ಒಟ್ಟು 3758 ಕಡೆಗಳಲ್ಲಿ , 119 ದಾಸರು , 2292 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಹುಯಿಲು ಕೇಳಬಾರದೆ ಪ. ಸ್ವಾಮಿ ನಿನಗೆ ಎನ್ನ ಮೊರೆಯು ಕೇಳಬಾರದೆ ಪ್ರ-ಸನ್ನ ಚೆನ್ನಕೇಶವರಾಯ ನಿನಗೆ ಅ.ಪ. ಪಾಲಸಾಗರ ಮಧ್ಯದಲ್ಲಿ ಏಳು ಸುತ್ತಿನ ಎಸೆವ ಕೋಟೆನೀಲಮಾಣಿಕ್ಯ ವಜ್ರದಿಂದ ಗಾ[ರೆ]ನಿಕ್ಕಿದ ಸೆಜ್ಜೆ[ಗೃಹ]ಮೇಲೆ ಶೇಷನೊರಗು ಹಾಸಿಕೆ ಶ್ರೀರುಕ್ಮಿಣಿ ಸತ್ಯಭಾಮೆರೊಡನೆ ಸರಸ-ಸಲ್ಲಾಪನೆ ಸ್ವಾಮಿ ಕೇಳು ಸಾಮಗಾನವೇದಘೋಷಣೆ 1 ವಾಲಗ ಅಸುರರ ಕತ್ತರಿಸಿ ಕಡಿವ ಕಾಳಗಭಕ್ತಜನರಿಷ್ಟಾರ್ಥವನ್ನು ಕೊಡುವ ಊಳಿಗ2 ಮುನ್ನ ಈ ಭಾಗ್ಯ ಇದ್ದುದಿಲ್ಲವೆ ಸ್ವಾಮಿ ನಿಮಗೆಬನ್ನಬಟ್ಟು ಧರ್ಮನರಸಿ ಸಭೆಯಲೊದರಲು ಅಕ್ಷಯವೆಂದುಸನ್ನೆಯಿಂದ ಕರಿಯ ಸಲಹಿದೆ ಅಜಾಮಿಳನ್ನ ನಿನ್ನ ಪ-ಟ್ಟಣಕೆ ಕರೆಸಿದೆ ಹಯವದನ್ನ ಎನ್ನ ನೀನು ಸಲಹಲಾಗದೆ 3
--------------
ವಾದಿರಾಜ
ಎನ್ನನುದ್ಧರಿಸಲು ಘನ್ನ ಬಿರುದುಗಳು ಪ ಇನ್ನು ಉನ್ನತವಾಹವು ಕೇಳೊ ಹರಿಯೆ ಅ.ಪ ಅನವರತದಿ ದುರ್ವಿಷಯ ಲಂಪಟದೊಳು ಚನ್ನಾಗಿ ಪತಿತ ಎನ್ನಂತಜಾಮಿಳನೆ ಇನ್ನಿದು ತಿಳಿದು ನೀ ಎನ್ನ ಪೂತನ ಮಾಡೆ ನಿನ್ನನಿಮಿತ್ತ ಬಂಧುತನವೆ ವೆಗ್ಗಳವೊ 1 ಮನ್ನಿಸಿದವನಲ್ಲ ಪೂಜಿಸಲಿಲ್ಲ ತನ್ನ ಸಂಬಂಧಿಯು ಮೊದಲಿಗನಲ್ಲ ಎನ್ನಂತೆ ಗಜೇಂದ್ರನೆ ಎನ್ನನುದ್ಧರಿಸಲು ನಿನ್ನ ಪತಿತಪಾವನತೆ ಘನ್ನವೊ 2 ಏಸಪರಾಧ ಮಾಡಿದ ಚೈದ್ಯಾದಿಗಳು ಈಸಪರಾಧ ರಾಶಿಗಳ ಮಾಡಿದರೆ ವಾಸುದೇವವಿಠಲ ಎನ್ನ ರಕ್ಷಿಸಲು ಸೂಸುವುದೋ ನಿನ್ನ ಭಕುತ ವಾತ್ಸಲ್ಯತನವೊ 3
--------------
ವ್ಯಾಸತತ್ವಜ್ಞದಾಸರು
ಎನ್ನಪರಾಧವೇನು ನಿನ್ನ ಸೂತ್ರಾಡಿಸಿದ್ಹಾಂಗ ಆಡುವೆ ಹರಿ ಧ್ರುವ ಆಡಿಸಿದರಾಡುವೆ ನೋಡಿಸಿದರೆ ನೋಡುವೆ ಮಾಡಿಸಿದರೆ ಮಾಡುವೆ ಪ್ರೇರಿಸಿದ್ಹಾಂಗ 1 ನಡೆಸಿದರ ನಡೆಯುವೆ ಕೂಡಿಸಿದರ ಕೂಡುವೆ ನುಡಿಸಿದರೆ ನುಡಿಯುವೆ ಚೇತರಿಸಿದಂತೆ 2 ಉಡಿಸಿದರೆ ಉಡುವೆ ತೊಡಿಸಿದರೆ ತೊಡುವೆ ಇಡಿಸಿದರೆ ನಾ ಇಡುವೆ ಸರ್ವಭೂಷಣ 3 ಹೇಳಿಸಿದರೆ ಹೇಳುವೆ ಕೇಳಿಸಿದರೆ ಕೇಳುವೆ ಆಳಿಸಿದರೆ ಆಳುವೆ ಅನುವಾದ್ಹಾಂಗ ನೀ 4 ಮಲಗಿಸಿದರೆ ಮಲಗುವೆ ಸುಖಗೈಸಿದ್ಹಾಂಗ 5 ನೇಮಿರೆ ನೀವಂದು ನಾ ಮಾಡುವದಿನ್ನೊಂದು ನಿಮಿತ್ಯಮಾಡಿದೋರುದು ಸೋಜಿಗಿದೊಂದು 6 ಎನ್ನ ಬಾಹ್ಯಂತ್ರ ಪೂರ್ಣ ಚನ್ನಾಗಿರೆ ನೀ ಕರುಣ ಅನುದಿನ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನ್ನಾಣೆ ಬ್ಯಾಡ ಬ್ಯಾಡವೋ ರಂಗ ನಿನಗಿದುಚೆನ್ನಗಿತ್ತೇರ ಮನೆ ಗೋವಿಂದ ಪ. ಗೋಪೇರ ಮನೆಗಳ ಪೊಕ್ಕು ಬಹುಪರಿ-ತಾಪವ ಮಾಡುವರೇ ಕಂದ ಗೋವಿಂದಕಾಪಟ್ಯಸತಿಯರ ಮಾತ ನೀನಾಲಿಸಿಕೋಪಿಸಬೇಡವಮ್ಮಾ ಗೋಪೆಮ್ಮ 1 ಎನ್ನಪ್ಪ ಕಂದನೆ ಚಿಣ್ಣ ಗೋಪೇರು ಬಂದುನಿನ್ನ ದೂರುತಲೈದಾರೋ ಗೋವಿಂದಕನ್ನೇರು ಕೊಬ್ಬಿಂದ ಅನ್ಯಾಯ ನುಡಿತಾರೆÀಇನ್ನೇನು ಮಾಡಲಮ್ಮ ಗೋಪೆಮ್ಮ 2 ದಧಿ ದುಗ್ಧ ಭಾಂಡ ಒಡೆದು ಗೋಪಿಯರನ್ನುಸದರ ಮಾಡುವರೇ ಕಂದ ಗೋವಿಂದಉದಯದಿ ಗುದ್ದ್ಯಾಡಿ ಮಾರ್ಜಾಲಂಗಳು ಬೀಳೆದÀಧಿಭಾಂಡ ಜಾರಿತಮ್ಮ ಗೋಪೆಮ್ಮ 3 ಬಸವನ ಆಟದಿ ಶಿಶುಗಳೆಲ್ಲರ ಕೂಡಿಮಸಿಮಣ್ಣು ಮೈಯ್ಯಾದವೊ ಗೊವಿಂದಬಿಸಜಾಕ್ಷಿಯರು ತಮ್ಮ ಮನೆಕೆಲಸದ ಕೈಯ್ಯಮಸಿಮಣ್ಣು ಒರೆಸಿದರೆ ಗೋಪೆಮ್ಮ 4 ಒರಗಿದ್ದ ಹಸುಗಳೆಬ್ಬಿಸಿ ಕರುಗಳ ಬಿಟ್ಟುದುರುಳತನವ ಮಾಡೋರೆ ಗೋವಿಂದನೆರೆದಿದ್ದ ಶಿಶುಗಳಾಡುವ ಗುಲ್ಲ ತಾವ್ ಕೇಳಿತುರುಶಿಶು ಬೆದರಿತಮ್ಮಾ ಗೋಪೆಮ್ಮ 5 ಅಣ್ಣ ಬಲರಾಮ ನಿನ್ನ ಬನ್ನಣೆ ಸುದ್ದಿಯಚೆನ್ನಾಗಿ ಪೇಳಿದನೊ ಗೋವಿಂದಉನ್ನಂತ ದಾಯಾದಿಯ ಮಾತುಗಳ ನೀನುಮನ್ನಿಸ ಬೇಡವಮ್ಮ ಗೋಪೆಮ್ಮ 6 ಬಾಯೆನ್ನ ರನ್ನವೆ ಬಾಯೆನ್ನ ಚಿನ್ನವೆಬಾಯೆನ್ನ ಮೋಹದ ಗಿಣಿಯೆ ಗೋವಿಂದಬಾಯೆಂದು ಯಶೋದೆ ಕರೆದಳು ಬಿಗಿದಪ್ಪಿಬಾಯೆನ್ನ ಹಯವದನ ಗೋವಿಂದ7
--------------
ವಾದಿರಾಜ
ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜ್ಞಾನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು
ಎಂಬೆನು ವಿವೇಕ ಮನುಜಗೆ ಇರೆ ಎಂಬೆನು ಬ್ರಹ್ಮನು ಎಂಬೆಎಂಬೆನು ವಿವೇಕ ಮನುಜಗೆ ಇಲ್ಲದಿರೆ ಕತ್ತೆಯಮರಿಯದು ಎಂಬೆ ಪ ವೇದದ ನಿಜ ಅರ್ಥವ ತಿಳಿದಡೆ ಉತ್ತಮೋತ್ತಮನು ಎಂಬೆಕ್ರೋಧದಿ ತರ್ಕದಿ ಕಾದಾಡುವವನು ಕೋಳಿಯ ಹುಂಜನು ಎಂಬೆನಾನಾರೆನುತಲಿ ನಿಜವನು ತಿಳಿವನ ನಾರಾಯಣನು ಎಂಬೆನಾದದ ತಿಳಿವನು ನಿಂದಿಸುವಾತನ ಸರಸವಾಡೋ ಪಶು ಎಂಬೆ 1 ಮತಿಯ ವಿಚಾರದಿ ಜಗ ಬ್ರಹ್ಮವೆಂಬನ ವಿಚಾರವಾದಿಯು ಎಂಬೆಯತಿಗಳು ಬರೆ ಕುಳಿತೇಳದ ಮನುಜನಎಮ್ಮೆಯ ಮಗನವನೆಂಬೆಸುತ್ತಮುತ್ತಂಗನೆ ಮೋಹವ ತೊರೆದನ ಯೋಗಪುರುಷ ತಾನೆಂಬೆಗತಿಮತಿ ತೊರೆದಿಹ ನರನನು ಈಗಲೆ ಎಂಜಲು ತಿಂಬುವ ನಾಯೆಂಬೆ 2 ಪರಮಾರ್ಥದಿ ಶಮದಮದಿಂದಿಹನನು ಪಂಡಿತನೀಗಲು ಎಂಬೆಹಿರಿಯರ ಕಾಣಲು ಹಲ್ಲನೆ ಕಿರಿವನ ಹಿರಿಯಮುಸುವನು ತಾನೆಂಬೆಗುರಿಯನು ತಪ್ಪದೆ ದೃಷ್ಟಿಸಿ ನಡೆವನ ಗುಣಕೆ ಅತೀತನು ಎಂಬೆಬರಿಯ ಪ್ರತಿಷ್ಟೆಯ ಸಾಧಿಸುತಿರುವನ ಬರಡು ಗೊಡ್ಡು ಎಂದೆಂಬೆ 3 ನಾದದ ಧ್ವನಿಯನು ಕೇಳುತಲಿಹನನು ಜಗಜೀವನನು ಎಂಬೆನಾದದ ಸುಖವನು ಅರಿಯದ ನರನನು ಜೀನುಗಾರನು ಎಂದೆಂಬೆದಿನಕರ ಕೋಟಿಯ ತೇಜದಿ ಹೊಳೆವನ ದಿವ್ಯ ಮೂರುತಿ ಎಂದೆಂಬೆವನವನ ಅಲೆಯುವ ಬರಡು ಮುನಿಯನುವನಕೆಯ ತುಂಡದು ತಾನೆಂಬೆ4 ಆತ್ಮದ ಕಳೆಯನು ಅರಿತವನಿದ್ದರೆ ದೃಢದಲಿ ಬ್ರಹ್ಮನು ಎಂಬೆಸತ್ವಶಾಲಿ ಆ ಮಹಿಮರ ಜರೆವರ ಗುಡ್ಡದ ಗೂಗೆಯಮರಿ ಎಂಬೆಚಿನುಮಯ ಚಿನ್ಮಾತ್ರನೆ ತಾನಾದವನನು ಚಿದಾನಂದ ಗುರುವೆಂಬೆಕರೆಕರೆ ಎನಿಸುವ ಸಾಧು ವೇಷವನು ದೂರಕೆ ನೀ ನಿಲ್ಲೆಂಬೆ5
--------------
ಚಿದಾನಂದ ಅವಧೂತರು
ಎರಡನೆಯ ಸಂಧಿ ಶ್ರೀಕಾಂತನ ಕರುಣವುಳ್ಳವಗೆ ಕುಂತಳಪುರಕೆ ಕಳುಹಿದನು 1 ಗಂಧಾಕ್ಷತೆ ಫಲಪುಷ್ಪದಿಂದ ಸಾಕ್ಷಾತು ಗಣಪತಿಗರ್ಪಿಸಿ ತರಳನ ಶಿಕ್ಷಾಗುರುವಿಗೆ ಒಪ್ಪಿಸಿದ2 ಮಣ್ಣ ಹರಹಿ ಅಕ್ಷರವ ಬರೆದು ಎನ್ನಣ್ಣನೀ ತಿದ್ದು ಬಾ ಎನಲು ಎನ್ನೊಡೆಯ ಶರಣೆಂದು ಬರೆದ 3 ನಿನ್ನ ಜ್ಞಾನ ಬೇರೆ ಚಿತ್ತ ಬೇರೆ 4 ಎಂದು ಧಿಕ್ಕರಿಸಿ ಹೇಳಿದನು 5 ಚಾತುರ್ಯದ ಬುದ್ಧಿ ಬೇರೆ ತೊಡರು ತಾತಗೆ ಒಯ್ದು ಒಪ್ಪಿಸಿದ 6 ಮುಕುಂದನ ಭಜಕನೆಂದೆನದೆ ಬಂದ ಹಾಂಗಿರಲೆಂದು ಸುತನ 7 ಧ್ರುವ ಪ್ರಹ್ಲಾದ ಅಕ್ರೂರಾಂಬರೀಷ ಮಾಧವ ಮುರಾರಿಯನ್ನು ಭಜಿಸಿ ಭವ ಭಯಾದಿಗಳಿಲ್ಲ ನಮಗೆ 8 ಕಟ್ಟಿಕೊಟ್ಟರು ಕರಲೇಸು ಎನುತ ಕಟ್ಟೆದರ್ ವೇದೋಕ್ತದಲಿ 9 ಓದಿಸಿದರು ಗುರುಮುಖದಿ ಮಾಧವನಲ್ಲದೆ ಅನ್ಯತ್ರರಿಲ್ಲವೆಂದು ಭೇದಾಭೇದವನೆಲ್ಲ ತಿಳಿದು 10 ಹೊಳೆವ ಶ್ರೀ ಮುದ್ರಿಕೆಯಿಟ್ಟು ಗೆಳೆಯರೆಲ್ಲರಿಗೆ ಬೋಧಿಸಿದ 11 ಪತಿತರಾದಪಗತಿ ಕುಮಾರರಿಗೆಲ್ಲ ಸದ್ಗತಿಯಾಗಬೇಕೆಂದೆನುತ ಮಾಡಿಸಿದನಾಜೆÉ್ಞಯಲಿ 12 ದ್ವಾದಶ ನಾಮವ ಹಚ್ಚಿ ಸಾದಿ ಸಾಧಿಸಿರಿ ಏಕಾದಶಿ ವ್ರತವೆಂದು ಬೋಧಿಸಿದನು ಎಲ್ಲರಿಗೆ13 ಜಾಗರ ಮಾಡಿ ಫುಲ್ಲನಾಭನ ಭಜಿಸುವರು ಪರಗೋಷ್ಠಿಯಿಲ್ಲ 14 ಬೆಳೆಸುವ ಹÀರಿಭಕ್ತರೊಡನೆ ಪರಾಕ್ರಮಿಯೆನಿಸಿದನು 15 ಇಮ್ಮಡಿಯನು ಗೆದ್ದು ಹೇರಿಸಿದನು ತನ್ನ ಪುರಕೆ 16 ತಂದು ಆರತಿಗಳನೆತ್ತಿ ಚರಣಕ್ಕೆರಗಿದನು 17 ಜಗದಧಿಪತಿಯಾಗು ಎಂದು ಹರುಷವನೆ ತಾಳಿದಳು 18 ಲೇಸಾದ ಶುಭಲಗ್ನವ ಕಟ್ಟಿ ಸುತನ ಸಿಂಹಾಸನದಲ್ಲಿ ಕುಳ್ಳಿರಿಸಿ ಭೂಸುರ ಬಂಧುಗಳೆಲ್ಲರು ನೆರೆದಿಂದುಹಾಸಗೆ ಪಟ್ಟಗಟ್ಟಿದರು19 ಪರಿ ಪಾಲಿಸುತ್ತ ರಾಜ್ಯನೀತಿಯಿಂದಾಳುತಲಿಹನು 20 ಲಾಲಿಸು ಕುಂತಳೇಶ್ವರಗೆ ಕಾಲಕಾಲಕೆ ಕಪ್ಪವ ಕೊಟ್ಟು ಬಹೆವು ಆಲಸ್ಯವಾಯಿತು ಎಂದ21 ಉದಾರಬುದ್ಧಿಯಲಿಂದುಹಾಸ ವಿಚಾರಿಸಿದನು ತನ್ನಪಿತನ 22 ಜೋಯಿಸ ಪುರೋಹಿತಗೆ ಕಾಂತಿಗೊಡದ ಕನಕಾಭರಣವೆಲ್ಲವ ಅಂತಸ್ಥದಿಂದ ಕಟ್ಟಿದನು23 ಜ್ಞಾನವುಳ್ಳ ಭೃತ್ಯರೊಡನೆ ದಾನವಾಂತಕನ ಕಿಂಕರನು 24 ತೆರಳಿದರಲ್ಲಿಂದ ಮುಂದೆ ಹೆಬ್ಬಾಗಿಲ ಮುಂದೆ 25 ದಿಟ್ಟರಾರೆಂದು ಕೇಳಿದನು ಅಟ್ಟಿದೆನ್ನೊಡೆಯ ಪುಳಿಂದ 26 ಮಂದಿರಕಾಗಿ ಕರೆಸಿದ ಕರವ ಮುಗಿದರು 27 ಕಡೆಗಣ್ಣಲಿ ನೋಡಲಿಲ್ಲವರೊಳು ಮಾತನುಡಿಯದೆ ಸನ್ಮಾನಿಸದೆ ಝೇಂಕರಿಸಿ ಕೇಳಿದನು 28 ಜೀಯ ಹಸಾದ ನಿಮ್ಮಡಿಗೆ ಇಂದಿನ ವಾಯಿದ ಕಟ್ಟಿದ ಧನವು ದೇವರು ಕೈಕೊಂಬುದೆನಲು 29 ನಗ ನಾಣ್ಯ ದೇವಾಂಗವನು ನಗ ನಾಣ್ಯ ದೇವಾಂಗವನು 30 ಸೊಗಸಾಗಿ ಮಾಡಿಸು ಎಂದ ನಗೆಮುಖದಿಂದ ಹೇಳಿದನು 31 ಸಣ್ಣ ರಾಜಾನ್ನದಕ್ಕಿಯನ್ನ ಶಾಕವು ಅಣ್ಣೆವಾಲೆರೆದ ಪಾಯಸವು ಉಣ್ಣೇಳಿರೆಂದು ಕರೆದರು 32 ನಿರಾಹಾರವು ನಮಗೆ ಎಂದು ಕೇಳಿದನು 33 ಎಮ್ಮೊಡೆಯನ ಸುಕುಮಾರ ತಮ್ಮ ರಾಜ್ಯದಲ್ಲಿ ಏಕಾದಶಿವ್ರತ ನಿರ್ಮಾಣವನ್ನೆ ಮಾಡಿದನು34 ಸತಿ ಎಂದೆಲ್ಲರು ಹೇಳುತಲಿಹರು ಎಲ್ಲಿದ್ದ ಆತಗೆ ಸುತನು 35 ಹಿಂದಟ್ಟಿ ಹೋದನು ಪುಳಿಂದ ಅಟ್ಟಡವಿಯೊಳಗಿರಲು 36 ಪೋಷಣೆಯನು ಮಾಡಿದರು ಭೂಸುರರನೆ ಪಾಲಿಸುವನು 37 ನಟ್ಟಂದದಿ ಮನದೊಳು ಮರುಗಿ ಎಂದು ತಾ ಮನದೊಳು ತಿಳಿದ 38 ಅನುಕೂಲವಾದ ಕಾರ್ಯವು ಮನದಲ್ಲಿ ಚಿಂತೆ ಮಾಡಿದನು 39
--------------
ಹೆಳವನಕಟ್ಟೆ ಗಿರಿಯಮ್ಮ
ಎರಿ ಮುಂಡೆ ಇವನೆರಿ ಮುಂಡೆ ಏನುಅರಿಯದೆ ಒದರುವ ಎರಿಮುಂಡೆ ಪ ತನ್ನ ನಿಜವ ತಾನು ಅರಿಯದೆ ತತ್ವದಕುನ್ನಿಯಂತೆ ಒದರುವ ಎರಿಮುಂಡೆಭಿನ್ನ ಬುದ್ಧಿಯಲಿದ್ದು ನಾ ಬ್ರಹ್ಮವೆಂಬುದನುಚೆನ್ನಾಗಿ ಅರಿಯದ ಎರಿಮುಂಡೆ 1 ಯೋಗವ ತಿಳಿಯದೆ ಯೋಗವ ಹಳಿವನುಈಗ ಹೇಳಿವನೀಗ ಎರಿಮುಂಡೆಆನಿಹೆ ಬ್ರಹ್ಮವು ನಾನೆಂದು ಎತ್ತೆತ್ತೆನುಡಿವನು ಎರಿಮುಂಡೆ 2 ಕೋಟಿ ಸೂರ್ಯರ ತೇಜ ಪಾಟಿಸಿ ಕಾಣದೆಬೂಟಕ ನುಡಿವವ ಎರಿಮುಂಡೆದಾಟಿ ಸಹಸ್ರಾರ ಬ್ರಹ್ಮರಂಧ್ರದ ನಾಳ ಕೇಳದ ನರನಾಗ ಎರಿಮುಂಡೆ 3 ಮಾತರಿಯದೆ ಜ್ಞಾನ ನುಡಿಯಿದ್ದುದಕಳೆದು ಮಣ್ಣು ಹೋಯ್ಯೆಂಬುವ ಎರಿಮುಂಡೆಮಾತಿಲಿ ಬ್ರಹ್ಮವು ಆಗಬೇಕಾದರೆ ಮಹಾಸಾಧನವೇಕೆ ಎರಿಮುಂಡೆ 4 ಒಂದು ಹೋಗಲಿಲ್ಲ ಒಂದೇ ನಾನೆಂಚಿನುಇಂದು ಕೇಳುವನೀಗ ಎರಿಮುಂಡೆಸುಂದರ ಚಿದಾನಂದ ಸ್ವರೂಪ ತಿಳಿಯದೆ ಸುಲಭ ಎಂದೆಂಬುವ ಎರಿಮುಂಡೆ 5
--------------
ಚಿದಾನಂದ ಅವಧೂತರು
ಎಲೆ ಕೊರಡೆ ಕೇಳೆಲೆ ಕೊರಡೆಎಳ್ಳಷ್ಟು ತೊಡಕಿಲ್ಲೆಲೆ ಕೊರಡೆ ಪ ರೋಗಿಗೆ ಔಷಧಿ ಕಹಿ ಕೊರಡೆರೋಗ ನಿವಾರಕ ತಿಳಿ ಕೊರಡೆಎನ್ನ ಮಾತುಗಳು ಕಹಿ ಕೊರಡೆಮನ ಅಮೃತವು ತಿಳಿ ಕೊರಡೆ1 ಮಾನವ ಕೊರಡೆ 2 ಎಲ್ಲಿಂದ ಬಂದೆಯೋ ಎಲೆ ಕೊರಡೆಎಲ್ಲಿಗೆ ಹೋಗುವೆ ಎಲೆ ಕೊರಡೆಎಲ್ಲಿಯ ಕುಲ ನಿನ್ನ ನಾಮವದಾವುದುಎಗರಾಡಲು ಬೇಡಲೆ ಕೊರಡೆ 3 ಸತಿ ಎಷ್ಟಾದರು ಎಲೆ ಕೊರಡೆಸುತರೆಷ್ಟಾದರು ಎಲೆ ಕೊರಡೆಅತಿ ದೇಹವು ಮನೆ ಎಷ್ಟಾದವು ತಿಳಿಹಿತರೆಲ್ಲಿಹರೋ ಎಲೆ ಕೊರಡೆ 4 ಭವ ತಿಳಿ ಕೊರಡೆ 5
--------------
ಚಿದಾನಂದ ಅವಧೂತರು
ಎಲೊ ರಂಗ ಎಲೋ ರಂಗನೇ ಸಲಹೊ ಶುಭಾಂಗನೆ ಪ ಜಯಕರ ಶ್ರೀಹರಿಯೆ ದಯವಂತನಾಗಯ್ಯ ಭಯ ಭಕ್ತಿಯಲಿ ನಿಮ್ಮ ದಯವ ಬೇಡುವೆನಯ್ಯ 1 ನಿನ್ನ ಭಕ್ತನು ನಾನು ಬನ್ನಬಡಿಸುವಿ ಯಾಕೋ ಮುನ್ನಿನ ಭಕ್ತರಂತೆನ್ನನು ಸ್ಮರಿಸಯ್ಯ 2 ಶರಣೆಂದು ವಿಭೀಷಣಗೆ ಕರುಣಿಸಿ ಲಂಕೆಯ ಸ್ಥಿರಪಟ್ಟ ಕೊಟ್ಟಂಥ ಕರುಣಾಳು ಮೊರೆ ಕೇಳೊ 3 ಯತಿವರನ ಯಾಗವ ಹಿತದಿ ರಕ್ಷಿಸಿದಂಥ ಪತಿತಪಾವನ ಎನ್ನ ಹಿತದಿಂದ ಕಾಯೆಲೊ 4 ಸತತ ನಿಮ್ಮಯ ಪಾದಸ್ತುತಿಯೊಳಿರಿಸಿ ಎನ್ನ ಮೃತ್ಯುಬಾಧ್ಹರಿಸಯ್ಯ ಕ್ಷಿತಿವರ ಶ್ರೀರಾಮ 5
--------------
ರಾಮದಾಸರು
ಎಲ್ಲಡಗಿದನೊ ಹರಿ ಎನ್ನಯ ಧೊರಿ ಪ ಎಲ್ಲೆಲ್ಲಿ ಪರಿಪೂರ್ಣನೆಂಬೊ ಸೊಲ್ಲನು ಮುನ್ನಾ ಮಲ್ಲಮರ್ದನ ಪುಲ್ಲಲೋಚನ ಹರಿಅ ಪ ಶರಣೆಂದವರ ಕಾಯ್ವ ಕರುಣಾ ಸಮುದ್ರನು ಕರುಣನ ಅರಿಯದೆ ಹರಿಣಾಂಕ ನಿಭವಕ್ತ್ರ 1 ಕರಿರಾಜನ ಮೊರೆ ಕೇಳಿ ತ್ವರಿತದಿಂದ ಗರುಡನೇರಿ ಬಂದ ಗರ್ವರಹಿತ ದೇವ 2 ವರ ಭುಜದಲಿ ಶಂಖ ಚಕ್ರವ ಧರಿಸಿದ ಪರಮೇಷ್ಠಿ ಜನಕನು 3 ವನಜ ಮಲ್ಲಿಗೆ ಜಾಜಿ ವನದಲ್ಲಿ ಚಲಿಸುವ ವನಿತೆಯರಾಟಕ್ಕೆ ಮನಮೆಚ್ಚಿ ನಡೆದಾನೊ 4 ಹಿಂಡು ಗೋಪಾಲರನು ಕಂಡು ಕಾವ ವಿಷಯಕ್ಕಾಗಿ ಕಮಲಲೋಚನ ಹರಿ5 ಇನ ಚಂದ್ರ ನಿಭವಕ್ತ್ರ ಕನಕಾಂಬರಧರ ವಿನಯದಿಂದಾಡುತ್ತ ಮುನಿಗಳಲ್ಲಿಗೆ ದೇವ 6 ಗಜ ಧ್ರುವ ಬಲಿ ಪಾಂಚಾಲಿ ವರದನೆಂಬ ನಿಜವಾದ ಬಿರುದುಳ್ಳ ವಿಜಯವಿಠ್ಠಲರೇಯ7
--------------
ವಿಜಯದಾಸ
ಎಲ್ಲನು ನಿನಗೆ ಕೂಡಿತಯ್ಯ ಹರಿ ಪುಲ್ಲನಾಭ ದಯ ಮಾಡಯ್ಯ ಪ ಖುಲ್ಲನು ನಾಬಲು ಎಲ್ಲಿಯುಸಲ್ಲದೆ ತಲ್ಲಣಿಸುತ ನಿನ್ನ ಬಲವಂದೆ ದೇವ ದೇವ ಅ.ಪ ಧೃಢಗುಣ ಎನ್ನೊಳಿಲ್ಲಯ್ಯ ಬಲು ನುಡಿ ಹೀನ ನಾಕಡು ಪಾಪ್ಯಯ್ಯ ನಡೆ ನುಡಿ ಇಲ್ಲದೆ ಕಡುನೊಂದೀಗ ನಿಮ್ಮ ನ್ಹುಡುಕುತ ತಿರುಗುವೆ ಜಡಜಾಕ್ಷನೆ ಪೊರೆ 1 ಪರರದ್ರವ್ಯವಪಹರಿಸಿದೆನೊ ನಾ ಪರಮನೀಚನಾಗಿ ಚರಿಸಿದೆನೊ ಅಗಣಿತ ದುರಿತವನುನಾ ಜರೆಯದೆ ಪರಿಪರಿ ಮಾಡಿದೆನೊ ಮರೆವೆಲಿ ಮಾಡಿದ ಪರಮ ಎನ್ನತಪ್ಪು ಕರುಣಾಕರನೆ ನೀಕರುಣದಿ ಕ್ಷಮಿಸಯ್ಯ 2 ಶರಣಾಗತ ವತ್ಸಲನೆಂದು ನಿನ್ನ ಮರೆಯಹೊಕ್ಕೆನೆಯ್ಯ ದಯಾಸಿಂಧು ಮೊರೆಕೇಳು ಭಕ್ತರ ಪ್ರಿಯಬಂಧು ಎನ್ನ ದುರಿತದಿ ಕಡೆ ಹಾಯ್ಸಯ್ ಇಂದು ಶಿರಬಾಗಿ ನಿಮಗೆ ಸೆರೆಗೊಡ್ಡಿ ಬೇಡುವೆ ಕರಪಿಡಿ ಬಿಡಬೇಡ ಸಿರಿವರ ಶ್ರೀರಾಮ 3
--------------
ರಾಮದಾಸರು
ಎಲ್ಲಮ್ಮ ದಯಮಾಡಮ್ಮ ಕಾಡಬೇಡ ಎನ್ನಮ್ಮ ಪ ಇಲ್ಲದೆ ಪೋದರೆ ನಿಲ್ಲದೆ ಏನನು ಬಲ್ಲಿದನ ಕರೆತಂದು ಕೊಲ್ಲಿಸಿಬಿಡುವೆನೆ ಅ.ಪ ಕೊಡಲಿ ಹೊತ್ತು ಬರುತಾನ ತಾಯಿ ಗಡನೆ ಹೊರಳಿ ನೋಡಿನ್ನ ಬಡವರ ದಯಾನಿಧಿ ಕಡುಬಾಧೆ ಕಂಡರೆ ತಡೆಯದೆ ನಿನ್ನನು ಕಡಿಯದೆ ಬಿಡನವ್ವ 1 ತಂದೆವಚನ ಪರಿಪಾಲನು ಅವ ಬಂದರೆ ನಿನ್ನನು ಕೊಂದಾನು ಕಂದನ ಬಂಧನ ಚಂದದಿ ಕಳೆದಾ ನಂದವ ಕೊಡು ಕೊಡು ಸುಂದರಮುಖಿಯೆ 2 ಕಾರ್ತವೀರ್ಯ ತಂದಾನೇ ಈ ವಾರ್ತೆ ಕೇಳಲು ನಿನ್ನ ಬಿಟ್ಟಾನೇ ಅರ್ತುಭಜಿಪೆ ನಿನ್ನ ಗುರ್ತಿಟ್ಟೀಬಾಧೆ ತುರ್ತು ಕಳೆಯೆ ತಾಯಿ ಅರ್ತು ಶ್ರೀರಾಮನ 3
--------------
ರಾಮದಾಸರು
ಎಲ್ಲಮ್ಮಾದೇವಿ ನಮ್ಮ ದೇವರು ಬಂದರು ಕಾಣ ಪ. ಸೋಮಾಸುರನೆಂಬ ದೈತ್ಯನು ಸಾಮಕ ವೇದವನೊಯ್ಯಲು ಮಾ ಸೋಮಾಸುರನೆಂಬವನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮದೇವ ಗುಡ್ಡವ ಬೆನ್ನಲ್ಲಿಟ್ಟನು ಮಾ ಗುಡ್ಡದಂಥÀ ದೈತ್ಯರನೆಲ್ಲ ಅಡ್ಡÀಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಪೆಣ್ಣನೊಯ್ಯಲು ಮಾ ವರ್ಣರೂಪವ ತಾಳಿ ಅವನ ಭಿನ್ನ ಭಿನ್ನವ ಮಾಡಿದನು ಮಾ 3 ಕಂಭದಿಂದಲೆ ಉದಿಸಿ ನಮ್ಮ ದೇವ ಜಂಭದಸುರನ ಬಡಿದನು ಮಾ ನಂಬಿದ ಪ್ರಹ್ಲಾದನ್ನ ಕಾಯಿದ ಅಂಬುಜನಾಭ ನರಸಿಂಗನು ಮಾ 4 ಬಲು ಮುರುಡನಾಗಿ ಭೂಮಿಯ ಬಲಿಯ ದಾನವ ಬೇಡಿದ ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕೊತ್ತಿದ ಮಾ 5 ಕೊಡಲಿಯನ್ನು ಪಿಡಿದು ನಮ್ಮದೇವ ಕಡಿದ ಕ್ಷತ್ರಿಯ ರಾಯರ ಮಾ ಹಡೆದ ತಾಯ ಶಿರವ ತರಿದು ಪಡೆದನಾಕೆÉಯ ಪ್ರಾಣವ ಮಾ 6 ಎಂಟೆರಡು ತಲೆಯ ಅಸುರನ ಕಂಠವ ಛೇದಿಸಿ ಬಿಟ್ಟನು ಮಾ ಒಂಟಿರೂಪವ ತಾಳಿ ಲಂಕೆಯ ಬಂಟ ವಿಭೀಷಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳೀಮೇಳದಲಿಪ್ಪನು ಮಾ ಬಾಲಕನಾಗಿ ಪೆಣ್ಣರೂಪದಲಿ ಶ್ರೀ- ಲೋಲ ಲಕ್ಷ್ಮಿಯ ಅರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪೆವನದೊಳಗಿಪ್ಪನು ಮಾ ಸರ್ಪಶರನಾಗಿ ಪೋಗಿ ತ್ರಿಪುರಸಂಹರ ಮಾಡಿದ ಮಾ 9 ಎಲ್ಲಮ್ಮಾ ಎಲ್ಲಮ್ಮಾ ನಮ್ಮದೇವ ಬಲ್ಲಿದ ಕಲ್ಕ್ಯವತಾರನು ಮಾ ಇಳೆಯ ಸ್ವರ್ಗ ಪಾತಾಳಕೊಡೆಯ ಚೆಲುವ ಹಯವದನನು ಮಾ 10
--------------
ವಾದಿರಾಜ
ಎಲ್ಲರ ಮನೆ ದೋಸೆ ತೂತು ಪ ಚಿಲ್ಲರೆಯಲ್ಲವಿದೀ ಮಾತು ಅ.ಪ ಗಾಜಿನ ಮನೆಯಲಿ ವಾಸಿಸುವ ಪರ ಗೇಹಕೆ ಕಲ್ಲುಗಳೆಸೆಯುಬಹುದೇ ಮೂರ್ಜಗನಿಂದಕ ತನ್ನಯ ನಾಶಕೆ ಬೀಜ ಬಿತ್ತಿ ಫಲ ಭೋಜನ ಮಾಡುವ 1 ನೀರ ಕ್ಷೀರ ನ್ಯಾಯವ ಕೇಳದ ಜನ ರ್ಯಾರಿರುವರು ಈ ಧರೆಯೊಳಗೆ ಬಾರಿಬಾರಿಗದ ಮನಕೆ ತಾರದೆಲೆ ದೂರಿನ ನುಡಿಯಲಿ ರುಚಿಯು ಉಚಿತವೆ 2 ಗೂಳಿಯು ಹಳ್ಳಕೆ ಬಿದ್ದ ಕಾಲದಲಿ ಆಳಗೊಂದು ಕಲ್ಲೆಸೆಯುವರು ಬಾಳಿಬಾಳಿಸುವ ನರನ ಪ್ರಸನ್ನನು ಕಾಲಕಾಲದಲಿ ಸಲಹದೇ ಇರುವನೆ 3
--------------
ವಿದ್ಯಾಪ್ರಸನ್ನತೀರ್ಥರು