ಒಟ್ಟು 5385 ಕಡೆಗಳಲ್ಲಿ , 130 ದಾಸರು , 3673 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗ ಕೊಳಲನೂದುವ ಮಂಗಳಸ್ವರಕೆ ಮೂಜ-ಗಂಗಳೂ ಮೋಹಿಸುತಿಹವಲ್ಲೇ ನೋಡೆ ಏ ಸಖಿ ಪಗೋಕುಲದಂಗನೆಯರು ಮೈಮರೆದು ತಮ್ಮ ಮನೆ ಕದ |ಹಾಕದೇ ಹರಿಯೆಲ್ಲಿಹನೆಂದರಸುತ ಬಂದರು ||ಗೋ ಕರುವೇನೆಂದೊಬ್ಬಳು ಹಾಕುವಳೆತ್ತಿಗೆ ದಾಳಿ |ನೂಕು ನೂಕಾಗುತ್ತ ಹಲವಂಗನೆರೋಡಿದರು 1ಕಣ್ಣಿಗೆ ಕುಂಕುಮ ಫಣಿಯಲ್ಲಿ ಕಾಡಿಗೆ ಕೆಲವರು |ಬಣ್ಣದ ಸೀರೆಯ ಮಂಡೆಗೆ ಸುತ್ತುತ್ತ ಕೆಲವರು ||ಚಿನ್ನಗೆ ಹಾಲೆರೆವೆವೆಂದು ಗಂಡರ ಪಿಡಿದು ಒಲ್ಲೆ- |ನೆನ್ನೆ ಕೇಳದಲೆ ನೆಲಕಿಕ್ಕುವರು ಕೆಲವರು 2ಹರಿಯ ನೋಡುವ ಭರದಿಂದ ಆಕಳಿವೇಯೆಂದು |ಹರದೇರು ಅತ್ತೇರಿಗೆ ಕುಟ್ಟಿ ಕಣ್ಣಿಯಿಕ್ಕೊರು ||ಒರಲಿದರೆ ನಾವಾಕಳಲ್ಲವೆಂದು ಕೇಳದಲೆ |ತ್ವರದಿ ಮಾಧವನ ನೋಡಬೇಕೆಂದೋಡಿದರು 3ಕಾಲಿಕೆಕಟ್ಟಾಣಿಆಣಿಮೆಂಟು ಪಿಲ್ಯಾ ಸರ ಮಾಡಿ |ಮಾಲೆಯೆಂದು ಹಾಕುವರು ಕೊರಳಿಗೆ ಕೆಲವರು ||ಹಾಲಿಗೆ ಮೂಗುತಿ ಕಾನ ಬಾವುಲಿ ಮೂಗಿಗೆ ತಮ್ಮ |ಬಾಲೆರೆಂದಾಕಳ ಕರುವೆತ್ತಿಕೊಂಡೋಡುವರು 4ಹೇಳಿದರೆ ಮಾತುಕೇಳಿಕಳ್ಳ ಕೃಷ್ಣಾ ಸಿಕ್ಕೆಂದು ಮೈ |ಘಾಳಿಗೊಂಡಾಳುವರಾ ಕೈ ಕಂಭಕೆ ಕಟ್ಟುವರು ||ಕೀಲ ಕಂಕಣ ಬಾಗಿಲ ಬೀಗವೆಂಜೋಡಿಸಿ ಲಕ್ಷ್ಮೀ |ಲೋಲನಂಘ್ರಿಯ ಕಾಣಬೇಕೆಂದೆಲ್ಲರು ಓಡಿದರು 5ಎಲೆ ಯಶೋದೆಯಮ್ಮ ನಿನ್ನ ಮಗ ಮೊನ್ನೆ ನಿಶಿಯಲ್ಲಿ |ಮಲಗಂಟು ಬಿಚ್ಚಿ ಒಲ್ಲೆನೆನ್ನೆ ಕೇಳಾ ಥರವೆ ||ಬಲು ಶಬ್ದೆನೆಂದು ಕೇಳಲತ್ತೆಗೊಂದು ಪರಿಯಿಂದ |ತಿಳಿಸಿದೆನೆಂದೊಬ್ಬಳು ಅತ್ತೆಯ ಮುಂದೆ ಹೇಳುವಳು 6ಬೀದಿಯೊಳ್ ಹೇಳಿದಂತೆ ನಮ್ಮನಿಗೆ ಬಾಯೆಂದೊಬ್ಬಳು |ಮಾಧವನಿವನೆಂದು ತನ್ನ ಪುರುಷಘೇಳುವಳು ||ಆ ದಿನ ನಾವೇಕತ್ರದಲ್ಲಿರೆಗಂಡಬರಲು ಸ್ತ್ರೀ |-ಯಾದಿ ಸೈ ಸೈಯೆಂದೊಬ್ಬಳು ಪತಿಗೇ ಪೇಳುವಳು7ಬತ್ತಲೆ ಕೆಲವರು ಸೀರ್ಯುಟ್ಟವರ್ಕೆಲವರು ಉ- |ನ್ಮತ್ತರು ಕೆಲವರು ಪಾಡುತ್ತಲಿ ಕೆಲವರು ||ನೆತ್ತಿಹಿಕ್ಕುವರು ಕೆಲವರು ಹೂಸಿಕೊಂಡವರು |ತುತ್ತು ಬಾಯೊಳಿಟ್ಟವರೂ ತ್ವರದಿ ಓಡಿದರು 8ಒಂದಾಡುತೊಂದಾಡುವರುನಿಂದುನಿಂದಾಲಿಸುವರು |ಮಂದಿಗಂಜದಲೆ ಹರಿದು ಹರಿದು ಹೋಗುವರು ||ಕಂದಗಳೆತ್ತಿದವರು ಕರುಗಳೆತ್ತಿದವರು |ಚಂದಿರ ವದನೆಯರು ತವಕದಿ ಓಡುವರು 9ಹೆಂಣುಗಳಾ ಆವಾವ ಕೆಲಸದೊಳಿದ್ದಿರ್ಯಾ ಹ್ಯಾಂಗೆ |ಬನ್ನಿರೆನ್ನ ಬಳಿಗೆಂಬಂತೆವೇಣುಕೇಳಿಸುವುದು ||ಪನ್ನಗಶಯನನಾಜೆÕಯಂತೆ ಪ್ರವರ್ತಿಸಿದ ಮೇಲೆ |ಅನ್ಯಾಯವೇ ಸತಿಯರದು ಕೇಳಿರಿ ಕವಿಗಳು 10ಕರಿಸಿಂಹಗಳು ಹುಲಿತುರುತುರುಗಮಹಿಷಿ|ಮರೆದು ವೈರತ್ವ ಹರಿಸ್ವರ ಕೇಳುತಿಹವು ||ಕರಗುತಿಹವು ಕಲ್ಲು, ಸುರರಾಕಾಶದಿ ಪುಷ್ಪ |ಸುರಿಸುತಿಹರು, ಗಂಧರ್ವರು ಪಾಡುತಿಹರು11ಅಂಬುಜಾಕ್ಷಗೆ ಕೆಲವಂಗನೆರು ಆಲಿಂಗಿಸುವರು |ಚುಂಬಿಸುವರು ಕೆಲವರುನಿಂದುಪ್ರಾರ್ಥಿಸುವರು ||ಶಂಬುಪಾಣಿ ಕರುಣಿಸಿ ಇಬ್ಬರಿಗೊಬ್ಬೊಬ್ಬನಾಗಿ |ಹಂಬಲ ಪೂರೈಸುವಂತೆ ರಾಸಕ್ರೀಡೆಯಾಡಲು 12ಕಾಮನಾ ಪೂರ್ತಿ ಮಾಡುತಿರೆ ಹೆಂಗಳೆರು ಇಂಥ |ಸ್ವಾಮಿಯಮ್ಮ ಕೈ ಸೇರಿದ ನೋಡಿರೆಂದ್ಯೋಚಿಸಲು ||ಭಾಮಿನಿಯರಹಂಕಾರ ತಿಳಿದಾಕ್ಷಣವೊಬ್ಬಳ |ಪ್ರೇಮದಿ ಕೊಂಡೊಯ್ದು ಎಲ್ಲರಿಗೆ ಮಾಯವಾದನು13ಬಹುರೂಪದೊಳೊಮ್ಮಿಂದ ಒಮ್ಮೆ ಬಂದೂ ರೂಪವಿಲ್ಲ |ಮಹೀಪಾಲನೇನಾದನೋ ಆವಳನ ಕೊಂಡೊಯ್ದನು ||ಅಹಿವೇಣಿಯರೇ ನಿಮ್ಮ ನಿಮ್ಮ ಗುಂಪಿನೊಳಗೆ ಎ- |ಷ್ಟಿಹಿರೊ ನಾರೆರು ಎಣಿಸಿರೆ ಯಂದಾಳೊಬ್ಬಳು 14ಒಂದೆರಡು ನೂರಿನ್ನೂರೈನೂರು ಸಾವಿರೆಂದೆಣಿಸಿ |ಮಂದಗಮನೆಯೊಬ್ಬಳಿಲ್ಲವಮ್ಮ ನಮ್ಮೊಳೆಂದರು ||ಇಂದ್ರಜಾಲದವಳೇ ಆವನು ಅಂಥ ವಂಚಕನೆ |ಸಂಧಿಸಿತಿಬ್ಬರಿಗೆ ಮುಂದೇನುಪಾಯವೆಂದರು 15ಹರಿಹೋದಕಷ್ಟೊಂದು ಅವಳ ನಾ ವೈದ ದುಃಖೊಂದು |ಸ್ಮರಣೆದಪ್ಪಿ ಗಂಡರೊಡನೆ ಆಡಿದ್ದೊಂದು ||ಸ್ಮರನ ಬಾಣ ಬಾಧೆಯೊಂದು ಬೆರದಿತಿನಿತುಕ್ಲೇಶ|ಹರದೆರಚ್ಯುತನರಸುತವನಹೊಕ್ಕರು 16ಹರಿಒಬ್ಬಳ ಒಯ್ದನು ಕಂಡಿರಾ ಯಿದ್ದಿರ್ಯಾ ಎಂದು |ನರರೆಂಬೊ ಭ್ರಾಂತಿಯಿಂದ ಮರನ ಕೇಳುವರು ||ಸ್ಮರಣೆ ಬಂದಾಗ ವಮ್ಮೆ ಗಿಡ ಕೇಳುತಿಹವೆಲ್ಲೆ |ಹರಿಹರಿ! ಜೀವಿಸುವದೆಂತು ಹೇಳಿರೆಂಬೊರು 17ಅತ್ತ ಎಲ್ಲರ ವಂಚಿಸಿ ಯನ್ನ ರೂಪಾಧಿಕ ನೋಡಿ |ಎತ್ತಿಕೊಂಡು ಬಂದ ರಂಗನೆಂಬೊಳಾಕಿ ಮುದದಿ ||ಸತ್ಯ ಸಂಕಲ್ಪವಳ ಮನತಿಳಿದು ತಿಳಿಯದಂತೆ |ತೊತ್ತಿಗ ನಂದದಿ ಹೆಗಲೊಳಗಿಟ್ಟು ಪೋಗಲು 18ದಣಿದೆ ಹಸಿದೆ ನೀರಡಸಿದೆನೆಂದರವಳ |ಅಣುಗನಂದದಿಂದಿಳಿಸೇರಿಸಿ ಕೊಂಬುವನು ||ಗೊನೆ ಹಣ್ಣು ನಿಲಕದೆಂದರೆ ನೀಡಿ ಕೊಡುತಲಿ |ಘನಸುಖ ಬಡಿಸುತ ದಕ್ಕಿದಂತಿರುವನು 19ಸಾವಿರ ಪ್ರಕಾರಾ ಘೋರಿಸಿದರೂ ನಗುತಲೆ ಇಹ |ಕೇವಲ ದಕ್ಕಿದನೆಂದು ನಿಶ್ಚಯ ತಿಳಿದಳು ||ಮಾವಿರಿಂಚೇಶ ಜಂಭಾರಿಗಳನು ವಂಚಿಸುವಂಥ |ದೇವನು ಈ ನಾರಿ ಅಹಂಕಾರವ ತಾಳುವನೆ20ಸೊಕ್ಕು ಬಂತಿವಳಿಗಿನ್ನು ಶೀಘ್ರ ತಗ್ಗಿಸಬೇಕೆಂದು |ಚೊಕ್ಕ ಮಾವು ಪಿಡಿಸಿ ಅಪ್ರತ್ಯಕ್ಷವಾಗಲಿತ್ತಲು ||ತುಕ್ಕಿ ತುಕ್ಕ್ಯಾರಂಣ್ಯಾ ಹೆಜ್ಜೆ ಪಿಡಿದಿಲ್ಲಿಹ ಅಲ್ಲಿಹ |ರಕ್ಕಸಾರೆನುತ ಬಂದೆಲ್ಲರವಳನು ಕಂಡರು 21ಜಾರೆ ಚೋರೆ ಕುಲ್ಲೆ ಖೂಳೆ ಕುಲಕಂಟಿಕೆನವನೀತ|ಚೋರನೆಲ್ಲಡಗಿಸಿದ್ದೆ ತೋರೆಲೆ ತೋರೆಂದರು ||ಘೋರಪಾತಕಿಯ ಕುಟ್ಟಿರೆಂದು ಕೆನ್ನಿ ಕುಟ್ಟುವರು |ಗಾರುಮಾಡಿದರೆ ಬಟ್ಟಬವಣೆಹೇಳಿದಳು22ಸಮದುಃಖಿಗಳಾಗಿಹರಿಹರಿಯೆಂದೊದರಲು ಈ |ಶ್ರಮ ನೋಡಿ ಪ್ರಾಣೇಶ ವಿಠಲ ಬಂದಾಲಿಂಗಿಸಿ ||ಸುಮನಗಂಧಿಯರೆ ನಿಮ್ಮಹಂಕಾರ ಬಿಡಿರೆಂದು |ಅಮರೇಶಮುಂಚಿನಂತೆಲ್ಲರೊಳಾಡಿದನು 23
--------------
ಪ್ರಾಣೇಶದಾಸರು
ರಂಗ ರಥವನೇರಿದನಕ್ಕ- ಮೋಹ- |ನಾಂಗ ನಮ್ಮ ಸೇರದೆ ಪೋಗುವನಕ್ಕ ಪಮಾತುಳಮಥರೆಯೊಳಿಹನಂತೆ - ಅಲ್ಲಿ |ಮಾತಾಪಿತರಿಗೆ ಬಂಧನವಂತೆ, ಇವರು |ನೂತನ ಬಿಲ್ಲಿನ ಅರ್ಥಿಗಳಂತೆ ||ಪೀತಾಂಬರಧರನ ಪೂಜೆ ನೋಡುವೆನೆಂಬ |ಆತುರದಿಂದಿರೆ ಅಕ್ರೂರನೊಡನೆ ಈಗ 1ಬಲರಾಮ ಬಂಧುವಿನೊಡಗೂಡಿ ನಂದ-|ನಡಿಗೆ ಯಶೋದೆಗೆ ವಂದನೆ ಮಾಡಿ-ತಾವು |ಬಿಡಲಾರೆವೆಂದು ಭಾಷೆಯ ನೀಡಿ ||ತಡೆಯೆನೆನುತ ತಾಯಿಗೆ ಭರವಸೆಯಿತ್ತು |ಕಡಲಶಯನನು ಕಾತರದಿಂದಲಿ ಈಗ 2ಮಧುರಾ ಪಟ್ಟಣದ ಮಾನಿನಿಯರು ಅತಿ |ಚದುರೆ ಚೆಂಚಲೆ ಚಾಪಲತೆಯರು-ನಮ್ಮ |ಮದನನಯ್ಯನ ಮೋಹಿಸುತಿಹರು ||ಕಧಿಜನಾಭ ನಮ್ಮ ಪುರಂದರವಿಠಲ |ಪದುಮನಾಭನ ಪಯಣವ ನಿಲ್ಲಿಸಕ್ಕ 3
--------------
ಪುರಂದರದಾಸರು
ರಂಗಕೇಳಯ್ಯ ಬೆಳಂದಿಗಳ ಬೆಳಗುವ ವಸ್ತ್ರಕಂಗಳಿಗೆ ಸೂರ್ಯ ಹೊಳೆವಂತೆಶ್ರೀರಂಗ ಕೊಳ್ಳಯ್ಯ ಉಡುಗೊರೆ ಪ.ಏಸೋ ಮಾಣಿಕದ್ವಸ್ತ ಹಸಿರುಪಟ್ಟಾವಳಿವಸುದೇವಗೀಗ ರಥ ತೇಜಿ ಕೊಟ್ಟ 1ಲೆಕ್ಕವಿಲ್ಲದೆ ರತ್ನ ಸಂಖ್ಯವಿಲ್ಲದೆ ವಸ್ತ್ರದೇವಕಿಗೆ ಕೊಟ್ಟಪಟ್ಟಾವಳಿ2ಹಲವು ಮಾಣಿಕದ ವಸ್ತ ಬೆಲೆಯಿಲ್ಲದಷ್ಟು ವಸ್ತ್ರಬಲರಾಮಗೆ ಕೊಟ್ಟ ರಥಗಳ 3ಮುತ್ತು ಮಾಣಿಕದೊಸ್ತ ಮತ್ತೆಪಟ್ಟಾವಳಿಸೀರೆಮಿತ್ರೆ ರೇವತಿಗೆ ದೊರೆ ಕೊಟ್ಟ 4ಸಂಭ್ರಮದಿಭಾನುಮಾನುಸಾಂಬಪ್ರದ್ಯುಮ್ನಗೆಮೇಲೆಂಬೊ ವಸ್ತ್ರಗಳುಪಟ್ಟಾವಳಿಕೊಟ್ಟ5ಸರಸಿಜಾಸನ ಶಿವನ ಅರಸೆಯರಿಗೆ ಮೊದಲಾಗಿಸರಸದೊಸ್ತಗಳು ರಥಕೊಟ್ಟ 6ಇಂದ್ರ ಚಂದ್ರನ ಮಡದಿಯರಿಗೆಬಂದ ಋಷಿಗಳಿಗೆಲ್ಲಚಂದ-ದೆÉೂಸ್ತ್ರಗಳ ದೊರೆ ಕೊಟ್ಟ 7ಪಂಡಿತರು ರಾಯರಿಗೆ ದುಂಡು ಮುತ್ತಿನ ವಸ್ತತಂಡ ತಂಡದಲಿಜವಳಿಯ ದೊರೆ ಕೊಟ್ಟ 8ದಾಸರುದಾಸಿಯರಿಗೆ ಸೋಸಿನ ವಸ್ತ್ರಗಳು ಸೀರೆಕುಪ್ಪಸ ಜರತಾರಿಗಳ ದೊರೆ ಕೊಟ್ಟ 9ಗುಜ್ಜಿಯರ ಮಕ್ಕಳಿಗೆ ಗೆಜ್ಜೆ ಸರಪಳಿ ಅಂಗಿಸಜ್ಜು ತೋರುವ ಅರ¼ಲೆ ಕೊಟ್ಟ 10ಗೊಲ್ಲನಾರಿಯರ ಕುಬ್ಜಿಗೆಲ್ಲ ರಾಮೇಶ ಕೊಟ್ಟಚಲುವ ನಮ್ಮ ಮ್ಯಾಲೆ ಹರುಷಾಗೊ 11
--------------
ಗಲಗಲಿಅವ್ವನವರು
ರಂಗನಾಯಕಸ್ವಾಮಿ ರಾಜೀವಲೋಚನ ಬೆಳಗಾಯಿತೇಳೆನ್ನುತಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳುಶೃಂಗಾರದ ನಿದ್ರೆ ಸಾಕೆನ್ನುತಪ.ಪಕ್ಷಿರಾಜನು ಬಂದು ಬಾಗಿಲೊಳಗೆನಿಂದುಅಕ್ಷಿ ತೆರೆದು ಬೇಗ ಈಕ್ಷಿಸೆಂಬ ||ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತಸೂಕ್ಷ್ಮದಲಿ ನಿನ್ನನು ಸ್ಮರಿಸುವುವೊ ಕೃಷ್ಣ 1ಸನಕ - ಸನಂದನ - ಸನತ್ಸುಜಾತರು ಬಂದುವಿನಯದಿ ಕೈಮುಗಿದು ಓಲೈಪರು ||ಘನಶುಕ - ಶೌನಕ - ವ್ಯಾಸ ವಾಲ್ಮೀಕರುನೆನೆದು ಕೊಂಡಾಡುವರೊ ಹರಿಯೇ 2ಸುರರು ಕಿನ್ನರರು ಕಿಂಪುರುಷರು ಉರಗರುಪರಿಪರಿಯಲಿ ನಿನ್ನ ಸ್ಮರಿಸುವರು ||ಅರುಣನು ಬಂದುದಯಾಚಲದಲ್ಲಿ ನಿಂದಕಿರಣ ತೋರುವ ಭಾಸ್ಕರನು ಶ್ರೀ ಹರಿಯೇ 3ಪದುಮನಾಭನೆ ನಿನ್ನ ನಾಮಾಮೃತವನುಪದುಮಾಕ್ಷಿಯರು ತಮ್ಮ ಮನೆಯೊಳಗೆ ||ಉದಯದೊಳೆದ್ದು ಸವಿದಾಡುತ ಪಾಡುತದಧಿಯ ಕಡೆವರೇಳು ಮಧುಸೂದನ ಕೃಷ್ಣ 4ಮುರುಮಢನನೆ ನಿನ್ನ ಚರಣದ ಸೇವೆಯಕರುಣಿಸಬೇಕೆಂದು ತರುಣಿಯರು ||ಪರಿಪರಿಯಿಂದಲಿ ಸ್ಮರಿಸಿ ಹಾರೈಪರುಪುರಂದರವಿಠಲ ನೀನೇಳೊ ಹರಿಯೇ 5
--------------
ಪುರಂದರದಾಸರು
ರಂಗನೆಂಥವನೆಂಥವನಲೆ ತಂಗಿರಂಗನಂತರಂಗ ಹಲವಂಗ ತಿಳಿಯದು ಬ್ರಹ್ಮಾದಿಗಳಿಗೆಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆಗಮದ ತಂದಿಹನೆ - ರಂಗಬೇಗದಿ ಗಿರಿಯ ಪೊತ್ತಿಹನೆಮೂಗಿಂದ ಭೂಮಿಯನೆತ್ತಿದನೆ - ಕಂದಕೂಗಲು ಕಂಬದಿ ಬಂದ ಕಾಣಕ್ಕ1ಧರೆಯಈರಡಿಮಾಡಿದನೆ - ಭೂಸುರರಿಗೆ ದಾನವ ನೀಡಿದನೆನೆರೆದಕಪಿಹಿಂಡುಕೂಡಿದನೆ -ಫಣಿಶಿರದಲಿ ಕುಣಿ ಕುಣಿದಾಡಿದನಕ್ಕ2ಉಟ್ಟದ್ದು ಬಿಟ್ಟು ತಾ ನಿಂತಿಹನೆ - ರಂಗದಿಟ್ಟಾದ ಕುದುರೆಯನೇರಿದನೆದುಷ್ಟರನೆಲ್ಲ ಅಳಿದಿಹನೆ - ನಮ್ಮಬಿಟ್ಟಾದಿಕೇಶವರಾಯ ಕಾಣಕ್ಕ3
--------------
ಕನಕದಾಸ
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ರಂಗರಾಯರ ಮುಂದೆಇವರಕೊಂಗಬುದ್ಧಿಕೋಲಹೊಯ್ಸಿಹಂಗಿನ ಮುಯ್ಯ ಕಳೆದೆವಇವರ ತಂಗಿಯರಮಾರಿಭಂಗಿಸಿ ನಾವುಪ.ಅಪ್ಪ ಅರಸು ಆಗೊ ಇವರತಪ್ಪಿನ ಮಾತಿಲೆ ಸೋಲಿಸಿನಿಮ್ಮಪ್ಪ ನಿಮ್ಮರಸನೆಂಬೊಚಪ್ಪಾಳೆಯನಿಕ್ಕಿಸಿ ನಾವು 1ಒಡ ಹುಟ್ಟಿದಣ್ಣನ ದ್ರೌಪತಿಒಡಗೂಡುತಲಿ ತಾ ಇಡುವರೆಈ ಆಣೆ ನಮಗೆನುಡಿದ ಆ ನುಡಿಗೆ ನಾಚಿಸಿ ಇವರನು 2ಹುಟ್ಟು ಹೊಂದೊದೆಂಬೋದಿವರಬಿಟ್ಟು ಕಡೆಗೆ ಮಾಡಿಸಿನಾವುಶ್ರೀ ಕೃಷ್ಣನಂಫ್ರಿ ಕಮಲವನ್ನುಎಷ್ಟು ದಯದಿ ತೋರಿಸಿ 3ಅಷ್ಟ ಮದದ ತಮವು ಎಂಬೊಕುಟ್ಟಿ ಹಿಟ್ಟು ಮಾಡಿಸಿ ನಾವುಸಿಟ್ಟು ಕೋಪವೆಂಬೊ ಬಣವಿ ಒಟ್ಟಿಕೆಂಡ ಹೇರಿಸಿ ನಾವು 4ಸತ್ವರಜ ತಮವು ಎಂಬೊಕತ್ತಲೆಯ ಅಡಗಿಸಿ ನಾವುಮತ್ತೆ ಜ್ಞಾನ ಸೂರ್ಯನಪ್ರಶಸ್ತ ಉದಯ ಮಾಡಿಸಿ 5ನೀತಿ ತಪ್ಪಿದ ಬಾಲೆಯರಭೂತ ಹೊರಗೆ ಹೊರಡಿಸಿನಾವುಮಾತ್ರಗಳೆಂಬೊ ಇವರಗಾತ್ರಬಿಟ್ಟು ದೂರ ಇಡಿಸಿ6ಸಂಚಿತಗಾಮಿಯು ಇವರಕಿಂಚಿತುಳಿಯದಲೆ ಹಾರಿಸಿ ನಾವುಪಂಚ ಪಾಂಡವರ ಮಡದಿಪಾಂಚಾಲಿಯ ನಾಚಿಸಿ 7ದಶೇಂದ್ರಿಯಗಳೆಂಬೊ ಕುದುರೆಗಳದಶ ದಿಕ್ಕಿಗೆ ಓಡಿಸಿ ನಾವುಮುಸುಕು ಹಾಕಿದ ಅಂಗವನುಕೊಸರಿ ಕೊಸರಿ ಝೂಡಿಸಿ 8ನಿಂದ್ಯವಾದಪಟಲುವಿದ್ಯೆಚಿಂದಿ ಚಿಂದಿ ಮಾಡಿಸಿ ನಾವುತಂದೆ ರಾಮೇಶನ ಪಾದಕೆತಂದು ಇವರ ಹೊಂದಿಸಿ 9
--------------
ಗಲಗಲಿಅವ್ವನವರು
ರನ್ನ ಚಿನ್ನದಕೋಲಹೊನ್ನು ಮುತ್ತಿನಕೋಲಪನ್ನಂಗಶಯನ ನಲಿದು ಒಲವೊ ಕೋಲ ಪ.ಇಂದಿರೇಶಗೆ ರಾಯ ಗಂಧ ಕಸ್ತೂರಿ ತೀಡಿಮಂದಾರಮಲ್ಲಿಗೆ ಮಾಲೆ ಚಂದದಲ್ಹಾಕಿ1ಶ್ರೀದೇವಿಯರಿಗೆ ಭದ್ರಾ ಕ್ಯಾದಿಗೆ ಮಲ್ಲಿಗೆ ಮುಡಿಸಿಊದು ಪರಿಮಳ ಮ್ಯಾಲೆ ಮೋದವ ಬಟ್ಟು 2ಅಂಬುಜಾಕ್ಷರಿಗೆ ರಾಯ ತಾಂಬೂಲ ಅಡಿಕೆಯ ಕೊಟ್ಟುಕಂಬುಕಂಠರಿಗೆ ಎರಗಿ ಸಂಭ್ರಮದಿಂದ 3ಸರಸಿಜಮುಖಿಯರಿಗೆ ಅರಿಷಿಣಕುಂಕುಮಹಚ್ಚಿಸರಸದ ವಸ್ತಗಳ ದ್ರೌಪತಿ ಅರಸಿಗೆ ಇಟ್ಟು 4ಪಚ್ಚಮುತ್ತಿನ ವಸ್ತ ಅಚ್ಯುತನಂಗದಲೆ ಇಟ್ಟುಉಚಿತ ವಸ್ತ್ರಗಳ ಕೊಟ್ಟು ಸ್ವಚ್ಚ ಮನದಿ 5ರುಕ್ಮಿಣಿ ಅರಸಿಯರಿಗೆ ಅನಘ್ರ್ಯ ವಸ್ತ್ರವಕೊಟ್ಟುಶೀಘ್ರದಿಂದ ಎರಗಿ ದ್ರೌಪತಿ ಹಿಗ್ಗಿದಳು 6ತಂದೆ ರಾಮೇಶಗೆ ಮಂದಗಮನೆಯರೆಲ್ಲಗಂಧ ಕುಂಕುಮ ವೀಳ್ಯ ವಸ್ತ ಅಂದದಿಕೊಟ್ಟು 7
--------------
ಗಲಗಲಿಅವ್ವನವರು
ರಂಭೆ-ಊರ್ವಸಿ ರಮಣಿಯರೆಲ್ಲರು ||ಚೆಂದದಿಂ ಭರತನಾಟ್ಯವ ನಟಿಸೆ |ಝಂತಕ ತಕಧಿಮಿ ತದಿಗಣತೋಂ ಎಂದು |ಝಂಪೆತಾಳದಿ ತುಂಬುರನೊಪ್ಪಿಸೆ ||ಧಾಪಮಪಧಸರಿ ಎಂದು ಧ್ವನಿಯಿಂದ |ನಾರದ ತುಂಬುರು ಗಾನವ ಮಾಡಲು |ನಂದಿಯು ಚೆಂದದಿ ಮದ್ದಲೆ ಹಾಕಲು 1ಫಣಿಯ ಮೆಟ್ಟಿ ಬಾಲವ ಕೈಯಲಿ ಪಿಡಿದು |ಫಣಘಣಿಸುತ ನಾಟ್ಯವನಾಡೆ |ದಿನಪಮಂಡಲದಂತೆ ಪೊಳೆಯುವ ಮುಖದೊಳು ||ಚಲಿಸುತ ನೀಲಕೇಶಗಳಾಡೆ |ಕಾಲಲಂದಿಗೆ ಗೆಜ್ಜೆ ಘುಲುಘುಲು ಘುಲುಘುಲು |ಘುಲುರೆಂದು ಉಡಿಗೆಜ್ಜೆ ಗಂಟೆಗಳಾಡೆ ||ದುಷ್ಟ ಕಾಳಿಂಗನ ಮೆಟ್ಟಿ ಭರದಿಂದ |ಪುಟ್ಟಿ ಪಾದವನು ಇಟ್ಟ ಶ್ರೀಕೃಷ್ಣನು |ಮೆಟ್ಟಿದ ತದ್ಧಿಮಿ ತಧಿಗಣತೋಂ ಎಂದು 2ಸುರರುಪುಷ್ಪದ ವೃಷ್ಟಿಯ ಕರೆಯಲು |ಸುದತಿಯರೆಲ್ಲರು ಪಾಡಲು |ನಾಗಕನ್ನೆಯರು ನಾಥನ ಬೇಡಲು |ನಾನಾವಿಧ ಸ್ತುತಿ ಮಾಡಲು ||ರಕ್ಕಸರೆಲ್ಲರು ಕಕ್ಕಸವನೆ ಕಂಡು |ದಿಕ್ಕಿದಿಕ್ಕುಗಳಿಗೋಡಲು ||ಚಿಕ್ಕವನಿವನಲ್ಲ ಪುರಂದರವಿಠಲ |ವೆಂಕಟರಮಣನ ಬೇಗ ಯಶೋದೆ |ಬಿಂಕದೊಳೆತ್ತಿ ಮುದ್ದಾಡೆ ಶ್ರೀಕೃಷ್ಣನ 3
--------------
ಪುರಂದರದಾಸರು
ರಸಿಕರವರ ಪ್ರಿಯರಸ ಕಾವನು ಭಕ್ತಿಕುಶಲನಿಗಿಹಪರಕುಶಲಾಘ ದೂರ ಪ.ಪಥಮನೆ ವನದಿ ಶ್ರೀಪತಿ ಮಹಿಮೆ ಘೋಷಿಸಿಪ್ರಥಮ ಯಾಮದಿ ಹರಿಪ್ರತಿ ಮುದವೇರಿಸ್ತುತಿಸಿ ತಾರತಮ್ಯದ ಸ್ಥಿತಿ ಸನ್ಮತದೊಳಿದ್ದುಸತಿತನುಜಸೌರಂಭ ಸತತ ಹರಿಯದೆಂಬ1ಹಿತಾಹಿತವರಿದು ವಿಹಿತಹೇತು ಬಲಿದು ವಿರತಿಭಕ್ತಿ ಜ್ಞಾನ ನಿರುತ ಭೇದ ನಿರತನಾಗಿ ಕುಜನವಾರತೆಯ ಕೇಳದಿರುವಚತುರರಸುಕೃತಸಂಚಿತದಿರವೇ ಲೇಸು2ವಿಷಮೀರೈದಿಂದ್ರಿಯ ವಶಮಾಡಿ ಮನೋರಿಯೋಲ್ಸುಸುಖಾವಿಡಿದುಕೊಂಬಾ ಸುಸುಖಾವುಂಬಭೈಷಜ್ಯ ಭವರೋಗ ಭೇಷಜನೆನಿಪ ಜಗಪ್ರಸನ್ನ ವೆಂಕಟೇಶಾಂಘ್ರಿ ಸ್ಪøಶ್ಯನಾದಾರೋಗ್ಯ 3
--------------
ಪ್ರಸನ್ನವೆಂಕಟದಾಸರು
ರಾಗಿ ತಂದಿರಾ - ಭಿಕ್ಷಕೆ -ರಾಗಿ ತಂದಿರಾ ಪ.ಯೋಗ್ಯರಾಗಿ ಭೋಗ್ಯರಾಗಿ |ಭಾಗ್ಯವಂತರಾಗಿ ನೀವು ಅಪಅನ್ನದಾನವ ಮಾಡುವರಾಗಿ |ಅನ್ನಛತ್ರವನಿಟ್ಟವ ರಾಗಿ ||ಅನ್ಯವಾರ್ತೆಗಳ ಬಿಟ್ಟವರಾಗಿ |ಅನುದಿನಭಜನೆಯ ಮಾಡುವರಾಗಿ..........1ಮಾತಾಪಿತರನು ಸೇವಿಪರಾಗಿ |ಪಾತಕಕಾರ್ಯವ ಬಿಟ್ಟವರಾಗಿ |ಖ್ಯಾತಿಯಲ್ಲಿ ಮಿಗಿಲಾದವರಾಗಿ |ನೀತಿಮಾರ್ಗದಲಿ ಖ್ಯಾತರಾಗಿ 2ಗುರು ಕಾರುಣ್ಯವ ಪಡೆದವರಾಗಿಗುರುವಿನ ಮರ್ಮವ ತಿಳಿದವರಾಗಿ ||ಗುರುವಿನ ಪಾದವ ಸ್ಮರಿಸುವರಾಗಿ |ಪರಮಪುಣ್ಯವನು ಮಾಡುವರಾಗಿ3ವೇದ ಪುರಾಣವ ತಿಳಿದವರಾಗಿ |ಮೇದಿನಿಯಾಳುವಂಥವರಾಗಿ ||ಸಾಧು ಧರ್ಮವಾಚರಿಸುವರಾಗಿ |ಓದಿ ಗ್ರಂಥಗಳ ಪಂಡಿತರಾಗಿ 4ಆರರ ಮಾರ್ಗವ ಅರಿತವರಾಗಿ |ಮೂರರ ಮಾರ್ಗವ ತಿಳಿದವರಾಗಿ ||ಭೂರಿತತ್ವವನು ಬೆರೆತವರಾಗಿ |ಕ್ರೂರರ ಸಂಗವ ಬಿಟ್ಟವರಾಗಿ 5ಕಾಮಕ್ರೋಧಗಳನಳಿದವರಾಗಿ |ನೇಮನಿಷ್ಠೆಗಳ ಮಾಡುವರಾಗಿ ||ಆ ಮಹಾಪದದಲಿ ಸುಖಿಸುವರಾಗಿ |ಪ್ರೇಮದಿ ಕುಣಿಕುಣಿದಾಡುವರಾಗಿ 6ಸಿರಿರಮಣನ ಸದಾ ಸ್ಮರಿಸುವರಾಗಿ |ಕುರುಹಿಗೆ ಬಾಗುವಂತವರಾಗಿ ||ಕರೆಕರೆಸಂಸಾರ ನೀಗುವರಾಗಿ |ಪುರಂದರವಿಠಲನ ಸೇವಿಪರಾಗಿ 7
--------------
ಪುರಂದರದಾಸರು
ರಾಘವೇಂದ್ರಾ ನೀನೆ ಪಾಲಿಸೊಶ್ರಿತಜನ- ಪಾಲಾxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಯೋಗಿಜನಾ - ಲೋಲನೆ ಪಜಾಗುಮಾಡದೆನಿನ್ನಾನು- ರಾಗದಿ ಮನಸಾರಬಾಗಿ ನಮಿಸಿ ಬೇಡಿಕೊಂಬೆ -ಯೋಗಿಕುಲ ಶಿರೋಮಣಿಯೇ ಅ.ಪಅನುಭವ ಮಾಡಿದೆನು |ಘನಮಹಿಮನೆ ನಿನ್ನಘನಸುಖವಿತ್ತ್ತು ಎನ್ನ| ಮನ ಪೂರ್ತಿ ಭಜಿಸುವಂತೆಅನುಪಮ ಙ್ಞÕನ - ಭಕ್ತಿ | ಜನುಮ ಜನುಮದಿ ಇತ್ತು 1ಹೇಸಿ - ಸಂಸಾರದಲ್ಲಿ | ಮೋಸಗೊಂಡು ಅದರ ಸುಖಲೇಶಗಾಣದೆ ಬಹು | ಕ್ಲೇಶಬಡುವೆನಯ್ಯಾ ನಿತ್ಯಾಈಶ ! ಸಂಸಾರ ಮಹ | ಪಾಶಬಿಡಿಸಿ ತವೋ -ಪಾಸನದಲ್ಲಿ ಮನ | ಲೇಸು ಇತ್ತು ನಿತ್ಯಾದಲ್ಲಿ 2ದೃಷ್ಟಿ ಇತ್ತು ಗುರುಜಗನ್ನಾಥ | ವಿಠಲನ್ನ ತೊರಿಸಯ್ಯಾ 3
--------------
ಗುರುಜಗನ್ನಾಥದಾಸರು
ರಾಮ ಗೋವಿಂದ ಹರೇ ಕೃಷ್ಣ ಗೋವಿಂದದಾಮೋದರಹರಿವಿಷ್ಣು ಮುಕುಂದಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಮಚ್ಛವತಾರದೊಳಾಡಿದನೆ -ಮಂದರಾಚಲ ಬೆನ್ನೊಳಾಂತವನೆಅಚ್ಛ ಸೂಕರನಾಗಿ ಬಾಳಿದನೆ - ಮದಹೆಚ್ಚಿ ಹಿರಣ್ಯಕನ ಸೀಳಿದನೆ1ಬಲಿಯೊಳು ದಾನವ ಬೇಡಿದನೆ - ಕ್ಷಾತ್ರಕುಲವ ಬಿಡದೆ ಕ್ಷಯ ಮಾಡಿದನೆಜಲನಿಧಿಗೆ ಬಿಲ್ಲ ಹೂಡಿದನೆ - ಕಾಮ-ಗೊಲಿದು ಗೊಲ್ಲತಿಯೊಳಾಡಿದನೆ2ಸಾಧಿಸಿ ತ್ರಿಪುರರ ಗೆಲಿದವನೆ - ಪ್ರತಿ-ವಾದಿಸಿ ಹಯವೇರಿ ನಲಿದವನೆಭೇದಿಸಿ ವಿಶ್ವವ ಗೆಲಿದವನೆ - ಬಾಡದಾದಿಕೇಶವರಾಯ ನಮಗೊಲಿದವನೆ3
--------------
ಕನಕದಾಸ
ರಾಮ ನಾಮಾಮೃತವ ಕೊಂಬವರೆಲ್ಲ |ಪ್ರೇಮದಿಂದಚ್ಯುತ ಪೇಟೆಗೆ ಬನ್ನಿರೆ ಪಒಮ್ಮನವೆರಸಿ ಬನ್ನಿ |ನಿಮ್ಮ ಮನಕೆ ಬಂದಂತಳೆದು ಕೊಳ್ಳಿ ||ರಾಮಟಿಂಕೆಯ ಸಲಿಸಿ ಶ್ರೀ ಕೃಷ್ಣನೆಂಬ |ಧರ್ಮದ ಸಂತೆ ನೆರೆದಿದೆ ಬನ್ನಿ 1ಉಂಟು ನಾಲ್ಕು ಕುದುರೆಗಳು |ಎಂಟಾನೆಯ ಬಿರುಬಲೆಯಲ್ಲಿ ಕಟ್ಟಬಹುದು ||ಸಾಲವರ್ಣದ ಪಟ್ಟಿಯು ಏಳಿರೆ |ಏಳುಲೋಕವು ಬಲ್ಲದು 2ಬೆಲೆಯಿಲ್ಲದ ಮುತ್ತುಂಟು |ಏಳೇಳ್ಪುಟಿಯ ಹೊಳೆವಪರಂಜಿಯ ಚಿನ್ನವುಂಟು ||ಥಳಥಳಿಸುವ ನೀಲಿಯ ಕೊಂಬುವರೆಲ್ಲ |ನಳಿನನಾಭನ ಸನ್ನಿಧಿಗೆ ಬನ್ನಿ 3ಎರಡು ಕಾಶಿಯಲಳೆವ ಕೊಳಗವು |ಪಿರಿದುದೊಂದು ಕಿರಿದೊಂದು ಉಂಟಲ್ಲಿಗೆ ||ಗರಳವವೊರಿಸಲು ರತ್ನವು |ಮರುತಾಶ್ರಯನ ಸನ್ನಿಧಿಗೆ 4ಆರಂಗಡಿಯ ಸುಟ್ಟು |ಸೂರೆಮಾಡಿ ಏಳು ಎಂಟು ಹಟ್ಟಕೊರವನೊ...ದುದು ||ಸಾರಿಸಿ ನವವಿಧ ಶುಚಿಯ ಹೇಳಿದ |ಸರ್ವಾತ್ಮಗೆ ಸೌದೆಯ 5ಸುಂಕಿಗರೈವರಿಗೆ ಹರುಷದಿಂದ |ಪಂಕಜನಾಭನ ಚೀಲ ತೋರಿ ||ಶಂಕೆಯಿಲ್ಲದೆ ನಡೆವ ಅವರನೆಲ್ಲ |ವಂಚಿಸಿ ಎದೆಯ ಟೊಣೆದು ಹೋಗುವಾ 6
--------------
ಪುರಂದರದಾಸರು
ರಾಮ ರಾಮ ರಾಮ ರಾಮ ರಾಮವೆನ್ನಿರೊ |ರಾಮ ರಾಮವೆಂಬ ನಾಮ ಮನದಿ ನೆನೆಯಿರೊ ಪ.ಇಂದ್ರಿಯಂಗಳೆಲ್ಲ ಕೂಡಿ ಬಂದು ತನ್ನ ಮುಸುಕಿದಾಗ |ಸಿಂಧುಸುತಾಪತಿಯ ಧ್ಯಾನ ಅಂದಿಗೆ ಒದಗಲೀಯದು1ಭರದಿ ಯಮನ ಭಟರು ಬಂದು ಹೊರಡು ಎಂದು ಮುಟ್ಟಲು |ಕೊರಳಿಗಾತ್ಮ ಸೇರಿದಾಗ ಹರಿಯ ಧ್ಯಾನ ದೊರೆಯದಯ್ಯ 2ಕಾಸಶ್ವಾಸದಲ್ಲಿ ಸಿಲುಕಿ ದೋಷ ಬಲಿದು ಪೋಗುವಾಗ |ವಾಸುದೇವನೆಂಬ ನಾಮ ವದನದಲ್ಲಿ ಒದಗದಯ್ಯ 3ಶೃಂಗಾರವಾದ ದೇಹ ತಂಗಿಬಿಟ್ಟು ಪೋಗುವಾಗ |ಕಂಗಳಿಗಾತ್ಮಾ ಸೇರಿದಾಗ ರಂಗನ ಧ್ಯಾನ ದೊರಕದಯ್ಯ 4ಕಷ್ಟಜನ್ಮದಲ್ಲಿ ಬಂದು ದುಷ್ಟಕರ್ಮಗಳನು ಮಾಡಿ |ಬಿಟ್ಟು ಹೋಗುವಾಗ ಪುರಂದರವಿಠಲನ ನೆನೆಮನವೆ 5
--------------
ಪುರಂದರದಾಸರು