ಒಟ್ಟು 50999 ಕಡೆಗಳಲ್ಲಿ , 138 ದಾಸರು , 11453 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಡವ ಮಾಡಲಿ ಬೇಡ ಹಡೆದವ್ವ ಎ ನ್ನೊಡೆಯನನು ಹುಡುಕಿ ತಾರೆ ಪಿಡಿವೆ ಪಾದವ ಪ ತಡವ ಮಾಡದೆ ಪೊಡವಿಯೊಳು ಕಡು ಸಡಗರಾರ್ಯನ ಹುಡುಕಿ ತಂದರೆ ಹಡೆದು ನಿನ್ನ್ಹೆಸರಿಸಿವುವೆನೆನ್ನವ್ವ ಸರಿಮಾಡ್ವೆನವ್ವ ಅ.ಪ ಜೀವದರಸನ ಹಂಬಲೆನಗವ್ವ ಅತ್ಯಧಿಕವಾಗಿ ಕಾಯಸೊರಗಿ ಕ್ಷೀಣವಾಯ್ತೆವ್ವ ಪ್ರಾಯಬಂದರೆ ಸುಮ್ಮನೆ ಹೋಗುತಾದವ್ವ ಪ್ರಾಯಕ್ಕೆ ತಕ್ಕ ಚಾಯಗಾರ ಕಂಡೇನ್ಹೇಗವ್ವ ಕಾಯರಹಿತ ಕಾರುಣ್ಯನಿಧಿ ಮಾಯತಿಳಿಯುವರಿಲ್ಲ ಆತನ ದಿವ್ಯಚರಿತ ನೆನೆದು ನೆನೆದು ಬಾಯ ಬಿಡುವೆನೆ ಆಯತಾಂಬಕಿ 1 ವಸ್ತೊಡೆವೈಷ್ಟಿರಲು ಏನವ್ವ ಅತಿಶೋಭೆಯೆನಿಪ ಮುತ್ತುಯಿಲ್ಲದ ಮೋರೆಯಾಕವ್ವ ಹತ್ತಿರಕೆ ಬರಗೊಡರವ್ವಾ ಮುತ್ತೈದೆರೆಲ್ಲರು ಅತ್ತ ಇತ್ತೆಂದೆಳೆಯುತಿಹ್ಯರವ್ವ ಮತ್ತೆ ಬೇಡಲು ದೊರೆಯದಂಥ ಹೊತ್ತು ಸುಮ್ಮನೆ ಹೋಗುತಿದೆ ಕರ್ತ ತುರ್ತು ದೊರೆಯದನಕ ಚಿತ್ತ ಸ್ವಸ್ಥವಾಗದವ್ವ 2 ಭೂಮಿತ್ರಯದೊಳಧಿಕ ಕೇಳವ್ವ ಆತನಹೆಸರು ಕಾಮಿತವನೀಗರಿತುಕೊಂಡೆನವ್ವ ನೇಮದಿಂದ ಭಜಿಸುತಿಹೆನವ್ವ ಎನ್ನಕಡೆಗಾತ ಪ್ರೇಮದಿಂದ ಸುಳಿಯದಿಹ್ಯನವ್ವ ಭಾಮೆಬಾರೆಂದು ಬದಿಲಿಕರೆದು ಪ್ರೇಮದಿಂದ ಅಪ್ಪಿ ನಿನ್ನಯ ಸ್ವಾಮಿ ಶ್ರೀ ರಾಮ ನಾನೆಂದ್ಹೇಳಲು ಕ್ಷೇಮ ಪಡೆದು ಬಾಳ್ವೆನವ್ವ 3
--------------
ರಾಮದಾಸರು
ತಡವ ಮಾಡುವಿಯಾಕೊ ಒಡೆಯ ಗೋವಿಂದ ಬಡವನ ಮೇಲಿನ್ನು ಮುನಿಸೆ ಮುಕುಂದ ಪ. ಕೆಟ್ಟ ಕೃತ್ಯಗಳತ್ಯುತ್ಕøಷ್ಟವಾದುದರಿಂದ ಮಂಡೆ ಕುಟ್ಟುವ ತೆರದಿ ಸಿಟ್ಟಿನಿಂದಲಿ ಬಹು ಕಷ್ಟಗೊಳಿಸಿದಿ ಕಟ್ಟ ಕಡೆಯಲಿ ನೀ ಕಟ್ಟ ಬಿಡಿಸಿದಿ 1 ದುಷ್ಟ ಬಾಧೆಯ ಮುರಿದಟ್ಟಿದಿ ದಯದಿ ಘಟ್ಟ ಬೆಟ್ಟಗಳನ್ನು ಮೆಟ್ಟಿ ನಾ ಭರದಿ ನಿಟ್ಟುಸುರಲಿ ಬಾರೆ ಕೃಷ್ಣ ನೀ ಕರುಣದಿ ತೊಟ್ಟಿಲ ಶಿಶುವಿನಂದದಲಿ ಪಾಲಿಸಿದಿ 2 ಜನರ ಸಹಾಯವ ಕನಸಿಲಿ ಕಾಣೆ ಧನಬಲವೆಂದೆಂದಿಗಿಲ್ಲ ನಿನ್ನಾಣೆ ವನರುಹೇಕ್ಷಣ ನಿನ್ನ ನಾಮ ಒಂದೆ ಹೊಣೆ ಯೆನುತ ನಂಬಿದುದರ ಫಲವಿನ್ನು ಕಾಣೆ 3 ಜಗದ ಸಜ್ಜನರಿದು ಮಿಗೆ ಮೀರಿತೆನಲು ಹಗೆಗಳೆಲ್ಲರು ಬಹು ಸೊಗಸಾಯಿತೆನಲು ನಗಲು ಎನ್ನನು ನೋಡಿ ನಗಧರ ನೀ ಬಂದು ಅಘಟಿತ ಘಟನ ಮಾಡಿದಿ ದೀನಬಂಧು 4 ಈ ಪರಿಯಲಿ ನಿರುಪಾಧಿಯೊಳೆನ್ನ ಕಾಪಾಡಿ ಕಡೆಯೊಳೀ ಕಷ್ಟಗಳನ್ನ ನೀ ಪರಿಹರಿಸಲೇಬೇಕು ಪ್ರಸನ್ನ ಶ್ರೀಪತಿ ಶೇಷಾದ್ರಿವಾಸ ಮೋಹನ 5
--------------
ತುಪಾಕಿ ವೆಂಕಟರಮಣಾಚಾರ್ಯ
ತಡಿಯೆಲೆ ಮನವೆ ನೀ ಬಡಬಡಿಸುವುದ್ಯಾಕೋ ಕೆಡಕುಯೋಚನೆಬಿಟ್ಟು ಕಡುಶಾಂತನಾಗೊ ಪ ಜಡಮತಿತನನೀಗಿ ಬಿಡದೆ ದೃಢದಿ ಜಗ ದೊಡೆಯನಡಿಯ ಭಜಿಸು ಕೊಡುವನು ನಿಜಸುಖ ಅ.ಪ ವಂಚಕನಾಗದೆ ವಾಂಛಲ್ಯಳಿದು ಮನ ಕಿಂಚಿತ್ತಗಲದೆ ನಿರ್ವಂಚಕ ಚಿತ್ತನಾಗೊ ವಂಚನಿಲ್ಲದೆ ಹರವಿರಂಚಿಗಳ್ನೂತನ ಪ್ರ ಪಂಚದೊಳಗೆ ನಿನ್ನನಚಲ ಸುಖದಿ ಕಾಯ್ವ 1 ನಿಷ್ಠುರನುಡಿ ಬಿಡು ದುಷ್ಟತ್ವ ದೂರಮಾಡು ಬಿಟ್ಟಗಲದೆ ಮಹ ಶಿಷ್ಟರೊಡನಾಡೊ ಅಷ್ಟಮೂರುತಿಪಾದ ನಿಷ್ಠೆಯ ಭಜಿಸು ನಿ ನಿನ್ನಷ್ಟದಖಿಲವರ ಕೊಟ್ಟು ರಕ್ಷಿಸಸನೆಲೊ 2 ಹಲವು ಭ್ರಾಂತಿ ಬಿಡು ಮಲಿನಗುಣವ ದೂಡು ಹೊಲೆಯ ಮನಸಿನ ಮಹ ಕಲ್ಮಷ್ಹಸನಮಾಡು ಜಲಜಾಕ್ಷನಂಘ್ರಿಯಂ ನಿಲದೆ ಭಜಿಸು ನಿನ ಗೊಲಿದು ನಿಜಸುಖವಿತ್ತು ಸಲಹುವ ಶ್ರೀರಾಮ 3
--------------
ರಾಮದಾಸರು
ತಡೆಯುತಲಿದೆ ಪುಷ್ಪಮಾಲೆ ಪ ಒಡಲೊಳಗಾತ್ಮನ ವರ ಮಕುಟಾಗ್ರದಿಅ ಕುಸುಮ ದಾಮವು ಕಿರಿದುವಿವರ ಬಲ್ಲ ಸದ್ಗುರು ತಮ್ಮ ಉದ್ದೇಶದನವ ವೈಜಯಂತಿಯ ಹಿರಿದಾಗಿ ಭಾವಿಸಿ1 ಸ್ಥಿರ ಮತಿಯೆಂಬ ಆಸನವನು ಅಳವಡಿಸಿ - ತ್ರಿಕರಣವೆಂಬ ತಾಂಬೂಲವನೊಪ್ಪಿಸುತ - ಮಾಯ ಮರವೆಯೆಂಬ ದಕ್ಷಿಣೆ ಕೊಟ್ಟು - ಮಮ ಭಾವದಿರುವಿನ ತಮವನೋಡಿಸಿ ನಿಂದ ಗುರುದೇವ2 ಅಜ್ಞಾನವೆಂಬ ನಿರ್ಮಾಲ್ಯವನು ಮಾಡಿಸುಜ್ಞಾನವೆಂಬಕ್ಷತೆಯ ಪಣೆಗೆ ಸೂಡಿಪ್ರಜ್ಞಾನವೆಂಬ ದೀವಿಗೆ ಸ್ತಂಭ ಹೂಡಿಪೂಜಿಸಿ ಪ್ರವಿಮಲ ಜ್ಯೋತಿಯ ದೇಶಿಕೋತ್ತಮ 3
--------------
ಕನಕದಾಸ
ತಡೆಯುವುದ್ಯಾಕಯ್ಯಾ ಹರಿಯೆನ್ನ ಕಯ್ಯಾ ಬಿಡು ಬಿಡು ಹರಿಪಾದ ಸೇರುವೆನಯ್ಯಾ ಪ ಅರಿಗಳನೆಲ್ಲರ ಕಡಿದು ನಾ ಬಂದೇ ಇಂದು ನಾ ಬಂದೇ 1 ತುಂಟರೆಲ್ಲರನ್ನು ಗೆದ್ದು ನಾ ಬಂದೇ ಇಂದು ಶರಣೆಂದು ಬಂದೇ 2 ಸನ್ನುತ ಹರಿಸೇವೆ ಮಾಡಲು ಬಂದೆ ಚನ್ನಕೇಶವ ಸ್ವಾಮಿ ಶರಣೆಂದು ತಂದೇ 3
--------------
ಕರ್ಕಿ ಕೇಶವದಾಸ
ತಣ್ಣನೆ ಹೊತ್ತಿಲಿ ನಾವು ಬೆಣ್ಣೆ ತೆಗೆಯುವ ಸಮಯದಿಚಿಣ್ಣ ಬಂದು ಕಣ್ಣು ಮುಚ್ಚಿ ಬೆಣ್ಣೆ ಸವಿದು ಪೋದನೆ ಪ ಹಿಂಡುಗೆಳೆಯರ ಕೂಡಿಕೊಂಡುಬಂದು ಬಾಗಿಲೊಳಾಡುತಚೆಂಡು ಬುಗುರಿಯ ಹುಡುಕುತ ನಮ್ಮದುಂಡು ಕುಚಗಳ ಪಿಡಿದನೆ1 ಆಕಳ್ಹಾಲನು ಕಾಸಿ ನಾವುಮೀಸಲೆಂದಿಟ್ಟಿದ್ದೇವೆಜÉೂೀಕೆಯಿಂದಲಿ ಕೃಷ್ಣ ಬಂದುಮೀಸಲಳಿದು ಪೋದನೇ2 ಇದ್ದ ಮಾನವನುಳುಹಿಕೊಂಡುಎದ್ದು ಪೋಗುವುದುಚಿತವೆಬುದ್ಧಿ ಪೇಳಬಾರದೆ ನಮ್ಮಮುದ್ದು ಶ್ರೀಪತಿ ಕೃಷ್ಣಗೆ 3
--------------
ವ್ಯಾಸರಾಯರು
ತತ್ತ ಪ್ರತಿಪಾದನೆ ದೂಡಿಸುವ ಸಂಸಾರ ದೇವ ರೂಢಿಯೊಳು ಭÀಕ್ತರೊಡನಾಡಿ ರಂಗ ಪ. ಭವ ನಾವಿಕನಾಗಿ ಗಾಢನೆ ನಡೆಸುತ ಜೋಡು ಕುಂಡಲಧರ ಅ.ಪ. ಭಕ್ತಿರಸವೆಂಬ ತೊಗಲನ್ನು ಹೂಡಿ ಯುಕ್ತಿಲಿ ಮಣ್ಣಿನ ಬೊಂಬೆಯೊಳಗಾಡಿ ಪರ ಶಕ್ತಿಯೆಂಬ ಹೊಲಿಗೆಯನ್ನು ಕೂಡಿ ಭಕ್ತಿಲಿ ಸ್ತುತಿಸುವ ಭಕ್ತರೊಳಾಡಿ 1 ಗುರುಹಿರಿಯರ ಸೇವೆಯೆಂಬ ಮನಕೊಟ್ಟು ಸರಸದಿ ಮನೆಗೆಲಸವ ಗುಟ್ಟಿಲಿಟ್ಟು ಸರಸಿಜನಾಭನÀ ಮನಸಿನೊಳಿಟ್ಟು ಹರುಷದಿ ಸ್ತುತಿಪರ ಸಲಹುವನೆಂಬೊ ಬಿರುದಿಟ್ಟು2 ಕರುಣಾಮಯನೆಂಬೊ ಪೆಸರನು ಇಟ್ಟು ಹರುಷದಿ ಕೂಗುವ ಭಕ್ತರೊಳಗೆ ತಾ ಗುಟ್ಟು ಕರುಣಾಸಾಗರ ವರ ಶೇಷಾಚಲವಾಸ ಭವ ಸಂಸಾರವ 3
--------------
ಸರಸ್ವತಿ ಬಾಯಿ
ತತ್ತೆ ್ವೀಶರಿಗೆ ನಮಸ್ಕಾರ ಪ ಸತ್ತ ್ವಗುಣಿಗಳಾದ ಸಾಧುಜನರಿಗೂ ಅ.ಪ ಮರತನುತ್ವಕ್ಕಿಗೆ ಶ್ರವಣದಿ ದಿಗ್ದೇ ವರು ಕಣ್ಣಲಿ ಭಾಸ್ಕರನಿರುವಾ ಕರ ಇಂದ್ರನು ಪದಕಿಂದ್ರಜ ವೈಶ್ವಾ ನರವಾಕ್ಕಿಗೆ ಗುಹ್ಯದಿ ಮನುಪತಿ1 ಗುದಕೆ ಮಿತ್ರ ರಸನದಿ ವರುಣನು ಘ್ರಾ ದಸ್ರರು ಯೀಪತ್ತು ಜನಂ ವಿದುಧರ ಹಂಕಾರದಿ ಮನಕಿಂದು ಮ ತಿದಾತ ಚಿತ್ತದೊಳುದಧಿಜೆ ಕರ್ತಳು 2 ಐದು ಭೂತದೊಳಗೈದುರೂಪ ಮ ತ್ತೈದು ವಿಷಯದೊಳು ತದ್ರೂಪ ವೈದುತಲಿಪ್ಪತ್ತೈದಕೆ ಸಾಕ್ಷಿಯು ಮೋದಮಯನು ಶ್ರೀಗುರುರಾಮ ವಿಠಲನು 3
--------------
ಗುರುರಾಮವಿಠಲ
ತತ್ವ ಚಿಂತನೆ ಮಧ್ಯಮತವೇ ದೊಡ್ಡದೆಂದು ತಿಳಿದು ಮನ ಶುದ್ಧಿಯಿಂದ ಮತವನನುಸರಿಸೋ ಪ ಶ್ರೀ ಮಧ್ವಮತದಲ್ಲಿ ಹರಿಯೇ ಸವೋತ್ತಮ ಭೇದಪಂಚ ಜಗತೆರಡು ಸತ್ಯ ಶ್ರೀ ಬ್ರಹ್ಮಾದಿಗಳೆಲ್ಲ ಹರಿಪರಿವಾರರು ತಾರತಮ್ಯವೇ ಸದಾ ಇವರಲ್ಲಿ 1 ಮುಕ್ತಿ ಎಂಬುದು ನಿಜಾನಂದದ ಅನುಭವ ಭಕ್ತಿಯೆಂಬುದೇ ದೊಡ್ಡ ಸಾಧನವು ಅಕ್ಷಾನುಮಾಗಮ ಮೂರು ಪ್ರಮಾಣ ಶ್ರೀ ಲಕ್ಷ್ಮೀಶನೇ ಸರ್ವಶ್ರುತಿವೇದ್ಯನು 2 ಸ್ವತಂತ್ರ ಪರತಂತ್ರ ಎರಡು ತತ್ವಗಳು ಸ್ವತಂತ್ರ ತತ್ವವು ಹರಿಯೊಬ್ಬನೇ ಪ ರತಂತ್ರ ಮಿಕ್ಕಿದ್ದಲ್ಲಾ ಇದಕೆ ಪ್ರಮಾಣವು `ಏಷ ಸರ್ವೇಶ್ವರ ' ವೆನ್ನುತ ಶ್ರುತಿಯು 3 ಹರಿಯೇ ಸರ್ವೋತ್ತಮ ತದನು ರಮಾದೇವಿ ವಿಧಿ ಪ್ರಾಣರಿವರಿಬ್ಬರು ತದನು ಸರಸ್ವತಿ ಭಾರತೇರಿಬ್ಬರು ಶಿವ ಶೇಷ ಗರುಡ ಶ್ರೀ ಹರಿನಾರೇರು 4 ಸೌಪರ್ಣಿ ಪಾರ್ವತಿಯರು ಸಮ ಶಕ್ರ ಕಾಮರು ಸಮ ಸ್ಮರರಮಣಿ ಗುರು ಶಚಿ ಮನು ದಕ್ಷ ಸಮರು ಆ ಮಾನವಿ ಪ್ರವಹ ಯಮೇಂದ್ವರ್ಕ ಸಮರೈವರು 5 ನಿಖಿಲ ದಿವಿಜರಲ್ಲಿ ಈ ವಿಧ ತಾರತಮ್ಯ ನಿಖಿಲ ಸುರೋತ್ತಮ ಹರಿಯೊಬ್ಬನೇ ಮಿಕ್ಕವರಲವೆಂದು ಇಂದ್ರಿಯೇಭ್ಯಃ ಪರಃ ದ್ವಾವಿಮಾ ಇತ್ಯಾದಿ ಶ್ರುತಿವಚನ 6 ಈಶ್ವರ ಜಡ ಭೇದ ಜೀವ ಜಡಕೆ ಭೇದ ಜೀವ ಜೀವಕೆ ಭೇದ ಜಡ ಜಡಕೆ ಜೀವೇಶರಿಗೆ ಭೇದ ಈಶ ಲಕ್ಷ್ಮೀ ಭೇದ ಪರತಂತ್ರ ಚಿತ್ಪರ ಜೀವ ಶಬ್ದ 7 ಬ್ರಹ್ಮವಿಚಾರ ತತ್ಜ್ಞಾನಕೆ ಸಾಧನ ಜ್ಞಾನಪ್ರಸಾದಕೆ ಇದು ಮುಕ್ತಿಗೆ ಆದ ಕಾರಣದಿಂದ ಶಮದಮಯುತನಿಗೆ ಬ್ರಹ್ಮ ಜಿಜ್ಞಾಸವು ಕರ್ತವ್ಯವು 8 ಜಿಜ್ಞಾಸ್ಯಬ್ರಹ್ಮನು ಜೀವನಲ್ಲವೊ ಜಗ ತ್ಕಾರಣತ್ವವು ಜೀವಗೆಲ್ಲಿಹುದೊ ರುದ್ರಾದಿಗಳು ಜಗತ್ಕಾರಣರಲ್ಲವೊ ಶಾಸ್ತ್ರವೇದ್ಯನೆ ಜಗತ್ಕಾರಣನು 9 ಉಪಕ್ರಮಾದಿಗಳ ವಿಚಾರ ಮಾಡಲು ಸರ್ವ ಶಾಸ್ತ್ರ ತಾತ್ಪರ್ಯಗೋಚರ ಹರಿಯೆ ಅಕ್ಷಾದ್ಯವೇದ್ಯನ ಜ್ಞೇಯನಾಗುವ ಹರ್ಯ ವಾಚ್ಯನೆಂಬುವುದದು ಸರಿಯಲ್ಲವೊ10 ಆನಂದಮಯ ಮೊದಲಾದ ವಾಚ್ಯನು ಮತ್ತೆ ಸರ್ವಗತತ್ವಾದಿ ಲಿಂಗಯುತ ದ್ಯುಭ್ವಾದಿಗಳಿಗಾಧಾರನು ಅವ್ಯಕ್ತ ಜ್ಯೋತಿರಾದಿ ಶಬ್ದ ಮುಖ್ಯಾರ್ಥನು 11 ದೋಷವರ್ಜಿತ ಹರಿ ವಿಷಯವಿರಕ್ತಿ ಭಕ್ತ್ಯು ಪಾಸನದಿಂದಲೆ ಅಪರೋಕ್ಷನೊ ಇಂತು ಪ್ರಸನ್ನನು ಮುಕ್ತಿಯನೀವನು ಎಂಬುವುದೆ ಸರ್ವ ಶಾಸ್ತ್ರಾರ್ಥವೊ 12 ವರನಾಮಗಿರಿ ನರಹರಿಯ ಪಾದಾಂಬುಜ ನಿರತ ಹೃದಯನಾಗಿ ಅನುದಿನದಿ ಧರಣಿ ಸುರನು ಇದ ಪೇಳಲು ನರಹರಿ ಚರಣಕಮಲ ಭಕ್ತಿ ಪೊಂದುವನು 13
--------------
ವಿದ್ಯಾರತ್ನಾಕರತೀರ್ಥರು
ತತ್ವ ಚಿಂತನೆ ಮಾಡು ಮನುಜಾ ವ್ಯರ್ಥಕಾಲವು ಕಳೆಯದೆ ಪ ಮೂರುಬಾರಿಗೆ ಸಾರಿದೆ ಅ.ಪ ಮನೆಯು ಉರಿಯುವಾಗ ಭಾವಿ- ಯನು ತೆಗೆವ ನರನಂದದಿ ಕೊನೆಗೆ ಯಮನವರೆಳೆವ ಕಾಲದಿ ಕೋರಿದರೆ ಸುಖ ಬಾರದು 1 ಈಷಣತ್ರಯದಾಸೆಯಿಂದಲಿ ಮೋಸಹೋಗದೆ ಸಂತತ ರೋಷದೋಷಕೆ ಕಾರಣವು ಸಂ- ತೋಷದಿಂದರು ನಲಿಯುತ 2 ಎಲ್ಲಿ ನೋಡಿದರಲ್ಲಿ ಹರಿಯನು ಸೊಲ್ಲು ಸೊಲ್ಲಿಗೆ ತುತಿಸುತ ವೆಲ್ಲ ಕಳೆ ದೃಢವಾಗುತ 3 ನಾನು ನನ್ನದು ಎಂಬುವ ದುರಭಿ- ಮಾನ ನಿನಗೆ ಬೇಡೆಲೊ ಸ್ವಾನುಭವಕಿದು ಹಾನಿ ತರುವದು ನೀನೆ ನಿನ್ನೊಳು ನೋಡೆಲೊ4 ನೇಮಗಳನು ಪರಿಸುತ 5
--------------
ಗುರುರಾಮವಿಠಲ
ತತ್ವಚಿಂತನೆ ಅತಿಭಯಪುಟ್ಟುವುದಡವಿಯ ನೋಡಲ್ ಪ ಮತಿ ಮಂದವಾಗಿಯೆ ಮಾರ್ಗತಪ್ಪುವುದು ಅ.ಪ ಹುಲಿಸಿಂಹಶಾರ್ದೂಲ ಗಂಡಭೇರುಂಡ ಬಲುದುಪ್ಪೆ ಆನೆ ಕಾಡ್ಗೋಣದ ತಂಡ 1 ಝಿಲ್ಲಿಕದಿಂದೆದೆ ತಲ್ಲಣಿಸುವದು ಎಲ್ಲೆಲ್ಲಿಗಿಡಮರ ಮುಳ್ಳುಕಲ್ಲುಗಳು 2 ನಿಲ್ಲಗೊಡದ ದುಷ್ಟಕೀಟಕ ವೃಂದ 3 ಸಂಸಾರಟವಿಯನ್ನು ಸೇರಿ ನಾ ಕೆಟ್ಟೆ ಬಟ್ಟೆ 4 ದೇಹ ಸಂಬಂಧ ಮೋಹ ಕಾಡ್ಗಿಚ್ಚು ದಾಹಗೊಳಿಸಿ ಕೊಲ್ಲುತಿರುವುದು ಹೆಚ್ಚು 5 ಹಗಲು ಇರುಳು ಇದರೊಳಗಿದೆಚಿಂತೆ 6 ದಾರಿಯ ತೋರುವ ಗುರುರಾಮ ವಿಠಲಾ ಕಾರಣ ಕರ್ತನ ನಾ ನೋಡಲಿಲ್ಲ 7
--------------
ಗುರುರಾಮವಿಠಲ
ತತ್ವಚಿಂತನೆ ಅರಿಯಲಳವೇ ಜ್ಞಾನಿಯ ಹೊರಗಿನ ಬಡರೂಪದಿ ಪ ಧರೆಯು ಉದರದಿ ನೆಲಸಿಹ ಪರಿಪರಿ ವಿಧ ಸಿರಿಯನು ಅರಿವುದು ಬಲುಸುಲಭವೆ ಅ.ಪ ಹುಚ್ಚರಂದಿ ಕಾಂಬೋರು ಜನ ಮೆಚ್ಚಿಗೆಯನು ಬಯಸರು ಅಚ್ಚರಿಯಲಿ ನಡೆವರು ಎಚ್ಚರಿಕೆಯ ಪೊಂದದಂತೆ 1 ಒಡವೆ ವಸನಗಳೆಲ್ಲವ ಸಡಗರವನು ಅರಿಯರು ಕಡು ಬಡತನ ಕ್ಲೇಶಕೆ ನಡುಗಲರಿಯರು ಸುಲಭದಿ 2 ಮೇದಿನಿಯಲಿ ದಿನಗಳ ಮೋದದಿಂದಲಿ ಕಳೆವರು ಮಾಧವನಲಿ ಭಕುತರು ಬೂದಿ ಮುಚ್ಚಿದ ಕೆಂಡದಂತೆ 3 ಮರುಳು ಮೋಸವನರಿಯರು ಸರಳಮನದಲಿ ಇರುವರು ಕೆರಳಿದ ಸುಮದಂದದಿ ತಿರುಳುಗಳನು ಸುಲಭದಿ 4 ಭಕ್ತ ಪ್ರಸನ್ನನೊಳು ಆಸಕ್ತ ಸನ್ಮನ ಯುಕ್ತರು ಯುಕ್ತಿ ಚತುರತೆಯರಿಯರು ಹುತ್ತದೊಳಿಹ ಸರ್ಪದಂತೆ 5
--------------
ವಿದ್ಯಾಪ್ರಸನ್ನತೀರ್ಥರು
ತತ್ವಚಿಂತನೆ ಪೇಳಬಹುದೊಬ್ಬರಿಗೆ ವ್ಯಾಸನೆ ಪೇಳಲು ನಿಮಗೆ ಮಾಡಲಶಕ್ಯವಲ್ಲ ಪ ಶ್ರವಣ ಕ್ಷಣಬಿಡದೆ ಮಾಡು ನೀಯೆಂಬಿ ಶ್ರವಣ ಬವಣೆಯು ಬಲ್ಲರೇ ಬಲ್ಲರೊ ಶ್ರವಣ ಮತಿಯೆಂದು ವಾಕ್ಯದಿಂದಲಿ ನಿಮಗಿ ಲ್ಲವರ ಗುರುವಾದಿ ವಾಯು ವಿರಂಚಿಗೆ 1 ಮನನ ಮಾಡೆಂದು ಮಂದಿಗೆ ನೀ ಬೋಧಿಸುವೆ ಮನನ ನಿಮಗೆ ಎಂದಿಗೆ ಇಲ್ಲವೊ ಮನನ ಶಾಸ್ತ್ರಗಳ ಮಾಡಿ ಹ್ಯಾಗ ತಿಳಿಯದೊ ಮನವೆ ಬಲ್ಲುದು ನಿನ್ನ ಮಹಿಮೆ ಎಲ್ಲ 2 ಧ್ಯಾನ ಮಾಡೆಂಬಿ ತಾ ಒಂದೆರೆಡು ವಿಷಯಗಳ ಜ್ಞಾನ ಬಿಡಲಾರೆನೊ ಬಹಳ ಬಿಡುವೆ ನೀನು ಒಂದನ್ನ ಒಮ್ಮೆನ್ನ ಬಿಡಲಾರಿಯೊ ಏನೊ ನೀ ಮಾಡುವುದು ಮಾತ್ರ 3 ನಿನ್ನ ಖಳಗುಣಗಳ ಪರೋಕ್ಷ ನಿಗಮನುದಿನ ಅನ್ಯ ಸಾಧನಗಳಿಂದಲ್ಲದಾಗಿ ನಿತ್ಯ ಮುಕುತಿ ಪೂರ್ಣ ತಾ ಅನ್ಯ ಜನರಿಗೆ ಬಂದ ದಣುವು ತಿಳಿಯೊ 4 ಏಸು ತಾನಂದರು ಖರಿಯ ಪುಸಿವೊಂದಿಲ್ಲ ಲೇಸು ಕೊಡುವವನೊಬ್ಬನಿಲ್ಲ ವಾಸುದೇವವಿಟ್ಠಲ ಒಲಿದು ಸಜ್ಜನರಿಂದ ಈಸು ಸಾಧನೆಗಳಿಂದ ನೀ ಮಾಡಿಸೊ 5
--------------
ವ್ಯಾಸತತ್ವಜ್ಞದಾಸರು
ತತ್ವಚಿಂತನೆ ಮತವೆಂದರೆ ಮಧ್ವ ಮತವೇ ಮತವು ಶ್ರುತಿ ಸ್ಮøತಿ ತತಿಗೆ ಸಮ್ಮತವಾದುದರಿಂದ ಪ ಮಧುವೆಂದರಾನಂದ ಒದಗಿ ಬರುವುದು ಸತ್ಯ ಮಧುವೈರಿ ಒಲಿದು ಪಾದವ ತೋರುವ ಸದಮಲ ಭಾವದಲಿ ಮೇದಿನಿಯೊಳಗಿನ್ನು ಮದಮತ್ಸರಿಲ್ಲದೆಲೆ ಮುದದಿಯೋಚಿಸಲಾಗಿ 1 ವ ವರ್ಣವೆಂದರೆ ಶ್ರೀ ವರನ ಜ್ಞಾನವು ಪವನಪಿತ ತಾ ಒಲಿದು ಈವನದನು ಹೇವವಿಲ್ಲದೆ ಶುದ್ಧ ಭಾವದಿಂದಾಚರಿಸೆ ಭವ ದೂರಗೈಸಿ ಪಾವನಮಾಳ್ಪೊದದರಿಂದ 2 ಪತಿ ಪಿತಭಾವ ಸತತ ಸಮ್ಮತಿಯಿತ್ತು ಖತಿಯಳಿವದೈ ಕ್ಷಿತಿಯೊಳಗೆ ಪಿತ ಶ್ರೀ ನರಹರಿಯ ಪದಪದುಮ ಅತಿ ತೀವ್ರದಲಿ ತೋರಿ ಖ್ಯಾತಿ ತಂದೀವುದಕೆ 3
--------------
ಪ್ರದ್ಯುಮ್ನತೀರ್ಥರು
ತತ್ವದರ್ಶನದಲ್ಲಿ ಮಂತ್ರಮಹಿಮೆ ಸ್ವಾಮಿಗರ್ಪಿಸೋ ಮಾನವಾ ಪ ಕಾಮಿತಾರ್ಥವ ಬೇಡದೆ ಶತ ಸಾಮಜಾಪತಿ ನೆನೆವ ಮಂತ್ರ ಅ.ಪ ದಿವಿಜರನಿಶ ಪಠಿಪ ಮಂತ್ರ ಜವನ ಭಟರ ಸದೆದ ಮಂತ್ರ 1 ಲಲನೆಪಾಂಚಾಲಿ ಹೇಳಿದ ಮಂತ್ರ ಬಲಿಗೆ ವರವನಿತ್ತ ಮಂತ್ರ 2 ಸಾರಸಭವನುಲಿದ ಮಂತ್ರ ಘೋರದುರಿತನಾಶಕ ಮಂತ್ರ ಸಂ ಸಾರಜಲಧಿ ದಾಟಿಪ ಮಂತ್ರ 3 ಉಸುರಲಳವೆ ಪರಮ ಮಂತ್ರ 4 ನರನ ಪಾಲಿಪೊಂದು ಮಂತ್ರ 5 ಸಿರಿಗೋವಿಂದನೆಂಬ ಮಂತ್ರ ಮಂಗಳಕರ ರಂಗಮಂತ್ರ ಗಂಗಾಜನಕನೇಂಬೀ ಮಂತ್ರ ಶೃಂಗಾರಾಬ್ಧಿ ಸೋಮಮಂತ್ರ ಮಾಂಗಿರೀಶನೆಂಬ ಮಂತ್ರ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್