ಒಟ್ಟು 1888 ಕಡೆಗಳಲ್ಲಿ , 109 ದಾಸರು , 1339 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತತ್ವ ಚಿಂತನೆ ಮಧ್ಯಮತವೇ ದೊಡ್ಡದೆಂದು ತಿಳಿದು ಮನ ಶುದ್ಧಿಯಿಂದ ಮತವನನುಸರಿಸೋ ಪ ಶ್ರೀ ಮಧ್ವಮತದಲ್ಲಿ ಹರಿಯೇ ಸವೋತ್ತಮ ಭೇದಪಂಚ ಜಗತೆರಡು ಸತ್ಯ ಶ್ರೀ ಬ್ರಹ್ಮಾದಿಗಳೆಲ್ಲ ಹರಿಪರಿವಾರರು ತಾರತಮ್ಯವೇ ಸದಾ ಇವರಲ್ಲಿ 1 ಮುಕ್ತಿ ಎಂಬುದು ನಿಜಾನಂದದ ಅನುಭವ ಭಕ್ತಿಯೆಂಬುದೇ ದೊಡ್ಡ ಸಾಧನವು ಅಕ್ಷಾನುಮಾಗಮ ಮೂರು ಪ್ರಮಾಣ ಶ್ರೀ ಲಕ್ಷ್ಮೀಶನೇ ಸರ್ವಶ್ರುತಿವೇದ್ಯನು 2 ಸ್ವತಂತ್ರ ಪರತಂತ್ರ ಎರಡು ತತ್ವಗಳು ಸ್ವತಂತ್ರ ತತ್ವವು ಹರಿಯೊಬ್ಬನೇ ಪ ರತಂತ್ರ ಮಿಕ್ಕಿದ್ದಲ್ಲಾ ಇದಕೆ ಪ್ರಮಾಣವು `ಏಷ ಸರ್ವೇಶ್ವರ ' ವೆನ್ನುತ ಶ್ರುತಿಯು 3 ಹರಿಯೇ ಸರ್ವೋತ್ತಮ ತದನು ರಮಾದೇವಿ ವಿಧಿ ಪ್ರಾಣರಿವರಿಬ್ಬರು ತದನು ಸರಸ್ವತಿ ಭಾರತೇರಿಬ್ಬರು ಶಿವ ಶೇಷ ಗರುಡ ಶ್ರೀ ಹರಿನಾರೇರು 4 ಸೌಪರ್ಣಿ ಪಾರ್ವತಿಯರು ಸಮ ಶಕ್ರ ಕಾಮರು ಸಮ ಸ್ಮರರಮಣಿ ಗುರು ಶಚಿ ಮನು ದಕ್ಷ ಸಮರು ಆ ಮಾನವಿ ಪ್ರವಹ ಯಮೇಂದ್ವರ್ಕ ಸಮರೈವರು 5 ನಿಖಿಲ ದಿವಿಜರಲ್ಲಿ ಈ ವಿಧ ತಾರತಮ್ಯ ನಿಖಿಲ ಸುರೋತ್ತಮ ಹರಿಯೊಬ್ಬನೇ ಮಿಕ್ಕವರಲವೆಂದು ಇಂದ್ರಿಯೇಭ್ಯಃ ಪರಃ ದ್ವಾವಿಮಾ ಇತ್ಯಾದಿ ಶ್ರುತಿವಚನ 6 ಈಶ್ವರ ಜಡ ಭೇದ ಜೀವ ಜಡಕೆ ಭೇದ ಜೀವ ಜೀವಕೆ ಭೇದ ಜಡ ಜಡಕೆ ಜೀವೇಶರಿಗೆ ಭೇದ ಈಶ ಲಕ್ಷ್ಮೀ ಭೇದ ಪರತಂತ್ರ ಚಿತ್ಪರ ಜೀವ ಶಬ್ದ 7 ಬ್ರಹ್ಮವಿಚಾರ ತತ್ಜ್ಞಾನಕೆ ಸಾಧನ ಜ್ಞಾನಪ್ರಸಾದಕೆ ಇದು ಮುಕ್ತಿಗೆ ಆದ ಕಾರಣದಿಂದ ಶಮದಮಯುತನಿಗೆ ಬ್ರಹ್ಮ ಜಿಜ್ಞಾಸವು ಕರ್ತವ್ಯವು 8 ಜಿಜ್ಞಾಸ್ಯಬ್ರಹ್ಮನು ಜೀವನಲ್ಲವೊ ಜಗ ತ್ಕಾರಣತ್ವವು ಜೀವಗೆಲ್ಲಿಹುದೊ ರುದ್ರಾದಿಗಳು ಜಗತ್ಕಾರಣರಲ್ಲವೊ ಶಾಸ್ತ್ರವೇದ್ಯನೆ ಜಗತ್ಕಾರಣನು 9 ಉಪಕ್ರಮಾದಿಗಳ ವಿಚಾರ ಮಾಡಲು ಸರ್ವ ಶಾಸ್ತ್ರ ತಾತ್ಪರ್ಯಗೋಚರ ಹರಿಯೆ ಅಕ್ಷಾದ್ಯವೇದ್ಯನ ಜ್ಞೇಯನಾಗುವ ಹರ್ಯ ವಾಚ್ಯನೆಂಬುವುದದು ಸರಿಯಲ್ಲವೊ10 ಆನಂದಮಯ ಮೊದಲಾದ ವಾಚ್ಯನು ಮತ್ತೆ ಸರ್ವಗತತ್ವಾದಿ ಲಿಂಗಯುತ ದ್ಯುಭ್ವಾದಿಗಳಿಗಾಧಾರನು ಅವ್ಯಕ್ತ ಜ್ಯೋತಿರಾದಿ ಶಬ್ದ ಮುಖ್ಯಾರ್ಥನು 11 ದೋಷವರ್ಜಿತ ಹರಿ ವಿಷಯವಿರಕ್ತಿ ಭಕ್ತ್ಯು ಪಾಸನದಿಂದಲೆ ಅಪರೋಕ್ಷನೊ ಇಂತು ಪ್ರಸನ್ನನು ಮುಕ್ತಿಯನೀವನು ಎಂಬುವುದೆ ಸರ್ವ ಶಾಸ್ತ್ರಾರ್ಥವೊ 12 ವರನಾಮಗಿರಿ ನರಹರಿಯ ಪಾದಾಂಬುಜ ನಿರತ ಹೃದಯನಾಗಿ ಅನುದಿನದಿ ಧರಣಿ ಸುರನು ಇದ ಪೇಳಲು ನರಹರಿ ಚರಣಕಮಲ ಭಕ್ತಿ ಪೊಂದುವನು 13
--------------
ವಿದ್ಯಾರತ್ನಾಕರತೀರ್ಥರು
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ತಂದು ತೋರೆ ಮಂದಹಾಸನ | ಕಾಮಿನಿ | ತಂದು ತೋರೆ ಮಂದಹಾಸ | ನಂದ ಕಂದ ಶ್ರೀಮುಕುಂದ | ವಂದಿತಾಮರೇಂದ್ರ ವಂದ್ಯನ | ಕಾಮಿನಿ ಪ ಉರವನಿತ್ತಗುರುಮೊಮ್ಮನುದರಲಿ ಬಂದ ಮಾತೆ ಮಗನ | ಶರದ ಭರಕೆ ಫಣಿಲಿ ತಾಳ್ದಾನಾ | ಕಾಮಿನಿ 1 ಸರಳದಿಂದ ಪ್ರಾಣ ತೊರಿದನಾ | ಪ್ರೀತಿಯಾ | ಸರಳಕಾದು ಅಳಿದನಯ್ಯನ | ಸರಳಗದೆಯ ಕೈಯ್ಯಲಿಂದ | ಸರಳತ್ರಯನ ಕೊಲಿಸಿದಾತನ | ಕಾಮಿನಿ 2 ಶತಕಮೃಗನ ಭೋಜ್ಯವಾಹನ | ಸಖಉರಭಕಾಗಿ ನಿಲ್ಲದೇ | ಅಖಿಲದೋಳಗೆನುಸಲುತಿಹನಾ | ರಾಶಿಯ | ಪಕವನಳಿದನರಿಯಸುತನ | ರಕ್ಷಕಮಹೀಪತಿನಂದನ| ಮುಖದಿ ತನ್ನ ಚರಿತೆನುಡಿಪನ ಕಾಮಿನಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಂದೆ ಪ್ರಾಣೇಶವಿಠ್ಠಲರಾಯ ಒಲಿದು ಆ |ನಂದ ಕೊಡು ಈ ಭಕ್ತಗೆ ||ಪೊಂದಿಕೊಂಡಿಹ ನಿನ್ನನೆಂದು ನಾ ಪ್ರಾರ್ಥಿಸುವೆ ಮಂದರೋದ್ಧರ ಮುಕುಂದಾ | ನಂದಾ ಪ ವೈರಿ ನಿನ್ನವರಡಿಗೆ ನಡಿಯೆ ಪದವನುಕೂಲವಾಗಿರಲೀ ಬರಲಿ1 ಇವನ ಕವನಾ ಕೇಳಿ ಹರುಷಯುತರಾಗಿ ಸತ್ಕವಿಗಳೂ ತಲಿದೂಗಲಿ |ಪವನ ಮತದಲಿ ಪೇಳಿದಂತೆ ಅದನನುಸರಿಸಿ ಕವಿತೆಯು ಬಂದೊದಗಲಿ ||ನವರಾಗಗಳಿಂದೊಪ್ಪಿ ಲಘು ದೀರ್ಘ ಮೊದಲು ಮರ್ಮವ ತಿಳಿದು ಪೇಳುತಿರಲಿ |ಭುವನದೊಳಗುಳ್ಳ ಸುಜ್ಜನರು ಶೋಧಿಸಿ ಆಶುಕವಿಯೆಂದು ಕರೆಯುತಿರಲಿ | ಮೆರೆಯಲಿ || ಚಿರಕಾಲ ಬಾಳಿ ಬಹು ಕೀರ್ತಿಯುತನಾಗಿ ಈ ಧರಿಯೊಳಗೆ ಸುಖಿಸುತಿರಲಿಪರಮ ಭಕುತಿಯು ಪೆಚ್ಚಿ ಸೋತ್ತುಮರ ಪದಗಳಿಗೆ ಎರಗಿ ಕರುಣವ ಪಡೆಯಲಿ ||ಮರೆಯದಲೆ ಇಹಪರದಿ ಸುಖಗಳನು ಕೊಟ್ಟು ಶ್ರೀ ಹರಿಯೆ ಪೊರೆಯಂದಾಡಲಿ |ಮರುತಾಂತರ್ಯಾಮಿ ಗುರು ಪ್ರಾಣೇಶ ವಿಠಲನೆ ಶರಣ ಜನ ಕಾಮಧೇನೂ ನೀನು 3
--------------
ಗುರುಪ್ರಾಣೇಶವಿಠಲರು
ತನು ತೇರನಾಶ್ರಯಿಸುತ್ತ ನೀನುಮಾನಿಗಳಿಗಾಜ್ಞೆ | ಮಾಡಿ ನಡೆಸುತಾ ಪ ವಾಕು ಮಾನಿ | ರೋಹಿಣೀ ಶಕಾಂಕಕರ್ಣದೋಳು ತಾವು | ಪಾಶಪಾಣಿಯಾಗಿ ಅ.ಪ. ಸೂರ್ಯ ಸಂಜ್ಞೆದೇವಿಅಶ್ವಿನೇಯ ಸಮ | ಗಣಪತಾತ ಸೂತಅಶ್ವಮೊಗನು ತಾ | ಪ್ರಾಣ ನಾಮಕಾಅಶ್ವ ಐದು ಎರಡ | ಚೋದಿಸೂವ ಹರಿಯೇ 1 ಕರ್ಮಾಅನಾದಿಗನು | ಗುಣ್ಯವಾಗಿ ನೀನುಕಾರ್ಮಿಕನು ಆಗಿ | ಜೀವ ಋಣವನೂಧರ್ಮ ಮಾರ್ಗದಿಂದ | ತಿದ್ದಿ ಭೋಗವಿತ್ತುನಿರ್ಮಲನ್ನ ಗೈದು | ಪೇರ್ಮೆಯಿಂದ ಪೊರೆವೆ 2 ಕರ್ಮ ಮಾಡಿಶಾತ್ವೀಕರ ಸಹ | ಜೀವನಿಂದಲೂದೇವಗೈಸಿ ಗುರು | ಗೋವಿಂದ ವಿಠಲಶಾಶ್ವತದ ಸುಖ | ವೀವ ಕಾರುಣೀಕ 3
--------------
ಗುರುಗೋವಿಂದವಿಠಲರು
ತನ್ನೊಳು ತಿಳಿಯೊ ಪ್ರಾಣಿ ಪುಣ್ಯಸಾಧನಿ ಧ್ರುವ ತನ್ನಿಂದಲೆ ತಾ ನೋಡುವ ಖೂನ ಚೆನ್ನಾಗ್ಯದನುಭವ ಜ್ಞಾನ ಸನ್ಮತ ಸುಖದೋರುವ ಚಿದ್ಫನ ಭಿನ್ನವಿಲ್ಲದೆ ನೋಡುವದುನ್ಮನ 1 ಮೂಲವಿಡಿದು ನಿಜ ನೋಡುವದರಿಂದ ಮ್ಯಾಲೆ ದೋರುತಲದೆ ಬ್ರಹ್ಮಾನಂದ ಕೀಲು ತಿಳಿದರೆ ಸದ್ಗುರು ಕೃಪೆಯಿಂದ ಒಲಿದು ಬಾಹನು ತಾ ಮುಕುಂದ 2 ಸೆರಗವಿಡಿದು ನೋಡುಲು ಗುರುಮುಖ ಮೂರು ಲೋಕಕ ಬಲು ಪರಮ ವಿವೇಕ ತರಳ ಮಹಿಪತಿ ಆತ್ಮಾನುಭವ ಸುಖ ದೋರುತಲದೆ ತಾ ಘನ ಕೌತುಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀ ಚಪ್ಪರ ಶ್ರೀನಿವಾಸಪ. ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆ ದರ್ಪಕತಾತನೆ ತಾ ಸಜ್ಜನಪ್ರೀತಅ.ಪ. ಮಾಧವ ನಿನ್ನಯ ಮಹಿಮೆ ತಿಳಿಯದಪ- ರಾಧವ ಮಾಡಿದೆ ದಾರಿದ್ರ್ಯದ ಪಾದ ದರುಶನದ ಗಾದಿಯ ಕಾಣದಾದೆ ನಾ ದ್ರೋಹಿಯಾದೆ1 ತ್ರಾಣವಿರುವಾಗ ಕಾಣಿಕೆ ಹಾಕಿದೆ ದೀನದಾರಿದ್ರ್ಯದ ಹೊತ್ತಿನಲಿ ಮೇಣದರಿಂದಲಿ ತೆಗೆದು ತೆಗೆದು ಪಂಚ ಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ2 ಮಂದವಾರದಿಕ್ಕೊಂದೂಟವ ಸತ್ತ್ವ ದಿಂದಿರುವಾಗ ನಾ ನೇಮಗೈದೆ ಮಂದಭಾಗ್ಯ ಜ್ವರದಿಂದ ಪೀಡಿತನಾದ- ರಿಂದೆರಡೂಟವನೂ ಮಾಡಿದೆ ನಾನು3 ಶನಿವಾರಕ್ಕೊಂದಾಣೆ ಕಾಣಿಕೆ ಹಾಕುತ್ತ ಮಿನುಗುವ ಡಬ್ಬಿಯ ನಾ ಮಾಡಿದೆ ಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದ ಹಣವೆಲ್ಲ ಗುಣ ನುಂಗಿತು ಪಾದಕೆ ಗೊತ್ತು4 ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದ ದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿ ಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣ ಗುಡ್ಡೆಯ ಮೇಲಿರುವ ಮಹಾನುಭಾವ5 ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯು ಮಂಡೆಯೊಳುರಿವುದು ಖಂಡಿತದಿ ಪುಂಡರೀಕಾಕ್ಷನೆ ಕರುಣಾಮೃತರಸ ಕುಂಡದೊಳ್ ಮೀಯಿಸಯ್ಯ ವೆಂಕಟರಾಯ6 ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆ ಕೆಡುಕು ಮಾಡುವುದೇನು ಜಡಜನಾಭ ಕಡಲಶಯನ ಲಕ್ಷ್ಮೀನಾರಾಯಣ ನ- ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ7
--------------
ತುಪಾಕಿ ವೆಂಕಟರಮಣಾಚಾರ್ಯ
ತಲೆ ಬೆಳಗಾಯಿತು ತಲೆ ಬೆಳಗಾಯಿತು ಎನ್ನ ಬೆಳಗದೊಳು ಕೂಡಿ ಧ್ರುವ ಹಿಂದೆ ಗೋವಿಂದನು ಮುಂದೆ ಮುಕುಂದನು ಅಂದಿಗಿಂದಿಗೆ ಅನಿರುದ್ಧ ತಂದೆ ತಾಯಿಯ ವೃಂದಾವನ ಪತಿಯು ಮಂದರಧರ ಬಂಧು ಬಳಗ 1 ಕುಂದ ನೋಡದೆ ಸಲಹುವ ಸಂಕರುಷಣಾ ನಂದ ಮೂರುತಿ ತ್ರಿ ವಿಕ್ರಮನ ದುರಿತ ದೂರಮಾಡಿ ದಾಮೋದರ ಚಂದ ಮಾಡುವ ಜನಾರ್ದನನು 2 ಎಡಕ ಯಾದವ ನಾರಾಯಣ ಕೃಷ್ಣನು ಬಲಕ ಬಾಲಮುಕುಂದ ಎತ್ತ ನೋಡಿದರತ್ತ ಸುತ್ತ ಪುರುಷೋತ್ತಮ ಚಿತ್ತ ಮನದೊಳು ಅಚ್ಯುತನು 3 ಪ್ರಾಣಪತಿಕರಿಸಿಹ್ಯ ಪ್ರದ್ಯುಮ್ನ ಆಭಯನಿತ್ತಿಹ ಪದ್ಮನಾಭ ಮಾಧವ ಮಧುಸೂದನ ಯದು ಕುಲೋತ್ತಮ ಶ್ರೀಧರನು 4 ತುಂಬಿ ಹೃಷಿಕೇಶ ದೃಷ್ಟಿಮೂರುತಿ ನರಸಿಂಹ ದೃಷ್ಟಿಯೊಳಗೆ ಹರಿ ವಿಷ್ಣು ವಾಸುದೇವ ಸೃಷ್ಟೇಶ ಗುರು ಕೇಶವನು 5 ಲಕ್ಷ್ಮಿಯೊಳಗೆ ಗುರು ಲಕ್ಷುಮಿಕಾಂತನು ರಕ್ಷಿಸುವ ಅಭೋಕ್ಷಜನು ಉಪೇಕ್ಷವಿಲ್ಲದೆ ಹೊರೆವ ಉಪೇಂದ್ರನು ಮೂರ್ತಿ ವಾಮನನು 6 ತುಂಬಿದ ಬಳಗವು ಕಂಡ ಮೇದಿನಿಯೊಳು ಕಂದ ಮಹಿಪತಿ ಸ್ತುತಿಸಿದನು ಬಂದ ಜನ್ಮವು ಕಡೆ ಆಯಿತೆಂದು ಮನದೊಳು ತ್ರಾಹಿ ತ್ರಾಹಿ ಎಂದ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾ ಕಾಯುತಿದ್ದ ಕೃಷ್ಣನು ಗೋಪಾಲರನೂಗೋಕುಲದಲ್ಲಿ ಗೂಢನೂ ಪುೀಕುಂಭಿನಿಯೊಳಗಿರುತಿಹ ದುಷ್ಟರನೂಕುವ ಬಿಲದಲಿ ಅನುಪಮ ಧೀರಾ ಅ.ಪಅಸಿತ ಪಕ್ಷವು ಬಂದುದೂ ಮಾಸಗಳೊಳುಎಸೆವೇಕಾದಶಿಯೆಂಬುದು ಬರಲು ಅಂದುಬಸವಾಸುರಾನಾ ಬಡಿದು ತಾನಂದು ವ್ರಜದಿ ವಸುಧೇಶ ನಿದ್ದನೊಲಿದು ಅಸುರನು ಅಳಿಯಲು ಆ ವ್ರಜವುಳಿಯಲು ಹಸುಗಳು ಹೆಚ್ಚಲು ಹರಿ ತಾನಲಿಯಲು ವಸಗೆವ್ರಜದೊಳಗೆ ಬಹುಮಸಗೆ ಹೆಸರಾಗೆ 1ದ್ವಾದಶೀ ದಿವಸಾದಲ್ಲಿ ಉದಯಕಾಲವಾದುದು ''ತದಲ್ಲಿ ಶ್ರೀಕೃಷ್ಣನಿಗೆಬೋಧವಾಗಲು ಬೇಗದಲಿ ಬಾಲರು ಸಹಾ ಮಾಧವಾ ಮುದದಿಂದಲಿಕಾದಿರೆ ಗೋವ್ಗಳ ಕಾನನಮಧ್ಯದಿಕಾದಲು ಬಂದಾ ಕೇಶಿಯನುದಯದಿಕಾದಿ ಅಸುವಸಿಗಿದಿ ವೊದ'ದೀ ಈ 'ಧದಿ 2ವೃಂದಾಖ್ಯವಾದವನಾದಿ ಗೋಪಾಲಕರಾ ವೃಂದದಾ ವರಸ್ತೋಮವಾಮದಿ ನಿಂದಿದ್ದನಾಗಾಕಂದರ್ಪಕೋಟಿತೇಜದಿ ಕುಂಭಿನಿಯನ್ನು ಹೊಂದಿಸಿದನು ಹರುಷದಿ ಮಂದರಧಾರನು ಮಂಜುಳ ಮ'ಮನು ನಿಂದಿಹ ನೀರನು ನಿಜಗುಣಧಾಮನು ಅಂದು ಅಜಬಂಧು ತಾನೆಂದೂ ಅಲ್ಲಿನಿಂದು3ಘನ ನೀಲಾಳಕದ ವೃಂದ 'ುಶ್ರಿತವಾದಾಮಣಿಮಯ ಮಕುಟದಿಂದಾ ಮೂಡುವ ಕಾಂತಿಪಣೆಯಲ್ಲಿ ಮೊಳೆಯುವಂದಾ ಕಸ್ತುರಿತಿಲಕ ಗಣನೆಗೆ ಬರುವ ಛಂದಾ ಗುಣಿಸುವರಾರಿದ ಗುಣನಿಧಿಯೊಪ್ಪಿದ ಪ್ರಣತಪ್ರೇಮದ ಪದ ಮುಖ ಪದ್ಮದಗುಣನೂ ಗುರುತರನೂ 'ನಯವನೂ 'ವರಿಪನೂ 4ಸಿಂಗಾರಿಯ ಸೋಲಿಸುವಾ ಸುಭ್ರುವದಿಂದಾಮಂಗಳವಾದ ಮುಖದ ಮನ್ನಿಸುತಿಹಕಂಗಳ ಕೋಡಿವರಿವಾ ಕಟಾಕ್ಷವನ್ನೂ ಸಂಗಿಸಿದ ಸುಸ್ಮಿತವಾ ತೊಂಗುತ ತೋರಲು ತನ್ನಾಸಿಕವೂರಂಗಿಸಿ ರಾಜಿಸೆ ರದನಚ್ಛದವೂಹೊಂಗೆ ುೀರಂಗೆ ನೋಳ್ಪಂಗೆ ಭವ'ಂಗೆ 5ಕುಂಡಲಗಳ ಕಾಂತಿಯೂ ಕರ್ನಾಗಳಲ್ಲಿಮಂಡಿತವಾಗಿ ಮತ್ತೆಯೂ ಮುಕುರದಂಥಾಗಂಡ ಸ್ಥಳಗಳಲ್ಲಿಯೂ ಗೋಚರಿಸುತ ದಿಂಡಾಗಿ ತೋರೆ ದೀಪ್ತಿಯೂ ಪುಂಡರೀಕಾಕ್ಷನು ಪೊಳೆಯುತಲಿದ್ದನು'ಂಡುತ ಖಳರನು ಹೆದರುವ ಜನರನುಕಂಡೂ ಕರಕೊಂಡೂ ಕೈಕೊಂಡೂ ಹುರಿಗೊಂಡೂ6ವೇಣುವ 'ವರಿಸಲು 'ೀರನಾ ಮುದ್ದೂತಾನೊಂದು ತೇಜ ತೋರಾಲು ಅಂಗುಲೀಗಳುಅನುಕೂಲಗಳಾಗಾಲು ಉಂಗುರಗಳೊಳು ಮಾಣಿಕ್ಯಗಳು ಮೂಡಲುಭಾನುವ 'ುೀರಲು ಬಾಹುಗಳೊಪ್ಪಲುಗಾನಗಳಾಗಲು ಗೋವ್ಗಳು ಕೇಳಲುತಾನು ತೋರಿದನು ಜಾಣುವನು ಜಗಧರನೂ 7ಭೋಗಿಯ ಭೋಗದ ಹಾಗೆ ಬಾಹುಗಳಿರೆತೂಗಿ ಜಾನುಗಳ ತಾಗೆ ಕೇಯೂರಗಳರಾಗ ರಂಜಿತಗಳಾಗೆ ಕಂಕಣವಲಯ ಯೋಗದಿಂದಿರೆ 'ೀಗೆಆಗಿನ ಕಾಲದಲಮರಿದ ಶೃಂಗದುೀಗುರು ಕೃಷ್ಣನ ಇಷ್ಟ ಕೊಳಲಿನಯೋಗೀ ಇಹಭಾಗೀ ಗತರಾಗೀ ಗುರಿಯಾಗೀ8ಕಂಬುಕಂಧರದಿಂದಲೂ ಅಲ್ಲಿರುತಿಹತೊಂಬೆ ತಾರಹಾರಗಳು ಲಕ್ಷ್ಮಿಯು ತಾನುಇಂಬೀನುರದಲಿರಲು ಕೌಸ್ತುಭಕಾಂತಿ ತುಂಬಿ ನಾಭಿಯ ತಾಕಲುಅಂಬುಜ ಸಂಭವನಾಲಯ'ರಲುಜೃಂಭಿಸಿ ಮಾಲೆಯು ಜೋಲಿಡುತಿರಲೂನಂಬೀ ಬಹುತುಂಬೀ ುಹವೆಂಬೀ ಜಗದಿಂಬೀ 9ಕಟಿತಟದತಿಶಯವು ಕಾಂಚಿಯಧಾಮಾಸ್ಪುಟವಾಗಿ ಸ್ವರ್ಣವಸ್ತ್ರವು ಊರುಗಳಲ್ಲಿಗೆಘಟಿಸಿರೆ ಗೂಢವಾದವೂ ಜಾನುಗಳಿಂದ ಪಟು ಜಂಘೆ ಪುದುಗಿಹವೂಕಟಕಗಳಿಂದಲು ಕಡುಚೆಲುವೆನ್ನಲುಅಟಸುತಲಡಿಗಳು ಅತಿಮೃದುವೆನ್ನಲುದಿಟನೂ ನರನಟನೂ ಭವತಟನೂ ಪಟುತರನೂ 10ಕಮಲ ಸೋಕಲು ಕಂದುವ ಲಕ್ಷ್ಮೀಯಕರಕಮಲಕೆ ಕಾಂತಿಯನೀವ ಯೋಗಿಯ ಹೃದಯಕಮಲದಿ ಕುಳಿತಿರುವ ುೀ ದಿವ್ಯಪಾದ ಕಮಲವಕಾಣಿಸುವಾಕಮಲೆಯ ಕಾಂತನ ಕಮಲಜ ಜನಕನ ಕಮಲವ ಕಾವನ ಕಾಂತಿಯ 'ುೀರ್ವನಕ್ರಮವೂ ಕಾಮದವೂ ಶ್ರಮ ಶಮವೂ ಶೋಭನವೂ 11ಬಲಿಯ ಬಳಿಗೆ ಬಂಜವು ಭಾಗ್ಯವನಿತ್ತುಸಲ'ದ ಸೌಮ್ಯಗಳಿವು ಬ್ರಹ್ಮನು ಬಂದುತೊಳೆಯಲು ಬಂದು ತೋರುತಿದ್ದವು ಆ ಪಾದಗಳೆ ಇಳೆಯೊಳಗಿರುತಿಹವೂಕಲಿಮಲಹರಗಳು ಕಲಿಗಳ ಕಾವವುತಾಳಿದವು ನಾಗನ ತದ್ವಶವಾಗಲುಸಿಲುಕೀ ಸಿರಿತುಳುಕೀ ಅಘಕಲಕೀ ಅವು ನಿಲುಕೀ 12ಅಂಕುಶವರ'ಂದವು ಧ್ವಜವಜ್ರವಂಕೀತವಾಗಿಯಾಢ್ಯಾವು ಲಕ್ಷ್ಮಿಯ ಕುಚಕುಂಕುಮವನ್ನು ಕದ್ದವು ಭೂ'ುಗೆ ಪಾದ ಪಂಕಜಗಳು ಬಂದಾವುಕಿಂಕರರಭಿಮತ ಕಂಕೆಯನಟ್ಟುತಮಂಕುಗಳೆನಿಸುತ ಮಲೆವರ ಮುರಿಯುತಶಂಕೆ ಸಲೆ ಕೊಂಕೆ ಹೊರೆುಂಕೆ ಸಿರಿಸೋಂಕೆ13ಈ ರೀತಿಯಲಿ ಈಶನು ಇರುತಲಿರೆನಾರದ ಬಂದು ನಿಂದನು ಕಾಣುತ ಕೃಷ್ಣಕಾರುಣ್ಯ ನಿಧಿ ಕೇಳ್ದನು ಕ್ಷೇಮಗಳನು ತೋರುತ ರೂಪವ ತಾನುವಾರಿಜನೇತ್ರನು ವರದವರೇಣ್ಯನು'ುೀರದೆ ಮುನಿಯನು ಮಾತನು ನುಡಿದನುಸಿರೀ ಅನುಸಾರೀ ಬಗೆದೋರೀ ಮುರವೈರೀ 14ಅರಿತನು ಆತನನುವ ಆ ಕಂಸಗಾಗಅರು' ತೋರಿಸಿದರ್ಥವ ಅದು ತನ್ನ ಕಾರ್ಯನೆರವೇರುವತಿಶಯವ ತಾನಾಗಿ ಮುನ್ನ ಪಿರಿದಾಗಿ ಪ್ರೇರಿಸಿರುವಕರುಣಾವನಧಿಯು ಕಾರ್ಯವ ತೋರಿಯುಮುರಹರಮೂರ್ತಿಯು ಮುಂದಿರುವಲ್ಲಿಯುಅರಿತೂ ಅಲ್ಲಿಕುಳಿತೂ ಬರೆಹೊತ್ತೂ ುದಿರಿತ್ತು 15ಕಾಣುತ ಮುನಿಕೃಷ್ಣನ ಮಾನಸದಲ್ಲಿಧ್ಯಾನಿಸಿದನು ದೇವನ ತಾ ಬಂದುದನ್ನುತಾನು ತೋರಿಸಲು ತತ್ತ್ರಾಣ ಬಂದಾಗ ನ'ುಸಿ ಪ್ರಾಣೇಶಗತಿಪ್ರ'ೀಣಾಕೃಷ್ಣಾ ಕಂಸಗೆ ಹೊದ್ದುವ ರೀತಿಗೆಶ್ರೀನಿಧಿಯಾದಗೆ ಸೂಚಿಸಿ ಸ್ವಾ'ುಗೆತಾನು ಅಜಸೂನು ಅರು'ದನು ಅರಿತದನೂ 16ಮಾನುಷಮೂರ್ತಿಯಾಗಿಯೆ ಭೂ'ುಗೆ ಬಂದುಆನತರನು ಆಳಿಯೆ ಅರ್ಥವ ಸಲಿಸಿಧೇನುವಾಗಿಹೆ ಧೊರೆಯೆ ಯೆನ್ನುತ 'ೀಗೆ ಆನತನಾಗುತಲಿಯೆಮಾನಸಪುತ್ರನು ಮಾತನು ನುಡಿದನುಶ್ರೀನಿಧಿ ತಿರುಪತಿ ವೆಂಕಟರಮಣನುತಾನೂ ತಾಳಿದನೂ ಮಾನಸನೂ ಮಾಡ್ದುದನೂ 17
--------------
ತಿಮ್ಮಪ್ಪದಾಸರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ಧ್ರುವ ಬಲ್ಲೆ ಬಲ್ಲೆನೆಂಬರು ಬಲ್ಲರಿಯದಿಹದನು ಬಲ್ಲರೆ ನೀವಿನ್ನು ಹೇಳುವುದು ತಾನಾ 1 ಕಣ್ಣು ಕಾಂಬುವದೇನು ಕಣ್ಣಿನೊಳಿಹುದೇನು ಕಣ್ಣು ಕಾಂಬುವ ಗತಿ ತಿಳಿಯುವುದು ತಾನಾ 2 ಕಿವಿಯ ಕಿವಿಯೆಂಬುದೇನು ಕಿವಿಯ ಕೇಳುವುದೇನು ಕಿವಿಯ ಕೇಳುವ ಗತಿ ತಿಳಿಯುವದು ತಾನಾ 3 ಮೂಗು ಮೂಗೆಂಬುದೇನು ಮೂಗಿನೊಳಾಡುವದೇನು ಆಡುವ ಗತಿಗಳ ತಿಳಿಯುವದು ತಾನಾ 4 ಬಾಯಿ ಬಾಯೆಂಬುದೇನು ಬಾಯಿಯೊಳ ನುಡಿವದೇನು ಬಾಯಿ ನುಡಿವ ಗತಿ ತಿಳಿಯುವದು ತಾನಾ 5 ದೇಹ ದೇಹೆಂಬುದೇನು ದೇಹದೊಳಿಹುದೇನು ದೇಹದೊಳಿಹ ವಸ್ತು ತಿಳಿಯುವದು ತಾನಾ 6 ಪ್ರಾಣವೆಂಬುದೇನು ಕರಣವೆಂಬುದೇನು ತತ್ತ್ವವೆಂಬುದೇನು ತಿಳಿಯುವದು ತಾನಾ 7 ಜೀವ ಅಂಬುದೇನು ಜೀವಭಾಗಗಳೇನು ಜೀವ ಶಿವದ ಗತಿ ತಿಳಿಯುವದು ತಾನಾ 8 ಆರುವ್ಹೆಂಬುದೇನು ಮರವ್ಹುವೆಂಬುದೇನು ಇದರೊಳು ಖೂನ ಕುರುಹು ತಿಳಿಯುವುದು ತಾನಾ 9 ಕನಸುವೆಂಬುದೇನು ಕನಸು ಕಾಂಬುವದೇನು ಕನಸು ಹೇಳುವದೇನು ತಿಳಿಯುವುದು ತಾನಾ 10 ಹಗಲು ಎದ್ದಿಹದೇನು ಇರಳು ಮಲಗುವದೇನು ಇದರ ಹಗರಣವನು ತಿಳಿಯುವದು ತಾನಾ 11 ಹುಟ್ಟಿ ಬಾಳುವದೇನು ಸತ್ತು ಹೋಗುವದೇನು ಸತ್ತು ಹುಟ್ಟುವದೇನು ತಿಳಿಯುವದು ತಾನಾ 12 ಹೆಣ್ಣು ಗಂಡೆಂಬುವದೇನು ಹೆಣ್ಣು ಗಂಡು ಕೂಡುವದೇನು ಕೂಡುವದೇನೆಂದು ತಿಳಿಯುವದು ತಾನಾ 13 ಅನುಭವ ಗತಿಗಳ ತಿಳಿಯಲು ಆತ್ಮದೊಳು ತಿಳಿಯಲು ಜನ್ಮವು ಅಳಿಯುವದು ತಾನಾ 14 ಆತ್ಮ ಅನುಭವವು ತಿಳಿಯುವದು ಗುರುಕೃಪೆಯು ತಿಳಿಯಲು ಜೀವನ್ಮುಕ್ತಿಯು ತಾನಾ 15 ಮಹಿಪತೆಂಬ್ಹೆಸರನು ಕರೆದರೊ ಎಂಬುವದೇನು ಓ ಎಂಬುವದೆನಗಿನ್ನು ತಿಳಿಯಿತು ತಾನಾ 16 ಇಂತು ಪರಿಯಾಯವು ತಿಳುಹಿದ ಗುರುರಾಯ ಎನ್ನೊಳು ಭಾಸ್ಕರ ಗುರು ತಾನೆ ತಾನಾ 17
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾಳಲ್ಲಲ್ಲಲ್ಲಲ್ಯೋ ಮಾಸಾಳಲ್ಲಲ್ಲಲ್ಲಲ್ಯೋ ಪ ಹೆಚ್ಚಿದ ತಮನೆಂಬ ದನುಜ ವೇದವ ಕದ್ದುಬಚ್ಚಿಟ್ಟು ನೀರೊಳು ಮುಳುಗಿರಲುಮಚ್ಚ ರೂಪದಿಂದ ಪೋಗಿ ಅವನ ಕೊಂದಅಚ್ಯುತರಾಯನೆಂಬ ಮಾಸಾಳಮ್ಮ1 ಕೂರ್ಮ ರೂಪಿನಿಂದೆತ್ತಿದ ಗೋ-ವಿಂದನೆಂಬುವ ಮಾಸಾಳಮ್ಮ2 ವರಾಹ ರೂಪಿ ಮಾಸಾಳಮ್ಮ 3 ಲೇಸು ತಪ್ಪಿದನೆಂದು ಹಿರಣ್ಯಕ ತನಯನಘಾಸಿ ಮಾಡಲು, ಕಂಬ ಒಡೆದುದಿಸಿರೋಷದಿ ದೈತ್ಯನ ಕರುಳ ಕಿತ್ತ ನರಕೇಸರಿ ರೂಪಿನ ಮಾಸಾಳಮ್ಮ 4 ಆ ಮಹಾಸಿರಿಯ ಗರ್ವದಿ ಮುಂದರಿಯದೆಭೂಮಿಯನು ಬಲಿ ತಾನಾಳುತಿರೆನೇಮಿಸಿ ಎರಡೇ ಹೆಜ್ಜೆಯೊಳಳಕೊಂಡವಾಮನ ರೂಪಿನ ಮಾಸಾಳಮ್ಮ 5 ಕಾಮಧೇನುವಿಗಾಗಿ ಕಾರ್ತವೀರ್ಯಾರ್ಜುನಆ ಮಹಾಮುನಿಯ ಪ್ರಾಣಕೆ ಮುನಿಯೆತಾಮಸವಿಲ್ಲದೆ ಕ್ಷತ್ರಿಯರ ಸಂಹರಿಸಿದರಾಮ ಭಾರ್ಗವನೆಂಬ ಮಾಸಾಳಮ್ಮ 6 ಜನಕ ಸುತೆಯನು ಕದ್ದೊಯ್ಯಲು ಲಂಕೆಗೆಗಣಿತಾತೀತ ಶರಧಿಯ ಕಟ್ಟಿಘನ ಕೋಪದಿ ದಶಿಶಿರನ ಕತ್ತರಿಸಿದಇನಕುಲ ರಾಮನೆಂಬ ಮಾಸಾಳಮ್ಮ 7 ದೇವಕಿ ಬಸುರೊಳು ಬಂದು ಗೋಕುಲದಿಆವ ಕಾವ ಗೊಲ್ಲರ ಸಲಹಿಮಾವನ ಕೊಂದು ಮತ್ತೈವರ ಸಲಹಿದದೇವ ಕೃಷ್ಣನೆಂಬ ಮಾಸಾಳಮ್ಮ8 ಪತಿವ್ರತೆಯರ ವ್ರತವಳಿಯಬೇಕೆನುತಲಿಅತಿಶಯದಿ ತ್ರಿಪುರದ ಸ್ತ್ರೀಯರನುತ ಬೌದ್ಧ ರೂಪದಿ ಬಹು ಭಂಗಪಡಿಸಿದರತಿಪತಿಪಿತನೆಂಬ ಮಾಸಾಳಮ್ಮ 9 ಖುಲ್ಲ ಮನುಜರನು ಕೊಲ್ಲಬೇಕೆನುತಲಿಭಲ್ಲೆ ಹಿಡಿದು ತುರಗವನೇರಿಅಲ್ಲಲ್ಲೆ ಸೊಲ್ಲಡಗಿಸಿ ವಲ್ಲಭನೆನಿಸಿದಬಲ್ಲಿದ ಕಲ್ಕಿಯೆಂಬ ಮಾಸಾಳಮ್ಮ 10 ಮಂಗಳ ಮಹಿಮ ಭುಜಂಗ ಶಯನ ಕಾ-ಳಿಂಗ ಮರ್ದನ ದೇವೋತ್ತುಂಗಅಂಗಜಪಿತ ನೆಲೆಯಾದಿಕೇಶವ ಅಂತ-ರಂಗದೊಳಿರುವ ಮಾಸಾಳಮ್ಮ 11
--------------
ಕನಕದಾಸ
ತಿರುಪತಿವಿಠಲರ ಹಾಡು ದಾಸರಾಯರ ನೋಡಿದ್ಯಾ | ಶ್ರೀಶ ಪ್ರಾಣೇಶ |ದಾಸರಾಯರ ನೋಡಿದ್ಯಾ ||ದಾಸರಾಯರ ಪಾದಾಶ್ರಯವ ಮಾಡಲು |ದೋಷಗಳೋಡಿಸಿ ಶ್ರೀಶನೊಲಿಸಿ ಕೊಡುವ ಪ ಸ್ನಾನದಿ ಮಹಮಂತ್ರವ | ನಿತ್ಯದಿ ಮಾಡಿ |ಜ್ಞಾನಪೂರ್ವಕ ಜಪವು ||ದ್ಯಾನದಿ ಬಿಂಬನ ಹವಣಿ ಮನದಿಂದ |ಮೌನದಿ ಪೂಜಿಸ್ವಾನಂದದೊಳಿರುವಂಥ 1 ಸತತ ಶ್ರೀ ಹರಿಯ ನಾಮ | ಸ್ಮರಣೆಯೊಳು |ರತರಾಗಿಕೊಂಡು ಪ್ರೇಮ ||ಗತಿಗೆ ನೀನೆ ಜಗತ್ಪತಿಯೆಂದು ನಿಶ್ಚಯ |ಮತಿವುಳ್ಳ ಮಹಿಮನ ತುತಿಸುವ ಗುರುಗಳ 2 ಮೊದಲರ ಪದ್ಧತಿಯ | ತಿಳಿದು ಮಾಡೆ |ಪದುಮನಾಭನ ಸೇವೆಯು ||ಪದ ಸುಳಾದಿಗಳರ್ಥ | ಮುದದಿ ಕೇಳುತ ಜಗ |ದುದರ ತಿರುಪತಿ ವಿಠಲನ್ನೆನದು ನಲಿವ ಮುದ್ದು 3
--------------
ಶ್ರೀಶಪ್ರಾಣೇಶವಿಠಲರು
ತಿಳಿ ನೀನೆ ಪರಬ್ರಹ್ಮ ರೂಪ ಏ ಜೀವಾ ತಿಳಿ ನೀನೆ ಪ ಪ್ರಾಣಕ್ಕೂ ಪ್ರಾಣ ಇದೆ ನೋಡು ಜಾಣ ಈ ವಿಶ್ವದಲ್ಲೇಕ ತಾಣಾ ಒಳ ಹೊರಗೂ ತುಂಬಿರ್ದ ಘನವೇ ನಿರಾಕಾರ ವಿಭುವೇ ಈ ಬ್ರಹ್ಮ ತಿಳಿ ನೀನೆ 1 ಕಲ್ಪನಾ ನೀಗಿ ತಾನೊಂದೆ ಆಗಿ ಅಲ್ಪತ್ವವೆಲ್ಲವು ಪೋಗಿ ಅದೇ ನೋಡು ಸುಖರೂಪಬ್ರಹ್ಮ ಅದೇ ಪೂರ್ಣಬ್ರಹ್ಮ ಆ ಬ್ರಹ್ಮ ತಿಳಿ ನೀನೆ ಪರಬ್ರಹ್ಮರೂಪಾ 2 ಸರ್ವಾಧಾರಾ ನಭದಂತೆ ಪೂರಾ ನಿರ್ವಿಕಲ್ಪ ಸುಖಸಾರಾ ಅದೇ ನೋಡು ಘನಾನಂದರೂಪ ಶಂಕರರೂಪಈ ರೂಪಾ ತಿಳಿ ನೀನೆ ಪರಬ್ರಹ್ಮರೂಪಾ3
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿಯಿರೋ ಸಮ್ಮಿಂದ ಹೇಳುವೆ ಸುಧಾನಂದ ಪ ಉಂಬವ ತಾನಾರು ಉಣಬಲ್ಲವನಾರುಸಂಭವಿಸುವನಾರು ಸಮನಿಸಿ ಇಂಬಾಗಿಹನಾರು 1 ಕಣ್ಣಿಂದಲೆ ನೋಡಿ ನೋಡುವ ಕಣ್ಣು ಕಾಂಬುದೆ ಖೋಡಿಕಣ್ಣೊಳಗದೆ ನೋಡಿ ಕಂಡಾ ಕಣ್ಣಹುದೆಂದಾಡಿ 2 ಕಿವಿಯಿಂದಲೆ ಕೇಳಿ ಕಿವಿಯನು ಕಿವಿಯೆ ಗಯ್ಯಾಳಿಕಿವಿಯೆ ದಿವಾಳಿ ಕಿವಿಗಾ ಕಿವಿಗರಿವಹುದ್ದೇಳಿ 3 ನಾಲಗೆ ನುಡಿಯಿರಲಿ ನುಡಿವುದೆ ನಾಲಗೆ ಬರಿ ತೊಗಲುನಾಲಗೆಯೊಳಗಿರಲು ಮೂಲದ ನಾಲಗೆಯಲಿ ಬರಲು 4 ಮೂಗಿನ ಮೂಲಕ ಪ್ರಾಣ ಅರಿವಡೆ ಮೂಗು ಬಲ್ಲುದೆ ಕೋಣಮೂಗರಿದವ ಜಾಣ ಮೂಗದು ನಿರ್ವಾಣ5 ತನುವಿನ ಒಳಗಿರ್ದು ಚೇತನ ಜನಿಸುತಲಿರುತಿರ್ದುಇನಿತಾದಲಿರ್ದು ಬೆಳಗುವ ತಾನೆ ತಾನಿರ್ದು 6 ರೂಪಕೆ ವಿರಹಿತನೆ ತೋರ್ಪಾ ರೂಪವೇ ತಾನಿಹನಾಲೇಪಕೆ ದೂರಿಹನಾ ಚಿದಾನಂದಪತಿ ಗುರುವವನಾ7
--------------
ಚಿದಾನಂದ ಅವಧೂತರು