ಒಟ್ಟು 957 ಕಡೆಗಳಲ್ಲಿ , 100 ದಾಸರು , 770 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಲು ತಿಗಡೋ ಇದು ಬಲು ತಿಗಡೋ ಗಲಿಬಿಲಿ ಸಂಸಾರ ತಾರತಿಗಡೋ ಪ ತಿಳಿಯದರು ಎಲ್ಲ ಅಳಿದರೊಳಗೆ ಬಿದ್ದು ತಿಳಿದವರು ಗೆಲಿದರೀಮೊಲೆಮುಡಿಯೊ ಅ.ಪ ಅಲಕುಮಲಕು ಇದು ಬಲುತಂಟೋ ಜರ ಸಿಲುಕಲು ಬೀಳ್ವುದು ಕಗ್ಗಂಟೋ ಸೆಳೆದು ಮಾಯದಿಂ ಒಳಗೆ ಹಾಕಿಕೊಂಡ ಬಳಿಕ ಬಿಚ್ಚದಿದು ಬ್ರಹ್ಮಗಂಟೋ 1 ಎಣಿಕೆಗೆ ಮೀರಿದ ಹಳೆ ಗುದ್ದೋ ಇದು ಘನ ಘನ ಜನರನು ನುಂಗಿದ್ದೋ ಗುಣಿಸಿ ನೋಡದೆ ಮರ್ತು ಹಣಿಕಿಹಾಕಲಿದು ಕುಣಿ ಕುಣಿಸಿ ಕೊಲ್ಲುವ ಮೆಚ್ಚು ಮದ್ದೋ 2 ಆರಿಗೆ ತಿಳಿಯದು ಇದರ್ಹೊಲಬೋ ಜಗ ದ್ಹಾರಿಬಿದ್ದರಪ್ಪ ಸುತ್ತಿ ಮೆಚ್ಚೋ ಧೀರ ಶ್ರೀರಾಮನ ಚಾರುಚರಣಕ್ಕೆ ಸೇರಿದವರಿಗೊಂದೆ ಬಲು ಸುಲಭೋ 3
--------------
ರಾಮದಾಸರು
ಬಲು ಬಲು ಬೆರಗಾದ ಬಲರಾಮನು ನೋಡಿ ಹಲವು ಚಿತ್ರದ ದ್ವಾರ ವೀರ ಪ. ಕುಂದ ಮಂದಾರವು ಸುಂದರ ಉದ್ಯಾನ ಅಂದವಾಗಿ ಬೆಳೆದ ತುಳಸಿಯ ಅಂದವಾಗಿ ಬೆಳೆದ ವೃಂದಾವನ ಚಂದ ತೋರುವುದೊ ಜನಕೆಲ್ಲ1 ಕಾರಂಜಿ ಜ¯ ಹಾರಿವೆ ಗಗನಕ್ಕೆ ನೀರೆ ವರ್ಣಿಸಲು ವಶವಲ್ಲನೀರೆ ವರ್ಣಿಸಲು ವಶವಲ್ಲ ಕಲ್ಪತರು ವೀರ ಪಾಂಡವರ ವನವಿದು2 ಹಸಿರು ಪಚ್ಚದ ಕಲ್ಲು ಕುಸುರಾದ ಗಿಳಿಬೋದ ಎಸೆವೊ ಮಾಣಿಕದ ಚೌಕಟ್ಟುಎಸೆವೊ ಮಾಣಿಕದ ಕಳಸಗಳು ದೆಸೆಗೆಲ್ಲ ಬೆಳಕು ಎಸೆವೋದು 3 ಮೇಲಾದ ದ್ವಾರಕ್ಕೆ ಮ್ಯಾಲೆ ಕನ್ನಡಿಗಳು ಸಾಲು ಕಿಡಕಿಗಳು ಧ್ವಜಗಳುಸಾಲು ಕಿಡಕಿಗಳು ಒಳಗಿದ್ದಬಾಲೆರಿನೆÀ್ನಂಥ ಚಲುವರು 4 ಮುತ್ತು ಮಾಣಿಕ್ಯ ರತ್ನತೆತ್ತಿಸಿದ ಅರಮನೆಗಳುಜತ್ತು ತೋರುವ ಜನಕೆಲ್ಲಜತ್ತು ತೋರುವ ಜನಕೆಲ್ಲ ಒಳಗಿದ್ದಮಿತ್ರೇರಿನ್ನೆಂಥ ಚಲುವರು 5 ಬರಿಯ ಮಾಣಿಕದ ಗೋಡೆ ಸರಿಯಾದ ಕನ್ನಡಿಪರಿಪರಿ ರತ್ನ ಹೊಳವೋವೆಪರಿಪರಿ ರತ್ನ ಹೊಳೆವವು ಒಳಗಿದ್ದದೊರೆಗಳಿನ್ನೆಂಥ ಚಲುವರು6 ವೀರರ ಮನೆ ಮುಂದೆ ಧೀರ ರಾಮೇಶ ಇಳಿದ ನಾರಿಯರ ಸಹಿತ ಹರುಷದಿ ನಾರಿಯರ ಸಹಿತ ಹರುಷದಿ ಹೇಳಲುತೀವ್ರ ಒಬ್ಬಳನ ಕಳಿಸೆಂದ7
--------------
ಗಲಗಲಿಅವ್ವನವರು
ಬಲು ರಮ್ಯವಾಗಿದೆ ಹರಿಯ ಮಂಚ ಪ ಎಲರುಣಿಕುಲ ರಾಜ ರಾಜೇಶ್ವರನ ಮಂಚಅ.ಪ. ಪವನತನಯನ ಮಂಚ ಪಾವನತರ ಮಂಚ ಭುವನತ್ರಯನ ಪೊತ್ತ ಭಾರಿಮಂಚ ಕಿವಿಗಳಿಲ್ಲದ ಮಂಚ ಶ್ರೀನಿಕೇತನ ಮಂಚ ಶಿವರೂಪದಲಿ ಹಿಂದೆ ಹರಿಯನೊಲಿಸಿದ ಮಂಚ 1 ನೀಲಾಂಬರವನುಟ್ಟು ನಳನಳಿಸುವ ಮಂಚ ನಾಲಗೆ ಎರಡುಳ್ಳ ನೈಜಮಂಚ ನಾಲ್ವತ್ತು ಕಲ್ಪದಿ ತಪವ ಮಡಿದ ಮಂಚ ತಾಲ ಮುಸಲ ಹಲವ ಪಿಡಿದಿರುವ ಮಂಚ 2 ರಾಮನನುಜನಾಗಿ ರಣವ ಜಯಿಸಿದ ಮಂಚ ತಾಮಸ ರುದ್ರನನು ಪಡೆದ ಮಂಚ ಭಿಮಾವರಜನೊಳು ಆವೇಶಿಸಿದ ಮಂಚ ಜೀಮೂತ ಮಂಡಲವ ತಡೆಗಟ್ಟಿದ ಮಂಚ 3 ಜೀವನಾಮಕನೆನಿಸಿ ವ್ಯಾಪ್ತನಾದ ಹರಿಯ ಸೇವಿಸಿ ಸುಖಿಸುವ ದಿವ್ಯ ಮಂಚ ಸಾವಿರ ಮುಖದಿಂದ ತುತ್ತಿಸಿ ಹಿಗ್ಗುವ ಮಂಚ ದೇವಕೀಜಠರದಿ ಜನಿಸಿದ ಮಂಚ4 ವಾರುಣೀ ದೇವಿ ವರನೆನಿಸಿದ ಮಂಚ ಸಾರುವ ಭಕುತರ ಸಲಹೊ ಮಂಚ ಕಾರುಣ್ಯನಿಧಿ ಜಗನ್ನಾಥ ವಿಠಲನ ವಿ ಹಾರಕ್ಕೆ ಯೋಗ್ಯವಾದ ವಿಮಲ ಶೇಷ ಮಂಚ5
--------------
ಜಗನ್ನಾಥದಾಸರು
ಬಲ್ಲಿದನಲ್ಲೇನು ಶ್ರೀಹರಿ ಬಲ್ಲಿದನಲ್ಲೇನು ಪ ಬಲ್ಲಿದನಲ್ಲೇನು ಖುಲ್ಲಮನವೆ ತಿಳಿ ಎಲ್ಲ ಲೋಕಗಳ ನಲ್ಲನಾಗಿಹ್ಯನೀತ ಅ.ಪ ಕಡುದಯದಿಂದಿನ್ನು ಪಿಡಿದು ಬಿಡದೆ ಪಾಂಡವರನ್ನು ಪೊಡವಿನೆಲ್ಲ ಒಂದೆ ಕೊಡೆಯಿಂದಾಳಿಸಿದ ಎಡರು ತಾರದಂತೆ ಒಡೆಯ ಮುಕ್ಕುಂದನೀತ 1 ಧೂರ್ತ ಹಿರಣ್ಯಕನ ಕರದಿಂ ಭಕ್ತ ಪ್ರಹ್ಲಾದನ್ನ ಸ್ವಸ್ಥದಿಂದ ದಯವಿತ್ತು ಕಾಯ್ದನಿಗೆ ದಾರು ಸರಿ ಅರ್ತುನೋಡಲೀತ 2 ಉರಿಹಸ್ತ ಪಡೆದವನ ಕ್ಷಣದಿಂ ಉರುವಿದ ಮಾರಮಣ ಭರದಿಂ ತ್ರಿಪುರರ ಹರಿದಿಯರ್ವ್ರತ ಕೆಡಿಸ್ಹರನ ಮೊರೆಯ ಕೇಳಿ ಸುರರ ಸಲಹಿದೀತ 3 ಮೀರಿದ ಅಸುರರನು ತರಿದು ಸಾರುವ ಬಿರುದನ್ನು ಅ ಪಾರ ಶೂರ ದನುಜಾರಿ ಭಕ್ತ ಸಹಕಾರಿ ಶೌರಿ ನಿಜ ಮೂರು ಜಗದಿ ಈತ 4 ಜಡಮತಿ ಮಾನವರ ನುಡಿಗಳು ದೃಢಲ್ಲೆಲೊ ಪೂರ ಪೊಡವಿಗಧೀಶ ನಮ್ಮ ಒಡೆಯ ಶ್ರೀರಾಮನಡಿ ದೃಢದಿ ನಂಬು ಭವತೊಡರ ಕಡಿವನೀತ 5
--------------
ರಾಮದಾಸರು
ಬಾ ಬಾ ಬಾರೈ ಬಾ ಬಾ ಬಾ ಬಾರೈ ಬಾ ಬೇಗ ಬಾರೆಂದು ಭಕುತರು ಕರೆಯಲು ಹರಿ ಪ. ಶ್ರೀಸತಿಯಪ್ಪಿಕೊಂಡಿಪ್ಪನೆ ಬಾ ಶೇಷಶಯನ ಎನ್ನಪ್ಪನೆ ಬಾ 1 ಮತ್ಸ್ಯನಾಗಿ ಜಲದೊಳಾಡಿದವನೆ ಬಾ ಕಚ್ಛಪವತಾರವ ಮಾಳ್ದನೆ ಬಾ 2 ಧsÀರೆಗಾಗಿ ಜಲದೊಳಗಿಳಿದನೆ ಬಾ ಹಿರಣ್ಯಕನುದರವ ಸೀಳ್ದನೆ ಬಾ 3 ಶಕ್ರನ ಪೊರೆದ ಶ್ರೀ ವಾಮನನೆ ಬಾ ವಕ್ರನೃಪಾಲಕುಲಶಮನನೆ ಬಾ 4 ರಾವಣಾಂತಕ ರಘುರಾಮನೆ ಬಾ ದೇವಕಿ ನಿಜಸುತ ಪ್ರೇಮನೆ ಬಾ 5 ಸತಿಯರ ವ್ರತವ ಕೆಡಿಸಿದನೆ ಬಾ ಚತುರ ಕಲಿಯನೋಡಿಸಿದನೆ ಬಾ 6 ಹಯವದನಾಶ್ರಿತ ಶರಣನೆ ಬಾ ಪ್ರಿಯಸುರ ಸೇವಿತ ಚರಣನೆ ಬಾ 7
--------------
ವಾದಿರಾಜ
ಬಾಗೋ ಬಾಗೋ ಜೀವನೇ ಸಾಗರನಿಲಯಗೆ ಪ ಬಾಗೋ ಮನಸಿನ ನೀಗಿ ಕಲ್ಮಷ ಬೇಗ ತಿಳಿದು ನೀಜೋಗಿವಂದ್ಯಗೆ ಅ.ಪ ಕನಸಿದು ಜಗಮೋಹ ಕಾಣು ಕಾಣೋ ನಿನಗೆ ವೈಕುಂಠ ಒಂದೇ ಗೇಣೋ ಚಿನುಮಾಯಾತ್ಮನ ತ್ವರ ಕಾಣು ಕಾಣೋ ತನುಮನವರ್ಪಿಸಿ ನೆನವು ನಿಲ್ಲಿಸಿ ನಿಜ ಘನಮಹಾತ್ಮನ ಹಿಡಿ ಖೂನ ಖೂನೋ 1 ಕಾಯ ಕಾಯ ಗುರುತಿಟ್ಟರಿಯಿದರ ನೆಲೆಯ ನೆಲೆಯ ಮರುಳನೆ ನರಕದ ಕುಣಿಯು ಕುಣಿಯೋ ನೆರೆದು ತೋರಿ ಸಂತೆ ಹರಿದು ಹೋಗುವಂತೆ ಧರೆ ನಿನಗೊಂದಿನ ಮಾಯ ಮಾಯ 2 ಬಂದದ್ದು ವಿಚಾರ ಮಾಡೋ ಮಾಡೋ ಇಂದಿನ ಸಮಯ ಕಳಿಬೇಡೋ ಬೇಡೋ ಬಂಧುರಸುಖಕೆ ಮನ ನೀಡೋ ನೀಡೋ ಇಂದು ನಾಳೆನ್ನದೆ ತಂದೆ ಶ್ರೀರಾಮನ ಬಂಧುರಚರಣವ ಪಾಡೋ ಪಾಡೋ 3
--------------
ರಾಮದಾಸರು
ಬಾಯತೋರೋ ರಂಗ ಬಾಯತೋರೋ ಮುದ್ದು ಬಾಯಲಿ ತುತ್ತು ಅನ್ನವನಿಡುವೆ ಬಾಯತೋರೋ ಪ ಕತ್ತಲಿನಂತಿರುವ ತುಟಿಗಳ ತೆರೆಯುತ ಬಾಯತೋರೋ ಜ- ಗತ್ತಿನ ಬೆಳಕನು ನೋಡುವೆ ಒಮ್ಮೆ ಬಾಯತೋರೋ ಒತ್ತೊತ್ತಿನ ತುತ್ತನಿಡಲು ಬಂದಿರುವೆ ಬಾಯತೋರೋ ತುತ್ತೇ ತುತ್ತನು ತಿನ್ನುವೆ ಜಾಣ ಬಾಯತೋರೋ 1 ಭಂಜಿಸಿ ಬಲಿಯ ದಾನವ ಬೇಡಿದ ಬಾಯತೋರೋ ಅಂಜಿದ ನರನಿಗೆ ಗೀತೆ ಬೋಧಿಸಿದ ಬಾಯತೋರೋ ಗಂಜಿಯಕುಚೇಲಗವಲಕ್ಕಿ ಬೇಡಿದ ಬಾಯತೋರೋ ಅಂಜದ ಕರ್ಣಗೆ ಗುಟ್ಟು ಹೇಳಂಜಿಸಿದ ಬಾಯತೋರೋ2 ಅಮ್ಮ ಯಶೋದೆಯ ಮೊಲೆಹಾಲನುಂಡ ಬಾಯತೋರೋ ಗುಮ್ಮ ಪೂತನಿಯ ಅಸುಮೊಲೆ ಜಗಿದ ಬಾಯತೋರೋ ಸುಮ್ಮಸುಮ್ಮನೆ ಅಂಗನೆಗೆ ಮುತ್ತನಿಟ್ಟ ಬಾಯತೋರೋ ಗಮ್ಮನೆ ಅಪ್ಪಿ ಗೋಪಿಯರ ಪೀಡಿಸಿದ ಬಾಯತೋರೋ3 ಮೋಹನಮುರಳಿಯಮೋದದಿನುಡಿಸಿದಬಾಯತೋರೋ ಮೋಹನಾಂಗನೆಯರ ಮಾಟದಿ ಮಿಡಿಸಿದ ಬಾಯತೋರೋ ಮೋಹನ ರಾಗದಿ ಗೋವುಗಳ ಕರೆದ ಬಾಯತೋರೋ ಮೋಹಿಪ ರಾಧೆಯ ಮೈಯುಲಿಯೆ ಪಾಡಿದ ಬಾಯತೋರೋ 4 ಬಳಕುವ ಗೋಪಿಯರ ಚೇಡಿಸಿದಾ ತುಂಟ ಬಾಯತೋರೋ ಬಲರಾಮನನ್ನು ಗೋಳಾಡಿಸಿದ ಆ ಬಾಯತೋರೋ ಬುಳುಬುಳು ಮಣ್ಣನೆ ಮೆಲ್ಲುವಾ ಪುಟ್ಟ ಬಾಯತೋರೋ ಭಲರೆ ಅಮ್ಮನಿಗೆ ಬ್ರಹ್ಮಾಂಡ ತೋರಿದ ಬಾಯತೋರೋ 5 ಪುರಂದರ ಬಾಯಾಗಿ ಹಾಡಿದ ಬಾಯತೋರೋ ಸೂ ಕುಮಾರ ಲಕ್ಷ್ಮೀಶರಲಿ ಬರೆದಾಡಿದ ಬಾಯತೋರೋ ಶ್ರೀಕಾಂತ ನಮ್ಮ ಜಾಜಿಪುರೀಶನೆ ಬಾಯತೋರೋ ಸಾಕಾಯಿತೋ ಭವದ ಬವಣೆನೀಗಲು ಬಾಯತೋರೋ6
--------------
ನಾರಾಯಣಶರ್ಮರು
ಬಾರಯ್ಯ ಬಾರಯ್ಯ ಬಾರೊ ಶ್ರೀ ಹರಿಯೆ ಬಾರಯ್ಯ ಗುರು ಶಿರೋಮಣಿಯೆ 1 ಮಚ್ಛನಹುದು ಗುರು ಸಚ್ಚಿದಾನಂದನೆ ಅಚ್ಯುತಾನಂತ ನೀ ಬಾರಯ್ಯ 2 ಕೂರ್ಮನಹುದು ಗುರು ಧರ್ಮ ಸಹಕಾರನೆ ನಿರ್ಮಳಾನಂದ ನೀ ಬಾರಯ್ಯ 3 ವರಾಹನಹುದು ಗುರು ವಾರಿಜನೇತ್ರನೆ ವರಮುನಿಹೃದಯ ನೀ ಬಾರಯ್ಯ 4 ನರಸಿಂಹನಹುದು ಗುರು ನರಹರಿಯೆ ನಾರಾಯಣನೆ ನೀನು ಬಾರಯ್ಯ 5 ವಾಮನಹುದು ನೀ ಬ್ರಾಹ್ಮಣೋತ್ತಮನೆ ಬ್ರಹ್ಮಾನಂದ ಶ್ರೀ ಗುರು ಬಾರಯ್ಯ 6 ಭಾರ್ಗವರಾಮನಹುದು ಪರಾಕ್ರಮನೆ ಪರಮಪುರಷ ಗುರು ಬಾರಯ್ಯ 7 ರಾಮನಹುದು ಗುರು ಕಾಮ ನೀ ಪೂರಿತ ಸಾಮಗಾಯನ ಪ್ರಿಯ ಬಾರಯ್ಯ 8 ಕೃಷ್ಣನಹುದೊ ಗುರುವಿಷ್ಣು ಪರಮಾತ್ಮನೆ ದೃಷ್ಟ ಮೂರುತಿ ನೀನು ಬಾರಯ್ಯ 9 ಬೌದ್ಧನಹುದು ಗುರು ವೇದಾಂತಮಹಿಮನೆ ಸಿದ್ಧಶಿಖಾಮಣಿ ಬಾರಯ್ಯ 10 ಕಲಿಕ್ಯವತಾರನಹುದು ಮೂಢನಾತ್ಮನೆ ಬಾಲಮುಕಂದ ನೀ ಬಾರಯ್ಯ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೆ ಸಖಿ ವಾರಿಜ ಮುಖಿ ಬಾರೆ ಬಾರೆ ಸಖಿ ಬಾರೆ ಕೋಪಿಸೋರೆ ಹೀಗೆ ಯಾರುಪದೇಶವುಮುರಾರಿಯ ಮುಖ್ಯ ಬಲರಾಮನ ಸಖಿಯೆಬಾರೆ ಬಾರೆ ವಾರಿಜ ಮುಖಿಯೆ ಪ. ಪುಟ್ಟ ಸುಭದ್ರಾ ನಿನಗೆ ಸಿಟ್ಯಾಕ ಒದಗಿತಇಟ್ಟ ಮುದ್ರಿಗಳು ತಡವಾಗಿಇಟ್ಟ ಮುದ್ರಿಗಳು ತಡವಾಗಿ ಮುಯ್ಯವಇಷ್ಟು ಹೊತ್ತನಾಗೆ ತರಬಹುದೆ 1 ಕೇಳೆ ಸುಭದ್ರಾ ಮುಯ್ಯಾ ಕಾಳ ರಾತ್ರಿಲೆ ತಂದುಭಾಳ ಕೋಪಿಸುವ ಬಗಿ ಹೇಳಭಾಳ ಕೋಪಿಸುವ ಬಗಿ ಹೇಳ ಮುತ್ತಿನ ತೋಳುತಾಯಿತವ ಕೊಡುವೆನ 2 ಧಿಟ್ಟ ಸುಭದ್ರಾ ಮುಯ್ಯಾ ಇಷ್ಟೊತ್ತ್ತಿನಾಗ ತಂದು ಸಿಟ್ಟು ಮಾಡಿದ ಬಗಿ ಹೇಳಸಿಟ್ಟು ಮಾಡಿದ ಬಗಿ ಹೇಳ ಮುತ್ತಿನ ಕಟ್ಟಾಣಿ ಕೊಡುವೆ ನಿನಗಿನ್ನು3 ಲೋಕನಾಯಕಿ ಕೃಷ್ಣ್ಣಿ ಕೋಪವ್ಯಾ ಕೊದಗಿತಹಾಕಿದ ಮುದ್ರಿ ತಡವಾಗಿ ಹಾಕಿದ ಮುದ್ರಿ ತಡವಾಗಿ ಮುಯ್ಯವ ಈ ಕಾಲದೊಳಗೆ ತರಬಹುದೆ4 ಕೆಂಡದಂಥವಳ ಗುಣ ಕಂಡೇವ ಸಭೆಯೊಳು ಚಂಡಿತನವನೆ ಬಿಡು ಕೃಷ್ಣಿಚಂಡಿತನವನೆ ಬಿಡು ಕೃಷ್ಣಿ ಮುತ್ತಿನ ದಂಡೆ ಕೊಡುವೆ ಬಿಡುಕೋಪ5 ಬೆಂಕಿಯಂಥವಳ ಗುಣ ಶಕ್ಯವೆ ವರ್ಣಿಸಲು ಶಂಕರಾದ್ಯರಿಗೆ ವಶವಲ್ಲಶಂಕರಾದ್ಯರಿಗೆ ವಶವಲ್ಲ ಮುತ್ತಿನ ವಂಕಿಯ ಕೊಡುವೆ ನಿನಗಿನ್ನು 6 ಸತಿಯು ಸುಭದ್ರೆ ನೀನು ಯತಿಯ ಬೆನ್ಹತ್ತಿದಾಗ ಅತಿಭೀತಿ ಎಲ್ಲಿ ಅಡಗಿತ್ತಅತಿಭೀತಿ ಎಲ್ಲಿ ಅಡಗಿತ್ತ ನಾವುನಿನ್ನ ಪತಿವ್ರತ ತನವ ಅರಿವೆನೆ7 ಮಿತ್ರೆಯರು ನಾವೆಲ್ಲ ತುಪ್ಪಅನ್ನವನುಂಡುಪುತ್ರರ ಸಹಿತ ಸುಖನಿದ್ರೆಪುತ್ರರ ಸಹಿತ ಸುಖನಿದ್ರೆ ಗೈವಾಗ ಮತ್ತ ನೀ ಮುಯ್ಯ ತರಬಹುದೆ8 ಲೋಲ ರಾಮೇಶನು ಹಾಲು ಅನ್ನವನುಂಡುಬಾಲರ ಸಹಿತ ಸುಖನಿದ್ರೆಬಾಲರ ಸಹಿತ ಸುಖನಿದ್ರೆ ಗೈವಾಗಮ್ಯಾಲೆ ಮುಯ್ಯ ತರಬಹುದೆ9
--------------
ಗಲಗಲಿಅವ್ವನವರು
ಬಾರೊ ಹನುಮ ಬಾರೊ ಭೀಮ ಬಾರೊ ಮಧ್ವಮುನಿಪ ಪ. ಬಾರೊ ರಾಮಕೃಷ್ಣ ವೇದವ್ಯಾಸರ ಪ್ರಿಯ ಭಕ್ತ ಅ.ಪ. ಅಂಜನೇಯ ಸುತನು ಆಗಿ ಸಂಜೀವನ ಗಿರಿಯ ತಂದೆ ಕಂಜಲೋಚನೆಯ ವಾರ್ತೆ ಮಂಜುಭಾಷಣ ರಾಮನಿಗರುಹಿದೆ 1 ಪಾಪಿ ಕೌರವ ಕುಲವ ಕೊಂದು ದ್ರೌಪದಿಯ ಕಾಯ್ದ ಮಹಿಮ ಶ್ರೀಪತಿ ಶ್ರೀ ಕೃಷ್ಣನ ಭಜಿಸಿದ ಭೂಪ ಭೀಮಸೇನ ಬೇಗ 2 ಭೂಸುರ ಜನ್ಮದಲಿ ಬಂದು ಆಸೆಯಿಂದ ಆಶ್ರಮ ಕೊಂಡು ದೋಷಿ ಅನ್ಯಮತವ ಮುರಿದು ಭೂಸುರರ ಕಾಯ್ದ ಮಧ್ವ 3 ಸಕಲ ಸುಜನರ ಸೇವೆ ಕೊಂಡು ಮುಕುತಿಮಾರ್ಗಪ್ರದ ನೀನಾಗಿ ಭಕುತಿಮಾರ್ಗವ ತೋರಿ ಎನ್ನ ಹೃತ್ಕಮಲ ಮಧ್ಯದಲಿ ನಿಲ್ಲೊ 4 ಗೋಪಾಲಕೃಷ್ಣವಿಠ್ಠಲನ ರೂಪ ನೋಡುವ ಕೃಪೆಯ ಮಾಡೊ ಶ್ರೀಪತಿ ಶ್ರೀ ಶ್ರೀನಿವಾಸಗೆ ನೀ ಪ್ರೀತಿಕರನೆಂದು ನಮಿಪೆ 5
--------------
ಅಂಬಾಬಾಯಿ
ಬಾರೋ ನಲಿದಾಡೋ ಜಿಹ್ವೆಯಲಿ ಮೂರಧಿಕಾರೊಡೆಯನೆ ಬಾರೋ ನಲಿದಾಡೋ ಜಿಹ್ವೆಯಲಿ ಪ ದಾಸಾ ಬಹು ಮೋಸಕ್ಕೊಳಗಾಗಿಹೆನು ಶ್ರೀಶಾ ಕರಪಿಡಿಯೆನ್ನ ದೋಷ ಮಹದಾಶಾ ವಹಿಸಿರುವೇನು ಘಾಸಿಯಾದೇನು ಮಾಡೋ ಕರುಣಾರ್ಣವದಿ ಈಶಾ ಘನವೇಷಾ ಬಹುತೋಷ ದಾಸನ ಮಾಡಿಕೊ ಎನ್ನ 1 ಕಂದೀ ನಾ ಕುಂದೀ ಗೃಹದೊಳಗೆ ಮಂದಿಯಾ ಶೇರಿದೆ ನೊಂದೇ ಬಹು ಬೆಂದೇ ಮನದೊಳಗೆ ಬಂಧನದೊಳು ಶಿಲ್ಕಿ ಸುಂದರ ಮೂರುತಿ ಸಂದಣಿಯದೆ ನಾ ಹೊಂದಿದೆನಿನಭವ ಭವ ನಾಯಿಂದೂ ದ್ವಂದ್ವಾಪದವಿಡಿದಿದೆ 2 ಘೋರಾ ನಿಸ್ಸಾರ ಭವದೊಳಗೆ ದಾರಿಗಾಣೆನು ಮಾರಾ ಬಹುದೀ ರಾಮನದೊಳಗೆ ಶೇರಿ ಕುಣಿವಾನು ಮಾರಜನಕ ನಿನ್ ಹಾರೈಶನುದಿನ ಶೇರಿ ಭಜಿಸಿ ನಿನ್ನ ನರಸಿಂಹವಿಠ್ಠಲ ಸಾರಿ ನಿನ ಕೋರಿ ಪದಶೇರಿ ಆರಾಧಿಸುವೀಗಳೆ 3
--------------
ನರಸಿಂಹವಿಠಲರು
ಬಾರೋ ಬೇಗನೆ ಶ್ರೀಧರ ಗುಣಾಕರ ಪ ಬಾರೋ ಬೇಗನೆ ಪಾದವಾರಿಜಕೆರಗುವೆ ಚಾರು ಪರಿಯಂಕಕ್ಕೆಅ.ಪ ಶೌರಿ ಅಗ್ರಜನಾಗಿ ಕ್ರೂರರ ಸದೆದು ಭೂ ಭಾರವನಿಳುಹಿದ ಶೌರ್ಯದ ಮಂಚಕೆ1 ರಾಮನ ಶೇವಿಸಿ ಪ್ರೇಮವನು ಪಡೆದಂಥ ಸೌಮಿತ್ರಿಯೆಂಬ ಸುನಾಮದ ಹಾಸಿಗೆಗೆ 2 ಸಾಸಿರವದನದಿ ಶ್ರೀಶನೆ ತವಗುಣ ಲೇಶ ವರ್ಣಿಸುವಂಥ ಭಾಸುರ ತಲ್ಪಕೆ 3 ಇಂದಿರದೇವಿಯು ನಿಂದಿರುವಳು ತವ ಸುಂದರ ಚರಣಾರವಿಂದವ ತೋರಿಸು 4 ಶರಣರ ಪೊರೆವ ಕಾರ್ಪರನರಶಿಂಹನೆ ಹರಗೆ ಭೂಷಣವಾದ ಉರಗಪರ್ಯಂಕಕೆ5
--------------
ಕಾರ್ಪರ ನರಹರಿದಾಸರು
ಬಾರೋ ಸುಖಸಾರ ತೋರು ಕೃಪೆ ಮುರಹರ ಮೀರಿದ ಸಂಸಾರವಾರಿಧಿ ಮಾಡು ಪಾರ ಪ ಎಂಬತ್ತು ನಾಲ್ಕುಲಕ್ಷಯೋನಿಯೊಳ್ ಬಳಲುತ ಕುಂಭಿನಿಯೊಳು ಬಂದು ನಂಬಿಗಿಲ್ಲದೆ ಕೆಟ್ಟೆ 1 ದಯದಿ ಎನ್ನಯ ದುರ್ಬವಣಿಯ ನೀಗಿ ದಯಮಾಡು ಸುಖಸಂತಸವನೆನ್ನೊಡಲಿಗೆ 2 ಮಸಣಿಸದಸಮ ಸಂಪದವನೆ ಕರುಣಿಸಿ ಶಿಶುವನು ಪೋಷಿಸು ಶ್ರೀಶ ಶ್ರೀರಾಮನೆ 3
--------------
ರಾಮದಾಸರು
ಬಾಲಕೃಷ್ಣ ತುರುವು ಕಾಯಲು ಕಳುಹಿದಳು ತನ್ನಬಾಲನ ಗೋಪಿಯು ಮುದ್ದಿಸುತಿಹಳು ಪ ಕರೆದು ಪಾಲನು ಕುಡಿಸುತಿಹಳು ನಿಂಬುಪರಿಮಳುಪ್ಪಿನಕಾಯ ಬುತ್ತಿ ಕಟ್ಟಿದಳುಸುರಭಿಯ ಮೊಸರು ಬೆಣ್ಣೆಯನು ದೋಸೆಸುರುಳಿ ಹೋಳಿಗೆ ಮಂಡಿಗೆಯ ಕಟ್ಟಿದಳುಸಂಡಿಗೆಯ ಕಟ್ಟಿದಳು 1 ಕರುಗಳೆಲ್ಲ ಕೂಡಿಸಿದಳು ನಿನ್ನಪರಿವಾರದವರು ಬಂದಾರೆ ನೋಡುನೀನು ಬಲರಾಮನು ಜೋಡು ಇಲ್ಲೇಯಮುನಾ ತೀರದಲ್ಲಿ ಆಡೋಹತ್ತಿರದಲ್ಲಿ ಆಡೋ 2 ಕೂಸಿಗೆ ಕುಂಚಿ ಹೊಚ್ಚಿದಳು ಬಿದ್ದಕೇಶಗಳೆಲ್ಲವು ತೀಡುತ್ತಲಿಹಳುಭೂಷಣಂಗಳ ಇಡುತಿಹಳುಇಂದಿರೇಶನ ಕೈಯ್ಯಲ್ಲಿ ಕೋಲು ಕೊಟ್ಟಿಹಳು(ಮುರಲಿ) ಕೊಳಲ ಕೊಟ್ಟಿಹಳು 3
--------------
ಇಂದಿರೇಶರು
ಬಿಗಿಯದಿರು ಬಿಗಿಯದಿರು ಎಲೆ ಮಾನವಾಧಿಗಿ ಧಿಗಿ ಧಿಗಿಯೆನುತ ನಿನಗೇಕೆ ಗರ್ವ ಅ ವಿರಕ್ತಿಯಲಿ ಹನುಮನೆ ವಿವೇಕದಲಿ ವಸಿಷ್ಠನೆಶೂರತನದಲಿ ಶಂತನುತನಯನೇನೊಸ್ವರದಲಿ ತುಂಬುರನೆ ಗೀತದಲಿ ನಾರದನೆಪರಾಶರ ಮುನಿಯೆ ವ್ರತತಿ ಪಟ್ಟದಲ್ಲಿ 1 ಚೆಲುವಿನಲಿ ರಾಮನೆ ಸತ್ಯದಿ ಹರಿಶ್ಚÀ್ಚಂದ್ರನೆಛÀಲದಲ್ಲಿ ಋಷಿ ವಿಶ್ವಾಮಿತ್ರನೇನೋಬಲದಲ್ಲಿ ವಾಲಿಯೇ ಹಲಧರನೆ ಹಿರಣ್ಯಕನೆಬಿಲು ವಿದ್ಯದಲಿ ಪರಶುರಾಮನೇ ನೀನು 2 ತ್ಯಾಗದಲಿ ಕರ್ಣನೇ ಭೋಗದಲಿ ಶತಮಖನೆಯೋಗದಲಿ ಶುಕಸನಕ ಜನಕನೇನೋಭಾಗ್ಯದಲಿ ಬಲಿಚಕ್ರವರ್ತಿಯೋ ದಶಶಿರನೊದೀರ್ಘದಲಿ ಮೇರುವೇ ಮಂದರವೆ ನೀನು 3 ಶಕ್ತಿಯಲಿ ಕಾಲನೆ ಭುಕ್ತಿಯಲಗಸ್ತ್ಯನೆಮುಕ್ತಿ ಪಡೆವಲ್ಲಿ ಖಟ್ಟಾಂಗರಾಯನೇನೊ 4 ಶಾಪದಲಿ ಬ್ರಹ್ಮನೆ ತಾಪದಲಿ ಸೂರ್ಯನೆಕೋಪದಲಿ ಮಹೇಶನೇನೋ ನೀನುತಪದಲ್ಲಿ ಹನುಮನೆ ವ್ರತದಿ ರುಕ್ಮಾಂಗದನೆಕೃಪೆಯಲ್ಲಿ ಶ್ರೀ ಕೃಷ್ಣದೇವನೆ ನೀನು 5
--------------
ವ್ಯಾಸರಾಯರು