ಒಟ್ಟು 831 ಕಡೆಗಳಲ್ಲಿ , 93 ದಾಸರು , 690 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾಗವತ 342 ಆಗಮದಸಾರ ಶಾಸ್ತ್ರವಿಚಾರ ಪೌರಾಣ ಯೋಗತತ್ವಗಳ ಶೃಂಗಾರವೆನಿಸುತಿಹ ಶ್ರೀ ಭಾಗವತಮಂ ಪೇಳ್ವೆಸಂಕ್ಷೇಪದಿಂದ ಹನ್ನೆರಡು ಪದ್ಯಂಗಳಾಗಿ ಗುರುಸುತನ ಬಾಣದುಪಹತಿಗೆ ಮೊರೆಯಿಡುವಉ ತ್ತರೆಯ ಗರ್ಭವ ಶೌರಿರಕ್ಷಿಸಲ್ ಬಳಿಕಧರೆ ರಾಜ್ಯವಾಳುತಿರೆವಿಷ್ಣುರಾತಂ ವರಶಮೀಕಾತ್ಮಜನ ಶಾಪಬರೆತಾಕೇಳಿ ಪರಮವೈರಾಗ್ಯದಿ ಕುಶಾಸ್ತರಣದೊಳಿರಲ್ ಪ್ರಥಮಸ್ಕಂಧದೋಳ್ ತಿಳಿವುದು 1 ಸಾರವಾಗಿಹ ಭಕ್ತಿಯೋಗಮಂ ಪೂರ್ವದೋಳ್ ನಾರದಗೆ ವಿಧಿವೇಳ್ದ ಸೃಷ್ಟಿಯಕ್ರಮಂ ಪ್ರಳಯ ತನ್ನಪುರಮಂ ತೋರಿಸಿ ಚಾರುಭಾಗವತ ತತ್ವೋಪದೇಶದಿ ಸೃಷ್ಟಿ ಗಾರಂಭ ಮಾಡಿಸಿದನೆಂದು ಶುಕಮುನಿವರಂ ತಿಳಿವುದು 2 ವಿದುರ ಮೈತ್ರೇಯ ಸಂವಾದಮಂ ಸೃಷ್ಟಿಯ ಭ್ಯುದಯವಂ ಸ್ವಾಯಂಭುವಿನಜ ನನವಹರೂ ಪದ ಹರಿಯಚರಿತ ಸನಕಾದಿಗಳ್ ಜಯವಿಜಯರಿಗೆ ಕೊಟ್ಟ ಶಾಪತೆರನು ಉದಿಸಿದಂಹರಿಕರ್ದಮಂಗೆ ಕಪಿಲಾಖ್ಯದಿಂ ವಿದಿತವಾಗಲ್ ತಾಯಿಗರುಹಿದಂಸಾಖ್ಯಯೋ ತೃತೀಯಸ್ಕಂಧದೋಳ್ ತಿಳಿವದು 3 ಶಿವನ ವೈರದಿನಕ್ಷಯಾಗವಂ ಮಾಳ್ಪುದಂ ತವಕದಿಂ ಕೆಡಿಸಿ ಶಂಕರನು ಕರುಣಿಸುವದಂ ಧೃವಚರಿತಮಂಗವೇನರಚರಿತ್ರೆಗಳ್ ಪೃಥುಚಕ್ರವರ್ತಿ ಜನನ ಅವನಿಗೋರೂಪಿಯಾಗುತ ಸಕಲವಸ್ತುಸಾ ರವಕೊಡುವದುಂ ಪ್ರಚÉೀತಸರುಪಾಖ್ಯಾನಮಂ ತವೆಪುರಂಜನನುಪಾಖ್ಯಾನಮಂ ಯಿದುಚತುರ್ಥ ಸ್ಕಂಧದೋಳ್ ತಿಳಿವದು 4 ವರಪ್ರಿಯ ವ್ರತಚರಿತೆಯಾಗ್ನೀಧ್ರಚರಿತೆಯುಂ ಹರಿಯ ಋಷಭಾವತಾರದ ಮಹಾಮಹಿಮೆಯಂ ಭೂಗೋಳವಿಸ್ತಾರವು ಎರಡನೆ ಖಗೋಳದೋಳ್ ವಾಯ್ವಾದಿಮಂಡಲವಿ ವರಗಳುಂ ನರಕಾದಿ ವರ್ಣನೆಯ ಸಂಖ್ಯೆಯುಂ ಯಿದುಪಂಚಮಸ್ಕಂಧದೋಳ್ ತಿಳಿವದು 5 ಯರ ಜನನಮಂ ವಿಶ್ವರೂಪಾಖ್ಯಭೂಸುರಂ ವೃತ್ರಾಸುರನ ಕೊಲ್ವುದುಂ ಭರದಿ ಬೆನ್ಹತ್ತಿಬಹ ಬ್ರಹ್ಮಹತ್ಯವ ಸುರಪ ಧರಣಿಜಲ ವೃಕ್ಷಸ್ತ್ರೀಯರಿಗೆ ಭಾಗಿಸಿದುದಂ ತಿಳಿವದೂ 6 ವಿಧಿಯವರದಿ ಹಿರಣ್ಯಕಶ್ಯಪನು ಗರ್ವದಿವಿ ಬುಧರಂ ಜಯಿಸುವದುಂ ತರಳ ಪ್ರಹ್ಲಾದನ ನರಸಿಂಹನಾಗಿ ಹರಿಯು ಮದಮುಖನ ಸೀಳ್ವುದಂಪ್ರಹ್ಲಾದನೃಪನಜಗ ರದಮುಖದಿ ವರ್ಣಾಶ್ರಮದ ಧರ್ಮಕೇಳ್ವುದಂ ತಿಳಿವದು 7 ಮನುಗಳ ಚರಿತ್ರೆಗಳ್ ಗಜರಾಜ ಮೋಕ್ಷವಂ ದನುಜ ದಿವಿಜರು ಶರಧಿಯಂಮಥಿಸೆವಿಷವರು ಹರಿಸುರರಿಗೀಯ್ಯೆ ಅನಿಮಿಷರ ಗೆದ್ದು ಬಲಿ ಶತಕ್ರತುವಮಾಳ್ಪುದಂ ವನಜಾಕ್ಷ ವಟುವೇಷದಿಂ ದವಗೆಲ್ವುದಂ ತಿಳಿವದು 8 ಇನವಂಶ ರಾಜರಚರಿತ್ರೆಯೋಳಂಬರೀ ಷನ ಮಹಿಮೆ ಯಿಕ್ಷಾ ್ವಕುರಾಜನಚರಿತ್ರ ರಾ ಚಂದ್ರವಂಶಾನುಚರಿತಂ ವನಿತೆಯುಂ ಪುರುಷನಾಗಿದ್ದಿಳನ ಚರಿತಶು ಕ್ರನ ಮಗಳ ಶರ್ಮಿಷ್ಠೆಯರಚರಿತೆಯದುವೂರು ನವಮಸ್ಕಂಧದೋಳ್ ತಿಳಿವದು 9 ಹರಿ ದೇವಕೀ ಪುತ್ರನಾಗಿ ಗೋಕುಲದಿ ಪರಿ ಪರಿಲೀಲೆಗಳತೋರಿ ದುಷ್ಟರಂಸದೆದುತಾಂ ಪಿತೃಮಾತೃಗಳಸೆರೆಯಬಿಡಿಸಿ ವರವುಗ್ರಸೇನಂಗೆ ಪಟ್ಟಮಂಗಟ್ಟಿಸಾ ಗರದಿ ಪುರವಂರಚಿಸಿ ಬಲುತರುಣಿಯರ ಕೂಡಿ ತಿಳಿವದು 10 ನೆಸಗಿದಂ ಯದುಕುಲಕೆ ಹರಿಯಸಂಕಲ್ಪದಿಂ ಪರಮಾತ್ಮತತ್ವಬೋಧೆಯನರುಪಿದಂ ಮುಸಲದಿಂ ಯಾದವರಕ್ಷಯವೈದಲನ್ನೆಗಂ ಬಿಸಜನಾಭಂ ರಾಮನೊಡನೆ ತಾತೆರಳಿದಂ ಕರೆದೊಯಿದನೇಕಾದಶಸ್ಕಂಧದೊಳ್ 11 ಪರೀಕ್ಷಿತ ಮಹಿಪಾಲತಾಂ ಕೇಳಿದಂ ಶುಕನಿಂದಸಕಲಮುಂ ಕಲಿಕಾಲ ಸೂತಶೌನಕಾದಿಗಳಿಗಿದನು ಪೇಳಿದಂ ಬಾದರಾಯಣನ ಕೃಪೆಯಿಂದಲಿದ್ವಿ ಜಾಳಿ ಹರುಷದ ಕಡಲೊಳೀಜಾಡಿದುದುರಮಾ ಲೋಲನ ಮಹಾಲೀಲೆಯವತಾರಮದ್ಭುತಂ- -ದ್ವಾದಶಸ್ಕಂಧವಿದುವೆ 12 ಇಂತೀ ಪರಿಭಾಗವತ ಶಾಸ್ತ್ರಮಂ ಸಂತರಡಿಗಳಿಗೆರಗಿ ಪೇಳ್ದೆ ಸಂಕ್ಷೇಪದಿಂ ಕಂತುಪಿತಗÀುರುರಾಮವಿಠಲತಾಂಹೃದಯದೋಳ್- -ನಿಂತುನುಡಿಸಿದತರದೊಳು ಸ್ವಾಂತನಿರ್ಮಲರಾಗಿ ಪಠಿಸುವರಿಗನುದಿನಂ ಚಿಂತಿತಾರ್ಥಂಗಳಿಹಪರಸೌಖ್ಯವಿತ್ತುಶ್ರೀ ಕಾಂತ ಗುರುರಾಮವಿಠಲ ಪೊರೆವಜಯ- -ಜಯಮನಂತಮಹಿಮಂಗೆನಿರತಂ 13
--------------
ಗುರುರಾಮವಿಠಲ
ಭಾಗವತರ ನೋಡುವಾ ಭಾಗ್ಯಸ್ವರೂಪಾ ಪ ಯೋಗಜನಗಳನು ರಾಗದಿ ಧ್ಯಾನಿಪ ಭೋಗಿಶಯನ ಸಂಪನ್ನ ಸದ್ಗುಣಪೂರ್ಣ ಭಾರ್ಗವೀಸತಿ ಬಿಡದೆ ವರಿಸಿರುವಾ ತಾಂಝಂ ತಂಝಂತ ತಂತಕನಾ ತಧಿಂಗಿಣತೋಂ ತಧಿಂಗೀಣತೋಂ ತಧಿಂಗಿಣತೋಂ 1 ನಿನ್ನಮುಖಕೇ ಸರಿಬಾರದೆ ಚಂದ್ರಮನು ಉನ್ನತ ಕಳಂಕಿಯಾಗಿರುತಿಹನೋ ಕಣ್ಣು ಸಾಹಸ್ರಕ್ಕೂ ಸರಿಬರದೆ ತಾಂಝಂ ತಂಝಂತ 2,ತಂಝಂ...ತಂತ 2 ಹೊಳೆವ ನಿನ್ನಯ ಕೊರಳಿಗೆ ಪಡಿಯಾಗದೆ ನಲಿದು ನಾರಾಯಣ ಎನ್ನುತ್ತಿದೆ ಶಂಖವು ನಳಿನಶರ ರೂಪಕ್ಕೆ ಸರಿಬರವೆ ತಾಝಂ ತಝಂತ 2,ತಝಂ...(ತ್ವಂತ) 3 ಭಕ್ತರು ಪಡೆವತಿ ಸೌಖ್ಯಕ್ಕೆ ಹೋಲದ ನಿತ್ಯವಾದ ಲೌಕಿದದಾಶೆ ಬಿಡಿಸಯ್ಯ ಮುಕ್ತಿಕೊಡುತೆನ್ನನ್ನು ನಿನ್ನಡಿಯ ತಾಝಂ ತಂಝಂತ ತಂತಕನಾ ತಧಿಗಿಣತೋಂ ತಧಿಗಿಣತೋಂ ತಧಿಗಿಣತೋಂ 4
--------------
ಶಾಮಶರ್ಮರು
ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ
ಭಾರ ನಿನ್ನದೋ ಮಾರಜನಕ ಭಾರ ನಿನ್ನದೊ ಪ ಭಾರ ನಿನ್ನದಯ್ಯ ಸರ್ವ ಸಾರತರದಿ ಕಾಯುವಂಥ ಪಾರಮಹಿಮ ನಿನ್ನ ಚರಣ ವಾರಿಜವೇ ಗತಿ ಎನಗೆ 1 ನಿನ್ನ ಧ್ಯಾನವೆ ಪರುವಕಾಲ ನಿನ್ನ ನಾಮವೆ ಸೌಖ್ಯ ಸಕಲ ನಿನ್ನ ಕೀರ್ತನೆನಗೆ ಸುಫಲ ಪನ್ನಂಗಶಯನ ವೇಣುಗೋಪಾಲ 2 ಕರಿ ಸಂಕಟ ವನ್ನು ನಿರುತ ಗೆಲಿದನಕಟ ನಿನ್ನ ಭಜಿಸಿ ವಿಭೀಷಣ ಪಟ್ಟ ವನ್ನು ಸ್ಥಿರಪಡೆದ ದಿಟ 3 ಜಯ ನಿನ್ನ ಧ್ಯಾನವೆಂದೆ ಜಯ ನಿನ್ನ ಚರಣವೆಂದೆ ಜಯ ನಿಖಿಲ ನಿನ್ನದೆಂದೆ ದಯಪಾಲಿಸು ಶ್ರೀರಾಮ ತಂದೆ 4
--------------
ರಾಮದಾಸರು
ಭಾರತೀರಮಣ ಸದ್ಭಕ್ತ ಬಂಧೋ ಭವ ಭಯ ಪರಾಭವಗೈಸು ಬೇಗ ಪ ಲೋಕಾಂತರಾತ್ಮಕನೆ ಈ ಕಮಲಜಾಂಡದೊಳು ನೀಕೈಯ ಪಿಡಿದು ಕೃಪಾವಲೋಕನದಿಂದ ಜೋಕೆ ಮಾಡುವುದೆನ್ನ ಮೈನಾಕಿವರಜನಕ 1 ಅನಿಲ ಎನ್ನವಗುಣಗಳೆಣಿಸಲು ಕಡೆಯುಂಟೆ ಕೊನೆಗೆ ನೀನೆ ಗತಿಯೋ ಅನಿಮಿಷೇಶಾ ಜನನಿ ಜನಕ ಭ್ರಾತ ಜನಪ ಗುರುವರ ಮಿತ್ರ ಎನಗೆ ನೀ ಸಕಲ ಸೌಖ್ಯದನೆಂದು ಪ್ರಾರ್ಥಿಸಿದೆ 2 ಹನುಮ ಭೀಮಾನಂದ ಮುನಿರಾಯ ನಿನ್ನ ಪ್ರಾ ರ್ಥನೆ ಗೈಯುವರು ವಾಣಿ ಫಣಿಪ ಮೃಡರು ಅನಿಮಿತ್ತ ಬಾಂಧವ ಶ್ರೀ ಜಗನ್ನಾಥ ವಿಠ್ಠಲನ ತನಯ ತಾವಕರ ಬಂಧನವ ಮೋಚನ ಮಾಡೋ 3
--------------
ಜಗನ್ನಾಥದಾಸರು
ಭಾರತೀಶ ಹರಿದಾಸನಾದನಿಲ್ಲೀ ವೀಣೆಯ ಧರಿಸುತಲೀ ಪ. ಭಾರಿಭಾರಿಗವತಾರ ಮಾಡಿ ಬಳಲೀ ಆನಂದದಲ್ಲೀ ಅ.ಪ. ತ್ರೇತೆಯಲ್ಲಿ ಶ್ರೀ ರಾಮದೂತನಾಗಿ ತನುಸುಖವ ನೀಗಿ ಪ್ರೀತಿ ಭಕ್ತಿಯಲಿ ರಾಮ ಕಾರ್ಯಕಾಗಿ ತನುವಪ್ಪಿಸಿ ಬಾಗಿ ಖ್ಯಾತಿ ಪಡೆದು ಶರಧಿಯ ಲಂಘಿಸಿ ಪೋಗಿ ಸೀತೆಯ ಕಂಡೆರಗಿ ವೀಹೋತ್ರಗೆ ಪುರವಪ್ಪಿಸಿ ತಿರುಗೀ ರಾಮರ ಕಂಡೆರಗಿ 1 ಕುಂತಿಯ ಜಠರದಿ ಜನಿಸಿ ಭೀಮನೆನಿಸೀ ಬಕಮುಖರನೆ ಜೈಸಿ ಸಂತೋಷದಿ ಸೌಗಂಧ ಸತಿಗೆ ಸಲಿಸೀ ಕೌರವರ ಸಂಹರಿಸೀ ಅಂತರಂಗದಲಿ ಕೃಷ್ಣನಂಘ್ರಿ ಭಜಿಸಿ ಪಾಂಡವರನೆ ಮೆರಸೀ ಕಂತುಪಿತನ ಕಡುಕೃಪೆಯ ಪಡೆದು ಸುಖಿಸೀ ಮೇಲ್ತೋರದೆ ಸ್ಮರಿಸೀ 2 ಮೂರನೆ ರೂಪದಿ ಮುನಿಯಾಗವತರಿಸೀ ದುರ್ಮತಗಳ ಜೈಸೀ ಸಾರತತ್ವಮತ ಸಜ್ಜನರಿಗೆ ತಿಳಿಸೀ ಸರ್ವೋತ್ತಮ ಹರಿ ಎನಿಸೀ ಆರು ಅರಿಯದಂತೆ ದಾಸತ್ವವಚರಿಸೀ ದುರ್ಮತಗಳ ಜೈಸೀ ತೋರಿ ತೋರದಂತೆ ಸದ್ಗ್ರಂಥದಿ ತಿಳಿಸೀ ಯತಿ ಕುಲಜರೋಳ್ ನಿಲಿಸೀ 3 ಮೀಸಲ ದಾಸ್ಯವ ಮೂರವತಾರದಲ್ಲಿ ಚರಿಸಲು ಕಲಿಯಲ್ಲೀ ವ್ಯಾಸ ಮುನಿಯು ಬಹಿರಂಗಪಡಿಸೆ ಚಲ್ಲೀ ನಾರದ ಮುನಿಯಲ್ಲೀ ಪುರಂದರ ಗುರುವೆನಿಸುತಲೀ ಮೆರೆಯಲು ಜಗದಲ್ಲೀ ಮೀಸಲು ಉಳಿಯದೆ ಪೋಯಿತೆಂದು ಇಲ್ಲೀ ದಾಸ ತಾನಾಗುತಲೀ 4 ದಾಸತನದ ಆನಂದವನನುಭವಿಸೇ ದೇವತೆಗಳು ಬಯಸೇ ಭೂಸುರ ಜನ್ಮದಿ ಭೂಮಿಯಲವತರಿಸೇ ಹರಿದಾಸರಾಗಿ ಸುಖಿಸೇ ವಾಸುದೇವಗೆ ತಾ ನಿಜದಾಸನು ಎನಿಸೇ ಮಾರುತಿ ಇದ ಬಯಸೇ ಶ್ರೀಶ ಗೋಪಾಲಕೃಷ್ಣವಿಠಲದಾಸಾ ಬೆಳಗಾವಿ ವಾಸಾ 5
--------------
ಅಂಬಾಬಾಯಿ
ಭಾರತೀಶನೆ ಬೇಗ ಬಾರೊ ಮನ್ಮನದಲಿ ಹರಣ ಪ ಚಾರು ಭಾಸ್ಕರ ಕ್ಷೇತ್ರ ಗಾರನೆ ದಶರಥಕುಮಾರ ಸೇವಕಾಗ್ರಣಿ ಅ.ಪ ವಾರಿಧಿ ಲಂಘಿಸಿದ ಶೂರನೆ ಗಿರಿಯಾಶ್ರಯದಿ ತೋರುವಿ ಶ್ರಮಪರಿ- ಹಾರಾರ್ಥಿಗಳ ತೆರ ಘೋರ ಪಾತಕಾಂಬುದ ಸ ಮೀರ ಪಾಲಿಸೆನ್ನನು 1 ತಂದು ನೀಡಿದಿ ದ್ರುಪದ ನಂದಿನಿಯಳಿಗೆ ಸೌ ಗಂಧಿಕ ಪುಷ್ಪ ದಯದಿ ವಂದಿಸುವೆನು ಮನ ಮಂದಿರದಲಿ ಯದು ನಂದನನಂಘ್ರೀ ನೋಳ್ಪಾ ನಂದವ ಕರುಣಿಸೊ 2 ಭೇದಾಬೋಧಿಸಿ ಬಲುಮೋದವ ಗರಿವ ಶಾಸ್ತ್ರ ನೀದಯದಲಿ ರಚಿಸಿ ವಾದಿ ಮದಗಜ ಮೃ ಗಾಧಿಪನೆನಿಸಿದ ಮೋದತೀರ್ಥಾಹ್ವಯಾ- ಗಾಧ ಮಹಿಮ ಗುರು 3 ಸತತ ಸೇವಿಪ ಗರ್ಭವತಿಯಾಗಿರುವ ವಿಪ್ರ ಸತಿಯ ನುಡಿಯ ಲಾಲಿಸಿ ನತಜನ ಪಾಲನೆ ಪ- ರ್ವತ ದಿಂದಿಳಿದಶ್ವತ್ಥ ಕ್ಷಿತಿರುಹ ಮೂಲದಿ ಪಾ- ರ್ವಾತಿ ನಾಥ ಸೇವಿತನೆ 4 ಈ ಸುಕ್ಷೇತ್ರದೊಳು ವಿದ್ವಾಂಸ ದೇವರಾಜಾಖ್ಯ ಸನ್ನುತ ವಾಸಕಾರ್ಪರ ನರ ಕೇಸರಿ ಗತಿ ಪ್ರಿಯ ದಾಸ ಪಾಲಿಸೊ ಗುರು ವ್ಯಾಸರಾಜ ಪೂಜಿತ 5
--------------
ಕಾರ್ಪರ ನರಹರಿದಾಸರು
ಭೃಂಗ ಭಕ್ತ ಕಾಮಿತಾರ್ಥದ ಮಂಗಳಾಂಗ ತಾಮಸಬಲ ನಿಗ್ರಹಣ ಪತಂಗ ಭ ವಾಮಯಹರ ಭಾರತಿ ಮುಖ ಸಂಗ ಪ. ಮಾನ ಸೇವರಾತಿ ಭೂಪ ಭಾನುಸರಣ ಸುಪ್ರತಾಪ ದೈತ್ಯ ಕ್ಷೋಣಿ ಸಂದರ್ಶಿತ ಕೋಪ ಜಾನಕಿವರನ ನಿಜಾನುಗನೆನಿಪ ಮ- ಹಾನುಭಾವ ಪವಮಾನ ದಯಾಪರ 1 ಇಂದು ಕುಲದಿ ತಾ ಜನಿಸಿ ನಿಜ ಬಂಧುಗಳನು ಸತ್ಕರಿಸಿ ಇಂದಿರೆಯರಸನ ಒಲಿಸಿ ಜರಾ- ಸಂಧ ಮುಖರನು ಸಂಹರಿಸಿ ಒಂದೇ ಕ್ಷಣದಿ ಸೌಗಂಧಿಕ ಕುಸುಮವ ತಂದು ಮಡದಿಗಾನಂದ ತೋರಿದ 2 ಕಲಿಯುಗದೊಳು ತಾ ಬಂದು ಮಾಯಿ ಬಲಿ ಭುಜರನು ಗೆಲವಂದು ಜಲಜನಾಭವ ಕರೆತಂದು ರೌಪ್ಯ ನಿಲಯದಿ ಸ್ಥಾಪಿಸಿ ನಿಂದು ಚೆಲುವ ಶೇಷಗಿರಿ ಪತಿಗತಿಯೆಂದು ನೆಲೆಯ ತೋರಿದ ಪುರುಕರುಣಾಸಿಂಧು 3
--------------
ತುಪಾಕಿ ವೆಂಕಟರಮಣಾಚಾರ್ಯ
ಭೋರನೆ ನಿಜಪರಿವಾರವೆಲ್ಲವೂ ಸೇರಿ ಪ. ಮಕರಕುಂಡಲಧರ ವಿಕಸಿತ ಮುಖಪದ್ಮ ಕೌಸ್ತುಭ ಶುಭ ವನಮಾಲಿ ಭಕುತ ವತ್ಸಲನೆಂಬ ಬಿರುದು ತೋರುತ ನಮ್ಮ ಶಕುತಿಗೆ ಸರಿಯಾದ ಸೇವೆ ಕೊಳ್ಳುವೆನೆಂದು 1 ಒಡೆಯನೀ ಗತಿಯೆಂಬ ಬಡವ ಭಕ್ತರನೆಲ್ಲು ಬಿಡನೆಂದು ಭವಸಿಂಧು ಪೊತ್ತನಿಂದು ತಡವ ಮಾಡದಲೆ ಸಂಗಡ ಬಂದೀ ನಿಲಯದಿ ನಡು ಮನೆಯಲಿ ನಿಂದು ಕೊಡುವೆ ಸೌಖ್ಯವನೆಂದು 2 ತುಳಸಿಧಾಮ ಸುಶೋಭಿತ ನಮಗೆ ಬೆಂ- ಬಲವಾಗಿರುವ ಸರ್ವ ಸ್ಥಳಗಳಲಿ ಅಲಸನಾಗದೆ ಶೇಷಾಚಲವಾಸನು ಶ್ರೀಭೂ- ಲಲನೆಯರೊಡಗೂಡಿ ನಲಿವ ಸಂಭ್ರಮದಿಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಳಂ ಜಯ ಸುಂದರ ಮೂರುತಿಗೆ ಮಾ ಮನೋಹರನಿಗೆ ಪ ಮಂಗಳ ಮಧುಸೂದನನಿಗೆ ಮಂಗಳ ಮುರಮರ್ದನನಿಗೆ ಮಂಗಳಾಂಗ ಶ್ರೀ ಮದನಂತ- ರಂಗನಿಗೆ ಶುಭಾಂಗ ಹರಿಗೆ 1 ರಂತಿದೇವನನ್ನು ಪೊರೆದ ಚಿಂತಿತಾರ್ಥ ಪ್ರದಾತನಿಗೆ ಸಂತತವು ಭಕುತರನು ಸಂತೋಷದಿ ಪೊರೆವ ಹರಿಗೆ2 ಪಾಂಡವರನು ಪೊರೆದÀಗೆ ಪುಂಡರೀಕಗೆ ಒಲಿದಗೆ ತಂಡತಂಡದ ಭಕ್ತರನ್ನು ಕಂಡುಪೊರೆವ ಮಹಮಹಿಮಗೆ3 ನಾರಿ ರುಕ್ಮಿಣಿ ಭಾಮೆ ಸಹಿತದಿ ದ್ವಾರಕಾಪುರ ವಾಸನಿಗೆ ಸೌಳಸಾಸಿರ ಸತಿಯರಾಳ್ದ ಸಾರಸಾಕ್ಷ ಹರಿಗೆ ಬೇಗ4 ಕಡಲೊಡೆಯಗೆ ಮೃಡಸಖನಿಗೆ ಕಡುಹರುಷದಿ ಕಾಮಿನಿಯರು ಸಡಗರದಲಿ ಕಮಲನಾಭ ವಿಠ್ಠಲನಂಘ್ರಿ ಭಜಿಸಿನಲಿದು5
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ಮಂಗಳಂ ಪ ಮಂಗಳಂ ಮಂಗಳಂ | ಪರಿಮಾಳಾರ್ಯರಿಗೆ ತುಂಗೆ ತೀರಗ ಯತಿ | ಪುಂಗರೀಗೇ ಅ.ಪ. ವೈರಿ ಭೃಂಗ | ಸುಧೀಂದ್ರ ಚರಣಾಬ್ಜಮಧುಕರರೆನಿಸುತ್ತ | ಸುಧೆಯ ಸೌರಭವ |ಬುಧ ಜನ ಕುಣಿಸುತ್ತ | ವಿಧ ವಿಧ ಮೆರೆಯುವತ್ರಿದಶ ಭೂರುಹವೆನಿಸಿ | ಸದಯದಿ ಪೊರೆವಗೇ 1 ಮಧ್ವ ಮತಾಬ್ಧಿಗೆ | ಶುದ್ಧ ಪೂರ್ಣೇಂದ್ವಿಗೆಅದ್ವೈತ ಕಲಿಮಲ | ದಾವಾಗ್ನಿಗೇ |ಸದ್ವೈಷ್ಣ್ವ ಕುಮುದೇಂದು | ವಿದ್ವಾಂಸನತ ಪಾದಶೌದ್ಧೋದನಿಯ ಮತ | ವಿಧ್ವಂಸಕಗೇ 2 ಕರದೆಡೆ ಬರುವಂಥ | ಪರಮ ದಯಾಳುಗೆಧರೆಯೊಳೆಲ್ಲೆಲ್ಲೂ | ಮೆರೆಯುತಿಹಗೇ |ಶರಣರ ಹೃತ್ಕಮಲ | ವರ ಮಿತ್ರನೆಂದೆನಿಸಿಗುರು ಗೋವಿಂದ ವಿಠಲ | ಚರಣಾಬ್ಜಧೇನಿಪಗೇ 3
--------------
ಗುರುಗೋವಿಂದವಿಠಲರು
ಮಂಗಳ ಮಾಧವಗೆ ಮಾರಮಣಗೆ ಮಂಗಳ ಶ್ರೀಧರಗೆ ಪ ಭಂಗ ಭವಗಜ ಸಿಂಗ ಕರುಣಾಪಾಂಗ ಶ್ರೀಶಗೆ ಗಂಗಾಜನಕಗೆ ತುಂಗ ಮಹಿಮಗೆ ಭಂಗರಹಿತಗೆ ಅನಂಗಪಿತನಿಗೆ 1 ಭುವನ ಮೋಹನ ಸುಮನಸರ ಪ್ರಿಯ ಕವಿಜನರ ಹೃದ್ಗøಹ ನಿವಾಸಗೆ ನವನವ ಲೀಲೆಗಳ ತೋರ್ದಗೆ ನವರತುನದಾರತಿಯ ಬೆಳಗಿರೆ 2 ಗರುಡಗಮನಗೆ ಉರಗಶಯನಗೆ ಪರಮಪುರುಷಗೆ ಪುಣ್ಯಚರಿತಗೆ ಉರಗಗಿರಿವಾಸನಿಗೆ ದೇವಗೆ ಸುರರೊಡೆಯ ಶ್ರೀ ಶ್ರೀನಿವಾಸಗೆ3 ಸೌಮ್ಯನಾಮ ಸಂವತ್ಸರದಂದು ನೇಮದಿಂದ ಭಜಿಪ ಭಕುತರ ಕಾಮ್ಯಕರ್ಮವ ತರಿದು ಪೊರೆಯುವ ಕಮಲನಾಭ ವಿಠ್ಠಲನ ಪ್ರತಿದಿನ4
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ಶ್ರೀ ಪಾರ್ಥಸಾರಥಿಗೆ ಮಂಗಳಂ ಸಂಕರ್ಷಣನಿಗೆ ಅನಿರುದ್ಧ ಸಾತ್ಯಕೀಸಹ ಬಂದು ನಿಂದವಗೆ ಪ ವಸುಧೆ ಭಾರವನಿಳುಹಲೆಂದು ದೇವಕೀ ವಸುದೇವರುದರದಿ ಶಿಶುವಾಗಿ ಅಸುರ ಪೂತನಿಯಸುವ ನೀಗಿದ ಕುಸುಮನಾಭಗೆ 1 ವಾತಾಸುರನಕೊಂದು ಬಾಯೊಳುಮಾತೆಗೆ ಬ್ರಹ್ಮಾಂಡತೋರ್ದಗೆ 2 ಒತ್ತಿ ಕಾಳಿಯ ಶಿರವನಾಗ ಸುತ್ತಿದಾ ಕಿಚ್ಚನ್ನು ನುಂಗಿ ಎತ್ತಿ ಗೋವರ್ಧನಗಿರಿಯ ಹತ್ತಿ ಗೋಮಂತವನು ಹಾರ್ದಗೆ 3 ಕೇಶಿಯನು ಸಂಹರಿಸಿ ದುಷ್ಟದ್ವೇಷಿಯಾದ ವೃಷಭನನು ಕೊಂದು ದಾಸಿ ತಂದ ಗಂಧವನು ಪೂಸಿ ಮೆರೆದ ಕ್ಲೇಶನಾಶಗೆ 4 ಬಿಲ್ಲು ಮುರಿದು ಬೀದಯಲ್ಲಿ ಎಲ್ಲರಿಗೆ ತಕ್ಕ ರೂಪ ತೋರಿ ಮಲ್ಲರನು ಮರ್ಧಿಸುತ ಮಾವನ ಸೊಲ್ಲನಡಗಿಸಿದ ಪುಲ್ಲನಾಭಗೆ 5 ರುಕ್ಮಿಣೀ ಸತ್ಯಭಾಮೆ ಕಾಳಂದಿ ಜಾಂಬವತಿಯು ಮೊದಲಾದ ಲಕ್ಷ್ಮಣೆ ಸತ್ಯಭದ್ರೆ ಮಿತ್ರವಿಂದೆಯು ತಂದ ಲಕ್ಷ್ಮೀರಮಣಗೆ 6 ಕೊಂದು ನರಕನ ಹದಿನಾರುಸಾವಿರ ಸ್ತ್ರೀಯರನು ಬೇಗ ತಂದು ದ್ವಾರಕಿಯಲ್ಲಿ ಸತಿಸಹ ಆನಂದದಿಂದಲಿ ನಿಂದಕೃಷ್ಣಗೆ 7 ಹೇಮದಾಭರಣವಿಟ್ಟು ರುಕ್ಮಿಣಿ ನೇಮದಿಂದಲೆ ಬೀಸುತಿರಲು ಪ್ರೇಮಕಲಹದಿ ಬೀಳಲಾಕ್ಷಣ ವಿರಾಮವಿಲ್ಲದೆ ಎತ್ತಿದವಗೆ8 ಎತ್ತಿ ಅಂಕದೊಳಿಟ್ಟು ಪ್ರೇಮದಿ ಅರ್ಥಿಯಿಂದಲೆ ಕುರುಳನೇವರಿಸಿ ತತ್ವವಾಕ್ಯವನ್ನು ಹೇಳಿದ ಮುಕ್ತಿದಾಯಕ ಮುದ್ದು ಕೃಷ್ಣಗೆ 9 ಜಾಣತನದಲಿ ಕಾಶಿಯನುಸುಟ್ಟು ಪೌಂಡ್ರಕನಪ್ರಣಾಪಹರಿಸಿದವಗೆ 10 ಮಿಥುಳವಾಸಿಗೆ ಮುಕ್ತಿಯನಿತ್ತು ಸುತನ ತಂದು ವಿಪ್ರನಿಗಿತ್ತು ಹತವಮಾಡಿ ವೃಕಾಸುರನ ಶ್ರುತಿಗಗೋಚರನಾದ ಸ್ವಾಮಿಗೆ 11 ಅರಗಿನಮನೆಯಿಂದ ರಕ್ಷಿಸಿ ದ್ರೌಪದಿ ಸುಭದ್ರೆಯ ಸಾಧಿಸಿತ್ತಗೆ 12 ನೆತ್ತವಾಡಿ ಕೌರವರೊಡನೆ ಅರ್ಥವನು ಸೋಲಲು ಪಾಂಡವರು ಭಕ್ತವತ್ಸಲನೆನ್ನೆ ದ್ರೌಪದಿಗೆ ವಸ್ತ್ರವಿತ್ತು ಕಾಯ್ದ ಕೃಷ್ಣಗೆ 13 ವನವಾಸದಲ್ಲಿ ಪಾಂಡವರು ಉಲ್ಲಾಸದಿಂದಲೆ ಇರುತಿರಲು ಪಾಶುಪತ ವನು ಪಾರ್ಥನಿಗೆ ಈಶನಲಿ ಕೊಡಿಸಿದ ಸರ್ವೇಶಗೆ 14 ವೇಷವನ್ನು ಮರೆಸಿಕೊಂಡು ವಿರಾಟನಗರದಿ ವಾಸ ಮಾಡಲು ಮೋಸದಿಂದಲೇ ಕೀಚಕಾದಿಗಳ ನಾಶಮಾಡಿಸಿದ ವಾಸುದೇವಗೆ 15 ಆನಂದರೂಪವ ತೋರಿದವಗೆ 16 ತೋರಿದವಗೆ 17 ಜಾಹ್ನವೀಸುತನ ಯುದ್ಧವನ್ನು ತಾಳಲಾರದೆ ಜನರ್ಧನಗೆ ಪೇಳೆ ಜಾಣತನದಲಿ ಶಿಖಂಡಿಯನುತೋರಿ ಬಾಣಮಂಚದಿ ಮಲಗಿಸಿದವಗೆ 18 ಸುಭದ್ರೆ ಪುತ್ರನ ಯುದ್ಧದಲ್ಲಿ ಪದ್ಮವ್ಯೂಹವ ಪೋಗಿಸಲಾಗ ಮುದ್ದುಬಾಲಕನ ಕೊಲಿಸಿದವಗೆ 19 ಸಿಂಧುರಾಜನ ಕೊಲ್ಲುವೆನೆಂದು ನರನು ಪ್ರತಿಜ್ಞೆಮಾಡಲು ತಂದಚಕ್ರವ ರವಿಗೆತೋರಿಸಿ ಸೈಂಧವನ ಕೊಲ್ಲಿಸಿದಸ್ವಾಮಿಗೆ 20 ದೃಪತಿಯತೋರಿದವಗೆ 21 ಕರ್ಣನು ಘಟ್ಟಿಯಾಗಿ ರಥವನೊತ್ತಿ ದಿಟ್ಟತನದಲಿ ಶಿರವ ಕಾಯ್ದಗೆ 22 ಮದ್ರರಾಜನ ಕೊಲ್ಲುವೆನೆಂದು ಸಮುದ್ರಶಯನನ ಸಹಾಯದಿಂದ ಭದ್ರಗಜವನು ಏರೆ ಧರ್ಮಜ ಕಾಲರುದ್ರನಂದದಿ ಕೊಲಿಸಿದವಗೆ 23 ಭೀಮ ದುರ್ಯೋಧನರು ಯುದ್ಧದಿ ಹೇಮದ ಗದೆಯನ್ನು ಪಿಡಿದು ಪ್ರೇಮದಿಂದಲೆ ಕಾದುತಿರಲು ನಿರ್ನಾಮವನು ಮಾಡಿಸಿದ ಸ್ವಾಮಿಗೆ 24 ಗೃಧ್ರ ಉಲೂಕದ ವೃತ್ತಿಯ ನೋಡಿ ಭದ್ರೆದ್ರೌಪದಿ ಪುತ್ರನನ್ನು ನಿದ್ರೆಕಾಲದಿ ಕೊರಳಕೊಯ್ಯಲು ಶಿರದಲಿದ್ದ ಮಣಿಯ ತೆಗೆಸಿದವಗೆ 25 ದ್ರೋಣಪುತ್ರನ ಬಾಣದಿಂದಲೆ ತ್ರಾಣಗೆಟ್ಟ ಶಿಶುವ ನೋಡಿ ಜಾಣತನದಲಿ ಚಕ್ರವಪಿಡಿದು ಪ್ರಾಣವನು ರಕ್ಷಿಸಿದ ಸ್ವಾಮಿಗೆ 26 ಏಳುಹನ್ನೊಂದು ಸೇನೆಗಳನೆಲ್ಲ ಹಾಳುಮಾಡಿ ಹದಿನೆಂಟುದಿವಸದಿ ಖೂಳಕೌರವರನೆಲ್ಲ ಕೊಂದು ಧರ್ಮನಲಿ ರಾಜ್ಯವಾಳಿಸಿದಗೆ 27 ಸೌಪ್ತಿಕದಲಿ ಪುತ್ರನ ಕೊಲ್ಲಿಸಿ ಸ್ತ್ರೀಪರ್ವದಿ ಭೂಮಿ ಭಾರವಡಗಿಸಿ ಶಾಂತಿಪರ್ವದಿ ಧರ್ಮರಾಯಗೆ ಪಟ್ಟಾಭಿಷೇಕವ ಮಾಡಿಸಿದಗೆ 28 ಮುಸಲದಲಿ ಯಾದವರನಡುಗಿಸಿ ಅನುಶಾಸನದಿ ಧರ್ಮಪೇಳಿಸಿ ಅಶ್ವಮೇಧ ಮಹಾಪ್ರಸ್ಥ ಸ್ವರ್ಗಾರೋಹಣವ ಮಾಡಿಸಿದಗೆ 29 ಅಂದುಪಾರ್ಥಗೆ ಸಾರಥ್ಯವಮಾಡಿ ಬಂಧುಗಳ ಸ್ವರ್ಗವಾಸಮಾಡಿಸಿ ಬಂದು ಬೃಂದಾರಣ್ಯದಲ್ಲಿ ಇಂದಿರೇ ಸಹನಿಂದ ಸ್ವಾಮಿಗೆ 30 ಅನಿರುದ್ಧ ಸಾತ್ಯಕಿ ರುಕ್ಮಿಣಿ ಸಹಿತಲೆ ಬಂದು ನಿಂದವಗೆ 31 [ವರ] ಕಲಿಯುಗದೊಳಗುಳ್ಳ ದುಷ್ಟಕರ್ಮಿಗಳನೆಲ್ಲ ಸಲಹುವೆನೆಂದು ಕೈರವಿಣಿತೀರದಲಿನಿಂದ ಕರುಣಿ ವೆಂಕಟಕೃಷ್ಣನಂಘ್ರಿಗೆ ಮಂಗಳಂ 32
--------------
ಯದುಗಿರಿಯಮ್ಮ
ಮಂಗಳಂ ಶ್ರೀ ಲಕ್ಷ್ಮೀದೇವಿಗೆ ಜಯ ಮಂಗಳಂ ಪಕ್ಷಿವಾಹನರಾಣಿಗೆ ಪ. ಮಂಗಳಂ ಮಂತ್ರಮೂರುತಿಗೆ ಶುಭ ಮಂಗಳಂ ಪರತಂತ್ರರೂಪಿಣಿಗೆ ಅ.ಪ. ಭಾರ್ಗವಿಗೆ ಭಾಗ್ಯದಾಯಿನಿಗೆ ಭಾಗವತರ ಪೂಜೆ ಕೈಗೊಂಬಳಿಗೆ ನಾಗವೇಣಿಗೆ ವರನಾಗಪೂಜಿತೆಗೆ ವರ ಭೋಗಿಭೂಷಣಸುತೆ ಯೋಗೇಶ್ವರಿಗೆ 1 ಸೀತೆಗೆ ಮಂಗಳಗೀತೆಗೆ ಭುವಿ ಜಾತೆಗೆ ಮಂಗಳಂ ಪವನಜಸೇವಿತೆಗೆ ಮಾತೆಗೆ ಸದ್ಗುಣ ಪೂತೆಗೆ ವರಪ್ರ ದಾತೆಗೆ ನಿತ್ಯನಿರ್ಮಲೆಗೆ 2 ವರಶೇಷಗಿರಿವರನ ಉರದಲ್ಲಿ ನೆಲೆಗೊಂಡು ಶರಣಾಗತರಂ ಪರಿಭಾವಿಸಿ ಪರತರ ಸುಖಸೌಭಾಗ್ಯವ ಕರುಣಿಸಿ ಪೊರೆವ ಕಾರುಣ್ಯಮೂರುತಿಗೆ 3
--------------
ನಂಜನಗೂಡು ತಿರುಮಲಾಂಬಾ
ಮಂಗಳದೇವಿಯರರಸಗೆ ತುಂಗಮಹಿಮ ತ್ರಿವಿಕ್ರಮಗೆ ಅಂಗನೆಯರು ಸಿರಿರಂಗಗಾರತಿಯನೆತ್ತಿದರೆ ಪ. ಶ್ರೀರುಕುಮಿಣಿ ಮೊದಲಾದ ನಾರಿಯರೆಲ್ಲರು ನೆರೆದು ವಾರಿಜದಳಲೋಚನಗಾರತಿಯನೆತ್ತಿದರೆ 1 ಮುತ್ತಿನ ಹರಿವಾಣದಲಿ ರತ್ನದ ಸಾಲ್ಗಳ ನೆರಪಿ ಚಿತ್ತಜನಯ್ಯಗೆ ಮುತ್ತ್ತಿನಾರತಿಯನೆತ್ತಿದÀರೆ 2 ಚಿನ್ನದ ಹರಿವಾಣದಲಿ ರನ್ನದ ಸಾಲ್ಗಳ ನೆರಪಿ ಚೆನ್ನಕೇಶವನಿಗೆ ಚಿನ್ನದಾರತಿಯನೆತ್ತಿದರೆ 3 ಹೃದಯದ ತಮವ ಗೆಲುವಗೆ ಸದುಗತಿಪಥವ ತೋರುವಗೆ ಸುದತಿಯರೆಲ್ಲರು ಮಂಗಳಾರತಿಯನೆತ್ತಿದರೆ 4 ಚಂದದ ಭೂಷಣಮಣಿಯೊಳು ನಂದಾದೀಪಗಳೆಲ್ಲ ಹೊಳೆಯೆ ಒಂದನಂತವ ಮಾಡಿಕೊಂಬಗಾರತಿಯನೆತ್ತಿದರೆ 5 ಕಂದರ್ಪಕೋಟಿಲಾವಣ್ಯಗೆ ಸೌಂದರ್ಯವಾದ ಮೂರುತಿಗೆ ಇಂದುಮುಖಿಯರೆಲ್ಲ ಮಂಗಳಾರತಿಯನೆತ್ತಿದರೆ 6 ಅಗಣಿತ ಗುಣಸಾಗರಗೆ ನಿಗಮವಂದಿತ ವೈಭವಗೆ ಅಘಕುಲದೂರಗೆ ಮಂಗಳಾರತಿಯೆನೆತ್ತಿದರೆ 7 ನಳಿತೋಳ್ಗಳ ನಸುನಗೆಯ ಹೊಳೆವ ಕಡಗ ಕಂಕಣದ ಸುಲಲಿತ ಕಾಂತಿಗೆ ಮಂಗಳಾರತಿಯೆತ್ತಿದರೆ 8 ಶೇಷವಂದಿತಪದಗೆ ಸುರೇಖಾದಿಗಳೊಡೆಯನಿಗೆ ಭಾಸುರಸುರಮಯಪೀಠಗಾರತಿಯನೆತ್ತಿದರೆ9 ಶ್ರೀಸತಿಯಪ್ಪಿಕೊಂಡಿಪ್ಪಗೆ ವಾಸುದೇವಾದಿವಿಗ್ರಹಗೆ ಕೇಶವ ನಾರಾಯಣಗಾರತಿಯನೆತ್ತಿದರೆ 10 ನಿಖಿಳ ಖಳರ ಸೀಳ್ದನಿಗೆ ಅಕುತೋಭಯನಿಗೆ ಮಂಗಳಾರತಿಯನೆತ್ತಿದರೆ 11 ಕೂರ್ಮ ವರಾಹನಿಗೆ ಕುತ್ಸಿತರೊಲ್ಲದ ಹರಿಗೆ ಚಿತ್ಸುಖರೂಪಗೆ ಮಂಗಳಾರತಿಯನೆತ್ತಿದರೆ12 ಶಂಕೆಯಿಲ್ಲದ ಹಯವದನಗೆ ಕಿಂಕರವರದ ಶ್ರೀಹರಿಗೆ ಪಂಕಜಮುಖಿಯರು ಮಂಗಳಾರತಿಯೆತ್ತಿದರೆ 13
--------------
ವಾದಿರಾಜ