ಒಟ್ಟು 389 ಕಡೆಗಳಲ್ಲಿ , 72 ದಾಸರು , 352 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಡು ಬೇಗ ದಿವ್ಯ ಮತಿ - ಸರಸ್ವತಿಕೊಡು ಬೇಗ ದಿವ್ಯಮತಿ ಪಮೃಡಹರಿಹಯ ಮುಖರೊಡೆಯಳೆ ನಿನ್ನಯ |ಅಡಿಗಳಿಗೆರಗುವೆ ಅಮ್ಮನ ಬ್ರಹ್ಮನ ರಾಣಿ ಅ.ಪಇಂದಿರಾರಮಣನ ಹಿರಿಯ ಸೊಸೆಯು ನೀನು|ಬಂದೆನ್ನ ವದನದಿನಿಂದುನಾಮವ ನುಡಿಸಿ1ಅಖಿಳವಿದ್ಯಾಭಿಮಾನಿ ಅಜನ ಪಟ್ಟದ ರಾಣಿ |ಸುಖವಿತ್ತು ಪಾಲಿಸೆಸುಜನಶಿರೋಮಣಿ2ಪತಿತ ಪಾವನೆಯೆ ನೀ ಗತಿಯಂದು ನಂಬಿದ |ವಿತತಪುರಂದರವಿಠಲನ ತೋರೆ3
--------------
ಪುರಂದರದಾಸರು
ಜಯ ಮಂಗಳಂ ಮಹಾ ಶುಭಮಂಗಳಂಮಂಗಳಂ ಮಧುಹರಗೆ ಮಾವರನಿಗೆ ಪ.ಶ್ರುತಿಹೃತ ವಿಹೃತನಾದಗೆಕ್ಷಿತಿಭೃತ ವಿಭೃತನಾದಗೆಧೃತಿಜಿತವಿಜಿತ ಕುಪಿತಗೆ ವಿತರಣಾಂತಗೆಪತಿತತನು ಕ್ಷತಕೃತಗೆಕೃತಪೂತಹಿಸತಿನುತಗೆಪತಿವ್ರತ ಮೋಹಿತ ತುರಗಯುತವ್ಯಾಕೃತಗೆ 1ತತ್ವಾಮೃತ ಸತ್ಯವ್ರತಗೆಮಥÀನಾಮೃತ ದಿತಿಜಾತರ್ಗೆಕಥಾಮೃತ ಸುಮತಿಗೆ ಕೃಪಾಮೃತ ದೈತ್ಯಜಗೆಭ್ರಾತಪಿತ ಸ್ತ್ರೀಸತಿವ್ರಾತಕೆಭೂತಪತಿಗೆ ಜಾತಧರ್ಮಕೆಹಿತಾಮೃತ ತಾಮೃತೋಪೇತಗೆ ಮೂತ್ರ್ಯಮಲನಿಗೆ 2ಅನಿಮಿಷಾನಿಮಿಷ ಮಾನಿಗೆಕನಕಾಕ್ಷಕನಕಕಶ್ಯಪುವಿನ ನಿಘಘ್ನ ಅಕ್ಷಯತನುಗೆ ಜನನಿಜಘ್ನುಗೆಆನನದಶದಾನವಮಾನಿನಿಹನನಶೀಲ ಮೋನಾನ್ವಿತಗೆಜ್ಞಾನಜನೇಶ ಪ್ರಸನ್ವೆಂಕಟ ಅನಾಥನಾಥಗೆ 3
--------------
ಪ್ರಸನ್ನವೆಂಕಟದಾಸರು
ಜಯ ಮಂಗಳಂ ಮಹಾ ಶುಭಮಂಗಳಂಮಂಗಳಂ ಮಧುಹರಗೆ ಮಾವರನಿಗೆ ಪ.ಶ್ರುತಿಹೃತ ವಿಹೃತನಾದಗೆಕ್ಷಿತಿಭೃತ ವಿಭೃತನಾದಗೆಧೃತಿಜಿತವಿಜಿತ ಕುಪಿತಗೆ ವಿತರಣಾಂತಗೆಪತಿತತನು ಕ್ಷತಕೃತಗೆಕೃತಪೂತಹಿಸತಿನುತಗೆಪತಿವ್ರತ ಮೋಹಿತ ತುರಗಯುತವ್ಯಾಕೃತಗೆ 1ತತ್ವಾಮೃತ ಸತ್ಯವ್ರತಗೆಮಥÀನಾಮೃತ ದಿತಿಜಾತರ್ಗೆಕಥಾಮೃತ ಸುಮತಿಗೆ ಕೃಪಾಮೃತ ದೈತ್ಯಜಗೆಭ್ರಾತಪಿತ ಸ್ತ್ರೀಸತಿವ್ರಾತಕೆಭೂತಪತಿಗೆ ಜಾತಧರ್ಮಕೆಹಿತಾಮೃತ ತಾಮೃತೋಪೇತಗೆ ಮೂತ್ರ್ಯಮಲನಿಗೆ 2ಅನಿಮಿಷಾನಿಮಿಷ ಮಾನಿಗೆಕನಕಾಕ್ಷಕನಕಕಶ್ಯಪುವಿನ ನಿಘಘ್ನ ಅಕ್ಷಯತನುಗೆ ಜನನಿಜಘ್ನುಗೆಆನನದಶದಾನವಮಾನಿನಿಹನನಶೀಲ ಮೋನಾನ್ವಿತಗೆಜ್ಞಾನಜನೇಶ ಪ್ರಸನ್ವೆಂಕಟ ಅನಾಥನಾಥಗೆ 3
--------------
ಪ್ರಸನ್ನವೆಂಕಟದಾಸರು
ಜಯಮಂಗಳಂ ಮಹಾ ಶುಭಮಂಗಳಂಮಂಗಳಂಮದನಜನಕಂಗೆನಿತ್ಯಪ.ಶಂಕಾಸುರನ ಸೀಳಿ ಶ್ರುತಿಯ ತಂದವನಿಗೆಬಿಂಕದಿಂ ಮಂದರಕೆ ಬೆನ್ನಾಂತಗೆಪಂಕಜಾಸನಗೊಲಿದು ಪ್ರತ್ಯಕ್ಷನಾದವಗೆಶಂಕೆಯನು ಬಿಡಿಸಿ ಶಿಶುವನು ಹೊರೆದಗೆ 1ವಿತರಣಕೆ ಬಂದು ಬಲಿವಿಭವನಪಹರಿಸಿದಗೆಪತಿತ ಕ್ಷತ್ರಿಯರ ಸಂಹರಿಸಿದವಗೆಸತಿಯ ಕದ್ದವನ ದಶಶಿರಶತಖಂಡಿಸಿದಗೆಪಿತ ಮಾತೆ ಬಂಧನವ ಪರಿಹರಕಗೆ 2ಮುಪ್ಪುರದ ನಾರಿಯರ ಮನವ ಗೆದ್ದವಗೆತಪ್ಪದೆ ಕಲಿಬಲವ ತರಿದಾತಗೆಸರ್ಪಗಿರಿಯಲಿ ನಿಂತು ನಿತ್ಯಸುಖದಾತನಿಗೆಶ್ರೀಪ್ರಸನ್ವೆಂಕಟೊಡೆಯನೆನಿಪಗೆ 3
--------------
ಪ್ರಸನ್ನವೆಂಕಟದಾಸರು
ಧ್ಯಾನಿಪೆ ನಿನ್ನ ಧ್ಯಾನಿಪರಘಹರ ಧ್ಯಾನಿಪೆ ನಿನ್ನಜಾನಕೀಧವ ತವಚರಣ ಕರುಣ ಕೋರಿ ಪಪರತರ ಮಹಿಮನೆ ಶರಣರ ಪ್ರಿಯಗಿರಿಧರ ಸಿರಿವರ ಮರೆ ಕರುಣಿಸು ನರಹರಿ 1ಪತಿತಪಾವನ ನಿಮ್ಮ ಶ್ರುತಿಬೋಧ್ವಾಕ್ಯಗಳಭಿರತಿಹಿಡಿದಿತ್ತು ಯತಿನುತಕ್ಪಿತಿಪತಿಪೊರೆ2ಪೋಷಿಸೆನ್ನನು ನಿನ್ನ ದಾಸತ್ವ ನೀಡಿ ಮುನ್ನದೋಷನಾಶನೆÉ ಜಗದೀಶ ಶ್ರೀರಾಮನೆ 3
--------------
ರಾಮದಾಸರು
ನಗಲುಬಹುದು ನಗಲುಬಹುದುನಗು ನಗು ರಂಗಯ್ಯಜಗದ ಮಾತು ಅ‌ಘದ ಧಾತುಬಗೆಯನರಿತು ಮುಗಳುನಗೆಯ ಪ.ಒರೆದು ಒರೆದು ಭಾರತದರ್ಥಅರಿದುಅರಿದುವರಭಾಗವತಪರಿಯ ಪರಿಯ ಪುರಾಣಶ್ರ್ರುತಿಯಪಾರಾಯಣ ಮಾಡಿ ಕುರುಡಬಧಿರನರರ ತೆರದಿಅರಹುಮರಹುಬೆರೆತು ಬೆರೆತು ತರತಮಿಲ್ಲದೆಹರಿಹರಜರು ಬೇರೆಬೇರಿಲ್ಲೆಂಬಪರಮಪಾತಕರಿರವ ನೋಡಿ 1ಮಕ್ಕಳ ಮಡದೇರಕ್ಕರ ಬಡಿಸಿರೊಕ್ಕದ ಮದದಿ ಸೊಕ್ಕಿ ಸಜ್ಜನರಲೆಕ್ಕಿಸದವಗೆ ರಕ್ಕಸರಂತೆನಿಕ್ಕರ ನುಡಿದು ಕಕ್ಕಸದಿಂದಪುಕ್ಕಟೆ ಪುಣ್ಯದ ಲೆಕ್ಕವ ಕಳೆದುಘಕ್ಕನೆ ಜವನೋರಿಕ್ಕಿದ ಬಲೆಗೆಸಿಕ್ಕಿ ಬಳಲುತ ನರ್ಕವನುಂಬಮೂರ್ಖರ ತಾಮಸಮುಖ್ಯರ ನೋಡಿ 2ಸುಂದೋಪಸುಂದ ಜಲಂಧರ ಕೀಚಕಕಂದರದಶಕ ಸೈಂಧವ ಜಟಾದ್ಯರಂದು ಪರಸ್ತ್ರೀಯ ಸೌಂದರ್ಯಕ್ಕೆ ಮತಿಗುಂದಿ ಲಯವಾದರೆಂದುಕೇಳಿಇಂದುಮುಖಿಯರ ಚಂದಕೆ ಹುಚ್ಚಿಟ್ಟುಕಂದರ್ಪವಿಶಿಖವೃಂದ ವಶಾಗಿ ನೂರೊಂದುಕುಲ ಯಮಮಂದಿರ ಹೊಂದಿಪಮಂದರಮದೋನ್ಮತ್ತಾಂಧರ ನೋಡಿ3ಸುರರ ಸಂಪದ ಪರಮಪದಕೆಕಾರಣವಾಗಿರೆ ಸುರೇತರರೆಲ್ಲಇರುಳೆ ಹಗಲೆ ಸೈರಿಸಲಾರದೆಒರಗಿಹೋದ ವಿವರಕೇಳಿದುರುಳಕೌರವರ್ವರ ಪಾಂಡವರಸಿರಿತಮ್ಮದೆಂದ್ಹುರಿದು ಹೋಗಿರೆಪರರ ದ್ರವ್ಯಕ್ಕೆ ಮರುಗಿ ಬಯಸಿನರರು ಕೆಡುವ ಪರಿಯ ನೋಡಿ 4ಪ್ರತಿದಿನ ನಿನ್ನ ಪ್ರತಿಮ ಪೂಜೆ ಸದ್ವ್ರತವ ಮಾಡಿ ಸತ್ಕಥೆಯ ಶ್ರೀಮಧ್ವಮತ ಮಹಿಮೆಯನತಿಕ್ರಮಿಸಿ ಕುತ್ಸಿತವೆನಿಸುವ ಪಥದಲಿಪತಿತರಾಗಿ ಸದ್ಗತಿಯ ಕಾಣದಚತುರ ಪರಿಯ ಅಮಿತ ಭಕ್ಷಕರಸ್ಥಿತಿಯರಿತು ಮಾನಾಥ ಪ್ರಸನ್ವೆಂಕಟಪತಿಯೆ ನೀ ಮಂದಸ್ಮಿತದಲಿ 5
--------------
ಪ್ರಸನ್ನವೆಂಕಟದಾಸರು
ನೀನೆ ಕರುಣಿ ಗುರುವಾಸದೀನಬಂಧು ಭಕುತಪೋಷ ಪನೆರೆದು ಭಕುತಜನರುಸ್ಮರಿಪ ವರವ ನಡೆಸಿದರುಶನಿತ್ತು ದುರಿತರಾಸಿ ಪರಿಹರಿಸಿಪೊರೆವೆ ಸತತಪರಮಚರಿತ1ಒಪ್ಪಿ ಕಾಸುರುವ್ವಿಬಿಡದೆತಪ್ಪದೆ ಮೂರುಲೋಕದವರಿಂಕಪ್ಪಕೊಳ್ಳುವಿ ಅಸಮಲೀಲಅಪ್ಪ ತಿರುಪತಿತಿಮ್ಮಪ್ಪ2ಮಾರನಯ್ಯ ಮರಣದೂರಮೂರಜಗದ ಸಾರ್ವಭೌಮಧೀರ ಶ್ರೀರಾಮ ನಿಮ್ಮಪಾದವಾರಿಜದಾಸನೆನಿಸು ಎನ್ನ 3
--------------
ರಾಮದಾಸರು
ನೀನೆಗತಿಕೃಷ್ಣ ಎನಗೆ ನೀನೆಗತಿಕೃಷ್ಣಪ.ನೀನೆ ಗತಿಯೆಂದಾನತನಾಗಿಮಾನಾಪಮಾನವ ನಿನಗೊಪ್ಪಿಸಿದೆಜ್ಞಾನವಿಹೀನನ ಪಾವನ ಮಾಡಿಶ್ರೀನರಹರಿ ಕರುಣಿಸು ನಮ್ಮ್ಮಯ್ಯನೆ 1ತನುವಸ್ಥಿರ ಮನವತಿಚರ ಒದಗಿದಧನ ನಶ್ವರ ನಿನ್ನಯ ಪಾದಾಬ್ಜದನೆನವಿಗೆಯೊಂದನೆ ಕೊಡು ಕಡೆ ಮೊದಲಿಗೆಜನನವಸಾನದ ಬಳ್ಳಿಯ ಕಡಿಯಲು 2ಶರಣಾಗತ ಶರಣರ ಕರವಿಡಿವಬಿರುದಿನ ದೊರೆಗಿನ್ನನುಮಾನ್ಯಾಕೆಪರಮಪತಿತನ ಪೂತನ ಮಾಡ್ಯುದ್ಧರಿಸುವಸಿರಿಪ್ರಸನ್ನವೆಂಕಟಕೃಷ್ಣ3
--------------
ಪ್ರಸನ್ನವೆಂಕಟದಾಸರು
ಪತ್ಯಂತರ್ಗತ ನಾರಸಿಂಹ ಎನುತಾಸಕ್ತಿಯಿಂ ಜಪಿಸಬೇಕಮ್ಮ ಪಬತ್ತಿಯ ಮಾಳ್ಪಾಗ ಬಾಲರಾಡಿಸುವಾಗಪ್ರತ್ಯಾಹದಲಿಗೃಹಕೃತ್ಯವಾಚರಿಸುವಾಗಅ.ಪಪೊಡವಿಯೊಳ್ ನರಜನ್ಮಪಡೆದೂ ಕೆಟ್ಟನಡತೆಯವರ ಕೂಟ ಮರೆದೂದೃಢ ಭಕ್ತಿಯಿಂ ಲಜ್ಜೆ ತೊರೆದೂನುಡಿನುಡಿಗ್ಹರಿ ಎಂದು ಬಾಯ್ದೆರೆದುಅಡುಗೆಯ ಮಾಡಿ ಕಾರೊಡೆಯಗರ್ಪಿಸುವಾಗಒಡೆಯಾದಿಗಳಿಗನ್ನ ಬಡಿಸುವಾಗಲುನಿತ್ಯ1ಪತಿದೈವವೆಂದು ಭಾವಿಸುವಸತಿಗತಿಶಯ ಗತಿಸಲ್ಲಿಸುವಪತಿತರ ಪಾವನ ಗೈವ ಲಕ್ಷ್ಮೀಪತಿಯೆ ಸದ್ಭಕ್ತರಕಾವಅತಿಹಿತದಿಂದ ಸಂತತ ಹರಿದಾಸರಿಗತಿಸೇವಾರತಿಯಿಂದ ಕೃತಕೃತ್ಯಳಾಗುತ 2ಪದ್ಮಸಂಭವೆ ಪದ್ಮಜಾತವಾತಪದ್ಮಜವಲ್ಲಭಎನುತಕದ್ರುಜರುದ್ರಾದಿವಿನುತತಂದೆಮುದ್ದುಮೋಹನ ವಿಠಲ ನೀತಾಅದ್ವಿತೀಯನು ಎಂದು ಬುದ್ಯಾದಿಂದ್ರಿಯದಲ್ಲಿನಿದ್ರೆಯೊಳ್ಞದರು ನೀ ಮರೆಯ ಬ್ಯಾಡ 3
--------------
ತಂದೆ ಮುದ್ದುಮೋಹನ ವಿಠಲರು
ಭಾರತೀ ದೇವೀ ನಿನ್ನನು ದಿನಾ | ಸಾರುವರ ಕಾಯ್ವೀ ||ಮಾರಮಣನಪಾದವಾರಿಜಯುಗದಲೀ |ಚಾರುಭಕುತಿ ಕೊಡು ನಾರೀ ಶಿರೋಮಣಿ ಪಇಂದ್ರಸೇನಳೆವಿಪ್ರಕನ್ನಿಕೆ | ಚಂದ್ರೇ ಶ್ರೀಕಾಳೆ |ನೊಂದೆನೆ ಬಹಭವ| ಬಂಧನದೊಳು ವೇಗಾ |ದಿಂದ ಕಾಯೆ ಕರುಣಾಸಿಂಧುದ್ರೌಪದಿ ದೇವಿ 1ಮಾತೆ ಕೇಳೆಲೆ ಭವಟವಗೆ | ವೀತಿಹೋತ್ರಳೆ ||ಮಾತು ಮಾತಿಗೆ ಜಲಜಾತನಾಭನ ಸ್ತುತೀ |ಆತುಕೊಂಡಿರಲೆ ಶ್ರೀ | ಮಾತರಿಶ್ವನಾ ರಾಣೀ 2ಪತಿತ ಪಾವನೆ | ಶಿವ ಕನ್ಯಾ ಜಗದ್ವಿತತೆ ಜೀವನೆ ||ನುತಿಸಿಬೇಡಿಕೊಂಬೆನೆ | ಕ್ಷಿತಿಯೊಳೆಲ್ಲರೂ ಸನು |ಮತವನೈದಿ ಈ ಕೃತಿಗೆ ಮಂಗಳವೀಯೆ 3ದೋಷ ದೂರಳೇ | ಹರಿಭಕ್ತಿಯಲ್ಲಿ ಮೋಸ ತೋರಳೆ ||ಕಾಶಿ ನಂದನೆಯನ್ನಾ | ಯಾಸ ಬಡಿಸದಲೀ |ಶ್ರೀಶನ ಕಥಿಗೆ ವಿಶೇಷ ಬುದ್ಧಿಯನೀಯೆ 4ಮಾನನಿನ್ನದೆ | ಸತತ ಪೇಳ್ವದೇನು ಮಾಣದೇ ||ಪ್ರಾಣೇಶ ವಿಠಲನ ಧ್ಯಾನದೊಳಿರುವಂತೆ |ಪೋಣಿಸುವದು ಮತಿ ಬಾಣ ವರದ ನುತೆ5
--------------
ಪ್ರಾಣೇಶದಾಸರು
ಮನವ ಶೋಧಿಸಬೇಕುನಿಚ್ಚ - ದಿನ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ದಿನದಿ ಮಾಡುವ ಪಾಪ ಪುಣ್ಯದ ವೆಚ್ಚ ಪಧರ್ಮ ಅಧರ್ಮ ವಿಂಗಡಿಸಿ - ದು - |ಷ್ಕರ್ಮಕೆ ಏರಿದ ಬೇರ ಕತ್ತರಿಸಿ ||ನಿರ್ಮಲಾಚಾರದಿ ಚರಿಸಿ -ಪರ - |ಬೊಮ್ಮಮೂರುತಿ ಪಾದಕಮಲವ ಭಜಿಸಿ1ತನುವ ದಂಡಿಸಿ ಒಮ್ಮೆ ಮಾಣೊ - ನಿನ್ನ - |ಮನವ ಶೋಧಿಸಿ ಪರಮಾತ್ಮನ ಕಾಣೊ ||ನೀನು ನಿನ್ನೊಳಗೆ ಜಾಣನೊ - ಮುಕುತಿ - |ಯೇನೂ ದೂರಿಲ್ಲವೊ ಒಂದೇ ಗೇಣೊ 2ಆತನ ಭಕ್ತರಿಗೆ ಕೇಡಿಲ್ಲ - ಅವ - |ಪಾತಕ - ಪತಿತಸಂಗವ ಮಾಡ ಸಲ್ಲ ||ನೀತಿವಂತರು ಕೇಳಿರೆಲ್ಲ - ನಮ -|ಗೀತನೆ ಗತಿಯೀವ ಪುರಂದರವಿಠಲ 3
--------------
ಪುರಂದರದಾಸರು
ಮಾವನ ಮನೆಯೊಳಗೆ ಕೋವಿದರಿರಬಹುದೆ ? ಪ.ಹಾವ ಹಿಡಿಯಲು ಬಹುದುಹರಣ ನೀಡಲು ಬಹುದು |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬೇವ ಕಿಚ್ಚನು ಹಿಡಿದು ನುಂಗಬಹುದು ||ಭಾವೆಯ ತಂದ ಮನೆಯಲಿ ಜೀವಿಪುದಕಿಂತಸಾವುದೇ ಲೇಸು ಅಭಿಮಾನಿಗಳಿಗೆ 1ಪರರ ಸೇರಲುಬಹುದು ಪತಿತರಲ್ಲಿರಬಹುದು |ಕೊರಳ ಘಾತಕರಲ್ಲಿ ಸೆರಗೊಡ್ಡಬಹುದು ||ತರುಣಿಯ ತಂದೆಯ ಮನೆಯವಾಸಕ್ಕಿಂತ |ತರುಗಿರಿಗುಹೆಗಳಲಿ ಇದ್ದು ಜೀವಿಸಬಹುದು 2ಮಾವ - ಅತ್ತೆಯ ನೊಂದು ಅತ್ತಿಗೆಯು ತಾ ಜರೆದು |ಹೇವವನಿಕ್ಕಿ ಚೂರ್ಣವ ಮಾಡಲು ||ಆವಾಗ ನೋಡಿದರೂ ಎನಗೆ ಹಿತರಿಲ್ಲೆಂದುಮಾವ ಹೊರಗಾಡುವನು ಚಿಕ್ಕ ನುಡಿಗಳನು 3ಒಂದೊಂದು ತೆಂಗಳೂಳು ಬಹುಮಾನ ನಡತೆಗಳು |ಒಂದೆರಡು ತಿಂಗಳೊಳಗೆ ಹಿತವಾದವು ||ಒಂದೊಂದಭದ್ರ ನುಡಿ ಒಳಗೊಳಗೆ ಹುಟ್ಟಿದುವು |ಸಂದೇಹವೇಕೆ ಸಂಸಾರಿಗೂ 4ಈ ಪರಿಯಲುಂಬಂಥ ಅಳಿಯ ಭೋಜನದಿಂದ |ಗೋಪಾಳ ಲೇಸು ಅಭಿಮಾನಿಗಳಿಗೆ ||ಶ್ರೀಪತಿ ನಮ್ಮ ಪುರಂದರವಿಠಲನಈಪರಿಭಜಿಸಿ ಸುಖಿಯಾಗೊ ಮನವೆ* 5
--------------
ಪುರಂದರದಾಸರು
ರಕ್ಷಿಸಲರಿಯಾ ರಂಗಯ್ಯ ರಕ್ಷಿಸಲರಿಯಾ ಪ.ರಕ್ಷಿಸಲರಿಯೇನೊ ಲಕ್ಷ್ಮೀಪತಿ ಎನ್ನಈಕ್ಷಿಸಿ ಕರುಣಕಟಾಕ್ಷದಿ ಭಕ್ತನ ಅ.ಪ.ಭಾರವಾಗಿಹೆನೇನೊ ರೋಮಕುಳಿಗಳೊಳುಭೂರಿಬ್ರಹ್ಮಾಂಡಗಳನಿಟ್ಟಿಹಗೆಮೀರಿದವನೇನಯ್ಯ ಬೆಲೆ ಪೇಳಿ ಕೈಗಟ್ಟಿಮಾರುವ ಭಟರಲ್ಲಿ ನಾ ಪೇಳುವೆನು 1ಜಿತಮನನಲ್ಲೆಂದು ಹತ ಮಾಡೋದುಚಿತವೆಪ್ರತಿಕ್ಷಣಕೊದಗೊ ತಂದೆ ಜಿಹ್ವೆಗೆಅತಿತನಕಘ ಮುತ್ತೇಳದಿದ್ದರೆ ನಿನ್ನಪತಿತ ಪಾವನನೆಂಬೋರೆ ಚೀರುವರೆ 2ಆಚಾರವಿಹೀನನೆಂದೋಕರಿಸಲಿ ಬೇಡನೀಚೋದ್ಧಾರಕ ಬಿರುದು ನೀ ತಳೆದೆಪ್ರಾಚೀನ ಕರ್ಮದಿಂದಲಿ ನಾ ದಣಿದಮೇಲೆನಾಚಿಕಿನ್ಯಾರಿಗಯ್ಯ ಹೇಜೀಯ3ದೋಷಿ ನಾನೆಂದು ದೂರಿಡದಿರೊ ತವನಾಮಘೋಷಣೆಗುಳಿವುದೇನೊ ಪಾಪೇನೊಹೇಸಿ ದರಿದ್ರನೆಂಬುವರದ್ಯಾರೊ ನಿನ್ನಭಿಲಾಷೆವಿಡಿದ ಬಳಿಕ ಹೇ ಶ್ರೀಶ 4ಡೊಂಕುನಡೆವರ ಕೊಂಕು ತಿದ್ದುವೆ ನೀಸಂಖ್ಯೆಗಾಣೆನೊ ಕೊನೆಗೆ ಕೃಪೆಗೆಲೆಂಕರಲಿ ಮನವಿದ್ದರೆ ಸಾಕು ಪ್ರಸನ್ನವೆಂಕಟ ಸಾರ್ವಭೌಮನಿಷ್ಕಾಮ5
--------------
ಪ್ರಸನ್ನವೆಂಕಟದಾಸರು
ವಾಸುಕಿಶಯನನೆ ವೆಂಕಟಗಿರಿ |ವಾಸನೆಯಜ್ಞಾದ್ಯವತಾರನೆ |ಮೇಶಾ ನರಸಿಂಹಾ ಹಸಿಗೇಳೂ ಪಬೊಮ್ಮಾ ಶಂಕರ ಮುಖ ವಂದಿತ |ಸಮ್ಮೀರವಾಹನಗರುಡಧ್ವಜ |ಅಮ್ಮರೇಶಾನುಜ ಶ್ರೀ ಉಪೇಂದ್ರಾ || ಉಪೇಂದ್ರದಾಮೋದರಹರಿ| ತಮ್ಮನಾ ತಮ್ಮ ಹಸಿಗೇಳೂ 1ವಾಮನ ನಾರಾಯಣಅಚ್ಯುತ|ತಾಮಸಗುಣಜನ ಸಂಹಾರಕ |ಶ್ಯಾಮಾಂಗ ಕೋಟಿ ರವಿತೇಜಾ ||ರವಿತೇಜಾ ತ್ರೈಲೋಕದಗುರುಹೇಮಾಂಗದ ವರದಾ ಹಸಿಗೇಳೂ 2ಜಲಜಾಕ್ಷನೆಕೌಸ್ತುಭಶೋಭಿತ |ಜಲನಿಧಿ ಶಯನನೆ ನರಕಾಂತಕಾ |ಬಲಿಬಂಧಿಸೀದನೆ ಪರತತ್ವಾ ||ಪರತತ್ವರವಿದರ ಗದಧರಫಲುಗುಣನಾ ಸಖನೇ ಹಸಿಗೇಳೂ 3ಕನಕಾಂಬರ ಕಶ್ಯಪರಿಪುಹರಿ|ಧನಪತಿ ಮಿತ್ರನ ಭಯ ಬಿಡಿಸಿದ |ಇನಪುತ್ರಗೊಲಿದಾ ರಘುಪತೀ ||ರಘುಪತಿ ಭಕ್ತಸುರತರುಮನಸಿಜಾ ಪಿತನೆ ಹಸಿಗೇಳೂ 4ಶತಯಾಗನ ಗರ್ವ ವಿಭಂಜನ |ಕ್ಷಿತಿವಂದಡಿ ಮಾಡಿದವನೇ |ಸುತನಲ್ಲಿ ಪಾಲು ಕುಡಿದಾನೆ ||ಕುಡಿದಾನೆ ರುಗ್ಮಿಣಿವಲ್ಲಭಪತಿತಾ ಪಾವನ್ನಾ ಹಸಿಗೇಳೂ5ಝಗ ಝಗಿಸುವ ಪೀತಾಂಬರದುಡಿ |ಗಿಗಳಿಂದಲಿ ಹೊನ್ನುಡದಾರದಿ |ಮಿಗಿಲಾದ ವೈಜಯಂತೀ ವನಮಾಲೀ ||ವನಮಾಲಿ ಕೊರಳೊಳಗೊಪ್ಪುವಜಗದೀಶ ಕೃಷ್ಣಾ ಹಸಿಗೇಳೂ 6ಗಂಗೆಯ ಚರಣದಿ ಪಡದಿಹ ಬಹು |ಮಂಗಳ ಮೂರುತಿ ಶ್ರೀ ವಾಮನಾ |ಜಂಗುಳಿ ಹೆಣ್ಣುಗಳಾ ಒಲಿಸೂತಾ ||ಒಲಿಸುತಾ ಚಿಂತಿಗಳೆಲ್ಲನುಹಿಂಗಿಸುವಾ ದೇವಾ ಹಸಿಗೇಳೂ 7ಧ್ರುವ ದ್ರೌಪದಿಯ ಸುರಜ ಪೋಷಕ |ಅವಿವೇಕ ದಶಮುಖ ವಿನಾಶಕಾ |ಲವಣಾಸುರ ಕಂಸಾ ಮುರಾ ಧ್ವಂಸೀ ||ಮುರಧ್ವಂಸೀ ಐದೊಂದಬಲೆರಾಧವವಾಸುದೇವಾ ಹಸಿಗೇಳೂ 8ಕೇಶವ ಸತ್ರಾಯಣ ಸುತ ಪ್ರಾ- |ಣೇಶ ವಿಠ್ಠಲ ದಕ್ಷಿಣವಲ್ಲಭ|ದೋಷ ರಹಿತನೆ ಅನಿರುದ್ಧಾ ||ಅನಿರುದ್ಧಾ ಭಾಗವತರಘನಾಶಾ ಪರಮಾತ್ಮಾ ಹಸಿಗೇಳೂ 9
--------------
ಪ್ರಾಣೇಶದಾಸರು
ವೃಥಾ ಭವದಿ ಮೆರೆದೆರಥಚರಣಧರನ ಸ್ಮøತಿಯನೆ ಮರೆದೆ ಪ.ಸತಿಸುತರೆನ್ನವರತಿಶಯ ಗೃಹಧನಪತಿಯು ನಾನೆಂಬೊ ಮಮತೆವಿಡಿದುರತಿಪತಿಪಿತನಂಘ್ರಿರತಿ ಲೇಶವಿಲ್ಲದೆಸತತ ಯಮಪುರದ ಪಥವನೆ ಪಿಡಿದು 1ಅತಿಥಿಗಳೊಲ್ಲದೆ ಯತಿಪೂಜೆಯಿಲ್ಲದೆಪೂತಿ ಮಲಭಾಂಡ ಭರಿತನಾಗಿಚತುರ್ಮುಖನಯ್ಯನ ವ್ರತವ ಬಿಸುಟು ಅನ್ಯಪತಿತ ಮಾರ್ಗವ ಪೊಂದಿ ಹತಭಾಗ್ಯನಾಗಿ 2ಮಿತಮನರಹಿತ ದುರ್ಮತಪಂಡಿತನಾಗಿಪ್ರತಿಬೊಮ್ಮರಕ್ಕಸೋನ್ನತನೆನಿಸಿಅತಿಪ್ರಾಜÕಶಾಸ್ತ್ರದೇವತೆ ಪ್ರಸನ್ವೆಂಕಟಪತಿಯನೆ ಬಿಟ್ಟಿನ್ನಿತರವ ಭಜಿಸಿ 3
--------------
ಪ್ರಸನ್ನವೆಂಕಟದಾಸರು