ಒಟ್ಟು 461 ಕಡೆಗಳಲ್ಲಿ , 70 ದಾಸರು , 419 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೀತಾ ಕಲ್ಯಾಣ ಪಾಕ ಶೇಷಾದ್ರಿ ಬ್ರಹ್ಮಕೆ ಶರಣು ಲೋಕನಾಯಕ ಹೆಳವನಕಟ್ಟೆ ವೆಂಕಟ ನೀ ಕರುಣಿಸಿ ಸಲಹುವುದೆನಗೆ ಜಯ ಜಯ ಪ. ಮದುವೆಯ ನಾಲ್ಕು ದಿವಸದಲ್ಲಿ ಮದುವಣಿಗನು ರಾಮ ಜಾನಕಿಗೆ ಪದನ ಹೇಳುವೆ ಸುಜನರು ಕೇಳಿ ಜಯ ಜಯ 1 ಚಿತ್ತಜಪಿತ ಶ್ರೀರಾಮರಿಗೆ ಅರ್ತಿಯಿಂದರಿಷಿಣೆಣ್ಣೆಯ ಮಾಡ್ವ ಮಿತ್ರೆ ಕೌಸಲ್ಯದೇವಿ ಕೇರಿ ಕೇರಿಯ ಗುಂಟ ಮುತ್ತೈದೇರನು ಕರೆಸಿದಳು ಜಯ ಜಯ 2 ಪೀತಾಂಬರದುಡುಗೆಯನುಟ್ಟು ಜ್ಯೋತಿಯಂದದಿ ಥಳಥಳಿಸುತಲಿ ಜಾತಿಮಾಣಿಕದಾಭರಣವಿಟ್ಟು ರಾಮರ ಮಾತೆಯರೆಲ್ಲ ಶೃಂಗಾರವಾಗಿ ಜಯ ಜಯ 3 ಚೀಣ ಚೀಣಾಂಬರಗಳನುಟ್ಟು ವೇಣಿ ಕಸ್ತೂರಿಯ ಪಣೆಗಿಟ್ಟು ಜಾಣೆಯರೆಲ್ಲ ಶೃಂಗಾರವಾಗಿ ಮಲ್ಲಿಗೆ ಬಾಣನ ಪಟ್ಟದಾನೆಗಳಂತೆ ಜಯ ಜಯ 4 ಪೊಂಬಣ್ಣದ ಹಳದಿಯ ಕಲೆಸಿ ತುಂಬಿದ ಹರಿವಾಣದೊಳಗೆ ಅಂಬುಜನಾಭಗೆ ಅರಿಷಿಣೆಣ್ಣೆಯ ಮಾಡ್ವ ಸಂಭ್ರಮಕೆ ನಡೆತಂದರಾಗ ಜಯ ಜಯ 5 ಗರುಡನ್ವಲ್ಲಭ ಸೌಂದರದೇವಿ ವರುಣನ್ವಲ್ಲಭೆ ಕಾಳಕದೇವಿ ಹರನ್ವಲ್ಲಭೆ ಪಾಪ[ನಾ] ಶಿಗಂಗೆ ಸಹಿತಲಿ ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ 6 ಬ್ರಹ್ಮವಲ್ಲಭೆ ಶಾರದಾದೇವಿ ವಾ- ಯುರಮಣಿ ಅಂಜನಾದೇವಿ ಹರುಷದಿ ಕೌಸಲ್ಯೆ ಕೈಕೆಸೌಮಿತ್ರೆಯರು ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ7 ಅಲ್ಲಲ್ಲಿ ನಡೆವ ನಾಟಕಶಾಲೆ ಬಿಲ್ಲಾಳು ಬೆತ್ತ ಕಾಟನವರು ಸೊಲ್ಲುಸೊಲ್ಲಿಗೆ ಹಿಡಿಹೊನ್ನನು ತ್ಯಾಗವ ಚೆಲ್ಲುತ ದಶರಥ ನಡೆದನಾಗ ಜಯ ಜಯ 8 ಹೊಡೆವ ತಂಬಟೆ ಭೇರಿ ನಿಸ್ಸಾಳೆ ಬಿಡದೆ ಚೀರುವ ಹೆಗ್ಗಾಳೆಗಳು ಸಿಡಿಲು ಗರ್ಜಿಸುವಂತೆ ಪಂಚಮವಾದ್ಯದಿ ನಡೆದರು ಜನಕರಾಯನ ಮನೆಗೆ ಜಯ ಜಯ 9 ಕುಸುಮಬಾಣನ ಮಾರ್ಬಲದಂತೆ ಹಸುರು ಪಚ್ಚೆಯ ಪಲ್ಲಕ್ಕಿಗಳು ಮುಸುಕಿದ ಪರಿಮಳದೊಳಪ[ಸಾ]ತಕೆ ದಶರಥ ಬಂದನೆಂದರೆ ಜನರು ಜಯ ಜಯ 10 ಭರದಿಂದಲೆದ್ದು ಜನಕರಾಯ ತರಿಸಿ ನಿವಾಳಿಗಳನು ಹಾಕಿ ಹರುಷದಿ ಕೈಲಾಗವ ಕೊಟ್ಟಯೋಧ್ಯದ ಅರಸ[ನ] ಮನ್ನಿಸಿ ಒಡಗೊಂಡನಾಗ ಜಯ ಜಯ11 ಬೇಗದಿ ಗದ್ದುಗೆಯನು ಹಾಸಿ ಬೀಗನ ಉಪಚರಿಸಿದ ಜನಕ ಭಾಗೀರಥಿ ಪಾರ್ವತಿ ಗಂಗೆ ಸಹಿತಲಿ ನಾಗಭೂಷಣನು ಕುಳಿತನಾಗ ಜಯ ಜಯ 12 ಸುತ್ತಣ ರಾಯರಾಯರಿಗೆಲ್ಲ ರತ್ನಗಂಬಳಿಗಳ ಹರಹಿದರು ಅರ್ತಿಯಿಂದಲಿ ಸುರರೆಲ್ಲರು ಕುಳಿತರು ವಿಸ್ತರಿಸಿದ ಮಂಟಪದೊಳಗೆ ಜಯ ಜಯ 13 ಮಣಿಮಂಟಪದೊಳು ಹಸೆಹಾಸಿ ಕನಕ ಮಣಿಯ ತಂದಿಳುಹಿದರು ದಿನಕರಕುಲರಾಮ ಹಸೆಗೇಳೆನುತಲಿ ಗುಣಾವಳಿಗ[ಳ] ಕೊಂಡಾಡಿದರು ಜಯ ಜಯ 14 ಪೊಕ್ಕಳೊಳಜನ ಪೆತ್ತವನೇಳು ಅಕ್ರೂರಜನ ಪೆತ್ತವನೇಳು ಮುಕ್ಕಣ್ಣನ ರಿಪುಬಲವ ಸಂಹರಿಸಿದ ಭಕ್ತವತ್ಸಲ ಹಸೆಗೇಳೆಂದರು ಜಯ ಜಯ 15 ದಶರಥರಾಜನಂದನನೇಳು ಅಸುರಸಂಹಾರ ಕಾರಣನೇಳು ವಸುಧೆಗೊಡೆಯ ರಾಮ ಹಸೆಗೇಳೆನುತಲಿ ಋಷಿಗಳೆಲ್ಲರು ಶ್ರುತಿಗರೆದರಾಗ ಜಯ ಜಯ 16 ಋಷಿವಾಲ್ಮೀಕಿ[ಯ]ರೆಲ್ಲರು ಕೂಡಿ ಕುಶಲದ ಬಾಸಿಂಗವ ಪಿಡಿದು ಅಸುರಾರಿಯ ಮಸ್ತಕಕಳವಡಿಸೋರು ವಸುದೇವನಾಗೆಂದು ಹರಸುತಲಿ ಜಯ ಜಯ 17 ತಂಡತಂಡದ ರತ್ನ ಅಡಸಿದಾಗ ಮಣಿ ಬಿಗಿದಿದಾಗ ತೊಂಡಿಲ ಮುತ್ತೈದೇರಳವಡಿಸೋರು ಕೋ- ದಂಡ ಪಾಣಿಸತಿಜಾನಕಿಗೆ ಜಯ ಜಯ 18 ಬೆರಳಿಗೆ ಮುದ್ರೆ ಉಂಗುರವಿಟ್ಟು ಕೊರಳಿಗೆ ಏಕಾವಳಿಯನೆ ಹಾಕೋರು ತರಳಾಕ್ಷಿಯರಾ ಜಾನಕಿಗೆ ಜಯ ಜಯ 19 ಬೊಂಬೆಯ ತೊಂಡಿಲ ಮುಡಿದಿರ್ದು ಕುಂಭಿಣಿಸುತೆ ಕುಳ್ಳಿರಲಾಗಿ ಅಂಬುಜಾಂಬಕ ರಘುರಾಮನ ಹರುಷದಿ ರಂಭೆಯಿದ್ದೆಡೆಗೆ ಬಂದನೆ ನಗುತ [ಜಯ ಜಯ]20 ಬಂದನೆ ಭಾಗ್ಯಲಕ್ಷ್ಮೀರಮಣ ಬಂದನೆ ಭಕ್ತವತ್ಸಲ ಸ್ವಾಮಿ ಬಂದನೆ ಜಾನಕಿಯಡೆ ರಾಮನು ತಾ ಬಂದನೆ ಮಣಿಮಂಟಪದೆಸೆಗೆ [ಜಯ ಜಯ] 21 ಧೂರ್ಜಟಿ ಜಪಿಸುವ ನಾಮವಿಗ್ರಹ ಬಂದ ವಜ್ರಮಾಣಿಕದ್ಹಸೆಯಿದ್ದೆಡೆಗೆ ಜಯ ಜಯ 22 ಕೌಸಲ್ಯಸುತ ಕುಮಾರ ಬಂದ ಹಂಸವಾಹನಪಿತ ರಾಮ ಬಂದ ಕಂಸಾರಿ ದುಃಖವಿ [ನಾಶ] ರವಿಕುಲ ವಂಶೋದ್ಧಾರಕ ಬಂದನಾಗ [ಜಯ ಜಯ] 23 ಭಕ್ತವತ್ಸಲ ರಾಘವ ಬಂದ ಮುಕ್ತಿದಾಯಕ ಶ್ರೀರಾಮ ಬಂದ ಅರ್ಕನು ಶತಕೋಟಿತೇಜನು ಜಗಕತಿ- ಶಕ್ತ ತಾ ಬಂದನೆಂದವೆ ಕಹಳೆ ಜಯ ಜಯ 24 ಸಿಂಧುಬಂಧನ ರಾಘವ ಬಂದ ಪು- ರಂದರವರದ ಶ್ರೀರಾಮ ಬಂದ ಇಂದುವದನೆಪತಿ ರಾಮ ಬಂದನು ರಾಮ- ಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 25 ಯಜ್ಞಶಿಕ್ಷಾಮಿತ್ರ ರಾಮ ಬಂದ ಸುಗ್ರೀವರಕ್ಷಕಾರಣ ಬಂದ ಲಕ್ಷ್ಮ- ಣಾಗ್ರಜ ಬಂದನೆಂದವೆ ಕಹಳೆ ಜಯ ಜಯ 26 ಯಂತ್ರವಾಹಕ ರಾಘವ ಬಂದ ಮಂತ್ರಮೂರುತಿ ರಾಮ ಬಂದ ಕಾಂತೆ ಶ್ರೀ ಜಾನಕಿರಮಣ ಬಂದನು ರಾಮ ತಂತ್ರಿ ತಾ ಬಂದನೆಂದವೆ ಕಹಳೆ ಜಯ ಜಯ 27 ದೂಷಕಹರಣ ಶ್ರೀರಾಮ ಬಂದ ವಿ- ಭೀಷಣವರದ ರಾಘವ ಬಂದ ಭಾಷೆ ಪಾಲಿಪ ರಾಮಚಂದ್ರ ಬಂದನು ಜಗ- ದೀಶ ತಾ ಬಂದನೆಂದವೆ ಕಹಳೆ ಜಯ ಜಯ 28 ತಾಟಕಪ್ರಾಣಾಪಹಾರ ಬಂದ ಜಟÁಯುಮುಕ್ತಿಕಾರಣ ಬಂದ [ತಾಟಂಕ] ಧರ ನಾರಾಯಣ ರವಿಕುಲ ಕೋಟಿ ತಾ ಬಂದನೆಂದವೆ ಕಹಳೆ ಜಯ ಜಯ 29 ವೀರ ವಿಕ್ರಮ ರಾಘವ ಬಂದ ಮಾರೀಚಮರ್ದನ ರಾಮ ಬಂದ ನಾರಿ ಶ್ರೀ ಜಾನಕಿರಮಣ ಬಂದನು ಹರಿ ರಾಮ ತಾ ಬಂದನೆಂದವೆ ಕಹಳೆ ಜಯ ಜಯ 30 ದೇವಕುಮಾರ ರಾಘವ ಬಂದ ದೇವರ ದೇವನು ರಾಮ ಬಂದ ಭಾವೆ ಶ್ರೀ ಜಾನಕಿರಮಣ ಬಂದನು ರಾಮಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 31 ನಿರುಪಮಚರಿತ ರಾಘವ ಬಂದ ದುರಿತದಲ್ಲಣ ರಾಮದೇವ ಬಂದ ಭರತಶತ್ರುಘ್ನರ ಸಹೋದರಯೋಧ್ಯದ ಸುರಪತಿ ಬಂದನೆಂದವೆ ಕಹಳೆ ಜಯ ಜಯ 32 ಹೇಮಖಚಿತ ರತ್ನ ಪೀಠದಲಿ ಭೂಮಿಜೆ ಸಹಿತ ಕುಳಿತ ರಾಮ ವಾಮ ಭಾಗದಿ ಒಪ್ಪಿರ್ದಳು ಜಾನಕಿ ಆ ಮಹಾಸಭೆಯನು ಬೆಳಗುತಲಿ ಜಯ ಜಯ 33 ಕುಂದಣ ರತ್ನದಡ್ಡಿಕೆಯೊಳಗೆ ಹೊಂದಿಸಿ ನವರತ್ನ ಇರುವಂತೆ ಇಂದುವದನೆ ಜಾನಕಿ ಹರುಷದಿ ರಾಮ ಚಂದ್ರನ ಮಧ್ಯದೊಳೊಪ್ಪಿದಳು ಜಯ ಜಯ 34 ಹೇಮದ್ಹರಿವಾಣದೊಳಗ್ನಿಯನು ಕಾಮಿನಿಯರು ತಂದಿಳುಹಿದರು ರಾಮ ಮನ್ನಿಸಿ ಉಡುಗೊರೆಯಿತ್ತು ಅವರಿಗೆ ಹೇಮಾರ್ಚನೆಗಳ ತೊಡಗಿದನು ಜಯ ಜಯ 35 ಲಾಜತೊಂಡಿ[ತಂಡು?]ಲ ಆಹುತಿಗೊಟ್ಟು ಪೂಜಿಸಿದನೆ ವಿಘ್ನೇಶ್ವರನ ರಾಜವದನೆಯ ಒಡಗೊಂಡು ರಾಘವ ಪೂಜಿಸಿದನೆ ಋಷಿಮುನಿವರರ ಜಯ ಜಯ 36 ಇಂದ್ರಾದಿ ಮುನಿಗಳು ಕೈಹೊಡೆದು ಚಂದ್ರ ಸೂರ್ಯರು ಉಘೇಉಘೇಯೆನಲು ಮಂದಾರ ಮಲ್ಲಿಗೆ ಮಳೆಗಳ ಕರೆದರು ಅಂದದಿ ಸುರಜನರೆಲ್ಲರಾಗ ಜಯ ಜಯ 37 ಅರಳುವ ಕೆಂದಾವರೆ ಕುಸುಮ ಪರಿಮಳ ಸುರಮ್ಯ ಕಣ್ಗೆಸೆಯೆ ಎರಗುವ ಮರಿದುಂಬಿಗಳಂತೆ ರಾಘವ ಕರಗಳ ಪಿಡಿದೆÀತ್ತಿದ ಸತಿಯ [ಜಯ ಜಯ] 38 ಇಳೆಯ ಜಗಂಗಳನುದರದಲಿ ಅಳವಡಿಸಿದ ಮಹಾತ್ಮಕನು ಇಳೆಯ ಮಗಳನು ಎತ್ತಲಾರದೆ ರಾಮ ಬಳಲಿದನೆಂದು ನಕ್ಕರು ಜನರು ಜಯ ಜಯ 39 ಪರಾಕು ಸ್ವಾಮಿ ಪರಾಕು ದೇವ ಪಾದ ಎಚ್ಚರಿಕೆ ಸೀತಾಪತಿ ರಾಮನೆ<
--------------
ಹೆಳವನಕಟ್ಟೆ ಗಿರಿಯಮ್ಮ
ಸೀತಾಮನೋಹರ ವಿಠಲಾ | ಕಾಪಾಡೊ ಇವಳಾ ಪ ಮಾತುಮಾತಿಗೆ ನಿನ್ನ | ಸ್ಮರಣೆ ಸುಖ ಕೊಟ್ಟು ಅ.ಪ. ಮಂಗಳಾಂಗನೇ ಹರಿಯೇ | ಶೃಂಗಾರ ಮೂರುತಿಯೇಭಂಗಗೈ ಅಜ್ಞಾನ | ಸತ್ಸಂಗವನೆ ಕೊಟ್ಟುಸ್ವಾಂಗಾಯ ನಾಮ | ನೀಲಾಂಗ ಶ್ರೀ ಹರಿಯೆಕಂಗಳಿಂದಲಿ ಕಾಂಬ | ಹವಣೆಯನು ತಿಳಿಸೋ 1 ತರತಮಾತ್ಮಕ ಜ್ಞಾನ | ಹರಿಗುರು ಸದ್ಭಕ್ತಿಮರುತ ಮತ ದೀಕ್ಷೆಯನು | ಕರುಣಿಸೋ ಹರಿಯೇದುರಿತಾಳಿ ದುಷ್ಕರ್ಮ | ಪರಿಹರಿಸಲೀವಳಿಗೆಪರಮ ಆನಂದವನೆ | ಕರುಣಿಸೊ ಹರಿಯೇ 2 ಪೇಳ್ವುದೆನಿಹುದೆನಗೆ | ಸರ್ವಜ್ಞ ನೀನಿರುವೆಭವದಿಂದ ಕಡೆಗಿತ್ತು | ಪವನಂತರಾತ್ಮಈ ವಿಧದಭಿನಿಪವ | ನೀವೊಲಿದು ಸಲಿಸೆಂದುದೇವ ಪ್ರಾರ್ಥಿಪೆ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಸುತೀರ್ಥರು ಸಾರಲೆನ್ನಳವಲ್ಲ ಗುಣಶಾಲಿ ಸುರಪ ಸುತೀರ್ಥ ಯತಿವರ ಪ ತವ ಸಂಚಾರ ಚರಣ ಸಮೀರಯುತ ವಿಸ್ತಾರ ಮಹಿಮೆಯ ಅ.ಪ. ಇಂದು ದಾರಿಯಲಿಂದ ಬರುತಿರೆ ಸುಂದರಂದಣವೇರಿ ಯದರಿಗೆ ಬಂದು ಶರಣರ ಸೇವೆಗೊಂಡು ಶೃಂಗಾರ ಕವಚವನಿತ್ತು ನವಸುಖ ಮಾರಮರ್ಮನ ಬಯಸಿ ದ್ಯುತಿವರನಂಘ್ರಿಕಮಲವ 1 ಧನ್ಯನಾದೆನೊ ನಿನ್ನ ನೋಡಿ ಮಾನ್ಯನಾಗುವೆ ಮೌನಿ ಜನರೊಳು ಗಾನ ಮಾಡುವೆ ಜ್ಞಾನಗಯ್ಯನ ಧ್ಯಾನ ಮಾಡಭಿಮಾನ ತೊರೆಯುತ ನಂಬಿ ನಿನ್ನಯ 2 ಸಂಗಮಾಡಿಸು ಡಿಂಗಿಯರ ಕಡೆ ಕಂಗಳಿಂಗದಲಿ ಶೋಭಿಪಡುವ ಸುಶಾಮಗೊರಳನ ಪೊಡದ ತಂದೆವರದಗೋಪಾಲವಿಠಲನ ಪ್ರೇಮಗುರುಮಣ 3
--------------
ತಂದೆವರದಗೋಪಾಲವಿಠಲರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಭೂರಮಣಗೆ ಸುವ್ವಿ ಸುವ್ವಿ ಎಂದು ಪಾಡಿ ಸಜ್ಜನರೆಲ್ಲ ಕೇಳಿ ಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ವರ ವಾಣಿರಮಣಗೆ ಶರಣೆಂಬೆ ಸುವ್ವಿ ವರ ವಾಣಿರಮಣಗೆ ಶರಣೆಂದು ಪೇಳಿದ ಗುರುವಾದಿರಾಜೇಂದ್ರನ ಕೃತಿಯೆಂದು ಸುವ್ವಿ 1 ¥ಕ್ಕಿವಾಹನ್ನ ಜಗಕ್ಕೆ ಮೋಹನ್ನ ರಕ್ಕಸದಾಹನ್ನನಿವ ಸುವ್ವಿ ರಕ್ಕಸದಾಹನ್ನನಿವ ತನ್ನ ಮರೆ- ಹೊಕ್ಕರ ಕಾಯ್ವ ಪ್ರಸನ್ನನಿವ ಸುವ್ವಿ 2 ಯಶೋದೆಯ ಕಂದ ತನ್ನ ವಿಷವನುಣ್ಣೆಂದ ಕರ್ಕಶದ ಪೂತನಿಯ ಶಿಶುವಾಗಿ ಸುವ್ವಿ ಕರ್ಕಶದ ಪೂತನಿಯ ಶಿಶುವಾಗಿ ಕೊಂದ ನಮ್ಮ ಎಸೆವ ಗೋವಿಂದ ಪಾಲಿಸ ಬಂದ ಸುವ್ವಿ 3 ಶಕಟಾಸುರನ್ನ ಮೆಟ್ಟಿ ಕೊಂದ ಬಲು ವಿಕಟ ದೈತ್ಯನ್ನ ಕೊರಲೆತ್ತಿ ಸುವ್ವಿ ವಿಕಟದೈತ್ಯನ್ನ ಕೊರಲೆತ್ತಿ ಕೊಂದು ಸರ್ಪನ ಮ- ಸ್ತಕದಮೇಲೆ ನಲಿವುತ ನಿಂದ ಸುವ್ವಿ4 ಕರುಗಳ ಕಣ್ಣಿಯ ಬಿಡುವಾಗ ನಾರಿಯರೆಲ್ಲರು ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುವ್ವಿ ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುರಿದು ಅವರ್ಬರಲು ಬೆಣ್ಣೆಯ ಕೊಂಡೋಡುವ ಸುವ್ವಿ 5 ಮತ್ತಿಯ ಮರಗಳ ಕಿತ್ತುವಾಗ ಅಲ್ಲಿ ಭೃತ್ಯರಿಗೊಲಿದು ವರವಿತ್ತ ಸುವ್ವಿ ಭೃತ್ಯರಿಗೊಲಿದು ವರವಿತ್ತ ತನ್ನ ಮಿತ್ರಜನಕಾಗಿ ಗಿರಿಯೆತ್ತಿದನೆ ಸುವ್ವಿ 6 ವೃಂದಾವನದಿ ನಿಂದು ಚಂದದಿ ನಲಿವಾಗ ತನ್ನ [ಕೊಂದಪೆ]ನೆಂದು ಬಂದ ಬಕನ ಸುವ್ವಿ [ಕೊಂದಪೆ]ನೆಂದು ಬಂದ ಬಕನ ಸೀಳಿ ಪುಲ್ಲಂದದಿ ಕೊಂದು ಬಿಸುಟಾನೆ ಸುವ್ವಿ 7 ಕಲ್ಪತರುವಂತೆ ನಮ್ಮ ತನ್ನಧರಿಂದ ಕೊಳಲನೂದುವ ಚೆಲುವಗೆ ಸುವ್ವಿ ಕೊಳಲನೂದುವ ಚೆಲುವ ಗಾನಲೋಲ ಗೋ- ಪಾಲಕೃಷ್ಣನಿಗೆ ಶರಣೆಂಬೆ ಸುವ್ವಿ 8 ರಂಗ ರಾಸಕ್ರೀಡೆಯೆಂಬ ಶೃಂಗಾರರಸ ಬಸಿವ ಮಂಗಳ ವಿಲಾಸವನು [ರಚಿಸಿದ]ಸುವ್ವಿ ಮಂಗಳ ವಿಲಾಸವನು ರಚಿಸಿದಾತನ ಕಂಡು ದೇ ವಾಂಗನೆಯರೆಲ್ಲರು ತನುವ ಮರೆತರು ಸುವ್ವಿ 9 ಮಧುರೆಗೆ ಪೋಗಿ ಮಲ್ಲರಸುವ ನೀಗಿ ಮದಾಂಧ ಮಾವನ್ನ ಮಡುಹಿದ ಸುವ್ವಿ ಮದಾಂಧ ಮಾವನ್ನ ಮಡುಹಿದ ಶ್ರೀಕೃಷ್ಣ ಮುದದಿ ತನ್ನವರ ಮುದ್ದಿಸಿದ ಸುವ್ವಿ 10 ಧರ್ಮವ ಬಿಡಬೇಡ ದುಷ್ಕರ್ಮ ಮಾಡಬೇಡ ದುರ್ಮನವ ಬಿಡದೆ ಹರಿಯಲಿಡು ಸುವ್ವಿ ದುರ್ಮನವ ಬಿಡದೆ ಹರಿಯಲಿಡು ಮನವ ಕಾಮಿನಿಯೊಳಾಡಿ ಕೆಡಬೇಡ ಸುವ್ವಿ 11 ದುರುಳರ ನೋಡಿ ದೂರಕ್ಕೋಡು ಹರಿ- ಶರಣಡಿಗೆ ಪೊಡಮಡು ಸುವ್ವಿ ಶರಣರಡಿಗೆ ಪೊಡಮಡು ಶ್ರೀಕೃಷ್ಣನ ಸು- ಚರಿತವ ಪಾಡುವರೊಳಗಾಡು ಸುವ್ವಿ 12 ಏರಲರಿಯದವ ಮರನೇರಿ ಬಿದ್ದು ಸಾವಂತೆ ನೀರ ಮೀನುಗಳು ಕರಗುವಂತೆ ಸುವ್ವಿ ನೀರ ಮೀನುಗಳು ಕರಗುವಂತೆ ಮನುಜ ನೀ ಬಾರದ ಭಾಗ್ಯಕ್ಕೆ ಹೋರಬೇಡ ಸುವ್ವಿ 13 ಹಿಂದೆ ಪುಣ್ಯದ ಬೀಜವ ಕುಂದದೆ ಬಿತ್ತಿದರೆ ಇಂದು[ಬಾಹದೈಶ್ವರ್ಯ ಮುಂದಿಪ್ಪೋದು] ಸುವ್ವಿ ಇಂದು [ಬಾಹದೈಶ್ವರ್ಯ ಮುಂದಿಪ್ಪೋದು] ಬರಿದೆ ನೀ ನೊಂದು ವಿಧಿಯ ಬೈದರೆ ಎಂದೆಂದು ಕೆಡುವೆ ಸುವ್ವಿ 14 ದುರುಳ ಕೀಚಕ ಕೆಟ್ಟ ಪರಧನಕೆ ಮರುಳಾಗಿ ಕುರುರಾಯ ಸುವ್ವಿ ಪರಧನಕೆ ಮರುಳಾಗಿ ಕುರುರಾಯ ಕೆಟ್ಟನೆಂದು ಒರೆವ ಭಾರತವ ನಿರುತ ಕೇಳು ಸುವ್ವಿ 15 ವಾದಿಯೂ ಹರಿಯಾದ ಪ್ರತಿವಾದಿಯೂ ಹರಿಯಾದ ಭೇದವಿಲ್ಲವೆಂಬ ಮತದಲ್ಲಿ ಸುವ್ವಿ ಭೇದವಿಲ್ಲವೆಂಬ ಮತದಲ್ಲಿ ತಾನೊಬ್ಬನೇ ಕಾದಿ ಗೆದ್ದಾನೆಂತು ಬಿದ್ದಾನೆಂತು ಸುವ್ವಿ 16 ಎಲ್ಲ ಒಂದಾಂದರೆ ಶಾಲ್ಯಾನ್ನನುಂಬುವರು ಪುಲ್ಲನ್ಯಾಕೆ ಮೆದ್ದು ಬದುಕರು ಸುವ್ವಿ ಪುಲ್ಲನ್ಯಾಕೆ ಮೆದ್ದು ಬದುಕರು ಸ್ಥಳಚರರು ಜಲದೊಳು ಚರಿಸೆ ಅಳುವದ್ಯಾಕೆ ಸುವ್ವಿ 17 ವರ್ತಿಯ ಸಂಸಾರ ವ್ಯವಹಾರಕ್ಕೀಗ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಸುವ್ವಿ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಭೇದ ಸತ್ಯವಾದರೈಕ್ಯ ಎತ್ತಿಹೋದು ಸುವ್ವಿ 18 ಅತ್ತೆ ಸೊಸೆಯರಿದ್ದಾಗ ಮನೆಯೊಳು ಮತ್ಸರವು ಕತ್ತೆನಾಯಿಗಳಂತೇಕೆ ಬೆರಸರು ಸುವ್ವಿ ಕತ್ತೆನಾಯಿಗಳಂತೇಕೆ ಬೆರಸರು ಅದರಿಂದ ಪ್ರತ್ಯೇಕ ಜೀವರ ಇರವು ಸುವ್ವಿ 19 ಮಿಥ್ಯಾ ಭೇದಾದರೆ ಅದು ಶುಕ್ತಿರೂಪದಂತೆ ತ- ನ್ನರ್ಥವ ತಾ ಕಾಣಲರಿಯನು ಸುವ್ವಿ ತ- ನ್ನರ್ಥವ ತಾ ಕಾಣಲರಿಯನು ಅದರಿಂದ ನಾ- ವೆತ್ತಿದ ದೂಷಣೆಗೆ ಉತ್ತರವಿಲ್ಲ ಸುವ್ವಿ 20 ಬೊಮ್ಮ ಮಿಥ್ಯವಲ್ಲವೋ ನಿನ್ನ ಮಿಥ್ಯ ಶಶಶೃಂಗ ಸತ್ಯವಲ್ಲ ಸುವ್ವಿ ಮಿಥ್ಯಶ ಶಶೃಂಗ ಸತ್ಯವಲ್ಲ ಶೃಂಗ್ಯೆರಡು ಜ- ಗತ್ತಿನೊಳು ಕೂಡವು ಕುಯುಕ್ತಿಯ ನಿನಗಾವ ಕಲಿಸಿದ ಸುವ್ವಿ 21 ಸತ್ತ ಪೆಣನುಂಟು ಸಾಯದ ವಸ್ತುಂಟು ಸತ್ತು ಸಾಯದ ಮತ್ರ್ಯರಿಲ್ಲ ಸುವ್ವಿ ಸತ್ತು ಸಾಯದ ಮತ್ರ್ಯರಿಲ್ಲ ಮತ್ರ್ಯನಾಗಿ ನಿನ್ನ [ಮಿಥ್ಯಾವಾದ]ವೆಂತು ನಿತ್ಯವಹುದು ಸುವ್ವಿ 22 ಸತ್ಯವೆಂದರುಂಟು ಮಿಥ್ಯವೆಂದರಿಲ್ಲ ಎಂ- ಬರ್ಥ ತಾ ಕೂಡಲರಿಯದು ಸುವ್ವಿ ಎಂ- ಬರ್ಥ ತಾ ಕೂಡಲರಿಯದು ಅದರಿಂದ ಅರ್ಥವಪೇಳೆ ಮಿಥ್ಯಕೆ ನಾಮಾಂತರ ಸುವ್ವಿ23 ಭರ್ತೃಯಿಲ್ಲದವಳ ಮುತ್ತೈದೆಯೆಂಬಂತೆ ನಿನ್ನ ಮಿಥ್ಯಜಗಕಿಟ್ಟ ಸತ್ಯನಾಮ ಸುವ್ವಿ ಮಿಥ್ಯಜಗಕಿಟ್ಟ ಸತ್ಯನಾಮ ನಿನ್ನ ಯುಕ್ತಿಶೂನ್ಯನೆಂದು ಸುತ್ತ ನಗುತಿಪ್ಪುದು ಸುವ್ವಿ 24 ಇಲ್ಲ ಜಗವೆಂಬುದನು ಈಗ ಕಂಡದ ಕಾರಣ ಇಲ್ಲವಾತನ ವಾದಕ್ಕೆ ಪೊಗಳಲರಿಯದು ಸುವ್ವಿ ಇಲ್ಲವಾತನ ವಾದಕ್ಕೆ ಪೊಗಳಲರಿಯದ ಹೊಲೆಯನ [ಎಲ್ಲರರಿಯದಿದ್ದರೆ] ಹೊಲೆಜಾತಿ ಹೋಕ ಸುವ್ವಿ 25 ಗಿರಿಯ ಪಿರಿಯ ಗುಹೆಯೊಳು ದಳ್ಳುರಿಯ ಬೇಗೆಗೆ ಬೆಂದ ಕರಿಯನರಿಯದ ಕಾರಣ ಮರನ ಮುರಿವುದೆ ಸುವ್ವಿ ಕರಿಯನರಿಯದ ಕಾರಣ ಮರನ ಮುರಿವುದೆ ವಾದಿಯೀ ಪರಿಯಲಿ ನಿನ್ನ ಮಿಥ್ಯದಿ ಕಾರ್ಯವಾಗದು ಸುವ್ವಿ 26 ಹಳೆಯ ಮಲವೆಲ್ಲವು ಮಲವೆ ಅಲ್ಲದೆ ಮತ್ತೆ ಜಲಜಾಕ್ಷಿಯರ ಸಂಗಕ್ಕೆ ಪರಿಮಳವೀವುದೆ ಸುವ್ವಿ ಜಲಜಾಕ್ಷಿ ್ಷಯರ ಸಂಗಕ್ಕೆ ಪರಿಮಳವೀವುದೆ ಶೂಲದಿ ಸತ್ತ[ಪೆಣನು] ಸುಳಿವುತಿಪ್ಪುದೆ ಸುವ್ವಿ 27 ನಾಸ್ತಿಯೆಂಬ ವಸ್ತುವ ನಾಸ್ತಿಯೆಂದರಿಯದೆ ಆಸ್ತಿಯೆಂದು ಕಂಡರೆ ಅತಿಮೂರ್ಖ ಸುವ್ವಿ ಆಸ್ತಿಯೆಂದು ಕಂಡರೆ ಅತಿಮೂರ್ಖ ಅಕಟಕಟ ಜ- ಗತ್ತಿನ ಮಹಂತರ ಉನ್ಮತ್ತರ ಮಾಡಿದ ಸುವ್ವಿ 28 ಏಕಾಕಿ ನ ರಮತೆಯೆಂಬ ವೇದವಾಕ್ಯ ವಿ- ವೇಕಿಗಳೆಲ್ಲ ಬಲ್ಲರು ಸುವ್ವಿ ವಿ- ವೇಕಿಗಳೆಲ್ಲ ಬಲ್ಲರು ಅದರಿಂದ ನಿನ್ನ ಮುಕ್ತಿ ಏಕಾಕಿಯಾದರೆ ಶೋಕಕ್ಕೊಳಗಾದೆ ಸುವ್ವಿ 29 ಲೋಕದೊಳು ಹಾಳೂರ ಹಂದಿಯ ಬೇಸರದೆ ನೋಡೊ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ಸುವ್ವಿ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ನಮ್ಮ ಶ್ರೀ ವೈಕುಂಠದ ವಾಸನೆ ಲೇಸು ಸುವ್ವಿ 30 ಅಲ್ಲಿ ಸಹಬ್ರಹ್ಮಣಾ ಸರ್ವಕ ಮಂಗಳೆಂಬಾರಂತೆ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ಸುವ್ವಿ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ನೀ ಕೇಳು ಎಲ್ಲ ಮತ್ರ್ಯರಲ್ಲಿ ಹರಿಯನುವ್ರತರಂತೆ ಸುವ್ವಿ 31 ಅಲ್ಲಿ ನರ ನಾರಿಯರು ಚಿನುಮಯ ಚೆಲುವರಂತೆ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಸುವ್ವಿ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಅವರ ಶ್ರೀ- ವಲ್ಲಭ ಲಾಲಿಸಿ ಪಾಲಿಸುವನಚಿಂತೆ ಸುವ್ವಿ 32 ನಗರ ಕೃಷ್ಣಗೆ ಘನೋದಕದ ಮೇಲೆ ಮಿಂಚುತಿಪ್ಪುದು ಸುವ್ವಿ ಘನೋದಕದ ಮೇಲೆ ಮಿಂಚುತಿಪ್ಪುದು ಅಲ್ಲಿ ಮನೆ ಮನೆಯಲಿ ಮುಕ್ತರ ಸಂದಣಿ ಸುವ್ವಿ34 ಇಂತು ಹಯವದನ ನಿಶ್ಚಿಂತ ಜಗತ್ಕಾಂತ ಸಂತರನು ಸದಾ ಸಲಹುವ ಸುವ್ವಿ ಸಂತರನು ಸದಾ ಸಲಹುವ ಮಾರಾಂತರ ಕೃ- ತಾಂತನ ಬಳಿಗೆ ಕಳುಹುವ ಸುವ್ವಿ 35
--------------
ವಾದಿರಾಜ
ಸುಶೀಲೇಂದ್ರರ ಸ್ತೋತ್ರ ಇಂದು ನೋಡಿದೆ, ಸುಶಿಲೇಂದ್ರ ಗುರುಗಳ ಕುಂದಣದ ಶಿಖರ ಮೌಕ್ತಿಕದಿಂದ ವಿರಾಜಿಸುವ ರಜತ ಅಂದಣವನೇರಿ ಸಂಭ್ರಮದಿಂದ ಮೆರೆದು ಬರುವ ಗುರುಗಳ ಪ ಧ್ವಜ ಪತಾಕೆಶ್ವೇತ ಛತ್ರ ರಜತವರ್ಣ ಚವರ ಚಾಮರ ಭಜಿಪÀ ಭಟರ ಸಂದಣಿಮಧ್ಯ ರಜನಿ ಪತಿಯ ತೆರದಿ ಶೊಭಿಪರಿಂದು 1 ಭೇರಿ ಕಹಳೆ ವಾದ್ಯನೇಕ ಚಾರುತರ ಶೃಂಗಾರವಾದ ವಾರಣಗಳು ಎಡಬಲದಲಿ ಸಾರಿಬರುವ ಸಂಭ್ರಮವನು 2 ಎಲ್ಲಿನೋಡೆ ಪಾಠಪ್ರವಚ - ನೆಲ್ಲಿ ನೋಡೆ ವೇದಶಾಸ್ತ್ರ ಎಲ್ಲಿ ನೋಡಲಲ್ಲಿ ಲಕುಮಿ ನಲ್ಲನ ಸತ್ಕಥಾಲಾಪವಿಂದುನೋಡಿದೆ 3 ಆ ಮಹಾಸುಶೋಭಿತಮಾದ ಹೇಮಮಂಟಪ ಮಧ್ಯಮೂಲ ರಾಮನಾರ್ಚನೆಗೃವ ವೃಂದ ಪ್ರೇಮದಿ ನೋಡಿ ಧನ್ಯನಾದೆ 4 ಈ ಮಹಾಗುರುವರ್ಯರ ಪದ ತಾಮರ¸ವÀ ಪೊಂದಿದ ಭಕ್ತರ ನೇಮದಿಂ ವರದೇಶ ವಿಠಲ ಕಾಮಿತಾರ್ಥಗರೆವ ಸತ್ಯ 5
--------------
ವರದೇಶವಿಠಲ
ಸೊಂಡಿಲಾನಗರದ ಭೂಪನ ಕೊಂಡಾಡಲ್ವಶವಲ್ಲ ತಾಯಿಕಂಡು ಬಂದೆನೆ ಪಾಂಡವರ ಭಾಗ್ಯವ ಪ. ಥೋರ ಮುತ್ತಿನ ಝಲ್ಲೆ ಬಿಗಿದ ತೇರುವಾಜಿ ಶೃಂಗರಿಸಿದ ದಾರಿ ಮ್ಯಾಲ ನಿಂತಾವ ನಮ್ಮ ವೀರ ರಂಗನ ಕರೆಯ ಬರಲು 1 ಅಚ್ಚ ಮುತ್ತಿನ ಝಲ್ಲೆ ಬಿಗಿದಹೆಚ್ಚಿನ ರಥಗಳುವಾಜಿಜತ್ತಾಗಿ ನಿಂತಾವಮ್ಮಅಚ್ಯುತನ ಕರೆಯ ಬರಲು2 ಬರಿಯ ಮಾಣಿಕ ರತ್ನ ಬಿಗಿದ ದೊರೆಗಳೇರೊ ರಥ ವಾಜಿಸರಿಯಾಗಿ ನಿಂತಾವಮ್ಮ ನಮ್ಮಹರಿಯ ಕರೆಯ ಬರಲು 3 ನಾನಾ ಮುತ್ತು ರತ್ನ ಬಿಗಿದ ಆನೆ ಅಂಬಾರಿಗಳು ಕೋಟಿಮಾನವಂತರು ಏರಬೇಕುಶ್ರೀನಿವಾಸನ ಕರೆಯ ಬರಲು 4 ಮುತ್ತು ಮಾಣಿಕ ರತ್ನ ಬಿಗಿದಹೆಚ್ಚಿನ ರಥಗಳು ವಾಜಿಮಿತ್ರೆಯರಿಂದ ಬರತಾರಮ್ಮನಮ್ಮ ಅಚ್ಯುತನ ಕರೆಯ ಬರಲು 5 ಏಳು ಕೋಟಿ ಕಾಲಾಳುಗಳುಭಾಳ ಮುತ್ತಿನ ರತ್ನವಿಟ್ಟುತಾಳ ಮೇಳದಿ ನಿಂತಾರಮ್ಮವ್ಯಾಳಾ ಶಯನನ ಕರೆಯ ಬರಲು6 ಸಾವಿರ ಬಂಡಿಯ ಮ್ಯಾಲೆ ಹೇರಿ ಬುಕ್ಕಿಟ್ಟು ಗುಲಾಲು ಸೂರ್ಯಾಡಿ ರಂಗನ ಕರೆಯಲು ವೀರರೈವರು ಬರುತಾರಮ್ಮ 7 ಕೊಲ್ಹಾರಿ ಬಂಡಿಯ ಮ್ಯಾಲೆ ಮಲ್ಲಿಗೆ ಸಂಪಿಗೆ ಹೇರಿಚೆಲ್ಲಾಡಿ ರಂಗನ ಕರೆಯ ಬಲ್ಲಿದ ಐವರು ಬರುತಾರಮ್ಮ 8 ಮದ್ದು ಬಾಣ ಬಿರುಸು ಕೋಟಿ ಶೀಘ್ರವಾಗಿ ನಿಂತಾವಮ್ಮಮುದ್ದು ರಂಗನ ಕರೆಯ ಬರಲು ಮಧ್ವ ಮತದ ಬಿರುದು ಹಿಡಿಸಿ 9 ಬಿಡವೋ ಬಾಣ ಬಿರುಸು ಕೋಟಿ ಕಡು ಭಾಗÀವತರು ಕೋಟಿಷಟಶಾಸ್ತ್ರ ಬಲ್ಲವರು ಕೋಟಿಒಡೆಯ ರಂಗನ ಕರೆಯ ಬರಲು 10 ತಂದೆ ರಾಮೇಶನ ಗುಣವ ಬಂಧುಗಳು ಹೊಗಳೋರು ಕೋಟಿಅಂದು ಆರಣ ಬ್ರಾಹ್ಮಣ ಕ್ರಮ ಜಟಿ ಬಂದು ಕರೆವೊ ದ್ವಿಜರು ಕೋಟಿ 11
--------------
ಗಲಗಲಿಅವ್ವನವರು
ಸ್ಮರಿಸಿ ಸುಖಿಸೆಲೋ ಮಾನವಾ ಪ ಸರಸಿಜಾಸನ ಸತತ ನೆನೆವ ಹರಿನಾಮವನು ಅ.ಪ ಜವರಾಯ ಕಿಂಕರರ ಹಿಮ್ಮೆಟ್ಟಸಿದ ನಾಮ ಧ್ರುವರಾಯಗೊಲಿದ ಘನವು ಈ ನಾಮ ನವನೀತರೂಪದಿಂದ ಘನವ ತಾಳ್ದಿಹ ನಾಮ ಸುವಿಲಾಸದಿಂ ಪಾರ್ಥಗೊಲಿದಿರ್ಪನಾಮವನು 1 ಸನಕಾದಿ ಮುನಿಗಳು ಸತತ ಭಜಿಸುವ ನಾಮ ಅನಿಲಜಾತನಿಗೊಲಿದ ಪರಮನಾಮ ವನಚಾರಿಯಾಗಿದ್ದ ಶಬರಿಗೊಲಿದ ನಾಮ ವನಚರರ ಗರುವವನು ಮುರಿಯುವ ನಾಮ 2 ಪಾಂಚಾಲಿಗಕ್ಷಯದ ವರವನಿತ್ತಾ ನಾಮ ಪಾಂಚಜನ್ಯವ ಸಿರಿಯೊಳೆಸೆಯುತಿಹ ನಾಮ ವಂಚಕರ ಹೃದಯಗಳ ಭೇದಿಸುತ್ತಿಹನಾಮ ಚಂಚಲೆಯರುತ್ಸಾಹದಿಂ ಭಜಿಪ ನಾಮವನು 3 ದುರುಳದೈತ್ಯರ ಮನವ ಕದಡಿ ಕಲಕುವ ನಾಮ ಶರಣಾಗತಾವಳಿಯ ಪೊರೆಯುತಿಹನಾಮ ತರಳಪ್ರಹ್ಲಾದ ತಾ ಪಿತಗೊರೆವ ನಾಮವನು 4 ಮಾಂಗಿರೀ ವರಾಗ್ರದೊಳು ಮರೆಯುತಿಹ ಸಿರಿನಾಮ ಶೃಂಗಾರ ಶ್ರೀ ಪಾಂಡುರಂಗ ನಾಮ ಗಂಗಾಧರಾನುತ ಸುಖದಾತ ಶ್ರೀನಾಮ ಮಂಗಳಕರ ರಾಮದಾಸನುತ ನಾಮವನು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಹಣವೆÉ ನಿನ್ನಯ ಗುಣವೇನು ಬಣ್ಣಿಪೆನೊ ಪ. ಹಣವಿಲ್ಲದವನೊಬ್ಬ ಹೆಣವೇ ಸರಿ ಕಂಡ್ಯಾ ಅ.ಪ. ಬೆಲೆಯಾಗದವನೆಲ್ಲ ಬೆಲೆಯ ಮಾಡಿಸುವಿ ಎಲ್ಲ ವಸ್ತುಗಳನಿದ್ದಲ್ಲೆ ತರಿಸುವಿ ಕುಲಗೆಟ್ಟವರ ಸತ್ಕುಲಕೆ ಸೇರಿಸುವಿ ಹೊಲೆಯನಾದರೂ ತಂದೊಳಗಿರಿಸುವಿ 1 ಅಂಗನೆಯರ ಸಂಗ ಅತಿಶಯದಿ ಮಾಡಿಸುವಿ ಶೃಂಗಾರಾಭರಣಂಗಳ ಬೇಗ ತರಿಸುವಿ ಮಂಗನಾದರೂ ಅನಂಗನೆಂದೆನಿಸುವಿ ಕಂಗಳಿಲ್ಲದವಗೆ ಮಗಳ ಕೊಡಿಸುವಿ 2 ಚರಣಕ್ಕೆ ಬಂದಂಥ ದುರಿತವನು ಬಿಡಿಸುವಿ ಸÀರುವರಿಗೆ ಶ್ರೇಷ್ಠನರನ ಮಾಡಿಸುವಿ ಅರಿಯದ ಶುಂಠನ ಅರಿತವನೆನಿಸುವಿ ಸಿರಿ ಹಯವದನನ ಸ್ಮರಣೆ ಮರೆಸುವಿ 3
--------------
ವಾದಿರಾಜ
ಹನುಮಂತ ಬಲವಂತ ಅತಿ ದಯವಂತಾ | ಘನವಂತ ಕೀರ್ತಿವಂತ ಅತಿ ಜಯವಂತಾ || ಅನುದಿನದಲಿ ನಿನ್ನ ನೆನೆಸುವೆ ಎನ್ನ ಮನದಾಸೆ | ಯ ನೀಯೋ ದನುಜ ಕೃತಾಂತಾ ಪ ಪಾವಮಾನಿ ಸತತ ಪಾವನ್ನ ಚರಿತಾ | ಪಾವಕಾಂಬಕನುತಾ ಪ್ಲವಂಗನಾಥಾ || ದೇವ ಕರುಣಪಾಂಗಾ ಭಾವುಕತುಂಗಾ | ಗ್ರೀವಾ ಶತಶೃಂಗ ಗ್ರಾವವೆ ಭಂಗಾ || ಕಾವಾ ವರವೀವಾ ಭೋದೇವ ಸಂಭವಾ | ಸು | ಗ್ರೀವ ಸಹಾಯ ಸರ್ವ ದೇವನರಸಿ ಯತಿವರ ಹಾರಿದಾ | ಕೋವಿದಾ ಕಪಿವರ ದೇವಕಿ ತನುಜನಾ || ಮಾವನ ಮಾವನಾ | ಜೀವಕೆ ಮುನಿದನೆ | ಜೀವೇಶ ಮತವನ ಪಾವಕಾ ಜಯ ಜಯ 1 ಧರಣಿಜಾತಿಗೆ ಭದ್ರಕರವಾದ ಮುದ್ರಾದರದಿಂದ ಇತ್ತ ನಿದ್ರಾ | ಗರಳ ದುರುಳರ ವರವದ್ದಾ | ನೆರದಲ್ಲಿ ಶಲ್ಯ ಎದುರ ಬರಲಾಗಿ ಗೆದ್ದಾ | ಮರುತಾ ಸುಖ ಗುರುವೆ ಸುರತರುವೆ | ಫಲ | ನಿರ್ಜರ ಗಣದಲ್ಲಿ ಇಹ | ಪರದಲಿ ದೇವ | ಶರಧೀ ಬಾಗಿದ ಧೀರಾ | ಸೂನು ಆವಾಸ ಯೋಗಕೆ ಸಂ | ಸುರನದಿ ದಾಟಿದಾ ಪರಮಹಂಸ 2 ಕರಡಿ ವಾನರಬಲಾ ನೆರಹಿ ಮಹಾ ಪ್ರಬಲ | ಶಿರ ಹತ್ತುವುಳ್ಳವನ ಕುಲ ವರಿಸಿದಾ ಸುಬಲಾ | ಕುರುಪತಿ ನಿಜ ತಮ್ಮ ಬರಲವನ ಹಮ್ಮು | ಬೊಮ್ಮ ಪೊರೆವನೆ ನಮ್ಮ | ಮರುತಾ ಸುಖ ಭರಿತಾ ಸಂಹರಗೈಸುವ | ಸಂ | ಕರ ಗರ್ವಹರ ಸರಯು ತೀರದಲ್ಲಿದ್ದಾ | ಪುರದಲ್ಲಿ ಮೆರದನೆ | ಕರ ಕಮಲೋದ್ಭವ | ವರ ವೃಕೋದರನೆ ವಿಜಯವಿಠ್ಠಲನ |ಶರಣರ ಪಾಲಾ ಬದರಿವಾಸಾ ಯಂತ್ರೇಶಾ 3
--------------
ವಿಜಯದಾಸ
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹೊರಗ್ಹೋಗಿ ಆಡಬೇಡವೋ ಕಂದಾ ಮಹಾನಂದಾ ಬಹುಸರಸಿಜಾಕ್ಷಿಯರು ದೂರುವರೋ ಗೋವಿಂದಾ ಬಾ ಮನೆಗೆ ಮುಕುಂದಾ ಪ ಹೆಂಗಸ ಕೊಂದನೆಂಬುವರು ಮನೆ ಅಂಗಳದೊಳಗೆ ಬಚ್ಚಿಟ್ಟು ಕೊಂಬುವರೋಶೃಂಗಾರದಲಿ ಮೋಹಿಸುವರೋ ತಮ್ಮ ಕಂಗಳಿಂದಲಿನೋಡಿ ದೃಷ್ಟಿ ಬಿಡುವರೋ1 ಕಳ್ಳತನವ ಕಲಿಸುವರೋ ಏನ ಬಲ್ಲೆ ಕಂದಮ್ಮ ನೀ ಸುಳ್ಳಕಲಿಸುವರೋಒಳ್ಳೆಯವರಲ್ಲ ಗೋಪಿಯರು ಗ್ರಾಮದಲೆ ನಿಲ್ಲಲು ಕೆಟ್ಟ ಸೊಲ್ಲನಾಡುವರೋ2 ಸುಂದರ ಸೌಭಾಗ್ಯನಿಧಿಯೇ ನಿನ್ನಒಂದು ಕ್ಷಣವು ಬಿಟ್ಟು ಇರಲಾರೆ ಹರಿಯೇ ಇಂದಿರೇಶನಸುರ ದೊರೆಯೇ 3
--------------
ಇಂದಿರೇಶರು
ಹೊಳೆವೊ ಮಂದಿರವ ಪ. ರಂಗಗೆ ರಚಿಸಿದ ಶೃಂಗಾರದ ವೈಕುಂಠ ಮಂಗಳಾದೇವಿಯರು ಇಳಿಯಲಿ1 ವೀತದೋಷಗೆ ದಿವ್ಯ ಸೇತು ದ್ವೀಪವ ರಚಿಸಿ ಪ್ರೀತಿ ಮಡದಿಯರು ಇಳಿಯಲಿ2 ರನ್ನಮಾಣಿಕದ ಅರಮನೆ ಪನ್ನಿಯರು ಬಂದು ಇಳಿಯಲಿ 3 ಪಟ್ಟೆ ಮುತ್ತುಗಳ ಬಿಗಿದು ಇಟ್ಟಾವ ಕನ್ನಡಿ ಧಿಟ್ಟ ತೋರೋದೆ ಜನಕೆಲ್ಲ ಅಷ್ಟು ಮಡದಿಯರು ಇಳಿಯಲಿ 4 ಹಸಿರು ಪಚ್ಚವ ಬಿಗಿದ ಕುಸುರಾದ ಗಿಳಿಬೋದು ದೇವಕಿ ವಸುದೇವ ಬಂದು ಇಳಿಯಲಿ5 ಜತ್ತು ತೋರುವುದು ಜನಕೆಲ್ಲ ಜತ್ತು ತೋರುವುದು ಜನಕೆಲ್ಲ ಸರಸ್ವತಿ ಮತ್ತೆ ಚತುರ್ಮುಖನು ಇಳಿಯಲಿ 6 ಎದ್ದು ತೋರುವುದು ಜನಕೆಲ್ಲ ಎದ್ದು ತೋರುವುದು ಜನಕೆಲ್ಲ ಪಾರ್ವತಿ ರುದ್ರಾದಿಗಳೆಲ್ಲ ಇಳಿಯಲಿ 7 ಕುಂದಣ ರತ್ನಗಳಿಂದ ಹೊಂದಿ ಕಟ್ಟಿದರಮನೆ ಅಂಬರಕೆ ಮ್ಯಾಲೆ ತುಳುಕುವ ಶಚಿದೇವಿ ಇಂದ್ರಾದಿಗಳೆಲ್ಲ ಇಳಿಯಲಿ 8 ರೇವತಿ ಬಲರಾಮರು ಬಂದು ಇಳಿಯಲಿ9 ಒಂಭತ್ತು ಬಗೆ ರತ್ನ ತಂಬಿ ರಚಿಸಿದ ಮನೆ ಅಂಬರಕೆ ಮೇಲೆ ತುಳುಕುವ ಅಂಬರಕೆ ಮೇಲೆ ತುಳುಕುವರತಿದೇವಿಸಾಂಬ ಪ್ರದ್ಯುಮ್ನರು ಇಳಿಯಲಿ10 ಚಂದ ತೋರುವುದು ಜನಕೆಲ್ಲ ಚಂದ ತೋರುವುದು ಜನಕೆಲ್ಲಭಾನು ಮಾನು ಬಂದ ಜನರೆಲ್ಲ ಇಳಿಯಲಿ 11
--------------
ಗಲಗಲಿಅವ್ವನವರು
ಹ್ಯಾಂಗೆ ಕೊಟ್ಟನು ಹೆಣ್ಣ ಸಾಗರನು ಈ ವರಗೆ ಪ. ಶೃಂಗಾರಪುರುಷರು ಬಹುಮಂದಿಯಿರಲುಅ.ಪ. ಮುಟ್ಟಿನೋಡಿದರೆ ಮೈಯತಿ ಕಠಿಣವು ಸೊಟ್ಟ ಮೋರೆಯು ಇವಗೆ ಎಷ್ಟುದ್ದ ಹಲ್ಲುಗಳು ಇಷ್ಟು ಘೋರಮುಖದಳಿಯನೆಲ್ಲ್ಲಿ ದೊರಕಿದನೊ 1 ಬಡವನು ಭಿಕ್ಷುಕನು ಬಡಬನಂದದಿ ಕೋಪವು ನೋಡಿದರೆ ತಲೆ ಜಟಿಯು ಕಟ್ಟಿಹುದು ಜಾರ ಚೋರನಿಗೆ ನೋಡಿ ನೋಡಿ ಹೆಣ್ಣ ಹ್ಯಾಂಗೆ ಕೊಟ್ಟನು 2 ಭಂಡನಾಗಿರುವನು ಕಂಡವರೊಡನೆ ಕಾಳಗವ ಕೊಂಡುಬಹ ಬಲು ಉದ್ದಂಡನಿವನು ಅಂಡಜವಾಹನಗೆ ಯೋಗ್ಯವಾದ ಹೆಣ್ಣ ಕಂಡುಕಂಡೀ ಹಯವದನಗೆ ಕೊಟ್ಟನ್ಹ್ಯಾಗೆ 3
--------------
ವಾದಿರಾಜ
ಹ್ಯಾಂಗೆ ನೀ ದಾಸನಾದೆ ಪ್ರಾಣಿ ಪ ಭವ ಭಂಗವ ಪಡುವವನು ಅ ಆಸೆಯ ಬಿಡಲಿಲ್ಲ ಕಾಸು ಗಳಿಸುವೆಯಲ್ಲದೋಷಕ್ಕೆ ಗುರಿಯಾಗಿ ಹೇಸಿಕೆಯೊಳು ಬಿದ್ದು 1 ತನುವು ತನ್ನದು ಎಂದು ತನಯ ಮಾನಿನಿಯರೆತನಗೆ ಗತಿಯೆಂದು ನಂಬಿರುವ ಮೂಢನೆ 2 ಕಾಲನ ದೂತರು ಕರುಣಸಂಪನ್ನರೆಕಾಲ ವ್ಯರ್ಥದಿ ಕಳೆವ ಕೀಳು ಬುದ್ಧಿಯ ಪ್ರಾಣಿ3 ತಲೆ ಹುಳಿತ ನಾಯಂತೆ ಹಲವು ಬೀದಿಯ ತಿರುಗಿಗೆಲುವಿನಿಂದಲಿ ಮೂಲ ಮಲವನಳಿಯದೆ4 ಉದರಪೋಷಣೆಗಾಗಿ ಅಧಮರ ಯಾಚಿಸುತಮದಗರ್ವವೆಂಬುವುದ ಬದಿಯಲ್ಲಿ ಇಟುಗೊಂಡು 5 ಹಿರಿಯರ ನಿಂದಿಸಿ ಹರಿದಾಸನೆನಿಸಿದೆಗುರುಮಂತ್ರವರಿಯದ ಮರುಳು ಪಾಮರ ಪ್ರಾಣಿ6 ಕಾಲುಗೆಜ್ಜೆಯ ಕಟ್ಟಿ ಮೇಲೆ ಕರತಾಳ ತಟ್ಟಿಶ್ರೀಲೋಲನ ಗುಣ ಪೊಗಳಿ ನಟಿಸದಲೆ 7 ಕುಣಿಕುಣಿದು ಮನದಣಿದು ಮಣಿದು ಸಜ್ಜನ ಪದಕೆಅಣಿಮಾದಿ ಅಷ್ಟಸಿದ್ಧಿಯನು ಕೈಗೊಳ್ಳದಲೆ 8 ಭಾಗವತ ಕೇಳದೆ 9 ಕಟ್ಟಿ ಕೈ ಪರರಲಿ ಹೊಟ್ಟೆಗೋಸುಗವೆ ಕಂ-ಗೆಟ್ಟು ಯಾಚಿಸುವ ಭ್ರಷ್ಟಪ್ರಾಣಿಯೆ ನೀನು 10 ನೇಮದಿ ಉಪವಾಸ ಆ ಮಹಾ ಏಕಾದಶಿಕಾಮಜನಕನನು ಪ್ರೇಮದಿ ಸ್ಮರಿಸಿದೆ11 ಏಸುದಿನ ಬದುಕಿದರು ಸೂಸುವ ಪಾಪವಈಸಿ ದಾಟದೆ ಕಾಸುವೀಸಕೆ ಬಾಳಿದವ 12 ಮೂರ್ತಿ ಪಾದಂಗಳ ಮನದಲಿ ಹಿಂಗದೆ ಭಜಿಸದೆ 13 ಬತ್ತಿ ಹೋಯಿತು ನದಿ ಬಿತ್ತದೆ ಬೆಳೆಯದೆಅತ್ತರೆ ಬಹುದೇನೊ ಉತ್ತಮ ಫಲ ಸೂಸಿ14 ಆಡುವ ಮಕ್ಕಳ ಕೈಗೆ ನೀಡದೆ ಕಡಲೆಯಬೇಡಿದರೆ ಕೊಟ್ಟು ಕೂಡಿ ಆಡದವನು ನೀ 15 ಶೃಂಗಾರ ಬಯಸುತ ಬಂಗಾರದೊಡವೆಯಹಿಂಗದೆ ಶ್ರೀ ತುಲಸಿಯ ರಂಗಗರ್ಪಿಸದೆ 16 ಸುತ್ತ ಕತ್ತಲೆ ಚಿಂತೆ ಮತ್ತೆ ಭಯದ ಭ್ರಾಂತಿಚಿತ್ತಜನಯ್ಯನು ದೊರೆವ ಬಗೆ ಕಾಣದೆ 17 ಡಂಬವ ಮಾಡಿಕೊಂಡು ತುಂಬ ಪಾಪ ಒಳಗೆಹಂಬಲಿಸಿದರಿನ್ನು ಬೆಂಬಲಕಾರುಂಟು 18 ದುಂಡು ನಾಮವ ಬಳಿದು ಭಂಡತನದಲಿ ಜಗದಿದಂಡಿಗೆ ಬೆತ್ತ ಪಿಡಿದು ಹೆಂಡಿರ ಕಾಯ್ವನೆ 19 ಹಕ್ಕಿವಾಹನನ ಗುಣ ಲೆಕ್ಕಿಸಿ ಪೊಗಳದೆಬೆಕ್ಕಸ ಬೆರಗಾಗಿ ಅಕ್ಕಿಗೆ ತಿರುಗುವವ 20 ಪಾದ ರಾಗದಿ ಭಜಿಸದೆಕಾಗಿನೆಲೆಯಾದಿಕೇಶವರಾಯನೆನದೆ21
--------------
ಕನಕದಾಸ