುಂಡವರನು |ಹಂದಿಯ ಸುಡುವಂತೆ ಸುಡುವನು ಯಮನು 2ಅನ್ನ -ಉದಕ ತಾಂಬೂಲ - ದರ್ಪಣಗಳು |ಚೆನ್ನವಸ್ತ್ರಗಳೆಲ್ಲ ವರ್ಜಿತವು ||ತನ್ನ ಸತಿಯ ಸಂಗ ಮಾಡುವ ಮನುಜನ |ಬೆನ್ನಲಿ ಕರುಳ ಉಚ್ಚಿಸುವನು ಯಮನು 3ಜಾವದಜಾಗರಕ್ರತು ನಾಲ್ಕು ಸಾವಿರ |ಜಾವ ನಾಲ್ಕರ ಫಲಕೆ ಮಿತಿಯಿಲ್ಲವು ||ದೇವದೇವನ ದಿನದಿ ನಿದ್ರೆಗೈದರೆ ಹುರಿ - |ಗಾವಿಲಿಯೊಳು ಹಾಕಿ ಹುರಿಯುವ ಯಮನು 4ಇಂತು ಏಕಾದಶಿ ಉಪವಾಸಜಾಗರ |ಸಂತತ ಕ್ಷೀರಾಬ್ಧಿಶಯನನ ಪೂಜೆ ||ಸಂತೋಷದಿಂದಲಿ ಮಾಡಿದ ಜನರಿಗ - |ನಂತ ಫಲವನೀವ ಪುರಂದರವಿಠಲ 5
--------------
ಪುರಂದರದಾಸರು
ಹರಿನೀನೆಸರ್ವೋತ್ತಮ ಸರ್ವಙÕ ಸರ್ವಾಧಾರxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹರಿನೀನೆ ಸರ್ವೋತ್ಪಾದಕ ಸರ್ವಪಾಲಕಹರಿನೀನೆ ಸರ್ವನಾಶಕ ಸರ್ವಪ್ರೇರಕಹರಿನೀನೆ ನಿಯಾಮಕÀ ನಿಯಾಮ್ಯನೋಹರಿನೀನೆ ಬಾಧ್ಯ ಭಾಧಕ ವ್ಯಾಪ್ಯ ವ್ಯಾಪಕಹರಿನೀನೆ ಕಾರ್ಯ ಕಾರಣಹರಿನೀನೆ ಕರ್ತೃಕರ್ಮಕ್ರಿಯಾ ಶಕ್ತಿಹರಿನೀನೆ ಧಾತೃ ದೇಯ ದಾನಪಾತ್ರನೊಹರಿನೀನೆ ಸಹಕಾರಿ ಸಹಿತ ಪೋಗುವೀಹರಿನೀನೆ ಮುಂಪೋಗಿ ಪರರೀಗೀಪರಿಹರಿನೀನೆ ಪ್ರೇರಿಸಿ ಕಾರ್ಯಮಾಳ್ಪಿಹರಿನೀನೆ ಸರ್ವದ ಸರ್ವತ್ರದಲಿ ನಿಂತೂಹರಿನೀನೆಜೀವರ ಪರಿಪಾಲಿಸುವಿಹರಿನೀನೆ ಸರ್ವರ ಬಿಂಬಮೂರುತಿ ಎಂದೂಹರಿನಿನ್ನ ಮಹಿಮೆಯನರಿಯಾದ ಮನುಜರುಹರಿನಿನ್ನ ಮರೆಯಾದ ಪರಮಜ್ಞಾನವನಿತ್ತುಹರಿನಿನ್ನಯ ನಾಮವ ಮರೆಯದೆ ಪೇಳಿಸೋಹರಿನಿನ್ನ ಸ್ಮರಣೆಯ ಕರುಣಿಸೋ ಕರುಣಿಸೋಹರಿನಿನ್ನ ಧ್ಯಾನ ಮನದಲ್ಲಿ ಮಾಡಿಸೋಹರಿನಿನ್ನ ಮೂರುತಿ ತೋರಿಸೊ ತೋರಿಸೋಹರಿನಿನ್ನ ಕಾಣುವ ಙ್ಞÕನವನಿತ್ತುಹರಿನಿನ್ನ ಭಕ್ತರ ಸೇವಕನೋಹರಿಎನ್ನನು ಭಾದಿಪ ದಿತಿಜರಪರಮದಯಾನಿಧೇ ಗುರುಗಳದ್ವಾರಾಹರಿನಿನ್ನ ಗುಣಗಳ ಕೀರ್ತನೆ ಮಾಡಿಸೋ
--------------
ಗುರುಜಗನ್ನಾಥದಾಸರು