ಒಟ್ಟು 1564 ಕಡೆಗಳಲ್ಲಿ , 99 ದಾಸರು , 1235 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಂತೆಯಾತಕೆ ಮನವೆ ಗುರುಗಳ ಪಾದ ಚಿಂತನೆಯನು ಮಾಡದೆಪ ಸಂತತ ಬಿಡದಲೆ ಚಿಂತನೆ ಮಾಳ್ಪರ ಅಂತರಂಗವ ತಿಳಿವರು ಗುರುವರರು ಅ.ಪ ಉದಯ ಕಾಲದಲಿವರ ಧ್ಯಾನವ ಮಾಡೆ ಮದಗರ್ವ ಪರಿಹರವು ಮುದದಿಂದ ಮೂರು ವೇಳೆಗಳಲ್ಲಿ ಸ್ಮರಿಸಲು ಹೃದಯ ತಾಪವ ಕಳೆವರು ಗುರುವರರು1 ದೇಶದೇಶವ ತಿರುಗಿ ತನುಮನಗಳ ಬೇಸರಗೊಳಿಸಲೇಕೆ ಪೋಷಿಪ ಗುರುಗಳಪಾದ ನಂಬಿದ ಮೇಲೆ ವಾಸುದೇವನೆ ನಲಿವ ಮುಂದೊಲಿವ 2 ವೇದವಾದಿಗಳೆಲ್ಲರೂ ವಾದವ ಮಾಡಿ ಮಾಧವನನು ಕಾಣಿರೊ ಮೋದತೀರ್ಥರ ಮತಬೋಧನೆ ಮಾಡುವ ಸಾಧು ಗುರುಗಳನೆ ಕೂಡು ಸಂಶಯಬಿಡು3 ಚಿತ್ತದಿ ಸ್ಮರಿಸುವರು ಹರಿ ಮಹಿಮೆಯ ಭಕ್ತಿಲಿ ನಲಿಯುವರು ಚಿತ್ರಗಾಯನ ನೃತ್ಯಗಾನಗಳಿಂ ಪುರು- ಷೋತ್ತಮನನೊಲಿಸುವರು ಹರುಷಿತರು4 ಕತ್ತಲೆ ಮನೆಗಳಲ್ಲಿ ಅಡಗಿಹ ವಸ್ತು ಲಕ್ಷಪರಿಮಿತಿ ಇದ್ದರು ಹಸ್ತದಿ ಜ್ಯೋತಿಯನೆತ್ತಿ ತೋರುವ ಪರಿ ಭಕ್ತರ ಸಲಹುವರು ಗುರುವರರು 5 ಸರಸೀಜಾಕ್ಷನ ನಾಮವು ಹಗಲಿರುಳು ಬಿಡದೆ ಧ್ಯಾನಿಸುತಿರ್ಪರು ಸಿರಿನಾರಾಯಣನನ್ನು ಸ್ಮರಿಸುತ್ತ ಮನದೊಳು ಪರಮಸಂಭ್ರಮ ಪಡುವರು ಗುರುವರರು 6 ಕರುಣದಿ ಸಲಹುವರು ಶಿಷ್ಯರ ಮನ ವರಿತು ವರಗಳನೀವರು ವರ ಕಮಲನಾಭವಿಠ್ಠಲನ ಧ್ಯಾನಿಪಉರಗಾದ್ರಿವಾಸ ವಿಠ್ಠಲದಾಸರನೆ ನಂಬು7
--------------
ನಿಡಗುರುಕಿ ಜೀವೂಬಾಯಿ
ಚಿಂತೆಯಾತಕೆ ಮನವೆ ನಿನಗಿದು ಸತತ ಸಲ್ಲದು ಕಾಣೊ ಪುರಂದರ ದಾಸರನುದಿನ ಇಂತು ಬಗೆಯಲಿ ಪಾಲಿಸೊ ಪ ಅಗ್ರ ಬುದ್ಧಿಯ ತಾಳು ನಿನಗೆ ಸಾ ಮಗ್ರಿ ಆಲೋಚನಿ ಯಾತಕೆ ಸ ಮಗ್ರ ಸೋಪಸ್ಕರವನು ಅನುಗ್ರಹವನು ಮಾಡುತಾ ಉಗ್ರ ಮನುಜರ ಕೂಡಿಸದೆ ಪಾ ಅಂದು ಪೊಗಳಲು ಶೀಘ್ರದಲಿ ನಿಂದಿಹರೊ 1 ಹರಿಗುರುಗಳ ಸಂಕಲ್ಪ ತಪ್ಪದು ಗಿರಿಗಹ್ವರದೊಳಗಿದ್ದರು ಅದು ಬರಿದೆಯಾಗದು ಕೇಳು ಸ್ಮರಿಸಿ ಬಳಲಿ ನಲಿದಾಡಿ ಪರಿದ ಕಾಲಕೆ ಬಿಡದೆ ಅಹಿಕದ ಚರಿತೆ ಅವರಿಗೆ ಗಣಣೇನೊ2 ತೆತ್ತಗಿನ ಸ್ವಭಾವ ಆವದೊ ಎತ್ತಲಟ್ಟಿದರತ್ತ ತೊಲಗದೆ ಹೊತ್ತುಹೊತ್ತಿಗೆ ಪೋಗಿ ಬಾಗಿ ತೊತ್ತಿನಂದದಿ ಪ್ರಯೋಜನ ಹೊತ್ತು ಮೀರದೆ ಮಾಳ್ಪುದು ಧರ್ಮ ಮೊತ್ತವಲ್ಲದೆ ಇನ್ನೊಂದಿಲ್ಲವೊ ಇತ್ತ ಭಾಗ್ಯವಿತ್ತ ನಿರ್ಮಳ ಚಿತ್ತದಲಿ ಅರ್ಪಿಸುತಿರು3 ನೀನು ಮಾಡಿದ ಪುಣ್ಯಗಳಿಗೆ ತಾ ನಡದು ಬರುವುದೇ ಮರುಳೆ ನಾನಾ ಪರಿಯಲಿ ತಿಳಿದು ನೋಡು ಧ್ಯಾನದಿಂದಲಿ ದಿನಪ್ರತಿ ಜ್ಞಾನನಿಧಿ ನಿಜಗುರು ಶಿರೋಮಣಿ ಅನಂತಾನಂತ ಜನುಮದಲೀಗ ಗಾನಮಾಡಿದ ನಿಷ್ಟ ಪುಣ್ಯವು ತಾನೊಲಿದು ಫಲವಿತ್ತದೋ4 ಕಲ್ಲು ಕರಗಿಸಿ ಬೆಣ್ಣಿ ತೆಗುವಂಥ ಬಲ್ಲಿದರು ನಿನ ಗೊಲಿದಿರಲು ಎಲ ಎಲ್ಲಿ ಇಲ್ಲವೆಂಬೊ ಸೊಲ್ಲುಗಳಲ್ಲದೆ ಇದು ಸಲ್ಲದೊ ಸಕಲ ಮನೋಭೀಷ್ಟಾ ತುಲ್ಯ ವಲ್ಲಭ ಮಲ್ಲದಲ್ಲಣ ನಿಲ್ಲದಲೆ ವೊಲಿದಿಹನೊ 5 ನೂನ್ಯಪೂರ್ಣವು ಅವರನ ಕೂಡಿ ತನ್ನ್ಯೋಪಾಯವು ಯಾಕೆ ನಿನಗೆ ಕಣ್ಣೆವೆ ಇಡುವನಿತರೊಳು ಕಾರುಣ್ಯವರುಷಗರೆದು ಬಿಡುವ ದೈನ್ಯವೃತ್ತಿಯ ಬಿಡಿಸಿ ನಿಷ್ಕಾಮ ಪುಣ್ಯವನಧಿಯೊಳಿಡುವರೊ 6 ಊರ್ವಿಗೀರ್ವಾಣರಿಗೆ ಉಣಿಪುದು ಗರ್ವವನು ತಾಳದಲೆ ಚೆನ್ನಾಗಿ ಸರ್ವಬಗೆಯಲಿ ನಾನು ಎಂಬೊ ದುರ್ವಚನಗಳ ನುಡಿಯದೆ ಪೂರ್ವತನೆ ಬಯಸುತಾರಾಧಿಸು ಶರ್ವಸನ್ನುತ ವಿಜಯವಿಠ್ಠಲ ಪೂರ್ವನೆಂತ ಪ್ರಬಲನೆ7
--------------
ವಿಜಯದಾಸ
ಚಿತ್ತ ಸಖಿ ಬಾಗ | ಗುರುವಿಗೇ ಬಾಗ | ಉತ್ತಮ ಪರುಷ ನಾರಿಯಲಿಕ್ಕೆ ವಿಷಯದಿಂ ಬಾಗ 1 ಸಧ್ಯರೂಪ ಯೌವ್ವನದ ಕುಲಮದಕ ಬಾಗ 2 ನಿಗಟದಿಂದ ಭಜಿಸಲಿಕ್ಕೆ ವಲುವದನು ಜಾರಿ3 ಪಡೆದು ಗುರು ಜ್ಞಾನದಿಂದ ನೋಡೇ ಮುಕ್ತಿ ಕಳಸಾ4 ಧನ್ಯಳಾಗ ತಂದೆ ಮಹಿಪತಿ ಪ್ರಭು ಸ್ಮರಿಸೀ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚಿತ್ತಗೊಟ್ಟು ಸಿರಿಕೃಷ್ಣ ಕಾಯಿ ಕಂಡ್ಯ ಪ ಮತ್ತೊಬ್ಬ ನಾನಲ್ಲ ನಿನ್ನ ಭೃತ್ಯರ ಭೃತ್ಯಅ.ಪ ಕಾಲನವರ ಮುನ್ನ ಮುಂಚೂಣಿ ದಾಳಿಗೆಕೀಳು ಮನಮಂತ್ರಿ ಮೂಲೆಯ ಪೊಗಲುಮೂಲ ಬಲದಾಳಿಗೆ ಮುರಿದು ನಾನೋಡಲುಕಾಲಗೆಟ್ಟು ನಾನಿಹ ಕಾಲದಲ್ಲಿ 1 ಪಿತ್ತವೆಂಬ ಕಿಚ್ಚು ವಾತಕೂಡ್ಹೆಚ್ಚಿತುಹತ್ತಿಕೊಂಡು ದೇಹಪುರ ಸುಡುವಾಗಮತ್ತೆ ಶ್ಲೇಷ್ಮವು ಕೂಡಿ ಸುತ್ತು ಮುತ್ತೆಳೆವಾಗಎತ್ತ ಹೋಗಲೆಂಬ ಸಂಕಟದೊಳಗೆ 2 ತಿಂದೋಡಿ ಬಂಧುಗಳೆಲ್ಲ ಕೈಬಿಟ್ಟರುಮುಂದೆಮದೂತರು ಬಂದು ನಿಂದಾಗಎಂದಿಗಾದರು ಒಮ್ಮೆ ನೆನೆದುದ ಕೈಗೊಂಡುಹಿಂದಿಟ್ಟುಕೊಂಡೆನ್ನ ಕಾಯಿ ಕಂಡ್ಯ ಕೃಷ್ಣ3
--------------
ವ್ಯಾಸರಾಯರು
ಚಿತ್ತಜನಯ್ಯನ ಚಿಂತಿಸು ಮನವೇಹೊತ್ತು ಕಳೆಯದೆ ಸರ್ವೋತ್ತಮನ ನೆನೆ ಮನವೆ ಪ ಕಾಲನ ದೂತರು ನೂಲು ಹಗ್ಗವ ತಂದುಕಾಲು ಕೈಗಳ ಕಟ್ಟಿ ಮ್ಯಾಲೆ ಕುಟ್ಟಿಕಾಲಪಾಶದೊಳಿಟ್ಟು ಶೂಲದಿಂದಿರಿವಾಗಪಾಲಿಸುವರುಂಟೆ ಜಾಲವ ಮಾಡದೆ 1 ದಂಡಧರನ ಭಟರು ಚಂಡಕೋಪದಿ ಬಂದುಕೆಂಡದ ನದಿಯ ತಡಿಗೆ ಕೊಂಡೊಯ್ದುಖಂಡಖಂಡವ ಕಿತ್ತು ಕೆಂಡದೊಳಿಡುವಾಗಹೆಂಡಿರು ಮಕ್ಕಳು ಬಂದು ಬಿಡಿಸಬಲ್ಲರೆ ಮರುಳೆ 2 ಅಂಗಳಿಗೆ ದಬ್ಬಣಂಗಳ ಸೇರಿಸಿ ಎರಡುಕಂಗಳಿಗೆ ಸೀಸವ ಕಾಸಿ ಪೊಯ್ಯಲುತಂಗಿ ಅಕ್ಕ ಬಂದು ಭಂಗವ ಬಿಡಿಸುವರೆಅಂಗವು ಸ್ಥಿರವಲ್ಲ ರಂಗವಿಠಲ ಬಲ್ಲ 3
--------------
ಶ್ರೀಪಾದರಾಜರು
ಚಿತ್ತಜನೈಯ ಮಿತ್ರೆರಾಡಿದ ಉತ್ರಮನಸಿಗೆ ತಂದನು ಅವರ ಉತ್ರ ಮನಸಿಗೆ ತಂದನು ಮಿತ್ರೆ ದ್ರೌಪತಿ ಸುಭದ್ರೆ ಮುಯ್ಯವಇವತ್ತೆ ತಿರುಗಿಸಿರೆಂದನು ಪ. ಧನ್ಯ ಭಕ್ತರ ಮನೆಗ್ಹೋಗುವ ಎನ್ನ ಸನ್ಮತವೆಂದನುಮುನ್ನ ಆಲಶ್ಯವÀ ಮಾಡದೆಹೊನ್ನ ರಥ ಹೊರಗಿನ್ನು ಇಡಿಸೆಂದ1 ಕುಂತಿ ಮಕ್ಕಳು ಸಂತೋಷಿಸುವುದು ಎಂಥ ಹರುಷವಿದೆಂದನು ಎನಗ ಕಾಂತೆಯರೇರುವ ಕುದುರೆ ರಥಗಳು ಚಿಂತಾಮಣಿ ತಾ ಪಂಥವ ಗೆಲಿಸೆಂದ2 ಕಾತಿಲೆ ಐವರು ನೀತಿ ನೋಡಲು ಪ್ರೀತನಾಗುವೆÉನೆಂದನು ಭೂತಳದಿ ಕುಂತಿ ಜಾತರನ ನೋಡೋ ಆತುರದಿಒಂದೂ ಮಾತು ಸೊಗಸದು 3 ಮಾನಿನಿ 4 ಮೋದ ಸೂಸುತ 5
--------------
ಗಲಗಲಿಅವ್ವನವರು
ಚಿತ್ತಜನೈಯನ ಕೂಡ ಅರ್ಥಿಲೆ ಹೋಗುವಾಗ ಹಸ್ತಿನಾವತಿಯ ಕಂಡರು ಜತ್ತಾಗಿ ಜನರು ಪ. ನದ ನದಿಗಳ ದಾಟಿ ಮುದದಿಂದ ಮುಯ್ಯಕ್ಕೆ ಬರಲು ಅದ್ಭುತವಾಗಿ ಬೆಳಗೋದೆಅದ್ಭುತವಾಗಿ ಬೆಳಗೋದೆ ನಗರಿಯುಇದೇ ವೈಕುಂಠ ಹೌದೇನ1 ತರಣಿ ತರಣಿ ಸರೋವರ ಇವ ನೋಡಗಗನಕ್ಕೆ ಸರಳಾಗಿ ಬೆಳೆದ ಮರನೋಡ2 ಆಲ ಅಶ್ವತ್ಥ ಶಾಲ ಶಾಬರವೃಕ್ಷ ಸಾಲು ಮಂಟಪ ನೋಡ ಸಾಲು ಮಂಟಪ ಇವ ನೋಡ ದೇವಾಲಯವು ವಿಶಾಲವಾಗಿದ್ದ ಬಗಿ ನೋಡ3 ಪ್ಯಾಟಿ ಬಾಜಾರ ಸಾಲು ಥಾಟಾಗಿ ತೋರುವುದೆ ಕೋಟಿ ಸೂರ್ಯರ ಬೆಳಕಿಲೆಕೋಟಿ ಸೂರ್ಯರ ಬೆಳಕಿಲೆ ಒಪ್ಪೊ ನಗರಿಯ ಮಾಟ ವರ್ಣಿಸಲು ವಶವಲ್ಲ4 ಹತ್ತಿ ಗೋಪುರ ಕೋಟಿ ಹಚ್ಚಿದೆ ಧ್ವಜ ಕೋಟಿಮತ್ತ ಪತಾಕೆಗೆ ಮಿತಿ ಇಲ್ಲಮತ್ತ ಪತಾಕೆಗೆ ಮಿತಿಯಿಲ್ಲ ಹರಿಣಾಕ್ಷಿಸತ್ಯ ಲೋಕವು ಹೌದೇನ5 ಅಟ್ಟಾಲದ ಮ್ಯಾಲೆ ಧಿಟ್ಟಾದ ಗೊಂಬೆಗಳು ಕೃಷ್ಣಗೆ ಕೈಯ್ಯ ಮುಗಿವಂತೆ ಕೃಷ್ಣಗೆ ಕೈಯ್ಯ ಮುಗಿವಂತೆ ನಿಲ್ಲಿಸಿದ್ದುಎಷ್ಟು ವರ್ಣಿಸಲು ವಶವಲ್ಲ6 ಜತ್ತಾದ ಮನೆಗಳಿಗೆ ರತ್ನದ ಶೋಭೆ ನೋಡಹತ್ತು ದಿಕ್ಕುಗಳ ಬೆಳಗೋವೆÉಹತ್ತು ದಿಕ್ಕುಗಳ ಬೆಳಗೋವೆÉ ಸ್ವರ್ಗವಎತ್ತಿಟ್ಟರೇನ ಐವರು7 ಚಂದದ ಮನೆಗಳಿಗೆ ಮುತ್ತಿನ ಹಂದರ ತೋರಣUಳೆಷ್ಟುಶ್ರೀ ಗಂಧದ ಥಳಿಯ ಸೊಬಗೆಷ್ಟುಶ್ರೀ ಗಂಧದ ಥಳಿಯ ಸೊಬಗೆಷ್ಟ ರಂಗವಾಲಿಅಂದವಾಗಿದ್ದ ಜಗುಲಿ ಎಷ್ಟ 8 ತಾರಕ್ಕಿ ಹೊಳವಂತೆ ತೋರೋದೀವಿಗೆ ಎಷ್ಟನೀರೆ ನಿಲಿಸಿದ್ದ ಕನ್ನಡಿ ಎಷ್ಟನೀರೆ ನಿಲಿಸಿದ್ದ ಕನ್ನಡಿ ಎಷ್ಟ ಉಪ್ಪರಿಗಿಏರಿ ನೋಡುವ ಜನರೆಷ್ಟ 9 ಶ್ರೀಶನ ಮುಖವನೆ ಸೋಸಿಲೆ ನೋಡುತ ಈಜಾಡಿ ಸುಖದ ನದಿಯೊಳು ಈಜಾಡಿ ಸುಖದ ನದಿಯೊಳುಬಹುಜನ್ಮಕ ಲೇಸಾದ ಪುಣ್ಯ ಫಲಿಸಿತು10 ಮೇಲಾದ ಮನೆಗಳ ಮ್ಯಾಲೆ ಸಾಲು ಗೊಂಬಿಗಳ ನೋಡ ಶ್ರೀಲೋಲ ರಾಮೇಶಗೆ ಕೈ ಮುಗಿವಂತೆಶ್ರೀಲೋಲ ರಾಮೇಶಗೆ ಕೈ ಮುಗಿದುಹರಿಣಾಕ್ಷಿ ಕಾಲಿಗೆ ಎರಗುವ ಪರಿಯಂತೆ 11
--------------
ಗಲಗಲಿಅವ್ವನವರು
ಚಿತ್ತದ ಕ್ಲೇಶವ ಭಂಜಿಸಿ ವಾಸುದೇವನೆ ದಯದಿ ಹರೆ ಪ ಇಂದಿರಾವದನಾರವಿಂದ ಭಾಸ್ಕರ ಕುಂದರದನ ವದನ ಹರೆ 1 ಪಾವನ ಮೂರುತಿಯೆ ಹರೆ 2 ಚಿನ್ಮಯ ರೂಪನೆ ಬ್ರಹ್ಮಕಾರಣಗುಣ ನಿರ್ಮಲ ನಿರ್ಗುಣನೆ ಹರೆ 3 ಭೋಗಿ ಭೂಷ ನುತನೆ ಹರೆ 4 ಧ್ಯಾನವ ಗೈಯುವೆನೈ ಹರೆ 5
--------------
ಬೇಟೆರಾಯ ದೀಕ್ಷಿತರು
ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು ದುಷ್ಟವಿಷಯಕ್ಕೆ ಎರಗುವÀ ಮನವನ್ನು ಅಚ್ಚುತನ ಚರಣದಲಿ ಇರಿಸುವೆ1 ಮನದಭಿಮಾನಿಯೆ ಇವನ ನಾ ಬಲಗೊಂಡು ದುರುಳ ವಿಷಯಕೆ ಎರಗುವ ಮನವನ್ನು ನರಹರಿಯ ಚರಣದಲಿ ಇರಿಸುವೆ 2 ಅಚ್ಚುತನೆ ನಾ ನಿನ್ನ ಹೆಚ್ಚು ಬೇಡೋದಿಲ್ಲ ಕಷ್ಟಕಾಲದಲ್ಲಿ ಹರಿಯೆಂಬ ಸ್ಮರಣೀಯೊ ರಕ್ಷಿಸೋ ಲಕ್ಷ್ಮೀರಮಣನೆ 3 ನರಹರಿಯೆ ನಾ ನಿನ್ನ ಹಿರಿದ ಬೇಡೋಳಲ್ಲ ಸರ್ವಕಾಲದಲಿ ಹರಿಯೆಂಬೋ ಸ್ಮರಣೀಯ ಕರುಣಿಸೋ ಲಕ್ಷ್ಮೀರಮಣನೆ 4 ಪಾಲ್ಗಂಜಿಯೆಂದರೆ ಅರಗಂಜಿಯಾಹೋದೆ ಲಕ್ಷ್ಮೀರಮಣಗೆ ಎಂಟುಗುಣಳುಂಟೆಂದರೆ ಮೇಲಿದ್ದ ಗುಣಗಳಡಗೋದೆ 5 ಪಂಚಕನ ದೇಹದಲಿ ನಿಂತೆರಡು ಪಕ್ಷಿಗಳು ಸಂತತ ದುಃಖಿ ಸುಖಿಯೊಬ್ಬ ಜೀವಗೆ ನಿಂತು ಸುಖ ದುಃಖ ಕೊಡುತಿತ್ತು 6 ಪಂಚಮೂರುತಿ ಹರಿಯ ಅಂತರಂಗದಿ ಇಟ್ಟು ಸಂತತ ಸ್ವಪ್ನ ಸುಷುಪ್ತಿ ಏರಿಸುವ ಪ್ರಾರ್ಥಿಸಿ ಪ್ರಾಜ್ಞರಿಗೆ ಸರಿಯೆಂಬೆ7 ಈ ಜಾಗ್ರದವಸ್ಥೆಯಲಿ ನಾನಾವಿಧ ಕರ್ಮಗಳ ಪ್ರೇರಿಸಿ ಸಕಲ ಶ್ರೀಕಾರ ಮಾಡುವೊ ಸ್ವಾಮಿ ಶ್ರೀಹರಿಗೆ ಶರಣೆಂಬೆ 8 ನಡೆವುದು ನಿನ್ನ ಯಾತ್ರೆ ನುಡಿವುದು ನಿನ್ನ ನಾಮಸ್ಮರಣೆ ಅಡಿಯಿಡೋದೆಲ್ಲ ಹರಿಯಾತ್ರೆ ಗುರುಪೂಜೆ ಸ್ಮರಣೇಯ ಪಾಲಿಸೋ ಲಕ್ಷ್ಮೀರಮಣನೆ 9 ವಿಷ್ಣುಭಕ್ತಿಯಿಲ್ಲದೋರ ಹತ್ತಿರ ನಾನಿರೆ ಎಚ್ಚರಿತು ಮಾಡೆ ಗೆಳೆತನವ ಅವರ ಕಂಡರೆ ನಾನು ಕಿಚ್ಚ ಕಂಡಂತೆ ಕೊಲ್ಲಿಸುವೆ 10 ಹರಿಭಕ್ತಿಯಿಲ್ಲದೋರ ಹತ್ತಿರಲಿ ನಾನಿರೆ ಅರೆಘಳಿಗೆ ಮಾಡಿ ಗೆಳೆತನವ ಅವರ ಕಂಡರೆ ತಾನು ಉರಿಯ ಕಂಡಂತೆ ತೊಲಗುವೆ 11 ಕಾಶೀಪಟ್ಟಣ ಶ್ರೀ ವಾಸುದೇವರು ಭೂಮಿ ಹರಿದಾಸರು ಕಟ್ಟಿಸಿದ ಸ್ಥಳದಲ್ಲಿ ಹರಿಯ ನಿಜದಾಸಗೆ ವಿಶ್ವನಾಥನೆಂತೆಂಬೊ ಪೆಸರುಂಟು 12 ಹರಿದಾಸರ ಒಳಗೆ ಪರಮ ವೈಷ್ಣವನ್ಯಾರೆ ಕಿರಿಯ ಕೆಂಜೆÉಡೆಯ ಮಕುಟನೆ ಅಜನ ಸುತನಾ ಶಿವನು ಹರಿದಾಸಕಾಣೆ ಹುಸಿಯಲ್ಲ13 ಗುಣಮಣಿಧಾಮಗೆ ಮಣಿದೊಮ್ಮೆ ಇಕ್ಕದೆ ಹಲವು ದೈವಗಳ ಭಜಿಸಿದ ಪಾಪಿ ನೀನು ಮಣಿಮಂತ ಹೋದಗತಿಗ್ಹೋಗ್ವೆ 14 ಎದ್ದು ತಮಸಿಗೆ ಉರುಳುವೊ ಪಾಪಿ ನೀ ಅದ್ವೈತ ಹ್ಯಾಗೆ ಬಿಡದ್ಹೋದಿ 15 ಅಳಿದ್ಹೋಗೊ ಶರೀರವನು ನರಹರಿಗೆ ಸರಿಯೆಂಬೆ ಬಿಡದೆ ತಮಸಿಗೆ ಉರುಳವೊ ಪಾಪಿ ನೀ ಚಲಹವನು ಹ್ಯಾಗೆ ಬಿಡದ್ಹೋದಿ 16 ನಾಶ್ವಾಗೊ ಶರೀರವನು ವಾಸುದೇವಗೆ ಸರಿಯೆಂಬೆ ಹೇಸದೆ ತಮಸಿಗೆ ಉರುಳವೊ ಪಾಪಿ ನೀ ವಾಸನೆ ಹ್ಯಾಗೆ ಬಿಡದ್ಹೋದಿ 17 ಈ ಸೃಷ್ಟಿಯೊಳಗೆ ಅಚ್ಚುತಗೆ ಸರಿಯುಂಟೆ ಮೆಚ್ಚಿ ನೀ ಮನವೆ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 18 ಭೂಮಿಯೊಳಗೆ ಶ್ರೀರಾಮನಿಗೆ ಸರಿಯುಂಟೆ ಮಾನುನೀ ಮನವೇ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?)ಎಲೆಯ ಒತ್ತಿ ಹಿಂಡಿದರೆ ರಸವುಂಟೆ 19 ಭೂಮಂಡಲದೊಳಗೆ ರಂಗಗೆ ಸರಿಯುಂಟೆ ಅಂದು ನೀ ಮನವೆ ಕೆಡಬೇಡ ಅಲ್ಲಿತ್ತಾರಾ (ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 20 ವಿಷ್ಣು ಸರ್ವೋತ್ತಮನೆಂದು ಇಟ್ಟರೆ ಮುಂಡಿಗೆಯ ಮುಟ್ಟಲಂಜಿದನೆ ಪರವಾದಿ ಪರವಾದಿ ತತ್ವದ ಬಟ್ಟೇನೂ ಕಾಣದಿರುತಿದ್ದ21 ಹರಿಸರ್ವೋತ್ತಮನೆಂದು ಇರಿಸಿದರೆ ಮುಂಡಿಗೆಯ ಹಿಡಿಯಲಂಜಿದನೆ ಪರವಾದಿ ಪರವಾದಿ ತತ್ವದ ವಿವರವನು ಕಾಣದಿರುತಿಹ 22 ಅರಣ್ಯದ ಅಡವೀಲಿ ಗೋಡೇನು ಹಾಕಿದರೆ ಯಾರು ಕೂಲೀನಕೊಡುವೋರು ಸಂಕರನ ಮತವನು ಮಾಯದಿಂ ಮೆಚ್ಚಿ ಕೆಡಬ್ಯಾಡ 23 ಅತ್ತಿಹಣ್ಣಿನಂತೆ ಮಿಥ್ಯವಾದಿಮತ ಬಿಚ್ಚಿನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಮುತ್ತಿನ ಸರವ ತೆಗೆದಂತೆ 24 ಆಲಹಂಣೀನಸಂತೆ ಮಾಯಾವಾದಿಮತ ಸೀಳಿ ನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಹೂವ್ವಿನ ಸರವ ತೆಗೆದಂತೆ 25 ಭಾಗವತ ಅರ್ಥಸಾರವೆಲ್ಲವ ತಿಳಿದು ಹೇಳಿದನೆ ತತ್ವ ಕಥೆಗಳ ಜ್ಞಾನ ಭಕ್ತಿವೈರಾಗ್ಯವ ಈವನೆ ನಮ್ಮ ಹಯವದನ 26
--------------
ವಾದಿರಾಜ
ಚಿತ್ತಾಭಿಮಾನಿ ಬಾರೆ ತ್ವಚ್ಚರಣಕಮಲ ತೋರೆ ಪ ಭೃತ್ಯಾರ್ಥಕಾರಿಣೆ ನೀರೆ ಭುವನೈಕ ಸುಗುಣಧಾರೆ ಅ.ಪ ನಿರ್ಜರವರದೆ ಸಂಪನ್ನೆ ನಿಗಮಾಭಿಮಾನಿ ಪ್ರಸನ್ನೆ 1 ಬುದ್ಧ್ಯಾದಿ ತತ್ವದೊಡೆಯರು ಭೃತ್ಯರು ನಿನಗೆನಿಸುವರು ಬದ್ಧರು ನಿಮ್ಮನ್ನು ಬಿಟ್ಟು ದುರ್ಭವದಿ ಬೀಳ್ವರು ಕೆಟ್ಟು 2 ಜಾನಕಿ ನೀನೆ ಮಹಾಮಾಯೆ ಮನ್ಮಾನಸದೊಳಿರು ತಾಯೆ 3 ಐಶ್ವರ್ಯಮದದಿ ಕೆÀಲರು ಈಶ್ವರಿ ನಿನ್ನನು ಮರೆಯುವರು ಪಶ್ವಾದಿಗಳ ಸಮವವರೂ ನಿಸ್ವರಾಗಿಗತಿ ದೂರರಹರು 4 ಸ್ವಾಮಿ ಜೀವೇಶ ತವ ಭರ್ತ ಕಾಮಿತ ಪ್ರದಾಯಕ ಪಾರ್ಥ- ಸೂತನ ನಾಮ ಸ್ಮರಣೆ ಸ್ವಾರ್ಥ ಗುರುರಾಮ ವಿಠಲ ಕರ್ತ 5
--------------
ಗುರುರಾಮವಿಠಲ
ಚಿತ್ತಾವೆ ಚಿಂತಿಸು ಶ್ರೀ ಹರಿಯನ್ನ | ಗುಣಗಣ ಮಣಿಯನ್ನ ಪ ದ್ರುತ :ಕೃತ್ತಿವಾಸನುತ ಹೃತ್ಕಮಲಸ್ಥನ |ಸುಸ್ಥಿರ ಚಿತ್ತದಿ ನೀ ನಿಲಿಸುತ್ತ ಅ.ಪ. ಪರ ಪರ ಪರ ಮಖಗಳೆಂದು 1 ಪರ ಪರ ಪರ ಗತಿಗಳಿಗೆಂದು 2 ಸೇವ್ಯ ಸೇವಕನೆಂದು | ಪ್ರೇರ್ಯ ಪ್ರೇರಕನೆಂದೂ |ಕಾರಣ ಕಾರ್ಯಗಳಲಿ ನಾರಾಯಣ |ಪೂರಣನಹುದೆಂದು ನೀ ನಮಿಸುತ್ತ 3 ಸೃಷ್ಟ್ಯಾದ್ಯಷ್ಟಕ ಕಾರಣ ಕರ್ತ | ಇಚ್ಛಾ ಮಾತ್ರ ಸಮರ್ಥಶಿಷ್ಟೇಷ್ಟ ಪುಷ್ಟ ಮಹಿಮನು ಎನುತ | ಹೃಷ್ಟ ನೀನಾಗೊ ಸತತಾ | ಕಷ್ಟ ಕ್ಲೇಶಹರ ಭೃತ್ಯಾಭೀಷ್ಟದ | ವೃಷ್ಟಿಕುಲೇಶನ ನಿಷ್ಠೆಯಲಿಂದ 4 ಉಂಬೂವ ಉಡುವ ಕ್ರಿಯೆಗಳನೆಲ್ಲ | ಹಂಬಲಿಸುವುದೆಲ್ಲಚುಂಬೀಸಿ ಮಕ್ಕಳ ಮುದ್ದಿಪುದೆಲ್ಲ | ಬಿಂಬನದೆಂಬ ಸೊಲ್ಲ |ಬಿಂಬನು ಗುರು ಗೋವಿಂದ ವಿಠಲ - ಸೂಕ್ಷ್ಮಾಂಬರದಲಿ ಮಾಡಿ ಮಾಡಿಪನೆಂದು 5
--------------
ಗುರುಗೋವಿಂದವಿಠಲರು
ಚಿತ್ತೈಸಬೇಕೆನ್ನ ಮಾತು ಕೇಳಯ್ಯ ಮತ್ತೆ ಹುಟ್ಟದಂತೆ ಮಾಡೊ ರಂಗಯ್ಯ ಪ ನಾನಾ ಯೋನಿಯಲೆನ್ನ ನೀನಿಡದಿರಯ್ಯ ಶ್ರೀನಿವಾಸ ಬೇಡಿಕೊಂಬೆ ಶ್ರೀ ರಂಗಯ್ಯ 1 ದೀನ ರಕ್ಷಕನೆಂದು ದೈನ್ಯದಿಂ ಬೇಡುವೆ ಜ್ಞಾನವಂತನ ಮಾಡಿ ಸಲಹೊ ರಂಗಯ್ಯ 2 ದಾನವಾಂತಕ ನಿನ್ನ ಭಕುತರಪರಾಧ ನೀನೆಣಿಸದೆ ನಿರುತ ಸಲಹೊ ರಂಗಯ್ಯ 3 ನಾ ನಿನ್ನ ಮರೆತರೂ ನೀ ನನ್ನ ಮರೆಯೆ ಏನೆಂಬೆ ನಿನ್ನ ಕರುಣಕೆ ಶ್ರೀ ರಂಗಯ್ಯ 4 ಭಾನು ಕೋಟಿ ಪ್ರಕಾಶ ಶ್ರೀ ರಂಗಯ್ಯವಿಠಲ ಮಾನದಿಂದಲಿ ಪೊರೆಯೊ ಶ್ರೀನಿಧಿ ರಂಗಯ್ಯ 5
--------------
ರಂಗೇಶವಿಠಲದಾಸರು
ಚೈತ್ರದುತ್ಸವ ಗೀತೆ ಚೈತ್ರಮಾಸದ ಕೃಷ್ಣಪಕ್ಷ ಷಷ್ಠಿಯಲಿ ಕಟ್ಟಿ[ದರು] ಕಂಕಣವನು ಸೃಷ್ಟಿಗೀಶ್ವರಗೆ ಪ. ಮೊದಲು ದಿವÀಸದಿ ಧ್ವಜಪಟವನೇರಿಸಿ ಸುರರು 1 ಯಾಗಶಾಲೆಯ ಪೊಕ್ಕು ಯಾತ್ರದಾನವ ಬೇಡಿ ಸೂತ್ರ ಧರಿಸಿದರು 2 ಸರ್ಪಮೊದಲಾದ ಅಲ್ಲಿರ್ಪ ವಾಹನವೇರಿ ಕಂ ದರ್ಪನಪಿತ ಬಂದ ಚಮತ್ಕಾರದಿಂದ 3 ಬೆಂಡಿನ ಚಪ್ಪರ ಬೆಳ್ಳಿಕುದುರೆಯನೇರಿ ಪುಂಡರೀಕಾಕ್ಷ 4 ರೇವತಿ ನಕ್ಷತ್ರದಲಿ ಏರಿ ರಥವನ್ನು [ತಾ] ವೈಯ್ಯಾರದಿಂದಲೆ ಬಂದ ವಾರಿಜನಾಭ 5 ಗೋವಿಂದ ಗೋವಿಂದಯೆಂದು ಪ್ರಜೆಗಳು [ತಾವಾ]ನಂದದಿಂದ ನೋಡಿ ಪಾಡುತ್ತ 6 ಗೋವುಗಾಣಿಕೆಯನ್ನು ಗೋಪಾಲರು ತಂದು ನೀ ಲಾವರ್ಣನಿಗಿತ್ತರು ನೇಮದಿಂ ಪೂಜೆಯ 7 ಧ್ವಜಮಂಟಪದಲ್ಲಿ ಹರಿಭಜನೆಗಳ ಮಾಡು[ತ್ತಿರೆ] ಭುಜಗಶಯನನು ವರವಿತ್ತು ಕಳುಹಿದನು 8 ಸಪ್ತಾವರಣವ ಸುತ್ತಿ ತೀರ್ಥವನಿತ್ತು ಅರ್ಥಿಯಿಂದಲೆ ಬಂದ ಭಕ್ತವತ್ಸಲನು 9 ಬೊಂಬೆ ಅಂದಣವೇರಿ[ದ] ಅಂಬುಜನಾಭ ಕುಂಭಿಣಿಗಧಿಕವೆಂತೆಂಬ ಶ್ರೀರಂಗ 10 ಚಿತ್ರರಥ[ದ] ವಿಚಿತ್ರಮೂರುತಿಯ ನೋಡಿ ಪ ವಿತ್ರರಾದರು ಧಾತ್ರಿ[ಯ] ಉತ್ತಮರೆಲ್ಲ 11 ಬಂದ ಪ್ರಜೆಗಳು ಎಲ್ಲ ಆನಂದದಿ ಪೋಗೆ ಬಂದು ಆಸ್ಥಾನದಿ ನಿಂದ ಶ್ರೀರಂಗ 12 ಸೃಷ್ಟಿಯಲಿ ಪುಟ್ಟಿದ ದುಷ್ಟಪ್ರಾಣಿಗಳ [ನೆಲ್ಲ] ಶ್ರೇಷ್ಠ ಮಾಡಲಿ [ನಮ್ಮ] ವೆಂಕಟರಂಗ 13
--------------
ಯದುಗಿರಿಯಮ್ಮ
ಚೋದ್ಯ ಕೇಳಿಚಿತ್ರದ ಹೂವಿನ ಹವಳ ಕಾಯಾಗುವಅರ್ಥವ ತಿಳಿದು ಹೇಳಿ 1 ಸುಟ್ಟ ಬೀಜವ ಬಿತ್ತಿ ಬೆಳೆಯ ಬಾರದ ಕಾಯಿಬೆಟ್ಟದಿ ಸಾರವನುತೊಟ್ಟು ಇಲ್ಲದ ಹಣ್ಣ ಮುಟ್ಟಿ ಕೊಯ್ವನು ಒಬ್ಬಹುಟ್ಟು ಬಂಜೆಯ ಮಗನು 2 ಒಣಗಿದ್ದ ಮರನೇರಿ ಹಣ್ಣು ಕಾಯನು ಮಗನುದಣಿಯದೆ ಮೆದ್ದಿಳಿದ ರಣದಲ್ಲಿ ತಲೆ ಹೊಯ್ದ ರುಂಡವು ಬೀಳಲುಹೆಣನೆದ್ದು ಕುಣಿದಾಡಿತು 3 ಕಣ್ಣಿಲ್ಲದಾತನು ಕಂಡು ಪಿಡಿದ ಮೃಗಕೈಯಿಲ್ಲದಾತನೆಚ್ಚಮಣ್ಣಲಿ ಹೊರಳುವ ಕಾಲಿಲ್ಲದಾತನುಗಣ್ಯವಿಲ್ಲದೆ ಪಿಡಿದ 4 ಎಲ್ಲರು ಕೇಳಿ ಕನಕ ಹೇಳಿದ ಮಾತಎಲ್ಲರೂ ಗ್ರಹಿಸಿಕೊಳ್ಳಿಬೆಳ್ಳಿ ಕಣ್ಣಿನವಗೆ ತಿಳಿಯಲಾರದ ಮಾತುಬಲ್ಲಾದಿಕೇಶವನು 5 |
--------------
ಕನಕದಾಸ
ಛಳಿಸದಿರು ಚಂಡಿ ತನುವೆ ನೀನುಒಳಗಾಗದೊರಟುತನವೆ ತರವೆ ಪಗರ್ಭವಾಸವಗಳಿಸಿದೆ ಹಾಗೆ ನೀನರ್ಭಕತ್ವದಲಾಡಿದೆ ಬಿಡದೆನಿರ್ಭಯದಿ ನೀ ಬದುಕಿದೆ ಭೋಗದಲಿದುರ್ಭಗರ ದಾರಿಗೊಲಿದೆ ನಲಿದೆ 1ಕಾಮಾಂಧಕಾರಕೆಳೆದೆ ನನ್ನ ನಿಷ್ಕಾಮದಲಿ ನಿಲಿಲೀಸದೆ ಕಳದೆನೇಮಕ್ಕೆ ನೀನಲಸಿದೆ ಶೀತೋಷ್ಣಭೀಮಕ್ಕೆ ನೀ ಬೆದರಿದೆ ಬರಿದೆ 2ಕಾಲಗಳ ಬಹು ಕಳಸಿದೆ ವ್ಯರ್ಥದಲಿಶ್ರೀಲೋಲನನುಸರಿಸದೇ ಹೋದೆಮೂಲವನೆವರೆ ಮಾಡಿದೆ ದೋಷಗಳಕೀಲುಗಳಿಗಳಿಕಾಲ್ನೀಡಿದೆ ಜಡಿದೆ 3ಮನವೀಗ ಮಾಡಿತಿನಿತಾ ನಾನಿದಕೆಮನೆ ಮಾತ್ರವಾಗೆ ಮಾತನಿಡುತಾತನುವಿನಲಿ ತಪ್ಪಿಡಿಯುತಾ ಯಾಕೆ ನೀನೆನುವೆಯನೆ ನೀನೆ ಚಿತ್ತವ್ರಾತಾ 4ಮನ ನೀನೆ ನೀನೆ ಮನವೂ ಕ್ರಿಯೆಯಮನ ಮಾಡೆ ಮೂಡ್ದೆತನುವೂ ಘನವೂನೆನೆಯಲೆರಡಿಲ್ಲ ನೀವು ಏಕತ್ವವೆನುತೆಂದೆನಿರೆ ಬಂಧವೂ ದಿಟವೂ 5ಕಾರಣವೆ ಮನವಾದರೆ ಅದರೊಡನೆಹೋರುವೆನು ನಾನು ಹೆದರೆನದರೆತೋರೆ ನೀ ಮುಂದೆ ಬೇರೆ ಬಂಧನವೂಬೀರಿತಿದು ನೀ ಕಯ್ಯಾರೆ ತಾರೆ 6ನೀ ಬಾರದಿರುವೆಯಲ್ಲ ುೀಮಾತನಾ ಬಾಯಲೆನ್ನೆನಲ್ಲಾ ಸೊಲ್ಲಾಆ ಬಗೆಯ ಮೂಡಿತಿಲ್ಲ ಇದಿರಾಗಿನೀ ಬಂದು ನಿಲಲು ಸಲ್ಲಾ ಹೊಲ್ಲಾ 7ನನಗುಂಟು ಮನಸಿಗುಂಟು ವ್ಯವಹಾರನಿನಗಾಗಬಾರದಂಟೂ ನಂಟುಜನಿಸಿಬರೆ ಬಂತುಗಂಟು ಆವರಣವೆನಗಾುತು ಪದರವೆಂಟೂ ಬಂಟೂ 8ಅನುಮಾನವಿಲ್ಲವಿಸಿದಕೆ ಪ್ರತ್ಯಕ್ಷವನುಭವಿಸಿ ಪೇಳ್ದೆನದಕೆ ಅಳುಕೆಜಿನುಗದಿರು ಮುಂದೆ ಜೋಕೆ ಹರಿಯಂಘಿü್ರಯನುಸರಿಸದಂದವೇಕೆ ಬೇಕೆ 9ಹರಿಪಾದಪದ್ಮವನ್ನು ನಾನುಬೆರೆವೆ ನೀ ಬಳಲಿಕೆಯನೂ ುನ್ನೂತರಬೇಡ ತಥ್ಯವನ್ನು ಪಡೆವದಕೆಬರೆ ಮುಂದೆ ಬಹುಮಿತ್ರನೂ ನೀನು 10ಶರೀರವಿರೆ ಶ್ರಮವು ನಿನಗೆ ಜನ್ಮಗಳಧರಿಸುತ್ತ ದಣಿವು ನಿನಗೆ ಹೀಗೆಸರಿಯಾಯ್ತು ದುಃಖ ನಮಗೆ ಇದಕಂಡುಇರುವ ಬಗೆ ವಿಶ್ವದೊಳಗೆ ಹೇಗೆ 11ಅದರಿಂದ ನೀನು ನಾನು ಒಂದಾಗಿಹುದುಗಲಾದಿಯನೀಶನೂ ತಾನುಪದವಿಯನು ಪಾಲಿಸುವನು ಬಳಿಕಲಿನ್ನುದುಸುವಕಷ್ಟಗಳನೂ ಕೊಡನೂ 12ಬರುವದಾನಂದ ನಮಗೆ ತಿರುಪತಿಯವರದ ವೆಂಕಟರಮಣಗೆ ಎರಗೆಭರಿತಾತ್ಮಗಾವು ಹೊರಗೆ ಹೀಗೆ ನಾವಿರಲುಂಟು ದೇವನೊಳಗೆ ಸಲುಗೆ 13ಕಂ||ಛಂದಾನುವೃತ್ತಿ ಮೂರ್ಖರಿಗೆಂದಾಡಿದ ನುಡಿಯು ಸತ್ಯವಾುತೀ ದೇಹವುಮುಂದೊರದೆ ಪೇಳಲುತ್ತರನೀಂದೊಡಬಡಿಸುತ್ತ ಕೇಳಿಕೊಳುತಿಹದೊಲವಿಂ
--------------
ತಿಮ್ಮಪ್ಪದಾಸರು