ಒಟ್ಟು 5116 ಕಡೆಗಳಲ್ಲಿ , 113 ದಾಸರು , 2134 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಥಾಶ್ರವಣ ಮಾಡೋ ಪಾಡೋ ಹರಿ ಪ ಪಥÀ ವೈಕುಂಠಕ್ಕಿದು ನೋಡೋಅ.ಪ ಪತಿತಪಾವನ ಪಾದಾಬ್ಜದಲಿ ಹಿತದಿಂ ಭಕುತಿಯ ಮಾಡೋ 1 ಜ್ಞಾನ ಭಕುತಿ ವೈರಾಗ್ಯವೀವ ಆನಂದತೀರ್ಥರ ಪಾಡೋ 2 ಅಜಭವಾದಿಗಳಿಗರಸನಾದ ಶಿರಿ ವಿಜಯವಿಠಲನ ನೋಡೋ3
--------------
ವಿಜಯದಾಸ
ಕಂದ ಭೀಮಗೆ ಸರಿಯಿಲ್ಲ ಎಂದೆಂದಿಗೆ ಬಿಡದೆ ಬಂದಾ ಪ್ರತಿಬಂಧಕಗಳ ನಿತ್ಯ ಅರಿತುಳಿವಾ ಸತ್ಕೀರ್ತಿ ಪೊಳವ ಪ ಪ್ರಳಯಾಂತದಲ್ಲಿ ತಾನು ತಿಳಿದು ಸತ್ವ ಜೀವರ ನೆಲೆ ಗೊಳಿಸುವೆನೆಂದು ಬಲುಹರುಷದಲಿ ಜಲಜನಾಭನ ಚರಣಾಬ್ಜಕರಿಗೆ ಹಸ್ತ ಮುಗಿದು ಶ್ರುತಿವಿನುತ ಇದೇ ಕಾಯವನಿತ್ತ 1 ಮಂಡೆ ಮೇಲೆ ಭಾರವ ಕೊಂಡಾ ಸಹಸ್ರ ಫಣ ಕುಂಡಲಿಯ ಪೊತ್ತಾ ಗಂಡುಗಲಿ ಕೂರ್ಮನಾ ಕೊಂಡಾಡಲು ನಮಗೆ ಸಗುಣಾಖ್ಯಾ ಗುರುವೀತನೇ ಮುಖ್ಯಾ 2 ಭೀಮನೆ ಭೀಮಸೇನಾ ಭೀಮರಾಯನೆಂದು ನೇಮದಿಂದಲಿ ನಾಮವ ನೆನೆದಡೆ ಪಾಮರ ಬುಧ್ಧಿಯನ್ನು ನಿತ್ಯ ಸತ್ಪುಣ್ಯ ಅನುಗಣ್ಯ ಬಲು ಗುಣ್ಯಮಾಡಿಸುವನನ್ಯ 3 ಹಿಂದೆ ರಘುನಾಥನ ಛಂದದ ದೂತನಾಗಿ ಇಂದು ವಂಶದಲಿಂದು ಮಂದಹಾಸದಲುದಿಸಿ ನಂದದಿಂದಲಿ ಕುರುಬಲವ ಗೆದ್ದ ಚಲುವ ಭಕ್ತಗೊಲಿವ ಮೂಲೋಕವ ಗೆಲುವ 4 ಜ್ಞಾನ ಭಕ್ತಿ ವೈರಾಗ್ಯ ನಾನಾ ಪ್ರಕಾರ ಭೀಷ್ಟೆ ಮಾಣದೆ ಕೊಡುವನು ಅನಂತ ಕಾಲಕೂ ಆನಂದತೀರ್ಥನೀತಾ ಪ್ರಾಣಾದಿ ಪಂಚರೂಪ ಶ್ರೀನಾಥ ವಿಜಯ ವಿಠ್ಠಲಾ ಸಿರಿನಲ್ಲಾ ಪೊರೆವೆಲ್ಲಾ ಒಂದೆಂಬದಲ್ಲಾ 5
--------------
ವಿಜಯದಾಸ
ಕಂದನಿಗೆ ಕಾಲಿಲ್ಲವಮ್ಮ, ಪುಟ್ಟಿ-ಪ ದಂದಿಂದ ಈ ಅಂಬೆಗಾಲು ಬಿಡದಮ್ಮ ಅ.ಪ ಮಳೆ ಹೊಳೆ ಕತ್ತಲೊಳು ತರಳ ಮಗ ಬೆದರಿದನೊಕಳೆಯುಳ್ಳ ಮುಖಕೀಗ ಗ್ರಹ ಸೋಕಿತೋಎಳೆಯ ಬೆಳದಿಂಗಳೋಳೆತ್ತಣ ದೃಷ್ಟಿ ತಾಕಿತೊಲಲನೆ ಮೀಸಲ ಹಾಲು ಮೆರೆದೆರೆದ ಪರಿಯೊ 1 ಬೆಣ್ಣೆಯನು ಮೆಲ್ಲುತ ಬೆದರಿ ಬಾಯಾರಿದನೊಉಣ್ಣೆ ಪೂತನಿ ಮೊಲೆಯ ವಿಷ ಸೋಂಕಿತೋಅಣ್ಣ ಪಾಪಿಯ ಭಯಕೆ ಅಂಜಿ ಕಾಲಿಟ್ಟನೊಹೆಣ್ಣು ದೈತೇಯರ ಕಾಲಲಿ ಬಂದ ಸರಕೊ 2 ಧುರವಿಜಯ ಶ್ರೀಕೃಷ್ಣರಾಯಗೆ ನಿಮ್ಮಹರದೇರಂದವ ತೋರಬಂದ ಪರಿಯೋಧರೆಗಧಿಕ ವಿದ್ಯನಗರವಳಿತೆಂದು ಉದಯಗಿರಿಯಿಂದ ಬಂದ ಮುದ್ದು ಬಾಲಕೃಷ್ಣಗೆ 3
--------------
ವ್ಯಾಸರಾಯರು
ಕದರುಂಡಲಗಿ ಹನುಮಂತದೇವರು ಇಂಥಾ ಕೀರ್ತಿಯ ಮೂರ್ತಿನ್ನಾರೇ ನೋಡಮ್ಮಯ್ಯ ಪ ಸಂತತ ಸೀತಾಪತಿಯ ಧ್ಯಾನರೊಳು ಕಂತುವಿನಸ್ತ್ರವ ಖಂಡಿಸಿದೊಡೆಯಾ ಅ.ಪ. ಸೂರಿ ಸುಲಿಗೆ ನೋಡಮ್ಮಯ್ಯ ನೋಡಮ್ಮಯ್ಯ ಭೂಸುರರಾಯರು ಸೀಮೆಯ ಸುತ್ತಲು ಗಾಸಿಯ ಮಾಡದೆ ಗ್ರಾಮವ ಕಾಯ್ದ 1 ತಾರಣ ನಾಮ ಸಂವತ್ಸರ ಶುದ್ಧ ವೈಶಾಖದಿ ನೋಡಮ್ಮಯ್ಯ ಧರೆಯೊಳು ಕಲಹ ವಿಪರೀತವದರೊಳು ರಣಮಂಡಲ ನೋಡಮ್ಮಯ್ಯ ಊರೆಲ್ಲ ಮೊರೆಯಿಡೆ ಈಕ್ಷಿಸಿ ಮಹಿಮೆಯ ತೋರುವ ಅಭಯ ಪ್ರಸಾದವ ಕೊಡುವಾ 2 ಜಯ ನಮೋ ಎನೆ ನೋಡಮ್ಮಯ್ಯ ಅಕಲಂಕ ಶೇಷಾನೃಪ ಶ್ರೀ ರಾಮರ ಸೇವಕಮಣಿ ನೋಡಮ್ಮಯ್ಯ ಲೋಕದಧಿಕ ಗುರು ಕದರುಂಡಲೀಶಾ ಬೇಕೆಂದು ನಿಂತಾ ಶ್ರೀ ಹನುಮಂತ 3
--------------
ಕದರುಂಡಲಗೀಶರು
ಕದವನಿಕ್ಕಿದ ಕಾರಣೇನೆ ಮುದದಿ ಕೇಳೆ ಮೋಹನಾಂಗಿ ಸದನಕ್ಕಾಗಿ ಬಂದೆ ನಾನು ಸರಸವ್ಯಾತಕೆ ಸುಂದರಾಗಿ ಪ ಇಂದು ನಾನು ಬಂದೆ ದ್ರೌಪದಿ ಬಂದು ಬಾಗಿಲನ್ಹಾಕುವೋದು ಚೆಂದವೇನೆ ಚಂದ್ರಮುಖಿಯೆ ಬಂದು ಬಾಗಿಲು ತೆಗೆಯೆ ನೀನು 1 ಅಂಧಕಾರ ರಾತ್ರಿಯಲಿ ಬಂದವರ್ಯಾರೆಂದು ಅರಿಯೆ ನಿಂದು ಗುರುತೇನೆಂದು ಪೇಳಲು ಬಂದು ಬಾಗಿಲು ತೆಗೆವೆ ನಾನು 2 ಕಂಡರಿಯೆ ಎನ್ನ ಪರಾಕ್ರಮ ಖಾಂಡವವನವ ದಹಿಸಿದೆನೆ ಗಾಂಡೀವಾರ್ಜುನರಾಯ ನಾನು 3 ಗಾಂಡೀವಾರ್ಜುನರಾಯನಾದರೆ ದುಂಡು ಬಳೆ ಕಂಕಣಗಳಿಟ್ಟು ಗೊಂಡ್ಯ ರಾಗಟೆ ಹೆರಳಲ್ಹಾಕಿ ನೀ ಷÀಂಡರೂಪವ ಧರಿಸ್ಹೋಗೊ 4 ಕ್ಷೀರಸಾಗರದಲ್ಲೆ ತಾ ಮಂ- ದರ ಪೊತ್ತಮೃತವನೆ ತಂದ ಧೀರ ಕೂರ್ಮಗೆ ಮೈದುನಾದಂಥ ಶೂರ ಫಲ್ಗುಣರಾಯ ನಾನೆ 5 ಫಲ್ಗುಣರಾಯನಾದರೇನೊ ಸದ್ಗುಣ ಸಂಪನ್ನ ಬಿರುದು ಭದ್ರದೇವಿಯ ಕದ್ದು ತರುವಾಗ ಬುದ್ಧಿ ದಾರಲ್ಲಿಟ್ಟೆದ್ದಿರ್ಹೇಳೊ 6 ಪರಮೇಶ್ವರನ ಒಲಿಸಿಕೊಂಡು ಪಾಶುಪತಾಸ್ತ್ರ ಪಡೆದೆ ನಾನು ಪರಮ ಆಪ್ತ ವರಾಹನ ಕರುಣಕ್ಕೆ ಪಾತ್ರನಾದಂಥ ಪಾರ್ಥರಾಯನೆ 7 ಪಾಶುಪತಾಸ್ತ್ರ ಪಡೆದರೇನು ದೇಶ- ದೇಶ್ಯಾತ್ರೆತೀರ್ಥ ಚರಿಸಿ ಆಸೆ ಬಿಡದೆ ಸನ್ಯಾಸಿಯಾದಂಥ ಮೋಸಗಾರನೆ ಮನೆಗೆ ಪೋಗು 8 ಕೋಟಿ ದೈತ್ಯರ ಕೊಂದೆ ಎನ್ನಸರಿ- ಸಾಟಿಯಾರೀ ಲೋಕದೊಳಗೆ ಆ- ರ್ಭಟದವತಾರ ನಾರಸಿಂಹನೆ ನೀಟಾದಭಕ್ತ ಕಿರೀಟಿಯಲ್ಲವೆ 9 ಕೋಟಿ ದೈತ್ಯರ ಕೊಂದು ಜೂಜಿ- ನಾಟ ಸೋತ್ವನ ತೋಟ ತಿರುಗಿ ಪಾಟುಬಟ್ಟು ವಿರಾಟನಲ್ಲೆ ನಾ(ನ?)ಟರಾಟಕೆ ನಿಂತಿರ್ಯಾಕೊ 10 ಮಾತಿಗೆ ಮಾತಾಡೋರೇನೆ ಅ- ಭೂತಳವ ಬೇಡಿದ್ವಾಮನಗೆ ದೂತ ನಾ ಶ್ವೇತೂವಾಹನನೆ 11 ಶ್ವೇತೂವಾಹನ ನಿಮ್ಮ ಸತಿಗೆ ನಾಥರಿದ್ದೂ ಅನಾಥಳಂತೆ ಅ- ಜ್ಞಾತದಲ್ಲಿ ಸುದೇಷ್ಣೆ ಸೇವೆಗೆ ದೂತಿಯಾದ ಪ್ರಖ್ಯಾತಿ ದಾರದೊ 12 ಹೆತ್ತತಾಯಿ ಶಿರವನಳಿದ ಕ್ಷತ್ರೇ- ರಂತಕ ಭಾರ್ಗವಗೆ ನಿತ್ಯದಲಿ ನಿಜಸೇವಕ ಭೀ- ಭತ್ಸುರಾಯ ನಾನಲ್ಲವೇನೆ 13 ಧೀರ ಭೀಭತ್ಸುರಾಯ ನಿನ್ನ ನಾರಿಯ ಸಭೆಗೆಳೆದು ತಂದು ಸೀರೆ ಸೆಳೆವಾಗ ಶೂರರಾದರೆ ದಾರದಾರಂತೆ ನೋಡಿರ್ಯಾಕೊ 14 ಕಾಮ ಮೋಹಗಳಿಂದ ನಿನ್ನಲ್ಲೆ ಪ್ರೇಮದಿ ನಾ ಬಂದೆನೀಗ ರಾಮರಾಜÉ್ಞಗೆ ನಿಜ ಸೇವಕ- ನಾದ ವಿಜಯರಾಯ ನಾನೆ 15 ವಿಜಯರಾಯ ನೀನ್ಹೌದೊ ತೇಜಿದಿ- ಗ್ವಿಜಯಕೆನುತದರ್ಹಿಂದೆ ಪೋಗಿ ಮಗನ ಕೈಯಿಂದ ವಧೆಯು ನೀತವೆ ಮೊದಲೆ ಪರಾಜಿತನಾದಿರ್ಯಾಕೊ 16 ಶ್ರೇಷ್ಠರೊಳು ಮಹಾಶ್ರೇಷ್ಠ ನಾನೆ ಅಸ್ತ್ರವಿದ್ಯದಲ್ಲಧಿಕನೆಂದು ಕೃಷ್ಣಮೂರುತಿ ಒಲಿಸಿಕೊಂಡಂಥ ಕೃಷ್ಣೆ ನಲ್ಲನೆ ಕೃಷ್ಣೆ ಕೇಳೆ 17 ಸಾರಥಿ ಆದ್ದರಿಂದ ಹಸ್ತಿನಾವತಿ ಪಟ್ಟಣಾಳ್ವುದು ಇಷ್ಟು ದಾರ ದಯದಿಂದ್ಹೇಳೊ 18 ಅಂಗನಾಮಣಿ ನಿನ್ನ ಅಂಗ- ಸಂಗ ಬಯಸಿ ನಾ ಬಂದೆನೀಗ ಅಂಗದ್ವಸ್ತ್ರವಬಿಟ್ಟ ಬೌದ್ಧಗೆ ಸಖನು ನಾ ಸವ್ಯಸಾಚಿ ಅಲ್ಲವೆ 19 ಭುಜ ಪರಾಕ್ರಮಿ ಸವ್ಯಸಾಚಿ ನಿನ್ನೆರಡು ಕೈದಡ್ಡಿನ್ಯಾತಕೇಳೊ ದ್ವಿಜರ ಸುತರ ತಂದುಕೊಡದೆ ಮೊದಲೆ ಮಾಡಿದ ಪ್ರತಿಜ್ಞವೇನೊ 20 ಅಂಜೋನಲ್ಲ ನಾನರಿಗಳಿಗೆ ಕಲಿ- ಭಂಜನ ಕಲ್ಕ್ಯಾವತಾರಗೆ ಕಂಜಚರಣಕ್ಕೆ ವಂದಿಸುವೆ ಧ- ನಂಜಯ ನಾನಲ್ಲವೇನೆ 21 ಸೈಯೊ ನೀ ಧನಂಜಯರೇಯ ಸುರಪತಿಗೆ ಪತ್ರವನೆ ಬರೆದು ಶರದ ಪಂಜರ ಕಟ್ಟಿ ನೀ ಕುಂ- ಜರವನಿಳಿಸಿದ ಕಾರಣೇನೊ 22 ನಿನ್ನ ಸರಿ ಮಾತಾಡುವೋರ ಧನ್ಯರ ನಾ ಕಾಣೆನೆಲ್ಲು ಳನ್ನು ಕೇಳಿದಿನ್ಯಾಕೆ ತಡೆವೆ 23 ದಶ ನಾಮಗಳ ಕೇಳಿ ದ್ರೌಪದಿ <ಈಔಓಖಿ ಜಿಚಿ
--------------
ಹರಪನಹಳ್ಳಿಭೀಮವ್ವ
ಕನಸು ಕಂಡೆನು ನಾನು ಸಂತೋಷದಿ| ಕನಸು ಕಂಡೆನು ನಾನು ಅರನಿಮಿಷದೊಳು ಹರಿಯ ಮನಸಿನಲಿ ಸ್ಮರಿಸಿ ಮಹಾರೂಪವನು ಕೂಡ ಪ ವೆಂಕಟರಮಣನ ಯಾತ್ರೆಗೆ ಹೋದ್ಹಾಗೆ ಶಂಕೆ ಇಲ್ಲದೆ ಪರಶಿಜನಕ ಕಂಡ್ಹಾಗೆ ಬಿಂಕದಿಂದಲಿ ದೇವಸ್ಥಾನ ಪವಳಿಯ ಸುತ್ತ ಅಂಕುರಾರ್ಪಣ ಧ್ವಜಸ್ತಂಭದಲಿ ನಿಂತ್ಹಾಗೆ 1 ಅಡಗಿ ಶಾಲೆಯ ಅನ್ನಪೂರ್ಣೆಯನ್ನು ಕಂಡ್ಹಾಗೆ ದೃಢದಿ ಶ್ರೀನಿವಾಸ ದೇವರ ನೋಡಿದ್ಹಾಗೆ ಕಡು ಹರುಷದಲಿ ತೊಟ್ಲ ತೀರ್ಥ ಸೇವಿಸದ್ಹಾಗೆ ಸಡಗರದ ಮಧ್ಯರಂಗದಲಿ ನಿಂತ್ಹಾಗೆ 2 ಶಿರzಲ್ಲಿ ಕಿರೀಟ ಲಲಾಟ ತಿಲಕ ವಿಟ್ಟ್ಹಾಗೆ ಕೊರಳೊಳ್ ಮುತ್ತೀನಹಾರ ಪದಕ ತೋರಿದ ಹಾಗೆ ಕರದಲ್ಲಿ ಶಂಖಚಕ್ರ ಧರಿಸಿ ಕೊಂಡಿರುವ ಹಾಗೆ ಉರದಲ್ಲಿ ಶಿರಿಲಕುಮಿ ವಾಸವಿದ್ಹಾಗೆ 3 ಹೊನ್ನ ಹೊಸ್ತಿಲ ದಾಟಿ ವಳಗ್ಹೋಗಿ ನಿಂತ್ಹಾಗೆ ಚಿನ್ಮಯನ ರೂಪವನು ಚಿಂತಿಸಿದ ಹಾಗೆ ಅನ್ನ ಪ್ರಸಾದಾತಿ ರಸದÉೂೀಶಿ ಕೊಟ್ಹಾಗೆ ಪನ್ನ ಗಾದ್ರಿ ವಾಸನ ಕಣ್ಣಿಂದ ನೋಡಿದ್ಹಾಗೆ 4 ನಡುವಿನಲಿ ಒಡ್ಯಾಣ ಪೀತಾಂಬರವನುಟ್ಹಾಗೆ ಯಡಬಲದಿ ಜಯು ವಿಜಯ ನಿಂತಿರೋಹಾಗೆ ಪೊಡವಿಯೊಳ್ 'ಹೆನ್ನೆವಿಠ್ಠಲ’ ವೆಂಕಟೇಶನ್ನ ಕಡು ಹರುಷದಲಿ ಕಂಡು ಕೈಮುಗಿದು ನಿಂತ್ಹಾಗೆ 5
--------------
ಹೆನ್ನೆರಂಗದಾಸರು
ಕನ್ಯಾರೂಪವ ತಾಳಿದ ಚನ್ನಿಗ ಕೃಷ್ಣರಾಯನಾ ಪ ದಾನವರ ಮರಳು ಮಾಡಿ ಮಾಣದೆ ಸುಧೆಯನೆರೆದು ಆ ನಿರ್ಜರರ ಪಾಲಿಸಿದ ಶ್ರೀ ನಾರಾಯಣಿ ವೇಷವಾ 1 ಆರಾರು ಸಾವಿರ ಸಕಲ ಶರೀರದ ಎಡಕೆ ಇಪ್ಪ ಸಾರಸುಂದರವಾಗಿದ್ದ ನಾರಿ ರೂಪಗಳು ಇದೊ 2 ಭೂತಳದೊಳಗೆ ಜನಕೆ ಮಾತೆಯಾಗಿ ಕಾವುತಿಪ್ಪ ಜಾತರಹಿತ ವಿಜಯವಿಠ್ಠಲ ಶ್ರೀ ತರಣಿಯಾಳಿದ ಪೆಣ್ಣಿನ 3
--------------
ವಿಜಯದಾಸ
ಕಪಾಲಧರ ತ್ರಯತಾಪರಿಹಾರ ಭ ಜಿಪೆ ಕಾಪಾಡು ಕೃಪೆ ಪಾಲಿಸಿ ಪ ಅಪಾರ ಪತಿವ್ರತಾಶಾಪವಿಮೋಚನ ಗೋಪ ಗೋಪತಿ ನಮಿತ ಗೋಪಾಲನೊಲಿಸೆನಗೆ ಅ.ಪ ಅಗಜಾವಲ್ಲಭ ಸುಗುಣರಘದೂರ ಜಗದೊಡೆಯ ಮಗುವಿನ ಮೊರೆ ಪಾಲಿಸು ವಿನುತ ಅಗಣಿತಾಗಣಿತಮಹಿಮೆ ಬಗೆದೆನ್ನ ನುಡಿಯಾಲಿಸು ನಗಧರ ಖಗರೂಢ ಜಗರಕ್ಷ ಹರಿನಾಮ ಅಗಣಿತ ಮತಿ ನೀಡೊ 1 ಅಜಭವಸುರ ನಮಿತ ರಜತಾದ್ರಿಮಂದಿರ ನಿಜಜ್ಞಾನ ದಯಮಾಡೊ ಮೃಡ ಗಜಚರ್ಮಾಂಬರ ಜಗದ ಗೋಜು ಮುಂದೆನಗೆ ಬೇಡೊ ಸುಜನ ಸಂರಕ್ಷಕ ಪಾದ ನಿಜಧ್ಯಾನ ಸ್ಥಿರಕೊಡೋ 2 ಮೃತ್ಯುವಿಜಯ ಸತ್ಯ ಚಿತ್ತ ನಿರ್ಮಲ ನಿತ್ಯ ಸತ್ಯರ ಸಖ್ಯ ನೀಡೊ ಸತ್ಯಸದ್ಭಕ್ತಿನಿತ್ತು ಮತ್ರ್ಯರಿಂದುಳಿಸೆನ್ನ ಚಿತ್ತ ಪರಿಶುದ್ಧ ಮಾಡೊ ಭಕ್ತವತ್ಸಲ ನಿಜಮುಕ್ತಿದಾಯಕ ಮಮ ಕರ್ತ ಶ್ರೀರಾಮನ ಭಕ್ತನೆಂದೆನಿಸೆನ್ನ 3
--------------
ರಾಮದಾಸರು
ಕಪ್ಪುಗೊರಳ ಬಿಂಬ ಅಪ್ಪ ಸಲಹೋ ಪ ಕ್ಷಿಪ್ರ ಕೃಪೆ ಪುಟ್ಟಿಸೈ ಅಪ್ರತಿಮ ದಯವನಧಿ ಅ.ಪ. ದಿವಿಜ ದಾನವ ಗಣವ ತೃಣ ಮಾಡಿ ಆಳುವ ಪವನಾಂಶ ಪಾವನ್ನ ಜ್ಞಾನ ಶರಧಿ ನವವಿಧಾ ಹರಿಭಕ್ತಿ ರಸಸಿಂಧು ವೈರಾಗ್ಯ ಸೌಭಾಗ್ಯನಿಧಿ ಮನದಿ ನೆಲೆಯಾಗಿ ನಿಲ್ಲಯ್ಯ 1 ಶೌರಿ ಮೂರ್ತಿಯನು ನಿತ್ಯೋತ್ಸವದಿ ಹೃದಯ ಕಮಲದಲ್ಲಿ ಭೃತ್ಯ ಮಸ್ತಕ ಮಣಿಯೆ ಚಿತ್ತದಲಿ ಕೂತೆನ್ನ ಹರಿಯ ತೋರಿಸು ಸ್ವಾಮಿ 2 ಸಾರತಮ ಹರಿಯೆಂದು ಜಗಕೆ ತೋರಿದ ಗುರುವೆ ಭಾರ ನಿನ್ನದೊ ಸ್ವಾಮಿ ಕಾಯೊ ಎನ್ನ ಮಾರಪಿತ ಜಯೇಶವಿಠಲನ ಪೂರ್ಣೊಲಿಮೆ ವಾರಿಧಿ ವಿಹಾರ ತವ ಎಡಬಿಡದೆ ಇರಿಸೆನ್ನ 3
--------------
ಜಯೇಶವಿಠಲ
ಕಮಲ | ಭಜಿಸಿ ಬದುಕಿರೋನಿಜ ಸುಜ್ಞಾನ ಹರಿಭಕ್ತಿ | ನಿಜಕೆ ತರುವರೋ ಪ ಸಂತ ಶ್ರೀನಿವಾಸನಹಂ | ಮತಿಯ ವಿಚಾರಾಚಿಂತಿಸದೆ ಒಲಿದಂಥ | ಶಾಂತ ಚಿತ್ತರಾ ||ಕಂತುಹರ ಸುತನಂಶ | ಜಾತರಿಹರಾಅಂತೆ ತೋರಿ ದಾಸ ದೀಕ್ಷೆ | ಪಂಥ ವಿತ್ತರಾ 1 ಮಂಗಳದುತ್ಸವಕಾಗಿ | ಸಂಘ ಬರ್ಲಾಗಿಮಂಗಳ ಭಕ್ಷವು ಮಂಡಿಗಿ | ಮಾಳ್ಪರಿಲ್ಲಾಗಿಭಂಗ ಭೀತಿ ಅಧಿಪಗೊದಗಿ | ಚಿಂತಿಸಲಾಗಿಅಂಗ ವೇಷ ಬದಲಾಗಿ | ಬಂದ ತಾನಾಗಿ2 ಗ್ರಂಥ ಸುಧಾಭಿಧ ಬಲ್ಲ | ಸಂತ ಸುಬ್ಬಣ್ಣಸಂತ ವಿಜಯದಾಸಗಿಂಥ | ಗ್ರಂಥವೆಲ್ಲಣ್ಣಅಂತೆ ದಾಸಗಪರೋಕ್ಷ | ಕಂತೆ ಕಾಣಣ್ಣಚಿಂತಿಸುತ್ತ ಪ್ರವಚನ | ಭ್ರಾಂತ ನಿದ್ದನ 3 ಬಂದು ವಿಜಯದಾಸರಾಗ | ತೊಂದರೆ ಯೋಗ ಛಂದದಿಂದ ನೀಗಿ ಭಕ್ಷ | ಮಾಡಿದ ರಾಗ |ಬಂದು ಸುಧಾ ಕೇಳುತಿರಲು | ಆಚಾರ್ಯರಾಗ ಸಂದೇಹವ ಪಡುತಲಿ | ಮೌನವಿರಲಾಗ 4 ಪಾಚಕನ ತೆರ ಬಂದ | ಭೃಗುವಿನಂಶನುನೀಚ ನೀರಿನವನ ಶಿರದಿ | ಚಾಚಿ ಕೈಯ್ಯನ್ನುಬಾಚಿ ಬಿಡಿಸೆಂದ ಅವರ | ಸಂಶಯವನ್ನುವಾಚೀಸೀದ ಅನುವಾದ | ನೀರಿನವನೂ5 ಪೇಚಿಗೆ ಸುಬ್ಬಣ್ಣ ಸಿಕ್ಕಿ | ಮನದಿ ತಪಿಸೀ |ಯಾಚಿಸೀದ ಕ್ಷಮೆಯನ್ನು | ಬಹಳ ಪ್ರಾರ್ಥಿಸಿ ||ಸೂಚಿಸಲು ಶೈವನಿದ್ದ | ಬೇಲೂರು ವಾಸಿಪ್ರಾಚೀನದ ಸ್ಮøತಿ ಬಂತು | ನಂಜುಂಡ ನೆನಿಸಿ 6 ಪಾಣಿ ಇಟ್ಟು ಶಿರದಲ್ಲಿ | ಆಶೀರ್ವದಿಸಿವೇಣುಗೋಪ ದಾಸರಲ್ಲಿ ಅಂಕಿತ ಕೊಡಿಸಿ ||ಸಾಣೆ ಇಟ್ಟಂತಾಯಿತವನ | ಜ್ಞಾನದ ಅಸಿಮಾಣದಲೆ ವಿಜಯ ಕವಚ | ಮಾಡಿದ ಸೂಸಿ 7 ದಾಸಕೂಟ ಜನರೆಲ್ಲ | ಬಿಡದೆ ಪಾಡುವವ್ಯಾಸವಿಠಲ ರಚಿತೆನ್ನ | ವಿಜಯ ಕವಚವಲೇಸು ನೆರೆ ನಂಬಿದೆನ್ನ | ವಿಠಲ ಸ್ತೋತ್ರವಮೀಸಲಾಗಿ ಪಾಡುವರು | ಸ್ತೋತ್ರವೆಲ್ಲವ 8 ವರ್ಷ ಸೌಮ್ಯ ಕಾರ್ತೀಕದಿ | ಸೇವಿಸುತ್ತಿರೆದರ್ಶನಿತ್ತು ಸ್ವಪ್ನದಲ್ಲಿ | ಧೈರ್ಯಕೊಟ್ಟಾರೆಹರ್ಷವಿತ್ತು ದಾಸಕಾರ್ಯ | ಸಾಗಿಸುತ್ತಾರೆದರ್ಶದಿನ ಪುಷ್ಯ ನೃಹರಿ | ಯಾತ್ರೆಯಿತ್ತಾರೆ 9 ವಿತ್ತ ನಿತ್ಯ | ಇಲ್ಲದಿನ ವೊಲ್ಲೆ ||ಮೂರ್ತಿ ಬಿಂಬ ತೋರಿ ಎಂದು | ಕೇಳುವ ಸೊಲ್ಲೆಸಾರ್ಥಕವ ಮಾಡಿರೆಂದು | ಪ್ರಾರ್ಥಿಸೆ ಬಲ್ಲೆ 10 ಸುಜನ ಸಂಗ | ವಿತ್ತು ಸುಶೀಲಕಾವ ದಾಸ ಜನರನ್ನು | ಹೃದಯ ವಿಶಾಲಗೋವ ಪರಿಪಾಲ ಗುರು | ಗೋವಿಂದ ವಿಠಲನತೀವರದಿ ಭಜಿಸಿ ಕಳೆದ | ಮಾಯಾಪಟಲ11
--------------
ಗುರುಗೋವಿಂದವಿಠಲರು
ಕಮಲ ಸಂಭವೆ ಹಿಮನಗಜಾರಮಣ ಸನ್ನುತೆ ತಮರಿಪು ಶತ ಸಮಸನ್ನಿಭೆ ಇಭ ಇಂದಿರೆ ಶೋಭಾನೆ ಪ ಶೃಂಗಾರ ತರಂಗ ಹೆಳಲಾ ಬಂಗಾರವ ಪೊಂಗ್ಲಾದಿಗೆ ಬಲಿ ವಂಗನೆ ಶಿರೋಮಂಗಳ ಮಡಿ ಜಡ ಜಂಗಮ ವ್ಯಾಪ್ತಿ ಅಂಗಜ ಶರ ಕಂಗಳೆ ದ್ವಿಜೋ ತ್ತುಂಗಮ ರಂಗನ ನಿಜ ಅ ರ್ಧಾಂಗಿನಿಯೆ ಬಾ ಹಸಿಯ ಜಗುಲೀಗೆ 1 ಪೊಸುಕುಸುಮ ಶಿರಸದಲೊಪ್ಪುವ ನೊಸಲಲಿ ರಂಜಿಸುವ ಕಸ್ತೂರಿ ದಿಶದುಂಬಿದ ಬಿಸಿಜಾನನ ಪ್ರಭೆ ಎಸೆವ ಕಂಧರ ಕಕ್ಕಜ ಕುಚಕು ಪ್ಪುಸದಲ್ಲತಿ ಶೋಭಿಸುತಿಹ ಪವಳ ದಾ ಸರವ ತೂಗುವ ಅಸಮೇ ಬಾ ಹಸೆಯ ಜಗುಲೀಗೆ 2 ಕರಿಸೊಂಡಿಲುತೆರ ಚತುರಕರ ವರ ಅಭಯಸರಸಿಜಯುಗಧರ ಜಠರಾ ವರತ್ರಿವಳಿ ಗಂಭೀರನಾಭಿ ಕ ಟಸೂತರೆ ಹೇಮಾಂಬರೆ ಚರಣಂದಿಗಿ ಸಪಳಿ ಪೊಂಗೆಜ್ಜೆಯಾ ಮೆರೆಯುತ ಸರಸಳೆ ಬಾಹಸಿಯ ಜಗುಲೀಗೆ 3 ಮೃಗಲಾಂಛನೆ ಮಿಗೆ ಶೋಭಿಪ ಪದ ನಖ ಪಂಕ್ತಿಗಳೊಪ್ಪುವ ಗತ ಅಗಣಿತ ಮಹಿಮಳೆ ಸುಗುಣ ಸಂಪನ್ನೆ ಭಗವಂತನ ಜಘನದಿ ಪೊಳೆಯುತ ಖಗರಾಜನ ಪೆಗಲನೇರಿ ಅಮ ರ ಗಣವ ಚಿರ ಬಾ ಹಸಿಯ ಜಗಲೀಗೆ 4 ಅಂಭೃಣಿ ಸ್ವಾಯಂಭೂ ಸುರ ನಿಕು ರುಂಬಕರ ಅಂಬುಜ ಪೂಜಿತೆ ನಂಬಿದ ಜನರ್ಹಂಬಲಿಸುವ ಫಲ ಸಂಭ್ರಮದಿ ಕೊಡುವಾ ಗಂಭೀರಾ ಸು ಖಾಂಬೋಧಿ ಹರಿ ನಿತಂಬೆ ಪ ಯಾಂಬೋಧಿ ಸುತೆ ಜಗದಂಬೆ ಬಾ ಹಸಿಯ ಜಗುಲೀಗೆ 5 ಮಾಯೆ ನಾರಾಯಣಿ ಶ್ರೀ ಭೂ ಕೃತಿ ಆಯತಾಕ್ಷಳೆ ಕಾಯಜನ ತಾಯೆ ಶರಣೆ ಪ್ರಿಯ ಪಾವನ್ನೆ ವಾಯುಭುಕು ಶಾಯಿ ಅಮರಾಧೇಯಾ ಜಗನ್ನಾಥವಿಠಲನ ಜಾಯೆ ಬಾ ಹಸಿಯ ಜಗುಲೀಗೆ 6
--------------
ಜಗನ್ನಾಥದಾಸರು
ಕಮಲಮುಖಿಯೆ ಕಮಲಾಲಯೆ ಕಮಲೆಕಮಾಲಾಕ್ಷಿಯೆ ಕೋಮಲೆ ಪ. ಕಮಲನಾಭನ ಪಾದಕಮಲಯುಗಳ ಮಧುಪೆಕಮಲಜ ಜನನಿಯೆ ಕಮಲಮಿತ್ರೆ ಸುಪ್ರಭೆ ಅ.ಪ. ಅರುಣನ ಪೋಲುವ ಚರಣವು ಬಾಲಚಂದಿರನ ಸೋಲಿಪ ನಖವುಬೆರಳಲ್ಲಿ ಪಿಲ್ಲಿ ಕಾಲುಂಗುರ ಮೆಂಟಿಕೆ ಕಿರುಗೆಜ್ಜ್ಯಂದಿಗೆ ಪೆಂಡೆಯುಕರಿಯ ದಂತದಂತೆ ಜಾನುದರ್ಪಣ ಜಂಘೆ ಉಟ್ಟ ದಟ್ಟಿಯು ನೆರಿಗೆಯುಹರಿನಡು ಕಿಂಕಿಣಿ ಭರದಿ ಒಡ್ಯಾಣವು ಉದರ ತ್ರಿವಳಿರೇಖೆ ವರ ಕಂಚುಕಧಾರಿ1 ಉರೆ ವೈಜಯಂತೀ ಮಂದಾರಮೆರೆವ ಚುಬುಕ ಬಿಂಬಾಧರ ಕೂರ್ಮಕದಪು ಕಿರಿದಂತ ರತುನದ ಕರಡಿಗೆ ವದನೆ 2 ಸುರಭಿ ಚಂಪಕನಾಸಿಕ ಮೂಗುತಿ ಶಾಂತ ಪರಮ ಕರುಣ ನೋಟದಹರಿಣನಯನೆ ಪುಬ್ಬುಸ್ಮರನ ಚಾಪದಂತೆ ಕರ್ಣಾಭರಣಲಂಕಾರ ಸಿರಿಕುಂಕುಮ ಕಸ್ತೂರಿ ತಿಲಕದ ಮೇಲೆ ಅರಳೆಲೆ ಬೈತಲೆಯ ಸರ ಕುರುಳುಸುಳಿಯು ಪರಿಪರಿ ರತ್ನ ಖಚಿತದ ವರ ಮಕುಟವು ಕೋಟಿ ತರಣಿಯಂತೊಪ್ಪುವ 3 ತೆತ್ತೀಸಕೋಟಿ ದೇವತೆಗಳು ವಾಣಿ ಭಾರತಿ ಪಾರ್ವತಿ ಮೊದಲಾದಉತ್ತಮಸ್ತ್ರೀಯರು ಛತ್ರಚಾಮರನೆತ್ತಿ ಬೀಸುವಲಂಕಾರಸುತ್ತಗಂಧರ್ವರು ತುಂಬುರ ನಾರದರು ಸ್ವರವೆತ್ತಿ ಪಾಡುವ ಝೇಂಕಾರತತ್ತರಿತರಿಘಟ್ಟ ಝಣುತ ಝಣುತ ಎಂದು ಎತ್ತ ನೋಡಿದರತ್ತ ತಥೈ ಎಂಬೊ ಶಬ್ದ 4 ಅಜ ಫಾಲಾಕ್ಷ ಸುರವಿನುತೆಮೋಕ್ಷದಾಯಕಿ ಲೋಕರಕ್ಷಕಿ ರಮಾದೇವಿ ಇಕ್ಷುಧನ್ವನ ಜನನಿಅಕ್ಷಯಫಲದ ಗೋಪಾಲವಿಠಲನ ಪ್ರತ್ಯಕ್ಷ ತೋರಿಸೆನ್ನಪೇಕ್ಷೆ ಪೂರೈಸೆ ತಾಯೆ 5
--------------
ಗೋಪಾಲದಾಸರು
ಕರ ಪ ಸೂರಿನಿವಾಸ ಭೋಗಾಪುರ ಮಂದಿರ ಮಾಮುದ್ಧರ ಅ.ಪ ಶ್ರೀರಘುವರನಾಜ್ಞೆಯಿಂದಲಿ ವಾರಿಧಿಯಕ್ಷಣದಲಿ ಹಾರಿ ಭೂಮಿಸುತೆ ಗೆರಗುತಲಿ ಮುದ್ರಿಕೆಯ ಕೊಡುತಲಿ ಶ್ರೀರಾಮಗೊಂದಿಸಿದಿ ಕ್ಷೇಮದಲಿ ಇಹಳೆಂದು ಪೇಳಿ 1 ಇಂದು ಕುಲದಿ ಪಾಂಡು ನೃಪತಿಯ ಎನಿಸಿದೆಯೊ ತನಯ ಬಂಥ ಕೌರವ ವೃಂದ ಮಥಿಸಿದೆಯಾರಣದೊಳಗೆ ವಿಜಯ ನಂದಸುತನ ನೊಲಿಮೆ ಪಡದಿಯಾ ಭೀಮಶೈನರಾಯ 2 ಮೇದಿನಿ ಸುರಗೃಹದಿ ಜನಿಸಿದ ವೇದಾರ್ಥ ತಿಳಿಸಿದ ವಾದಿಗಳ ನಿರ್ವಾದಗೈಸಿದ ದಿಗ್ವಲಯ ಚರಿಸಿದ ಭೇದ ಭೋದಕ ಶಾಸ್ತ್ರವಿರಚಿಸಿದ ಶ್ರೀ ಪೂರ್ಣಬೋಧ 3 ಕಾಲಕಾಲಗಳಲ್ಲಿ ದ್ವಿಜಜನ ಬರುತಿಹರು ನಿನ್ನ ಧೂಳಿ ದರುಶನಾಬಿಷೇಚನ ಶೇವಿಪರು ಘನ್ನ ಪಾಲಿಸಬೇಕಯ್ಯ ಭಕುತರನಾ ಪಾಂಚಾಲಿರಮಣ 4 ನೀರಜಾಸನಾದಿ ಸುರಗಣ ವಂದಿತ ಸುಚರಣ ಕಾರ್ಪರ ಶಿರಿನಾರಸಿಂಹನ ಒಲಿಸಿರುವ ನಿನ್ನ ಹರಣ 5
--------------
ಕಾರ್ಪರ ನರಹರಿದಾಸರು
ಕರವ ಮುಗಿದು ಸತತ ಲಕುಮಿಪತಿಯ ಭಕುತಿ ಒಂದೇ ಇರಲಿ ಪ ಮದನಶರ ತಿಮಿರಾರ್ಕ ಸುಜನವಾರ್ಧಿಗೆ ಪೂರ್ಣ ಬದರಮಂಗಳಗಾತ್ರ ಬಲು ಸುಲಭ ಬುದ್ಧನಾಗಿ ಶಿಷ್ಯರ್ಗೆ ಸುಧಿಯ ಪೇಳುವ ಮೌನಿ ಎದಿರಿಲ್ಲ ನಿಮಗೆಲ್ಲಿ ಗುರುವೆ ಸುರತರುವೆ 1 ಅಂದವಾದ ಕಾವ್ಯ ಸಾಮಥ್ರ್ಯಧೀರುವೆ ಮಂದಹಾಸದಿ ನೋಳ್ಪ ಭಕುತ ಜನರ ಒಂದೊಂದು ಪದಾರ್ಥ ಪಿಡಿವ ಗಂಟಲೆ ರಾಹು ನಿತ್ಯ 2 ವಾದಿಗಳೆದೆಯ ಶೂಲ ಸತ್ಯಪ್ರಿಯ ಕರಜಾತ ಸಾಧು ಸಜ್ಜನಗೇಯ ಸತ್ಯಬೋಧ ಮೋದಿ ಹಯವದನ ರಾಮ ವಿಜಯವಿಠ್ಠಲ ನಾದಿದೈವವೆಂದು ಎಣಿಸುವ ಜಪಶೀಲ 3
--------------
ವಿಜಯದಾಸ
ಕರವ ಮುಗಿಪರಘವ ತೆಗೆವ ಗುರು ವಿಜಯದಾಸರಿಗಿನ್ನು ಪ ಭೇದವಿಲ್ಲಯೆಂಬ ಮಾಯವಾದಿ ರಾಮಶಾಸ್ತ್ರಿ ಬಂದುಪಾದಕೆರಗೆ ಅವನ ತಮವ ಛೇದಿಸಿ ಸುಜ್ಞಾನವಿತ್ತೆ 1 ವಾದಿಗಿರಿಗೆ ಇಂದ್ರಸ್ಥಾನೀಯರಾದ ಗುರುಗಳಿಂದ ಮು-ದ್ರಾಧಾರಣಿಯ ಕೊಡಿಸಿ ಪರಮ ಆದರದಿಂದ ಅವನ ಕಾಯ್ದೆ2 ಭಸುಮವನ್ನೆ ತೆಗಸಿ ಅವನ ನೊಸಲಲೂಧ್ರ್ವ ತಿಲಕ ಪಚ್ಚಿಸಿಎಸವ ಪಂಚಮುದ್ರಿ ದ್ವಾದಶ ನಾಮ ಧರಿಪಂತೆ ಮಾಡಿದೆ 3 ಸುರರು ಆತನತಾಮರಸ ಪದ ಧೂಳಿಗಯೆಂದು ಈ ಮರಿಯಾದಿಗಳ ಪೇಳಿದೆ 4 ಧರೆಯೊಳಿದ್ದ ಭಕ್ತ ಜನರ ಪೊರೆವನೆಂಬ ಬಿರಿದು ವೊಹಿಸಿಸಿರಿ ಮೋಹನ್ನ ವಿಠಲನಂಘ್ರಿ ಸರಸಿರುಹವ ಎನಗೆ ತೊರ್ದೆ 5
--------------
ಮೋಹನದಾಸರು