ಒಟ್ಟು 7419 ಕಡೆಗಳಲ್ಲಿ , 132 ದಾಸರು , 3991 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೂ ಸಂಗಡ ಬಾಹೋರಿಲ್ಲ ಪ ನಾರಾಯಣ ನಾಮ ನೆರೆ ಬಾಹೋದಲ್ಲದೆ ಅ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ 1 ಹರಣ ದಾರು ಗತಿಯೆಂದಳುವಳು2 ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು 3 ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು 4 ಹರಣ ಹಿಂಗದ ಮುನ್ನು ಹರಿಯ ಸೇವೆಯ ಮಾಡಿಪರಗತಿಗೆ ಸಾಧನವ ಮಾಡಿಕೊಳ್ಳೊಕರುಣನಿಧಿ ಕಾಗಿನೆಲೆಯಾದಿಕೇಶವರಾಯನನಿರುತದಲಿ ನೆನೆನೆನೆದು ಸುಖಿಯಾಗೊ ಮನುಜ5 * ಈ ಕೀರ್ತನೆ ಪುರಂದರಾಸರ ಅಂಕಿತದಲ್ಲೂ ಇದೆ.
--------------
ಕನಕದಾಸ
ಆರೂ ಸಮಯಕ್ಕೊದಗಲಿಲ್ಲಮೋರೆ ನೋಡುತ ಸುಮ್ಮನಿಹರೆಲ್ಲ ಪ ಮಗಳು ಮಹಲಕುಮಿ ಮೊಮ್ಮಗನು ಸರಸಿಜಭವನುಖಗರಾಜವಾಹನನು ತನ್ನಳಿಯನುಅಗಜನಂದು ತನ್ನೊಡಲೊಳಿಂಬಿಟ್ಟು ಮೂ-ರ್ಬೊಗಸೆ ಮಾಡಿದ ಮುನಿಯ ಬಿಡಿಸಲಿಲ್ಲ1 ಶ್ರೀದೇವಿ ಭೂದೇವಿ ಮಾತೆಯರು ತಾವಿರಲುಯಾದವರಾಯ ಮೋಹದ ತಂದೆಯುವೇದಮುಖದಣ್ಣನಿರೆ ಉರಿ ನಯನದಿಂದ ಸ್ಮರಬೂದಿಯಾಗುವಾಗ ಬಿಡಿಸಲಿಲ್ಲವೇಕೆ2 ಬೊಮ್ಮ ಮನ್ಮಥರಿರಲಾಗಿಕ್ಷಿತಿಯೊಳಗೆ ಶಶಿ ಕ್ಷೀಣವಾಗುವ ಸಮಯದಿ 3 ತೆತ್ತೀಸ ಕೋಟಿ ದೇವರ್ಕಳು ತಾವಿರಲುಒತ್ತಿನಲಿ ಇಂದ್ರ ಉಪೇಂದ್ರರಿರಲುಮತ್ತೆ ಪಾರ್ವತಿ ಪುತ್ರ ವೀರೇಶ ದಕ್ಷನನೆತ್ತಿ ಹರಿಗಡಿವಾಗ ನೋಡುತಿಹರೆಲ್ಲ 4 ಇಂಥಿಂಥ ದೊಡ್ಡವರು ಈ ಪಾಡು ಪಡಲಾಗಿಭ್ರಾಂತ ಮನುಜರಿಗೆ ಪೇಳಲಿನ್ನೆಷ್ಟುಕಂತುಪಿತ ಕಾಗಿನೆಲೆಯಾದಿಕೇಶವನಸಂತೋಷದಿಂ ನೆನೆದು ಸುಖಿಯಾಗೊ ಮನುಜ5
--------------
ಕನಕದಾಸ
ಆರೇ ಸುಳಿದವನಿಂದು|ನೀರೇ ತಂದುವನ ತೋರೇ ಪ ನೀಲಮೇಘದ ಕಾಂತಿಮೈಯ್ಯಾ|ನೋಡೇಮದನಯ್ಯಾ| ಕಾಲಲುಂದಿಗೆ ಹೆಜ್ಜೆಘಿಲು ಘಲುಕೆನುವಾ| ಮೇಲು ಪಿತಾಂಬರ ಝಳ ಝಳಿಸುವ ನವನಾರೇ 1 ಮೆರೆವ ವಡ್ಯಾಣ ಘಂಟೆಸಿರಿಯಾ|ಕವಿಹೊಗಳಲರಿಯಾ| ಬೆರಳುಂಗುರ ಕಡಗ ಕೇಯೂರಾ| ಕೌಸ್ತುಭ ಮಾಲೆಯ ಹೊರವನಾರೇ 2 ಕಡೆಗಣ್ಣನೋಟ ಪದುಮದೆಲಿಯೋ|ಮೋಹನದಾಬಲೆಯಾ| ಕುಂಡಲ ಹೊಳೆವ ಕಪೋಲಾ| ಇಡಿದನೇ ನಗೆಯ ಸುನಾಶಿಕ ಸರಳವನಾರೇ 3 ಮೃಗದ ಪಣಿಯಾಲುಂಗುರ ಗುರುಳೋ|ಕಾವನಸರಳೋ| ಝಗಝಗಿಸುವ ರನ್ನ ಮುಕುಟದ ಚೆಲುವಾ| ಬಗೆ ಬಗೆ ಸೊಬಗಿನ ನವರಸಗರೆವನಾರೇ 4 ತರುಣೀ ಮುನ್ನಿನಸುಕೃತಬಂದು|ವದಗಿ ತಾ ಇಂದು| ಗುರು ಮಹಿಪತಿ ಪ್ರಭು ಚರಣವದೋರಿ|ಮರುಳೆನ್ನಾ ಮಾಡಿದ ದೀನೋದ್ಧಾರಿವನಾರೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರೇನು ಮಾಡುವರು ಅವನಿಯೊಳಗೆ | ಕರ್ಮ ಫಣಿಯಲ್ಲಿ ಬರೆದುದಕೆ ಪ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು 1 ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ 2 ಹೆತ್ತ ತಾಯಿ ಹಿಡಿದು ಮಕ್ಕಳಿಗೆ ವಿಷ ಹಾಕಿದರೆ | ಪೆತ್ತ ತಂದೆಯು ಹೊರಗೆ ಮಾಡಿದರೆ || ತೊತ್ತು ಅರಸಿಗೆ ಪ್ರತ್ಯುತ್ತರವನಾಡಿದರೆ | ಕತ್ತಲೆ ಬೆನ್ನಟ್ಟಿ ಕರಡ್ಯಾಗಿ ಬಂದರೆ 3 ಕಣ್ಣವೊಳಗಿನ ಗೊಂಬಿ ಕಾದ ಬಂದರೆ | ಹೆಣ್ಣಿನ ಹರಟೆ ಹೆಚ್ಚಾದರೆ | ಅನ್ನವನು ಉಣ್ಣಲು ಅಜೀರ್ಣವಾದರೆ | ಪುಣ್ಯಕ್ಷೇತ್ರಗಳಲ್ಲಿ ಪಾಪ ಅಟ್ಟಿಸಿದರೆ 4 ಏರಿ ಕುಳಿತ ಕುಂಬಿ ಎರಡಾಗಿ ಮುರಿದರೆ | ವಾರಿಧಿಗಳು ಮೇರೆ ಮೀರಿದರೆ || ಆರಿದ ಇದ್ದಲಿಗಳು ಅಗ್ನಿಯಾದರೆ | ನಮ್ಮ ವಿಜಯವಿಠ್ಠಲನಿರುವ ತನಕ 5
--------------
ವಿಜಯದಾಸ
ಆರೋಗಣೆ ಮಾಡಮ್ಮ ಮಂಗಳಗೌರಿ ಬೇಡಿಕೊಂಬೆನೆ ನಿನಗೆ ಬೇಡಿದಡಿಗೆ ಎಡೆ ಮಾಡಿ ತಂದಿಟ್ಟಿಹೆ ಜೋಡಿಸಿ ನಿನಗೆ ಕೈ ಮುಗಿವೆನೆ ಮಹಾತಾಯೆ ಪ ನಂದಿವಾಹನನರ್ಧಾಂಗಿಯ ಪೂಜಿಸಿ ಗಂಧಕುಂಕುಮದಿಂದ ತಂದು ಕಸ್ತೂರಿ ಕಮಲದ ಪುಷ್ಪಗಳುಡಿ ತುಂಬಿ ನೈವೇದ್ಯವ ತಂದಿರಿಸುವೆ ತಾಯೆ 1 ಅಚ್ಚ ಮುತ್ತಿನ ಹರಿವಾಣದಿ ಮಾಲತಿ ಬಟ್ಟ್ಟಿವಿ ಗೌಲಿಗಳು ಅಷ್ಟಗುಳ್ಳವು ಶಾವಿಗೆ ಪರಡಿ ಪಾಯಸ ಭಕ್ಷ ಎಣ್ಣೋರಿಗೆ ಭಾರಿಬಟ್ಟಲು ತುಪ್ಪ 2 ಮಂಡಿಗೆ ಚೂರ್ಮವು ಬುಂದ್ಯ ಬೀಸೋರಿಗೆ ದುಂಡುಗುಳ್ಳೋರಿಗೆಯು ಚೆಂದವಾಗಿದ್ದ ಚಕ್ಕುಲಿ ಕರ್ಜಿಕಾಯ್ಗಳು ಅಂದವಾದ ಕಾಯಿರಸ ಶಾಖ ಪಾಕವು 3 ಸಣ್ಣ ಅಕ್ಕಿಯ ಶಾಲ್ಯಾನ್ನಕೊಪ್ಪುವ ತವ್ವೆ ಇನ್ನು ದಧ್ಯನ್ನಗಳು ಸನ್ಮತವಾಗಿದ್ದ ಶಾವಿಗೆಫೇಣಿ ಸಕ್ಕರೆ ರುಬ್ಬಿದ ಆಂಬೊಡೆ ರುಚಿಯಾದ ಕಲಸನ್ನ 4 ಘೃತ ಸೀಕರ್ಣೆ ಕಾಯ್ಹಾಲು ಹೊಯ್ಗಡುವನಿಟ್ಟು ಸಾರು ಸಾಂಬಾರ ಚಟ್ಟಣಿ ಕೋಸಂಬರಿ ನೀರೆ ನಿನಗೆ ಪನ್ನೀರು ತಂದಿರಿಸುವೆ 5 ದೇವಿ ನಿನ್ನ ಮನೋಭಾವ ತಿಳಿದು ನಾ ಭೀಮೇಶಕೃಷ್ಣನಿಗೆ ಬ್ಯಾಗ ಸಮರ್ಪಣೆ ಮಾಡಲು ಮಹಾದೇವ ಸ್ವಾದ ಸವಿದಾಸುಖದಿಂದಡ್ವಿಳ್ಯವ ಕೊಳ್ಳೆ 6
--------------
ಹರಪನಹಳ್ಳಿಭೀಮವ್ವ
ಆರೋಗಣೆ ಮಾಡೊ ಆನಂದಮೂರುತಿ ಪ. ರÀನ್ನದ ತಳಿಗೆಯನ್ನು ಶೋಭನವಾದ ಪೊನ್ನ ಬಟ್ಟಲುಗಳ ನೆರವಿ ಶ್ರೀಹರಿಗೆ ನಿನ್ನರಸಿ ಆ ಲಕ್ಷ್ಮಿ ಸೊಸೆಯರ ಕೂಡಿ ಶಾ- ಲ್ಯನ್ನ ಸವಿಶಾಕಗಳ ನೀಡಿದ ಕೈಯಿಂದ 1 ತುಪ್ಪ ಮಧು ಚಿತ್ರಾನ್ನ ಪಾಯಸ ಕರಿಗಳ ಸಾರಸ ಭಕ್ಷ್ಯಗಳ ದಧಿ ಪಕ್ವಫಲಂಗಳು ಆ ಪದ್ಮಮುಖಿ ಬಡಿಸಿದಳು ಲೇಹ್ಯಪೇಹ್ಯವ 2 ಎನ್ನ ಕುಂದುಗಳಾಮುನಿಗೆ ದಿವ್ಯ ಅನ್ನವೊ ಮನ್ನಿಸಿ ಕರೆದು ನಿನ್ನ ಕರಕಂಜದಿಂದ ಪೂರ್ಣವಮಾಡು ಭುಜಿಸೊ ಹಯವದನ ಕೃ- ಪಾಳು ಸಕಲಲೋಕಪಾಲ ಸುರರೊಡೆಯನೆ 3
--------------
ವಾದಿರಾಜ
ಆಲದೆಲಿಯ ಮ್ಯಾಲ ಮಲಗ್ಯುಂಗುಟ ಚಪ್ಪರಿವನು ನೀನಾರೈ ಮೂಲರೂಪದ ನಿಜದೋರದೆ ಬಾಲಕನಾಗಿಹ ನೀನಾರೈಧ್ರುವ ಚಲುವ ಕಂಗಳ ನೋಡದಲ್ಹೊಳವುತ ಜಲದೊಳಗಾಡುವನಾರೈ ಕಾಲುಡಿಗಿಸಿ ಬೆನ್ನಿಲೆ ಬಲು ಕಠಿಣವ ತಾಳಿದವ ನಿನಾರೈ 1 ಕೋರ್ಹಲ್ಲಿಲಿ ಬೇರನೆ ಅಗಳ್ಯಾಡುತ ದೋರುವ ನೀನಾರೈ ನರಮೃಗರೂಪದಿ ತರಳಗೊಳಿದು ಭರದಲಿ ಬಂದವನಾರೈ 2 ಒಪ್ಪಿಲಿ ಮೂರುಪಾದ ಭೂಮಿಯೊಪ್ಪಿಸಿಕೊಂಡವನಾರೈ ಚಪ್ಪಗೊಡಲಿ ಕೈಯಲಿ ಪಿಡಕೊಂಡು ಇಪ್ಪವ ನೀನಾರೈ 3 ಬಳ್ಳಿಹಿಡಿದು ಕಲ್ಲನೆ ಉದ್ಧರಿಸಿದ ಮಲ್ಲನು ನೀನಾರೈ ಗೊಲ್ಲತೆಯರ ಮೋಹಿನಿ ಎಳಿದಾಡುವ ಚಲುವನು ನೀನಾರೈ 4 ಚದುರನು ನೀನಾರೈ ಕುದುರೆಯನೇರಿ ಹದನದಿ ತಿರವ್ಯಾಡುವ ರಾವುತನಾರೈ 5 ಕುರುಹುದೋರದೆ ನರನಾರಿಯರ ರೂಪದಲ್ಯಾಡಿದವನಾರೈ ಬಡಿಸಿದವ ನೀನಾರೈ 6 ಅಗಣಿತ ಗುಣದಲಿ ಬಗೆ ಬಗೆ ಅಡುವ ಸುಗುಣ ನೀನಾರೆ ೈ ಝಗಝಗಿಸುವ ಜಗನ್ಮನೋಹರನಾಗ್ಯಾಡುವ ನೀನಾರೈ 7 ಖೂನ ಕುರುಹದೋರಿದ ಭಾನುಕೋಟಿ ತೇಜನಹುದೋ ಬಾರೈ ದೀನ ಮಹಿಪತಿ ಸನಾಥಮಾಡಿದ ದೀನೋದ್ಧಾರಹುದಹುದೈ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆಲವವೆ ನಮಗೆ ಸಫಲವು ಕಾಣಿರೊ ಶ್ರೀಲಕುಮಿಯ ಪತಿಯ ನೆನೆವೆಯಾಗಿ ಪ ಕೀಳು ಜನರಿಂದ ಆಡುವಾ ನುಡಿಗಳು ಹಾಳು ಹರಟೆಗಳು ಬಹು ಜಾಳು ಮಾತುಗಳು ಕಾಲ ಪರಿವುದು ಕೇಳಿ ಜನರುಗಳೆ ನಾಳೆ ನೋಡಿದಂಥ ದಾಸರು ದೊರೆಯರು1 ವ್ಯಾಳೆ ಬಂದಾಗ ಸಾಧಿಸದವನಾ ಬಾಳಿವೆ ಬೋಳೆ ಅದು ಗೋಳಲ್ಲವೆ ಗಾಳಿ ಬಂದಾ ಕೈಲೆ ತೂರಿಕೊಳ್ಳಿರೊ ಮ್ಯಾಲೆ ತನ್ನೊಶವೇನೊ ದೇಶಕಾಲಗಳು 2 ಸೋಲಿಸಿ ದುರ್ಮತರ ಕೀಳು ಮಳಿಗೆಗಳ ಪರಿ ಸೀಲಿಸೊ ಪ್ರತಿ ದಿವಸದಲಿ ಅಲವ ಬೋಧರ ಮತವ ಲೀಲೆಯಿಂ ತಿಳಿಕೊಂಬ್ಯ ಪಾಲಿಸುವ ದಯದಿಂದ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಆವ ಕರ್ಮವಿಲ್ಲ ಆವ ಧರ್ಮವಿಲ್ಲವೋ |ಕೇವಲಾನಂದಭಾವ ಬೋಧದಲ್ಲಿ ಬೆರೆಯಲು ಪ ತನುವು ಬೇರೆ ಮನವು ಬೇರೆ | ಮನದ ಒಳಗೆ ನೆನಹು ಬೇರೆ | ತನುವು ಮನವು ನೆನವಿಗಿನ್ನು | ಸಾಕ್ಷಿಯಾಗಿಹ | ಚಿನುಮಯಾತ್ಮ ತಾನೆ ತನಗೆ | ಜನನ ಮರಣ ಎಂಬುದೆಲ್ಲ | ಮನದ ಆಟವೆಂದು ತಿಳಿದು | ಉನ್ಮನದಿ ಘನದಿ ನಲಿವಗೆ 1 ಸತ್ಯ ಶರಣರಡಿಯ ಪಿಡಿದು | ತತ್ತ್ವ ಶಾಸ್ತ್ರವನ್ನು ತಿಳಿದು |ನಿತ್ಯಾನಿತ್ಯವನು ವಿವರಿಸುತಲಿ | ಭಕ್ತಿಯಿಂದಲಿ ||ನಿತ್ಯ ಪೂರ್ಣ ವಸ್ತು ತಾನೆ | ಮತ್ತೆ ಬೇರೆ ಇಲ್ಲವೆಂದು |ಚಿತ್ತದಲ್ಲಿ ತಿಳಿದುಕೊಂಡು | ಮಿಥ್ಯವೆಲ್ಲ ಕಳೆದಗೆ 2 ಹಿಂದಾದುದ ನೆನಿಸಲಿಲ್ಲ | ಮುಂದೆ ಒಂದು ಬಯಸಲಿಲ್ಲ |ಬಂದುದೆಲ್ಲ ಸುಖವು ಎಂದು ಶಾಂತದಿಂದಲಿ ||ತಂದೆ ಭವತಾರಕನ | ಹೊಂದಿ ಪೂರ್ಣ ವಸ್ತುವಾಗಿ |ಬಂಧನವನು ಕಡಿದು ಕೊಂಡು | ಆನಂದದಲಿರುವವಗೆ 3
--------------
ಭಾವತರಕರು
ಆವ ಕುಲವೊ ರಂಗ ಅರಿಯಬಾರದು ಪ. ಆವ ಕುಲವೆಂದರಿಯಬಾರದು ಗೋವುಕಾವ ಗೊಲ್ಲನಂತೆಪಾರಿಜಾತದ ವೃಕ್ಷÀವ ಸತ್ಯಭಾಮೆಗೆ ತಂದಿತ್ತನಂತೆ ಅ.ಪ. ಗೋಕುಲದಲ್ಲಿ ಪುಟ್ಟಿದನಂತೆ ಗೋವಳರೊಡನೆ ಆಡಿದನಂತೆತಾ ಕೊಳಲನೂದಿ ಮೃಗಪಕ್ಷ್ಷಿಗಳ ಮರುಳುಮಾಡಿದ ದೇವನಂತೆ 1 ಕಾಲಲ್ಲಿ ಶಕಟನ ಒದ್ದನಂತೆ ಗೂಳಿಯ ಕೊಂಬ ಕಿತ್ತನಂತೆಕಾಳಿಂಗನ ಹೆಡೆಯ ತುಳಿದು ಬಾಲೇರಿಗೊಲಿದ ದೇವನಂತೆ2 ಗೊಲ್ಲತೇರ ಮನೆಗಳಲ್ಲಿ ಕಳ್ಳತನವ ಮಾಡಿದನಂತೆಮೆಲ್ಲನೆ ಪೂತನಿ ಅಸುವ ಹೀರಿ ಬಲ್ಲಿದ ಕಂಸನ ಕೊಂದನಂತೆ 3 ಸರ್ಪ ತನ್ನ ಹಾಸಿಗೆಯಂತೆ ಪಕ್ಷಿ ತನ್ನ ವಾಹನವಂತೆÀರ್ಪಭೂಷಣ ಮೊಮ್ಮಗನಂತೆ ಮುದ್ದುಮುಖದ ದೇವನಂತೆ4 ತರಳತನದಿ ಒರಳನೆಳೆದು ಮರನ ಕೆಡಹಿ ಮತ್ತವರ ಸಲಹಿದುರುಳ ರಕ್ಕಸರನು ಕೊಂದ ಚೆಲುವ ಹಯವದನನಂತೆ 5
--------------
ವಾದಿರಾಜ
ಆವ ಜನುಮ ಸಖನೇ ನಮ್ಮಯ್ಯಾ ಪ ಅವಿದ್ಯ ಬಲಿಯೊಳು ಸಿಲುಕಿ ಬಳಲುವನ | ಸುವಿದ್ಯ ನೋಟದ ಕರುಣವ ಬೀರಿದನಾ1 ಏನರಿಯದಲಿರೆ ವಿಷಯ ಮದಾಂಧದಿ | ಜ್ಞಾನಾಂಜನವ ಮಾಡಿ ಕಂಗಳದೆರಿಸಿದನಾ 2 ಹೃದಯ ಭೂಮಿಗೆ ಹರಿ ನಾಮಬೀಜವ ಬಿತ್ತಿ | ಸದಮಲ ಭಕುತಿಯ ಬೆಳೆಗಳ ನುಣಿಸಿದನಾ 3 ಕೇಳದ ನುಡಿಗಳ ಹೇಳುತ ಕಿವಿಯೊಳು | ಕಾಲ ಕಾಲಕ ಎನ್ನ ಹಿತವನೆ ಯೋಜಿಪನಾ4 ತಂದೆ ಮಹಿಪತಿ ಕಂದನೆನಿಸಿತ್ತ ನಾ | ಪರ ಭಾಗ್ಯವ ನೀಡಿದನಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವ ಜನುಮದ ಪಾಪ ವೊದಗಿತೋ ಎನಗಿಂದು | ದೇವ ಗಂಗೆಯ ನೋಡಿದೆ ಪ ದೇವಕೀಸುತ ಒಲಿದು ಕರೆತಂದು ಎನ್ನನು | ಪಾವನ್ನ ಮಾಡಿದನು ಇನ್ನೂ-ಮುನ್ನೂ ಅ.ಪ ಗುರುಗಳನು ವಹಿಸಿ ಭೂಸುರರಿಗೆ ಕಠಿಣ | ಉ- ತ್ತರ ಪೇಳಿಸಾಗಿದ್ದನೊ | ವರ ಬ್ರಾಹ್ಮಣರ ತಪ್ಪು ಬಲು ಇರಲು ಇಲ್ಲದೇ | ಸರಿಯೆಂದು ಸ್ಥಾಪಿಸಿದೆನೊ | ಮುರಿವ ಲಗ್ನಕೆ ಪೋಗಿ ಪುಸಿ ದ್ರವ್ಯವನೆ ಪೇಳಿ | ಮರಳಿ ಪೂರ್ತಿಸಿ ಇದ್ದೆನೊ | ವರ ವಿಪ್ರರಿಗೆ ವಧೆಯು ಬರಲು ಸಾಕ್ಷಿಯಾಗಿ | ಪರಿಹರಿಸಿ ಬಂದಿದ್ದನೋ ಏನೋ 1 ಘನ ತೀರ್ಥಯಾತ್ರೆಗೆ ಪೋಗುವಾಗ-ಲು | ವಂ ಕರ್ಮ ಮಾಡಿದ್ದೆನೊ | ಜನಪತಿಗಳ ಮಾತು ಕೇಳದೆ ಧರ್ಮಕ್ಕೆ | ಅನುಕೂಲನಾಗಿದ್ದೆನೊ | ಮನೆಗೆ ಬಂದತಿಥಿಗಳು ಜರಿದು ಪಿತ್ರಾದ್ಯರಿಗೆ | ಉಣಿಸಿ ಸುಖಪಡಿಸಿದ್ದೆನೊ | ವನಗಳನು ಕಡಿದು ದೇವಾಲಯವ ಕಟ್ಟಿಸಿ | ಕ್ಷಣ ಕ್ಷಣಕೆ ಅರ್ಚಿಸೆದೆನೋ ಏನೊ 2 ಉತ್ತಮನು ಮನೆಗೆ ಬಂದಾಗ ಮಾಡುವಂಥ | ಸತ್ಕರ್ಮ ತೊರೆದಿದ್ದೆನೋ | ಹೆತ್ತವರ ಬಾಂದವರ ಧನದಿಂದ ಕೆರೆ ಭಾವಿ | ಹತ್ತೆಂಟು ಕಟ್ಟಿಸಿದೆನೊ | ದತ್ತಾಪಹಾರವನು ಮಾಡಿ ಅದರಿಂದನಗ್ನಿ- ಹೋತ್ರವನು ಸಾಧಿಸೆದೆನೊ | ಇತ್ತ್ಯಧಿಕ ನಿರ್ಬೀಜ ಪಾಪಗಳನೆಸಗಿ | ಕೃ- ತಾರ್ಥನಾದೆನೊ ವಿಜಯವಿಠ್ಠಲನ್ನ ಕರುಣದಲಿ3
--------------
ವಿಜಯದಾಸ
ಆವ ತಾ ಸುಖವೊ ಮತ್ತಾವನಂದವೊ | ಈ ಉಡುಪಿ ಯಾತ್ರಿ ಮಾಡಿದ ಮನುಜಗೆ ಪ ಮನದೊಳಪೇಕ್ಷಿಸೆ ಅವನೀಗ ಹದಿನಾಲ್ಕು | ಮನುಗಳು ಭೂಮಿ ಆಳುವ ತನಕಾ | ಕನಕ ರಜತಪೀಠ ಗೋಕುಲದಿಂದ | ಸ | ಜ್ಬನ ಮಾರ್ಗದಲ್ಲಿ ಗುಣವಂತ ನೆನೆಸುವ 1 ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ | ಅಂದೆ ಸುರರೊಳು ಗಣನೆ ಎನ್ನಿ | ಒಂದಕ್ಕೆ ನೂರಾರು ಯಾಗ ಮಾಡಿದ ಫಲ | ತಂದು ಕೊಡುವ ಅಜನಾದಿ ಕಲ್ಪ ಪರಿಯಂತ2 ಅರ್ಧ ಮಾರ್ಗವು ಬರಲು ಬಂದೆ ದಿವಸದಲ್ಲಿ | ಸಾಧರ್À ತ್ರಿಕೋಟಿ ದೇವತೆಗಳಲಿ | ಊಧ್ರ್ವರೇತಸನಾಗಿ ಮಿಂದ ಫಲವಕ್ಕು | ಪರಿಯಂತ 3 ಕ್ಷೇತ್ರದ ಬಳಿಗಾಗಿ ಬರಲು ಅವನ ಏಳು | ಗೋತ್ರ ನೂರೊಂದು ಕುಲದವರು | ಗಾತ್ರವ ಮರೆದು ರೋಮಾಂಚನದಿಂದಲಿ | ಪಾತ್ರವನಾಡೋರು ಮೋಕ್ಷಮಾರ್ಗವ ಸಾರಿ4 ಕರವ ಜೋಡಿಸಿ ನಿಂದು | ಸನ್ನುತಿಸಿ ದರ್ಶನ ಮಾಡಲು | ಕರವ ತಿಳಿದು ಜ್ಞಾನ ಭಕುತಿ ಸಂ | ಪನ್ನ ವಿರುಕುತಿಲಿ ಗತಿಗಭಿಮುಖನಾಹ 5 ಮಧ್ವ ಸರೋವÀರದಲ್ಲಿ ಸ್ನಾನವಗೈದು | ಸಿದ್ಧಾಂತ ಕರ್ಮಗಳನನುಸರಿಸೀ | ಶುದ್ಧಾತ್ಮ ಕೃಷ್ಣನ ದೇವಾಲಯವ ಸಾರೆ | ಪೊದ್ದಿದಾ ಸತ್ಯಲೋಕದ ಸಭೆಯೊಳಗೆ 6 ಕೃಷ್ಣ ಕೃಷ್ಣ ಯೆಂದು | ನವ ವಿಧ ಪೂಜೆಯನ್ನು | ದೃಷ್ಟಿಯಿಂದಲಿ ನೋಡೆ ಅವನೆ ಮುಕ್ತಾ | ಮುಟ್ಟಿ ಪೂಜಿಸುವರ ಸತ್ಪುಣ್ಯ ವಿಜಯ | ವಿಠ್ಠಲ ತಾ ಬಲ್ಲ ನರರೆಣಿಸಲಳವಲ್ಲಾ 7
--------------
ವಿಜಯದಾಸ
ಆವ ತ್ರಾಣವು ಎನ್ನೊಳಿನಿತಿಲ್ಲವಯ್ಯ ಭಾವಜಪಿತ ನೀನೆ ದಯಮಾಡಬೇಕೊ ಪ ಗುಡಿಯ ಕಟ್ಟಿಸಲೆ ನಾ ಒಡುಕುಕವಡೆನಗಿಲ್ಲ ಬಡವರಿಗೆ ಅನ್ನಿಟ್ಟಿಲೆ ಹಿಡಿಧಾನ್ಯವಿಲ್ಲ ಕೊಡುವೆನೆನೆ ಧರ್ಮವ ಪಡೆದು ನಾ ಬಂದಿಲ್ಲ ಬಿಡುವೆನೇ ದು:ಸ್ಸಂಗ ಅಡರಿಹ್ಯರು ರಿಣವು 1 ದೃಢಧ್ಯಾತ್ಮಗೈವೆನೆನೆ ನಡೆವ ಶಕ್ತ್ಯೆನಗಿಲ್ಲ ಮಡಿಮಾಡ್ವೆನೆನೆ ಮನವು ತಡೆವಶಕ್ತಿಲ್ಲ ಸುಡಲೆ ಕಾಮಾದಿಗಳು ತೊಡರಿಹ್ಯದು ಸಂಸಾರ ನುಡಿಯಲೆ ಸತ್ಯ ಸದಾ ಬಡವನಾಗಿಹೆನು 2 ಒಡೆಯ ಶ್ರೀರಾಮ ನಿನ್ನಡಿಯ ಗುರುತರಿಯೆ ಕಡುಮೂರ್ಖ ಜನ್ಮವನು ಪಡೆದಿಹೆನು ಜಗದಿ ಒಡೆಯ ಸರ್ವಕೆ ನೀನೆ ಜಡಮತಿಯು ಗಡ ಕಡಿದು ದೃಢಭಕ್ತಿ ಸುಖವಿತ್ತು ಪಿಡಿದು ಸಲಹಯ್ಯ 3
--------------
ರಾಮದಾಸರು
ಆವ ರೋಗವೊ ಎನಗೆ ದೇವಧನ್ವಂತ್ರಿ ಪ. ಸಾವಧಾನದಿ ಕೈಯ ಪಿಡಿದು ನೀ ನೋಡಯ್ಯ ಅ.ಪ. ಹರಿಮೂರ್ತಿಗಳು ಕಾಣಿಸವು ಎನ್ನ ಕಂಗಳಿಗೆಹರಿಯ ಕೀರ್ತನೆಯು ಕೇಳಿಸದೆನ್ನ ಕಿವಿಗೆಹರಿ ಮಂತ್ರ ಸ್ತೋತ್ರ ಬಾರದು ಎನ್ನ ನಾಲಿಗೆಗೆಹರಿ ಪ್ರಸಾದವು ಜಿಹ್ವೆಗೆ ಸವಿಯಾಗದಯ್ಯ 1 ಹರಿಪಾದ ಸೇವೆಗೆನ್ನ ಹಸ್ತಗಳು ಚಲಿಸವುಗುರುಹಿರಿಯರಂಘ್ರಿಗೆ ಶಿರ ಬಾಗದುಹರಿಯ ನಿರ್ಮಾಲ್ಯವಾಘ್ರಾಣಿಸದು ನಾಸಿಕವುಹರಿಯಾತ್ರೆಗಳಿಗೆನ್ನ ಕಾಲೇಳದಯ್ಯ 2 ಅನಾಥಬಂಧು ಗೋಪಾಲವಿಠಲರೇಯಎನ್ನ ಭಾಗದ ವೈದ್ಯ ನೀನೆಯಾದೆಅನಾದಿ ಕಾಲದ ಭವರೋಗ ಕಳೆಯಯ್ಯನಾನೆಂದಿಗು ಮರೆಯೆ ನೀ ಮಾಡಿದುಪಕಾರ 3
--------------
ಗೋಪಾಲದಾಸರು