ಒಟ್ಟು 11785 ಕಡೆಗಳಲ್ಲಿ , 132 ದಾಸರು , 6311 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಗನೇ ಅವನೀಗ ತಾನೇಕೆ ಸುಡಲಿ ಮಾತೃವ ಬಳಲಿಪಮಗನೇ ಅವನೀಗ ತಾನೇಕೆ ಸುಡಲಿಮಗನಿಗೆಂತೆಂದು ಹೇಳಿಯೆ ಕೊಂಬ ಮ-ಲಗುವಳ ಮರಳೆಗೆ ನಾನೇನೆಂಬೆ ಪ ಮಡದಿಯ ಎತ್ತರಕೇರಿಸಿಹ ಹಡದ ತಾಯಿಗೆಝಡಿವ ಗಂಟುಗಳನೇ ಹೊರಿಸಿಹ ಹುಡುಗರ ಕೊಟ್ಟಿಹತುಡುಗ ರಂಡೆಮಗಳೋಡೋಡಿ ಬಾಯೆಂದುಬಿಡು ಮಾತುಗಳಿಂದ ಬೈಯುತಲಿ 1 ಒಳ್ಳೆಯದನು ತಾನುಣುತಲಂದು ನುಚ್ಚನು ನುರಿಯನುಕಲ್ಲಗಡಿಗೆಯೊಳು ಕುದಿಸಿಕೋ ಎಂದು ಕೆಕ್ಕರಿಸು-ತಲಂದು ಹಲ್ಲ ಕಿಸುವಳಿಗೆ ಜರಿಯ ಸೀರೆಯನುಡಿಸಿಝಲಕ ಬಟ್ಟೆಯ ಹಚ್ಚಿಕೋ ಎಂಬ 2 ಪಾತಕಿ ನಿನಗೆಂತೊಲಿವನು 3
--------------
ಚಿದಾನಂದ ಅವಧೂತರು
ಮಂಗಲಂ ಜಯಮಂಗಲಂತ್ರಿಜಗಂಗಳ ಪೊರೆವ ಶ್ರೀಮೂಕಾಂಬೆಗೆ ಪ ಗೌರಿಗೆ ಗುಹಜನನಿಗೆ ಗಿರಿಜಾತೆಗೆಧೀರಮಹಿಷ ದೈತ್ಯಮರ್ದಿನಿಗೆಕಾರುಣ್ಯನಿಧಿಗೆ ಕಾಮಿತಫಲದಾತೆಗೆನಾರದನುತೆಗೆ ನಾರಾಯಣಿಗೆ 1 ಶರದಿಂದುಮುಖಿಗೆ ಶಂಕರಿಗೆ ಶರ್ವಾಣಿಗೆದುರಿತ ದಾರಿದ್ರ್ಯಹರ್ತೆಗೆ ದುರ್ಗಿಗೆಪರಮೇಶ್ವರಿಗೆ ಪಾವನಚರಿತೆಗೆ ಶುಭಕರಿಗೆ ಸಮಸ್ತಮಂತ್ರೇಶ್ವರಿಗೆ 2 ರಾಜಶೇಖರಿಗೆ ರಾಜೀವನೇತ್ರಗೆ ರಕ್ತಬೀಜ ಶಾಸಿನಿಗೆ ಭುವನಮಾತೆಗೆತೇಜೋಮಯಿಗೆ ತರಣಿಕೋಟಿ ಭಾಷೆಗೆಶ್ರೀ ಜನಾರ್ದನನ ಸಹೋದರಿಗೆ 3 ಕಾಳಿಗೆ ಕಾಮರೂಪಿಣಿಗೆ ಕೌಮಾರಿಗೆಕಾಳರಾತ್ರಿಗೆ ಕಾತ್ಯಾಯನಿಗೆವ್ಯಾಳಭೂಷಿಣಿಗೆ ಯೋಗಿನಿಗೆ ರುದ್ರಾಣಿಗೆಭಾಳನೇತ್ರೆಗೆ ಭಯಹಾರಿಣಿಗೆ4 ಚಂಡಿಗೆ ಚಕ್ರಪಾಣಿಗೆ ಚಾತುರ್ಭುಜೆಗೆಮುಂಡಿಗೆ ಧೂಮ್ರಲೋಚನಹತ್ರ್ರೆಗೆಚಂಡಮುಂಡಾಸುರರಸುರಣರಂಗದಿದಿಂಡುದರಿಂದ ಸರ್ವಮಂಗಲೆಗೆ5
--------------
ಕೆಳದಿ ವೆಂಕಣ್ಣ ಕವಿ
ಮಂಗಲಂ ಮಂಗಲಂ ಭವತು ತೇ ಮಂಗಲಂ ಮಂಗಲಂ ಪ. ಅಂಗಜ ರೂಪಗೆ ಅಖಿಲ ಲೋಕೇಶಗೆ ಶೃಂಗಾರಮೂರ್ತಿಗೆ ಶ್ರೀಕಾಂತಗೆ ಸಂಗೀತ ಲೋಲಗೆ ಸಾಮಜವರದಗೆ ಬಂಗಾರಗಿರಿವಾಸ ಭವಭವ ಹರಗೆ 1 ಕೃತ್ರಿಮ ರಕ್ಕಸ ಮೊತ್ತ ಸಂಹರಗೆ ಭಕ್ತರ ಹೃದಯದಿ ಬೆಳಗುವಗೆ ಸತ್ಯಾತ್ಮಕನಿಗೆ ಸತ್ಯನೇತ್ರನಿಗೆ ಚಿತ್ತಜಪಿತ ಚಿನುಮಯ ಮೂರ್ತಿಗೆ 2 ಉತ್ತಮ ಗೌಡಸಾರಸ್ವತ ವಿಪ್ರರಿಂ ನಿತ್ಯ ಪೂಜೆಯಗೊಂಬ ನೀಲಾಂಗಗೆ ಛತ್ರಾಖ್ಯಪಟ್ಟಣ ಮಸ್ತಕ ಮಕುಟಗೆ ಕರ್ತ ಲಕ್ಷ್ಮೀನಾರಾಯಣ ಗುಣಾಂಬುಧಿಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಲಂ ಮಂಗಲಂ ಭವತು ತೇ ಮಂಗಲಂ ಪ. ವಿಜ್ಞಾನಶಕ್ತಿ ಪ್ರಕಾಶಗೆ ಈಶಗೆ ಸಜ್ಜನನಿವಹಾರಾದಿತಗೆ ಅಜ್ಞಾನತಿಮಿರಮಾರ್ತಾಂಡ ಪ್ರಚಂಡಗೆ ಮೂಜದೊಡೆಯ ಮನೋಜ್ಞ ಮೂರುತಿಗೆ 1 ಚಂದ್ರಶೇಖರಸುಕುಮಾರಗೆ ಮಾರನ ಸುಂದರರೂಪ ಪ್ರತಾಪನಿಗೆ ನಿಂದಿತ ಖಲಜನವೃಂದವಿದಾರಗೆ ಸ್ಕಂದರಾಜ ಕೃಪಾಸಿಂಧು ಪಾವನಗೆ 2 ತಾರಕದೈತ್ಯಸಂಹಾರಗೆ ಧೀರಗೆ ಶೂರಪದ್ಮಾಸುರನ ಗೆಲಿದವಗೆ ಸೇರಿದ ಭಕ್ತರ ಸುರಮಂದಾರಗೆ ನಾರದಾದಿ ಮುನಿವಾರವಂದಿತಗೆ 3 ವಲ್ಲೀವಲ್ಲಭನಿಗೆ ಒಲಿದರ್ಗೆ ವರದಗೆ ಎಲ್ಲ ಭೂತಾಶ್ರಯ ಬಲ್ಲವಗೆ ಖುಲ್ಲದಾನವರಣಮಲ್ಲ ಮಹೇಶಗೆ ಬಿಲ್ಲುವಿದ್ಯಾಧೀಶ ಭೀಮವಿಕ್ರಮಗೆ 4 ಕಂಜಾಕ್ಷ ಲಕ್ಷ್ಮೀನಾರಾಯಣ ತೇಜಗೆ ಮಂಜುಳಕಾಂತಿ ವಿರಾಜನಿಗೆ ನಂಜುಂಡನ ಕರಪಂಜರಕೀರ ಪಾ- ವಂಜೆ ಕ್ಷೇತ್ರಾದಿವಾಸ ಸುರೇಶನಿಗೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಲಂ ಮಹಾಲಿಂಗ ದೇವನಿಗೆ ಗಂಗೋತ್ತಮಾಂಗಗೆ ಪ. ತುಂಗಬಲ ಭದ್ರಾಂಗ ಸದಯಾ- ಪಾಂಗ ಭಕ್ತಜನಾಂಗರಕ್ಷಗೆ ಅಂಗಜಾರಿ ಕುರಂಗಹಸ್ತಗೆ ಸಂಗೀತ ಪ್ರೇಮಾಂತರಂಗ ನಿಸ್ಸಂಗಗೆ 1 ವಾಮದೇವಗೆ ವಾಸವಾದಿ ಸು- ಧಾಮ ವಿಬುಧಸ್ತೋಮ ವಿನುತಗೆ ವ್ಯೋಮಕೇಶಗೆ ಸೋಮಚೂಡಗೆ ಭೀಮವಿಕ್ರಮಗೆ ಹೈಮವತಿಪತಿಗೆ 2 ಪ್ರಾಣಪತಿ ಲಕ್ಷ್ಮೀನಾರಾಯಣ- ಧ್ಯಾನಪರಗೆ ಪಾವಂಜೆಗ್ರಾಮ ಪ್ರ- ಧಾನಪುರುಷಗೆ ದೀನಜನಸಂ- ತಾನಗೀಶಾನಗೆ ಜ್ಞಾನಿ ಜಗದ್ಗುರುವಿಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಲ ಮಾನವಿ ನಿಲಯ ಕವಿಗೇಯ ಗುರುರಾಯ ಗುರುರಾಯ ಪಿಡಿಕೈಯಾ ಪ ಪರಮ ಕರುಣದಲಿ ವಿರಚಿತ ಶ್ರೀ ಮ- ದ್ಹರಿಯ ಕಥಾಮೃತ ಗ್ರಂಥ ಶುಭ್ರ ಚರಿತ ಜಗನ್ನಾಥ ಜಗನ್ನಾಥ ಪ್ರಖ್ಯಾತ1 ಮೇದಿನಿ ಸುರರಿಗೆ ಮೋದಮುನಿ ಮತದ ಭೇದ ಪಂಚಕ ಸುಬೋಧ ಪ್ರದರಾದ ಸ- ಮೋದ 2 ಶರಣು ಜನಕೆ ಸುರತರುವೆಂದೆನಿಸಿದ ಸಿರಿಕಾರ್ಪರ ಶುಭನಿಲಯ ನರಹರಿಯ ಸುಪ್ರೀಯ ಸುಪ್ರೀಯ ದಾಸಾರ್ಯ 3
--------------
ಕಾರ್ಪರ ನರಹರಿದಾಸರು
ಮಂಗಲವಾ ಪಾಡುವೆನಾ ಮಂಗಲಾಂಗ ಗುರುದೇವಗೆ ಸಂಗರಹಿತ ಸಂಪೂರ್ಣಗೆ ಕಂಗೊಳಿಸುವ ಪರಮಾತ್ಮಗೆ ಪ ಬೋಧಿಸುತಲಿ ಪ್ರೇಮದಿಂದ ಸಾಧನೆ ಸಾಧ್ಯಗಳ ಮರ್ಮ ಛೇದಿಸುತಲಿ ಭವಜಾಲವ ಮೋದವೀವ ಘನ ಮಹಿಮಗೆ 1 ಬಲು ಶಾಸ್ತ್ರದ ತೊಡಕಿಲ್ಲದೆ ಸುಲಭದಿಂದ ಬೋಧಿಸುವಾ ತಿಳಿ ಆತ್ಮನೇ ನೀನೆನ್ನುತ ಘನ ಶಾಂತಿಯ ನೀಡಿದವಗೆ 2 ನಾರಾಯಣ ಗುರುದೇವನ ಪರಮ ಪ್ರೀತಿ ಪಾತ್ರನೀತ ಧರೆಯೊಳಗವತರಿಸಿದ ಶ್ರೀ ಗುರುಶಂಕರದೇವನಿಗೆ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಮಂಗಳಂ ಕೃಷ್ಣ ಯೋಗೀಂದ್ರ ದಿವ್ಯಮಂಗಳ'ಗ್ರಹ ನಿನ್ನ ನೆನಹು ಸರ್ವ ಪನಿನ್ನ ಚರಿತೆಗೇಳಿ 'ಗ್ಗಿ ಜೀ'ಪರಿಗೆನಿನ್ನೊಲವನು ಬಯಸುವ ಧನ್ಯಗೆನಿನ್ನ ಭಕತರ ಸಂಗತಿಯೊಳಿರುವರಿಗೆನಿನ್ನ ಮೂರುತಿಗಂಡು ನ'ುಪ ಮಹಾತ್ಮಗೆ 1ನಿನ್ನ ವಾಗಮೃತಪಾನದಿ ಮತ್ತರಾದರ್ಗೆನಿನ್ನ ಸೇವೆಗೆ ಮೈಗೊಟ್ಟಿರುವರಿಗೆನಿನ್ನ ಚರಣ ಸೋಕಿದೆಡೆಯೊಳಿರುವರಿಗೆನಿನ್ನಂಗ ಸಂಗ ಮರುತಪೂತದೇಹರ್ಗೆ 2ಕರುಣದಿಂ ಚಿಕನಾಗಪುರದಿ ವಾಸುದೇವಾರ್ಯಗುರುವಾಗಿ ನರಸಾರ್ಯನೆಂದೆನಿಸಿತಿರುಪತಿಯರಸನೆ ಕೃಷ್ಣಯೋಗೀಂದ್ರ ಶ್ರೀಕರ ರಾಮದಾಸಾರ್ಯನೆಂದರಿತೆಮಗೆಲ್ಲಾ 3
--------------
ತಿಮ್ಮಪ್ಪದಾಸರು
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಮಂಗಳಂ ಜಯ ಜಯ ಮಂಗಳಂ ಪ ಪರಮಾಸನದಲಿ ಕುಳಿತವಗೆ ಪರತತ್ವವ ತಾ ತಿಳಿದವಗೆ ಕರುಣದಿಂದ ದುರಿತಾವಳಿಗಳನು ಸ್ಮರಿಸಿದ ಮಾತ್ರದಿ ಪರಿಹರಿಸುವಗೆ 1 ಪೊಡವಿಯಲಿ ಶೋಭಿಸುವವಗೆ ಕಡಲಶಯನನ ಭಕ್ತನಿಗೆ ಅಡಿಗಳ ಬಿಡದೆ ಭಜಿಪ ಸುಜನರಿಗೆಲ್ಲ ಕಡುತರ ಜ್ಞಾನವ ನೀಡುವಗೆ 2 ಸತ್ಯಧೀರರ ಕುವರನಿಗೆ ಸತ್ಯಜ್ಞಾನನೆಂದೆನಿಸುವಗೆ ಅತ್ಯಾದರದಿಂದ ರಾಮನ ಧ್ಯಾನಿಸಿ ಪ್ರತ್ಯಕ್ಷವ ಕರೆಸಿರುವವಗೆ 3 ಕಾಮಕ್ರೋಧವ ಬಿಟ್ಟವಗೆ ಪ್ರೇಮ ಆಶೆಗಳ ಸುಟ್ಟವಗೆ ಧೂಮಕೇತು ಸಖ ಸೂನುವಾಹನನ ನೇಮದಿಂದ ಆರಾಧಿಪಗೆ 4 ದಂಡ ಕಮಂಡಲ ಪಿಡಿದವಗೆ ಪಂಡಿತರಿಂದತಿ ಪೂಜಿತಗೆ ಕೊಂಡಾಡಿದರ್ಯಮ ದಂಡನೆ ತಪ್ಪಿಸಿ ಶೊಂಡನಾದ ನರಹರಿ ತೋರ್ಪಗೆ 5
--------------
ಪ್ರದ್ಯುಮ್ನತೀರ್ಥರು
ಮಂಗಳ ಜಯ ಮಂಗಳ ಮಂಗಳ ಶ್ರೀ ನರಸಿಂಗ ಮೂರುತಿಗೆ ಪ ಅಂಗುಟಾಗ್ರದಿ ಗಂಗೆಯ ಪಡೆದ ಗಾತ್ರ ಶ್ರೀ ರಂಗನಿಗೆ ಅಂಗಜರಿಪು ಧನು ಭಂಗವ ಮಾಡಿ ಸೀ- ತಾಂಗನೆಯಳ ಕರಪಿಡಿದವಗೆ 1 ವರಮತ್ಸ್ಯಗೆ ಗಿರಿಧರ ಕ್ರೋಢಗೆ ತರುಳನ ರಕ್ಷಿಸಿ ಧರೆಯ ಬೇಡಿದಗೆ ಪರಶು ಧರಿಸಿದ ರಾಮಕೃಷ್ಣಗೆ ಧರಿಸದೆ ವಸನವ ತುರಗನೇರಿದಗೆ 2 ಕರಿವರ ಕರೆಯಲು ಭರದಿ ಬಂದವಗೆ ಸ್ಮರಿಪರ ಭಯ ಪರಿಹರಿಸುವ ದೇವಗೆ ಶರಣು ಜನಕೆ ಸುರತರುವೆಂದೆನಿಸಿದ ಸಿರಿ ಕಾರ್ಪರ ನರಹರಿ ರೂಪಗೆ 3
--------------
ಕಾರ್ಪರ ನರಹರಿದಾಸರು
ಮಂಗಳಂ ಜಯ ಮಂಗಳಂ ಲಿಂಗಾಕಾರದ ಪರಶಿವಗೆ ಪ ರಜತಾದ್ರಿಪುರದೊಳು ನಿಂದವಗೆ ಭಜಕರ ಸಲುಹಲು ಬಂದವಗೆ ನಿಜಸುರ ಸೇವಿತ ಗಜಚರ್ಮಾಂಬರ ತ್ರಿಜಗ ವಂದಿತನಾದ ಪರಶಿವಗೆ1 ಬಾಣನ ಬಾಗಿಲ ಕಾಯ್ದವಗೆ ತ್ರಾಣದಿ ತ್ರಿಪುರವ ಗೆಲಿದವಗೆ ಕಾಣದ ಅಸುರಗೆ ಪ್ರಾಣಲಿಂಗವನಿತ್ತು ಮಾಣದೆ ಭಕ್ತರ ಸಲುಹುವಗೆ 2 ಗಂಗೆಯ ಜಡೆಯೊಳು ಧರಿಸಿದಗೆ ಸಿಂಗಿಯ ಕೊರಳೊಳು ನುಂಗಿದಗೆ ತಿಂಗಳ ಸೂಡಿಯೆ ಅಂಗ ಭಸ್ಮಾಂಗದಿ ಕಂಗಳು ಮೂರುಳ್ಳ ಕೃಪಾಂಗನಿಗೆ 3 ಅಸ್ಥಿಯ ಮಾಲೆಯ ಧರಿಸಿದU É ಹಸ್ತದಿ ಶೂಲವ ಪಿಡಿದವಗೆ ವಿಸ್ತರವಾಗಿಯೆ ಭಸ್ಮಸುವಾಸಿಗೆ ಸತ್ಯದಿ ವರಗಳನಿತ್ತವಗೆ 4 ಅಂಬಿಕಪತಿಯೆಂದೆನಿಸಿದಗೆ ತ್ರಿ- ಯಂಬಕ ಮಂತ್ರದಿ ನೆಲೆಸಿದಗೆ ನಂಬಿದ ಸುರರಿಗೆ ಬೆಂಬಲವಾಗಿಯೆ ಇಂಬಾದ ಪದವಿಯ ತೋರ್ಪವಗೆ 5 ಪಂಚಾಕ್ಷರದೊಳು ಒಲಿದವಗೆ ಪಂಚಮ ಶಿರದೊಳು ಮೆರೆವವಗೆ ಪಾತಕ ಸಂಚಿತ ಕರ್ಮವ ವಂಚಿಸಿ ಭಕ್ತರ ವಾಂಛಿತವೀವಗೆ 6 ಪಾಶುಪತವ ನರಗಿತ್ತವಗೆ ಶೇಷಾಭರಣವ ಹೊತ್ತವಗೆ ಕಾಶಿಗಧಿಕವಾಗಿ ಕೈವಲ್ಯವಿತ್ತು ವಿ- ಶೇಷದಿ ಜನರನು ಸಲುಹುವಗೆ7 ಯಕ್ಷ ಸುರಾಸುರ ವಂದಿತಗೆ ದಕ್ಷನ ಮಖವನು ಕೆಡಿಸಿದಗೆ ಕುಕ್ಷಿಯೊಳೀರೇಳು ಜಗವನುದ್ಧರಿಸಿಯೆ ರಕ್ಷಿಸಿಕೊಂಬಂಥ ದೀಕ್ಷಿತಗೆ 8 ಕಾಮಿತ ಫಲಗಳ ಕೊಡುವವಗೆ ಪ್ರೇಮದಿ ಭಕ್ತರ ಸಲಹುವಗೆ ಭೂಮಿಗೆ ವರಾಹತಿಮ್ಮಪ್ಪನ ದಾಸರ ಸ್ವಾಮಿಯೆಂದೆನಿಸುವ ಈಶನಿಗೆ 9
--------------
ವರಹತಿಮ್ಮಪ್ಪ
ಮಂಗಳಂ ಜಯ ಮಂಗಳಂ ರಾಮ ಸಜ್ಜನರ ಪ್ರೇಮ ಮಂಗಳಂ ಲೋಕಾಭಿರಘುರಾಮ ಪಟ್ಟಾಭಿರಾಮ ಪ ಮಂಗಳಂ ಶ್ರೀ ದಶರಥಾತ್ಮಜಗೆ ಮಂಗಳಂ ಅಯೋಧ್ಯವಾಸಿಗೆ ಮಂಗಳಂ ಜನಕಜಾಮಾತೆಗೆ ಮಂಗಳಂ ಶ್ರೀ ರಾಮಚಂದ್ರಗೆ ಅ.ಪ ದೇವದೇವೋತ್ತಮ ವೈಕುಂಠದೊಳಗೆ ಶ್ರೀ ಭೂಮೇರಿಂದ ಸೇವೆಗಳ ಕೈಗೊಳ್ಳುತ ಮಲಗಿರಲು ದೇವಋಷಿ ಬ್ರಹ್ಮೇಂದ್ರಾದಿಗಳು ಸಹಿತ ಶ್ರೀಧರನ ಸ್ತುತಿಸುತ ರಾವಣಾಸುರನುಪಟಳ ವರ್ಣಿಸಲು ಸಂತೈಸಿ ಅವರನು ಭೂಮಿಪತಿ ದಶರಥನ ಪ್ರೇಮ ಕುಮಾರನಾಗುದಿಸುತಲಯೋಧ್ಯದಿ ಪ್ರೇಮ ತೋರುತ ಮೆರೆದವಗೆ ಜಯ1 ದಶರಥನ ಸುತರಾಗಿ ಬೆಳೆಯುತಲಿ ಕೌಶಿಕನÀಯಜ್ಞವ ಕುಶಲದಲಿ ರಕ್ಷಿಸುತ ಹರುಷದಲಿ ಶಶಿಮುಖಿಯ ಕೂಡುತ ಕುಶಲದಲಿ ವನವಾಸ ಚರಿಸುತಲಿ ದಶಶಿರನು ಜಾನಕಿಯ ಕದಿಯಲು ಶಶಿಮುಖಿಯನರಸುತಲಿ ವನವನ ವಸುಧಿಪತಿ ಕಪಿಗಳ ಕಳುಹಿ ಸತಿ ಕುಶಲ ತಿಳಿಯುತ ನಲಿದವಗೆ ಜಯ 2 ಬಂದ ಕಪಿ ಕಟಕವನೆ ನೋಡುತ್ತ ಸಾಗರಕೆ ಸೇತುವೆ ಒಂದೇ ನಿಮಿಷದಿ ರಚಿಸಿ ಶೀಘ್ರದಲಿ ಮಂದಮತಿ ರಾಕ್ಷಸರ ವಧಿಸುತಲಿ ಅಂದಣವ ಕಳುಹಿ ಮಂದಗಮನೆಯ ಕರೆಸಿ ಬೇಗದಲಿ ಬಂದ ರಾಮನು ಎಂದು ಮಾರುತಿ ಮುಂದೆ ಭರತಗೆ ಕುಶಲ ತಿಳಿಸಲು ತಂದೆ ಕಮಲನಾಥ ವಿಠಲ ಮುಂದೆ ಪ್ರಜೆಗಳ ಪೊರೆದವಗೆ ಜಯ 3
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ಜಯ ಮಂಗಳಂ ಶುಭಮಂಗಳೆನ್ನಿರೇ ಹಿಂಗದಂತರಂಗಲಿಪ್ಪಾ ನಂಗನಯ್ಯಗೆ ಪ ಹೆಣ್ಣ ಮಾಡಿತಮನ್ನ ವಿಕ್ರಮ ಹೆಣ್ಣವೆನಿಸಿ ಹೆಣ್ಣಿಗೊಲಿದು ಹೆಣ್ಣು ತೊ ಡಿಯೊಳಿನ್ನು ತಾಳಿ ಹೆಣ್ಣ ಮಡ ದಂಗೆ ಹೆಣ್ಣಿನಳಿದು ಹೆಣ್ಣೆ ನೆಬ್ಬಿಸಿ ಹೆಣ್ಣ ಹಲವರೊಡನೆ ಆಡಿದ ಹೆಣ್ಣ ವೃತಗೆಡಿಸಿ ಕುದುರೆ ಯಾರೋಹಣ ಗೈದಂಗೆ 1 ನಿಗಮ ತಂದು ನಗವನೆತ್ತಿ ಜಗವನುಳಹಿ ಮಗುವಿಗೊಲಿದು ತುಂಬಿ ಮಿಗಿಲ ಭೂಸುರಗಳ ಹೊರದಂಗೆ ಬಿಗಡಗೊಲಿಸಿದ ಸಗಟನೊತ್ತಿ ವಿಗಡ ಕಲ್ಕಿಗೆ 2 ಮತ್ಸ್ಯರೂಪದಿ ಕಚ್ಚಪಾಗಿ ಸ್ವಚ್ಛಕೋಡದಿ ಬೆಚ್ಚ ನರಹರಿ ಅಚ್ಚ ವಾಮನ ನಿಚ್ಛ ಕೊಡಲಿಯ ಮಚ್ಚು ಜನ ಕಂಗೆ ಇಚ್ಛ ನಡೆಸಿದ ಮೆಚ್ಚಿ ಗೋಕುಲ ಹುಚ್ಚು ಮಾಡಿದ ಬಾಲನೆನಿಸಿ ಸಚ್ಚರಿತ ಕಲಿನಾಶ ಮಹಿಪತಿ ನಂದ ನೊಡಿಯಂಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳಂ ಜಯ ಸುಂದರ ಮೂರುತಿಗೆ ಮಾ ಮನೋಹರನಿಗೆ ಪ ಮಂಗಳ ಮಧುಸೂದನನಿಗೆ ಮಂಗಳ ಮುರಮರ್ದನನಿಗೆ ಮಂಗಳಾಂಗ ಶ್ರೀ ಮದನಂತ- ರಂಗನಿಗೆ ಶುಭಾಂಗ ಹರಿಗೆ 1 ರಂತಿದೇವನನ್ನು ಪೊರೆದ ಚಿಂತಿತಾರ್ಥ ಪ್ರದಾತನಿಗೆ ಸಂತತವು ಭಕುತರನು ಸಂತೋಷದಿ ಪೊರೆವ ಹರಿಗೆ2 ಪಾಂಡವರನು ಪೊರೆದÀಗೆ ಪುಂಡರೀಕಗೆ ಒಲಿದಗೆ ತಂಡತಂಡದ ಭಕ್ತರನ್ನು ಕಂಡುಪೊರೆವ ಮಹಮಹಿಮಗೆ3 ನಾರಿ ರುಕ್ಮಿಣಿ ಭಾಮೆ ಸಹಿತದಿ ದ್ವಾರಕಾಪುರ ವಾಸನಿಗೆ ಸೌಳಸಾಸಿರ ಸತಿಯರಾಳ್ದ ಸಾರಸಾಕ್ಷ ಹರಿಗೆ ಬೇಗ4 ಕಡಲೊಡೆಯಗೆ ಮೃಡಸಖನಿಗೆ ಕಡುಹರುಷದಿ ಕಾಮಿನಿಯರು ಸಡಗರದಲಿ ಕಮಲನಾಭ ವಿಠ್ಠಲನಂಘ್ರಿ ಭಜಿಸಿನಲಿದು5
--------------
ನಿಡಗುರುಕಿ ಜೀವೂಬಾಯಿ