ಒಟ್ಟು 1457 ಕಡೆಗಳಲ್ಲಿ , 106 ದಾಸರು , 1262 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿರುಮಲೇಶ ಹರಿ ವಿಠ್ಠಲ | ಪೊರೆಯ ಬೇಕಿವನಾ ಪ ಕರುಣಾಳು ನೀನೆಂದು | ಪ್ರಾರ್ಥಿಸುವೆ ಹರಿಯೇಅ.ಪ. ತರಳನಿವ ಸಾಧನದ | ಸತ್ಪಥವ ಸಾಧಿಸಲುಹರಿದಾಸ ದೀಕ್ಷೆಯನು | ಕಾಂಕ್ಷಿಸುವ ಹರಿಯೇ |ಸರ್ವಬಗೆಯಲಿ ಇದಕೆ | ಪರಿಪರಿಯ ವಿಘ್ನಗಳಪರಿಹರಿಸಿ ಪೊರೆ ಇವನಾ | ಸರ್ವಾಂತರಾತ್ಮಾ 1 ಮರುತಮತ ದೀಕ್ಷೆಯಲಿ | ಇರುವಂತೆ ಕರುಣಿಸುತಪರತತ್ವ ಸಾರವನೆ | ಅರುಹುತಲಿ ಪೊರೆಯೋ |ವರಪಂಚ ಭೇಧಗಳ | ತರತರಾತ್ಮಕದರಿವುನೆರವಾಗಲಿವನೀಗೆ | ಗುರುದಯದಿ ಹರಿಯೇ 2 ಕಾಕುಸಂಗವ ಕೊಡದೆ | ಸತ್ಸಂಗ ಪ್ರಾಪಿಸುತಲೌಕಿಕೋನ್ನತಿ ಕೊಟ್ಟು | ನೀಕಾಯೊ ಹರಿಯೇ |ಪ್ರಾಕ್ಕು ಕರ್ಮವ ಕಳೆದು | ಬೇಕಾದ ವರಗಳನುನೀ ಕೊಟ್ಟು ಕಾಯೊ ಹರಿ | ಸಾಕಾರ ಮೂರ್ತೇ 3 ಗುರು ಹಿರಿಯ ಸೇವೆಯಲಿ | ಪರಮರತಿಯನೆ ಕೊಟ್ಟುಹರಿಗುರು ಚರಿತೆಗಳ | ಬರೆವ ಕೌಶಲವಾ |ಕರುಣಿಸೀ ಸತ್ಪಥದ | ಚರಿಪಂತೆಯ್ಯುಪ್ಪುದುಮರುತಾಂತರಾತ್ಮಕನೆ | ಉರುಗಾದ್ರಿ ನಿಲಯಾ 4 ಸರ್ವೇಶ ಸರ್ವಜ್ಞ | ಸರ್ವವ್ಯಾಪ್ತನೆ ಸ್ವಾಮಿನಿರ್ವಿಕಾರನೆ ದೇವಾ | ಶರ್ವಾದಿ ವಂದ್ಯಾ |ದರ್ವಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಶ್ರೀಹರಿಯೇಸರ್ವ ಸುಂದರ ಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ತಿಳಿದು ನೋಡಲೆ ಮನವೆ ತೀವ್ರ ತಾಮಸವೇಕೆ ತಿಳಿದುಕೋನಿನ್ನ ನೀನು ತಿಳಿಯೆ ಮಾಯೆಗಳಿಲ್ಲ ತಿಳಿಯೆ ಶಿವನಾಗುತಿಹೆಬಲುಮರವೆ ಯಾಕೆ ಪಾಪಿ ಮನವೆ ಪ ಶೂನ್ಯ ದುರಿತ ಭಂಗತರ ತರಂಗ ಮೂರ್ತಿಜಂಗಮನೆ ನೆಲೆಸಿಹನು ಜನಿಸಿನೀ ನಿನ್ನೊಳಗೆ ಕಣ್ಗಾಣದಿಪ್ಪೆ ಗುರುವ ಮನವೆ 1 ಮಾಯೆ ಮೋಹಕೆ ಸಿಲುಕಿ ಮಗ್ನನಾಗಿರುತಿಹೆ ಕಾಯವಿದು ನಿನಗೆ ಸ್ಥಿರವೇಆಯಾಸಂಬಡಬಹುದೆ ಅಲ್ಪ ಮತಿಗಳ ಕೂಡಿ ನ್ಯಾಯವೆ ನಿನಗೆರಾಯ ನಾನೆಂಬ ಹೆಮ್ಮೆಯ ತಾಳ್ದು ರತಿ ಬಹಳ ಸ್ತ್ರೀಯರಲಿ ಸೊಗಸಬಹುದೇಮಾಯಕಿಂತಕಟ ನೀ ಶಿಲ್ಕಿ ಒಳಗಾಗುವುದುಮಾಯವೋ ಇದು ಮಹಿಮೆಯೋ ಮನವೇ 2 ಎನ್ನ ಸತಿಸುತ ಬಂಧು ಎನ್ನ ಗೃಹವು ಇದೆಂದು ಬನ್ನಬಡುತಿಹೆ ಯಾತಕೆನಿನ್ನೊಳಗೆ ಇಹ ವಸ್ತು ನೀನೆ ಕಾಣದಲಿರೆ ಮನ್ನಿಸಾ ಗುರುಹಿರಿಯರಉನ್ನತ ಕಟಾಕ್ಷದಲಿ ಒಳಗೆ ದೃಷ್ಟಿಸಿ ಕಂಡು ನಿನ್ನೊಳಗೆ ಪುಳಕನಾಗುಚಿನ್ಮಯ ಚಿದಾನಂದ ಚಿದ್ರೂಪ ತಾನೆಂದುನಿನ್ನ ಸಂಶಯ ಕಳೆಯೋ ಮನವೇ 3
--------------
ಚಿದಾನಂದ ಅವಧೂತರು
ತಿಳಿಸು ದಾಸನ ನಿರುತ ನಿಲಯ ಕರುಣಾರ್ಣವ ತಿಳಿಯದಾಡಿದ ವಚನ ಹೊಲೆಗಲಿಸದಿಳೆಯೊಳು ಪ ಗುಪಿತದಿಂ ತವಪಾದ ಜಪಿಸಿ ಆನಂದಿಸದೆ ಅಪರಾಧಿಯಾಗಿರುವೆ ಕೃಪೆಯಿಂದ ಕ್ಷಮಾಮಾಡಿ 1 ಬಿನುಗುಮತಿಗೈದಂಥ ಘನತಪ್ಪುಗಣಿಸದೆ ಚಿನುವiಯಾತ್ಮನೆ ಬೇಗ ಕನಿಕರದಿ ಮೊರೆ ಕೇಳಿ 2 ಸುಲಭಭಜಕರಿಗತಿ ಚೆಲುವ ಶ್ರೀರಾಮಯ್ಯ 3
--------------
ರಾಮದಾಸರು
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ ಪ ತುತಿಸಲೆನ್ನೊಶವೆ ನಿ -ನ್ನತುಳ ಮಹಿಮ ಮಹಾ ಮತಿವಂತ ಜನರು ಸು - ಮತಿಗೆ ಸಿಲ್ಕದ ನಿನ್ನ ಅ.ಪ ಸ್ಮರಿಪ ಜನರ ಸುರ ತರು ಪಾಪಕಾಂತಾರ ನರ ಸಮ ಸಜ್ಜನ | ಶರಜನಿಚಯ ದಿನ ಪಾದ | ಸರಸಿಜ ಭಜಿಸುವ ಪರಮ ಭಕ್ತರ ಕುಮುದ | ವರ ನಿಚಯಕೆ ಸುಧಾ - ಪರಮ ಕರುಣಿಯು ಎಂದು ನಿನ್ನಯ ಪಾದ ಮೊರೆಯ ಪೊಕ್ಕೇನೊ ನಾನಿಂದು ನೀನೆ ಎನ್ನ ಮೊರೆಯ ಲಾಲಿಸು ಎಂದು ಬಿನ್ನೈಸಿದೆ ಪರಮಕೃಪಾಕರ ಪೊರೆಯೊ ಅನಾಥ ಬಂಧೂ 1 ದಯಕರ ನಿಜ - ಭಕ್ತಾ | ಮಯ ಹರ ಸುಖಸಾರಾ ಶ್ರಯವಾಗಿ ಸಂತತ | ನಯದಿಂದ ನಿಜಜನ ಭಯಕರ ಭವಹರ | ಜಯ ಜಯ ಜಯದಾತ ಜಯ ವಿಜಯಾತ್ಮಜ | ಜಯಕುಲ ದಿಗ್ವಿಜಯ ಜಯ ಕಾಲದಲಿ ನಿಜ | ಹಯಗ್ರೀವಮೂರ್ತಿಯ ದಯದಿಳೆಯೊಳು ಜನಿಸೀ | ಜನ್ಮದಿ ಮೂರ್ತಿ ತ್ರಯ ಪಾದವನೆ ಭಜಿಸಿ - ಧರಿಯೊಳು ಕ್ಷ - ತ್ರಿಯ ಕುಲದೊಳು ಜನಿಸಿ ಯುಧಿ ಭೀಮ - ಶಯನನಿಂದ ಹತನಾಗ್ಯಭüಯ ಸ್ಥಾನವನೆ ಬಯಸಿ 2 ಭೂಸುರ ವರನಾಗಿ | ಕಾಶ್ಯಪಿ ಸ್ಥಳದಲ್ಲಿ ವಾಸಮಾಡಿ ಶಿರಿ ವ್ಯಾಸ ಕೃಷ್ಣ ಪಾದೋ - ಪಾಸನ ಮಾಡುತ | ವ್ಯಾಸಮುನಿ ಆಗಿ ಭಾರ | ತೀಶ ಪ್ರತೀಕವ ವಾಸವಾಸರ ಸ್ಥಾ - ಪಿಸಿ ಯಂತ್ರೋದ್ಧಾರಾ ಶ್ರೀಶ ಮಧ್ವಮುನಿಯಾ - ಸ್ಥಾಪಿಸಿ ಅಲ್ಲಿ ವಾಸವ ಮಾಡಿ ತಾನೂ - ಪುರಂದರ ದಾಸರಾಯರಿಗೆ ಇನ್ನು - ಸುಮಂತ್ರೋಪ - ಅನುದಿನ ವಾಸಮಾಡಿದಿ ನೀನು 3 ಕ್ಷೋಣಿತಳದಿ ಕುಂಭ | ಕೋಣನಗರದಲ್ಲಿ ಕ್ಷೋಣಿದೆವೋತ್ತುಮ | ವೀಣವೆಂಕಟನಾಮಾ - ಕ್ಷೀಣಬಲ ಙÁ್ಞನ ತಾಣ | ಗೊಡದೆ ನಿನ್ನ ಜಾಣತನದಿ ನರ | ಮಾಣವಕನಂತೆ ಪಾಣಿ ಭಿಕ್ಷಾನ್ನವಾ | ಟಾಣಿ ಮಾಡುತ ನೀನು ಕ್ಷೋಣಿಪ ಮನಿಗೆ ಬಾರೇ - ನಿನ್ನ ವೀ - ಶುಭ ಲ - ಕ್ಷಣ ಬ್ಯಾರೆ ಬ್ಯಾರೇ ಇರಲು ನಿನ್ನ ಕ್ಷಣ ಬಿಡದಲೆ ಜನ ಮಣಿದು ನಮಿಸುತಿರೆ 4 ಜನಪ ನಿನ್ನಯ ಮಹ | ಘನ ಚರ್ಯವನೆ ನೋಡಿ ದಿನದಿನದಲಿ ಬಹು | ವಿನಯಪೂರ್ವಕ ಪಾದ ವನಜ ಸೇವಕÀನಾಗಿ |ತನು ಮನ ಧನ ಧಾನ್ಯ ಘನ ನಿನಗರ್ಪಿಸಿ | ನಿನ ಸಂಗವಾಗಲೂ ಜನುಮ ಇಲ್ಲೆಂಬುವ | ಘನ ಙÁ್ಞನ ಭಕುತಿಯ ಮನದಲ್ಲಿ ಯೈದುತಲೆ - ತಾನು ನಿತ್ಯ ಅನುಮಾನ ಮಾಡದಲೆ - ಇರಲು ಅವನ ಘನಸುಖ ರೂಪದಲ್ಲೆ - ಇರುವಂತೆ ಮನಪೂರ್ತಿ ಕರುಣಸಿದ್ಯನುಪಮ ಚರಿತಲ್ಲೆ 5 ಸತ್ಯನಾಮಕ ಸುತ | ಮೃತ್ಯುನಿಂದಲಿ ತಾನು ಸತ್ತುಪೋದ ವಾರ್ತೆ | ಬಿತ್ತರಿಸೆ ಲೋಕದಿ ಉತ್ತುಮ ನೀನಾಗ | ಸತ್ಯ ಸಂಕಲ್ಪವ ಗೊತ್ತು ತಿಳಿದು ಅವನ | ಮತ್ತೆ ಈ ಲೋಕಕ್ಕೆ ತತ್ಕಾಲದಲಿ ತಂದು | ಉತ್ತುಮ ಭಾರ್ಯಳ ಜತ್ತು ಮಾಡಿದ ವಾರ್ತೆಯಾ - ಕೇಳೀ ಶೈವ - ರುತ್ತುಮನಾತ್ಮಜನಾ - ಇವಾನಂತೆ ಸತ್ಯವೆಂದು ಪೇಳಿ ಮತ್ತೆ ಪೊರೆದ್ಯೊ ಜೀಯಾ 6 ಇನತೆ ಮೊದಲಾದ | ಫನತರ ನಿನ ಮಹಿಮೆ ನಿತ್ಯ | ಅನಿಮಿಷ ಮುನಿಜನ ಮನಕೆ ಸಿಲ್ಕದೆ ವೃಂದಾ - |ವನದಲಿ ನೀ ನಿಂತು ವನುತೆ ಸುತ ಧನ | ಧಾನ್ಯ ಮೊದಲಾದ ಅನುದಿನ ಸಲಿಸುತ್ತ ಜನರ ಪಾಲಿಸೊಗೋಸುಗಾ - ಹರಿಯು ನಿನಗೆ ಜನುಮಾವನಿತ್ತನೀಗ - ಅದಕೆ ನಿನ್ನ ಅನುದಿನ ತವಪಾದ ವನಜ ನಂಬಿದೆ ವೇಗ 7 ರಕ್ಷಿಸೋ ನೀ ಎನ್ನ | ಲಕ್ಷ್ಮೀರಮಣ ದೂತ ಮೋಕ್ಷಾದಿ ಪುರುಷಾರ್ಥ - | ಪೇಕ್ಷ ಪ್ರದಾಯಕ ಲಕ್ಷ ಜನರೊಳೆನ್ನ | ವೀಕ್ಷಿಸಿ ಪರಜನಾ - ಪೇಕ್ಷಾ ಮಾಡದಂತೆ | ಲಕ್ಷ್ಮೀಶ ನಾತ್ಮಜ ಭಿಕ್ಷಾನ್ನ ಬೇಡೋದು | ಲಕ್ಷಣವೇನಿದು - ಪೇಕ್ಷಾ ಮಾಡದೆ ನೀ ಎನ್ನಾ - ಕಾಯಲಿಬೇಕು ವಿಕ್ಷೀಸಿ ಙÁ್ಞನವನ್ನಾ - ಭಕುತಿ ಇತ್ತು - ರಕ್ಷಿಸು ಎಂದೆ ನಿನ್ನಾ ಇದೆ ಒಂದಾ ಪÉೀಕ್ಷೆ ಪೂರ್ತಿಸೊ ಕಲ್ಪವೃಕ್ಷ ನೀ ಎನಗೆ ಇನ್ನ 8 ಕಿಟಿಜ ಸರಿದ್ವರ | ತಟ ಕೃತ ಮಂದಿರ ಚಟುಲ ಮಧ್ವಮುನಿ | ಪಟು ಶಾಸ್ತ್ರದಿಂದಲಿ ಕುಟಿಲ ದುರ್ವಾದಿಗ | ಳ್ಥಟನೆ ಮುರಿದು ನಿಜ ಘಟನೆ ಮಾಡಿ ಪ್ರತಿ | ಭಟರಿಲ್ಲದಲೆ ನೀನು ಧಿಟನಾಗಿ ತ್ರಿಜಗದಿ - ಮೆರೆಯುತ ಶಠÀಜನರನು ತ್ವರದಿ - ಮರಿದು ಙÁ್ಞನಿ ಕಟಕ ಸುಪಾಲನದಿ ಪಟೋ ಎನಿಸಿ ಧಿಟಗುರು ಜಗನ್ನಾಥ ವಿಠಲನ್ನ ಭಜಿಸಿದೆ 9
--------------
ಗುರುಜಗನ್ನಾಥದಾಸರು
ತುಳಸಿ ಮಧ್ಯದಿ ಇರುವ ಕೃಷ್ಣನಬಳಸಿ ನೋಡುವ ಬನ್ನಿರೆ ಪ ಗೊಲ್ಲ ಸತಿಯರ ಗಲ್ಲ ಪಿಡಿದುಎಲ್ಲ ನಟನೆಯ ತೋರುವಫುಲ್ಲ ನಾಭನಮೆಲ್ಲ ಮೆಲ್ಲನೆಎಲ್ಲ ಹೆಂಗಳು ನೋಡಿರೆ 1 ಕಾಮಿ ಜನರಿಗೆ ಕಾಮಿತಾರ್ಥವಪ್ರೇಮದಿಂದಲಿ ಕೊಡುತಿಹಕಾಮನೈಯನ ಚರಣ ಕಮಲವನಂಬಿ ಬದುಕುವ ಬನ್ನಿರೆ2 ಅಂಗರಾಗ ಶ್ರೀರಂಗ ಮಂಗಳಸಿಂಗರದಿ ತಾ ನಿಂತಿಹಮಂಗಳಾಂಗನ ಮಂಗಳಾರತಿಎಲ್ಲ ಹೆಂಗಳು ನೋಡಿರೆ 3 ಒಂದು ಕೈಯಲಿ ಗಂಧಪುಷ್ಪ ಮ-ತ್ತೊಂದು ಕೈಯಲಿ ರಂಗನುಮಂದಹಾಸದಿ ಇಂದುಮುಖಿಯರಿ-ಗ್ಹೊಂದಿಸುವನತಿ ಚಂದದಿ 4 ಶುಕ್ರವಾರದಿ ಪೂಜೆಗೊಂಬುವಚಕ್ರಧರ ಶ್ರೀಕೃಷ್ಣನು ನಕ್ರಹರ ತ್ರಿವಿಕ್ರಮನು ಮನ-ವಾಕ್ರಮಿಸಿ ಸುಖ ಕೊಡುತಿಹ 5
--------------
ವ್ಯಾಸರಾಯರು
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ
ತೆಪ್ಪದುತ್ಸವ ನಿನಗೆ ಏನು ಹಿತವೋ ಅಪ್ಪ ಹನುಮಯ್ಯ ನಿನ್ನಾಟಕೇನೆಂತೆಂಬೆ ಪ. ರಾಮ ಉಂಗುರ ಸತಿಗೆ ಕಂಡಿತ್ತು ಬಾರೆನಲು ನೇಮದಿಂದಲಿ ನೂರು ಯೋಜನುದಧಿ ಪ್ರೇಮದಿಂದಲಿ ಹಾರಿ ಕುರುಹು ತಂದಾ ಮಹಿಮ ಈ ಮಡುವಿನ ಜಲದಿ ಈ ಆಟವಾಡುವುದು 1 ಕುರುಕುಲಾರ್ಣವವೆಂಬ ಘನ ಶತ್ರು ಸೈನ್ಯವನು ಒರಸಿ ಕ್ಷಣದಲಿ ಭುಜಬಲದ ಶೌರ್ಯದಲಿ ಧುರವೆಂಬ ಶರಧಿಯನು ಲೀಲೆಯಲಿ ದಾಟಿದಗೆ ವರ ಸರೋವರದ ಈ ಜಲದಾಟವಾಡುವುದು 2 ಅನ್ಯ ದುರ್ಮತ ಮಹಾರ್ಣವನು ಶೋಷಿಸುತ ಬಹು ಉನ್ನತದ ವೇದ ಶಾಸ್ತ್ರಾರ್ಣವದಲಿ ಚೆನ್ನಾಗಿ ಈಜಿ ಶ್ರೀ ಹರಿಚರಣ ದಡ ಸೇರ್ದ ಘನ್ನ ಮಹಿಮನಿಗೆ ಈ ಚಿನ್ನ ಮಡುವೀಜುವುದು 3 ಮುಕ್ತಿಯೊಗ್ಯರ ಕರ್ಮಶರಧಿಯನು ದಾಟಿಸುತ ಮುಕ್ತರಾಶ್ರನ ಪುರ ಸೇರಿಸುವನೆ ಅತ್ಯಂತ ಅಲ್ಪ ಈ ಜಲದಾಟವಾಡಿದರೆ ಭಕ್ತರಾದಂತ ದಾಸರು ನಗರೆ ಹನುಮ 4 ವರ ಕದರುಂಡಲಿಯಲ್ಲಿ ನೆಲಸಿರುವ ಭಕ್ತರಿಗೆ ಮರುಳುಗೊಳಿಸುತ ಮಹಾ ಮಹಿಮನೆನಿಸಿ ಪರಿಪರಿಯ ಉತ್ಸವಪಡುವೆ ಶ್ರೀ ಕಾಂತೇಶ ಸಿರಿರಮಣ ಗೋಪಾಲಕೃಷ್ಣವಿಠ್ಠಲನ ದಾಸ 5
--------------
ಅಂಬಾಬಾಯಿ
ತೇನಮೋ ಜಗದೇಕನಾಥ ರಮಾ ಮಾನಸಾಂಬುಜರಾಜಹಂಸಾಯ ವಿಷ್ಣವೇ ಪ ಜಗದೇಕವೀರ ಜನನಾದಿ ದೂರಾ ಸುಗುಣ ವಿಸ್ತಾರ ಸುಖಮಯ ಶರೀರ 1 ಗಾನರಸಲೋಲ ಕನಕಮಯಚೇಲ ಆನತೋದ್ಧರಣ ಅಮೃತಾಬ್ಧಿಶಯನ 2 ಚಂದ್ರಾರ್ಕನಯನ ಚಾರುತರ ಕಥನ ಇಂದ್ರಾರಿ ಮಥನ ಇಭವೈರಿವದನ ಇಂದ್ರ ಸಂಕ್ರಮಣ ವೇಲಾಪುರಿಸದನ ವಂದ್ಯಾಖಿಲಜನ ವೈಕುಂಠ ರಮಣ3
--------------
ಬೇಲೂರು ವೈಕುಂಠದಾಸರು
ತೋರಿದ ನಿಜರೂಪ ಶ್ರೀಕೃಷ್ಣ ಆಹಾಗಾರ ಮಧ್ಯದಿ ವೃಜ ಚೋರ ಬಾಲಕನು ಪ ಪೆಟ್ಟಿಗೆಯೊಳು ಕರವಿಟ್ಟು ಬೆಣ್ಣೆಯ ತೆಗೆದಷ್ಟು ಇಷ್ಟನು ಮೆದ್ದು ಬೊಟ್ಟು ಚೀಪುವನು 1 ಜರದ ಕುಂಚಿಗಿ ಗೊಂಡ್ಯಾ ಶಿರದಿ ತೂಗುತಲೆನ್ನತಿರುಗಿ ತಿರುಗಿ ನೋಡಿ ಮುಚ್ಚದೆ ಪೋದನು 2 ಇಂದು ತಿನ್ನುತಲಿಹ ಶ್ರೀಕೃಷ್ಣಒಂದು ಎರಡು ವಯ ಇಂದಿರೇಶನ ಕಂಡು ನಂದ ಭೋಗಿಪೆನು 3
--------------
ಇಂದಿರೇಶರು
ತೋರಿಸು ಪಾದವ ವಾರಿಸು ದಾಹವ ಪ ನೀರಜ ಸಂಭವಾರಾಧಿತ ಮಾಧವ ಮಾರಜನಕ ಭವದೂರ ದಯಾರ್ಣವಾ ಅ.ಪ ಗಾನವಿಲೋಲಾ ಗೋಕುಲ ಬಾಲಾ | ದಾನವಕಾಲಾ ಶ್ರೀವನಮಾಲಾ 1 ಘನತರ ಲೀಲಾ ಮುನಿಜನ ಪಾಲಾ | ಕನಕದುಕೂಲ ಮಾಂಗಿರಿವರಬಾಲಾ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತ್ಯಜಿಸದಲೆ ಸಂಸಾರ ಭಜಿಸಬಹುದು ಪ ಅಜಭವಾದಿಗಳೆಲ್ಲ ತ್ಯಜಿಸಿ ಭಜಿಸುವರೇ ಅ.ಪ ಅರ್ಣವವ ಪೋಲುವ ಭವವನ್ನು ನೀಗಲು ವರ್ಣಾಶ್ರಮಗಳ ಧರ್ಮಗಳನರಿತು ಪೂರ್ಣ ಸುಖಜ್ಞಾನ ಪೊಂದಿದ ಹರಿಯ ಗುಣಗಳನು ನಿರ್ಣಯದ ಭಕುತಿಯಲಿ ವರ್ಣಿಸುವ ನರನು 1 ಜನ್ಮವನು ಕಳೆವುದಕೆ ತೀರ್ಮಾನ ಮಾಡಿ ದು ಷ್ಕರ್ಮಗಳ ತ್ಯಜಿಸಿ ಸತ್ಕರ್ಮಗಳನು ಮರ್ಮವರಿಯುತ ರಚಿಸಿ ಹೆಮ್ಮೆಯಿಂದಲಿ ತನ್ನ ಧರ್ಮದಲಿ ಸತಿಸುತರ ಭೋಗ ಉಣುವವರು2 ಅನ್ಯಾಯಗಳ ಬಿಟ್ಟು ಮಾನ್ಯರೆಂದೆನಿಸುತಲಿ ಘನ್ನ ಮಹಿಮನ ಸೇವೆಯೆಂದರಿಯುತ ಕನ್ಯಾದಿ ದಾನಗಳ ಮಾಡುತಲಿ ಮುದದಿಂದ ಚೆನ್ನಾಗಿ ಹರಿಯ ಪ್ರಸನ್ನತೆಯ ಪಡೆಯುವರು 3
--------------
ವಿದ್ಯಾಪ್ರಸನ್ನತೀರ್ಥರು
ದತ್ತಾತ್ರೇಯ ಸ್ವಾಮೀ ಕೃಪೆ ಮಾಡೈ ನೀಯನ್ನ ಮ್ಯಾಲ ಪ ಅನಿಮಿಷಮಾನಸ ಸಂಚಾರಾ ಅನಾಥ ಜನ ಸಂಕಟ ಪರಿಹಾರಾ ದೀನ ದಯಾಲ ರಮಾವರಾ ನೆನೆವರ ಸಹಕಾರಾ 1 ಅನಸೂಯಾಕರ ಸಂಪುಟರನ್ನಾ ಘನತರ ಚರಿತ ಪರಮ ಪಾವನ್ನಾ ಅನುಪಮ ತ್ರೈಜಗ ಜೀವನ್ನಾ ವನರುಹವದನಾ2 ಸರಸಿಜೋದ್ಭವ ನುತ ಮನ್ನಾಥಾ ವರ ನಿಗಮಾ ಗೋಚರ ಅನಂತಾ ಕರುಣಾಂಬುಧಿಯೇ ಸರ್ವಾತೀತಾ ಗುರು ಮಹಿಪತಿ ದಾತಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಯದಿ ಪಾಲಿಸೋ ವಾದಿರಾಜ ಗುರುವೇ | ನತಜನ ಸುರತರುವೇ ಪ ಹಯಮುಖ ಪದ ಸದ್ವನಜ ಸುಭೃಂಗಾ | ಪಾಲಿಸು ದಯಾಪಾಂಗಾ ಅ.ಪ. ರಜತ ಪೀಠದೊಳು ಕೃಷ್ಣ ಪೂಜೆಗಳನ್ನು | ಪರಿಪರಿ ರಚಿಸಿನ್ನೂ |ಕುಜನರ ಭೇದಿಪ ಭಜನೆ ಪದಗಳನ್ನೂ | ಸುಜನಕಿತ್ತೆ ನೀನೂ ||ಭಜಿಸೆ ಬಂದವರಿಗನ್ನೋದಕಗಳನೂ | ಏರ್ಪಡಿಸಿನ್ನೂ |ನಿಜ ಜನರ ಪೊರೆವ ಸುವ್ಯವಸ್ಥೆಗಳನ್ನೂ | ರಚಿಸಿ ಮೆರೆದೆ ನೀನೂ 1 ಅಂತರಂಗದಿ ಪೂಜಿಪೆ ಹಯವದನನ್ನ | ಭಾವಿ ಮರುತ ಎನ್ನ|ಅಂತರಂಗದೊಳು ನೆಲಿಸುತ ನೀಯೆನ್ನ | ಸಂಚಿತಾದಿಯನ್ನ ||ಅಂತಗಾಣಿಪ ಶ್ರೀ ಅಂತರಾತ್ಮನನ್ನ | ಚಿಂತೆ ಪಾಲಿಸು ಮುನ್ನ |ಯೆಂತು ವರ್ಣಿಸಲಿ ತವ ಮಹಿಮೆಗಳನ್ನ | ನಿಂತು ನಲಿ ವದನದೊಳೆನ್ನ 2| ಭರತ ಖಂಡದಿ ತೀರ್ಥ ಕ್ಷೇತ್ರ ಚರಿಸೀ | ತತ್ಪ್ರಂಬಂಧ ರಚಿಸೀ |ವಿರಚಿಸಿದೆಯೋ ರುಕ್ಮಿಣೀಶ ಕಾವ್ಯಾ | ಯುಕ್ತಿಮಲ್ಲಿಕೇಯಾ ||ಸುರಸ ಪದಗಳಲಿ ತತ್ವ ಪುಂಜವನ್ನ | ರಚಿಸಿ ಮೆರೆದೆರನ್ನ |ನಿರಣಯಾದಿಗಳ ಭಾವಗಳನ್ನ | ಕನ್ನಡದಿ ರಚಿಸದೆ ಘನ್ನ 3 ಸ್ವಾದಿ ಪುರದಿ ಬಲು ಮುದದಲಿ ಮೆರೆದಾ | ಬಿರಿದು ಪೊತ್ತ ಶೈವಾವಾದಿಸೆ ನಿನ್ನೊಳು ಸೋತು ನಿಂತನವ | ಪಾದದಿ ಬಿದ್ದು ಅವ || ಮೇದಿನಿಯೊಳ್ ನಿಮಗೆ ಸಮರು ಆವ | ಎಂದೊಪ್ಪಿಸಿದನು ಅವ |ಮೋದದಿಂದಲಿ ಬಸವ ಚಿನ್ಹಿತನಾದ | ತವ ಚರಿತೆ ಆಗಾಧಾ 4 ಪಂಚ ಸುವೃಂದಾವನಗಳ ರಚಿಸುತ್ತಾ | ತಾವ್ನಡುವಿರ ಬೇಕೆನುತಾ |ಅಂಚೆಗಮನ ಪ್ರಾಣ ಗಂಗಾಧರನಾ | ಗುರು ಗೋವಿಂದ ವಿಠಲನಾ ||ಸಂಚಿಂತಿಸಿ ನಿಲಿಸುತ ನಾಲ್ಕರಲ್ಲೀ | ಚತುರ ದಿಕ್ಕಿನಲ್ಲೀ |ಪಂಚರೂಪಿ ನಿಷ್ಕಿಂಚಿನ ಪ್ರಿಯ ಹರಿಯಾ | ಪುರವ ಸೇರಿದಯ್ಯಾ 5
--------------
ಗುರುಗೋವಿಂದವಿಠಲರು
ದಯಮಾಡೊ ಕಾಶಿ ಬಿಂದುಮಾಧವಮಾಡದಿರೆನಗೆ ತಂದೆ ಭೇಧವ ಪ. ಪಾಪನಾಶನ ಪಾಲಿಸೊ ಎನ್ನಸರ್ಪಭೂಷಣನತಾತನೆಂದೆನಿಸುವ ತವ ನಾಮಸ್ಮರಣೆಪಾರ್ವತಿಪತಿಯ ಧ್ಯಾನದೊಳಿರಿಸೊ 1 ಮೋಕ್ಷÀದಾಯಕ ಪಾಲಿಸೊ ಎನ್ನಲಕ್ಷ್ಮೀನಾಯಕಕುಕ್ಷಿಯೊಳೀರೇಳುಭುವನ ತಾಳಿದವನೆಭಿಕ್ಷಾಪಾತ್ರ ಶಿವನಧ್ಯಾನದೊಳಿರಿಸೊ 2 ಆದಿಮೂರುತಿ ವಿಶ್ವೇಶ್ವರಗೆ ವಿಷ್ಣುಪಾದವೆ ಗತಿಮೇದಿನಿಯೊಳು ಸೋದೆಪುರದಿ ನೆಲೆಸಿವಾದಿರಾಜವರದನೆ ಬಂದೆ ಹಯವದನನೆ 3
--------------
ವಾದಿರಾಜ