ಒಟ್ಟು 10544 ಕಡೆಗಳಲ್ಲಿ , 133 ದಾಸರು , 5597 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾವ ಪಾಪಿಯ ದೃಷ್ಟಿ ತಾಕೀತೋ ಗೋಪಾಲಕೃಷ್ಣಗೆ ಪ. ಪಾಲು ಮೊಸರು ವೊಂದನಾದರು ಯಾವ ಕಾರಣದಿ ಕುಡಿಯಲೊಲ್ಲೆ ಪೇಳೋ ಯೆನಗೆ ಬಾಲಾ ಭೂಪಾಲ ಗುಣಶೀಲಾ 1 ದಾವಪುಣ್ಯವತಿಯ ಕಣ್ಣು ಹತ್ತಿತೋ ನೆಲುವಿಗಿಟ್ಟ ಬೆಣ್ಣೆಯ ಮುಟ್ಟುವುದಿಲ್ಲಾ ಬಟ್ಟಲಲ್ಲಿಡುವೆವೋ 2 ಕಪ್ಪವಾದರು ಇಡುವೇನು ಬಾ ಅಪ್ಪ ವೇಣುಗೋಪಾಲಾ ತುಪ್ಪ ಸಕ್ಕರಿ ನೀಡುವೆನು ಚಪ್ಪರಿಸು ನೋಡುವೆನು ಕಾಳಿಮರ್ಧನಕೃಷ್ಣಗೆ 3
--------------
ಕಳಸದ ಸುಂದರಮ್ಮ
ಯಾವ ಹೆಸರಿನಿಂದೆ ಕರೆದರೇನುಪಾವನಾತ್ಮನೆ ಬರನೆಸ್ವಾ ಸರ್ವೋತ್ತಮನುಪ ಸಾವಿರ ಹೆಸರುಳ್ಳ ಅವನಿಗೆ ಹೆಸರಿಂದೇನುದೇವನೊಬ್ಬನೆ ಜಗಕೆ ಎಂಬ ನುಡಿ ಸುಳ್ಳೇನುಭಾವಭಕುತಿಗಳಿಂದ ಕರೆದೊಡನೆ ಬರುವನುಠಾವು ಕಾಲಗಳಿಲ್ಲಿ ಆತನಿಗೆ ಬಹಳೇನು 1 ಅಲ್ಲಾ ಎಂದರೆ ಬರುವ ಶಿವನೇ ಎಂದರೂ ಬರುವಾಗೊಲ್ಲ ಕೃಷ್ಣನೆ ಬಾರ ಎಂದರಾತನೆ ಬರುವಅಲ್ಲಿ ಇವ ಇಲ್ಲಿ ಅವ ಎಂದು ಬಡಿದಾಡಿದರೆಖುಲ್ಲರೆಂದರೇನು ಬಲ್ಲವರು ಮರುಳಾ 2 ವಿಧವಿಧ ನುಡಿಗಳಲಿ ಬೇರೆ ಶಬುದಗಳಿರಲುಅದು ಪರಾರ್ಥವೆ ಬೇರೆ ತಾನಾಗುವದೇನುಹದಿನಾರು ಪಥಗಳನೆ ಹಿಡಿದೊಂದು ಹೋದೊಡನೆ ಅದರಿಂದಲಾ ಊರು ಸೇರಿಸುವುದಿಲ್ಲವೇನು 3 ಹೃದಯದಲಿ ನಿಜವಾದ ಭಕುತಿಯನು ಬೇಡುವನುಇದನರಿತು ಪ್ರತಿದಿನದಿ ಭಜಿಸುವರು ಮುನಿಜನರುಗದುಗಿನಲಿ ವಾಸಿಸುವ ಶ್ರೀ ವೀರನಾರಾಯಣನುಮುದದಿಂದ ಸಲಹುವನು ಸಂದೇಹವೇನು 4
--------------
ವೀರನಾರಾಯಣ
ಯುಕ್ತಿ ಯುಕ್ತದಮಾತ ಕೇಳಬೇಕುಶಕ್ತಿಯನು ಮಾಡದಿರು ಮುಕ್ತಿಗನುವಾಗು ಪಚಿತ್ತಶುದ್ಧಿಯಲಿದ್ದು ಭಾವ ವಿಷಯದಿಕೂಡೆಮತ್ತೆ ಬಂಧಿಸಿ ಬಲಿದು ಮುಳುಗುತಿಹುದುಕಿತ್ತದನು ನಿಜದಲ್ಲಿ ನಿಲಿಸಿಯನುಸಂಧಾನವತ್ಯಧಿಕವಾದಡೆಯು ಮಿತನುಡಿ ಹಿತವೂ 1ಕಾರ್ಯಕಾರಣರೂಪನಾಗಿ ಜಗದೀಶ್ವರನುಧೈರ್ಯಗಳು ಬರುವಂತೆ ಪ್ರೇರಿಸುತ್ತಾಆರ್ಯರೊಳಗೆಣಿಕೆಯನು ಮಾಡಿಸುತಲಜ್ಞಾನಸೂರ್ಯನಾಗಿಯೆ ತಾನು ತೋರುತಿರ್ದಡೆಯೂ 2ಕರಣೇಂದ್ರಿಯಂಗಳಿವು ಜಡವಾಗಿ ವಿಷಯಗಳಬೆರೆಸಲರಿಯವು ತಾವು ಇಚ್ಛೆುಂದಾತಿರುಪತಿಯ ವೆಂಕಟನು ಸೂತ್ರಧಾರಕನಾಗಿಗುರುವಾಸುದೇವ ರೂಪದಿ ಸಲಹುತಿರಲು 3ತನುವನುಕೂಲಕೆ ಬಂದುದ ನೆನೆದುಸುರಿದ ಜೀವನಭಿಮಾನವ ಸಡಿಲಿಸುತಲಿ ವಿನಯದಿ ಗುರುವನು ಸೇರ್ವರೆ ನಿನಗೆರವಿಲ್ಲೆನ್ನುತಅನುಸರಿಸಿದ ಕಾರ್ಯವಾಸಿಗೋಸುಗ ಬಿಡದೆ 4
--------------
ತಿಮ್ಮಪ್ಪದಾಸರು
ಯುಕ್ತಿಯಿಂದ ಭಕ್ತಿ ಮಾಡಲಿಕ್ಕೆ ಶಕ್ತನಲ್ಲ ನಾ ಮುಕ್ತಿಯೋಗ್ಯ ಮಾಡೊ ಭಾವಭೋಕ್ತ ಕೃಪಾನಿಧೆ ಧ್ರುವ ಧ್ಯಾನ ಮೌನ ಸ್ನಾನ ಸಂಧ್ಯಾಖೂನ ಗುರುತು ಅರಿಯೆ ನಾ ನ್ಯೂನ ಪೂರ್ಣ ನೋಡದೆನ್ನ ರಕ್ಷಿಸೋ ದಯಾನಿಧೆ 1 ಹೀನ ದೀನ ಜ್ಞಾನಶೂನ್ಯ ದಾನ ಧರ್ಮ ಅರಿಯೆ ನಾ ನೀನೆ ಕಾಯಬೇಕು ಎನ್ನ ಕರುಣಾ ಕೃಪಾನಿಧೆ 2 ದುರುಳ ದುರ್ವಾಸನೆಯ ದುರಾಚಾರಿ ದುರಾತ್ಮ ನಾ ತರಣೋಪಾಯ ದೋರಿಸೆನ್ನ ಹೊರಿಯೊ ದಯಾನಿಧೆ 3 ಅರುಹು ಕುರುಹು ನರಿಯ ದೀಹ್ಯ ಮರುಳಮಂಕ ತರಳನಾ ಕರವ ಪಿಡಿಯ ಧರೆಯೊಳಿನ್ನು ತಾರಿಸೊ ದಯಾನಿಧೆ 4 ಆಶಾಪಾಶದೊಳು ವಾಸವಾದ ದೋಷ ರಾಶಿ ನಾ ಭಾಸಿ ಪಾಲಿಸು ಪುಣ್ಯ ಪ್ರಕಾಶಿಸೊ ದಯಾನಿಧೆ 5 ಏಸು ಜನ್ಮ ಮೋಸಹೋಗಿ ಘಾಸಿಯಾದ ಜೀವ ನಾ ದಾಸರೊಡನೆ ಕೂಡಿಸೊ ಭಾಸ್ಕರ ದಯಾನಿಧೆ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯೆಂದಿಗೆ ಬರುತೀಯೆ ಸುಂದರ ಭಾರತಿ ಮಂದರೋದ್ಧರನ ತೋರಿಸೆಂದೆ ನಾ ಬಂದೆ ಪ. ಅಂಧಕಾರಣ್ಯದೊಳು ನಿಂದು ತತ್ತರಿಸುವೆನು ತಾಯೆ ಕುಂದುಗಳೆಣಿಸಾದಿರು ಆನಂದ ತೋರು ಅ.ಪ. ಹರಿಗೆ ಕಿರಿಯ ಸೊಸಿ ವಾತನಸತಿಯು ನೀನು ಪ್ರಖ್ಯಾತಿವಂತಳೇ ಏಕಾಂತ ಭಕ್ತಳೇ ತ್ರಿವಿಧ ಜೀವರೊಳಗೆ ನಿಂತು ತ್ರೀವಿಧ ಪ್ರೇರಣೆ ಮಾಡುವಿ ದೇನಿ ನಿನ್ನಾ ಮಹಿಮೆಗೆ ನಮೋ ಎಂಬೆ ಪುತ್ಥಳಿಯಾ ಬೊಂಬೆ 1 ಮಂದರೋದ್ಧರನ ಪಾದಸೇವಕಳೇ ನಿನಗೀಡೆ ನಲಿದಾಡೆ ಒಂದನಾದರೂ ಮಾತನಾಡೆ ವರಗಳ ನೀಡೆ ದಯಮಾಡಿ ನೋಡೆ ತವಪಾದವ ಕೊಡೆ ಕರವ ಜೋಡಿಸಿ ಬೇಡುವೆನಿಂದು ನಾ ಬಂದು 2 ಗರುಡ, ಶೇಷ ರುದ್ರಾದಿಗಳೊಡೆಯಳೇ ನೀನು ನಿನ್ನಡಿಗಳಿಗೆರಗುವೆ ನಾನು ತಡಮಾಡ ಬ್ಯಾಡಮ್ಮಾ ನಡೆದು ಬಾರಮ್ಮ ಭವ ಮಡುವಿನೊಳಗಿರುವೆನು ತೋರಿಸೋ ದಯಪಾಲಿಸೋ 3
--------------
ಕಳಸದ ಸುಂದರಮ್ಮ
ಯೇನು ಕರುಣಾಳೋ ದೇವವರೇಣ್ಯ ಯೇನು ಭಕುತರಧೀನನೋ ಪ ಕನ್ನಯ್ಯ ಧ್ಯಾನವಿತ್ತ ನಾರಾಯಣಾ ಅ.ಪ. ಅನಂತಾನಂತ ಜನುಮದಲ್ಲಿ ಅನ್ನೋದಕ ಕಾಣದಿದ್ದ ದರಿ ದ್ರನ್ನ ಕರವನೆ ಪಿಡಿದು ಮೃಷ್ಠಾನ್ನ ಭೋಜನ ಮಾಡಿಸಿ ಒಡನೆ ತಿರುಗೂವ ಕನ್ನಿ ಸಂಕಲ್ಪ ಕೆದುರುಗಾಣದೆ ಘನ್ನ ಮೂರುತಿ ಕೇಶವಾ 1 ಪಾವನವ ಮಾಡಿದನು ಬಲು ಕೃ ಪಾವಲೋಕನ ಪರಮ ಸೂರ್ಯರ್ ರಾವಣಾಸುರ ಮರ್ದನಾ ಕವಿ ಮನ್ನಿಸಿ ತಪ್ಪನೆಣೆಸದೆ ದೇವ ಜಗತ್ರಯ ಜಿತ ಕರಣ ವಸುದೇವ ದೇವಕೀನಂದನಾ2 ದೋಷರಾಶಿಯೊಳಿದ್ದು ಅನುದಿನ ಮೋಸಗೊಳಿಸುವ ಭವವನಧಿ ಮಧ್ಯ ಈಶ ಕಡಕಾಣಲಾರದೆ ಕ್ಲೇಶದಲಿ ಸಂಚರಿಸುತ್ತಿಪ್ಪ ಮಾನೀಶ ಪಶುವನು ನೋಡಿ ವೇಗದಿ ಲೇಸು ಕೊಡುವೆನೆಂದು ಆನಂದ ದಾಸರೊಳಗಿದ್ದ ನರಹರೀ 3 ಡಂಬಕಾ ಭಕುತಿಯನೆ ಬಿಡಿಸೀ ವೆಂಬೋದೆ ನಿರ್ಮಲ ಮಾಡೀ ಪಾದ ಇಂಬು ಬಯಸುವ ಸುಖವೆ ಪಾಲಿಸಿ ಪೊಂಬುಡೆಧರ ಗೋವಿಂದಾ 4 ಜಪತಪಾನುಷ್ಠಾನ ನಾನಾ ವುಪವಾಸ ವ್ರತದಾನ ಧರ್ಮಗ ಳಪರಿಮಿತವಾದ ಯಾಗ ಕನ್ಯಾದಾನ ನಾನಾಲೋಚನ ಸ್ವಪನದಲಿ ಕಾಣಿಸುವ ತಾನೆ ಕೃಪಣರಿಗೆ ವಲಿದಲ್ಲದೆ ಬಿಡ ಚಪಲ ವಿಜಯವಿಠಲಾ5
--------------
ವಿಜಯದಾಸ
ಯೇನೆಲವೊ ದೈವಾ ವೈಕುಂಠನಾಥ ನೀ ನಾರಿವೇಷವನು ಧರಿಸಿದ ಬಗೆಯೇನೊ ಪ ದೈತ್ಯರು ಎರಗಿ ದೇವತತಿಗಳು ತಲ್ಲಣಿಸೆ | ಮಿತ್ರಭಾವದಲಿವರು ಕೂಡಲಿಟ್ಟು | ಇತ್ತಂಡದ ನಡುವೆ ಸುಧೆಯ ಬಡಿಸುವೆನೆಂದು | ಮಿತ್ರವೇಷವ ಧರಿಸಿ ಸುರರ ಸಲಹಿದ ಬಗೆಯ 1 ಶಿವಗೆ ವೃಕಾಸುರನು ಬೆಂಬಿಡದೆ ತನ್ನುರಿ | ಕರವ ನೀಡುವೆನೆಂದು ಬರಲಾಗಲು || ಅವನೀಶ ಭವಹರ ಕೇಶವ ನೀನೆ ಗತಿಯೆನಲು | ಯುವತಿ ವೇಷವ ಧರಿಸಿ ಶಿವನ ಸಲಹಿದ ಬಗೆಯಾ 2 ಅಂದು ಮಾಡಿದ ಚರಿತೆ ಭಕ್ತಜನರು ಬಂದು | ಒಂದೊಂದನ ನುಡಿದರನ ಲೀಲೆಂದು | ಇಂದು ಸತಿವೇಷವನು ಧರಿಸಿ ತೋರಿದಿಯೋ ಪು ರಂದರ ದಾಸರಿಗೊಲಿದೆ ವಿಜಯವಿಠಲ ಚಲುವಾ3
--------------
ವಿಜಯದಾಸ
ಯೇಸು ಧನ್ಯನೊ ಹರ ತಾನೇಸು ಧನ್ಯನೊ ವಾಸವಾದಿ ಸುರರಿಗಿಂತ ಕೇಶವನ ಕರುಣ ಪಾತ್ರ ಪ. ವೇದವಿನುತನಮಲ ಪದ್ಮ ಪಾದ ಮೋದಿಸ್ವರ್ಧುನಿಯ ಸಾದರದಿ ಶಿರದಿ ಧರಿಸಿ ಮೋದ ಬಡುವ ಮುಕ್ಕಣ್ಣಾ 1 ಶ್ರೀಶನನ್ನು ಭಜಿಪ ಮುಖ್ಯ ದಾಸತಾನೆಂದರಿಯಿರೆಂದು ಹಾಸಿಕೆಯ ಹೆಗಲ ಮೇಲೆ ಭೂಷಣಗೊಂಡಮಿತ ಮಹಿಮ 2 ಅಂಹೊಮೋಪಾಹನರ ಸಿಂಹನನ್ನು ಹೃದಯಕಮಲ ಸಿಂಹಾಸನದೊಳಿರಿಸಿ ದಿವ್ಯ ಜಿಂಹ್ಮೆಯಿದ್ದನವಗೈವ 3 ಘೋರ ಸಂಸಾರಾಬ್ಧಿ ಭಯ ತಾರಕವಾಗಿರುವ ರಾಮ ತಾರಕ ಮಂತ್ರೋಪದೇಶ ತಾರಕ ರಘುವಾರ ದೇವ 4 ಪಂಕಜಾಕ್ಷ ಪರಮ ಕರುಣಿ ವೆಂಕಟಾದ್ರಿವಾಸ ಹರಿಯಾ ಕಿಂಕರ ಭಕ್ತಿ ಜನರಾ ತಂಕವಾರಾ ಶಂಕರ 5
--------------
ತುಪಾಕಿ ವೆಂಕಟರಮಣಾಚಾರ್ಯ
ಯೋಗನಿದ್ರೆಯ ಮಾಡುತಿಹನು ಕ್ಷೀರಸಾಗರಮಧ್ಯದಿ ಭೋಗಿಶಯನನು ಪಏಳು ಸುತ್ತಿನ ಪುರವಿದನೂ ಎಂಟುಪಾಲಾಗಿ ರಮಣಿ ತಾ ಕಾದಿರಲದನುಬಾಲಕನೊಬ್ಬ ಪಾಲಿಪನೂ ಮಂತ್ರಿನಾಲುವರೊಪ್ಪಿರೆ ಶ್ರೀಹರಿ ತಾನು 1ಕಾಲಜ್ಞಾನಿಗಳೈವರಿಹರೂ ಅವರೂಳಿಗಕೈವರು ಕಾದುಕೊಂಡಿಹರುವೇಳೆ ವೇಳೆಯ ಬಲ್ಲ ಭಟರು ತಮ್ಮಊಳಿಗವನು ಬಂದು ಪೇಳುತ್ತಲಿಹರು 2ಸಕಲ ಲೋಕಂಗಳ ಸೃಜಿಸಿ ಅಲ್ಲಿ ಸಕಲ ಲೋಕೇಶನು ತಾನೆ ವಿಶ್ರಮಿಸಿಸಕಲವ ತನ್ನೊಳಗಿರಿಸಿುೀಗಮುಕುತಿದಾಯಕ ವೆಂಕಟೇಶ ಶ್ರೀ ವೆರಸಿ 3ಕಂ||ಹರಿ ಪವಡಿಸೆ ಹರೆದೋಲಗಸುರರೆಲ್ಲರ್ ಸ್ಥಾನಕೈದಲಾನಂದಾಂಬುಧಿತೆರೆುಳಿದು ತಿರುಪತೀಶನಚರಣವೆ ತಾನಾಗಿ ನಿಂದುದೆನ್ನೆದೆಮನೆಯೊಳ್ ಓಂ ವೇದವೇದ್ಯಾಯ ನಮಃ
--------------
ತಿಮ್ಮಪ್ಪದಾಸರು
ಯೋಗಿ ಎಂಬ ಆನೆ ಬಂದಿತಯ್ಯಆನೆ ಬಂದಿತು ಪ್ರಪಂಚ ಪೇಟೆಯತಾನೆ ಕೀಳುತ ತಳಪಟ ಮಾಡುತ ಪ ಪಾಷಗಳೆಂದೆಂಬ ಸರಪಳಿ ಹರಿದುಈಷಣಗಳು ಎಂಬ ಸಂಕೋಲೆ ಮುರಿದುದ್ವೇಷವೆನಿಪ ಗಾಡಿಕಾರರನರೆದುಕ್ಲೇಷವೆನಿಪ ಕಾವಲವರ ಜಡಿದು 1 ದಶವಾಯುಗಳೆಂಬ ದನಗಳನೋಡಿಸಿವ್ಯಸನ ಕುದುರೆಗಳ ಸೀಳಿ ಸೀಳಿಕ್ಕಿಹಸಿವು ತೃಷೆಗಳನು ಕಾಲೊಳಿಕ್ಕಿಕಸೆಕಸೆ ಅಂಗಡಿಗಳನು ತೂರಿಕ್ಕಿ2 ಬಹುಮತಗಳು ಎಂಬ ಮನೆಯನೆ ಕೆಡಹಿಇಹಪರ ವಾಸನೆ ಕೊಟ್ಟಿಗೆ ಕೊಡಹಿಮಹಾ ಅಭಿಮಾನದ ನಾಯಿಗಳ ಮುಡುಹಿಬಹು ಕಲ್ಪನೆಯ ಕುರಿ ಕೋಳಿಗಳ ಉಡುಹಿ3 ಬೋಧ ಲಹರಿಯಲಿ ತೂಗುತಜ್ಞಾನ ಸೊಕ್ಕಿನಲಿ ಕೆಕ್ಕರಿಸಿ ನೋಡುತ ತಾನೆ ತಾನಾಗಿ ತನ್ನ ಮರೆಯುತ 4 ಬೆಳಗುವ ಸುಷುಮ್ನ ಬಾಜಾರವಿಡಿದುಗೆಲುವಿನಲಿ ಭ್ರೂಮಧ್ಯ ಜಾಡಿನಲಿನೆಡೆದುತಿಳಿಗೊಳ ಸಹಸ್ರಾರದ ನೀರ ಕುಡಿದುಬಲು ಚಿದಾನಂದವೆಂಬ ಆನೆಯು ನಡೆದು 5
--------------
ಚಿದಾನಂದ ಅವಧೂತರು
ಯೋಗಿ ನಿತ್ಯಾನಂದ ಭೋಗಿನಾದದಿ ಮಲಗ್ಯಾನೆ ಯೋಗಿನಾದಂ ಝಣಂ ಝಣನಾದಂ ಭಿಣಿಂಭಿಣಿನಾದಸಲೆಯ ವೀಣಾನಾದವ ಕೇಳುತ ಪ ಈಷಣತ್ರಯ ಪಾಪಾತ್ಮರಿರಾ ಎಬ್ಬಿಸಲು ಬ್ಯಾಡಿವಾಸನವೆಂಬ ಆಷ್ಟಕರ್ಮಿಗಳೇ ಒದರ ಬ್ಯಾಡಿಪಾಶವ ಹರಿವುತ ಪಂಚಕ್ಲೇಶದಈಸು ಉಳಿಯದಂತೆ ತರಿದಾಯಾಸದಿ 1 ಅಂತರ ಎಂಬ ಘಾತಕರಿರಾ ಅತ್ತ ಹೋಗಲು ಬ್ಯಾಡಿಭ್ರಾಂತುಯಂದೆಂಬ ಬ್ರಷ್ಟರಿರ ಜಗಳಾಡಲಿ ಬ್ಯಾಡಿಅಂತರಿಸದೆ ಆರು ಶತ್ರುವ ಛೇದಿಸಿಅಂತಿಂತೆನ್ನದೆ ಆಯಾಸದಿಂದಲಿ 2 ಸಂಕಲ್ಪವೆಂಬೋ ಖೋಡಿಗಳಿರಾ ಸದ್ದು ಮಾಡಲಿ ಬ್ಯಾಡಿಮಂಕು ಎಂದೆಂಬ ಮಾಂದ್ಯಗಳಿರ ಮುಂದಕ್ಕಡ್ಡಾಡಬೇಡಿಬಿಂಕದಹಂಕಾರ ಬೇರ ಕಿತ್ತುಓಂಕಾರ ಚಿದಾನಂದ ವಸ್ತು ಆಯಾಸದಿ 3
--------------
ಚಿದಾನಂದ ಅವಧೂತರು
ಯೋಗಿ ವ್ಯಾಸರಾಯರೆಂಬ ವಿಚಿತ್ರ ಮೇಘ ಬೇಗ ವಿಷ್ಣುಪದವ ತೋರುಸುತ್ತ ಬಂತಿದೆಕೊ ಪ ಮಾಯಿಮತವೆಂಬ ತಾರಾಮಂಡಲವ ಮುಸುಕುತ್ತ ವಾಯುಗತಿಯಂತೆ ಗಮಿಸುತಲಿ ಹೇಯ ಕಾಮಾದಿಗಳೆಂಬ ರಜವನಡಗಿಸುತ ನಾಯಕನುಪೇಂದ್ರನಾಜ್ಞೆಯ ಪಡೆದು 1 ಅಂಗಜನಯ್ಯನೆ ಪರನೆಂದು ಫುಡಿಫುಡಿಸುತ್ತ ಕಂಗಳೆಂಬ ಮಿಂಚನೆ ನೆರಹಿ ಲೋಕದಿ ಹಿಂಗದೆ ಪರಿವ ಅಜ್ಞಾನವೆಂಬ ಕತ್ತಲೆಯ ಭಂಗಿಸಿ ಸುರಪಥವ ತೋರಿಸುತ್ತ 2 ಸಿರಿಯರಸನ ಸಮ್ಯಕ್ಜ್ಞಾನವೆಂಬ ಪೈರಿಗೆ ಬೇರುಬಿಡಿಸಿ ಹರಿಕಥೆಯೆಂಬ ಮಳೆಗರೆದು ನೆರೆ ಶಿಷ್ಯಮನವೆಂಬ ಕೆರೆತುಂಬಿಸಿ ಕರಗಳೆಂಬ ಭರಕೋಡಿ ಹರಿಸುತ ವಿಜಯೀಂದ್ರನ ಗುರು 3
--------------
ವಿಜಯೀಂದ್ರತೀರ್ಥರು
ಯೋಗಿಯಾಗ ಬೇಕು ಅಲ್ಲವೆ ಭೋಗಿಯಾಗ ಬÉೀಕು ನೀ ಪೋಗಬೇಕು ಪ ತನ್ನ ತಾನು ತಿಳಿದು ಆತ್ಮಜ್ಞಾನಿಯಾಗಬೇಕು ಅನ್ನ ವಸ್ತ್ರಗಳನು ಚಾತುರ್ವರ್ಣಕೀಯಬೇಕು ತನ್ನದೆಂಬ ಮಮತೆಯನ್ನು ಬಿಟ್ಟು ಚರಿಸಬೇಕು ಭಿನ್ನ ಭಾವವಳಿದು ಏಕೋ ದೇವನಾಗಬೇಕು 1 ಸತ್ಪಾತ್ರ ಗೀಯಬೇಕು ನಾನಾ ಜೀವ ಜಂತುಗಳಲಿ ಪ್ರೇಮವಿರಲು ಬೇಕು ತಾನು ತಾನೆಯಾಗಿ ಹರಿಯ ಧ್ಯಾನಿಸುತಿರಲು ಬೇಕು ಭಾನು ಸುತನ ಕೈಗೆ ಸಿಕ್ಕಿದಂತೆ ಇರಲು ಬೇಕು 2 ನಿತ್ಯ ಕರ್ಮವ ಮಾಡಬೇಕು ಕರುಣದಿಂದ ದೀನ ಜನರ ನಿರುತ ಪೊರೆಯ ಬೇಕು ಗುರುಗಳಲ್ಲಿ ಹಿರಿದು ವಿಶ್ವಾಸವಿರಲು ಬೇಕು ಮರುತ ಸುತನ ಕೋಣೆ ಲಕ್ಷ್ಮೀರಮಣನ ಕೂಡಬೇಕು 3
--------------
ಕವಿ ಪರಮದೇವದಾಸರು
ಯೋಗಿವರ್ಯ ಶಿರಬಾಗಿ ನಮಿಸುವೆನು ಶ್ರೀ ರಾಘವೇಂದ್ರನೆ ಪ ಹೇಳಿದ ವಚನವ ಕೇಳಿ ಮನದಲಿ ಬಹಳ ಸುಖಿಸುತಲಿಕಾಲಕಾಲಕೆ ಶ್ರೀ ಲಲಾಮನ ಲೀಲೆ ಪಾಡುತ ವ್ಯಾಳೆ ನೋಡುವಿ 1 ಸತ್ಯವಾಣಿಯು ಮಿಥ್ಯವಾಗದು ಮತ್ತೆ ಲೋಕದೊಳುಚಿತ್ತದೊಳು ಅನಿತ್ಯ ಚಿಂತಿಸಿ ವೃತ್ತಿ ಕೃಷ್ಣನೊಳು ಇತ್ತು ಪಾಡುವಿ 2 ಎಲ್ಲ ಬಿಟ್ಟವ ಸುಳ್ಳನಾಡೊದು ಎಲ್ಲಿ ಕಾಣಿಸದುಫುಲ್ಲನಾಭನ ಭಕ್ತನಲ್ಲಿ ಹೇಳಿದ ಸುಳ್ಳು ಕಾದುಕೋ 3 ಆಶೆ ತೋರಿಸಿ ನಿರಾಶೆ ಮಾಡುವುದು ದಾಸ ಜನರೊಳಗೆಈಶ ನಿಜ ಬಹು ತೋಷವೆಂಬುದು ಭಾಷಿಸದೆಯತಿವೇಷ ದಿವಿಜನೆ 4 ಶಕ್ತಿವಚನವ ಕೃತ್ಯಮಾಡಲು ಶಕ್ತನಾರದನು ಒತ್ತಿ ಪೇಳಿದಹತ್ತರಾತನ ಭೃತ್ಯರಾಶಯ ಪೂರ್ತಿಮಾಡಿಸು 5 ನೀನೇ ಬಾಂಧವ ನೀನೇ ದೈವತ ನೀನೇ ಗುರುಪಿತನುನಾನು ನಂಬಿದೆ ಮೌನಿ ತೋರಿಸು ವೇಣು ಬಾಲಕನ ಜವ 6 ಇಂದು ಎನ್ನೊಳುನಿಂದು ಪ್ರಾರ್ಥಿಸು 7
--------------
ಇಂದಿರೇಶರು
ರಕ್ಷಿಸಿ ಪೊರೆಯೊ ದೇವನೆ ಪಕ್ಷಿವಾಹನನೆ ಸೂಕ್ಷ್ಮ ಸ್ಥೂಲದಿ ವ್ಯಾಪ್ತನೆ ಪ ಲಕ್ಷ್ಮಿರಮಣ ಪುರುಷೋತ್ತಮ ಪುರುಷನೆ ಕುಕ್ಷಿಯೊಳಗೆ ಜಗ ರಕ್ಷಿಸಿ ಪೊರೆವನೆ ಅಕ್ಷರೇಢ್ಯ ಕಮಲೇಕ್ಷಣ ಮಾಧವ ರಕ್ಷ ಶಿಕ್ಷಕ ಜಗದ್ರಕ್ಷಕ ಹರಿಯೆ ಅ.ಪ ವಿಶ್ವರೂಪನೆ ಶ್ರೀಹರಿ ವಿಶ್ವವ್ಯಾಪಕನೆ ವಿಶ್ವತೋ ಮುಖನೆ ಶ್ರೀಶನೆ ವಿಶ್ವನಾಟಕನೆ ದೇವನೆ ವಿಶ್ವೋದ್ಧಾರಕನೆ ವಿಶ್ವಮಯನೆ ಶ್ರೀ ವಿಶ್ವನೆ ವಿಶ್ವರೂಪ ತಾಯಿಗೆ ಬಾಯೊಳು ತೋದರ್À ವಿಶ್ವರೂಪ ಮೈದುನನಿಗೆ ತೋರಿದ ವಿಶ್ವರೂಪ ಸಭೆಯೊಳು ಭಕ್ತರಿಗೆ ತೋರ್ದ ವಿಶ್ವ ಮೂರುತಿಯೆ 1 ಹಿಂದಿನ ಕರ್ಮಫಲದಲಿ ಬಂದು ಈ ಭವದಿ ಕಂದಿ ಕುಂದಿದೆನೋ ವ್ಯಥೆಯಲಿ ಬಂಧ ಮೋಚಕನೆನುತಲಿ ಬಂದೆರಗುತಲಿ ತಂದೆ ನೀ ಪೊರೆಯಬೇಕೆನುತಲಿ ಮಂದರೋದ್ಧರ ಗೋವಿಂದ ನಿನ್ನಯ ಪಾದ ದ್ವಂದ್ವಕೆ ನಮಿಸುವೆ ಬಂಧನ ಬಿಡಿಸೆಂದು ಇಂದು ಮುಂದು ಎಂದೆಂದಿಗೂ ನೀ ಗತಿ ಇಂದಿರೆ ರಮಣ2 ಶ್ರಮವ ಪರಿಹರಿಸೊ ಶ್ರೀಶನೇ ಶ್ರೀನಿಕೇತನನೆ ಕಮಲ ಸಂಭವನ ತಾತನೆ ಕಮಲ ಲೋಚನನೆ ಕಮಲ ಪೊಕ್ಕಳಲಿ ಪಡೆದನೆ ಕಮಲ ಭವೇಂದ್ರಾದ್ಯಮರರು ಪೊಗಳಲು ಕಮಲನಾಭ ವಿಠ್ಠಲ ವಿಠ್ಠಲನೆಂದು ಕಮಲಪುಷ್ಪ ಮಾಲಾಲಂಕೃತ ಶೋಭಿತ ಕಮಲದಳಾಕ್ಷನೆ ಕಮನೀಯರೂಪ 3
--------------
ನಿಡಗುರುಕಿ ಜೀವೂಬಾಯಿ