ಒಟ್ಟು 15585 ಕಡೆಗಳಲ್ಲಿ , 137 ದಾಸರು , 6785 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರಯ್ಯ ಕೃಷ್ಣ ಬಾರೈ ಬಾಹದಿದ್ದಡೆಕಾರುಣ್ಯನಿಧಿಯೆಂಬ ಕಥೆಯ ಅ-ದಾರು ಬಣ್ಣಿಪರು ವೇದಾಂತದೇವಿಯರೆಮ್ಮದೂರುವರೀಗೆ ಪ. ಕುಂಜರವರದ ನೀಲಾಂಜನವರ್ಣ ನೀಕಂಜನೇತ್ರನೆ ಕಾಮನಯ್ಯಮಂಜುಳಮೂರ್ತಿ ಮನೋಹರಕೀರ್ತಿ ಪ್ರ-ಭಂಜನನೊಡೆಯ ಬಾರೊ 1 ಮಂದರಗಂಧದ ಮಂದಮಾರುತ ಬಂದಚಂದಿರಮುಡಿದ ಚದುರಬಂದಕಂದರ್ಪನರವಿಂದನೆಂಬ ಕಣೆಯ ತೊಟ್ಟ ಮಂದರಧರನೆ ಬಾರೊ2 ನೋಡುವೆ ನುಡಿಸುವೆ ಪಾಡುವೆ ಬಯಕೆಯಬೇಡುವೆ ಹಯವದನನಮಾಡುವೆ ಪೂಜೆಯ ಕೂಡುವೆ ನಿನ್ನೊಡ-ನಾಡುವೆನೊ ಬೇಗನೆ ಕಾಡದೆ ಬೇಗ ಬಾರೊ 3
--------------
ವಾದಿರಾಜ
ಬಾರಯ್ಯ ಗುರು ಸ್ವಾಮಿ ಶ್ರೀಸದ್ಗುರು ಎನ್ನ ಮನೋಮಂದಿರಕೆ ಕರುಣಾನಂದದ ಸುಖ ಬೀರುತ ಬಾರೈ ಆತ್ಮಾನುಭವಕೆ ಧ್ರುವ ಕಣ್ಣು ಹಾರುತಿದೆÀ ಬಲದೆನ್ನ ಖೂನದೋರವ್ಹಾಂಗಿಂದು ಚೆನ್ನಾಗ್ಹೊಳಿಯುತಿ ಸುಚಿಹ್ನ ನೀನೊಲಿಯವ್ಹಾಂಗೆ ಬಂದು ಎನ್ನೋಳೀವ್ಹಾಂಗ ಸನಾತನ ಪಾಲಿಸಿದೆನಗೊಂದು ಧನ್ಯಗೈಸುವ ದಯಾಳು ನೀನಹುದೊ ಕೃಪಾಸಿಂಧು 1 ಏನೊಂದರಿಯೆ ಒಂದು ಸಾಧನ ಧ್ಯಾನಮೌನ ಹ್ಯಾಗೆಂದು ಖೂನಬಲ್ಲೆನೊ ನಿಮ್ಮ ಬಿರುದಿನ ದೀನನಾಥ ನೀ ಎಂದು ನ್ಯೂನಾರಿಸದೆನ್ನೊಳಗಿನ ನೀನೆ ಅನಾಥಬಂಧು ಎನಗುಳ್ಳ ಸ್ವಾಮಿ ಸದೋದಿತ ನೀನಹುದೊ ಎಂದೆಂದು 2 ತಾಯಿ ಶಿಶುಸ್ತನಪಾನಕೆ ಬಾಯಿಯೊಳಗಿಡುವ್ಹಾಂಗ ಸಾಯಾಸವಿಲ್ಲದೀಪರಿ ದಯಮಾಡುವದೆನಗೆ ಶ್ರೇಯಸುಖದಾಯಕೊಬ್ಬನು ನೀನೆ ಭಾನುಕೋಟಿ ಎನಗೆ ಅನುದಿನ ದೀನಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರಯ್ಯ ತಿಮ್ಮಯ್ಯಾ ತೋರಯ್ಯಾ ಮುಖವನು | ತಾರಯ್ಯಾ ಒಂದು ಚುಂಬನ ಕರುಣ | ಬೀರಯ್ಯಾ ನಮ್ಮ ವಶಕೆ ಪ ಶೋಭಾನೆ || ನಿಲ್ಲು ನಿಲ್ಲೆಲೊ ದೇವಾ | ಎಲ್ಲಿ ಪೋಗುವಾ ನೀನು ಸಲ್ಲದು ನಿನ್ನ ಚೋರಂಗ ಲೀಲಿಗೆ ಪಳ್ಳಿಸೋಕುದೆ ಇಲ್ಲ ಇಲ್ಲದೆ 2 ಹಾರಿಸಿ ವೈದು ಮರನೇರಿ | ಹಾರಿಸಿ ಮರನೇರಿದ ಸಣ್ಣ | ಪೋರ ಬುಧ್ಧಿಗಳ ಬಿಡವಲ್ಲಿ 3 ತುರುಕರಗಳ ಕಾಯ್ದು | ಚರಿಸಿದೆ ಅಡವಿಯ | ಪರಸತಿಯರ ವ್ರತಗಳ | ಪರಸತಿಯರ ವ್ರತಗಳ ಕೆಡಿಸಿದ | ಪರಮಾತ್ಮನಿಗೆ ಎಣೆಯುಂಟೆ 4 ಕೇಸಕ್ಕಿ ತಿರುಮಲ ಲೇಸಯ್ಯಾ ನಿನ್ನ ಗುಣ | ಕಾಸುಕಾಸಿಗೆ ಬಿಡದಲೆ | ಕಾಸುಕಾಸಿಗೆ ಬಿಡದೆ | ಬಡ್ಡಿಕೊಂಬ ಆಶೆಗಾರನು ಬಹು ಸೂರಾಳೊ 5 ಅಣಕವಾಡಲಿ ಬೇಡ ಕೆಣಕಿದರೆ ನಿನ್ನ | ಹೊಣಿಕೆಹಾಕುವೆ ಹಿಡತಂದು ಎನ್ನಯ | ಮನವೆ ನಿನ್ನಯ ಚರಣಕ್ಕೆ ಶೋಭಾನೆ 6 ಬೆಟ್ಟದ ಕೊನೆ ಏರಿ ಎಷ್ಟು ದೂರ ಓಡೀ | ಗಟ್ಯಾಗಿ ನಿನ್ನ ಚರಣದ | ಗಟ್ಯಾಗಿ ನಿನ್ನ ಚರಣದ ಕೊನಿಯ ಉಂ ಗುಷ್ಟ ಕಚ್ಚದಲೆ ಬಿಡೆ ನಾನು 7 ಹಿಂದೆ ಯಾರು ಏನು ತಂದು ಕೊಟ್ಟರೋ ನಿನಗೆ | ಇಂದು ನಾನೇನು ಕೊಡಲಿಲ್ಲವೆಲೋ ತಂದೆ | ಕಣ್ಣಿರದು ನೋಡೊ ಕಮಲಾಕ್ಷ | ಶೋಭಾನೆ 8 ಭಕ್ತನ ನುಡಿಕೇಳಿ ಚಕ್ಕನೆ ಬಿಗಿದಪ್ಪಿ | ತೆಕ್ಕಿಸಿದಾ ವಿಜಯವಿಠ್ಠಲ ಎನ್ನ ಅಕ್ಕರವೆಲ್ಲ ತೀರಿಸಿದಾ | ಶೋಭಾನೆ 9
--------------
ವಿಜಯದಾಸ
ಬಾರಯ್ಯ ಬಾ ಬಾ ಬುಧಜನಗೇಯಾ | ಹೇ ಗುರರಾಯಾಸಾರಿ ಬರುವ ಭಕುತರೊಡೆಯ | ಕಾಯಯ್ಯ ಜೀಯಾ ಪ ವಾರಿಜನಾಭನ ವಾರಿಧಿಮಥನನವೈರದಿ ಭಜಿಸಿದ ಪುರಟ ಕಶ್ಯಪನ |ವರ ಉದರೋದ್ಭವ ಹರಿ ಪ್ರಿಯ ಭಕುತನೆಶರಣರ ಪೊರೆಯಲು ತ್ವರ್ಯದಿ ಬಾರೋ ಅ.ಪ. ದಿತಿಸುತ ದೊರೆಯೇ | ಬಾಹ್ಲೀಕ ದೊರೆಯೇ |ಚತುರ ಚಂದ್ರಿಕೆ ಗುರು ಮಂತ್ರಾಲಯ ಗುರುವೇ | ದೊರೆಬಲು ಮೊರೆಯೇ |ವ್ಯಥೆಯಾಕೆನ್ನುತ | ಹಸ್ತವ ಚಾಚುತಹುತ ವಹ ನೊಳು ಬಲಾ | ಜತನಾಗಿರಿಸಿಹ ರತುನವ ಹಾರವ | ಪ್ರೀತಿಲಿ ಕೊಡುತಅತಿಶಯ ತೋರಿದ | ಯತಿ ರಾಘವೇಂದ್ರ 1 ಸುಧೀಂದ್ರರ ಕರಜ ಮಂತ್ರಾಲಯ ನಿಲಯ | ಬಲು ಮಂತ್ರಗಳೊಡೆಯಾ |ಬಧಿರ ಮೂಕರ ಅಂಧರ ಹೊರೆಯಾ | ಪರಿಹರಿಸುವ ದೊರೆಯಾ |ಮಧ್ವಾಂತರ್ಗತ ಮಧು ಕೈಟ ಭಾರಿಯಸಿದ್ಧಾಂತದ ಸವಿ ಹೃದ್ಗತ ಮಾಡಿದ |ವಿದ್ವನ್ಮಣಿಗಳ ಸದ್ವøಂದದ ಖಣಿಸದ್ವಿದ್ಯದ ಸವಿ ಮೋದದಿ ಉಣಿಸಲು 2 ಮನ್ರೋವಿನ ಮನ ತಿಳಿಯುತಲಿನ್ನೂ | ಮುನಿವರ ತಾನೂ |ಸಾನುರಾಗದಿ ತನುವ ತೋರಿದನೂ | ಘನ ಕರುಣಿಯು ತಾನೂ |ಜ್ಞಾನಿಗಮ್ಯ ಗುರುಗೋವಿಂದ ವಿಠಲನಧ್ಯಾನಿಸೆ ಪೊಗುತಲಿ ವೃಂದಾವನವ |ಆನತ ಜನ ಮನದಿಷ್ಟವ ಸಲಿಸುತಮೌನಿವರೇಣ್ಯನೆ ತುಂಗೆಯ ತೀರಗ 3
--------------
ಗುರುಗೋವಿಂದವಿಠಲರು
ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಾರಯ್ಯ ಭಾಗಣ್ಣನೇ | ಯನ್ನಯ ಮನಕೆ ಬಾರಯ್ಯ ಭಾಗಣ್ಣನೆಕರೆ ಕರೆ ಮನದ ವಿಷಾದವ ಕಳೆದು ಶ್ರೀಹರಿಯಲಿ ಮನವಿತ್ತು ಕರುಣಿಪುದಯ್ಯ ಅ.ಪ. ಗೋಪಾಲ ವಿಠಲನ ಭಜಕನೇ | ಹೇ ಉಮಾಪತಿಸುತ ಬಲುತ್ಯಾಗ ಶೀಲನೆ |ಶಾಪದಿ ನೊಂದ ಶ್ರೀನಿವಾಸಪ್ಪಗೆಆಪಾರಾಯುಷ್ಯವಿತ್ತು ಸಲಹೀದ 1 ತಡವು ಇನ್ಯಾತಕಯ್ಯಾ | ಗುರುಮಡದಿಯ ಸಲಹಿದ ಹರಿಯಾ |ಒಡಲೊಳು ತೋರಿಸಿ ಸಲಹೆಂದು ಬೇಡುವೆಕಡು ದಯಾನಿಧೆ ಅಡಿಗೆರುಗುವೆನಯ್ಯಾ 2 ಸಕಲ ಶಾಸ್ತ್ರದಿ ಬಲು ನಿಪುಣಾ | ಮಂತ್ರಸಕಲವ ಚಕ್ರದಿ ರಚಿಸಿದ ಧಿಷಣಾ |ಲಕುಮಿಯರಸ ಗುರು ಗೋವಿಂದ ವಿಠಲನೆಸಕಲಕ್ಕು ದೇವನೆಂದರುಹಿದ ಗುರುವೇ 3
--------------
ಗುರುಗೋವಿಂದವಿಠಲರು
ಬಾರಯ್ಯ ಯದುಕುಲತಿಲಕ ತೋರಯ್ಯ ನಿನ್ನ ಮುದ್ದು ಮುಖವಓರಂತೆ ಮುದ್ದಿಸಿ ಯಶೋದೆ ಕುಮಾರನೆ ಬಾರೆಂದಳೈಪ. ಅಂದವಾದ ನಿನ್ನ ಮುದ್ದುಮುಖದ ಚೆಂದವನ್ನು ತಾ ನೋಡಿಕಂದಿಕುಂದಿ ಇಂದಿರೆಯು ಮರುಳಾಗಿ ಕಂದ ನಿನ್ನ ಪೊಂದೇನೆಂದಳೈ 1 ಕೃಷ್ಣ ನಿನ್ನ ಮಕ್ಕಳಾಟಿಕೆ ಶ್ರೇಷ್ಠರಿಗೆ ಮೋಹನವಾಯಿತುದುಷ್ಟಮತಮಾತಂಗಕ್ಕೆ ಅಟ್ಟುವೊ ಸಿಂಹದ ಮರಿಯೆ2 ಇಂಥ ಹಯವದನನ ಇಂಥ ದೇವರ ನಾ ಕಾಣೆಪಂಥವೇನೊ ಎನ್ನ ಕೂಡೆ ದಿನಮಣಿ ತಿಂತಿಣಿಯೆ ಬಾರೆಂದಳೈ3
--------------
ವಾದಿರಾಜ
ಬಾರಯ್ಯ ಸ್ವಾಮಿ ಬಾರಯ್ಯ ಪ ಬಾರಯ್ಯ ಮುಖವನ್ನು ತೋರಯ್ಯ ತವಪಾದ ವಾರಿಜನಂಬಿದೆ ಮಾರಜನಕ ಬೇಗ ಅ.ಪ ಎಷ್ಟಂತ ಬಳಲಲಿ ನಾನು ಸಂಸಾರ ಕಷ್ಟದ ಕಾಡಿನೊಳಿನ್ನು ಧ್ವಂಸಾಗಿ ಭ್ರಷ್ಟತನದಿ ಬಾಳುವೆನು ಕಂಸಾರಿ ಇಷ್ಟುದಯವು ಬರದೇನು ಆಹ ಶಿಷ್ಟಜನುಮವೆಂದು ಅಟ್ಟಿ ಎನ್ನನು ಇಂಥ ಕೆಟ್ಟ ಬವಣೆಗೆ ಬಲಿಗೊಟ್ಟು ಬಿಡುವರೆ ಈಶ 1 ಜನನಿಜಠರದಲಿ ಎನ್ನ ಏನೆಂ ದೆನುತ ನೂಕಿದಿ ಪೇಳು ಮುನ್ನ ಸಾನಂದನುಪಮನು ತವಚರಣ ಆನಂದನುಕೂಲವಾದಂದಿಲ್ಲೇನ ಆಹ ಅನುಚಿತ್ತವೇನಯ್ಯ ದಿನವು ಪೋಯಿತು ಅರ್ಧ ಮನಕೆತರದಲಿಹಿ ಜನಕನೆ ಕರುಣದಿ 2 ಭಕ್ತವತ್ಸಲನೆಂಬ ಬಿರುದು ಮಾಜ ದ್ಹೊತ್ತು ನಿಖಿಲ ನೀನೆ ಬೆರೆದು ತ್ರಿಜ ಗೆತ್ತಿ ಆಳುವಿ ಮನವರಿದು ನೈಜ ದಿತ್ತು ಪೊರೆವಿ ಭಯತರಿದು ಆಹ ಕರ್ತನೆ ತವಪಾದ ಮರ್ತಿರಲಾರಿನ್ನು ತುರ್ತು ದಯವಾಗೆನ್ನೊಳರ್ತಿಯಿಂ ಶ್ರೀರಾಮ 3
--------------
ರಾಮದಾಸರು
ಬಾರವ್ವ ಮಹÀಭಾಗ್ಯದಭಿಮಾನಿ ಶ್ರೀಹರಿ ನಿಜರಾಣೀ ಪ ಸಾರಿದೆ ನಿನಪಾದನೀರಜಯುಗ ಮನೋ - ವಾರಿಜದಲಿ ನೀ ತೋರುತ ಲಕುಮಿ ಅ.ಪ ಅಖಿಲಾಗಮವಿನುತೆ ಎನ್ನಯ ಮಾತೆ ಸಕಲಸುರಗೀತೆ ನಿಖಿಲಾ ತ್ರಿಜಗದ್ವ್ಯಾಪ್ತೆ ಪ್ರಖ್ಯಾತೆ ಸಂಪತ್ಪ್ರದಾತೇ ನಖಮುಖ ಮಾತ್ರದಿ ವಿಖನಸಆಂಡದ ಅಖಿಲವ್ಯಾಪಾರವ ಸುಖದಲಿ ಮಾಡುವಿ 1 ಇಷ್ಟಾರ್ಥವ ಸಲಿಸಿ ಎನ್ನನು ಪೊರೆಯೇ ಕೊಲ್ಹಾಪುರÀ ಶಿರಿಯೆ ಅಷ್ಟ್ಟದಾರಿದ್ರÀ್ಯಗಳನು ನೀ ತರಿಯೆ ಈ ಕ್ಷಣ ಸುಖಸುರಿಯೇ ಅಷ್ಟಪÀÀದೋದರ ಅಷ್ಟಮೂರ್ತಿನಿನ್ನ ದೃಷ್ಟಿಯಿಂದ ಮಹಶ್ರೇಷ್ಟನಾಗಿಹನೇ 2 ಕ್ಷೀರಾವಾರಿಧಿಯೊಳು ಸಂಜಾತೆ ಮಾರನ್ನ ಮಾತೆ ಅ - ಪಾರಾಮಹಿಮಾಳೆ ಸುರಸನ್ನುತೆ ಜಗದೊಳಗೆ ಖ್ಯಾತೆ ವಾರವಾರಕೆ ದುರಿತಾರಿ ನಿನ್ನಯ ಪೂಜೆ ಚಾರುಮನದಿ ಮಾಳ್ಪೆ ಧೀರೆ ಉದಾರೆ 3 ವಾಸವಾಗೆನ್ನಾ ಮನೆಯೊಳಗಿನ್ನಾ ಪಾಲಿಸೆ ಇದನನ್ನಾ ವಾಸವಾದಿ ಸುರರಾಸೆಯ ಪೂರ್ತಿಸಿ ಈಶರ ಮಾಡಿದಂತೆ ಈ ಸಮಯದಿ ಎನ್ನ 4 ನಗೆಮೊಗ ಚೆನ್ನೆ ಸುಪ್ರಸನ್ನೆ ಸುರನಿಕರರನ್ನೆ ಮಗುವಿನ ಮಾತೆಂದು ನಗುತ ನೀ ಇನ್ನೆ ಬಾ ಬರುವದು ಘನ್ನೆ ನಗಹರ ಸುರಪನ ಮಗನನ ಸಖ ಗುರು ಜಗನ್ನಾಥ ವಿಠಲ ಸಮ್ಮೊಗವಾಗಿ ಬೇಗ ನೀ 5 ಶಿರಿದೇವಿ ನಿನ್ನ ಚರಣ ಸರಸಿಜಯುಗಕೆ ಶಿರದಿ ನಮಿಪೆ ಸತತ ಸರಸಿಜಾಂಬಕೆ ಸರಿಯಾರು ನಿನಗೀ ಸರಸಿಜಭವಾಂಡದೊಳು ಸgಸಿಜಾಕ್ಷಗೆ ದೇಶಕಾಲಗಳಿಂದ ಸರಿಯಾಗಿ ನಿತ್ಯದಲಿ ಪರಿಪರಿಸೇವಾದಿಂದ ಹರಿಯಾ ಮೆಚ್ಚಿಸಿ ಪರಮಾದರದಿಂದ ಪತಿಗನುಕೂಲ - ಪರಳಾಗಿ ಸೃಷ್ಟಿಗೆ ಮೂಲಕಾರಣಳೆನಿಸಿ ಪರಮೇಷ್ಟಿ ಮೊದಲಾದಾನಂತಜೀವರನ್ನ ಅರಿತು ಯೋಗ್ಯಾಯೋಗ್ಯತೆಯನ್ನನು - ಸರಿಸಿ ಸೃಜಿಪ ಶಕ್ತಿ ನಿನಗುಂಟು ನೀ “ಯಂ ಯಂ ಕಾಮಯೆ ತಂ ತಮುಗ್ರಂ ಕೃಣೋಮಿ” ಎಂತ ಶ್ರುತಿ ಸಾರುತಿದೆ ಶಿರಿ ನಿನ್ನ ಕಟಾಕ್ಷದಿ ಸಕಲೈಶ್ವರ್ಯಗಳು ಪರಿಪರಿ ವಿಧದಿಂದ ಒದಗುತಿಪ್ಪವು ಹರಿಕೃಪೆ ನಿನ್ನೊಳಗೆಂತಿಹುದೋ ಅರಿಯಾರು ಎಂದಿಗು ಬೊಮ್ಮಾದಿಸುರರು ನರರೇನು ಬಲ್ಲರಮ್ಮ ನಿನ್ನ ಮಹಿಮೆಯ ಶಿರಿಮಾನಿ ಎನ್ನ ನೀನು ಕರುಣದಿಂದಲಿ ನೋಡಿ ಹರಿಮೂರ್ತಿಯನ್ನೇ ತೋರೆ ಹರಿಣಲೋಚನೆ ಹರಿದಾಸಜನರೊಡೆಯ ಗುರುಜಗನ್ನಾಥವಿಠಲನ್ನ ಇರವು ತೋರಿಸಿ ಎನ್ನ ಪೊರೆಯಮ್ಮ 6
--------------
ಗುರುಜಗನ್ನಾಥದಾಸರು
ಬಾರೆ ದೇವಿ ಭಾಗ್ಯವಂತೆ ಬೇಡಿಕೊಂಬೆ ಬೇಗ ಹಸೆಗೆ ಪ ಸುತ್ತನಾಲ್ಕು ದೀಪಗಳಿಟ್ಟು ಎತ್ತಲೂ ಪ್ರಜ್ವಲಿಸುತಿರ್ಪ ಮುತ್ತುರತ್ನ ಕೆತ್ತಿಸಿರುವ ಉತ್ತಮ ಮಣಿಪೀಠಕೆ 1 ಜಡೆಯಬಂಗಾರವನು ಹಾಕಿ ಬಿಡದೆ ಕಮಲಮಾಲೆಧರಿಸಿ ಮುಡಿದು ಮಲ್ಲಿಗೆ ಸಂಪಗೆಯ ಒಡನೆ ಪೀತಾಂಬರವನುಟ್ಟು 2 ಜಾಜಿಪಟ್ಟಣನರಸಿಯೆ ನೀಂ ರಾಜಿಸು ತನುರಾಗದಿಂ ದೀನ ಜನರಂ ಹರುಷಗೊಳಿಸು ಮಾಜದೇ ನೀ ಮಂಗಳಾಂಗಿ3
--------------
ಶಾಮಶರ್ಮರು
ಬಾರೆ ದ್ರೌಪದಿ ಭಾಳ ಹರುಷದಿಂದ ಸುಂದರಿ ರಾಜ ಧರ್ಮರಾಯರಿದ್ದ ಹಸೆಗೆ ಒಯ್ಯಾರಿ ಪ ಅರಸುಧರ್ಮಜ ಭೀಮ ಪಾರ್ಥ ನಕುಲ ಸಾದೇವ ಸರಸವಾಡಿ ಕುಳಿತಾರೆ ಸಂತೋಷದಿಂದಲಿ 1 ಪುತ್ಥಳಿ ಚಂದ್ರಹಾರ ಪದಕವು ಆಣಿ ಮುತ್ತಿನ ಸರಗಳು ಕಟ್ಟಾಣಿ ಹೊಳೆಯುತ 2 ವಂಕಿ ನಾಗಮುರಿಗೆ ಸರಿಗೆ ಕಂಕಣ ದ್ವಾರ್ಯವು ಕುಂಕುಮ ಗಂಧ ಪರಿಮಳ ಅಲಂಕಾರವಾಗಿ 3 ಹೆರಳುಬಂಗಾರ ಚೌರಿ ಚಂದ್ರ ಗೊಂಡ್ಯ ರಾಗಟೆಯು ಅರಳು ಮಲ್ಲಿಗೆ ಪಾರಿಜಾತ ಮುಡಿಯಲ್ಲೊ ್ಹಳೆಯುತ 4 ಗೆಜ್ಜೆ ಅಡ್ಡಿಕೆ ವಜ್ರದೋಲೆ ಬುಗುಡಿ ಬುಲಾಕು ಮುದ್ದು ಮೋರೆಗೆ ಮುತ್ತುಕೆಂಪಿನ ಮುಕುರ್ಯ ಜಾಣೆ 5 ಜರದನಿರಿಗ್ವಜ್ಜರದÀ ಪಟ್ಟಿ ಥಳಕೆಂದ್ಹೊಳೆಯುತ ಚರಣದುಂಗುರ ಪೈಜಣ ರುಳಿಯು ಘಲುಘಲೆನ್ನುತ 6 ಕೋಮಲಾಂಗಿ ಬಂದು ಭೀಮೇಶಕೃಷ್ಣನ ತಂಗಿಭೀಮ ಧರ್ಮರ ಮುಂದೆ ಕುಳಿತಳು ಪಾರ್ಥನರ್ಧಾಂಗಿ7
--------------
ಹರಪನಹಳ್ಳಿಭೀಮವ್ವ
ಬಾರೆ ನಮ್ಮನಿತನಕ ಭಾಗ್ಯದ ದೇವಿ ಬಾರೆ ನಮ್ಮನಿತನಕ ಪ ಬಾರೆ ನಮ್ಮನಿತನಕ ಬಹಳ ಕರುಣದಿಂದ ಜೋಡಿಸಿ ಕರಗಳ ಎರಗುವೆ ಚರಣಕೆ ಅ.ಪ. ಹರಡಿ ಕಂಕಣ ದುಂಡು ಕರದಲ್ಲಿ ಹೊಳೆಯುತಸರಗಿ ಸರವು ಚಂದ್ರಹಾರಗಳಲೆಯುತ1 ಜರದ ಪೀತಾಂಬರ ನಿರಿಗೆಗಳೆಲೆಯುತತರಳನ ಮ್ಯಾಲೆ ತಾಯಿ ಕರುಣವಿಟ್ಟು ಬೇಗನೆ2 ಇಂದು ನಮ್ಮನಿತನಕ 3
--------------
ಇಂದಿರೇಶರು
ಬಾರೆ ನೀ ಹಂಸಗಮನೆ ಮಾರನ ಪೀಠಕ್ಕೆ ಸಾರಿ ಕರೆವೆ ಲಕ್ಷ್ಮೀದೇವಿಯೇ ಪ. ಕಮಲ ಪುಷ್ಪದೊಳು ನೆಲಸಿದ ಲಕ್ಷ್ಮಿಯೆ ಕಮಲದ ಹಾಸಿಗೆ ಕಾಮಜನಕನ ಸಹಿತ 1 ಮುತ್ತು ಮಾಣಿಕ್ಯವು ಕೆತ್ತಿದ ಹಾಸಿಗೆ ಮುತ್ತೈದೆರೆಲ್ಲರೂ ಮುದದಿಂದ ಕರೆಯುವೊರು 2 ಶ್ರೀ ಲಕ್ಷ್ಮೀದೇವಿಯೆ ಶ್ರೀ ಕೃಷ್ಣನರಸಿಯೆ ಶ್ರೀನಿವಾಸನ ಕೂಡಿ ಪ್ರೀತಿಯಿಂದ ಸರಸನಯನೆ 3
--------------
ಸರಸ್ವತಿ ಬಾಯಿ
ಬಾರೆ ಬೇಗನೆ ವಾರಿಜಾಮುಖಿ ಚಾರುವೇದಕೆ ನೀ ಬಾ ಬೇಗನೆ ಪ ಕನಕಾಂಬರವನುಟ್ಟು ‌ಘನಕಂಚುಕವ ತೊಟ್ಟು ಹಣೆಗೆ ತಿಲಕವಿಟ್ಟು ವನಜಾಜಿ ಮಲ್ಲಿಗೆಯಾ ಮುಡಿಯುತ ನೀ ಬೇಗನೆ ಬಾ 1 ಲುಲ್ಲ ಪೈಜಣದಿ ಘಿಲ್ಲು ಘಿಲುರೆನುತಲಿ ನಿಲ್ಲದೆ ಉಲ್ಲಾಸದೀಗ | ಬೇಗ ಫುಲ್ಲನಯನೆ ಬಾ 2 ಕಾಮನ ಶಿರೋಮಣಿ ಕಾಮನ ಕರುಣಿ ಶಾಮಸುಂದರನ ರಾಣಿ ನೀ ಬೇಗೆನ ಪ್ರೇಮದಿಂದಲಿ ಬಾ 3
--------------
ಶಾಮಸುಂದರ ವಿಠಲ