ಒಟ್ಟು 1366 ಕಡೆಗಳಲ್ಲಿ , 92 ದಾಸರು , 924 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಲ್ಲಣಿಸದಿರು ಕಂಡ್ಯ ತಾಳು ಮನವೆ ಪ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ಅ ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆಕಟ್ಟೆಯನು ಕಟ್ಟಿ ನೀರೆರೆದವರು ಯಾರೊಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲುಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ 1 ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲಅಡಿಗಡಿಗೆ ಆಹಾರವಿತ್ತವರು ಯಾರೊ ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ 2 ನವಿಲಿಗೆ ಚಿತ್ರ ಬರೆದವರು ಯಾರುಪವಳದ ಲತೆಗೆ ಕೆಂಪಿಟ್ಟವರು ಯಾರುಸವಿಮಾತಿನರಗಿಳಿಗೆ ಹಸುರು ಬರೆದವರು ಯಾರುಅವನೆ ಸಲಹುವನು ಇದಕೆ ಸಂಶಯವಿಲ್ಲ3 ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲಅಲ್ಲಲ್ಲಿಗಾಹಾರ ತಂದೀವರಾರುಬಲ್ಲಿದನು ಕಾಗಿನೆಲೆಯಾದಿಕೇಶವರಾಯಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ 4
--------------
ಕನಕದಾಸ
ತವರು ಮನೆಯು ನನ್ನ ಸುವಿದ್ಯಪುರಲ್ಯದೆ ಸಾವಿರಕೊಬ್ಬಗೆ ದೋರುತದೆ ಧ್ರುವ ಸಾವಿರಕೊಬ್ಬನೆ ತಾ ಸುದೇವನೆ ಬಲ್ಲ ಭಾವಿಸದಲ್ಲದೆ ತಿಳಿಯುವದಲ್ಲ ಅವಿದ್ಯಪುರ ದಾಟ, ಮಂದಾಕ್ಕಾಗಲು ಎಲ್ಲ ಆವಾಗ ತಿಳಿವುದು ಹೇಳಿದ ಸೊಲ್ಲ 1 ಸಾವಿರ ತೆನೆಯಲೊಪ್ಪುತದೆ ಒಳಕೋಟ ಠವಿಠವಿಸುತದೆ ನೋಡಿ ಮನಮುಟ್ಟಿ ಅವ್ವ ಅಪ್ಪನೇ ನಮ್ಮ ಇಹಸ್ಥಾನವು ಘಟ್ಟಿ ದೇವಾಧಿ ದೇವನೊಬ್ಬನೆ ಜಗಜಟ್ಟಿ 2 ಬಲು ಅಭೇದ್ಯಸ್ಥಳ ತಿಳಿಯದಿನ್ನೊಬ್ಬರಿಗೆ ನೆಲೆವಂತರಿಗೆ ತಾನು ತಿಳಿವದು ಬ್ಯಾಗೆ ತುಂಬಿ ಥಳಗುಟ್ಟಿ ಹೊಳವ್ಹಾಂಗೆ ಬಲಗೊಂಡು ಕೇಳಿ ಶ್ರೀಸದ್ಗುರುವಿಗೆ 3 ಅಣ್ಣನೆಂಬಾತ್ಹಾನೆ ಅನಂದದಲ್ಹಾನೆ ನೆನೆಪಿಗೊಮ್ಮೆ ಬಂದು ಸುಳವುತ್ಹಾನೆ ಕಣ್ಣೆಲಿ ಕಟ್ಯಾನೆ ತಮ್ಮನೆಂಬತ್ಹಾನೆ ಕ್ಷಣಕೊಮ್ಮೆ ಹೊಳೆವುವಾನೆ4 ಅಕ್ಕನೆಂಬಾಕಿ ತಾ ಸಖರಿ ಅಗ್ಹಾಳೆ ಅಖರದಲೆವ್ವ ಈ ಮಾತು ಕೇಳೆ ಪ್ರಖ್ಯಾತದಲಿ ಪ್ರೀತಿಮಾಡುವ ತಂಗ್ಹ್ಯಾಳೆ ಸುಖ ಸುರುತ್ಹಾಳೆ ಇರುಳು ಹಗಲು 5 ಅತ್ತಿಗೆ ನಾದುನಿ ಭಾವ ಮೈದುನರೆಲ್ಲ ಅಂತ್ಯಕವಾಗ್ಹ್ಯಾರೆ ಮನಿಯೊಳಗೆಲ್ಲ ಸುತ್ತೇಳುವ ಬಳಗ ಉತ್ತುಮರೆನಗೆಲ್ಲ ಹಿತದೋರುತಾರವ್ವ ಸರ್ವಾಪ್ತರೆಲ್ಲ 6 ಸರ್ವಾಪ್ತವೆಂಬುದು ಸರ್ವೇಶನೆ ತಾನು ಸರ್ವದಾ ಎನ್ನೊಳು ತಾ ಕಾಮಧೇನು ಪರ್ವಕಾಲದ ಬಹಳ ಏನೆಂದ್ದೇಳಲಿ ನಾನು ಸರ್ವಾರ್ಥ ಕೊಡುತ್ಹಾನೆ ಸರ್ವಾತ್ಮ ತಾನು 7 ಅವ್ವ ನಮ್ಮಪ್ಪಗೆ ಸರಿ ಇಲ್ಲ ಜಗದೊಳು ಆವ ಕಾಲಕೆ ತಾ ಇವರ ಮೇಲು ಇವರೆಂಬುದು ಒಂದೆ ಮಾತಿನ ಸ್ವಕೀಲು ಸವಿಸುಖಬಲ್ಲರು ಅನುಭವಿಗಳು 8 ತೌರಮನೆಂಬುದು ಪ್ರತ್ಯೇಕಾ ತಾನಿಲ್ಲ ಭಾವಾರ್ಥದ ಮಾತು ಕೇಳಿರೆಲ್ಲ ಅವಗುಣನೆ ಬಿಟ್ಟು ಕೇಳಿ ಸವಿಯ ಸೊಲ್ಲ ಪೂರ್ವಿಕರಿಗಿದೆ ಸಾರವೆಲ್ಲ 9 ಸುದ್ದಿ ಹೇಳಿ ಕಳುಹುಲಿಕ್ಕೆ ಈ ಸಾಧನ ಇದುವೆ ಅಯಿತು ತವರ ಮನಿ ಬುದ್ಧಿವಂತನೆಬಲ್ಲ ಲಕ್ಷಕೊಬ್ಬ ಜ್ಞಾನಿ ಸಿದ್ಧಿದರಿಡುವದು ಸದ್ಗುರು ಪ್ರಾರ್ಥನಿ 10 ಬಳಗದೊಳು ಕೂಡಿ ಒಳಿಥಾಗ್ಯಾಯಿತು ಎನಗೆ ಒಳ ಹೊರಗೆ ಸುಖ ಎದುರಿಟ್ಟತೀಗ ಕುಲಕೋಟಿ ಬಳಗ ಸದ್ಗುರು ಪಾದವ್ಯನಗೆ ಸಲಹುತಾನೆ ಸ್ವಾಮಿ ಮಹಿಪತಿಗೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾಂಡವಾಡು-ತಾಂಡವಾಡು ತಾಂಡವಾಡು-ಶ್ರೀ ಕೃಷ್ಣವಿಠಲ ಪ ತುಂಡುಮಾಡು ಭಂಡ ಭವವ ಅ.ಪ. ಇಂದು ಒಂದು ಅರಿಯೆ ಇಂದಿರೇಶ ನಂದದಿಂದ ಮುಂದೆ ಬಂದು ಛಂದ ದಿಂದ 1 ಬಾಗಿ ಬಾಗುವೆ ಯಾಗ _ ಯೋಗ _ ಭೋಗ ಮುಕ್ತಿ ಎಲ್ಲ ನೀನೆ ಬೇಗ ಸಾಗಿ2 ವಾಸುದೇವ _ ಶ್ರೀ ಕೃಷ್ಣವಿಠ್ಠಲ ನಿತ್ಯ ದೋಷಿಯಾದರೇನು ನಾನು ಶ್ವಾಸ ಶಿಷ್ಯ _ ನಿತ್ಯಭೃತ್ಯ 3
--------------
ಕೃಷ್ಣವಿಠಲದಾಸರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಿಳಿದು ನೋಡಿ ತನುವಿನೊಳು ತಮ್ಮ ನಿಜಖೂನ ಸುಳುಹು ದೋರಿಕುಡುವ ನೋಡಿ ನಿಜಾನಂದ ಘನ ಧ್ರುವ ತಮ್ಮ ಶುದ್ಧಿ ತಮಗಿಲ್ಲವೊ ಹೆಮ್ಮೆ ಬಹಳ ಘಮ್ಮ ಆದರೆ ಎಲ್ಲ ನೋಡಿ ಹೊಕ್ಕು ಮೃಗಜಲ ನಮ್ಮ ನಿಮ್ಮದೆಂದು ಹೊಡೆದಾಡಿ ಬಿತ್ತು ಬೀಳ ಸಮ್ಯಗ್ ಜ್ಞಾನದಿಂದ ತಿಳಿದವನೆ ವಿರಳ 1 ತನ್ನ ತಾ ತಿಳಿದವಗೇನು ಭಿನ್ನಭೇದವಿಲ್ಲ ಉನ್ಮನವಾಗಿ ಪೂರ್ಣ ತಿಳಿದವನೆ ಬಲ್ಲ ಧನ್ಯವಾದ ಮಹಿಮರಿನ್ನು ಮನಿಮನಿಗೆ ಇಲ್ಲ ಕಣ್ಣಾರೆ ಕಾಣುತಿಹ್ಯ ಗುಪ್ತಗುಹ್ಯವೆಲ್ಲ 2 ತಿಳುಹದೋರಿಕೊಟ್ಟ ಗುರು ಎನ್ನೊಳÀಗೆ ಪೂರ್ಣ ಹೊಳೆಹುತಿಹ್ಯಾನಂದ ಘನಸದ್ಗುರು ಪೂರ್ಣ ಥಳಥಳಿಸುತಿಹದು ಸದ್ಗತಿ ಸಾಧನ ಕಳೆದ ಮಹಿಪತಿ ನೋಡಿ ಜನನ ಮರಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿದು ವಿಚಾರಿಸು ವಿಶ್ವದಲ್ಲಿ ಹಲವು ಜೀವಿಗಳೊಂದೆ ಪ್ರಕಾರ ಚರಿಸುವದು ಪ ಇರವು ನೊಣ ಪೋದರೆ ಏನಾದರೂ ಕ್ಲೇಶ ಬರುವುದೇ ಪ್ರತ್ಯಕ್ಷ ನೋಡಿದರು ಭರದಿಂದ ಆಲಿಸು ದೇಹ ಮಾತುರ ಬ್ಯಾರೆ ಇರುವದಲ್ಲದೆ ಒಳಗೆ ಚೇತನಾಡುವದೊಂದೆ 1 ಕೂಡಿಕೊಂಡವು ತಮ್ಮತಮ್ಮೊಳಗೆ ಭೂತಗಳು ಆಡಲೇನದು ಪೂರ್ವದ ನಿರ್ಮಾಣ ನಾಡೊಳಾಗಿದ್ದನಿತೆ ಸಮ್ಮಂಧವಲ್ಲದೆ ಬೀಡು ತೊರದಾಮ್ಯಲೆ ಬಿಂಕವೆತ್ತಣದೊ 2 ಹರಿಮಾಯದಿಂದಲಿ ನಾನು ನನ್ನದು ಎಂಬ ಗರುವಿಕೆ ಪುಟ್ಟುವದು ಮೋಹ ಪೆಚ್ಚಿ ನಿರಯದೊಳಿಳಿಯದೆ ವಿಜಯವಿಠ್ಠಲನ ಸ್ಮರಣೆಯಲಿ ಕುಣಿದಾಡು ಎಲ್ಲ ಸಮನ ನೋಡು3
--------------
ವಿಜಯದಾಸ
ತಿಳಿಯೊ ಮನವೆ ನಿಜವಸ್ತು ಖೂನ ಅಳಿಯೊ ದೇಹ ನಾನೆಂಬುವಭಿಮಾನ ಹೊಳಿಯೊ ಸದ್ಗುರು ಪಾದದಲಿ ನೀ ಪೂರ್ಣ 1 ಹುಟ್ಟಿ ಬಂದೇನು ಪುಣ್ಯ ಪುರುಷಾರ್ಥ ಘಟ್ಟಿಗೊಳ್ಳದೆ ನಿಜ ಸುಹಿತಾರ್ಥ ನಿಷ್ಠೆ ಹಿಡಿಯದನ ಜನ್ಮ ವ್ಯರ್ಥ ಮುಟ್ಟಿ ತೋರುವ ಶ್ರೀ ಗುರು ಪರಮಾರ್ಥ 2 ಗುರ್ತು ತಿಳಿಯೊ ಜನುಮಕೆ ಬಂದ ಮ್ಯಾಲೆ ಮರೆತು ಮೈಮರೆವದೇನು ತಾ ಮೇಲೆ ಅರ್ತು ನಡೆವದು ನಿನಗೇನು ಸೋಲು ಕರ್ತು ಸದ್ಗುರು ಸ್ಮರಿಸೋ ಆವಾಗಲೂ 3 ಎಲ್ಲಾರಂಥ ತಾನಲ್ಲೊ ಗುರುನಾಥ ಸುಲ್ಲಭದಿಂದ ದೋರುವ ಸುಪಥ ಅಲ್ಲೆ ದೋರ್ವದು ಸಕಲ ಹಿತಾರ್ಥ ಬಲ್ಲ ಮಹಿಮರೆ ತಿಳಿವರೀ ಮಾತ 4 ಭಾಸುತದೆ ಭಾಸ್ಕರ ಕೋಟಿ ಕಿರಣ ಲೇಸಾಗಿ ಹೋಗೊ ಗುರುವಿಗೆ ಶರಣ ದಾಸಮಹಿಪತಿ ಸ್ವಾಮಿ ದೀನೋದ್ಧಾರಣ ಭಾಸಿ ಪಾಲಿಸುವ ತಾ ಸುಕರಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತುಂಬಿತು ಬೆಳೆದಿಂಗಳು-ಈ ವನದೊಳುತುಂಬಿತು ಬೆಳೆದಿಂಗಳು ಪ ತುಂಬಿತು ಬೆಳೆದಿಂಗಳೀವನದೊಳಗೆಲ್ಲಅಂಬುಜನಾಥನು ಬಾರ ಕಾಣಕ್ಕ ಅ.ಪ. ಮಾಗಿ ಹೋಗಿ ವಸಂತವು ಬರುತಿದೆಕೋಗಿಲೆ ತುಂಬಿಲ್ಲಿ ಕೂಗುತಿದೆಆಗಲೆ ಎಳೆಮಾವು ತಳಿರೇಳುತಲಿದೆನಾಗಶಯನ ಕೃಷ್ಣ ಬಾರ ಕಾಣಕ್ಕ1 ಕಟ್ಟಿದ್ದ ಬಿಳಿಯೆಲೆ ತೊಟ್ಟಾರುತಲಿದೆಪಟ್ಲ ಜಾಜಿಯ ಮೊಗ್ಗು ಅರಳುತಿದೆಬಟ್ಟೆ ಬಟ್ಟೆಲಿ ನೋಡಿ ಕಣ್ಣು ಝುಮ್ಮಿಟ್ಟಿತುಧಿಟ್ಟತನದ ರಂಗ ಬಾರ ಕಾಣಕ್ಕ 2 ಕಾದ ನೀರು ಎಲ್ಲ ಆರಿ ಹೋಗುತಲಿದೆಕಾಯ್ದ ಮಲ್ಲಿಗೆ ಹೂವು ಬಾಡುತಿದೆಮದನನ ಬಾಧೆಯು ಬಹಳವಾಗಿದೆ ಈಗಮದನನೈಯನು ಕೃಷ್ಣ ಬಾರ ಕಾಣಕ್ಕ3 ಅಡವಿಲಿ ಕೆರೆಕಟ್ಟೆ ಕುಡಿವೋರಿಲ್ಲದೆ ಬತ್ತಿನಡೆವೋರಿಲ್ಲದೆ ದಾರಿ ಹಸಗೆಟ್ಟಿತುಕಾಡಮಲ್ಲಿಗೆ ಹೂವ ಕುಯ್ದು ಮುಡಿವರಿಲ್ಲನೋಡದೆ ಎನ್ನ ಜೀವ ಹಸಗೆಟ್ಟಿತಮ್ಮ 4 ಹಾಸಿದ್ಹಾಸಿಗೆ ಮಂಚ ಹಸಗೆಟ್ಹೋಗುತಿದೆಪೂಸಿದ ಶ್ರೀಗಂಧ ಬೆವರುತಿದೆಲೇಸಾದ ನಮ್ಮೆದೆ ಮಿಂಚೇರುತಲಿದೆವಾಸುದೇವನು ಕೃಷ್ಣ ಬಾರಕಾಣಕ್ಕ 5 ಕಾಯ ಹೊಳವು ಮಾಡಿ ಕುಚವ ಸೋರೆಯಮಾಡಿಮನವೆಂಬ ತಂತಿಯ ಹೂಡಿಕೊಂಡುಎರಡು ಕಂಗಳನ್ನು ಎರಡು ತಾಳವÀ ಮಾಡಿಮೇಳಕೊಪ್ಪುವೆ ರಂಗ ಬಾರ ಕಾಣಕ್ಕ6 ಒಳದೊಡೆ ನಡುಗಿತೆ, ನೆರಿಯು ಹಾರುತಲಿವೆಕಳಕಳಿಸುತಲಿದೆ ಕಳವಳವುಪುಳಕವಾಗುತಲಿದೆ ಕಳೆಯುಗುಂದುತಲಿದೆನಳಿನಾಭನು ಕೃಷ್ಣ ಬಾರ ಕಾಣಕ್ಕ7
--------------
ವ್ಯಾಸರಾಯರು
ತುಳಸಿ ಮಧ್ಯದಿ ಇರುವ ಕೃಷ್ಣನಬಳಸಿ ನೋಡುವ ಬನ್ನಿರೆ ಪ ಗೊಲ್ಲ ಸತಿಯರ ಗಲ್ಲ ಪಿಡಿದುಎಲ್ಲ ನಟನೆಯ ತೋರುವಫುಲ್ಲ ನಾಭನಮೆಲ್ಲ ಮೆಲ್ಲನೆಎಲ್ಲ ಹೆಂಗಳು ನೋಡಿರೆ 1 ಕಾಮಿ ಜನರಿಗೆ ಕಾಮಿತಾರ್ಥವಪ್ರೇಮದಿಂದಲಿ ಕೊಡುತಿಹಕಾಮನೈಯನ ಚರಣ ಕಮಲವನಂಬಿ ಬದುಕುವ ಬನ್ನಿರೆ2 ಅಂಗರಾಗ ಶ್ರೀರಂಗ ಮಂಗಳಸಿಂಗರದಿ ತಾ ನಿಂತಿಹಮಂಗಳಾಂಗನ ಮಂಗಳಾರತಿಎಲ್ಲ ಹೆಂಗಳು ನೋಡಿರೆ 3 ಒಂದು ಕೈಯಲಿ ಗಂಧಪುಷ್ಪ ಮ-ತ್ತೊಂದು ಕೈಯಲಿ ರಂಗನುಮಂದಹಾಸದಿ ಇಂದುಮುಖಿಯರಿ-ಗ್ಹೊಂದಿಸುವನತಿ ಚಂದದಿ 4 ಶುಕ್ರವಾರದಿ ಪೂಜೆಗೊಂಬುವಚಕ್ರಧರ ಶ್ರೀಕೃಷ್ಣನು ನಕ್ರಹರ ತ್ರಿವಿಕ್ರಮನು ಮನ-ವಾಕ್ರಮಿಸಿ ಸುಖ ಕೊಡುತಿಹ 5
--------------
ವ್ಯಾಸರಾಯರು
ತೆರಳೆ ನೀ ಮಧುರೆಗೆ ಗೋಕುಲದಲಿ ನಾವುಇರಲಾರೆ ಇರಲಾರೆವೋ ಗೋಪಾಲ ಪ ತರಳತನದಿ ನೀ ಆಡಿದ ಆಟಗಳ ಸ್ಮರಿಸಿಸ್ಮರಿಸಿ ನಾವು ಮರುಗುವುದೆಲೋ ದೇವಅ.ಪ. ವ್ರಜದ ಒಳಗೆ ನೀನು ಇದ್ದದ್ದು ಕೇಳಿಭರದಿ ಪೂತನಿಯ ಕಳುಹಿ ಕೊಟ್ಟರೆತೊಡೆಯ ಒಳಗೆ ಇಟ್ಟು ಸ್ತನಕೊಡುತಿರಲವಳಹುಲಿಯಂತೆ ಹೀರಿ ಹಿಪ್ಪೆಯಮಾಡಿದೆಯೊ ದೇವ ತೃಣದ ಅಸುರನ ಕೊರಳಮಿಸುಗುತ್ತ ಅವನ ಕೆಡಹಿದಿಭರದಿ ಬಂಡಿಯ ಒದ್ದು ಶಕಟನ ಪುಡಿಯಮಾಡಿದ ಪರಮ ಪುರುಷನೆ 1 ಕೊಲ್ಲಕಂಸನು ಭಾಳ ಯೋಚಿಸಿ ಮನದಿಕೊಲ್ಲಬೇಕೆಂದೆನುತ ಸೂಚಿಸೆಬಿಲ್ಲನೆ ಮುರಿದು ಆ ನಲ್ಲೆಯ ಕರಪಿಡಿದುಒಳ್ಳೆ ಪುರಕೆ ಹೋಗಿ ಎಲ್ಲ ಕಾರ್ಯವ ನಡೆಸಿಮೆಲ್ಲನೆ ಏಕಾಂತ ಗೃಹದಲ್ಲಿಸೊಲ್ಲ ಕೇಳುತ ಅವನನು ಕೋಪಿಸೆಅಲ್ಲಿಯನುಜನ ತರಿದು ಅವನಕೊಲ್ಲ ಕಳುಹಿದ ಕಠಿನ ಹೃದಯನೆ2 ಎಲ್ಲ ಹಿಂದಿನ ಸುದ್ದಿ ಬಲ್ಲೆವೊ ನಾವುಇಲ್ಲಿ ಮರೆತೀಯೆಂದು ತಿಳಿದೆವೋಬಲ್ಲ ಅಕ್ರೂರನು ಬಂದು ಇಲ್ಲಿಗೆ ನಮ್ಮಇಲ್ಲದ ಮಾತ ಕೇಳಿ ಮೆಲ್ಲನೆ ಕರೆದೊಯ್ದಅಲ್ಲಿ ರಥವನೆ ಕಾಣುತ ಎದೆಝಲ್ಲೆನಿಸಿ ನಡುಗಿದೆವೊಪುಲ್ಲನಾಭನೆ ಜ್ಞಾನ ಭಕುತಿ ನ-ಮ್ಮೆಲ್ಲರಿಗೆ ನೀನಿತ್ತು ಪೋಗೆಲೊ 3 ಹೆಂಡತಿಯ ಕೂಡಿ ಕದನ ಮಾಡಿಮುಂದೆ ಮೂವರು ತೆರಳಿದಿರಿಬಂದು ಋಷಿಯಾಶ್ರಮದಿ ನಿಂತು ಗ್ರಾಸವ ಬೇಡೆಮಂದಗಮನೆ ನೋಡಿ ಚೆಂದಾಯಿ -ತೆಂದೆ ತಂದು ಕಲಶೋದಕವ ಚೆಲ್ಲಲುಕಂದರುಗಳು ನೀವಾದಿರೊ ತಂದ ಹಲಸಿನ ದೊನ್ನೆ ಪಾಲನುಚೆಂದದಿಂದಲಿ ಕುಡಿದ ದೇವನೆ4 ಮಂದಗಮನೇರಿಂದ ನಿಮಗೆ ಮತ್ತೆಒಂದುಪಕಾರವ ಕಾಣೆವೊಚೆಂದಾಗಿ ಮಾನದಿ ಮಂದಿರದಲಿ ಇರದೆಗಂಡರ ಬಿಟ್ಟು ನಿಮ್ಹಿಂದೆ ತಿರುಗಿದೆವೊಇಂದಿರೆಯು ಕಾರಣಗಳಲ್ಲವೊನಿಂಗೆ ನೀನೆ ಸ್ವರಮಣನಂಮಂಗಳಾಂಗನೆ ಮಾರಜನಕನೆರಂಗವಿಠಲನೆ ರಾಜೀವಾಕ್ಷನೆ5
--------------
ಶ್ರೀಪಾದರಾಜರು
ತೇಜಿಯೇರಿ ಮೆರೆದು ಬಂದ ರಾಜಬೀದಿಯೊಳಗಿಂದ ಕಸ್ತೂರಿ ರಂಗ ಪ. ಸುತ್ತಮುತ್ತ ಸಾವಿರಾರು ಸಾಲುದೀವಟಿಗೆ ಹತ್ತುದಿಕ್ಕಿಲಿ ಬೆಳಗುತಿಹ ಹಗಲುಬತ್ತಿಗಳು ಇತ್ತೆರಪು ಭೂಸುರರು ಸಾಲುಗಟ್ಟಿ ನಿಂತಿರಲು ಮತ್ತೆ ಸಭಾದಿಂದ ತೇಜಿ ಮೆಲ್ಲನೆ ನಡೆಸುತ್ತ ಜಾಣ1 ತಾಳ ಶಂಖ ಭೇರಿ ತಮ್ಮಟೆ ತಂಬೂರಿ ಮೊದಲಾದ ಮೇಲು ಪಂಚಕಂಗಳೆಲ್ಲ[ಮಿಗೆ] ಪೊಗಳಲು ಗಾಳಿ ಗೋಪುರದ ಮುಂದೆ ರಾಯಬಿಡದಂತೆ ಸುತ್ತ ಧೂಳುಗಳೆಬ್ಬಿಸಿ [ವೈಹಾಳಿ] ನಿಕ್ಕುತ ಜಾಣ 2 ಮುತ್ತಿನ ತುರಾಯಿ ಅಂಗಿ ಮುಂಡಾಸು ತತ್ಥಳಿಪ ವಜ್ರಕೆಂಪಿನ ತಾಳಿ ಚೌಕಳಿ ಮುತ್ತಿನ ಕುಂಡಲವಿಟ್ಟು ಮೋಹಿಸುತ ಬೀದಿಯೊಳು ಕತ್ತಿಯ ಉಡಿಯಲ್ಲಿ ಕಟ್ಟಿ ಕೈಯಲಿ [ತೇಜಿಯ] ಪಿಡಿದು 3 ರಂಭೆ ಮೊದಲಾದ ದೇವರಮಣಿಯರು ಕುಂಭದ ಆರತಿಯೆತ್ತಿ ಕೂಡಿ ಪಾಡಲು ಶಂಭು ಮುಖ್ಯ ನಿರ್ಜರರೆಲ್ಲ ಸ್ವಾಮಿ ಪರಾಕೆಂದೆನುತ ಅಂಬುಜಭವಾದಿಗಳ ಆಳಿದ ಶ್ರೀರಂಗಧಾಮ 4 ವೇದಘೋಷದಿಂದ ವಿಪ್ರರು ಸ್ತುತಿಸಲು ಮೋದದಿಂದ ಗಾಯಕರು ಹಾಡಿ ಪಾಡಲು ಹಾದಿ ಬೀದಿಯಲಿ ನಿಂತು ಸಜ್ಜನರಿಗೆಲ್ಲ ದೇವ ಆದರದಿಂದಿಷ್ಟಾರ್ಥವಿತ್ತು ಮೋದದಿಂದ ಮನ್ನಿಸುವ 5 ಹಚ್ಚನೆ ಹೆಸರುಬೇಳೆ ಹಾಲುಕೆನೆಗಳು ಮುಚ್ಚಿತಂದ ಕೆನೆಮೊಸರು ಮೀಸಲು ಬೆಣ್ಣೆಯು ಅಚ್ಚ ತುಪ್ಪದಿ ಪಕ್ವವಾದ ಅತಿರಸ ಹುಗ್ಗಿಗಳು ಮೆಚ್ಚಿವುಂಡು ಪಾನಕ ನೀರುಮಜ್ಜಿಗೆಗಳನೆ ಕುಡಿದು 6 ಸಣ್ಣಮುತ್ತು [ತೆತ್ತಿಸಿದ] ಸಕಲಾತಿ ಗೊಂಡ್ಯ ಹೊನ್ನ [ತೆತ್ತಿಸಿದ ಹೊಸ] ಹೊಳೆವ ಸೊಬಗಿನ ಉನ್ನಂತ ಗುಣರಾಯ ಉತ್ತಮರಾಜಾಶ್ವವೇರಿ ಎನ್ನ ಹಯವದನ ರಂಗ ಎಲ್ಲರಿಗಿಷ್ಟಾರ್ಥಕೊಡುವ 7
--------------
ವಾದಿರಾಜ
ತೊರೆದು ಜೀವಿಸಬಹುದೆ ಗುರು ನಿಮ್ಮ ಚರಣವ ಪ. ಬರಿಯ ಮಾತಲ್ಲವಿದು ಜರಿದು ನುಡಿವೆ ಕರಕರೆಗೊಳಿಸದೆ ಕಾಯಬೇಕಿನ್ನು ಗುರು ಅ.ಪ. ಅತಿಶಯ ಮಹಿಮೆಯ ಹಿತದಿಂದ ತೋರಿದ ಪಿತನಂತೆ ಪೊರೆಯುವಚ್ಯುತ ದೂರ ಪದವೀವ ಮತಿವಂತರೆ ನಿಮ್ಮ ಕ್ಷಿತಿಯೊಳಗಲಲಾರೆ1 ನೀತಿಯ ಬೋಧಿಪ ಖ್ಯಾತಿ ಶ್ರೀ ಗುರುಗಳೆ ದೂತರಾದವರನು ಈ ತೆರ ಮಾಳ್ಪರೆ ಪಾತಕರಹಿತರೆ ಪ್ರೀತಿಯ ತೋರಿರಿ2 ಬಂದಿರಿ ಮಮತೆಲಿ ಕಂದರಂದದಿ ತಿಳಿದು ಇಂದಿರೇಶನ ತತ್ವಾವೃಂದಗಳರುಹುತ ಮಂದಿಗಳಿಗೆ ಆನಂದವನೆ ತೋರ್ದಿರಿ 3 ಎಲ್ಲಿ ಭಕ್ತರು ಕರಿಯೆ ಅಲ್ಲಿಗೆ ಬರುವ ಗುರುವೆ ಇಲ್ಲಿ ನಿಮ್ಮ ಹೊರತು ಇಲ್ಲವು ಇನ್ನೊಂದು ಒಲ್ಲೆನು ಈ ಜಗದ ನಿಲ್ಲದ ವಸ್ತುಗಳು 4 ಗೋಪಾಲಕೃಷ್ಣವಿಠ್ಠಲ ತಾ ಪರಿಪರಿ ಲೀಲ ವ್ಯಾಪ್ತ ಶ್ರೀ ಗುರು ಸಹ ಶ್ರೀಪತಿ ಹೃದಯದಿ ತೋರ್ಪಂತೆ ಕೃಪೆ ಮಾಡಿ ಕಾಪಾಡಬೇಕೊ ದೊರಿ 5
--------------
ಅಂಬಾಬಾಯಿ
ತ್ರಾಹಿ ತ್ರಾಹಿ ಎನ್ನಿರೊ ತ್ರೈಲೋಕ್ಯದೊಡಿಯಗೆ ತ್ರಾಹಿ ತ್ರಾಹಿ ಎನ್ನಿರೊ ತಾರಕ ಬ್ರಹ್ಮಗೆ ಧ್ರುವ ಕಾಮ ಕ್ರೋಧ ಸುಟ್ಟು ಹೋಳಿಯಾಡುವ ಬನ್ನಿರೊ ಪ್ರೇಮ ಪ್ರೀತಿಯಿಂದ ಕುಣಿದಾಡುವ ಬನ್ನಿರೊ 1 ಭೇದವಳಿದು ಸಾಧು ಜನರ ಕೂಡಿಕೊಂಬ ಬನ್ನಿರೊ ಮದ ಮತ್ಸರವ ಬೂದಿ ಮಾಡಿಚೆಲ್ಲುವ ಬನ್ನಿರೊ 2 ಏಕರಂಗವಾಗಿ ಓಕುಳ್ಯಾಡವ ಬನ್ನಿರೊ ಜೀಕಳಿಯ ಮಾಡಿ ಮಾಯ ಮೋಹ ಎಸುವ ಬನ್ನಿರೊ 3 ಎಲ್ಲರೊಳಗಿಹ ನಮ್ಮ ಪುಲ್ಲನಾಭ ಚಲುವನೊ ಬಲ್ಲ ಮಹಿಮನಿಗೆ ನೆಲೆಯ ನೋಡಿ ಒಲಿವನೊ 4 ಹೋಳಿಯಾಡಿದನು ನೋಡಿ ಇಳಿಯೊಳಗ ಮಹಿಪತಿಯು ಕಳೆದು ಕಲ್ಪನೆ ಕೋಟಿಲಿಂದ ಗೆದ್ದ ನೋಡಿರೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತ್ರಿಜಗ ಪಾಲಿಸುವನೆ ಎಲ್ಲ ಸುಖವನಿತ್ತು ಉದಧಿ ಆಲಯ ಶರಣ್ಯ ವಿಟ್ಠಲ ಪ ಹೃದಯಕಮಲ ಮಧ್ಯದಲಿ ಮುದದಿ ಖಗವನೇರಿ ಚರಿಪ ಯದುಕುಲಾಬ್ಧಿ ಜಾತ ಚಂದ್ರ ವಿಧಿಶಿವಾದಿ ಉಡುಗಣಾರ್ಚಿತ 1 ದಿಟ್ಟಭಕ್ತ ಕೊಟ್ಟ ಇಟ್ಟಗೀ ಮೆಟ್ಟಿನಿಂತಿ ಸಿಟ್ಟು ಇಲ್ಲದೆ ಹೊಟ್ಟೆ ಮನೆಯ ಮಾಡಿಕೊಟ್ಟಿ ಕೆಟ್ಟಮಾತು ನುಡಿದ ಚೈದ್ಯಗೆ 2 ಕರಗಳನ್ನೆ ಕಟಿಯಲಿಟ್ಟು ಶರಣುಬಂದ ಭಕ್ತಗೆ ಭವ ಪರಿಮಿತಿಯ ತೋರಿ ನಿರುತ ಪೊರೆಯುವಂಥ ಕರುಣನಿಧಿಯೇ 3 ಪುಂಡರೀಕ ವರದನೆಂದು ಹಿಂಡುಭಕ್ತರು ಪೊಗಳುತಿಹರೊ ಪುಂಡರೀಕ ತೋರಿಸಿನ್ನು 4 ಶ್ರೀ ನರಹರಿಯೆ ನಿನ್ನ ಗಾನ ಮಾಡಲೆಷ್ಟು ಸಾಮ ಗಾನಕೆ ನಿಲುಕದ ಮಹಿಮ ಜ್ಞಾನ ಭಕ್ತಿ ಇತ್ತು ಬೇಗ 5
--------------
ಪ್ರದ್ಯುಮ್ನತೀರ್ಥರು
ದಯಮಾಡೋ ದಯಮಾಡೋ ಪ ಭಯಕರ ಸುಮಹ -ದ್ಭಯಹರ ಯತಿವರ ಅ.ಪ ಮೋಕ್ಷದ ಕರುಣ - ಕಟಾಕ್ಷದಿ ಎನ್ನನು ವೀಕ್ಷಿಸಿ ನಿನ್ನ ನಿರೀಕ್ಷಿಸುವಂತೆ 1 ಲಕ್ಷ್ಯಾಧೀಶರ ಲಕ್ಷಿಲ್ಲದೆ ಙÁ್ಞ - ನಾಕ್ಷದಿ ತವಪದ ಲಕ್ಷಿಸುವಂತೆ 2 ಸತ್ಯಾಭಿದ - ನಪ - ಮೃತ್ಯುಹರಿಸಿ ಮುದ ವಿತ್ತು ಪಾಲಿಸಿದ - ಉತ್ತಮ ಎನಗೇ 3 ಬಲ್ಲಿದತರ ಮಹ - ಪ್ರಲ್ಹಾದ ನಿನ್ನೊಳು ನಿಲ್ಲಿಸು ಎನಮನ - ಎಲ್ಲಿ ಚಲಿಸದಂತೆ 4 ದಾತಗುರು ಜಗನ್ನಾಥ ವಿಠಲನ ದೂತಾಗ್ರಣಿ ಸು - ಖೇತರ ಕಳೆದು 5
--------------
ಗುರುಜಗನ್ನಾಥದಾಸರು