ಒಟ್ಟು 6322 ಕಡೆಗಳಲ್ಲಿ , 125 ದಾಸರು , 3863 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯಜಯ ಶ್ರೀ ರಾಮ ನಮೋ |ಜಯ ಜಯ ಶ್ರೀ ಕೃಷ್ಣ ನಮೋ ಪ.ಸಿರಿಯರಸನು ಶೃಂಗಾರವ ಮಾಡಿ |ಸಿರಿಗಂಧವನೆ ಹಣೆಗಿಟ್ಟು ||ತರುಣ ತುಳಸಿ ವನಮಾಲೆಯ ಧರಿಸಿ |ಹರಿತುರುಕಾಯಲು ಹೊರಗೆ ಹೊರಟನು1ಹೊತ್ತು ಹೋಯಿತುತುರು ಬಿಡಿಯೆನ್ನುತ |ಸಾತ್ತ್ವತ ನುಡಿದನು ಗೋಪಿಯೊಡನೆ ||ತುತ್ತುರು ತುತ್ತುರು ತುರುತುರುಯೆನ್ನುತ |ಒತ್ತಿ ಸ್ವರಗಳನು ಪೊಂಗೊಳಲೂದುತ 2ವನಿತೆ ಸಟ್ಟುಗದೊಳು ಅಕ್ಕಿಯ ತೊಳಸಿ |ಒನಕೆಯಿಂದಓಗರ ಹದನೋಡಿ ||ಮಿನುಗುವ ಸೀರೆಯ ತಲೆಗೆ ಸುತ್ತಿಕೊಂಡು |ವನಕೆ ಹೋಗಲೆಂದು ಹೊರಗೆ ಹೊರಟಳು 3ಹರಿಸ್ವರವೆನ್ನುತ ಒಬ್ಬಳುಕೇಳಿನೆರೆಮನೆಗೆ ಹೋಗಿ ಕಡ ಕೇಳಿದಳು ||ಒರಳು ಕೊಡುವಿರಾ ಅರಸಿನ ಅರೆದು |ಮರಳಿ ಬೇಗ ತಂದೀವೆನೆನುತಲಿ 4ಹಸುವಿಗೆ ಇಟ್ಟಲು ಹಾಲುಓಗರ |ಬಿಸಿಮಡ್ಡಿಯ ಗಂಡಗೆ ಚಾಚಿ ||ಸೊಸೆಯನು ಅಟ್ಟಿಸಿ ತೊತ್ತನು ಪಾಲಿಸಿಮೊಸರ ಕಾಸಿ ಹೆಪ್ಪ ಹಾಕಿದೊಳೊಬ್ಬಳು 5ಗಿಳಿಗೆ ಹಾಸಿದಳು ಹಾಸು ಮಂಚವನು |ಅಳಿಯನ ಪಂಜರದೊಳಗಿರಿಸಿ ||ತಳಿಗೆಯಲ್ಲಿ ತಮ್ಮನ ಮಲಗಿಸಿ ತೊಟ್ಟಿ - |ಲೊಳಗೆ ಎಡೆಯನು ಮಾಡಿದಳೊಬ್ಬಳು 6ಅಟ್ಟವೆಂದು ಹತ್ತಿ ಅಗಳಿಯ ಮೇಲೇಇಟ್ಟಳು ಸಾದೆಂದು ಸಗಣಿಯನು ||ಕಟ್ಟಬಾಯಿಗೆ ಕಾಡಿಗೆಹಚ್ಚಿ |ಕೃಷ್ಣನ ಸ್ಮರಿಸುತ ಹೊರಗೆ ಹೊರಟಳು 7ಅಂಗನೆ ಚೌರಿಯು ಕಾಲಿಗೆ ತಗುಲಿಸಿ |ಮುಂಗೈಯಲಿ ತಾಳಿಯ ಬಿಗಿದು ||ಸಿಂಗರ ಸರವನು ನಡುವಿಗೆಕಟ್ಟಿ |ರಂಗನ ಸ್ಮರಿಸುತ ಹೊರಟಳೊಬ್ಬಳು 8ಕಟ್ಟಿ ಮುತ್ತಿನೋಲೆ ಮೊಣಕಾಲ್ಗಳಿಗೆ |ಗಟ್ಟಿ ಕಂಕಣವ ಕಿವಿಗಿಟ್ಟು ||ತೊಟ್ಟಿಲೊಳಗೆ ಶಿಶು ಅಳುವುದ ಕಂಡು |ಕಟ್ಟಿದ ನೆಲುವನು ತೂಗಿದಳೊಬ್ಬಳು 9ತರುಣಿಯೊಬ್ಬ ಸಂನ್ಯಾಸಿಯ ಕಂಡು |ನೆರೆಮನೆ ಕೂಸೆಂದೆತ್ತ ಬರಲು ||ಅರಿದಾವ ಗಾಳಿ ಸೋಕಿತೆನುತಲಿ |ಪುರಂದರವಿಠಲನು ನಗುತಿದ್ದನು ಸಖಿ 10
--------------
ಪುರಂದರದಾಸರು
ಜಯತು ಜಯತು ಜಯತುಜಯಾ| ಜಯತುಮಾಧವಾ |ಜಯತು ಜಯತು ಜಯತು |ಜಯಾ| ಜಯತು ಕೇಶವಾ 1ಶ್ರೀಶವಿಠಲ ವಾಸುದೇವಾ | ಕ್ಲೇಶನಾಶನಾ ||ಭಾಸುರಾಂಗ ದೋಷರಹಿತ | ಈಶವಂದನಾ 2ಉದಧಿಶಯನ ಪದುಮನಯನ | ಜಯಯದೂವರಾ |ಮದನಜನಕ ಮಧುರ ವಚನ | ಪೊರೆಗದಾಧರ 3ಗರುಡಗಮನ ಉರಗಶಯನ | ನರಕಸೂದನ |ಸುರರಿಗೊಡೆಯ ಧರಣಿ ಪಾಲದುರಿತಛೇದನಾ 4ಇಂದಿರೇಶ ಸುಂದರಾಸ್ಯ | ಮಂದರಾಧರಾ |ವಂದಿಸುವೆನು ಚಂದದಿ ಗೋವಿಂದ ಮುರಹರಾ 5
--------------
ಗೋವಿಂದದಾಸ
ಜಯತು ಜಯತು ಜಯತೆಂಬೆನು ವಿಠಲಭಯನಿವಾರಣ ನಿರಾಮಯ ನೀನೆ ವಿಠಲ ಪ.ಮನವೆನ್ನ ಮಾತ ಕೇಳದು ಕಾಣೊ ವಿಠಲಮನಸಿಜನಾಯಸ ಘನವಾಯ್ತು ವಿಠಲನಿನಗಲ್ಲದಪಕೀರ್ತಿಯೆನಗೇನು ವಿಠಲತನುಮನದೊಳಗನುದಿನವಿರು ವಿಠಲ 1ಕದನಮುಖದಿ ಗೆಲುವುದ ಕಾಣೆ ವಿಠಲಮದನಮುಖ್ಯಾದಿ ವೈರಿಗಳೊಳು ವಿಠಲವಿಧವಿಧದಿಂದ ಕಷ್ಟಪಟ್ಟೆನು ವಿಠಲಇದಕೇನುಪಾಯ ತೋರಿಸಿ ಕಾಯೋ ವಿಠಲ 2ಹುಟ್ಟಿದೆ ನಾನಾ ಯೋನಿಗಳೊಳು ವಿಠಲಸುಟ್ಟ ಬೀಜದ ವೋಲ್ ಫಲವಿಲ್ಲ ವಿಠಲಇಷ್ಟಾರ್ಥಗಳನಿತ್ತು ಸಲಹಯ್ಯ ವಿಠಲಇಷ್ಟಕ್ಕೆ ನೀ ಮನ ಮಾಡಯ್ಯ ವಿಠಲ 3ಬಂಗಾರ ಭಂಡಾರ ಬಯಸೆನು ವಿಠಲಮಂಗಲ ಕೊಡು ಯೆನ್ನ ಬುದ್ಧಿಗೆ ವಿಠಲರಂಗ ರಂಗನೆಂಬ ನಾಮದಿ ವಿಠಲಭಂಗವ ಪರಿಹರಿಸಯ್ಯ ನೀ ವಿಠಲ 4ಏನು ಬಂದರೂ ಬರಲೆಂದಿಗು ವಿಠಲಮಾನಾವಮಾನ ನಿನ್ನದು ಕಾಣೊ ವಿಠಲನಾನು ನಿನ್ನವನೆಂದು ಸಲಹಯ್ಯ ವಿಠಲಲಕ್ಷ್ಮೀನಾರಾಯಣ ನೀನೆ ತಂದೆ ಕೇಳ್ ವಿಠಲ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯಭಾರತೀಶಜಯ ಜಯಭಾರತೀಶಜಯಜಯಭಾರತೀಶಜಯತುಜಯ ರಾಘವಾಂಘ್ರಿಪಾದಕಮಲಭೃಂಗನೆ ನಮಿಪೆಜಯಭಾರತೀಶಜಯತುಪಜಯಭಾರತೀಶಜಯಜಯ ಭೀಮ ಹನುಮನೆಭಯವ ಪರಿಹರಿಸಿ ಪೊರೆಯೈಜಯ ಮಧ್ವಮುನಿರಾಯಗುರುಮಧ್ವಮುನಿರಾಯಗುರುವೆ ಪಾಲಿಸು ಜಯ ಜಯ ಅ.ಪತ್ರೇತೆಯಲಿ ರಘುಪತಿಯ ಸೇವೆ ಮಾಡುವೆನೆಂದುಸೀತೆಗುಂಗುರವನಿತ್ತುಮಾತೆಯಾಜೆÕಯ ಕೊಂಡುಘಾತಿಸಿದೆ ರಕ್ಕಸರದೂತ ರಾವಣನ ಕಂಡುಭೀತಿಯಿಲ್ಲದೆ ಜನಕ-ಜಾತೆಯಳ ಕಳುಹೆನಲುಆತ ಕೋಪದಿಂದಲಿ ತನ್ನದೂತರಿಂದಲಿ ವಾಲ-ವಗ್ನಿಯಲಿ ದಹಿಸಿರೆನೆಆ ಪುರವ ದಹಿಸಿ ಮೆರೆದೆ 1ದ್ವಾಪರದಿ ಶ್ರೀಕೃಷ್ಣನಂಘ್ರಿ ಸೇವಕನಾಗಿಪಾಪಿ ಜರೆಸುತನ ಸೀಳಿದ್ರೌಪದಿಯ ನುಡಿಕೇಳಿಪಾಪಿ ಕೀಚಕನನ್ನುಕೋಪದಿಂ ಕೊಂದ ಮಹಿಮಾಪಾಪಿ ದುರ್ಯೋಧನಾದಿಗಳ ಸಂಗಡ ಕಾದಿಸೋತು ಓಡಲು ದುರುಳನುನೀತಿ ಬಿಡದಲೆ ಗದೆಯಏಟಿನಿಂದವನ ತೊಡೆಘಾತಿಸುತಲವನನಳಿದೆ 2ಮಧ್ವಮತದವರನುದ್ಧರಿಸ ಬೇಕೆಂದೆನುತಮಧ್ಯಗೇಹರಲಿ ಜನಿಸಿಶುದ್ಧ ಶಾಸ್ತ್ರಗಳನುದ್ಧರಿಸುತ ಜಗದೊಳಗೆ ಪ್ರ-ಸಿದ್ಧನೆಂದೆನಿಸಿ ಮೆರೆದೆಮುದ್ದು ಕೃಷ್ಣನ ಪೂಜೆಶ್ರದ್ಧೆ ಬಿಡದಲೆ ಮಾಡಿಉದ್ಧರಿಸಿ ಸಜ್ಜನರನುಮುದ್ದು ಕಮಲನಾಭ-ವಿಠ್ಠಲಗರ್ಪಿತವೆಂದೆಮಧ್ವಮುನಿರಾಯ ಜಯತು 3
--------------
ನಿಡಗುರುಕಿ ಜೀವೂಬಾಯಿ
ಜಯಮಂಗಳಂನಿತ್ಯಶುಭಮಂಗಳಂಪ.ಮಂಗಳ ಮಧು ಕೈಟಭಾಸುರ ಮರ್ದನಗೆಮಂಗಳಮದನ ಕೋಟಿ ಲಾವಣ್ಯಗೆ ||ಮಂಗಳ ಜಗದಂತರಂಗ ಕೃಪಾಂಗಗೆಮಂಗಳ ಯದುಕುಲೋತ್ತಮ ಸಾರ್ವಭೌಮಗೆ 1ಶ್ರೀವತ್ಸಲಾಂಛನಗೆ ಸಿರಿದೇವಿಯರಸಗೆಗೋವರ್ಧನೋದ್ಧಾರ ಗೋವಿಂದಗೆ ||ಮಾವ ಕಂಸನ ಕೊಂದಮಕರ ಕುಂಡಲಧರಭಾವಜನಯ್ಯ ಚಿನ್ಮಯ ಮೂರ್ತಿಗೆ 2ಅಂಬುಜನಾಭಗೆ ಅಖಿಳಲೋಕೇಶಗೆಶಂಭು -ಅಜ - ಸುರ - ಮುನಿವಂದ್ಯ ಹರಿಗೆ ||ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳಬೊಂಬೆಯ ಮಾಡಿ ಕುಣಿಸುವ ದೇವಗೆ 3ಸಕಲಗುಣ ಪೂರ್ಣಗೆ ಸರ್ವಸ್ವಾತಂತ್ರ್ಯಗೆಅಕಳಂಕ ಆದಿನಿರ್ದೋಷ ಹರಿಗೆ ||ಭಕುತ ವತ್ಸಲನಿಗೆ ಭವರೋಗ ವೈದ್ಯಗೆನಿಖಿಳಜೀವದಯಾಪರಿಪೂರ್ಣಗೆ4ಪನ್ನಗಶಯನಗೆ ಪಾವನ ಮೂರ್ತಿಗೆಸನ್ನುತಾನಂತ ಸದ್ಗುಣ ಭರಿತಗೆ ||ಎನ್ನೊಡೆಯ ಪುರಂದರವಿಠಲ ರಾಯಗೆತನ್ನ ನಂಬಿದವರ ಸಲಹುವ ಮೂರ್ತಿಗೆ 5
--------------
ಪುರಂದರದಾಸರು
ಜಲದನೀಲಗಾತ್ರ ಏತರ ಚೆಲುವ ರುಕ್ಮಿಣಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬಿಳಿಯ ಜಡೆಯ ಮೈಯ ಜೋಗಿಗೊಲೆದ ಪಾರ್ವತಿ ಪ.ಉದಕದೊಳಗೆ ವಾಸವೇಕೆ ಸದನವಿಲ್ಲವೆ |ಸುದತಿಸುಡುವ ಕಾಡಿಗಿಂತ ಲೇಸು ಅಲ್ಲವೆ1ಶೃಂಗಿಯ ಬೆನ್ನಿಲೆತ್ತಿದವನ ಸೊಗಸು ನೋಡಿದೆ |ಗಂಗೆಯ ಶಿರದಿ ಪೊತ್ತವನ ಗುರುವ ಕೇಳಿದೆ 2ವಸುಧೆ ನೆಗಹಿ ಬೇರೆ ಮೆಲುವ ಅಶನವಿಲ್ಲವೆ |ಹಸಿದು ವಿಷವ ಕುಡಿದ ಎಂತು ಸ್ವಾದವಲ್ಲವೆ 3ಕರುಳ ಕೊರಳ ಸರವು ಏಕೆ ಸರವು ದೊರಕದೆ |ಕೊರಳ ರುಂಡಮಾಲೆ ಏಕೆ ಕಾಂಚನವಿಲ್ಲದೆ 4ಧರಣಿ ಮೂರಡಿ ಬೇಡಲಿಕ್ಕೆ ದೊರೆಯು ಅಲ್ಲವೆನರಕಪಾಲ ಪಿಡಿವ ಜಗದ ಕರ್ತೃವಲ್ಲವೆ 5ಮಾತೆಶಿರವ ಅಳಿದವನ ಮಾಲೆ ಕೇಳಿದೆಯಾ !ತಾತನಾಚಿ ಸುತನ ಕೊಂದು ನೀತಿ ನೋಡಿದೆಯಾ 6ಕೋತಿಗಳನು ಕೂಡಲಿಕ್ಕೆ ಜಾತಿ ತನ್ನದೆ |ಭೂತಗಣಗಳಾಳುವುದಕೆ ಭೀತಿ ಇಲ್ಲವೆ 7ಹತ್ತಿರಿದ್ದ ವಾಜಿಬಿಟ್ಟು ಹದ್ದನೇರ್ವರೆ |ಎತ್ತಿನ ಬೆನ್ನ ನೇರಿದವರು ಉತ್ತಮರಾಹರೆ 8ಸುತ್ತಲಿದ್ದಬಾಲೆಯರೊಳು ಬತ್ತಲಿರುವರೆ |............... ಶಾಪ ಹತ್ತಲಿಲ್ಲವೆ 9ಹರಿಹರರೊಳು ಭೇದವೇನು ಹೇಳೆ ರುಕ್ಮಿಣಿಪುರಂದರವಿಠಲ ತಾನೆ ಬಲ್ಲ ಕೇಳೆ ಪಾರ್ವತಿ 10
--------------
ಪುರಂದರದಾಸರು
ಜಲಧಿತಕ್ಕದೊ ನಿನ್ನಳಿಯಗೂ ನಿನಗೂ |ಹಲವು ಬಗೆಯಿಂದಲಿ ಪರೀಕ್ಷಿಯನು ಮಾಡಿದರೆ ಪಮೊದಲೆ ತಿಳದಷ್ಟು ನಿನ್ನ ಮಹತ್ಮಿ ವರ್ಣಿಸುವೆ |ತುದಿಗಂಡು ಬಲ್ಲೆನೇ ಅಧಮ ನಾನೂ ||ಎದುರಿಗಂಬುವದಾಡಿಕೊಂಡ ಬಗೆ ಬ್ಯಾರೆಲ್ಲೀ |ಮುದದಿಂದ ದಯಮಾಡಿ ಕೇಳೊ ರತ್ನಾಕರನೇ 1ನಿನ್ನಿಂದ ಹುಟ್ಟಿಹುದು ವಿಷವು, ಗುರುವಿನ ಪತ್ನಿ |ಯನ್ನು ಸ್ವೀಕರಿಸಿದನು ನಿನ್ನ ಮಗನೂ ||ಘನ್ನತರ ಮಕರಾದಿಗಳು ನಿನ್ನ ಪರಿವಾರ |ಇನ್ನೆಷ್ಟು ಪೇಳಲಿ ಚರಿತ್ರ ಪಾರಾವಾರ 2ನಿನ ಒಡಲಿಗೆಷ್ಟಾದರನ್ನ ಸಾಕೆನಿಸದೂ |ದಣಿದು ಬಂದವರಿಗಾಶ್ರಯವು ಕಾಣೇ ||ಉಣಲಿಕ್ಕೆ ಅನ್ನೆಂಬದೆಂಟನೆ ರಸದಂತೆ |ಘನಖ್ಯಾತಿ ದೂರದಲಿ ಬಳಿಗೆ ಬರಲಿಂತಿಹದು 3ಪ್ರೀತಿಯಂ ಬಂದವರು, ಗ್ರಹಣ ವೈಧೃತಿ ವೇತೀ |ಪಾತದಲಿ ನಿನ ದರುಶನಾಗಬೇಕೂ ||ಭೂತ ಬಡದವರಂತೆ ನಿನ್ನ ಕಲ್ಲುಗಳಿಂದ |ಘಾತಿಸಲಿ ಬೇಕು ನೋಡಲ್ಕೆ ಬಹು ಸೋಜಿಗವು 4ತುಳಿದದಕೆ ಹಿಗ್ಗಿದಿಯೋ ಬಹುಮಾನಿ ನೀನೆಲವೊ |ಲಲನಿ ಹಡದೇಳು ಶಿಶುಗಳ ಕೊಂದಳೂ ||ಬಲುಭಂಟಹಿರಿಯಮಗಗರಸುತನ ಕೊಡಲಿಲ್ಲ |ಇಳಿಯೊಳಗೆ ನೀ ಮಾಡಿದನ್ನ್ಯಾಯಕೆಣಿಯುಂಟೆ 5ಸತಿಸಂಗ ಬಿಡಲೊಲ್ಲಿ ಪರ್ವಕಾಲಗಳಲ್ಲಿ |ಸುತಗೆ ಕಡಿಮೆದರಿಂದೆ ಆದಿ ಹ್ಯಾಗೊ ||ಪತಿವ್ರತಾ ಮಗಳಾದಳೊಂದೆ ಸುಗುಣದರಿಂದೆ |ಕ್ಷಿತಿಯೊಳನವರತ ಪೂಜಿಸಿಕೊಂಬಿ ಜನರಿಂದ 6ಜಾಮಾತನಿಗೆ ಇಹವು ಮುಖವು ಹತ್ತೊಂಬತ್ತು |ಆ ಮಧ್ಯ ಗಜಲಪನದಂತೆ ಒಂದೂ ||ಭೂಮಿಯೊಳಗಾಶ್ಚರ್ಯ ತಾನೆ ಮಕ್ಕಳ ಪಡೆವ |ಈ ಮಗಳು ಬಹುಸುಖವ ಬಡುವಳಿವನಿಂದಲ್ಲಿ 7ಬೆರಳು ಚೀಪುವನೋಡುಸುಳ್ಳಲ್ಲ ದಾನ |ಪುರುಷ ಬದುಕುವ ಚೋರತನದಿ ಜಾರಾ ||ತರುಣಿಯಾಗಿದ್ದ ನಿನ ಬಳಿಯಲ್ಲಿ ನೀ ಬಲ್ಲಿ |ತುರುಗಾಟವ ಕೊಡಲಿ ಕೊಂಡಡವಿಯೊಳಗಿರುವ 8ಗುರುಸ್ವಾಮಿ ಪಿತ ಬ್ರಹ್ಮ ವಂಶದ್ರೋಹಿಗಳವನ |ಪರಿವಾರ ಮಕ್ಕಳಿಗೆ ಮಾವನಾದಾ ||ಉರುಗ ಶಯನಂಡಜಾಧಿಪ ವಹನ ನೀಲಾಂಗ |ಅರಿತನೃಪಋಷಿಗಳೊಳಗೊಬ್ಬರಿಗ್ಯು ಮಗನಲ್ಲ 9ಕುಲಸೂತ್ರವಿಲ್ಲ ಒಂದೇ ರೂಪನಲ್ಲ ನಿ- |ಶ್ಚಲನಲ್ಲ ವತಿ ಕಠಿಣ ವಕ್ರವದನಾ ||ಬಲು ಕೋಪಿ ತಿರದುಂಬ ಸ್ತ್ರೀಯರಿಬ್ಬರ ಕೊಂದ |ಅಲವಜಾರನು, ಬತ್ತಲಿರುವ, ಕಲಹಕೆ ಪ್ರೀಯ 10ಕೊಟ್ಟೆಲ್ಲ ಅವನಿಗೀ ಕನ್ನಿಕಿಯ ಸವತಿಯರು |ಎಷ್ಟೋ ಮಲಸುತರಿಹರದಕೆ ದಶ ಮಡೀ ||ಸಿಟ್ಟಾಗ ಬ್ಯಾಡವನ ವಾರ್ತಿ ಕೇಳಲು ಜನರು |ಬಿಟ್ಟು ಸಂಸಾರವೆಂದಿಂದಿಗೊಲ್ಲದಿಹರೂ 11ನಿನ್ನ ಮಗಳವನಿತ್ತವನ ಮಗಳ ಮದಿವ್ಯಾದಿ |ಕನ್ಯ ವಿಕ್ರಯ ಪರಸ್ಪರವೆನಿಸಿತೂ ||ಇನ್ನೇಸೊ ನಿಮ್ಮ ನಿಮ್ಮಲ್ಲಿದ್ದ ನಡತಿಗಳು |ಅನ್ಯರಿದುಕೇಳಿಭಜಿಸರೊ ಶುದ್ಧ ಭಕುತಿಯಲೀ 12ಏನಾದರೇನು ಶ್ರೀ ಪ್ರಾಣೇಶ ವಿಠಲನಿಗೆ |ನೀನೆಗತಿನಿರ್ದೋಷ ವಸ್ತುವೆಂದೂ ||ಶ್ರೀನಳಿನಭವಮುಖರುನಿತ್ಯವಂದಿಸುತಿಹರೊ |ನೀನವನ ಮಾವನಾದಿನ್ನು ಪೂಜಿತನಲ್ಲೆ 13
--------------
ಪ್ರಾಣೇಶದಾಸರು
ಜ್ಞಾನವಿಲ್ಲದಕರ್ಮಏನು ಮಾಡಿದರೇನುನಿನ್ನ ಉನ್ನತವೆಷ್ಟು ನೀನಾವ ಜಾತಿಯವವಹ್ನಿಯಂತೆಂಬಂತೆ ಇನ್ನು ನಿನ್ನಲ್ಲಿರಲುಕೇಳುವನುದಾರುಹೇಳುವನುದಾರು
--------------
ಗೋಪಾಲದಾಸರು
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತನುವ ನಂಬಲುಬೇಡ ಜೀವವೆ ಪ.ಅನುವಾಗಿ ನಿನ್ನಂಗಕೆ ಕೆಲಕಾಲ ತೋರುವದು |ಅನುವಿಲ್ಲದಾಗ ಈ ತನುವೆ ನಿನಗೆ ವೈರಿ ಅಪಜರೆಮರಣಗಳಿಂದ ಭರಿತವಾದುದುಕಾಯ |ಸ್ಥಿರವೆಂದು ನಂಬಿ ನೀ ಮರುಳಾಗಬೇಡ 1ಧನ - ಧಾನ್ಯ ಪಶು - ಪತ್ನಿ ಸ್ಥಿರವೆಂದು ತಿಳಿದು |ಮನುಮತನಯ್ಯನ ಮರೆಯದೆ ಮನವೆ 2ಶರಣೆಂದರೆಕಾವ ಗರುಡಕೇತನ ನಮ್ಮ |ಪುರಂದರವಿಠಲನ ಮರೆಯದೆ ಮನವೆ 3
--------------
ಪುರಂದರದಾಸರು
ತನುವಿನೊಳಗೆ ಅನುದಿನವಿದ್ದುಎನಗೊಂದು ಮಾತ ಪೇಳದೆ ಪೋದೆ ಹಂಸಾ ಪ.ಜಾಳಾಂದ್ರವೆಂಬದು ಒಂಬತ್ತು ಬಾಗಿಲ ಮನೆರೂವಾರವೆಂಬ ಒಂಬತ್ತು ಬಾಗಿಲ ದಾಟಿಗಾಳಿ ತಂಪಿನೊಳಿದ್ದು ತಾನು ಹಾರಿ ಪೋಪಾಗಕಾಯಕೆ ಹೇಳದೆ ಹೋಯಿತು ಒಂದು ಮಾತ 1ಹಳ್ಳ ಕೊಳ್ಳಗಳಲಿ ತಂಪಿನ ತಡಿಯಲಿಬಳ್ಳಿ ಕಾಯಿಕಾತು ಫಲವಾಯಿತುಒಳ್ಳೆಯ ತನಿಹಣ್ಣು ಉದುರಿ ತಾ ಪೋಪಾಗಬಳ್ಳಿಗೆ ಹೇಳದೆ ಹೋಯಿತು ಒಂದು ಮಾತ 2ಗಟ್ಟಿ - ಬೆಟ್ಟಗಳಲಿ ಶಾಖೆಯ ತುದಿಯಲಿಕಟ್ಟಿತು ಜೇನನು ಸುಖಕಾಗಿಗಟ್ಟಿ ತುಪ್ಪವನುಂಡು ನೊಣ ಹಾರಿ ಪೋಪಾಗಹಿಪ್ಪೆಗೆ ಹೇಳದೆ ಹೋಯಿತು ಒಂದು ಮಾತ 3ರವಿವಿಸ್ತಾರವ ಹಂಸ ಕೇಳಿದನೈ ನಿನ್ನಪೆಸರ ಪೇಳಲೆನ್ನಳವಲ್ಲರಸ ವಸ್ತುವನುಂಡು ಜ್ಯೋತಿ ತಾ ಪೋಪಾಗಪಣತಿಗೆ ಪೇಳದೆ ಹೋಯಿತು ಒಂದು ಮಾತು 4ಸಿರಿಪುರಂದರ ವಿಠಲನ ಮಾತು ಪುಸಿಯಲ್ಲಹಣೆಯ ಬರೆಹವ ಮೀರಲು ಬಲ್ಲುದೆ ?ಸರಸವನಾಣೆಯ ಮುತ್ತು ಆಗಲಿ ತಾ ಪೋಪಾಗತಿಪ್ಪಿಗೆ ಪೇಳಿದಾಯಿತು ಒಂದು ಮಾತ 5
--------------
ಪುರಂದರದಾಸರು
ತಾತ್ತ್ವಿಕತೆ245ಆರಿಗಾದರು ಪೂರ್ವಕರ್ಮ ಬಿಡದುವಾರಿಜೋದ್ಭವಅಜಭವಾದಿಗಳ ಕಾಡುತಿಹುದುಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ವೀರಭೈರವನಂತೆ ತಾನು ಬತ್ತಲೆಯಂತೆಮಾರಿಮಸಣಿಗಳಂತೆ ತಿರಿದು ತಿಂಬರಂತೆಸೂರ್ಯ ಚಂದ್ರಮರಂತೆ ರಾಹುವಟ್ಟುಳಿಯಂತೆಮೂರೆರಡು ತಲೆ ಹರಗೆ ಕೈಲಿ ಕಪ್ಪರವಂತೆ1ಶಿಷ್ಟ ಹರಿಶ್ಚಂದ್ರನಿಗೆ ಮಸಣದಡಿಗೆಯಂತೆಸೃಷ್ಟಿಸುವ ಬೊಮ್ಮನಿಗೆ ಶಿರ ಹೋಯಿತಂತೆಅಷ್ಟದಿಕಾಲ್ಪಕರು ಸೆರೆಯಾಗಿರುವರಂತೆಕಟ್ಟುಗ್ರದಿಂದ್ರನಿಗೆ ಮೈಯೆಲ್ಲ ಕಣ್ಣಂತೆ2ಹನ್ನೊಂದಕ್ಷೋಹಿಣಿ ಬಲವುಳ್ಳ ಕೌರವನುರಣದೊಳಗೆ ತೊಡೆಮುರಿದು ಬಿದ್ದನಂತೆವನಜಾಕ್ಷ ಸಿರಿಯರಸ ಬಲಿಯ ಬೇಡಿದನಂತೆವನಿತೆ ಧರ್ಮಜನ ತಾಯ್ತಿರಿದುಂಡಳಂತೆ3ಧರೆಗೆ ಧರ್ಮಜನಂತೆ ಕಂಕಭಟ್ಟನಂತೆಶೂರ ಭೀಮನು ಬಾಣಸಿಗನಾದನಂತೆವೀರ ಫಲುಗುಣನಂತೆ ಕೈಯೊಳಗೆ ಬಳೆಯಂತೆಕಿರಿಯ ನಕುಲ ಸಹದೇವರು ತುರುಗಾಯ್ದರಂತೆ4ಹರನ ವಾಹನವಂತೆ ಹುಲ್ಲು ತಿಂಬುವುದಂತೆವಿರಿಂಚಿವಾಹನವಂತೆಕಮಲಭಕ್ಷಿಪನಂತೆಹರಿಯ ಹೊತ್ತಿಹನಂತೆ ಹಾವು ಭಕ್ಷಿಪನಂತೆಸಿರಿಯಾದಿಕೇಶವನು ತಾ ಬೆಣ್ಣೆಗಳ್ಳನಂತೆ5
--------------
ಕನಕದಾಸ
ತಾಪಡೆದು ಬಂದುದಕುಪಾಯವೇನು |ಕೋಪದಲಿ ಶ್ರೀಪತಿಯ ಶಾಪಿಸಿದರೇನು ಪ.ಅನ್ನವಸ್ತ್ರವಿಲ್ಲವೆಂದು ಅತಿ ಕ್ಲೇಶಪಟ್ಟರೇನು |ಧಾನ್ಯಧನಗಳ ಬೇಡಿ ಧರೆಗಿಳಿದರೇನು |ಎಣ್ಣಿಯನು ಪೂಸಿ ಹುಡಿಯೊಳಗೆ ಹೊರಳಿದರೇನು |ತನ್ನ ತಲೆ ಅಡಿಮಾಡಿ ತಪವ ಮಾಡಿದರೇನು 1ಸರಿಯ ಸುಜನರ ಕಂಡು ಕರುಬಿ ಕೊರಗಿದರೇನು |ಬರಿಮಾತುಗಳನಾಡಿ ಭ್ರಷ್ಟನಾದರೆ ಏನು ||ಇರುಳು ಹಗಲೂ ಹೋಗಿ ಆರ ಮೊರೆಯಿಟ್ಟರೇನು |ಅರಿಯದ - ಮನುಜರಿಗೆ ಆಲ್ಪರಿದರೇನು 2ಹೋಗದೂರಿನ ದಾರಿಕೇಳಿ ಮಾಡುವದೇನು |ಮೂಗನ - ಕೂಡ ಏಕಾಂತವೇನು ||ಯೋಗೀಶ ಪುರಂದರವಿಠಲನ ನೆನೆಯದವ |ತ್ಯಾಗಿಯಾದರೆ ಏನು ಭೋಗಿಯಾದರೆ ಏನು 3
--------------
ಪುರಂದರದಾಸರು
ತಾಯಿ ಸೌಪರ್ಣೀದೇವೀ ನೀ |ಕಾಯದೆ ಜರಿಯಲನ್ಯರಾ ||ನಾನೆಲ್ಲೀ ಕಾಣೆನೆ ಧರೆಯೊಳು |ಮನಸಿರಲೀ ಶ್ರೀ ಅರಸನಲ್ಲೇವೇ ಕೇಳು ಪಕ್ಷೋಣಿಯೊಳಗೆ ಕ್ರಿಯಸ್ತರ |ಆ ನೆಲ್ಲೀ ನೋಡೆ ನಿನ್ನಂತೆ ||ಆ ನಾಗರಾಜನ ಮಾತೆಯ ಸೇವೆಯೊಳಿದ್ದೆ |ನಾನೆಂತು ಮಾಡಲೆ ಸ್ತುತೀಯಾ1ವಾರುಣೀ ಶ್ರೀ ರೇವತಿ |ಯಾ ರೂಪಿ ನಮಸ್ಕರಿಪೇ ||ನಾರಾಯಣನಾ ತೋರಿಸಮ್ಮಾ ದೋಷಗಳ ನೀ |ವಾರಿಸಿ ರಕ್ಷೀಸಬೇಕಮ್ಮಾ 2ಶ್ರೀಸತಿಪಾರ್ವತೀ ದಕ್ಷ |ಧ್ವಂಸೀ ಶುದ್ಧ ಪತಿವೃತೀ ||ಆ ಷಣ್ಮುಖನ ಜನನೀ | ಕಾಣಿಸು ಶ್ರೀ ಪ್ರಾ-ಣೇಶ ವಿಠ್ಠಲಾನ ಕರೂಣೀ 3
--------------
ಪ್ರಾಣೇಶದಾಸರು
ತಾಸು ಬಾರಿಸುತಿದೆಕೇಳಿ - ಹರಿದಾಸರೆಲ್ಲ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಾಸು ಬಾರಿಸುತಿದೆಕೇಳಿಪ.ಹಾಸುಮಂತ ಸುಪ್ಪತ್ತಿಗೆಯಲಿ - ಹಗಲು ಇರುಳು |ಹೇಸರಗತ್ತೆಯಂತೆ ಹೊರಳಿ - ಸ್ತ್ರೀಯರಗೂಡ |ಬೇಸರದೆ ನಿತ್ಯವು ಉರುಳಿ ||ಈಪರಿ ಕಾಲವ ಕಳೆದೆಯೊಕಾಲ ಸ |ಮೀಪವಾಯಿತು ಎಂದೀಗಲೆ 1ವೃಧ್ಧ ಯಾವನ ಬಾಲಕಾಲ - ವಿವೇಕವಿಲ್ಲದ |ಬುದ್ಧಿ ಮಾಂದ್ಯವು ಹಲವುಕಾಲ - ಆಹಾರಸಂಗ |ನಿದ್ರೆಯಿಂದಲಿ ಅತಿಲೋಲ ||ಈಶನ ಭಜಕರ ಭಜಿಸದೆ ಮಾನುಷಾ |ಯುಷ್ಯವೆಲ್ಲವು ವ್ಯರ್ಥವಾಯಿತಾಯಿತೆಂದು 2ಕಂಡ ವಿಷಯವ ಕಾಮಿಸಿ - ಕಷ್ಟಪಡದೆ |ತಾಂಡವ ಕೃಷ್ಟನ ಭೇಸಿ - ಪುಂಡನೆನಿಸದೆಭಂಡಧಾವತಿಯನು ತ್ಯಜಿಸಿ ||ಪುಂಡರೀಕಾಕ್ಷ ಪುರಂದರವಿಠಲನ |ಕೊಂಡು ಭಜಿಸಿರೈಯ ಢಂ ಢಂ ಢಂ ಡಣ್ಣೆಂದು 3
--------------
ಪುರಂದರದಾಸರು