ಒಟ್ಟು 18608 ಕಡೆಗಳಲ್ಲಿ , 136 ದಾಸರು , 8432 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆಚ್ಚದಿರು ಸಂಸಾರ ನೆಲೆಯಲ್ಲವೀ ಕಾಯಅಚ್ಯುತನ ನಾಮವನು ನೆನೆದು ಸುಖಿಯಾಗೊ ಪ ಗಳಿಸದಿರು ಸೀಮೆಯನು ಗಳಿಸದಿರು ದ್ರವ್ಯವನುಗಳಿಸದಿರು ನೀ ದುರಿತರಾಶಿಗಳನುನಳಿನನಾಭನ ದಿವ್ಯ ನಾಮವನು ನೆನೆನೆನೆದುನೆಲೆಯಾದ ಪರಮ ಪದವಿಯ ಪಡೆಯೊ ಮನವೆ 1 ನೋಡದಿರು ಪರಸತಿಯ ಕೂಡದಿರು ದುರ್ಜನರಆಡದಿರು ಮಾತುಗಳ ಗರ್ವದಿಂದಬೇಡದಿರು ಕೈಯ ಹಿಂದೆಗೆವ ಲೋಭಿಯನು, ಕೊಂ-ಡಾಡದಿರು ಬೀದಿಗೂಳುಂಬ ದೈವಗಳ 2 ನಾನಾ ಜನ್ಮದಿ ಬಂದ ನಾಟಕದ ಬೊಂಬೆಯಿದುಮಾನಕ್ಕೆ ಮೆಚ್ಚಿ ನೀ ಮರುಳಾಗದೆಜಾಣತನದಿಂ ಕಾಗಿನೆಲೆಯಾದಿಕೇಶವನಮಾನಸದಲಿ ನೆನೆದು ಸುಖಿಯಾಗು ಮನುಜ 3
--------------
ಕನಕದಾಸ
ನೆಚ್ಚಬೇಡಿ ಪತಿತನಾರಿಯ | ಕಚ್ಚುವ ಹಾವಿನ ಸಂಗವೆನ್ನಿ || ಪ ಮೆಚ್ಚುಗೊಳಿಪಳು ಗುಣಿಸಿ ನೋಡಿ ನಿಚ್ಚದಲಿ ಚಿತ್ತ ಚಂಚಲಳಾಗಿ ಅ.ಪ ಪರಿಯಂತ | ಯಾವದನಿತು ಮೊಗವನೆತ್ತದಲೆ || ಎವೆ ತೆಗೆದು ದಿಕ್ಕುಗಳು ನೋಡದೆ | ಅವನಿಗೆ ಬಾಗಿ ನಡೆಯುತ || ತವರು ಮನೆಯವರನು ಹಳಿದು | ನವÀನವ ಪ್ರಾವರ್ತನವನು ತೋರುತ || ಅವಗುಣಂಗಳಿಲ್ಲ ದೋಷಾದಲಿ | ಲವಕಾಲವನು ಕಳೆವ ನಾರಿಯ 1 ಪ್ರಾಯಾವಸ್ಥೆ ಬಂದು ಪ್ರಾಪ್ತವಾಗಲು | ಆಯುತಾಕ್ಷಿಗಳ ತಿರುಹಿ ಮೆಲ್ಲನೆ || ಬಾಯಲ್ಲಿ ಒಂದೊಂದು ಕ್ರಮಾಸಾರದಿ | ನೋಯ ನೋಯದಂತೆ ವಚನವ || ದಾಯಿಗಳಂತೆ ಮತ್ಸರಿಸಿ ಬಯ್ಯದೆ | ಮಾಯಾವಿ ಕಲ್ಪಿಸಿ ಮುಸಿಮುಸಿ ನಗೆ || ಆಯಕೆ ತಗಲಿ ಕಂಡ ಜನರಿಗೆ | ಘಾಯ ಕಾಣಿಸದಂತೆ ಮಾಳ್ಪಳ 2 ಅತ್ತೆ ಮಾವಗೆ ಅತ್ಯಂತವಾಗಿ ತಾನು | ಪ್ರತಿ ಉತ್ತರ ಪೇಳಲು ಅಂಜಿ ಅಂಜಿದಂತೆ || ಉತ್ತಮರ ಮನೋರಥವ ಕೆಡಿಸಿ | ಅತ್ತಿಗಿ ನಾದುನಿ ಮಿಗಿಲಾದವರೆಲ್ಲ || ಕತ್ತೆ ನಾಯಿ ನರಿಯೆಂಬೊ ಸೊಲ್ಲಲ್ಲಾದೆ | ಎತ್ತಲಾದರು ವಂಚಿಸಿ ಗಂಡನ್ನ || ತನ್ನಂತೆ ಮಾಡಿಕೊಂಡು ಹಗಲಿರುಳು ಥೈ- | ತಥ್ಥಾ ಎಂದಾಡಿಸಿ ಕುಣಿಸುವ ಸತಿಯಳ 3 ಕೊಂಡ ತೆರದಿ | ಪತಿಯ ಸಮಯ ನೋಡದೆ ತಾನು || ಸಥೆಯಿಂದಲಿ ಸಂಸಾರದೊಳಗಿದ್ದು | ಸುತರ ಪಡೆದು ಹಮ್ಮಿಲಿ || ಕಥನವೆಬ್ಬಿಸಿ ಗಂಡನ್ನ ಅಡವಿ | ಪಥವ ಹಿಡಿಸಿ ಹಣದಗೋಸುಗ || ಸತತ ಮನೆಯೊಳಗಿದ್ದ ಬದುಕು | ಮಿತಿಯಿಲ್ಲದೆ ಭಕ್ಷಿಸುವ ನಾರಿಯ 4 ಒಲಿಪಗೆ ನೀವು ಮೋಸಗೊಂಡು | ಒಲಿಯದಿರಿ ಸ್ತ್ರೀಯರಿಗೆ ಸೋತು || ಕಲಿಗೆ ಪ್ರಥಮ ಪಟ್ಟದ ಗದ್ದಿಗೆ | ಸುಲಭವಲ್ಲವೋ ಸುಖವಿಲ್ಲಾ || ಕೆಲಕಾಲ ಮಹಾ ಕಾತರದಿಂದಲಿ | ವಳಗಾಗದಿರು ಒಳಿತು ಪೇಳುವೆ || ಜಲಜಾಕ್ಷ ವಿಜಯವಿಠ್ಠಲನ್ನ ನಂಬಿರೋ | ನಂಬಿರೋ ನಂಬಿರೋ ಚತುರರು 5
--------------
ವಿಜಯದಾಸ
ನೆಚ್ಚಬ್ಯಾಡ ನೀರುಗುಳ್ಳೆಗೆ ಸರಿಯಾದ ಕುತ್ಸಿತ ದೇಹವೆಂದಿಗು ಸ್ಥಿರವಲ್ಲ ನ- ಮ್ಮಚ್ಚುತನಾನಂತನ ನೆನವುತ ಅನುಗಾಲ ಸ್ವಚ್ಛನಾಗಲು ಹರಿ ಮೆಚ್ಚುವನು ಪ. ಸ್ವಾತಂತ್ರ್ಯ ಲೇಶವಾದರು ನಿನಗಿಲ್ಲದೆ ಪಾತಕ ಫಲಕಿನ್ನು ಗುರಿಯಾದಿಯಲ್ಲದೆ ಯಾತರ ಸುಖವೆಂದೀ ಸಂಸಾರ ಕೂಪದಿ ಪ್ರೀತಿ ಬಡುವಿ ಪಂಚಬಂಧದಲಿ ವಾತ ಪಿತ್ತ ಶ್ಲೇಷ್ಮ ಪೂಯ ಸೃಕ್ಪೂರಿತ ಘಾತವಾಗುವುದೊಂದು ನಿಮಿಷಾರ್ಧದಲಿ ಜಗ- ನ್ನಾಥ ನಂಬಿದರೆಂದಿಗು ಪದಪಂಕ- ಜಾತಪತ್ರದ ನೆರಳಿರಿಸುವನು 1 ದೇಹವೆ ಸ್ಥಿರವಿಲ್ಲವಾದ ಮೇಲಿದರ ಸ- ನ್ನಾಹವಾಗಿರುವದನೇನೆಂದು ಗ್ರಹಿಸುವಿ ಗೇಹಧನಾಪತ್ಯ ಸ್ನೇಹವೆಲ್ಲವು ವ್ಯರ್ಥ ಮೋಹವಲ್ಲದೆ ನಿಶ್ಚಯವಲ್ಲವು ಐಹಿಕಾಮುಷ್ಮಿಕವೆಂಬ ಸಕಲ ಸುಖ ದೋಹನ ಧೇನು ಸರ್ವೇಶ್ವರ ಹರಿಯ ಸ- ಮಾಹಿತ ಮನದಿಂದ ಭಜಿಸೆ ನಿನ್ನನು ಪಕ್ಷಿ ವಾಹ ಕೈ ಬಿಡದೆ ಕಾಪಾಡುವನು 2 ಒಂದು ದಿವಸ ನೀರೊಳದ್ದದಿದ್ದರೆ ದು- ರ್ಗಂಧ ಭೂಯಿಷ್ಠವು ಸಹಿಸಲಸಾಧ್ಯವು ಹಿಂದಿನ ಕರ್ಮಾನುಬಂಧವು ತಿಳಿಯದು ಮುಂದಿನ ಹೊಂದಿಕೆ ಒಂದಾದರು ಇಂದಿರಾವರ ವೆಂಕಟೇಶನ ಪಾದಾರ- ವಿಂದ ಧ್ಯಾನಗಳೆಂಬದೊಂದೆ ಪರಮಸುಖ ವೆಂದು ತಿಳಿದು ಭಕ್ತಿಯಿಂದ ಭಜಿಸು ನಮ್ಮ ತಂದೆ ಬಿಡದೆ ಕಾವನೆಂದೆಂದಿಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ನೆನವಿಗೊಮ್ಮೆ ಹರಿನಾಮಘೋಷ ಮಾಡಿ ಜನುಮ ಸಾರ್ಥಕಾಗುವುದು ಪೂರ್ಣ ನೋಡಿ ಧ್ರುವ ಜನವನ ದೊಳು ಹರಿಯ ಕೊಂಡಾಡಿ ಅನುಮಾನ ಹಿಡಿದು ಕೆಡಬ್ಯಾಡಿರೊ ನೆನವಿಗೊಮ್ಮೆ ನಾಮಘೋಷವ ಮಾಡಿ ನೆನವಿನೊಳು ನೀವು ಘನ ಬೆರದಾಡಿರೊ 1 ಹರಿಯ ನಾಮ ನೆನವುತಿಕ್ಕಿ ಚಪ್ಪಾಳಿ ದೂರಮಾಡಿ ಮನದ ಚಿಂತೆ ಮುಮ್ಮಳಿ ಸಾರಿ ದೂರುತಿದೆ ವೇದ ಪೂರ್ಣ ಕೇಳಿ ಅರಿತು ಹರಿಯ ನಾಮ ನೀವು ಬಲಗೊಳ್ಳಿರೊ 2 ಹರಿನಾಮಕಾಗಬ್ಯಾಡಿ ವಿಮುಖ ಅರಿತು ಮಾಡಿಕೊಳ್ಳಿ ಪ್ರಾಣಪದಕ ತರಳ ಮಹಿಪತಿಯ ತಾರಕ ತೋರುತಿಹ್ಯ ದು ಬ್ರಹ್ಮಸುಖವೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನಿ ಮನ ಅನುದಿನದಿ ಅನಮಾನಿಸದೆ ನೀ ಪ ನೆನಿಮನ ಶ್ರೀ ಸತ್ಯಜ್ಞಾನರ ಅನಘಹೃದ್ವನಜದಲಿ ಘನ ದಿನ ಮಣಿಯವೊಲ್ ಮಿನುಗುವನ ಗುಣ ಗಣ ತನು ಮರೆದು ಕುಣಿಕುಣಿದು ಹರುಷದಿ ಅ.ಪ ಊನರು ಹರಿಗೆಂದು ಚೇತÀನರ ಅವನಾಧೀನರು ಅಹುದೆಂದು ವಿಸ್ತರಿಸಿ ಪೇಳಿದ ದಿನಪಾಲಕದೇವ ಶ್ರೀ ಪವಮಾನ ಮತ ಅಂಬುಧಿಯೊಳನುದಿನ ತೀರ್ಥರ ಮಾನದಂಘ್ರೀಯ 1 ಕಮಲಾಪ್ತಗಧೀಕವಾದ ತೇಜದಲಿ ಪೊಳೆಯುವ ಕಮಲಾಪತಿಯ ಸುಪಾದಾ ಅತಿ ವಿಮಲತನ ಹೃತ್ಕಮಲದೊಳಿಟ್ಟು ಸದಾ ಭಯಹಾರಿ ಕರದ್ವಯ ಕಮಲದಿಂ ಸೇವಿಸುತ ಮೈಮುಖ ಕಮಲ ಸಂಭವ ಪಿತನ ಪೂತನ 2 ಕೇಂದ್ರನೊಳು ಭುವಿಗಿಳಿದು ಸಜ್ಜನರ ಪೊರೆವದ ಕಿಂದ್ರಿಯಂಗಳ ಗೆಲಿದು ಸನ್ಯಾಸ ಕೊಂಡು ಇಂದ್ರ ಹರಿಹರ ಶೀತ ರಘುಕುಲ ಇಂದ್ರನಾವ ಉ ಪೇಂದ್ರ ಶಿರಿಗೋವಿಂದ ವಿಠಲನ ಭಜಿಸಿ ರಾಜ ಮ ಹೇಂದ್ರಿಯ ತನುವಿಟ್ಟ ಗುರುಪದ 3
--------------
ಅಸ್ಕಿಹಾಳ ಗೋವಿಂದ
ನೆನಿ ಮನವೇ ನೀ ಮುಕುಂದನ ಪ ನೆನಿ ಮನವೇ ನೀ ಮುಕುಂದನಾ| ಅಜ ವಂದ್ಯನಾ 1 ಸಿರಿಲಕ್ಷುಮಿ ಮನೋಹರನಾ| ಸುರಾಧಾರನಾ ಯದುವೀರನಾ2 ದುರಿತ ನಿವಾರಿಯಾ| ವರ ಶೌರಿಯಾ ಮುರವೈರಿಯಾ 3 ಮನೋಹರ ಮೂರುತಿ ರಾಮನಾ| ಘನ ಶ್ಯಾಮನಾನಂತ ನಾಮನಾ 4 ಗುರು ಮಹಿಪತಿ ಸುತ ಪ್ರೀಯನಾ| ಸ್ಮರ ನೈಯನಾ ಕೃಷ್ಣರೇಯನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೆನಿ ಮನವೇ ಪಾವನ ದೇವನ ಚರಿತ ಕಥನುವೇ | ನಿನಗಿದ-ವನಿಲಿ ನೆಚ್ಚಿರೆ ತನುವೇ ಪ ಘನ ಶ್ಯಾಮನದಯ ಪಡಿಯದ ಸಾರ್ಥಕ | ಜನುಮಗಳೇವದಿದು ಗುಣವೇ ಅ.ಪ ಸುರಲೋಕ ಮೊದಲಾದ ಸುರಪ ವಿಚ್ಛೈಸಿ | ಪರಿ ಸಾಧನ ಮಾಳ್ಪರೆ | ಸುರಭಿಯಿರಲು ವಿಡಿಸದ ಪುಳಿ ಪಾಲವ | ಕರೆಸುವೆನೆಂದು ಅರಸುವರೇ 1 ಗುರು ಶರಣ ನಿಷ್ಠೆಯೊಂದ್ಹಿಡಿಯದೇ ಕಂಡಾ | ಧರೆಯ ದೈವಕ ತಲೆವಾಗುವರೇ | ಸುರ ತರುವಿನ ನೆರಳವನೇ ತ್ಯಜಿಸಿ | ಬ| ರ್ಬುರ ದ್ರುಮವನು ಸಾರುವೇ 2 ವಿಕಳಿತ ಮಾಡುವ ತಾಪತ್ರಯದಾ | ಸಕಲ ಹಳಾಹಳ ತ್ಯಜಿಸೀ ಅಖಿಳ ಜೀವನದೊಡಿಯನ ಸದ್ಮೂರ್ತಿಯ | ಹೃತ್ಕಮಲದೊಳಗಿರಿಸೀ 3 ಹರಿಮಹಿಮೆಯ ಕೊಂಡಾಡುತ ಪೊಗಳುತ | ಬೀರುತ ಗುರು ಭಕುತರಿಗೇ | ಪರಮ ಸದ್ಭಾವದ ಭಕುತಿಲಿ ಮುಣುಗೈನ | ವರತ ಪ್ರೇಮಾರ್ಣವದೊಳಗೇ 4 ನಯನದಿಂದಲೀ ಸ್ಮರಿಸುವ ಬಹು ಶರಣರ | ಭಯವ ನಿವಾರಣ ಮಾಡುವ | ದಯದಲಿ ಮಹಿಪತಿ ನಂದನ ಪಾಲಿಸು | ತಿಹಕರುಣಾಕರ ಮಾಧವಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೆನಿ ವನಜನಾಭನ ಮನವೇ ಪ ಭವ | ದಣಿವಿರೆ ಹಿಂಗಿಸು ಮನವೇ | ಈ ತನುವಾ ಸುಖದನುವಾ | ನಿಜ ಘನವಾ ಮಾಡರ್ಪಣವಾ 1 ಭವ | ಶರಧಿಲಿ ಕೈಯ್ಯಾ ಜರಿಯಾ | ಆಕರಿಯ ಕೇಳಿ ಮೊರಿಯಾ | ಬಂದರಿಯಾ ನೀ ಮರೆಯದೇ 2 ನುತ ಮಹಿಪತಿ ಸುತ ಸಾರಥಿಯ ಪಾ ಡುತ ನಿರ್ಮಳ ಕೀರುತಿಯಾ | ಶ್ರೀಪತಿಯ ಮೂರುತಿಯಾ | ಪದ ದ್ವಿತಿಯಾದಿ ರತಿಯಾಲಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೆನಿಯಬಾರದೆ ಮನವೆ ಹರಿಯ ನಾಮವ ನೆನವು ಸೆಲೆಗೊಳ್ಳಲಿಕ್ಕೆ ಘನಪದವನೀವ ಸ್ವಾಮಿ ಧ್ರುವ ಅಂತು ಇಂತು ಎಂತು ಎನದೆ ತಂತು ಪಿಡಿದು ತನುವಿನೊಳು ಪಾದ 1 ಶ್ರವಣ ಕೀರ್ತನೆ ಮೊದಲಾದ ನವವಿಧ ಭಕುತಿಯಿಂದ ಸವಿದು ಸವಿದು ಸವಿದುಂಬ ಸಾರವಾದ ದಿವ್ಯನಾಮ 2 ಧನ್ಯ ಧನ್ಯನಾಗೊ ಮನವೆ ನೆನೆದು ಪತಿತಪಾವನನಾಮ ಧನ್ಯಗುರುವಿನ ದಿವ್ಯನಾಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನಿಯೊ ಮನದಲಿ ಮನದಭಿಮಾನಿಯನ ಪ ಭವಭಯ ನಾಶನಾ ಪಾರ್ವತಿ ರಮಣನ ಅ.ಪ ಗಂಗೆಯ ಪೊತ್ತ ಘನ ಗಂಭೀರನಾ 1 ಇಂದು ಸುಜನ ರಕ್ಷಕ ಕರುಣಸಾಗರನಾ ---- 2 'ಹೊನ್ನ ವಿಠ್ಠಲ’ ಪ್ರೀಯ ಮಹಾದೇವನ 3
--------------
ಹೆನ್ನೆರಂಗದಾಸರು
ನೆನೆ ಕಂಡ್ಯ ಮನವೆ ಸದ್ಗುರು ದಿವ್ಯಪಾದ ಖೂನ ತೋರುವದಿದೆ ನಿಜಬೋಧ ದ್ರುವ ನೆನೆಯಬೇಕೊಂದೆ ಭಾವದಿಂದೆ ತಾನೆತಾನಾಗುವ ಗುರು ತಾಯಿತಂದೆ 1 ಘನ ಸುಖ ಕೊಡುವ ಅನುಭವದಲಿಡುವ ಜನನ ಮರಣದ ಬಾಧಿಯ ಮೂಲಗಡೆವ 2 ಗುರುವಿಂದಧಿಕ ಬ್ಯಾರಿಲ್ಲ ಸುಖ ತಿರುಗಿ ನೋಡಲು ತನ್ನೊಳಾದ ತಾ ಕೌತುಕ 3 ಇದೆ ನಿಜಬೋಧ ಸ್ವಸುಖದ ಭೇದಿಸಿದವರಿಗಿದೆ ಸುಪ್ರಸಾದ 4 ಗುರುತಾ ತೋರುವ ಸುರಿಮಳೆಗರೆವ ಅನುದಿನ ಹೊರೆವ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನೆ ಮನವೆ ಮಾಧವನ ಪ ಮುನಿವರೇಣ್ಯರ ಮನದಿ ಅನುದಿನವು ನೆಲಸಿಹ ವನರುಹ ಲೋಚನನ ಅ.ಪ ಸತಿಸುತರ ಮೋಹವನು ಹಿತವೆಂದು ಅರಿಯುತಲಿ ಮತಿಯ ಕೆಡದಂತೆ ನೀ ಅತಿಶಯದ ಭಕುತಿಯಲಿ 1 ಮರುಳು ಮಾಡುವ ಭವದ ಪುರಳು ಸುಖಗಳಿಗೆ ನೀ ಇರುಳು ಹಗಲಲ್ಲಿ ಉರಳಿ ಕೆಡದಿರುವಂತೆ 2 ಮುನ್ನಗಳಿಸಿದ ಬಹಳ ಉನ್ನತದ ಅಘಗಳಿಗೆ ಖಿನ್ನನಾಗುತ ಸುಪ್ರಸನ್ನ ಶ್ರೀ ನರಹರಿಯ 3
--------------
ವಿದ್ಯಾಪ್ರಸನ್ನತೀರ್ಥರು
ನೆನೆದು ನಮಿಸುವೆ ನಾನು ವಾರಂವಾರ ಪ ನೆನೆದು ನಮಿಸುವೆ ನಾನನುದಿನ ಹರಿಪದ ವನಜ ಮಧುಪರಾದ ಅನುಭವ ಶರಣರ ಅ.ಪ ಆದಿಮೂರುತಿತ್ರಯ ಮಧ್ವಮುನಿರೇಯ ಪದ್ಮನಾಭ ನರಹರಿ ಧ್ಯಾನ ಮಾಧವಾಕ್ಷೋಭ್ಯರ ಮಹಾ ಜಯತೀರ್ಥರಾ ರಾಧಕ ವಿದ್ಯಾದಿರಾಜ ಕವಿನಿಧಿ ಸಾದರ ವಾಗೀಂದ್ರ ಶಾಂತ ರಾಮಚಂದ್ರ ಸಾಧು ವಿದ್ಯಾನಿಧಿಯರ ರಘುನಾಥ ಮೇದಿನಿ ರಘುವರ್ಯರ ರಘೋತ್ತಮ ವೇದವ್ಯಾಸಾರ್ಯರ ವಾರಂವಾರ 1 ಇತ್ತ ವಿದ್ಯಾಧೀಶ ಈ ವೇದನಿಧಿ ಘೋಷ ಸತ್ಯವ್ರತರ ನಾಮ ಸತ್ಯನಿಧಿಯ ನೇಮ ಸತ್ಯನಾಥಾಖ್ಯಾತ ಸತ್ಯಾಭಿನವ ತೀರ್ಥ ಮತ್ತಿಳೆಯೊಳಗಿರ್ಪ ಮನಕೆ ಸೂಚಿಸಿ ಬಪ್ಪ ಕೃತ್ಯಮ್ ಸುಜ್ಞಾನ ಕೃಷ್ಣದ್ವೈಪಾಯನ ಇತ್ಯಧಿಕ ಸರ್ವರ ಜನದಲಿ ಅತ್ಯಧಿಕ ಮೀರ್ವರಾ ಪುರುಷಾರ್ಥ ಉತ್ತಮ ಪದಲಿರುವರಾ ವಾರಂ ವಾರ 2 ಶರಣೆಂದು ಆದ್ಯರ ಸಕಲ ಪ್ರಸಿದ್ಧರ ಶುಭ ವ್ಯಾಸರಾಯರ ವರ ಹಯಗ್ರೀವ ಜಗವರಿತ ವಾದಿರಾಜ ಪುರಂದರದಾಸ ಪುತ್ರರಾ ವರ ಮಧ್ವರಾ ನೆರೆ ತಾಳ ಪಾಕರ ನುತ ಮತಿ ಕನಕರ ಹರಿಭಕ್ತಿ ಉಲ್ಹಾಸರ ಬಂಡೆರಂಗ ನರಿತಿಹ ನಿಜದಾಸರ ಮಹಿಪತಿ ಗುರುಶರಣರ ತೋಷರ ವಾರಂ ವಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನೆದು ನಿಷ್ಕಳಂಕರಾಗಿರೋ ಪಂಕಜಾಕ್ಷನ ಕೂಡ ದ್ವೇಷ ಬಳಿಸುವ ಮಾಯಿ ಪ ಮಲವಿಸರ್ಜನೆಯಾಗುವಾಗ ಮೂತ್ರವನು ಬಿಡುವಾಗ ಹೊಲಗೇರಿಯೊಳಗೆ ಸುಳಿದಾಡುವಾಗ ಹೊಲಿಯಾದವನು ತನ್ನ ಎದುರಿಗೆ ಬರುವಾಗ ಕಲಿಶಿಷ್ಯನಾದ ಮಣಿವಂತನ ನೆನೆಸಿರೊ1 ಶ್ರದ್ಧವನು ಬಿಡುವಾಗ ಸ್ವಪ್ನದೊಳಗೆ ಇಂದ್ರಿಯ ಬಿದ್ದು ಹೋಗುವಾಗ ಉಗುಳುವಾಗ ಗುಹ್ಯ ತೊಳೆಯುವಾಗ ಅಪ್ರ ಬದ್ಧನಾದ ಏಕಲವ್ಯನ ನೆನೆಯಿರೋ 2 ಶುದ್ಧ ಅಶುದ್ಧವನು ತುಳಿದು ನೆಲಕ್ಕೆ ವರಸುವಾಗ ವಮನವಾಗುವಾಗ ಮರಿಯದಲೆ ಅಮಲ ಸುಖ ಮುನಿ ಗುರು ವಿಜಯವಿಠ್ಠಲ ವೈದು ತಮಕೆ ಹಾಕುವ ಶುದ್ಧ ಕುಮತಿಯನು ನೆನೆಯಿರೋ 3
--------------
ವಿಜಯದಾಸ
ನೆನೆನೆನೆ ಮನವೆ ನೀ ಘನಸುಖವನೆ ಪಡೆವೆ ಪ ಭಾರ ನಿನ್ನದೆಂಬ ಪೋರ ಪ್ರಹ್ಲಾದನ ಘೋರಬಂಧವ ನಿವಾರಿಸಿ ಪೊರೆದವನ 1 ಕರಿಮಕರಿಗೆ ಸಿಲ್ಕಿ ಹರಿಯೆಂದು ಕೂಗಲು ಭರದಿ ಒದಗಿ ಮಹಕರುಣದಿ ಸಲಹಿದವನ 2 ದುರುಳನ ಸಭೆಯೊಳು ತರುಣಿಯು ಮೊರೆಯಿಡಲು ವರಹ ಶ್ರೀರಾಮ ನಾರಿಮರಿಯಾದೆ ಕಾಯ್ದವನ 3
--------------
ರಾಮದಾಸರು