ಒಟ್ಟು 7932 ಕಡೆಗಳಲ್ಲಿ , 127 ದಾಸರು , 4530 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸತ್ಯಧರ್ಮ ಸದ್ಗುರುವರ ರಕ್ಷಿಸು ಪ ಭೃತ್ಯ ನೀನಾಗೆಂದು ಕೃತ್ಯ ವಿಪರ್ಯಯ ವೆತ್ತಣಿಸದೆ ಕೃತಕೃತ್ಯನ ಮಾಡಿಂದು ಅ.ಪ ಸತ್ಯವರರ ವರ ಕುವರನೆ ನೀನತ್ಯುತ್ತಮ ಸುಖ ಚಿನ್ನ ಯತ್ಯಾಶ್ರಮ ಸದ್ಧರ್ಮಾಚರಣದಿ ನಿತ್ಯಾರ್ಜಿತ ರಾಮ ಭೃತ್ಯಜನಕೆ ಸದ್ಬುದ್ಧಿ ಬೋಧಿಸಿ ಕೃತಕೃತ್ಯರ ಮಾಡುತಲಿ ಸುನಾಮ ಯಥಾರ್ಥಪಡಿಸಿ ಕ್ಷಿತಿಗುತ್ತಮನೆಸಿದ 1 ಭದ್ರಾತೀರನೆ ಇತ್ತು ಸುಭದ್ರಗಳ್ ನಿದ್ರಾರಹಿತರಿಗೆ ಆದ್ರಾಂತಃಕರುಣನೆ ಸೌಹಾರ್ದದಿ ಭದ್ರಾರಮಣನಲಿ ಛಿದ್ರರಹಿತ ಶಿಲೆ ಮಧ್ಯದಿ ಪಡೆದು ಸುಭದ್ರಾಪತಿ ಸಖ ಮುದ್ರಾಧರನೆ 2 ಶ್ರೀ ನರಹರಿ ಪದ ನೀನನುದಿನದಲಿ ಧ್ಯಾನಮಾಡುತ ಬಾಹ್ಯ ಜ್ಞಾನವಿಲ್ಲದೆ ಅನುಮಾನ ವಿಪರ್ಯಯ ಹೀನಗೈಸಿ ಸಾಕ್ಷಿ ಮಾನದಿಂದ ಕೊಟ್ಯಾರ್ಭುದ ರವಿಪ್ರಭೆ ಕಾಣುತ ಪ್ರತಿಮುಖವೋಲ್ ಏನು ಇದಕೆ ಅನುಮಾನವಿಲ್ಲ ಹಂ ಮನಿಯವನೆನ್ನುವೆ ನೀ ಸರಿಲಿಂಗರೂಪಧರ3
--------------
ಪ್ರದ್ಯುಮ್ನತೀರ್ಥರು
ಸತ್ಯಧ್ಯಾನತೀರ್ಥರು ಇಷ್ಟು ಸುಲಭದಲಿ ಈ ಮುದ್ದು ಯತಿ ವರರಿಗೆ ಪ್ರೇಷ್ಠತಮ ನೀ ನೊಲಿದ ಬಗೆಯೇನೋ ರಾಮಾ ಪ ಪಟ್ಟ ಪುತ್ರನ ಶ್ರೇಷ್ಠ ಪೀಠದಲಿ ಕುಳಿತಿಂದು ಮುಟ್ಟಿ ಪೂಜಿಪ ಭಾಗ್ಯಗಿಟ್ಟಹುದೆ ಏನೆಂಬೆ ಅ.ಪ. ಚಿಕ್ಕತನದಲೆ ನೂಕಿ ವಿಷಯ ವಿದ್ಯೆಗಳನ್ನು ಚೊಕ್ಕ ಶಾಸ್ತ್ರಗಳಲ್ಲಿ ಇಕ್ಕಿ ದಾಸರ ಮನವಲಿದ್ಯೋ ಕಕ್ಕಸವುಭವವೆಂದು ವೈರಾಗ್ಯ ಧರಿಸುತಲಿ ಭಕ್ತಿ ಮಾಳ್ಪುದ ನೋಡಿ ಮುಕ್ತರಾಶ್ರಯ ವಲಿದ್ಯೋ 1 ದಾನಶೂರರು ಬಹು ನಿದಾನ ವಂತರು ಹಾಗೆ ಮಾನ ಸಾಗರರೆಂದು ಜ್ಞಾನಿ ಪ್ರಾಪ್ತನೆ ವಲಿದ್ಯೋ ದೀನ ಜನ ಮಂದಾರ ಮಾನ್ಯ ಮುನಿಕುಲ ತಿಲಕ ಶೂನ್ಯವಾದಧ್ವಾಂತ ಭಾನು ವೆಂದೊಲಿದ್ಯೋ 2 ಮೋದವಿತ್ತರು ಸತ್ಯಧ್ಯಾನ ತೀರ್ಥರು ಹಿಂದೆ ಸಾಧಿಸುತ ಸುಖಮತದ ಜಯ ಭೇರಿ ಜಗದೀ ಸಾಧು ಜನರ ಜ್ಞಾನ ಖೇದವಳಿಯುತ ಪ್ರಮೋದ ವೀಯುವರೀಗೆ ಸಿದ್ದವೆಂದೊಲಿದ್ಯೋ 3 ಹಿಂದಿ ನ್ಹಿರಿಯರ ವಲವೊ ಮಂದಿ ಪುಣ್ಯವೊ ಮತ್ತೆ ತಂದೆ ಕರುಣವೊ ಕಾಣೆ ಬಂದುದೀ ಪೀಠದಲಿ ವಿಧಿ ವಿನುತ ರಾಮ ನಿನ್ನೊಲಸಿಹ ಪ್ರ ಮೋದ ತೀರ್ಥರುಸತ್ಯ ಪಾಮರರಿಗಾಗುವುದೆ ಸ್ತುತಿಸೆ 4 ಸಾಧು ಸಜ್ಜನ ಪ್ರಾಪ್ಯ ಬಾದರಾಯಣ ಶರಣು ಮೋದ ಮಯ ನಿರ್ದೋಷ ವೇದ ವೇದ್ಯನೆ ಶರಣು ಮಾಧವ ಶ್ರೀ ಕೃಷ್ಣ ವಿಠಲರಾಯನೆ ಶರಣು ಗಾಧವರ್ಜಿತ ಮಹಿಮ ಶ್ರೀ ರಾಮ ಶರಣು ಶರಣು 5
--------------
ಕೃಷ್ಣವಿಠಲದಾಸರು
ಸತ್ಯಭೋಧ ಯತಿಕುಲವರನೆ ನಿತ್ಯ ತುತಿಸಿ ವಂದಿಸುವ ತಾವಕರೊಳು ಎಣಿಸೋ ಪ ಅರ್ಥಿಜನ ಚಿಂತಾಮಣಿ ಸತ್ಕರುಣಿ ಶ್ರೀನಿವಾಸನ ಗುಣ ಸಾನುರಾಗದಲಿ ವ್ಯಾ ಖ್ಯಾನ ಪೇಳುವ ಕಾಲದಿ ಶ್ವಾನರೂಪದಿ ಪವಮಾನ ಜನರು ನೋಡೆ ಕಾಣಿಸಿಕೊಂಡನಂದೊ ತಾ ಬಂದು 1 ಬವರಗೋಸುಗ ಬಂದ ಯವನಾಧಿಪತಿ ನಿಮ್ಮ ಸುವಿಚಿತ್ರ ಮಹಿಮೆ ಕಂಡು ಪ್ರವಿನೀತನಾಗಿ ಕಪ್ಪವೆ ಕೊಟ್ಟು ನಮಿಸಿದ ಕವಿ ಆವಾ ವಿಭವಾ ವರ್ಣಿಸುವಾ 2 ಇವರು ದೇವಾಂಶರೆಂದರುಪುವಗೋಸುಗ ಬಂದು ದಿವಿಜತರಂಗಿಣಿಯು ಶಿವನಂಗಭೂರುಹ ಮೂಲ ಭಾಗದಲಿ ಉ ದ್ಭವಿಸಿ ಕಂಗೊಳಿಸಿದಳು ಕೃಪಾಳು 3 ಸ್ವಾಂತಸ್ಥ ಮುಖ್ಯ ಪ್ರಾಣಾಂತರಾತ್ಮಕ ಭಗ ವಂತನಂಘ್ರಿ ಕಮಲ ಸಂತತ ಸರ್ವತ್ರ ಚಿಂತಿಸುತಿಪ್ಪ ಮ ಹಾಂತರಿಗೇನಚ್ಚರೀ ವಿಚಾರ 4 ಚಾರು ಚರಿತ ಭೂ ಸುರವರ ಸನ್ನುತನೇ ಪರಮ ಪುರುಷ ಜಗನ್ನಾಥ ವಿಠ್ಠಲ ನಿಮ್ಮ ಪರಿಪರಿ ಮಹಿಮೆ ಎಲ್ಲಾ ತಾ ಬಲ್ಲಾ 5
--------------
ಜಗನ್ನಾಥದಾಸರು
ಸತ್ಯವರ ಮುನಿಪ ದಿಕ್ಷತಿಗಳಂತೆ ನಿತ್ಯದಲಿ ತೋರ್ಪ ನೋಳ್ಪರಿಗೆ ಸಂಭ್ರಮದಿ ಪ ಸಿಂಧೂರವೇರಿ ದೇವೇಂದ್ರನಂತೊಪ್ಪುವನು ವಂದಿಪ ಜನರಘಾಳಿವನ ಕೃಶಾನು ಮಂದ ಜನರಿಗೆ ದಂಡ ಧರನಂತೆ ತೋರ್ಪಕ ರ್ಮಂದಿಪನು ನರವಾಹನವೇರಿ ನಿಋಋತಿಯೆನಿಪ 1 ಜ್ಞಾನಾದಿ ಗುಣದಿ ರತ್ನಾಕರನೆನಿಪ ಶೈವ ಜೈನಾದಿಮತ ಘನಾಳಿಗೆ ಮಾರುತಾ ದೀನ ಜನರಿಗೆ ಧನದನಾಗಿ ಸಂತೈಪ ವ್ಯಾ ಖ್ಯಾನ ಕಾಲದಿ ಜಗತ್ತೀಶನೆಂದೊರೆವಾ 2 ಶ್ರೀಮದ್ರಮಾಪತಿ ಜಗನ್ನಾಥ ವಿಠಲ ಸ್ವಾಮಿ ಪಾದಾಬ್ಜ ಭಜನಾಸಕ್ತನಿವ ಧೀಮಂತ ಗುರು ಸಾರ್ವಭೌಮ ಭೂ ಸುರನುತ ಮಹಾ ಮಹಿಮ ಪೊಗಳಲೆನ್ನೊಶವೇ ಕರುಣಾ ಸಿಂಧು3
--------------
ಜಗನ್ನಾಥದಾಸರು
ಸತ್ಯಸಂಕಲ್ಪ ತ್ವಚಿತ್ತಾನುಸಾರ ತ್ವ ಚಿತ್ತ ವೃತ್ತಿಯು ನಿನಗೆ ಸರ್ವÀತ್ರದಿ ಪ ಉತ್ತಮೋತ್ತಮ ನೀನೆಗತಿ ಎಂ- ಉತ್ತರಿಸು ಭವಶರಧಿಯಲಿ ಎತ್ತಿ ಕಡೆಹಾಯಿಸುವುದೀಗಲೆ ಅ.ಪ ಜಗದಾಖ್ಯವೃಕ್ಷಕ್ಕೆ ಆದಿಕಾರಣನಾಗಿ ಜಗದೇಕವಂದ್ಯ ನೀನಾಧಾರನೋ ತ್ವಗಾದಿ ಜ್ಞಾನೇಂದ್ರಿಯಗಳೆಂಬೀ ಐದು ಬಿಳಲುಗಳೂ ಪಡೂರ್ಮಿಗಳೂ ಮೇಧ ಹೊದಿಕೆಗಳು ಪಂ ಮನ ಅಹಂಕಾರವೆಂದು ಪೊಟ್ಟರೆಗಳು 1 ಪ್ರಾಣಾದಿಪಂಚಕವು ಕೂರ್ಮ ಕೃಕಳಾದಿ ಪಂಚವಾಯುಗಳು ಪರ್ಣಗಳು ಹತ್ತೆನಿಸಿ ವೃಕ್ಷಕೆ ದುಃಖ ಸುಖವೆಂಬೆರಡು ಮೋಕ್ಷಗಳೆಂಬÉೂ ರಸಗಳು ಪಕ್ಷಿಗಳು ವಿಹರಿಸುತಲಿಹವು ಕರ್ಮಫÀಲವನು ಕಟಾಕ್ಷವಿಲ್ಲದೆ 2 ಅಡಿ ಮೇಲಾಗಿಹ ಗಿಡದೊಡೆಯ ನೀ ಗಿಡದೊಳು ಅಡಿಗಡಿಗೆ ಜೀವರೊಡಗೂಡಿ ಬಂದವರನು ನಿನ್ನೊಡಗೂಡಿ ಒಂದೇ- ಕಡೆಯಾಡುತಿಹ ಬಡಜೀವಿ ನಾನಯ್ಯ ಪಡೆದ ಫಲವದು ಬೆಂಬಿಡದೆ ಭೋಗಕೆ ಬರುತಲಿಹುದಯ್ಯ ಬಡಿದು ಉಣಿಸುವೆಯೊ ಬಿಡದಿರುವೆ ಎನ್ನೊಡೆಯಾ ಒಡೆಯ ನಿನ್ನೆದುರಿನಲಿ ನಾ ಪರಿಹರಿಸಿ ರಕ್ಷಿಸೊ ಮೃಡನುತ ಶ್ರೀ ವೇಂಕಟೇಶಾ 3
--------------
ಉರಗಾದ್ರಿವಾಸವಿಠಲದಾಸರು
ಸತ್ಯಸುಧಾರ್ಣವ ನಿತ್ಯಸ್ವಯಂಭುವ ನುತ್ಯಸ್ವಭಾವಗುಣ ರಮಾಧವ ಪ ಭವ ಭಂಜನ ರಾಘವ ಅತ್ಯಂತ ಸುಖವೀವ ದೇವ ಕೃಪಾರ್ಣವ ಅ.ಪ ಪವನನಂದನನುತ ಭುವನಾರಾಜಿತ ಧೃವ ಪರಿಭಾವಿತ ಮುನಿಸೇವಿತ ಕವಿಹೃದಯಾನತ ದಿವಿಜಾರಾಧಿತ ನವಘನಸುಂದರ ವಿಧಿವಿನುತಾ 1 ರಥಾಂಗ ಶ್ರೀಕರ ತುಂಗ ಕೃಪಾಕರ ಧರಣೀಧರಾ ಮಾಂಗಿರಿ ವರನರಸಿಂಗ ಪರಾತ್ಪರ ಅಂಗಜಜನಕ ಭುಜಂಗ ಶೃಂಗಾರ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸತ್ಯಾದ ನಡಿ ಹಿಡಿರೋ ಮನಜರು ಸತ್ಯದಾ ನಡಿಗಿನ್ನು ಮತ್ತೊಂದು ಭಯವಿಲ್ಲ ಧ್ರುವ ಸತ್ಯದಾನಡಿಗಿನ್ನು ಸತ್ಯ ನುಡಿಯಲು ಬೇಕು ಸತ್ಯಂ ಸತ್ಯ ಶರಣರೆಲ್ಲಾ ಎತ್ಯಾಡಿಸುವಂತೆ ಮೈಯೊಳಗಿಹ ಕಾವನೈಯನ ಮರಿಯಬ್ಯಾಡಿ 1 ಹುಸಿಯಾಡಿ ನೀವಿನ್ನು ಘಾಸಿಗೆ ಬೀಳಲಿ ಬ್ಯಾಡಿ ವ್ಯಸನಕಾಗಿ ಬಿದ್ದು ದೆಶೆಗೆಟ್ಟು ಹೋಗಬ್ಯಾಡಿ 2 ಅಶೆಯಕೊಟ್ಟು ನಿರಾಶಯೆ ಮಾಡಲಿಬ್ಯಾಡಿ ಘಾಸಿ ಮಾಡಲಬ್ಯಾಡಿ 3 ಘಟ್ಟಿಸಿ ಒಬ್ಬರ ಹೊಟ್ಟೆಹೊರಿಯಬ್ಯಾಡಿ ಸಿಟ್ಟಿಲಿ ನೆಂಟರು ತುಟ್ಟಿಸಿ ಬಿಡಬ್ಯಾಡಿ4 ಗುಟ್ಟಿನೊಳಿಹ ಮಾತು ತುಟ್ಟಿಗೆ ತರಬ್ಯಾಡಿ ಹೊಟ್ಟೆಲೆ ಹಡೆದವರ ಕಟ್ಟಿಗೆ ತರಬ್ಯಾಡಿ 5 ಲೆತ್ತಪಗಡಿ ಅಡಿ ಹೊತ್ತುಗಳಿಯಬ್ಯಾಡಿ ತುತ್ತುಕುಡಿಯೊಳಿದ್ದಾ ಪತ್ತಬಡಲಿಬ್ಯಾಡಿ 6 ಹರಿಹರ ಭಕ್ತಿಗೆ ಬ್ಯಾರೆ ನೋಡಲಿಬ್ಯಾಡಿ ಗುರುಕೃಪೆ ಪಡೆದಿನ್ನು ಗುರುತಿಟ್ಟು ನೋಡಿರೋ 7 ಅನ್ನಬೇಡಿದವ ಗಿಲ್ಲೆನ ಬ್ಯಾಡಿ ಹೊನ್ನು ಹೆಣ್ಣಿನ ಮ್ಯಾಲೆ ಕಣ್ಣಿಟ್ಟು ಕೆಡಬ್ಯಾಡಿ 8 ಅಂತರಾತ್ಮದ ಪರಮಾತ್ಮನ ತಿಳಕೊಳ್ಳಿ ಸ್ವಾತ್ಮ ಸುಖದ ಸವಿ ಸೂರ್ಯಾಡಿಕೊಳಲಿಕ್ಕೆ 9 ಸ್ವಹಿತ ಸುಖದ ಮಾತು ಸಾಧಿಸಿಕೊಳಲಿಕ್ಕೆ ಮಹಿಪತಿ ಹೇಳಿದ ಮಾತು ಮನ್ನಿಸಿ ತಿಳಿಕೊಳ್ಳಿ 10
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತ್ರಾಜಿತ ಕುಮಾರಿ ಗೃಹಕೆ ಪಕ್ಷಿವಾಹನ ತನ್ನ ಅಚ್ಛದ ಸತಿಯ ಕಾರಣನೆಲ್ಲೂ ಭಾಮೆ ಇಚ್ಛೆಯಿಂದಲಿ ಬಂದನಿಲ್ಲೆ 1 ಮಚ್ಛಲೋಚನೆ ನಗುತ ಅಚ್ಚಮುತ್ತಿನ ದ್ವಾರ್ಯ ಮುಚ್ಚುಕದವ ತೆಗೆಯದೆ ಭಾಮೆ ಅಚ್ಚುತನ ಕೂಡ ವಿನಯದಿ 2 ಮದಗಜಗಮನೆ ಕೇಳೆ ಗಜವರದನು ನಾನೆ ಕದವ ತೆಗೆಯೆ ಕಮಲಾಕ್ಷಿ ಭಾಮೆ ಮುದದಿ ನೋಡೆನ್ನ ನಿರೀಕ್ಷೆ 3 ಗಜವರದನೆ ಗಜವ ವಧೆ ಮಾಡಿದವನು ನಿನ್ನ ನೆಲೆಯ ಬಲ್ಲವರು ನಾವಲ್ಲ ಕೃಷ್ಣ ಕದವ ತೆಗೆಯೋರ್ಯಾರಿಲ್ಲ4 ಉದಕÀದೊಳು ಮುಣುಗಿ ಬ್ಯಾಗ ಮದಕದಿಂದ್ಹಯನ ಕೊಂದು ತವಕದಿ ವೇದವ ತಂದೆ ನಾನು ಭಾಮೆ ಮತ್ಸ್ಯ ನಾನೆ 5 ಹೊಳೆವೊ ಮತ್ಸ್ಯನಾದರೆ ಶರಧಿ ಹುಡುಕುತ ಹೋಗೊ ನಿನಗಾವಾಸಸ್ಥಾನಯಿದಲ್ಲ ಕೃಷ್ಣ ಜಲವೆನ್ನ ಮನೆಯೊಳಗಿಲ್ಲ 6 ಅಂಬುಧಿ ಮಥಿಸಿ ಅಮೃತ ತಂದು ಸುರರಿಗಿಟ್ಟು ಮಂದರವ ಬೆನ್ನಲಿ ತಾಳಿದೆನೆ ಭಾಮೆ ಸುಂದರ ಕೂರ್ಮನು ನಾನೆ 7 ಸುರರಸುರರ ಯುದ್ಧ ಬಿಟ್ಟು ಮೋಹಿನ್ಯಾಗಲ್ಲಿ ನಡೆ ನಾ ಸ್ತ್ರೀರೂಪ ನೋಡೋಳಲ್ಲ ಕೃಷ್ಣ ಛಲದಿಂದ್ವಂಚಿಸು ಹೋಗವರನೆಲ್ಲ 8 ಮಣ್ಣು ಕೆದರುತಲ್ಹೋಗ್ಹಿ- ರಣ್ಯಾಕ್ಷನ್ನ ಸೀಳಿ ಮನ್ನಿಸ್ಯವನಿಯ ತಂದೆ ನಾನೆ ಭಾಮೆ ವರಾಹ ನಾ ಬಂದೀನೆ 9 ವರಾಹ ನೀನಾದರೆ ಗರಿಗಂಹರವ ಸೇರೊ ಮನೆಗೆ ಬರುವೋದುಚಿತಲ್ಲ ಕೃಷ್ಣ ಮೆಲುವ ಬೇರೆನ್ನ ಮನೆಯೊಳಿಲ್ಲ 10 ತರಳ ಕರೆಯಲು ಕಂಬ ಒಡೆದಸುರನ ಒಡಲ ಕಡು ಕೋಪವನ್ನು ತಾಳಿದನೆ ಭಾಮೆ ವರಲಕ್ಷ್ಮೀನರಸಿಂಹ ನಾನೆ 11 ಕರುಳಾಧಾರಕ ಕೇಳೊ ಕರಾಳವದನಕ್ಕಂಜುವೆನು ಕಡುಕೋಪ ಎನ್ನೊಳು ತರವಲ್ಲ ಕೃಷ್ಣ ತರಳರಂಜುವರು ಲಕ್ಷ್ಮೀನಲ್ಲ 12 ಅಂಜೋದ್ಯಾತಕೆ ಚಿಕ್ಕ ಕÀಂದ ವಟುವು ಚೆಲ್ವ ಸುಂದರ ವಾಮನನು ನೋಡೆ ಭಾಮೆ ಬಂದೆನ್ನ ಗುಣವ ಕೊಂಡಾಡೆ 13 ಕಪಟ ರೂಪದಿ ದಾನ ತ್ರಿಪಾದ ಭೂಮಿ ಬೇಡಿದ ವಿಪರೀತ ಮಾಯವ ಕಂಡವಳಲ್ಲ ಕೃಷ್ಣ ಅಪರ್ಮಿತ ಗುಣ ಬಲಿ ಬಲ್ಲ 14 ಸರಸಿಜಮುಖಿ ಕೇಳೆ ನಿರುತ ಜಪತಪಾಚರಿಸಿ ಪರಶುರಾಮನು ನಾ ಬಂದೆನೆ ಭಾಮೆ ಶರಥ ಮಾಡದಿರೆನ್ನೊಳು ನೀನೆ 15 ನಿರುತ ನಿಷ್ಠೆಯ ಬಲ್ಲೆ ಗುರುತು ಮಾತೆಯ ಕೊಂದೆ ಸರಸವಾಡುವೋಳು ನಾನಲ್ಲ ಕೃಷ್ಣ ಶರಥÀ ಕ್ಷತ್ರಿಯರಲ್ಲಿದು ಹೋಗೆಲ್ಲ 16 ಎರಡೈದು ಶಿರಗಳ ಕಡಿದು ಜಾನಕಿದೇವಿ ಒಡಗೊಂಡಯೋಧ್ಯವನಾಳಿದೆನೆ ಭಾಮೆ ಪೊಡವಿಗೊಡೆಯ ರಾಮ ನಾನೆ 17 ಅಡವಿ ಅರಣ್ಯ ತಿರುಗಿ ಮಡದಿಗಪನಿಂದ್ಯವ ಕಟ್ಟಿ ಅಡವಿಗಟ್ಟ್ಯಂತಃಕರಣವಿಲ್ಲ ಕೃಷ್ಣ ಬಿಡು ನಿನ್ನ ಸುಳ್ಳು ವಚನವಿದೆಲ್ಲ 18 ಯದುವಂಶದೊಳು ಜನಿಸಿ ವಧೆಮಾಡಿ ದೈತ್ಯರ ನಿರ್ಭಯದಿಂದ ಬೆಳೆದೆನೆ ಭಾಮೆ ಮಧು ಮುರಾಂತಕÀ ಕೃಷ್ಣ ನಾನೆ 19 ಕಲಹ ಮಾಡುತ ಕಾಲ- ಯಮನಿಂದಲೋಡಿ ಬಂದು ನಿರ್ಭಯದಿಂದ ಬೆಳೆಯಲು ನಿಂದೆಲ್ಲ ಕೃಷ್ಣ ಮಲಗಿದ ಮುಚುಕುಂದ ಬಲ್ಲ 20 ನಿಗಮ ನಿಂದ್ಯವ ಮಾಡಿ ಬಗೆಯಿಂದ ತ್ರಿಪುರರ ಚೆದುರೆಯರನು ಒಲಿಸಿದೆನೆ ಭಾಮೆ ಸುಗುಣ ಶರೀರ ಬೌದ್ಧ ನಾನೆ 21 ತ್ರಿಪುರ ಸತಿಯರನೆಲ್ಲ ವಶಮಾಡಿದಂಥ ಶೂರ ವಸನರಹಿತಾಗಿ ತಿರುಗೋದÀಲ್ಲ ಕೃಷ್ಣ ಶಶಿಮುಖಿಯರು ನಗುವರೆಲ್ಲ 22 ಚೆಲುವ ತುರುಗನೇರಿ ಹೊಳೆವೋ ಕತ್ತಿಯ ಶೂರ ಖಳರ ಮರ್ದನ ಮಾಡುವೆನೆ ಭಾಮೆ ಥಳಥಳಿಸುವ ಕಲ್ಕ್ಯ ನಾನೆ23 ಕಲಿಯ ಸಂಹಾರ ಕೇಳೊ ನಿನ್ನ ಕತ್ತಿಗಂಜುವರ್ಯಾರೊ ಕಟಿಪಿಟ್ಯೆನ್ನೊಳು ತರವಲ್ಲ ಕೃಷ್ಣ ಕಲಿಗಳೆನ್ನರಮನೆಯೊಳಿಲ್ಲ 24 ಜಾಂಬವಂತನ್ನ ಗೆದ್ದು ತಂದೆ <
--------------
ಹರಪನಹಳ್ಳಿಭೀಮವ್ವ
ಸದಾಶಿವ ದೇವ ಪಾಹಿ ಶ್ರೀ ವಿಶ್ವನಾಥಸದಾಶಿವ ದೇವ ಪಾಹಿ ಪ ಆದಿ ನಿಷೇವಿತ ರಜತಧರಾಧರವೇದನಿಧೇಕಿಲ ಸುರಪ್ರವರ 1ಅಮಿತ ಗುಣಾಲಯ ಅಂಡ ವಿಭೂಷಣಬಹುಮುಖ ಬಹುಪದ ಬಹುನಯನ 2ವಿಧುಕರರಾಜಿತ ಮುಕುಟ ಮಹೇಶ್ವರಕುಧರಸುಖಾಕೃತಸುಖವಿಭವ 3ಪರ್ವತರಾಜ ಪ್ರಥಮ ಸುತಾವರಶರ್ವ ಸುರಾರಿ ವಿರೋಧಿ ಶರ 4ಅಜಿನದ್ವಯ ಶುಭವಸನ ಮನೋಹರಸುಜನ ಶುಭೋದಯ ಕೃತಿ ಚತುರ 5ಸಪ್ತದ್ವಯಸಾಹಸ್ರ ಮಹಾಋಸದ್ಗತಿದಾಯಕ ಸುಜಿತಖರ 6ಪಕ್ಷಿಧ್ವಜ ಶ್ರೀ ವೆಂಕಟಗಿರಿ ಗೃಹಪಕ್ಷ ಕಕುದ್ಗಿರಿಸಾಂಬಶಿವ 7ಓಂ ಸಂಸಾರವೈರಿಣೇ ನಮಃ
--------------
ತಿಮ್ಮಪ್ಪದಾಸರು
ಸಂದು ಹೋಯಿತೀ ಕಾಲವು ವ್ಯರ್ಥಾ ಒಂದು ಬಾರಿ ಗೋವಿಂದ ಎನದÉ ಮಂದನಾಗಿ ಅತಿಮಾತಿಗೆ ಒಳಗಾಗಿ ಪ ಹುಟ್ಟಿದ ಮೊದಲು ----ಬಹು ಭ್ರಷ್ಟರ ಸಂಗದಿ ಬೆರೆದಾಡುತ ಸೃಷ್ಟಿಗೊಡೆಯ ಶ್ರೀಕೃಷ್ಣನ ಪಾದವ ಮುಟ್ಟಿ ಭಜಿಪರ ಮರದಾಡುತಾ ಕೆಟ್ಟ ಬುದ್ಧಿಯ ಗುರುಹಿರಿಯರ ಕಂಡು ಬೆಟ್ಟನಾಗಿ ಬಹು ಜಗಳಾಡುತಾ ನಿಷ್ಠರ ಕಂಡರೆ ನಿಂದೆಗೆ ಒಳಗಾಗಿ ಕಟ್ಟಕಡೆಗೆ ನರಕ ಘೋರವೇ ಸಿದ್ಧವಾಗಿ 1 ಹರಿಶರಣರ ಕೂಡನುದಿನ ಮನದಲಿ ದುರುಳ ಮಾತಿನಲಿ ದೂಷಿಸುತಾ ಪರಮಾತ್ಮನ ಕೃಪೆ ಪಡೆದ ಸುಜನರಾ ಪಾದಕೆ ಶಿರವೆರಗದೆ ಇರುತಾ ಶರಣರ ದ್ರೋಹದೊಳಿರುಳು ಹಗಲು ಇದು ಶಿಷ್ಟನು ನಾನೆಂದು ಹೇಳಿಕೊಳುತಾ ಗರುವತನದಿ------ ಹೀನನು ಆಗಿ ----------ರತನಾಗಿ ಇನ್ನೂ 2 ಅಂಡಜವಾಹನ ಪುಂಡರಿಕಾಕ್ಷನ ಕೊಂಡಾಡುವರನ ಕು-----ಡಿ ಕಂಡ ಕಂಡ------ನ ಮಹಾಮಹಿಮರನ ಪುಂಡನಾಗಿ ಇನ್ನು ಹೋಗಲಾಡಿ ಮಂಡಲದೊಡೆಯ 'ಶ್ರೀಮಹಾಹೆನ್ನೆವಿಠ್ಠಲನ’ ಕಂಡು ಪೂಜಿಸು----ಒಡನಾಡಿ ಗುಂಡತನದಿ-------ಕಾಲನ ದಂಡನೆಗೊಳಗಾಗಿ----ರಾರಿಯ ಮುಖ----ಗಿ 3
--------------
ಹೆನ್ನೆರಂಗದಾಸರು
ಸದ್ಗುರು ಭಕ್ತಿ ಲೇಸು ಲೇಸು ಸದ್ಭಕ್ತಿಗೊಂದು ಗುರುಕೃಪೆಯೆ ಲೇಸು ಧ್ರುವ ಒಂದೆ ಸುಪಥ ಲೇಸು ಹೊಂದಿ ಬಾಳುವದು ಲೇಸು ಪಾದ ಕಾಂಬುವದೆ ಲೇಸು 1 ನಡೆ ನುಡಿ ಒಂದೆ ಲೇಸು ದೃಢಭಾವನೆಯು ಲೇಸು ಪಿಡಿಯುವನು ಸಂಧಾನಧ್ಯಾತ್ಮದ ಲೇಸು 2 ಗುರುದೈವೆಂಬುದೆ ಲೇಸು ಅರಿತು ಬೆರೆವುದು ಲೇಸು ಸರಕ್ಕನೆ ಸಾಧಿಸಿಕೊಂಬಾನುಭವ ಲೇಸು 3 ಒಳಮುಖನಾಗುವದೆ ಲೇಸು ತಿಳಿಯುವಾತನ ಮನ ಲೇಸು ಬೆಳಗಿನೊಳಿಹ್ಯ ಬೆಳಗು ಹೊಳೆವ ಲೇಸು 4 ತನ್ನ ತಾ ತಿಳಿವದೆ ಲೇಸು ಉನ್ಮನವಾಗುದೆ ಲೇಸು ಪಾದ ನಂಬುದೆ ಲೇಸು 5 ಅರ್ತರೆ ಗುರುವಾಕ್ಯ ಲೇಸು ಬೆರ್ತರೆ ಗುರುಪಾದ ಲೇಸು ನಿರ್ತದಿಂದಾಗುವ ಪೂರ್ಣ ಗುರ್ತವೆ ಲೇಸು 6 ಗುರುಶರಣ್ಹೋಗುದೇ ಲೇಸು ಕರುಣ ಪಡೆವದೆ ಲೇಸು ತರಳ ಮಹಿಪತಿಗಿದೆ ಸುಖವೆ ಲೇಸು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸದ್ಗುರುವಿನ ಕೃಪೆ ಸದ್ಗತಿ ಸುಖದೋರಿತು ಧ್ರುವ ಮಸ್ತಕದ ಮ್ಯಾಲೆ ಅಭಯ ಹಸ್ತ ತಾವಿಡಲಿಕ್ಕೆ ಸ್ವಸ್ತಹೊಂದಿತು ಮನವು ವಸ್ತುದ ಸುಳವಿಲೆ 1 ಕರುಣಿಸಿ ನೋಡಲಿಕ್ಕೆ ಕರಗಿಹೋಯಿತು ಮಹಾಪಾಪ ಸೆರಗು ಸಿಲುಕಿತು ಸುಪಥ ಪರಮಾನಂದದ 2 ಹರುಷಾನಂದವಾಯಿತು ತರಳ ಮಹಿಪತಿಗೆ ಗುರುನಾಮಾಮೃತ ಸೇವಿಸಿ ವರಕೃಪೆಯಿಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸನ್ನುತ ವಿಠಲ | ಭಾರ್ಗವಿಯ ರಮಣಾ ಪ ಯೋಗ ಮಾರ್ಗದಲಿ ಹೃ | ದ್ರೋಗ ಹರಿಸಿವಗೇ ಅ.ಪ. ಮುಗ್ದ ತರಳನು ಇವಗೆ | ದಗ್ಧ ಪಾಪವ ಮಾಡಿಮಧ್ವ ಸಿದ್ಧಾಂತಗಳ | ಪಧತಿಯ ತಿಳಿಸೋ |ಕೃದ್ಧಖಳ ದುರ್ಯೋಗ | ವದ್ದು ಕಳೆದೂರಕ್ಕೆಬುದ್ಧಿ ಜನ ಸಂಯೋಗ | ಬದ್ಧವಾಗಲಿ ಇವಗೇ 1 ನಿತ್ಯ ಮಂಗಳನೇ 2 ಭಾವಿ ಬೊಮ್ಮರು ಹಾಗು | ಭಾವಿ ಮರುತರ ಕರುಣಭಾವುಕಗೆ ಇರುವುದನು | ಭಾವಿತವು ಅವಗೇಭಾವ ಉದ್ರೇಕ ಸ | ದ್ಭಾವ ಭಾವಿತ ನನ್ನನೀವೊಲಿದು ಕಾಯೊ | ಕೃಪಾವಲೋಕನದಿ3 ಹರಿ ನಿನ್ನ ವಾರ್ತೆಯಲಿ | ಇರಲಿ ರತಿ ಇವಗಿನ್ನುಗುರು ಹಿರಿಯರಾ ಸೇವೆ | ಪರಮ ಭಕುತಿಂದಾವಿರಚಿಸುವ ಸೌಭಾಗ್ಯ | ಕರುಣಿಪುದೊ ಶ್ರೀ ಹರಿಯೆಮರುತಾಂತರಾತ್ಮ ತವ | ಸ್ಮರಣೆ ಸುಖ ಕೊಡುತಾ 4 ಭವ | ರೋಗವನೆ ಪರಿಹರಿಸೋನಾಗೇಶ ಶಯ್ಯ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಸನ್ನುತ ಸತತ ಸದ್ಗುಣಪೂರ್ಣ ಪ್ರಥಮಾಂಗ ಸಂಪೂಜ್ಯ ಶರ್ವಮಿತ್ರ ಪ ಪ್ರತಿ ಪ್ರತಿ ಕ್ಷಣ ನಿನ್ನ ಪತಿತಪಾವನ ಪಾದ ಕ್ಕತಿ ದೈನ್ಯದಲ್ಲೆರಗಿ ಮೊರೆ ಇಡುವೆ ಪೊರೆಯೆಂದು ಅ.ಪ. ಕೋರಿದರೆ ಮನಕರಗಿ ಹಾರಿ ಬರುವಿಯೆಂದು ನಾರದರೆ ಮೊದಲಾದ ನಿಜಭಕ್ತರೆಲ್ಲ ಸಾರಿಹರು ಸರ್ವೇಶ ಸಾರತಮ ಸರ್ವರೊಳು ಘೋರ ಭವದಿಂದೆನ್ನ ಪೊರೆ ಎನಲು ಬರೆಯಂತೆ 1 ಕೃಪೆಯಿಂದ ನೀ ನೋಡೆ ಬ್ರಹ್ಮಾಂಡ ದೋಷಗಳು ಲುಪ್ತವಾಗುವುದಯ್ಯ ಒಂದೆ ಕ್ಷಣದಿ ನಿಪುಣನಾಗುವನವನು ಇಹಪರ ನಿಧಿ ಒದಗಿ ಅಪರಿಮಿತ ಸುಖ ಉಣುವ ಅಪ್ರತಿಮ ಕೀರ್ತಿಯು 2 ವಿಧಿ ಶಿವ ಶಕ್ತ ಸುರರಿಂದ ಸಂಸೇವ್ಯ ಜಯೇಶವಿಠಲ ಕೀರ್ತಿಪೂರ್ಣಾ ಪರಿ ದೋಷಗಳು ಪರಮ ಕೃಪೆ ವೀಕ್ಷಣದಿ ಪರಿಹರಿಸಿ ಬೆರೆ ಎನ್ನ ಪರಭಕ್ತಿ ನಿಧಿ ಇತ್ತು 3
--------------
ಜಯೇಶವಿಠಲ
ಸನ್ನುತ ನಮೋಸ್ತು ಜಗದಾಧಾರಾ ಪ ನಮೋಸ್ತು ಮೀನ ಶರೀರಾ ಅ.ಪ ನಮೋಸ್ತು ಕೌಸ್ತುಭಧರಾ ಕೂರ್ಮ ಶರೀರಾ 1 ಮೃಗೇಂದ್ರ ಸದ್ಯುಶಾ ಶ್ರೀಪತೇ ವರಾಹ ರೂಪ ನಮೋಸ್ತುತೇ 2 ತಲ್ಪ ವಿರಾಜಿತೇ ಸನ್ನುತ ನೃಸಿಂಹರೂಪ ನಮೋಸ್ತುತೇ 3 ಪುರಂದರ ಫಲಪ್ರದಾ ಸಕಲೇಷ್ಟದಾ ನಮೋಸ್ತು ವಾಮನ ಶ್ರೀಕರಾ4 ರಮಾಮನೋಹರ ಶ್ರೀಹರೇ ಭಂಜನ ನಮೋಸ್ತು ಪರಶುಧರಾಹರೇ 5 ಪ್ರದೀಪ ಹನುಮತ್ಸೇವಿತ ಭವ ವಿನಾಶ ಭೂಮಿಸುತಾನ್ವಿತಾ 6 ಕೃಪಾಕರಾ ಪಶುಪಾಲಕಾ ಪ್ರವೀಣ ಗೋಪಬಾಲಕಾ 7 ಪಿತಾಯ ವ್ರತ ನಿರ್ಮೂಲತೇ ಬುದ್ಧ ಶರೀರತೇ 8 ಧರ್ಮೋದ್ಧರಾಯ ತುರಂಗ ವಿರಾಜತೇ ಗಮನ ಸುರೇಶ ಕಲ್ಕಿ ಮಹಾತ್ಮತೇ 9 ಪರ್ವತಧರ ಧರಾಯ ನೃಸಿಂಹತೇ ಪ್ರಬುದ್ಧಕಲ್ಕಿ ದಿಶಾಕಲತೇ 10 ಶುಭಾಂಗ ಗರುಡ ತುರಂಗತೇ ನಾರಾಯಣಾಯ ಭಕ್ತೋದ್ಧಾರತೇ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್