ಒಟ್ಟು 407 ಕಡೆಗಳಲ್ಲಿ , 84 ದಾಸರು , 375 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೆಟ್ಟೆನಲ್ಲೊ ಹರಿಯೆ |ಸಿಟ್ಟು ಮಾಡಿ ಎನ್ನ ಬಿಟ್ಟು ಕಳೆಯ ಬೇಡ ಪಬಂದೆನು ನಾ-ತಂದೆ-ತಾಯಿಗಳುದರದಿ |ಒಂದನೂ ಅರಿಯದೆ ಬಾಲಕತನದೊಳು ||ಮುಂದುವರಿದ ಯೌವನದೊಳು ಸತಿ-ಸುತ-|ರಂದವ ನೋಡುತ ನಿನ್ನ ನಾ ಮರೆತೆನೊ 1ಸ್ನಾನ-ಸಂಧ್ಯಾನವು ಹೀನವಾಯಿತು ಬಹು-|ಮಾನವಿಲ್ಲದೆ ಕುಲಹೀನರಾಶ್ರಯದಿಂದ ||ಙ್ಞÕನಿಗಳೊಡನಾಟವಿಲ್ಲದೆ ಮನದೊಳು |ದಾನ-ಧರ್ಮದ ಬಟ್ಟೆಯಂತೆಂದು ಮರೆತನು 2ಮೊದಲೆ ಬುದ್ದಿಯು ಹೀನ ಅದರೊಳು ವೃದ್ಧಾಪ್ಯ |ಕದನವು ದಶದಿಕ್ಕಿನುದಯದ ರಾಯರ ||ಎದೆನೀರು ಬತ್ತಿತು ಅದರಿಂದ ನಿನ್ನಯ |ಪದಪದ್ಮಯುಗಳದ ತುದಿಯ ನಾ ಮರೆತೆನು 3ಮೂಢನಾದೆನು ನಿನ್ನ ಬೇಡಿಕೊಳ್ಳದೆ ನಾನು |ಕಾಡೊಳಗಾಡುವ ಮೃಗದಂತೆ ಜೀವಿಸಿ ||ಗೂಡೊಳಗಿರುತಿಹ ಗೂಬೆಯ ತೆರನಂತೆ |ಮಾಡದೆ ನಿನ್ನಯ ಸ್ಮರಣೆಯ ಮರೆತೆನು 4ಬುದ್ದಿಹೀನನು ನಾನು ಉದ್ದರಿಸೆಲೊ ದೇವಮುದ್ದು ಶ್ರೀಪುರಂದರವಿಠಲನೆನ್ನ ||ಬುದ್ದಿಯೊಳಡಗಿಯೆ ತಿದ್ದಿಟ್ಟು ನಡೆಸಯ್ಯ |ಪೊದ್ದುವೆ ನಿನ್ನಯ ಚರಣಾರವಿಂದವ 5
--------------
ಪುರಂದರದಾಸರು
ಕೇಶವನೊಲುಮೆಯು ಆಗುವ ತನಕ ಹರಿದಾಸರೊಳಿರು ಮನವೆಕ್ಲೇಶ ಪಾಶಗಳ ಹರಿದು ವಿಳಾಸದಿ ದಾಸರ ನುತಿಗಳ ಪೊಗಳುತ ಮನದೊಳು ಪ.ಮೋಸದಿ ಜೀವಿಯಘಾಸಿ ಮಾಡಿದ ಫಲಕಾಶಿಗೆ ಹೋದರೆ ಹೋದೀತೆದಾಸರ ಕರೆ ತಂದು ಕಾಸು ಕೊಟ್ಟ ಫಲ ಲೇಸಾಗದೆ ಸಸಿನಿದ್ದೀತೆಭಾಷೆಯ ಕೊಟ್ಟು (ನಿ) ರಾಸೆಯ ಮಾಡಿದಫಲ ಮೋಸವು ಮಾಡದೆ ಬಿಟ್ಟೀತೆಶಶಿವದನೆಯ ಅಧರಾಮೃತ ಸೇವಿಸಿ ಸುಧೆಯೆಂದಡೆ ನಿಜವಾದೀತೆ 1ಕನಕದ ಪಾತ್ರದ ಘನತೆಯ ಪ್ರಭೆಗಳು ಶುನಕನಮನಸಿಗೆ ಸೊಗಸೀತೆಹೀನ ಮನುಜನಿಗೆ ಜಾÕನವ ಭೋಧಿಸೆ ಹೀನ ವಿಷಯಗಳು ಹೋದಿತೇಮಾನಿನಿ ಮನಸು ನಿಧಾನವು ಇಲ್ಲದಿರೆಮಾನಭಿಮಾನ ಉಳಿದೀತೆಭಾನುವಿಕಾಸನ ಭಜನೆಯ ಮಾಡದ ದೀನಗೆ ಮುಕುತಿಯು ದೊರಕೀತೆ 2ಸತ್ಯದ ಧರ್ಮವ ನಿತ್ಯವು ಭೋಧಿಸೆ ತೊತ್ತಿನ ಮನಸಿಗೆ ಸೊಗಸೀತೆತತ್ವದ ಅರ್ಥ ವಿಚಿತ್ರದಿ ಪೇಳಲು ಕತ್ತೆಯ ಮನಸಿಗೆ ತಿಳಿದೀತೆಪುತ್ಥಳಿ ಬೊಂಬೆಯ ಚಿತ್ರದಿ ಬರೆದಿರೆ ಮುತ್ತುಕೊಟ್ಟರೆ ಮಾತಾಡೀತೆಕತ್ತುರಿ ತಿಲಕವನೊತ್ತಿ ಫಣೆಯೊಳಿಡೆ ಅರ್ತಿಯುತೋರದೆ ಇದ್ದೀತೆ 3ನ್ಯಾಯವ ಬಿಟ್ಟು ಅನ್ಯಾಯ ಪೇಳುವ ನಾಯಿಗೆ ನರಕವು ತಪ್ಪೀತೆತಾಯಿ ತಂದೆಗಳ ನೋಯಿಸಿದ ಅನ್ಯಾಯಿಗೆ ಮುಕ್ತಿಯು ದೊರಕೀತೆಬಾಯಿ ಕೊಬ್ಬಿನಿಂದ ಬೈಯುವ ಮನುಜಗೆ ಘಾಯವುಆಗದೆ ಬಿಟ್ಟೀತೆಮಾಯಾವಾದಗಳ ಕಲಿತಾ ಮನುಜಗೆ ಕಾಯಕಷ್ಟ ಬರದಿದ್ದೀತೆ 4ಸಾಧು ಸಜ್ಜನರನು ಬಾಧಿಸಿದಾ ಪರವಾದಿಗೆ ದೋಷವು ತಪ್ಪೀತೆಬಾಧಿಸಿ ಬಡವರ ಅರ್ಥವ ಒಯ್ವವಗೆ ವ್ಯಾಧಿ ರೋಗಗಳು ಬಿಟ್ಟೀತೆಬದ್ದ ಮನುಜ ಬಹು ಕ್ಷುದ್ರವ ಕಲಿತರೆಬುದ್ದಿ ಹೀನನೆಂಬುದು ಹೋದೀತೆಕದ್ದು ಒಡಲ ತಾ ಪೊರೆವನ ಮನೆಯೊಳಗೆಇದ್ದುದು ಹೋಗದೆ ಇದ್ದೀತೆ 5ಅಂಗದ ವಿಷಯಂಗಳನು ತೊರೆದಾತಗೆ ಅಂಗನೆಯರಬಗೆ ಸೊಗಸೀತೆಸಂಗ ಸುಖಂಗಳು ಹಿಂಗಿದ ಮನುಜಗೆ ಶೃಂಗಾರದ ಬಗೆ ಸೊಗಸೀತೆಇಂಗಿತವರಿಯುವ ಸಂಗ ಶರೀರ ವಜ್ರಾಂಗಿಯಾಗದೆ ಇದ್ದೀತೆಮಂಗಳ ಮಹಿಮನ ಅಂಘ್ರಿಯ ಕಾಣದ ಭಂಗಗೆ ಮುಕ್ತಿಯು ದೊರಕೀತೆ 6ಕರುಣಾಮೃತದಾ ಚರಣವ ಧರಿಸಿದ ಪರಮಗೆ ಸರಳಿ ಬಂದೀತೆಕರಣ ಪಾಶದುರವಣೆ ತೊರೆವಾತಗೆ ಶರಣರ ಪದ್ಧತಿ ತಪ್ಪೀತೆಆರುಶಾಸ್ತ್ರವನು ಮೀರಿದ ಯೋಗಿಗೆತಾರಕ ಬ್ರಹ್ಮವು ತಪ್ಪೀತೆವರದ ಪುರಂದರವಿಠಲನ ಚರಣಸ್ಮರಿಸುವವನಿಗೆ ಸುಖ ತಪ್ಪೀತೆ * 7
--------------
ಪುರಂದರದಾಸರು
ಗುರುವಿನ ಒಲುಮೆಯು ಆಗುವ ತನಕ |ದೊರೆಯದಣ್ಣ ಮುಕುತಿ ಪ.ಪರಿಪರಿ ಶಾಸ್ತ್ರವನೇಕವನೋದಿ |ವ್ಯರ್ಥವಾಯಿತು ಭಕುತಿ ಅಪಆರು ಶಾಸ್ತ್ರಗಳನೋದಿದರೇನು |ಮೂರಾರು ಪುರಾಣವ ಮುಗಿಸಿದರೇನು ||ಸಾರಿ ಸಜ್ಜನರ ಸಂಗವ ಮಾಡದೆ |ಧೀರನಾಗಿ ತಾ ಮೆರೆದರೇನು ? 1ಕೊರಳೊಳು ಮಾಲೆಯ ಧರಿಸಿದರೇನು |ಕರದಲಿ ಜಪಮಣಿ ಎಣಿಸಿದರೇನು ||ಮರುಳನಂತೆ ತಾ ಶರೀರಕೆ ಬೂದಿಯ |ಒರಸಿಕೊಂಡು ತಾ ತಿರುಗಿದರೇನು 2ನಾರಿಯರ ಸಂಗವ ಅಳಿದರೇನು|ಶರೀರಕೆ ದುಃಖವ ಪಡಿಸಿದರೇನು|ಮಾರಯ್ಯ ಶ್ರೀ ಪುರಂದರವಿಠಲನ |ಮರೆಯದೆ ಮನದೊಳು ಬೆರೆಯುವ ತನಕ 3
--------------
ಪುರಂದರದಾಸರು
ಗುರುವೇ ಶ್ರೀ ವಸುಧೇಂದ್ರ ಕರಜಾತ ಸದ್ಗುಣಸಾಂದ್ರ |ವರದೇಂದ್ರರಾಯ ಜಿತೇಂದ್ರ | ಮರುತ ಮತಾಬ್ಧಿ ಚಂದ್ರ ||ಶರಣು ನಿನ್ನಯ ಪದಸರಸಿಜಯುಗಗಳಿಗೆ |ಎರವುಮಾಡದೆ ಕಾಯೊಪರಮದಯಾಳು ಪದಾತಾಧರಿತ್ರೀ ಸುತೀನಾಥ ಶ್ರೀರಘುಪತಿ |ದೂತ ಭುವನದೋಳ್ ಖ್ಯಾತಿಯೋ ತವ ಸತ್ಕೀರುತಿ ||ಭೂತ ಭಯ ರೋಗವಾ ತಂದಟ್ಟುವಾ |ನಾಥ ರಕ್ಷಕ ಜಲಜಾತಾಂಬಕನೇ 1ದೋಷರಹಿತ ಯನ್ನಕ್ಲೇಶಹಿಂಗಿಸೊ ಸಂ |ನ್ಯಾಸಶಿರೋಮಣಿಯೆ ಮುನ್ನಾ ಆಶೆ ಬಿಡಿಸಿ ನಿನ್ನ ||ದಾಸನೆನಿಸಿಕೋ ಉದಾಸಿಸದಲೆ ಬಹು |ಘಾಸಿಮಾಡದೆ ರವಿಭಾಸ ಗುಣಾಢ್ಯ 2ಏನಾದರೇನು ಕೀಳು ಮಾನವರಾಶ್ರಯ ಧರೆಯೊಳು |ನಾನಿಚ್ಛಿಸೆನೊ ಕೃಪಾಳುಮಾನನಿನ್ನದು ಕೇಳು ||ನೀನೆವೆ ಗತಿಯೆಂದು ಧ್ಯಾನ ಮಾಡುವರಿಗೆ |ಪ್ರಾಣೇಶ ವಿಠಲನ ಕಾಣಿಸಿಕೊಡುವಿ 3
--------------
ಪ್ರಾಣೇಶದಾಸರು
ತು0ಟನಿವನು ಕಾಣಮ್ಮ ಗೋಪಾಲನು|ಉಂಟೋ ಇಲ್ಲವೊ ಕೇಳಮ್ಮ ಪಎಂತೆರಡು ಸಾವಿರ ನಂತರ ಹೆಂಗಳತುಂಟು ಮಾಡಿ ರವಿಕೆಗಂಟು ಬಿಚ್ಚಿ ನಿಂತ ಅ.ಪಹಸಿರು ಪಟ್ಟೆಯನು ಉಟ್ಟು - ನಮ್ಮನೆ ಹೆಣ್ಣು|ಮೊಸರು ಕಡೆಯುತಿರಲು||ನಸುನಗುತಲಿ ಬಂದುಕುಸುಮಮಲ್ಲಿಗೆ ಮುಡಿಸಿ|ಬಸಿರುಮಾಡಿದನೆಂಥ ಹಸುಳನೆಗೋಪಿ||1ಮುದ್ದುನಾರಿಯರು ಕೂಡಿ-ನಮ್ಮನೆಯಲಿ|ಉದ್ದಿನ ವಡೆಯ ಮಾಡಲು||ಸದ್ದು ಮಾಡದೆ ಎಂದು ಎದ್ದೆದ್ದು ನೋಡುತ|ಇದ್ದ ವಡೆಯನೆಲ್ಲ ಕದ್ದು ಮೆದ್ದೋಡಿದ 2ಗೊಲ್ಲ ಬಾಲಕರ ಕೂಡಿ-ಮನೆಯಲಿದ್ದ |ಎಲ್ಲ ಬೆಣ್ಣೆಯ ಮೆಲ್ಲಲು ||ಗುಲ್ಲು ಮಾಡದೆ ನಾವು ಎಲ್ಲರು ಒಂದಾಗಿ |ತಳ್ಳ ಹೋದರೆ ನಮಗೆ ಬೆಲ್ಲವ ತೋರಿದ 3ಹೊತ್ತು ಮುಳುಗುವ ಸಮಯದಿ-ನಮ್ಮನೆ ಹೆಣ್ಣು |ಹತ್ತಿ ಹೊಸೆಯುತಿರಲು |ಮುತ್ತು ಹವಳ ಸರ ಕತ್ತಿಗೆ ಹಾಕಿ ಸೀರೆ |ಎತ್ತಿ ನೋಡಿದನು ತಾ ಬತ್ತಲೆ ನಿಂತ 4ತಿಲಕ ಕತ್ತುರಿಯನಿಟ್ಟು-ನಮ್ಮನೆ ಹೆಣ್ಣು |ಗಿಲುಕು ಮಂಚದಲಿರಲು ||ತಿಲಕ ತಿದ್ದುತ ಕುಚಕಲಶ ಪಿಡಿದು ತನ್ನ |ಕೆಲಸವ ತೀರಿಸಿದ ಪುರಂದರವಿಠಲ 5
--------------
ಪುರಂದರದಾಸರು
ದಾತಹರಿಯು ದಯ ಮಾಡುವನಿರಲುಸಂಸಾರದ ಸುಖಪ್ರಾಶನ ಮಾಡದೆ |ಕಂಸಾರಿಯ ಪದಪಾಂಸುಗಳ ಭಜಿಸು ||- - - - - - - - - - - -- - - - - - - - - - - -ನೀರಬೊಬ್ಬಳಿಯಂತೆ ನಿತ್ಯವಲ್ಲದ ದೇಹ |
--------------
ಪುರಂದರದಾಸರು
ದಾಸನ ಮಾಡಿಕೊ ಎನ್ನ - ದಿವ್ಯಸಾಸಿರ ನಾಮದ ವೆಂಕಟಭೂಪರನ್ನ ಪಭವಭಯ ದುಃಖವ ಬಿಡಿಸೋ- ನಿನ್ನಕರುಣವಿದ್ಯೆಯನೆನ್ನ ಅಂಗಕ್ಕೆ ತೊಡಿಸೋ ||ಆವಾಗಲೂ ನಿನ ನಾಮ ನುಡಿಸೋ - ನಿನ್ನಚರಣಕಮಲದಲ್ಲಿ ಆರಡಿಯೆನಿಸೊ1ಗಂಗೆಯ ಪಡೆದಂಥಪಾದವರಶೃಂಗಾರ ಲಕ್ಷ್ಮಿ ಸ್ಮರಿಸುವಂಥಪಾದ||ಬಂಗಾರ ರಂಜಿತಪಾದ-ಹರಿಮಂಗಳ ಸದ್ಗತಿಗೆ ಚಂದಿರನಾದ 2ಸೆರಗೊಡ್ಡಿ ನಾ ಬೇಡಿಕೊಂಬೆ - ನಿನ್ನಹರವಾಣದೆಂಜಲ ನಾನು ಉಂಡೇನೆಂದೆ ||ಬಿರುದು ನಿನ್ನದುಹುಸಿಮಾಡದೆ - ನಮ್ಮಪುರಂದರವಿಠಲ ದಯಮಾಡೊ ತಂದೆ3
--------------
ಪುರಂದರದಾಸರು
ದೋಷ ಎಣಿಸದೆ ಕಾಯೊ ಜೀಯಾ ಪಕಂಡ ಕಂಡವರ ಭಜಿಸೀ -ಬೇಡಿತೋಂಡವತ್ಸಲ ಕರುಣೆ ಸಲಿಸೀಪಾದಪುಂಡರೀಕ್ಯನ್ನೊಳಗೆ ಇರಿಸಿಕಾಯೋ 1ಮಾqಬಾರದ ಕೃತ್ಯವಾ - ನಾ ಬಲುಮಾಡಿದೆಗೃಹಕೃತ್ಯವಾಬೇಡದಕಿ ಭೃತ್ಯತ್ವವಾ - ಈ ದೋಷನೋಡದಲೆ ಭಕ್ತತ್ವವಾ ನೀಡೊ 2ದೀನ ಜನಪಾಲ ನಿನ್ನಾ-ರೂಪಧ್ಯಾನ ಮಾಡಿದೆ ಬಿಡದೆ ಘನ್ನಾ-ಗತಿಎನು ಪೇಳಯ್ಯಾ ಎನಗೆ ಮುನ್ನಾ ಸ್ವಾಮಿ 3ಗುರುರಾಘವೇಂದ್ರರಾಯ - ಎನ್ನಶರಣು ಪೊಕ್ಕೆನೊ ನಿನಗೆ ನಾನಯ್ಯಾ ಕರುಣೀ 4ಮಾತ ಪಿತ ಭ್ರಾತ್ರÀ ಬಂಧೂ - ಎನಗೆದಾತನಿನ್ನ ದೂತನೆಂದೂ- ಬಂದ-ನಾಥನನು ನೀ ಕಾಯುವುದು ಪ್ರಭುವೇ 5ಕರುಣಸಾಗರನೆ ಈಗ - ತವರೂಪಶರಣು ಪೊಕ್ಕವನ ವೇಗಾ-ಭವ-ಅರಣ ದಾಟಿಸುವಂಥ ಯೋಗಾ ಪೇಳಿ 6ಹೋಗುತಿದೆ ಹೊತ್ತು ಪದುಮಾಕ್ಷ -ಹ್ಯಾಗೆಆಗುವದೊ ನಿನ್ನಅಪರೋಕ್ಷಜಾಗುಮಾಡದೆಸಲಿಸ್ಯನ್ನಪೇಕ್ಷಾ ಸ್ವಾಮಿ7ಪಾರದೋಷಗಳನ್ನೆ ತಾಳೋಘೋರಅಙ್ಞÕನ ಕೀಳೋ- ಪರಲೋಕಸೇರಿಸೆನ್ನನು ಕೃಪಾಳೋ ಸ್ವಾಮಿ 8ಎಷ್ಟು ಪೇಳಲಿ ಎನ್ನ ತಾತಾ - ಕೃಪಾ -ದೃಷ್ಟಿಯಲಿನೋಡುನಾನಿನ್ನ ಪೋತಾಧಿಟ್ಟ ನೀಗುರುಜಗನ್ನಾಥಾ- ವಿಠಲನನಿನ್ನೊಳಗೆ ತೋರೋದಾತಾಖ್ಯಾತಾ9
--------------
ಗುರುಜಗನ್ನಾಥದಾಸರು
ನಾ ಮಾಡಿದಕರ್ಮಬಲವಂತವಾದರೆ |ನೀ ಮಾಡುವುದೇನೊ ದೇವಾ ಪಸಾಮಾನ್ಯವಲ್ಲವಿದು ಬ್ರಹ್ಮಬರೆದ ಬರೆಹ |ನೇಮದಿಂದಲಿ ಎನ್ನ ಹಣೆಯಲ್ಲಿ ಬರೆದುದಕೆ ಅ.ಪಅತಿಥಿಗಳಿಗೆ ಅನ್ನ ಕೊಟ್ಟವನಲ್ಲ -ಪರ -|ಸತಿಯರ ಸಂಗವ ಗಳಿಗೆ ಬಿಟ್ಟವನಲ್ಲ ||ಮತಿಹೀನನಾಗಿ ಮರುಳಾಗಿದ್ದೆನೋ ದೇವ |ಗತಿಯಾವುದೈ ಎನಗೆ ಗರುಡವಾಹನ ಕೃಷ್ಣ1ಅನ್ನಪಾನಂಗಳಿಗೆ ಅಗ್ರಗಣ್ಯನು ಆಗಿ |ಸ್ನಾನ ಸಂಧ್ಯಾದಿ ಕರ್ಮಂಗಳನೀಗಿ||ದಾನವಾಂತಕ ನಿನ್ನ ಧ್ಯಾನವ ಮಾಡದೆ |ಶ್ವಾನನಂತೆ ಮನೆಮನೆ ತಿರುಗುತಲಿದ್ದೆ 2ಇನ್ನಾದರು ನಿನ್ನ ದಾಸ ಸಂಗವನಿತ್ತು |ಮನ್ನಿಸಿ ದಯಮಾಡೊ ಮನ್ಮಥಜನಕ ||ಅನ್ಯರೊಬ್ಬರ ಕಾಣೆ ಆದರಿಸುವರಿಲ್ಲ |ಪನ್ನಂಗಶಯನ ಶ್ರೀಪುರಂದರವಿಠಲ 3
--------------
ಪುರಂದರದಾಸರು
ನಾರಾಯಣನೆಂಬ ನಾಮವ ನೇಮದಿ ನೆನೆಯುತಿರೆಚ್ಚರಿಕೆ |ನೀರ ಮೇಲಿನ ಗುಳ್ಳೆ ನಡೆಯೆಂಬ ಡಿಂಭವ ನಂಬದಿರೆಚ್ಚರಿಕೆ ಪ.ಪರರು ಮಾಡಿದ ಪಾತಕವ ನಾಲಿಗೆಯೊಳುಚ್ಚರಿಸದಿರೆಚ್ಚರಿಕೆಗುರು ಹಿರಿಯರ ಸೇವೆ ಮಾಡದೆ ಉದರವ ಪೊರೆಯದಿರೆಚ್ಚರಿಕೆ ||ಹರಿದಿನದುಪವಾಸ ಇರುಳ ಜಾಗರವ ನೀ ಮರೆಯದಿರೆಚ್ಚರಿಕೆನರಹರಿಯಂಘ್ರಿಯ ಸ್ಮರಿಸದೆ ನರಸ್ತುತಿ ತರವಲ್ಲ ಎಚ್ಚರಿಕೆ 1ಹೀನ ಮಾನನಿಯರ ಧ್ಯಾನಕಾನನದೊಳಿಳಿಯದಿರೆಚ್ಚರಿಕೆನಾನೆಂಬ ಅಹಂಕಾರ ಮಾಡಿ ನರಕದೊಳು ನರಳದಿರೆಚ್ಚರಿಕೆ ||ಜಾಹ್ನವಿ ಸ್ನಾನಸಂಧ್ಯಾನ ಧಾನ್ಯವ ಸುಜಾÕನ ಮುಂದೆ ಜ್ಞಾಚ್ಚರಿಕೆಜಾನಕಿರಮಣನ ಧ್ಯಾನವೆ ಧರ್ಮ ಸಂತಾನ ಮುಂದೆಚ್ಚರಿಕೆ 2ಮಡದಿ ಮಕ್ಕಳೆಂಬ ಕಡುಮೋಹಕೆ ಸಿಲುಕಿ ಕೆಡಬೇಡವೆಚ್ಚರಿಕೆನಡೆವಾಗ ನುಡಿವಾಗ ಗಿಡವೆಲ್ಲ ನೆಂಟರು ಕಡೆಗಿಲ್ಲ ಎಚ್ಚರಿಕೆ ||ಕೊಡುಗೈಯ ಮಾಡದೆ ಮಡುಗಿದ ಧನ ಸಂಗಡ ಬಾರದೆಚ್ಚರಿಕೆ |ಒಡೆಯ ಶ್ರೀ ಪುರಂದರವಿಠಲನ ನೆನೆದು ನೀ ಕಡೆ
--------------
ಪುರಂದರದಾಸರು
ನಾರಾಯಣಯೆಂದರಾಗದೇ ನಿನ್ನಘೋರದುರಿತದೂರ ಹೋಗದೇವಾರಿಜನಾಭನ ವಲಿಸದೇನರಶಾರೀರದಲಿ ಬಂದು ಫಲವೇನಿದೆ1ಸಾರಷಡ್ರಸಾನ್ನ ಭುಜಿಸುತ್ತಪರದಾರಾಂಶದಲಿ ಮನವಿರಿಸುತ್ತಾಕ್ರೂರಕೃತ್ಯವನಿತ್ಯಗೈಯ್ಯುತ್ತ ಯಮ-ನೂರಿಗೆ ಪೋಗುವದೇನು ಹಿತ2ನಡೆವಾಗ ನುಡಿವಾಗ ಕುಡಿವಾಗ ವೀಳ್ಯಮಡಿವಾಗ ಕೊಡುವಾಗ ಪಡೆವಾಗ ಜಲಜನಾಭನಎಡಬಿಡದೀಗಾ ನೆನೆಕಡೆಗೆ ನಾಲಿಗೆ ಬಿದ್ದು ನುಡಿಯಲಾಗಾ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಈಶಣತ್ರಯದಲಿ ಸಿಲುಕುತ್ತಾ ಒಂದುನಶಿಸೆ ತಾಡಕಕೃತಿಗೈಯುತ್ತಾಎಸೆವ ಮೂರು ವೈರಾಗ್ಯ ತಾಳುತ್ತಾ ಸುತ್ತುಈಶ ತ್ರಿಮೂರ್ತಿ4ಜನಿಸುತ್ತಲೇನ ತಂದಿರುವೆಯೋ ನಾಳೆತನುವನೀ ..... ಲೇನನೊಯ್ವೆನೊತನುಮಧ್ಯ ಭಾಗ್ಯದಿ ಮೆರೆವೆಯೋ ನಿನ್ನಜನುಮದ ನೆಲೆಯ ನೀನರಿವೆಯೊ5ಇಂದುಸುಕರ್ಮ ಮಾಡದೆ ನೀನು ನಾಳೆಎಂದರೆ ತನುವಿಗೆ ನಿಜವೇನುಚಂದದಿ ಸ್ಮರಿಸು ಗೋವಿಂದನು ತಾನೆಬಂದು ದಾಸರ ನೋಡಿ ಪೊರೆವಾನು6
--------------
ಗೋವಿಂದದಾಸ
ನೀನೇ ಅನಾಥ ಬಂಧು, ಕಾರುಣ್ಯಸಿಂಧುನೀನೇ ಅನಾಥ ಬಂಧು ಪಪತಿಗಳೈವರಿದ್ದರೇನು ಸತಿಯ ಸಮಯಕ್ಕೊದಗಲಿಲ್ಲ ||ಗತಿನೀನೆಂದು ಮುಕುಂದನೆ ನೆನೆದರೆಅತಿ ಚಮತ್ಕಾರದಿಂದೊದಗಿದೆ ಕೃಷ್ಣ 1ಮದಗಜವೆಲ್ಲ ಇದ್ದರೇನುಅದರ ಸಮಯಕ್ಕೊದಗಲಿಲ್ಲ ||ಮದನನಯ್ಯ ಮಧುಸೂದನನೆಂದರೆಒದಗಿದೆಯೋ ತಡಮಾಡದೆ ಕೃಷ್ಣ 2ಶಿಲೆಯಕಾಯಕುಲಕ್ಕೆ ತಂದೆಬಲಿಯೆನ್ನದೆ ಸತ್ಪದವಿಯನಿತ್ತೆ ||ಇಳೆಯೊಳು ನಿನ್ನಯ ದಾಸರ ಸಲಹುವಚೆಲುವ ಮೂರುತಿ ಶ್ರೀಪುರಂದರವಿಠಲ3
--------------
ಪುರಂದರದಾಸರು
ಪರಾಕುಮಾಡದೆಪರಾಮರಿಸಿಎನ್ನಪರಾಧಂಗಳ ಕ್ಷಮಿಸೋ ಪಧರಾರಮಣ ಫಣಿಧರಾಮರಾರ್ಚಿತಸುರಾಧಿಪತಿವಿಧಿಹರಾದಿ ವಂದಿತಅ.¥ Àನರರೊಳಗೆ ಪಾಮರನು ನಾನಿಹಪರಕೆ ಸಾಧನವರೀಯೆ ಶ್ರೀಹರಿ ||ಚರಣಕಮಲಕೆ ಶರಣುಹೊಕ್ಕೆನುಕರುಣದಿಂದ ನಿನ್ನ ಸ್ಮರಣೆಯೆನಗಿತ್ತು 1ಜಪವನರಿಯೆನು ತಪವನರಿಯೆನುಉಪವಾಸ ವ್ರತಗಳ ನಾನರಿಯೆ ||ಕೃಪಾವಲೋಕನದಿಂದ ಆ ಪಾಪಗಳನೆಲ್ಲಅಪಹತವ ಮಾಡೋ ಅಪಾರಮಹಿಮನೇ 2ಕರಿರಾಜನುದ್ಧರಿಸಿ ದ್ರೌಪದಿಯಮೊರೆಯ ಲಾಲಿಸಿ ತರುಳಗೊಲಿದು ನೀಸಿರಿರಮಣ ನಿನ್ನ ಸರಿಯಾರ ಕಾಣೆಪುರಾರಿನುತಸಿರಿಪುರಂದರವಿಠಲ3
--------------
ಪುರಂದರದಾಸರು
ಪರಾನ್ನವೇತಕೆ ಬಂತಯ್ಯ - ಎನಗೆಇಂದು |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಪರಾನ್ನವೇತಕೆ ಬಂತಯ್ಯ ? ಪ.ಪರಾನ್ನವೇತಕೆ ಬಂತು ಪರಮೇಷ್ಟಿಜನಕನ |ಪರನೆಂದು ತಿಳಿಸದೆ ಪರಗತಿ ಕೆಡಿಸುವ ಅಪಸ್ನಾನ ಮಾಡಿಕೊಂಡು - ಕುಳಿತು ಬಹು |ಮೌನದಿಂದಿರಲೀಸದು ||ಶ್ರೀನಿವಾಸನ ಧ್ಯಾನಮಾಡದೆ ಮವಿದು |ತಾನೆ ಓಡುವದು ಶ್ವಾನನೋಪಾದಿಯಲಿ 1ಜಪವ ಮಾಡುವ ಕಾಲದಿ - ಕರೆಯ ಬರೆ |ವಿಪರೀತವಾಗುವುದು ||ಸ್ವಪನದಂತೆ ಪೊಳೆದು ನನ್ನ ಮನಕೆ ಬಲು |ಸುಪಥವ ತಪ್ಪಿಸಿ ಅಪಗತಿ ಕೊಡುವಂಥ 2ಪ್ರಸ್ಥದ ಮನೆಯೊಳಗೆ - ಕರೆಯದೆ ಪೋಗಿ |ಸ್ವಸ್ಥದಿ ಕುಳಿತುಕೊಂಡು ||ವಿಸ್ತಾರವಾಗಿ ಹರಟೆಯನೆ ಬಡಿದು ಪ್ರ |ಶಸ್ತವಾಯಿತು ಎಂದು ಮುಸ್ತಕ ತಿರುವುವ 3ಯಜಮಾನನು ಮಾಡದ - ಪಾಪಂಗಳ |ವ್ರಜವು ಅನ್ನದೊಳಿರಲು ||ದ್ವಿಜರು ಭುಂಜಿಸಲಾಗಿಅವರ ಉದರದೊಳು ||ನಿಜವಾಗಿ ಸೇರುವುದು ಸುಜನರು ಲಾಲಿಸಿ 4ಮಾಡಿದ ಮಹಾಪುಣ್ಯವು - ಓದನಕಾಗಿ - |ಕಾಡಿಗೊಪ್ಪಿಸಿ ಕೊಡುತ |ರೂಢಿಗಧಿಕನಾದ ಪುರಂದರವಿಠಲನ |ಪಾಡಿ ಪೊಗಳಿ ಕೊಂಡಾಡಿಕೊಂಡಿರದಂತೆ 5
--------------
ಪುರಂದರದಾಸರು
ಪವಮಾನ ರಾಯಾ ಪಾವನ ಕಾಯಾ | ಕಾಯೋದಿವಿಷತ್ಪೂಜಿತ ಕವಿಜನ ಗೇಯ ಪಭಕ್ತವತ್ಸಲ ದೇವ ರವಿತೇಜ | ಸರ್ವೋ-ದ್ರಕ್ತ ಪ್ರಣತ ಜನ ಸುರಭೂಜ||ಶಕ್ತ ಲೋಕೈಕ ಅನಂತಜ |ಭುಕ್ತಿಮುಕ್ತಿದ ದಿತಿಜಾಹಿ ದ್ವಿಜರಾಜ1ದುರಿತಾಂಬುಧಿ ಘಾಗಜ ಕಾಳೀಶ | ಸರ್ವಸುರವಂದ್ಯ ಪದಕಂಜ ನಿರ್ದೋಷಾ ||ಪುರರಿಪುಪಿತ ಪಯೋಧರ ಭಾಸ | ಸಾರೆ-ಗರೆದು ಪೂರ್ತಿಸೊ ಯನ್ನ ಅಭಿಲಾಷಾ 2ಪೌಲಸ್ತ್ಯಾನುಜ ಮಾಠ ರಜ ರಕ್ಷ | ಶ್ರೀ ಗೋ-ಪಾಲನವನೆನೀಸುವದುಪೇಕ್ಷ ||ನೀಲೇಶ ತ(?)ಮಾಡದೆ ತಾ ರಕ್ಷ | ವಂದ್ಯಕಾಲಿಗೆರಗುವೆ ದುರ್ಜನ ಶಿಕ್ಷ3ಮಧುಸಖ ಪಾಲಾನುಜ ಪಾದಾರವಿಂದ |ಮಧುಕರ ದಂಡ ಮೇಖಲ ಧಾರ ||ವಿದುರಾಗ್ರಜ ನಂದನ ಸಂಸಾರಾರಣ್ಯ |ಸುಧನಂಜಯ ವೃಕೋದರ ಸಮೀರ4ಕುಟಿಲರಹಿತ ಋಜುಗಣಾಧೀಶ | ಶ್ರೀ ಧೂ-ರ್ಜಟಿವಂದ್ಯ ಭಕ್ತಿಯಿಂ ಪ್ರಾಣೇಶ ||ವಿಠಲನ್ನ ಭಜಿಸುತ್ತ ಸದ್ಭಾಷ್ಯವನ್ನು |ಪಠನೆ ಮಾಡಿಸೊ ದಯದಿಂದ ನಿಶಾ 5
--------------
ಪ್ರಾಣೇಶದಾಸರು