ಒಟ್ಟು 4560 ಕಡೆಗಳಲ್ಲಿ , 125 ದಾಸರು , 2918 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ಶೋಭಿಪ ನೋಡೀ ಶ್ರೀವ್ಯಾಸ ವಿಠ್ಠಲಸಂಪುಟನ ಮನೆ ಮಾಡೀ | ವಿಶ್ವಜ್ಞ ತೀರ್ಥರಶಾಂತ ಸೇವೆಯ ಗೂಡೀ | ಮೆರೆಯುತಿಹ ನೋಡಿ ಪ ಎಂತು ಶೋಭಿಪ ಕಂತುಪಿತ ಶಿರಿ | ಕಾಂತ ವಿಠ್ಠಲ ಶಾಂತಿ ಮೂರುತಿಸಂತ ಯುತಿವರ ರಂತರಂಗದಿ | ಚಿಂತಿಸುತಲೇಕಾಂತ ಪೂಜೆಗೆ ಅ.ಪ. ಶ್ರೀಮಧ್ವಮುನಿಗಳ ಕರಜ | ಶ್ರೀವಿಷ್ಣು ತೀರಥರಾ ಮಹಾಮುನಿ ಪೂಜಾ | ಗೊಂಡಿರುವ ಶ್ರೀರಾಮ ನರಹರಿ ಪೂಜಾ | ಶ್ರೀ ವ್ಯಾಸ ವಿಠ್ಠಲ ಪ್ರೇಮ ಗುರುಗಳ ಕರಜ | ಶ್ರೀವಿಶ್ವಜ್ಞ ತೀರ್ಥ ||ಪ್ರೇಮದಲಿ ಗೈವ ಸುನೇಮದಲಿ | ಸೀಮೆ ಸುಬ್ರಹ್ಮಣ್ಯದಲ್ಲಿ ಝಾವ ಝಾವಕೆ ಭಜಿಪ ಭಕ್ತರ | ಕಾಮಿತಾರ್ಥಗಳೀಯುತಿರೆ ಹರಿ 1 ವತ್ಸರ ಸುವಿಕ್ರಮದೀ | ಎರಡೊಂದು ಮಾಸದ ಸಿತ ಪಕ್ಷದಲಿ ಹರಿ ದಿನದೀ | ರವಿವಾರದೊಳು ಶ್ರೀಯತಿವರರು ಸ್ವಗೃಹದೀ | ಆಗಮಿಸಿ ಪೂಜೆಯ ಶೃತಿ ಉಕುತ ಮಾರ್ಗದೀ | ಗೈಯ್ಯೆ ಭಕುತರೂ ಕೃತಿಪತಿಯ ಚರಣಾಬ್ಜಗಳ ಸಂ | ಸ್ತುತಿಸುತ ಸುವೇದ ಘೋಷದಿ ಕೃತ ರಜತ ಪೀಠಸ್ಥ ನರಹರಿ |ಪ್ರತಿ ರಹಿತ ಮಹ ಅತುಳ ವಿಭವದಿ 2 ಪಾವನ್ನರಾದೆವು ನಾವು | ಸಂಯಮಿ ವರರ ಪಾವನ್ನ ಪದ ರಜಕಾವು | ದ್ವಾದಶಿಯ ದಿನಶ್ರೀವರನ ಮಹ ಅರ್ಚನವು ಗೈದ ವೈಭವವೂ ||ಕಾವ ಕರುಣೆಯ ಸ್ಮರಣೆ ತವಕದಿಂದಲಿ ಮಾಡ್ದತಾವಕನ ಪರಮಾಲ್ಪವೆನಿಪ | ಸೇವೆಯನೆ ಸ್ವೀಕರಿಸಿ ನರಹರಿ ದೇವ ಗುರು ಗೋವಿಂದ ವಿಠಲ | ಕಾವ ಕರುಣಾಳುಗಳ ಒಡೆಯ3
--------------
ಗುರುಗೋವಿಂದವಿಠಲರು
ಎಂತೋ ಪೂಜಿಪುದಂತರ್ಯಾಮಿಯನನಂತಾದಿರಹಿತನ ಚಿಂತಾದೂರನ ಚಿನುಮಯರೂಪನನೆಂತೋ ಧ್ಯಾನಿಪುದು ಪ ಈಶ ವೀಸ ವಾಹನಗೀಸನ ಚರಾಚರ ಮೀಸಲಿಗಳವಲ್ಲಾ ವಾಸುಕಿ ಭೋಗ ನಿವಾಸಿಗೆ ತರವಲ್ಲಾ 1 ಚರಣದಿ ಗಂಗೆಯ ಧರಿಸಿತುವಾತನ ಚರಣವ ತೊಳೆಯುವರೇ ತರಣಿಗೆ ತೇಜದ ಭರಣಿಗೆ ದೀಪದ ಸರಣಿಯ ತೋರುವರೆ 2 ವಿಗ್ರಹರಹಿತನಿಗಘ್ರ್ಯದ ಪೂಜೆಯು ದುರ್ಘಟ ಕಾರ್ಯವಲೆ ಭರ್ಗಾದ್ಯಮರರ ವರ್ಗವು ತಮ್ಮ ನಿಸರ್ಗದಿ ಕಾಣದಲೆ 3 ಕಲಶಾಂಬುಧಿಯೊಳು ನೆಲೆಸಿಹ ಮೂರ್ತಿಗೆ ಸಲಿಲ ಸ್ವರ್ಶನವೆ ಜಲರುಹ ನೇತ್ರಗೆ ಜಲರುಹಗಾತ್ರಗೆ ಜಲದಲಿ ಮಜ್ಜನವೆ 4 ಸ್ವರ್ಣಾಂಬರಗಳ ಬಣ್ಣಿಸುತುಡುವಗೆ ಬಣ್ಣದ ವಸ್ತ್ರಗಳೆ ಕೌಸ್ತುಭ ರನ್ನದ ತೊಡವಿಗೆ ಬಿನ್ನಣದೊಡವೆಗಳೆ 5 ಬಿಸಜನಾಭನಿಗೆ ಕುಸುಮಾಸ್ತ್ರನ ಮಾನಸದಿಂ ಪಡೆದವಗೆ ಮಿಸುಪ ತುಲಸಿಯಿಂದೆಸೆವಗೆ ಪೂಗಳ ವಿಸರ ಮನೋಹರವೇ 6 ಗಂಧವಾಹನ ಸುವಿಂದ ಅಸೃಜಿಸಿದ ಗಂಧವತೀತನಿಗೆ ಗಂಧಧೂಪಗಳು ಬಂಧುರಂಗಳೆ ಗಂಧರ್ವಾತನಿಗೆ 7 ವೇದಗೋಚರಿಸುವೇದಾತ್ಮಕನು ವೇದೋದ್ಧಾರಕನು ವೇದವೇಶದಿಂ ಮೋದಿಸುವನೋ ಸಮ್ಮೋದ ಪರಾತ್ಮಕನೇ 8 ಕುತ್ತಿಗೆನೆನೆಯದ ವಸ್ತು ಪರಾತ್ಪರ ಪೊಕ್ಕರೆ ಜಲವನ್ನ ನಿತ್ಯ ತೃಪ್ತನಂ ಚಿತ್ರಾನ್ನಗಳಿಂ ತೃಪ್ತಿಪುದೆಂತು ಜನಾ 9 ಮಂತ್ರ ಮೂರುತಿಗೆ ಮಂತ್ರಜ್ಞನಿಗೆ ಸ್ವತಂತ್ರವಿಹಾರನಿಗೆ ಮಂತ್ರಯಂತ್ರಗಳ ತಂತ್ರವದೆಂತೊ ಮಂತ್ರಾಧಾರನಿಗೆ 10 ಅಂತರ್ಬಹಿಯೊಳಗಂತರ ವಿಲ್ಲದನಂತರ ಗುಣಾತ್ಮಕನ ಎಂತು ಪ್ರದಕ್ಷಿಣಿಯಾಂತು ನಮಿಪೆ ಜಗದಂತರೀಕನ 11 ಸರ್ವಾಧಾರನ ಸರ್ವಶರೀರನ ಸರ್ವವ್ಯಾಪಕ ನಾ ಸರ್ವನ ನಮಿಸುವ ಗರ್ವವೆಂತುಟೊ ಶಕ್ರ ಸಮಸ್ಕøತನಾ12 ಧರೆಯೊಳು ಪುಲಿಗಿರಿವರದ ವಿಠಲನ ಚರಣವ ಭಜಿಸುವರ ನಿರುತದಿ ಪೂಜಿಪ ಹರುಷವು ಸಾಲದೆ ಹರಿ ಸರ್ವೋತ್ತಮ13
--------------
ವೆಂಕಟವರದಾರ್ಯರು
ಎಂತೋಪೂಜಿಪುದಂತರ್ಯಾಮಿಯಾ-ನಂತಾದಿರಹಿತನ ಚಿಂತಾದೂರನ ಚಿನುಮಯ ರೂಪನಾ ದೆಂತೋಧ್ಯಾನಿಪೆ ನಾ ಪ ಈಶ-ವೀಶ-ವಾಹನಗೀಸಚರಾಚರ ಮಿಸಲಿಗೊಳಗಲ್ಲಾ ವಾಸುಕಿ ಭೋಗನಿವಾಸಿಗೆ ತರವಲ್ಲಾ 1 ಚರಣದಿ ಗಂಗೆಯ ಧರಿಸುವಾತನ ಚರಣವ ತೊಳೆಯುವರೇ ತರಣಿಗೆ ತೇಜದ ಭರಣಿಗೆ ದೀಪದ ಸರಣಿಯ ತೋರುವರೆ 2 ವಿಗ್ರಹರಹಿತನಿಗಘ್ರ್ಯದ ಪೂಜೆಯು ದುರ್ಘಟ ಕಾರ್ಯವಲೆ ಭರ್ಗಾದ್ಯಮರರ ವರ್ಗವು ತಮ್ಮ ನಿಸರ್ಗದಿ ಕಾಣದಲೆ 3 ಕಲಶಾಂಬುಧಿಯೊಳು ನೆಲಸಿಹಮೂರ್ತಿಗೆ-ಸಲಿಲ ಸ್ಪರ್ಶನವೆ ಜಲರುಹನೇತ್ರಗೆ ಜಲರುಹಗಾತ್ರಗೆ ಜಲದಲ್ಲಿ ಮಜ್ಜನವೆ 4 ಸ್ವರ್ಣಾಂಬರಗಳ ಬಣ್ಣಿಸುಡುವಗೆ ಬಣ್ಣದವಸ್ತ್ರಗಳೆ ಉನ್ನತ ಕೌಸ್ತುಭರನ್ನದ ತೊಡವಿಗೆ ಬಿನ್ನಣದೊಡವೆಗಳೆ 5 ಬಿಸಜನಾಭನಿಗೆ ಕುಸುಮಾಸ್ತ್ರನ ಮಾನಸದಿಂಪಡೆದವಗೆ ಮಿಸುಪ ತುಲಸಿಯಿಂದೆಸವಗೆ ಪೂಗಳ ವಿಸರ ಮನೋಹರವೇ 6 ಗಂಧವಾಹನ ಸುವಿಂದಲಿಸೃಜಿಸಿದ ಗಂಧವತೀಶನಿಗೆ ಗಂಧಧೂಪಗಳು ಬಂಧುರಂಗಳೆ ಗಂಧರ್ವಾನತನಿಗೆ 7 ವೇದ ಗೋಚರಿಸು ವೇದಾತ್ಮಕನು ವೇದೋದ್ಧಾರಕನು ವೇದಲೇಶದಿಂ ಮೋದಿಸುವನೋ ಸಮ್ಮೋದ ಪರಾತ್ಮಕನೆ 8 ಪೊಕ್ಕರೆ ಜಲಮಂ ಕುತ್ತಿಗೆ ನೆರೆಯದವಸ್ತು ಪರಾತ್ಪರನಾ ನಿತ್ಯತೃಪ್ತನಂ ಚಿತ್ರಾನ್ನಗಳಿಂ ತೃಪ್ತಿಪುದೆಂತುಜನಾ 9 ಮಂತ್ರ ಮೂರುತಿಗೆ ಮಂತ್ರಜ್ಞನಿಗೆ ಸ್ವತಂತ್ರವಿಹಾರನಿಗೆ ಮಂತ್ರ ಯಂತ್ರಗಳ ತಂತ್ರವದೆಂತೊ ಮಂತ್ರಾಧಾರನಿಗೆ 10 ಅಂತರ್ಬಹಿಯೊಳಗಂತರವಿಲ್ಲದ ನಂತ ಗುಣಾತ್ಮಕನಾ ಎಂತು ಪ್ರದಕ್ಷಿಣೆಯಾಂತು ನಮಿಪೆ ಜಗದಂತ ಶರೀರಕನಾ 11 ಸರ್ವಾಧಾರನ ಸರ್ವ ಶರೀರನ ಸರ್ವವ್ಯಾಪಕನಾ ಸರ್ವನ ನಮಿಸುವಗರ್ವವೆಂತುಟೊ ಶಕ್ರನಮಸ್ಕøತನಾ 12 ಧರೆಯೊಳು ಪುಲಗಿರಿವರದ ವಿಠಲನ ಚರಣವ ಭಜಿಸುವರ ನಿರುತದಿ ಪೂಜಿಪ ಹರುಷವು ಸಾಲದೆ ಹರಿದಾಸೋತ್ತಮರಾ 13
--------------
ಸರಗೂರು ವೆಂಕಟವರದಾರ್ಯರು
ಎಂಥ ದಯವಂತನೋ | ಮಂತ್ರ ಮುನಿನಾಥನೊ ಸಂತಸದಿ ತನ್ನನು | ಚಿಂತಿಪರಿಗೆ ಸುರಧೇನು ಪ ವರ ಪ್ರಹ್ಲಾದನು | ಮರಳಿ ಬಾಹ್ಲೀಕನು | ಶ್ರೀ ಗುರುವ್ಯಾಸರಾಯನೊ | ಪರಿಮಳಾಚಾರ್ಯನೊ 1 ಇರುವ ತುಂಗಾತಟದಲ್ಲಿ | ಬರುವ ತಾನು ಕರೆದಲ್ಲಿ ಕರಪಿಡಿದು ಪೊರೆವಲ್ಲಿ ಸರಿಗಾಣೆ ಧರೆಯಲ್ಲಿ 2 ದುರಿತ ಕಳೆವ ಶಕ್ತನು ತರಣಿ ನಿಭಗಾತ್ರನು | ಪರಮಸುಚರಿತ್ರನು 3 ಶಿಶುವಿಗವುಗರೆದನು | ವಸುಧಿ ಸುರರ ಪೊರೆವನು ಅಸಮ ಮಹಿಮನೊ | ಸುಶೀಲೇಂದ್ರ ವರದನೊ 4 ಭೂಮಿಯೊಳು ಖ್ಯಾತನು | ಶಾಮಸುಂದರ ಪ್ರೀತನು ಕಾಮಿತಾರ್ಥದಾತನು | ಸ್ವಾಮಿ ನಮಗೆ ಈತನು 5
--------------
ಶಾಮಸುಂದರ ವಿಠಲ
ಎಂಥ ಧರ್ಮರಾಯ ಸಂತೋಷ ಬಡಿಸುವ ಅನಂತ ಪ್ರಜರಿಗೆಲ್ಲ ಚಿಂತಾಮಣಿಯು ತಾಎಂಥ ಧರ್ಮರಾಯ ಇಂದಿವರಾಕ್ಷಿ ಪ. ಒಡಹುಟ್ಟಿದವರೆಲ್ಲ ಬಿಡದೆ ಸೇವಿಸುವರು ಕಡುಭಕ್ತಿಯಿಂದಲೆ ನಡೆನುಡಿ ಬಿಡದೆ 1 ಹರದೆಯರು ರಾಯಗೆ ಪರಿಪರಿ ಸೇವಿಸಿ ಎರಗೋರು ಕಾಲಕಾಲಕೆ ಪರಮ ಭಕ್ತಿಯಲಿ2 ಭೃತ್ಯರು ರಾಯಗೆ ಅತ್ಯಂತ ಸೇವಿಸಿ ಚಿತ್ತವ ಹಿಡಿಯಲು ಉತ್ತಮನೆಂದು 3 ದಾಸರು ರಾಯಗೆ ಸೋಸಿಲೆ ಸೇವಿಸಿಏಸೇಸು ಕಾಲಕ್ಕೆ ಈ ಸ್ವಾಮಿ ಬಯಸೋರು4 ವಿಪ್ರರು ರಾಯಗೆ ಒಪ್ಪೋದು ದೊರೆತನ ತಪ್ಪದೆ ಇರಲೆಂದು ಗೌಪ್ಯದಿ ಜಪಿಸೋರು 5 ಮಿಕ್ಕ ಜನರಿಗೆ ಸಕ್ಕರೆ ಹೇರಮ್ಮಲಕ್ಷ್ಮಿ ರಮಣಗೆ ಸಖ್ಯನು ರಾಯ 6 ಎಲ್ಲ ಜನಕೆ ರಾಯಬೆಲ್ಲದ ಹೇರಮ್ಮಚಲ್ವ ರಾಮೇಶನ ನಲಿವಿನ ಮುಂದೆ 7
--------------
ಗಲಗಲಿಅವ್ವನವರು
ಎಂಥ ಪಾಪಿ ನಾನು ಹರಿ ಹರಿ ಪ ಕರ್ಮ ತಿಂತಿಣಿಗಳ ಬಾಧೆಗಳನು | ಅಂತ್ಯಗಾಣದಾದೆನಯ್ಯ ಅ.ಪ ಪರಹಿತಾರ್ಥ ಮನದೊಳೆಣಿಸದೆ || ನರಕದುಃಖದೊಳು ಗೋಳಿಡಲು | ಬರುವರಾರು ಕಾಣದಿರಲು 1 ಪರ ಇರುತ ಮಾಯಾಬಲೆಯೊಳಗೆ ಬಿದ್ದೆ || ಕರೆದರಾರು ಬಾರದಿನಿತು | ಪರಿಯ ಭವಕಿಲ್ಬಿಷವನುಣುವ 2 ಶ್ವಾನನಂತೆ ನಾನು ತೊಳಲಿದೆ || ತಾನು ತನ್ನದೆಂದಧರ್ಮ ನಾ | ಏನನೆಂದರು ಕೇಳರಯ್ಯ 3 ಅನ್ಯರೆಂದು ಪರರ ನಿಂದಿಸಿ | ಪುಣ್ಯಹೀನನಾದೆನಯ್ಯ 4 ಸರ್ವವಿಧದಿ ಭಜಿಸಿ ನಿಜ | ಸರ್ವೇಶ ಶ್ರೀನಿವಾಸನೆನದೆ 5
--------------
ಸದಾನಂದರು
ಎಂಥ ಶೂರನೊ ರಾಮ ಎಂಥ ಧೀರನೊ ಪ ಕಂತುಹರನ ಧನುವನೆತ್ತ ಪಂಥದಿಂದ ಮುರಿದು ಬಿಸುಟ ಅ.ಪ. ಹಲವು ಶೂರರಾಜರದನು ಚಲಿಸಲಾಗದ ಧನುವ ಸುಲಭದಿಂದಲೆತ್ತಿ ಮುರಿದು ಲಲನೆ ಸೀತೆಯೊಲಿಸಿದವನು 1 ಸಕಲ ಕ್ಷತ್ರಿಯರನು ಗೆಲಿದು ಪ್ರಕಟನಾದ ಪರಶುರಾಮ ಶಕುತಿಯನ್ನು ತಾನು ಪರಮ ಯುಕುತಿಯಿಂದ ಗೆಲಿದು ಬಂದ 2 ಸಾಲು ಶಿರನ ಕೀಟವೆಂದು ಬಾಲದಲ್ಲಿ ತಂದ ವೀರ ವಾಲಿಯನೇಕ ಬಾಣದಲಿ ಲೀಲೆಯಿಂದಲಿರಿದ ಜಾಣ 3 ಹತ್ತನಾಲ್ಕು ಲೋಕಗಳನು ಸುತ್ತಿಗೆಲಿದು ಖ್ಯಾತನಾದ ಹತ್ತು ತಲೆಯ ದುಷ್ಟನನ್ನು ಕತ್ತು ಕಡಿದು ಕೆಡಹಿದವನು 4 ರಾಸಿ ದೈತ್ಯರನ್ನು ಕೊಂಡು ದೇಶವನ್ನು ಉದ್ಧರಿಸಿದ ವಾಸವಾದಿ ಸುರನುತ ರಂ- ಗೇಶವಿಠಲರೇಯನವನು 5
--------------
ರಂಗೇಶವಿಠಲದಾಸರು
ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಎಂಥಾ ದಯವಂತ ನೀತನೊ | ಭಾರತಿ ಕಾಂತಅಂತರ್ಬಹಿ ವ್ಯಾಪ್ತನೋ ಪ ಸಂತತ ಶ್ವಾಸೋಚ್ಛ್ವಾಸ | ಮಂತ್ರ ತಾ ಜಪಿಸುತ ಶಾಂತೀಶ ಪಾದದಲ್ಲಿ | ಕ್ರಾಂತನಾಗಿಹ ನೀತ ಅ.ಪ. ಸೂರ್ಯ ಕೋಟಿ ಸಂಕಾಶದಿ ಪರಿಕಿಪ 1 ಪ್ರಾಣಾ - ಅಪಾನ - ಸಮಾನ | ಮತ್ತೆರಡು | ವ್ಯಾನಾ ಉದಾನರಲ್ಲಿರುತಾ ||ಪ್ರಾಣಿಗಳೊಳಗಿದ್ದು | ಜಾಣ ತನದಿ ತಾನುನಾನಾ ಕರ್ಮವ ಮುಖ್ಯ | ಪ್ರಾಣಾ ತಾನೇವೆ ಮಾಳ್ಪ ||ಪ್ರಾಣನ ಮಹಿಮಾನಂತವೆ | ವಾಣಿ ಮುಖಾದ್ಯರು ಎಣಿಸಲಸು ಅಳವೇ ನಾನಾ ರೂಪದಿ ಶ್ರೀನಿವಾಸ ಪದಧ್ಯಾನಾರಾಧಕ ನೆನಿಸುತ ಮೆರೆವಾ 2 ಸುರರಾ ಮೊರೆಯ ಕೇಳುತ | ಪರಿಸರ | ಹರಿಯ ಮತವ ಸಾರಿದ ||ಗುರು ಗೋವಿಂದ ವಿಠಲ | ಸರ್ವಾಧಿಕನು ಎಂದುಸರ್ವ ಶಾಸ್ತ್ರವ ನಿರ್ಣ | ಯವ ಮಾಡಿದ ನೀತ ||ಸರ್ವನಾಮಾಭಿಧ | ಸರ್ವ ನಿಯಾಮಕ | ಸರ್ವ ವ್ಯಾಪ್ತಹರಿ | ಕರುಣವಿಲ್ಲದಲೆಹರಿ ಚರಣಾಂಬುಜ | ದೊರಕದೆಂದನುತಲಿಸರ್ವಾಗಮಗಳ | ಸಾರವ ನ್ವೊರೆದ 3
--------------
ಗುರುಗೋವಿಂದವಿಠಲರು
ಎಂಥಾ ನಿರ್ದಯನಾದ್ಯೋ ಎಲೆ ದೇವನೆ ಕಂತುಪಿತ ನಿನ್ನ ಅಂತ:ಕರುಣ ಎನ್ನ ಮೇಲೆ ಇಲ್ಲದೆ ಪ ಅಂತರಂಗದಿ ಮನದಿ ಅನುದಿನವು ಬಿಡದೆ ನಿಮ್ಮಾ ಚಿಂತನೆಯ ಮಾಡಿದರೆ ಚಿತ್ತಕರಗದೇಕೆ ಅಂಥ ಮಹಾದೋಷ ದತಿಶಯನಗೇನುಂಟ- ನಂತಗುಣ ಪರಿಪೂರ್ಣ ಆದಿನಾರಾಯಣ 1 ವಾಸುದೇವನೆ ನಿಮ್ಮ ವರ್ಣಿಸುವೆನು ವಸುಧಿಯೊಳು ಭೂಸುರರ ಪೋಷಿಸುವ ಪುಣ್ಯಪುರುಷಾ ಘಾಸಿಗೊಳಗಾಗಿ ನಿಮ್ಮ ಧ್ಯಾಸವೇಗತಿಯೆಂದು ಏಸೋ ಪರಿಯಲಿ ಭಜಿಸಿ ಈಶ ನಿನ್ನ ಕೃಪೆಯಾಗದೂ 2 ಸಕಲಲೋಕಾಧೀಶ ಸಕಲಭಾರಕರ್ತನಾಗಿ ಪ್ರಕಟ ಭಕುತರೊಳಗೆ ಪಾಲಿಸದೆ ಎನ್ನಾ ಮುಕುತಿದಾಯಕ ಹೆನ್ನ ವಿಠ್ಠಲ ನೀನೆ ಗೋವಿಂದ ಅಕಲಂಕ ಮಹಿಮ ನಿನ್ಹರುಷವನು ತೋರದಿನ್ನಾ 3
--------------
ಹೆನ್ನೆರಂಗದಾಸರು
ಎಂಥಾ ಬಲವಂತನೋ ಭಾರತೀಕಾಂತಾ ಎಂಥಾ ದಯವಂತನೋ ಪ ಎಂಥ ಮಹಬಲವಂತ ಬಹುಗುಣ - ವಂತ ಸರ್ವದಾನಂತಚೇತನ ರಂತರಾದೋಳ್ನಿಂತು ಪ್ರೇರಿಪ ನಂತು ಮಹಿಮೆಯ ಅಂತು ತಿಳಿಯದೊ ಅ.ಪ ವೀರರಾಘವನಂಘ್ರಿಯ ಭಜಿಸಿ ಕಪಿ - ವೀರನಾದನು ಮಹರಾಯಾ ವಾರಿಧಿಯಾಗಾಧತೋಯ ಲಂಘಿಸಿ ಲಂಕಾ ಸಾರಿ ಪೇಳಿದ ವಾರ್ತೆಯ ವೀರ ವನವನಂಗಾರಮುಖಕೆ ಇತ್ತು ವೀರಾಕ್ಷನೆನಿಪ ಕುಮಾರನ ದಂಡಿಸಿ ಸಾರಿ ಉಂಗುರವಿತ್ತು ಮತ್ತೆ ವಾರಿಧಿ ವಾನÀರೇಶನು ತೋರಿ ರಾಮನ ಪದಕೆ ನಮಿಸಿ ಚಾರು ರಾಗಟೆ ಇತ್ತ ತ್ವರದಿ 1 ತರುಳೆ ದ್ರೌಪದಿಯನ್ನು ಶರಗು ಪಿಡಿದು ಶಳದಾನು ಕರಿಯಲು ಬ್ಯಾಗ ಹರಿ ತಾನಂಬರವಿತ್ತನು ಧುರದಿ ಭೀಮನು ನಿನ್ನ ತರಿದರಕ್ತದಿ ತಾನು ಬೆರೆಸಿ ಕೇಶವ ಕಟ್ಟಿ ಕರುಳ ದಂಡೆಯನಿಟ್ಟು ಮೇರೆವೆ ಕೇಳೆಲೋ ದುರುಳನೆಂದಾ - ತರುಣಿವಚನವ ಸ್ಥಿರವ ಮಾಡಿದ ಧರಿಯತಳದಲಿ ಸರಿಯುಗಾಣೆನೊ ವgವÀೃಕೋದರ ಪರಮ ಕರುಣಿಯೆ 2 ಭೂತೇಶ ಸರ್ವೋತ್ತುಮಾನೆಂಬುವೊ ಮಹಾ - ಪಾತಕಿ ಜನಮಾತನೇಮ ಈತ ಮಾಡಿದ ನಿರ್ಧೂಮ ಹರಿಗೆ ಶಿವ ದೂತಜನರಿಗುತ್ತುಮ ಖ್ಯಾತಿ ಮಾಡಿದ ಜೀವಜಾತಿ ಪ್ರೇರಕನಾಗಿ ಶ್ವೇತವಾಹನ ದೂತನಾಗಿಹ ನಾಥ ಗುರು ಜಗನ್ನಾಥವಿಠಲ ಧಾತನಾಂಡಕೆನಾಥ, ನಿರ್ಜರÀ ನಾಥರೆಲ್ಲರೂ ದೂತರೆಂದರು 3
--------------
ಗುರುಜಗನ್ನಾಥದಾಸರು
ಎಂಥಾ ಭಾಗ್ಯವೆ ಎಂಥಾ ಪುಣ್ಯವೆ ಗೋಪಿ ಪ. ಎಂತು ಸಾಕಲಿಂಥ ದುಷ್ಟನ ಎಂತನಿಂತು ಚಿಂತೆಯಾಂತು ಅ.ಪ. ಪುಟ್ಟಿದೇಳು ದಿವಸದಲ್ಲಿ ದುಷ್ಟಪೂತನಿ ಕೊಂದ ದೇವ ದೃಷ್ಟಿವಂತನೆ ದಿಟ್ಟ ತೃಣ ಕೇಶೀಯರ ಪುಟ್ಟಕಾಲಲಿ ಶಕಟನಳಿದ ಕಟ್ಟಿ ಸಕಲ ದನುಜರನ್ನು ದೃಷ್ಟಿ ತಾಕಿತೆ ಕೃಷ್ಣಗೆನುತ 1 ವಿಪ್ರನು ನಿನ್ನ ಮನೆಗೆ ಬಂದು ಕ್ಷಿಪ್ರದಿ ಪೂಜೆ ಕೃಷ್ಣೆಗೆನಲು ಅಪ್ರಮೇಯನು ವಿಪ್ರನ ಮುಟ್ಟೆ ಕಟ್ಟಿ ಕಂಬಕೆ ಬರಲು ನಿಂದು ಕೃಷ್ಣಗರ್ಪಿಸೆ ನೈವೇದ್ಯವಾಗ ಸುಪ್ರಕಾಶದಿ ತೆಗೆದುಕೊಂಡ ಕೃಷ್ಣನನು ನೀನಪ್ಪಿ ಮುದ್ದಿಸೆ2 ಚಂದಿರನ ನೀ ತೋರು ಎನಲು ಇಂದುವದನ ಕೇಳಲಾಗ ಸುಂದರಾನನನಂದದಿ ಗೋವ ಚಂದದಿಂದ ಕಾದು ಕಾಳಿಂಗನಂದದಿ 3 ಸುರರು ಶ್ರೀ ಶ್ರೀನಿವಾಸನ ಶಿರದಿ ಪುಷ್ಪ ಮಳೆಗೆರೆಯಲು ನೆರೆದು ಗೋಪೇರ ಸೀರೆ ಸೆರಗ ಸೆಳೆದು ವರಳನೆಳೆದು ಮುರಿದು ಮರವ ಗರೆದು ಅಮೃತಸದೃಶ ವಾಣಿ ನೆರೆದು ಗೋಪಿಯರೊಡನೆ ನಾಟ್ಯಗರೆದು ರಾಸವಾಡೆ ರಂಗನಕರೆದೆರೆವೆ ಮಗುವೆನ್ನುವ 4
--------------
ಸರಸ್ವತಿ ಬಾಯಿ
ಎಂಥಾ ಮಹಿಮರು ನೋಡಿ - ಶ್ರೀ ರಾಘವೇಂದ್ರರು ಎಂಥಾ ಮಹಿಮರೋ ಪ ಕೊನೆಗಾಣೆನಿವರ ಅದಭುತ ಮಹಿಮೆಯನ್ನು ಅ.ಪ. ವರ ಮಂತ್ರಾಲಯದೊಳು ಬಂದು ನಿಂದಿಹರು 1 ನಿಮ್ಮ ಸ್ತುತಿಸಿ ಕೊಂಡಾಡುತಿಹರು 2 ಒಂದೇ ಮನದಿಂದ ಒಂದು ಪ್ರದಕ್ಷಿಣೆ ನಮಿಸಲು ಭವಬಂಧಗಳ ಬಿಡಿಸಿ ಆನಂದದಿ ಸಹಲುವರು 3 ಮೊದಲು ನಿಮ್ಮ ಸೇವಿಸೆ ಪಾವನಗೊಳುವರು4 ಪೀಡೆ ಪಿಶಾಚಿಗಳಿಂದ ಪೀಡಿತರಾಗುತ ನಿಮ್ಮಡಿಗೆರಗಲು ಕಡುದಯ ಮಾಡುವಿರಿ5 ಶ್ರೀರಾಘವೇಂದ್ರಾಯ ನಮಃ ಎಂಬ ದಿವ್ಯನಾಮವ ಪಠಿಸಲು ಪ್ರಭುಗಳು ಪಾವನ ಮಾಡುವರು 6 ಧರೆಯೊಳು ನಿಮ್ಮ ಸರಿಯಾರಿಹರೊ ಪ್ರಭು ಗುರುಸಾರ್ವಭೌಮರು | ಶ್ರೀ ರಾಘವೇಂದ್ರರು7
--------------
ರಾಧಾಬಾಯಿ
ಎಂಥಾದ್ದೊ ಹರಿಯ ಕರುಣ ಪ ಎಂಥಾದ್ದೊ ಹರಿಯ ಮಹಿಮೆಎಂಥಾದ್ದೆನ್ನ ಬಾರದು ಗಡ ಅ.ಪ ಅಂತ್ಯವಿಲ್ಲದ ನಿಜಾನಂದ ತೃಪ್ತನು ಗಡಸಂತರೊಕ್ಕುಡಿತೆಯ ಜಲಕೆ ಹಿಗ್ಗುವ ಗಡ 1 ಸನಕಾದಿ ಮುನಿಮನಕೆ ಸಿಲುಕದಗಮ್ಯನು ಗಡನೆನೆವರ ಮನದಣಿಯೆ ತನ್ನ ತೋರುವ ಗಡ2 ಶ್ರ್ರುತಿತತಿಗೆ ಮೈದೋರದತಿ ಮಹಿಮನು ಗಡಮತಿಯುಳ್ಳವನ ಭಕ್ತಿ ಸ್ತುತಿಗೆ ಹಿಗ್ಗುವ ಗಡ3 ಲೋಕ ಪತಿಗಳಿಗೆಲ್ಲ ಒಡೆಯ ತಾನೆ ಗಡಬಾಕುಳಿಕನಾಗಿ ಭಕುತರ ವಶದಲ್ಲಿಪ್ಪ ಗಡ 4 ಆರರೊಳು ಸಡ್ಡೆಯಿಲ್ಲದ ನಿಸ್ಸಂಗನು ಗಡಸಾರಿದವರಿಗೆ ತಂದೆತಾಯಿ ಸಿರಿಕೃಷ್ಣ ಗಡ 5
--------------
ವ್ಯಾಸರಾಯರು
ಎಂದಿಗಾದರು ಒಮ್ಮೆ ಕೊಡು ಕಂಡ್ಯ ಹರಿಯೆ ಪ ಬೃಂದಾವನಪತಿ ದಯದಿಂದಲೆನಗೆ ಅ ಫಲಭಾರಗಳಿಂದ ತಲೆವಾಗಿ ಶುಕಪಿಕಕಲಕಲದೊಳು ನಿನ್ನ ತುತಿಸಿ ತುಂಬೆಗಳಗಳರವದಿಂ ಪಾಡಿ ಅಪ್ಸರರಂತೆ ಪೂ-ಮಳೆಯಗರೆವ ತರುಲತೆಯ ಜನ್ಮವನು1 ಕೊಳಲ ಶೃತಿಯ ಕೇಳಿ ಸುಖದ ಸಂಭ್ರಮದಲಿಹೊಲಬು ತಪ್ಪಿ ತಾವು ಅರೆಗಣ್ಣು ಮುಚ್ಚಿನಳಿನಾಸನದಿ ಮೌನಗೊಂಡು ಪರಮ ಹಂಸಕುಲದಂತೆ ಧ್ಯಾನಿಪ ಹಂಸ ಜನ್ಮವನು 2 ಚಕೋರ ಜನ್ಮವನು3 ಭಾವಜನೈಯನ ಕಡುಚಲ್ವಿಕೆಯನ್ನುಭಾವಿಸಿ ನಿಡುಗಂಗಳಿಂದ ದಣಿದುಂಡುಗೋವಳೇರಂತೆ ಮನೆ ಮಕ್ಕಳ ಹಿಂಗಿ ನಿನ್ನ ಆವಾಗ ಈಕ್ಷಿಸುವ ಗೋವ್ಗಳ ಜನ್ಮವನ್ನು 4 ತೋಳದಂಡಿಗೆಮಾಡಿ ಹೀಲಿಯ ಚಾಮರವಮೇಲೆ ಎತ್ತಿದ ತಾವರೆ ಗೊಂಡೆಯಿಂದಓಲೈಸಿ ನಿನ್ನನು ಒಲಿಸಿ ಮುಕುತರಂತೆನಾಲೋಕ್ಯ ಸುಖವುಂಬ ಗೋಪರ ಜನ್ಮವನು5 ಕೊಳಲ ಧ್ವನಿಯ ಕೇಳಿ ಎದುರುಗೊಳ್ಳುತ ನಿನ್ನನಳಿನನಾಭಾ ಅವಧಾರೆಂದು ಪೊಗಳೇತಳಿಗೆ ಆರತಿಯೆತ್ತಿ ಲಕ್ಷ್ಮಿಯಂತೆ ನಿನ್ನಚೆಲುವ ಸವಿವಂಥ ಗೋಪೇರ ಜನ್ಮವನು 6 ಇಂದಿರೆಯರಸ ಬ್ರಹ್ಮೇಂದ್ರಾದಿ ವಂದಿತಎಂದು ಮೊಸರ ಕಡೆಯುತ್ತಲಿ ನಿನ್ನಅಂದಿನ ಶ್ರುತಿಯೋ ಉಪ್ಪವಡಿಪ ವ್ರಜ-ದಿಂದುಮುಖಿಯರ ಜನ್ಮವ ಸಿರಿಕೃಷ್ಣ7
--------------
ವ್ಯಾಸರಾಯರು