ಒಟ್ಟು 467 ಕಡೆಗಳಲ್ಲಿ , 78 ದಾಸರು , 403 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹ್ಯಾಗೆ ಉದ್ಧಾರ ಮಾಡುವನೋ ಹರಿ ಹೀಗೆ ದಿನಗಳ ಕಳೆಯುವರ ಪ. ಆದಿಮೂರುತಿ ಶ್ರೀ ದೇವ ಪದುಮನಾಭ ವೇದ ಉದ್ಧಾರನೆಂದನಲಿಲ್ಲ ಸಾದರದಲಿ ಹರಿ ಸಕಲರಿಗೊಡೆಯನೆಂ ದಾದರದಲಿ ನಾ ಪಾಡಲಿಲ್ಲ 1 ಮೃಚ್ಛಕೂರ್ಮಹರಿ ಸ್ವಚ್ಛÀವರಹನೆಂದು ಉಚ್ಚಧ್ವನಿಯಿಂದ ಕೂಗಲಿಲ್ಲ ತುಚ್ಛಕನ ಕೊಂದು ಅಚ್ಚ ಭಾಗವತಗೆ ಮೆಚ್ಚಿ ರಕ್ಷಿಸಿದನೆಂದೆನಲಿಲ್ಲ 2 ಚಲುವ ವಾಮನನಾಗಿ ಬಲಿಯ ದಾನವ ಬೇಡಿ ಮಲವನಳಿವ ಗಂಗೆ ಪಡೆದನೆಂದು ಕುಲವಳಿದು ಭೂಲಲನೆಯ ವಿಪ್ರರಿ ಗೊಲಿದು ಇತ್ತನೆಂದು ನೆನೆಯಲಿಲ್ಲ 3 ಸೀತೆಗಾಗಿ ಪಡೆಸವರುತ ಹರುಷದಿ ವಾತತನಯಗಜಪದವಿತ್ತನ ಈತನೆ ಪರದೈವನಾಥನು ಪರಕೆಂದು ಪ್ರೀತಿ ಭಕ್ತಿಯಲಿ ಮೈಮರೆಯಲಿಲ್ಲ 4 ಗೋಪಿಯರ ಕೂಡಿ ಗೋಪನ ಮನೆಯಲಿ ಶ್ರೀಪತಿ ಲೀಲೆಯ ತೋರ್ದನೆಂದು ಪಾಪದ ಕಾಷ್ಠಕೆ ಪಾವಕನಾಗಿಹ ತಾಪಹರನ ನಾ ನೆನೆಯಲಿಲ್ಲ 5 ಲಲನೇರ ವ್ರತವಳಿದು ಚಲುವ ಕುದುರೆ ಏರಿ ಕಲಿಮುಖರನು ಸದೆಬಡಿದನೆಂದು ಚಲುವ ಗೋಪಾಲನೆ ನೀನೇ ಗತಿ ಎಂದು ಹಲವು ಬಗೆಯಿಂದ ಪೊಗಳಲಿಲ್ಲ 6 ಗುರುಗಳು ಪೇಳಿದ ಪರಮ ರಹಸ್ಯವು ಅರಿವಾದರೂ ಅನುಭವ ಇಲ್ಲ ಪರಿಪರಿ ಮಹಿಮೆಯ ಉದಯಸ್ತ ಪರಿಯಂತ ಅರಿವು ಮನಕೆ ಎನಗಾಗಲಿಲ್ಲ 7 ದೇಹಸ್ತ ಹರಿ ಎಂದು ದೇಹವ್ಯಾಪ್ತನು ಎಂದು ದೇಹ ಗೇಹ ಜೀವ ಭಿನ್ನವೆಂದು ಶ್ರೀ ಹರಿ ಜೀವಾಂತರ್ಯಾಮಿಯಾಗಿಹನೆಂದು ಮೋಹವಳಿದು ಜ್ಞಾನ ಪುಟ್ಟಲಿಲ್ಲ 8 ತತ್ವಾಧಿಪತಿ ಹರಿ ತತ್ವಾಭಿಮಾನಿಗಳು ನಿತ್ಯ ಹರಿಮಾರ್ಗ ತೋರ್ವರೆಂದು ಸತ್ಯವಚನವನು ವಾಯು ಮತದಿ ನಂಬಿ ಭೃತ್ಯ ಭಾವವ ನಾ ವಹಿಸಲಿಲ್ಲ 9 ಎಷ್ಟು ಹೇಳಲಿ ಎನ್ನ ಅವಗುಣಗಳನೆಲ್ಲ ದೃಷ್ಟಿಯಿಂದಲಿ ನೋಡಿ ನೀನೆ ಸಲಹೋ ಬೆಟ್ಟದೊಡೆಯನಾಗಿ ಎಲ್ಲರ ಸಲಹುವ ಅಷ್ಟಭುಜ ಗೋಪಾಲಕೃಷ್ಣವಿಠಲ10
--------------
ಅಂಬಾಬಾಯಿ
ಹ್ಯಾಂಗೆ ಉದ್ಧಾರ ಮಾಡ್ಯಾನೋ ಶ್ರೀಹರಿ ಹೀಗೆ ದಿನಗಳಿವಂಗನಿಗೆ ಪ ಬ್ಯಾಗ ಪತಿಗೆ ತಾ ಬಾಗದನುಕೂಲವಾಗಿರದೆ ತಿಳಿದ್ಹಾಗೆ ನಡೆವಳ ಅ.ಪ. ಉದಯದಲೆದ್ದತಿ ಸಜಮಲಳಾಗಿ ತಾ ಮುದದಿ ಪತಿಗೆ ನಮಿಸದವಳಿಗೆ ಪದುಮಾಕ್ಷಿ ತುಳಸಿಯ ಪೂಜಿಸಿ ಮನದಿ ಮಾಧವನ ಭಕ್ತಿಲಿ ಸ್ತುತಿಸದವಳಿಗೆ ಪದುಮನಾಭನೇ ಸರ್ವಪರನೆಂದು ಅರಿಯದೆ ಅಧಮ ಶಾಸ್ತ್ರವ ಕೇಳಿ ಅದರಂತೆ ನಡೆವಳ 1 ಹರಿದಿನದಲಿ ಉಂಡು ಹರಿಯನ್ನದಲೇ ಊರ ತಿರುಗಿ ಹೊತ್ತು ಕಳೆವಳಿಗೆ ಸರಸದಿ ನರಹರಿ ನಾಮ ಸಂಕೀರ್ತನೇ ಇರುಳು ಜ್ಯಾಗರ ಮಾಡದವಳಿಗೆ ದೊರಕಿದಷ್ಟರಲೇ ತಾ ಹರುಷ ಪಡೆದೇ ಧನ ಪತಿ ಹೊರಗ್ಹಾಕ್ವಳ 3 ಗುರು ಹಿರಿಯರ ಅತ್ತೆಮಾವರ ಜರಿದು ತಾ ಹಿರಿಯಳು ಮನಿಗೆ ನಾನೆನುತಿರ್ಪಳು ಪರರ ನಿಂದಿಸಿ ಭೂಸುರರು ಬಂದರೆ ಅನ್ನ ದೊರಕದೆನುತ ಹೇಳಿ ಕಳಹುವಳ ಸರಸ ಮೃಷ್ಟಾನ್ನವ ಹರುಷದಿ ಪತಿದ್ವಾರಾ ಹರಿಗರ್ಪಿಸದಲೇ ತ್ವರದಿ ತಾ ತಿನ್ವಳ 3 ಪತಿ ಅಂತರ್ಯಾಮಿ ಶ್ರೀ ಪತಿಯನರಿದು ತನ್ನ ಪತಿಯ ಸೇವೆ ಮಾಡದಿರುವಳಿಗೆ ಪತಿ ಮುಕ್ತಿ ಪಥವೆಂದು ಪತಿಹಿತದವನೆಂದು ಅರಿಯದೇ ಪತಿ ನೋಡ್ವಳಿಗೆ ಪತಿಯಿಂದಲಂಕೃತವಾಗಿಹ ಮಂಗಳಸೂತ್ರವೇ ಸಕಲ ಭೂಷಣವೆಂದರಿಯದವಳಿಗ್ಹಾಂಗೆ 4 ಪರಮ ಅತ್ತೆಯ ಮಾತು ಶಿರದಿ ಸ್ವೀಕರಿಸಿ ಐವರ ಕೂಡ ಧಾರೆಯರೆಸಿಕೊಂಡಾ ಪರಮ ಪಾವನಳಾದ ಭಾರತೀ ದೇವೇರ ಸ್ಮರಿಸದೇ ಅದರಂತಾಚರಿಸದೆ ಇರುವಳಿಗ್ಹ್ಯಾಂಗೆ 5 ವನವಾಸದಲಿ ಪಾಂಡು ತನಯರ ಕೂಡ ತಾ ಧನ ಸುಖ ಬೇಡದೆÀ ಪೋದವಳು ಘನ ಹಸಿವುತೃಷೆಯಿಂದ ಅನ್ನ ಬೇಡಿದ ದುರ್ವಾಸಾದಿಗಳನು ಆದರಿಸಿದವಳಾ ಆಜನನಿ ದೃಪವ ನಂದನಿಯ ಕೃತ್ಯಗಳನ್ನು ನೆನೆದು ತನ್ನಯ ಮನವನ್ನು ತೊಳೆಯದವಳು 6 ಮರುತಂತರ್ಗತ ಸ್ವಾಮಿ ಸಲಹೆನ್ನದೇ ಪರರಿಗೊಂದೆಡೆ ಇಕ್ಕಿ ಪಂಕ್ತಿ ಭೇದವ ಮಾಡಿ ಕರ್ಮ ಮಾಡ್ವಳಿಗೆ ಪರಮ ಪಾವನನಾದ ಹನುಮೇಶವಿಠಲನ ನೆರೆ ನಂಬದಲೇ ದೇಹ ಸ್ಥಿರವೆಂದು ತಿಳಿವಳಿಗ್ಹ್ಯಾಂಗ 7
--------------
ಹನುಮೇಶವಿಠಲ
(ಒರಳುಕಲ್ಲು ಪೂಜೆಯ ಪದ)ಜಯ ಹನುಮಂತ ಭೀಮ | ಜಯ ಸರ್ವಜ್ಞಾಚಾರ್ಯ |ಜಯ ಭಾರತೀಶಾ ನಿರ್ದೋಷಾ || ನಿರ್ದೋಷ ಶ್ರೀ ವ್ಯಾಸಲಯನೆ ನಿನ್ನಂಘ್ರೀಗೆರಗೂವೆ | ಸುವ್ವಿ ಸುವ್ವೀ ಸುವ್ವಾಲಾಲೆ ಪಮುದದಿಂದಾ ಶ್ರೀ ಹರಿಯಾ | ಮದಿವಿ ಹಮ್ಮೀಕೊಂಡು |ಪದುಮಾಕ್ಷಿಯರೆಲ್ಲಾ ಒರಳೀಗೇ || ಒರಳಿಗಕ್ಕಿ ಹಾಕಿಪದ ಪಾಡಿದದನೂ ಬಣ್ಣೀಪೇ1ದೇವಕಿ ಯಶೋದೆ ಶ್ರೀ | ದೇವಭೂತೇ ಕೌಸಲ್ಯ ಸ- |ತ್ಯವತಿ ನೀವೆಂಥ ಧನ್ಯರೇ || ಧನ್ಯಾರೆ ಪಡದು ಶ್ರೀ |ದೇವೇಶಗೆ ಮೊಲಿಯಾ ಕೊಡುವೀರಿ 2ಅಕ್ಷರಳೆ ಪರಮಾತ್ಮನ | ವಕ್ಷ ಸ್ಥಳ ಮಂದಿರೆ |ಲಕ್ಷೂಮಿದೇವಿ ಜಯಶೀಲೆ || ಜಯಶೀಲೆ ಎಮ್ಮನು |ಪೇಕ್ಷಿಸಿದೆ ಕಾಯೇ ವರವೀಯೇ 3ಅಚ್ಛಿನ್ನ ಭಕ್ತರು ನೀವಚ್ಯುತಗೆ ಮುಕ್ತಿಯಾ |ತುಚ್ಛವೆಂಬುವಿರೆ ಸರಸ್ವತೀ || ಸರಸ್ವತಿಭಾರತಿ|ನಿಶ್ಚೈಸಿ ಒರಳೀಗೊದಗೀರೆ 4ಅಕ್ಕಿ ಥಳಿಸಲಿ ಬಾರೆ | ಅಕ್ಕ ಸೌಪರಣಿ ಶ್ರೀ |ರಕ್ಕಸಾ ವೈರೀ ಮದುವೀಗೇ || ಮದುವೀಗೆವಾರುಣಿತಕ್ಕೊಳ್ಳೆ ಕೈಲಿ ಒನಕೀಯಾ 5ಕೂಸಾಗಿ ಇದ್ದಾಗ ಆ ಶಿವನೆ ಬರಲೆಂದು |ಪೋಷಿಸಿದೆ ದೇಹಾ ತಪಸೀದೆ || ತಪಸೀದೆ ಪಾರ್ವತಿನೀ ಶೀಘ್ರ ಬಾರೇ ಒರಳೀಗೆ6ಇಂದ್ರ ಕಾಮನಸತಿಯಾರಿಂದು ಬನ್ನಿರಿ ನಮ್ಮ |ಮಂದರೋದ್ಧರನಾ ಮದಿವೀಗೇ || ಮದುವೀಗೆ ಒರಳಕ್ಕಿ |ಛಂದದಿಂದಲಿ ಪಾಡಿ ಥಳಿಸೀರೇ 7ಶತರೂಪಿ ನೀ ಪ್ರೀಯ ವ್ರತ ಮೊದಲಾದವರನ್ನ |ಪತಿಯಿಂದ ಪಡದೂ ಅವನೀಯಾ || ಅವನೀಯ ಪಾಲಿಸಿದಪತಿವ್ರತೀ ಒನಕೀ ಕೈಕೊಳ್ಳೇ8ದೇವರಂಗನಿಯರಿಗೆ ಸಾವಧಾನದಿ ಜ್ಞಾನ |ನೀ ವರದೇ ಎಂಥಾ ಗುಣವಂತೇ || ಗುಣವಂತೆ ಕರುಣಾಳೆಪ್ರಾವಹೀ ಪಿಡಿಯೇ ಒನಕೀಯಾ 9ಅರುವತ್ತು ಮಕ್ಕಳನಾ ಹರುಷದಿಂದಲಿ ಪಡದು |ವರನೋಡಿ ಕೊಟ್ಟೀ ಪ್ರಸೂತೀ || ಪ್ರಸೂತಿ ನೀನುಹಂದರದ ಮನಿಯೊಳೂ ಇರಬೇಕೂ 10ಗಂಗಾದೇವಿ ಯಂಥ ಇಂಗಿತಜÕಳೆ ನೀನು |ಹಿಂಗಿಸಿದೆ ವಸುಗಳಪವಾದಾ || ಅಪವಾದ ತ್ರಯ ಜಗ-ನ್ಮಂಗಳೇ ಪಿಡಿಯೇ ಒನಕೀಯಾ 11ಅನಿರುದ್ಧಾಶ್ವಿನಿ ಚಂದ್ರ ಇನಕಾಲಾ ಸುರಗುರು |ವನತಿಯರೆ ಉಳಿದಾ ನವಕೋಟೀ || ನವಕೋಟಿ ಸುರರಮಾನಿನಿಯೇರು ಬಂದೂ ಥಳಿಸೀರೇ 12ಅನ್ಯರನ ಪಾಡಿದರೆಬನ್ನಬಡಿಸುವ ಯಮನು |ವನ್ನಜಾಂಬಕನಾಶುಭನಾಮಾ || ಶುಭನಾಮ ಪಾಡಿದರೆಧನ್ಯರಿವರೆಂದೂ ಪೊಗಳೂವಾ13ಈ ವ್ಯಾಳ್ಯದಲಿ ನೋಡಿ ನಾವು ಥಳಿಸೀದಕ್ಕಿ |ಪಾಪನ್ನವಾಗೀ ತ್ವರದಿಂದಾ || ತ್ವರದಿಂದ ನಮ್ಮ ಶ್ರೀಗೋವಿಂದನ ಶಾಸೀಗೊದಗಲೀ 14ಹೆಚ್ಚಿನಂಬರ ಉಟ್ಟು ಅಚ್ಚಿನ ಕುಪ್ಪುಸ ತೊಟ್ಟು |ಪಚ್ಚಾದಿ ರತ್ನಾಭರಣಿಟ್ಟೂ || ಇಟ್ಟು ಸುಸ್ವರಗೈದುಅಚ್ಯುತನ ಪಾಡೋರಿನಿತೆಂದೂ 15ಲಕ್ಕೂಮಿ ಪತಿಯಾಗಿ ಬಹು ಮಕ್ಕಳನ ಪಡದಿದ್ದಿ |ಇಕ್ಕೊಳ್ಳಿ ಈಗಾ ಮದುವ್ಯಾಕೇ || ಯಾಕೊನತರಾನಂದಉಕ್ಕೀಸುವದಕೆ ರಚಿಸೀದ್ಯಾ16ಎಂಂದಾಗೆದೊ ಶ್ರೀ ಮುಕುಂದ ನಿನ್ನಾ ಮದುವಿ |ಹಿಂದಿನಾ ಬ್ರಹ್ಮರರಿತಿಲ್ಲಾ || ರರಿತಿಲ್ಲಅವಿಯೋಗಿಎಂದು ಕರಸುವಳು ಶೃತಿಯೋಳೂ 17ಶೀಲಿ ಸುಂದರಿ ನಿನ್ನ ಆಳಾಗಿ ಇರುವಳು |ಶ್ರೀ ಲಕ್ಷ್ಮೀ ನೀನು ಸ್ವರಮಣಾ || ಸ್ವರಮಣನಾಗೆವಳಮ್ಯಾಲೆ ಮದುಪ್ಯಾಕೊ ಭಗವಂತಾ18ಆರು ಮಹಿಷಿಯರು ಹದಿನಾರು ಸಾವಿರ ಮ್ಯಾಲೆ |ನೂರು ನಾರಿಯರೂ ಬಹುಕಾಲಾ || ಬಹುಕಾಲ ಬಯಸಿದ್ದುಪೂರೈಸಿ ಕೊಟ್ಯೋ ದಯಸಿಂಧು 19ವೇದನೆಂಥಾ ಪುತ್ರ ವೇದನಂತಾ ಬಲ್ಲ |ವೋದುವಾ ನಿರುತಾ ನಿನ ಪೌತ್ರಾ || ಪೌತ್ರೌ ನಿಮ್ಮಣ್ಣ ಸ್ವ-ರ್ಗಾಧಿಪತಿ ಎಂದೂ ಕರಸೂವ 20ಜಗವ ಪಾವನ ಮಾಳ್ಪ ಮಗಳೆಂಥ ಗುಣವಂತಿ |ಅಗಣಿತಜ್ಞಾನವಂತಾರೊ || ಜ್ಞಾನವಂತರೊ ನಿನ್ನಯುಗಳಸೊಸಿಯರೂ ಪರಮಾತ್ಮಾ21ಈ ವಸುಧಿಯೊಳಗೆಲ್ಲಾ ಆವಶುಭಕಾರ್ಯಕ್ಕೂ |ದೇವೇಶ ನಿನ್ನಾ ಸ್ಮರಿಸೋರೋ || ಸ್ಮರಿಸುವರೊ ನಿನ ಮದುವಿ-ಗಾಂವೀಗ ನಿನ್ನೇ ನೆನೆವೇವೊ 22ಅಕ್ಲೇಶಾ ಅಸಮಂಧಾ ಶುಕ್ಲಶೋಣಿತದೂರಾ |ಹಕ್ಲಾಸುರಾರೀ ದುರಿತಾರೀ || ದುರಿತಾರಿ ಅಸಮ ನಿ-ನ್ನೊಕ್ಲಾದವರಗಲೀ ಇರಲಾರೀ 23ವೇದವೆಂಬದು ಬಿಟ್ಟು ಭೂ ದಿವಿಜಾರಮರಾರು |ಮಾಧವನ ಗುಣವಾ ಪೊಗಳೂವಾ || ಪೊಗಳುವಾ ಸುಸ್ವರವಾಶೋಧಿಸೀ ಕೇಳೂತಿರುವಾರೂ 24ಕಾಮಾದಿಗಳ ಬಿಟ್ಟು ಸೋಮಪರ ರಾಣಿಯರು |ಸ್ವಾಮಿಯ ವಿವಾಹಾ ನಾಳೆಂದೂ || ನಾಳೆಂದರಿಷಿಣದಕ್ಕೀಹೇಮಾಧರಿವಾಣಕ್ಕಿರಿಸೋರೂ25ಜಯ ಮತ್ಸ್ಯಾ ಕೂರ್ಮಾಕಿಟಿಜಯ ನರಸಿಂಹಾ ಋಷಿಜ |ಜಯ ರಾಮಕೃಷ್ಣಾ ಶ್ರೀ ಬುದ್ಧಾ || ಶ್ರೀಬುದ್ಧಕಲ್ಕಿ ಜಯಜಯ ದತ್ತಾತ್ರಯಶುಭಕಾಯಾ 26ಆನಂದಾದಿಂದಾ ಸುರ ಮಾನಿನಿಯಾರಾಡೀದ |ಈ ನುಡಿಯಾ ಪಾಡೀದವರೀಗೆ || ಅವರಿಗಿಹಪರದಲ್ಲಿಪ್ರಾಣೇಶ ವಿಠಲಾ ಒಲಿವೋನೂ 27
--------------
ಪ್ರಾಣೇಶದಾಸರು
161ರಂಗ ಒಲಿದ ದಾಸರಾಯರ - ಪಾದಪದುಮಕಂಗಳಿಂದ ನೋಡಿದಾವರ - ಪಾಪಂಗಳೆಲ್ಲಹಿಂಗಿಪೋಪವಲ್ಲೊ ಸತ್ವರಾ - ಏನು ಪೇಳಲಿವರಾ ಪತುಂಗಮಹಿಮೆ ತೋರಿ ಜನಕೆಮಂಗಳಾವ ಕೊಡುವನಿಂಥಾ ಅ.ಪಪರಮಭಕುತರೆನಿಸಿ ಸತತ-ಹರಿಯ ಮಹಿಮೆತುತಿಸಿಪಾಡುತಾ- ತಮ್ಮ ಮನದಿಹರಿಯ ಮೂರ್ತಿಯನ್ನೇ ನೋಡುತಾ - ಸಾಧುಜನರದುರಿತರಾಶಿ ದೂರಮಾಡುತಾ- ನಿತ್ಯದಲ್ಲಿಹರುಷದಿಂದ ಸ್ತಂಭದೊಳಗೆ -ಇರುವೆವೆಂಬಭಾವಜನಕೆಅರುಹಿ ಜನರ ಈಪ್ಸಿತಾರ್ಥ ಕರೆದು ನೀಡಿ ಮೆರೆವೊರಿಂಥಾ 1ಪರಮತತ್ವ ಸಾರಪುಂಜ - ಹರಿಕಥಾಮೃತಸಾರಹರುಷದಿಂದ ರಚಿಸಿ ಹರಿಯ -ಚರಣಭಜಿಪ ಜನಕೆ ಉಣಿಸಿಪರಮ- ಗೋಪ್ಯ-ಭಾವತಿಳಿಸಿದಾ-ಅರಿಪು ಮಾಡಿರೆಂದು ಪೇಳಿದಾ - ಮೂಢ ಜನಕೆದೊರೆಯದೆಂದು ತಾನು ಪೇಳಿದಾ - ತನ್ನ ಜನಕೆಪರಮಸುಲಭ ತೋರಿ ಮುದದಿಪರಿಪರಿಯಲಿ ಪೊರೆವೊರಿಂಥಾ 2ಧಾತನಾಂಡ - ಮಧ್ಯದಲ್ಲಿ ಜಾತರಾದ ಸ್ವೀಯ ಜನರಮಾತೆ- ಜನಕರಂತೆಅವರಮಾತನಡಸಿಕೊಡುವ ಜಗ -ನ್ನಾಥವಿಠಲನೊಲಿದನೀತಗೆ - ಜಗದಿ ತಾನುನಾಥನಾಮ ಕಾಣೆನೆಂದಿಗೆ - ದಾಸಜನಕೆನಾಥರೆನಿಸಿ ಜಗದಿ ಮಹಾ - ದಾತರಾಗಿ ಸಕಲಭೀಷ್ಠ -ವ್ರಾತಸಲಿಸಿಗುರುಜಗ-ನ್ನಾಥದಾಸವಿಠ್ಠಲ ಪ್ರೀತಿಗೊಳಿಪರಿಂಥಾ 3
--------------
ಗುರುಜಗನ್ನಾಥದಾಸರು
ಅಂತರಂಗದಲಿ ಹರಿಯ ಕಾಣದವ ತಾ ಹುಟ್ಟುಗುರುಡನೊಸಂತತ ಶ್ರೀ ಕೃಷ್ಣಚರಿತೆ ಕೇಳದವ ಜಡಮತಿಯೆ ಕಿವುಡನೊ ಎಂದೆಂದಿಗೂ ಪ.ಹರುಷದಿಂದಲಿ ಮುರಹರನ ಪೂಜೆಯ ಮಾಡದವನೆ ಕೈ ಮುರಿದವನೊಕುರುವೀರ ಸೂತನ ಮುಂದೆ ಕೃಷ್ಣ ಎಂದುಕುಣಿಯದವನೆ ಕುಂಟನೊ ||ನರಹರಿ ಪಾದೋದಕ ಧರಿಸದ ಶಿರ ನಾಯುಂಡ ಹಂಚು ಕಾಣೊಸುರವರ ಕೃಷ್ಣ ಪ್ರಸಾದವಿಲ್ಲದ ಊಟಸೂಕರಭೋಜನವೋ1ಅಮರೇಶ ಕೃಷ್ಣಗರ್ಪಿತವಲ್ಲದಕರ್ಮ ಅಸತಿಯ ವ್ರತನೇಮವೊರಮೆಯರಸಗೆ ಪ್ರೀತಿಯಿಲ್ಲದ ವಿತ್ತವು ರಂಡೆ ಕೊರಳಸೂತ್ರಕಮಲನಾಭನ ಪೊಗಳದಸಾರ ಸಂಗೀತ ಗಾರ್ದಭರೋದನವೊಮಮತೆಯಿಂದಲಿ ಕೇಶವಗೆ ನಮಸ್ಕಾರ ಮಾಡದವನೆ ಮೃಗವೊ 2ಜರೆ ಹುಟ್ಟು ಮರಣವ ತಡೆವ ಸುದ್ದಿಯ ಬಿಟ್ಟುಸುರೆಯ ಸುರಿಯ ಬೇಡವೊಸುರಧೇನು ಇರಲಾಗಿ ಶ್ವಾನನ ಮೊಲೆಹಾಲಕರೆದು ಕುಡಿಯಬೇಡವೊಕರಿ ರಥ ತುರಗವೇರಲು ಇದ್ದು ಕೆಡಹುವ ಕತ್ತೆ ಏರಲಿಬೇಡವೊಪರಮ ಪುರುಷ ಪುರಂದರವಿಠಲನಿರಲು ನರರ ಭಜಿಸಬೇಡವೊ 3
--------------
ಪುರಂದರದಾಸರು
ಆನಂದ ಭರಿತರಾಗಿ ಆಚಾರ್ಯರುಆನಂದ ಭರಿತರಾಗಿಕುಂದಣರತ್ನ ದೊಸ್ತಚಂದದ ವಸ್ತ್ರನಮಗೆ ಅಂದಣವ ಕೊಟ್ಟರು ಪ.ವ್ಯಾಲಾಶಯನನ ಕಥೆಕೇಳುತ ಬೆಳತನಕಭಾಳಹರುಷದಿಂದಉಚಿತವ ಕೊಟ್ಟರು 1ಮುತ್ತು ಮಾಣಿಕದೊಸ್ತಮತ್ತೆ ಕುದರಿಯ ಸಾಲುಛsÀತ್ರ ಚಾಮರ ನಮಗೆಅರ್ಥಿಲೆ ಕೊಟ್ಟರು 2ಬರಿಯ ಮಾಣಿಕ ದೊಸ್ತಜರದಪಟ್ಟಾವಳಿವಸ್ತ್ರಹಿರಿಯರಿಗೆ ಮುತ್ತಿನಸರಗಳ ಕೊಟ್ಟರು 3ಅಚ್ಚ ಮುತ್ತಿನ ವಸ್ತಹೆಚ್ಚಿನ ಜರತಾರಿ ವಸ್ತ್ರಹೆಚ್ಚಿನ ಕುದುರೆ ನಮಗೆಉಚ್ಛವದಿಕೊಟ್ಟರು4ರಮಿಯರಸನ ಕಥೆತಮ್ಮ ಮನ ಉಬ್ಬಿಕೇಳಿಅಮ್ಮ ರತ್ನದ ಕವಚನಮಗೆ ಕೊಟ್ಟರು 5
--------------
ಗಲಗಲಿಅವ್ವನವರು
ಆರಿತ್ತರಭವನೇ ಈ ಮನವನೆನಗೆವಾರಿಜೋದ್ಭವಪಿತನೆ ನೀನಲ್ಲದೆ ಬೇರೆ ಪಪರಮಪಾವನ ನಿನ್ನಪರಮಪರತರ ಚರಿತೆಸ್ಥಿರವೆಂದು ನೆರೆನಂಬಿ ಅರಿವ ಬುದ್ಧಿಯನುಮೆರೆವ ನಿಮ್ಮಯ ಬಿರುದ ಹರುಷದಿಂ ಸ್ಮರಿಸ್ಮರಿಸಿಹಿರಿ ಹಿರಿ ಹಿಗ್ಗುತ ಬರೆವ ಈಕರವ1ನಿನ್ನ ದಾಸರಪಾದಭಿನ್ನವಿಲ್ಲದೆ ನೋಡಿಉನ್ನತ ಸುಖಪಡೆವ ಧನ್ಯದ್ವಯನಯನಮುನ್ನ ನಾ ಮಾಡಿದ ಪುಣ್ಯಫಲವೆಂದರಿದುನಿನ್ನ ಚರಣಕೆ ನಮಿಪ ಮಹಪುಣ್ಯಶಿರವ 2ಗಾಢಮಹಿಮನೆ ನಿಮ್ಮ ಈಡಿಲ್ಲದ ಲೀಲೆರೂಢಿಯೊಳಧಿಕೆಂದು ಆಡ್ಯಾಡಿ ಕುಣಿದುಕಾಡಿ ಬೇಡುವ ಮಹಗಾಢ ನಿಮ್ಮಡಿಭಕ್ತಿನೀಡಿದವರೆನಗಾರುನೋಡುಶ್ರೀರಾಮ3
--------------
ರಾಮದಾಸರು
ಇಂಥಾತನು ಗುರುವಾದದ್ದು ನಮಗೆ ಇ-ನ್ನೆಂಥಾ ಪುಣ್ಯದ ಫಲವೊ. ಪಚಿಂತೆಯಿಲ್ಲದೆ ಅತಿ ಸುಲಭದಿಂದಲಿ ಶ್ರೀಕಾಂತನ ಕಾಣಲಿಕ್ಕಾಯಿತುಪಾಯ ಅ.ಪತಾನು ಇಲ್ಲದೆ ಈ ಜಗದೊಳು ಹರಿಯಿಪ್ಪಸ್ಥಾನವಿಲ್ಲವೆಂದು ಸಾರಿದಹೀನ ದೈವಗಳ ನಂಬಿದ ಜನರಿಗೆ ತನ್ನಙ್ಞÕನದಿಂದಲಿ ಹರಿಯ ತೋರಿದ ||ನಾನಾ ಜೀವಿಗಳ ಒಳಗೆ ಹೊರಗೆ ಇದ್ದುತಾನೇ ಮುಖ್ಯನಾಗಿ ಮೀರಿದ |ಶ್ರೀನಾರಾಯಣನೆಂದು ಪೇಳುವರಿಗೆ ತನ್ನಧ್ಯಾನದಿಂದಲಿ ಮುಕ್ತಿಮಾರ್ಗವ ತೋರಿದ 1ಪನ್ನಗಪತಿ-ಗರುಡ-ರುದ್ರ-ಇಂದ್ರಾದ್ಯರಿಗೆಉನ್ನತ ಗುರುವಾಗಿ ಮೀರಿದ |ಘನ್ನವಾದ ಶ್ರುತಿತತಿಗಳಿಂದಲಿ ಜೀವಭಿನ್ನನು ಎಂತೆಂದು ತೋರಿದ ||ಹೊನ್ನು ಹೆಣ್ಣು ಮಣ್ಣಿನಾಶೆಯಿಲ್ಲದೆ ಅವಿ-ಚ್ಛಿನ್ನ ಭಕುತಿಯಿಂದ ಮೆರೆದ |ಚೆನ್ನಾಗಿ ಭಕುತಿ ವೈರಾಗ್ಯಗಳಿಂದಲಿ |ತನ್ನ ನಂಬಿದ ಭಕುತರ ಪೊರೆದ 2ಈರೇಳು ಲೋಕಂಗಳಿಗೆ ತಾನೇ ಮುಖ್ಯ ಆ-ಧಾರವೆಂಬುದ ಕಲಿಸಿದ |ಭಾರಣೆಯಿಂದಲೊಪ್ಪುತ ಬಲು ಹರುಷದಿಭಾರತಿಯನು ಒಲಿಸಿದಮೂರೇಳು ದುರ್ಭಾಷ್ಯಗಳ ಕಾನನವ ಕು-ಕಾರದಂತೆ ಕಡಿದಿಳಿಸಿದಸೇರಿ ಶ್ರೀಪುರಂದರ ವಿಠಲನಂಘ್ರಿಗಳಧೀರ ಪೂರ್ಣಪ್ರಙ್ಞÕಚಾರ್ಯರೆಂದೆನಿಸಿದ 3
--------------
ಪುರಂದರದಾಸರು
ಇನ್ನೇಕೆ ಯಮನ ಬಾಧೆಗಳು? |ಎನ್ನ ಜಿಹ್ವೆಯೊಳಗೆ ಹರಿನಾಮವಿರಲು ಪಪತೀತ ಪಾವನನೆಂಬ ನಾಮ-ಸಕಲ |ಶ್ರುತಿತತಿಗಳಿಗೆಲ್ಲ ನಿಲುಕದೀ ನಾಮ ||ಕ್ರುತುಕೋಟಿ ಫಲ ಒಂದೇ ನಾಮ-ಸದ್ |ಗತಿಗೆ ಸಂಗಡ ಬಾಹೋದಲೆ ದಿವ್ಯನಾಮ1ಮುನ್ನ ಪ್ರಹ್ಲಾದನೆ ಸಾಕ್ಷಿ - ನಮ್ಮ |ಕನ್ಯಾಶಿರೋಮಣಿ ದ್ರೌಪದಿ ಸಾಕ್ಷಿ ||ಚೆನ್ನ ಅಜಮಿಳನೊಬ್ಬ ಸಾಕ್ಷಿ ಆ |ಉನ್ನಂತ ಲೋಕವಾಳುವ ಧ್ರುವ ಸಾಕ್ಷಿ 2ಹದಿನಾಲ್ಕು ಲೋಕವಾಳುವ - ನಮ್ಮ |ಮದನಜನಕನಾಗಿ ಮಹಿಮೆ ತೋರುವ ||ಪದುಮನಾಭನಾಗಿ ಮೆರೆವ- ನಮ್ಮ |ಪುರಂದರವಿಠಲನ ಹರುಷದಿ ಕರೆವ 3
--------------
ಪುರಂದರದಾಸರು
ಉಡುಪಿಕೃಷ್ಣನ ನೋಡಿರಿ ಶ್ರೀಹರಿ ಚರಿತಸಡಗರವನು ಕೇಳಿರಿ ಪಪೊಡವಿಯೊಳು ಸಮರಿಲ್ಲ ಈತನಉಡುಪ ಮುಖ ಶ್ರೀ ಕೃಷ್ಟರಾಯನಕಡಲತಡಿಯಲಿ ನೆಲಸಿದಾತನಮೃಡಪುರಂದರೊಡೆಯ ದೇವನ 1ಮಧ್ವಸರೋವರ ಸ್ನಾನವ ಮಾಡುತ ಮನಶುದ್ದಭಾವದಿ ನಲಿದುಮಧ್ವಶಾಸ್ತ್ರÀವ ಸಾಧು ಸಜ್ಜನರಿಗೆ ಪೇಳ್ದಪದ್ಧತಿ ಮೀರದೆ ಶ್ರದ್ಧಾಭಕುತಿಯಿಂದ 2ಮಧ್ಯದಲ್ಲಿಹ ಅನಂತೇಶ್ವರನನುಶುದ್ಧ ಭಕುತಿಲಿ ನಮಿಸಿ ಸ್ತುತಿಸುತಮುದ್ದು ಕೃಷ್ಣನ ಹೆಜ್ಜೆ ಪಂಙ್ತಯಶ್ರದೆÀ್ಧ ಸಡಗರ ನೋಳ್ಪಸುಜನರು 3ಕಾಲಲಂದುಗೆ ಗೆಜ್ಜೆಯು ಕಯ್ಯೊಳು ಕಡ-ಗೋಲನೇಣನೆ ಪಿಡಿದುಬಾಲನಂದದಿ ಗೋಪಾಲರೂಪವ ತೋರ್ದಶ್ರೀ ಲಲಾಮನ ದಿವ್ಯ ಬಾಲಕೃಷ್ಣನರೂಪ4ಬಾಲಯತಿಗಳು ವೇಳೆ ವೇಳೆಗೆಬಾಲಕೃಷ್ಣನ ಪೂಜೆ ಮಾಡುತಬಾಲರೂಪವ ನೋಡಿ ಸುಖಿಪರುಶೀಲಗುಣಸುರವರನ ಸ್ತುತಿಪರು5ಮಧ್ವರಾಯರಿಗೊಲಿದು ಉಡುಪಿಯ ಮಣ್ಣ-ಗೆಡ್ಡೆಯೊಳಗೆ ಪೊಳೆದುಅದ್ವೈತಮತದ ಸದ್ದಡಗಿಸಿ ಮೆರೆದಂಥಮುದ್ದು ಸರ್ವಜÕರ ಆಜ್ಞಾಧಾರಕರೆಲ್ಲ 6ಶುದ್ಧ ತತ್ವಜÕರು ರಚಿಸಿದಪದ್ಧತಿಯ ಸಾಧಿಸುತ ಸಂತತಶ್ರದ್ಧೆಯೊಳು ಹರಿಕಾರ್ಯ ನಡೆಸುವಶುದ್ಧಯತಿಗಳ ಸೇವೆಗೊಲಿಯುವ 7ಪರಿಯಾಯದಿನ ಬರಲು ಶ್ರೀ ಹರಿಯನ್ನುಪರಿಪರಿವಿಧ ಪೂಜಿಸಿಪರಮವೈಭವದಿಂದ ಹರಿಯನ್ನುಕರತಂದುವರರಥÀವೇರಿ ಕುಳ್ಳಿರಿಸುವ ಭಕುತಿಯಲಿ 8ಪರಿಪರಿಯ ವಾದ್ಯಗಳು ಮೊಳಗಲುಸರುವ ಯತಿಗಳು ನೆರೆದು ಹರುಷದಿಪರಮಮಂಗಳಮೂರ್ತಿಕೃಷ್ಣನಹರುಷದಲಿ ಕೊಂಡಾಡಿ ಸುತ್ತಿಪರು 9ಕೊರಳಕೌಸ್ತುಭಮಾಲೆಯು ವೈಜಯಂತಿಯುಮುರುಡಿ ಸರಪಣಿ ಗೆಜ್ಜೆಯುಪರಿಪರಿ ರತ್ನಾಭರಣಗಳ್ಹೊಳೆಯುತಜರದ ಪೀತಾಂ¨Àರದಿಂದ ಶೋಭಿಪ ದಿವ್ಯ 10ಕನಕಕಸ್ತೂರಿ ತಿಲಕ ಫಣೆಯಲಿಮಿನುಗುತಿಹ ಸ್ತ್ರೀರೂಪಧರಿಸಿದಕನಕಪೀಠದಿ ಮೆರೆದ ಕಮಲ-ನಾಭವಿಠ್ಠಲನ ಸೇವಿಸುವ ಜನ11
--------------
ನಿಡಗುರುಕಿ ಜೀವೂಬಾಯಿ
ಊದೊ ಕೊಳಲನು ಕೃಷ್ಣ ಊದೊ ಕೊಳಲನುವೇದ ವೇದ್ಯ ಊದು ಕೊಳಲ ನಾದ ತುಂಬೆ ನಭದಿ ಕೃಷ್ಣ ಪಮದನಜನಕ ಮೋಹನಾಂಗಚದುರೆಯರಿಗೊಲಿದು ವನದಿವಿಧ ವಿಧ ಕ್ರೀಡೆಗಳನಾಡಿಮುದವನಿತ್ತ ಮಧುಸೂದನನೆ 1ಗೋಪಿಕಾ ಸ್ತ್ರೀಯರ ವಾಕ್ಯಶ್ರೀಪತಿಯುಕೇಳಿಮುದದಿತಾಪಕಳೆದುಸುರರುತಲೆಯತೂಗೆ ಹರುಷದಿಂದಕೊಳಲನೂದಿದ ಚಲುವ ಕೊಳಲನೂದಿದ 2ನಾರಿಯರು ನಲಿದು ಬಂದುವಾರಿಧಿಯೊಳು ಸರಸವಾಡೆಮಾರಮಣನು ಸೀರೆಗಳನುಗಾರುಮಾಡಿ ಕದಿವರೇನೊತಾರೊ ವಸನವದುರುಳಕೃಷ್ಣ ತಾರೊ ವಸನವÀ3ಅಂಗನೆಯರೆ ನಿಮ್ಮ ವ್ರತಕೆಭಂಗವಾದ ಕಾರ್ಯವೆಸಗೆವಂದಿಸಿದರೆ ಕೊಡುವೆನೆಂದುರಂಗ ನಲಿದು ನುಡಿದ ಮುದದಿವಸನನೀಡಿದ ರಂಗವಸನನೀಡಿದ4ತರುಳರೆಲ್ಲ ಕೂಡಿಕೊಂಡುಕರುಗಳನ್ನೆ ಪಾಲಿಸುತಿರೆಮರೆಯ ಮಾಡಿ ಕರುಗಳನ್ನುದುರುಳತನವು ತರವೆ ಕೃಷ್ಣತಾರೊ ಕರುಗಳ ಕೃಷ್ಣ ತಾರೊ ಕರುಗಳ 5ಮಾತೆಯರನೆ ಅರಸುತಿರಲುಪ್ರೀತಿಯಿಂದ ಕರುಗಳನ್ನುಜೋಕೆಯಿಂದ ಪಿಡಿದು ತರಲುಯಾತಕೀಪರಿ ನಿಂದಿಸುವದುನೋಡಿ ಕರುಗಳ ನಿಂತಿರುವದು ನೋಡಿ ಕರುಗಳ 6ಗೊಲ್ಲತಿಯರ ಮನೆಯ ಪೊಕ್ಕುಮೆಲ್ಲುತಿರಲು ಬೆಣ್ಣೆ ಮೊಸರುನಲ್ಲೆಯರು ಪಿಡಿದು ಹರಿಯನಿಲ್ಲೊ ನಿಲ್ಲೊ ನಿಲ್ಲೊ ಕೃಷ್ಣಚೋರ ಕೃಷ್ಣನೆ ತೋರೊ ನಿಜವಜಾರಕೃಷ್ಣನೆ7ಚಿಕ್ಕ ಪ್ರಾಯದವರೆಕೇಳಿಸೊಕ್ಕಿನಿಂದ ನುಡಿವರೇನೆಬೆಕ್ಕು ತಿಂದ ತೆರವರಿಯದೆಧಿಃಕರಿಸುವುದುಚಿತವಲ್ಲನುಡಿವರೇನೆಲೆ ನಿಷ್ಠುರ ನುಡಿವರೇನೆಲೆ 8ಮಕ್ಕಳೆಲ್ಲ ಆಡುತಿರಲುಕಕ್ಕು ಬಿಕ್ಕು ಮಾಡಿಅವರದಿಕ್ಕು ದಿಕ್ಕುಗಳಿಗೆ ನಡೆಸಿಠಕ್ಕುತನವು ತರವೆ ಕೃಷ್ಣನಡತೆಯಲ್ಲವೊತುಡುಗಕೃಷ್ಣ ನಡತೆಯಲ್ಲವೊ9ಮಕ್ಕಳಾಡುತಿರಲು ಮಧ್ಯಸರ್ಪವೆರಡು ಕಾದಿ ಬರಲುದಿಕ್ಕು ತೋರದಂತೆ ಭಯದಿದಿಕ್ಕು ದಿಕ್ಕಿಗೆ ಓಡದಿಹರೆದುಡುಕು ನನ್ನದೆ ದೂರುವಿರೆನ್ನ ದುಡುಕು ನನ್ನದೆ 10ಹರಿಯ ಮಾತುಕೇಳಿಮುದದಿಹರುಷದಿಂದ ನಮಿಸಿ ಕೃಷ್ಣಗೆತ್ವರಿತದಿಂದಲಿ ಒಲಿಯೊ ಮುರಳೀ-ಧರನೆ ಹರುಷದಿಂದ ಕೃಷ್ಣನಮಿಸಿ ಬೇಡುವೆವೊ ಕೃಷ್ಣ ಸ್ಮರಿಸಿ ಪಾಡುವೆವೊ 11ಸರಸವಾಡÀುತಿಹಿರಿ ಎನ್ನಸ್ಮರಣೆಯಿಂದ ತನುವ ಮರೆತುಕ್ಷಮಿಪೆ ನಿಮ್ಮ ಗೃಹಕೆ ತೆರಳಿವನಜಮುಖಿಯರೆಲ್ಲರುತೆರಳಿರೆಂದನು ತರುಣಿಯರೆನ್ನ ಸ್ಮರಿಸಿರೆಂದನು 12ಕರುಣದಿಂದ ಸಲಹುತಿಹೆನುದುರಿತವೆಲ್ಲ ತರಿದು ಮುದದಿಕಮಲನಾಭ ವಿಠ್ಠಲನೆಂದುಕುಣಿದು ಪಾಡಿ ವನಿತೆಯರೆನಲಿದು ಪಾಡಿರೆ ನಾರಿಯರೆಲ್ಲ ಕುಣಿದು ಪಾಡಿರೆ 13
--------------
ನಿಡಗುರುಕಿ ಜೀವೂಬಾಯಿ
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಂತು ಶೋಭಿಸುತಿಹಳು ಈ ಕನ್ನಿಕೆಸಂತೋಷದಿಂದಲಿಸುರರುಸ್ತುತಿಸುತಿರಲುಪಮಂಧರಗಿರಿ ತಂದು ಸಿಂಧುವಿನೊಳಗಿಟ್ಟುಚಂದದಿಂ ಮಥಿಸಲಮೃತ ಪುಟ್ಟಲುಬಂದು ದಾನವರ ಪಹರಿಸಬೇಕೆನುತಿರಲುನಿಂದರುಸುರರುಮುಂದೋರದೆ ಚಿಂತಿಸೆಇಂದಿರಾಪತಿ ಇವರ ಭಾವವಕಂಡುಮನದಲಿ ಹರುಷಪಡುತಲಿಬಂದು ಅಸುರರ ಸುರರ ಮನ್ನಿಸಿನಿಂದ ಶ್ರೀ ಗೋವಿಂದ ಮುದದಲಿ 1ಸಾಲಾಗಿ ಕುಳಿತಿರಿ ಮೇಲಾದಮೃತವನ್ನುಲೀಲೆಯಿಂದಲಿ ಬಡಿಸುವೆನೆನ್ನಲುಕೇಳಿಅಸುರರು ಹರುಷತಾಳಿ ಸಂಭ್ರಮದಿಂದಸಾಲಾಗಿ ಕುಳಿತು ಆ ವೇಳೆ ನೋಡುತಲಿರಲುಶ್ರೀ ರಮಣ ಕರದಲ್ಲಿ ಕಲಶವÀಲೀಲೆಯಿಂದಲಿ ಪಿಡಿದು ನಿಲ್ಲಲುತಾಳಿ ಹರುಷವ ದಾನವರು ಸÀು-ಮ್ಮಾನದಿಂದಲಿ ನೋಡÀುತಿಹರು 2ಗಂಗೆಯ ಪಡೆದ ಪಾದಗಳ ಶೃಂಗಾರಅಂದಿಗೆ ಕಿರುಗೆಜ್ಹೆ ಸರಪಣಿಯುಚಂದುಳ್ಳ ಬೆರಳುಗಳಿಗೆ ಪಿಲ್ಲಿ ಕಿರುಪಿಲ್ಲಿ ಕಾ-ಲುಂಗರಗಳನಿಟ್ಟು ರಂಭೆಯಂತ್ಹೊಳೆಯಲುಬಂದಿ ಬಾಪುರಿ ಥಳಥಳಿಸುತಲಿಚಂದದನಾಗಮುರಿಗಿ ತಾಯಿತಸುಂದರಹಸ್ತಕಡಗ ಹಾಸರಇಂದಿರಾಕ್ಷಿ ಕೈ ಬಳೆಗಳ್ಹೊಳೆಯುತ 3ಹಲವು ಸೂರ್ಯರ ಕಾಂತಿ ಹೊಳೆವೊ ಪೀತಾಂಬರಸರಿಗೆ ಅಂಚಿನ ಕುಪ್ಪುಸವನೇ ತೊಟ್ಟುನಡುವಿಗೆ ನವರತ್ನ ಬಿಗಿದ ಪಟ್ಟೆಯನಿಟ್ಟುಸಡಗರದಲಿ ಆಣೆಮುತ್ತಿನ ಸರಗಳುಸರಗಿ ಏಕಾವಳಿಯು ವಜ್ರದಪದಕಗಳು ಥಳಕೆಂಬ ಸರಗಳುಕೊರಳ ಗೆಜ್ಜೆಟ್ಟಿಕೆಯು ಕಂಠಿಯುಮುರಳಿಸರ ಕಠ್ಠಾಣಿವಲಿಯುತ 4ಹೊಳೆವೊಗಲ್ಲಕೆ ಥಳಥಳಿಪ ಅರಿಶಿನಹಚ್ಚಿಹೊಳೆವೊ ಮೀನ್ ಬಾವುಲಿ ಕರ್ಣದಲಿಗಿಳಿಗೆಜ್ಜೆ ಚಳತುಂಬು ಬುಗುಡಿ ಬಾವುಲಿ ಚಂದ್ರಮುರುವುಸರಪಳಿಗಳು ಥಳಥಳ ಹೊಳೆಯಲುಆಣಿಮುತ್ತಿನ ಮುಖುರ ಬೇಸರಿಜಾಣೆ ನಾಶಿಕದಲ್ಲಿ ಹೊಳೆವ ಬು-ಲಾಕುನಿಟ್ಟಿ ಬೆಳಕು ಗಲ್ಲದಮೇಲೆ ಥಳಥಳ ಹೊಳೆವ ಕಾಂಚಿಯು 5ಸಣ್ಣ ಬೈತಲೆ ಬಟ್ಟು ಚಂದ್ರ ಸೂರ್ಯರ ನಿಟ್ಟುಹಿಂದೆ ಜಡೆಬಿಲ್ಲೆ ಗೊಂಡ್ಯಗಳನಿಟ್ಟುಚಂದ್ರ ಸೂರ್ಯರ ಪೋಲ್ವ ಚೌರಿ ರಾಗಟಿ ಜಡೆಬಂಗಾರ ಹೊಳೆಯುತ್ತ ಬಡನಡು ಬಳಕುತ್ತಕಂಗಳ ಕಡೆನೋಟದಿಂದಲಿಭಂಗಪಡಿಸುತ ಅಸುರ ಕೋಟಿಯಮಂದಗಮನದಿ ಅಡಿಯನಿಡುತಲಿಬಂದಳಮೃತದ ಕಲಶ ಪಿಡಿಯುತ 6ಕಂಗಳುಮುಚ್ಚಿ ಕುಳಿತಿರಲು ದಾನವ ಪಂಕ್ತಿಮುಂದೆ ಕಾಲ್ಗೆಜ್ಜೆ ಧ್ವನಿಯ ಮಾಡುತಅಂದಿಗೆ ಸರಪಣಿನಾದ ತುಂಬಲು ಭರದಿಸುಂದರಿ ಬಂದಿಹಳೆÀಂದು ದಾನವರೆಲ್ಲಮಂದಹಾಸದಿ ಮೈಮರೆತು ಮತ್ತೊಂದು ತೋರದೆ ಕಳವಳಿಸುತಲಿರೆಇಂದಿರೇಶನು ದೇವೆತೆಗಳಿಗೆಪೊಂದಿಸಿದ ಅಮೃತವನು ಹರುಷದಿ 7ಕಲಕಲಕೂಗುತ ಕಲಹಕೆನ್ನುತ ಬರೆಬಲವು ಸಾಲದೆ ಹಿಂದಿರುಗಲವರುಸುರರುಪುಷ್ಪದ ಮಳೆಕರೆದರು ದೇವನವರಋಷಿಗಳು ನೆರೆದು ಸ್ತುತಿಸಿ ಕೊಂಡಾಡಲುಪರಮಪುರುಷನೆ ಪುಣ್ಯಚರಿತನೆಗರುಡ ಗಮನನೆ ಉರಗಶಯನನೆಸರಸಿಜಾಕ್ಷನೆ ನಮಿಪೆವೆನ್ನುತಸನಕಾದಿಗಳು ಸಂಸ್ತುತಿಸೆ ದೇವನ 8ಪರಶಿವನಿದ ನೋಡಿ ಪರಿಪರಿ ಪ್ರಾರ್ಥಿಸಿತರುಣಿಯ ರೂಪವ ನೋಡಲನುವಾಗಲುಸರಸಿಜಾಕ್ಷನ ಸ್ತ್ರೀರೂಪ ನೋಡುತಲಿ ಮೈಮರೆದು ಕೈಮುಗಿದು ಕೊಂಡಾಡಿ ಸುತ್ತಿಸಿದನುಮರಳಿ ಭಸ್ಮಾಸುರನ ಭಾಧೆಗೆತರಹರಿಸಿ ಮುಂದೋರದಿರುವಸಮಯದಲಿ ಸ್ತ್ರೀರೂಪ ತಾಳುವತ್ವರದಿ ರಕ್ಷಿಸಿ ಪೊರೆದ ದೇವನು 9ಕಮಲಸಂಭವನಯ್ಯಕಮಲಜಾತೆಯ ಪ್ರಿಯಕಮಲಾಕ್ಷಕಂಸಾರಿಕರುಣಾನಿಧೆಶರಣು ಶರಣೆನ್ನುತ ನಭವ ತುಂಬಲು ಸ್ವರಸುರಗಂಧರ್ವರು ಪಾಡಿಪೊಗಳುತಿಹರೊ ದೇವಕನಕಗರ್ಭನ ಪಿತನೆ ರಕ್ಷಿಸುಕಮಲನಾಭ ವಿಠ್ಠಲನೆ ನಮಿಸುವೆಸವಿನಯದಿ ನಿನ್ನ ಸ್ತುತಿಪ ಭಾಗ್ಯವಕರುಣಿಸೆನಗೆ ಶ್ರೀ ಕರುಣಾನಿಧಿಯೆ 10
--------------
ನಿಡಗುರುಕಿ ಜೀವೂಬಾಯಿ
ಎಂಥ ಸುಖ ಎಂಥ ಸುಖ ಎಂಥ ಸುಖವಲಕ್ಷ್ಮಿಕಾಂತನ ಪೂಜಿಸಿ ಸಂತೋಷ ಪಡುವರುಕುಂತಿ ಮಕ್ಕಳುಕೆಲದಿಪ.ಜಾಳಿಗೆ ಮುತ್ತಿನ ಕವಚಭಾಳ ರತ್ನಗಳ ವಸ್ತಏಳು ಲೋಕಗಳ ಬೆಳಗುವಏಳು ಲೋಕಗಳ ಬೆಳಗುವ ಪೀತಾಂಬರವ್ಯಾಳಾಶಯನಗೆ ದೊರೆಕೊಟ್ಟ 1ಸರಮುತ್ತು ಹೆಣಿಸಿದ ಬರಿಯ ಮಾಣಿಕದ ವಸ್ತಧರೆಯೆಲ್ಲ ಬೆಳಗುವಪಟ್ಟಾವಳಿಧರೆಯೆಲ್ಲ ಬೆಳಗುವಪಟ್ಟಾವಳಿಕುಪ್ಪುಸನಾರಿ ರುಕ್ಮಿಣಿಗೆ ದೊರೆ ಕೊಟ್ಟ 2ಮುತ್ತು ಮಾಣಿಕ ರತ್ನ ತೆತ್ತಿಸಿದ ಆಭರಣಹತ್ತು ದಿಕ್ಕುಗಳ ಬೆಳಗುವಹತ್ತು ದಿಕ್ಕುಗಳ ಬೆಳಗುವ ಛsÀತ್ರ ಚಾಮರಸತ್ಯಭಾಮೆಗೆ ದೊರೆಕೊಟ್ಟ 3ಆನೆ ಕುದುರೆಯ ಸಾಲು ಎಷ್ಟೋ ರಥಗಳುಮಾನದ ಕಾಲಾಳು ಮೊದಲಾಗಿಮಾನದ ಕಾಲಾಳು ಮೊದಲಾಗಿ ಹರುಷದಿಶ್ರೀನಿವಾಸಗೆ ದೊರೆಕೊಟ್ಟ 4ಕುದುರೆ ಪಲ್ಲಕ್ಕಿ ರಥಸಾಲು ಬಿರುದಿನ ನೌಬತ್ತುಛsÀತ್ರ ಚಾಮರವು ಮೊದಲಾದಛsÀತ್ರ ಚಾಮರ ಮೊದಲಾದ ಉಚಿತವಮುದದಿ ರುಕ್ಮಿಣಿಗೆ ದೊರೆ ಕೊಟ್ಟ 5ಸಾವಿರ ಅಬುಜ ಕುದರಿ ಸಾಲಾದ ರಥಗಳುಮ್ಯಾಲೆ ಪಲ್ಲಕ್ಕಿ ಮೊದಲಾಗಿಮ್ಯಾಲೆ ಪಲ್ಲಕ್ಕಿ ಮೊದಲಾಗಿ ಛsÀತ್ರವಸತ್ಯಭಾಮೆಗೆ ದೊರೆಕೊಟ್ಟ 6ದೊರೆಯು ಧರ್ಮನು ಹರಿಗೆ ಬಿರುದು ಬಿನ್ನಾಣಗಳ ಕೊಟ್ಟಕರಗಳ ಮುಗಿದು ಶಿರಬಾಗಿಕರಗಳ ಮುಗಿದು ಶಿರಬಾಗಿ ರಾಮೇಶನಪರಮಪ್ರೀತಿ ಇರಲೆಂದು7
--------------
ಗಲಗಲಿಅವ್ವನವರು
ಏಕಾರತಿಯನೆತ್ತುವ ಬನ್ನಿ ನಮ್ಮಲೋಕನಾಥನಸಿರಿಪಾದವ ಬೆಳಗುವಪ.ತುಪ್ಪದೊಳ್ಬೆರಸಿದ ಮೂರು ಬತ್ತಿಯನಿಟ್ಟುಒಪ್ಪುವ ದೀಪಕ್ಕೆ ದೀಪಹಚ್ಚಿ ||ತಪ್ಪದೆ ಸಕಲ ಪಾಪಂಗಳ ಹರಿಸುವಅಪ್ಪ ವಿಠಲನ ಪದಾಬ್ಜವ ಬೆಳಗುವ 1ಹರುಷದಿ ಏಕಾರತಿ ಬೆಳಗಿದ ಫಲನರಕದಿಂದುದ್ಧಾರ ಮಾಡುವುದು ||ಪರಮ ಭಕುತಿಯಿಂದ ಬೆಳಗುವ ನರರನುಹರಿತನ್ನ ಹೃದಯದಿ ಧರಿಸುವನಯ್ಯ2ಅನ್ಯ ಚಿಂತೆ ಮಾಡದೆ ಅನ್ಯರ ಭಜಿಸದೆ ಮತ್ತನ್ಯ ದೇವರನು ಸ್ಮರಿಸದೆ ಅ ||ನನ್ಯವಾಗಿ ಶ್ರೀ ಪುರಂದರವಿಠಲನಪುಣ್ಯನಾಮಗಳ ಧ್ಯಾನಿಸುತ 3
--------------
ಪುರಂದರದಾಸರು