ಒಟ್ಟು 1979 ಕಡೆಗಳಲ್ಲಿ , 113 ದಾಸರು , 1436 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುಂಜಾ ನರಸಿಂಹಾ-ಪಾಹಿ ಮಾಂ ಪಾಹಿ ಪ ಅಜಭವ ಫÀಣಿ ದ್ವಿಜರಾಜ ಸುಪೂಜಿತ ತ್ರಿಜಗದೊಡೆಯ ನರಹರಿಯೆ-ದುರಿತ ಹರಾ ಅ.ಪ ಪಟುತರ ಭಾಧೆ ಸಂಕಟಪಡುತಲಿ ಸುರ- ಕಟಕ ನುತಿಸಿ ಕೋಟಿತಟಿತ್ಕಾಯನೆ ಕೋಟಿ ಖಳರೆದೆ ಕುಟ್ಟಿ ಯಮಪುರ ಕಟ್ಟಿ ದಿಟ್ಟತನದಲಿ ನಿಶಾಚರನಳುಹಿದ 1 ಸಿಡಿಲೋಪಮ ಘುಡು ಘುಡಿಸುತ ಕಿಡಿಯ ಕಡೆಗಣ್ಣಿಂದಲಡಿಗಡಿಗುಗುಳುತ ಕೂಡಿನಖಗಳ ನೀಡಿಶಿರವನ- ಲ್ಲಾಡಿಸಿ ಜಡಜಂಗಮರ ನಡುಕ ಬಿಡಿಸಿದೆಯೊ2 ಅಡಿಗಡಿಗೆಡರನು ಪಡುತಿಹ ಹುಡುಗನ ದೃಢತರ ಭಕುತಿಯ ನುಡಿಯುನು ಕೆÉೀಳುತ ನೋಡಿ ಅಭಯವ ನೀಡಿ ನೀ ದಯ ಮಾಡಿ ಬಿಡುಗಣ್ಣರನು ಬಿಡದೆ ಸಲಹಿದೆಯೊ 3 ಕೇಳಿ-ಹರುಷವ ತಾಳಿ-ದನುಜರ ಧೂಳೀಪಟಮಾಡಿ ನಲಿದು ನಿಂದಾಡಿದೆ 4 ಸಿಂಧುಶಯನ ಭವಬಂಧವಿಮೋಚಕ ಇಂದಿರೆಯರಸ ಶ್ರೀ ವೇಂಕಟೇಶ ನೀ ಬಂದೂ ಸ್ತಂಭದಿ ನಿಂದೂ ಭಕುತರ ಬಂಧೂ ಸುರವೃಂದಕೆ ಆನಂದವ ನೀಡಿದ 5 ಕಡಲುಗಳೇಳಡಿಗಡಿಗುಕ್ಕುತ ಪಥ ತಪ್ಪಿ ಬೀಳುತಲಿರೆ ದಾಡಿ ಕುಣಿದಾಡೀ ಸ್ಮಶ್ರುಗಳ ತೀಡಿ ಬಡಬಾನಲಲ್ಲಾಡಿಸಿ ನಿಂದ 6 ಪರಿಪರಿ ಸುರರವಯವಗಳನು ಧರಿಸಿ ಉರುತರ ಕ್ರೀಡೆಯ ಮಾಡಿ ಪ್ರಳಯದಿ ತೋರಿ ಧಿಕ್ಕರಿಸಿ ತಾಳಿ ಹರುಷದಿ ಕೇಳಿಯೊಳು ಉರಗಾದ್ರಿವಾಸವಿಠಲ ನೀ ನಿಂದೆಯೊ 7
--------------
ಉರಗಾದ್ರಿವಾಸವಿಠಲದಾಸರು
ಗುಡಿಯ ತುಂಬ ದೇವರ ಕಂಡೆ | ಅಡಿಯಿಡಗೊಡದೆನ್ನ ಹಿಡಿಕೊಂಡಿತಕ್ಕ ಪ ಕೈಯಿಲ್ಲ ಕಾಲಿಲ್ಲ ಮೂಗಿಲ್ಲ ಮಾರಿಲ್ಲ | ಮೈಯೆಲ್ಲ ನೋಡಲು ಮರಿಯಾದೆ ಇಲ್ಲ | ಸೈಯೆನಿಸಿ ಜಗಕೆಲ್ಲಕೆ ಮಿಗಿಲಾದ ದೇವರು | ವೈಯಾರ ಇಲ್ಲದೆ ಸಿಕ್ಕಿತಕ್ಕ 1 ಹೆಣ್ಣಲ್ಲ ಗಂಡಲ್ಲ ಹಣ್ಣಲ್ಲ ಕಾಯಲ್ಲ | ಹೂವಿಲ್ಲದೆ ಪೂಜೆಗೊಂಡಿಹುದಕ್ಕ | ಪೂಜೆಯ ಮಾಡುವ ಪೂಜಾರಿಯ ನುಂಗಿತು | ಮೂಜಗದೊಳು ಇದು ಸೋಜಿಗವೆನ್ನಿ 2 ಅರಿತು ನೋಡಲು ಬೆರೆತು ನಿಂತಿಹುದಲ್ಲ | ಮರೆತು ಹೋಯಿತು ನಾನೆಂಬುವದೆಲ್ಲ | ಗುರುತವ ಬಲ್ಲದು ಗುರು ಭವತಾರಕ | ಭಜಕರ ಹೊರತು ತಿಳಿಯದು ಜನಕೆ 3
--------------
ಭಾವತರಕರು
ಗುಣವಾರಿಧಿಯೆ ಪ ದಾರಾ ಕೃತಿಯನೀ ತೊರಿಸೆನೆಗೆ 1 ದೃಷ್ಟಿಸುವೆನೊ ಶ್ರೀಕೃಷ್ಣನಿನ್ನನು 2 ಚೆನ್ನಾಗಿ ತೊಳೆಯುವೆ ನಿನ್ನಡಿಗಳ 3 ದಿಂದಾಲಂಕರಿಸುವೆ ಸುಂದರಾಂಗನೆ 4 ಮೂಜಗದೊಡೆಯನನು ಪೂಜಿಸುವೆನೊ5 ದೀಪಂಗಳನು ಬಹುದೀಪಿಸುವೆನು 6 ಘೃತ ಮೇಳೈಸುವೆನು ಶ್ರೀಲೋಲನಿಗೆ 7 ಕರ್ಪೂರದಾರತಿಗಳರ್ಪಿಸುವೆನು 8 ಮನದಣಿಯುವಂದದಿನಾ ಕುಣಿದಾಡುವೆ 9 ಸದನದೊಳಿಂಬಿಟ್ಟು ಮುದಹೊಂದುವೆ 10 ಪುಲಿ-ಗಿರಿ ಧಾಮನೆ 11
--------------
ಸರಗೂರು ವೆಂಕಟವರದಾರ್ಯರು
ಗುರು ಅಂತರ್ಯಾಮಿ ಶ್ರೀನಿವಾಸ ಸಿರಿರಮಣ ಶ್ರೀ ಕೃಷ್ಣ ಶ್ರೀನಿಧಿಯೆ ಶ್ರೀಶ ಪ. ಸೃಷ್ಟಿಕರ್ತನೆ ನಿನ್ನ ಲಕ್ಷಿದೇವಿಯು ಸತತ ಶ್ರೇಷ್ಠತನದಲ್ಲಿ ಪೂಜೆ ಮಾಡುತಿಹಳೊ ಅಷ್ಟು ದೇವತೆಗಳು ಆಗಮವನನುಸರಿಸಿ ಶಿಷ್ಟೇಷ್ಟನೆಂತೆಂದು ಪೂಜೆ ಮಾಡುವರೋ 1 ಅಣು ನಾನು ನಿನ್ನ ಅರ್ಚಿಸ ಬಲ್ಲೆನೇ ದೇವ ಘನಮಹಿಮ ಸ್ವೀಕರಿಸೊ ಅಲ್ಪ ಸೇವೆ ಮನ ಮಂದಿರದಿ ನಿಂತು ಅನುಗಾಲ ನಿನ್ನ ದಿವ್ಯ ಘನ ಮೂರ್ತಿಯನೆ ತೋರೋ ಪೂಜೆ ಮಾಡುವೆನೊ 2 ಸರಸಿಜಾಕ್ಷನೆ ನಿನಗೆ ಸರಸದಿಂದ ಗುಲಾಬಿ ಸರದ ಪೂಮಾಲೆಯನು ಕೊರಳಿಗ್ಹಾಕುವೆನೊ ಸುರರ ಪಾಲಿಪ ಹರಿಯೆ ಸುರಹೊನ್ನೆ ಹಾರವನು ಕರ ಚಕ್ರಯುತ ನಿನ್ನ ಕಂಧರದಿ ಧರಿಸೋ 3 ಶ್ಯಾಮವರ್ಣನೆ ರತ್ನಹಾರಗಳು ಹೊಳೆಯುತಿರೆ ಶ್ರೀ ಮನೋಹರ ಮುತ್ತಿನ್ಹಾರ ಪದಕಗಳು ಈ ಮಧ್ಯೆ ದಿವ್ಯ ಶ್ಯಾವಂತಿಗೆ ಸುಮನದಿಂ ಕಾಮಜನಕನೆ ಮಾಲೆಕಟ್ಟಿ ಹಾಕುವೆನೊ 4 ಈ ಜಗವ ಉದರದಲಿ ಧರಿಸಿ ಮೆರೆಯುವ ದೇವ ಜಾಜಿ ಪೂಮಾಲೆಯನು ಕಂಧರದಿ ಧರಿಸೊ ಭೋಜಕುಲ ತಿಲಕನೆ ಕೆಂಡ ಸಂಪಿಗೆ ಸರವ ಮಾಜದೇ ಎನ್ನಿಂದ ಸ್ವೀಕರಿಸೊ ದೇವ 5 ಪಾತಕರಹಿತ ಹರಿ ಪಾವನರೂಪನೆ ಪ್ರೀತಿಯಿಂ ಸ್ವೀಕರಿಸೊ ಕೇತಿಕೆಯ ಸರವ ಶ್ರೀತರುಣಿ ಸತ್ಯಭಾಮೆಯರು ಕದನವಗೈದ ಪ್ರೀತಿ ಪಾರಿಜಾತ ಧರಿಸಯ್ಯ 6 ಮರುಗ ದವನಗಳಿಂದ ಸುರಹೊನ್ನೆಯನೆ ಕಟ್ಟಿ ಇರುವಂತಿಗೆಯ ಹಾರ ಹರಿಯೆ ಅರ್ಪಿಸುವೆ ಪರಿಮಳವ ಬೀರುತಿಹ ಪರಿಪರಿಯ ಮಲ್ಲಿಗೆಯ ಸರಗಳನೆ ಧರಿಸಿನ್ನು ಸಾಕಾರರೂಪ 7 ದುಂಡುಮಲ್ಲಿಗೆಯ ಮೊಗ್ಗು ಪಾಂಡವರ ಪಾಲಕಗೆ ದಂಡೆಯನೆ ಕಟ್ಟಿ ನಾ ಕೊರಳಿಗ್ಹಾಕುವೆನೊ ಚಂಡವಿಕ್ರಮ ಶಂಖ ಚಕ್ರಧಾರಿಯೆ ಪಾದ ಮಂಡೆ ಪರಿಯಂತರದಿ ನೊಡಿ ದಣಿಯುವೆನೊ8 ಸತಿ ನಿನಗಾಗಿ ಕಾಷ್ಟದಳ ಮೃತ್ತಿಕೆಯ ಸೇವಿಸುವ ಜನಕೆ ಇಷ್ಟ ಫಲವನೆ ಇತ್ತು ಕೃಷ್ಣನ್ನ ತೋರಿಸುವ ಶ್ರೇಷ್ಠ ತುಳಸಿಮಾಲೆ ಕಟ್ಟಿ ಹಾಕುವೆನೊ 9 ಕಮಲನಾಭನೆ ಕೃಷ್ಣ ಕಮಲಾಪತಿಯೆ ಸ್ವಾಮಿ ಕಮಲಪಾಣಿಯೆ ದೇವ ಕಮಲಾಕ್ಷನೆ ಕಮಲಮುಖ ನಿನ್ನ ಪದಕಮಲದಲಿ ನಲಿವಂತೆ ಕಮಲದ್ಹಾರವ ಕಟ್ಟಿ ಕೊರಳೀಗ್ಹಾಕುವೆನೋ10 ಈ ಪರಿಯ ಮಾಲೆಗಳ ನೀ ಪ್ರೀತಿಯಿಂ ಧರಿಸಿ ಪಾಪಗಳ ತರಿದೆನ್ನ ಪಾವನವಗೈಯ್ಯೊ ಆಪತ್ತು ಕಳೆವ ಶ್ರೀ ಗುರು ಕಟಾಕ್ಷದಿ ನುಡಿದೆ ಗೋಪಾಲಕೃಷ್ಣವಿಠ್ಠಲನೆ ಕೃಪೆಮಾಡೊ 11
--------------
ಅಂಬಾಬಾಯಿ
ಗುರು ಚರಣವನು ಸಂಸ್ಮರಿಸಿರೋ ಪಗುರು ಲಕ್ಷ್ಮಿ ವರಜಾತ | ಗುರು ಲಕ್ಷ್ಮಿಪ್ರಿಯ ತೀರ್ಥ ಚರಣ ಸರಸಿಜ ಭಜಿಸೆ | ಕರಣದಂತರ ಬಾಹ್ಯ ಪರಿಶುದ್ಧಿಯನೆ ಗೈದು | ಜ್ಞಾನ ಭಕ್ತಿಯನಿತ್ತು ಹರಿ ಪೊರೆವ ಸಂತತದಲಿ ಅ.ಪ. ಪೂರ್ವಾಶ್ರಮಾ ನಾಮ | ಭೂವಿಬುಧ ಕೃಷ್ಣಾಖ್ಯ ದೇವರಾಯನ ದುರ್ಗ | ದಾವ ನರಸೀಪುರದಿಆವಾಸಿಸುತ್ತಿರಲು | ಓರ್ವ ಸಖನಿವರ ಜ್ಞಾನಾನುಸಂಧಾನದಾ |ಭಾವ ತಿಳಿಯುತ ಮನದ | ಯಾವ ದೊಂದಭಿಲಾಷೆನೀವು ಸಲಿಸುವುದೆನ್ನೆ | ಆವುದೆನುತಲಿ ಕೇಳೆಯಾವ ಪನಸದ ಫಲವ | ಆಸ್ವಾದು ಮಧು ಒಡನೆಓವಿ ಕರಡಿಯು ಕಲಸಿದ 1 ಅದರ ಪ್ರಾಪುತಿಗಾಗಿ | ಬದಿವನನೊಂದಿನವುಬೆದರದಲೆ ಪೊಗುತಿರಲು | ಎದುರೊಂದು ಶಿಲೆ ಮೇಲೆವದಗಿ ಕಲಸಿದ ಕಂಡು | ಅದರೊಡನೆ ಮರನೇರೆ ಬಂದಿತದು ಮರಿಗಳೊಡನೆ |ಅದಕು ಇವರಿಂಗಾಯ್ತು | ಕದನವೂ ಕೆಲಕಾಲ ಒದಗೆ ಜಯ ವಿಬುಧರಿಗೆ | ಹದುಳದಲಿ ಗೃಹಸೇರಿಮುದದಿಂದ ಶ್ರೀಹರಿಯ | ಪದ ಸ್ಮರಣೆಯಲ್ಲವರು ದಿನಗಳನೆ ಕಳೆಯುತಿಹರು 2 ಯತಿ ಲಕ್ಷ್ಮಿ ವರರಿಂದ | ಯತಿಗಳಾಶ್ರಮ ಪೊಂದಿಹಿತದಿಂದಲಾ ಬೂದಿ | ನೆತ್ಯಾಖ್ಯ ಗ್ರಾಮದಲಿಸ್ಥಿತರಾಗಿ ಶಿಷ್ಯರಿಗೆ | ಹಿತದ ಉಪದೇಶವ ಪ್ರೀತಿಯಲಿ ಮಾಡುತಿರಲು |ಯತಿಗಳಾಶ್ರಮದಲ್ಲಿ | ಮತಿ ವಂತ ವಿಪ್ರೋರ್ವಕ್ಷಿತಿಯೊಳಾ ನಾಕನಿಭ | ಮಂತ್ರ ಮಂದಿರ ಸೇವೆ ಅತಿಹಿತದಲೆಸಗುತಿರೆ | ಯತಿಗಳಾಶೀರ್ವದಿಸೆ ಪಥವಾಯ್ತು ಪ್ರಿಯರಲ್ಲಿಗೇ 3 ಪತಿ ಸೇವೆ | ಯುಕುತನಾಗಿರಲ್ವೊರೆದು ನಾಲ್ವತ್ತು ದಿನ ಮಿತಿಯಲಿ |ಕಕುಲಾತಿ ತೊರೆದು ನಿಜ | ಭಕುತಿಯಿಂ ಗೈವುತಿರೆಲಕುಮಿ ಪ್ರಿಯರಾಚಾರ | ಉಕುತಿಯಲಿ ದುರ್ಭಾವಪ್ರಕಟವಾಗಲು ಮನದಿ | ಬಂಕಪುರ ಮಾರ್ಗವನೆ ತೆರಳಲನುವಾದನೂ 4 ಮತ್ತೆ ನರಹರಿ ತಾನು | ವ್ಯಕ್ತಯಿಂತೈಜಸನುಒತ್ತಿಪೇಳಲು ಬುಧನು | ಮತ್ತೆ ಗುರುಪದಕೆರಗಿಬಿತ್ತರಿಸೆ ತನ್ನಸ್ವಪ್ನ | ವಾರ್ತೆಗಳ ವಿಶ್ವಮಿತ್ರನ ಭಾವವನೆ ತೋರುತ |ಇತ್ತಲಿಂದೆರಡೊರ್ಷ | ಕಿತ್ತಪೆವು ಆಶ್ರಮವಆರ್ಥಿಯಿಂದಿರುತಿರ್ದು | ಹಸ್ತಿವರದನ ಸೇವೆಉತ್ಸಹದಲೆಸಗುವುದೆ | ನುತ್ತಲಾಶೀರ್ವದಿಸಿ ಚಿಂತಿಸುತ್ತಿರೆ ಹರಿಯನು 5 ಗ್ರಾಮದೊಳಗುಳ್ಳ ಖಲ | ಸ್ತೋಮ ಬಂದಡರುತ್ತಭೂಮಿ ಗೋಸುಗ ಕಲಹ | ಸೀಮೆ ಮೀರುತ ಗೈಯ್ಯೆಅ ಮಹಾಯತಿವರ್ಯ | ಭೂಮಿ ಕೃಷ್ಣಾಂಕಿತವುಕಾಮನೆಯ ಬಿಡಿರೆನುತಲಿ | ನೇಮದಲಿ ಘರ್ಜಿಸಲು |ಆ ಮಹಾ ದುಷ್ಟಜನ ಈ ಮರದ ಸಂಪದವ ಕಾಮಿಸುತ ಮನದಲ್ಲಿನೇಮದಿಂ ಪತ್ರೋರ್ವ | ಪಾಮರನ ಒಡನವರು ಯಾಮ ಸಂಜೆಲಿ ಕಳುಹಲು 6 ಪರಿವಾರ ಜನಕೆಲ್ಲ | ಇರುವ ನೆಲೆ ಬಿತ್ತರಿಸಿಸರಿಯುತಲಿ ಸುಕ್ಷೇಮ | ನೆರೆಯ ಸಾರುವುದೆನುತಒರೆಯಲೂ ಕೆಲವರು | ಮರೆಮಾಡಿ ತೃಣ ಬಣವಿ ನೆರೆ ಬಿಡದೆ ಸಾರುತಿರಲು |ವರನಿಶೀ ಸಮಯದಲಿ | ದುರುಳರೆಲ್ಲರು ಮಠಕೆಬರಬರುತ ಕವಣೆಕಲ್ | ನೆರೆಬೀರ್ವ ಜನಗಳೂಉರಿವ ತೃಣ ಬಣವಿಯಂ | ದುರೆ ಜ್ವಾಲೆ ಪರಿಕ್ರಮಣ ಭಯ ಭ್ರಾಂತಿಯಿಂದಿರುತಿರೆ 7 ಸಿರಿ ಹರಿಯ ನಮಿಸುತಿರಲು 8 ಪರಿ | ಚರರಿಘರಸುತ್ತ ಬಲುಪರಿಯ ಹರಿ ಮಹಿಮೆಗಳ | ಒರೆಯುತಾನಂದಾಶ್ರೂ ಸುರಿಸುತವ ಶೇಷನಿಶಿ | ಹರಿಕರುಣ ಸ್ಮರಣೆಯಲಿ ಸರಿಸಿದರು ಶಿಷ್ಯರೊಡನೇ 9 ಗರ ಮಿಶ್ರ | ಯತಿಗೆ ಬಡಿಸೇ ಜೀರ್ಣಿಸುತ ಪಾಪಿ ವಿಪ್ರರ್ಗೆ | ಗತಿಸಿದವು ಅಕ್ಷಿಗಳು ಮೃತ್ಯಂತಲಂದರಾಗಿ 10 ಗರ ಮಿಶ್ರ | ಸತ್ಯವಾದುದ ಕಂಡು ಪ್ರೋಕ್ಷಿಸಲು ಶಂಖದುದಕ |ವ್ಯಕ್ತವಾಯಿತು ಇವರ | ಉತ್ತುಂಗ ಮಹಿಮೆಗಳುಹಸ್ತಿವರದನು ಭೋಜ್ಯ | ವಸ್ತುಗಳ ಸ್ವೀಕರಿಸಿದತ್ತ ಮಾಡಲು ಪುನಃ | ಮತ್ತೆ ಜೀರ್ಣಿಸಿಕೊಂಡು ಹರಿಯನ್ನೆ ಚಿಂತಿಸುತಲಿ 11 ನೆಲೆಸಿರಲ್ಲಬ್ಬುರೊಳು | ಗಳ ಗ್ರಾಹಕರು ಮತ್ತೆಮಿಳಿತರಾಗುತ ರಾತ್ರಿ | ಛಲವ ಸಾಧಿಸೆ ನಿಶಿತಅಲಗು ಕತ್ತಿಯ ಪಿಡಿದು | ನೆಲಕೆ ಯತಿ ಶಿರವನ್ನು ಇಳಹುವ ಮತಿ ಮಾಡಲೂ |ಒಲವಿನಿಂ ಯತಿಯಕುಲ | ತಿಲಕ ವೃಂದಾವನವ ಬಳಸಿ ನಮಿಸಲು ಸಂಜೆ | ಯಲಿ ಪೇಳ್ದ ಬ್ರಹ್ಮಣ್ಯಒಳ ಪೊಗುತಲಾರಾಮ | ನೆಲೆಸೇರಿ ಮಠಸಾರಿ ಎಂದೆನುತ ಎಚ್ಚರಿಸಿದರ್12 ಮತ್ಸರಿಗಳಿನ್ನೊಮ್ಮೆ | ಕುತ್ಸಿತದ ಬುದ್ಧಿ ಮಹಉತ್ಸವದ ಸಮಯದಲಿ | ಹೆಚ್ಚು ಜನ ಸಂಧಿಸಿರೆನೆಚ್ಚಿದ್ದ ಪಾಚಕರು | ಉಚ್ಚಳಿಸಿ ಕೆಲಸಾರೆ ಕೆಚ್ಚಿದೆಯನೇ ತೋರುತ |ಮುಚ್ಚಿಮಠದ್ವಾರಗಳ | ಹೆಚ್ಚುತಲಿ ಪಲ್ಯಗಳ ಮತ್ಸಕೇತನ ಪಿತನು | ಮೆಚ್ಚುವಂದದಿ ಪಾಕಪೆಚ್ಚಿಸುತಲಿ ಹರಿಯ | ಅರ್ಚನೆಯ ಕೈಕೊಂಡು ಮೆಚ್ಚಸಿದರು ಸುಜನರ 13 ಜ್ವರತಾಪದಿಂದೊಮ್ಮೆ | ನೆರೆ ಬಳಲು ವಂತಿರ್ಪಗುರುವರರ ಕಂಡೋರ್ವ | ವರ ಶಿಷ್ಯ ಪ್ರಶ್ನಿಸಲುನೆರೆ ಬದುಕ ಬೇಕೆಂಬ | ಶರಿರವನೆ ತೊರೆವೆ ನೆಂಬೆರಡುಕ್ತಿ ಸಲ್ಲದಿದಕೊ |ನರರಾಡಿ ಕೊಳದಂತೆ | ವರ ಭಿಷಜ ತಾಕೊಟ್ಟವರಗುಳಿಗೆ ನುಂಗುವೆವು | ಹರಿ ಪೂಜೆ ವಿರುದ್ಧಜ್ವರ ಕುಂಟಿ ಧನ್ವಣತ್ರಿ | ವರಮಂತ್ರ ಕೈ ಸೇರಿ ಪರಿಪರಿ ಮೆರೆಯುತಿರಲು 14 ಯತಿವರರ ಮಹಿಮೆಗಳ | ತುತಿಸಲೆನ್ನಳವಲ್ಲಯುಕ್ತಿಯಲಿ ಅಪವಾದ | ಹೊತ್ತು ಕೊಳದಲೆ ಅವರು ಜಿತ ಇಂದ್ರಿಯತ್ವವನು | ಮತಿಮತಾಂ ಸುಜನಕ್ಕೆ ಪ್ರತಿರಹಿತದಿಂ ತೋರುತ |ಹಿತದಿಂದ ಲಾರಾಮ | ಸೇತು ಯಾತ್ರೆಯ ಗೈದುಕ್ಷಿತಿ ಚರಿಸಿ ಬರಬರುತ | ಹಿತಶಿಷ್ಯ ವ್ಯಾಜದಿಂಸತ್ಯ ಧೀರ್ರನು ಚರರ | ಕೃತ ಬಹಿಷ್ಕರ ಗೆಲ್ದು ಶಾಂತತೆಯನೇ ತೋರ್ದರು 15 ವರಲಕ್ಷ್ಮಿ ಪ್ರಿಯ ತೀರ್ಥ | ಕರಗಳಿಂದರ್ಚಿತವುಪರಿಸರಾರ್ಚಿತ ಯೋಗ | ನರಹರಿಯು ವ್ಯಾಸಮುನಿವರದ ಗೋಪತಿ ಕೃಷ್ಣ | ಸಿರಿವ್ಯಾಸಯತಿ ರಚಿತ ಎರಡೇಳು ರಜತ ಪ್ರತಿಮೆ |ಗುರುವರ ಬ್ರಹ್ಮಣ್ಯ | ವರದ ವಿಠ್ಠಲದೇವಸರ್ವಜ್ಞರರ್ಚಿಸಿದ | ವರ ಶರಣ್ಯ ವಿಠಲನುನಿರುತ ಪೂಜಿತವಾಗಿ | ಶರಿರ ಭೌತಿಕ ಬಿಡುವ ವರ ಸಮಯ ತಾನುಸುರಿರೆ16 ಸಂತೈಸಿ ಇತ್ತರಾಶಿಷವ 17 ನೀಲ ಕಾಲ | ವರುಷವನು ಪೈಂಗಳವು | ಎರಡೊಂದನೇ ಮಾಸವರಶುಕ್ಲ ಹರಿದಿನದಿ | ಸರಿತು ವರ ಕಣ್ವತಟಪರಮ ಸುಕ್ಷೇತ್ರದಲಿ | ವರಯೋಗ ಮಾರ್ಗದಲಿ ದೇಹ ಹರಿಗರ್ಪಿಸಿದರು 18 ಜಯ ಜಯತು ಶುಭಕಾಯ | ಜಯಜಯತು ತಪಶೀಲಜಯ ಶಮೋದಮವಂತ | ಜಯ ಶಾಪನುಗ್ರಹನೆಜಯಲಕ್ಷ್ಮಿ ವರಜಾತ ಜಯಲಕ್ಷ್ಮಿ ಪ್ರಿಯ ತೀರ್ಥ ಜಯ ಜಯತು ವಿಶ್ವಮಿತ್ರ |ಪ್ರಿಯ ಗುರುಗಳಾಂತರ್ಯ | ಜಯ ದೇವ ನೋಳ್ಪರಮಪ್ರಿಯನಾದ ತಂದೆ ಮುದ್ದು | ಮೋಹನ್ನ ವಿಠಲಾತ್ಮಜಯ ಗುರೂ ಗೋವಿಂದ | ವಿಠ್ಠಲನ ಭಜಿಸಿದರೆ ನಯಸುವನು ಪರಮಗತಿಗೆ 19
--------------
ಗುರುಗೋವಿಂದವಿಠಲರು
ಗುರು ನಾರಪ್ಪಯ್ಯನ ಚರಣಕಮಲಯುಗ್ಮ ಮಾನವ ಪ ನಿರುತ ಸ್ಮರಿಸುವ ಶರಣು ಜನರಘ- ತರಿದಭೀಷ್ಠೆಯ ಗರಿಯಲೋಸುಗ ಧರಣಿ ವಲಯದಿ ಮೆರೆವ ವೆಂಕಟ ಗಿರಿಯ ರಮಣನ ಕರೆದು ತಂದಿಹ ಅ.ಪ ಧರೆಸುರರೊಳು ಜನಿಸಿರಲು ಭ್ರಾತ್ರರುನಾನಾ ಪರಿಬಾಧಿಸಲು ಸಹಿಸಿ ಚರಣ ಯಾತ್ರೆಯಲಿಂದ ಗಿರಿಯಕಾಣುತ ಮಲಗಿರಲು ಸ್ವಪ್ನದಿಸೂಚಿಸಿ ಧರಣಿ ದೇವನೆ ನಿನಗೆ ದರುಶನ ಕೊಡಲು ನಾ ಬರುವೆನೆಂದಾಜ್ಞಾಪಿಸಿ ಭಕ್ತನನುಸರಿಸಿ ತುರುಸ್ವರೂಪವ ಧರಿಸಿ ಬರುತಿರೆ ಕುರಿಕಿಹಳ್ಳಿಯ ಗ್ರಾಮದಿಂದಲಿ ತರುವರಾಶ್ವತ್ಥದಲಿ ಸಲೆ ಪಾಲ್ಗರಿದ ದೇವನ ಕರೆದು ತಂದಿಹ 1 ನಾರಾಯಣಾರ್ಯರು ಕಾರ್ಪರಾರಣ್ಯದಿ ಆರಾಧಿಸುತಲಿರುತ ಆರಾರು ಭಕುತರು ಗೋಧನ ಧಾನ್ಯದಿ ಸಾರಾವಸ್ತುಗಳೀಯುತ್ತ ಗೋರಕ್ಷಣವ ಮಾಡಿರೆನುತ ತಮ್ಮಯ ಬಂಧು ಬಾಲಕರಿಗೆ ಪೇಳುತ್ತ ಭಯ ಬ್ಯಾಡಿರೆನುತ ಚಾರು ಶಿಲೆಯೊಳಗೊಂದು ದಿನ ಅಂಗಾರದಲಿ ಶ್ರೀ ಭಾರತೀಶನ ಮೂರುತಿಯ ಬರೆದೀತ ಭಯ ಪರಿ- ಹಾರಕನು ನಿಮಗೆಂದು ಪೇಳಿದ 2 ಧರಣಿ ಪಾಲಕನಿಂದ ನಿರ್ಮಿತಮಾದ ಬಂ- ಧುರ ನಿಲಯದಿ ರಾಜಿತ ತರುಮೂಲದೊಳಗವ- ತರಿಸಿ ಷೋಡಶ ಸಂಖ್ಯ ಕರಗಳಿಂದಲಿ ಶೋಭಿತ ವರ ಕೃಷ್ಣಾ ಜಲದೊಳಗಿರುವ ಪ್ರತಿಮೆಯ ತಂದು ತರು ಬಳಿಯಲಿ ಸ್ಥಾಪಿತ ಶ್ರೀಭೂಸಮೇತ ಮೂರ್ತಿ ನಿರುತ ಪೂಜೆಯಕೊಳುತ ಧರೆಯೊಳು ಶರಣು ಜನರನು ಪೊರೆವ ಕಾರ್ಪರ ನಿಲಯ'ಸಿರಿನರ ಹರಿ'ಯನೊಲಿಸಿದ3
--------------
ಕಾರ್ಪರ ನರಹರಿದಾಸರು
ಗುರು ವಾದಿರಾಜ ಯತಿಯಾ ನೆನಸುವದು ನಿರುತ ಕರುಣಿಪ ಮತಿಯಾ ಪ ಆರ್ತನಾ ಸರಿದಾರು ನವನ ವರ್ತಮಾನವನೆ ಕೇಳಿ ಕರ್ತೃತ್ವ ಪರಿಹರಿಸಿ ಸಂಸೃತಿಯ ಗರ್ತದಿಂದೆತ್ತಿ ನೋಳ್ಪ 1 ದುರಿತ ರಾಶಿಗಳ ಶೀಳಿ ಹೊರದೆಗೆದು ಮರುತ ಶಾಸ್ತ್ರವನೆ ಪೇಳಿ ಪರಮಾರ್ಥ ಮಾರ್ಗವಾ ತೋರಿ ಸುಖಬಡಿಸಿ ಧರಿಯೊಳಗೆ ಮೆರೆದೆ ಧೀರ 2 ವಂದಿಸಿ ಸೌಂದರ್ಯಪುರಿಯ ವಾಸ ವರಪ್ರದ ನಂದ ಸತ್ಕೀರ್ತಿ ಭೂಪ ವಂದಿಸಿದವರಿಗೆ ಲೇಸಾಗಿ ಕೊಡುವ ಮು ಕುಂದನಂಘ್ರಿಯ ದಾಸ 3 ತೀರ್ಥಯಾತ್ರೆಯನೆ ಮಾಡಿ ಹರಿ ಭೇದಾರ್ಥದಿಂದಲೆ ಕೊಂಡಾಡಿ ಅರ್ಥಾಸೆಗಳ ಈಡಾಡಿ ಹಯಮೊಗನ ಅರ್ಥಿಯಿಂದಲಿ ಪೂಜಿಪ4 ತ್ರಿಜಗದೊಳಗಿನವರಿಗೆ ಎಣೆಗಾಣೆ ಕುಜನ ಮತ ಸೋಲಿಸುವಲ್ಲಿ ವಿಜಯವಿಠ್ಠಲನೆ ದೈವವೆಂದು ಧ್ವಜವೆತ್ತಿ ತಿರುಗಿದ ಮುನಿಪ 5
--------------
ವಿಜಯದಾಸ
ಗುರು ಸದ್ಗುರು ಆರೆಂದು ನೋಡೊ ಗುರುತಿಟ್ಟು ಮನವೆ ಸೇವೆ ಮಾಡೊ ಧ್ರುವ ಗುರುಗಳುಂಟು ಮನೆಮನೆ ಬಹಳ ಬ್ಯಾರೆ ಬ್ಯಾರೆ ಮಾಡುತ ತಮ್ಮ ಮ್ಯಾಳ ದೋರುತಿಹರು ಮೋಹಿಸುವ ವಾಗ್ಜಾಲ ಸರಿ ತಮಗಾರಿಲ್ಲೆಂದೆನ್ನು ತಲಾ ತೋಳ 1 ಎಲ್ಲ ಬಲ್ಲತನದಭಿಮಾನ ಅಲ್ಲೆ ಕೊಂಬುದೇನುಪದೇಶ ಜ್ಞಾನ ಸೊಲ್ಲಿಲ್ಹೇಳಿ ಕೇಳಿದರಾಹುದೇನ ಸಲ್ಲದರಲಿಹುದೆನೊಡೆತನ 2 ಸರ್ವಸಮ್ಮ ತಾಗುವ ಸುಜ್ಞಾನ ಗರ್ವಾಭಿಮಾನಗೆಲ್ಲಿಹುದು ಖೂನ ಪೂರ್ವಾಪರ ಸದ್ಗುರು ನಿಜಧ್ಯಾನ ದೋರ್ವದು ತಾಂ ಪಡೆದವಗ ಪೂರ್ಣ3 ವಿರಳಾಗತ ಎಲ್ಲಿಗೊಬ್ಬ ಮಹಿಮ ಶರಣ ಹೊಕ್ಕವಗೆ ಪೂಜ್ಯಪರಮ ಕರತಳಾಮಲಕವಾಗುವ ನಿಜವರ್ಮ ಗುರುಮಾರ್ಗದಾಗೆನಬೇಕು ನೇಮ 4 ಗುರುವರ ಶಿರೋಮಣಿ ಭಾನುಕೋಟಿ ಗುರುತಾದ್ಯೆನ್ನ ಮನದೊಳು ನಾಟಿ ಪರಬ್ರಹ್ಮನಹುದೊ ಜಗಜೇಟಿ ತರಳ ಮಹಿಪತಿ ಮನವಸೋಘಟಿ(?) 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರು ಹಿರಿಯರ ಸೇವಿಸಿಹರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿಕೊಳ್ಳಿರೊ ಪ ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದೆರಕ್ಕಸಾರಿಯ ಭಕ್ತರೊಳು ಸೇರಿ ನೀವು ಸೆರೆಯಿಕ್ಕದಂಥವನ ಮೊರೆ ಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆಲ್ಲತುಂಬಿರುವ ಸುಖವೆಲ್ಲ ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವನುಂಬ ಭ್ರಮರಕೆ ಸರಿಗಾಣೆನೊ 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಬಿಕ್ಕುಗಳು ಬಂದು ಬೈವಾಗಇಕ್ಕಿ ಪೊರೆವುದಕೆ ಗತಿಯಿಲ್ಲದಾ ದರಿದ್ರರಿಗೆಸೌಖ್ಯವೆತ್ತಣದೊ ಮನುಜರಿಗೆ 3 ತಾಯ ಮಾರಿ ತೊತ್ತನು ಕೊಂಬ ಪಾಮರರಂತೆಹೇಯ ಕುಜನರಾ ಚರಣಕೆರಗಿಮಾಯಾಪತಿಯಂಘ್ರಿಗಳ ನೆನೆಯಲೊಲ್ಲದ ನರನಆಯುಷ್ಯ ಬರಿದೆ ಹೋಯಿತಲ್ಲ 4 ಅಯಿವರಿತ್ತೊಡವೆಯ ಅವರವರೊಯ್ಯುವರು ಮ-ತ್ತಯಿವರೆಂಬುವರು ತೊಲಗುವರುಮೈಯ ನೆತ್ತರು ಕೂಡ ಹರಿದು ಹೋಹುದು ನಿಮ್ಮಕೈಯ ಪಿಡಿದೆತ್ತುವರ ನಾನು ಕಾಣೆ 5 ಬಲಗುಂದಿ ನೆಲ ಹಿಡಿಯೆ ರೋಗರುಜಿನಗಳೆಂಬಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖ ಗಂಟಲೊಳಗಣನಾಲಗೆಯ ನಾದ ಎಲ್ಲಿಹುದೊ 6 ಆಗಲೇ ಹರಿನಾಮ ನಾದದಿಂದೆಚ್ಚತ್ತುನಾಗಶಯನನ ಪುರದ ಪಥವಆಗಮಜ್ಞರ ಕೇಳಿ ತಿಳಿದುಕೊಳ್ಳಿರೊ ನಿಮಗೆಈ ಗಾಳಿ ದೀಪ ಸ್ಥಿರವಲ್ಲ 7 ಜರೆಯೆಂದು ಕಡೆಯಲ್ಲಿ ಗೊರಗೊರನೆ ಉಸಿರಾಡೆಶರೀರದ ಸಂಬಂಧಗಳಕಟಾತರುಣಿಯರ ಮ್ಯಾಲಾಸೆ ತಮ್ಮ ಹಿತವನರಿಯದೆಬರಿದೆ ಭವದಲ್ಲಿ ಬಳಲುವಿರಿ 8 ಸರಕು ಇಲ್ಲಮಾಧವನ ಪೂಜೆ ಒಮ್ಮೆಯೂ ಮಾಡಿಲ್ಲ ಹರಿಪಾದ ತೀರ್ಥದಾ ವ್ರತಗಳಿಲ್ಲ 9 ಊಧ್ರ್ವಪುಂಡ್ರಗಳಿಲ್ಲ ಹರಿಯ ಲಾಂಛನವಿಲ್ಲಪದ್ಮ ತುಳಸಿಯಾ ಸರಗಳಿಲ್ಲಸದ್ಧರ್ಮ ಪಥವೆತ್ತ ವಿಷಯಾಂಧ ಕೂಪದೊಳುಬಿದ್ದು ಪೊರಳುವ ಮರುಳಿದೆತ್ತ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕ ವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ11 ಸಕ್ತಿಯಿಂ ಹರಿಯ ಪೊಗಳಿ ಅಡಿಯಲುರುಳಿ ಶುಷ್ಕಭುಕ್ತಿಗಳ ಮೇಲುಗುಳಿ ದೂರ ನಿಲ್ಲಿಭಕ್ತಿ ಜ್ಞಾನಗಳಿರಲಿ ಮತ್ರ್ಯ ಪಥದಿಂ ಮರಳಿಮುಕ್ತಿ ಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆ ಕೆಡಹುವ ಮುನ್ನಕಳ್ಳರೈವರ ಕಾರಣದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭನ ಅಡಿಗೆ ಮೊರೆ ಹೋಗಿರೊ13 ಪಾದ ಸೇರಿರೋ 14 ಒಂಬತ್ತು ರಂಧ್ರಗಳ ತನುವೆಂಬ ಮನೆಯಲ್ಲಿತುಂಬಿರುವ ವಾಯು ಸ್ಥಿರವಲ್ಲನಂಬಿದರ ಪೊರೆವ ನೆಲೆಯಾದಿಕೇಶವನ ಪಾದಾಂಬುಜವನು ಸೇರಿ ಬದುಕಿರೊ 15
--------------
ಕನಕದಾಸ
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ಗುರುಗಳ ನೆರೆ ನಂಬಿರೊ ಪರಿಪಾಲಿಪ ಗುರುಗಳ ನೆರೆ ನಂಬಿರೊ ಪ ಪರಿ ಅಘದೊಳು ತೊಳಲುವ ಮನು ಜರ ಬವಣೆಗಳರಿತು ಸಜ್ಜನರ ಪಾಲಿಸುವಂಥ ಅ.ಪ ಚಿಂತೆಯೆಲ್ಲವು ನೀಗಿಸಿ ಮನಸಿಗೆ ಬಹು ಸಂತೋಷವನು ಸೂಚಿಸಿ ಪಾದ ಚಿಂತನೆ ಮಾಡುವ ಅಂತರಂಗದ ಭಕ್ತರೊಡನೆ ಮೆರೆವ ದಿವ್ಯ1 ಬೆಟ್ಟದೊಡೆಯನ ಪೂಜಿಸಿ ಭಕುತರ ಮನ ದಿಷ್ಟಗಳನು ಸಲ್ಲಿಸಿ ಸೃಷ್ಟಿಕರ್ತನ ಗುಣ ಸ್ವಚ್ಛ ತಿಳಿದು ಸರ್ವ ಕಷ್ಟಗಳ್ಹರಿಸಿ ಸಂತುಷ್ಟಿಪಡಿಸುವಂಥ 2 ಸರಿಯುಂಟೆ ಧರೆಯೊಳಗೆ ಗುರುಗಳ ಪೋಲ್ವ ನರರುಂಟೆ ಭುವಿಯೊಳಗೆ ಸಿರಿ ಉರಗಾದ್ರಿವಸ ವಿಠ್ಠಲದಾಸರ ಕೂಡಿ ವರಗಳ ಕೊಡುವಂಥ ಪರಮ ಸಾತ್ವಿಕರಾದ 3 ಪರಮ ಮಂಗಳ ಮೂರ್ತಿಯ ರೂಪವ ಹಗ ಲಿರುಳು ಧ್ಯಾನವ ಮಾಳ್ಪರ ಪರಮ ಗುರುಗಳ ಪರಮ ಪ್ರೀತಿಯ ಪಡೆದಂಥ ಉರಗಾದ್ರಿವಾಸ ವಿಠ್ಠಲದಾಸರೆಂಬಂಥ4 ಕರುಣದಿ ಸಲಹುವರು ಭಕ್ತರನೆಲ್ಲ ಕರೆದು ಬೋಧನೆ ಮಾಳ್ಪರು ವರ ಕಮಲನಾಭ ವಿಠ್ಠಲನ ಭಜಿಸುತ್ತ ಸಿರಿ ಶ್ರೀನಿವಾಸನ ನಿರುತ ಪೂಜಿಸುವಂಥ 5
--------------
ನಿಡಗುರುಕಿ ಜೀವೂಬಾಯಿ
ಗುರುಚರಣ ಪೂಜೆಯನು 'ರಚಿಸುವೆನೀಗಪರಮಾತ್ಮನೆಂದೆಂಬ ಸ್ಥಿರಮನದಿ ಬೇಗ ಪವರಮಂತ್ರರೂಪದಲಿ ಗುರು ತಾನು ದಯದಿಂದಭರದಿಂದ ಹೃದಯಮಂದಿರಕೆ ಬರಲಾಗಿಗುರುತರದಹಂಕಾರಶಯನದಿಂ ಮುರಿದೆದ್ದುಬರುವೆನಿದಿರಾಗಿ ಕರೆತರುವೆನೊಡಗೂಡಿ 1ಬ್ರಹ್ಮಕಮಲದಲೊಡೆದು ಜ್ಞಾನನಾಳದಿ ಕೂಡಿರಮ್ಯದಳವೆಂಟುಳ್ಳ ಕಮಲ ಮಧ್ಯದಲಿನಮ್ಮ ಗುರುಮೂರ್ತಿಯನು ಸಂಭ್ರಮದಿ ಕುಳ್ಳಿರಿಸಿವೊಮ್ಮನದಲಘ್ರ್ಯಾದಿಗಳನು ಭಕುತಿಯಲಿತ್ತು 2ಕರಗಳೆರಡುಳ್ಳ ಹರಿ ನಯನವೆರಡರ ಹರನುವರಮುಖ'ದೊಂದರಲಿ ವಾಗೀಶನೆನಿಸಿಪರಿಹರಿಸಿ ಗುಣಗಳನು ಪರಬ್ರಹ್ಮವಾಗಿರುವಗುರುವರನ ಮೂರ್ತಿಯನು ನೆರೆ ನೋಡಿ ಮನದೊಳಗೆ 3ಅ'ವೇಕವಂ ಪರಿದ ಗುರುಪದಕೆ ಪಾದ್ಯವನುಸು'ವೇಕವೆಂಬಘ್ರ್ಯವನು ಸ'ತ ಕೊಟ್ಟುಅ'ವೇಕದಿಂ ಬಂದ ಜೀವಭಾವವ ಬಿಡಿಸಿಕ'ವರನು ನೀನೆಂಬ ಶುದ್ಧಾಚಮನದಿಂದ 4ಪರಮಪಾವನರೂಪ ಸ್ನಾನದುಪಚಾರದಲಿಎರಡಿಲ್ಲವೆಂದೆಂಬ ಶುಭ್ರ ವಸ್ತ್ರದಲಿಬರೆದು ತಾ ಜೀವರೊಳು ಸೂತ್ರಾತ್ಮನಾದಡೆಯು ಬೆರೆಯದಿಹನೆಂತೆಂಬ ಸೂತ್ರೋಪಚಾರದಲಿ 5ಶರಣಾಗತರ ಕಾಯ್ವ ಗುಣಗಣಗಳಾಭರಣಪರಿಪರಿಯ ಕಾಮಗಳ ಹೊದ್ದದನುಲೇಪನೆರೆ ನಿವಾರಿತವಾದ ವಾಸನಾಕ್ಷಯ ಪುಷ್ಪಸರಗಳೀ ಪರಿಭಾವನೆಗಳೆಂಬ ಭಕ್ತಿಯಲಿ 6ಜಡ ದುಃಖ ಪುಸಿಗಳಿಗೆ ಬೇರೆಂಬ ಧೂಪದಲಿಎಡೆಬಿಡದ ಜ್ಯೋತಿಃಸ್ವರೂಪ ದೀಪದಲಿಬಿಡದ ಸುಖದನುಭವದ ದಿವ್ಯ ನೈವೇದ್ಯದಲಿಜಡಕೆ ಮಂಗಳ'ತ್ತ ಬಗೆಯ ತಾಂಬೂಲದಲಿ 7ನಿತ್ಯ ಪ್ರಕಾಶದಲಿ ಪೊಳೆವ ಮಂಗಳ ದೀಪಸತ್ಯದಾಧಾರದಲಿ ಸುಳಿವ ಕರಣಗಳಮತ್ತೆ ಸತ್ಯದೊಳಿರಿಸುತಿಹ ಮಂತ್ರಪುಷ್ಪದಲಿಸುತ್ತುವರಿದಿಹ ವಸ್ತುವೆಂದು ಬಲವಂದು 8ಘನ ಮ'ಮನಂಘ್ರಿಯಲಿ ತನು ಮನಾದಿಗಳನ್ನುನಿನಗೆ ಸಂದುದೆನುತ್ತಲಿತ್ತು ನ'ುಸುತ್ತಾಕನಕಮಯವಾದ ಶ್ರೀ ತಿರುಪತಿಯ ವೆಂಕಟನತನುರೂಪ ನೀಲಕಂಠಾರ್ಯರನು ಬಿಡದೆ 9ಓಂ ಸನಾತನಾಯ ನಮಃ
--------------
ತಿಮ್ಮಪ್ಪದಾಸರು
ಗುರುನಾಮ ಸ್ಮರಿಸಿರೊ ಶ್ರೀಗುರುನಾಮ ಸುರುಮುನಿಜರ ಪ್ರಿಯವಾದ ನಾಮ ದ್ರುವ ಬ್ರಹ್ಮ ವಿಷ್ಣುರುದ್ರರಿಗಿದೆ ನಿಜನಾಮ ಪ್ರೇಮದಿಂದ ಸ್ಮರಿಸುವರು ಇದೆ ನಾಮ ಸಮಸ್ತ ಲೋಕಕ್ಕೆ ಸಾರವಾದ ನಾಮ ನೇಮದಿಂದ ತಾರಿಸುವ ದಿವ್ಯನಾಮ 1 ಸಕಲಾಗಮ ಪೂಜಿತರಿದೆ ನಾಮ ಏಕೋಮಯವಾಗಿ ದೋರುವದಿದೆನಾಮ ಶುಕವಾಮ ದೇವರಿಗಿದೆ ನಿಜ ನಾಮ ಸುಖ ಸರ್ವರಿಗೆ ದೋರುವ ಗುರುನಾಮ 2 ಕರ್ಮಬಂಧನ ಛೇದಿಸುವದಿದೆ ನಾಮ ಕರ್ಮದೋರಿ ಕೊಡುವದೀ ಗುರುನಾಮ ಬ್ರಹ್ಮಾನಂದ ಸುಖದೊರುವಾನಂದ ನಾಮ ಧರ್ಮ ಜಾಗಿಸಿಕೊಡುವದೀ ಗುರುನಾಮ 3 ಅಜಮಿಳಗೆ ತಾರಿಸಿದಿದೇ ನಾಮ ಗಜಭಯ ಪರಿಹರಿಸಿದಿದೆ ನಾಮ ಸುಜನರಿಗೆ ಸುಪ್ರಸನ್ನವಾದ ನಾಮ ಮೂಜಗಕೆ ತಾಮುಖ್ಯವಾದ ಗುರುನಾಮ 4 ಅಹಲ್ಯ ಉದ್ಧರಣ ಮಾಡಿದುದಿದೆ ನಾಮ ಪ್ರಲ್ಹಾದÀನ ಪ್ರಾಣಗಾಯಿದಿದೆ ನಾಮ ಫಲುಗುಣ ತಾ ಪಕ್ಷವಾದದುದಿದೆ ನಾಮ ಒಲಿದು ಧ್ರುವಗಥಳವಿತ್ತ ಗುರುನಾಮ 5 ಅಗಣಿತ ಗುಣ ಪರಿಪೂರ್ಣವಾದ ನಾಮ ಸುಗಮ ಸುಪಥಸಾಧನ ಇದೆ ನಾಮ ಯೋಜನ ಸೇವಿಸುವ ನಿಜನಾಮ ನಿರ್ಗುಣಾನಂದವಾಗಿಹ್ಯ ಗುರುನಾಮ6 ಸೂರ್ಯಚಂದ್ರ ಸಮಸ್ತವಂದ್ಯ ಇದೆ ನಾಮ ಕಾರ್ಯಕಾರಣವಾಗಿಹ್ಯ ವಿದೆ ನಾಮ ತೂರ್ಯಾವಸ್ಥೆ ಯೊಳಗೆ ಸೂರಿಗೊಂಬು ನಾಮ ತರಳಮಹಿಪತಿ ತಾರಕ ಗುರುನಾಮ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುರಾಘವೇಂದ್ರ ಶರಣರ ಸುರ ತರುವೆ ಕರುಣಸಾಂದ್ರ ಪ ಧರೆಯೊಳು ನಿನ್ನ ಶ್ರೀ ಚರಣಕಮಲ ಪ್ರಭೆ ಪರಿ ಉದ್ಧರಿಸು ಈ ಶರಣನ್ನ ಅ.ಪ. ಸುಕೃತ ಸ್ವರೂಪ ದರುಶನ ಮಾತ್ರದಿ ಭವ ಶ್ರಮ ಹರಿಸುವ ಪ್ರತಾಪ ರಮೆ ಅರಸನ ಗುಣ ಸಮುದಾಯದೊಳು ಮಗ್ನ ಭ್ರಮೆರಹಿತ ಸ್ಥಿರಚಿತ್ತ ನಮೋ ನಮೋ ನಿನಗೆ ಅಮಿತ ಮತಿಯ ಕರುಣ ಕವಚವ ಅಮಿತಕಾಲದಿ ಕೊಟ್ಟು ಮೆರೆಯುವ ಅಮಿತ ಮಂಗಳದಾಯಿ ತತ್ವದ ಕಮಲ ವೈಭವ ಸಲಹಲೆನ್ನನು 1 ಪಾವನ ಸುಯತಿ ರನ್ನ ಲಾಲಿಸು ವಾಕು ಸಾವಧಾನದಿ ಘನ್ನ ಭವ ಭವಣೆ ದಾವಾಗ್ನಿಯೊಳು ನೊಂದೆ ಶ್ರೀ ವರನ ದಾಸ ಕಾವ ದೃಷ್ಟಿಯಲಿ ನೋಡೊ ನಿತ್ಯ ಮಂಗಳ ಭಾವರೂಪ ಗುಣತ್ರಯಗಳ ಆವ ಕಾಲಕು ಬಿಡದೆ ನೋಡುವ ಭೂವಿ ಬುಧಮಣಿ ಪಾಲಿಸೆನ್ನನು 2 ತುಂಗಾತೀರ ನಿವಾಸ ರಾಘವೇಂದ್ರ ಗುರು ತುಂಗ ಮಹಿಮ ನಿರ್ದೋಷ ಮಂಗಳಾಸಮಹರಿ ಗಂಗಾಪಿತನ ಕೂಡಿ ತುಂಗಪೂಜೆಯ ಕೊಂಡ್ವರಂಗಳ ಬೀರುವ ಪಾದ ತೀರ್ಥದಿ ಭವ ಭಂಗ ಬಗೆಯನು ಬಲ್ಲ ಮಹಾತ್ಮ ರಂಗ ಜಯೇಶವಿಠಲ ದೇವನ ಸಂಗ ನೀಡುವ ಕೃಪೆಯ ಮಾಳ್ಪ 3
--------------
ಜಯೇಶವಿಠಲ
ಗುರುರಾಯನೆ ಪಾಹಿ ಪಾಹಿ | ಕರುಣದಲಿ ಬಾರೋ ನಿ ಬೇಗನೆ ಪ ದಯಾಸಾಗರ ಭಯದೂರ ಧೀರ ಸುಯಮೀಂದ್ರಪ್ರಿಯ 1 ಮಂತ್ರಾಲಯಾ ಆಲಯಾಧ್ವಾಂತಾರಿ ತೇಜ ಶಾಂತದಿ ಶೀಲಾ2 ವರಶಾಮಸುಂದರನಂಘ್ರಿಯ ನೆರೆ ಪೂಜಿಸುವ ಶ್ರೀ ರಾಘವೇಂದ್ರ 3
--------------
ಶಾಮಸುಂದರ ವಿಠಲ