ಒಟ್ಟು 6481 ಕಡೆಗಳಲ್ಲಿ , 135 ದಾಸರು , 4307 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೊಲ್ಲು ಕೇಳುತ ಈಗ ಮೆಲ್ಲನೆ ಎನ್ನ ಮನದಲ್ಲಿ ನಿಲ್ಲೊ ಪ. ಪುಲ್ಲಲೋಚನ ದೇವ ಎಲ್ಲಿಗು ಪೋಗದೆ ಉಲ್ಲಾಸಪಡಿಸುತ ನಿಲ್ಲೊ ಹೃದಯದಲಿ ಅ.ಪ. ಸ್ಥಾವರ ಜಂಗಮ ವ್ಯಾಪ್ತನಾಗಿಹ ದೇವ ದೇವ ಎನ್ನ ಮನದಿ ನಿಲುವುದು ಘನವೆ ಶ್ರೀವರ ನೀನೀಗ ಕಾವನೆಂದರಿತಿರೆ ಸಾವಕಾಶವಿದೇಕೆ ಭಾವಜನಯ್ಯನೆ 1 ಇಷ್ಟು ದಿನವು ನಿನ್ನ ಮುಟ್ಟಿ ಪೂಜಿಸಲಿಲ್ಲ ಸಿಟ್ಟೇನೊ ನಿನಗಿದರ ಗುಟ್ಟು ತಿಳಿಯದೆ ಬಿಂಕ ಕೊಟ್ಟು ಅಭಯ ಸಲಹೊ ಇಷ್ಟ ಸ್ಥಾನದಿ ನಿನ್ನ ಮುಟ್ಟಿ ಪೂಜಿಸಿರುವೆ 2 ಸರಿಯಲ್ಲ ನಿನಗಿದು ಕರೆದರೆ ಭಕ್ತರು ತ್ವರಿತದಿಂದಲಿ ಬರುವ ಬಿರುದಿಲ್ಲೆ ನನಗೆ ಸರಿ ಬಂದರೆ ಬಾರೊ ಬಾರದಿದ್ದರೆ ಬಿಡೊ ಅರಿತು ನಿನ್ನಯ ನಾಮ ಅರುಹುವ ಮತಿ ನೀಡೊ 3 ಕಾರ್ಯಕಾರಣಕರ್ತ ಪ್ರೇರ್ಯಪ್ರೇರಕರೂಪ ಉರ್ವಿಗೊಡೆಯ ಸರ್ವ ನಿರ್ವಾಹಕ ಗರ್ವರಹಿತಳ ಮಾಡಿ ಸರ್ವದಾ ಪೊರೆದರೆ ಸರ್ವಾಧಿಪತಿಯೆಂದು ಸಾರ್ವೆನೊ ನಾನಿಂದು 4 ಸೃಷ್ಟಿ ಸ್ಥಿತಿ ಲಯಗಳಿಗೆ ಕರ್ತನೊಬ್ಬನೆ ನೀನು ಶ್ರೇಷ್ಠನಾಗಿರುವೆಯಾ ಸರ್ವರಿಗೆ ಬಿಟ್ಟಿರುವೆಯೊ ಜಗದ ಅಷ್ಟೂ ವಸ್ತುಗಳಿಂದ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲದೇವ 5
--------------
ಅಂಬಾಬಾಯಿ
ಸೋಜಿಗದಲಿ ಜೀವಿಸುವರು ಸುಜನರು ಪ ಈ ಜಗದಲಿ ದುಷ್ಟ ಗೋಜಿಗೆ ಸಿಲುಕದೆ ಅ.ಪ ಪರರ ವಿಭವಗಳಿಗೆ ಕರಗಲರಿಯರಿವರು ಕೊರೆಯುವ ಬಡತನಕುರಿಯಲರಿಯರು ಹರಿ ಕರುಣದಿ ತಮಗೆ ಸಿರಿಯು ಬಂದೊದಗಲು ಪರಿಪರಿ ವಿಧದಲಿ ಮೆರೆಯದೆ ದೈನ್ಯದಿ 1 ಕೆಡುಕುತನಗಳನು ಅರಿಯರು ಈ ಜನ ಬಡವರ ಸೌಖ್ಯಕೆ ದುಡಿವರು ಮುದದಲಿ ಕಡುದುರುಳರು ನಿಂದೆ ನುಡಿಗಳಾಡುವರೆಂದು ದುಡುಕದೆ ಅವರಲಿ ಕ್ಷಮೆಯ ತೋರುತ ಸದಾ 2 ಪರರಿಗುಪಕೃತಿಯಲರಿಯರು ಮಿತಿಯನು ಪರರಿಗುಪಕೃತಿಗೆ ಜರಿಯರು ಮತಿಯನು ಶರಣ ಪ್ರಸನ್ನನ ಕರುಣವ ಪೊಂದಲು ವರನೀತಿಗಳಲಿ ನಿರತರಾಗುತ ಸದಾ 3
--------------
ವಿದ್ಯಾಪ್ರಸನ್ನತೀರ್ಥರು
ಸೋಜಿಗವಾಯಿತು ಸದ್ಗುರುವಿನ ಕೃಪೆ ಹೇಳಲೇನು ನಿಜಗುಹ್ಯದ ಮಾತು ಗುರುತವಾಗಿ ಹ್ಯ ಸಾಧು ಬಲ್ಲ ಖೂನ ಧ್ರುವ ನೀಗದ ನೀಗಿತು ಹೋಗದ ಹೋಯಿತು ತ್ಯಾಗಲ್ಯೊಂದು ಬಾಗದ ಬಾಗಿತು ಸಾಗದ ಸಾಗಿತು ಯೋಗಲ್ಯೊಂದು ಆಗದ ಆಯಿತು ಕೂಗದ ಕೂಗಿತು ಈಗಲ್ಯೊಂದು ತೂಗದ ತೂಗಿತು ಸುಗಮ ತಾ ತೋರಿತು ಜಗದೊಳೊಂದು 1 ಹುರಿಯಲೊಂದು ಅರಿಯಿತು ಅರಿವಿಲೊಂದು ಸುರಿಯದ ಸುರಿಯಿತು ಗರೆಯದ ಗರಿಯಿತು ತ್ಯರಿಯಲೊಂದು ಜರಿಯದ ಜರಿಯಿತು ಬೆರಿಯದೆ ಬೆರಿಯಿತು ಕುರಿವಿಲೊಂದು 2 ಜಾರದ ಜಾರಿತು ಮೀರದ ಮೀರಿತು ಹಾರಲೊಂದು ತೋರದ ತೋರಿತು ಸೇರದ ಸೇರಿತು ಸಾರಲೊಂದು ಬೀರದ ಬೀರಿತು ಸಾರಸದೋರಿತು ಕರದಲೊಂದು ತರಳ ಮಹಿಪತಿಗ್ಹರುಷವಾಯಿತು ಗುರುಕರುಣಲಿಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೋತುಹೋಗಣ್ಣ ಮಾತುಬಂದಲ್ಲಿ ಜಾಣನಾಗಿ ಸೋತುಹೋಗಣ್ಣ ಮಾತುಬಂದಲ್ಲಿ ಪ ಸೋತುಹೋಗದೆ ಮಾತುಮಾತಿಗೆ ವಾದಿಸಲ್ಕೆ ಘಾತಕತನದ್ವಿಧಿಯು ಬಂದು ಆತುಕೊಂಡು ಕೂತುಕೊಳ್ವುದು ಅ.ಪ ಸೋತೆನೆನ್ನಲು ನಾಚಬೇಡಣ್ಣ ದೇವರು ಕೊಟ್ಟಿಹ್ಯ ಖ್ಯಾತಿಯೇನು ಹೋಗೋದಿಲ್ಲಣ್ಣ ಸುಳ್ಳಲ್ಲವಣ್ಣ ಸೋತೆನೆಂಬುದು ಜಯದ ಮಾತಣ್ಣ ಸತ್ಯ ತಿಳಿಯಣ್ಣ ನೀತಿಗಡಕರ ಮಾತಿನ ತಳ್ಳಿಗೋತ ಕುಣಿಯೊಳೆಳೆವ ಬಳ್ಳ್ಯೆಂದು ಮಾತನಾಡದೆ ಸುಮ್ಮನ್ಹೋಗಲು ನೀತಿವಂತರು ಮೆಚ್ಚುತಾರ 1 ದುಡುಕುಮಾತಿಗೆ ಮಿಡುಕಬೇಡಣ್ಣ ಸತ್ಯದ್ಹೇಳುವ ದೃಢತರ್ವಚನದ ಅಡಕು ತಿಳಿಯಣ್ಣ ಪಡಕೊ ಸುಖವಣ್ಣ ನೀ ತೊಡರಿಕೊಂಡರೆ ತಪ್ಪದು ಕಡೆಯತನಕ 2 ಸೋತೆನೆನದ್ಹತ್ತುವದನಂದೇನಾಯ್ತು ಸೋತು ಓಡಿದ ನೀತಿವಂತ ವಿಭೀಷಣಂದೇನಾಯ್ತು ಮತ್ತು ನಳರಾಜ ಸೋತ ರಾಜ್ಯ ಭಂಡಾರೆಲ್ಲ ಮುಳುಗಿತು ತಿಳಿ ನೀತಿ ಅರಿತು ಮಾತುಮಾತಿಗ್ವಾದಿಸಿ ಕುಲಘಾತಕ್ಕಾದನು ಕೌರವೇಂದ್ರನು ಸೋತಜನರಭಿಮಾನಿ ಶ್ರೀರಾಮ 3
--------------
ರಾಮದಾಸರು
ಸೋತುಹೋದೆ ನಾನು ಶ್ರೀಹರಿ ಸೋತುಹೋದೆ ನಾನು ಪ ಪತಿತ ಪಾವನ ಮೂರ್ತಿಯ ಪ್ರೀತಿಯ ಸತತ ಪಡೆಯಲು ಕೆಲಸವ ಮಾಡಿ ಅ.ಪ. ನಿತ್ಯದಿ ಭಜಿಸುತ ಹರಿನಾಮವನು ಸತ್ಯಧರ್ಮದಿ ನಡೆಯುತಲೀ ಭ್ಯತ್ಯರಂದದಿ ಸೇವೆಯ ಮಾಡುತ ನಿತ್ಯನೆನಾ ಧನ್ಯಾತ್ಮನಾಗದೆ 1 ಪರಮಾತ್ಮನ ಕೀರ್ತನೆಯನು ಮಾಡುತ ಹರುಷದಿ ದಾಸನಾಗುತಲೀ ಹರಿಯ ಸಾಸಿರ ನಾಮವ ಸ್ಮರಿಸುತ ಶರಣಾಗತ ಪರಿಪಾಲನ ನೋಡಿದೆ 2 ಹೊನ್ನು ಹÉಣ್ಣು ಮಣ್ಣಿಗೋಸುಗ ಜನ್ಮವ ಮೋಹದಿ ನವಿಸದಲೇ ಚಿನ್ಮಯ ರೂಪನ ಪೂಜೆಯ ಮಾಡುತ ಚನ್ನಕೇಶವ ಪಾದವ ಸೇರದೆ 3
--------------
ಕರ್ಕಿ ಕೇಶವದಾಸ
ಸೋದಾಕ್ಷೇತ್ರವೆ ದಿವ್ಯ ಕ್ಷೇತ್ರ ಬಂದ ಜನರಿಗಿಷ್ಟವನೀವ ಕ್ಷೇತ್ರ ವೀರಶೈವರ ಗೆದ್ದ ಕ್ಷೇತ್ರ ಪ ಒಂದು ಭಾಗದಿ ರೂಪ್ಯಪೀಠ ಮ- ತ್ತೊಂದು ಭಾಗದಿ ಸೋದಾಕ್ಷೇತ್ರ ಕುಂದು ಎಳ್ಳಷ್ಟಿಲ್ಲದೆ ತೋರ್ಪು ದೆಂದು ಹರಿಭಕ್ತರಾದರಿಸುವರು 1 ವೈಕುಂಠನಂತಾಸನಗಳು ಚೆಂದವೇನೆಂದು ಪೇಳಲಿ ಮನವೆ 2 ರಾಜೇಶ ಹಯಮುಖ ಚರಣ ಕಂಜ ಮಧುಪನಂತಿರುವ ಶ್ರೀಭಾವಿ- ಕಂಜಜಾತನ ಪದಕರುಹ ವಾದಿರಾಜರಾಯರ ದಿವ್ಯ ಕ್ಷೇತ್ರ 3
--------------
ವಿಶ್ವೇಂದ್ರತೀರ್ಥ
ಸೋಮ ಸುರ್ಯೋಪರಾಗದಲಿ ಗೋಸಹಸ್ರಗಳ ಭೂಮಿದೇವರಿಗೆ ಸುರನದಿಯ ತಟದಿ ಶ್ರೀ ಮುಕುಂದಾರ್ಪಣವೆನುತ ಕೊಟ್ಟ ಫಲವಕ್ಕು ಈ ಮಧ್ವನಾಮ ಬರೆದೋದಿದವರಿಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರು ಸ ರ್ವತ್ರದಲಿ ದಿಗ್ವ್ವಿಜಯವಹುದು ಸಕಳ ಶತ್ರುಗಳು ಕೆಡುವರಪಮೃತ್ಯು ಬರಲಂಜುವುದು ಸೂತ್ರನಾಮಕನ ಸಂಸ್ತುತಿ ಮಾತ್ರದೀ 2 ಶ್ರೀ ಪಾದರಾಯರು ಪೇಳಿದ ಮಧ್ವ ನಾಮ ಸಂ ತಾಪ ಕಳೆದಖಿಳ ಸೌಖ್ಯನೀವುದೂ ಶ್ರೀಪತಿ ಜಗನ್ನಾಥವಿಠಲನ ತೋರಿ ಭವ ಕೂಪಾರದಿಂದ ಕಡೆಹಾಯಿಸುವುದು 3
--------------
ಜಗನ್ನಾಥದಾಸರು
ಸೌಭಾಗ್ಯ ಸಂಪನ್ನ ಸಂಪೂರ್ಣ ಶ್ರೀ ಭೂನೀಳಾ ರಮಣ ಕಲ್ಯಾಣ ಪ ಆಧಾರದೇವ ಭೇದ ರಹಿತ ಭಾವ ಮೋದಕರಾ ಶ್ರೀವಾಸುದೇವ 1 ಯಶೋದೆಯ ಸಂಗದ ಮರಿಯೆ ದಶಾವತಾರಿ ಶೇಷಶಾಯಿಯೆ 2 ಗರುಡವಾಹನ ಗಜವರದ ಗಮನ ದುರಿತನಾಶನ ಜಾಜೀಜನಾರ್ಧನ 3
--------------
ಶಾಮಶರ್ಮರು
ಸ್ತುತಿಸಿ ಪ್ರಾರ್ಥಿಪೆ ನಿನ್ನನು ಸರಸ್ವತಿ ಸ್ತುತಿಸಿ ನಮಿಪೆ ನಿನ್ನನು ಪ. ಸ್ತುತಿಸಿ ನಮಿಸಿ ನಿನ್ನ ಜತನ ಮಾಡುತ್ತ ವದನದಿ ಸ್ತುತಿಸುವ ಭಾಗವತರನು ತೋರಮ್ಮಾ ಅ.ಪ. ಅಕ್ಷರಕ್ಷರ ರೂಪದಿ ಶ್ರೀಹರಿಯಾ ಅಕ್ಷಯ ನಾಮವನು ಸ್ತುತಿಯ ಮಾಳ್ಪ ಸುಕ್ಷೇಮ ಪಡೆದಿಹ ಮಾತೆ ಸರಸ್ವತಿ ಪ್ರತಿ ಅಕ್ಷರವನು ಅರಿವಾ ಭಾಗ್ಯವ ತೋರೆ 1 ರಾಗರಾಗದಿ ಭಜಿಪೆ ಶ್ರೀ ಹರಿಯಾ ಅನು ರಾಗಕೆ ಪಾತ್ರಳಾಗಿ ವಲಿಸಿಹೆ ಭಾಗವತಾಗ್ರಣಿ ಶ್ರೀಹರಿ ನಾಮವ ಶೀಘ್ರದಿ ಸ್ತುತಿಸುವ ಭಾಗವತರ ತೋರೆಂದು 2 ಅಗಣಿತ ಮಹಿಮೆಯನೂ ಬಲ್ಲವಳು ನೀ ಸುಗುಣಿ ಸರಸ್ವತಿಯೆ ಶ್ರೀ ಶ್ರೀನಿವಾಸನ ಅಗಣಿತ ಗುಣಗಳ ಪೊಗಳುವ ಮತಿಯಿತ್ತು ಅಘಹರ ಹರಿಭಕ್ತರಾ ಲಗುಬಗೆಯಲಿ ತೋರೆ 3
--------------
ಸರಸ್ವತಿ ಬಾಯಿ
ಸ್ಥಿರ ನೀಡೆನ್ನ್ವದನಾಬ್ಜದಿ ಪರಮ ಪುರುಷ ನಿನ್ನ ಸ್ಮರಣೆ ಪ ಸೌಖ್ಯ ಸುಭೋಗದಿರಲಿ ಬೇನಿಯಿಂದ ಒರಲುತಿರಲಿ ತ್ರಾಣಗುಂದಿ ತೊಳಲುತಿರಲಿ ದಾನವಾಂತಕ ನಿನ್ನ ಧ್ಯಾನ 1 ಭೂಮಿಪರು ಸನ್ಮಾನ ಕೊಡಲಿ ಪಾಮರೆಂದು ಒದೆದು ನೂಕಲಿ ಭೂಮಿಜನರಪಹಾಸ್ಯ ಗೈಯಲಿ ಸ್ವಾಮಿ ನಿಮ್ಮ ಭಜನಾನಂದ 2 ಚಿಂತೆಯಿರಲಿ ಶ್ರೀಮಂತಿಕಿರಲಿ ಸಂತಸೆಂಬುದು ಸಿಗದ್ಹೋಗಲಿ ಅಂತಕಾರಿ ಶ್ರೀರಾಮ ನಿನ್ನ ಚಿಂತನೆ ಎನ್ನ ಅಂತ್ಯಕಾಲದಿ 3
--------------
ರಾಮದಾಸರು
ಸ್ಮರಣೆ ಮಾತ್ರದಿ ಸ್ವತಂತ್ರ ದೊರಕುವುದು ಜಗದೊಳಗೆ ಶ್ರೀಹರಿ ಸ್ಮರಣೆ ಪ ಸ್ಮರಣೆ ಮಾತ್ರ ಸ್ವತಂತ್ರವೆಂದರೆ ಪರಮ ಭಗವದ್ಗೀತೆ ಅಪ್ಪಣೆ ಕರುಣಾಸಾಗರ ದಧಿಯಚೋರನೂ ಶರಣುಪಾರ್ಥಗೆ ಅರುಹು ಮಾಡಿಹ 1 ಸುಲಭದಿಂದಲಿ ಶ್ರವಣಮನನಾಗೀ ಜಗದೊಳಗೆ ನಿನಗೆ ಫಲಿತವಾಗೊ ನಿಧಿ ಧ್ಯಾನಾಗೀ ಕೊಲುಮೆತಿತ್ತಿಯನೂದಲಾಗುವ ಫಲವು ಕಂಡು ಕಾಣದಿರುವೆಯೊ ಕಲೆಯ ತೊಟ್ಟನು ನೀ ಗಲಾ ಪರಸುಳುಹಿನೊಳಗೆ ಹೊಕ್ಕಿ ಮಾಡೊ 2 ಬೆಂಗಳೂರಿಗೆ ಪೋಗಿ ನಿಂದಲ್ಲಿ ವೋ ಮಾಯಜೀವಾ ಮಂಗಳಾಂಗ ಶುಭಾಂಗಣದಲ್ಲಿ ತಂಗಿ ತಾನೆ ನಿಮಿಷ ನಿಮಿಷಕೆ ಸಂಗಮೇಶ್ವರನಾಗಿ ನಿಜದಾ ಬಂಗೆಲೆಯೊಳಗಿರುವ ತುಲಶೀರಾಮತಾ ನಿಜಲೀಗನೇಳಿದ 3
--------------
ಚನ್ನಪಟ್ಟಣದ ಅಹೋಬಲದಾಸರು
ಸ್ಮರಿಸಿ ಬದುಕಿರೊ ಗುರುವರರಾ ನರ- ಹರಿಸ್ಮರಣೆ ಮರೆಯದಲೆ ಕೀರ್ತಿಸಿ ನಲಿದವರ ಪ ದಾಸದೀಕ್ಷೆಯ ವಹಿಸಿದವರ ಹರಿ ದಾಸರ ಕೂಡಿ ನರ್ತಿಸಿ ನಲಿದವರ ಶ್ರೀಶನ ಮಹಿಮೆ ಬಲ್ಲವರ ಭವ ಪಾಶಗಳಳಿವ ಸನ್ಮಾರ್ಗಬೋಧಕರ 1 ಬಡತನದಲಿ ಬಳಲಿದವರ ಭಾಗ್ಯ ಬಿಡದೆ ಬಂದೊದಗೆ ಹಿಗ್ಗದೆ ತಗ್ಗಿದವರ ಮೃಡಸಖನೊಲುಮೆ ಪಡೆದವರ ಬಹು ಸಡಗರದಲಿ ಹರಿ ಭಜನೆ ಮಾಡ್ದವರ 2 ಪಂಕಜಾಕ್ಷನ ಪೊಗಳಿದವರ ತಂದೆ ವೆಂಕಟೇಶ ವಿಠ್ಠಲ ದಾಸರಿವರ ಬಿಂಕದಿ ಹರಿಯ ಮರೆತವರ ಗರ್ವ ಬಿಂಕಗಳಳಿಯ ಸನ್ಮಾರ್ಗಕೆಳದವರ3 ತಾಳ ತಂಬೂರಿ ಪಿಡಿದವರ ಗೆಜ್ಜೆ ತಾಳ ಮೇಳದಿ ನರ್ತಿಸಿ ನಲಿದವರ ವ್ಯಾಳ ಶಯನನ ಭಕ್ತರಿವರ ಸಂಜೆ ವೇಳೆ ಹರಿಭಜನೆ ಮಾಡಿ ನಲಿದವರ 4 ಮಡದಿ ಮಕ್ಕಳು ಬಂಧು ಜನರ ಕೂಡಿ ಕಡು ಸಂಭ್ರಮದಿ ಹರಿಭಜನೆ ಮಾಡ್ದವರ ಕಡಲ ಶಯನನ ಭಕ್ತರಿವರು ಭಾಗ್ಯ ಬಡತನ ಸಮವೆಂದು ತಿಳಿಯ ಹೇಳ್ದವರ 5 ಹರಿಗುಣ ಕೀರ್ತಿಸಿದವರ ನರ ಹರಿಯ ಮಹಿಮೆಗಳ ಶಿಷ್ಯರಿಗೊರೆದವರ ಹರಿಯೆ ಸರ್ವೋತ್ತಮನೆಂದವರ ನಮ್ಮ ಉರುಗಾದ್ರಿವಾಸ ವಿಠ್ಠಲನ ನಂಬಿದವರ6 ಮಮತೆಯ ಬಿಡಬೇಕೆಂದವರ ದೇಹ ಮಮತೆಯ ಬಿಡುತ ಹರಿಪುರ ಸೇರಿದವರ ಕಮಲಾಕ್ಷನ ಭಕ್ತರಿವರ ನಮ್ಮಕಮಲನಾಭನ ವಿಠ್ಠಲನ ನಂಬಿದವರ 7
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸಿ ಸುಖಿಸೊ ನರನೆ - ಗುರುರಾಯರನನುದಿನ ಪ ಶರಣು ಜನರ‌ಘ ತರಿದು ಕರುಣದಿ ಚರಣ ಸರಸಿಜ ಹರುಷದಿಂದಲಿ ಅ.ಪ ನಳಿನ ಬಾಂಧವ ಕುಲದಿ ಅವತಾರ ಮಾಡಿದೆ ಇಳಿಜರಮಣನಾಜ್ಞದಿ ಕಲಿಯುಗದಿ ದ್ವಿಜರನು ಸಲಹಲೋಸುಗ ಜಗದಿ ಜನಿಸಿ ಗುರುಗಳ || ವಲಿಮೆಯನು ತಾಪಡೆದು ಕೊರಳಲಿ ತುಲಸಿ ಮಾಲೆಯ ಧರಿಸಿ ಹರಿಯನು ವಲಿಸಿ ಥಳ ಥಳ ಪೊಳೆವವ ಸ್ತಂಬದಿ ಕುಳಿತ ಶ್ರೀರಂಗವಲಿದ ದಾಸರ 1 ಮಾನಿನಿಯಳ ಮಾನರಕ್ಷಿಸಿದೆ ಶ್ರೀ ಪವ ಮಾನನಯ್ಯನ ಕರುಣವನು ಪಡೆದು ಸ್ತುತಿಸಿದಿ ವನು ಪಾಲಿಸಿ ಗುರು ಭವ ಕಾನನಕೆ ಕೃಶಾನುವೆನಿಸಿದ ಮಾನವಿ ಪುರ ನಿಲಯರನು ಅನುಮಾನವಿಲ್ಲದೆ ಮಾನಸದಿನೀ 2 ಶ್ರೀಮಧ್ವಾಚಾರ್ಯ ಸುಮತ ಶರಧಿಗೆ ಹಿಮ ಧಾಮನೆನಿಸಿ ನಿರುತ ಸೇವಿಪರಿಗೆ ಕಾಮಿತಾರ್ಥಗಳಿಗೆ ತ್ವರಿತ ನೀಡಿ ಶಿರಿವರ ಶಾಮಸುಂದರ ಸ್ವಾಮಿ ಪರನೆಂಬೊ | ಪ್ರೇಮದಿಂದಲಿ ಹರಿಕಥಾಮೃತ ಈ ಮಹಾಸುಗ್ರಂಥ ರಚಿಸಿದ ಹೇಮ ಕಶ್ಯಪ ತನಯರನುಜರ 3
--------------
ಶಾಮಸುಂದರ ವಿಠಲ
ಸ್ಮರಿಸಿದದರಘನನಾಶನ ಸ್ಮರಿಸಿದವರಘನಾಶಸ್ಮರನಯ್ಯನಂಘ್ರಿ ಯುಗ ಸರಸಿಜವ ಪೂಜಿಸುವಗುರು ವಿಜಯರಾಯರ ಚರಣಾಬ್ಜ ಸಾರಿದವದುರಿತಾಬ್ಧಿ ಮೀರಿದವ ಹರಿಪುರವ ಸೇರಿದವನೊ ಪ ಅಘ ಬಂಧ ಪರಿಹರ ಮಾಡುತಾ ಜನರು 1 ಇನಿತು ಜನಸಮುದಾಯದೊಳು ಯಿರುತಿರ್ದ ಇಭವರದ ನನುದಿನವು ಗಾಯನದಿ ಕೊಂಡಾಡಿ ಮನಮುಟ್ಟಿವಿನಯಾತಿಶಯದಲ್ಲಿ ಗುರುವರ್ಯರಾ ಸೇವೆ ಘನವಾಗಿ ಮಾಡಿ ಮುದದಿ ||ತನುವೆತ್ತಿ ವರಸರಿತ ತೀರದಾ ಅಣು ಬದರಿಜನ ಶ್ರೇಷ್ಠರೊಳು ಹರಿಯ ದಾಸ ಪೆಸರಲಿ ಬಂದುಘನ ಯಾದವಾದ್ರಿ ಪಟ್ಟಣದೊಳಗೆ ಯಿದ್ದು ಬಗೆ ಜನನಿ ಅನುಜಾತಿ ಸಹಿತ 2 ಕೆಲವು ದಿನ ಸಂಸಾರ ಗಲಭಿಯೊಳು ಯಿರುತಿರ್ದುಜಲದೊಳಗೆ ಅಂಬುಜವು ಮಿಳಿತವಾಗಿದ್ದ ತೆರಹಳಿದು ದುಷ್ಟಾಸಿಯನು ಕಳೆದು ಕಡು ಮಮತೆಯನು ಪುಳಕೋತ್ಸ ಮನದಿ ತಾಳಿ ||ಜಲದೊಳುತ್ತಮವಾದ ಭಾಗೀರಥೀ ಯಾತ್ರಿಛಲ ಭಕುತಿಯಿಂದಲಿ ಮಾಡಿ ಮೋದದಿ ಹರಿಯಹಲವು ಬಗೆ ಲೀಲೆಯನು ಹರುಷದಿಂದಲಿ ಯಿನ್ನು ತಿಳಿದು ಗುರು ಕರುಣ ಬಲದಿ 3 ಮೂರ್ತಿ ಮನದೊಳು ಕಂಡು ಸುಖವನಧಿಯಲ್ಲಿ ಲೋಲ್ಯಾಡಿಕೊಳುತ ||ಅಲ್ಲಿಂದ ತೆರಳಿ ಗಿರಿಯಲ್ಲಿದ್ದ ವೆಂಕಟನಸಲ್ಲುವಾ ಭಕುತರೊಳು ಸಲೆ ಶ್ರೇಷ್ಠನೆಂದೆನಿಸಿಮಲ್ಲ ಮರ್ದನನಾದ ಮುರಹರನ ಮಹಿಮೆ ಮನ ಬಲ್ಲನಿತು ವಿಸ್ತರಿಸುತ ಜನರು 4 ಈ ತೆರದಿ ಇಭವರದನಾತುಮದೊಳಗೆ ತಂದುಭೂತಳದ ಬಲು ವಿಧದ ತೀರ್ಥಕ್ಷೇತ್ರಗಳಲ್ಲಿಪ್ರೀತಿಯಿಂದಲಿ ಪರಮ ಪುರುಷನ್ನ ಧೇನಿಸುತ ಖ್ಯಾತಿ ಮಹಿಯೊಳಗೆ ಮೆರದು ||ವಾತಜಾತನ ಮತದ ವೊಳಗಿಪ್ಪ ವೈಷ್ಣವರತಾತನೆಂದೆನಿಸಿ ಸುಖವ್ರಾತದೊಳಗಿಡುವಲ್ಲಿಚಾತುರ್ಯದಿಂದ ಬಲುದಾತನೆನಿಸುತಲಿ ಭವತೀತರನ ಮಾಡಿ ಪೊರವ ಜನರು 5 ಆ ಬಗೆಯಲೀ ಕಮಲನಾಭ ಕರುಣಿಸಿ ಯಿವರಈ ಭುವನದೊಳು ಯಿಟ್ಟು ಜನರ ವುದ್ಧರಿಸುವಲೋಭದಿಂದಲಿ ಸಕಲ ಸಜ್ಜನರ ಸನ್ಮಾರ್ಗ ಲಾಭದೊಳು ಸೇರಿಸಿದನೊ ||ತ್ರ್ರಿಭುವನದೊಡೆಯನ್ನ ಕಥೆಯ ತಿಳಿಸುವ ಜನಕೆಶೋಭಿಸುವ ಗಾಯನದ ಸೊಬಗಿನಿಂದಲಿ ಕೇಳಿಶ್ರೀಭೂರಮಣ ವೊಲಿದು ಪಾಲಿಸುವನಾಮೇಲೆ ಶೋಭನ ಗತಿಯ ನೀವನೊ 6 ಕಲುಷ ವಾಕು ವುಪಜೀವರಿಗೆ ಏಕ ಮನದಿಂದಿರುವದೇ ಈ ಕಲಿಯುಗದಲಿಸಾಕಾರ ಗುಣಪೂರ್ಣ ಶ್ರೀನಿವಾಸನು ಬಿಡದೆ ಸಾಕುವನು ಸಮ್ಮೊಗದಲಿ ಜನರು 7 ದೇವಮುನಿ ನಾರದನು ಜೀವಿಗಳನುದ್ಧರಿಪಭಾವದಲಿ ಯಮಪುರಿಯ ದೇವನಲ್ಲಿಗೆ ಪೋಗಿಸಾವಧಾನದಿ ಸಕಲ ಸತ್ಕಾರಕೊಳಗಾಗಿ ನೋವು ಬಡವರನೀಕ್ಷಿಸಿ || ಸಾವಧಾನದಿ ಕೇಳಿ ಕಲಶಾರುಣೀ ಭಕ್ತ- ರಾವಳಿಯ ಸಲಹುವ ದೇವ ದೇವೇಶನನುತಾ ವದರಿ ಕೂಗಲಾ ಜೀವರೆಲ್ಲರು ಕೇಳಿ ಪಾವಿತ್ರವನೆಗೈದರೊ ಜನರು 8 ಭವ ಸಿರಿ ಚರಣಕೆ ಜನರು 9 ಸಿರಿ ತರಣಿ ಶರಧಿ ಶಯನನ ತೋರುವ ಜನರು 10 ದಾನವಾಂತಕ ದನುಜರನ್ನು ಸಂಹರಿಸುವಾಜ್ಞಾನಪೂರ್ಣನು ಗುಪ್ತ ತಾನಾಗಿ ಜಗದೊಳಗೆಹಾನಿ ವೃದ್ಧಿಂಗಳಿಗೆ ಹೊರಗಾಗಿ ಜೀವಿಗಳ ಮಾಣದಲೆ ಪರಿಪಾಲಿಪ ||ಕ್ಷೋಣಿಯೊಳು ಭಕುತರಘ ಹಾನಿಗೈಸುವ ಬಗಿಗೆಈ ನಿರುದ್ಧಕೆ ಯಿವರಧೀನ ಮಾಡಿದ ನಮಗೆವೇಣುಗೋಪಾಲ ವಿಠಲರೇಯ ತಾನೊಲಿದು ಸ್ವಾನಂದವನೆ ವುಣಿಸುವ ಜನರು 11
--------------
ವೇಣುಗೋಪಾಲದಾಸರು
ಸ್ಮರಿಸಿವುದು ರಘುನಂದನನ ಪ ನಿರುತದಿ ಬೆಳಗಿನೊಳೆದ್ದು ಭಕುತಿಯಲಿ ಅ.ಪ. ಜನಪತಿ ದಶರಥನುದರದಿ ಜನಿಸಿದವನಿತೆ ಅಹಲ್ಯೆಯ ತಾನುದ್ಧರಿಸಿದಘನ ಶಂಕರ ಧನುವ ಭಂಗಿಸಿದಜನಕ ಸುತೆಯ ವರಿಸಿದ ಶ್ರೀರಾಮನ 1 ತಾಯಿ ಕೈಕೇಯಿಯ ಮಾತು ನಡೆಸಿದನೋಯದೆ ವನವನು ಸತಿಸಹ ಸೇರಿದಮಾಯಾಮೃಗದಾಶೆಗೆ ಸತಿಯನಗಲಿದರಾಯ ಲಕ್ಷ್ಮಣನಣ್ಣ ಶ್ರೀರಾಮನ 2 ದಂಡಕದೊಳು ಸತಿಯನು ಶೋಧಿಸಿದಚಂಡ ಹನುಮಗೆ ತಾ ದೊರೆಯಾದಪುಂಡ ಜಲಧಿಯ ದಾಟಿಸಿದಹೆಂಡತಿ ಇರವನು ತಿಳಿದ ಶ್ರೀರಾಮನ 3 ಜಲಧಿಗೆ ಸೇತುವೆ ನಿಂತು ಬಿಗಿಸಿದಖಲ ರಾವಣನ ರಣದೊಳು ಕೆಡಹಿದಒಲಿದು ವಿಭೀಷಣನನು ತಾ ಪೊರೆದನೆಲದೊಳು ಸುಖ ಬೀರಿದ ಶ್ರೀರಾಮನ 4 ಧರುಮವ ನೆಲಸಲು ದುಷ್ಟರ ತರಿದಾ ಧರೆಯೊಳು ಶಿಷ್ಟರ ಪೊರೆಯಲು ಬಯಸಿದಸಿರಿಪತಿ ಗದುಗಿನ ವೀರನಾರಾಯಣನರನಾಗವತರಿಸಿದ ಶ್ರೀ ರಾಮ 5
--------------
ವೀರನಾರಾಯಣ