ಒಟ್ಟು 496 ಕಡೆಗಳಲ್ಲಿ , 74 ದಾಸರು , 404 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯಾ ಪೂಜೆಯಾ ಮಾಡಿ ಗತಿಗಳ ಬೇಡಿ ಹರುಷದಿ ಕೂಡಿ ನಲಿ ನಲಿದಾಡಿ ಪ ಎಲ್ಲರೊಳು ಬಾಗಿ ನಡಿಬೇಕು ಸಾಗಿ ಖುಳ್ಳತನ ಹೋಗಿ ಏಕೋ ನಿಷ್ಟಾಗಿ ನಿಲ್ಲದೇ ವದಗಿ ಸಮದೃಷ್ಟಿ ತೂಗಿ 1 ನಿತ್ಯ ತಿಳಿದು ವಿಚಾರ ಬಲಿದು ಕುತ್ತಾಪಗಳದು ಸತ್ಯಗದಲ್ಲಿದ್ದು ಸತ್ಯಜ್ಞಾನ ಪಡೆದು ಸದ್ಬಾವ ಜಡಿದು ಚಿತ್ತ ಚಂದಲ ಜರಿದು ಮದ ಮತ್ಸರ ಜರೆದು 2 ತನ್ನದಿದಲ್ಲಾ ಸಿರಸೌಖ್ಯವೆಲ್ಲಾ ಇನ್ನು ತಿಳಿಲಿಲ್ಲಾ ಈ ಮರಹು ಸಲ್ಲಾ ಸನ್ನು ತನೆಬಲ್ಲಾ ಈ ಸಾಕಾಯ ವೆಲ್ಲಾ ಮನ್ನಿಸಿ ನೀವೆಲ್ಲಾ ಮಹಿಪತಿ ಜನಸೊಲ್ಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೇ ಎನ್ನ | ಮರೆತಿರುವರೆ ಇದು ಸರಿಯೇ ಪಾಲಿಸು ನೀ ದೊರೆಯೇ | ತರಳತನದಿ ನಾ ಮರೆತೆನೆಂದು ನೀ ಜರೆದು ಬಿಟ್ಟರೆ ಮುಂದೆ ಪೊರೆವರಾರೈ ಶ್ರೀ ಪ ಒಡೆಯ ನೀನಾಗಿ ಸಲಹುವುದೀಗ ನಿನ್ನಯ ಪದ ಜಡಜಕೆರಗುವೆ ನಾ ಬೇಗ ಕಡು ದಾರಿದ್ರ್ಯದ ಕಡಲೊಳು ಮುಳುಗಿದೆ ತಡಿಯ ಕಾಣಿಸೋ ಜಗದೊಡೆಯ ದಯದಿ ಶ್ರೀ 1 ದುರುಳ ಬಾಧಿಸುತಿರೆ ಭರದೊಳಕ್ಷಯವಿತ್ತುದ್ಧರಿಸಲಿಲ್ಲವೆ ಶ್ರೀ 2 ಪರಮೇಷ್ಠಿ ಜನಕ ಶ್ರೀ 3 ತಂದೆ ನೀನಲ್ಲವೆ ಜಗದೀಶ ಪಾಲಿಸು ನಿನ್ನ ಕಂದನಲ್ಲವೆ ಸರ್ವೇಶ ಹಿಂದ ಮುಂದನಾನೊಂದನರಿಯೆ ದಯ ದಿಂದ ಕಾಯೋ ಮುಚುಕುಂದವರದ ಶ್ರೀ 4 ಮಂಗಲ ಪುರವಾಸ ಶ್ರೀ ವೆಂಕಟೇಶ | ಅಂಗಜ ಜನಕ ರಮೇಶ | ಮಂಗಲಾಂಗ ನಿನ್ನಂಘ್ರಿ ಸೇವಕರ ಸು-ಸಂಗವ ಪಾಲಿಸು ಗಂಗಾಜನಕ ಶ್ರೀ 5
--------------
ಅನ್ಯದಾಸರು
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಹರಿಹರರು ಸರಿಯೆಂಬ ಮರುಳು ಜನರುಹರಿಹರರ ಚರಿತೆಯನು ತಿಳಿದು ಭಜಿಸುವುದು ಪ ಸುರರು ಮುನಿಗಳು ಕೂಡಿ ಪರದೈವವಾರೆಂದುಅರಿಯಬೇಕೆಂದೆರಡು ವರಧನುಗಳಹರಿಹರರಿಗಿತ್ತು ಸಂಗರವ ಮಾಡಿಸಿ ನೋಡೆಮುರಹರನು ಪುರಹರನ ಗೆಲಿದುದರಿಯಾ 1 ಕರವ ಶಿರದ ಮ್ಯಾಲಿರಿಸಿ ಖಳ-ನುರುಹಿ ಹರನನು ಕಾಯಿದ ಕಥೆಯ ನೀನರಿಯಾ 2 ದೂರ್ವಾಸರೂಪ ಹರನಂಬರೀಷನ ಮುಂದೆಗರ್ವವನು ಮೆರೆಸಿ ಜಡೆಯನು ಕಿತ್ತಿಡೆಸರ್ವಲೋಕದೊಳವನ ಚಕ್ರನಿಲಲೀಯದಿರೆಉರ್ವೀಶನನು ಸಾರಿ ಉಳಿದನರಿಯಾ 3 ಹರನಂಶ ದ್ರೋಣಸುತನು ಪಾಂಡವಾ ಎಂದುಉರವಣಿಸಿ ನಾರಾಯಣಾಸ್ತ್ತ್ರವನು ಬಿಡಲು ಹರಿ ಬಂದು ಬೇಗ ತನ್ನಸ್ತ್ರವನು ತಾ ಸೆಳೆದುಶರಣಾಗತರ ಕಾಯಿದ ಕಥೆಯನರಿಯಾ 4 ನರನಾರಾಯಣರು ಬದರಿಕಾಶ್ರಮದಲಿರೆಹರನು ಹರಿಯೊಡನೆ ಕದನವನು ಮಾಡೆಹರಿ ಹರನ ಕಂಠವನು ಕರದಲಿ ಪಿಡಿದು ನೂಕೆಕೊರಳ ಕಪ್ಪಾದ ಕಥೆ ಕೇಳಿ ಅರಿಯಾ 5 ಹರಿ ಸುರರಿಗಮೃತವನು ಎರೆದ ರೂಪವನೊಮ್ಮೆಹರ ನೋಡುವೆನೆಂದು ಸಂಪ್ರಾರ್ಥಿಸೆಪರಮ ಮೋಹನ ರೂಪಲಾವಣ್ಯವನು ಕಂಡುಹರ ಮರಳುಗೊಂಡ ಕಥೆ ಕೇಳಿ ಅರಿಯಾ 6 ಹರಿಯ ಮೊಮ್ಮನ ಬಾಣಾಸುರನು ಸೆರೆವಿಡಿಯೆಗರುಡವಾಹನನಾಗಿ ಕೃಷ್ಣ ಬಂದುಹರನ ಧುರದಲಿ ಜಯಿಸಿ ಅವನ ಕಿಂಕರನ ಸಾ-ವಿರ ತೋಳುಗಳ ತರಿದ ಕಥೆಯ ನೀನರಿಯಾ 7 ಸುರತರುವ ಕಿತ್ತು ಹರಿ ಸುರಲೋಕದಿಂದ ಬರೆಹರನು ಹರಿಯೊಡನೆ ಕದನವನು ಮಾಡೆತರಹರಿಸಲಾರದೋಡಿದ ಕಥೆಯ ನೀನೊಮ್ಮೆಹಿರಿಯರ ಮುಖದಿ ಕೇಳಿ ನಂಬು ಹರಿಯಾ 8 ಹರಸುತನು ತಪದಿಂದ ಹರಿಯ ಚಕ್ರವ ಬೇಡೆಪರಮ ಹರುಷದಲಿ ಚಕ್ರವನೀಯಲುಭರದಿಂದ ಧರಿಸಲಾರದೆ ಚಕ್ರವನಂದುಹರನು ಭಂಗಿತನಾದನೆಂದರಿಯಲಾ 9 ರಾವಣಾಸುರ ಕುಂಭಕರ್ಣ ನರಕಾದಿಗಳುಶೈವತಪವನು ಮಾಡಿ ವರವ ಪಡೆಯೆಅವರುಗಳನು ವಿಷ್ಣು ನರರೂಪಿನಿಂದರಿದುದೇವರ್ಕಳನು ಕಾಯಿದ ಕಥೆಯ ನೀನರಿಯಾ 10 ಗಂಗಾಜನಕನÀ ಸನ್ಮಂಗಲ ಚರಿತ್ರ್ರೆಗಳಹಿಂಗದಲೆ ಕೇಳಿ ಸುಖಿಸುವ ಜನರಿಗೆಭಂಗವಿಲ್ಲದ ಪದವನಿತ್ತು ಸಲಹುವ ನಮ್ಮರಂಗವಿಠ್ಠಲರಾಯನ ನೆರೆ ನಂಬಿರೋ11
--------------
ಶ್ರೀಪಾದರಾಜರು
ಹಿಗ್ಗದಿರು ಹಿಗ್ಗದಿರು ಮನುಜಪಶುವೆ | ಮುಗ್ಗಿತಗ್ಗುವುದು ಮುಂದರಿಯದಲೆ ಮರುಳಾದೆ ಪ ಆಯುದಲಿ ದ್ರೋಣಸುತ ಕೃಪ ವಿಭೀಷಣನೇನೊ | ಶ್ರೇಯದಲಿ ದಶರಥ ನಹುಷನೇನೊ || ಈಯುದ್ದಕೆ ಮಯಾರ ಧ್ವಜ ಶಿಬಿ ಬಲಿಯೇನೊ | ಮಾಯಾ ಬಿಡುವಲ್ಲಿ ಜಡ ಭರಿತ ನೀನೇನೊ 1 ಶೂರತ್ವದಲಿ ಭೀಷ್ಮ ಅಭಿಮನ್ಯು ನೀನೇನೊ | ಘೋರ ತಪಸಿನಲಿ ವಿಶ್ವಾಮಿತ್ರನೇನೊ || ವಿರುಕುತಿಯಲಿ ಸುರಸೈನ್ಯ ನಾಯಕನೇನೊ | ಹಾರುವ ಬಿಂಕದಲಿ ಗರುಡ ನೀನೇನೊ 2 ಬಲದಲ್ಲಿ ಬಲರಾಮ ಶಲ್ಯ ಕೀಚಕನೇನೊ | ತಿಳಿವಳಿಕೆಯಲಿ ವಿದುರ ಸಂಜಯನೇನೊ || ಒಲಿದು ಪಾಡುವಲಿ ನಾರದ ತುಂಬುರನೇನೊ | ಛಲ ಮಾಡುವಲ್ಲಿ ಧ್ರುವರಾಯ ನೀನೇನೊ 3 ಭಕುತಿಯಲಿ ಪ್ರಹ್ಲಾದ ಪುಂಡರೀಕನೇನೊ | ಭುಕುತಿಯಲಿ ಅಗಸ್ತ್ಯ ಬಕ ನೀನೇನೊ || ಉಕುತಿಯಲಿ ಸೂತ ಸಹದೇವ ಶೌನಕನೇನೊ | ಶಕುತಿಯಲಿ ವಾಲಿ ಯಮರಾಯ ನೀನೇನೊ 4 ಶುಕ ಜನಕ ಸನಕಾದಿಗಳೇನೊ | ಕರ್ಣ ನೀನೇನೊ || ಭೋಗ ಬಡುವಲ್ಲಿ ಮಹಾಭಾಗ ಇಂದ್ರನೇನೊ | ವೇಗದಲಿ ಪುರುಷ-ಮೃಗನು ನೀನೇನೊ 5 ಸಖತನ ಮಾಡುವಲ್ಲಿ ಶ್ವೇತವಾಹನನೇನೊ | ನಿಖಿಳ ಕಥೆ ಕೇಳುವಲ್ಲಿ ಪರೀಕ್ಷಿತನೇನೊ || ಅಖಿಳರನು ಗೆಲುವಲ್ಲಿ ಕಾರ್ತವೀರ್ಯನೇನೊ | ಸುಖದಲ್ಲಿ ಇಪ್ಪದಕೆ ಪವನ ನೀನೇನೊ 6 ವಿತ್ತದಲಿ ನೀನು ವೈಶ್ರವಣನೇನೊ | ಮತ್ತೆ ಕ್ಷಮೆಯಲಿ ಹರಿಶ್ಚಂದ್ರನೇನೊ | ಭೃತ್ಯತನ ಪಡೆವಲ್ಲಿ ಅಕ್ರೂರ ನೀನೇನೊ | ಸುತ್ತವಲಿ ಪ್ರಿಯವ್ರತ ರಾಯನೇನೊ 7 ವ್ರತದಲ್ಲಿ ಅಂಬರೀಷ ರುಕುಮಾಂಗದನೇನೊ | ಸ್ತುತಿಯಲ್ಲಿ ಮುಚುಕುಂದರಾಯನೇನೊ || ಅತಿ ಚೆಲುವತನದಲ್ಲಿ ಮನ್ಮಥ ನಕುಲನೇನೊ | ಕ್ರತು ಮಾಡುವಲ್ಲಿ ಧರ್ಮಪುತ್ರ ನೀನೇನೊ8 ಶಾಪಗಳ ಕೊಡುವಲ್ಲಿ ಬ್ರಹ್ಮಪುತ್ರನೇನೊ | ತಾಪ ತೋರುವಲ್ಲಿ ರವಿ ಅನಳನೇನೊ | ಕೋಪ ಮಾಡುವಲ್ಲಿ ಗಿರಿಜಾರಮಣನೇನೊ | ತಾಪಸಿರ ನಡುವೆ ವಸಿಷ್ಠ ನೀನೇನೊ9 ಉನ್ನತದಲಿ ನೀನು ಮೇರು ಪರ್ವತನೇನೊ | ಘನ ಮದದಲಿ ಧೃತರಾಷ್ಟ್ರನೇನೊ || ಇನ್ನು ಮತಿಯನ್ನು ಕೊಡುವಲಿ ಗಜಮೊಗನೇನೊ | ಮುನ್ನೆ ಕವನದಲ್ಲಿ ಶುಕ್ರದೇವನೇನೊ 10 ಹಮ್ಮಿನಲಿ ಬಾಳದಿರು ಹಿತವಾಗದೊ ನಿನಗೆ | ಆ ಮಹಿಮರ ಸರಿ ನೀನಲ್ಲವೊ || ಸಿರಿ ವಿಜಯವಿಠ್ಠಲರೇಯನ್ನ | ನೆಮ್ಮಬೇಕಾದರೆ ಸೋಹಂ ನಿರಾಕರಿಸು11
--------------
ವಿಜಯದಾಸ
ಹುಡುಕಿ ಕರೆತಾರೆ ಸಖಿ ಜಡಜನಯನ ಒಡೆಯನ್ಹಂಬಲ ಪಾದ ಗಡನೆ ಪೋಗಿ ಪ ಧ್ಯಾನಧೃಢ ಅವನು ಇರುವ ಸ್ಥಾನ ಪೇಳುವೆ ಜಾಣೆ ಕೇಳೆ ಹಗಲು ಇರುಳು ಖೂನವಿಲ್ಲವನಿಹ್ಯ ಸ್ಥಳದಿ ತಾನೆತಾನಾಗಿ ಸೂಕ್ಷ್ಮದಿ ಶೂನ್ಯ ಪೀಠದಿ ವಾಸಿಪ ಜಾಣನ ಜವದಿಂ ಪೋಗಿ 1 ಅರಿದು ಮರೆದಿರೆ ಅವನ ಗುರುತು ಒರೆಯುವೆ ಜರಾಮರಣಿವಲ್ಲವಗೆ ಧರಿಸಿರುವಂತವತಾರ ತಿರುಗಲು ಮೂಡವು ಅಡಿಗಳು ನೆರಳೇ ಇಲ್ಲವು ನಿಲ್ಲಲು ಶರೀರವಿಲ್ಲದೆ ತೋರುವ ಪರಮನ ತ್ವರಿತದಿ ಹಿಡಿದು 2 ಪ್ರೇಮ ಸುಂದರೀ ಅವನ ನಾಮ ಪೇಳುವೆ ನೇಮದಿಂದ ಕೂಗುತಿಹ್ಯವು ಸಾಮಯಜುರಾದಿ ವೇದವು ಆಮಹಮಹಿಮನ ಘನತರ ನಾಮದ ನೆಲೆಯೇ ಸಿಗದಿದೆ ಕಾಮಿನಿಯಂಥ ಸ್ವಾಮಿ ಶ್ರೀ ರಾಮ ಸದ್ಗುರು ಪ್ರಭುವಿನ 3
--------------
ರಾಮದಾಸರು
ಹೆಚ್ಚಿನ ಗೋಜ್ಯಾಕೆಲೆ ಹುಚ್ಚು ತಿಳಿ ಮುಚ್ಚಿಕೊಂಡಿದೆ ನಿನ್ನ ಭವಕಿಚ್ಚು ಪ ಹುಚ್ಚು ಮತಿಯ ನೀಗಿ ಅಚ್ಯುತನಂಘ್ರಿಯ ಮೆಚ್ಚಿಸಿ ಮೆಲಿ ಅನುಭವದ್ಹುಚ್ಚು ಅ.ಪ ಕೀಳನಾಗದೆ ನೀ ನಿಜವ ತಿಳಿ ನಿನ್ನ ಕಾ ಲೊಳು ಬಿದ್ದಾದ ಸಂಕೋಲಿ ನಾಳೆಗೆ ಬರುತಾದ ಕಾಲನ ದಾಳಿಯು ತಾಳದೆಳಿತಾರ ಜಡಿದ್ವಜ್ರದ ಕೀಲಿ 1 ಹಂದಿಯ ಜನುಮಕೆ ಬೀಳಬೇಡ ಬೇಡಿ ಮಂದರ ನಿಲಯನ ಹೊಂದಿ ಭಜಿಸಿ ಆನಂದಪಡಿ 2 ದೂರದಿಂದ ಬಂದಿದ್ದಿ ಹೌಹಾರಿ ತ್ವರ ವ್ಯಾ ಪಾರ ಮಾಡಿಕೊಳ್ಳೊ ಭರ್ಜರಿ ಸಾರ ಮೋಕ್ಷಾಧಿಪ ಧೀರ ಶ್ರೀರಾಮನ ಪಾದ ವಾರಿಜ ನಂಬಿ ಹೊಡಿ ಜಯಭೇರಿ 3
--------------
ರಾಮದಾಸರು
ಹೊಂದಿ ಸುಖಿಸು ಹರಿಯ ಪಾದಾ ಧ್ರುವ ನಾನಾ ಪುಣ್ಯ ನಿದಾನದಿ ಧರೆಯೊಳು | ಮಾನವ ಜನುಮಕ ನೀನೀಗ ಬಂದು | ಪರಿ ತಾ ನಿಜವರಿಯದೆ | ಜ್ಞಾನ ಶೂನ್ಯನಾಗೇ-ನಿಹುದಣ್ಣಾ 1 ಹಿಡಿವರೇ ಭ್ರಾಂತಿಯ ಜಡಿವರೆ ಮತಿಯ | ನುಡಿವರೇ ಪುಸಿಯನು ಬಿಡುವರೆ ಸತ್ಯವ | ಇಡುವರೆ ದುರ್ಗಣ ಸಿಡುವರೆ ಬೋಧಕ | ಕೆಡುವರೆ ಮರವಿಲಿ ಬಿಡುವರೆ ವ್ಯರ್ಥಾ 2 ಮೂರು ದಿನದ ಸಂಸಾರದೊಳಗ | ಕಂ | ಸಾರಿಯ ಭಕ್ತಿಯ ಸೇರಿ | ಸಾರ ಸ್ವಹಿತ ಸಹ | ಕಾರಿ ಮಹಿಪತಿ ಸಾರಿದ ಬೋಧಾ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹ್ಯಾಗೆ ಒಲಿಯುವನೊ ಎನ್ನೊಡೆಯ ರಂಗ ಹ್ಯಾಗೆ ಒಲಿಯುವನೊ ಪ ಹ್ಯಾಗೆ ಒಲಿಯುವ ಜಾಣೆ ಪೇಳಮ್ಮ ನಾಗಶಾಯಿ ನಿಗಮಾಗಮೊಂದಿತ ರಾಘವೇಶನು ಬೇಗ ಒಲಿಯದಿರೆ ನೀಗುವೆನು ಪ್ರಾಣ ಕೇಳೆ ಸಖಿಯೆಅ.ಪ ಧಣಿಯು ಇಲ್ಲದ ದುರ್ದೈವ ಬಾಳು ಹೆಣನ ಸಮವಿದು ಮನ್ನಿಸೆ ಕೆಳದಿ ಗಣನೆಯಿಲ್ಲದ ಜನಮವ್ಯಾಕಿದು ಸನಕಸನಂದರೆಣಿಕೆಯಿಲ್ಲದೆ ಮಣಿದು ಆತಗೆ ಧನ್ಯರಾದದ್ದು ನೆನೆಸಿ ಮನದೊಂದು ದಿನಸುವಾಗುವುದು ಚಿನಮಯಾತ್ಮನ ಕಾಣದಿರಲಾರೆ 1 ನೀರೆ ಬೇಗಿನ್ನು ಕರೆತಂದು ತೋರೆ ಸಾರಸಾಕ್ಷನ್ನ ಅಗಲಿರಲಾರೆ ವಾರಿಧಿಶಾಯಿನ್ನ ಹರಣದೊಡೆಯನ್ನ ಮಾರ ಸುಂದರಪಾರ ಮಹಿಮನ ಬಾರಿಬಾರಿಗೆ ಸ್ಮರಿಸಿ ಮನ ಬಲು ಘೋರ ಬಡುತದೆ ವಾರಿಜಾಕ್ಷಿ ಕರೆ ತಾರೆ ಶೀಘ್ರದಿ ನಾರಸಿಂಹನ 2 ಕಡಲೊಳಿರುವನೋ ದೃಢದಿ ಕರೆಯಲು ಒಡನೆ ಬರುವನೋ ಜಡಜಾಕ್ಷಿ ಕೇಳೆ ಜಡಜನಾಭನೋ ದೃಢಕರೊಡೆಯನೋ ಬಿಡದೆ ಆತಗೆ ಮಿಡುಕಿ ಮಿಡುಕಿ ಹಿಡಿಕಿಯಾಯಿತು ದೇಹ ಸೊರಗಿ ಒಡೆಯ ಶ್ರೀರಾಮನಡಿಗೆ ಹೊಂದಿ ನಾ ತೊಡರಿನೊಳಗಿಂದ ಕಡೆಗೆ ನಿಲ್ಲುವೆ 3
--------------
ರಾಮದಾಸರು
ಹ್ಯಾಗೆ ದೊರಕೀತು ನಿನ್ನ ಚರಣವು ನಾಗಶಯನನೆನ್ನಂಥ ಪಾಪಿಗೆ ಪ ನೀಗಿ ಹೋಯಿತು ಅರ್ಧವಯವು ಆಗಯೀಗಯಾ ವಾಗಲೋ ಹೋಗುವುದು ದೇಹ ಭೋಗದಾಸೆಯು ನೀಗವಲ್ಲದು ಎನಗೆ ಇನ್ನು ಅ.ಪ ಮನದಕ್ಲೇಶವು ಕಡಿಯವಲ್ಲದು ನೀಚತನದ ನೆನವು ಎನ್ನೊಳಳಿಯವಲ್ಲದು ಸಾಚನಾಗಿ ನಿನ್ನ ಧ್ಯಾನದಿ ಮನವುಯೆಂಬುದು ಕ್ಷಣವು ನಿಲ್ಲದು ಕ್ಷಣವು ಬಿಡದೆ ಅನ್ಯರೊಡವೆಯ ಮನದೊಳನುದಿನ ನೆನೆದು ನೆನೆದು ಘನ ಪಾಪಾತ್ಮನಾಗಿ ಚರಿಸುವೆ ಜ್ಞಾನ ಬಾರದು ಎನಗೆ ಇನ್ನು 1 ಒಡವೆವಸ್ತ್ರದ ಆಸೆ ಬಿಡವಲ್ಲದು ಪಾಪಿಮನವು ಮಡದಿ ಮಕ್ಕಳ ಮಮತೆ ತೊರೀವಲ್ಲದು ಒಡನೆ ತಿಳಿದು ಕೆಡುವ ಕಾಯದ ಮೋಹ ಮರೀವಲ್ಲದು ಜಡಮತಿಯು ಬಿಡದು ಎಡರು ಪ್ರಪಂಚ ತೊಡರಿನೊಳು ಮನ ವಡರಿ ಬಿಡದಲೆ ಮಿಡುಕಿ ಮಿಡುಕಿ ಕಡೆಯುಗಾಣದೆ ಕಷ್ಟಬಡುತಿಹೆ ಬಿಡದು ವಿಷಯದಾಸೆ ಎನಗೆ 2 ದಾಸಜನ ವ್ಯಾಸಂಗ ಮೊದಲಿಲ್ಲ ಪಾಪಿಜನುಮ ದೋಷಗುಣಗಳು ಒಂದುಬಿಟ್ಟಿಲ್ಲ ಒಡನೆನುಡಿದ ಭಾಷೆಗಳನು ತಿಳಿದು ನಡೆಸಿಲ್ಲ ಆಸೆ ಹರಿದಿಲ್ಲ ನಾಶಮಾಡಿತು ಹೇಸದಲೆ ಇನ್ನು ಮೋಸಗಾರನ ಪೋಷಿಸುವುದು ಶ್ರೀಶ ಶ್ರೀರಾಮ ನಿನಗೆ ಕೂಡಿತು 3
--------------
ರಾಮದಾಸರು
ಹ್ಯಾಂಗೆ ಮೆಚ್ಚಿದೆ ಹೆಂಗಳರನ್ನೆ ಹಲವುರೂಪ ತಾಳಿದವನ ಪ. ರಾಗ ಮಿಗಿಲು ಲಕುಮಿರಮಣ ಭೋಗಿರಾಜಶಯನನ ಅ.ಪ. ಜಲದಿ ಚರಿಸುತಿಹನು ಸತತ ಒಲಿದು ಶಿರವ ನೆಗಹಿ ನೋಡ ಸಲೆವಿಕಾರ ಕೋರೆಹಲ್ಲ ಚಲ ಮಹೋಗ್ರ ರೂಪನ ನೆಲವನಳೆದು ತಾಯಿತಲೆಯ ತರಿದು ಕರಡಿ ಕಪಿಯೊಳಾಡಿ ಒಲಿದು ಗೋವುಕಾಯ್ದು ಬತ್ತಲೆತೊಳಲಿ ತುರಗವೇರ್ದನ 1 ಸೊಗಡುಗಂಧವೆಸೆವ ತನುವು ತೆಗೆದ ಬಾಯಿ ಕುಗ್ಗಿದ ಬೆನ್ನು ಅಗೆದು ನೆಲವ ಬಗೆದು ರೌದ್ರ ಹೊಗೆಯತೋರ್ವ ವದನನ ವಿಗಡವಿಪ್ರ ರಾಜವೈರಿ ಬಗೆಯಬಡದಾರಣ್ಯವಾಸಿ ನಗವ ಬೆರಳ ತುದಿಯಲೆತ್ತಿ ಜಗದ ಲಜ್ಜೆಯ ತೊರೆದ ಕಲ್ಕಿಯ 2 ಮಿಡಿದು ಹೊಳೆವ ಚಂಚಲಚಿತ್ತ ಕಡುಕಠಿಣ ದೇಹದವನ ಹಿಡಿದ ರೋಮಮಯ ಶರೀರ ಕಿಡಿಯನುಗುಳ್ವ ನಯನನ ಬಿಡದೆ ದಾನಬೇಡಿ ಕೊಡಲಿಪಿಡಿದು ಮೃಡನ ಧನುವ ಮುರಿದು ಜಡಿದು ಅಗ್ರಪೂಜೆಗೊಂಡ ಕಡುನಿರ್ವಾಣ ಹಯವದನನ3 ಸಂಪ್ರದಾಯದ ಹಾಡುಗಳು
--------------
ವಾದಿರಾಜ
139-3ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹರಿದಾಸ ಶ್ರೇಷ್ಠವರ ಕರುಣಿ ಪುರಂದರಾರ್ಯಗುರುಮಹಂತರು ಕೃಪಾನಿಧಿಯು ವಿಜಯಾರ್ಯಈರ್ವರನು ಸಂಸ್ಮರಿಸಿ ಗೋಪಾಲದಾಸರುಪರಮದಯ ತೋರಿದರು ಆಚಾರ್ಯರಲ್ಲಿ1ಹರಿದಾಸ ಪಂಥದಲಿ ಆಚಾರ್ಯರು ಸೇರಿಹರಿವಾಯು ಸೇವೆಯು ಸಜ್ಜನೋದ್ಧಾರಧರೆಯಲ್ಲಿ ಮಹತ್ಕಾರ್ಯ ಆಗುವುದು ಎಂದುಅರಿವರು ಗೋಪಾಲದಾಸರು ಮೊದಲೇ 2ಹರಿದಾಸಗೋಷ್ಠಿಯು ವೆಂಕಟಾಚಲ ಯಾತ್ರೆಚರಿಸೆ ವೆಂಕಟ ರಮಣನಾಲಯದಲ್ಲಿಶ್ರೀ ಶ್ರೀನಿವಾಸನು ಈ ಆಚಾರ್ಯಗೆನೇರವಾಗಿ ತಾನೆ ಕೊಟ್ಟಿಹ ಪ್ರಸಾದ 3ನೆನೆದರು ಈಗ ಗೋಪಾಲದಾಸಾರ್ಯರುತನ್ನ ರೂಪದಿ ಅಂದುಬಂದು ವಾತ್ಸಲ್ಯದಿಅನ್ನ ನಾಮಾವೆಂಕಟಕೃಷ್ಣ ಜಗದೀಶಅನ್ನ ಕೊಟ್ಟು ಒಲಿದಿಹನು ಆಚಾರ್ಯಗೆ 4ಪುರಂದರದಾಸಾರ್ಯರು ಒಲಿದು ದಯದಿ ತಾನೆಯಾರಿಗೆ ತಿಮ್ಮಣ್ಣಾರ್ಯರದ್ವಾರ ಉಪದೇಶಅನುಗ್ರಹ ನಾಮಾಂಕಿತವ ಇತ್ತರೋ ಆನರಸಿಂಹ ದಾಸಾರ್ಯರ ಪುತ್ರರು ಇವರು 5ಹರಿದಾಸರ ಪುತ್ರರಿವರು ಯೋಗ್ಯರು ಎಂದುಹರಿದಾಸಪದ್ಧತಿ ಆರಾಧನಾಕ್ರಮಶಾಸ್ತ್ರ ಜಿಜ್ಞಾಸೆಅನುಸಂಧಾನರೀತಿಯೂಅರುಪಿದರು ಆಚಾರ್ಯರಿಗೆ ದಾಸಾರ್ಯ 6ನೆರೆದಿದ್ದರೂ ಗೋಪಾಲದಾಸಾರ್ಯರಪರಮಪ್ರೀತಿ ಪಾತ್ರ ಈಮಹಂತರುವರದ ಗೋಪಾಲರು ತಂದೆ ಗೋಪಾಲರುಗುರುಗೋಪಾಲದಾಸಾದಿಸೂರಿಗಳು7ಭಾರತೀಪತಿ ಅಂತರ್ಗತಹರಿಶ್ರೀಶಗುರುಗಳ ಒಳಗಿದ್ದು ಜ್ಞಾನೋಪದೇಶಹರಿದಾಸತ್ವದ ವರನಾಮಾಂಕಿತವಕಾರುಣ್ಯದಿಈವಅಧಿಕಾರಿಗಳಿಗೆ8ವನರುಹೇಕ್ಷಣ ಯಜÕನಧಿಷ್ಠಾನ ಯಜÕನವನಜಪಾದ ದ್ವಯವು ಮನವಾಕ್ಕಿಲಿಹುದುಅನಿಲ ಸೋಕಿದ ತೂಲರಾಶಿಯಂದದಲಿಏನು ಮೈಲಿಗೆಯಾದರು ಸುಟ್ಟು ಪೋಪುವು 9ತುಳಸಿದಳ ನಿರ್ಮಾಲ್ಯ ಹರಿಗೆ ಅರ್ಪಿತವಾದ್ದುಜಲಸ್ನಾನ ತರುವಾಯ ಧ್ಯಾನ ಸ್ನಾನಜಲಜನಾಭನ ದಿವ್ಯನಾಮ ಸಂಕೀರ್ತನೆಎಲ್ಲ ಮೈಲಿಗೆ ದೋಷ ಪರಿಹರಿಸುವುವು 10ಶೀಲ ತನುಮನದಿಂದಗುರುಪರಮಗುರುದ್ವಾರಮಾಲೋಲ ಪ್ರಿಯತಮ ಜಗದೇಕ ಗುರುವೆಂದುಗಾಳಿದೇವನು ಮಧ್ವ ಭಾವಿಬ್ರಹ್ಮನ ಸ್ಮರಿಸಿಕಾಲಿಗೆ ಎರಗಿ ಶ್ರೀಹರಿಯ ಚಿಂತಿಪುದು 11ವಾಯುದೇವನ ಒಲಸಿಕೊಳ್ಳದ ಜನರಿಗೆಭಯಬಂಧ ನಿವೃತ್ತಿಯು ಸದ್ಗತಿಯು ಇಲ್ಲಮಾಯಾಜಯೇಶನಪರಮಪ್ರಸಾದವುವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 12ಬಲಜ್ಞಾನಾದಿಗಳಲ್ಲಿ ಹ್ರಾಸ ಇಲ್ಲವು ಇವಗೆಎಲ್ಲ ಅವತಾರಗಳು ಸಮವು ಅನ್ಯೂನಶುಕ್ಲಶೋಣಿತಸಂಬಂಧವು ಇಲ್ಲವೇ ಇಲ್ಲಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 13ಮಾತರಿಶ್ವಸೂತ್ರಪವಮಾನ ಮುಖ್ಯ ಪ್ರಾಣತ್ರೇತೆಯಲಿ ಹನುಮ, ದ್ವಾಪರದಲಿ ಭೀಮಈತನೇ ಕಲಿಯುಗದೆ ಮಧ್ವಾಭಿದಾನದಿಬಂದಿಹನು ಸಜ್ಜನರ ಉದ್ಧಾರಕಾಗಿ 14ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂಪ್ರತಿಷ್ಠಿತವು ಜೀವರ ದೇಹಕಾಧಾರತತ್ವದೇವಾದಿಗಳ ವರಿಷ್ಟ ಚೇಷ್ಟಕನುಈ ವಾಯುವೇ ಬ್ರಹ್ಮಧಾಮನಾಗಿಹನು 15ಬ್ರಹ್ಮಧಾಮನುಜೀವೋತ್ತಮವಾಯು ಆದುದರಿಂದಬ್ರಹ್ಮ ಸುಗುಣಾರ್ಣವ ಸರ್ವೋತ್ತಮ ವಿಷ್ಣೂನಅಹರ್ನಿಶಿಸ್ಮರಿಪುದು ಈ ಬ್ರಹ್ಮಧಾಮನಲಿಬ್ರಹ್ಮಪ್ರಸಾದ ಆಕಾಂಕ್ಷಿ ಅಧಿಕಾರಿ 16ಬ್ರಹ್ಮಗುಣಪೂರ್ಣಹರಿಗೋಪಾಲ ವೆಂಕಟನೆಬ್ರಹ್ಮಾಂಡ ಸರ್ವವ ಪಾಲಿಸುವ ಪ್ರಭುವುಅಹೋರಾತ್ರಿ ಏಳುದಿನ ಗಿರಿ ಎತ್ತಿ ಮಳೆ ತಡೆದಮಹಾದ್ರಿಧೃಕ್ ಅನ್ನಾದ ಅನ್ನದ ಜಗನ್ನಾಥ 17ಗೋವರ್ಧನಗಿರಿ ಎತ್ತಿ ಜನ ಪಶು ಕಾಯ್ದಶ್ರೀವರ ಗೋಪಾಲ ವಿಠ್ಠಲ ರುಕ್ಮಿಣೀಶದಿವ್ಯ ಮಂದಿರದಲ್ಲಿ ಭೀಮರತಿಯ ತೀರದಲಿದೇವ ನಿಂತಿಹ ಶ್ರೀನಿವಾಸ ಜಗನ್ನಾಥ 18ಶ್ರೀನಿವಾಸ ವೆಂಕಟನೆ ಗೋಪಾಲ ವಿಠ್ಠಲನುತನ್ನ ಭಕ್ತನಿಗೊಲಿದು ಪಂಢರೀಪುರದಿತಾನೆ ಬಂದು ಅಲ್ಲೇ ನಿಂತು ಭಕ್ತರು ಮಾಳ್ಪಗಾನ ಸೇವಾ ಕೇಳುತ ಪಾಲಿಸುತಿಹನು 19ಸರ್ವಕ್ಷರ ಉತ್ತಮನು ಸರ್ವೇಶಸರ್ವ ಐಶ್ವಯಾದಿ ಸಚ್ಛಕ್ತಿ ಪೂರ್ಣಶಿವ ಸುರಪುರಿಗೆ ಸುಖಜ್ಞಾನಾದಿಗಳನೀವದೇವಿ ಶ್ರೀ ಲಕ್ಷ್ಮೀಶ ಠಲಕ ವಿಠ್ಠಲನು 20ಜಡಭವ ಅಂಡದ ಸೃಷ್ಟ್ಯಾದಿ ಕರ್ತನಿವತಟಿತ್ಕೋಟಿಅಮಿತ ಸ್ವಕಾಂತಿಯಲಿ ಜ್ವಲಿಪಜಡಜ ಭವಪಿತ ಡರಕ ಜಗನ್ನಾಥ ವಿಠ್ಠಲನುನೋಡಲಿಕೆ ಕಾಣುವ ಅವನಿಚ್ಛೆ ದಯದಿ 21ಜಲದಲ್ಲಿ ಜಲರೂಪ ಜಲಜೇಕ್ಷಣನಿಹನುಜಲದಲ್ಲಿ ನೀ ಮುಳುಗಿ ಮೇಲೇಳುವಾಗಜ್ವಲಿಸುವ ಶಿರೋಪರಿ ಜಗನ್ನಾಥ ವಿಠ್ಠಲನುಒಳನಿಲುವ ಹೊರಕಾಂಬ ಎಲ್ಲರ ಸ್ವಾಮಿ 22ಇಂಥಾಸುವಾಕ್ಯ ಧಾರಾನುಗ್ರಹವಹಿತದಿ ಗೋಪಾಲದಾಸಾರ್ಯರು ಎರೆಯೆಮುದಬಾಷ್ಪ ಸುರಿಸುತ್ತ ಶ್ರೀನಿವಾಸಾಚಾರ್ಯಭಕ್ತಿಯಲಿ ನಮಿಸಿದರು ಗುರುಚರಣಗಳಿಗೆ 23ವಾಸುದೇವನ ಒಲಿಸಿಕೊಂಡ ಐಜೀಯವರುಈಶಾನುಗ್ರಹ ಪಡೆದ ದಾಸಾರ್ಯರುಗಳುಆ ಸಭೆಯಲಿ ಇದ್ದ ಹರಿಭಕ್ತ ಭೂಸುರರುಆಶೀರ್ವದಿಸಿದರು ಆಚಾರ್ಯರನ್ನು 24ಉತ್ಕøಷ್ಟ ನಿಗಮಘೋಷಗಳು ಮಂಗಳಧ್ವನಿಹರಿನಾಮ ಕೀರ್ತನ ಸುಸ್ವರ ಸಂಗೀತದಾರಿಯಲಿ ಎದುರ್ಗೊಂಡ ಶುಭಕರ ಶಕುನವುಹೊರಟರಾಚಾರ್ಯ ವಿಠ್ಠಲ ದರ್ಶನಕೆ 25ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಚತುರ್ಥ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-7ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹಂಸನಾಮಕ ಪರಂಬ್ರಹ್ಮ ವಿಧಿಸನಕಾದಿವಂಶಜ ಗುರುಗಳಲಿ ಜಗದೇಕ ಗುರುವುದಶಪ್ರಮತಿ ಈ ಮಧ್ವ ಮುನಿಯ ಪೀಳಿಗೆ ಜಾತವ್ಯಾಸಮುನಿ ಯೋಗಿವರ್ಯರಿಗೆ ಆ ನಮಿಪೆ 1ವ್ಯಾಸರಾಯರ ಮುಖ ಕಮಲದಿಂದುಪದೇಶದಾಸತ್ವ ಹೊಂದಿದರು ಪುರಂದರದಾಸಾರ್ಯದಾಸಶ್ರೇಷ್ಠರು ದಯಾನಿಧಿಯು ಈಪುರಂದರದಾಸಾರ್ಯರೇ ನಾರದರ ಅವತಾರ 2ಪುರಂದರಾರ್ಯರಹಸ್ತಕಂಜಸಂಜಾತರುಧೀರ ಭೃಗು ಅವತಾರ ವಿಜಯದಾಸಾರ್ಯಹರಿದಾಸವರ ವಿಜಯದಾಸರ ಶಿಷ್ಯರುಸೂರಿಸುರವರ್ಯ ಗೋಪಾಲ ದಾಸಾರ್ಯ 3ವಿಶ್ವೋಪಾಸಕರು ವರಗಣೇಶಾಂಶರುಈಶಾನುಗ್ರಹಿ ಗೋಪಾಲ ದಾಸಾರ್ಯಬೇಸರವಿಲ್ಲದೆ ಸ್ಮರಿಪ ಸಜ್ಜನರ ಪಾಲಿಪರುದಾಸತ್ವ ಜಗನ್ನಾಥದಾಸರಿಗಿತ್ತವರು 4ಸೂರಿಕುಲತಿಲಕನು ಜಗನ್ನಾಥ ದಾಸಾರ್ಯಈರೆರಡು ಮುಖ್ಯ ಜನ್ಮವಕೊಂಡಹಿಂದೆಗುರುಯುಕ್ ಪುರಂದರಾರ್ಯರವತ್ಸಗುರುರಾಯ ಸೇವಾರತಮದ್ರದೇಶಾಧಿಪ ಈ ರೀತಿ ಮೂರು 5ಮಾರೀಚ ದಿತಿ ಪೌತ್ರ ಮೊದಲನೆಯದಲ್ಲಿಧೀರ ಪ್ರಹ್ಲಾದನಿಗೆ ಭ್ರಾತ ಸಂಹ್ಲಾದಹರಿಅಧೋಕ್ಷಜನ್ನೊಲಿಸಿ ಕೊಂಬ ಮಾರ್ಗವ ಅರಿತನಾರದಾನುಗ್ರಹಿಯು ಉಪದೇಶಕೇಳಿ6ಹರಿಯ ಸೇವಿಸುವುದಕೆ ಶಿಷ್ಯರುದ್ಧಾರಕ್ಕೆಪ್ರಾರಬ್ಧ ಕರ್ಮವು ತೇದು ಹೋಗಲಿಕೆಧರೆಯಲ್ಲಿ ಪುನರ್ಜನ್ಮ ಕೊಂಡನು ಬ್ಯಾಗವಟ್ಟನರಸಿಂಹ ದಾಸರ ಮಗನೆನಿಸಿಕೊಂಡು 7ಸೂರಿಕುಲ ಶಿರೋಮಣಿ ವರದೇಂದ್ರ ಯತಿವರರುಶ್ರೀರಾಘವೇಂದ್ರರ ಸ್ಮರಿಪುದಿವರಲ್ಲಿಭಾರಿಪಂಡಿತ ಶ್ರೀನಿವಾಸ ಇವರಲ್ಲೋದಿಪೌರ ವಿದ್ಯಾರ್ಥಿಗಳಿಗೆ ಪಾಠ ಪೇಳ್ದ 9ಗರುವಕೊಳಗಾಗಿ ಈ ಶ್ರೀನಿವಾಸಾಚಾರ್ಯಕರುಣಾಶಾಲಿಗಳು ವಿಜಯದಾಸರನ್ನಕ್ಷುದ್ರ ಮಾತುಗಳಾಡಿ ಸ್ವೋತ್ತಮಾಪರಾಧದಿಂಘೋರವ್ಯಾಧಿ ಕೊಂಡು ಕುಗ್ಗಿದನು ತೀವ್ರ 10ಪರಿಪರಿ ಔಷಧೋಪಚಾರಗಳು ಸೋತುಹರಿಗುರು ಕ್ಷೇತ್ರಾಟನ ಸೇವಾದಿಗಳುಹರಿವಾಯುಸ್ತುತಿಕ್ಷೀರಅಭಿಷೇಕಫಲದಿಂಅರಿತನು ಅಪರಾಧಕ್ಷಮೆಬೇಡೆ ಹೊರಟ11ತ್ವರಿತದಲಿ ವಿಜಯಾರ್ಯರಲ್ಲಿ ಶರಣಾಗಿಕರುಣದಿ ಕ್ಷಮಿಸಿ ಉದ್ಧರಿಸಬೇಕೆಂದಕರುಣಿಸಮ ಚಿತ್ತರು ಶರಣನಿಗೆ ಹೇಳಿದರುಗುರುಗಳು ಗೋಪಾಲದಾಸರ ಕಾಣೆಂದು 12ತನ್ನಲ್ಲಿ ಗುರುಗಳು ಕಳುಹಿಸಿ ಬಂದಿಹನುದೀನನು ನಿಜ ಶರಣಾಗಿಹನು ಎಂದುಘನಮೂಮಂತ್ರ ಸಹ ಧನ್ವಂತರಿ ಜಪಿಸಿಧನ್ವಂತರಿಗೆ ಬಿನ್ನೈಸಿದರು ದಾಸರು 13ವಿಜಯಗೋಪಾಲ ವೆಂಕಟ ಜಗನ್ನಾಥನ್ನಪೂಜಿಸಿ ನೈವೇದ್ಯಾನ್ನ ಜೋಳದರೊಟ್ಟಿಭುಜಿಪುದಕೆ ಕೊಡುತ ಹರಿಗುರುಗಳ ಸ್ಮರಿಸುನಿಜ ಭಕ್ತಾಯುಷ್ಪ್ರದ ಸತ್ಪತಿ ಎಂದು 14ದ್ರವ ಮಾತ್ರ ಕೊಂಬ ಆ ರೋಗಿ ತಿಂದನು ರೊಟ್ಟಿದ್ರಾವಿಕ ಆಯಿತು ರೋಗ ದಿನ ದಿನದಿದೈವಾನುಗ್ರಹವಾಯ್ತುಗುರುಅನುಗ್ರಹದಿಂದಶ್ರೀ ವೆಂಕಟ ಶೈಲಾಧಿಪನು ಒಲಿದ 15ರೋಗ ನಿವೃತ್ತ ಆಚಾರ್ಯ ದಾಸರ ಸಹಪೋಗಿ ವೆಂಕಟಗಿರಿಯಲ್ಲಿ ಶ್ರೀನಿಧಿಗೆಭಕುತಿಯಿಂ ಸನ್ನಮಿಸಿ ಮಲಗೆ ನಿತ್ರಾಣದಲಿಬೇಗ ಗಜವರದಹರಿಬಂದು ತಾ ಪೊರೆದ16ಶ್ರೀನಿಧಿಃ ಸರ್ವ ಭೂತಾನಾಂ ಭಯಕೃದ್ಭಯನಾಶನನು ವಿಜಯಾರ್ಯರ ರೂಪದಲಿ ಪೇಳೆದಾನ ಎರೆದರು ಗೋಪಾಲ ದಾಸಾರ್ಯರುತನ್ನ ಆಯುಷ್ಯದಲಿ ನಲವತ್ತು ವರ್ಷ 17ರೊಟ್ಟಿ ಕೊಟ್ಟಾಗಲೇಗುರುಪ್ರೇರಣೆಯಂತೆಕೊಟ್ಟಿದ್ದರು ಆಯುಷ್ಯ ಆಚಾರ್ಯಗೆದಿಟವಾಗಿ ಜಗಕೆ ತಿಳಿಸೆ ವೆಂಕಟ ಈಗಕೊಡಿಸಿದನು ಆಯುರ್ದಾನದ ಧಾರೆ 18ಘನ್ನ ಹರಿಗುರು ಭಕ್ತಿ ಶಿಷ್ಯ ವಾತ್ಸಲ್ಯವಏನೆಂಬೆ ನಮ್ಮಗುರುಗೋಪಾಲ ದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ನ ಆಯುಷ್ಯವ ಕೊಡುವರೆ ಅನ್ಯರಿಗೆ 19ಏನೆಂಬೆಅನಿಮಿತ್ತ ಬಂಧುವೆಂಕಟಪತಿಯದೀನ ದಯಾಳತ್ವ ಆಚಾರ್ಯನಿಗೆತಾನೇವೆ ಗೋಪಾಲದಾಸರ ರೂಪದಿತಂದುಅನ್ನ ಕೊಟ್ಟ ಆಯುಷ್ಯವ ಕೊಡಿಸಿದವ 20ಶ್ರೀನಿವಾಸಾಚಾರ್ಯ ಹರಿತನ್ನ ದಾಸರಿಗೆತಾನೆ ಬಂದೊಲಿವುದು ನೇರಲ್ಲಿ ಕಂಡುತನ್ನನ್ನು ಹರಿದಾಸರಲಿ ಓರ್ವ ಮಾಡೆಂದುವಿನಯದಿಂ ಗೋಪಾಲದಾಸರ ಬೇಡಿದನು 21ವಿಜಯಗೋಪಾಲನ್ನವಿಜಯದಾಸರ ಸ್ಮರಿಸಿನಿಜ ಶಿಷ್ಯಾಚಾರ್ಯನಿಗೆ ಉಪದೇಶಿಸಿದರುಅಜಪದಾರ್ಹನು ಮಧ್ವನಲ್ಲಿ ಜ್ವಲಿಸುವಶ್ರೀತಶ್ರೀ ಜಗನ್ನಾಥ ಎಂದು ಧ್ಯಾನಿಸು ಎಂದು 22ಪೋಗಿ ಪಂಢÀರಪುರ ಭೀಮರತಿಯಲ್ಲಿಸ್ವಗುರು ಆದಿ ಹನ್ನೆರಡು ಸ್ಮರಿಸುಬಾಗು ಮಧ್ವಾಂತಸ್ಥ ಹರಿಗೆಮಜ್ಜನಮಾಡುಜಗನ್ನಾಥ ಹರಿತೋರ್ವ ಪೊಳೆವ ಹರಿನಾಮ 23ಝಗಿ ಝಗಿಪ ತೇಜಸ್ಸು ಶಿರೋಪರಿ ಕಂಡನುಮೂಗಿನೊಂದೊಂದಡಿ ಶಿರದ ಮೇಲೆ&ಟಜquo;ಜಗನ್ನಾಥ ವಿಠಲ&ಡಿಜquo; ನಾಮ ಪ್ರಜ್ವಲಿಸಿತುಜಗನ್ನಾಥ ತನ್ನಿಚ್ಛೆಯಿಂದಲೇ ತೋರ್ದ 25ಜಡಜ ಭವಪಿತ ಡರಕ ಜಗನ್ನಾಥ ವಿಠಲನನೋಡಿದರು ಜಗನ್ನಾಥದಾಸ ಆಚಾರ್ಯಪೊಡವಿಗೊಡೆಯನುವಿಜಯಗೋಪಾಲ ಜಗನ್ನಾಥವಿಠ್ಠಲ ಪ್ರಸನ್ನನಾದನು ಶ್ರೀನಿವಾಸ 26ವೆಂಕಟಗಿರಿನಾಥ ಪಂಢರಿ ಜಗನ್ನಾಥಅಕಳಂಕ ಗುಣನಿಧಿ ವಿಠಲಪ್ರಸನ್ನನಾಗಿದಾಸರು ಮೂಲ ಮಂತ್ರಾದಿಗಳಿಂದಏಕಾಗ್ರ ಚಿತ್ತದಲಿ ಭಜಿಸಿ ಸ್ತುತಿಸಿದರು 27ಪುರಂದರದಾಸಾರ್ಯರ ವಂದಿಸಿ ಅವರಿಂದವಿರಚಿತ ಶ್ರೀಮಧ್ವ ರಮಣ ನಿನ್ನಭಾರಿತತ್ವವಕೊಂಡಕೀರ್ತನೆ ಹಾಡುತ್ತಶ್ರೀಕರ ವಿಠಲನ ಮಂದಿರದೊಳು ಪೊಕ್ಕರು 28ವಿಶ್ವವಿಷ್ಣು ವಷಟ್ಕಾರಾದಿ ನಾಮನುದಾಸಪ್ರಿಯಜನ ವಿಠ್ಠಲ ರುಕ್ಮಿಣಿಯಕೇಶವಾದಿಪಾದಾಂತ ಸಂಸ್ತುತಿಸಿ ನಮಿಸಿದರುದಾಸರು ಶರಣು ತಾನೆನ್ನುತ ಮುದದಿ 29ಏನೆಂಬೆ ವಿಠ್ಠಲನ ರುಕ್ಮಿಣಿಯ ವಾತ್ಸಲ್ಯಅನುಪಮ ಔತಣ ದಾಸರಿಗೆ ಮಾಡಿಅನುತ್ತಮ ಪ್ರಸಾದ ಮಾಲಾದಿಗಳ ಕೊಟ್ಟುಅನುಗ್ರಹಿಸಿ ಕಳಿಸಿದರು ದಾಸರ ಸ್ವಪುರಕೆ 30ಮಳಖೇಡ ಕೃಷ್ಣ ಮಂತ್ರಾಲಯಕೆ ಪೋಗಿಅಲ್ಲಿರುವಗುರುದೇವತಾ ನಮನ ಮಾಡಿಗೋಪಾಲದಾಸ ಉದ್ಧಾರಕರ ಬಳಿಬಂದುಕಾಲಿಗೆರಗಿದರು ಕೃತಕೃತ್ಯ ಭಾವದಲಿ 31ವಾಸುದೇವಗೆ ಪ್ರಿಯ ಐಜಿ ಮಹಾತ್ಮರುವ್ಯಾಸತತ್ವಜÕ ಹರಿದಾಸ ಯತಿವರರುಸಸೋದರ ಪರಿವಾರ ಗೋಪಾಲದಾಸಾರ್ಯರಬಿಸಜಾಂಘ್ರಿ ಸನ್ನಮಸಿ ಹೊರಟರಲ್ಲಿಂದ 32ಚೀಕಲ ಪರಿವಿಯಲಿ ಏಕಾತ್ಮ ನರಹರಿಯಅಕಳಂಕ ದೃಢಭಕ್ತಿಯಿಂದ ಪೂಜಿಸುವಆ ಕರುಣಿ ವಿಜಯದಾಸರ ಕಂಡು ನಮಿಸಿಚಿಕ್ಕಂದಿ ಸ್ವಪುರ ಮಾನವಿಯಯೈದಿದರು 33ಮನುತೀರ್ಥ ತಟದಲ್ಲಿ ಮೀಸಲಾಗಿವರಿಗೆಅನ್ಯರಾಕ್ರಮಿಸದೇ ರಕ್ಷಿಸಲ್ಪಟ್ಟಮನೆಯಲ್ಲಿ ನರಹರಿಯ ಹನುಮನ್ನ ಪೂಜಿಸುತದಿನದಿನದಿ ಪ್ರವಚನ ಭಜನೆ ಮಾಡಿದರ 34ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 35- ಅಷ್ಟಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
208ಎಂಥ ಚೆಲುವೆಗೆ ಮಗಳನು ಕೊಟ್ಟನುಗಿರಿರಾಜನು ನೋಡಮ್ಮಮ್ಮ |ಕಂತುಹರಶಿವ ಚೆಲುವನೆನ್ನುತ ಮೆಚ್ಚಿದನೇ ನೋಡಮ್ಮಮ್ಮಪಮನೆಯೆಂಬುದು ಸ್ಮಶಾನವು ನೋಡೇಗಜಚರ್ಮಾಂಬರವಮ್ಮಮ್ಮ |ಹಣವೊಂದೆಂಬುದು ಕೈಯೊಳಗಿಲ್ಲವುಕಪ್ಪರವಿದೆ ನೋಡಮ್ಮಮ್ಮ 1ಮೋರೆಗಳೈದು-ಮೂರು ಕಣ್ಣಗಳುವಿಪರೀತವ ನೋಡಮ್ಮಮ್ಮಘೋರವಾದ ರುಂಡಮಾಲೆಉರಗಭೂಷಣವನು ನೋಡಮ್ಮಮ್ಮ 2ಭೂತ ಪ್ರೇತ-ಪಿಶಾಚಿಗಳೆಲ್ಲಾ ಪರಿವಾರವು ನೋಡಮ್ಮಮ್ಮ |ಈತನ ನಾಮವು ಒಂದೇ ಮಂಗಳಕರವುಹರನ ನೋಡಮ್ಮಮ್ಮ 3ತಲೆಯೆಂಬುದು ನೋಡಿದರೆ ಜಡೆಯುಹೊಳೆಯುತಿದೆ ನೋಡಮ್ಮಮ್ಮಹಲವು ಕಾಲದ ತಪಸಿ ರುದ್ರನಮೈಬೂದಿಯು ನೋಡಮ್ಮಮ್ಮ 4ನಂದಿವಾಹನನ ನೀಲಕಂಠನ ನಿರ್ಗುಣನನು ನೋಡಮ್ಮಮ್ಮ |ಇಂದಿರೆರಮಣನ ಪುರಂದರವಿಠಲನಹೊಂದಿದವನ ನೋಡಮ್ಮಮ್ಮ 5
--------------
ಪುರಂದರದಾಸರು
ಅಂತರಂಗದಲಿ ಹರಿಯ ಕಾಣದವ ತಾ ಹುಟ್ಟುಗುರುಡನೊಸಂತತ ಶ್ರೀ ಕೃಷ್ಣಚರಿತೆ ಕೇಳದವ ಜಡಮತಿಯೆ ಕಿವುಡನೊ ಎಂದೆಂದಿಗೂ ಪ.ಹರುಷದಿಂದಲಿ ಮುರಹರನ ಪೂಜೆಯ ಮಾಡದವನೆ ಕೈ ಮುರಿದವನೊಕುರುವೀರ ಸೂತನ ಮುಂದೆ ಕೃಷ್ಣ ಎಂದುಕುಣಿಯದವನೆ ಕುಂಟನೊ ||ನರಹರಿ ಪಾದೋದಕ ಧರಿಸದ ಶಿರ ನಾಯುಂಡ ಹಂಚು ಕಾಣೊಸುರವರ ಕೃಷ್ಣ ಪ್ರಸಾದವಿಲ್ಲದ ಊಟಸೂಕರಭೋಜನವೋ1ಅಮರೇಶ ಕೃಷ್ಣಗರ್ಪಿತವಲ್ಲದಕರ್ಮ ಅಸತಿಯ ವ್ರತನೇಮವೊರಮೆಯರಸಗೆ ಪ್ರೀತಿಯಿಲ್ಲದ ವಿತ್ತವು ರಂಡೆ ಕೊರಳಸೂತ್ರಕಮಲನಾಭನ ಪೊಗಳದಸಾರ ಸಂಗೀತ ಗಾರ್ದಭರೋದನವೊಮಮತೆಯಿಂದಲಿ ಕೇಶವಗೆ ನಮಸ್ಕಾರ ಮಾಡದವನೆ ಮೃಗವೊ 2ಜರೆ ಹುಟ್ಟು ಮರಣವ ತಡೆವ ಸುದ್ದಿಯ ಬಿಟ್ಟುಸುರೆಯ ಸುರಿಯ ಬೇಡವೊಸುರಧೇನು ಇರಲಾಗಿ ಶ್ವಾನನ ಮೊಲೆಹಾಲಕರೆದು ಕುಡಿಯಬೇಡವೊಕರಿ ರಥ ತುರಗವೇರಲು ಇದ್ದು ಕೆಡಹುವ ಕತ್ತೆ ಏರಲಿಬೇಡವೊಪರಮ ಪುರುಷ ಪುರಂದರವಿಠಲನಿರಲು ನರರ ಭಜಿಸಬೇಡವೊ 3
--------------
ಪುರಂದರದಾಸರು