ಒಟ್ಟು 15952 ಕಡೆಗಳಲ್ಲಿ , 137 ದಾಸರು , 7176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರಯ್ಯ ದಯಮಾಡಿ ತ್ವರಿತದಿ ಬೇಗಬಾರಯ್ಯ ದಯಮಾಡಿ ಪ. ಒದರಲು ಕರಿರಾಜನೊದಗಿ ಬಂದೆ ಅಲ್ಲಿಮದಭಯ ಭಾಗ್ಯವು ಒದಗಿದುಬ್ಬಸದಿಂದ 1 ಸ್ತಂಭದಿ ನರಹರಿ ಎಂಬಭಾವದಿ ಬಂದುಕುಂಭಿನಿಪತಿ ಬಹು ಸಂಭ್ರಮಗೊಳುತಲಿ 2 ನರನು ಅರ್ಚಕನೆತ್ತ ನರಹರಿ ನೀನೆತ್ತಕರುಣದಿ ಬರಬೇಕು ಸಿರಿಹಯವದನ 3
--------------
ವಾದಿರಾಜ
ಬಾರಯ್ಯ ಬಾ ಗುರುವೆ ಪರಬ್ರಹ್ಮದರುವೆ ಪ ಮೂರ್ತಿ ಪ್ರಭುವೆ ಅ.ಪ. ಸುರನದಿ ಉರಗ ಕಂಕಣ ಕರಕಪಾಲ ಪಿಡಿವೆ | ಹರ ಹರ ಎಂಬ ಭಕ್ತರಿಗೆ ವರವೆ || ಬಾರಯ್ಯ 1 ತರಣಿ ಸೆಳೆದ ವಸನ ಮಿಂಚಿನ ವರ್ಣ |ಶರಣು ಮಾಡುವೆ ನಿಮ್ಮ ಎರಡೂ ಚರಣ || ಬಾರಯ್ಯ 2 ಧಾಮ ಮಾಡಿದಿ ನಿಮ್ಮ ಭೃಂಗಾವಳೀ ಗ್ರಾಮಾ | ಭೀಮಾಶಂಕರಗೊಲಿದ ಸದ್ಗುರು ಆತ್ಮಾ || ಬಾರಯ್ಯ 3ಚಿ
--------------
ಭೀಮಾಶಂಕರ
ಬಾರಯ್ಯ ಬಾ ಬಾ ಬುಧಜನಗೇಯಾ | ಹೇ ಗುರರಾಯಾಸಾರಿ ಬರುವ ಭಕುತರೊಡೆಯ | ಕಾಯಯ್ಯ ಜೀಯಾ ಪ ವಾರಿಜನಾಭನ ವಾರಿಧಿಮಥನನವೈರದಿ ಭಜಿಸಿದ ಪುರಟ ಕಶ್ಯಪನ |ವರ ಉದರೋದ್ಭವ ಹರಿ ಪ್ರಿಯ ಭಕುತನೆಶರಣರ ಪೊರೆಯಲು ತ್ವರ್ಯದಿ ಬಾರೋ ಅ.ಪ. ದಿತಿಸುತ ದೊರೆಯೇ | ಬಾಹ್ಲೀಕ ದೊರೆಯೇ |ಚತುರ ಚಂದ್ರಿಕೆ ಗುರು ಮಂತ್ರಾಲಯ ಗುರುವೇ | ದೊರೆಬಲು ಮೊರೆಯೇ |ವ್ಯಥೆಯಾಕೆನ್ನುತ | ಹಸ್ತವ ಚಾಚುತಹುತ ವಹ ನೊಳು ಬಲಾ | ಜತನಾಗಿರಿಸಿಹ ರತುನವ ಹಾರವ | ಪ್ರೀತಿಲಿ ಕೊಡುತಅತಿಶಯ ತೋರಿದ | ಯತಿ ರಾಘವೇಂದ್ರ 1 ಸುಧೀಂದ್ರರ ಕರಜ ಮಂತ್ರಾಲಯ ನಿಲಯ | ಬಲು ಮಂತ್ರಗಳೊಡೆಯಾ |ಬಧಿರ ಮೂಕರ ಅಂಧರ ಹೊರೆಯಾ | ಪರಿಹರಿಸುವ ದೊರೆಯಾ |ಮಧ್ವಾಂತರ್ಗತ ಮಧು ಕೈಟ ಭಾರಿಯಸಿದ್ಧಾಂತದ ಸವಿ ಹೃದ್ಗತ ಮಾಡಿದ |ವಿದ್ವನ್ಮಣಿಗಳ ಸದ್ವøಂದದ ಖಣಿಸದ್ವಿದ್ಯದ ಸವಿ ಮೋದದಿ ಉಣಿಸಲು 2 ಮನ್ರೋವಿನ ಮನ ತಿಳಿಯುತಲಿನ್ನೂ | ಮುನಿವರ ತಾನೂ |ಸಾನುರಾಗದಿ ತನುವ ತೋರಿದನೂ | ಘನ ಕರುಣಿಯು ತಾನೂ |ಜ್ಞಾನಿಗಮ್ಯ ಗುರುಗೋವಿಂದ ವಿಠಲನಧ್ಯಾನಿಸೆ ಪೊಗುತಲಿ ವೃಂದಾವನವ |ಆನತ ಜನ ಮನದಿಷ್ಟವ ಸಲಿಸುತಮೌನಿವರೇಣ್ಯನೆ ತುಂಗೆಯ ತೀರಗ 3
--------------
ಗುರುಗೋವಿಂದವಿಠಲರು
ಬಾರಯ್ಯ ಬಾ ಬಾ ಯದುಕುಲರಾಯ | ಹೇ ಭಾಗವತಪ್ರಿಯ ಪ ಸಾರಸಾಕ್ಷ ಕರುಣಾರಸಪೂರಿತ ಮಾರಜನಕ ಭವತಾರಕ ಮುರಹರ ಅ.ಪ. ಬೃಂದಾರಕ ಬೃಂದ ಸುವಂದಿತ ಚರಣ | ಭುಜಗೇಂದ್ರಶಯನ ವಿಹಗೇಂದ್ರಗಮನ ಮಂದಹಾಸ ಬಲುಸುಂದರವದನಾ | ಶುಭಗಣಪೂರ್ಣ ಮಂದರಧರ ಗೋವಿಂದ ಭಜಕ ಜನ ಮಂದಾರನೆ ಮುಚುಕುಂದವರದ ರಾ ಕೇಂದುಕುಲಜಲಧಿ ಚಂದಮನೆನಿಸುವ ಇಂದಿರೆಯರಸ ಶ್ರೀ ಕರಿಗಿರೀಶನೇ 1
--------------
ವರಾವಾಣಿರಾಮರಾಯದಾಸರು
ಬಾರಯ್ಯ ಬಾರಯ್ಯ ಭಕ್ತವತ್ಸಲ ಹರಿ ಶ್ರೀಕೃಷ್ಣ ಪ ಭಕ್ತರು ಬಂದು ದ್ವಾರದಿ ನಿಂದು ಭಕ್ತಿಲಿ ಹಾಡುತ ಪಾಡುತಲಿರುವರು ಮುಕ್ತಿದಾತ ನೀನಲ್ಲದೆ ಸರ್ವ- ಶಕ್ತರಿನ್ಯಾರಿಹರೈ ಎನ್ನುತ ಪೊಗಳ್ವರು 1 ತಾಳಮೇಳದವರೆಲ್ಲರು ನಿನ್ನಯ ಊಳಿಗ ಮಾಡಬೇಕೆನುತಲಿ ಬಂದು ವೇಳೆ ವೇಳೆಗೆ ತಮ್ಮ ಸೇವೆಯ ಸಲಿಸುತ ಭಾಳ ಸಂಭ್ರಮದಿಂದ ಹಾರೈಪರೊ ಹರಿ 2 ತುಂಬುರು ನಾರದರ್ವೀಣೆಯ ನುಡಿಸಲು ರಂಭಾದ್ಯಪ್ಸರ ಸ್ತ್ರೀಯರು ನರ್ತಿಸೆ ವಿಶ್ವ ಕು- ಟುಂಬಿಯೆ ಬಾ ಬಾರೆನ್ನುತ ಸ್ತುತಿಪರು3 ಅಂಬರದಲಿ ದೇವತೆಗಳೆಲ್ಲರು ನೆರೆದು ತುಂಬಿ ಪುಷ್ಪವೃಷ್ಟಿಗಳನೆ ಮಾಡುತ ಕುಸುಮ ಮಳೆ ಗಂಭೀರದಿ ಸುರಿಸುತ ಪ್ರಾರ್ಥಿಸುವರು 4 ಅತ್ರಿ ವಸಿಷ್ಠ ಗೌತಮ ಮೊದಲಾಗಿ ರಾತ್ರಿಹಗಲು ಎಡೆಬಿಡದಲೆ ಸ್ತುತಿಸುತ ವೃತ್ರಾರಿಯ ಸುತನಿಗೆ ಸಾರಥಿಯೆ ವಿ- ಚಿತ್ರ ವ್ಯಾಪಾರಿ ಶ್ರೀಹರಿ ಎಂದು ಪೊಗಳ್ವರು 5 ಅಣುಮಹದ್ರೂಪನೆ ಘನಮಹಿಮನೆ ನಿನ್ನ ಮಣಿದು ಬೇಡಿ ಕೈಮುಗಿಯುತ ಸ್ತುತಿಪರು ಪ್ರಣವ ಪ್ರತಿಪಾದ್ಯನೆ ನಿನ್ನ ಗುಣಗಳ ಎಣಿಸಲಸಾಧ್ಯವೆನುತ ಕೊಂಡಾಡ್ವರು 6 ನವನವ ರೂಪದಿ ನಲಿಯುವ ದೇವನೆ ನವವಿಧ ಭಕುತರು ನಮಿಸುತ ಕರೆವರು ಭುವನ ಮೋಹನ ಸುಂದರಮೂರ್ತಿಯೆ ಎಂದು ಕವಿಗಳು ಪೊಗಳುತ ಕುಣಿಯುತಲಿರುವರು 7 ಎಡಬಲದಲಿ ಶ್ರೀ ಭೂದೇವಿಯರಿರೆ ಬಿಡದೆ ಛತ್ರಚಾಮರಗಳಿಂದೊಪ್ಪುತ ತಡಮಾಡದೆ ಬಾ ಮಡದಿಯರ ಸಹಿತದಿ ದಡ ದಡ ಬಾರೆಂದು ಬಡ ಬಡ ಕರೆವರು 8 ವಿಶ್ವರೂಪಕ ವಿಶ್ವನಾಮಕ ವಿಶ್ವತೋಮುಖ ವಿಶ್ವನಾಟಕ ವಿಶ್ವವ್ಯಾಪಕ ವಿಶ್ವಾಧಾರಕ ವಿಶ್ವ ಕುಟುಂಬಿಯೆ ವಿಶ್ವಾಸದಿ ಬಾ 9 ವಿರೋಧಿಕೃತು ಸಂವತ್ಸರ ಬರುತಿರೆ ಪರೋಪಕಾರವ ಮಾಡುತ ಸುಜನರು ವಿರೋಧಿಗಳ ದೂರಿಡುತಲಿ ಶ್ರೀ ಹರಿ ಸರೋಜದಳ ನೇತ್ರನÀ ಸ್ತುತಿಸುವರು 10 ಕಮಲಾಕ್ಷಿಯ ಒಡಗೂಡುತ ಬಾ ಬಾ ಕಮಲಾಸನ ಜನಕನೆ ಹರಿ ಬಾ ಬಾ ಕಮಲನಾಭ ವಿಠ್ಠಲ ಬೇಗ ಬಾರೆಂದು ಸುಮನಸ ವಂದ್ಯನ ಸ್ಮರಿಸುತ ಕರೆವರು11
--------------
ನಿಡಗುರುಕಿ ಜೀವೂಬಾಯಿ
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಾರಯ್ಯ ಭಕ್ತವತ್ಸಲ ಶ್ರೀ ಗುರು ಮುದ್ದುಕೃಷ್ಣ ಮದನಗೋಪಾಲ ಧ್ರುವ ಯಾದವಕುಲತಿಲಕ ಶ್ರೀದೇವದೇವ ಸಾಧುಜನರ ಪಾಲಕ ಉದ್ಧವ ಪ್ರಾಣಪೋಷಕ ಆದಿಕೇಶವ ಸದಮಲ ಸುಖದಾಯಕ 1 ಇಂದೀವರದಳನಯನ ನಂದಕುಮಾರ ಸುಂದರ ಶುಭವದನ ಮಾಧವ ಮಧುಸೂದನ ಮಂದರಧರ ವೃಂದ ಗೋಕುಲೋದ್ಧರಣ 2 ಮುರಹರ ಸಂಕರುಷಣ ಉರಗಶಯನ ತೋರಯ್ಯ ನಿಮ್ಮ ಚರಣ ಬಾರಯ್ಯ ನಾರಾಯಣ ಗರುಡವಾಹನ ಹೊರೆಯಾ ಮಹಿಪತಿ ಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರಯ್ಯ ಭಾಗಣ್ಣನೇ | ಯನ್ನಯ ಮನಕೆ ಬಾರಯ್ಯ ಭಾಗಣ್ಣನೆಕರೆ ಕರೆ ಮನದ ವಿಷಾದವ ಕಳೆದು ಶ್ರೀಹರಿಯಲಿ ಮನವಿತ್ತು ಕರುಣಿಪುದಯ್ಯ ಅ.ಪ. ಗೋಪಾಲ ವಿಠಲನ ಭಜಕನೇ | ಹೇ ಉಮಾಪತಿಸುತ ಬಲುತ್ಯಾಗ ಶೀಲನೆ |ಶಾಪದಿ ನೊಂದ ಶ್ರೀನಿವಾಸಪ್ಪಗೆಆಪಾರಾಯುಷ್ಯವಿತ್ತು ಸಲಹೀದ 1 ತಡವು ಇನ್ಯಾತಕಯ್ಯಾ | ಗುರುಮಡದಿಯ ಸಲಹಿದ ಹರಿಯಾ |ಒಡಲೊಳು ತೋರಿಸಿ ಸಲಹೆಂದು ಬೇಡುವೆಕಡು ದಯಾನಿಧೆ ಅಡಿಗೆರುಗುವೆನಯ್ಯಾ 2 ಸಕಲ ಶಾಸ್ತ್ರದಿ ಬಲು ನಿಪುಣಾ | ಮಂತ್ರಸಕಲವ ಚಕ್ರದಿ ರಚಿಸಿದ ಧಿಷಣಾ |ಲಕುಮಿಯರಸ ಗುರು ಗೋವಿಂದ ವಿಠಲನೆಸಕಲಕ್ಕು ದೇವನೆಂದರುಹಿದ ಗುರುವೇ 3
--------------
ಗುರುಗೋವಿಂದವಿಠಲರು
ಬಾರಯ್ಯ ಶ್ರೀನಿವಾಸ ಭಕ್ತರ ಬಳಿಗೆ ಪ ತೋರಯ್ಯ ನಿನ್ನ ದಯ ತೋಯಜಾಂಬಕನೆ ಅ.ಪ. ದುರುಳರ ತರಿವಂಥ ವರಚಕ್ರಧಾರಿ ಪರಮಾತ್ಮ ಪರಬೊಮ್ಮ ಪರರಿಗುಪಕಾರಿ1 ಅರಣ್ಯದಿ ಮೊರೆಯಿಟ್ಟು ಕರಿರಾಜಗೊಲಿದಿ ತರಳ ಪ್ರಹ್ಲಾದನ್ನ ವೈರಿಯ ಮುರದಿ 2 ವರ ಷೋಡಶ ಗಿರಿಯಲ್ಲಿ ನಿರುತ ನೀನಿರುವಿ ಹರಿದಾಸರು ಕರೆದರೆ ಎಲ್ಲಿದ್ದರೆ ಬರುವಿ3 ಅನಂತನಾಮನೆ ನಿನ್ನ ಅನಂತ ಸದ್ಗುಣವ ನೆನೆವರಿಗೊಲಿವಂಥ ಪವಮಾನನೀಶಾ 4 ಅಜಭವಾಧಿಪ ನೀನು ವಿಜಯಸಾರಥಿಯೇ ತ್ರಿಜಗವಂದಿತ ಈಶ ವಿಜಯವಿಠ್ಠಲನೇ 5
--------------
ವಿಜಯದಾಸ
ಬಾರವ್ವ ಮಹÀಭಾಗ್ಯದಭಿಮಾನಿ ಶ್ರೀಹರಿ ನಿಜರಾಣೀ ಪ ಸಾರಿದೆ ನಿನಪಾದನೀರಜಯುಗ ಮನೋ - ವಾರಿಜದಲಿ ನೀ ತೋರುತ ಲಕುಮಿ ಅ.ಪ ಅಖಿಲಾಗಮವಿನುತೆ ಎನ್ನಯ ಮಾತೆ ಸಕಲಸುರಗೀತೆ ನಿಖಿಲಾ ತ್ರಿಜಗದ್ವ್ಯಾಪ್ತೆ ಪ್ರಖ್ಯಾತೆ ಸಂಪತ್ಪ್ರದಾತೇ ನಖಮುಖ ಮಾತ್ರದಿ ವಿಖನಸಆಂಡದ ಅಖಿಲವ್ಯಾಪಾರವ ಸುಖದಲಿ ಮಾಡುವಿ 1 ಇಷ್ಟಾರ್ಥವ ಸಲಿಸಿ ಎನ್ನನು ಪೊರೆಯೇ ಕೊಲ್ಹಾಪುರÀ ಶಿರಿಯೆ ಅಷ್ಟ್ಟದಾರಿದ್ರÀ್ಯಗಳನು ನೀ ತರಿಯೆ ಈ ಕ್ಷಣ ಸುಖಸುರಿಯೇ ಅಷ್ಟಪÀÀದೋದರ ಅಷ್ಟಮೂರ್ತಿನಿನ್ನ ದೃಷ್ಟಿಯಿಂದ ಮಹಶ್ರೇಷ್ಟನಾಗಿಹನೇ 2 ಕ್ಷೀರಾವಾರಿಧಿಯೊಳು ಸಂಜಾತೆ ಮಾರನ್ನ ಮಾತೆ ಅ - ಪಾರಾಮಹಿಮಾಳೆ ಸುರಸನ್ನುತೆ ಜಗದೊಳಗೆ ಖ್ಯಾತೆ ವಾರವಾರಕೆ ದುರಿತಾರಿ ನಿನ್ನಯ ಪೂಜೆ ಚಾರುಮನದಿ ಮಾಳ್ಪೆ ಧೀರೆ ಉದಾರೆ 3 ವಾಸವಾಗೆನ್ನಾ ಮನೆಯೊಳಗಿನ್ನಾ ಪಾಲಿಸೆ ಇದನನ್ನಾ ವಾಸವಾದಿ ಸುರರಾಸೆಯ ಪೂರ್ತಿಸಿ ಈಶರ ಮಾಡಿದಂತೆ ಈ ಸಮಯದಿ ಎನ್ನ 4 ನಗೆಮೊಗ ಚೆನ್ನೆ ಸುಪ್ರಸನ್ನೆ ಸುರನಿಕರರನ್ನೆ ಮಗುವಿನ ಮಾತೆಂದು ನಗುತ ನೀ ಇನ್ನೆ ಬಾ ಬರುವದು ಘನ್ನೆ ನಗಹರ ಸುರಪನ ಮಗನನ ಸಖ ಗುರು ಜಗನ್ನಾಥ ವಿಠಲ ಸಮ್ಮೊಗವಾಗಿ ಬೇಗ ನೀ 5 ಶಿರಿದೇವಿ ನಿನ್ನ ಚರಣ ಸರಸಿಜಯುಗಕೆ ಶಿರದಿ ನಮಿಪೆ ಸತತ ಸರಸಿಜಾಂಬಕೆ ಸರಿಯಾರು ನಿನಗೀ ಸರಸಿಜಭವಾಂಡದೊಳು ಸgಸಿಜಾಕ್ಷಗೆ ದೇಶಕಾಲಗಳಿಂದ ಸರಿಯಾಗಿ ನಿತ್ಯದಲಿ ಪರಿಪರಿಸೇವಾದಿಂದ ಹರಿಯಾ ಮೆಚ್ಚಿಸಿ ಪರಮಾದರದಿಂದ ಪತಿಗನುಕೂಲ - ಪರಳಾಗಿ ಸೃಷ್ಟಿಗೆ ಮೂಲಕಾರಣಳೆನಿಸಿ ಪರಮೇಷ್ಟಿ ಮೊದಲಾದಾನಂತಜೀವರನ್ನ ಅರಿತು ಯೋಗ್ಯಾಯೋಗ್ಯತೆಯನ್ನನು - ಸರಿಸಿ ಸೃಜಿಪ ಶಕ್ತಿ ನಿನಗುಂಟು ನೀ “ಯಂ ಯಂ ಕಾಮಯೆ ತಂ ತಮುಗ್ರಂ ಕೃಣೋಮಿ” ಎಂತ ಶ್ರುತಿ ಸಾರುತಿದೆ ಶಿರಿ ನಿನ್ನ ಕಟಾಕ್ಷದಿ ಸಕಲೈಶ್ವರ್ಯಗಳು ಪರಿಪರಿ ವಿಧದಿಂದ ಒದಗುತಿಪ್ಪವು ಹರಿಕೃಪೆ ನಿನ್ನೊಳಗೆಂತಿಹುದೋ ಅರಿಯಾರು ಎಂದಿಗು ಬೊಮ್ಮಾದಿಸುರರು ನರರೇನು ಬಲ್ಲರಮ್ಮ ನಿನ್ನ ಮಹಿಮೆಯ ಶಿರಿಮಾನಿ ಎನ್ನ ನೀನು ಕರುಣದಿಂದಲಿ ನೋಡಿ ಹರಿಮೂರ್ತಿಯನ್ನೇ ತೋರೆ ಹರಿಣಲೋಚನೆ ಹರಿದಾಸಜನರೊಡೆಯ ಗುರುಜಗನ್ನಾಥವಿಠಲನ್ನ ಇರವು ತೋರಿಸಿ ಎನ್ನ ಪೊರೆಯಮ್ಮ 6
--------------
ಗುರುಜಗನ್ನಾಥದಾಸರು
ಬಾರೆ ದ್ರೌಪದಿ ಭಾಳ ಹರುಷದಿಂದ ಸುಂದರಿ ರಾಜ ಧರ್ಮರಾಯರಿದ್ದ ಹಸೆಗೆ ಒಯ್ಯಾರಿ ಪ ಅರಸುಧರ್ಮಜ ಭೀಮ ಪಾರ್ಥ ನಕುಲ ಸಾದೇವ ಸರಸವಾಡಿ ಕುಳಿತಾರೆ ಸಂತೋಷದಿಂದಲಿ 1 ಪುತ್ಥಳಿ ಚಂದ್ರಹಾರ ಪದಕವು ಆಣಿ ಮುತ್ತಿನ ಸರಗಳು ಕಟ್ಟಾಣಿ ಹೊಳೆಯುತ 2 ವಂಕಿ ನಾಗಮುರಿಗೆ ಸರಿಗೆ ಕಂಕಣ ದ್ವಾರ್ಯವು ಕುಂಕುಮ ಗಂಧ ಪರಿಮಳ ಅಲಂಕಾರವಾಗಿ 3 ಹೆರಳುಬಂಗಾರ ಚೌರಿ ಚಂದ್ರ ಗೊಂಡ್ಯ ರಾಗಟೆಯು ಅರಳು ಮಲ್ಲಿಗೆ ಪಾರಿಜಾತ ಮುಡಿಯಲ್ಲೊ ್ಹಳೆಯುತ 4 ಗೆಜ್ಜೆ ಅಡ್ಡಿಕೆ ವಜ್ರದೋಲೆ ಬುಗುಡಿ ಬುಲಾಕು ಮುದ್ದು ಮೋರೆಗೆ ಮುತ್ತುಕೆಂಪಿನ ಮುಕುರ್ಯ ಜಾಣೆ 5 ಜರದನಿರಿಗ್ವಜ್ಜರದÀ ಪಟ್ಟಿ ಥಳಕೆಂದ್ಹೊಳೆಯುತ ಚರಣದುಂಗುರ ಪೈಜಣ ರುಳಿಯು ಘಲುಘಲೆನ್ನುತ 6 ಕೋಮಲಾಂಗಿ ಬಂದು ಭೀಮೇಶಕೃಷ್ಣನ ತಂಗಿಭೀಮ ಧರ್ಮರ ಮುಂದೆ ಕುಳಿತಳು ಪಾರ್ಥನರ್ಧಾಂಗಿ7
--------------
ಹರಪನಹಳ್ಳಿಭೀಮವ್ವ
ಬಾರೆ ಪಾರ್ವತಿ ಸಾರೆ ಸುಖವ ತೋರೆ ನಿನ ದಯವ ಪ ಬಾರಿ ಬಾರಿಗು ಪ್ರಾರ್ಥಿಸುವೆನೆ ಸಾರಸಾಕ್ಷಿಯೆ ಸರ್ಪವೇಣಿಯೆ ಅ.ಪ ದಕ್ಷಕುವರಿಯೆ ಈಕ್ಷಿಸೆನ್ನನು- ಪೇಕ್ಷೆ ಮಾಡದಲೆ ಅಕ್ಷಿತ್ರಯನ ಸತಿಯೆ ಭಕ್ತರ ಕಷ್ಟ ಬಡಿಸುತಲಿ ಸೂಕ್ಷ್ಮ ಮತಿಯನಿತ್ತು ಕೃಷ್ಣನ ಸ್ತೋತ್ರಗಾನದಲಿ ಅ- ಪೇಕ್ಷೆಯೊದಗುವ ಮನವ ಪಾಲಿಸು ರಕ್ಷಿಸೀಗಲೆ ಭಕ್ತವತ್ಸಲೆ 1 ಮಂದಗಮನೆ ಮತ್ತೊಂದು ಪೇಳುವೆ ನಂದಿವಾಹನನಾ ಮುಂದೆ ಸ್ತುತಿಪ ಭಕ್ತವೃಂದ ವಿ- ದೆಂದು ಪೇಳಿದೆ ನಾ ಸುಂದರ ಶ್ರೀ ಹರಿಯ ಸೇವೆಗೆ ಪೊಂದಿಸೆನ್ನ ಮನ ಚಂದದಿಂದ ಪ್ರಾರ್ಥಿಸುವೆನೆ ಸುಂದರಾಂಗಿಯೆ ನಿನ್ನನನುದಿನ 2 ಕಮಲನೇತ್ರೆಯೆ ವಿಮಲ ಸದ್ಗುಣಗುಣಿಯೆ ಪಾರ್ವತಿ ಕಮಲಸಂಭವ ಭವಸುರಾರ್ಚಿತನ ಸ್ಮರಿಸುವ ಮತಿ ಹೃ- ತ್ಕಮಲದೊಳಗೆ ನಿಲಿಸುವಂತೆ ಮಾಡು ಸದ್ಗತಿ ಕಮಲನಾಭ ವಿಠ್ಠಲ ಕೊಡುವ ನೆನುತ ಕೀರುತಿ 3
--------------
ನಿಡಗುರುಕಿ ಜೀವೂಬಾಯಿ
ಬಾರೆ ಬೇಗನೆ ವಾರಿಜಾಮುಖಿ ಚಾರುವೇದಕೆ ನೀ ಬಾ ಬೇಗನೆ ಪ ಕನಕಾಂಬರವನುಟ್ಟು ‌ಘನಕಂಚುಕವ ತೊಟ್ಟು ಹಣೆಗೆ ತಿಲಕವಿಟ್ಟು ವನಜಾಜಿ ಮಲ್ಲಿಗೆಯಾ ಮುಡಿಯುತ ನೀ ಬೇಗನೆ ಬಾ 1 ಲುಲ್ಲ ಪೈಜಣದಿ ಘಿಲ್ಲು ಘಿಲುರೆನುತಲಿ ನಿಲ್ಲದೆ ಉಲ್ಲಾಸದೀಗ | ಬೇಗ ಫುಲ್ಲನಯನೆ ಬಾ 2 ಕಾಮನ ಶಿರೋಮಣಿ ಕಾಮನ ಕರುಣಿ ಶಾಮಸುಂದರನ ರಾಣಿ ನೀ ಬೇಗೆನ ಪ್ರೇಮದಿಂದಲಿ ಬಾ 3
--------------
ಶಾಮಸುಂದರ ವಿಠಲ
ಬಾರೆ ಭಾಗ್ಯದ ನಿಧಿಯೆ | ಬಾರೆ ಜಾನಕಿಯೆ ಪ ಚಕೋರ ಸುಖಾಗ್ರಣೆ ಸೇರಿದೆ ತವಪದ ವಾರಿಜ ನಿಲಯೆ ಅ.ಪ ಕೃತಿ ಶಾಂತಿ ಜಯ ಮಾಯೆ ಕ್ಷಿತಿಜಕೋಮಲ ಕಾಯೆ ಶಿತಕಳೆವರ ವಿಧಿಶತಕ್ರತು ಸುಮನಸ ತತಿನುತೆ ಪಾವನೆ ರತಿಪತಿ ತಾಯೆ 1 ಮಂಗಳೆ ಮುದ ಭರಿತೆ ಇಂಗಡಲಜೆ ಕೃಪಾಂಗಿಯೆ ಎನ್ನಂತ ಮಾನವ ಸಿಂಗನ ತೋರೆ 2 ಶಾಮಸುಂದರ ರಾಣಿ ವಾಮಾಕ್ಷಿ ಕಾಲ್ಯಾಣಿ ಕಾಮಿನಿ ಮಣಿ ಸತ್ಯಭಾಮೆ ರುಕ್ಮಿಣಿ ಗೋಮಿನಿ ರಮೆ ಶುಭನಾಮ ಲಲಾಮೆ 3
--------------
ಶಾಮಸುಂದರ ವಿಠಲ
ಬಾರೆ ಸಖಿ ಪೋಗಿ ರಾಸ ಕ್ರೀಡೆಯಾಡುವ ಪ ಸಾರಸಾಕ್ಷ ಕೃಷ್ಣನು ತಾ ಕೊಳಲನೂದುವ ಅ.ಪ ಜಾರನೆಂದು ಸಣ್ಣಮಾತನಾಡಿದ್ದಾಯಿತು ಚೋರನೆಂದು ಬಹಳ ದೂರು ಮಾಡಿದ್ದಾಯಿತು ಮೂರು ನಿಮಿಷ ಅವನ ಮರೆಯಲಾಗದಾಯಿತು ಬೀರುತಿರುವ ಮೋಹಜಾಲ ಸಡಲದಾಯಿತು 1 ಯಾವನೀತನೆಂದು ಚಿಂತೆ ಮಾಡಿದ್ದಾಯಿತು ಗೋವಳನಿವನಲ್ಲವೆಂದು ನಿರ್ಧರಾಯಿತು ಯಾವನಾದರೇನು ಇವನ ಕ್ಷಣವು ಕಾಣದೆ ಜೀವನ ಕಳೆಯುವುದೆ ದೊಡ್ಡ ಭಾರವಾಯಿತು 2 ಮಂದಹಾಸದಿಂದ ಸಕಲ ಜಗವ ಬೆಳಗುವ ಚಂದ್ರನು ತಾನಿವನ ನೋಡಿ ಬಹಳ ನಾಚುವ ಸಾಂದ್ರವಾಯಿತಂತರಿಕ್ಷ ಮಧುರ ನಾದದಿ ಮಲಯ ಮಾರುತ ತಾ ತಲೆಯನಾಡುವ 3 ನಾದದ ಸುಧೆ ಸಾಗರದಲಿ ತೇಲುವಂತಿದೆ ಮಾಧವ ತಾ ಸುಧೆಯ ರಸವನೆರಚುವಂತಿದೆ ಬಾಧಿಸುತಿಹ ಭವದ ತಾಪವಡಗಿದಂತಿದೆ ಮಾದರಿಫಲ ರಾಸಕ್ರೀಡೆ ತೋರುವಂತಿದೆ 4 ಸಕಲ ಲೋಕನಾಥನೀತನೆಂದು ತಿಳಿಯಿತು ಸಕಲವನರ್ಪಿಸುವುದೊಂದೆ ಮಾರ್ಗ ಉಳಿಯಿತು ಲಕುಮಿ ಮುರುಳಿ ರೂಪದಲ್ಲಿ ಇಹುದು ಹೊಳೆಯಿತು ಭಕುತಿ ಹರಿದು ಎನ್ನ ವiನ ಪ್ರಸನ್ನವಾಯಿತು 5
--------------
ವಿದ್ಯಾಪ್ರಸನ್ನತೀರ್ಥರು